Virat Kohli: ಕ್ಲೀನ್​ ಬೌಲ್ಡ್ ಆದ ಕೊಹ್ಲಿ; ಹಳೆ ಚಾಳಿ ಬಿಡದ ಪಾಕ್​ ಮಾಜಿ ಆಟಗಾರ - Vistara News

ಕ್ರಿಕೆಟ್

Virat Kohli: ಕ್ಲೀನ್​ ಬೌಲ್ಡ್ ಆದ ಕೊಹ್ಲಿ; ಹಳೆ ಚಾಳಿ ಬಿಡದ ಪಾಕ್​ ಮಾಜಿ ಆಟಗಾರ

ಶಾಹೀನ್​ ಅಫ್ರಿದಿ(Shaheen Afridi) ಅವರ ಎಸೆತದಲ್ಲಿ ವಿರಾಟ್​ ಕೊಹ್ಲಿ ಕ್ಲೀನ್​ ಬೌಲ್ಡ್​ ಆತ ತಕ್ಷಣ ಪಾಕಿಸ್ತಾನ ಮಾಜಿ ಆಟಗಾರ ಕೊಹ್ಲಿಯನ್ನು ಟ್ರೋಲ್​ ಮಾಡಿದ್ದಾರೆ.

VISTARANEWS.COM


on

Virat Kohli lost his stumps to Shaheen Afridi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಲ್ಲೆಕೆಲೆ: ಪಾಕಿಸ್ತಾನ ವಿರುದ್ಧ ಸಾಗುತ್ತಿರುವ ಏಷ್ಯಾಕಪ್​ನ(Asia Cup 2023) ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ಶಾಹೀನ್​ ಅಫ್ರಿದಿ(Shaheen Afridi) ಅವರ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆತ ತಕ್ಷಣ ಪಾಕಿಸ್ತಾನ ಮಾಜಿ ಆಟಗಾರ ಕೊಹ್ಲಿಯನ್ನು ಟ್ರೋಲ್​ ಮಾಡಿದ್ದಾರೆ. ‘ನೀವು ಇದನ್ನು ರೀಪ್ಲೆಯಲ್ಲಿ ನೋಡಿ, ಆದರೆ ನೀವು ಈಗ ಔಟ್​’ ಎಂದು ಹೇಳುವ ಮೂಲಕ ವಾಕರ್ ಯೂನಿಸ್(Waqar Younis) ವ್ಯಂಗ್ಯವಾಡಿದ್ದಾರೆ.

ಮಳೆಯಿಂದ ಎರಡು ಬಾರಿ ಅಡಚಣೆಯಾಗಿ ನಡೆಯುತ್ತಿರುವ ಈ ಪಂದ್ಯದಲ್ಲಿ ಸದ್ಯ ಭಾರತ ತಂಡ 4 ವಿಕೆಟ್​ಕೆಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅಗ್ರ ಕ್ರಮಾಂಕದ ಆಟಗಾರರೆಲ್ಲ. ಪೆವಿಲಿಯನ್​ ಸೇರಿಕೊಂಡಿದ್ದಾರೆ. ಟಾಸ್​ ಗೆದ್ದ ಬ್ಯಾಟಿಂಗ್​ ಆರಂಭಿಸಿದ ಭಾರತ ತಂಡಕ್ಕೆ ಶಾಹೀನ್​ ಅಫ್ರಿದಿ ಬೆಂಕಿ ಎಸೆತಗಳ ಮೂಲಕ ಕಾಡಲಾರಂಭಿಸಿದರು. ಇದೇ ವೇಳೆ ಮಳೆಯಿಂದ ಪಂದ್ಯ ಕೆಲ ಕಾಲ ಸ್ಥಗಿತಗೊಂಡಿತು. ಮಳೆ ನಿಂತು ಪಂದ್ಯ ಆರಂಭಗೊಂಡ ಮುಂದಿನ ಎಸೆತದಲ್ಲೇ ರೋಹಿತ್​ ಕ್ಲೀನ್​ ಬೌಲ್ಡ್​ ಆದರು.

ರೋಹಿತ್​ ವಿಕೆಟ್​ ಕಿತ್ತ ಬೆನ್ನಲ್ಲೇ ಕ್ರೀಸ್​ಗೆ ಬಂದ ವಿರಾಟ್​ ಕೊಹ್ಲಿ ಆರಂಭದಲ್ಲಿ ತಾಳ್ಮೆಯುತ ಬ್ಯಾಟಿಂಗ್​ಗೆ ಒತ್ತು ನೀಡಿದರು. ಬೌಂಡರಿ ಮೂಲಕವೇ ಅವರು ಕಾತೆ ತೆರೆದಾಗ ಭಾರತೀಯ ನಿರೀಕ್ಷೆಗಳು ಕೂಡ ಹೆಚ್ಚಾಯಿತು. ಆದರೆ ಶಾಹಿನ್​ ಅಫ್ರಿದಿ ಮತ್ತೆ ಘಾತಕ ಸ್ಫೆಲ್ ನಡೆಸಿ ಕೊಹ್ಲಿ ವಿಕೆಟ್​ ಬೇಟೆಯಾಡಿದರು. ಅವರು ಕೂಡ ರೋಹಿತ್​ ಅವರಂತೆ ಕ್ಲೀನ್​ ಬೌಲ್ಡ್ ಆದರು. ಅತ್ತ ಕಾಮೆಂಟ್ರಿ ಮಾಡುತ್ತಿದ್ದ ಪಾಕಿಸ್ತಾನದ ಮಾಜಿ ಆಟಗಾರ ವಾಕರ್ ಯೂನಿಸ್. ನೀವು ಇದನ್ನು ರೀಪ್ಲೆಯಲ್ಲಿ ನೋಡಿ, ಆದರೆ ವಿರಾಟ್​ ನೀವು ಈಗ ಔಟ್” ಎಂದು ಹೇಳುವ ಮೂಲಕ ಧಿಮಾಕು ತೋರಿದ್ದಾರೆ.

ಹಿಂದೆ ಭಾರತ ಮತ್ತು ಪಾಕ್​ ಎಂದರೆ ಇಲ್ಲಿ ಕಿತ್ತಾಟ, ವಾಗ್ವಾದ ಸರ್ವೆ ಸಾಮಾನ್ಯವಾಗಿತ್ತು. ಆದರೆ ಈಗ ಈ ಕಾಲ ಬದಲಾಗಿದೆ. ಉಭಯ ತಂಡಗಳ ಆಟಗಾರರು ಶಾಂತ ರೀತಿಯಲ್ಲಿ ಕ್ರಿಕೆಟ್​ ಆಡುತ್ತಾರೆ. ಇಲ್ಲಿ ಯಾವುದೇ ದ್ವೇಷವೂ ಕಂಡು ಬರುವುದಿಲ್ಲ. ಆದರೆ ಮಾಜಿ ಆಟಗಾರ ವಾಕರ್ ಯೂನಿಸ್ ಮಾತ್ರ ತಮ್ಮ ಹಳೆಯ ಚಾಳಿಯನ್ನೇ ಮುಂದುವರಿಸಿದ್ದಾರೆ.

ನಾಲ್ಕನೇ ಬಾರಿ ಎಡಗೈ ವೇಗಿಗೆ ವಿಕೆಟ್​ ಒಪ್ಪಿಸಿದ ಕೊಹ್ಲಿ

2021ರಿಂದ ಏಕದಿನದಲ್ಲಿ ವಿರಾಟ್​ ಕೊಹ್ಲಿ ಅವರು ನಾಲ್ಕನೇ ಬಾರಿ ಎಡಗೈ ವೇಗಿಗೆ ವಿಕೆಟ್ ಒಪ್ಪಿಸಿದರು. ಒಟ್ಟು ಮೂರು ವರ್ಷಗಳ ಅವಧಿಯಲ್ಲಿ ಕೊಹ್ಲಿ ಎಡಗೈ ವೇಗಿಯಿಂದ 98 ಎಸೆತಗಳನ್ನು ಎದುರಿಸಿ 87 ರನ್​ ಕಲೆಹಾಕಿದ್ದಾರೆ.

ಕಳೆದ ವರ್ಷ ಆಸ್ಟ್ರೇಲಿಯಾದ ಮೆಲ್ಬರ್ನ್ ಟಿ20 ವಿಶ್ವಕಪ್​ ಪಂದ್ಯದ ಬಳಿಕ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದೆ. ಇಶಾನ್​ ಕಿಶನ್​ ಮತ್ತು ಶುಭಮನ್​ ಗಿಲ್​ ಅವರಿಗೆ ಪಾಕಿಸ್ತಾನ ವಿರುದ್ಧ ಇದು ಚೊಚ್ಚಲ ಪಂದ್ಯವಾಗಿದೆ. ಉಭಯ ಆಟಗಾರರು ಇತರ ತಂಡದ ಪರ ಆಡಿದ್ದರೂ ಪಾಕಿಸ್ತಾನ ವಿರುದ್ಧ ಇದೇ ಮೊದಲ ಬಾರಿ ಕಣಕಿಳಿಯುತ್ತಿದ್ದಾರೆ.

ಇದನ್ನೂ ಓದಿ Asia Cup 2023: ಪಾಕ್​ ವಿರುದ್ಧದ ಪಂದ್ಯಕ್ಕೆ ರಣತಂತ್ರ ರೂಪಿಸಿದ ರೋಹಿತ್​ ಶರ್ಮ

ಉಭಯ ತಂಡಗಳ ಆಡುವ ಬಳಗ

ಪಾಕಿಸ್ತಾನ: ಫಖಾರ್​ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಂ(ನಾಯಕ) , ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್​ ರೌಫ್.

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಕುಲ್​ದೀಪ್‌ ಯಾದವ್‌, ಜಸ್‌ಪ್ರಿತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಶಾರ್ದೂಲ್​ ಠಾಕೂರ್​, ಇಶಾನ್‌ ಕಿಶನ್‌(ವಿಕೆಟ್​ ಕೀಪರ್​).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

IND vs SL: ತವರಿನ ದೀರ್ಘ ಟೆಸ್ಟ್ ಋತುವಿನ ಹಿನ್ನಲೆಯಲ್ಲಿ ಉಭಯ ಆಟಗಾರರಿಗೆ ವಿಶ್ರಾಂತಿ ನೀಡಲು ಯೋಚಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ಕ್ರಿಕ್​ಇನ್ಫೋ ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

IND vs SL
Koo

ಮುಂಬಯಿ: ಇದೇ ತಿಂಗಳು 27ರಿಂದ ಆರಂಭಗೊಳ್ಳಲಿರುವ ಶ್ರೀಲಂಕಾ(IND vs SL) ವಿರುದ್ಧದ ಸೀಮಿತ ಓವರ್​ಗಳ ಕ್ರಿಕೆಟ್​(India tour of Sri Lanka) ಸರಣಿಗೆ ರೋಹಿತ್​ ಶರ್ಮ(Rohit Sharma) ಮತ್ತು ವಿರಾಟ್​ ಕೊಹ್ಲಿ(Virat Kohli) ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಹಂಗಾಮಿ ನಾಯಕನಾಗಿ ಹಾರ್ದಿಕ್​ ಪಾಂಡ್ಯ ಅಥವಾ ಕೆ.ಎಲ್​ ರಾಹುಲ್​ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

ರೋಹಿತ್ ಶರ್ಮಾ ವಿರಾಮ ತೆಗೆದುಕೊಳ್ಳದೆ ಸುಮಾರು ಆರು ತಿಂಗಳು ಕಳೆದಿದೆ. ಸುದೀರ್ಘವಾಗಿ ಆಡುತ್ತಿರುವ ಕಾರಣದಿಂದ ಅವರಿಗೆ ಬಿಸಿಸಿಐ ವಿಶ್ರಾಂತಿ ನೀಡಲು ಬಯಸಿದೆ ಎನ್ನಲಾಗಿದೆ. ಜತೆಗೆ ಕೊಹ್ಲಿಯೂ ವಿಶ್ರಾಂತಿ ನೀಡಲಾಗುವುದು ಎಂದು ವರದಿಯಾಗಿದೆ. ತವರಿನ ದೀರ್ಘ ಟೆಸ್ಟ್ ಋತುವಿನ ಹಿನ್ನಲೆಯಲ್ಲಿ ಉಭಯ ಆಟಗಾರರಿಗೆ ವಿಶ್ರಾಂತಿ ನೀಡಲು ಯೋಚಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ಕ್ರಿಕ್​ಇನ್ಫೋ ತನ್ನ ವರದಿಯಲ್ಲಿ ತಿಳಿಸಿದೆ.

ಶ್ರೀಲಂಕಾ ವಿರುದ್ಧ ಭಾರತ 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಯನ್ನಾಡಲಿದೆ. ಇದಾದ ಬಳಿಕ ಭಾರತ ಸೆಪ್ಟೆಂಬರ್​ನಲ್ಲಿ ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್​ ಮತ್ತು ಟಿ20 ಸರಣಿ ಆಡಲಿದೆ. ರೋಹಿತ್​ ಮತ್ತು ಕೊಹ್ಲಿ ಈ ಟೆಸ್ಟ್​ ಸರಣಿಗೆ ತಂಡ ಸೇರುವ ಸಾಧ್ಯತೆ ಇದೆ. ಕೊಹ್ಲಿ ಹಾಗೂ ರೋಹಿತ್​ ಈಗಾಗಲೇ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಇದನ್ನೂ ಓದಿ Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

ಬಾಂಗ್ಲಾ ಸರಣಿಯ ವೇಳಾಪಟ್ಟಿ

ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರಅಕ್ಟೋಬರ್​-6 ಮೊದಲ ಟಿ20. ತಾಣ: ಧರ್ಮಶಾಲಾ

ಅಕ್ಟೋಬರ್​-9 ದ್ವಿತೀಯ ಟಿ20. ತಾಣ: ದೆಹಲಿಅಕ್ಟೋಬರ್​-12 ಮೂರನೇ ಟಿ20. ತಾಣ: ಹೈದರಾಬಾದ್​

ನ್ಯೂಜಿಲ್ಯಾಂಡ್​ ಸರಣಿಯ ವೇಳಾಪಟ್ಟಿ


ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು

ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ

ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಇಂಗ್ಲೆಂಡ್​ ವಿರುದ್ಧದ ಸರಣಿಯ ವೇಳಾಪಟ್ಟಿ


ಜನವರಿ-22 ಮೊದಲ ಟಿ20. ತಾಣ:ಚೆನ್ನೈ

ಜನವರಿ-25 ದ್ವಿತೀಯ ಟಿ20. ತಾಣ: ಕೋಲ್ಕತ್ತಾ

ಜನವರಿ-28 ಮೂರನೇ ಟಿ20. ತಾಣ: ರಾಜ್​ಕೋಟ್​

ಜನವರಿ-31 ನಾಲ್ಕನೇ ಟಿ20. ತಾಣ:ಪುಣೆ

ಫೆಬ್ರವರಿ-2 ಐದನೇ ಟಿ20. ತಾಣ: ಮುಂಬಯಿ

ಫೆಬ್ರವರಿ-6 ಮೊದಲ ಏಕದಿನ. ತಾಣ:ನಾಗ್ಪುರ

ಫೆಬ್ರವರಿ-9 ದ್ವಿತೀಯ ಏಕದಿನ. ತಾಣ: ಕಟಕ್​

ಫೆಬ್ರವರಿ-12 ಮೂರನೇ ಏಕದಿನ. ತಾಣ: ಅಹಮದಾಬಾದ್​

Continue Reading

ಕ್ರೀಡೆ

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Kuldeep Yadav: ಕುಲ್​ದೀಪ್​ ಯಾದವ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ವಿಕೆಟ್​ ಕಿತ್ತು ಮಿಂಚಿದ್ದರು. ಉತ್ತಮ ಎಕಾನಮಿಯಲ್ಲಿ ಬೌಲಿಂಗ್​ ನಡೆಸಿ ಗಮನಸೆಳೆದಿದ್ದರು.

VISTARANEWS.COM


on

Koo

ಕಾನ್ಪುರ: ಟಿ29 ವಿಶ್ವಕಪ್​ ತಂಡದ ಭಾಗವಾಗಿದ್ದ ಭಾರತದ ಸ್ಪಿನ್ನರ್ ಕುಲ್​ದೀಪ್ ಯಾದವ್(Kuldeep Yadav) ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ(Chief Minister of Uttar Pradesh) ಯೋಗಿ ಆದಿತ್ಯನಾಥ್(Yogi Adityanath) ಅವರು ಅಭಿನಂದಿಸಿದ್ದಾರೆ. ಜತೆಗೆ ಸ್ಮರಣಿಯನ್ನು ನೀಡಿ ಗೌರವಿಸಿದ್ದಾರೆ. ಈ ಫೋಟೊ ವೈರಲ್​ ಆಗಿದೆ.

ಕುಲ್​ದೀಪ್​ ಯಾದವ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ವಿಕೆಟ್​ ಕಿತ್ತು ಮಿಂಚಿದ್ದರು. ಉತ್ತಮ ಎಕಾನಮಿಯಲ್ಲಿ ಬೌಲಿಂಗ್​ ನಡೆಸಿ ಗಮನಸೆಳೆದಿದ್ದರು.

ಟಿ20 ವಿಶ್ವಕಪ್(T20 World Cup) ಗೆಲುವಿನ ಬಳಿಕ ಟ್ರೋಫಿ ಎತ್ತಿ ಹಿಡಿಯುವಾಗ ನಾಯಕ ರೋಹಿತ್ ಶರ್ಮ ವಿಶೇಷ ರೀತಿಯಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದ್ದರು. ಈ ಬಗ್ಗೆ ಪ್ರಧಾನಿ ಮೋದಿ(Narendra Modi) ಪ್ರಶ್ನೆ ಕೇಳಿದಾಗ ಕುಲ್​ದೀಪ್​(Kuldeep Yadav) ನೀಡಿರುವ ಉತ್ತರ ಕೇಳಿ ಮೋದಿ ಸೇರಿ ಟೀಮ್​ ಇಂಡಿಯಾ ಆಟಗರರು ನಗೆಗಡಲಲ್ಲಿ ತೇಲಿದ್ದರು.

ರೋಹಿತ್​ ಬಳಿ ಮೋದಿ ಅವರು ಈ ರೀತಿ ಸಂಭ್ರಮಿಸಲು ಚಾಹಲ್ ಸಲಹೆ ನೀಡಿದರೇ? ಎಂದು ಕೇಳಿದರು. ಈ ವೇಳೆ ನಗುಮುಖದಿಂದಲೇ ರೋಹಿತ್, ‘ಹೌದು ಚಾಹಲ್ ಹಾಗೂ ಕುಲದೀಪ್ ಅವರು ಸಲಹೆ ನೀಡಿದ್ದರು’ ಎಂದು ತಿಳಿಸಿದರು. ಈ ವೇಳೆ ಕುಲದೀಪ್ ಅವರಲ್ಲಿ ನಿಮ್ಮ ನಾಯಕನನ್ನು ನೃತ್ಯ ಮಾಡುವಂತೆ ಹೇಳಲು ಹೇಗೆ ಧೈರ್ಯ ಬಂತು ಎಂದು ಪ್ರಧಾನಿ ಕೇಳಿದರು. ಇದಕ್ಕೆ ಉತ್ತರಿಸಿದ ಕುಲ್​ದೀಪ್​, ನಾನು ಹೇಳಿಕೊಟ್ಟಂತೆ ರೋಹಿತ್ ಅನುಕರಿಸಲಿಲ್ಲ ಎಂದು ಹೇಳಿದರು. ಈ ಮಾತು ಕೇಳಿ ಮೋದಿ ಜೋರಾಗಿ ನಕ್ಕರು.

ಇದನ್ನೂ ಓದಿ Kuldeep Yadav : ತಮ್ಮ ನೆಚ್ಚಿನ ಸ್ವಾಮೀಜಿಯ ಆಶೀರ್ವಾದ ಪಡೆದ ಕುಲ್ದೀಪ್​ ಯಾದವ್​​

ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿದ್ದರು. ಈ ವೇಳೆ ರೋಹಿತ್​ ಓಕೆ ಓಕೆ.. ಎಂದು ಹೇಳಿದ್ದರು. ಬಳಿಕ ವಿಶ್ವಕಪ್ ಟ್ರೋಫಿಯೊಂದಿಗೆ ಫೋಟೊಗೆ ಫೋಸ್​ ನೀಡಲು ಬರುವ ವೇಳೆ ಕುಲ್​ದೀಪ್​ ಹೇಳಿಕೊಟ್ಟಂತೆ ರೋಹಿತ್ ಅವರು ಅಂದು​ ಮೆಸ್ಸಿ ನಡೆದು ಬಂದು ಟ್ರೋಫಿಯನ್ನು ಎತ್ತಿ ಹಿಡಿದ ರೀತಿಯಲ್ಲೇ ವಿಶ್ವಕಪ್​ ಟ್ರೋಫಿಯನ್ನು ಎತ್ತಿ ಸಂಭ್ರಮಿಸಿದ್ದರು. ಟೀಮ್​ ಇಂಡಿಯಾ ಆಟಗಾರರು ಕೂಡ ಅರ್ಜೆಂಟೀನಾ ಫುಟ್ಬಾಲ್​ ತಂಡದ ಆಟಗಾರರಂತೆ ಸಂಭ್ರಮಿಸಿದ್ದರು.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ರನ್​ಗಳ ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಕ್ರೀಡೆ

Jay Shah: ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ನೀಡಲು ಮುಂದಾದ ಜಯ್ ಶಾ; ಕಾರಣವೇನು?

Jay Shah: ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ.

VISTARANEWS.COM


on

Jay Shah
Koo

ಮುಂಬಯಿ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್‌ ಶಾ(Jay Shah) ಅವರು ತಮ್ಮ ಈ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಐಸಿಸಿಯ(ICC) ಹೊಸ ಅಧ್ಯಕ್ಷರ ಚುನಾವಣೆಗೆ ಜಯ್ ಶಾ ಸ್ಪರ್ಧಿಸಲಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಐಸಿಸಿ ಚುನಾವಣೆ ಇದೇ ವರ್ಷ ನವೆಂಬರ್​ನಲ್ಲಿ ನಡೆಯಲಿದೆ.

ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ. ಇದೀಗ ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಹಲವು ಬಾರಿ ಜಯ್​ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಸ್ಪಧಿಸಿರಲಿಲ್ಲ. ಈ ಬಾರಿ ಖಚಿತ ಎಂದು ಜಯ್​ ಶಾ ಆಪ್ತ ಮೂಲಗಳು ಮಾಹಿತಿ ನೀಡಿದೆ. ಜಯ್ ಶಾ 2019 ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಯನ್ನು ವಹಿಸಿಕೊಂಡಿದ್ದರು.

ಇದನ್ನೂ ಓದಿ Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

35 ವರ್ಷದ ಜಯ್​ ಶಾ ಒಂದೊಮ್ಮೆ ಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಐಸಿಸಿಯ ಅತ್ಯಂತ ಕಿರಿಯ ಅಧ್ಯಕ್ಷರಾದ ಗೌರವಕ್ಕೆ ಪಾತ್ರರಾಗಲಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅಧಿಕಾರದಲ್ಲಿದ್ದಾರೆ. 2020ರಲ್ಲಿ ಈ ಸ್ಥಾನಕ್ಕೆ ಇವರು ಆಯ್ಕೆ ಆಗಿದ್ದರು. ಈ ವರ್ಷ ಅವರ ಅಧಿಕಾರಾವಧಿ ಕೊನೆಯಾಗಲಿದೆ.

ಜಯ್​ ಶಾ ನಾಯಕತ್ವವು ವಿಶ್ವಾದ್ಯಂತ ಕ್ರಿಕೆಟ್‌ನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದೆ. ಐಸಿಸಿ ಪುರುಷರ ವಿಶ್ವಕಪನ್ನು ಅವರು ಹೊಸ ಎತ್ತರಕ್ಕೆ ಮುನ್ನಡೆಸಿದ್ದಾರೆ. ಲಿಂಗ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್​ನಲ್ಲಿ ಪುರುಷ ಮತ್ತು ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ಪದ್ಧತಿಯನ್ನು ಕೂಡ ಇವರ ಕಾರ್ಯವಧಿಯಲ್ಲಿ ಜಾರಿಗೆ ತರಲಾಗಿತ್ತು. ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನ ರಚನೆ, ಒಲಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆ, ಹೀಗೆ ಅನೇಕ ಕಾರ್ಯಗಳ ಮೂಲಕ ಕ್ರಿಕೆಟ್​ ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಯೂ ಜಯ್​ ಶಾ ಅವರದ್ದಾಗಿದೆ. ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಜಯ್​ ಶಾ ಹಲವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಪಾಕ್‌ಗೆ ಭಾರತ ಹೋಗಲ್ಲ; ಜಯ್​ ಶಾ


2025ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಜಯ್​ ಶಾ ಹೇಳಿದ್ದಾರೆ. ಕೆಲದಿನಗಳ ಹಿಂದಷ್ಟೇ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌, ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಿಗದಿ ಮಾಡಿತ್ತು. ಆದರೆ, ಭದ್ರತೆಯ ಕಾರಣವನ್ನು ನೀಡಿರುವ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

Continue Reading

ಕ್ರೀಡೆ

Maldives: ವಿಶ್ವಕಪ್​ ಗೆಲುವಿನ ಸಂಭ್ರಮಾಚರಣೆಗೆ ಭಾರತ ತಂಡವನ್ನು ಆಹ್ವಾನಿಸಿದ ಮಾಲ್ಡೀವ್ಸ್‌

Maldives: ‘ಮಾಲ್ಡೀವ್ಸ್‌ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಶನ್(ಎಂಎಂಪಿಆರ್‌ಸಿ), ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟೂರಿಸಂ ಇಂಡಸ್ಟ್ರೀ(ಎಂಎಟಿಐ) ಜಂಟಿಯಾಗಿ ಟೀಮ್​ ಇಂಡಿಯಾಕ್ಕೆ ಮುಕ್ತ ಆಹ್ವಾನವನ್ನು ನೀಡುತ್ತಿದ್ದೇವೆ’ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇದೀಗ ಮತ್ತೆ ಭಾರತದ ಜತೆ ಉತ್ತಮ ಸ್ನೇಹ ಬಾಂಧವ್ಯ ಸಂಪಾದಿಸಲು ಹರಸಾಹಸ ಪಡುತ್ತಿದೆ. ಇದೀಗ ಟಿ20 ವಿಶ್ವಕಪ್(T20 World Cup)​ ವಿಜೇತ ಭಾರತ ತಂಡದ ಸಂಭ್ರಮಾಚರಣೆಯನ್ನು ಮಾಲ್ಡೀವ್ಸ್‌ನಲ್ಲಿ ಆಚರಿಸುವಂತೆ(Maldives Tourism Invites Team India) ಅಲ್ಲಿನ ಪ್ರವಾಸೋದ್ಯಮ ಸಂಘ ಮತ್ತು ಮಾರ್ಕೆಟಿಂಗ್ ಹಾಗೂ ಸಾರ್ವಜನಿಕ ಸಂಪರ್ಕ ನಿಗಮ ಆಹ್ವಾನಿಸಿದೆ.

ಜೂನ್ 29ರಂದು ಬಾರ್ಬಡೋಸ್‌ನಲ್ಲಿ ನಡೆದ ಟಿ-ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸುವ ಮೂಲಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು. ಬಳಿಕ ತವರಿಗೆ ಆಗಮಿಸಿದ ಭಾರತ ತಂಡಕ್ಕೆ ಮುಂಬೈನಲ್ಲಿ ಭರ್ಜರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಮಾರಂಭದಲ್ಲಿ ಸಾಗರೋಪಾದಿಯಲ್ಲಿ ಸೇರಿದ ಜನರನ್ನು ಕಂಡು ಎಲ್ಲರು ಅಚ್ಚರಿಗೊಂಡಿದ್ದರು. ಇದೀಗ ಟಿ20 ವಿಶ್ವಕಪ್​ ವಿಜೇತ ಭಾರತ ತಂಡವನ್ನು ಮಾಲ್ಡೀವ್ಸ್‌ಗೆ ಆಹ್ವಾನಿಸಿ ಮತ್ತೆ ಭಾರತೀಯರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದೆ.

‘ಮಾಲ್ಡೀವ್ಸ್‌ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಶನ್(ಎಂಎಂಪಿಆರ್‌ಸಿ), ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟೂರಿಸಂ ಇಂಡಸ್ಟ್ರೀ(ಎಂಎಟಿಐ) ಜಂಟಿಯಾಗಿ ಟೀಮ್​ ಇಂಡಿಯಾಕ್ಕೆ ಮುಕ್ತ ಆಹ್ವಾನವನ್ನು ನೀಡುತ್ತಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ವಿಶ್ವ ವಿಜೇತ ತಂಡಕ್ಕೆ ಆತಿಥ್ಯ ನೀಡಲು ನಾವು ಸಿದ್ಧರಾಗಿದ್ದೇವೆ. ವಿಶ್ರಾಂತಿಯ ಅನುಭವಗಳಿಂದ ತುಂಬಿರುವುದನ್ನು ಖಚಿತಪಡಿಸಲು ನಾವು ಇಚ್ಛಿಸುತ್ತೇವೆ’ಎಂದು ಎಂಎಂ‍ಪಿಆರ್‌ಸಿ ಸಿಇಒ ಇಬ್ರಾಹಿಂ ಶಿಯುರಿ ಮತ್ತು ಎಂಎಟಿಐ ಕಾರ್ಯದರ್ಶಿ ಅಹ್ಮದ್ ನಜೀರ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತ ಹಾಗೂ ಮೋದಿ ಕುರಿತು ಮಾಲ್ಡೀವ್ಸ್‌ ಅಸಮಾಧಾನದ ಹೇಳಿಕೆ ನೀಡಿದ ಬಳಿಕ ದೇಶದಲ್ಲಿ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನ ಶುರುವಾದ ಕಾರಣ ಆ ದೇಶಕ್ಕೆ ತೆರಳುವವರ ಸಂಖ್ಯೆ ಭಾರಿ ಕುಸಿದಿದೆ.

ಇದನ್ನೂ ಓದಿ Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

Continue Reading
Advertisement
PM Modi Russia Visit
ವಿದೇಶ5 hours ago

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

LKG UKG
ಪ್ರಮುಖ ಸುದ್ದಿ5 hours ago

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

IND vs SL
ಕ್ರೀಡೆ6 hours ago

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

Ramniwas Rawat
ದೇಶ6 hours ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ7 hours ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ7 hours ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ7 hours ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ7 hours ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ7 hours ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ8 hours ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ11 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ13 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ16 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು17 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌