Ramesh Aravind: ವಿಭಿನ್ನ ಅವತಾರದಲ್ಲಿ ಬರಲಿದ್ದಾರೆ ರಮೇಶ್‌ ಅರವಿಂದ್‌; ಸೆಟ್ಟೇರಲಿದೆ ʻದೈಜಿʼ! - Vistara News

South Cinema

Ramesh Aravind: ವಿಭಿನ್ನ ಅವತಾರದಲ್ಲಿ ಬರಲಿದ್ದಾರೆ ರಮೇಶ್‌ ಅರವಿಂದ್‌; ಸೆಟ್ಟೇರಲಿದೆ ʻದೈಜಿʼ!

Ramesh Aravind: ಚಿತ್ರದ ಶೀರ್ಶಿಕೆ ‘ದೈಜಿ’ಗೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ ದೈಜಿ ಎಂದರೆ ರಕ್ತ ಸಂಬಂಧ. ಜಪಾನೀ ಭಾಷೆಯಲ್ಲಿ ದೈಜಿ ಎಂದರೆ ಬಹಳ ಕಾಳಜಿ ವಹಿಸಬೇಕಾದ ವಿಚಾರ ಎಂದು. ಹೀಗೆ ಹಲವು ಅರ್ಥಗಳು.

VISTARANEWS.COM


on

Ramesh Aravind
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಾಜಿ ಸುರತ್ಕಲ್ ಭಾಗ 1 ಮತ್ತು 2ರ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ (Ramesh Aravind೦ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ‘ದೈಜಿ’ (daiji the movie). ಈ ಚಿತ್ರವನ್ನು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುಂಚೆ ಕಾನ್‌ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ತೆರೆ ಕಂಡ ಕಿರು ಚಿತ್ರ ʻಸುಳ್ಳೇ ಸತ್ಯʼ, ಪವನ್ ಕುಮಾರ್‌ ಅವರ ʻಲೂಸಿಯಾʼ, ಡಾಲಿ ಧನಂಜಯ್ ಅವರು ನಟಿಸಿದ ‘ಬದ್ಮಾಶ್’ ಇದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದ್ದವು.

ಚಿತ್ರದ ಶೀರ್ಶಿಕೆ ‘ದೈಜಿ’ಗೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ ದೈಜಿ ಎಂದರೆ ರಕ್ತ ಸಂಬಂಧ. ಜಪಾನಿ ಭಾಷೆಯಲ್ಲಿ ದೈಜಿ ಎಂದರೆ ಬಹಳ ಕಾಳಜಿ ವಹಿಸಬೇಕಾದ ವಿಚಾರ ಎಂದು. ಹೀಗೆ ಹಲವು ಅರ್ಥಗಳು.

ಚಿತ್ರಕ್ಕೆ ಒಂದು ಸಾರ್ವತ್ರಿಕವಾದ ನೆಲೆ ಕಂಡುಕೊಳ್ಳುವ ಸಾಮರ್ಥ್ಯವಿದೆ ಎಂಬುದು ಚಿತ್ರ ತಂಡದ ಬಲವಾದ ನಂಬಿಕೆ. ಚಿತ್ರವು ಮಿಸ್ಟರಿ ಅಥವಾ ಹಾರರ್ ಜಾನರ್‌ಗೆ ಬರುತ್ತದೆ. ಚಿತ್ರಕಥೆಯನ್ನು ಶಿವಾಜಿ ಸುರತ್ಕಲ್ ಬರೆದ ಅಭಿಜಿತ್ ವೈ ಆರ್ ಮತ್ತು ಆಕಾಶ್ ಶ್ರೀವತ್ಸ ಅವರು ನಿರ್ಮಾಪಕ ರವಿ ಕಶ್ಯಪ್ ವಿವರಿಸಿದ ನೈಜ ಘಟನೆಗಳನ್ನು ಆಧರಿಸಿ ಬರೆದಿದ್ದಾರೆ.

ʻʻಚಿತ್ರದ ನಾಯಕಿಗೆ ಆಗಲೇ ಹುಡುಕಾಟ ಪ್ರಾರಂಭವಾಗಿದೆ. ಚಿತ್ರೀಕರಣ ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಚಿತ್ರವು ಸಂಪೂರ್ಣವಾಗಿ ಅಮೆರಿಕದಲ್ಲಿ ಚಿತ್ರೀಕರಣವಾಗಲಿದೆ. ಇತ್ತೀಚೆಗಷ್ಟೇ 25 ವರ್ಷಗಳ ಸಂಭ್ರಮ ಆಚರಿಸಿದ ಅಮೆರಿಕ ಅಮೆರಿಕ ಚಿತ್ರದಂತೆಯೇ ಇದೂ ಕೂಡ ಬಹುತೇಕ ಅಮೆರಿಕದಲ್ಲಿಯೇ ನಡೆಯುವ ಕಥೆʼʼಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿತು.

ಇದನ್ನೂ ಓದಿ: Ramesh Aravind | ಪ್ರೀತಿಯಿಂದ ರಮೇಶ್‌ ಬರೆದ ʼಯಶಸ್ಸಿನ ಸರಳ ಸೂತ್ರʼಗಳ ಬಿಡುಗಡೆ

ಇದು ಬಹುಮುಖ ಪ್ರತಿಭೆಯ ಹಾಗೂ ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲೂ ನಟಿಸಿ ಸೈ ಎನಿಸಿಕೊಂಡ ನಟ ರಮೇಶ್ ಅರವಿಂದ ಅವರ 106ನೇ ಚಿತ್ರ. ತನ್ನ ಸಿನಿ ಜೀವನದಲ್ಲಿ ವಿಭಿನ್ನ ಪಾತ್ರಗಳಲ್ಲಿ ಮಿಂಚಿದ ರಮೇಶ್ ಅವರ ಸ್ಮರಣೀಯ ಚಿತ್ರಗಳೆಂದರೆ ಅಮೃತವರ್ಶಿಣಿ, ಅಮೆರಿಕ ಅಮೆರಿಕ, ರಾಮ ಶಾಮ ಭಾಮ, ಶಿವಾಜಿ ಸುರತ್ಕಲ್… ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.

ತಮಿಳಿನಲ್ಲಿ ಡ್ಯೂಯೆಟ್, ಸತಿ ಲೀಲಾವತಿ, ಪಂಚತಂತಿರಂ, ಉತ್ತಮ ವಿಲ್ಲಿನ್, ತೆಲುಗು ಚಿತ್ರರಂಗದಲ್ಲಿ ಲಿಟಲ್ ಸೋಲ್ಜರ್ಸ್, ಮಲಯಾಳಂ ನಲ್ಲಿ ಅವನ್ ಅನಂತಪದ್ಮನಾಭನ್.. ಹೀಗೆ ಬಹು ಭಾಷಾ ತಾರೆಯಾದ ರಮೇಶ್ ಅರವಿಂದ್ ಅವರು ದೈಜಿ ಚಿತ್ರದಲ್ಲಿ ತೀರಾ ವಿಭಿನ್ನ ಪಾತ್ರದಲ್ಲಿ, ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

South Cinema

Allu Arjun: ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ಅಲ್ಲು ಅರ್ಜುನ್‌ ದಂಪತಿ! ಫ್ಯಾನ್ಸ್‌ಗೆ ಅಚ್ಚರಿ

Allu Arjun: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

VISTARANEWS.COM


on

Allu Arjun Sneha spotted at a dhaba
Koo

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಮತ್ತು ಪತ್ನಿ ಸ್ನೇಹಾ ರೆಡ್ಡಿ ಅವರು ರಸ್ತೆ ಬದಿಯ ಡಾಬಾದಲ್ಲಿ ಊಟ ಮಾಡಿರುವ ಫೋಟೊ ಇದೀಗ ವೈರಲ್‌ ಆಗಿದೆ. ಡಾಬಾದಲ್ಲಿ ಊಟ ಮಾಡುತ್ತಿರುವ ಫೋಟೊ ಕಂಡು ದಂಪತಿಯ ‘ಸರಳತೆ’ಗೆ ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ. ಜೋಡಿ ಯಾವ ಡಾಬಾದಲ್ಲಿ ಊಟ ಮಾಡಿದೆ ಎಂದು ತಿಳಿದು ಬಂದಿಲ್ಲ.

ಅಭಿಮಾನಿಯೊಬ್ಬರು ಕ್ಲಿಕ್ಕಿಸಿದ ಚಿತ್ರದಲ್ಲಿ ಅಲ್ಲು ಅವರು ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ಕಾಣಬಹುದು, ಸ್ನೇಹಾ ಊಟ ಮಾಡುತ್ತಿದ್ದಾರೆ. ʻʻರಸ್ತೆ ಬದಿಯ ಡಾಬಾದಲ್ಲಿ ಜೋಡಿ! ಸರಳತೆಯ ಮನುಷ್ಯ.” ಎಂದು ಬರೆದುಕೊಂಡಿದ್ದಾರೆ ಒಬ್ಬ ಅಭಿಮಾನಿ. ಇನ್ನೊಬ್ಬರು ʻʻಪುಷ್ಪ ಅಂತಹ ಸೂಪರ್‌ ಹಿಟ್‌ ಸಿನಿಮಾ ಮಾಡಿದ್ದರೂ ಸಿಂಪಲ್‌ ಆಗಿ ಇದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: ರಾಮನಗರದಲ್ಲಿ ಯುವಕನ ಕತ್ತು ಕೊಯ್ದು ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಕೊಪ್ಪಳದಲ್ಲಿ ಸಿಲಿಂಡರ್‌ ಸ್ಫೋಟದಿಂದ ಹೊತ್ತಿ ಉರಿದ ಡಾಬಾ

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!
ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಸ್ಯಾಂಡಲ್ ವುಡ್

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Meghana Raj: ಮೇಘನಾ (Meghana Raj) ಅಮ್ಮ ಪ್ರಮೀಳಾ ಜೋಶಾಯ್ ಅವರಿಗೆ ಬಿಗ್‌ ಸರ್‌ಪ್ರೈಸ್‌ ನೀಡಿದ್ದಾರೆ. ಅಮ್ಮಂದಿರ ದಿನ ಹಾಗೂ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಚಿನ್ನದ ಓಲೆ ಗಿಫ್ಟ್‌ ಮಾಡಿದ್ದಾರೆ. ಓಲೆ ಕಂಡೊಡನೆ ಭಾವುಕರಾಗಿದ್ದಾರೆ ಪ್ರಮೀಳಾ.

VISTARANEWS.COM


on

Meghana Raj Mother Day Gift Shopping to mother
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ (Actress Meghana Raj) ಹೊಸ ಯುಟ್ಯೂಬ್‌ ಚಾನೆಲ್ ಶುರು ಮಾಡಿರುವುದು ಗೊತ್ತೇ ಇದೆ. ಪುತ್ರ ರಾಯನ್ ರಾಜ್ ಸರ್ಜಾ, ಪ್ರಮೀಳಾ ಜೋಶಾಯ್ ಹಾಗೂ ಸುಂದರ್ ರಾಜ್ ಜತೆ ಹಲವಾರು ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದಾರೆ. ಇದೀಗ ಮೇಘನಾ (Meghana Raj) ಅಮ್ಮ ಪ್ರಮೀಳಾ ಜೋಶಾಯ್ ಅವರಿಗೆ ಬಿಗ್‌ ಸರ್‌ಪ್ರೈಸ್‌ ನೀಡಿದ್ದಾರೆ. ಅಮ್ಮಂದಿರ ದಿನ ಹಾಗೂ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಚಿನ್ನದ ಓಲೆ ಗಿಫ್ಟ್‌ ಮಾಡಿದ್ದಾರೆ. ಓಲೆ ಕಂಡೊಡನೆ ಭಾವುಕರಾಗಿದ್ದಾರೆ ಪ್ರಮೀಳಾ.

ಯುಟ್ಯೂಬ್‌ನಲ್ಲಿ ಮೇಘನಾ ರಾಜ್‌ ಅವರು ಈ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ನನ್ನ ತಾಯಿ ಹೆಚ್ಚಾಗಿ ಬಂಗಾರದ ಉಂಗರವನ್ನು ಹಾಕಿಕೊಳ್ಳುತ್ತಾರೆ. ಆದರೆ ಈ ಬಾರಿ ನಾನು ಚಿನ್ನದ ಓಲೆ ಅವರಿಗೆ ಗಿಫ್ಟ್‌ ನೀಡಬೇಕು ಅಂದುಕೊಂಡಿದ್ದೆ. ಮದರ್ಸ್‌ ಡೇಗೆ ಗಿಫ್ಟ್‌ ಕೊಡುವಾಗ ಹೆಣ್ಣು ಮಕ್ಕಳು ಹೇಗೆ ಲೆಕ್ಕಾ ಮಾಡುತ್ತಾರೆ ಅಂದ್ರೆ ಅಮ್ಮನಿಗೆ ಅದು ಕೊಟ್ಟರೆ ನಾವೂ ಬಳಸಬಹುದು ಅನ್ನೋ ಮಲ್ಟಿಪರ್ಪಸ್‌ ಆಲೋಚನೆಯಲ್ಲಿ ಕೊಡಿಸುತ್ತಿರುವೆʼʼಎಂದು ಗಿಫ್ಟ್‌ ಬಾಕ್ಸ್‌ ಅಮ್ಮನ ಕೈಗೆ ಕೊಟ್ಟರು ಮೇಘನಾ. ಬಾಕ್ಸ್‌ ನೋಡಿ ಗೆಸ್‌ ಮಾಡಲು ಶುರು ಮಾಡುವ ಪ್ರಮೀಳಾ ಜೋಷಾಯಿ ಇದು ಲಿಪ್‌ಸ್ಟಿಕ್‌ ಇದು ರಿಂಗ್ ಇದು ಕಾಲಿ ಡಬ್ಬ ಎಂದು ಗೆಸ್‌ ಮಾಡುತ್ತಾರೆ. ಆಮೇಲೆ ಚಿನ್ನದ ಅಂಗಡಿ ಹೆಸರು ಓದಿ ಮೌನಿಯಾಗಿ ಬಿಡುತ್ತಾರೆ.

ಇದನ್ನೂ ಓದಿ: Meghana Raj: ಚಿರು ಕೊನೆ ಚಿತ್ರ ಅಲ್ಲ ಎಂದ ಮೇಘನಾ ರಾಜ್‌; ಧ್ರುವ ಸರ್ಜಾ ಭಾವುಕ ಮಾತು!

ಕಿವಿ ಓಲೆ ನೋಡಿದ ಕೂಡಲೇ ಭಾವುಕರಾದರು ಪ್ರಮೀಳಾ. ಜತೆಗೆ ಮಗಳಿಗೆ ನಾನೇ ಈ ವರ್ಷ ಏನು ಗಿಫ್ಟ್‌ ಕೊಟ್ಟಿಲ್ಲ ಎಂದು ಭಾವುಕರಾದರು. ಕೆಲವು ದಿನಗಳ ಹಿಂದೆ ಮೇಘನಾ ರಾಜ್‌ ವಕೇಶನ್‌ ಮೂಡ್‌ನಲ್ಲಿರುವ ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದರು ಮೇಘನಾ ರಾಜ್‌ ಯುಟ್ಯೂಬ್‌ನಲ್ಲಿ ಈಗೀಗ ಸಖತ್‌ ಬ್ಯುಸಿಯಾಗಿದ್ದಾರೆ.

ಮೇಘನಾ ರಾಜ್​ ಬದುಕಲ್ಲಿ 2020 ಕೆಟ್ಟವರ್ಷ. ಅವರು ಐದು ತಿಂಗಳ ಗರ್ಭಿಣಿಯಾಗಿದ್ದಾಗಲೇ, ಪತಿ ಚಿರಂಜೀವಿ ಸರ್ಜಾರನ್ನು ಕಳೆದು ಕೊಂಡರು. 2020ರ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟಿದ್ದರು. ಅದಾದ ಬಳಿಕ ಮಗ ರಾಯನ್​ ಹುಟ್ಟಿದ. ಬಳಿಕ ʻತತ್ಸಮ ತದ್ಭವʼ ಸಿನಿಮಾ ಮೂಲಕ ತೆರೆಗೆ ಮತ್ತೆ ಬಂದರು ನಟಿ. ತತ್ಸಮ ತದ್ಭವ ಸಿನಿಮಾಕ್ಕೆ ಪನ್ನಗ ಭರಣ ಹಾಗೂ ಸ್ಫೂರ್ತಿ ಅನಿಲ್‌ ಅವರು ಬಂಡವಾಳ ಸುರಿದಿದ್ದಾರೆ. ವಿಶಾಲ್‌ ಆತ್ರೇಯ ಅವರು ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸಿನಿಮಾಕ್ಕೆ ವಾಸುಕಿ ವೈಭವ್‌ ಅವರ ಸಂಗೀತ, ಶ್ರೀನಿವಾಸ್‌ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಅವರ ಸಂಕಲನವಿದೆ.

Continue Reading

South Cinema

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

 L2 Empuraan: ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು.

VISTARANEWS.COM


on

L2 Empuraan first look poster shared by Prithviraj Sukumaran
Koo

ಬೆಂಗಳೂರು: ಇಂದು ಮಾಲಿವುಡ್‌ ಸ್ಟಾರ್‌ ಮೋಹನ್‌ಲಾಲ್ (Mohanlal as Khureshi Abraam ) ಅವರ 64ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ನಟ ಪೃಥ್ವಿರಾಜ್ ಸುಕುಮಾರನ್ ʻL2 ಎಂಪುರಾನ್‌ʼ (L2 Empuraan) ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೃಥ್ವಿರಾಜ್ ಅವರ ನಿರ್ದೇಶನದಲ್ಲಿ, ಮೋಹನ್‌ಲಾಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ 2019ರ ಬ್ಲಾಕ್‌ಬಸ್ಟರ್ ಚಲನಚಿತ್ರ ʻಲೂಸಿಫರ್‌ʼನ ಮುಂದುವರಿದ ಭಾಗವಾಗಿದೆ.

ʻL2 ಎಂಪುರಾನ್‌ʼಗಾಗಿ ಮೋಹನ್‌ಲಾಲ್‌ನ ಜಾಕೆಟ್ ಮತ್ತು ಪ್ಯಾಂಟ್‌ ಧರಿಸಿದ್ದಾರೆ. ಭದ್ರತಾ ಸಿಬ್ಬಂದಿಗಳ ನಡುವೆ ಖಡಕ್‌ ಆಗಿ ನಡೆದುಕೊಂಡು ಹೋಗುತ್ತಿರುವ ಪೋಸ್ಟರ್‌ ಇದು. ಲೂಸಿಫರ್ ಪೃಥ್ವಿರಾಜ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿತ್ತು. ಅದಾದ ಬಳಿಕ ʻಬ್ರೋ ಡ್ಯಾಡಿʼ ಸಿನಿಮಾವನ್ನು ಒಟ್ಟಿಗೆ ಮಾಡಿದ್ದರು. ಮತ್ತೆ ಈ ಜೋಡಿ L2E-ಎಂಪುರಾನ್‌ ಮೂಲಕ ಒಂದಾಗಿದೆ.

ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು. ಮೋಹನ್‌ಲಾಲ್ ಅವರಲ್ಲದೆ, ಚಿತ್ರದಲ್ಲಿ ವಿವೇಕ್ ಒಬೆರಾಯ್, ಮಂಜು ವಾರಿಯರ್, ಟೊವಿನೋ ಥಾಮಸ್, ಪೃಥ್ವಿರಾಜ್ ಸುಕುಮಾರನ್, ಇಂದ್ರಜಿತ್ ಸುಕುಮಾರನ್, ಸಾನಿಯಾ ಐಯಪ್ಪನ್, ಸಾಯಿ ಕುಮಾರ್, ಜಾನ್ ವಿಜಯ್, ಸಚಿನ್ ಖೇಡೇಕರ್, ಬೈಜು ಸಂತೋಷ್, ಕಲಾಭವನ್ ಶಾಜೋನ್, ಫಾಜಿಲ್, ಸುರೇಶ್ ಚಂದ್ರ ಮೆನನ್ ಮತ್ತು ನೈಲಾ ಉಷಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೋಹನ್ ಲಾಲ್ ಕೊನೆಯದಾಗಿ ಕಾಣಿಸಿಕೊಂಡದ್ದು ಫ್ಯಾಂಟಸಿ ನಾಟಕ ಮಲೈಕೊಟ್ಟೈ ವಾಲಿಬನ್ (2024), ಇದನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದಾರೆ.

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading

ಕಾಲಿವುಡ್

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Actress Nayanthara: ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ ನಯನತಾರಾ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು. ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Actress Nayanthara twin sons on auto ride
Koo

ಬೆಂಗಳೂರು: ನಯನತಾರಾ (Actress Nayanthara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗ್ ಅವರನ್ನು ಚೆನ್ನೈನಲ್ಲಿ ಆಟೋ ಸವಾರಿ ಮಾಡಿಸಿದ್ದಾರೆ. ಮೇ 20ರಂದು ‘ನಯನತಾರಾ’ ವೀಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು.

ಕೆಲವು ದಿನಗಳ ಹಿಂದೆ ಚೆನ್ನೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ನಯನತಾರಾ ಈ ಅವಳಿ ಮಕ್ಕಳ ಪೂರ್ಣ ಹೆಸರನ್ನು ಬಹಿರಂಗಪಡಿಸಿದ್ದರು. ಈವೆಂಟ್‌ನಲ್ಲಿ ʻʻನನ್ನ ಮೊದಲ ಮಗ ಉಯಿರ್ ರುದ್ರೋನಿಲ್ ಎನ್ ಶಿವನ್ ಮತ್ತು ನನ್ನ ಎರಡನೇ ಮಗ ಉಳಗ್ ದೈವಿಗ್ ಎನ್ ಶಿವನ್ʼʼ ಎಂದು ಹೇಳಿಕೊಂಡಿದ್ದರು. ನಯನತಾರಾ ಮಕ್ಕಳ ಆರೈಕೆಗಾಗಿ ನಟನೆಯಿಂದ ದೂರ ಸರಿಯಲಿದ್ದಾರೆ ಎನ್ನುವ ಮಾತುಗಳು ಕೂಡ ಹರಿದಾಡಿದ್ದವು. ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್‌ʼ ಸಿನಿಮಾ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆದರು.

ಇದನ್ನೂ ಓದಿ: Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌!

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.

ಏಪ್ರಿಲ್ 14ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ನಯನತಾರಾ. ಸಂದೀಪ್ ಕುಮಾರ್ ಮತ್ತು ಜಾರ್ಜ್ ಫಿಲಿಪ್ ಜೋಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ. ನಯನತಾರಾ ಮತ್ತು ನಿವಿನ್ ಪೌಲಿ ಅವರು ಚಿತ್ರದಲ್ಲಿ ನಟಿಸಿರುವುದಲ್ಲದೇ ತಮ್ಮ ನಿರ್ಮಾಣ ಸಂಸ್ಥೆಗಳ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ.

ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading
Advertisement
Health Tips Kannada
ಆರೋಗ್ಯ6 mins ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ6 mins ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ1 hour ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

Mobile
ದೇಶ7 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ7 hours ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ7 hours ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು7 hours ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ7 hours ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ6 mins ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ13 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು18 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು19 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌