Road Accident : ತಡೆಗೋಡೆಗೆ ಬೈಕ್‌ ಡಿಕ್ಕಿ; ಜಾಲಿ ರೈಡ್‌ಗೆ ಬಂದಿದ್ದ ಯುವಕರು ದುರ್ಮರಣ - Vistara News

ಕರ್ನಾಟಕ

Road Accident : ತಡೆಗೋಡೆಗೆ ಬೈಕ್‌ ಡಿಕ್ಕಿ; ಜಾಲಿ ರೈಡ್‌ಗೆ ಬಂದಿದ್ದ ಯುವಕರು ದುರ್ಮರಣ

Road Accident : ಜಾಲಿ ರೈಡ್‌ಗೆಂದು ಕೇರಳದಿಂದ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಯುವಕರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ (Davanagere News) ನಡೆದಿದೆ.

VISTARANEWS.COM


on

Bike Accident at NH 54
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ದಾವಣಗೆರೆ (Davanagere News) ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ (NH 54) ತಡೆಗೋಡೆಗೆ ಬೈಕ್‌ ಡಿಕ್ಕಿ (Bike Accident)ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಲಿ ರೆಡ್‌ಗೆಂದು ಕೇರಳದಿಂದ ಬಂದಿದ್ದ ಅತುಲ್(25), ಋಷಿಕೇಶ್ ( 24) ಅಪಘಾತದಲ್ಲಿ (Road Accident) ಪ್ರಾಣ ಕಳೆದುಕೊಂಡಿದ್ದಾರೆ.

Car hits bike in Nh 54
ಬೈಕ್‌ಗೆ ಕಾರು ಡಿಕ್ಕಿ

ದಾವಣಗೆರೆಯ ಎಸ್‌ಎಸ್ ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ಕೇರಳದಿಂದ ಜಾಲಿ ರೈಡ್‌ಗೆ ಬೈಕ್‌ನಲ್ಲಿ ಬಂದಿದ್ದರು ಎಂದು ಪೊಲೀಸರು ಪ್ರಾಥಮಿಕ ಮಾಹಿತಿ‌ ನೀಡಿದ್ದಾರೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ.

ರಸ್ತೆಯ ಮಧ್ಯೆ ಬಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Robbery Case: ಬಸ್‌ ಸಿಗಲಿಲ್ಲ ಅಂತ ಸಿಕ್ಕ ಕಾರ್‌ನಲ್ಲಿ ಡ್ರಾಪ್‌ ತಗೋತೀರಾ? ದರೋಡೆ ಆ‌ಗ್ತೀರಿ ಹುಷಾರ್!

ನಿಲ್ದಾಣದ ಬಳಿ ನಿಂತಿದ್ದ ಮಕ್ಕಳ ಮೇಲೆಯೇ ನುಗ್ಗಿದ ಬಸ್‌; ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ (Chikkamagaluru News) ಭೀಕರ ರಸ್ತೆ ದುರಂತವೊಂದು (Road accident) ಸಂಭವಿಸಿದೆ. ವಿಪರೀತ ವೇಗದಲ್ಲಿ ಸಾಗುತ್ತಿದ್ದ ಬಸ್‌ (Overspeading bus) ಒಂದು ನಿಯಂತ್ರಣ ತಪ್ಪಿ ಬಸ್‌ಗಾಗಿ ಕಾಯುತ್ತಿದ್ದ ಮಕ್ಕಳ (Bus Rams into Children) ಮೇಲೆಯೇ ಹರಿದಿದೆ. ಒಮ್ಮಿಂದೊಮ್ಮೆಗೇ ನುಗ್ಗಿದ ಬಸ್ಸಿನಡಿ ಸಿಲುಕಿದ ಮಕ್ಕಳಲ್ಲಿ ಇಬ್ಬರ ಸ್ಥಿತಿ (Two childrens seriuosly injured) ಗಂಭೀರವಾಗಿದೆ.

ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ಈ ದುರಂತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಮತ್ತು ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

Accident at Tarikere

ಮಕ್ಕಳು ಶಾಲೆಗೆ ಹೋಗುವುದಕ್ಕಾಗಿ ಬಸ್‌ ನಿಲ್ದಾಣದ ಬಳಿ ನಿಂತಿದ್ದರು. ಆಗ ಎಂಡಿಎಸ್‌ ಎಂಡ್‌ ಸನ್ಸ್‌ ಕಂಪನಿಗೆ ಸೇರಿದ ಖಾಸಗಿ ಬಸ್‌ ಎಂದಿನಂತೆ ಬಂದಿತ್ತು. ಆದರೆ, ಅತಿಯಾದ ವೇಗದಲ್ಲಿದ್ದ ಪರಿಣಾಮವಾಗಿ ಮಕ್ಕಳ ಎದುರು ನಿಲ್ಲಬೇಕಾಗಿದ್ದ ಬಸ್‌ ಅವರ ಮೇಲೆಯೇ ಹರಿದಿದೆ.

ಕೊನೆಗೆ ಈ ಬಸ್‌ ಪಕ್ಕದ ಮನೆಗಳತ್ತ ಧಾವಿಸಿದ್ದು ಡಿಕ್ಕಿಯ ರಭಸಕ್ಕೆ ಮನೆಯ ಮುಂಭಾಗದ ಚಾವಣಿ ಸಂಪೂರ್ಣ ಹಾನಿಯಾಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿದ್ದರು.

Accident at Tarikere

ಈ ನಡುವೆ ಬಸ್ಸಿನಡಿ ಸಿಲುಕಿ ಕೆಲವು ಮಕ್ಕಳು ಗಾಯಗೊಂಡಿದ್ದು, ಅವರ ಪೈಕಿ ತುಳಸಿ (15), ನಿವೇದಿತ (14) ಎಂಬವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ನಡುವೆ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಈ ಭಾಗದಲ್ಲಿ ಖಾಸಗಿ ಬಸ್‌ಗಳು ವಿಪರೀತ ವೇಗದಿಂದ ಸಂಚರಿಸುತ್ತಿದ್ದು, ಇದರ ಬಗ್ಗೆ ಈಗಾಗಲೇ ಹಲವು ಬಾರಿ ದೂರು ನೀಡಿದ್ದರೂ ಯಾರೂ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಾವಣಗೆರೆ

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Medical negligence: ವೈದ್ಯನೊಬ್ಬನ ನಿರ್ಲಕ್ಷ್ಯಕ್ಕೆ ಶಿಶುವೊಂದು ಕಣ್ಣು ಬಿಡುವ ಮುನ್ನವೇ ಕಣ್ಣು ಮುಚ್ಚಿದೆ. ಸಿಸೇರಿಯನ್ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ವೈದ್ಯ ಕೊಯ್ದಿದ್ದಾನೆ. ಪರಿಣಾಮ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.

VISTARANEWS.COM


on

By

Medical negligence
ವೈದ್ಯ ನಿಜಾಮುದ್ದೀನ್ ಯಡವಟ್ಟಿಗೆ ಮಗು ಸಾವು
Koo

ದಾವಣಗೆರೆ: ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ (Medical negligence) ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನ ಭಾರೀ ಯಡವಟ್ಟಿಗೆ ಹುಟ್ಟಿದಾಕ್ಷಣ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ. ವೈದ್ಯನೊಬ್ಬ ಹೆರಿಗೆ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ಕೊಯ್ದಿದ್ದಾನೆ.

ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಎಂಬುವವರ ಪತ್ನಿ ಅಮೃತಾ ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್‌ ಡೆಲಿವರಿ ಆಗದ ಹಿನ್ನೆಲೆಯಲ್ಲಿ ಸಿಸೇರಿಯನ್ ಮಾಡಲು ವೈದ್ಯರು ಮುಂದಾಗಿದ್ದರು. ಅದರಂತೆ ಕಳೆದ ಜೂನ್ 27ರಂದು ಅಮೃತಾಗೆ ಸಿಸೇರಿಯನ್ ಮಾಡಿ ಮಗು ತೆಗೆಯಲಾಗಿತ್ತು.

ಆದರೆ ಸಿಸೇರಿಯನ್‌ ಮಾಡುವಾಗ ವೈದ್ಯ ನಿಜಾಮುದ್ದೀನ್ ಮಗು ತೆಗೆಯುವಾಗ ಮರ್ಮಾಂಗವನ್ನೇ ಕೊಯ್ದಿದ್ದಾರೆ. ನಂತರ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಿಂದ ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶುಕ್ರವಾರ ಮೃತಪಟ್ಟಿದೆ.

ಮಗುವಿನ ಸಾವಿಗೆ ವೈದ್ಯರು ಕಾರಣ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದರು. ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟಿಸಿ, ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

Medical negligence

ಇದನ್ನೂ ಓದಿ: Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

ಮದುವೆಯಾದ ಮೇಲೆ ಗಂಡನ ಮನೆಗೆ ಬರುವ ವಧು ತನ್ನ ಪತಿಯ ಜೊತೆ ಸುಖವಾಗಿ ಸಂಸಾರ ನಡೆಸುವಂತಹ ಹಲವಾರು ಕನಸುಗಳನ್ನು ಹೊತ್ತು ಬರುತ್ತಾಳೆ. ಆದರೆ ಅಂತಹ ವಧುವಿನ ಕನಸು ಕ್ಷಣಮಾತ್ರದಲ್ಲಿ ನುಚ್ಚು ನೂರಾದರೆ ಅವಳಿಗೆ ಆಘಾತವಾಗುವುದು ಖಂಡಿತ. ಅಂತಹದೊಂದು ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು ಮೊದಲ ರಾತ್ರಿಗಾಗಿ ಕೋಣೆಗೆ ಹಾಲು ತೆಗೆದುಕೊಂಡು ಹೋದಾಗ ಅಲ್ಲಿ ವರನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿದ್ದ.

ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ರತನ್ಪುರ ಗ್ರಾಮದಲ್ಲಿ ಸಂಭ್ರಮದ ಮದುವೆ ಆಚರಣೆಗಳು ಮುಗಿದು ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರನು ಆತ್ಮಹತ್ಯೆ ಮಾಡಿಕೊಂಡಿದ್ದನು. ಇದರಿಂದ ಆ ಕುಟುಂಬದಲ್ಲಿ ಗೋಳಾಟ ಮುಗಿಲುಮುಟ್ಟಿದೆ.

Self Harming

24 ವರ್ಷದ ಸತ್ಯೇಂದ್ರ ಆತ್ಮಹತ್ಯೆ ಮಾಡಿಕೊಂಡ ವರ. ಈತ ಆತನ ವಧು ವಿನಿತಾ ಕುಮಾರಿ ಅವರೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದು, ನಂತರ ದಿಬ್ಬಣ ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿದೆ. ನವವಿವಾಹಿತ ವಧುವನ್ನು ಮನೆಗೆ ಸಂಭ್ರಮದಿಂದ ಸ್ವಾಗತಿಸಲಾಗಿತ್ತು. ಹಾಗೇ ವಧುವರರ ಮೊದಲ ರಾತ್ರಿಗೆಂದು ಸಿದ್ಧತೆ ನಡೆಯುತ್ತಿದ್ದು, ವಧು ಹಾಲು ಹಿಡಿದುಕೊಂಡು ಪತಿಯ ಕೋಣೆಗೆ ಹೋದಾಗ ಆತ ಮದುವೆಯ ಉಡುಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಇದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಈ ಸುದ್ದಿ ಕುಟುಂಬಸ್ಥರು ಮತ್ತು ಅತಿಥಿಗಳಿಗೆ ನಂಬಲು ಅಸಾಧ್ಯವಾಗಿದೆ.

ಈ ಬಗ್ಗೆ ಉಸ್ರಾಹರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸತೇಂದ್ರ ಅವರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಸತ್ಯೇಂದ್ರ ಅವರ ಆತ್ಮಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಮೊದಲ ರಾತ್ರಿಯ ಟೆನ್ಶನ್‌ಗೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸತ್ಯೇಂದ್ರ ಅವರ ಅಕಾಲಿಕ ಸಾವಿನ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಸಂಭ್ರಮಾಚರಣೆಯಲ್ಲಿ ತೇಲಾಡುತ್ತಿದ್ದ ಕುಟುಂಬವನ್ನು ಈ ಘಟನೆ ಶೋಕಾಚರಣೆಯಲ್ಲಿ ಮುಳುಗುವಂತೆ ಮಾಡಿದೆ. ಇನ್ನೂ ಮದುವೆಯಾಗಿ ಕ್ಷಣಗಳೇ ಕಳೆದಿದ್ದು, ಜೀವನಪರ್ಯಂತ ಒಟ್ಟಿಗೆ ಇರುತ್ತಾನೆ ಎಂದು ಭಾವಿಸಿದ ಪತಿ ಸಾವಿಗೆ ಶರಣಾಗಿದ್ದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೇ ಸಾಲಸೂಲ ಮಾಡಿ ಮಗಳು ಗಂಡನ ಮನೆಯಲ್ಲಿ ಸುಖವಾಗಿರಲಿ ಎಂದು ಬಯಸಿದ ಆಕೆಯ ಪೋಷಕರಿಗೆ ಈ ಘಟನೆ ಆಕಾಶವೇ ಕಳಚಿ ತಲೆಯ ಮೇಲೆ ಬಿದ್ದಂತೆ ಭಾಸವಾಗಿದೆ. ಒಟ್ಟಾರೆ ಈ ಮದುವೆ ಸಂಭ್ರಮ ದುರಂತದ ತಿರುವು ತೆಗೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

Prajwal Revanna Case: ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ, 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಉತ್ತರಿಸಿ, 2 ವಾರಗಳ ಕಾಲ ವಿಚಾರಣೆ ಮುಂದೂಡಿದರು.

ಇದನ್ನೂ ಓದಿ | Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಪುರುಷತ್ವ ಪರೀಕ್ಷೆಯ (virilism test) ವರದಿಯು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಕೈ ಸೇರಿದ್ದು, ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಅವರ ಪುರುಷತ್ವ ಪರೀಕ್ಷಾ ವರದಿ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಅದು ಸಹ ಪ್ರಜ್ವಲ್‌ ವಿರುದ್ಧದ ಸಾಕ್ಷ್ಯವಾಗಲಿದೆ. ಕೆಲವು ದಿನಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಪದೇ ಪದೆ ಪುರುಷತ್ವ ಪರೀಕ್ಷೆಗೆ ಒಳಪಡಿಸುತ್ತಿರುವುದರಿಂದ ಮುಜುಗರವಾಗುತ್ತಿದೆ ಎಂದು ಈ ಹಿಂದೆ ನ್ಯಾಯಾಲಯದ ಮುಂದೆ ಪ್ರಜ್ವಲ್‌ ಅಳಲು ತೋಡಿಕೊಂಡಿದ್ದರು. ಧ್ವನಿ ಪರೀಕ್ಷೆ ಹಾಗೂ ಇನ್ನಿತರ ಪರೀಕ್ಷೆಗಳ ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಿದೆ. ಈ ವರದಿಗಳು ಪೂರಕವಾಗಿದ್ದರೆ ಅವುಗಳು ಕೂಡ ಪ್ರಜ್ವಲ್‌ ವಿರುದ್ಧದ ಪ್ರಬಲ ಸಾಕ್ಷ್ಯಗಳಾಗಲಿವೆ.

ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್‌ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್‌ ಹೇಳಿದ್ದಾರೆನ್ನಲಾಗಿದೆ.

ಈ ನಡುವೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಲಾಗಿದೆ. ಈ ಅರ್ಜಿಗಳ ವಿಚಾರಣೆ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಗದಿಯಾಗಿದೆ.

ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌

ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

Continue Reading

ಶ್ರದ್ಧಾಂಜಲಿ

Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Kumble Sridhara Rao: ಇರಾ ಸೋಮನಾಥೇಶ್ವರ ಮೇಳದ ಮೂಲಕ ಯಕ್ಷಗಾನ ವೃತ್ತಿಜೀವನ ಆರಂಭಿಸಿದ್ದ ಶ್ರೀಧರ ರಾವ್‌ ಯಕ್ಷಗಾನ ಕ್ಷೇತ್ರದ ದಿಗ್ಗಜ ಕಲಾವಿದರಾದ ಶೇಣಿ ಗೋಪಾಲಕೃಷ್ಣ ಭಟ್ಟರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು.

VISTARANEWS.COM


on

kumble sridhara rao
Koo

ಮಂಗಳೂರು: ತಮ್ಮ ಸ್ತ್ರೀಪಾತ್ರಗಳಿಂದ ವಿಖ್ಯಾತರಾಗಿದ್ದ ಹಿರಿಯ ಯಕ್ಷಗಾನ ಕಲಾವಿದ (senior yakshagana artist) ಕುಂಬ್ಳೆ ಶ್ರೀಧರ ರಾವ್‌ (76) (Kumble Sridhara Rao) ಶುಕ್ರವಾರ ನಿಧನರಾದರು. ಸುಮಾರು 6 ದಶಕಗಳಿಗೂ ಹೆಚ್ಚು ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಅವರು ಸುಂದರ ಪಾತ್ರನಿರ್ವಹಣೆಯಿಂದ ಯಕ್ಷರಸಿಕರ ಮನದಲ್ಲಿ ನೆಲೆ ನಿಂತಿದ್ದಾರೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮೇಳದಲ್ಲೇ ನಿರಂತರ 50 ವರ್ಷಗಳಿಗೂ ಹೆಚ್ಚು ಕಾಲ ಅವರು ಸೇವೆ ಸಲ್ಲಿಸಿದ್ದರು. ಕೆಲವು ವರ್ಷಗಳ ಹಿಂದೆ ಮೇಳದಿಂದ ನಿವೃತ್ತರಾಗಿದ್ದರು. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯವರಾದ ಶ್ರೀಧರ ರಾವ್ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಿದ್ದರು.

ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರನಾಗಿ 1948ರಲ್ಲಿ ಜನಿಸಿದ ಶ್ರೀಧರ ರಾವ್, ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಒಟ್ಟು 60 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಇರಾ ಸೋಮನಾಥೇಶ್ವರ ಮೇಳದ ಮೂಲಕ ಯಕ್ಷಗಾನ ವೃತ್ತಿಜೀವನ ಆರಂಭಿಸಿದ್ದ ಶ್ರೀಧರ ರಾವ್‌ ಯಕ್ಷಗಾನ ಕ್ಷೇತ್ರದ ದಿಗ್ಗಜ ಕಲಾವಿದರಾದ ಶೇಣಿ ಗೋಪಾಲಕೃಷ್ಣ ಭಟ್ಟರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು. ವೃತ್ತಿಜೀವನದ ಆರಂಭದಲ್ಲಿ ಸ್ತ್ರೀ ವೇಷಗಳಿಂದಲೇ ಪ್ರಸಿದ್ಧರಾದರು. ಶ್ರೀಧರ ರಾವ್​ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮುದೇವಿ, ನಳ ದಮಯಂತಿಯ ದಮಯಂತಿ, ಭೀಷ್ಮ ವಿಜಯದ ಅಂಬೆ ಇತ್ಯಾದಿ ಪಾತ್ರಗಳಲ್ಲಿ ಜನಮನ ಗೆದ್ದಿದ್ದರು.

ರಂಭಾ ರೂಪ ರೇಖಾ ಪ್ರಸಂಗದ ರಂಭೆಯಾಗಿ ಶ್ರೀಧರ ರಾವ್ ಅವರ ಅಭಿನಯವನ್ನು ಈಗಲೂ ಯಕ್ಷಗಾನ ಪ್ರೇಮಿಗಳು ಕೊಂಡಾಡುತ್ತಾರೆ. ಪುರುಷ ವೇಷಗಳಲ್ಲಿ ಈಶ್ವರ, ಲಕ್ಷ್ಮಣ, ಸುದರ್ಶನ ವಿಜಯದ ವಿಷ್ಣು ಇತ್ಯಾದಿ ಪಾತ್ರಗಳೂ ಅವರಿಗೆ ಖ್ಯಾತಿ ತಂದುಕೊಟ್ಟಿವೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಟ್ರಸ್ಟ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ಇದನ್ನೂ ಓದಿ: Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

Continue Reading

ಕರ್ನಾಟಕ

CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

CM Siddaramaiah: ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಮಕ್ಕಳಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದರು. ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ ಕೇಳಿದರು. ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 94-95ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಆಗ ಮಕ್ಕಳು ಚಪ್ಪಾಳೆ ತಟ್ಟಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಾಲು ಸಾಲು ರ‍್ಯಾಲಿಗಳು, ಚುನಾವಣಾ ಸಮಾವೇಶಗಳು, ಅಬ್ಬರದ ಭಾಷಣಗಳಲ್ಲೇ ನಿರತರಾಗಿದ್ದ, ದಿನ ಬೆಳಗಾದರೆ ಹತ್ತಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಾವಾಗಲೂ ಬ್ಯುಸಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶುಕ್ರವಾರ (ಜುಲೈ 5) ಕನ್ನಡ ಮೇಷ್ಟ್ರಾಗಿ ಮಕ್ಕಳಿಗೆ ಒಂದಷ್ಟು ಪಾಠ ಮಾಡಿದರು. ಹೌದು, ದಿನನಿತ್ಯದ ಬ್ಯುಸಿ ಚಟುವಟಿಕೆಗಳ ಮಧ್ಯೆಯೇ ಅವರು ಬೆಂಗಳೂರಿನ (Bengaluru) ಚಾಮರಾಜಪೇಟೆಯಲ್ಲಿರುವ (Chamarajpet) ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಮಕ್ಕಳಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದರು.

ಸುಮಾರು 250 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢಿರ್‌ ಭೇಟಿ ನೀಡಿದ ಅವರು ಮೊದಲು 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ, ಪಠ್ಯಪುಸ್ತಕ, ಬಾತ್‌ ರೂಮ್‌ ಕಿಟ್‌ಗಳ ಸಮರ್ಪ ವಿತರಣೆ ಆಗುತ್ತಿದೆ ಎಂದು ಮಕ್ಕಳು ಸಿಎಂಗೆ ತಿಳಿಸಿದರು. ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದರು. ಮಕ್ಕಳು ಕೂಡ ಉತ್ಸಾಹದಿಂದ, ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿರುತ್ತದೆ, ಆಗಾಗ ಪಲಾವ್ ಕೂಡ ಕೊಡುತ್ತಾರೆ ಎಂದು ವಿವರಿಸಿದರು.

Karnataka Election Results 2024

ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ…

ಭೇಟಿ ವೇಳೆ ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ ಮಾಡಿದರು. ಸಂದಿ ಎಂದರೇನು? ಸಂದಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವುಗಳು ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ ಕೇಳಿದರು. ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 94-95ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಆಗ ಮಕ್ಕಳು ಚಪ್ಪಾಳೆ ತಟ್ಟಿದರು.

ಶಾಲೆಯ ಸಾಧನೆ ಬಗ್ಗೆಯೂ ಶಿಕ್ಷಕರು ಸಿಎಂ ಗಮನಕ್ಕೆ ತಂದರು. “ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್‌ ಹಾಗು ಒಬ್ಬ ವಿದ್ಯಾರ್ಥಿನಿ ಮಾತ್ರ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾಳೆ” ಎಂದು ವಿವರಿಸಿದರು. ಮಕ್ಕಳು ಶಾಲೆಯ ವ್ಯವಸ್ಥೆ ಬಗ್ಗೆ ತಿಳಿಸುತ್ತ, “ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ” ಎಂದು ತಿಳಿಸಿದರು. ಇದೇ ವೇಳೆ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ವಿಧಾನ ಪರಿಷತ್‌ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವರು ಸಿಎಂಗೆ ಸಾಥ್‌ ನೀಡಿದರು.

ಇದನ್ನೂ ಓದಿ: CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Continue Reading
Advertisement
Baby Death
Latest52 seconds ago

Baby Death: ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

Medical negligence
ದಾವಣಗೆರೆ3 mins ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Prajwal Revanna Case
ಕರ್ನಾಟಕ9 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

kumble sridhara rao
ಶ್ರದ್ಧಾಂಜಲಿ12 mins ago

Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Kung Fu Panda 4 OTT Jio cinema july 15th onwards
ಒಟಿಟಿ13 mins ago

Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

CM Siddaramaiah
ಕರ್ನಾಟಕ17 mins ago

CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

Rohit Sharma
ಕ್ರೀಡೆ43 mins ago

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Raj Tarun Police complaint filed by live-in partner
ಟಾಲಿವುಡ್43 mins ago

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

NEET PG 2024
ಶಿಕ್ಷಣ45 mins ago

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

Electric shock
ದಾವಣಗೆರೆ48 mins ago

Electric shock : ಮೋಟಾರ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ಗೆ ಮಹಿಳೆ ಸಾವು; ಮೀನು ಹಿಡಿಯಲು ಹೋಗಿ ವ್ಯಕ್ತಿ ನೀರುಪಾಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ2 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ3 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು4 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು5 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ9 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ23 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌