Crime News: ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ; ಬಸ್‌ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ - Vistara News

ಕರ್ನಾಟಕ

Crime News: ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ; ಬಸ್‌ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ

ರಾಮನಗರದ ರಾಮದೇವರ ಬೆಟ್ಟದಲ್ಲಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮತ್ತೊಂದೆಡೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗ/ಕಲಬುರಗಿ: ಎರಡು ಪ್ರತ್ಯೇಕ ಘಟನೆಗಳಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡು, ಇಬ್ಬರು ಸವಾರರು ಮೃತಪಟ್ಟಿರುವುರು (Crime News) ಬುಧವಾರ ನಡೆದಿದೆ. ರಾಮನಗರದ ರಾಮದೇವರ ಬೆಟ್ಟದ ಮೇಲಿಂದ ಹಾರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದಾಗ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮತ್ತೊಂದೆಡೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದ ಬೈಕ್‌ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

Student isha prasad
Soudarya

ರಾಮನಗರ: ರಾಮದೇವರ ಬೆಟ್ಟದ ಮೇಲಿಂದ ಹಾರಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವುದು ಬುಧವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ರಕ್ಷಿಸಿ ಸ್ಥಳೀಯರು ಅಸ್ಪತ್ರೆಗೆ ದಾಖಲಿದ್ದಾರೆ. ಬೆಂಗಳೂರಿನ ಬೆಮೆಲ್ ಲೇಔಟ್‌ನ ನಿವಾಸಿ ಇಶಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಏಕಾಂಗಿಯಾಗಿ ಬಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಾಯಗೊಂಡ ಯುವತಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | Chaitra Kundapura : ಚೈತ್ರಾ ಕುಂದಾಪುರ; ಯಾರಿವಳು ಫೈರ್‌ಬ್ರಾಂಡ್‌ ಹುಡುಗಿ?, ಆಕೆ ಟಿವಿ ನಿರೂಪಕಿ, ಉಪನ್ಯಾಸಕಿ ಆಗಿದ್ದಳು!

ಬಸ್‌ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ

ಕಲಬುರಗಿ: ಬಸ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಳಿ ನಡೆದಿದೆ. ಮುಗಳಿ ಗ್ರಾಮದ ಶಿವಕುಮಾರ್ (23), ಶಶಿಕಾಂತ್ (23) ಮೃತ ಯುವಕರು. ವಾಹನವೊಂದನ್ನು ಓವರ್‌ಟೆಕ್ ಮಾಡಲು ಹೋಗಿ ಎದುರಿಗೆ ಬಂದ ಬಸ್‌ಗೆ ಬೈಕ್‌ ಡಿಕ್ಕಿಯಾಗಿದೆ.

ಆಳಂದ ಪಟ್ಟಣದಿಂದ ಕಲಬುರಗಿಗೆ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Soudarya
Soudarya

ಯಾದಗಿರಿ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ (29) ಮಠಪತಿ ಮೃತೆ. ಕೊಂಗಂಡಿ ಗ್ರಾಮದಲ್ಲಿ ಗಂಡನೊಂದಿಗೆ ವಾಸವಾಗಿದ್ದ ಮಹಿಳೆ, ತನ್ನ 10 ತಿಂಗಳ ಹೆಣ್ಣು ಮಗುವನ್ನು ಕೊಂಕಲ್ ಗ್ರಾಮದ ತವರು ಮನೆಯಲ್ಲಿ ಬಿಟ್ಟಿದ್ದಳು. ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಡಗೇರಾ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Rain News: ತುಂಬಿ ಬರಿಯುತ್ತಿರುವ ಕೃಷ್ಣಾ, ಘಟಪ್ರಭಾ; ಸೇತುವೆ ಮುಳುಗಡೆ, ನಡುಗಡ್ಡೆಯಿಂದ ಗರ್ಭಿಣಿಯರ ಸ್ಥಳಾಂತರ

Karnataka Rain News: ಕೃಷ್ಣಾ ನದಿಯಲ್ಲಿ ಮತ್ತೊಮ್ಮೆ ಪ್ರವಾಹದ ಪರಿಸ್ಥಿತಿ ಉದ್ಭವವಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಸುಕ್ಷೇತ್ರ ವೀರಭದ್ರ ದೇವಾಲಯ ಜಲಾವೃತಗೊಂಡಿದೆ. ರಾತ್ರಿ 11 ಗಂಟೆಗೆ ದೇವಸ್ಥಾ ಪ್ರಾಂಗಣದಲ್ಲಿ ಕೃಷ್ಣೆಯ ನೀರು ತುಂಬಿಕೊಂಡಿದೆ.

VISTARANEWS.COM


on

karnataka rain news yadgir
Koo

ಚಿಕ್ಕೋಡಿ: ಉತ್ತರ ಕರ್ನಾಟಕದಲ್ಲಿ (Uttara Karnataka) ಹೆಚ್ಚಿರುವ ಮಳೆಯ (Karnataka Rain News) ಪರಿಣಾಮ ಕೃಷ್ಣಾ (Krishna River) ಹಾಗೂ ಘಟಪ್ರಭಾ ನದಿಗಳಲ್ಲಿ (Ghataprabha river) ಪ್ರವಾಹ ಪರಿಸ್ಥಿತಿ (Flood situation) ಉಂಟಾಗಿದೆ. ಸೇತುವೆಗಳು ಮುಳುಗಿ ರಸ್ತೆಗಳು ಜಲಾವೃತಗೊಂಡು ಹಲವಾರು ನಡುಗಡ್ಡೆಗಳು ಸಂಪರ್ಕ ಕಳೆದುಕೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವು ನಡುಗಡ್ಡೆಗಳಿಂದ ಗರ್ಭಿಣಿಯರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಕೃಷ್ಣಾ ನದಿಯಲ್ಲಿ ಮತ್ತೊಮ್ಮೆ ಪ್ರವಾಹದ ಪರಿಸ್ಥಿತಿ ಉದ್ಭವವಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಸುಕ್ಷೇತ್ರ ವೀರಭದ್ರ ದೇವಾಲಯ ಜಲಾವೃತಗೊಂಡಿದೆ. ರಾತ್ರಿ 11 ಗಂಟೆಗೆ ದೇವಸ್ಥಾ ಪ್ರಾಂಗಣದಲ್ಲಿ ಕೃಷ್ಣೆಯ ನೀರು ತುಂಬಿಕೊಂಡಿದೆ. ವೀರಭದ್ರ ಶಿವಲಿಂಗ ಜಲಾವೃತವಾಗಿದ್ದು, ಮೊಳಕಾಲು ಆಳದ ನೀರಿನಲ್ಲಿ ವೀರಭದ್ರ ದೇವರಿಗೆ ಮಂಗಳಾರತಿ ಮಾಡಲಾಯಿತು.

ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿ ಇರುವ ಸುಕ್ಷೇತ್ರಕ್ಕೆ ದಿನನಿತ್ಯ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಕೃಷ್ಣಾ ನದಿಯ ನೀರು ತುಂಬಿರುವುದರಿಂದ ದೂರದಿಂದಲೇ ದರ್ಶನ ಪಡೆಯುತ್ತಿದ್ದಾರೆ.

ಗರ್ಭಿಣಿಯರ ಸ್ಥಳಾಂತರ

ಯಾದಗಿರಿ: ಕೃಷ್ಣಾ ನದಿಯ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೃಷ್ಣಾ ನದಿಯ ಮಧ್ಯ ಭಾಗದಲ್ಲಿರುವ ನೀಲಕಂಠರಾಯನ ಗಡ್ಡಿ ನಡುಗಡ್ಡೆಯಾಗಿದೆ. ನಡುಗಡ್ಡೆಯಲ್ಲಿದ್ದ ಗರ್ಭಿಣಿಯರನ್ನು ಆಚೆ ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ.

ತಹಶೀಲ್ದಾರ ವಿಜಯಕುಮಾರ್ ಭೇಟಿ ನೀಡಿ ಗರ್ಭಿಣಿಯರ ಆರೋಗ್ಯ ತಪಾಸಣೆ ಮಾಡಿಸಿ ನಂತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ನಡುಗಡ್ಡೆಗೆ ತೆರಳಲು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾದ ಸೇತುವೆ ಇದೆ. ಆದರೆ ಕೃಷ್ಣಾ ನದಿಗೆ ಹೆಚ್ಚು ನೀರು ಬಿಟ್ಟರೆ ಸೇತುವೆ ಮುಳುಗಡೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿ ಮೂವರು ಗರ್ಭಿಣಿಯರನ್ನು ಸ್ಥಳಾಂತರಿಸಲಾಗಿದೆ.

9 ವರ್ಷದ ಹಿಂದೆ ಹೀಗೆಯೇ ಕೃಷ್ಣಾ ನದಿ ಪ್ರವಾಹ ಬಂದಿದ್ದಾಗ, ಗರ್ಭಿಣಿಯಾಗಿದ್ದ ಇದೇ ಗ್ರಾಮದ ಯಲ್ಲವ್ವ ಎಂಬಾಕೆ ನದಿ ಪ್ರವಾಹ ಈಜಿ ದಡ ಸೇರಿದ್ದರು. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಈಗಾಗಲೇ ಮುಂಜಾಗ್ರತೆ ವಹಿಸಿ ಗರ್ಭಿಣಿಯರ ಸ್ಥಳಾಂತರ ಮಾಡಿದೆ ಜಿಲ್ಲಾಡಳಿತ.

ಬಾಗಲಕೋಟೆ: ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ಮುಧೋಳ ಬಳಿಯ ಯಾದವಾಡ ಸೇತುವೆ ಮುಳುಗಡೆಯಾಗಿದೆ.

ಸೇತುವೆ ಮೇಲೆ 2 ಅಡಿ ನೀರಿನ ಹರಿವಿದ್ದು, ಅದೇ ನೀರಲ್ಲೇ ವಾಹನಗಳು ಸಂಚರಿಸುತ್ತಿವೆ. ಇದು ಮುಧೋಳ ನಗರದಿಂದ ಗೋಕಾಕ ತಾಲ್ಲೂಕಿಗೆ ಸಂಪರ್ಕಿಸುವ ರಸ್ತೆಯಾಗಿದ್ದು, ಬ್ರಿಡ್ಜ್ ಮೇಲೆ ಹೆಚ್ಚಿನ ನೀರು ಬಂದಲ್ಲಿ ಯಾದವಾಡ, ಉತ್ತೂರು, ಚನ್ನಾಳ, ಮಿರ್ಜಿ, ರಂಜಣಗಿ, ಒಂಟಗೋಡಿ, ರೂಗಿ, ಹಲಕಿ, ನಿಂಗಾಪುರ, ಮೆಟಗುಡ್ಡ ಗ್ರಾಮ ಸಂಪರ್ಕ ಕಡಿತವಾಗಲಿವೆ.

ಮಟನ್‌ ಮಾರ್ಕೆಟ್‌ಗೆ ಘಟಪ್ರಭಾ ನೀರು

ಬೆಳಗಾವಿ: ಗೋಕಾಕದ ಮಟನ್ ಮಾರ್ಕೇಟ್‌ಗೆ ಘಟಪ್ರಭಾ ನದಿ ನೀರು ನುಗ್ಗಿದ್ದು, ಈ ಹಿನ್ನೆಲೆ ಗಾಡಿಯಲ್ಲಿಟ್ಟು ಮಟನ್ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ನಗರಸಭೆ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ ಕಾರಣ ನಗರಸಭೆ ಸಿಬ್ಬಂದಿ ಹಾಗೂ ವ್ಯಾಪಾರಸ್ಥರ ನಡುವೆ ವಾಗ್ವಾದ ಘಟಿಸಿತು.

ನೀರು ಬಂದಿರುವ ಪಕ್ಕದ ಜಾಗದಲ್ಲಿಯೇ ವ್ಯಾಪಾರಸ್ಥರು ಮಟನ್ ಮಾರಾಟ ಮಾಡುತ್ತಿದ್ದಾರೆ. ಬೇರೆ ಕಡೆ ಮಾರಾಟ ಮಾಡಿ ನೀರು ಬಂದಿರುವ ಕಡೆ ಬೇಡ ಎಂದು ನಗರಸಭೆ ಸಿಬ್ಬಂದಿ ಹೇಳಿದ್ದು, ನಮಗೆ ಬೇರೆ ಕಡೆ ಜಾಗವನ್ನಾದರೂ ತೋರಿಸಿ ಎಂದು ವ್ಯಾಪಾರಸ್ಥರು ಪಟ್ಟು ಹಿಡಿದರು.

ಇದನ್ನೂ ಓದಿ: Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

Continue Reading

ಕೋಲಾರ

BEML Factory: ಬೆಮೆಲ್‌ ಕಾರ್ಖಾನೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ವಿರೋಧಿಸಿ ಸಾವಿರಾರು ಕಾರ್ಮಿಕರಿಂದ ಮುಷ್ಕರ

BEML Factory KGF: ಕೋಲಾರ (Kolar news) ಜಿಲ್ಲೆಯ ಕೆಜಿಎಫ್ ನಗರದಲ್ಲಿರುವ ಬೆಮೆಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅನ್ಯಾಯ ಮಾಡಿ ಉತ್ತರ ಭಾರತದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಬೆಮೆಲ್ ಆಡಳಿತ ಮಂಡಳಿ ವಿರುದ್ಧ ನಿನ್ನೆ ಮಧ್ಯಾಹ್ನ ಕನ್ನಡದ ಕಾರ್ಮಿಕರು ಬಂಡೆದ್ದಿದ್ದರು. ಧರಣಿ ಪ್ರತಿಭಟನೆ ಕೈಗೊಂಡಿದ್ದಾರೆ.

VISTARANEWS.COM


on

beml factory kgf
Koo

ಕೋಲಾರ: ಬೆಮೆಲ್ ಕಾರ್ಖಾನೆಯ (BEML Factory KGF) ನೇಮಕಾತಿಯಲ್ಲಿ (Employments) ಸ್ಥಳೀಯರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಸಾವಿರಾರು ಕನ್ನಡಿಗ ಕಾರ್ಮಿಕರು (labourers) ಧರಣಿ ಪ್ರತಿಭಟನೆ (Workers protest) ನಡೆಸಿದ್ದಾರೆ. ಸುಮಾರು 2500 ಕಾರ್ಮಿಕರಿಂದ ಪ್ರತಿಭಟನೆ ಮುಂದುವರಿದಿದೆ.

ಕೋಲಾರ (Kolar news) ಜಿಲ್ಲೆಯ ಕೆಜಿಎಫ್ ನಗರದಲ್ಲಿರುವ ಬೆಮೆಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅನ್ಯಾಯ ಮಾಡಿ ಉತ್ತರ ಭಾರತದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಬೆಮೆಲ್ ಆಡಳಿತ ಮಂಡಳಿ ವಿರುದ್ಧ ನಿನ್ನೆ ಮಧ್ಯಾಹ್ನ ಕನ್ನಡದ ಕಾರ್ಮಿಕರು ಬಂಡೆದ್ದಿದ್ದರು. ಧರಣಿ ಪ್ರತಿಭಟನೆ ಕೈಗೊಂಡಿದ್ದಾರೆ.

ಕಾಂಟ್ರಾಕ್ಟ್ ಆಪರೇಟರ್ಸ್ ಸೇರಿ ವಿವಿಧ ಗುತ್ತಿಗೆ ನೌಕರರಿಂದ ಪ್ರತಿಭಟನೆ ನಡೆಯುತ್ತಿದೆ. ಬೆಮೆಲ್ ಕಾರ್ಖಾನೆ ಎದುರು ಜಮಾಯಿಸಿರುವ ಸೆಕೆಂಡ್ ಶಿಫ್ಟ್ ಹಾಗೂ ರಾತ್ರಿ ಪಾಳಯದ ನೌಕರರು, ಕೆಲಸಕ್ಕೆ ಹೋಗದೆ ಮುಷ್ಕರ ನಡೆಸಿದ್ದಾರೆ. ಆಡಳಿತ ಮಂಡಳಿ ನೌಕರರ ಮನವೊಲಿಸಲು‌ ಮುಂದಾಗಿದೆ. ಕೆಜಿಎಫ್ ಪೊಲೀಸರಿಂದ ಸಂಸ್ಥೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು ಸ್ಥಳದಲ್ಲಿ ನಾಲ್ಕು ಡಿಎಆರ್ ವ್ಯಾನ್, ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ.

ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Tomato Price: ದಿಢೀರ್‌ ಕುಸಿದ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ತಳಮಳ

Continue Reading

ಅಂಕಣ

ರಾಜಮಾರ್ಗ ಅಂಕಣ: ನಾಲ್ಕನೇ ತರಗತಿ ಮಾತ್ರ ಓದಿದ ಎನ್ ನರಸಿಂಹಯ್ಯ 550 ಪತ್ತೇದಾರಿ ಕಾದಂಬರಿ ಬರೆದರು!

ರಾಜಮಾರ್ಗ ಅಂಕಣ: ಓದುಗರಿಗೆ ಎನ್ ನರಸಿಂಹಯ್ಯ ಯಾರು ಎಂದು ಗೊತ್ತಿರಲಿಲ್ಲ. ಅವರು ಜನರ ನಡುವೆ ಇದ್ದರೂ ಅವರ ಗುರುತು ಯಾರಿಗೂ ಆಗುತ್ತಲೇ ಇರಲಿಲ್ಲ! ಆದರೆ ಅವರೇ ಸೃಷ್ಟಿ ಮಾಡಿದ ಪತ್ತೇದಾರ ಪುರುಷೋತ್ತಮನ ಪಾತ್ರ ಎಲ್ಲರಿಗೂ ಗೊತ್ತಿತ್ತು! ಅವರ ಪುಸ್ತಕಗಳು ವಿದೇಶದ ಭಾಷೆಗಳೂ ಸೇರಿ ಭಾರತದ ವಿವಿಧ ಭಾಷೆಗಳಿಗೆ ಅನುವಾದ ಆದವು!

VISTARANEWS.COM


on

ರಾಜಮಾರ್ಗ ಅಂಕಣ n narasimhaiah
Koo

ಬಸ್ ಕಂಡಕ್ಟರ್, ಕ್ಲೀನರ್ ಆಗಿದ್ದ ಅವರು ʼಕನ್ನಡದ ಕಾನನ್ ಡಯಲ್’ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಕನ್ನಡದಲ್ಲಿ ʼಪತ್ತೇದಾರಿ ಕಾದಂಬರಿಗಳ ಜನಕ ‘ (detective novels) ಎಂದು ಕರೆಸಿಕೊಂಡ ಎನ್ ನರಸಿಂಹಯ್ಯ (N Narasimhaiah) ಬರೆದು ಮುಗಿಸಿದ್ದು ಬರೋಬ್ಬರಿ 550 ಪತ್ತೇದಾರಿ ಕಾದಂಬರಿಗಳನ್ನು ಮತ್ತು 50 ಸಾಮಾಜಿಕ ಕಾದಂಬರಿಗಳನ್ನು ಅಂದರೆ ನಂಬುವುದು ಕಷ್ಟ! ಅದರಲ್ಲಿಯೂ ಬಡತನಕ್ಕೆ ಕಾರಣವಾಗಿ ನಾಲ್ಕನೇ ತರಗತಿಗೆ ಶಾಲೆ ತೊರೆದ ಅವರು ಅಷ್ಟೊಂದು ಪತ್ತೇದಾರಿ ಕಾದಂಬರಿ ಬರೆದರೆಂದರೆ ಅಂದರೆ ಅದು ನಿಜಕ್ಕೂ ಸಾಹಿತ್ಯದ ವಿಸ್ಮಯ ಮತ್ತು ಬರವಣಿಗೆಯ ಬೆರಗು!

ಪತ್ತೇದಾರ ಪುರುಷೋತ್ತಮನ ಜನಕ

1925 ಸೆಪ್ಟೆಂಬರ್ 18ರಂದು ಬೆಂಗಳೂರಿನಲ್ಲಿ ಜನಿಸಿದ ಎನ್ ನರಸಿಂಹಯ್ಯ ಅವರ ತಂದೆ ಸಿ. ನಂಜಪ್ಪನವರು ಜನಪದ ಕವಿ ಆಗಿದ್ದರು. ಬಾಲ್ಯದಲ್ಲಿ ಅಪ್ಪ ತೀರಿಹೋದ ಕಾರಣ ಅವರು ನಾಲ್ಕನೇ ತರಗತಿಗೆ ಶಾಲೆ ಬಿಡಬೇಕಾಯಿತು. ಅಲ್ಲಿಂದ ಮುಂದೆ ತಾಯಿ ಊರಾದ ಚಿಕ್ಕಮಗಳೂರಿಗೆ ಬಂದು ಒಂದೆರಡು ವರ್ಷ ಕಾಫಿ ತೋಟದಲ್ಲಿ ಕೆಲಸ ಮಾಡಿದರು.

ಮತ್ತೆ ಬೆಂಗಳೂರಿಗೆ ಬಂದು ಬಸ್ ಕ್ಲೀನರ್, ಬಸ್ ಕಂಡಕ್ಟರ್ ಕೂಡ ಆದರು. ಅದು ಹೊಟ್ಟೆಪಾಡಿಗೆ ಅನಿವಾರ್ಯ ಆಗಿತ್ತು. ಬಿಡುವು ದೊರೆತಾಗಲೆಲ್ಲ ಸಿಕ್ಕಾಪಟ್ಟೆ ಓದುತ್ತಿದ್ದರು. ಹಾಗೆಯೇ ಮುಂದೆ ಪ್ರಿಂಟಿಂಗ್ ಪ್ರೆಸ್ಸಿನಲ್ಲಿ ಮೊಳೆ ಜೋಡಿಸುವ ಕೆಲಸ ದೊರೆಯಿತು. ಆಗೆಲ್ಲ ಪ್ರಿಂಟಿಂಗ್ ಬರುವ ಎಲ್ಲ ಪುಸ್ತಕಗಳನ್ನು ಓದುವ ಲಾಭ ದೊರೆಯಿತು. ಮುಂದೆ ಬೆಂಗಳೂರಿನಲ್ಲಿ ಒಂದು ಸಣ್ಣ ಅಂಗಡಿ ಬಾಡಿಗೆಗೆ ಪಡೆದು ಒಂದು ಲೈಬ್ರೆರಿ ತೆರೆದರು. ಅದು ಎಂಟಾಣೆ ತಿಂಗಳ ಚಂದಾ ಇರುವ ಲೈಬ್ರರಿ. ಆಗ ಮ.ನ.ಮೂರ್ತಿ ಅವರ ಪತ್ತೇದಾರಿ ಕಾದಂಬರಿ ಓದಿ ನಾನೂ ಈ ರೀತಿಯ ಕಾದಂಬರಿಯನ್ನು ಬರೆಯಬಹುದಲ್ಲಾ ಎಂದು ಅನ್ನಿಸಿತ್ತು. ಅವರ ಆಸೆಗೆ ಪೂರಕವಾಗಿ ಟಿ ನಾರಾಯಣ ಅಯ್ಯಂಗಾರ್ ಎಂಬ ಪ್ರಕಾಶಕರ ನೆರವನ್ನು ಪಡೆದು ಮೊದಲನೇ ಪತ್ತೇದಾರಿ ಕಾದಂಬರಿ ಬರೆದರು. ಅದು ‘ಪುರುಷೋತ್ತಮನ ಸಾಹಸ’ (1952). ಆ ಪುಸ್ತಕವು ಎಷ್ಟು ಜನಪ್ರಿಯ ಆಯಿತೆಂದರೆ ಒಂದು ತಿಂಗಳ ಒಳಗೆ ಪ್ರತಿಗಳು ಖಾಲಿ ಆಗಿ ಮತ್ತೆ ಮತ್ತೆ ಪ್ರಿಂಟ್ ಆಯಿತು! ಅಲ್ಲಿಂದ ನರಸಿಂಹಯ್ಯ ಮತ್ತೆ ಹಿಂದೆ ನೋಡುವ ಪ್ರಸಂಗವೇ ಬರಲಿಲ್ಲ.

ಪುರುಷೋತ್ತಮ, ಮಧುಸೂದನ, ಅರಿಂಜಯ, ಗಾಳಿರಾಯ…

ಅಲ್ಲಿಂದ ಒಂದು ದಿನವೂ ಬಿಡುವು ಕೊಡದೆ ನರಸಿಂಹಯ್ಯ ಪತ್ತೇದಾರಿ ಕಾದಂಬರಿಗಳನ್ನು ಬರೆಯುತ್ತಾ ಹೋದರು. ಅವರ ಎಲ್ಲ ಕಾದಂಬರಿಗಳು ಬಿಸಿ ದೋಸೆಯ ಹಾಗೆ ಮಾರಾಟವಾದವು. ಅವರು ಬರೆದ ಎಲ್ಲ ಪುಸ್ತಕಗಳು ಮತ್ತೆ ಮತ್ತೆ ಪ್ರಿಂಟ್ ಆದವು. ಪ್ರಕಾಶಕರ ಒತ್ತಡವು ಹೆಚ್ಚಾದಂತೆ ನರಸಿಂಹಯ್ಯ ರಾತ್ರಿ ಹಗಲು ಕೂತು ಬರೆಯುತ್ತಾ ಹೋದರು. ಕೆಲವೊಮ್ಮೆ ದಿನಕ್ಕೆ 200 ಪುಟಗಳನ್ನು ಬರೆದದ್ದೂ ಇತ್ತು! ಮೂರು ದಿನಕ್ಕೆ ಒಂದು ಪತ್ತೇದಾರಿ ಕಾದಂಬರಿಯನ್ನು ಬರೆದು ಮುಗಿಸಿದ್ದೂ ಇದೆ! ಬಳೆಪೇಟೆಯ ಪ್ರಕಾಶಕರ ಅಂಗಡಿಯಲ್ಲಿ ಕುಳಿತು ಊಟ ತಿಂಡಿ ಮರೆತು ಬರೆದದ್ದೂ ಇದೆ! ಅವರು ಬರೆದ ಎಲ್ಲ ಪುಸ್ತಕಗಳೂ ಪ್ರಿಂಟ್ ಆಗಿ ಖಾಲಿ ಆಗಿ ಮತ್ತೆ ಮತ್ತೆ ಮುದ್ರಣ ಆಗುತ್ತಿದ್ದವು. ಓದುಗರಿಗೆ ಎನ್ ನರಸಿಂಹಯ್ಯ ಯಾರು ಎಂದು ಗೊತ್ತಿರಲಿಲ್ಲ. ಅವರು ಜನರ ನಡುವೆ ಇದ್ದರೂ ಅವರ ಗುರುತು ಯಾರಿಗೂ ಆಗುತ್ತಲೇ ಇರಲಿಲ್ಲ! ಆದರೆ ಅವರೇ ಸೃಷ್ಟಿ ಮಾಡಿದ ಪತ್ತೇದಾರ ಪುರುಷೋತ್ತಮನ ಪಾತ್ರ ಎಲ್ಲರಿಗೂ ಗೊತ್ತಿತ್ತು! ಅವರ ಪುಸ್ತಕಗಳು ವಿದೇಶದ ಭಾಷೆಗಳೂ ಸೇರಿ ಭಾರತದ ವಿವಿಧ ಭಾಷೆಗಳಿಗೆ ಅನುವಾದ ಆದವು!

ಅವರು 150 ಪುಸ್ತಕಗಳನ್ನು ಮುಗಿಸಿದ ನಂತರ ಇನ್ನೋರ್ವ ಪತ್ತೇದಾರ ಮಧುಸೂದನ ಅವರ ಲೇಖನಿಯಿಂದ ಜನ್ಮ ತಾಳಿದನು. ಮತ್ತೆ ನೂರಾರು ಪುಸ್ತಕ ಆದ ನಂತರ ಅರಿಂಜಯ ಎಂಬ ಇನ್ನೊಬ್ಬ ಪತ್ತೇದಾರನ ಪ್ರವೇಶ ಆಯಿತು. ಕೊನೆಗೆ ಗಾಳಿರಾಯ ಎಂಬ ಪತ್ತೇದಾರನ ಆವಿರ್ಭಾವ ಕೂಡ ಆಯಿತು. ಬರೆದು ಮುಗಿಸಿದ್ದು 550 ಪತ್ತೇದಾರಿ ಕಾದಂಬರಿಗಳನ್ನು! ಅದ್ಯಾವುದರ ಲೆಕ್ಕ ಅವರು ಇಟ್ಟದ್ದೂ ಇಲ್ಲ. ಬರೆಯುವುದನ್ನು ನಿಲ್ಲಿಸಿದ್ದೂ ಇಲ್ಲ. ಎಷ್ಟೋ ಕಾದಂಬರಿಗಳನ್ನು ಅವರು ಪ್ರಿಂಟಿಂಗ್ ಮೆಶಿನ್ ಮುಂದೆ ಕೂತು ಬರೆದದ್ದು ಉಂಟು!

ಪತ್ತೇದಾರಿ ಕಾದಂಬರಿ ಬರೆಯುವುದು ಅಷ್ಟು ಸುಲಭವಾ?

ಖಂಡಿತ ಸುಲಭ ಅಲ್ಲ. ತುಂಬಾ ವೇಗವಾಗಿ ಬರೆಯುತ್ತಿದ್ದ ಕಾರಣ ಏಕತಾನತೆ ಕಾಪಾಡುವುದು ದೊಡ್ಡ ಸವಾಲು ಆಗಿತ್ತು. ಮತ್ತೆ ಭಾರತೀಯ ದಂಡ ಸಂಹಿತೆಯ ವಿವರಗಳು, ಪೊಲೀಸ್ ತನಿಖೆಯ ಹಂತಗಳು, ಸಿಐಡಿಗಳು ಮಾಡುವ ವಿವರಣೆಯ ಆಯಾಮಗಳು, ಕೋರ್ಟು ಕಲಾಪಗಳು ಇವೆಲ್ಲವೂ ಕೇವಲ ನಾಲ್ಕನೇ ಕ್ಲಾಸ್ ಕಲಿತ ನರಸಿಂಹಯ್ಯ ಅವರಿಗೆ ಅರ್ಥ ಆದದ್ದು ಹೇಗೆ? ಅನೂಹ್ಯ ತಿರುವುಗಳು, ಸೊಗಸಾದ ನಿರೂಪಣೆ, ಸರಳವಾದ ಭಾಷೆ, ಕುತೂಹಲವನ್ನು ಕಾಪಾಡಿಕೊಂಡು ಹೋಗುವ ಕಥನ ಕಲೆ ಅವರ ಪತ್ತೆದಾರಿ ಕಾದಂಬರಿಗಳ ಹೆಚ್ಚುಗಾರಿಕೆ! ಒಮ್ಮೆ ಅವರ ಪುಸ್ತಕ ಓದಲು ಆರಂಭ ಮಾಡಿದರೆ ಅದು ಮುಗಿಯದೆ ನಮಗೆ ಪುಸ್ತಕ ಕೆಳಗಿಡಲು ಮನಸ್ಸೇ ಬರುತ್ತಿರಲಿಲ್ಲ! ಇದು ಎನ್ ನರಸಿಂಹಯ್ಯ ಅವರ ತಾಕತ್ತು! ಅವರು ಬರೆದ ಪ್ರತೀಯೊಂದು ಕಾದಂಬರಿಯಲ್ಲಿ ನ್ಯಾಯಕ್ಕೆ ಗೆಲುವು ದೊರೆಯುತ್ತಿತ್ತು. ಇದರಿಂದಾಗಿ ಅವರನ್ನು ‘ಕನ್ನಡದ ಕಾನನ್ ಡಾಯ್ಲ್ ‘ ಎಂದು ಅಭಿಮಾನಿ ಓದುಗರು ಕರೆದರು.

ಅವರು ಅದೇ ವೇಗದಲ್ಲಿ 50 ಸಾಮಾಜಿಕ ಕಾದಂಬರಿಗಳನ್ನು ಕೂಡ ಬರೆದರು. ಅವುಗಳೂ ಜನಪ್ರಿಯ ಆದವು.

ಅವರ ತುಂಬಾ ಪ್ರಸಿದ್ಧವಾದ ಪುಸ್ತಕಗಳು

ಭಯಂಕರ ಬೈರಾಗಿ, ಸಾವಿನ ಸೋಲು, ಕನ್ನಡಿಯ ಮುಂದೆ, ಮಾಟಗಾತಿಯ ಮಗಳು, ಕಾಮದ ಗೊಂಬೆ, ನೀಲಿ ಕೋಟು, ವಿಚಿತ್ರ ಕೊಲೆಗಾರ, ಕಲಿಯುಗದ ಪಾಂಚಾಲಿ, ಗಿಣಿ ಕಚ್ಚಿದ ಹಣ್ಣು, ಅವಳಿ ಜವಳಿ, ಎರಡು ತಲೆ ಹಾವು, ಸ್ಮಶಾನ ಬೈರಾಗಿ, ಪಂಜರದ ಪಿಶಾಚಿ ಇವುಗಳು ಅವರ ಅತ್ಯಂತ ಜನಪ್ರಿಯ ಪುಸ್ತಕಗಳು.

ಹಾದಿ ತಪ್ಪಿದ ಹೆಣ್ಣು, ಜೀವನ ಸಂಗಾತಿ, ಪಂಚವರ್ಣದ ಗಿಣಿ ಇವು ಅವರ ಜನಪ್ರಿಯ ಸಾಮಾಜಿಕ ಕಾದಂಬರಿಗಳು. ಅವರು ಅಗಲಿದ ನಂತರವೂ ಅವರ ಪುಸ್ತಕಗಳು ಮತ್ತೆ ಮತ್ತೆ ಮುದ್ರಣ ಆಗುತ್ತಿರುವುದು ನಿಜಕ್ಕೂ ಗ್ರೇಟ್!

ಅಷ್ಟೊಂದು ಬರೆದರೂ ಬಡತನ ಬೆನ್ನು ಬಿಡಲಿಲ್ಲ!

ಮೊದಲ 150 ಕಾದಂಬರಿಗಳು ಮುಗಿಯುವತನಕ ಅವರು ಒಂದು ಕಾದಂಬರಿಗೆ ಪಡೆಯುತ್ತಿದ್ದ ಗೌರವ ಧನ 50-60 ರೂಪಾಯಿ ಮಾತ್ರ ಎಂದರೆ ನಾವು ನಂಬಲೇ ಬೇಕು. ಮುಂದೆ ತನ್ನ ಪುಸ್ತಕಗಳ ಬೆಲೆಯ 10% ಗೌರವಧನಕ್ಕೆ ಅವರು ಬೇಡಿಕೆ ಇಟ್ಟರೂ ಎಷ್ಟೋ ಪ್ರಕಾಶಕರು ಅವರಿಗೆ ಮೋಸ ಮಾಡಿದರು. ಒಂದು ಸಾವಿರ ಪ್ರತಿಗಳು ಎಂದು ಹೇಳಿ ಐದರಿಂದ ಹತ್ತು ಸಾವಿರ ಪ್ರತಿಗಳನ್ನು ಪ್ರಿಂಟ್ ಮಾಡಿ ಮಾರುತ್ತಿದ್ದರು! ನರಸಿಂಹಯ್ಯ ಅವರಿಗೆ ಹೇಳದೆ ಅವರ ಪುಸ್ತಕ ಮರುಮುದ್ರಣ ಆಗುತ್ತಿತ್ತು. ಸಂತನ ಹಾಗೆ ಸರಳವಾಗಿ ಬದುಕುತ್ತಿದ್ದ ನರಸಿಂಹಯ್ಯ ಅಷ್ಟು ಪುಸ್ತಕ ಬರೆದರೂ ದಾರಿದ್ರ್ಯದಲ್ಲಿ ಬದುಕಿದರು. ಬಡತನದಲ್ಲಿಯೇ ಕಣ್ಣು ಮುಚ್ಚಿದರು (2011).

ಆದರೆ ಅವರ ಕಾದಂಬರಿಗಳನ್ನು ಪ್ರಕಾಶನ ಮಾಡಿದವರು ಎಷ್ಟೋ ಮಂದಿ ಕೋಟ್ಯಾಧಿಪತಿ ಆದರು ಅನ್ನೋದು ಕನ್ನಡದ ದುರಂತ!

ಇದನ್ನೂ ಓದಿ: ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Continue Reading

ಪ್ರಮುಖ ಸುದ್ದಿ

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Uttara Kannada landslide: ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ.

VISTARANEWS.COM


on

Uttara Kannada landslide
Koo

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ (Uttara Kannada landslide, Shiruru Landslide) ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ (Search Operation) ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಈಶ್ವರ ಮಲ್ಪೆ ತಂಡದ ಸದಸ್ಯನಿಗೆ ಗಾಯ

ಕಾರ್ಯಾಚರಣೆಗೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ತಂಡದ ಓರ್ವ ಸದಸ್ಯನಿಗೆ ಗಾಯವಾಗಿದೆ. ಈಶ್ವರ ಮಲ್ಪೆ ತಂಡದ ದೀಪು ಎನ್ನುವವರು ಸ್ಥಳದಲ್ಲಿ ಡೈವಿಂಗ್ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈಶ್ವರ ಮಲ್ಪೆ ಯಾರು?

ಮೂಲತಃ ಈಶ್ವರ್ ಮಲ್ಪೆ ಆಂಬ್ಯುಲೆನ್ಸ್ ಡ್ರೈವರ್ ಆಗಿದ್ದು, ಸಾಕಷ್ಟು ಜನರ ಪ್ರಾಣ ಉಳಿಸಿದ್ದಾರೆ. ನದಿಯ ಆಳಕ್ಕೆ ಇಳಿದು ನಾಪತ್ತೆಯಾದ ಮೃತದೇಹಗಳನ್ನು ಪತ್ತೆ ಹಚ್ಚುವ ಸಾಹಸಿ ಇವರು. ಅದೆಷ್ಟೇ ಆಳವಿರಲಿ, ಅಪಾಯಕಾರಿ ಸ್ಥಳವಿರಲಿ ಅಲ್ಲಿಗೆ ಇಳಿದು ಮೃತದೇಹಗಳನ್ನು ತೆಗೆದಿದ್ದಾರೆ. ಎಂಥದ್ದೇ ಪರಿಸ್ಥಿತಿ ಇದ್ದರೂ ಕರೆ ಬಂದ ತಕ್ಷಣ ಓಡಿ ಬರುತ್ತಾರೆ. ಕಳೆದ ವರ್ಷ ಜುಲೈ 23ರಂದು ಅರಿಶಿನ ಗುಂಡಿ ಜಲಪಾತದಲ್ಲಿ ಭದ್ರಾವತಿ ಮೂಲದ ಶರತ್ ಎಂಬಾತ ಕಾಲು ಜಾರಿ ನೀರಿಗೆ ಬಿದ್ದು ಸೌಪರ್ಣಿಕಾ ನದಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದ. ಮರದ ಬೇರಿಗೆ ಸಿಲುಕಿ ದೇಹ ಅಲ್ಲಿಯೇ ಇತ್ತು. ಆರು ದಿನಗಳ ಬಳಿಕ ಆ ಮೃತದೇಹವನ್ನು ಈಶ್ವರ್ ಮಲ್ಪೆ ಹೊರಕ್ಕೆ ತೆಗೆದಿದ್ದರು.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

Continue Reading
Advertisement
karnataka rain news yadgir
ಪ್ರಮುಖ ಸುದ್ದಿ3 mins ago

Karnataka Rain News: ತುಂಬಿ ಬರಿಯುತ್ತಿರುವ ಕೃಷ್ಣಾ, ಘಟಪ್ರಭಾ; ಸೇತುವೆ ಮುಳುಗಡೆ, ನಡುಗಡ್ಡೆಯಿಂದ ಗರ್ಭಿಣಿಯರ ಸ್ಥಳಾಂತರ

vali sugreeva ಧವಳ ಧಾರಿಣಿ
ಅಂಕಣ44 mins ago

ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

beml factory kgf
ಕೋಲಾರ50 mins ago

BEML Factory: ಬೆಮೆಲ್‌ ಕಾರ್ಖಾನೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ವಿರೋಧಿಸಿ ಸಾವಿರಾರು ಕಾರ್ಮಿಕರಿಂದ ಮುಷ್ಕರ

ರಾಜಮಾರ್ಗ ಅಂಕಣ n narasimhaiah
ಅಂಕಣ54 mins ago

ರಾಜಮಾರ್ಗ ಅಂಕಣ: ನಾಲ್ಕನೇ ತರಗತಿ ಮಾತ್ರ ಓದಿದ ಎನ್ ನರಸಿಂಹಯ್ಯ 550 ಪತ್ತೇದಾರಿ ಕಾದಂಬರಿ ಬರೆದರು!

Uttara Kannada landslide
ಪ್ರಮುಖ ಸುದ್ದಿ1 hour ago

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Weight lose
ಆರೋಗ್ಯ1 hour ago

Weight Lose: ಏನೇ ಸರ್ಕಸ್‌ ಮಾಡಿದರೂ ತೂಕ ಇಳಿಯದೇ? ಹಾಗಿದ್ದರೆ ಕಾರಣ ಇದಾಗಿರಬಹುದು!

World Hepatitis Day
ಆರೋಗ್ಯ2 hours ago

World Hepatitis Day: ಏನಿದು ಹೆಪಟೈಟಿಸ್‌? ಇದು ಏಕೆ ಅಪಾಯಕಾರಿ?

karnataka weather Forecast
ಮಳೆ2 hours ago

Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

Dina bhavishya
ಭವಿಷ್ಯ3 hours ago

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

Delhi Floods
ಪ್ರಮುಖ ಸುದ್ದಿ8 hours ago

Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ18 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ19 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌