Dhruva Sarja: 3 ವರ್ಷಗಳ ಬಳಿಕ ಧ್ರುವ ಸರ್ಜಾ ಬರ್ತ್‌ಡೇ ಆಚರಣೆ; ಶಾಲಾ ಮಕ್ಕಳಿಗೆ ಆ್ಯಕ್ಷನ್ ಪ್ರಿನ್ಸ್‌ ಸಹಾಯ! - Vistara News

South Cinema

Dhruva Sarja: 3 ವರ್ಷಗಳ ಬಳಿಕ ಧ್ರುವ ಸರ್ಜಾ ಬರ್ತ್‌ಡೇ ಆಚರಣೆ; ಶಾಲಾ ಮಕ್ಕಳಿಗೆ ಆ್ಯಕ್ಷನ್ ಪ್ರಿನ್ಸ್‌ ಸಹಾಯ!

Dhruva Sarja: 3 ವರ್ಷಗಳ ನಂತರ ಎಲ್ಲ ವಿಐಪಿ ಅಭಿಮಾನಿಗಳು ಹಾಗೂ ಹಿತೈಷಿಗಳ ಕೋರಿಕೆಯ ಮೇರೆಗೆ ಆಚರಿಸಲು ನಿರ್ಧರಿಸಿದ್ದೇವೆ ಎಂದು ಧ್ರುವ ಹೇಳಿಕೊಂಡಿದ್ದಾರೆ.

VISTARANEWS.COM


on

Dhruva Sarja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಕ್ಟೋಬರ್ 6ರಂದು ಧ್ರುವ ಸರ್ಜಾ (Dhruva Sarja) 34ನೇ ವಸಂತಕ್ಕೆ ಕಾಲಿಡಲಿದ್ದಾರೆ. ಕಳೆದ 3 ವರ್ಷಗಳಿಂದ ಆ್ಯಕ್ಷನ್ ಪ್ರಿನ್ಸ್ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿರಲಿಲ್ಲ (dhruva sarja birthday). ಆದರೆ ಈ ಬಾರಿ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ .3 ವರ್ಷಗಳ ನಂತರ ಎಲ್ಲಾ ವಿಐಪಿ ಅಭಿಮಾನಿಗಳು ಹಾಗೂ ಹಿತೈಷಿಗಳ ಕೋರಿಕೆಯ ಮೇರೆಗೆ ಆಚರಿಸಲು ನಿರ್ಧರಿಸಿದ್ದೇವೆ ಎಂದು ಧ್ರುವ ಹೇಳಿಕೊಂಡಿದ್ದಾರೆ.

ಈ ತಮ್ಮ ಹುಟ್ಟುಹಬ್ಬದ ದಿನ ಧ್ರುವ ಕಡೆಯಿಂದ ವಿಐಪಿಗಳಲ್ಲಿ ವಿಶೇಷ ಮನವಿ ಇದೆ. “ಧ್ರುವ ಸರ್ಜಾ ಅವರ ಎಲ್ಲಾ ವಿಐಪಿ ಅಭಿಮಾನಿಗಳಿಗೆ, ಸ್ನೇಹಿತರಿಗೆ ಹಾಗೂ ಹಿತೈಷಿಗಳಿಗೆ ತಿಳಿಸುವುದೇನೆಂದರೆ, ಇದೇ ಅಕ್ಟೋಬರ್ 05, 2023 ರಂದು ರಾತ್ರಿ 11.00 ರಿಂದ ಧ್ರುವ ಸರ್ಜಾರವರ ಹುಟ್ಟುಹಬ್ಬವನ್ನು ಅವರ ಮನೆಯ ಬಳಿ ಅದ್ಧೂರಿಯಾಗಿ ಆಚರಿಸುತ್ತೇವೆ. ಚಿರು ಅಣ್ಣನವರ ನಿಧನ ನಂತರ ಧ್ರುವ ಸರ್ಜಾರವರ ಹುಟ್ಟು ಹಬ್ಬವನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. 3 ವರ್ಷಗಳ ನಂತರ ಎಲ್ಲಾ ವಿಐಪಿ ಅಭಿಮಾನಿಗಳು ಹಾಗೂ ಹಿತೈಷಿಗಳ ಕೋರಿಕೆಯ ಮೇರೆಗೆ ಆಚರಿಸಲು ನಿರ್ಧರಿಸಿದ್ದೇವೆ”

“ಈ ಮೂಲಕ ತಿಳಿಯಪಡೆಸುವುದೇನೆಂದರೆ, ಹುಟ್ಟು ಹಬ್ಬದ ಆಚರಣೆಗೆ ಆಗಮಿಸುತ್ತಿರುವ ಎಲ್ಲಾ ವಿಐಪಿ ಅಭಿಮಾನಿಗಳು ಹಾಗೂ ಹಿತೈಷಿಗಳು ಯಾವುದೇ ರೀತಿಯ ಕೇಕ್‌ಗಳು, ಹೂಗುಚ್ಚಗಳು ಹಾಗೂ ಉಡುಗೊರೆಗಳನ್ನು ತರದೆ, ಬದಲಿಗೆ ಶಾಲಾ ಮಕ್ಕಳಿಗೆ ಉಪಯುಕ್ತವಾಗುವಂತಹ ಪುಸ್ತಕಗಳು, ಪೆನ್ನುಗಳು ಹಾಗೂ ಶಾಲಾ ಬ್ಯಾಗ್‌ಗಳನ್ನು ನೀಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿ ಎಂದು ಕೋರಿಕೊಳ್ಳುತ್ತೇವೆ, ಹಾಗೂ ನಾವು ಅವುಗಳನ್ನು ನೇರವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ತಲುಪಿಸುತ್ತೇವೆ. ಜೈ ಆಂಜನೇಯ” ಎಂದು ಧ್ರುವ ತಂಡದ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನೆಯಾಗಿದೆ.

ಆ ಹಣದಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಒಂದೊಳ್ಳೆ ನಿರ್ಧಾರ ಕೈಗೊಂಡಿದ್ದಾರೆ. ಇನ್ನು ಧ್ರುವ ಸರ್ಜಾ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದೆ. ಇತ್ತೀಚೆಗಷ್ಟೆ ಪ್ರೇರಣಾಗೆ ಅದ್ಧೂರಿಯಾಗಿ ಸೀಮಂತ (dhruva sarja wife baby shower) ಕಾರ್ಯಕ್ರಮ ನೆರವೇರಿಸಲಾಗಿತ್ತು.

ಧ್ರುವ ಸರ್ಜಾ ಜನುಮದಿನದಂದೇ ಚಿರಂಜೀವಿ ಸರ್ಜಾ ಸಿನಿಮಾ ರಿಲೀಸ್‌!

ಧ್ರುವ ಸರ್ಜಾ (Dhruva Sarja) ಅವರ ಜನುಮದಿನದ ನಿಮಿತ್ತ ರಿಲೀಸ್‌ ಆಗಲಿದೆ. ಅಕ್ಟೋಬರ್‌ 6ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದೀಗ ಚಿತ್ರತಂಡ ಪ್ರಚಾರ ಕಣಕ್ಕಿಳಿದಿದೆ. ಚಿರಂಜೀವಿ ಸರ್ಜಾ (chiranjeevi sarja) ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ (rangamarthanda). ಇದೀಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ.

ವಿಶೇಷ ಏನೆಂದರೆ, ಧ್ರುವ ಸರ್ಜಾ (rajamarthanda release date) ಅವರ ಬರ್ತ್‌ಡೇ ದಿನವೇ ಈ ಸಿನಿಮಾ ರಿಲೀಸ್‌ ಆಗಲಿದೆ. ಚಿರಂಜೀವಿ ಸರ್ಜಾ ಅವರು ನಿಧನರಾದಾಗ ಚಿತ್ರದ ಡಬ್ಬಿಂಗ್‌ ಆಗಿರಲಿಲ್ಲ. ಸಹೋದರ ಧ್ರುವ ಸರ್ಜಾ ಧ್ವನಿ ನೀಡಿ ಜೀವ ತುಂಬಿದ್ದರು. ಶಿವಕುಮಾರ್ ನಿರ್ಮಾಣದ ಚಿತ್ರ ಇದಾಗಿದೆ. ಇದೊಂದು ರೊಮ್ಯಾಂಟಿಕ್ ಆ್ಯಕ್ಷನ್ ಚಿತ್ರವಾಗಿದ್ದು ಚಿರಂಜೀವಿ ಸರ್ಜಾ, ದೀಪ್ತಿ ಸತಿ, ತ್ರಿವೇಣಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಟೀಸರ್, ಟ್ರೈಲರ್ ಹಾಗೂ ಹಾಡುಗಳು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಧರ್ಮವಿಶ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಕೆ. ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು.ಡಿ.ವಿ ಅವರ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಪಾತ್ರವರ್ಗದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Amala Paul: ಮದುವೆಯಾದ 8 ತಿಂಗಳಿಗೇ ಗಂಡು ಮಗುವಿಗೆ ಜನ್ಮ ನೀಡಿದ ಸುದೀಪ್‌ ಚಿತ್ರದ ನಾಯಕಿ

Amala Paul: ದಕ್ಷಿಣ ಭಾರತದ ಖ್ಯಾತ ನಟಿ, ಬಹುಭಾಷಾ ಕಲಾವಿದೆ, ʼಹೆಬ್ಬುಲಿʼ ಚಿತ್ರದಲ್ಲಿ ಕಿಚ್ಚ ಸುದೀಪ್‌ ಜತೆ ಹೆಜ್ಜೆ ಹಾಕಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ್ದ ಅಮಲಾ ಪೌಲ್‌ ಜೂನ್‌ 11ರಂದು ಗಂಡು ಮುವಿಗೆ ಜನ್ಮ ನೀಡಿದ್ದಾರೆ. ಅಮಲಾ ಪೌಲ್‌-ಜಗತ್‌ ದೇಸಾಯಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಗುಡ್‌ನ್ಯೂಸ್‌ ಹಂಚಿಕೊಂಡಿದ್ದಾರೆ. ಅಮಲಾ ಪೌಲ್‌ ಪುಟ್ಟ ಮಗುವನ್ನು ಎತ್ತಿಕೊಂಡು ಆಸ್ಪತ್ರಯಿಂದ ಮನೆಗೆ ಮರಳುತ್ತಿರುವ ವಿಡಿಯೊ ಪೋಸ್ಟ್‌ ಮಾಡಿದ್ದು, ಫ್ಯಾನ್ಸ್‌ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Amala Paul
Koo

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ, ಬಹುಭಾಷಾ ಕಲಾವಿದೆ, ʼಹೆಬ್ಬುಲಿʼ ಚಿತ್ರದಲ್ಲಿ ಕಿಚ್ಚ ಸುದೀಪ್‌ ಜತೆ ಹೆಜ್ಜೆ ಹಾಕಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ್ದ ಅಮಲಾ ಪೌಲ್‌ (Amala Paul) ಜೂನ್‌ 11ರಂದು ಗಂಡು ಮುವಿಗೆ ಜನ್ಮ ನೀಡಿದ್ದಾರೆ. ಅಮಲಾ ಪೌಲ್‌ ಮತ್ತು ಜಗತ್‌ ದೇಸಾಯಿ ಕಳೆದ ನವೆಂಬರ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಅಮಲಾ ಪೌಲ್‌-ಜಗತ್‌ ದೇಸಾಯಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಗುಡ್‌ನ್ಯೂಸ್‌ ಹಂಚಿಕೊಂಡಿದ್ದಾರೆ. ಅಮಲಾ ಪೌಲ್‌ ಪುಟ್ಟ ಮಗುವನ್ನು ಎತ್ತಿಕೊಂಡು ಆಸ್ಪತ್ರಯಿಂದ ಮನೆಗೆ ಮರಳುತ್ತಿರುವ ವಿಡಿಯೊ ಪೋಸ್ಟ್‌ ಮಾಡಿದ್ದು, ಫ್ಯಾನ್ಸ್‌ ಶುಭಾಶಯ ತಿಳಿಸಿದ್ದಾರೆ. ಅಮಲಾ ಪೌಲ್‌ ಮತ್ತು ಜಗನ್‌ ದೇಸಾಯಿ ದಂಪತಿ ಜೂನ್‌ 11ರಂದು ಮಗು ಜನಿಸಿರುವುದಾಗಿ ಹೇಳಿದ್ದಾರೆ. ಜತೆಗೆ ಮಗುವಿಗೆ ಇಳಯ್‌ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಇಳಯ್‌ ಎಂದರೆ ʼʼಸಂತೋಷದ ನಗುವಿನೊಂದಿಗೆ ಬೆಳಗುವ ಉತ್ಸಾಹಭರಿತ ಆತ್ಮʼʼ, ʼʼಶ್ರೇಷ್ಠ” ಮತ್ತು “ದೇವರಂತಹ” ಎಂಬ ಅರ್ಥವಿದೆ.

ʼʼನಮ್ಮ ಮಗ ಇಳಯ್‌ ಜೂನ್‌ 11ರಂದು ಜನಿಸಿದʼʼ ಎಂಬ ಕ್ಯಾಪ್ಶನ್‌ ನೀಡಿ ದಂಪತಿ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಸದ್ಯ ಸೆಲೆಬ್ರಿಟಿಗಳು, ಅಭಿಮಾನಿಗಳು ಇವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಮಲಾ ಪೌಲ್‌ ಮತ್ತು ಉದ್ಯಮಿ ಜಗತ್ ದೇಸಾಯಿ 2023ರ ನವೆಂಬರ್ 5ರಂದು ಕೇರಳದ ಕೊಚ್ಚಿಯಲ್ಲಿ ವಿವಾಹವಾಗಿದ್ದರು. ಅದಾಗಿ ಎರಡನೇ ತಿಂಗಳಿಗೆ ಅಮಲಾ ಪೌಲ್ ತಾನು ಗರ್ಭಿಣಿ ಎನ್ನುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು.

ಅಂದಹಾಗೆ ಇದು ಅಮಲಾ ಪೌಲ್‌ ಅವರಿಗೆ ಎರಡನೇ ವಿವಾಹ. ಇದಕ್ಕೂ ಮೊದಲು ನಿರ್ದೇಶಕ ಎ.ಎಲ್.ವಿಜಯ್ ಅವರೊಂದಿಗೆ ಅಮಲಾ ಪೌಲ್‌ ವಿವಾಹ 2014ರಲ್ಲಿ ಚೆನ್ನೈನಲ್ಲಿ ನೆರವೇರಿತ್ತು. ಆದರೆ ಈ ದಾಂಪತ್ಯ ಹೆಚ್ಚು ಕಾಲ ಉಳಿಯಲಿಲ್ಲ. 2017ರಲ್ಲಿ ಅಮಲಾ ಮತ್ತು ವಿಜಯ್ ವಿಚ್ಛೇದನ ಪಡೆದುಕೊಂಡಿದ್ದರು.

ಬಹುಭಾಷಾ ನಟಿ

ಮಲಯಾಳಂ ಮೂಲದ ಅಮಲಾ ಪೌಲ್‌ ದಕ್ಷಿಣ ಭಾರತದ ಎಲ್ಲ ಚಿತ್ರರಂಗದಲ್ಲಿ ಅಭಿನಯಿಸಿ ಬಹುಭಾಷಾ ನಟಿ ಎನಿಸಿಕೊಂಡೊದ್ದಾರೆ. ಅದರಲ್ಲಿಯೂ ಅವರು ಒಂದು ಕಾಲದಲ್ಲಿ ತಮಿಳು ಚಿತ್ರರಂಗದ ಟಾಪ್‌ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಸೂರ್ಯ, ಮಾಧವನ್‌, ಆರ್ಯ, ಧನುಷ್‌ ಮುಂತಾದ ಸೂಪರ್‌ ಸ್ಟಾರ್‌ಗಳೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು.

ಅಮಲಾ ಅಭಿನಯಿಸಿದ ಮೊದಲ ಚಿತ್ರ ಮಲೆಯಾಳಂನ ʼನೀಲ ತಾಮರʼ. ಇದು 2009ರಲ್ಲಿ ತೆರೆಕಂಡಿತ್ತು. ಬಳಿಕ ಕಾಲಿವುಡ್‌ಗೆ ಕಾಲಿಟ್ಟ ಅವರು 2010ರಲ್ಲಿ ಮೂರು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡರು. ಅದರಲ್ಲಿಯೂ ʼಮೈನಾʼ ಅವರಿಗೆ ಬಹು ಜನಪ್ರಿಯತೆ ತಂದುಕೊಟ್ಟಿತು. ಈ ಚಿತ್ರದಲ್ಲಿನ ನಟನೆಗಾಗಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡರು. 2012ರಲ್ಲಿ ʼಲವ್‌ ಫೈಲೂರ್‌ʼ ಸಿನಿಮಾ ಮೂಲಕ ತೆಲುಗಿಗೆ ಕಾಲಿಟ್ಟರು. 2017ರಲ್ಲಿ ಕಿಚ್ಚ ಸುದೀಪ್‌ ಅಭಿನಯದ ʼಹೆಬ್ಬುಲಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೂ ಪ್ರವೇಶಿಸಿದರು. ಕಳೆದ ವರ್ಷ ತೆರೆಕಂಡ ಹಿಂದಿಯ ʼಭೋಲಾʼ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Amala Paul: ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್!

ಇತ್ತೀಚೆಗೆ ತೆರೆಕಂಡ ಪ್ಯಾನ್‌ ಇಂಡಿಯಾ ಸಿನಿಮಾ ʼಆಡು ಜೀವಿತಂʼನಲ್ಲಿ ಅಮಲಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್‌ ಸುಕುಮಾರನ್‌ ನಾಯಕನಾಗಿದ್ದ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಿದೆ.

Continue Reading

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

ಸ್ಯಾಂಡಲ್ ವುಡ್

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Rakshit Shetty: ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Rakshit Shetty Ekam web series release date announce
Koo

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ನಿರ್ಮಾಣ ಸಂಸ್ಥೆಯಿಂದ ಒಟಿಟಿ ಫ್ಲಾರ್ಟ್ ಫಾರಂಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಈ ವೆಬ್‌ ಸಿರೀಸ್‌ ಜುಲೈ 13ರಂದು ರಿಲೀಸ್‌ ಆಗುತ್ತಿದೆ. ಈ ಬಗ್ಗೆ ರಕ್ಷಿತ್‌ ಶೆಟ್ಟಿ ಪೋಸ್ಟ್‌ ಮಾಡಿದ್ದು ಹೀಗೆ.  

ʻʻ2020 ಜನವರಿ. ಅಥವಾ ಫೆಬ್ರವರಿಯೇ? ನೆನಪು ಮಬ್ಬಾಗಿದೆ! ಇರಲಿ. ಪರಂವಃ ಹಾಗು ಜರ್ನಿಮ್ಯಾನ್‌
ಫಿಲಂಸ್‌ ಒಟ್ಟಿಗೆ “ಏಕಂ” ಮಾಡಲು ಹೊರಟಿದ್ದು ಅಂದು. ಏನೋ ಹೊಸತೊಂದನ್ನು ಮಾಡುವ
ಉತ್ಸಾಹ ನಮ್ಮಲ್ಲಿ. ಕನ್ನಡದಲ್ಲೊಂದು ವೆಬ್‌ ಸೀರೀಸ್‌ ಹೊರ ಬರಲು ಇದೆ ಸೂಕ್ತ ಸಮಯ
ಎಂದೆನಿಸಿತ್ತು. ಆದರೆ ಅದೇ ಸಮಯಕ್ಕೆ ಕೋವಿಡ್‌ ವಕ್ಕರಿಸಿತು! ಜಗತ್ತೇ ತಲೆ ಕೆಳಗಾದ ಸಮಯ.
ನಮ್ಮಲ್ಲೂ ಆತಂಕ, ಅನಿಶ್ಚಿತತೆ. ಆದರೂ ಹಿಂದೆ ಸರಿಯದೆ ಮುನ್ನುಗ್ಗಿದೆವು.

ಅಕ್ಟೋಬರ್‌ 2021. “ಏಕಂ”ನ ಫೈನಲ್‌ ಕಟ್‌ ನೋಡಿದೆ. ಖುಷಿ ಆಯಿತು. ಹೆಮ್ಮೆ ಎನಿಸಿತು.
ಇದನ್ನ ಜಗತ್ತಿಗೆ ತೋರಿಸಬೇಕೆನಿಸಿತು. ಅದಾಗಿ ಇಂದಿಗೆ ಬರೋಬ್ಬರಿ ಎರಡೂವರೆ ವರ್ಷಗಳು! “ಏಕಂ”
ಅನ್ನು ಹೊರ ತರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ! ಎಲ್ಲೆಡೆ ನಿರಾಸೆ. ಅದೇ ನೆಪ. ಅದೇ ಸಬೂಬು| ಯಾವುದೇ
ಕೃತಿಯ ಅರ್ಹತೆಯನ್ನ ನಿರ್ಧರಿಸುವ ಅವಕಾಶ, ಹಾಗು ಹಕ್ಕು. ಪ್ರೇಕ್ಷಕರಿಗಿರಬೇಕು ಎ೦ದು ನಾನು
ಭಾವಿಸುತ್ತೇನೆ.

ಇದನ್ನೂ ಓದಿ: Rakshit Shetty: ಸಿಂಪಲ್‌ ಸ್ಟಾರ್‌ಗೆ ಇಂದು ಜನುಮದಿನದ ಸಂಭ್ರಮ; ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

ಹಾಗಾಗಿ, “ಏಕಂ” ಅನ್ನು ನಾವು ನಮ್ಮದೇ ಆದ ವೇದಿಕೆಯಲ್ಲಿ ನಿಮ್ಮ ಮುಂದೆ ತರಲು ನಿಶ್ಚಯಿಸಿದ್ದೇವೆ.
‘ಏಕಂ” ನಿಮಗೆ ಇಷ್ಟವಾಗಬಹುದು. ಇಷ್ಟವಾಗದೇ ಇರಬಹುದು. ಆದರೆ ಈ ಪ್ರಯತ್ನವನ್ನು
ನಿರ್ಲಕ್ಷಿಸುವಂತಿಲ್ಲ ಎ೦ಬುದನ್ನು ನಾನು ಬಲವಾಗಿ. ನಂಬಿದ್ದೇನೆ. “ಏಕಂ” ಒಂದು ಶ್ಲಾಘನೀಯ ಪ್ರಯತ್ನ.
ಇದನ್ನು ನಾವು ಎಷ್ಟು ಪ್ರೀತಿಯಿಂದ ಮಾಡಿದ್ದೇವೋ, ಅಷ್ಟೇ ಪ್ರೀತಿಯಿಂದ ನೀವು ನಮ್ಮ ಈ ಪ್ರಯತ್ನವನ್ನ
ಸ್ವೀಕರಿಸುತ್ತೀರಿ ಎಂದು ಆಶಿಸುತ್ತೇನೆʼʼಎಂದು ರಕ್ಷಿತ್‌ ಶೆಟ್ಟಿ ಹೇಳಿಕೊಂಡಿದ್ದಾರೆ. ಇನ್ನು ಪೋಸ್ಟರ್‌ ಮಾಹಿತಿ ಪ್ರಕಾರ ಈ ಸಿರೀಸ್‌ ಜುಲೈ 13ರಂದು www.ekamtheseries.comನಲ್ಲಿ ರಿಲೀಸ್‌ ಆಗಲಿದೆ.

ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ನಿರ್ಮಾಣ ಅಂತ ನಟ ತೊಡಗಿಸಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Kannada New Movie: ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

VISTARANEWS.COM


on

Kannada New Movie RAMARASA Hero Introduction By Kiccha Sudeepa
Koo

ಬೆಂಗಳೂರು: ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ “ಜಿ ಅಕಾಡೆಮಿ”ಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳೊಂದಿಗೆ ಖ್ಯಾತ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಈಗ “ರಾಮರಸ” ಚಿತ್ರಕ್ಕೆ ನಾಯಕನ‌ ಆಯ್ಕೆಯಾಗಿದೆ. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ “ರಾಮರಸ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ “ರಾಮರಸ” ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್‍, ‘ನಾನು ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಎಷ್ಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇನೆ. ಆದರೆ, ಪ್ರತಿ ಸೀಸನ್‍ನಲ್ಲೂ ಒಬ್ಬ ಹೊಸ ಹೀರೋ ಹುಟ್ಟಿಕೊಳ್ಳುತ್ತಿದ್ದಾನೆ. ‘ಬಿಗ್‍ ಬಾಸ್‍’ ಗೆಲ್ಲುವುದು ಅಷ್ಟು ಸುಲಭವಲ್ಲ. ಕಾರ್ತಿಕ್‍ ಅವರಿಗಂತೂ ಬಹಳಷ್ಟು ಸ್ಪರ್ಧಿಗಳಿದ್ದರು. ಅದು ಅವರಿಗೆ ಗೊತ್ತು. “ಬಿಗ್ ಬಾಸ್” ಗೆದ್ದ ಮೇಲೆ ಕಾರ್ತಿಕ್ ಅವರಿಗೆ ಒಳ್ಳೆಯ ಅವಕಾಶಗಳು ಬರುತ್ತಿದೆ‌. ಕಾರ್ತಿಕ್ ಸರಿಯಾದ ಹಾದಿಯಲ್ಲಿದ್ದಾರೆ. ಪ್ಯಾಷನೇಟ್‍ ಜನರು ಅವರ ಜೊತೆಯಾಗಿದ್ದಾರೆ. ಈ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ’ ಎಂದು ಹಾರೈಸಿದರು. ನಿರ್ಮಾಪಕ ಗುರು ದೇಶಪಾಂಡೆ ನಿರ್ಮಾಣದ ಶೈಲಿ ಹಾಗೂ ನಿರ್ದೇಶಕ ಗಿರಿರಾಜ್ ಅವರ ಕಾರ್ಯವೈಖರಿಯನ್ನು ಸುದೀಪ್ ಶ್ಲಾಘಿಸಿದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ನಾಯಕ ಕಾರ್ತಿಕ್‍ ಮಹೇಶ್‍ ಮಾತನಾಡಿ, ʻʻಮೊದಲಿನಿಂದಲೂ ನನಗೆ ಸುದೀಪ್ ಸರ್ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಅವರಿಗೆ ಹಾಗೂ ಈ ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ, ನಿರ್ದೇಶಕರಿಗೆ ಧನ್ಯವಾದಗಳು. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ. ಸುದೀಪ್ ಅವರ ಮೇಲೆ ನನಗೆ ವಿಶೇಷ ಪ್ರೀತಿ ಹಾಗೂ ಗೌರವ. ಹಾಗಾಗಿ “ಬಿಗ್ ಬಾಸ್” ಫಿನಾಲೆಯಲ್ಲಿ ಅವರು ಕೊಟ್ಟಿದ್ದ ಡ್ರೆಸ್ ಅನ್ನು ಇಂದು ಹಾಕಿಕೊಂಡು ಬಂದಿದ್ದೇನೆʼʼ ಎಂದರು.

ʻʻಪ್ರತಿಯೊಬ್ಬ ನಿರ್ದೇಶಕನಿಗೂ ಗುರು ದೇಶಪಾಂಡೆ ಅವರಂತಹ‌ ನಿರ್ಮಾಪಕರು ಸಿಗಬೇಕು.‌ ಅವರಿಗೆ ಸಿನಿಮಾ ಮೇಲೆ ತುಂಬಾ ಪ್ರೀತಿ. ಅದ್ದೂರಿಯಾಗಿ ಮೂಡಿಬಂದಿರುವ ನಾಯಕನ ಪರಿಚಯದ ವಿಶೇಷ ವಿಡಿಯೋ ಅದಕ್ಕೆ ಸಾಕ್ಷಿ. ಕಾರ್ತಿಕ್ ಮಹೇಶ್ ಅವರು ಈ ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಸುದೀಪ್ ಅವರು ನಾಯಕನನ್ನು ಪರಿಚಯಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆʼʼ ಎಂದರು ನಿರ್ದೇಶಕ ಗಿರಿರಾಜ್.

ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಅವರೊಂದಿಗೆ ಜನಪ್ರಿಯ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ನಾನು ಮೊದಲು ತಿಳಿಸಿದೆ. “ರಾಮರಸ” ಚಿತ್ರಕ್ಕೆ ಕಾರ್ತಿಕ್ ಮಹೇಶ್ ನಾಯಕನಾಗಿದ್ದಾರೆ. ನಮ್ಮ ಚಿತ್ರದ ನಾಯಕನನ್ನು ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ಅನಂತ ಧನ್ಯವಾದಗಳು ಎಂದರು ನಿರ್ಮಾಪಕ ಗುರು ದೇಶಪಾಂಡೆ.

‘ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ, ಎ.ವಿ. ಕೃಷ್ಣಕುಮಾರ್, ಅರ್ಜುನ್‍ ಕಿಟ್ಟು ಸಂಕಲನವಿದೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆಯಿರುವ ಈ‌ ಚಿತ್ರದ ಕಾರ್ಯಕಾರಿ ನಿರ್ಮಾಪಕರು‌ ಸುನೀಲ್ ಹೆಚ್ ಸಿ ಗೌಡ.

Continue Reading
Advertisement
Pakistan Begger
Latest7 mins ago

Pakistan Begger: ಪಾಕಿಸ್ತಾನವೇ ಒಂದು ಭಿಕ್ಷುಕ ದೇಶ! ಆದರೆ ಅಲ್ಲಿಯ ಈ ಭಿಕ್ಷುಕ ಎಷ್ಟು ಶ್ರೀಮಂತ ನೋಡಿ!

Union Budget 2024
ದೇಶ25 mins ago

Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Wild boar hunting in Hebbatti village Arrest of two accused
ಉತ್ತರ ಕನ್ನಡ31 mins ago

Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

a successful kidney transplanted for 32 year old woman at Fortis Hospital
ಕರ್ನಾಟಕ33 mins ago

Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

Saved Goats
ದೇಶ35 mins ago

Bakrid: ಬಕ್ರೀದ್ ವೇಳೆ ಜೈನರು ಮುಸ್ಲಿಮರ ವೇಷ ಧರಿಸಿ 124 ಮೇಕೆ ಖರೀದಿಸಿದರು! ಉದ್ದೇಶ ಹೃದಯಸ್ಪರ್ಶಿ

Self Harming
ಕರ್ನಾಟಕ44 mins ago

Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Adequately deposit the crop insurance amount in the farmers account says MLA Shivaram Hebbar
ಉತ್ತರ ಕನ್ನಡ45 mins ago

Uttara Kannada News: ಬೆಳೆ ವಿಮೆ ಮೊತ್ತ ಸಮರ್ಪಕವಾಗಿ ರೈತರ ಖಾತೆಗೆ ಜಮಾ ಮಾಡಿ; ಹೆಬ್ಬಾರ್

Youth Empowerment and Sports Department Progress Review Meeting by CM Siddaramaiah
ಕರ್ನಾಟಕ52 mins ago

Bengaluru News: ಎಲ್ಲ ಕಾಮಗಾರಿಗಳಿಗೂ ಟೆಂಡರ್‌; ಸಿದ್ದರಾಮಯ್ಯ ಸೂಚನೆ

JDS protest against petrol diesel price hike in bengaluru
ಕರ್ನಾಟಕ54 mins ago

Petrol Deisel Price Hike: ಟಾಂಗಾ, ಸೈಕಲ್ ಸವಾರಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್ ನಾಯಕರು!

Protest demanding adequate bus facility in Shira
ತುಮಕೂರು56 mins ago

Shira News: ಶಿರಾದಲ್ಲಿ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌