Hosanagara News: ಇಸ್ಪೀಟ್ ಅಡ್ಡೆಗಳ ಮೇಲೆ ದಾಳಿ; ನಗದು, ಬೈಕ್ ಸಹಿತ ಆರೋಪಿಗಳ ಬಂಧನ - Vistara News

ಶಿವಮೊಗ್ಗ

Hosanagara News: ಇಸ್ಪೀಟ್ ಅಡ್ಡೆಗಳ ಮೇಲೆ ದಾಳಿ; ನಗದು, ಬೈಕ್ ಸಹಿತ ಆರೋಪಿಗಳ ಬಂಧನ

Hosanagara News: ಹೊಸನಗರ ತಾಲೂಕಿನ ಸೊನಲೆ ಹಾಗೂ ಆಲಗೇರಿಮಂಡ್ರಿ ಗ್ರಾಮದಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಹೊಸನಗರ ಠಾಣೆಯ ಪಿಎಸ್‌ಐ ಶಿವಾನಂದ ಕೆ. ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ನಗದು ಹಣದ ಜತೆಗೆ ಬೈಕ್‌ಗಳ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

Police raid on gambling 9 accused arrested at hosanagara
ಹೊಸನಗರ ಪೊಲೀಸ್‌ ಠಾಣೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ಇಸ್ಪೀಟ್ ಜೂಜಾಟದ (Gambling) ಅಡ್ಡೆಗಳ ಮೇಲೆ ಪೊಲೀಸರು ದಾಳಿ (Police Attack) ಮಾಡಿ ನಗದು ಹಣದ ಹಾಗೂ ಬೈಕ್‌ಗಳ (Bike) ಸಮೇತ ಆರೋಪಿಗಳನ್ನು (Accused) ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ತಾಲೂಕಿನ ಸೊನಲೆ ಹಾಗೂ ಆಲಗೇರಿಮಂಡ್ರಿ ಗ್ರಾಮದಲ್ಲಿ ಹೊಸನಗರ ಪಿಎಸ್‌ಐ ಶಿವಾನಂದ ಕೆ. ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸರ್ಕಾರಿ ಅರಣ್ಯ, ಜಾಗದಲ್ಲಿ ಇಸ್ಪೀಟ್‌ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬೈಕ್ ಹಾಗೂ ನಗದು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ICC World Cup: ವಿಶ್ವಕಪ್​ಗೆ ಅಂಪೈರ್​ಗಳ ನೇಮಕ; ನಿತಿನ್​ ಮೆನನ್​ಗೆ ಅವಕಾಶ

ಆರೋಪಿಗಳಾದ ಸುರೇಶ, ಸತೀಶ, ರಾಜೇಶ ಕೆ.ಎಸ್ ಬಿನ್ ಸೀತಾರಾಮ, ಚಂದ್ರಶೇಖರ, ಶ್ರೀನಿವಾಸ ಎಂಬುವವರನ್ನು ವಶಪಡಿಸಿಕೊಂಡು 11,700 ರೂ. ನಗದು ಹಣ, ಎರಡು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಆಲಗೇರಿಮಂಡ್ರಿ ಗ್ರಾಮದಲ್ಲಿ ಇಸ್ಪೀಟ್‌ ಅಡ್ಡೆ ಮೇಲೆ ದಾಳಿ

ಹೊಸನಗರ ತಾಲೂಕಿನ ಆಲಗೇರಿಮಂಡ್ರಿ ಗ್ರಾಮದ ಮನೆಯೊಂದರ ಹಿಂಬದಿಯ ಖಾಲಿ ಜಾಗದಲ್ಲಿ ಇಸ್ಪೀಟ್‌ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ನಗದು ಸಹಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ಎಂ. ಶಿವಪ್ಪ, ಕೆ. ರಾಜು, ಮನ್ಸೂರ್, ಸತೀಶ್ ಎಂಬುವವರನ್ನು ಬಂಧಿಸಿ ಅವರಿಂದ 6,030 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: G20 Summit 2023: ಜಿ20 ಶೃಂಗಸಭೆಗೆ ಬರುವ ವಿಶ್ವ ನಾಯಕರನ್ನು ಲೈವ್‌ ಆಗಿ ಇಲ್ಲಿ ನೋಡಿ!

ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ, ಸಿಪಿಐ ಗುರಣ್ಣ ಹೆಬ್ಬಾಳ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಿವಾನಂದ ಕೆ. ನೇತೃತ್ವದಲ್ಲಿ ಎಎಸ್‌ಐ ಸುರೇಶ್, ಸಿಬ್ಬಂದಿ ಗಂಗಪ್ಪ, ಸುನೀಲ್, ಸಂದೀಪ್, ತೀರ್ಥೇಶ್ ಹಾಗೂ ವಾಹನ ಚಾಲಕ ಅವಿನಾಶ್ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Rain News : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಯಾದಗಿರಿಯಲ್ಲಿ ಗಾಳಿ ಸಹಿತ ಮಳೆಗೆ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ಮೂರು ದಿನದಿಂದ ಕರೆಂಟ್‌ ಕಟ್‌ ಆಗಿದೆ. ಇತ್ತ ಗ್ರಾಮಸ್ಥರು ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌ (Karnataka Weather Forecast) ಮಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಯಾದಗಿರಿ: ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದರೂ ಮಳೆ ಅವಾಂತರ (Rain News) ಮಾತ್ರ ಕಡಿಮೆ ಆಗುತ್ತಿಲ್ಲ. ಯಾದಗಿರಿಯಲ್ಲಿ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪರಿಣಾಮ ಮೂರು ದಿನಗಳಿಂದ ಕರೆಂಟ್‌ ಇಲ್ಲದಂತಾಗಿದೆ.ಇತ್ತ ಮಂಗಳವಾರ ಚಿಕ್ಕಮಗಳೂರಿನಲ್ಲಿ ಭಾರಿ (Karnataka weather Forecast) ಮಳೆಯಾಗುತ್ತಿದೆ.

ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಸುತ್ತಮುತ್ತ ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಸವಾರರು ರಸ್ತೆ ಬದಿ ವಾಹನ ನಿಲ್ಲಿಸಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಯಾದಗಿರಿಯಲ್ಲಿ ಮಳೆಗೆ ಪವರ್‌ ಕಟ್‌; ಜನರೇಟರ್ ಮೂಲಕ ಮೊಬೈಲ್‌ಗಳಿಗೆ ಚಾರ್ಜಿಂಗ್‌

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದಿದ್ದು, ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಲಕಲ್, ಮರಮಕಲ್, ನಾಲ್ವಡಗಿ ಗ್ರಾಮಸ್ಥರು ವಿದ್ಯುತ್‌ ಇಲ್ಲದೆ ಪರದಾಡುತ್ತಿದ್ದಾರೆ. ತುರ್ತು ಎಂದಾಗ ಫೋನ್‌ ಮಾಡಲು ಮೊಬೈಲ್‌ನಲ್ಲಿ ಚಾರ್ಜಿಂಗ್‌ ಇಲ್ಲ.

ಹೀಗಾಗಿ ಮೊಬೈಲ್‌ ಚಾರ್ಜಿಂಗ್‌ಗಾಗಿ ಗ್ರಾಮಸ್ಥರು ಸೂಪರ್‌ ಪ್ಲ್ಯಾನ್‌ವೊಂದನ್ನು ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ ಹತ್ತಾರು ಪವರ್ ಬಾಕ್ಸ್ ಇಟ್ಟು ವಿದ್ಯುತ್ ಕನೆಕ್ಷನ್ ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ‌ ಮೊಬೈಲ್ ಜಾರ್ಜ್ ಮಾಡಲು ಪಾಳಿ ವ್ಯವಸ್ಥೆ ಮಾಡಲಾಗಿದೆ. ಮರಮಕಲ್ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಮೊಬೈಲ್ ಚಾರ್ಜಿಂಗ್‌ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ತಲೆದೊರಿದ್ದು, ಜನರೇಟರ್ ಮೂಲಕವೇ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎತ್ತಿನ ಬಂಡಿ, ಬೈಕ್ ಮೇಲೆ ದೂರದಿಂದ ಬಂದು ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬೇಗ ವಿದ್ಯುತ್ ದುರಸ್ತಿ ಮಾಡುವಂತೆ ಒತ್ತಾಯ ಬಂದಿದೆ.

ಇದನ್ನೂ ಓದಿ: Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಎಲ್ಲೆಲ್ಲಿ ಮಳೆ ಅಬ್ಬರ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾದರೆ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯ ನಿರೀಕ್ಷೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಆರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದರು. ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ, ಅದನ್ನು ಪ್ರಶ್ನಿಸಿದ್ದಕ್ಕೆ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅದರಲ್ಲಿ ಆರೋಪಿಸಿದ್ದರು. ಡೆತ್ ನೋಟ್‌ನಲ್ಲಿ, ʼಸಚಿವರ ಮೌಖಿಕ ಆದೇಶ ಮೇಲೆ ಹಣ ವರ್ಗಾವಣೆʼ ವಿಚಾರ ಪ್ರಸ್ತಾಪವಿದೆ.

VISTARANEWS.COM


on

self harming chandrashekar ವಾಲ್ಮೀಕಿ
Koo

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ (Self Harming) ಪ್ರಕರಣದಲ್ಲಿ ಮೂರು ಜನ ಅಧಿಕಾರಿಗಳ (Officers) ವಿರುದ್ಧ ಪ್ರಕರಣ (FIR) ದಾಖಲಿಸಲಾಗಿದೆ. ಚಂದ್ರಶೇಖರ್‌ ಬರೆದಿಟ್ಟಿರುವ ಡೆತ್‌ ನೋಟ್‌ನಲ್ಲಿ (Death note) ಒಬ್ಬರು ಸಚಿವರ (minister) ಉಲ್ಲೇಖ ಕಂಡುಬಂದಿದೆ.

ಶಿವಮೊಗ್ಗ (Shivamogga news) ನಗರದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ಅಧಿಕಾರಿ ಸುಚಿಸ್ಥನಾ ಎಂಬವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಿಗಮದಲ್ಲಿ ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವನ್ನು ಡೆತ್ ನೋಟ್‌ನಲ್ಲಿ ನೌಕರ ಮಾಡಿದ್ದಾರೆ.

ಚಂದ್ರಶೇಖರ್‌ ಅವರು ಆರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದರು. ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ, ಅದನ್ನು ಪ್ರಶ್ನಿಸಿದ್ದಕ್ಕೆ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅದರಲ್ಲಿ ಆರೋಪಿಸಿದ್ದರು. ಡೆತ್ ನೋಟ್‌ನಲ್ಲಿ, ʼಸಚಿವರ ಮೌಖಿಕ ಆದೇಶ ಮೇಲೆ ಹಣ ವರ್ಗಾವಣೆʼ ವಿಚಾರ ಪ್ರಸ್ತಾಪವಿದೆ. ಸಚಿವರ ಹೆಸರು ಬರೆಯದೇ ಮೌಖಿಕ ಆದೇಶ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದು, ಈ ಸಚಿವರು ಯಾರು ಎಂಬ ಪ್ರಶ್ನೆ ಹಾಗೇ ಉಳಿದಿದೆ.

85 ಕೋಟಿ ರೂ. ಹಣ ವರ್ಗಾವಣೆ ವಿಚಾರದಲ್ಲಿ ಚಂದ್ರಶೇಖರ್‌ ಭಯಗೊಂಡಿದ್ದರು ಎಂದು ಗೊತ್ತಾಗಿದೆ. ಹಣ ಯಾರ ಅಕೌಂಟ್‌ಗೆ ಕಳಿಸಿದ್ದಾರೆ ಎಂದು ತಿಳಿಯದೇ ಆತಂಕಗೊಂಡಿದ್ದರು. ಬ್ಯಾಂಕ್ ಅಧಿಕಾರಿಗೆ ಈ ಬಗ್ಗೆ ಮಾಹಿತಿ ಕೇಳಿದರೂ ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿರಲಿಲ್ಲ. 85 ಕೋಟಿ ವರ್ಗಾವಣೆ ಆಗಿದ್ದು ಎಲ್ಲಿಗೆ ಎಂಬುದನ್ನು ಬ್ಯಾಂಕ್‌ ಅಧಿಕಾರಿ ತಿಳಿಸಬೇಕಿದೆ. ಮೌಖಿಕ ಆದೇಶ ನೀಡಿದ ಸಚಿವರು ಯಾರು ಎಂಬುದನ್ನು ಚಂದ್ರಶೇಖರ್‌ ಅವರ ಮೇಲಧಿಕಾರಿಗಳು ತಿಳಿಸಬೇಕಿದೆ.

ಕಣ್ಣೀರಿಟ್ಟ ಚಂದ್ರಶೇಖರ್ ಪತ್ನಿ

“ನನ್ನ ಗಂಡನ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಾನು ಎರಡು ಮಕ್ಕಳನ್ನು ಇಟ್ಟುಕೊಂಡು ಹೇಗೆ ಬದುಕೋದು ಸರ್” ಎಂದು ಗಂಡನನ್ನು ನೆನೆದು ಚಂದ್ರಶೇಖರ್ ಪತ್ನಿ ಕವಿತಾ ಕಣ್ಣೀರಿಟ್ಟಿದ್ದಾರೆ. ʼʼನನ್ನ ಗಂಡನ ಸಾವಿಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಆಗಬೇಕು. ಮೂವರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರು ಒಂದು ರೂಪಾಯಿ ಲಂಚ ಪಡೆದಿಲ್ಲ. ನಾನು ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡ್ತಾ ಇದ್ದೀನಿ” ಎಂದು ಶಿವಮೊಗ್ಗದಲ್ಲಿ ಚಂದ್ರಶೇಖರ್ ಪತ್ನಿ ಕವಿತಾ ಹೇಳಿಕೆ ನೀಡಿದ್ದಾರೆ.

“ಸಚಿವರನ್ನು ವಜಾ ಮಾಡಿ”

“ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ. ನಾನು ಹೇಡಿಯಲ್ಲ ಎಂದು ಸಹ ಅವರು ಬರೆದಿದ್ದಾರೆ. ಸೂಪರಿಂಟೆಂಡೆಂಟ್ ಪರಿಸ್ಥಿತಿ ಹೀಗಾದರೆ ಸಾಮಾನ್ಯ ಅಧಿಕಾರಿಗಳ ಪರಿಸ್ಥಿತಿ ಏನು? ಕೋಟ್ಯಾಂತರ ರೂಪಾಯಿ ಹಣ ಸಚಿವರ ಮೌಖಿಕ ಆದೇಶದ ಮೂಲಕ ಹಣ ವರ್ಗಾವಣೆ ಆಗಿದೆ. ಸರ್ಕಾರದ ಅಧಿಕಾರಿಗಳಿಗೆ ಈ ಪರಿಸ್ಥಿತಿ ಬರುತ್ತೆ ಅಂದರೆ ನಾವು ಯಾವ ವಾತಾವರಣದಲ್ಲಿದ್ದೇವೆ? ಇಡೀ ಪ್ರಕರಣ ನೋಡಿದರೆ ಏನೂ ನಡೆದೇ ಇಲ್ಲ ಎಂಬಂತೆ ಸರ್ಕಾರ ಇದೆ. ಕುಟುಂಬಗಳು ಅನಾಥವಾಗುತ್ತಿವೆ” ಎಂದು ಶಿವಮೊಗ್ಗದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಟೀಕಿಸಿದ್ದಾರೆ.

ಸಿಎಂ ಕೂಡಲೇ ತಮ್ಮ ವಾಲ್ಮೀಕಿ ನಿಗಮದ ಮಂತ್ರಿಯನ್ನು ವಜಾಗೊಳಿಸಬೇಕು. ಈ ಘಟನೆಗಳನ್ನು ರಾಜ್ಯದ ಜನ ಗಮನಿಸುತ್ತಾರೆ. ಕೂಡಲೇ ಸಂಬಂಧ ಪಟ್ಟ ಮಂತ್ರಿಯ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ ಉಸ್ತುವಾರಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಸರ್ಕಾರಿ ನೌಕರನ ಸಾವಿಗೆ ಕಾರಣರಾದವರ ಹೆಸರನ್ನು ಸಹ ಎಫ್ಐಆರ್‌ನಲ್ಲಿ ಸೇರಿಸಬೇಕು. ಅಧಿಕಾರಿಗಳು ಹೆದರಿಕೊಂಡು ಕೆಲಸ ಮಾಡುವ ಪರಿಸ್ಥಿತಿ ಬಂದಿದೆ. ಆತ್ಮಹತ್ಯೆ ಆಗಿ ಎರಡು ದಿನ ಆದರೂ ಸರ್ಕಾರ ಸುಮ್ಮನಿರುವುದನ್ನು ನೋಡಿ ಅನುಮಾನ ಬರುತ್ತಿದೆ” ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Rain News : ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಪ್ರತ್ಯೇಕ ಕಡೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರ ಮತ್ತು ತುಮಕೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇನ್ನೂ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Constable Death : ಹುಬ್ಬಳ್ಳಿಯಲ್ಲಿ ರೈಲಿಗೆ ತಲೆ ಕೊಟ್ಟ ಕಾನ್ಸ್‌ಟೇಬಲ್‌; ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢ

ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ?

ಜಾಹೀರಾತುಗಳನ್ನು ನೋಡಿ ಮರುಳಾಗುವುದು, ಅದನ್ನೇ ಅನುಸರಿಸುವುದು ಹೊಸದೇನಲ್ಲ. ಉದಾಹರಣೆಗೆ ಹೇಳುವುದಾದರೆ, ಯಾವುದೋ ಟೂತ್‌ಪೇಸ್ಟ್‌ ಉಪಯೋಗಿಸಿದರೆ ಹಲ್ಲುಗಳೆಲ್ಲ ಫಳಫಳಿಸಿ, ಉಸಿರು ತಾಜಾ ಆಗುತ್ತದೆ ಎಂದಿದ್ದರೆ, ಅದು ಸತ್ಯ ಎಂದು ಭಾವಿಸಿಯೇ ನಾವು ಉಪಯೋಗಿಸುತ್ತೇವೆ. ಮೌತ್‌ವಾಷ್‌ ಸಹ ಅದೇ ಸಾಲಿಗೆ ಸೇರುವಂಥದ್ದು. ಯಾವುದೇ ಮನೆಯ ಬಾತ್‌ರೂಂಗಳಲ್ಲಿ ಅದೀಗ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಬಣ್ಣದ ಬಾಟಲಿಗಳ ಮೇಲಿನ ಮೋಹವನ್ನೋ ಅಥವಾ ಜಾಹೀರಾತುಗಳ ಭರವಸೆಯನ್ನೋ ಒಂದೆಡೆ ಇಟ್ಟು, ಮೌತ್‌ವಾಷ್‌ (Mouthwashes) ಬಳಕೆ ಇತಿ-ಮಿತಿಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ.

Mouthwashes

ದುರ್ಗಂಧ ದೂರ

ಬಾಯಿಯ ದುರ್ಗಂಧ ಎಷ್ಟೋ ಸಂದರ್ಭಗಳಲ್ಲಿ ಮುಜುಗರ ತರುವಂತಹದ್ದು. ಸಾಮಾಜಿಕ, ವೈಯಕ್ತಿಕ ಅಥವಾ ವೃತ್ತಿಯ ಸಂದರ್ಭಗಗಳಲ್ಲಿ ಇದನ್ನು ನಿಭಾಯಿಸುವುದು ಕಷ್ಟವಾಗಬಹುದು. ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು, ಜೀರ್ಣಾಂಗಗಳ ಆರೋಗ್ಯ ನಿಭಾಯಿಸುವುದು, ಆಗಾಗ ನೀರು ಕುಡಿಯುವುದು- ಇಂಥವೆಲ್ಲ ಬಾಯಿಯ ದುರ್ಗಂಧ ನಿವಾರಣೆಯಲ್ಲಿ ಮುಖ್ಯವಾದವು. ಜೊತೆಗೆ ಮೌತ್‌ವಾಷ್‌ ಬಳಕೆ ಸಹ ಈ ಸಮಸ್ಯೆಗೆ ಸಮರ್ಥ ಪರಿಹಾರವನ್ನು ಒದಗಿಸಬಲ್ಲದು.

ಒಸಡಿನ ಸಮಸ್ಯೆ ದೂರ

ಕೆಲವು ಮೌತ್‌ವಾಷ್‌ಗಳು ಬ್ಯಾಕ್ಟೀರಿಯ ವಿರೋಧಿ ಸಾಮರ್ಥ್ಯವನ್ನು ಹೊಂದಿರುತ್ತವೆ. ಇಂಥವುಗಳ ನಿಯಮಿತ ಬಳಕೆಯಿಂದ ಒಸಡಿನ ಸೋಂಕುಗಳನ್ನು ಮಟ್ಟ ಹಾಕಬಹುದು. ಪ್ಲೇಕ್‌ಗಳು ನಿರ್ಮಾಣವಾಗಿ ಒಸಡಿನ ಆರೋಗ್ಯಕ್ಕೆ ಸವಾಲೊಡ್ಡುವ ಸಾಧ್ಯತೆ ಇರುತ್ತದೆ. ಇವುಗಳಿಗೂ ಕೆಲವು ಮೌತ್‌ವಾಷ್‌ಗಳು ಪರಿಹಾರ ಒದಗಿಸಬಲ್ಲವು.

Woman using mouthwash after brushing

ಉಪಯೋಗ ಸುಲಭ

ಮನೆಯಲ್ಲಿದ್ದರೂ, ಪ್ರಯಾಣದಲ್ಲಿದ್ದರೂ ಇವುಗಳನ್ನು ಕೊಂಡೊಯ್ಯುವುದು ಮತ್ತು ಬಳಸುವುದು ಸುಲಭ. ಫ್ಲೋಸಿಂಗ್‌ನಂಥ ಕ್ರಮಗಳು ಸಮಯ ಬೇಡುತ್ತವೆ. ಮಾತ್ರವಲ್ಲ, ವಿಮಾನದಲ್ಲಿ, ಟ್ರೇನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಇದನ್ನು ಮಾಡಲೂ ಸಾಧ್ಯವಿಲ್ಲ. ಆದರೆ ಮೌತ್‌ವಾಷ್‌ ಬಳಕೆಗೆ ಅಂಥ ಯಾವುದೇ ಅಡೆ-ತಡೆಗಳಿಲ್ಲ; ಇದರ ಬಳಕೆ ಅತಿ ಸುಲಭ.

ಹೆಚ್ಚುವರಿ ರಕ್ಷಣೆ

ಫ್ಲೂರೈಡ್‌ ಹೊಂದಿರುವ ಮೌತ್‌ವಾಷ್‌ಗಳು ಬಾಯಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚುವರಿ ರಕ್ಷಣೆಯನ್ನು ಒದಗಿಸುತ್ತವೆ. ದಂತಗಳ ಎನಾಮಲ್‌ ರಕ್ಷಣೆ ಮಾಡಿ, ಒಡಸುಗಳನ್ನು ಸುರಕ್ಷಿತವಾಗಿ ಇರಿಸಿ, ಹಲ್ಲುಗಳ ಬೇರನ್ನು ಭದ್ರ ಮಾಡುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ, ಹಲ್ಲುಗಳು ಹುಳುಕಾಗಿ, ಕುಳಿಯಾಗದಂತೆ ರಕ್ಷಣೆ ನೀಡುತ್ತವೆ. ಒಟ್ಟಾರೆಯಾಗಿ ಬಾಯಿಯ ಆರೋಗ್ಯಕ್ಕೆ ಇದೊಂದು ಒಳ್ಳೆಯ ಆಯ್ಕೆ.

Woman with mouthwash

ಮಿತಿಗಳಿಲ್ಲವೇ?

ಹಾಗೆಂದು ಮೌತ್‌ವಾಷ್‌ ಬಳಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲವೇ? ಅದನ್ನು ಬಳಸಿದಾಗ ಆಗುವುದೆಲ್ಲ ಒಳ್ಳೆಯದು ಎಂದು ತೀರ್ಮಾನಿಸಲು ಸಾಧ್ಯವೇ? ಎಂದು ಕೇಳಿದರೆ, ಹಾಗೇನಿಲ್ಲ. ಅದರಲ್ಲೂ ಸಮಸ್ಯೆಗಳು ಇಲ್ಲದಿಲ್ಲ. ಬಾಯಿಯ ಸರ್ವರೋಗಗಳಿಗೆ ಇದೊಂದೇ ಮದ್ದು ಎಂದು ಖಂಡಿತಕ್ಕೂ ಭಾವಿಸುವಂತಿಲ್ಲ. ಹಾಗಾದರೆ ಮೌತ್‌ವಾಷ್‌ ಬಳಸುವುದರಲ್ಲಿ ಇರುವಂಥ ಸಮಸ್ಯೆಗಳೇನು? ಯಾವುದರ ಬಗ್ಗೆ ಗಮನ ನೀಡಬೇಕು ಇದನ್ನು ಬಳಸುವಾಗ?

ಆಲ್ಕೋಹಾಲ್‌ ಕಿರಿಕಿರಿ

ಬಹಳಷ್ಟು ಮೌತ್‌ವಾಷ್‌ಗಳು ಆಲ್ಕೋಹಾಲ್‌ ಅಂಶವನ್ನು ಹೊಂದಿರುತ್ತವೆ. ಇದು ಬಾಯಿ ಒಣಗಿದಂತೆ ಮಾಡಿ, ಕಿರಿಕಿರಿ ಉಂಟುಮಾಡಬಹುದು. ದೀರ್ಘಕಾಲ ಇಂಥ ಮೌತ್‌ವಾಷ್‌ ಬಳಸುವುದರಿಂದ, ಈ ಸಮಸ್ಯೆಗಳು ಹೆಚ್ಚುತ್ತವೆ. ಹಾಗಾಗಿ ಸೂಕ್ಷ್ಮ ಒಸಡುಗಳು ಇರುವವರಿಗೆ ಮತ್ತು ಗರ್ಭಿಣಿಯರಿಗೆ ಆಲ್ಕೋಹಾಲ್‌ ಇಲ್ಲದಂಥ ಮೌತ್‌ವಾಷ್‌ ಬಳಕೆಯನ್ನು ವೈದ್ಯರು ಶಿಫಾರಸು ಮಾಡುತ್ತಾರೆ.

Female with mouthwash

ಸಮಸ್ಯೆ ತಿಳಿಯದು

ಬಾಯಿಯ ದುರ್ಗಂಧದ ಸಮಸ್ಯೆಗಳನ್ನು ಮೌತ್‌ವಾಷ್‌ಗಳು ತಡೆಯುವುದು ಹೌದಾದರೂ ಅದು ತಾತ್ಕಾಲಿಕ. ಬಾಯಿಯ ದುರ್ಗಂಧಕ್ಕೆ ಮೂಲ ಕಾರಣವೇನು ಎಂಬುದನ್ನು ಹುಡುಕಿ, ಅದನ್ನು ಪರಿಹರಿಸಿಕೊಳ್ಳುವುದು ಮುಖ್ಯ. ಹಲ್ಲುಗಳು ಹುಳುಕಾಗಿವೆಯೇ ಅಥವಾ ಜೀರ್ಣಾಂಗಗಳ ಸಮಸ್ಯೆಯಿಂದ ಹೀಗಾಗುತ್ತಿದೆಯೇ- ಅಂತೂ ಕಾರಣವೇನು ಎಂಬುದನ್ನು ಪತ್ತೆ ಮಾಡುವುದು ಅಗತ್ಯ. ಹಾಗಾಗಿ ಸಮಸ್ಯೆಗಳನ್ನು ಮೌತ್‌ವಾಷ್‌ ತಾತ್ಕಾಲಿಕವಾಗಿ ಮಾತ್ರವೇ ನಿವಾರಣೆ ಮಾಡಬಲ್ಲದು.

ಬಿಡುವಂತಿಲ್ಲ

ಮೌತ್‌ವಾಷ್‌ಗಳ ಬಳಕೆಯ ನೆವದಿಂದ ನಿತ್ಯದ ಸ್ವಚ್ಛತೆಯ ಅಭ್ಯಾಸಗಳನ್ನು ಬಿಡುವಂತಿಲ್ಲ. ಅಂದರೆ ನಿಯಮಿತವಾಗಿ ಬ್ರಷ್‌ ಮಾಡುವುದು, ಫ್ಲೋಸ್‌ ಮಾಡುವುದು, ಊಟ-ತಿಂಡಿಯ ನಂತರ ಬಾಯಿಗೆ ನೀರು ಹಾಕಿ ಮುಕ್ಕಳಿಸುವುದು- ಇವೆಲ್ಲ ಅಗತ್ಯ ಅಭ್ಯಾಸಗಳು. ಎಂದೋ ಪ್ರಯಾಣದ ಸಂದರ್ಭದಲ್ಲಿ ಬ್ರಷ್‌ ಮಾಡುವುದಕ್ಕೆ ಅನುಕೂಲವಿಲ್ಲ ಎನ್ನುವಾಗ ಮಾತ್ರವೇ ಮೌತ್‌ವಾಷ್‌ ಬಳಕೆಯನ್ನು ಪರ್ಯಾಯ ಆಗಿಸಿಕೊಳ್ಳಬಹುದೇ ಹೊರತು, ಸದಾ ಅಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drowns in Farm Pond: ಜಾನುವಾರು ಮೇಯಿಸುತ್ತಿದ್ದಾಗ ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

Drowns in Farm Pond: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು-ತಲಕಾಲಕೊಪ್ಪ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಜಾನುವಾರು ಮೇಯಿಸಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ.

VISTARANEWS.COM


on

Drowns in Farm Pond
Koo

ಶಿವಮೊಗ್ಗ: ಜಾನುವಾರು ಮೇಯಿಸಲು ತೆರಳಿದ್ದ ಬಾಲಕ, ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ (Drowns in Farm Pond) ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು-ತಲಕಾಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಾಲೆ ರಜೆ ಇರುವ ಹಿನ್ನೆಲೆ ಜಾನುವಾರು ಮೇಯಿಸಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಕೊನೆಯುಸಿರೆಳೆದಿದ್ದಾನೆ.

ಸಾತ್ವಿಕ್ (14) ಮೃತ ಬಾಲಕ. ಶಾಲೆ ರಜೆ ಇದ್ದ ಹಿನ್ನೆಲೆಯಲ್ಲಿ ಜಾನುವಾರು ಮೇಯಿಸಲು ಸಾತ್ವಿಕ್ ತೆರಳಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಬಾಲಕನ ಮೃತದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

ಬರ್ತ್ ಡೇ ಆಚರಣೆ ವಿಚಾರಕ್ಕೆ ಕಿರಿಕ್; ಇಬ್ಬರು ಯುವಕರಿಗೆ ಚಾಕು ಇರಿತ

ಶಿವಮೊಗ್ಗ: ಬರ್ತ್ ಡೇ ಆಚರಣೆ ವಿಚಾರಕ್ಕೆ ಯುವಕರ‌ ಮಧ್ಯೆ ಕಿರಿಕ್ ನಡೆದು, ಇಬ್ಬರಿಗೆ ಚಾಕು ಇರಿದಿರುವುದು ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ ನಡೆದಿದೆ. ಹುಟ್ಟು ಹಬ್ಬ ಆಚರಿಸಿಕೊಳ್ಳುವಾಗ ಪಟಾಕಿ ಹೊಡೆಯುವುದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ನಡೆದಿದೆ.

ನಿರಂಜನ್ ಹಾಗೂ ಗೌತಮ್ ಗಾಯಾಳುಗಳು. ಅಭಿ ಅಲಿಯಾಸ್ ಅಭಿಷೇಕ್ ಆರೋಪಿಯಾಗಿದ್ದಾನೆ. ಹುಟ್ಟು ಹಬ್ಬ ಆಚರಿಸಿಕೊಳ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಯುವಕರ ಮಧ್ಯೆ ಗಲಾಟೆ ಶುರುವಾಗಿ. ಈ ವೇಳೆ ನಿರಂಜನ್ ಹಾಗೂ ಗಲಾಟೆ ಬಿಡಿಸಲು ಬಂದ ಗೌತಮ್‌ಗೆ ಆರೋಪಿ ಅಭಿ ಚಾಕು ಇರಿದಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಪ್ರಕರಣ ನಡೆದಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕೆರೆಯಲ್ಲಿ ಈಜಲು ಹೋದ ಬಾಲಕ ಸಾವು

Road Accident

ಚಿಕ್ಕಮಗಳೂರು/ಗದಗ: ಕೆರೆಯಲ್ಲಿ ಈಜಲು ಹೋದ (Drowned in water) ಬಾಲಕನೊರ್ವ ಮೃತಪಟ್ಟಿದ್ದಾನೆ. ಶಶಾಂಕ್ ಮೃತ ದುರ್ದೈವಿ. ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ಘಟನೆ (Accident News) ನಡೆದಿದೆ.

ಚಿಕ್ಕಮಗಳೂರು ನಗರದ ಗಾಂಧಿನಗರ ಬಡಾವಣೆಯ ಶಶಾಂಕ್‌ 8ನೇ ತರಗತಿಯಲ್ಲಿ ಓದುತ್ತಿದ್ದ. ತನ್ನ ನಾಲ್ವರು ಗೆಳೆಯರೊಂದಿಗೆ ಈಜಲು ಕೆರೆಗೆ ಬಂದಿದ್ದ. ಈಜಲು ಜಿಗಿಯಲು ಹೋದಾಗ ಕೆರೆಯಲ್ಲಿ ಕಾಲು ಹೂತುಕೊಂಡಿದೆ. ಕೆರೆಯಿಂದ ಮೇಲೆ ಬಾರಲು ಆಗದೆ ಶಶಾಂಕ್‌ (13) ದುರ್ಮರಣ ಹೊಂದಿದ್ದಾನೆ.

ಉಳಿದ ಬಾಲಕರು ಪಾಯದಿಂದ ಪಾರಾಗಿದ್ದು, ಕೂಡಲೇ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಕೆರೆಯಿಂದ ವಿದ್ಯಾರ್ಥಿ ಶವವನ್ನು ಮೇಲೆತ್ತಿದ್ದಾರೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

ಬಸ್‌-ಬೈಕ್‌ ಡಿಕ್ಕಿಯಾಗಿ ಇಬ್ಬರು ರೈತರ ದುರ್ಮರಣ

ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ರೈತರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ಬಳಿ ಘಟನೆ ನಡೆದಿದೆ.

ಬಿತ್ತನೆ ಬೀಜ ಖರೀದಿ ಮಾಡಿ ಬೈಕ್‌ನಲ್ಲಿ ಊರಿಗೆ ಹೊರಟ್ಟಿದ್ದಾಗ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿತ್ತು. ಮುಂಡರಗಿ ಕಡೆಯಿಂದ ಬೈಕ್ ಸವಾರರು ಹಳ್ಳಿಗುಡಿಗೆ ಹೊರಟ್ಟಿದ್ದರು. ಹುಬ್ಬಳ್ಳಿ-ವಿಜಯನಗರ ಹೆದ್ದಾರಿ ಕ್ರಾಸಿಂಗ್ ಮಾಡಿ ಹಳ್ಳಿಗುಡಿಗೆ ಹೊರಟ್ಟಿದ್ದಾಗ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಡಿಕ್ಕಿ ರಭಸಕ್ಕೆ ಬೈಕ್‌ ಸಮೇತ ಬಸ್‌ನಡಿ ಸಿಲುಕಿದ ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರ ಗ್ರಾಮದ ಮಾರುತಿ ಯಾಟಿ ಮೃತಪಟ್ಟಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
Credit Card Safety Tips
ಮನಿ ಗೈಡ್3 mins ago

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Karnataka weather Forecast
ಮಳೆ8 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Child Trafficking Racket
ಪ್ರಮುಖ ಸುದ್ದಿ21 mins ago

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Prajwal Revanna Case
ಕರ್ನಾಟಕ28 mins ago

Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

Summer Dress Fashion
ಫ್ಯಾಷನ್53 mins ago

Summer Dress Fashion: ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

Harish Poonja
ಕರ್ನಾಟಕ1 hour ago

Harish Poonja: ಪೊಲೀಸರಿಗೆ ಧಮ್ಕಿ ಪ್ರಕರಣ; ಶಾಸಕ ಹರೀಶ್‌ ಪೂಂಜಾ, 40 ಮಂದಿ ವಿರುದ್ಧ ಚಾರ್ಜ್‌ಶೀಟ್‌

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

Fraud Case in kalaburagi
ಕಲಬುರಗಿ1 hour ago

Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

Money Guide
ಮನಿ-ಗೈಡ್2 hours ago

Money Guide: ಬ್ಯಾಂಕ್‌ ಖಾತೆ, ಮ್ಯೂಚುವಲ್‌ ಫಂಡ್‌ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು9 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌