Vijayanagara News: ವಸತಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳ ಸಂಘ ಸ್ಥಾಪಿಸಿ: ಶಶಿಧರ ಕೋಸಂಬೆ - Vistara News

ವಿಜಯನಗರ

Vijayanagara News: ವಸತಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳ ಸಂಘ ಸ್ಥಾಪಿಸಿ: ಶಶಿಧರ ಕೋಸಂಬೆ

Vijayanagara News: ವಿಜಯನಗರ ಜಿಲ್ಲೆಯ ಪ್ರತಿ ವಸತಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳ ಸಂಘ ಸ್ಥಾಪನೆ ಆಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

VISTARANEWS.COM


on

District level meeting in Vijayanagar district
ವಿಜಯನಗರ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಸಮಾಲೋಚನಾ ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಜಿಲ್ಲೆಯ ಪ್ರತಿ ವಸತಿ ನಿಲಯಗಳಲ್ಲಿ (Hostels) ಮಕ್ಕಳ ಹಕ್ಕುಗಳ (Children Rights) ಸಂಘ ಸ್ಥಾಪನೆ ಆಗಬೇಕು. ಮಕ್ಕಳಿಗೆ ಬಾಲಕಾರ್ಮಿಕ, ಬಾಲ್ಯವಿವಾಹ ಪದ್ಧತಿ ನಿರ್ಮೂಲನೆ, ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಮಕ್ಕಳ ಸಹಾಯವಾಣಿ (Helpline) ಅಧಿಕಾರಿಗಳು ಜಾಗೃತಿ (Awareness) ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಆಯೋಜಿಸಿದ್ದ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಮಕ್ಕಳ ಹಕ್ಕುಗಳ ರಕ್ಷಣೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಪೊಲೀಸ್, ಕಾರ್ಮಿಕ, ಆರೋಗ್ಯ ಇಲಾಖೆಯ ಜತೆಗೆ ಪ್ರಗತಿಯ ವರದಿ ಪಡೆದರು.

ಇದನ್ನೂ ಓದಿ: Zika Virus: ಮಹಾರಾಷ್ಟ್ರದಲ್ಲಿ ಝಿಕಾ ವೈರಸ್‌ ಹಾವಳಿ; ನಮಗೆಷ್ಟು ಅಪಾಯ? ಮುಂಜಾಗ್ರತಾ ಕ್ರಮಗಳು ಯಾವವು?

ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಸೋಮವಾರ ಭೇಟಿ ನೀಡಿದ್ದ ಅವರು, ಈ ವೇಳೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಭಾಗದ ಕೆಲ ಹಾಸ್ಟೆಲ್‌ನ ವಾತಾವರಣ ಪರಿಸರ ಸ್ನೇಹಿಯಾಗಿದ್ದು, ವಾರ್ಡನ್‌ಗಳನ್ನು ಅಭಿನಂದಿಸಿದರು. ಪರಿಸರ ಸ್ನೇಹಿ ಪೂರಕ ವಾತಾವರಣ ಎಲ್ಲಾ ವಸತಿ ನಿಲಯಗಳಲ್ಲಿ ರೂಪಿಸಬೇಕು ಎಂದು ಸೂಚಿಸಿದರು.

ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ವಿವಿಧ ಬಾರ್, ರೆಸ್ಟೋರೆಂಟ್ ಹಾಗೂ ಹೋಟೆಲ್‌ನಲ್ಲಿ ಬಾಲಕಾರ್ಮಿಕರು ಇರುವುದು ಕಂಡುಬಂದಿದೆ. ಈ ಬಗ್ಗೆ ಕ್ರಮವಹಿಸಬೇಕು. ಈ ಹಿಂದೆ ಸಮೀಕ್ಷೆ ನಡೆಸಿದ್ದ ವರದಿಯನ್ವಯ ಜಿಲ್ಲೆಯಲ್ಲಿ ಇರುವ ಬಾಲಕಾರ್ಮಿಕರ ಈಗಿನ ಸ್ಥಿತಿಗತಿ ಪರಿಶೀಲಿಸಿ ಆಯೋಗಕ್ಕೆ ವರದಿ ಸಲ್ಲಿಸಿ ಅವರ ಮುಂದಿನ ಸೌಕರ್ಯ, ಪುನರ್ವಸತಿ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಬೇಕು. ಬಾಲಕಾರ್ಮಿಕ ಪದ್ಧತಿ ಹಾಗೂ ಭಿಕ್ಷಾಟನೆ ಪ್ರಕರಣ ಕಂಡುಬಂದರೆ ಎಚ್ಚರವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ವಸತಿ ನಿಲಯದಲ್ಲಿ ಮಕ್ಕಳ ಹಕ್ಕುಗಳ ಸಂಘ ಸ್ಥಾಪಿಸಿ ಮಕ್ಕಳ ಹಕ್ಕುಗಳ ಕಾನೂನು ವ್ಯವಸ್ಥೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ವಾರ್ಡನ್‌ಗಳಿಗೆ ಸೂಚಿಸಲು ತಿಳಿಸಿದರು.

ಬಾಲ್ಯವಿವಾಹ ತಡೆಗೆ ಅಗತ್ಯ ಕ್ರಮ

ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಗೆ ಅಗತ್ಯ ಕ್ರಮ ಕೈಗೊಂಡು, ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಬಾಲ್ಯವಿವಾಹ ಆಗುವ ಸಂದರ್ಭದಲ್ಲಿ ತಡೆದು ರಕ್ಷಣೆಗೆ ಒಳಪಟ್ಟ ಸಂತ್ರಸ್ತ ಬಾಲಕಿಯರ ಸದ್ಯದ ಸ್ಥಿತಿಗತಿ ಬಗ್ಗೆ ವರದಿ ಪಡೆದುಕೊಂಡು ಪುನರ್ವಸತಿ, ಕಾನೂನು ಬಲ, ಶಿಕ್ಷಣ ಸೌಲಭ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ತಾಲೂಕು, ಗ್ರಾಪಂವಾರು ರಕ್ಷಣಾ ಸಮಿತಿ ರಚನೆ

ಜಿಲ್ಲೆಯ ಪ್ರತಿ ತಾಲೂಕು ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಕ್ಕಳ ಕಾವಲು ಸಮಿತಿಯನ್ನು ತಹಸೀಲ್ದಾರ್ ಮತ್ತು ಕಾರ್ಯನಿರ್ವಹಣಾ ಅಧಿಕಾರಿ ಅಧ್ಯಕ್ಷತೆಯಲ್ಲಿ ರಚಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಪರಿಣಾಮಕಾರಿಯಾಗಿ ಸಭೆ ಕೈಗೊಳ್ಳಬೇಕು, ಶಾಲೆಯಿಂದ ಹೊರಗುಳಿಯುವ, ಬಾಲ್ಯ ವಿವಾಹ ಒಳಪಡುವವರನ್ನು ರಕ್ಷಿಸಬೇಕು ಜತೆಗೆ ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಸೂಚಿಸಿದರು.

ಪೌಷ್ಟಿಕ ಪುನಶ್ಚೇತನ ಘಟಕ

ಜಿಲ್ಲಾ ಮಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ 10 ಹಾಸಿಗೆ, ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ 5 ಹಾಸಿಗೆಗಳನ್ನು ಮೀಸಲಿಟ್ಟು ಪೌಷ್ಠಿಕ ಪುನಶ್ಚೇತನ ಘಟಕ ಸ್ಥಾಪಿಸಬೇಕು, ಪ್ರತಿ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಆರೈಕೆ ಕೇಂದ್ರ ಸ್ಥಾಪಿಸುವ ಜತೆಗೆ ಬಾಣಂತಿಯರ ಆರೈಕೆಗೆ ಬೇಕಾದ ಬಿಸಿನೀರು ಒಳಗೊಂಡಂತೆ ಮೂಲಸೌಕರ್ಯ ಒದಗಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Aadhaar update: ಆಧಾರ್‌ ವಿವರ ಈಗಲೇ ಉಚಿತವಾಗಿ ನವೀಕರಿಸಿ; ಎಲ್ಲಿ, ಹೇಗೆ, ಎಷ್ಟು ದಿನ?

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ ಎಸ್., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾ ದೇವಿ, ಉಪವಿಭಾಗಾಧಿಕಾರಿ ನೋಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಪಾಷಾ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

Wild Animals Attack : ಕರೆಯದೇ ಮದುವೆಗೆ ಬಂದ ಕೋತಿಯೊಂದು ರಂಪಾಟವನ್ನೇ ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರ ಮೇಲೂ ಎರಗಿದೆ. ಮತ್ತೊಂದು ಕಾಡಾನೆ, ಕರಡಿ ಪ್ರತ್ಯಕ್ಷಗೊಂಡು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

wild animals Attack
Koo

ಹಾಸನ: ಮದುವೆ ಮನೆಗೆ ನುಗ್ಗಿದ ಕೋತಿಯೊಂದು ರಂಪಾಟ (Wild Animals Attack) ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರಿಗೂ ತೊಂದರೆ ಕೊಟ್ಟಿದೆ. ಇಷ್ಟು ಮಾತ್ರವಲ್ಲದೇ ಮದುವೆಗೆ ಬಂದವರಿಗೆ ಮಂಗ (Monkey Attack) ಕಚ್ಚಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಘಟನೆ ನಡೆದಿದೆ.

wild Animals Attack

ಹಿರಿಸಾವೆಯ ನುಗ್ಗೆಹಳ್ಳಿ ರಸ್ತೆಯಲ್ಲಿ ನಡೆಯುತ್ತಿದ್ದ ಮದುವೆಗೆ ಕರೆಯದೇ ಬಂದ ಕೋತಿ ಕಾಟಕ್ಕೆ ಜನರು ಹೈರಣಾದರು. ಡೈನಿಂಗ್ ಹಾಲ್‌ನಲ್ಲಿ ಊಟ ಮಾಡುತ್ತಿದ್ದವರಿಗೂ ಕಿರಿಕಿರಿ ಮಾಡಿ, ಊಟ ಕಸಿದುಕೊಂಡಿದೆ. 8-10 ಮಂದಿ ಮೇಲೆ ದಾಳಿ ಮಾಡಿ ಕಚ್ಚಿದೆ. ಸುಶೀಲಮ್ಮ, ಲೀಲಾವತಿ, ನಿಂಗೇಗೌಡ, ಗೌರಮ್ಮ, ಗಿರಿಜಮ್ಮ , ತಿಮ್ಮೇಗೌಡ, ಗಿರಿಗೌಡ ಎಂಬುವವರಿಗೆ ಕೋತಿ ಕಚ್ಚಿದ್ದು, ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುತ್ತಮುತ್ತಲಿನ ಹಳ್ಳಿಯಲ್ಲಿ ಓಡಾಡುತ್ತಿರುವ ಕೋತಿ ಹಿಡಿದು ಸ್ಥಳಾಂತರ ಮಾಡಲು ಆಗ್ರಹಿಸಿದ್ದಾರೆ.

wild animals Attack

ಇದನ್ನೂ ಓದಿ: Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

wild Animals Attack

ವಿಜಯನಗರದ ಎಪಿಎಂಸಿ ಆವರಣಕ್ಕೆ ಎಂಟ್ರಿ ಕೊಟ್ಟ ಕರಡಿ

ಇತ್ತೀಚೆಗೆ ಕರಡಿಗಳ ಹಾವಳಿ ಹೆಚ್ಚಾಗಿದೆ. ವಿಜಯನಗರದ ಹಗರಿಬೊಮ್ಮನ ಹಳ್ಳಿಯಲ್ಲಿರುವ ಎಪಿಎಂಸಿ (APMC) ಆವರಣದಲ್ಲಿ ಕರಡಿಯೊಂದು ಪತ್ತೆಯಾಗಿದೆ. ಮಂಗಳವಾರ ಬೆಳಗಿನ ಜಾವ ಕರಡಿ ಓಡಾಟ ಕಂಡು ರೈತರು ಹೌಹಾರಿದ್ದಾರೆ. ಕರಡಿ ಓಡಾಟವು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆಯೂ ನಾನಾ ಕಡೆ ಕರಡಿ ಪ್ರತ್ಯಕ್ಷವಾಗಿತ್ತು.

wild animals Attack

ಕೊಡಗಿನಲ್ಲಿ ಆಟೋ ಜಖಂ ಮಾಡಿದ ಕಾಡಾನೆ

ಕೊಡಗಿನಲ್ಲಿ ಆನೆ -ಮಾನವ ಸಂಘರ್ಷ ಮುಂದುವರಿದಿದೆ. ಮನೆ ಸಮೀಪ ನಿಲ್ಲಿಸಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ನಾಪೋಕ್ಲು ಸಮೀಪದ ಕಕ್ಕಬ್ಬೆಯ ಗ್ರಾಮದ ನಾಲಡಿ ವಾಟೆಕಾಡು ಎಂಬಲ್ಲಿ ಘಟನೆ ನಡೆದಿದೆ. ವಾಟೆಕಾಡು ನಿವಾಸಿ ದೇವಯ್ಯ ಎಂಬುವರ ಆಟೋವನ್ನು ಜಖಂಗೊಳಿಸಿ, ಸಮೀಪದ ತೋಟದಲ್ಲೂ ದಾಂಧಲೆ ನಡೆಸಿ ಕಾಲ್ಕಿತ್ತಿದೆ. ಆನೆ ಹಾವಳಿಯಿಂದ ಮುಕ್ತಿ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

wild Animals Attack

ಕೊಪ್ಪಳದಲ್ಲಿ ನಿಲ್ಲದ ಕರಡಿ ಆತಂಕ

ಕಳೆದ ಒಂದು ವಾರದಿಂದ ಕೊಪ್ಪಳ ಸುತ್ತಮುತ್ತ ಕರಡಿ ಪ್ರತ್ಯಕ್ಷಗೊಳ್ಳುತ್ತಿದೆ. ಇದೀಗ ಬಸ್‌ನಲ್ಲಿ ಹೋಗುತ್ತಿರುವವರಿಗೆ ಕರಡಿಯೊಂದು ದರ್ಶನ ಕೊಟ್ಟಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಿ – ಮಾಟಲದಿನ್ನಿ ಮಧ್ಯೆ ಕರಡಿ ಕಾಣಿಸಿಕೊಂಡಿದೆ. ಮಂಗಳವಾರ ಮುಂಜಾನೆ ಬಸ್‌ವೊಂದಕ್ಕೆ ಕರಡಿಯು ಅಡ್ಡಬಂದಿದೆ. ಇದನ್ನೂ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Press Day: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕದಿಂದ ಸೋಮವಾರ ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

VISTARANEWS.COM


on

Press Day celebration Programme in hosapete
Koo

ಹೊಸಪೇಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕದಿಂದ ಸೋಮವಾರ ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು (Press Day) ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಒತ್ತಡದ ವೃತ್ತಿ ಜೀವನದ ಜತೆಗೆ ಕುಟುಂಬಕ್ಕೂ ಒಂದಿಷ್ಟು ಸಮಯ ಕೊಡಿ’ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಮಾತನಾಡಿ, ಪತ್ರಕರ್ತರ ಪ್ರತಿಭಾವಂತ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉನ್ನತ ಅಧಿಕಾರಿಗಳಾಗುವ ಕನಸು ಕಾಣಬೇಕು, ಅದಕ್ಕೆ ಅಗತ್ಯವಾದ ನೆರವು ನೀಡಲು ತಾವು ಸಿದ್ಧ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಸಂಸದ ಈ. ತುಕಾರಾಂ ಅವರ ಪತ್ನಿ ಅನ್ನಪೂರ್ಣಾ ಹಾಗೂ ‘ಹುಡಾ’ ಅಧ್ಯಕ್ಷ ಎಚ್‌.ಎನ್‌.ಎಫ್‌. ಮೊಹಮ್ಮದ್ ಇಮಾಮ್‌ ನಿಯಾಜಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮಾತನಾಡಿದರು.

ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಜೆ.ಎಂ. ಶಿವಪ್ರಸಾದ್ ಪತ್ರಕರ್ತ ಆರೋಗ್ಯ ವಿಮೆ ಕಾರ್ಡ್ ಹಸ್ತಾಂತರಿಸಿದರು. ಸಂಘದ ಜಿಲ್ಲಾಧ್ಯಕ್ಷ ಪಿ. ಸತ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

ಇದೇ ವೇಳೆ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Continue Reading

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sour Curd
ಆರೋಗ್ಯ58 mins ago

Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ?

Dina Bhavishya
ಭವಿಷ್ಯ58 mins ago

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

ಆಟೋಮೊಬೈಲ್4 hours ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ6 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ6 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ6 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ7 hours ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ7 hours ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ8 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest8 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌