Dhruva Sarja: ಧ್ರುವ ಸರ್ಜಾ ಜನುಮದಿನದಂದೇ ಚಿರಂಜೀವಿ ಸರ್ಜಾ ಸಿನಿಮಾ ರಿಲೀಸ್‌! - Vistara News

South Cinema

Dhruva Sarja: ಧ್ರುವ ಸರ್ಜಾ ಜನುಮದಿನದಂದೇ ಚಿರಂಜೀವಿ ಸರ್ಜಾ ಸಿನಿಮಾ ರಿಲೀಸ್‌!

Dhruva Sarja: ರಾಜಮಾರ್ತಾಂಡ ಚಿತ್ರ ಅಕ್ಟೋಬರ್‌ 6ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದೀಗ ಚಿತ್ರತಂಡ ಪ್ರಚಾರ ಕಣಕ್ಕಿಳಿದಿದೆ.

VISTARANEWS.COM


on

Dhruva Sarja chiranjeevi Sarja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದಿ. ಚಿರಂಜೀವಿ ಸರ್ಜಾ ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ ಚಿತ್ರ ಯಾವಾಗ ಬಿಡುಗಡೆಯಾಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾದಿದ್ದರು. ಇದೀಗ ಆ ಕ್ಷಣ ಸಮೀಪಿಸಿದೆ. ರಾಮ್‌ನಾರಾಯಣ್‌ ನಿರ್ದೇಶನದಲ್ಲಿ ಮೂಡಿಬಂದಿದ್ದ ರಾಜಮಾರ್ತಾಂಡ ಸಿನಿಮಾ, ಧ್ರುವ ಸರ್ಜಾ (Dhruva Sarja) ಅವರ ಜನುಮದಿನದ ನಿಮಿತ್ತ ರಿಲೀಸ್‌ ಆಗಲಿದೆ. ಅಕ್ಟೋಬರ್‌ 6ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದೀಗ ಚಿತ್ರತಂಡ ಪ್ರಚಾರ ಕಣಕ್ಕಿಳಿದಿದೆ.

ಚಿರಂಜೀವಿ ಸರ್ಜಾ (chiranjeevi sarja) ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ (rangamarthanda). ಇದೀಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ವಿಶೇಷ ಏನೆಂದರೆ, ಧ್ರುವ ಸರ್ಜಾ ಅವರ ಬರ್ತ್‌ಡೇ ದಿನವೇ ಈ ಸಿನಿಮಾ ರಿಲೀಸ್‌ ಆಗಲಿದೆ. ಚಿರಂಜೀವಿ ಸರ್ಜಾ ಅವರು ನಿಧನರಾದಾಗ ಚಿತ್ರದ ಡಬ್ಬಿಂಗ್‌ ಆಗಿರಲಿಲ್ಲ. ಸಹೋದರ ಧ್ರುವ ಸರ್ಜಾ ಧ್ವನಿ ನೀಡಿ ಜೀವ ತುಂಬಿದ್ದರು. ಶಿವಕುಮಾರ್ ನಿರ್ಮಾಣದ ಚಿತ್ರ ಇದಾಗಿದೆ. ಇದೊಂದು ರೊಮ್ಯಾಂಟಿಕ್ ಆ್ಯಕ್ಷನ್ ಚಿತ್ರವಾಗಿದ್ದು ಚಿರಂಜೀವಿ ಸರ್ಜಾ, ದೀಪ್ತಿ ಸತಿ, ತ್ರಿವೇಣಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಟೀಸರ್, ಟ್ರೈಲರ್ ಹಾಗೂ ಹಾಡುಗಳು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಇದನ್ನೂ ಓದಿ: Dhruva Sarja: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಜತೆ ಹೆಜ್ಜೆ ಹಾಕಿದ ಇಟಲಿ‌ ಮೂಲದ ನಟಿ!

ಧರ್ಮವಿಶ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಕೆ. ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು.ಡಿ.ವಿ ಅವರ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಪಾತ್ರವರ್ಗದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Indian 2 Trailer: `ಇಂಡಿಯನ್‌-2′ ಟ್ರೈಲರ್‌ ಔಟ್‌; ಹಲವು ಗೆಟಪ್​ನಲ್ಲಿ ಗಮನಸೆಳೆದ  ಕಮಲ್ ಹಾಸನ್!

Indian 2 Trailer: ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ನಿರ್ಮಿಸಿರುವ ಇಂಡಿಯನ್2 ಜುಲೈ 12 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.1996ರಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್’ ಸಿನಿಮಾ ರಿಲೀಸ್ ಆಯಿತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗಿದೆ.

VISTARANEWS.COM


on

Indian 2 trailer Kamal Haasan as master of disguise
Koo

ಬೆಂಗಳೂರು: ಕಮಲ್‌ ಹಾಸನ್‌ ಅಭಿನಯದ ಇಂಡಿಯನ್‌-2 ಸಿನಿಮಾದ ಟ್ರೈಲರ್‌ (Indian 2 Trailer) ಬಿಡುಗಡೆಗೊಂಡಿದೆ. ಕಮಲ್ ಹಾಸನ್ ಅವರು ಹಲವು ಗೆಟಪ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಇಂಡಿಯನ್ 2’ ಚಿತ್ರ ಜುಲೈ 12ರಂದು ಬಿಡುಗಡೆ ಆಗಲಿದೆ. 1996ರಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್’ ಸಿನಿಮಾ ರಿಲೀಸ್ ಆಯಿತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗಿದೆ.

ಟ್ರೈಲರ್‌ನಲ್ಲಿ ದೇಶದಾದ್ಯಂತ ನಡೆಯುತ್ತಿರುವ ಅನೇಕ ಅಪರಾಧಗಳು ಮತ್ತು ವಂಚನೆಗಳ ಚಿತ್ರಣ ಇದೆ. ಪ್ರಸ್ತುತ ಭಾರತೀಯರು ಹೋರಾಡುತ್ತಿರುವ ಉದ್ಯೋಗಗಳ ಕೊರತೆ, ಭಾರೀ ತೆರಿಗೆ ಹೊರೆಗಳು ಮತ್ತು ಇತರ ಮೂಲಭೂತ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳ ವಿವರಣೆ ಇವೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಸಿನಿಮಾ ಹೊಂದಿದೆ. ಮಲ್ ಹಾಸನ್ ಅವರು ಬೇರೆ ಬೇರೆ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಕಮಲ್ ಹಾಸನ್ ಅವರು ಯಾವುದೇ ರೀತಿಯ ಪಾತ್ರ ಕೊಟ್ಟರೂ ಮಾಡಿ ತೋರಿಸುತ್ತಾರೆ. ಇದಕ್ಕೆ ‘ಇಂಡಿಯನ್ 2’ ಮತ್ತೊಂದು ಉದಾಹರಣೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ನಿರ್ಮಿಸಿರುವ ಇಂಡಿಯನ್2 ಜುಲೈ 12 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?ಇದನ್ನೂ ಓದಿ:

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಇಂಡಿಯನ್ 2 ಲುಕ್‌ಗಾಗಿ ಕಮಲ್ ಸಾಕಷ್ಟು ಶ್ರಮ ವಹಿಸಿದ್ದಾರೆ. ಕಳೆದ ವರ್ಷ, ಬರಹಗಾರ ಜಯಮೋಹನ್ ಅವರು ಸೆಟ್‌ಗಳಲ್ಲಿ ಕಮಲ್ ಹಾಸನ್ ಇರುವ ಬಗೆಯನ್ನು ಬಣ್ಣಿಸಿದ್ದರು. ಕಮಲ್‌ ಅವರ ಬದ್ಧತೆ ಮತ್ತು ನಟನಾ ಮಯದಲ್ಲಿ ಹೇಗೆ ಇರುತ್ತಾರೆ ಎಂಬುದರ ಬಗ್ಗೆ ವಿವರಿಸಿದ್ದರು. ʻʻಕಮಲ್ ಅವರು ಸೆಟ್‌ಗಳಲ್ಲಿ ಬಹುತೇಕ ಹಸಿವಿನಿಂದಲೇ ಇರುತ್ತಾರೆ. ನಟಿಸುವ ಸಮಯದಲ್ಲಿ ಏನನ್ನೂ ತಿನ್ನುವುದಿಲ್ಲ. ಇದಕ್ಕೆ ಕಾರಣವೂ ಇದ್ದು, ನಟನೆ ಸಂದರ್ಭದಲ್ಲಿ ಏನನ್ನಾದರೂ ತಿನ್ನುತ್ತಿದ್ದರೆ, ಅಂದರೆ ಬಾಯಲ್ಲಿ ಅಗಿಯುತ್ತಿದ್ದರೆ, ಅದು ಪ್ರಾಸ್ಥೆಟಿಕ್ ಮೇಕ್ಅಪ್ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಅವರು ನಟಿಸುವಾಗ ಕೇವಲ ಜ್ಯೂಸ್ ಡಯಟ್ ಮಾಡುತ್ತಿದ್ದರುʼʼ ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Continue Reading

ಕರ್ನಾಟಕ

Kannada New Movie: ನಾಲ್ಕು ‌ತಲೆಮಾರಿನ ಕಥೆ ಹೇಳುವ ʼಮಾನ್‌ಸ್ಟರ್ʼ ಚಿತ್ರದ ಟೀಸರ್, ಹಾಡು ರಿಲೀಸ್‌

Kannada New Movie: ಪುಟ್ಟರಾಜ ರೆಡ್ಡಿ ಅವರ ನಿರ್ಮಾಣದ, ಆರನ್ ಕಾರ್ತಿಕ್ ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ಸಂಗೀತ ‌ಸಂಯೋಜಿಸುವುದರೊಂದಿಗೆ ನಿರ್ದೇಶನ ಮಾಡಿರುವ “ಮಾನ್‌ಸ್ಟರ್” ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆ ಸಮಾರಂಭವು ಇತ್ತೀಚೆಗೆ ಅದ್ಧೂರಿಯಾಗಿ ನಡೆದಿದೆ. ಚಿತ್ರದಲ್ಲಿ ಮೂರು ನಾಯಕರಿದ್ದಾರೆ. ಥ್ರಿಲ್ಲರ್ ಮಂಜು, ಧರ್ಮ ಕೀರ್ತಿರಾಜ್ ಹಾಗೂ ಪವನ್ ಎಸ್. ನಾರಾಯಣ್ ನಾಯಕರಾಗಿ ಅಭಿನಯಿಸಿದ್ದಾರೆ. ನಿರ್ಮಾಪಕರ ಪುತ್ರ ಸಂತೋಷ್ ರೆಡ್ಡಿ ಸೂಪರ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Monster movie teaser and song released
Koo

ಬೆಂಗಳೂರು: ಪುಟ್ಟರಾಜ ರೆಡ್ಡಿ ಅವರ ನಿರ್ಮಾಣದ, ಆರನ್ ಕಾರ್ತಿಕ್ ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ಸಂಗೀತ ‌ಸಂಯೋಜಿಸುವುದರೊಂದಿಗೆ ನಿರ್ದೇಶನವನ್ನು ಮಾಡಿರುವ “ಮಾನ್ ಸ್ಟರ್” ಚಿತ್ರದ (Kannada New Movie) ಟೀಸರ್ ಹಾಗೂ ಹಾಡು ಬಿಡುಗಡೆ ಸಮಾರಂಭವು ಈಚೆಗೆ ಅದ್ಧೂರಿಯಾಗಿ ನೆರವೇರಿತು.

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಮುನೇಗೌಡ, ನಿರ್ಮಾಪಕ ಹರೀಶ್, ನಟ ರಕ್ಷಕ್ ಬುಲೆಟ್, ಸಿರಿ ಮ್ಯೂಸಿಕ್ ಸಿರಿ ಚಿಕ್ಕಣ್ಣ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡು‌ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದು ನಾನು ಸಂಗೀತ ಸಂಯೋಜಿಸುತ್ತಿರುವ 57ನೇ ಚಿತ್ರ ಹಾಗೂ ನಿರ್ದೇಶಿಸಿರುವ ಆರನೇ ಚಿತ್ರ ಎಂದು ತಿಳಿಸಿದ ಆರನ್ ಕಾರ್ತಿಕ್ ವೆಂಕಟೇಶ್, ಈ ಚಿತ್ರದಲ್ಲಿ ನಾಲ್ಕು ತಲೆಮಾರುಗಳ ಕಥೆ ತೋರಿಸಲಾಗಿದೆ.‌ ಆಕ್ಷನ್ ಥ್ರಿಲ್ಲರ್ ಜಾನರ್‌ನ ಈ ಚಿತ್ರದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಡುವ ಸಾಮಾಜಿಕ ಕಳಕಳಿಯುಳ್ಳ ಅಂಶ ಸಹ ಇದೆ.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಚಿತ್ರದಲ್ಲಿ ಮೂರು ನಾಯಕರಿದ್ದಾರೆ. ಥ್ರಿಲ್ಲರ್ ಮಂಜು, ಧರ್ಮ ಕೀರ್ತಿರಾಜ್ ಹಾಗೂ ಪವನ್ ಎಸ್. ನಾರಾಯಣ್ ನಾಯಕರಾಗಿ ಅಭಿನಯಿಸಿದ್ದಾರೆ. ನಿರ್ಮಾಪಕರ ಪುತ್ರ ಸಂತೋಷ್ ರೆಡ್ಡಿ ಸೂಪರ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್, ಯತಿರಾಜ್, ಕುರಿ ಬಾಂಡ್ ರಂಗ, ಯಶ್ವಿಕ , ವಿಕ್ಟರಿ ವಾಸು, ಗಣೇಶ್ ರಾವ್, ಸಂಗೀತ, ದುಬೈ ರಫಿಕ್, ರಾಬರ್ಟ್, ನವಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಚಿತ್ರೀಕರಣ ಪೂರ್ಣವಾಗಿ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಚಿತ್ರದಲ್ಲಿ ಖ್ಯಾತ ಗಾಯಕರು ಹಾಡಿರುವ ಏಳು ಹಾಡುಗಳಿವೆ. ಮುಂದಿನ ತಿಂಗಳು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು.

ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಾನು ಅಷ್ಟು ಓದಿದವನಲ್ಲ. ಆದರೆ ಇಂದು ಕಷ್ಟಪಟ್ಟು ಸಿನಿಮಾ ನಿರ್ಮಾಣ ಮಾಡುವ ಹಂತಕ್ಕೆ ತಲುಪಿದ್ದೇನೆ. ಈ ಚಿತ್ರದ ಮೂಲಕ ನನ್ನ ಮಗ ಸಂತೋಷ್ ರೆಡ್ಡಿ ಚಿತ್ರರಂಗ ಪ್ರವೇಶಿಸುತ್ತಿದ್ದಾನೆ.‌ ಅವನಿಗೆ ಹಾಗೂ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಪುಟ್ಟರಾಜ ರೆಡ್ಡಿ ತಿಳಿಸಿದ್ದಾರೆ.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಟ ಧರ್ಮ ಕೀರ್ತಿರಾಜ್ ತಿಳಿಸಿದರು.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಥ್ರಿಲ್ಲರ್ ಮಂಜು, ಸಂತೋಷ್ ರೆಡ್ಡಿ, ರಾಜ್ ಬಹದ್ದೂರ್, ಗಣೇಶ್ ರಾವ್, ಸಂಗೀತ, ನವಾಜ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು “ಮಾನ್ ಸ್ಟರ್” ಬಗ್ಗೆ ಮಾಹಿತಿ ನೀಡಿದರು.

Continue Reading

ಸಿನಿಮಾ

Kalki 2898 AD: ಮೊದಲ ದಿನವೇ 200 ಕೋಟಿ ರೂ. ಗಳಿಸುತ್ತಾ ಪ್ರಭಾಸ್‌-ದೀಪಿಕಾ ಜೋಡಿಯ ʼಕಲ್ಕಿʼ? ಏನಿದು ಲೆಕ್ಕಾಚಾರ?

Kalki 2898 AD: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ ಸಿನಿಮಾ ಬಿಡುಗಡೆಗೆ ಕ್ಷಣ ಗಣನೆ ಆರಂಭವಾಗಿದೆ. ಈಗಾಗಲೇ ಟಿಕೆಟ್‌ ಬುಕ್ಕಿಂಗ್‌ ಆರಂಭವಾಗಿದ್ದು, ಅಭೂತಪೂರ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಚಿತ್ರ ಮೊದಲ ದಿನವೇ ವಿಶ್ವಾದ್ಯಂತ ಬಾಕ್ಸ್‌ ಆಫೀಸ್‌ನಲ್ಲಿ ಸುಮಾರು 200 ಕೋಟಿ ರೂ. ಗಳಿಸಲಿದೆ ಎನ್ನುವ ಮಾತು ಕೇಳಿ ಬಂದಿದೆ.

VISTARANEWS.COM


on

Kalki 2898 AD
Koo

ಮುಂಬೈ: ಸದ್ಯ ಎಲ್ಲೆಡೆ ʼಕಲ್ಕಿʼಯದ್ದೇ ಹವಾ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸೃಷ್ಟಿಸಿರುವ ಮ್ಯಾಜಿಕ್ಕೇ ಅಂತಹದ್ದು. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿಯೂ ಈ ಸಿನಿಮಾಕ್ಕಿದೆ. ಟಾಲಿವುಟ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಸಿನಿಮಾ ಬಿಡುಗಡೆಗೆ ಕ್ಷಣ ಗಣನೆ ಆರಂಭವಾಗಿದೆ. ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಜೂನ್‌ 27ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಈಗಾಗಲೇ ಟಿಕೆಟ್‌ ಬುಕ್ಕಿಂಗ್‌ ಆರಂಭವಾಗಿದ್ದು, ಅಭೂತಪೂರ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಚಿತ್ರ ಮೊದಲ ದಿನವೇ ವಿಶ್ವಾದ್ಯಂತ ಬಾಕ್ಸ್‌ ಆಫೀಸ್‌ನಲ್ಲಿ ಸುಮಾರು 200 ಕೋಟಿ ರೂ. ಗಳಿಸಲಿದೆ ಎನ್ನುವ ಮಾತು ಕೇಳಿ ಬಂದಿದೆ.

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼ ಚಿತ್ರದ ಅಡ್ವಾನ್ಸ್‌ ಬುಕ್ಕಿಂಗ್‌ ಶರವೇಗದಲ್ಲಿ ಸಾಗುತ್ತಿದೆ. ವಿಶೇಷ ಎಂದರೆ ʼಕಲ್ಕಿʼ ಎಲ್ಲ 210 ಐಮ್ಯಾಕ್ಸ್‌ (IMAX) ತೆರೆಗಳಲ್ಲಿ ಬಿಡುಗಡೆಯಾಗಲಿರುವ ಮೊದಲ ಭಾರತೀಯ ಸಿನಿಮಾ ಎನಿಸಿಕೊಳ್ಳಲಿದೆ. ಈ ತೆರೆಗಳಲ್ಲಿ ಹಿಂದಿ, ತಮಿಳು ಮತ್ತು ತೆಲುಗುಗಳಲ್ಲಿ ʼಕಲ್ಕಿʼಯ 2ಡಿ ಮತ್ತು 3ಡಿ ಆವೃತ್ತಿ ರಿಲೀಸ್‌ ಆಗಲಿದೆ.

ʼಬಾಹುಬಲಿ 2ʼ ಮತ್ತು ʼಆರ್‌ಆರ್‌ಆರ್‌ʼ ಚಿತ್ರಗಳ ಬಳಿಕ ಜಾಗತಿಕವಾಗಿ ಮೊದಲ ದಿನವೇ 200 ಕೋಟಿ ರೂ. ಗಳಿಸುವ ಮೂರನೇ ಭಾರತೀಯ ಚಿತ್ರ ʼಕಲ್ಕಿ 2898 ಎಡಿʼ ಆಗಲಿದೆ ಎಂದು ಮೂಲಗಳು ಅಂದಾಜಿಸಿವೆ. ʼʼಕಲ್ಕಿʼ ಭಾರತದಲ್ಲಿ ಮೊದಲ ದಿನವೇ 120-140 ಕೋಟಿ ರೂ. ಗಳಿಸಲಿದೆ. ತೆಲುಗು ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲೇ ಸುಮಾರು 90-100 ಕೋಟಿ ಕಲೆಕ್ಷನ್‌ ಆಗುವ ನಿರೀಕ್ಷೆ ಇದೆ. ಉತ್ತರ ಭಾರತದಲ್ಲಿ 20 ಕೋಟಿ ರೂ., ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ 15+ ಕೋಟಿ ರೂ. ಗಳಿಸುವ ಸಾಧ್ಯತೆ ಇದೆʼʼ ಎಂದು ವರದಿಯೊಂದು ಭವಿಷ್ಯ ನುಡಿದಿದೆ.

ಟಿಕೆಟ್‌ ವಿತರಣೆಯ ಆ್ಯಪ್‌ ಬುಕ್‌ಮೈ ಶೋ ಮೊದಲ 1 ಗಂಟೆಯಲ್ಲಿ ತೆಲಂಗಾಣವೊಂದರಲ್ಲೇ 36,000 ಟಿಕೆಟ್‌ಗಳನ್ನು ಮಾರಾಟ ಮಾಡಿದೆ. ಟಿಕೆಟ್‌ ಓಪನಿಂಗ್‌ ಆದ ಒಂದು ದಿನದಲ್ಲೇ ದೇಶಾದ್ಯಂತ 1 ಲಕ್ಷ ಟಿಕೆಟ್‌ ಮಾರಾಟವಾಗಿದೆ. ಅದಾಗ್ಯೂ ಇನ್ನು ಕೆಲವು ಮಲ್ಟಿಫ್ಲೆಕ್ಸ್‌ ಟಿಕೆಟ್‌ ವಿತರಣೆ ಆರಂಭಿಸಿಲ್ಲ. ಹೀಗಾದಲ್ಲಿ ಟಿಕೆಟ್‌ ಮಾರಾಟದ ಸಂಖ್ಯೆ ದುಪ್ಪಟ್ಟಾಗಲಿದೆ. ಇತ್ತ ಉತ್ತರ ಅಮೆರಿಕದಲ್ಲಿ ಈಗಾಗಲೇ 1,25,000 ಟಿಕೆಟ್‌ ಮಾರಾಟವಾಗಿದೆ. ಈ ಮೂಲಕ ಪ್ರಭಾಸ್‌ ನಟನೆಯ ʼಸಲಾರ್‌ʼನ ದಾಖಲೆಯನ್ನು ಮುರಿದಿದೆ.

ಇದನ್ನೂ ಓದಿ: Rishab Shetty: ಕುಂದಾಪುರಕ್ಕೆ ಆಗಮಿಸಿದ ʼಕಲ್ಕಿʼಯ ಬುಜ್ಜಿ; ಪ್ರಭಾಸ್‌ ಕಾರು ರೈಡ್‌ ಮಾಡಿದ ರಿಷಬ್‌ ಶೆಟ್ಟಿ ಹೇಳಿದ್ದೇನು?

ವೈಜಯಂತಿ ಮೂವೀಸ್‌ ಈ ʼಕಲ್ಕಿʼ ಚಿತ್ರವನ್ನು ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದೆ. ದಿಶಾ ಪಠಾಣಿ, ಶೋಭನಾ ಮತ್ತಿತರರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಸಿನಿಮಾ ತೆಲುಗು, ಕನ್ನಡ, ತಮಿಳು, ಹಿಂದಿ, ಮಲಯಾಳಂನಲ್ಲಿ ತೆರೆ ಕಾಣಲಿದೆ. ವಿಶೇಷ ಎಂದರೆ ನಾಯಕಿ ದೀಪಿಕಾ ಪಡುಕೋಣೆ ಹಿಂದಿ ಮತ್ತು ಕನ್ನಡದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್‌ ಮಾಡಿದ್ದಾರೆ.

Continue Reading

ಸಿನಿಮಾ

Rishab Shetty: ಕುಂದಾಪುರಕ್ಕೆ ಆಗಮಿಸಿದ ʼಕಲ್ಕಿʼಯ ಬುಜ್ಜಿ; ಪ್ರಭಾಸ್‌ ಕಾರು ರೈಡ್‌ ಮಾಡಿದ ರಿಷಬ್‌ ಶೆಟ್ಟಿ ಹೇಳಿದ್ದೇನು?

Rishab Shetty: ಸದ್ಯ ʼಕಲ್ಕಿ 2898 ಎಡಿʼ ಚಿತ್ರ ದೇಶದ ಗಮನ ಸೆಳೆದಿದೆ. ಜತೆಗೆ ಚಿತ್ರದ ಪ್ರಮುಖ ಪಾತ್ರವಾಗಿರುವ ಬುಜ್ಜಿ ಹೆಸರಿನ ಕಾರು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಇದೀಗ ಬುಜ್ಜಿ ನಮ್ಮ ಕರುನಾಡಿಗೆ ಅದರಲ್ಲಿಯೂ ಕುಂದಾಪುರಕ್ಕೆ ಆಗಮಿಸಿದ್ದು, ರಿಷಬ್‌ ಶೆಟ್ಟಿ ರೈಡ್‌ ಮಾಡಿದ್ದಾರೆ. ʼಕಾಂತಾರʼ ಚಿತ್ರದ ಮೂಲಕ ದೇಶದ ಗಮನ ಸೆಳೆದ ರಿಷಬ್‌ ಶೆಟ್ಟಿ ಅವರು ಸದ್ಯ ʼಕಾಂತಾರ ಚಾಪ್ಟರ್‌ 1ʼ ಸಿನಿಮಾದ ಶೂಟಿಂಗ್‌ಗಾಗಿ ತಮ್ಮ ಊರಾದ ಕುಂದಾಪುರದಲ್ಲಿ ಬೀಡುಬಿಟ್ಟಿದ್ದಾರೆ. ಅವರನ್ನು ಭೇಟಿಯಾಗಲು ʼಕಲ್ಕಿʼ ಬುಜ್ಜಿ ಕುಂದಾಪುರಕ್ಕೆ ಆಗಮಿಸಿದೆ.

VISTARANEWS.COM


on

Rishab Shetty
Koo

ಬೆಂಗಳೂರು: ಸದ್ಯ ʼಕಲ್ಕಿ 2898 ಎಡಿʼ (Kalki 2898 AD) ಚಿತ್ರ ದೇಶದ ಗಮನ ಸೆಳೆದಿದೆ. ಈ ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಚಿತ್ರ ಈಗಾಗಲೇ ಸಿನಿಪ್ರಿಯರಲ್ಲಿ ಕುತೂಹಲ ಕೆರಳಿಸಿದ್ದು, ಜೂನ್‌ 27ಕ್ಕೆ ತೆರೆಗೆ ಬರಲಿದೆ. ಟಾಲಿವುಡ್‌ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ (Nag Ashwin) ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾದಲ್ಲಿ ಟಾಲಿವುಡ್‌ ಸೂಪರ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮತ್ತಿತರರು ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಕಮಲ್‌ ಹಾಸನ್‌ ಮತ್ತು ಶೋಭನಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರು ಟ್ರೈಲರ್‌ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಅದರ ಜತೆಗೆ ಚಿತ್ರದ ಪ್ರಮುಖ ಪಾತ್ರವಾಗಿರುವ ಬುಜ್ಜಿ (Bujji) ಕೂಡ ಪ್ರೇಕ್ಷಕರ ಗಮನ ಸೆಳೆದಿದೆ. ಬುಜ್ಜಿ ಎಂದರೆ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಪ್ರಭಾಸ್‌ ಅವರ ಕಾರು. ಚಿತ್ರಕ್ಕಾಗಿಯೇ ಇದನ್ನು ವಿಶೇಷವಾಗಿ ಸಿದ್ಧಪಡಿಸಲಾಗಿದೆ. ಇದೀಗ ಬುಜ್ಜಿ ನಮ್ಮ ಕರುನಾಡಿಗೆ ಅದರಲ್ಲಿಯೂ ಕುಂದಾಪುರಕ್ಕೆ ಬಂದು ರಿಷಬ್‌ ಶೆಟ್ಟಿ (Rishab Shetty) ಅವರನ್ನು ಭೇಟಿಯಾಗಿದೆ.

ʼಕಾಂತಾರʼ ಚಿತ್ರದ ಮೂಲಕ ದೇಶದ ಗಮನ ಸೆಳೆದ ರಿಷಬ್‌ ಶೆಟ್ಟಿ ಅವರು ಸದ್ಯ ʼಕಾಂತಾರ ಚಾಪ್ಟರ್‌ 1ʼ ಸಿನಿಮಾದ ಶೂಟಿಂಗ್‌ಗಾಗಿ ತಮ್ಮ ಊರಾದ ಕುಂದಾಪುರದಲ್ಲಿ ಬೀಡುಬಿಟ್ಟಿದ್ದಾರೆ. ಅವರನ್ನು ಭೇಟಿಯಾಗಲು ʼಕಲ್ಕಿʼ ಬುಜ್ಜಿ ಕುಂದಾಪುರಕ್ಕೆ ಆಗಮಿಸಿದೆ. ರಿಷಬ್‌ ಶೆಟ್ಟಿ ಬುಜ್ಜಿಯನ್ನು ಓಡಿಸಿ ಥ್ರಿಲ್‌ ಆಗಿದ್ದಾರೆ.

ʼಕಲ್ಕಿ 2898 ಎಡಿʼ ಸಿನಿಮಾದ ಪ್ರಚಾರದ ಭಾಗವಾಗಿ ಬುಜ್ಜಿ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲೆಲ್ಲ ಸುತ್ತಿ ಇದೀಗ ಕರ್ನಾಟಕ್ಕೆ ಆಗಮಿಸಿದೆ. ಅದರಲ್ಲಿಯೂ ಡಿವೈನ್‌ ಸ್ಟಾರ್‌ ಅವರನ್ನು ಭೇಟಿಯಾಗಲು ಕುಂದಾಪುರಕ್ಕೆ ಬಂದಿಳಿದ ಬುಜ್ಜಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ರಿಷಬ್‌ ಶೆಟ್ಟಿ ಬುಜ್ಜಿಯನ್ನು ಓಡಿಸುತ್ತಿರುವ ವಿಡಿಯೊವನ್ನು ಚಿತ್ರ ತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು ವೈರಲ್‌ ಆಗಿದೆ.

ಈಗಾಗಲೇ ಅಕ್ಕಿನೇನಿ ನಾಗಚೈತನ್ಯ, ಮಾಜಿ ಫಾರ್ಮುಲಾ ಒನ್ ರೇಸರ್ ನಾರಾಯಣ್ ಕಾರ್ತಿಕೇಯನ್, ಆನಂದ್ ಮಹೀಂದ್ರ ಸೇರಿದಂತೆ ಹಲವರ ಬುಜ್ಜಿಯಲ್ಲಿ ಒಂದು ರೌಂಡ್‌ ಹೊಡೆದಿದ್ದು, ಇದೀಗ ಈ ಅವಕಾಶ ರಿಷಬ್‌ ಶೆಟ್ಟಿ ಅವರಿಗೂ ಲಭಿಸಿದೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. “ಟೀಸರ್‌ನಲ್ಲೇ ಗೊತ್ತಾಗುತ್ತೆ. ಯಾವ ರೇಂಜ್‌ನಲ್ಲಿ ಬುಜ್ಜಿ ಹವಾ ಇದೆ ಅನ್ನೋದು. ಡ್ರೈವ್ ಮಾಡಿದ್ದು ಒಂದು ಅದ್ಭುತ ಅನುಭವ. ಆಲ್‌ ದಿ ಬೆಸ್ಟ್ ಭೈರವ ಮತ್ತು ಬುಜ್ಜಿ. ಕಲ್ಕಿ ಜೂನ್ 27ಕ್ಕೆ ರಿಲೀಸ್ ಆಗುತ್ತಿದೆ. ಎಲ್ಲರೂ ಥಿಯೇಟರ್‌ಗೆ ಬಂದು ಸಿನಿಮಾ ನೋಡಿ” ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

ಹೊಸದೊಂದು ಲೋಕ ತೆರೆದಿಡಲಿದೆ ʼಕಲ್ಕಿʼ

ಸೈನ್ಸ್‌ ಫಿಕ್ಷನ್‌ ಚಿತ್ರ ʼಕಲ್ಕಿ 2898 ಎಡಿʼ ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ತಯಾರಾಗಿದ್ದು, ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಈ ಸಿನಿಮಾದಲ್ಲಿ ನೀವು ನಾಗ್‌ ಅಶ್ವಿನ್‌ ಕಟ್ಟಿಕೊಟ್ಟ ಬೇರೆಯದೇ ಪ್ರಪಂಚವನ್ನು ಕಣ್ತುಂಬಿಕೊಳ್ಳಬಹುದು. ಸುಮಾರು 6,000 ವರ್ಷಗಳ ಕಥೆ ತೆರೆ ಮೇಲೆ ಮೂಡಲಿದೆ. ವೈಜಯಂತಿ ಮೂವೀಸ್‌ ಬ್ಯಾನರ್‌ನಲ್ಲಿ ನಿರ್ಮಾಣದವಾದ ಈ ಸಿನಿಮಾ ತೆಲುಗು, ಕನ್ನಡ, ತಮಿಳು, ಹಿಂದಿ, ಮಕಯಾಳಂನಲ್ಲಿ ತೆರೆಗೆ ಬರಲಿದೆ.

Continue Reading
Advertisement
Vinay Gowda acted darshan devil Movie and says Futture cant be predict
ಸ್ಯಾಂಡಲ್ ವುಡ್2 mins ago

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Mass Shooting
ವಿದೇಶ21 mins ago

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ; ನಾಲ್ವರನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುಷ್ಕರ್ಮಿ

Inzamam Ul Haq
ಕ್ರೀಡೆ28 mins ago

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

rain news wall collapse 4 death
ಕ್ರೈಂ29 mins ago

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Sanjith Hegde Nange Allava song Out
ಸ್ಯಾಂಡಲ್ ವುಡ್52 mins ago

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

suraj revanna case 1
ಕ್ರೈಂ1 hour ago

Suraj Revanna Case: ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ

Lok Sabha Speaker Election
ದೇಶ1 hour ago

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Albania vs Spain
ಕ್ರೀಡೆ1 hour ago

Albania vs Spain: ಯುರೋ ಕಪ್​ನಲ್ಲಿ ನಾಕೌಟ್‌ ಹಂತಕ್ಕೇರಿದ ಸ್ಪೇನ್‌

Parliament Session 2024
ದೇಶ1 hour ago

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Pavithra Gowda Cried After In Jail darshan case
ಕ್ರೈಂ1 hour ago

Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌