Nikhil Kumaraswamy: ಮುದ್ದು ಕೃಷ್ಣನಾಗಿ ಮಿಂಚಿದ ನಟ ನಿಖಿಲ್ ಕುಮಾರಸ್ವಾಮಿ ಪುತ್ರ - Vistara News

South Cinema

Nikhil Kumaraswamy: ಮುದ್ದು ಕೃಷ್ಣನಾಗಿ ಮಿಂಚಿದ ನಟ ನಿಖಿಲ್ ಕುಮಾರಸ್ವಾಮಿ ಪುತ್ರ

Nikhil Kumaraswamy: ಕೃಷ್ಣಾಷ್ಟಮಿ ದಿನದಂದು ಮುದ್ದು ಕೃಷ್ಣನಾಗಿ ನಟ ನಿಖಿಲ್ ಕುಮಾರಸ್ವಾಮಿ ಪುತ್ರ ಮಿಂಚಿದ್ದಾನೆ. ದಂಪತಿ ಪುತ್ರ ಆವ್ಯಾನ್ ದೇವ್‌ಗೆ ಕೃಷ್ಣನ ವೇಷ ಹಾಕಿಸಿ ಫೋಟೊಶೂಟ್‌ ಮಾಡಿಸಿದ್ದಾರೆ.

VISTARANEWS.COM


on

nikhil kumaraswamy son Avyaan DevIn
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Nikhil Kumaraswamy
ಕೃಷ್ಣಾಷ್ಟಮಿ ದಿನದಂದು ಮುದ್ದು ಕೃಷ್ಣನಾಗಿ ನಟ ನಿಖಿಲ್ ಕುಮಾರಸ್ವಾಮಿ ಪುತ್ರ ಮಿಂಚಿದ್ದಾನೆ.
Nikhil Kumaraswamy
ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ದಂಪತಿ ಪುತ್ರ ಆವ್ಯಾನ್ ದೇವ್‌ಗೆ ಕೃಷ್ಣನ ವೇಷ ಹಾಕಿಸಿ ಫೋಟೊಶೂಟ್‌ ಮಾಡಿಸಿದ್ದಾರೆ.
Nikhil Kumaraswamy
ಮೊಮ್ಮಗನ ಜತೆ ಕೃಷ್ಣ ಜನ್ಮಾಷ್ಟಮಿಯನ್ನು ಕುಮಾರಸ್ವಾಮಿ ದಂಪತಿ ಸಂಭ್ರಮಿಸಿದರು.
ಮೊಮ್ಮಗನ ಕೃಷ್ಣನ ವೇಷ ನೋಡಿ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಖುಷಿ ಪಟ್ಟರು.
Nikhil Kumaraswamy
ಮುದ್ದುಕೃಷ್ಣನಾಗಿ ಮಿಂಚಿದ ಮೊಮ್ಮಗ ಆವ್ಯಾನ್ ದೇವ್ ಜತೆ ಕುಮಾರಸ್ವಾಮಿ -ಅನಿತಾ ಕುಮಾರಸ್ವಾಮಿ ಫೋಟೊ ಕ್ಲಿಕ್ಕಿಸಿಕೊಂಡರು.
Nikhil Kumaraswamy
ಇದೀಗ ನಿಖಿಲ್‌ ಅವರ ಮಗನನ್ನು ಕಂಡು ಅವರ ಫ್ಯಾನ್ಸ್‌ ಕಮೆಂಟ್‌ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

Kamal Haasan: ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

VISTARANEWS.COM


on

Kamal Haasan gives a fiery speech at Indian 2 event
Koo

ಚೆನ್ನೈ: ಕಮಲ್‌ ಹಾಸನ್‌ (Kamal Haasan) ಅಭಿನಯದ ʻಇಂಡಿಯನ್ 2ʼ ಸಿನಿಮಾ ಆಡಿಯೊ ಲಾಂಚ್‌ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ನಿರ್ದೇಶಕ ಶಂಕರ್, ಕಮಲ್ ಹಾಸನ್, ಅನಿರುದ್ಧ್ ರವಿಚಂದರ್, ರಕುಲ್ ಪ್ರೀತ್ ಸಿಂಗ್ ಮತ್ತು ಕಾಜಲ್ ಅಗರ್ವಾಲ್, ಸಿಲಂಬರಸನ್ ಟಿಆರ್, ಲೋಕೇಶ್ ಕನಕರಾಜ್, ನೆಲ್ಸನ್ ದಿಲೀಪ್‌ಕುಮಾರ್, ಬಾಬಿ ಸಿಂಹ ಮತ್ತು ಬ್ರಹ್ಮಾನಂದಂ ಹಾಜರಿದ್ದರು. ಕಾರ್ಯಕ್ರಮದಲ್ಲಿ ಅತ್ಯಂತ ಖಡಕ್‌ ಆಗಿ ಭಾಷಣ ಮಾಡಿದರು ಕಮಲ್‌ ಹಾಸನ್‌.

ಕಮಲ್‌ ಭಾಷಣದಲ್ಲಿ ʻʻನಾನು ತಮಿಳಿಗ ಮತ್ತು ಭಾರತೀಯ. ನಾನು ಒಮ್ಮೆ ತಮಿಳಿಗ ಹಾಗೂ ಒಮ್ಮೆ ಭಾರತೀಯ ಎರಡೂ ಆಗಬಲ್ಲೆ. ಒಡೆದು ಆಳುವುದು ಬ್ರಿಟಿಷ್ ಪರಿಕಲ್ಪನೆಯಾಗಿತ್ತು. ಅವರು ಹಾಗೆ ಮಾಡಿದರು. ಏಕೆಂದರೆ ಭಾರತೀಯರು ಒಗ್ಗಟ್ಟಾದಾಗ ಓಡಿಹೋಗಲು ಅವರಿಗೆ ಒಂದು ಮನೆ ಎಂಬುದಿತ್ತು. ಆದರೆ ಇಂದು ಒಡೆದು ಆಳುತ್ತಿರುವವರು ಎಲ್ಲಿಗೆ ಓಡಿಹೋಗುತ್ತಾರೆ?’ ಎಂದು ಅವರು ಪ್ರಶ್ನೆ ಮಾಡಿದರು. ಭಾರತವನ್ನು ಒಡೆದು ಆಳುತ್ತಿರುವವರ ವಿರುದ್ಧ ಭಾರತೀಯರು ಒಂದಲ್ಲ ಒಂದು ದಿನ ದಂಗೆ ಏಳುತ್ತಾರೆ ಎಂದರು.

“ಪ್ರತಿಯೊಂದು ನಗರವೂ ​​ನಿಮ್ಮ ನಗರವೇ, ಎಲ್ಲರೂ ನಿಮ್ಮ ಬಂಧುಗಳೇ. ನಮ್ಮ ಈ ತಮಿಳು ರಾಜ್ಯಕ್ಕೆ ಬಂದವರಿಗೆ ನಾವು ಜೀವ ಕೊಡುವುದರಲ್ಲಿಯೂ ಹೆಸರುವಾಸಿಯಾಗಿದ್ದೇವೆ. ತಮಿಳಿಗನೊಬ್ಬ ದೇಶವನ್ನು ಆಳುವ ದಿನ ಏಕೆ ಬರಬಾರದು? ಇದು ನನ್ನ ದೇಶ, ಮತ್ತು ನಾವು ಏಕತೆಯನ್ನು ಕಾಪಾಡಬೇಕುʼʼಎಂದರು.  ಕಮಲ್ ಹಾಸನ್ ನಟರಾಗಿರುವ ಜೊತೆಗೆ ರಾಜಕಾರಣಿಯೂ ಹೌದು, ‘ಮಕ್ಕಳ್ ನಿಧಿ ಮಯಂ’ ಹೆಸರಿನ ಪಕ್ಷ ಕಟ್ಟಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ `ಇಂಡಿಯನ್ 2‘ (Indian 2 Audio Launch) ಬಿಡುಗಡೆಗೆ ಮುಂಚಿತವಾಗಿ, ಜೂನ್ 1ರಂದು ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಮೆಗಾ ಆಡಿಯೊ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ.

1996ರಲ್ಲಿ ತೆರೆಕಂಡ ಎಸ್‌. ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನೆಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

Continue Reading

ಸ್ಯಾಂಡಲ್ ವುಡ್

Kannada Upcoming Movies: ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಲು ಬರುತ್ತಿವೆ ಕನ್ನಡ ಸಿನಿಮಾಗಳು!

Kannada Upcoming Movies:
ಜೂನ್ 10ಕ್ಕೆ ‘ಯುಐ’ ಸಿನಿಮಾ ಅಪ್‌ಡೇಟ್ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇನ್ನು 6 ತಿಂಗಳಲ್ಲಿ 10ಕ್ಕೂ ಅಧಿಕ ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲಿವೆ. ಶಿವಣ್ಣ ‘ಭೈರತಿ ರಣಗಲ್’ ಚಿತ್ರದ ಅಗಸ್ಟ್ 15ಕ್ಕೆ ರಿಲೀಸ್ ಎಂದು ಚಿತ್ರತಂಡ ಹೇಳಿದೆ. ಅಲ್ಲಿಗೆ ಉಳಿದಿರುವುದು ‘ಯುಐ’, ‘ಭೀಮ’, ‘ಮ್ಯಾಕ್ಸ್’ ಸಿನಿಮಾಗಳು ಮಾತ್ರ.

VISTARANEWS.COM


on

Kannada Upcoming Movies KD Martin Bheema Movies
Koo

ಬೆಂಗಳೂರು: ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ.  ‘ಭೀಮ’ ಹಾಗೂ ‘ಯುಐ’ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಸಿಗುವ ಸುಳಿವು ಸಿಕ್ಕಿದೆ. ಆದಷ್ಟು ಬೇಗ (Kannada Upcoming Movies) ‘ಭೀಮ’ ಸಿನಿಮಾ ಅನೌನ್ಸ್‌ಮೆಂಟ್ ಎಂದು ಹೇಳಲಾಗುತ್ತಿದೆ. ಜೂನ್ 10ಕ್ಕೆ ‘ಯುಐ’ ಸಿನಿಮಾ ಅಪ್‌ಡೇಟ್ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇನ್ನು 6 ತಿಂಗಳಲ್ಲಿ 10ಕ್ಕೂ ಅಧಿಕ ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲಿವೆ. ಶಿವಣ್ಣ ‘ಭೈರತಿ ರಣಗಲ್’ ಚಿತ್ರದ ಅಗಸ್ಟ್ 15ಕ್ಕೆ ರಿಲೀಸ್ ಎಂದು ಚಿತ್ರತಂಡ ಹೇಳಿದೆ. ಅಲ್ಲಿಗೆ ಉಳಿದಿರುವುದು ‘ಯುಐ’, ‘ಭೀಮ’, ‘ಮ್ಯಾಕ್ಸ್’ ಸಿನಿಮಾಗಳು ಮಾತ್ರ.

ಬಾಕ್ಸ್‌ ಆಫೀಸ್‌ನಲ್ಲಿ ʻಕೆಡಿʼ-ʻಡೆವಿಲ್‌ʼ ಕಾದಾಟ!

ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಮೊದಲೇ ದರ್ಶನ್‌ ಹಾಗೂ ಧ್ರುವ ನಡುವೆ ಸಂಬಂಧ ಚೆನ್ನಾಗಿಲ್ಲ. ಹೀಗಾಗಿ ಬಾಕ್ಸ್‌ ಆಫೀಸ್‌ ವಾರ್‌ ಜತೆ ಫ್ಯಾನ್ಸ್‌ ವಾರ ಕೂಡ ಆಗಬಹುದು ಎನ್ನಲಾಗುತ್ತಿದೆ.

ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Kannada New Movie: ‘ಶೆಫ್​ ಚಿದಂಬರ’ ಸಿನಿಮಾ ಟ್ರೈಲರ್‌​ ಅನಾವರಣ ಮಾಡಿ ಹಾರೈಸಿದ ರಮೇಶ್ ಅರವಿಂದ್!

ಇದೀಗ ‘ಭೀಮ’ ಹಾಗೂ ‘ಯುಐ’ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಸಿಗುವ ಸುಳಿವು ಸಿಕ್ಕಿದೆ. ಆದಷ್ಟು ಬೇಗ ‘ಭೀಮ’ ಸಿನಿಮಾ ಅನೌನ್ಸ್‌ಮೆಂಟ್ ಎಂದು ಹೇಳಲಾಗುತ್ತಿದೆ.ಜುಲೈನಲ್ಲೇ ‘ಯುಐ’ ಚಿತ್ರ ತೆರೆಗಪ್ಪಳಿಸುವ ಸಾಧ್ಯತೆಯಿದೆ. ತಪ್ಪಿದರೆ ಸೆಪ್ಟೆಂಬರ್‌ನಲ್ಲಿ ರಿಲೀಸ್ ಫಿಕ್ಸ್ ಎನ್ನಲಾಗ್ತಿದೆ. ಇನ್ನು ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಭೀಮ’ ಸಿನಿಮಾ ಕೂಡ ನಿರೀಕ್ಷೆ ಹುಟ್ಟಾಕ್ಕಿದೆ.

ಭೀಮ’ ಸಿನಿಮಾ

ʻಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.

ಭೈರತಿ ರಣಗಲ್

ʻಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ (Bhairathi Ranagal) ಆಗಿ ಸಾಕಷ್ಟು ಗಮನ ಸೆಳೆದಿದ್ದರು ಶಿವರಾಜ್‌ಕುಮಾರ್‌. ವೇದ ಸಿನಿಮಾ ಬಳಿಕ ‘ಗೀತಾ ಪಿಕ್ಚರ್ಸ್​’ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಆಗಿಲ್ಲರಲಿಲ್ಲ. ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ. ಭೈರತಿ ರಣಗಲ್ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ರವಿ ಬಸ್ರೂರು ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ‘ಶೆಫ್​ ಚಿದಂಬರ’ ಸಿನಿಮಾ ಟ್ರೈಲರ್‌​ ಅನಾವರಣ ಮಾಡಿ ಹಾರೈಸಿದ ರಮೇಶ್ ಅರವಿಂದ್!

Kannada New Movie: ಡಾ.ವಿಷ್ಣುವರ್ಧನ್ ಹಾಗೂ ತಮ್ಮ ನಡುವಿವ ಒಡನಾಟವನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಮೇಶ್ ಅರವಿಂದ್, ಅನಿರುದ್ಧ ನನ್ನ ನಿರ್ದೇಶನದ “ರಾಮ ಶ್ಯಾಮ ಭಾಮ” ಸೇರಿದಂತೆ ಎರಡು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ಪ್ರತಿಭಾವಂತ ನಟ. ಈ ಚಿತ್ರದ ಟ್ರೈಲರ್‌ ಸಹ ಚೆನ್ನಾಗಿದೆ. ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದ ಟ್ರೈಲರ್‌ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ‌. ಚಿತ್ರತಂಡದ ಶ್ರಮ ಕಾಣುತ್ತಿದೆ. ಚಿತ್ರ ಯಶಸ್ವಿಯಾಗಲಿ ಎಂದರು.

VISTARANEWS.COM


on

Kannada New Movie chef chidambara Trailer out
Koo

ಬೆಂಗಳೂರು: ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಜನಪ್ರಿಯರಾಗಿರುವ ಅನಿರುದ್ಧ್ (Kannada New Movie)​ ಜತ್ಕರ್ ನಾಯಕನಾಗಿ ನಟಿಸಿರುವ, ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ “Chef ಚಿದಂಬರ” ಚಿತ್ರದ ಟ್ರೈಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ರಮೇಶ್ ಅರವಿಂದ್ ಟ್ರೈಲರ್‌ ಬಿಡುಗಡೆ ಮಾಡಿದರು. ಟ್ರೈಲರ್‌ಗೆ ಮೆಚ್ಚುಗೆ ದೊರಕುತ್ತಿದ್ದು, ಇದೇ ಜೂನ್ 14ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ಧ್​ ಜತ್ಕರ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ. ಟ್ರೈಲರ್‌ ಬಿಡುಗಡೆ ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಡಾ.ವಿಷ್ಣುವರ್ಧನ್ ಹಾಗೂ ತಮ್ಮ ನಡುವಿವ ಒಡನಾಟವನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ರಮೇಶ್ ಅರವಿಂದ್, ಅನಿರುದ್ಧ ನನ್ನ ನಿರ್ದೇಶನದ “ರಾಮ ಶ್ಯಾಮ ಭಾಮ” ಸೇರಿದಂತೆ ಎರಡು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ಪ್ರತಿಭಾವಂತ ನಟ. ಈ ಚಿತ್ರದ ಟ್ರೈಲರ್‌ ಸಹ ಚೆನ್ನಾಗಿದೆ. ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದ ಟ್ರೈಲರ್‌ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ‌. ಚಿತ್ರತಂಡದ ಶ್ರಮ ಕಾಣುತ್ತಿದೆ. ಚಿತ್ರ ಯಶಸ್ವಿಯಾಗಲಿ ಎಂದರು.

ನಿರ್ಮಾಪಕಿ ರೂಪ ಅವರ ಪತಿ ಸರ್ವೋತಮ್ ಹಾಗೂ ನಾನು ಬಹಳ ವರ್ಷಗಳ ಸ್ನೇಹಿತರು. ಅವರು‌ ಚಿತ್ರ ಮಾಡೋಣ ಎಂದಾಗ ಸಾಕಷ್ಟು ಕಥೆಗಳನ್ನು ಕೇಳಿದ್ದೆ. ಆನಂದರಾಜ್ ಅವರು ಹೇಳಿದ ಈ ಕಥೆ ಇಷ್ಟವಾಯಿತು. ನಂತರ ಡಾ|ವಿಷ್ಣುವರ್ಧನ್ ಸ್ಮಾರಕದ ಬಳಿ ಸ್ಕ್ರಿಪ್ಟ್ ಪೂಜೆ ಮಾಡಲಾಯಿತು. ಮುಹೂರ್ತದ ದಿನ ಭಾರತಿ ವಿಷ್ಣುವರ್ಧನ್ ಅವರು ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದರು. ಕಿಚ್ಚ ಸುದೀಪ್ ಟೀಸರ್ ಗೆ ಧ್ವನಿ ನೀಡಿ ಪ್ರೋತ್ಸಾಹಿಸಿದರು. ಈಗ ರಮೇಶ್ ಅರವಿಂದ್ ಟ್ರೈಲರ್‌ ಬಿಡುಗಡೆ ಮಾಡಿ ಕೊಟ್ಟಿದ್ದಾರೆ. ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ‌. ಜೂನ್ 14 ಚಿತ್ರ ಬಿಡುಗಡೆಯಾಗುತ್ತಿದೆ‌. ನೋಡಿ ಹಾರೈಸಿ ಎಂದರು ನಟ ಅನಿರುದ್ದ್.

ಇದನ್ನೂ ಓದಿ; Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

ಈ ಚಿತ್ರದ ಚಿತ್ರೀಕರಣ ಚಿತ್ರತಂಡದ ಸಹಕಾರದಿಂದ ಕೇವಲ 29 ದಿನಗಳಲ್ಲಿ ಮುಕ್ತಾಯವಾಗಿದೆ. ಚಿತ್ರದಲ್ಲಿ ಮೂರು ಹಾಡುಗಳಿದೆ. ಅದರಲ್ಲಿ ಒಂದು ಹಾಡನ್ನು ಅನಿರುದ್ದ್ ಅವರೆ ಹಾಡಿದ್ದಾರೆ. ರೂಪ ಡಿ.ಎನ್ ಅವರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರ ಪ್ರೇಕ್ಷಕರಿಗೂ ಪ್ರಿಯವಾಗಲಿದೆ ಎನ್ನುತ್ತಾರೆ ನಿರ್ದೇಶಕ ಆನಂದರಾಜ್.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ರಮೇಶ್ ಅರವಿಂದ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ ನಿರ್ಮಾಪಕಿ ರೂಪ ಡಿ ಎನ್ ಅವರು ನಮ್ಮ ಚಿತ್ರವನ್ನು ಎಲ್ಲರು ನೋಡಿ. ಪ್ರೋತ್ಸಾಹ ನೀಡಿ ಎಂದರು.

ಚಿತ್ರದ ನಾಯಕಿಯರಾದ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್ ಅವರು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ಶಿವಮಣಿ ಅವರು ನಿರ್ದೇಶಕರೊಟ್ಟಿಗೆ ವಿಭಿನ್ನವಾಗಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಗೀತ ನಿರ್ದೇಶಕ ರಿತ್ವಿಕ್ ಮುರಳಿಧರ್, ಛಾಯಾಗ್ರಾಹಕ ಉದಯ್ ಲೀಲ, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಸಂಭಾಷಣೆ ಬರೆದಿರುವ ಗಣೇಶ್ ಪರಶುರಾಮ್ ಸೇರಿದಂತೆ ಮುಂತಾದ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Continue Reading

ಕಾಲಿವುಡ್

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Actor Dhanush: ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು.

VISTARANEWS.COM


on

Actor Dhanush unveils new poster from Ilaiyaraaja biopic
Koo

ಬೆಂಗಳೂರು: ಸಂಗೀತ ಮಾಂತ್ರಿಕ ಇಳಯರಾಜ ಮತ್ತು ಚಲನಚಿತ್ರ ನಿರ್ಮಾಪಕ ಮಣಿರತ್ನಂ ಅವರಿಗೆ ಇಂದು (ಜೂನ್ 2) ಜನುಮದಿನದ ಸಂಭ್ರಮ. ವಿಶೇಷ ಸಂದರ್ಭದಲ್ಲಿ, ನಟರಾದ ಕಮಲ್ ಹಾಸನ್ ಮತ್ತು ಧನುಷ್ ಶುಭ ಹಾರೈಸಿದರು. ಇಳಯರಾಜ 81ನೇ ವಂಸತಕ್ಕೆ ಕಾಲಿಟ್ಟಿದ್ದಾರೆ. ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು. ಕನ್ನಡದಲ್ಲೂ ಸಿನಿಮಾ ಬರಲಿದೆ.

ಇದೀಗ ಧನುಷ್ ತಮ್ಮ ಮುಂಬರುವ ಚಿತ್ರವಾದ ಇಳಯರಾಜ ಅವರ ಜೀವನಚರಿತ್ರೆಯ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಸಾವಿರಾರು ಜನರ ಮುಂದೆ ಹಾರ್ಮೋನಿಯಂ ಹಿಡಿದು ವೇದಿಕೆಯಲ್ಲಿ ನಿಂತಿರುವ ಪೋಸ್ಟರ್‌ ಹಂಚಿಕೊಂಡಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಮೇಷ್ಟ್ರೇ’ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಕಮಲ್ ಹಾಸನ್ ಎಕ್ಸ್‌ನಲ್ಲಿ ಇಳಯರಾಜ ಮತ್ತು ಮಣಿರತ್ನಂ ಜತೆಗಿರುವ ಫೋಟೊವನ್ನು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಡಬಲ್ ಹ್ಯಾಪಿನೆಸ್. ಸಂತೋಷವನ್ನು ಅಳೆಯಲು ಸಾಧ್ಯವೇ? ಇಂದು ನನ್ನ ದೊಡ್ಡಣ್ಣ ಹಾಗೂ ಚಿಕ್ಕಣ್ಣನ ಜನ್ಮದಿನವಾಗಿರುವುದರಿಂದ ಇದು ಸಂತೋಷದ ಕ್ಷಣವಾಗಿದೆ. ನನ್ನ ಪ್ರೀತಿಯ ಸಹೋದರ ಇಳಯರಾಜ ಅವರು ಸಂಗೀತದಲ್ಲಿ ಕಥೆಯನ್ನು ಹೇಳಲಿದ್ದಾರೆ. ನಿಮ್ಮಿಬ್ಬರಿಗೂ ಜನ್ಮದಿನದ ಶುಭಾಶಯಗಳು. ನಮ್ಮ ಮೂವರ ಪರಂಪರೆ ಶಾಶ್ವತವಾಗಿ ಮುಂದುವರಿಯಲಿ. ಹ್ಯಾಪಿ ಬರ್ತ್‌ಡೇ ಇಳಯರಾಜ ಮತ್ತು ಹ್ಯಾಪಿ ಬರ್ತ್‌ಡೇ ಮಣಿರತ್ನಂ. ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು.

ಚಿತ್ರವು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸೇರಿದಂತೆ ದೇಶಾದ್ಯಂತ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಇಷ್ಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ಸಾಕಾಗುವುದಿಲ್ಲ. ಇತರ ಹಲವು ಭಾರತೀಯ ಭಾಷೆಗಳಲ್ಲಿ ಬಿಡುಗಡೆಯಾಗಬೇಕು ಎಂದು ಕಮಲ್ ಹಾಸನ್ ಅಭಿಪ್ರಾಯಪಟ್ಟರು.

ಈ ಬಯೋಪಿಕ್‌ಗೆ ಇಳಯರಾಜ ಅವರೇ ಸ್ವತಃ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಚಿತ್ರಕ್ಕೆ ನೀರವ್ ಷಾ ಕ್ಯಾಮೆರಾ ನಿರ್ವಹಿಸುತ್ತಿದ್ದು, ಮುತ್ತುರಾಜ ನಿರ್ಮಾಣ ವಿನ್ಯಾಸವನ್ನು ನೋಡಿಕೊಳ್ಳುತ್ತಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕ ಮತ್ತು ಇತರ ವಿವರಗಳು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಇಳಯರಾಜ ಭಾರತೀಯ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ. ಏಳು ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. 1,400 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. 20 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಸಂಗೀತವಾದ್ಯ ನೀಡಿದ್ದಾರೆ. ಭಾರತದ ಅದರಲ್ಲೂ ತಮಿಳಿನ ಜಾನಪದ ಸಂಗೀತವನ್ನು ಆಧರಿಸಿಯೇ ಹೆಚ್ಚಾಗಿ ಇವರು ಹಾಡು ಕಟ್ಟಿದ್ದಾರೆ. ಇದೀಗ ಇಳಯರಾಜ ಅವರ ಜೀವನ ಪ್ರಯಾಣದ ಕುರಿತಾದ ಚಿತ್ರ ಸೆಟ್ಟೇರಲು ಸಜ್ಜಾಗುತ್ತಿದೆ.

ಧನುಷ್ ಈಗಾಗಲೇ ʻಕುಬೇರʼ ಮತ್ತು ʻರಾಯನ್‌ʼ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ʻನಿಲವುಕು ಎನ್ಮೇಲ್ ಎನ್ನದಿ ಕೋಬಂʼ ಚಿತ್ರವನ್ನು ಸಹ ನಿರ್ದೇಶಿಸುತ್ತಿದ್ದಾರೆ.

Continue Reading
Advertisement
bangalore rain news
ಪ್ರಮುಖ ಸುದ್ದಿ12 mins ago

Bangalore Rain News: ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

Chikkodi Lok Sabha Constituency
ಚಿಕ್ಕೋಡಿ21 mins ago

Chikkodi Lok Sabha Constituency: ಜೊಲ್ಲೆ vs ಜಾರಕಿಹೊಳಿ; ಯಾರಿಗೆ ಗೆಲುವಿನ ಹೋಳಿ?

Toll Fee Hike
ದೇಶ27 mins ago

Toll Fee Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ

road accident tractor
ಪ್ರಮುಖ ಸುದ್ದಿ54 mins ago

Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

Belagavi Lok Sabha Constituency
ಬೆಳಗಾವಿ1 hour ago

Belagavi Lok Sabha Constituency: ಶೆಟ್ಟರ್‌ ವರ್ಸಸ್‌ ಹೆಬ್ಬಾಳ್ಕರ್‌; ಯಾರಿಗೆ ಬೆಳಗಾವಿ ಕುಂದಾ?

Sweating And Body Odor
ಆರೋಗ್ಯ1 hour ago

Sweating And Body Odor: ಅತಿಯಾಗಿ ಬೆವರುತ್ತಿದ್ದೀರಾ? ಈ ಆಹಾರಗಳು ನಿಮ್ಮ ಬೆವರ ದುರ್ಗಂಧಕ್ಕೆ ಮುಖ್ಯ ಕಾರಣ!

karnataka Weather Forecast
ಮಳೆ2 hours ago

Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Hassan Lok Sabha Constituency
ಪ್ರಮುಖ ಸುದ್ದಿ2 hours ago

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Ways To Stay Young
ಲೈಫ್‌ಸ್ಟೈಲ್2 hours ago

Ways To Stay Young: ಸಮುದ್ರದಾಳದಲ್ಲಿ ದಿನ ಕಳೆದರೆ ಇಳಿ ವಯಸ್ಸಲ್ಲೂ ಯೌವನ ಮರಳಿ ಬರುತ್ತದೆ!

Tattoo Care
ಆರೋಗ್ಯ3 hours ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌