Girl Self Harm: ಅಶ್ಲೀಲ ವಿಡಿಯೋದ ಬ್ಲ್ಯಾಕ್‌ಮೇಲ್‌, ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ - Vistara News

ಕ್ರೈಂ

Girl Self Harm: ಅಶ್ಲೀಲ ವಿಡಿಯೋದ ಬ್ಲ್ಯಾಕ್‌ಮೇಲ್‌, ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ನೀಡಿರುವ ಹೇಳಿಕೆಯ ವಿಡಿಯೋ ಇದೀಗ ವೈರಲ್‌ ಆಗುತ್ತಿದ್ದು, ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದ್ದಾಳೆ.

VISTARANEWS.COM


on

girl suicide davanagere
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ತನ್ನ ಅಶ್ಲೀಲ ವಿಡಿಯೋ (Obscene video) ಹರಿಯಬಿಡುವ ಬೆದರಿಕೆಯಿಂದ (Blackmail) ಕಂಗಾಲಾಗಿ ಬೇಸತ್ತು ಆತ್ಮಹತ್ಯೆಗೆ (Girl Self Harm) ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

ದಾವಣಗೆರೆ ಜಿಲ್ಲೆಯ (Davanagere news) ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ ಮೈಗೆ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಆಕೆ ನೀಡಿರುವ ಹೇಳಿಕೆಯ ವಿಡಿಯೋ ಇದೀಗ ವೈರಲ್‌ ಆಗುತ್ತಿದ್ದು, ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದ್ದಾಳೆ.

ಶಾಲೆಗೆ ಬರುತ್ತಿದ್ದ ವೇಳೆ ಪರಿಚಯವಾಗಿದ್ದ ಇಬ್ಬರು ಯುವಕರು ಈಕೆಯ ಜತೆಗೆ ಸಲಿಗೆ ಬೆಳೆಸಿಕೊಂಡಿದ್ದರು. ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧ ಹಾಕಿ ವಿದ್ಯಾರ್ಥಿನಿಯ ಆಶ್ಲಿಲ ವಿಡಿಯೋ ಮಾಡಿಕೊಂಡಿದ್ದರು. ತಾವು ಕರೆದಾಗ ಬಾರದೇ ಇದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಬೆದರಿದ ವಿದ್ಯಾರ್ಥಿನಿ, ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಅರ್ಧಕ್ಕೂ ಹೆಚ್ಚು ಸುಟ್ಟ ಗಾಯಗಳೊಂದಿಗೆ ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು‌ಮಟ್ಟಿದ್ದು, ಬ್ಲ್ಯಾಕ್‌ಮೇಲ್‌ ಮಾಡಿದ ಪಾತಕಿಗಳನ್ನು ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Self Harming: ನಿದ್ದೆ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ; ಪೊಲೀಸರ ಕಿರುಕುಳಕ್ಕೆ ಬಲಿಯಾಯ್ತಾ ಜೀವ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು!

Reels Obsession: ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

reels obsession
Koo

ಬೆಂಗಳೂರು: ರಿಲ್ಸ್ ಶೋಗಾಗಿ ಶೋಕಿ (Reels Obsession) ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಬೀದಿಬೀದಿಯಲ್ಲಿ ಈತನ ಗನ್‌ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.

ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.

ಈತ ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಮಾಹಿತಿ ನೀಡಿದ್ದರು.

ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿ ಈತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿದ್ದಾರೆ.

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ (Dead Body Found) ಪತ್ತೆಯಾಗಿದೆ. ಮೃತನ ಕೈ ಮೇಲೆ ಲಕ್ಷ್ಮಿ ಎಂಬ ಹಚ್ಚೆ ಗುರುತು ಪತ್ತೆಯಾಗಿದೆ.

ಪ್ರೀತಿ-ಪ್ರೇಮ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿ ಹೋಗಿರುವ ಅನುಮಾನವಿದೆ. ಮರದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಕೆಳಗಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

Actor Darshan: ಹುಬ್ಬಳ್ಳಿಯಿಂದ ಅಜ್ಜಿ ರಾಜೇಶ್ವರಿ ದರ್ಶನ್‌ ನೋಡಲು ಬಂದಿದ್ದಾರೆ. ತುಂಬಾ ದೂರದಿಂದ ಬಂದಿದ್ದೇನೆ ನನ್ನನ್ನು ಭೇಟಿಯಾಗಲು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ. ʻಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ಕೆಲ ಅಭಿಮಾನಿಗಳು ಬಂದಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲು ಬಳಿ ದರ್ಶನ್‌ ಭೇಟಿಗೆ ವಯೋವೃದ್ಧೆ ಬಂದಿದ್ದಾರೆ.

VISTARANEWS.COM


on

Actor Darshan grandmother came running distant town to see and not punish him
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ಕೆಲ ಅಭಿಮಾನಿಗಳು ಬಂದಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲು ಬಳಿ ದರ್ಶನ್‌ ಭೇಟಿಗೆ ವಯೋವೃದ್ಧೆ ಬಂದಿದ್ದಾರೆ.

ಹುಬ್ಬಳ್ಳಿಯಿಂದ ಅಜ್ಜಿ ರಾಜೇಶ್ವರಿ ಅವರು ದರ್ಶನ್‌ ನೋಡಲು ಬಂದಿದ್ದಾರೆ. ತುಂಬಾ ದೂರದಿಂದ ಬಂದಿದ್ದೇನೆ ನನ್ನನ್ನು ಭೇಟಿಯಾಗಲು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ. ʻಎರಡು ಬಾರಿ ದರ್ಶನ್ ಅವರನ್ನು ನಾನು ಭೇಟಿ ಆಗಿದ್ದೇನೆ. ಅವನು ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ. ಎಲ್ಲರೂ ತಪ್ಪು ಮಾಡುತ್ತಾರೆ ಅವನು ಸಹ ಮಾಡಿದ್ದಾನೆ. ನಾನು ದೂರದಿಂದ ಬಸ್ಸಿನಲ್ಲಿ ಬಂದಿದ್ದೇನೆ ಎಂದು ಗೋಗೆರೆದಿದ್ದಾರೆ.

ನಿನ್ನೆ ಕೂಡ ಭಾನುವಾರ ಆದ ಕಾರಣ ದರ್ಶನ್‌ ಭೇಟಿಗೆ ಯಾರಿಗೂ ಅವಕಾಶ ಇರಲಿಲ್ಲ. ಆದರೂ ನಟ ದರ್ಶನ್ ಭೇಟಿಗೆ ವಿಶೇಷ ಚೇತನ ಆಗಮಿಸಿದ್ದರು, ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಕಿವಿ ಕೇಳಿಸದಿದ್ದರು ಶಂಖ ಊದುತ್ತಾ, ಜಾಗಟೆ ಬಾರಿಸುತ್ತ ಜೈಲಿನ ಬಳಿ ಬಂದಿದ್ದರು. ತುರುವೆಕೆರೆಯ ಜಡಿಯೊ ಗ್ರಾಮದ ವಿಶೇಷ ಚೇತನ ಅಭಿಮಾನಿಯಾಗಿದ್ದರು ʻʻನಟ ದರ್ಶನ್ ಒಳ್ಳೆಯ ವ್ಯಕ್ತಿ. ಅಂತಹವರನ್ನು ಜೈಲಿನಲ್ಲಿಟ್ಟರೆ ಸಿನಿ ಕಾರ್ಮಿಕರು, ನಿರ್ಮಾಪಕರಿಗೆ ತೊಂದರೆ. ಅವ್ರು ತಪ್ಪು ಮಾಡಿರಬಹುದು. ಆದರೆ ನಟ ದರ್ಶನ್ ಸಾಕಷ್ಟು ಸಮಾಜಸೇವೆ ಮಾಡಿದ್ದಾರೆ ಮಾನವೀಯತೆ ದೃಷ್ಟಿಯಿಂದ ಬಿಡುಗಡೆ ಮಾಡಬೇಕು. ದರ್ಶನ್ ಬಿಡುಗಡೆಗಾಗಿ ಗೃಹ ಮಂತ್ರಿ ಜಿ ಪರಮೇಶ್ವರ ಭೇಟಿಗೆ ಹೋಗಿದ್ದೆ. ಆದರೆ ಅವರು ಸಿಗಲಿಲ್ಲʼʼ ಎಂದು ವಿಶೇಷ ಚೇತನ ಅಭಿಮಾನಿ ಗೋವಿಂದ ರಾಜು ಹೇಳಿಕೆ ನೀಡಿದ್ದರು.

ಇದನ್ನೂ ಓದಿ; Actor Darshan: ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ; ಖಾಸಗಿ ಕಾರಿನಲ್ಲಿ ಕರೆದೊಯ್ದ ಪೊಲೀಸ್ ಸಿಬ್ಬಂದಿ

ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇದೀಗ ದರ್ಶನ್‌ ತಾಯಿ, ತಮ್ಮ, ಪತ್ನಿ , ಮಗ ಭೇಟಿ ಮಾಡಿದ್ದಾರೆ. ಆದರೀಗ ಖಾಸಗಿ ವಾಹನದಲ್ಲಿಯೇ ನಟ ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ ಕೊಟ್ಟಿರುವುದು ತಿಳಿದು ಬಂದಿದೆ. ಹೀಗಾಗಿ ಸಾಮಾನ್ಯರಿಗೊಂದು ಕಾನೂನು ನಟ ದರ್ಶನ್ ಕುಟುಂಬಕ್ಕೆ ಒಂದು ಕಾನೂನು ಎನ್ನುವಂತಾಗಿದೆ

Continue Reading

ಚಿಕ್ಕಬಳ್ಳಾಪುರ

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Dead Body Found : ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತನ ಮೃತದೇಹ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Koo

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ (Dead Body Found) ಪತ್ತೆಯಾಗಿದೆ. ಮೃತನ ಕೈ ಮೇಲೆ ಲಕ್ಷ್ಮಿ ಎಂಬ ಹಚ್ಚೆ ಗುರುತು ಪತ್ತೆಯಾಗಿದೆ.

ಪ್ರೀತಿ-ಪ್ರೇಮ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿ ಹೋಗಿರುವ ಅನುಮಾನವಿದೆ. ಮರದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಕೆಳಗಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಭಾನುವಾರ ಅವಘಡ ನಡೆದಿತ್ತು. ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೈಸೂರು ಮೂಲದ ಶಶಿ (30) ಮೃತ ದುರ್ದೈವಿ. ಶಶಿ ತನ್ನ 15 ಮಂದಿ ಸ್ನೇಹಿತರೊಟ್ಟಿಗೆ ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶಶಿ ಈಜಲು ಹೋಗಿ ನೀರುಪಾಲಾಗಿದ್ದ, ಇದೀಗ ಆತನ ಮೃತದೇಹವ ಸಿಕ್ಕಿದ್ದು, ಕುಶಾಲನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಲ್ಲಿ ಕೊಚ್ಚಿ ಹೋದವರಿಗಾಗಿ ಹುಡುಕಾಟ

ಇತ್ತ ನಿನ್ನೆ ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ‌ಮಹಿಳೆ‌ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್‌ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Murder Case: ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

VISTARANEWS.COM


on

hassan murder case
Koo

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿ. ಪತ್ನಿ ಮಮತಾ ಹತ್ಯೆಯಾದವರು. ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು. ಕೌಟುಂಬಿಕ ಕಲಹ ಇವರ ಬಾಳ್ವೆಯ ಹದಗೆಡಿಸಿತ್ತು. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

ರೌಡಿಯಾಗಲು ಹವಾ ಸೃಷ್ಟಿಸಿದ್ದವನನ್ನು ಇರಿದು ಕೊಂದರು!

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದ ಅಪ್ಪು ಕೊಲೆ ಪ್ರಕರಣದಲ್ಲಿ (Murder caseನಾಲ್ವರು ಆರೋಪಿಗಳ ಬಂಧನವಾಗಿದೆ. ರೌಡಿಯಾಗಬೇಕೆಂದು ಹೊರಟಿದ್ದ ಅಪ್ಪು ಎಂಬಾತನನ್ನು ಅದೇ ಏರಿಯಾದ ಹುಡುಗರ ಗ್ಯಾಂಗ್‌ ಕೊಂದು ಹಾಕಿತ್ತು.

ಮಹಾಲಕ್ಷ್ಮಿಲೇಔಟ್ ನಿವಾಸಿಯಾಗಿರುವ ಅಪ್ಪು ಹುಡುಗರ ಮೇಲೆ ದರ್ಪ ಮೆರೆದು ಹಲ್ಲೆ ನಡೆಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಏರಿಯಾದಲ್ಲಿ ಹವಾ ತೋರಿಸಲು ಸಿಕ್ಕ ಸಿಕ್ಕವರಿಗೆ ಹೊಡಿತ್ತಿದ್ದ. ಅಪ್ಪುವಿನ ವರ್ತನೆಗೆ ಬೇಸತ್ತಿದ್ದ ಏರಿಯಾ ಹುಡುಗರು, ಮಾತನಾಡುವ ನೆಪದಲ್ಲಿ ಕರೆಸಿಕೊಂಡಿದ್ದರು.

ಜೀವನಹಳ್ಳಿ ರೈಲ್ವೆ ಟ್ರಾಕ್ ಬಳಿ ಬಂದಿದ್ದ ಅಪ್ಪು ಮೇಲೆ ಏಕಾಏಕಿ ನಾಲ್ಕೈದು ಮಂದಿ ದಾಳಿ ಮಾಡಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಹೋದಾಗ ಅಪ್ಪುನನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಂದು ಹಾಕಿದ್ದರು.

ಕೃತ್ಯದ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದರು. ಇದೀಗ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪುಲಿಕೇಶಿನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Continue Reading
Advertisement
DCM Post
ಕರ್ನಾಟಕ3 mins ago

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

Sheikh Abdul Rashid
ದೇಶ5 mins ago

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ ಎಂಟ್ರಿ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ಸಂಸದನ ಪ್ರಮಾಣವಚನಕ್ಕೆ NIA ಅಸ್ತು

karnataka Weather Forecast
ಮಳೆ9 mins ago

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

reels obsession
ಕ್ರೈಂ14 mins ago

Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು!

Parliament Sessions
ದೇಶ16 mins ago

Parliament Sessions: ಲೋಕಸಭೆಯಲ್ಲಿ ನೀಟ್‌ ವಿವಾದ ಚರ್ಚೆಗೆ ಆಗ್ರಹಿಸಿ ಸಭಾತ್ಯಾಗ ಮಾಡಿದ ಪ್ರತಿಪಕ್ಷ

Darshan support by Adviti Shetty Block the bad commenter
ಸ್ಯಾಂಡಲ್ ವುಡ್24 mins ago

Actor Darshan: ಕೆಟ್ಟ ಕಮೆಂಟ್‌ ಮಾಡೋರನ್ನ ಬ್ಲಾಕ್‌ ಮಾಡಿ, ದರ್ಶನ್‌ ನಿರಪರಾಧಿ ಆಗಿ ಹೊರ ಬರಲಿ ಎಂದ ಅದ್ವಿತಿ ಶೆಟ್ಟಿ

Inspirational Story
ಬೆಂಗಳೂರು41 mins ago

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Doctor's Day
ದೇಶ1 hour ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್1 hour ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ1 hour ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌