VISTARA TOP 10 NEWS: ಪಾಕಿಸ್ತಾನವನ್ನು ಸದೆಬಡಿದ ವಿರಾಟ್‌ ಭಾರತ, ಆಫ್ರಿಕಾ ಹಾಡಿಹೊಗಳಿದ ಸೂಪರ್‌ ಪವರ್‌ ಭಾರತ - Vistara News

ಉದ್ಯೋಗ

VISTARA TOP 10 NEWS: ಪಾಕಿಸ್ತಾನವನ್ನು ಸದೆಬಡಿದ ವಿರಾಟ್‌ ಭಾರತ, ಆಫ್ರಿಕಾ ಹಾಡಿಹೊಗಳಿದ ಸೂಪರ್‌ ಪವರ್‌ ಭಾರತ

VISTARA TOP 10 NEWS : ಎಲ್ಲರ ನಿರೀಕ್ಷೆಯಂತೆ ಪಾಕಿಸ್ತಾನವನ್ನು ಭಾರತ ಸದೆಬಡಿದಿದೆ. ಭಾರಿ ಸದ್ದು ಮಾಡಿದ್ದ ಬೆಂಗಳೂರಿನ ಸಾರಿಗೆ ಬಂದ್‌ ಒಂದೇ ದಿನಕ್ಕೆ ಮುಕ್ತಾಯ ಕಂಡಿದೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವಿದು.

VISTARANEWS.COM


on

Vistara Top 10 News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ವಿರಾಟ್‌, ರಾಹುಲ್‌ ಅಬ್ಬರಕ್ಕೆ ಕಂಗಾಲಾದ ಪಾಕಿಸ್ತಾನ: ಭಾರತಕ್ಕೆ 228 ರನ್‌ ಜಯ
ಕೆ.ಎಲ್‌. ರಾಹುಲ್‌ ಮತ್ತು ವಿರಾಟ್‌ ಕೊಹ್ಲಿ ಅವರ ಬ್ಯಾಟಿಂಗ್‌ ವಿರಾಟ್‌ ವೈಭವ ಕಂಡ ಏಷ್ಯಾ ಕಪ್‌ನ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 228 ರನ್‌ಗಳಿಂದ ಸೋಲಿಸಿ ಫೈನಲ್‌ ಪ್ರವೇಶಿಸಿದೆ. ಸಂಪೂರ್ಣ ಏಕಪಕ್ಷೀಯವಾಗಿದ್ದ ಪಂದ್ಯದಲ್ಲಿ ಭಾರತ ಕೇವಲ 2 ವಿಕೆಟ್‌ ಕಳೆದುಕೊಂಡು ಪೇರಿಸಿದ 356 ರನ್‌ಗಳನ್ನು ಬೆನ್ನಟ್ಟಿದ ಪಾಕಿಸ್ತಾನದ ಆಟ ಕೇವಲ 128 ರನ್‌ಗೆ ಮುಕ್ತಾಯವಾಯಿತು! ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ 1: ಪಾಕ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ದಾಖಲೆಗಳ ಮೇಲೆ ದಾಖಲೆ ಬರೆದ ವಿರಾಟ್​ ಕೊಹ್ಲಿ
ಪೂರಕ ಸುದ್ದಿ 2: Virat kohli : ಅತಿ ವೇಗದಲ್ಲಿ 13,000 ಏಕದಿನ ರನ್​ಗಳನ್ನು ಬಾರಿಸಿ ದಾಖಲೆ ಬರೆದ ಕೊಹ್ಲಿ

ಪೂರಕ ಸುದ್ದಿ 3: KL Rahul : ಶತಕ ಸಿಡಿಸಿ ಟೀಕಾಕಾರರ ಬಾಯ್ಮುಚ್ಚಿಸಿದ ಕೆ. ಎಲ್​ ರಾಹುಲ್​
ಪೂರಕ ಸುದ್ದಿ 4: ind vs pak : ಕೊಹ್ಲಿ – ರಾಹುಲ್ ಜತೆಯಾಟದಲ್ಲಿ ಸೃಷ್ಟಿಯಾದ ದಾಖಲೆಗಳು ಹಲವು

2. ಅರ್ಧ ದಿನಕ್ಕೇ ಬೆಂಗಳೂರು ಬಂದ್‌ ವಾಪಸ್‌; ಆ ಒಂದು ಬೇಡಿಕೆ ಬಿಟ್ಟು 16ಕ್ಕೆ ಸಚಿವರ ಒಪ್ಪಿಗೆ
ತಮ್ಮ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಬಸ್‌, ಆಟೊ, ಟ್ಯಾಕ್ಸಿ, ಶಾಲಾ ವಾಹನಗಳನ್ನು ಒಳಗೊಂಡ 32 ಸಂಘಟನೆಗಳು ಕರೆ ನೀಡಿದ 24 ಗಂಟೆಗಳ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್‌ 14 ಗಂಟೆಗಳಲ್ಲೇ ಮುಕ್ತಾಯಗೊಂಡಿದೆ. ಭಾನುವಾರ ರಾತ್ರಿ ಆರಂಭಗೊಂಡ ಈ ಸಾರಿಗೆ ಬಂದ್‌ ಸೋಮವಾರ ಮಧ್ಯಾಹ್ನ ಎರಡು ಗಂಟೆಯ ಹೊತ್ತಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನೀಡಿದ ಭರವಸೆಗಳಿಗೆ ಮನ್ನಣೆ ನೀಡಿ ಅಂತ್ಯಗೊಂಡಿದೆ. ರಾಮಲಿಂಗಾ ರೆಡ್ಡಿ ಅವರು 16 ಬೇಡಿಕೆಗಳನ್ನು ಶೀಘ್ರ ಈಡೇರಿಸುವುದಾಗಿ ತಿಳಿಸಿದರು. ಆದರೆ, ಶಕ್ತಿ ಯೋಜನೆ ರದ್ದು ಮಾಡಬೇಕು ಎಂಬ ಬೇಡಿಕೆ ಸಲ್ಲದೆಂದರು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ 1: ಅನಿಲ್‌ ಕುಂಬ್ಳೆಗೂ ತಟ್ಟಿದ ಬಂದ್‌ ಬಿಸಿ; ವಿಮಾನ ನಿಲ್ದಾಣದಿಂದ ಬಸ್ಸಿನಲ್ಲೇ ತೆರಳಿದ ಕ್ರಿಕೆಟರ್
ಪೂರಕ ಸುದ್ದಿ 2: ಬಂದ್‌ ವೇಳೆ ಕ್ಯಾಬ್‌, ಬೈಕ್‌ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ; ಒಟ್ಟು 13 ಕೇಸ್‌, 12 ಮಂದಿ ಬಂಧನ

3.ಬಿ ಕೆ ಹರಿಪ್ರಸಾದ್‌ ಪರಿಣಾಮ ಎದುರಿಸಬೇಕಾದೀತು; ಮುಗಿಬಿದ್ದ ಕಾಂಗ್ರೆಸ್‌ ಸಚಿವರು
ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಿರುವ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ವಿರುದ್ಧ ಈಗ ಕಾಂಗ್ರೆಸ್‌ ಸಚಿವರು ತಿರುಗಿಬಿದ್ದಿದ್ದಾರೆ. ಇಂತಹ ಹೇಳಿಕೆ ನೀಡುತ್ತಿರುವುದರ ಪರಿಣಾಮವನ್ನು ಎದುರಿಸಬೇಕಾದೀತು ಎಂದು ಸಚಿವ ಎಂ.ಬಿ. ಪಾಟೀಲ್‌ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಹೈಕಮಾಂಡ್‌ ಎಲ್ಲವನ್ನೂ ಗಮನಿಸುತ್ತಿದೆ ಎಂದು ಸಚಿವ ಪರಮೇಶ್ವರ್‌ ಸೂಚ್ಯವಾಗಿ ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ: ಬಿ ಕೆ ಹರಿಪ್ರಸಾದ್‌ ವಿರುದ್ಧ ಹೈಕಮಾಂಡ್‌ಗೆ ಸಿದ್ದು ಟೀಂ ದೂರು; ತಣ್ಣಗೆ ಮಾಡಿದರೆ ಖರ್ಗೆ?

4. ಜೆಡಿಎಸ್‌ಗೆ ಕಮಲದಳ ಎಂದು ಮರು ನಾಮಕರಣ ಮಾಡಿದ ಕಾಂಗ್ರೆಸ್‌
ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿ ಗೆದ್ದಿರುವ ಸ್ಥಾನ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿರುವ ಬಿಜೆಪಿ ಈಗ ಜೆಡಿಎಸ್‌ ಜತೆ ಮೈತ್ರಿಗೆ ಮುಂದಾಗಿದೆ. ಜೆಡಿಎಸ್‌ಗೂ ಅಸ್ತಿತ್ವದ ಪ್ರಶ್ನೆ. ಈ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಜೆಡಿಎಸ್‌ಗೆ ಮರು ನಾಮಕರಣ ಮಾಡಿದೆ. ಅದುವೇ ಕಮಲದಳ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ಸಿಂಗಲ್‌ ಸೀಟಿಗೂ ದಿಕ್ಕಿಲ್ಲದ ಕಾಂಗ್ರೆಸ್‌ ಕೈಕೈ ಪರಚಿಕೊಳ್ಳುತ್ತಿದೆ; ದಳ ಎದುರೇಟು

5. ಭಾರತ ಈಗ ಜಗತ್ತಿನ ಸೂಪರ್‌ ಪವರ್‌ ರಾಷ್ಟ್ರ; ಆಫ್ರಿಕಾ ಒಕ್ಕೂಟದ ಅಧ್ಯಕ್ಷ ಬಣ್ಣನೆ
ಭಾರತವು ಈಗ ಸೂಪರ್ ಪವರ್‌ ರಾಷ್ಟ್ರವಾಗಿದೆ ಮತ್ತು ಚೀನಾಕ್ಕಿಂತಲೂ ಮುಂದಿದೆ ಎಂದು ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಲಿ ಅಸ್ಸೌಮಾನಿ ಅವರು ಹೇಳಿದ್ದಾರೆ. ದಿಲ್ಲಿಯಲ್ಲಿ ನಡೆದ ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಆಫ್ರಿಕನ್ ಯೂನಿಯನ್ (African Union) ಅನ್ನು ಜಿ20ನ ಶಾಶ್ವತ ಸದಸ್ಯ ರಾಷ್ಟ್ರವಾಗಿ ಘೋಷಿಸಲಾಯಿತು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ 1: ಕೆನಡಾದಲ್ಲಿನ ಸಿಖ್‌ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ: ಕೆನಡಾ ಪ್ರಧಾನಿ ಭರವಸೆ

6. ವಿಶೇಷ ಅಧಿವೇಶನದಲ್ಲಿ ಇಂಡಿಯಾ ಭಾರತ್‌ ಆಗೋದು ನಿಜಾನಾ?: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದೇನು?
ಸೆಪ್ಟೆಂಬರ್‌ 18ರಂದು ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂಡಿಯಾ ಭಾರತ್‌ ಆಗಿ ಬದಲಾಗುವ ವಿಚಾರ ಚರ್ಚೆಗೆ ಬರುವುದು ನಿಜವೇ ಎಂಬ ಪ್ರಶ್ನೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಉತ್ತರ ನೀಡಿದ್ದಾರೆ. ಅವರು ಹೇಳಿದ್ದೇನೆಂದರೆ.. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಪ್ರಜ್ವಲ್‌ ರೇವಣ್ಣಗೆ ಬಿಗ್‌ ಟ್ರಬಲ್‌; ಅನರ್ಹತೆ ಆದೇಶ ತಡೆ ಕೊಡಲು ಹೈಕೋರ್ಟ್‌ ನಕಾರ
ಲೋಕಸಭಾ ಚುನಾವಣೆಯಲ್ಲಿ ಸುಳ್ಳು ಅಫಿಡವಿಟ್‌ ಸಲ್ಲಿಸಿದ ಪ್ರಕರಣದಲ್ಲಿ ಅನರ್ಹಗೊಂಡಿರುವ ಪ್ರಜ್ವಲ್‌ ರೇವಣ್ಣ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲ, ಐಷಾರಾಮಿಗೆ ಬರವಿಲ್ಲ; ಸಚಿವರ ಕೊಠಡಿಗಳ ಬಣ್ಣಕ್ಕೆ 7 ಕೋಟಿ ರೂ. ಖರ್ಚು
ರಾಜ್ಯ ಬಜೆಟ್‌ನ ಬಹುಪಾಲು ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲಿಟ್ಟಿರುವ ಸಿದ್ದರಾಮಯ್ಯ ಸರ್ಕಾರವು ಅಭಿವೃದ್ಧಿ ಯೋಜನೆಗಳಿಗೆ ಹಣ ಕೇಳಬೇಡಿ ಎಂದು ಶಾಸಕರು, ಸಚಿವರಿಗೆ ಸೂಚಿಸಿದೆ. ಆದರೆ, ಅಭಿವೃದ್ಧಿಗೆ ಹಣವಿಲ್ಲದ ‘ಗ್ಯಾರಂಟಿ’ ಸರ್ಕಾರದಲ್ಲಿ ಸಚಿವರಿಗೆ ಸಿಗುತ್ತಿರುವ ಐಷಾರಾಮಿ ಸೌಲಭ್ಯಗಳಿಗೇನೂ ಕೊರತೆಯಿಲ್ಲ. ರಾಜ್ಯದ ಎಲ್ಲ ಸಚಿವರಿಗೆ ಐಷಾರಾಮಿ ಇನೋವಾ ಕಾರು ಖರೀದಿಗೆ ರಾಜ್ಯ ಸರ್ಕಾರ ತೀರ್ಮಾನಿಸಿದ ಬೆನ್ನಲ್ಲೇ 34 ಸಚಿವರ ಕೊಠಡಿಗಳಿಗೆ ಸುಣ್ಣ-ಬಣ್ಣ, ಪೀಠೋಪಕರಣಗಳ ಖರೀದಿಗೆ 7.20 ಕೋಟಿ ರೂ. ಖರ್ಚು ಮಾಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. 2000 ಪ್ರೊಬೆಷನರಿ ಹುದ್ದೆ ನೇಮಕಕ್ಕೆ ಎಸ್‌ಬಿಐ ಅರ್ಜಿ ಆಹ್ವಾನ, ಸೆ.27 ಅಪ್ಲೈಗೆ ಕೊನೇ ದಿನ
ಸ್ಟೇಟ್ ಆಫ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಖಾಲಿ ಇರುವ 2000 ಪ್ರೊಬೇಷನರಿ ಹುದ್ದೆಗಳಗ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ(SBI PO Recruitment 2023). ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 7ರಿಂದ ಆರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಕಿಚ್ಚ ಸುದೀಪ್‌ 50ನೇ ಸಿನಿಮಾಗೆ ಆಕ್ಷನ್‌ ಕಟ್‌ ಹೇಳ್ತಾರಾ ರಿಷಭ್‌ ಶೆಟ್ಟಿ?
ಕಿಚ್ಚ ಸುದೀಪ್‌ (Kichcha Sudeep) ಅವರ ಕೈಯಲ್ಲಿ ಈಗಾಗಲೇ ಹಲವಾರು ಸಿನಿಮಾಗಳಿವೆ. ಈಗ ನಿರ್ಮಾಣ ಹಂತದಲ್ಲಿರುವುದು 46ನೇ ಸಿನಿಮಾ. ಈಗಲೇ ಒಂದು ಸುದ್ದಿ ಹರಡುತ್ತಿದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕಿಚ್ಚ ಸುದೀಪ್‌ ಅವರ 50ನೇ ಸಿನಿಮಾ ಆ್ಯಕ್ಷನ್ ಕಟ್‌ ಹೇಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ರಿಷಬ್‌ ಆಗಲಿ ಕಿಚ್ಚ ಸುದೀಪ್‌ ಆಗಲಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ವಿಜ್ಞಾನಿಯಾಗಬೇಕೆ? ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿದೆ ಅವಕಾಶ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ನೀವು ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಭಾರತ ಸರ್ಕಾರದ ಮಿನಿಸ್ಟ್ರಿ ಆಫ್‌ ಟೆಕ್ಸ್‌ಟೈಲ್ಸ್‌ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಉತ್ತಮ ಅವಕಾಶ ಒದಗಿಸುತ್ತಿದೆ. ಸಿಎಸ್‌ಬಿ ತನ್ನಲ್ಲಿ ಖಾಲಿ ಇರುವ 122 ಸೈಂಟಿಸ್ಟ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 5.

VISTARANEWS.COM


on

Job Alert
Koo

ಬೆಂಗಳೂರು: ನೀವು ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಭಾರತ ಸರ್ಕಾರದ ಮಿನಿಸ್ಟ್ರಿ ಆಫ್‌ ಟೆಕ್ಸ್‌ಟೈಲ್ಸ್‌ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ (Central Silk Board) ಉತ್ತಮ ಅವಕಾಶ ಒದಗಿಸುತ್ತಿದೆ. ಸಿಎಸ್‌ಬಿ ತನ್ನಲ್ಲಿ ಖಾಲಿ ಇರುವ 122 ಸೈಂಟಿಸ್ಟ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CSB Recruitment 2024). ಸ್ನಾತಕೋತ್ತರ ಪದವಿ (Master’s Degree) ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 5 (Job Alert).

ವಿದ್ಯಾರ್ಹತೆ ಮತ್ತು ಹುದ್ದೆಗಳ ವಿವರ

ಸಿಎಸ್‌ಬಿಯ ಈ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ ವಿಜ್ಞಾನ / ಕೃಷಿ ವಿಜ್ಞಾನ (Science/Agricultural Science) ವಿಷಯದಲ್ಲಿ ಸ್ನಾತಕೋತ್ತರ ಪದವಿ (Master’s Degree) ಪಡೆದಿರಬೇಕು. ಸಾಮಾನ್ಯ ವರ್ಗಕ್ಕೆ-50, ಎಸ್‌ಸಿ-20, ಎಸ್‌ಟಿ-9, ಒಬಿಸಿ-31, ಇಡಬ್ಲ್ಯುಎಸ್‌-12 ಮತ್ತು ಪಿಡಬ್ಲ್ಯುಬಿಡಿ ವರ್ಗಕ್ಕೆ 8 ಹುದ್ದೆಗಳಿವೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಸಿಎಸ್‌ಬಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಆಯ್ಕೆ ವಿಧಾನ ಮತ್ತು ಮಾಸಿಕ ಸಂಬಳ

ಜೆಆರ್‌ಎಫ್‌ ಹಾಗೂ ಎಸ್‌ಆರ್‌ಎಫ್‌ ಅಥವಾ ಪಿಎಚ್‌ಡಿ ಪ್ರವೇಶಕ್ಕಾಗಿ ಇಂಡಿಯನ್ ಕೌನ್ಸಿಲ್ ಆಫ್‌ ಅಗ್ರಿಕಲ್ಚರ್ ರಿಸರ್ಚ್‌ (ICAR) ನಡೆಸುವ ಆಲ್‌ ಇಂಡಿಯಾ ಕಾಂಪಿಟೇಟಿವ್ ಎಕ್ಸಾಮ್‌ (AICE) ಅನ್ನು ಬರೆದಿರಬೇಕು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್‌ ಮಾಡಿ, ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 56,100 ರೂ. – 1,77,500 ರೂ. ಮಾಸಿಕ ವೇತನ ಲಭ್ಯ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗ / ಒಬಿಸಿ / ಇಡಬ್ಲ್ಯುಎಸ್‌ / ಮಾಜಿ ಯೋಧರು 1,000 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಪೋಸ್ಟ್‌ ಆಫೀಸ್‌ ಮೂಲಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸುಲ್ಕವಿಲ್ಲ.

CSB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://karnemaka.kar.nic.in/CSB_rec_24/)
  • SUBMIT APPLICATION
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಹೆಲ್ಪ್‌ಲೈನ್‌ ನಂಬರ್‌: 011-4075 9000, 011-6922770ಗೆ ಕರೆ ಮಾಡಿ ಅಥವಾ ಇಬೇಲ್‌ ಐಡಿ: icar@nta.ac.in ಮೇಲ್‌ ಮಾಡಿ.

ಅಧಿಕೃತ ವೆಬ್‌ಸೈಟ್‌ ವಿಳಾಸ: csb.gov.in

ಇದನ್ನೂ ಓದಿ: RRB Recruitment 2024: ಗುಡ್‌ನ್ಯೂಸ್‌; ಬರೋಬ್ಬರಿ 14,298 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಇಲಾಖೆ

Continue Reading

ವಿದೇಶ

IBM: ಐಬಿಎಂನಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತ; ಚೀನಾದ ಕಚೇರಿ ಬೆಂಗಳೂರಿಗೆ ಸ್ಥಳಾಂತರ

IBM: ಅಮೆರಿಕ ಮೂಲದ ಐಟಿ ದಿಗ್ಗಜ ಸಂಸ್ಥೆ ಇಂಟರ್‌ನ್ಯಾಷನಲ್ ಬಿಸಿನೆಸ್ ಮಷಿನ್ಸ್ ಚೀನಾದ ಪ್ರಮುಖ ಸಂಶೋಧನಾ ವಿಭಾಗವನ್ನು ಮುಚ್ಚಲು ನಿರ್ಧರಿಸಿದೆ. ಇದರಿಂದ 1,000ಕ್ಕೂ ಮಂದಿ ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳಲಿದ್ದಾರೆ. ಕಂಪನಿಯು ಬೆಂಗಳೂರಿನಲ್ಲಿ ಕಚೇರಿ ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

IBM
Koo

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕ ಮೂಲದ ಐಟಿ ದಿಗ್ಗಜ ಸಂಸ್ಥೆ ಇಂಟರ್‌ನ್ಯಾಷನಲ್ ಬಿಸಿನೆಸ್ ಮಷಿನ್ಸ್ (IBM) ಚೀನಾದ ಪ್ರಮುಖ ಸಂಶೋಧನಾ ವಿಭಾಗವನ್ನು ಮುಚ್ಚಲು ನಿರ್ಧರಿಸಿದೆ. ಇದರಿಂದ 1,000ಕ್ಕೂ ಮಂದಿ ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳಲಿದ್ದಾರೆ (Layoffs). ಕಂಪನಿಯು ಬೆಂಗಳೂರಿನಲ್ಲಿ ಕಚೇರಿ ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.

ಐಬಿಎಂ ಚೀನಾದಲ್ಲಿರುವ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಟೆಸ್ಟಿಂಗ್‌ ಶಾಖೆಗಳನ್ನು ಮುಚ್ಚಲು ನಿರ್ಧರಿಸಿದೆ ಎಂದು ವರದಿಯೊಂದು ಹೇಳಿದೆ. ಆರ್ಥಿಕ ಕುಸಿತದ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಜತೆಗೆ ಚೀನಾ ಸ್ಥಳೀಯ ಕಂಪನಿಗಳ ಪರವಾಗಿದೆ ಎಂಬ ಆತಂಕದಿಂದಾಗಿ ವಿದೇಶಿ ಹೂಡಿಕೆ ಭಾಗಶಃ ನಿಧಾನಗೊಂಡಿರುವುದು ಕೂಡ ಕಚೇರಿ ಸ್ಥಳಾಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಚೇರಿ ತೆರೆಯುವ ಸಾಧ್ಯತೆ ಇದೆ. ವಿಶ್ವದ ಅತಿದೊಡ್ಡ ತಂತ್ರಜ್ಞಾನ ಸೇವೆಗಳ ಕಂಪನಿಯಾದ ಐಬಿಎಂ ಸದ್ಯ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಉದ್ಯೋಗ ಕಡಿತ

ಐಬಿಎಂ ಕೆಲವು ತಿಂಗಳ ಹಿಂದೆಯೂ ಉದ್ಯೋಗ ಕಡಿತಗೊಳಿಸಿತ್ತು. ಮಾರ್ಕೆಟಿಂಗ್ ಮತ್ತು ಸಂವಹನ ವಿಭಾಗದಲ್ಲಿ ಉದ್ಯೋಗ ಕಡಿತಗೊಂಡಿತ್ತು. ಐಬಿಎಂನ ಮುಖ್ಯ ಸಂವಹನ ಅಧಿಕಾರಿ ಜೊನಾಥನ್ ಅಡಾಶೆಕ್ ಅವರು ಇಲಾಖೆಯ ಉದ್ಯೋಗಿಗಳೊಂದಿಗೆ ನಡೆಸಿದ ಸಭೆಯಲ್ಲಿ ವಜಾಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ಐಬಿಎಂ 3,900 ಜನರನ್ನು ಕೆಲಸದಿಂದ ತೆಗೆಯಲಿರುವುದಾಗಿ ಜನವರಿಯಲ್ಲಿ ಹೇಳಿತ್ತು. ಈ ಕಾರ್ಯದಿಂದ ಸಂಸ್ಥೆಗೆ 400 ಮಿಲಿಯನ್ ಡಾಲರ್ (33,12,92,00,000 ರೂ.) ಹಣ ಉಳಿತಾಯವಾಗಿದೆ ಎಂದು ಅಂದಾಜಿಸಲಾಗಿದೆ. ಈ ಹಣವನ್ನು ಪುನಾರಚನೆ ಕಾರ್ಯಗಳಿಗೆ ಬಳಸಲಾಗುವುದು ಎಂದು ಅಂದು ಐಬಿಎಂನ ಚೀಫ್ ಫೈನಾನ್ಷಿಯಲ್ ಆಫೀಸರ್ ಜೇಮ್ಸ್ ಕೆವನಾಘ್ ತಿಳಿಸಿದ್ದರು.

2022ರಿಂದ ಈಚೆಗೆ ವಿವಿಧ ಟೆಕ್ ಕಂಪನಿಗಳ ಬಹಳಷ್ಟು ಉದ್ಯೋಗಿಗಳು ಉದ್ಯೋಗ ಕಳೆದುಕೊಂಡಿದ್ದಾರೆ. ಈ ವರ್ಷ 204 ಟೆಕ್ ಕಂಪನಿಗಳು ಉದ್ಯೋಗ ಕಡಿತದ ನಿರ್ಧಾರ ಕೈಗೊಂಡಿವೆ. ಇದರಿಂದ 49,978 ಮಂದಿ ಟೆಕ್ಕಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Lays off: 200 ಉದ್ಯೋಗಿಗಳ ಹಬ್ಬದ ಖುಷಿ ಕಿತ್ತುಕೊಂಡ ಎಲ್‌&ಟಿ ಟೆಕ್ನಾಲಜಿ ಸರ್ವೀಸ್!

Continue Reading

ಉದ್ಯೋಗ

Job Alert: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ ಟ್ರೈನಿ, ಆಫೀಸ್‌ ಅಸಿಸ್ಟಂಟ್‌ ಸೇರಿ ಸುಮಾರು 100 ಹುದ್ದೆಗಳು ಖಾಲಿ ಇದ್ದು, ಐಟಿಐ, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಸೆಪ್ಟೆಂಬರ್‌ 4 .

VISTARANEWS.COM


on

Job Alert
Koo

ಬೆಂಗಳೂರು: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ (Bharat Earth Movers Limited) ಖಾಲಿ ಇರುವ ವಿವಿಧ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BEML Recruitment 2024). ಬೆಮೆಲ್‌ (ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌) ರಕ್ಷಣೆ ಮತ್ತು ಏರೋಸ್ಪೇಸ್‌ ವಲಯದಲ್ಲಿ ನಾನಾ ಉತ್ಪನ್ನಗಳನ್ನು ಮಾರಾಟ ಮಾಡುತ್ತದೆ. ಗಣಿಗಾರಿಕೆ ಮತ್ತು ನಿರ್ಮಾಣ ವಲಯದ ಯಂತ್ರೋಪಕರಣಗಳನ್ನು ಉತ್ಪಾದಿಸುತ್ತದೆ. ಮೆಟ್ರೊ, ರೈಲ್ವೆ ವಲಯದಲ್ಲೂ ಸಕ್ರಿಯವಾಗಿದೆ. ಹೀಗಾಗಿ ಉದ್ಯೋಗ ಅರಸುವವರಿಗೆ ಇದೊಂದು ಅತ್ಯುತ್ತಮ ಅವಕಾಶ. ಐಟಿಐ ಟ್ರೈನಿ, ಆಫೀಸ್‌ ಅಸಿಸ್ಟಂಟ್‌ ಸೇರಿ ಸುಮಾರು 100 ಹುದ್ದೆಗಳು ಖಾಲಿ ಇದ್ದು, ಐಟಿಐ, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಸೆಪ್ಟೆಂಬರ್‌ 4 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಐಟಿಐ ಟ್ರೈನಿ-ಫಿಟ್ಟರ್‌- 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಟರ್ನರ್- 11 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಮೆಕ್ಯಾನಿಷ್ಟ್‌- 10 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಎಲೆಕ್ಟ್ರಿಷಿಯನ್‌- 8 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ವೆಲ್ಡರ್‌- 18 ಹುದ್ದೆ, ವಿದ್ಯಾರ್ಹತೆ: ಐಟಿಐ
ಆಫೀಸ್‌ ಅಸಿಸ್ಟಂಟ್‌ ಟ್ರೈನಿ-46 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಪದವಿ. ಎಲ್ಲ ಹುದ್ದೆಗಳಿಗೆ 3 ವರ್ಷಗಳ ಕಾರ್ಯಾನುಭವ ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಕೆಯ ಗರಿಷ್ಠ ವಯೋಮಿತಿ 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ಅಭ್ಯರ್ಥಿಗಳು 200 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ

ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ, ಟ್ರೇಡ್‌ ಟೆಸ್ಟ್‌ ಮತ್ತು ಸಂದರ್ಸನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://kps14.exmegov.com/).
  • ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: bemlindia.inಗೆ ಭೇಟಿ ನೀಡಿ ಅಥವಾ ಇಮೇಲ್‌ ವಿಳಾಸ recruitment@bemlltd.inಗೆ ಮೇಲ್‌ ಕಳುಹಿಸಿ.

ಇದನ್ನೂ ಓದಿ: RRB Recruitment 2024: ಗುಡ್‌ನ್ಯೂಸ್‌; ಬರೋಬ್ಬರಿ 14,298 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಇಲಾಖೆ

Continue Reading

ವಾಣಿಜ್ಯ

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (Unified Pension Scheme) ಅರ್ಥೈಸಿಕೊಳ್ಳಲು ನೆರವಾಗುವ ಕೆಲವು ಪ್ರಮುಖ ಅಂಶಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

VISTARANEWS.COM


on

By

Unified Pension Scheme
Koo

ನಿವೃತ್ತಿಯ ಬಳಿಕ ಸರ್ಕಾರಿ ನೌಕರರಿಗೆ (central government employees) ಆರ್ಥಿಕ ಭದ್ರತೆ ಮತ್ತು ಸ್ಥಿರತೆಯನ್ನು ಒದಗಿಸುವ ಉದ್ದೇಶದಿಂದ 23 ಲಕ್ಷ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ʼಏಕೀಕೃತ ಪಿಂಚಣಿ ಯೋಜನೆʼಗೆ (Unified Pension Scheme) ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಯುಪಿಎಸ್‌ ವೈಶಿಷ್ಟ್ಯಗಳೇನು?

1. ಖಚಿತ ಪಿಂಚಣಿ

ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಗಳು ನಿವೃತ್ತಿಯ ಹಿಂದಿನ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ ಶೇ. 50ರಷ್ಟು ಖಚಿತವಾದ ಪಿಂಚಣಿಯನ್ನು ಪಡೆಯುತ್ತಾರೆ. 25 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರ ಪಿಂಚಣಿಯು ಅವರ ಅವಧಿಗೆ ಅನುಗುಣವಾಗಿರುತ್ತದೆ. ಕನಿಷ್ಠ ಅರ್ಹತಾ ಸೇವಾ ಅವಧಿಯನ್ನು 10 ವರ್ಷಗಳಿಗೆ ನಿಗದಿಪಡಿಸಲಾಗಿದೆ.

2. ಖಚಿತವಾದ ಕುಟುಂಬ ಪಿಂಚಣಿ

ಅಪಘಾತದಿಂದ ನೌಕರ ಮರಣ ಹೊಂದಿದರೆ ಅವರ ಸಂಗಾತಿಯು ಅಥವಾ ಅವಲಂಬಿತರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಮರಣದ ಮೊದಲು ಉದ್ಯೋಗಿ ಪಡೆಯುತ್ತಿದ್ದ ಪಿಂಚಣಿಯ ಶೇ. 60ರಷ್ಟು ಅವರ ಸಂಗಾತಿಗೆ ಕುಟುಂಬ ಪಿಂಚಣಿಯಾಗಿ ದೊರೆಯುತ್ತದೆ.

3. ಖಚಿತವಾದ ಕನಿಷ್ಠ ಪಿಂಚಣಿ

ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನೌಕರರಿಗೆ ನಿವೃತ್ತಿಯ ಅನಂತರ ತಿಂಗಳಿಗೆ 10,000 ರೂ. ಕನಿಷ್ಠ ಪಿಂಚಣಿಯ ಖಾತರಿ ಇದೆ.

4. ಹಣದುಬ್ಬರ ಸೂಚ್ಯಂಕ

ಖಚಿತ ಮತ್ತು ಕುಟುಂಬ ಪಿಂಚಣಿ ಎರಡೂ ಹಣದುಬ್ಬರ ಸೂಚ್ಯಂಕಕ್ಕೆ ಒಳಪಟ್ಟಿರುತ್ತವೆ. ಈ ಹೊಂದಾಣಿಕೆಯು ಪಿಂಚಣಿಗಳು ಹಣದುಬ್ಬರಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸುತ್ತದೆ.

5. ದರ ಏರಿಕೆ ಪರಿಹಾರ

ಸೇವೆಯಲ್ಲಿರುವ ಉದ್ಯೋಗಿಗಳಂತೆಯೇ ಯುಪಿಎಸ್ ಅಡಿಯಲ್ಲಿ ನಿವೃತ್ತರಾದ ಕೈಗಾರಿಕಾ ಕಾರ್ಮಿಕರಿಗೆ (AICPI-IW) ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ದರ ಏರಿಕೆ ಪರಿಹಾರವನ್ನು ಪಡೆಯುತ್ತಾರೆ.


6. ನಿವೃತ್ತಿಯ ಮೇಲೆ ಒಟ್ಟು ಮೊತ್ತ

ಗ್ರಾಚ್ಯುಟಿ ಜೊತೆಗೆ ಉದ್ಯೋಗಿಗಳು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತದ ಪಾವತಿಯನ್ನು ಸ್ವೀಕರಿಸುತ್ತಾರೆ. ಈ ಪಾವತಿಯು ವೇತನ ಮತ್ತು ತುಟ್ಟಿ ಭತ್ಯೆ ಸೇರಿ ನಿವೃತ್ತಿಯ ದಿನಾಂಕ ಪೂರ್ಣಗೊಂಡ ಪ್ರತಿ ಆರು ತಿಂಗಳ ಸೇವೆಗೆ ಉದ್ಯೋಗಿಯ ಮಾಸಿಕ ವೇತನದ 1/10 ಭಾಗವಾಗಿರುತ್ತದೆ. ಈ ಒಟ್ಟು ಮೊತ್ತದ ಪಾವತಿಯು ಖಚಿತವಾದ ಪಿಂಚಣಿಯ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.

7. ಸರ್ಕಾರದ ಕೊಡುಗೆ

ಈ ಪಿಂಚಣಿ ಯೋಜನೆಯಡಿ ಸರ್ಕಾರವು ತನ್ನ ಕೊಡುಗೆಯನ್ನು ಶೇ. 14ರಿಂದ ಶೇ.18.5ಕ್ಕೆ ಹೆಚ್ಚಿಸುತ್ತಿದೆ. ಆದರೆ ನೌಕರರ ಕೈಯಿಂದ ಈಗಿರುವ ಪ್ರಮಾಣದಷ್ಟೇ ಹಣ ಈ ಯೋಜನೆಗೆ ಸಂದಾಯವಾಗುತ್ತದೆ. ಹಾಗಾಗಿ ಇದರಿಂದ ನೌಕರರಿಗೆ ಹೆಚ್ಚು ಪ್ರಯೋಜನ ಸಿಗುವಂತಾಗುತ್ತದೆ.


8. ನಿವೃತ್ತಿ ಹೊಂದಿದವರಿಗೂ ಅನ್ವಯ

ಏಕೀಕೃತ ಪಿಂಚಣಿ ಯೋಜನೆಯ ನಿಬಂಧನೆಗಳು ರಾಷ್ಟ್ರೀಯ ಪಿಂಚಣಿ ಯೋಜನೆ ಹೊಂದಿರುವ ಹಿಂದಿನ ನಿವೃತ್ತರಿಗೆ ಅಂದರೆ ಈಗಾಗಲೇ ನಿವೃತ್ತಿ ಹೊಂದಿದವರಿಗೂ ಅನ್ವಯಿಸುತ್ತದೆ. ಹಿಂದಿನ ಅವಧಿಯ ಬಾಕಿಯನ್ನು ಪಿಪಿಎಫ್ ದರಗಳಲ್ಲಿ ಬಡ್ಡಿಯೊಂದಿಗೆ ಪಾವತಿಸಲಾಗುತ್ತದೆ.

ಇದನ್ನೂ ಓದಿ: Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

9. ಏಕೀಕೃತ ಪಿಂಚಣಿ ಯೋಜನೆಗೆ ಸೇರುವ ಆಯ್ಕೆ

ಅಸ್ತಿತ್ವದಲ್ಲಿರುವ ಎನ್‌ಪಿಎಸ್, ವಿಆರ್‌ಎಸ್ ಜೊತೆಗೆ ಎನ್‌ಪಿಎಸ್ ಜೊತೆಗೆ ಭವಿಷ್ಯದ ಉದ್ಯೋಗಿಗಳು ಯುಪಿಎಸ್‌ಗೆ ಸೇರುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಆಯ್ಕೆಯನ್ನು ಒಮ್ಮೆ ಮಾಡಿಕೊಂಡರೆ ಅದೇ ಅಂತಿಮವಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಯುಪಿಎಸ್ ಅನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ರಾಜ್ಯ ಸರ್ಕಾರಗಳೂ ಅಳವಡಿಸಿಕೊಳ್ಳಬಹುದಾಗಿದೆ. ಆದರೆ ಕೇಂದ್ರದಂತೆ ರಾಜ್ಯ ಸರ್ಕಾರವೂ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ.

Continue Reading
Advertisement
Rishab Shetty And NTR
ಸಿನಿಮಾ7 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ9 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ9 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ9 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು9 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ10 hours ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ10 hours ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್10 hours ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

D.K. Shivakumar
ಬೆಂಗಳೂರು11 hours ago

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Monsoon Skincare
ಆರೋಗ್ಯ11 hours ago

Home Remedies for Skin: ಮುಖದ ಕಾಂತಿ ಹೆಚ್ಚಿಸಿಕೊಳ್ಳುವುದು ಹೇಗೆ?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್14 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌