Self Harming : ಕೋಲಾರದಲ್ಲಿ ಅರಣ್ಯ ಒತ್ತುವರಿ ಗಲಾಟೆ; ರೈತ ಪತಿ ಬಂಧನ ಖಂಡಿಸಿ ವಿಷ ಸೇವಿಸಿದ ಪತ್ನಿಯರು! - Vistara News

ಕರ್ನಾಟಕ

Self Harming : ಕೋಲಾರದಲ್ಲಿ ಅರಣ್ಯ ಒತ್ತುವರಿ ಗಲಾಟೆ; ರೈತ ಪತಿ ಬಂಧನ ಖಂಡಿಸಿ ವಿಷ ಸೇವಿಸಿದ ಪತ್ನಿಯರು!

Self Harming : ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ರೈತರು ದಾಳಿ ನಡೆಸಿದ್ದರಿಂದ ಎಫ್‌ಐಆರ್ ದಾಖಲು ಮಾಡಿ ಶನಿವಾರ 19 ಜನರನ್ನು ಬಂಧಿಸಲಾಗಿತ್ತು. ಹೀಗಾಗಿ ಇಬ್ಬರು ರೈತರ ಮಡದಿಯರು ವಿಷ ಸೇವನೆ ಮಾಡಿದ್ದಾರೆ.

VISTARANEWS.COM


on

womens consume poison kolar and get treatment in hospital
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ರಾಜ್ಯದಲ್ಲಿ ಅರಣ್ಯ ಇಲಾಖೆ (Forest Department) ಹಾಗೂ ರೈತರ ಸಂಘರ್ಷ ಮುಂದುವರಿದಿದೆ. ಅರಣ್ಯ ಒತ್ತುವರಿ (Forest encroachment) ತೆರವು ಕಾರ್ಯಾಚರಣೆ ವೇಳೆ ಅಡ್ಡಿಪಡಿಸಿದ, ಹಲ್ಲೆ ನಡೆಸಿದ ಆರೋಪದ ಮೇಲೆ 19 ಜನರನ್ನು ಪೊಲೀಸರು (Farmers Arrest) ಬಂಧಿಸಿದ್ದರು. ಬಂಧನಕ್ಕೊಳಗಾದವರಲ್ಲಿ ಇಬ್ಬರು ರೈತರ ಪತ್ನಿಯರು ಭಾನುವಾರ (ಸೆಪ್ಟೆಂಬರ್‌ 10) ವಿಷ ಸೇವಿಸಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಾರಮಾಕಲಹಳ್ಳಿ ಹಾಗೂ ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾರಮಾಕಲಹಳ್ಳಿ ಗ್ರಾಮದ ರೈತ ಮಹಿಳೆ ಲಕ್ಷ್ಮೀದೇವಮ್ಮ ವೆಂಕಟರೆಡ್ಡಿ, ಪಾಳ್ಯ ಗ್ರಾಮದ ರೈತ ಮಹಿಳೆ ಶಾಮಲಾ ಗೋಪಾಲರೆಡ್ಡಿ ಅವರು ವಿಷ ಸೇವನೆ ಮಾಡಿದ ಮಹಿಳೆಯರಾಗಿದ್ದಾರೆ.

ಇದನ್ನೂ ಓದಿ: Lok Sabha Election 2024 : ಸೀಟು ಹಂಚಿಕೆ ಚರ್ಚೆ ಆಗಿಲ್ಲ; ಸುಮಲತಾ ʼಅತಂತ್ರʼದ ಬಗ್ಗೆ ಎಚ್‌ಡಿಕೆ ಹೇಳಿದ್ದೇನು?

ತಮ್ಮ ಪತಿಯನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ರೈತ ಮಹಿಳೆಯರು ವಿಷ ಸೇವನೆ ಮಾಡಿದ್ದಾರೆ. ಈದೀಗ ಸರ್ಕಾರದ ಕ್ರಮಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ವಿಷ ಸೇವನೆ ಮಾಡಿರುವ ಮಹಿಳೆಯರನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ.

ಜೆಸಿಬಿ ಪುಡಿಗಟ್ಟಿದ್ದ ರೈತರು

ಅರಣ್ಯ ಒತ್ತುವರಿ ಕಾರ್ಯಾಚರಣೆ ಸ್ಥಳಕ್ಕೆ ಕೋಲಾರ ಸಂಸದ ಮುನಿಸ್ವಾಮಿ ಭೇಟಿ ನೀಡಿದ್ದರು. ಈ ವೇಳೆ ರೈತರು, ರೈತ ಮಹಿಳೆಯರು ಸೇರಿದಂತೆ ಹಲವು ಮುಖಂಡರು ಆಕ್ರೋಶಗೊಂಡಿದ್ದರು. ಅರಣ್ಯ ಒತ್ತುವರಿ ಜಾಗವನ್ನು ತೆರವು ಮಾಡುವ ವೇಳೆ ರೈತರೆಲ್ಲರು ಸೇರಿ ಜೆಸಿಬಿಗಳ ಮೇಲೆ ದಾಳಿ ಮಾಡಿದ್ದರು. ಕಲ್ಲು, ದೊಣ್ಣೆ ಯಿಂದ ಹೊಡೆದು ಪುಡಿಪುಡಿ ಮಾಡಿದ್ದರು.

19 ಜನರ ಬಂಧನ

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಜೆಸಿಬಿ ಮಾಲೀಕರಿಂದ 3 ಎಫ್‌ಐಆರ್ ದಾಖಲು ಮಾಡಲಾಗಿತ್ತು. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ರಾತ್ರೋ ರಾತ್ರಿ 19 ಜನರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಹೊರ ಜಿಲ್ಲೆಯ ಜೈಲಿಗೆ ಸ್ಥಳಾಂತರ ಮಾಡಿದ್ದರು.

ಇದನ್ನೂ ಓದಿ: ‌CM Siddaramaiah : ಸಿದ್ದರಾಮಯ್ಯ ವಿರುದ್ಧ ಅಹಿಂದ ಪಾಲಿಟಿಕ್ಸ್; ಸೆಡ್ಡು ಹೊಡೆದ ಬಿ.ಕೆ. ಹರಿಪ್ರಸಾದ್!

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭೂಮಿಯೂ ಇಲ್ಲ, ಪತಿಯೂ ಇಲ್ಲ ಎಂದು ನೊಂದ ರೈತ ಮಹಿಳೆಯರಿಬ್ಬರು ವಿಷ ಸೇವನೆ ಮಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Namma Metro: ಬೆಂಗಳೂರಿನ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ಜುಲೈ 6ರಿಂದ ಹೆಚ್ಚುವರಿಯಾಗಿ 15 ರೈಲುಗಳು ಕಾರ್ಯಾಚರಣೆ ನಡೆಸಲಿವೆ.

VISTARANEWS.COM


on

Namma Metro
Koo

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ (Namma Metro) ಬಿಎಂಆರ್‌ಸಿಎಲ್‌ ಗುಡ್ ನ್ಯೂಸ್ ನೀಡಿದೆ. ನಾಳೆಯಿಂದ (ಜುಲೈ 6) ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರ ಒತ್ತಾಯದ ಮೇರೆಗೆ ಹೆಚ್ಚುವರಿ ಮೆಟ್ರೋ ಕಾರ್ಯಾಚರಣೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ಜುಲೈ 6ರಿಂದ ಹೆಚ್ಚುವರಿಯಾಗಿ 15 ರೈಲುಗಳು ಕಾರ್ಯಾಚರಣೆ ನಡೆಸಲಿವೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ಹೆಚ್ಚುವರಿ ಮೆಟ್ರೋ ಸೇವೆ ಆರಂಭವಾಗಲಿದೆ. ಈ ಮೂಲಕ ನೇರಳೆ ಮಾರ್ಗದಲ್ಲಿ ಪ್ರತೀ 3.5 ನಿಮಿಷಕ್ಕೊಂದು ರೈಲು ಸೇವೆ ಇರಲಿದೆ, ಇನ್ನುಳಿದಂತೆ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಇದನ್ನೂ ಓದಿ | Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಂ.ಆ‌ರ್.ಸಿ.ಎಲ್, ಜುಲೈ 6ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು. ಈ 15 ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು ರೈಲು ವೈಟ್‌ ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ.

ಅದರಂತೆ, ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8:48, 8:58, 9:08, 9:18, 9:29, 9:39, 9:50, 10:00, 10:11, 10:21, 10:39, 10:50, 11:00, 11:22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದು ತಿಳಿಸಿದೆ.

ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್‌ ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರುತ್ತದೆ.

ಇದನ್ನೂ ಓದಿ | Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಬೇಕು ಎಂದು ಬಿಎಂಆರ್‌ಸಿಎಲ್‌ ಕೋರಿದೆ.

Continue Reading

ಬೆಂಗಳೂರು

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Teach for India: ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಎರಡು ವರ್ಷದ, ಪೂರ್ಣಕಾಲಿಕ ಫೆಲೋಶಿಪ್ ಕಾರ್ಯಕ್ರಮವಾಗಿದ್ದು ಶೈಕ್ಷಣಿಕ ವಲಯದಲ್ಲಿ ಆಸಕ್ತಿಯುಳ್ಳ ಮತ್ತು ಬದಲಾವಣೆಯ ನಾಯಕರಾಗಲು ಬಯಸುವವರಿಗೆ ಸಬಲೀಕರಿಸುವ ಉದ್ದೇಶ ಹೊಂದಿದೆ. 640ಕ್ಕೂ ಹೆಚ್ಚು ಫೆಲೋಗಳು 2024 ಸಮೂಹ ಸೇರಿದ್ದು ಈ ಕಾರ್ಯಕ್ರಮದ ಬೆಳೆಯುತ್ತಿರುವ ಪ್ರಭಾವಕ್ಕೆ ಮತ್ತು ಶಿಕ್ಷಣ- ಸಮಾನತೆಯ ಚಳವಳಿಯ ಪರಿಣಾಮದ ಸದೃಢ ಸಾಕ್ಷಿಯಾಗಿದೆ.

VISTARANEWS.COM


on

Teach for India
Koo

ಬೆಂಗಳೂರು: ಮಕ್ಕಳಿಗೆ ಶೈಕ್ಷಣಿಕ ಸಮಾನತೆ ತರಲು ಶ್ರಮಿಸುತ್ತಿರುವ ಟೀಚ್ ಫಾರ್ ಇಂಡಿಯಾ (Teach for India) ತನ್ನ 2025ರ ಫೆಲೋಶಿಪ್ ಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಸೆಪ್ಟೆಂಬರ್ 1, 2024. ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಎರಡು ವರ್ಷದ, ಪೂರ್ಣಕಾಲಿಕ ಫೆಲೋಶಿಪ್ ಕಾರ್ಯಕ್ರಮವಾಗಿದ್ದು ಶೈಕ್ಷಣಿಕ ವಲಯದಲ್ಲಿ ಆಸಕ್ತಿಯುಳ್ಳ ಮತ್ತು ಬದಲಾವಣೆಯ ನಾಯಕರಾಗಲು ಬಯಸುವವರಿಗೆ ಸಬಲೀಕರಿಸುವ ಉದ್ದೇಶ ಹೊಂದಿದೆ. 640ಕ್ಕೂ ಹೆಚ್ಚು ಫೆಲೋಗಳು 2024 ಸಮೂಹ ಸೇರಿದ್ದು ಈ ಕಾರ್ಯಕ್ರಮದ ಬೆಳೆಯುತ್ತಿರುವ ಪ್ರಭಾವಕ್ಕೆ ಮತ್ತು ಶಿಕ್ಷಣ- ಸಮಾನತೆಯ ಚಳವಳಿಯ ಪರಿಣಾಮದ ಸದೃಢ ಸಾಕ್ಷಿಯಾಗಿದೆ.

ಈ ಫೆಲೋಶಿಪ್ ಅರ್ಜಿ ಪ್ರಕ್ರಿಯೆ ಅತ್ಯಂತ ಎಚ್ಚರದಿಂದ ಆಯ್ಕೆ ಮಾಡಲಾಗುತ್ತದೆ ಮತ್ತು ಭಾರತದ ಅತ್ಯಂತ ಉಜ್ವಲ ಮತ್ತು ಭರವಸೆಯ ವ್ಯಕ್ತಿಗಳ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಆಯ್ದ ಫೆಲೋಗಳು ಕಠಿಣ ತರಬೇತಿ ಕಾರ್ಯಕ್ರಮ ಪಡೆಯುತ್ತಾರೆ ಅದರಲ್ಲಿ ಅವರು ಶಿಕ್ಷಣ ವ್ಯವಸ್ಥೆಯನ್ನು ಅದರ ಬೇರುಮಟ್ಟದಿಂದ ಅರ್ಥ ಮಾಡಿಕೊಳ್ಳಲು ಪ್ರೇರಣೆ ನೀಡಲಾಗುತ್ತದೆ.

ಇದನ್ನೂ ಓದಿ : Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ನ ವಿಶಿಷ್ಟ ಆಯಾಮವೆಂದರೆ ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರಿವರ್ತನೀಯ ಬದಲಾವಣೆ ತರುವ ಅವಕಾಶ. ಇದು ಅವರಿಗೆ ನಾಯಕತ್ವ, ಸಮಸ್ಯೆ ಪರಿಹರಿಸುವುದು ಮತ್ತು ನಿಜ ಜೀವನದ ಸವಾಲುಗಳನ್ನು ಎದುರಿಸುವ ಹಲವು ಆಯಾಮಗಳ ಕುರಿತು ಒಳನೋಟಗಳನ್ನು ನೀಡುತ್ತದೆ ಅದು ಅವರ ಒಟ್ಟಾರೆ ವೃತ್ತಿಯ ಪ್ರಗತಿಗೆ ಮಹತ್ತರ ಬದಲಾವಣೆ ತರುತ್ತದೆ.

ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಕುರಿತು ಹೆಚ್ಚು ತಿಳಿಯಲು ಮತ್ತು ಆಯ್ಕೆ ಪ್ರಕ್ರಿಯೆಗೆ ಈ ಕೆಳಕಂಡ ಲಿಂಕ್ ಗಳಿಗೆ ಭೇಟಿ ನೀಡಿ:

Continue Reading

ಶಿವಮೊಗ್ಗ

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Shivamogga News: ಸೊರಬ ತಾಲೂಕಿನ ಕುಂದಗಸವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಮಲೆನಾಡ ಸಿರಿ ಸೇವಾ ಬಳಗದ ರಾಜು ಹಿರಿಯಾವಲಿ ಅವರು, ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿದರು.

VISTARANEWS.COM


on

Shivamogga News Give top priority to cleanliness says Raju Hiriyawali
Koo

ಸೊರಬ: ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು ಸ್ವಚ್ಛತೆಯತ್ತ ಹೆಚ್ಚು ಹೆಚ್ಚು ಗಮನ ಕೊಡಬೇಕು ಎಂದು ಮಲೆನಾಡ ಸಿರಿ ಸೇವಾ ಬಳಗದ ರಾಜು ಹಿರಿಯಾವಲಿ (Shivamogga News) ತಿಳಿಸಿದರು.

ತಾಲೂಕಿನ ಕುಂದಗಸವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿ, ಬಳಿಕ ಅವರು ಮಾತನಾಡಿದರು.

ಮಕ್ಕಳಿಗೆ ಮೂಲಭೂತ ಸೌಕರ್ಯಗಳಲ್ಲಿ ಶುದ್ಧ ಕುಡಿಯುವ ನೀರು ಸಹ ಒಂದಾಗಿದೆ. ಶುದ್ಧ ನೀರು ಕುಡಿಯುವುದರಿಂದ ಬಹಳಷ್ಟು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು, ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ತಾಲೂಕಿನ ಸುಮಾರು 50 ಶಾಲೆಗಳಿಗೆ ವಾಟರ್ ಫಿಲ್ಟರ್ ಒದಗಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

ಮಕ್ಕಳು ಮತ್ತು ಶಿಕ್ಷಕರು ಶಾಲಾ ಆವರಣದಲ್ಲಿ ಪ್ಲಾಸ್ಟಿಕ್ ಇನ್ನಿತರೆ ಪೊಟರೆಗಳಲ್ಲಿ ಸಂಗ್ರಹವಾಗದಂತೆ ನೋಡಿಕೊಂಡಲ್ಲಿ ಮಳೆಗಾಲದಂತಹ ಈ ದಿನಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ಶೈಕ್ಷಣಿಕ ಪ್ರಜ್ಞೆ ಬೆಳೆಸಿದಲ್ಲಿ ಸ್ವಚ್ಛ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಂತಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ.ಎಲ್. ನೋಪಿ ಶಂಕರ್ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಇದನ್ನೂ ಓದಿ: HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ವೈ. ಗೌರಮ್ಮ, ಸಹ ಶಿಕ್ಷಕ ಅಶೋಕ್, ಪ್ರಮುಖರಾದ ಎಂ.ಎಚ್‌. ಗಣೇಶ್, ಸಂತೋಷ್, ಶ್ರೀಕಾಂತ್, ಸೃಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

MUDA site scandal: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಅವರ ನೇತೃತ್ವದ ಸರ್ಕಾರದಿಂದ 62 ಕೋಟಿ ರೂ. ಮೊತ್ತದ ಭಾರಿ ಪರಿಹಾರವನ್ನು ಅವರೇ ಕೇಳಿರುವುದು ಬೇಸರದ ಸಂಗತಿ ಮಾತ್ರವಲ್ಲ, ಲಜ್ಜೆಗೆಟ್ಟ ವರ್ತನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಸಿರೋಯಾ ಟೀಕಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನೇತೃತ್ವದ ಸರ್ಕಾರದಿಂದಲೇ 62 ಕೋಟಿ ರೂ.ಗಳ ಭಾರೀ ಪರಿಹಾರವನ್ನು ಏಕೆ ಕೇಳುತ್ತಿದ್ದಾರೆ? ತಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರು ಮುಡಾ ಪ್ರಕರಣವನ್ನು (MUDA site scandal) ಸಿಬಿಐ ಅಥವಾ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ಒಪ್ಪಿಸಲು ಹೆದರಬಾರದು. ಹಾಗೆಯೇ ಜಾಣತನದಿಂದ ತಮಗೆ ನಿಕಟರಾಗಿರುವ ನಿವೃತ್ತ ನ್ಯಾಯಾಧೀಶರನ್ನು ಕರೆತಂದು ತನಿಖೆ ನಡೆಸಲು ಮುಖ್ಯಮಂತ್ರಿಗಳು ಮುಂದಾಗಬಾರದು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಸಿರೋಯಾ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪದ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಪಾತ್ರವಿದೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತಂತೆ ಇಂದಿನ ಪತ್ರಿಕೆಗಳಲ್ಲಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಗಮನಿಸಿದ್ದೇನೆ. ಇಡೀ ದೇಶದಲ್ಲಿ ಬಹುಶಃ ಹಿಂದಿನ ಅಥವಾ ಇಂದಿನ ಯಾವ ಮುಖ್ಯಮಂತ್ರಿಯೂ ತಮ್ಮ ನೇತೃತ್ವದ ಸರ್ಕಾರದ ವಿರುದ್ಧವೇ ಹೀಗೆ ಬ್ಲ್ಯಾಕ್‌ಮೇಲ್ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಅವರ ನೇತೃತ್ವದ ಸರ್ಕಾರದಿಂದ 62 ಕೋಟಿ ರೂ. ಮೊತ್ತದ ಭಾರಿ ಪರಿಹಾರವನ್ನು ಅವರೇ ಕೇಳಿರುವುದು ಬೇಸರದ ಸಂಗತಿ ಮಾತ್ರವಲ್ಲ, ಲಜ್ಜೆಗೆಟ್ಟ ವರ್ತನೆಯೂ ಹೌದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ತಾವು ಸದಾ ಪಾರದರ್ಶಕವಾಗಿದ್ದು, ತಾವೊಬ್ಬ ಲೋಹಿಯಾ-ಸಮಾಜವಾದಿ ಹೇಳಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳದ ಮುಖ್ಯಮಂತ್ರಿಗಳ ಮನಸ್ಥಿತಿಯನ್ನು ಇದು ಬಯಲು ಮಾಡಿದೆ. ಮುಡಾ ಮಾರುಕಟ್ಟೆ ಮೌಲ್ಯದ ಪರಿಹಾರ ನೀಡಿದರೆ ಅನುಮಾನಾಸ್ಪದವಾಗಿ ಹಂಚಿಕೆಯಾಗಿರುವ ನಿವೇಶನಗಳನ್ನು ಮರಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿರುವುದು ನಂಬಲಾಗದ ಮತ್ತು ಆಘಾತಕಾರಿ ಸಂಗತಿ. ಹಾಗೆಯೇ, ಮುಖ್ಯಮಂತ್ರಿಗಳು ಏಕೆ ಧಾವಂತದಲ್ಲಿದ್ದಾರೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ಹೆಚ್ಚಿನ ಪರಿಹಾರವನ್ನು ಕೇಳುವ ಮೊದಲು ನಿವೇಶನಗಳ ಹಂಚಿಕೆ ಕಾನೂನುಬದ್ಧವಾಗಿ ನಡೆದಿದೆಯೇ ಎಂದು ಮೊದಲು ಖಚಿತಪಡಿಸಿಕೊಳ್ಳಬೇಕಲ್ಲವೇ? ಸರ್ಕಾರ ಯಾವುದೇ ಪಕ್ಷದ್ದಿರಲಿ, ಒಬ್ಬ ಶ್ರೀಸಾಮಾನ್ಯನಿಗೆ ಹೋಲಿಸಿದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ ಯಾವ ರೀತಿಯ ಅನುಕೂಲ ಕಲ್ಪಿಸಲಾಗಿದೆ ಎನ್ನುವುದನ್ನು ಮೊದಲು ತನಿಖೆ ಮಾಡಬೇಕಲ್ಲವೇ? ಸಿದ್ದರಾಮಯ್ಯನವರು ಅಧಿಕಾರದಲ್ಲಿರಲಿ ಅಥವಾ ಪ್ರತಿಪಕ್ಷದಲ್ಲಿರಲಿ, ಅನೇಕ ದಶಕಗಳಿಂದ ರಾಜ್ಯದಲ್ಲಿ ಬಹಳ ಪ್ರಭಾವಶಾಲಿ ವ್ಯಕ್ತಿಯಾಗಿರುವುದಂತೂ ನಿಜ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕ ಒಳಿತಿಗಾಗಿ ಬಿಟ್ಟುಕೊಡುತ್ತಾರೆ. ಆದರೆ ಇಲ್ಲಿ ಒಬ್ಬ ಮುಖ್ಯಮಂತ್ರಿಗಳು ಅತ್ಯಧಿಕ ಪರಿಹಾರ ಪಡೆದುಕೊಂಡದ್ದು ಮಾತ್ರವಲ್ಲ, ಇನ್ನೂ ಹೆಚ್ಚು ಕಬಳಿಸಲು ಆಸೆ ಪಡುತ್ತಿದ್ದಾರೆ. ನೆಹರೂ-ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಸಿಎಂ ಸಿದ್ದರಾಮಯ್ಯನವರ, ಆ ಹಿರಿಯರ ʼತ್ಯಾಗʼದ ಮಾದರಿಯನ್ನೂ ಅನುಸರಿಸಬೇಕು. ಆ ಕುಟುಂಬ ಅನೇಕ ವರ್ಷಗಳ ಹಿಂದೆ ಪ್ರಯಾಗರಾಜ್‌ನಲ್ಲಿರುವ ಪೂರ್ವಜರ ಮನೆಯನ್ನು ಬಿಟ್ಟುಕೊಟ್ಟಿತ್ತು. ಆದರೆ ನಂತರ ಇಡೀ ದೇಶವನ್ನು ಆಕ್ರಮಿಸಿಕೊಂಡರು ಎನ್ನುವುದು ಬೇರೆಯೇ ಕಥೆ. ಆದರೂ ತಾಂತ್ರಿಕವಾಗಿಯಾದರೂ ಅವರು ಏನೋ ಒಂದನ್ನು ತ್ಯಾಗ ಮಾಡಿದರಲ್ಲ, ಅದರಲ್ಲಿಯೂ ಒಂದು ಪಾಠ ಕಲಿಯಲಿಕ್ಕಿದೆ ಎಂದು ತಿಳಿಸಿದ್ದಾರೆ.

ತಾವು ಯಾವುದಕ್ಕೂ ಹೆದರುವುದಿಲ್ಲ ಮತ್ತು ಹಿರಿಯ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರು ಸಿಬಿಐ ಅಥವಾ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ಮುಡಾ ಪ್ರಕರಣವನ್ನು ತನಿಖೆಗೆ ಕೊಡಲು ಹಿಂಜರಿಯಬಾರದು. ಈ ಪ್ರಕರಣದ ತನಿಖೆಗೆ ತಮಗೆ ಆಪ್ತರಾದ ನಿವೃತ್ತ ನ್ಯಾಯಾಧೀಶರನ್ನು ನೇಮಿಸುವ ಬಗ್ಗೆಯೂ ಕೂಡ ಅವರು ಯೋಚಿಸಬಾರದು. ಈ ಬೃಹತ್ ಹಗರಣ ಸ್ವತಂತ್ರವಾಗಿ ತನಿಖೆಯಾಗಬೇಕಿದೆ. ಅವರು ಮುಖ್ಯಮಂತ್ರಿಯಾಗಿರುವುದರಿಂದ, ತಾವೇ ಫಿರ್ಯಾದಿ ಮತ್ತು ತಾವೇ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷದ ಕೆಲವು ಹಿರಿಯ ನಾಯಕರು ಸಲಹೆ ನೀಡಿದ್ದಾರೆ. ಬಹುಶಃ ಅವರು ಅದನ್ನು ಪರಿಗಣಿಸಿದರೆ ಒಳ್ಳೆಯದೇನೋ ಎಂದು ಹೇಳಿದ್ದಾರೆ.

ಇದನ್ನೂ ಓದಿ | CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

ಪ್ರತಿಪಕ್ಷದ ನಾಯಕರುಗಳನ್ನು ತೆಗಳಲು, ನಿಂದಿಸಲು ಸದಾ ಮುಗಿಬೀಳುವ ಸಿದ್ದರಾಮಯ್ಯನವರ ಬೆಂಬಲಿಗ ಪಡೆಯ ಉದಾರವಾದಿಗಳು ಮತ್ತು ನಗರ ನಕ್ಸಲರು, ಈ ವಿಷಯದಲ್ಲಿ ಹೇಗೆ ಉತ್ತರದಾಯಿತ್ವಕ್ಕಾಗಿ ಆಗ್ರಹಿಸುತ್ತಾರೆ ಎನ್ನುವ ಕುತೂಹಲ ನನಗೂ ಇದೆ. ಅವರು ಪ್ರತಿಭಟಿಸಲು ಬಯಸುವುದಾದರೆ ಅಗತ್ಯ ವ್ಯವಸ್ಥೆಗಳನ್ನು ನಾವೇ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.

Continue Reading
Advertisement
Namma Metro
ಕರ್ನಾಟಕ4 mins ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್6 mins ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ10 mins ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ38 mins ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು42 mins ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ44 mins ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ49 mins ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Stampede Tips and Tricks
ದೇಶ52 mins ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ53 mins ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Deadly Attack
ದೇಶ1 hour ago

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ4 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ5 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ7 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ8 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು10 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು10 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ14 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌