ಸಾ.ರಾ.ಮಹೇಶ್‌ ವಿರುದ್ಧ ಭೂ ಅಕ್ರಮ ದಾಖಲೆ ಬಿಡುಗಡೆ ಮಾಡಿದ ಆರ್‌ಟಿಐ ಕಾರ್ಯಕರ್ತ ಗಂಗರಾಜು - Vistara News

ಮೈಸೂರು

ಸಾ.ರಾ.ಮಹೇಶ್‌ ವಿರುದ್ಧ ಭೂ ಅಕ್ರಮ ದಾಖಲೆ ಬಿಡುಗಡೆ ಮಾಡಿದ ಆರ್‌ಟಿಐ ಕಾರ್ಯಕರ್ತ ಗಂಗರಾಜು

ಈ ಹಿಂದೆ ಕೆ.ಆರ್.‌ ನಗರದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಾ.ರಾ. ಮಹೇಶ್‌ ವಿರುದ್ಧ ಭೂ ಅಕ್ರಮದ ಕುರಿತು ಆರೋಪಿಸಿದ್ದರು. ಆದರೆ ಆರೋಪವನ್ನು ಮಹೇಶ್‌ ನಿರಾಕರಿಸಿದ್ದರು.

VISTARANEWS.COM


on

ಮೈಸೂರಿನಲ್ಲಿರುವ ಸಾ.ರಾ. ಕನ್ವೆನ್ಷನ್‌ ಹಾಲ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಶಾಸಕ ಸಾ.ರಾ.ಮಹೇಶ್ ಪತ್ನಿ ಮಾಲೀಕತ್ವದ ಕಲ್ಯಾಣ ಮಂಟಪ ನಿರ್ಮಾಣದಲ್ಲಿ ಭೂ ಅಕ್ರಮ ನಡೆಸಿದ್ದಾರೆ ಎನ್ನಲಾದ ದಾಖಲೆಗಳನ್ನು ಆರ್.ಟಿ.ಐ. ಕಾರ್ಯಕರ್ತ ಗಂಗರಾಜು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲೇ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಹಾಗೂ ಸಾ.ರಾ. ಮಹೇಶ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಗಂಗರಾಜು ಒತ್ತಾಯಿಸಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಗಂಗರಾಜು, 19 ವರ್ಷಗಳ ಹಿಂದೆ ಕಲ್ಯಾಣ ಮಂಟಪಕ್ಕಾಗಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಕಳೆದ ವರ್ಷ ಹರಾಜಿನಲ್ಲಿ ಸಾ.ರ. ಮಹೇಶ್‌ ತಾಯಿ, ಅತ್ತೆ, ನಾದಿನಿ ಹೆಸರಿಗೆ ಮಂಜೂರು ಮಾಡಲಾಗಿತ್ತು. ಆ ಜಾಗವನ್ನು ಕೆಲವು ವರ್ಷಗಳ ಹಿಂದೆಯೇ ಡಿನೋಟಿಫಿಕೇಷನ್‌ ಮಾಡಲಾಗಿತ್ತು. ಆದರೆ, ಆ ವ್ಯಾಪ್ತಿಯಲ್ಲಿ ಮುಡಾದಿಂದ ನಿವೇಶನ ಪಡೆದಿದ್ದರು. ಈ ಕುರಿತು ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಲಾಗಿತ್ತು. ನಂತರ ಎಚ್ಚೆತ್ತ ಸಾ.ರಾ.ಮಹೇಶ್‌ ಮುಡಾದಿಂದ ನಿವೇಶನ ಪಡೆದಿದ್ದವರಿಗೆ ಬದಲಿ ನಿವೇಶನ ಮಂಜೂರು ಮಾಡಿದ್ದಾರೆ.

ಈ ಪ್ರಕರಣದಲ್ಲಿ ಮುಡಾ ಆಯುಕ್ತ ಡಾ. ಡಿ.ಬಿ ನಟೇಶ್‌ ಕೂಡ ಶಾಮೀಲಾಗಿದ್ದಾರೆ ಎಂದು ಗಂಗರಾಜು ತಿಳಿಸಿದ್ದಾರೆ. ಕಲ್ಯಾಣ ಮಂಟಪಕ್ಕಾಗಿ ಕಬಳಿಸಿದ್ದ ಜಾಗವನ್ನು ವಿವಿಧ ಅಳತೆಯ ನಿವೇಶನಗಳನ್ನಾಗಿ ಗುರುತಿಸಿ, ಮುಡಾದಿಂದ ಹರಾಜಿಗೆ ಒಳಪಡಿಸಿ ಸಾ.ರಾ. ಮಹೇಶ್‌ ಖರೀದಿ ಮಾಡಲು ನಟೇಶ್‌ ನೆರವು ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ದೂರು ನೀಡಿದರೂ ನಟೇಶ್‌ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, ಅನ್ಲೈನ್ ಹರಾಜಿನಲ್ಲಿ ಆಯುಕ್ತರ ಮೌಖಿಕ ಆದೇಶದ ಮೇಲೆ ಸಾರಾ ಮಹೇಶ್ ಸಂಬಂಧಿಕರಿಗೆ ನಿವೇಶನಗಳು ಮಂಜೂರು ಮಾಡಲಾಗಿದೆ. ನಟೇಶ್ ಅವರನ್ನು ತಕ್ಷಣ ಬೇರೆಡೆ ವರ್ಗಾವಣೆ ಮಾಡಬೇಕು ಹಾಗೂ ಸಾ.ರಾ. ಮಹೇಶ್‌ ವಿರುದ್ಧ ತನಿಖೆ ಆಗಬೇಕು ಎಂದು ಗಂಗರಾಜು ಒತ್ತಾಯಿಸಿದ್ದಾರೆ.

ಈ ಹಿಂದೆ ಕೆ.ಆರ್.‌ ನಗರದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಾ.ರಾ. ಮಹೇಶ್‌ ವಿರುದ್ಧ ಭೂ ಅಕ್ರಮದ ಕುರಿತು ಆರೋಪಿಸಿದ್ದರು. ರಾಜಕಾಲುವೆ ಹಾಗೂ ಗೋಮಾಳಕ್ಕೆ ಸಂಬಂಧಿಸಿದ ಪ್ರಕರ್ಣದಲ್ಲಿ, ಸಾ.ರಾ. ಮಹೇಶ್‌ ಆ ಜಾಗದಲ್ಲಿ ಅಕ್ರಮವಾಗಿ ಕಲ್ಯಾಣ ಮಂಟಪವನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಆಗ ಮಾಜಿ ಸಚಿವ ಸಾ.ರಾ. ಮಹೇಶ್‌ ʼರೋಹಿಣಿ ಸಿಂಧೂರಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರಲು ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆʼ ಎಂದು ಆರೋಪವನ್ನು ಖಂಡಿಸಿದ್ದರು. ಅಲ್ಲದೆ, ಆದಾಯ ವಿಭಾಗದ ಅಧಿಕಾರಿಗಳು ಮಾಜಿ ಸಚಿವ ಸಾ.ರಾ. ಮಹೇಶ್‌ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದರು.

ಇದನ್ನೂ ಓದಿ: ನನಗೆ ಗೃಹ ಸಚಿವನಾಗುವ ಶಕ್ತಿ ಇದೆ: ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Food Poisoning: ನಿನ್ನೆ ಮಧ್ಯಾಹ್ನದ ಊಟಕ್ಕೆ ಹಾಸ್ಟೆಲ್‌ ಸಿಬ್ಬಂದಿ ಚಪಾತಿ, ಅನ್ನ ಮತ್ತು ಸಾಂಬಾರು ವಿತರಿಸಿದ್ದರು. ಊಟವಾದ ನಂತರ ಹೊಟ್ಟೆ ನೋವು, ತಲೆ ಸುತ್ತುವಿಕೆಯಿಂದ ವಿದ್ಯಾರ್ಥಿನಿಯರು ಬಳಲುತ್ತಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ತಡರಾತ್ರಿಯೇ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

VISTARANEWS.COM


on

food poisoning raichur news
Koo

ರಾಯಚೂರು: ಹಾಸ್ಟೆಲ್‌ನಲ್ಲಿ ತಯಾರಿಸಲಾದ ಊಟ ಸೇವಿಸಿ 24ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ (Food poisoningw) ಘಟನೆ ರಾಯಚೂರು (Raichur news) ಜಿಲ್ಲೆಯ ಸಿಂಧನೂರು ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನದ ಊಟವನ್ನು ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನಿನ್ನೆ ಮಧ್ಯಾಹ್ನದ ಊಟಕ್ಕೆ ಹಾಸ್ಟೆಲ್‌ ಸಿಬ್ಬಂದಿ ಚಪಾತಿ, ಅನ್ನ ಮತ್ತು ಸಾಂಬಾರು ವಿತರಿಸಿದ್ದರು. ಊಟವಾದ ನಂತರ ಹೊಟ್ಟೆ ನೋವು, ತಲೆ ಸುತ್ತುವಿಕೆಯಿಂದ ವಿದ್ಯಾರ್ಥಿನಿಯರು ಬಳಲುತ್ತಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ತಡರಾತ್ರಿಯೇ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ ತಾಲೂಕು ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರು ಇಲ್ಲದ ಕಾರಣ ಅಸ್ವಸ್ಥ ವಿದ್ಯಾರ್ಥಿನಿಯರು ಪರದಾಟ ಅನುಭವಿಸಬೇಕಾಯಿತು. ಬಳಿಕ ಟಿಎಚ್‌ಓಗೆ ಕರೆ ಮಾಡಿ ಹಾಸ್ಟೆಲ್ ಸಿಬ್ಬಂದಿ ಮಾಹಿತಿ ತಿಳಿಸಿದ್ದರು. ಒಂದು ಗಂಟೆ ತಡವಾಗಿ ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 240ಕ್ಕೂ ಹೆಚ್ಚು ಪದವಿಧರ ವಿದ್ಯಾರ್ಥಿನಿಯರು ಇರುವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ಇದಾಗಿದೆ.

ಮತದಾನ ಮುಗಿಸಿ ತೆರಳುತ್ತಿದ್ದಾಗ ಅಪಘಾತ, ಇಬ್ಬರು ಸಾವು

ಮೈಸೂರು: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಅಪಘಾತ (Bike Accident) ನಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದರಿಂದ ಪಾದಚಾರಿ ಮತ್ತು ಬೈಕ್‌ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಶಿವಣ್ಣ (40) ಹಾಗೂ ಬೈಕ್ ಸವಾರ ಮಿಥುನ್(19) ಮೃತ ದುರ್ದೈವಿಗಳು. ಮತ್ತೊಬ್ಬ ಸವಾರ ಅನಿಲ್ ಪಟೇಲ್ ಗಾಯಾಳು. ಶಿವಣ್ಣ ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ವೇಗವಾಗಿ ಬಂದ ಯುವಕರು, ನಡೆದು ತೆರಳುತ್ತಿದ್ದ ಶಿವಣ್ಣಗೆ ಡಿಕ್ಕಿ ಹೊಡೆದಿದ್ದರಿಂದ ಶಿವಣ್ಣ ಹಾಗೂ ಮಿಥುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

ತುಮಕೂರು: ಚುನಾವಣೆ (Lok sabha Election 2024) ಸಂಬಂಧಿತ ಗಲಾಟೆ ಸಂಭವಿಸಿದ ಬಳಿಕ ವಾಟರ್ ಮ್ಯಾನ್ (Water man) ಒಬ್ಬರು ಅನುಮಾನಾಸ್ಪದವಾಗಿ (UDR Case, unnatural death) ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಕಿಚ್ಚೇವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರಪ್ಪ (56) ಮೃತ ವಾಟರ್ ಮ್ಯಾನ್. ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ (Assault case) ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಾದ ನಟೇಶ್, ರವೀಶ್, ವೆಂಕಟೇಶ, ಸಂತೋಷ ನಿನ್ನೆ ಗಲಾಟೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಧರಣಿ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: Drunken Driving: ಎರ‍್ರಾಬಿರ‍್ರಿ ಟಿಪ್ಪರ್ ಚಲಾಯಿಸಿ ಪಾದಚಾರಿಯನ್ನು ಕೊಂದ ಪಾನಮತ್ತ

Continue Reading

ಮಳೆ

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Karnataka Weather Forecast : ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸಿ ಹೋಗಲಿದ್ದಾರೆ. ಕರಾವಳಿಯಲ್ಲಿ ಬಿಸಿಗಾಳಿಯು (Hot weather) ಬೀಸಲಿದ್ದು, ದಕ್ಷಿಣ ಒಳನಾಡಲ್ಲಿ ಶುಷ್ಕ ವಾತಾವರಣ (Dry Weather) ಇರಲಿದೆ. ಮಲೆನಾಡಿನ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ರಾಜ್ಯಾದ್ಯಂತ ಹಗುರದಿಂದ ಕೂಡಿದ ಮಳೆಯಾಗುವ (Rain news) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದರೆ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ತಿಂಗಳಾಂತ್ಯದವರೆಗೂ ತಾಪಮಾನ ಹೆಚ್ಚಳ

ಗರಿಷ್ಠ ತಾಪಮಾನವು ಏಪ್ರಿಲ್‌ 30ರವರೆಗೆ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನ 12ರಿಂದ 3ಗಂಟೆವರೆಗೆ ಹೊರಾಂಗಣ ಚಟುವಟಿಕೆಗಳಿಂದ ದೂರ ಇರುವಂತೆ ತಜ್ಞರು ಸೂಚಿಸಿದ್ದಾರೆ. ಇನ್ನೂ ಕರಾವಳಿ ಕರ್ನಾಟಕದಲ್ಲಿ ವಾತಾವರಣವು ಬಿಸಿಯಾಗಿರಲಿದೆ. ಕೆಲವೊಮ್ಮೆ ಬಿಸಿ ಗಾಳಿಯೂ ಬೀಸಲಿದೆ.

ಯೆಲ್ಲೋ ಅಲರ್ಟ್‌

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆ ಆಗಲಿದೆ. ಹೀಗಾಗಿ ಈ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

ಈ ಬಾರಿಯ ಸಮ್ಮರ್‌ ಸೀಸನ್‌ನಲ್ಲಿ ಸೆಕೆಯಾಗದ 3 ಬಗೆಯ ಸಮ್ಮರ್‌ ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್‌ಗಳು (Summer Hairstyles) ಟ್ರೆಂಡಿಯಾಗಿವೆ. ತಕ್ಷಣಕ್ಕೆ ನೋಡಲು ಹಳೆಯ ಹೇರ್‌ಸ್ಟೈಲ್‌ ಎಂದೆನಿಸಿದರೂ ಅವುಗಳ ಜೊತೆಗೆ ನಾನಾ ಬಗೆಯ ವಿನ್ಯಾಸಗಳು ಸೇರಿಕೊಂಡಿವೆ.

Summer Hairstyles

ಸೈಡಿಗೆ ಸರಿದ ಫ್ರೀ ಹೇರ್‌ಸ್ಟೈಲ್‌ಗಳು

“ಈ ಸಮ್ಮರ್‌ನಲ್ಲಿ ಫ್ರೀ ಹೇರ್‌ಸ್ಟೈಲ್‌ಗಳು ಸೈಡಿಗೆ ಸರಿದಿವೆ. ಕೇವಲ ಹೇರ್‌ ಕಂಡೀಷನ್‌ ಕೋಣೆಗಳಲ್ಲಿ ಹಾಗೂ ಇನ್‌ಡೋರ್‌ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಈ ಹೇರ್‌ ಸ್ಟೈಲ್‌ಗಳಲ್ಲಿ ಹೆಣ್ಣುಮಕ್ಕಳು ಕಾಣಸಿಗುತ್ತಿದ್ದಾರೆ. ಇನ್ನು ಹೊರಾಂಗಣದಲ್ಲಿ ಸೆಕೆಯಾಗದ ಹಾಗೂ ಆರಾಮ ಎಂದೆನಿಸುವ ಕಂಫರ್ಟಬಲ್‌ ಕೂದಲ ವಿನ್ಯಾಸಗಳು ಚಾಲ್ತಿಯಲ್ಲಿವೆ. ಇದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ! ಟೀನೇಜ್‌ ಹಾಗೂ ಯುವತಿಯರಲ್ಲೂ ಕಾಮನ್‌ ಆಗಿವೆ” ಎನ್ನುತ್ತಾರೆ ಹೇರ್‌ಸ್ಟೈಲಿಸ್ಟ್‌ ನಮಿತಾ. ಅವರ ಪ್ರಕಾರ, ಶಾರ್ಟ್‌ ಹೇರ್‌ಸ್ಟೈಲ್‌ಗಳು ಈ ಸೀಸನ್‌ನಲ್ಲಿ ತೀರಾ ಕಾಮನ್‌ ಆಗಿವೆ ಎನ್ನುತ್ತಾರೆ.

ಹೈ ಬನ್‌ ಹೇರ್‌ಸ್ಟೈಲ್‌

ನೆತ್ತಿಯ ಮೇಲೆ ಹಾಕುವಂತಹ ಹೈ ಬನ್‌ ಹೇರ್‌ಸ್ಟೈಲ್‌ಗಳು ಇದೀಗ ಬಿಸಿಲಿನ ಝಳದಲ್ಲಿ ಹೈಲೈಟ್‌ ಆಗುತ್ತಿವೆ. ಕೆಳಗಿನಿಂದ ಮೇಲಿನವರೆಗೂ ಕೂದಲನ್ನು ಕಟ್ಟಿ ಹಾಕುವಂತಹ ವಿನ್ಯಾಸದಲ್ಲಿ ಹಾಗೂ ನೆತ್ತಿಯ ಮೇಲೆ ಸುತ್ತಿ ಅಥವಾ ಹರಡಿದಂತೆ ಕಾಣುವ ರೀತಿಯಲ್ಲಿ ಹಾಕುವ ಹೇರ್‌ಬನ್‌ಗಳು ಈ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಇವು ನೋಡಲು ಕೂಡ ಆಕರ್ಷಕವಾಗಿ ಕಾಣಿಸುತ್ತವೆ. ಜೊತೆಗೆ ಸೆಕೆಯಾಗುವುದಿಲ್ಲ!

Summer Hairstyles

ಪೋನಿಟೈಲ್‌ ವಿತ್‌ ಫ್ರಿಂಝ್‌ ಹೇರ್‌ಸ್ಟೈಲ್‌

ಮುಂಭಾಗದಲ್ಲಿ ಹುಡುಗಿಯರ ಹಣೆಯನ್ನು ಕವರ್‌ ಮಾಡುವ ಫ್ರಿಂಝ್‌ ಹೇರ್‌ಸ್ಟೈಲ್‌ ಹಿಂದೆ ಸಿಂಪಲ್‌ ಪೋನಿಟೈಲ್‌ ಕೂಡ ಈ ಸೀಸನ್‌ನಲ್ಲಿ ಮರಳಿದೆ. ನೋಡಲು ಸಿಂಪಲ್ಲಾಗಿ ಕಾಣಿಸುವ ಈ ಹೇರ್‌ಸ್ಟೈಲ್‌ ನೋಡಿದಾಗ ಖಾಲಿ ಎಂದೆನಿಸುವುದಿಲ್ಲ. ಬದಲಿಗೆ ಎರಡು ಹೇರ್‌ಸ್ಟೈಲ್‌ ಕಾಂಬಿನೇಷನ್‌ ಇದಾಗಿರುತ್ತದೆ.

ಹನ್‌ ಹೇರ್‌ಸ್ಟೈಲ್‌

ಅರ್ಧ ಫ್ರೀ ಹೇರ್‌ಸ್ಟೈಲ್‌ ಹಾಗೂ ಅರ್ಧ ಕಟ್ಟಿದ ಬನ್‌ ಹೇರ್‌ಸ್ಟೈಲ್‌ ಕಾಂಬೀನೇಷನ್‌ ಈ ಸೀಸನ್‌ನ ಹನ್‌ ಹೇರ್‌ಸ್ಟೈಲ್‌ನಲ್ಲಿ ಸೇರಿದೆ. ಇವೆರಡರೊಳಗೆ ಹಣೆ ಮುಂಭಾಗದ ಫಿಂಝ್‌ ಹೇರ್‌ಸ್ಟೈಲ್‌ ಮಿಕ್ಸ್‌ ಆಗಿದೆ. ಇವೆಲ್ಲದರ ಸಮಾಗಮ ಫ್ರಿಂಝ್‌ ಹನ್‌ ಹೇರ್‌ಸ್ಟೈಲ್‌. ಇದು ಈ ಸೀಸನ್‌ನಲ್ಲಿ ಇದು ಹುಡುಗಿಯರ ಫೇವರೇಟ್‌ ಲಿಸ್ಟ್‌ನಲ್ಲಿದೆ.

Summer Hairstyles

ಬೇಸಿಗೆ ಹೇರ್‌ಸ್ಟೈಲ್‌ ಫಾಲೋ ಮಾಡಲು ಹೀಗೆ ಮಾಡಿ

  • ಹೊರಗಡೆ ಹೋಗುವಾಗ ಮೇಲಿನ ಹೇರ್‌ಸ್ಟೈಲ್‌ಗಳನ್ನು ಮಾಡಿ.
  • ಮುಖದ ಆಕಾರಕ್ಕೆ ತಕ್ಕಂತೆ ಇವನ್ನು ಆಯ್ಕೆ ಮಾಡಿ.
  • ಫ್ರಿಂಝ್‌ ಮಾಡದಿದ್ದವರೂ ಸೈಡ್‌ಲಾಕ್ಸ್‌ ಕೂದಲ ವಿನ್ಯಾಸ ಮಾಡಬಹುದು.
  • ತೀರಾ ಟೈಟಾಗಿ ಕಟ್ಟಬೇಡಿ. ತಲೆ ನೋವಾಗಬಹುದು.
  • ಮೇಲಿನ ಹೇರ್‌ಸ್ಟೈಲ್ಸ್‌ ನಿಮಗೆ ಸ್ಲಿಮ್‌ ಲುಕ್‌ ನೀಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್17 mins ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ19 mins ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ19 mins ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ32 mins ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

ವೈರಲ್ ನ್ಯೂಸ್47 mins ago

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

tomato price rise
ಕರ್ನಾಟಕ1 hour ago

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

srinivasa prasad
ಪ್ರಮುಖ ಸುದ್ದಿ2 hours ago

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕರ್ನಾಟಕ2 hours ago

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Sleeping Tips
ಆರೋಗ್ಯ2 hours ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ2 hours ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202416 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202419 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202421 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202421 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ24 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌