Human Animal Conflict : 15 ದಿನದಲ್ಲಿ ವನ್ಯಜೀವಿ -ಮಾನವ ಸಂಘರ್ಷಕ್ಕೆ 11 ಜನ ಸಾವು; ತಡೆಗೆ 500 ಕೋಟಿ ರೂ. ಅನುದಾನಕ್ಕೆ ಮನವಿ - Vistara News

ಕರ್ನಾಟಕ

Human Animal Conflict : 15 ದಿನದಲ್ಲಿ ವನ್ಯಜೀವಿ -ಮಾನವ ಸಂಘರ್ಷಕ್ಕೆ 11 ಜನ ಸಾವು; ತಡೆಗೆ 500 ಕೋಟಿ ರೂ. ಅನುದಾನಕ್ಕೆ ಮನವಿ

Human Animal Conflict : ರಾಜ್ಯದಲ್ಲಿ ವನ್ಯಜೀವಿ -ಮಾನವ ಸಂಘರ್ಷಗಳು ಹೆಚ್ಚುತ್ತಲಿದ್ದು, ಆನೆಗಳ ಕಾರಿಡಾರ್ ರಕ್ಷಣೆಗೆ ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

VISTARANEWS.COM


on

Elephant and Eshwar Khandre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ 15 ದಿನಗಳ ಅಂತರದಲ್ಲಿ ಮಾನವ-ವನ್ಯಜೀವಿ ಸಂಘರ್ಷದಲ್ಲಿ (Human Animal Conflict) 11 ಜನರು ಸಾವಿಗೀಡಾಗಿದ್ದು, ಅಮೂಲ್ಯ ಜೀವ ಹಾನಿ ತಪ್ಪಿಸಲು ಅಗತ್ಯ ಮತ್ತು ತುರ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ (Railway barricade) ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರಿಗೆ 500 ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Minister Ishwar Khandre) ತಿಳಿಸಿದ್ದಾರೆ.

ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಮಂಗಳವಾರ (ಸೆಪ್ಟೆಂಬರ್‌ 5) ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅರಣ್ಯ ಘಟಕದ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಮಾನವ ಮತ್ತು ವನ್ಯಜೀವಿ ಸಂಘರ್ಷ ಇಂದು ನಿನ್ನೆಯದೇನಲ್ಲ. ಇದು ಹಿಂದಿನಿಂದಲೂ ನಡೆಯುತ್ತಿದೆ. ಆದರೆ, ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದು, ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದರು.

ಈ ಬಾರಿ ವಾಡಿಕೆಗಿಂತ ಬಹಳ ಕಡಿಮೆ ಮಳೆ ಆಗಿದ್ದು, ಕಾಡಿನಲ್ಲಿ ಕುಡಿಯುವ ನೀರು ಮತ್ತು ಆಹಾರದ ಸಮಸ್ಯೆಯಿಂದಾಗಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯದೊಳಗೆ ವನ್ಯಜೀವಿಗಳಿಗೆ ಸೂಕ್ತ ಆಹಾರ ದೊರಕುವಂತೆ ಮಾಡುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಇದನ್ನೂ ಓದಿ: Lok Sabha Election 2024 : ಲೋಕಸಭಾ ಟಿಕೆಟ್‌ಗೆ ಪ್ರಬಲ ಸಮುದಾಯಗಳ ಪಟ್ಟು; ಕಾಂಗ್ರೆಸ್‌ಗೆ ಇಕ್ಕಟ್ಟು!

ಆನೆ ಕಾರಿಡಾರ್ ರಕ್ಷಣೆ

ಆನೆ ಕಾರಿಡಾರ್‌ಗಳಲ್ಲಿ (Elephant Corridor) ರಸ್ತೆ, ರೈಲು, ವಿದ್ಯುತ್ ಕಂಬ, ನೀರಿನ ಕೊಳವೆ ಅಳವಡಿಕೆಗಾಗಿ ಕೆಲವು ಭಾಗ ಬಳಕೆಯಾಗಿದೆ. ಆದರೆ, ಖಾಸಗಿಯವರಿಂದ ಒತ್ತುವರಿ ಆಗಿದ್ದರೆ ಇದನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಿ, ಆನೆ ಕಾರಿಡಾರ್ ಅನ್ನು ರಕ್ಷಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಕಾಡಿನಂಚಿನಲ್ಲಿ ನಡೆಯುವ ಕಲ್ಲು ಗಣಿಗಾರಿಕೆಯ ಶಬ್ದದಿಂದ ವನ್ಯಮೃಗಗಳು (Wild Animals) ನಾಡಿಗೆ ಬರುತ್ತಿದ್ದು, ಇದರ ಬಗ್ಗೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರ ಖಂಡ್ರೆ, ಅರಣ್ಯದೊಳಗೆ ಅಥವಾ ಅರಣ್ಯದ ಅಂಚಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ (Illegal quarrying) ಅವಕಾಶ ಇರುವುದಿಲ್ಲ. ಅಂತಹ ಗಣಿಗಾರಿಕೆ ನಡೆಯುತ್ತಿರುವುದು ಕಂಡುಬಂದರೆ ಕ್ರಿಮಿನಲ್ ಮೊಕದ್ದಮೆ (Criminal Case) ಹೂಡಲಾಗುವುದು. ಅರಣ್ಯಾಧಿಕಾರಿಗಳ ಲೋಪ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಆನೆಗಳ ದಾಳಿಯಿಂದ ಅಧಿಕ ಸಾವು; ಸಂತಾಪ

ರಾಜ್ಯದಲ್ಲಿ ಆನೆಗಳ ದಾಳಿಯಿಂದಲೇ ಅಧಿಕ ಸಾವು ಸಂಭವಿಸುತ್ತಿದೆ. ಕಳೆದ ಐದೂವರೆ ವರ್ಷದಲ್ಲಿ 148 ಜನರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. 2018-19ರಲ್ಲಿ 13 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದರೆ, 2019-20ರಲ್ಲಿ 30, 2020-21ರಲ್ಲಿ 26, 2021-22ರಲ್ಲಿ 28, 2022-23ರಲ್ಲಿ 30 ಹಾಗೂ 3.09.2023ರವರೆಗೆ 21 ಅಮೂಲ್ಯ ಜೀವ ಹಾನಿ ಆಗಿದೆ. ಇದು ಅತ್ಯಂತ ಆತಂಕದ ವಿಚಾರ. ಆನೆ ಕಾರ್ಯಾಚರಣೆ ವೇಳೆ ಶಾರ್ಪ್ ಶೂಟರ್ ವೆಂಕಟೇಶ್ ಸೇರಿದಂತೆ ಇಬ್ಬರು ಹೊರಗುತ್ತಿಗೆ ಸಿಬ್ಬಂದಿ ಮೃತಪಟ್ಟಿದ್ದಾರೆ. ವನ್ಯಜೀವಿ ದಾಳಿಯಿಂದ ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಅಗಲಿಕೆಯ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ವನ್ಯಜೀವಿಗಳ ದಾಳಿಯಿಂದ ಮೃತಪಟ್ಟರೆ 15 ಲಕ್ಷ ರೂ. ಪರಿಹಾರ

ವನ್ಯ ಮೃಗಗಳ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಜತೆಗೆ 4 ವರ್ಷಗಳ ಕಾಲ 4 ಸಾವಿರ ರೂ. ಪಿಂಚಣಿಯನ್ನೂ ನೀಡಲಾಗುತ್ತಿದೆ. ನಾವು ನೀಡುವ ಪರಿಹಾರದಿಂದ ಜೀವ ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರ ಕುಟುಂಬಕ್ಕೆ ಆಸರೆ ಆಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಆನಗಳು ಬಂದಾಗ ಹೊರ ಬರಬೇಡಿ

ಆನೆಗಳು ನಾಡಿಗೆ ಬಂದಾಗ, ಅರಣ್ಯ ಇಲಾಖೆಯವರು ಸಾಮಾಜಿಕ ತಾಣಗಳು, ಮಾಧ್ಯಮಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತಾರೆ. ಆದರೂ ಕೆಲವರು ಮನೆಯಿಂದ ಹೊರಬಂದು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆನೆಗಳ ಸಂಚಾರದ ಬಗ್ಗೆ ಮಾಹಿತಿ ಇದ್ದಾಗ, ಯಾರೂ ಕಾಡಿನ ಅಂಚಿಗೆ, ತೋಟಗಳಿಗೆ ಹೋಗಬಾರದು ಎಂದು ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದರು.

ಹುಲಿ ದಾಳಿ ಬಾಲಕ ಸಾವು; ಸಚಿವರ ಸಂತಾಪ

ನಾಗರಹೊಳೆ ವಲಯದಲ್ಲಿ ಹೆಗ್ಗಡ ದೇವನ ಕೋಟೆ ಬಳಿ 7 ವರ್ಷದ ಬಾಲಕ ಚರಣ್ ನಾಯಕ್‌ನನ್ನು ಸೋಮವಾರ ಹುಲಿ ಕೊಂದಿರುವ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವ ಈಶ್ವರ ಖಂಡ್ರೆ, ಹಿರಿಯ ಐಎಫ್ಎಸ್ ಅಧಿಕಾರಿ ಕುಮಾರ್ ಪುಷ್ಕರ್ ಅವರನ್ನು ಸ್ಥಳಕ್ಕೆ ಕಳಹಿಸಿದ್ದು, ಹುಲಿ ಹಿಡಿಯಲು ಕಾರ್ಯಾಚರಣೆ ಆರಂಭವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: SSLC PUC Exam : ಎಸ್‌ಎಸ್‌ಎಲ್‌ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಇನ್ನು 3 ಪರೀಕ್ಷೆ! ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ

ಶಾಶ್ವತ ಪರಿಹಾರ

ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂದರೆ 6395 ಆನೆಗಳಿವೆ. ಅರಣ್ಯ ಇಲಾಖೆ ವತಿಯಿಂದ ರೈಲ್ವೆ ಬ್ಯಾರಿಕೇಡ್, ಕಂದಕ ನಿರ್ಮಾಣ ಮತ್ತು ಸೌರ ವಿದ್ಯುತ್ ಬೇಲಿಯನ್ನು ಅಲ್ಲಲ್ಲಿ ಹಾಕಲಾಗುತ್ತಿದೆ. ಜತೆಗೆ 7 ಆನೆ ಕಾರ್ಯಾಚರಣೆ ಪಡೆಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು, ಇವುಗಳ ಮೂಲಕ ನಾಡಿಗೆ ಬಂದ ಆನೆಗಳನ್ನು ತಕ್ಷಣವೇ ಕಾಡಿಗೆ ಅಟ್ಟಲಾಗುತ್ತಿದೆ. ಈ ಎಲ್ಲ ಕ್ರಮಗಳ ಹಿನ್ನೆಲೆಯಲ್ಲಿ ಹಾನಿ ಪ್ರಮಾಣ ತಗ್ಗಿದೆ. ಪ್ರತಿಯೊಂದು ಜೀವವೂ ಅಮೂಲ್ಯ. ಮಾನವ- ವನ್ಯಜೀವಿ ಸಂಘರ್ಷದಿಂದ ಪ್ರಾಣಿಯೂ ಸಾಯಬಾರದು, ಮನುಷ್ಯರೂ ಸಾಯಬಾರದು. ಆದಾಗ್ಯೂ ಆನೆಗಳ ದಾಳಿಯಿಂದ ಸಾವು ಸಂಭವಿಸದಂತೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಅನ್ಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಸಾವು ಕಡಿಮೆ

ಜಾರ್ಖಂಡ್‌ನಲ್ಲಿ ಕೇವಲ 700 ಆನೆಗಳಿವೆ. ಆದರೆ, ಅಲ್ಲಿ ವರ್ಷದಲ್ಲಿ ಸರಾಸರಿ 80 ಸಾವು ಸಂಭವಿಸುತ್ತದೆ. ಪಶ್ಚಿಮ ಬಂಗಾಳದಲ್ಲಿ 750 ಆನೆಗಳಷ್ಟೇ ಇವೆ. ಆದರೂ ಅಲ್ಲಿ 55 ಸಾವುಗಳು ಸಂಭವಿಸುತ್ತವೆ. ತಮಿಳುನಾಡಿನಲ್ಲಿ 4 ಸಾವಿರ ಆನೆಗಳಿವೆ. ಈ ವರ್ಷದಲ್ಲಿ ಸರಾಸರಿ 60 ಸಾವು ಸಂಭವಿಸುತ್ತದೆ. ಒಡಿಸ್ಸಾದಲ್ಲಿ ಇರುವುದು 600 ಆನೆಗಳು ಮಾತ್ರ. ಆದರೆ, ಅಲ್ಲಿ ಸರಾಸರಿ 120 ಜೀವಹಾನಿ ಆಗುತ್ತಿದೆ. ಅಸ್ಸಾಂನಲ್ಲಿ 5700 ಆನೆಗಳಿದ್ದು, ಅಲ್ಲಿ ಸರಾಸರಿ 80 ಜನರು ಮೃತಪಡುತ್ತಿದ್ದಾರೆ. ನೆರೆಯ ಕೇರಳದಲ್ಲಿ 2000 ಆನೆಗಳು ಇದ್ದು, ಸರಾಸರಿ 120ಕ್ಕಿಂತ ಹೆಚ್ಚಿನ ಸಾವು ಸಂಭವಿಸುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದರು.

ರೈಲ್ವೆ ಬ್ಯಾರಿಕೇಡ್ ಪರಿಹಾರ

ಕಂದಕ ಮತ್ತು ಸೌರ ತಂತಿ ಬೇಲಿಗೆ ಪ್ರತಿ ವರ್ಷ ನಿರ್ವಹಣಾ ವೆಚ್ಚ ಆಗುತ್ತದೆ. ಆದರೆ, ರೈಲ್ವೆ ಬ್ಯಾರಿಕೇಡ್ ಉತ್ತಮ ಪರಿಹಾರ ಎಂದು ಭಾರತೀಯ ವಿಜ್ಞಾನ ಮಂದಿರ (ಐ.ಐ.ಎಸ್.ಸಿ.) ತಜ್ಞರ ವರದಿ ಹೇಳಿದೆ. ರಾಜ್ಯದಲ್ಲಿ ಆನೆ ಹಾವಳಿ ತಪ್ಪಿಸಲು ಸುಮಾರು 640 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಿಸುವ ಅಗತ್ಯವಿದೆ. ಈವರೆಗೆ 312 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಪ್ರತಿ ಕಿಲೋ ಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಸುಮಾರು 1.50 ಕೋಟಿ ವೆಚ್ಚ ಆಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಕ್ಯಾಂಪಾ ನಿಧಿ ಬಂದಿಲ್ಲ

ಕ್ಯಾಂಪಾ ನಿಧಿಯಲ್ಲಿ ನಮ್ಮದೇ 500 ಕೋಟಿ ರೂ. ಅನುದಾನ ಇದೆ. ನಾನು ದೆಹಲಿಗೆ ಹೋದಾಗ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರನ್ನು ಭೇಟಿ ಮಾಡಿ ಕ್ಯಾಂಪಾ ನಿಧಿ ಅಡಿ ಇರುವ ಹಣ ಬಿಡುಗಡೆ ಮಾಡಿದರೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಬಹುದು ಎಂದು ಮನವಿ ಮಾಡಿದ್ದೇನೆ. ಆದರೆ, 1.5 ಕೋಟಿ ರೂ. ವೆಚ್ಚ ಮಾಡಿ ರೈಲ್ವೆ ಬ್ಯಾರಿಕೇಡ್ ಏಕೆ ಮಾಡಬೇಕು ಎಂದು ಪ್ರಶ್ನಿಸುತ್ತಾರೆ. ಜೀವಕ್ಕಿಂತ ಹಣ ಮುಖ್ಯ ಅಲ್ಲ ಎಂದು ಈಶ್ವರ ಖಂಡ್ರೆ ಹೇಳಿದರು.

ಇದನ್ನೂ ಓದಿ: Namma Metro : ಖಾಸಗಿ ವಾಹನ ಬಳಸುವ ಶೇ. 95 ಬೆಂಗಳೂರಿಗರು ಮೆಟ್ರೋಗೆ ಶಿಫ್ಟ್‌ ಆಗಲು ರೆಡಿ!

38 ಆನೆಗಳ ಸಾವು

ರಾಜ್ಯದಲ್ಲಿ ಈ ವರ್ಷ 38 ಆನೆಗಳು ಮೃತಪಟ್ಟಿವೆ. ಈ ಪೈಕಿ 1 ಆನೆ ರೈಲು ಡಿಕ್ಕಿಯಿಂದ ಸತ್ತಿದ್ದರೆ, ವಿದ್ಯುತ್ ಸ್ಪರ್ಶದಿಂದ 10 ಆನೆಗಳು ಮೃತಪಟ್ಟಿವೆ. 2 ಆನೆಗಳು ಗುಂಡಿನೇಟಿನಿಂದ ಸಾವಿಗೀಡಾಗಿದ್ದರೆ, 25 ಆನೆಗಳು ಸ್ವಾಭಾವಿಕ ಸಾವು ಕಂಡಿವೆ ಎಂದು ಸಚಿವ ಸಚಿವ ಈಶ್ವರ ಖಂಡ್ರೆ ವಿವರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Varanasi: ವಾರಾಣಸಿಯಲ್ಲಿ ನರೇಂದ್ರ ಮೋದಿ ಅವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಸ್ಪರ್ಧೆ ತೀವ್ರವಾದರೂ ಜನ ಮಾತ್ರ ಮೋದಿ ಅವರಿಗೇ ಬೆಂಬಲ ಎನ್ನುತ್ತಿದ್ದಾರೆ. ಅದರಲ್ಲೂ, ಕನ್ನಡಿಗರು ಏನೆಂದರು ಎಂಬ ಕುರಿತು ವಿಸ್ತಾರ ನ್ಯೂಸ್‌ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ.

VISTARANEWS.COM


on

Varanasi
Koo

ವಾರಾಣಸಿ: ಲೋಕಸಭೆ ಚುನಾವಣೆಯು (Lok Sabha Election 2024) ಕೊನೆಯ ಹಂತ ತಲುಪಿದೆ. ಜೂನ್‌ 1ರಂದು ಏಳನೇ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆಗೆ ತೆರೆ ಬೀಳಲಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಉತ್ತರ ಪ್ರದೇಶದ ವಾರಾಣಸಿಯಿಂದ (Varanasi) ಸ್ಪರ್ಧಿಸಿದ್ದು, ಸುಮಾರು 7 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲೂ, ವಾರಾಣಸಿಯಲ್ಲಿ ನೆಲೆಸಿರುವ ಕನ್ನಡಿಗರಂತೂ ಮೋದಿ ಗೆಲುವು ನಿಶ್ಚಿತ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಹೇಳಿದ್ದೇನು? ಇಲ್ಲಿದೆ ‌‘ವಿಸ್ತಾರ ನ್ಯೂಸ್‌’ ಗ್ರೌಂಡ್‌ ರಿಪೋರ್ಟ್.‌

“ನಾವು ಬೆಂಗಳೂರಿನಿಂದ ಕಾಶಿಗೆ ಬಂದು ನೆಲೆಸಿದ್ದೇವೆ. 2012ರ ಕೊನೆಯಲ್ಲಿ ನಾವು ಇಲ್ಲಿಗೆ ಬಂದೆವು. ನಾವು ಇಲ್ಲಿಗೆ ಬಂದಾಗ ಸಮಾಜವಾದಿ ಪಕ್ಷ ಅಧಿಕಾರದಲ್ಲಿತ್ತು. ನಾವು ಎರಡೂ ಸರ್ಕಾರಗಳನ್ನು ನೋಡಿದ ಕಾರಣ ನಮಗೆ ನಿಜವಾದ ವ್ಯತ್ಯಾಸ ಗೊತ್ತು. ಮೊದಲಿಗೆ ಇಲ್ಲಿ ವಿದ್ಯುತ್‌ ವೋಲ್ಟೇಜ್‌ ಇರಲಿಲ್ಲ. ಈಗ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಗಂಗೆಯು ಶುದ್ಧಗೊಂಡಿದ್ದಾಳೆ. ಇಲ್ಲಿ ಗಲಭೆಗಳು ಸಂಪೂರ್ಣವಾಗಿ ನಿಂತಹೋಗಿವೆ. ಒಂದೇ ಒಂದು ಗಲಾಟೆ ನಡೆಯುವುದಿಲ್ಲ. ಕಳೆದ 10 ವರ್ಷಗಳಲ್ಲಿ ಅಪಾರ ಅಭಿವೃದ್ಧಿಯಾಗಿದೆ” ಎಂಬುದಾಗಿ ಕನ್ನಡಿಗರೊಬ್ಬರು ಮಾಹಿತಿ ನೀಡಿದ್ದಾರೆ.

“ಸಮಾಜದಲ್ಲಿ ಧರ್ಮ ಇದ್ದಾಗಲೇ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಇದೇ ಕಾರಣಕ್ಕಾಗಿಯೇ, ನರೇಂದ್ರ ಮೋದಿ ಅವರು ಯಾವುದೇ ಗಲಾಟೆ, ಗದ್ದಲ ಇಲ್ಲದೆ, 150 ಎಕರೆ ಜಾಗವನ್ನು ಪಡೆದುಕೊಂಡು, ಕಾಶಿ ವಿಶ್ವನಾಥ ಕಾರಿಡಾರ್‌ ನಿರ್ಮಿಸಿದ್ದಾರೆ. ಹಾಗಾಗಿ, ಮೋದಿ ಅವರು ಲಕ್ಷಾಂತರ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ” ಎಂಬುದಾಗಿ ಹೇಳಿದ್ದಾರೆ. ಇನ್ನೊಬ್ಬ ಕನ್ನಡಿಗ ಮಾತನಾಡಿ, “ನಾನು ಮೊದಲ ಬಾರಿಗೆ ಮತ ಚಲಾವಣೆ ಮಾಡುತ್ತಿದ್ದೇನೆ. ನನ್ನ ಮೊದಲ ವೋಟು ಮೋದಿ ಅವರಿಗೆ” ಎಂದು ಯುವಕ ಹೇಳಿದ್ದಾರೆ.

ಮೈಸೂರಿನವರಾದ, 1984ರಲ್ಲಿಯೇ ವಾರಾಣಸಿಗೆ ತೆರಳಿದ, ಸ್ವಾಮೀಜಿ ಆಗಿರುವ ಮತ್ತೊಬ್ಬ ಕನ್ನಡಿಗ ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ್ದಾರೆ. “ಕಳೆದ 40 ವರ್ಷಗಳಿಂದ ಕಾಶಿಯಲ್ಲಿಯೇ ನೆಲೆಸಿದ್ದೇನೆ. ಮೊದಲು ಸ್ವಚ್ಛತೆ, ಅಭಿವೃದ್ಧಿಯಾಗಿರಲಿಲ್ಲ. ಕಾಶಿಗೆ ಶೇ.90ರಷ್ಟು ಜನ ಬರುವುದು ದಕ್ಷಿಣ ಭಾರತದಿಂದಲೇ. ಈಗ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಘಾಟ್‌ಗಳನ್ನು ಸ್ವಚ್ಛಗೊಳಿಸಿ, ಭಕ್ತರಿಗೆ ಅನುಕೂಲ ಮಾಡಲಾಗಿದೆ. ಮೋದಿ ಅವರಿರದಿದ್ದರೆ ವಾರಾಣಸಿ ನಾಶವಾಗುತ್ತಿತ್ತು” ಎಂದಿದ್ದಾರೆ. ಕನ್ನಡಿಗರು ಮಾತ್ರವಲ್ಲ, ಕಾಶಿಯ ಬಹುತೇಕ ನಾಗರಿಕರು ಕೂಡ ಮೋದಿ ಅವರ ಆಡಳಿತವನ್ನು ಮೆಚ್ಚಿದ್ದಾರೆ.

ಮೋದಿ ವಿರುದ್ಧ ಕಣಕ್ಕಿಳಿದ ನಾಯಕರಿವರು

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Continue Reading

ಕರ್ನಾಟಕ

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Rain News: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ಅವಘಡ ನಡೆದಿದೆ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

Rain News
Koo

ಯಾದಗಿರಿ: ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ನಡೆದಿದೆ. ಬಾಲಕಿ ಮನಸ್ವಿ ತಿಪ್ಪಣ್ಣ ಯಾದವ್ ಮೃತ ಬಾಲಕಿ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ.

ಜಮೀನಿನ ಶೀಟ್‌ ಮನೆಯಲ್ಲಿ ಪೋಷಕರ ಜತೆ ಬಾಲಕಿ ವಾಸವಾಗಿದ್ದಳು. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

Continue Reading

ಕರ್ನಾಟಕ

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Shivamogga News: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದಿದ್ದಾನೆ.

VISTARANEWS.COM


on

Shivamogga News
Koo

ಶಿವಮೊಗ್ಗ: ಹೆದ್ದಾರಿಯಲ್ಲೇ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಘಟನೆ ಶಿವಮೊಗ್ಗ (Shivamogga News) ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಲಾಂಗ್‌ ಕಸಿದುಕೊಂಡು ಮನಸೋ ಇಚ್ಛೆ ಥಳಿಸಿರುವ ಸ್ಥಳೀಯರು, ನಂತರ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಲಾಂಗ್ ಹಿಡಿದು ಹುಚ್ಚಾಟ ಮೆರೆದ ಸಮೀರ್ ಎಂಬ ಯುವಕನನ್ನು ಆನಂದಪುರ ಪೊಲೀಸ್‌ ಠಾಣೆಗೆ ಸ್ಥಳೀಯರು ಒಪ್ಪಿಸಿದ್ದಾರೆ. ಯುವಕನ ಪುಂಡಾಟದ ದೃಶ್ಯ ಮೊಬೈಲ್‌ನಲ್ಲಿ ಕಾರು ಚಾಲಕರೊಬ್ಬರು ಸೆರೆಹಿಡಿದಿದ್ದಾರೆ.

ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

theft Case

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ಇದನ್ನೂ ಓದಿ: Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕರ್ನಾಟಕ

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Rain News: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಮಳೆ ಸುರಿಯುತ್ತಿದ್ದಾಗ ಮರದಡಿ ನಿಂತಿದ್ದ ಇಬ್ಬರಿಗೆ ಸಿಡಿಲು ಬಡಿದಿದೆ.

VISTARANEWS.COM


on

Rain News
Koo

ಕಲಬುರಗಿ: ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು (Lightning strike) ಇಬ್ಬರು ಮೃತಪಟ್ಟಿದ್ದಾರೆ. ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ಏಕನಾಥ್ ವಾಘಮೂಡೆ (55), ಸತೀಶ್ ಶಳಕೆ (40) ಮೃತರು. ಜಮೀನಿನಿಂದ ಮನೆಗೆ ಹೋಗುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ (Rain News) ಆರಂಭವಾಗಿದೆ. ಈ ವೇಳೆ ರಕ್ಷಣೆಗಾಗಿ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರ್ಧ ಗಂಟೆಗೂ ಹೆಚ್ಚುಕಾಲ ಹೊತ್ತಿ ಉರಿದ ತೆಂಗಿನ ಮರ

ರಾಯಚೂರು: ಶಕ್ತಿನಗರದ ದತ್ತಾತ್ರೇಯ ದೇವಸ್ಥಾನದ ಆವರಣದದಲ್ಲಿ ಸಿಡಿಲು ಬಡಿದಿ ತೆಂಗಿನ ಮರ ಹೊತ್ತಿ ಉರಿದಿದೆ. ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದ ಕಾರಣ ಮಳೆಯ ನಡುವೆಯೂ ಅರ್ಧ ಗಂಟೆಗೂ ಹೆಚ್ಚುಕಾಲ ತೆಂಗಿನ ಮರ ಹೊತ್ತಿ ಉರಿಯಿತು.

ಕೆರೆಯಂತಾದ ಬಡಾವಣೆ

ಯಾದಗಿರಿ: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿಯ ಬಡಾವಣೆಯೊಂದು ಕೆರೆಯಂತಾಗಿದೆ. ಮಳೆ‌ ನಿಂತ ಮೇಲೂ ಮನೆಯಿಂದ ಹೊರ ಬರಲಾಗದೆ ನಿವಾಸಿಗಳ ಪರದಾಡುತ್ತಿದ್ದಾರೆ. ಸತತ ಮೂರು ಗಂಟೆಗಳ ಕಾಲ ಸುರಿದ ಮಳೆಯಿಂದ ರಸ್ತೆ ಮೇಲೂ ನೀರು ಆವರಿಸಿಕೊಂಡಿದ್ದರಿಂದ ವಾಹನ ಸವಾರರ ಪರದಾಡುತ್ತಿದ್ದಾರೆ.

ರಸ್ತೆ ಮೇಲೆ ಉರುಳಿ ಬಿದ್ದ ಬೃಹತ್ ಮರ

ರಾಯಚೂರು: ಬಿರುಗಾಳಿ ಸಹಿತ ಮಳೆಗೆ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದ ಘಟನೆ ರಾಯಚೂರು ನಗರದ ಆರ್.ಬಿ. ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ಇದ್ದ ತಳ್ಳುವ ಗಾಡಿ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೃಹತ್ ಮರದ ಜತೆ ಕೆಲ ವಿದ್ಯುತ್ ಕಂಬಗಳು ನೆಲಕಚ್ಚಿವೆ. ರಸ್ತೆಗೆ ಮರ ಉರುಳಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ | Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಮೊಬೈಲ್ ಟವರ್ ರಾಡ್ ಕಳಚಿ ಬಿದ್ದು ವಿದ್ಯಾರ್ಥಿನಿಗೆ ಗಾಯ

ಕಲಬುರಗಿ: ಮೊಬೈಲ್ ಟವರ್ ರಾಡ್ ಕಳಚಿ ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಸುಮಾ ಗಾಯಗೊಂಡ ಯುವತಿ. ಈಕೆಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಡ್ಲಾಪುರ ಗ್ರಾಮದ ಮನೆಯ ಮುಂದೆ ನಿಂತಿದ್ದಾಗ, 180 ಅಡಿ ಎತ್ತರದ ಬಿಎಸ್‌ಎನ್‌ಎಲ್ ಟವರ್‌ನ ರಾಡ್‌ ಕಳಚಿ ಬಿದ್ದಿದ್ದರಿಂದ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ಕಾರ್ಯ ಸ್ಥಗಿತಗೊಂಡಿರುವ ಟವರ್‌ನ ರಾಡುಗಳು ಸಡಿಲಗೊಂಡಿದ್ದು ನೇತಾಡುತ್ತಿವೆ. ಸಣ್ಣ ಗಾಳಿಗೂ ಸಹ ಯಾವುದೇ ಕ್ಷಣದಲ್ಲಿ ರಾಡ್‌ಗಳು ಬಿದ್ದು ಜನರ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆ ಇದೆ.

ಇದನ್ನೂ ಓದಿ | Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ನ ಹಳೇ ಟವರ್ ತೆರವು ಮಾಡಿ ಎಂದು ಸ್ಥಳೀಯರು ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಗಾಳಿ ಮಳೆ ಸಮಯದಲ್ಲಿ ಜನರು ಟವರ್‌ ಬಳಿ ಆತಂಕದಿಂದ ಓಡಾಡುವಂತಾಗಿದೆ.

Continue Reading
Advertisement
Varanasi
ದೇಶ22 mins ago

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Virat kohli
ಕ್ರೀಡೆ25 mins ago

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

IPL 2024 Final
ಪ್ರಮುಖ ಸುದ್ದಿ50 mins ago

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

The Kapil Sharma Show
ದೇಶ1 hour ago

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

IPL 2024
ಕ್ರೀಡೆ1 hour ago

IPL 2024 Final : ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

Hardik Pandya
ಕ್ರೀಡೆ2 hours ago

Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

Rain News
ಕರ್ನಾಟಕ2 hours ago

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Phalody Satta Bazar
ದೇಶ2 hours ago

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Shivamogga News
ಕರ್ನಾಟಕ3 hours ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

turbulence
ಪ್ರಮುಖ ಸುದ್ದಿ3 hours ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌