Congress Politics : ಮೂರು ಡಿಸಿಎಂ ಕೇಳೋದ್ರಲ್ಲಿ ತಪ್ಪೇನಿಲ್ಲ; ಪರಮೇಶ್ವರ್‌ ಬಹಿರಂಗ ಬೆಂಬಲ, ಹಲವರ ವಿರೋಧ - Vistara News

ಕರ್ನಾಟಕ

Congress Politics : ಮೂರು ಡಿಸಿಎಂ ಕೇಳೋದ್ರಲ್ಲಿ ತಪ್ಪೇನಿಲ್ಲ; ಪರಮೇಶ್ವರ್‌ ಬಹಿರಂಗ ಬೆಂಬಲ, ಹಲವರ ವಿರೋಧ

Congress Politics: ಮೂರು ಡಿಸಿಎಂ ಪ್ರಸ್ತಾಪ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಜಿ.ಪರಮೇಶ್ವರ್‌ ಬೆಂಬಲ ಸಿಕ್ಕಿದ್ದು ಇನ್ನಷ್ಟು ಚರ್ಚೆ ಹುಟ್ಟು ಹಾಕಿದೆ.

VISTARANEWS.COM


on

G Parameshwar on three DCM
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಹಕಾರ ಸಚಿವ ಕೆ.ಎನ್‌. ರಾಜಣ್ಣ (KN Rajanna) ಅವರು ಎಸೆದುಬಿಟ್ಟ ಮೂರು ಉಪಮುಖ್ಯಮಂತ್ರಿಗಳೆಂಬ (Three DCM) ಹಾವು ಎಲ್ಲೆಡೆ ಸುತ್ತಾಡುತ್ತಾ ಬುಸುಗುಟ್ಟಲು ಆರಂಭಿಸಿದೆ. ಕಾಂಗ್ರೆಸ್‌ ಪಕ್ಷದೊಳಗೆ ಇದು ಪರ ಮತ್ತು ವಿರೋಧದ ಅಭಿಪ್ರಾಯಗಳಿಗೆ ಕಾರಣವಾಗಿದ್ದು, ಭಾರಿ ಚರ್ಚೆಯನ್ನು (Congress Politics) ಹುಟ್ಟುಹಾಕಿದೆ. ಅದರೊಂದಿಗೆ ಹಿರಿಯ ನಾಯಕ, ಸಚಿವ ಜಿ. ಪರಮೇಶ್ವರ್‌ (G Parameshwar) ಅವರು ರಾಜಣ್ಣ ಬೆಂಬಲಕ್ಕೆ ನಿಂತಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ತನ್ನ ಮೇಲುಗೈಯನ್ನು ಉಳಿಸಿಕೊಳ್ಳಬೇಕಾದರೆ ದಲಿತ, ಅಲ್ಪಸಂಖ್ಯಾತ ಮತ್ತು ವೀರಶೈವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕಾಗುತ್ತದೆ ಎಂಬ ವಾದವನ್ನು ಕೆ.ಎನ್‌. ರಾಜಣ್ಣ ಮಂಡಿಸಿದ್ದರು. ಇದು ವೈಯಕ್ತಿಕ ಅಭಿಪ್ರಾಯವಾಗಿದ್ದರೂ ಇದನ್ನು ಹೈಕಮಾಂಡ್‌ ಮಟ್ಟಕ್ಕೆ ತಲುಪಿಸಿ ಚರ್ಚೆ ಮಾಡಿಸಿ ಒಂದು ತೀರ್ಮಾನಕ್ಕೆ ಬರುವಂತೆ ಮಾಡುತ್ತೇನೆ ಎನ್ನುವ ದೃಢತೆಯನ್ನು ಅವರು ಪ್ರದರ್ಶಿಸಿದ್ದರು. ಕೆ.ಎನ್‌. ರಾಜಣ್ಣ ಅವರು ಇಷ್ಟು ದೃಢವಾಗಿ ಮಾತನಾಡುವುದಕ್ಕೆ ಕಾರಣ ಈ ಐಡಿಯಾವನ್ನು ಸ್ವತಃ ಸಿದ್ದರಾಮಯ್ಯ (CM Siddaramaiah) ಅವರೇ ಕೊಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಏಕೈಕ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್‌ (DK Shivakumar) ಅವರನ್ನು ನಿಯಂತ್ರಿಸುವುದಕ್ಕೆ ಇದೊಂದು ಪ್ಲ್ಯಾನ್‌ ಎಂಬ ಚರ್ಚೆ ಇದೆ.

ಬೆಂಬಲ ಘೋಷಿಸಿದ ಪರಮೇಶ್ವರ್‌

ಮೂರು ಡಿಸಿಎಂ ಸ್ಥಾನ ರಚನೆ ವಿಚಾರದಲ್ಲಿ ಕೆ.ಎನ್. ರಾಜಣ್ಣ ಅವರ ಮಾತುಗಳನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಮರ್ಥಿಸಿದ್ದಾರೆ. ʻʻರಾಜಣ್ಣ ಕೇಳೋದ್ರಲ್ಲಿ ತಪ್ಪೇನಿಲ್ಲ. ಸಿಎಂಗೂ ಹೈಕಮಾಂಡ್ ಗೂ ಅವರೇ ತಿಳಿಸಬೇಕು. ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದರೂ ಅವರ ಅನಿಸಿಕೆ ಅವರೇ ಹೇಳಬೇಕುʼʼ ಎಂದು ಹೇಳಿದ್ದಾರೆ.

ʻʻಡಿಸಿಎಂ ಮಾಡಬೇಕು ಎಂಬ ಅವರ ಉದ್ದೇಶ ಒಳ್ಳೆಯದೇ. ಲೋಕಸಭೆ ಚುನಾವಣೆ ಮುಂಚೆ ಸಮುದಾಯಗಳಿಗೆ ಡಿಸಿಎಂ ಮಾಡಬೇಕು ಅಂತ ರಾಜಣ್ಣ ಹೇಳಿದ್ದಾರೆ. ತೀರ್ಮಾನ ಮಾಡುವವರು ಬಿಡುವವರು ಎಐಸಿಸಿ ನಾಯಕರು. ಡಿಸಿಎಂ ಸ್ಥಾನ ಮಾಡುವ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದುʼʼ ಎಂದು ಸ್ವತಃ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಅವರ ಈ ಮಾತು ಚರ್ಚೆಯನ್ನು ಇನ್ನಷ್ಟು ಬಿಗಿಗೊಳಿಸಿದೆ.

ಆದರೆ, ಹಲವಾರು ಕಾಂಗ್ರೆಸ್‌ ನಾಯಕರು ಈ ಐಡಿಯಾವವನ್ನು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿ: Congress Politics: ಕಾಂಗ್ರೆಸ್‌ನಲ್ಲೀಗ 3 ಡಿಸಿಎಂ ಚರ್ಚೆ; ಇದು ಡಿ.ಕೆ ಶಿವಕುಮಾರ್ ಹಣಿಯುವ ಸಿದ್ದರಾಮಯ್ಯ ಪ್ಲ್ಯಾನಾ?

ಅಂಥ ಚರ್ಚೆ ಇಲ್ಲ ಎಂದ ಪ್ರಿಯಾಂಕ್‌, ಯಾಕೆ ಬೇಕು ಎಂದ ಹ್ಯಾರಿಸ್‌

ಸಚಿವ ಪ್ರಿಯಾಂಕಾ ಖರ್ಗೆ: ಕೆ.ಎನ್‌. ರಾಜಣ್ಣ ಅವರು ಮಂಡಿಸಿದ ಮೂರು ಡಿಸಿಎಂ ವಿಚಾರದ ಬಗ್ಗೆ ಹೇಳಬೇಕು ಎಂದರೆ, ಮೂರು ಆದ್ರು ಹೇಳಲಿ ಐದಾದ್ರು ಹೇಳಲಿ ಹೈಕಮಾಂಡ್ ಗೆ ಹೇಳೋದಕ್ಕೆ ಮುಕ್ತ ಅವಕಾಶ ಇದೆ. ಆದರೆ ಹೈ ಕಮಾಂಡ್ ಮುಂದೆ ಇಂತಹ ಯಾವುದೇ ಚರ್ಚೆ ಆಗಿಲ್ಲ.

ಸಚಿವ ದಿನೇಶ್‌ ಗುಂಡೂರಾವ್‌ : ನಾವು ಸಾಮಾಜಿಕ ನ್ಯಾಯಕ್ಕಾಗಿ ದುಡಿಯುತ್ತಿರುವುದು. ಹುದ್ದೆ ಕೊಟ್ಟು ನಾಯಕರನ್ನು ಸಮಾಧಾನ ಪಡಿಸುವ ಅವಶ್ಯಕತೆ ನಮಗಿಲ್ಲ. ಇದು ರಾಜಕೀಯ ವಿಚಾರವಾಗಿದ್ದು. ಬಹಿರಂಗ ಚರ್ಚೆ‌ ಬೇಡ. ನಾವು ಜನರಿಗೆ ಸಹಾಯ ಮಾಡೋ ಉದ್ದೇಶದಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ. ನಮ್ಮ ಸರ್ಕಾರಕ್ಕೆ ಕಾರ್ಯಕ್ರಮ ಮುಖ್ಯ ಹೊರತು ಹುದ್ದೆ ಮುಖ್ಯ ಅಲ್ಲ.

ಸಚಿವ ಎಂ.ಬಿ ಪಾಟೀಲ್‌: ಸಚಿವ ರಾಜಣ್ಣ ಮೂರು ಡಿಸಿಎಂ ಸ್ಥಾನಕ್ಕಾಗಿ ಬೇಡಿಕೆ ಇಟ್ಟ ವಿಚಾರ ನನಗೆ ಗೊತ್ತಿಲ್ಲ. ಸಚಿವ ರಾಜಣ್ಣ ಬೇಡಿಕೆ ಕುರಿತಂತೆ ನಾನು ಮಾತನಾಡಲ್ಲ. ಅದು ಅವರ ವಯಕ್ತಿಕ ವಿಚಾರ, ನೀವು ಅವರನ್ನೇ ಕೇಳಿ. ಏನೇ ಇದ್ದರು ಅದನ್ನ ಹೈಕಮಾಂಡ್ ತೀರ್ಮಾನ ಮಾಡ್ತಾರೆ. ಅವರ ವಯಕ್ತಿಕ ಅಭಿಪ್ರಾಯ, ಪರ ವಿರೋಧ ಹೇಳಿಕೆ ನೀಡಲು ಹೋಗಲ್ಲ. ಹೈಕಮಾಂಡ್ ಅಭಿಪ್ರಾಯ ಕೇಳಿದ್ರೆ ನನ್ನ ಅಭಿಪ್ರಾಯ ಹೇಳುವೆ.

ಶಾಸಕ ಎನ್‌.ಎ ಹ್ಯಾರಿಸ್‌: ಕೆ.ಎನ್‌. ರಾಜಣ್ಣ ಅವರು ಹೇಳಿದ್ದಾರೋ, ಇಲ್ಲವೋ ಗೊತ್ತಿಲ್ಲ. ಆ ರೀತಿ ಹೇಳುವ ಹಾಗಿಲ್ಲ. ಪಕ್ಷದಲ್ಲಿ ಎಲ್ಲರೂ ಶಿಸ್ತಿನಿಂದ ಇರಬೇಕು. ಪಕ್ಷ ತೀರ್ಮಾನ ಮಾಡುವುದನ್ನು ನಾವು ಪಾಲಿಸಿಕೊಂಡು ಹೋಗಬೇಕು. ಇರುವ ವ್ಯವಸ್ಥೆ ಸರಿಯಾಗಿದೆ, ಅದೇ ಸಾಕು ಈಗ. ಅದು ಅವರ ವೈಯಕ್ತಿಕ ಅಭಿಪ್ರಾಯ. ಹಾಗಂತ ಸುಮ್ಮನೆ ಇಲ್ಲದೆ ಇರೋದನ್ನು ಮಾತಾಡಿಕೊಂಡು ಇರೋದು ಬೇಕಾಗಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

ಕಳೆದೊಂದು ವಾರದಿಂದ (Arecanut Price) ಅಡಿಕೆ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಹಾಗಂತ ಅಡಿಕೆ ತೋಟದ ಉಪ ಬೆಳೆಗಳ ಧಾರಣೆ ಏರುತ್ತಿದೆ. ಈ ಕುರಿತ ನಿಖರ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

arecanut price
Koo

| ಅರವಿಂದ ಸಿಗದಾಳ್, ಮೇಲುಕೊಪ್ಪ

ಕಳೆದ ತಿಂಗಳು ಏರಿಕೆ ಗ್ರಾಫ್ (Arecanut Price) ಕಂಡು ರೈತರಲ್ಲಿ ಸಂತಸ ಮೂಡಿಸಿದ ಶಿವಮೊಗ್ಗ ಅಡಿಕೆ ಧಾರಣೆ, ಮೇ ತಿಂಗಳಿನ ಪ್ರಾರಂಭದಲ್ಲಿ ಮತ್ತೊಂದು ಸಣ್ಣ ಮೊತ್ತದ ಏರಿಕೆ ದಾಖಲಿಸಿ, ಕಳೆದೊಂದು ವಾರದಿಂದ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಆದರೆ
ಕಳೆದ ವಾರ ಅಂದರೆ 14.05.2024ರಂದು ಗರಿಷ್ಠ ₹ 54,596 ದಾಖಲಿಸಿದ್ದ ರಾಶಿ ಇಡಿ ಧಾರಣೆ, ದಿನ ದಿನವೂ ಇಳಿಯುತ್ತ, ಇವತ್ತು ₹ 53,009 ಬಂದು ನಿಂತಿದೆ. ಸರಿ ಸುಮಾರು ₹ 1,500 ದರ ‘ಅಡಿಕೆ ರಾಶಿ ಇಡಿ’ಯಲ್ಲಿ ಕೊರತೆ ಕಾಣಿಸಿದೆ.

ಅಡಿಕೆ ರಾಶಿ ಇಡಿಯಲ್ಲಿ ₹1,500 ಇಳಿಮುಖವಾಗಿದ್ದರೆ, ಅಡಿಕೆ ಬೆಟ್ಟೆ ಧಾರಣೆಯಲ್ಲಿ ಕೇವಲ ₹.500 ಮಾತ್ರ ಇಳಿಕೆಯಾಗಿದ್ದು, ಆಲ್‌ಮೋಸ್ಟ್ ಸ್ಥಿರತೆಯನ್ನೇ ಉಳಿಸಿಕೊಂಡಿದೆ. ಇದೇ ಸಮಯದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿರುವ ಆವಕವೂ (ಪೂರೈಕೆ) ಗಣನೀಯವಾಗಿ ಅತ್ತ-ಇತ್ತ ಆಗುತ್ತಿರುವುದು ಕಂಡು ಬಂದಿದೆ. ಅಡಿಕೆ ಆವಕ ಏರಿಳಿಕೆ ಆಗುತ್ತಿದ್ದರೂ, ಅಡಿಕೆ ಧಾರಣೆ ಮಾತ್ರ ಇಳಿಯುತ್ತಿರುವುದು ಒಂದು ವಿಶೇಷ.

ಶಿವಮೊಗ್ಗ APMC ದಾಖಲೆಗಳ ಪ್ರಕಾರ ಹೆಚ್ಚು ವ್ಯಾಪಾರವಾಗುವ ‘ರಾಶಿ ಇಡಿ ಅಡಿಕೆ’ ಆವಕದ ‘ಏರಿಳಿಕೆ’ ಹೀಗಿದೆ:
ದಿನಾಂಕ 14.05.2024 – 15,921 ಕ್ವಿಂಟಾಲ್
ದಿನಾಂಕ 15.05.2024 – 5,435 ಕ್ವಿಂಟಾಲ್
ದಿನಾಂಕ 16.05.2024 – 14,464ಕ್ವಿಂಟಾಲ್
ದಿನಾಂಕ 20.05.2024 – 3231 ಕ್ವಿಂಟಾಲ್
ದಿನಾಂಕ 21.05.2024 – 11,538 ಕ್ವಿಂಟಾಲ್
ರಾಶಿ ಇಡಿ ಧಾರಣೆ 53,009ಕ್ಕೆ ಇಳಿಕೆಯಾದಾಗ, ಗೊರಬಲು ಅಡಿಕೆ ₹.38,800 ಸನಿಹದಲ್ಲಿದೆ.

ಸಿಪ್ಪೆ ಗೋಟು ದರ ಏರಿಕೆ

ಈ ಎಲ್ಲ ವೆರೈಟಿಗಳ ಧಾರಣೆಯ ಇಳಿಕೆ ಕಾಣುತ್ತಿರುವಾಗ, ಸಿಪ್ಪೆ ಗೋಟು ದರ ಮಾತ್ರ ಸಣ್ಣ ಮಟ್ಟದ ಏರಿಕೆಯನ್ನು ದಾಖಲಿಸಿದೆ. APMC ಮಂಡಿ ಮತ್ತು ಸೊಸೈಟಿಗಳಲ್ಲಿ ಸಿಪ್ಪೆ ಗೋಟು ಅಡಿಕೆ ವ್ಯವಹಾರ ಬಹಳ ಕಮ್ಮಿ ಮತ್ತು ನಗದು ಮಾರುಕಟ್ಟೆಯಲ್ಲೇ ಹೆಚ್ಚಾಗಿ ಸಿಪ್ಪೆ ಗೋಟು ಅಡಿಕೆ ವ್ಯಾಪಾರ ಕಾಣುವುದು.

ಪ್ರತೀ ವರ್ಷವೂ ನಗದು ಮಾರುಕಟ್ಟೆಯಲ್ಲಿ ಮೇ 15 ರ ನಂತರ ಸಿಪ್ಪೆ ಗೋಟು ಅಡಿಕೆ ಚೇತರಿಕೆ ಕಾಣುವುದು ಎಂದು ನಂಬಿಕೆ ಮತ್ತು ವಾಡಿಕೆಯಾಗಿದೆ. ಅದರಂತೆ ಮೇ 15 ರಿಂದ ಸಿಪ್ಪೆ ಗೋಟು ಅಡಿಕೆ ಏರಿಕೆಯೊಂದಿಗೆ ₹.19,000 ದಲ್ಲಿ ವ್ಯಾಪಾರ ನೆಡೆಯುತ್ತಿದೆ ಎಂದು ವರದಿಯಾಗಿದೆ. (ಸಿಪ್ಪೆ ಗೋಟಿನ ಅಡಿಕೆಗೆ ಬಿಲ್ಲ ಇರುವುದಿಲ್ಲ. ಅಧಿಕೃತವಾಗಿ APMC ಯಲ್ಲಿ ಇದರ ವ್ಯವಹಾರ ಕಡಿಮೆ ಇರುವುದರಿಂದ, ವ್ಯಾಪಾರಸ್ತರು/ಏಜಂಟರು ನೇರವಾಗಿ ರೈತರ ಅಂಗಳದಲ್ಲೇ ಖರೀಧಿ ಮಾಡುವುದರಿಂದ ವ್ಯಾವಹಾರಿಕ ದಾಖಲೆಗಳು ಎಲ್ಲಾ ಕಡೆ ಇರುವುದು ಕಮ್ಮಿ.)
ಸಿಪ್ಪೆ ಗೋಟು ದರ ಇನ್ನಷ್ಟು ಏರುವ ನಿರೀಕ್ಷೆಯಿದ್ದು, ಸದ್ಯದಲ್ಲೇ ಓಪನ್ ನಗದು ಮಾರುಕಟ್ಟೆಯಲ್ಲಿ ₹.20,000 ದಾಟುವ ನಿರೀಕ್ಷೆ ರೈತರದು.

ಅಡಿಕೆ ಬೆಳೆಗಾರರ ನಿರೀಕ್ಷೆ ಮತ್ತು ಅಭಿಪ್ರಾಯ ಪ್ರಕಾರ, ಎಲ್ಲಾ ವೆರೈಟಿ ಅಡಿಕೆಗಳ (ಹಸ, ಬೆಟ್ಟೆ, ಇಡಿ, ಗೊರಬಲು, ಸಿಪ್ಪೆ ಗೋಟು) ಧಾರಣೆಗಳು ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಮೇಲೆ, ವ್ಯಾಪಾರ ವಹಿವಾಟು ತೀವ್ರತೆ ಪಡೆದು, ಧಾರಣೆ ಗ್ರಾಫ್ ಮೇಲ್ಮುಖವಾಗಲಿದೆ ಎಂದು ಅಂದಾಜಿಸಲಾಗುತ್ತಿದೆ.

ಉಪ ಬೆಳೆ ಧಾರಣೆ ಏರಿಕೆ

ಅಡಿಕೆ ಬೆಲೇ ಏರಿಳಿತವಾಗುವ ಸಮಯದಲ್ಲಿ, ಅಡಿಕೆಯ ತೋಟದಲ್ಲಿನ ಉಪ ಬೆಳೆಯಾದ ಕಾಳು ಮೆಣಸು ಧಾರಣೆ ಗಣನೀಯವಾಗಿ ಏರುತ್ತಿದ್ದು, ಕಳೆದ ವಾರ ₹.56,500 (ಕ್ವಿಂಟಾಲಿಗೆ) ಇದ್ದ ದರ, ಇವತ್ತು ₹.60,000 ದಾಟಿದೆ. ವಿಯಟ್ಣಾಮ್‌ನಲ್ಲಿ ಕಾಳು ಮೆಣಸು ಬೆಳೆ ತೀವ್ರ ಕುಸಿತ ಕಂಡ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದು, ಭಾರತದ ಕಾಳು ಮೆಣಸಿಗೆ ಜಾಕ್ ಪಾಟ್ ಧಾರಣೆ ಸಿಗಲಿದೆ ಎಂದು ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ. ಬಹುಶಃ ಎಲ್ಲ ಧಾರಣೆಗಳ ಗಣನೀಯ ಏರಿಳಿತಗಳಿಗೂ ಚಾಲನೆ ಸಿಗುವುದು ಜೂನ್ ನಾಲ್ಕರ ನಂತರ? ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್ಕಿ ಬಾರ್ ₹ 60,000 ಪಾರ್’ ಆಗಲಿದೆಯಾ? ಕಾದು ನೋಡಬೇಕು!

ಇದನ್ನೂ ಓದಿ: Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Continue Reading

ಕರ್ನಾಟಕ

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

Self Harming: ಗದಗನ ಬಸವೇಶ್ವರ ನಗರದಲ್ಲಿ‌ನ ಸರ್ಕಾರಿ ಶಾಲೆ ನಂ. 6 ರಲ್ಲಿ ಶಿಕ್ಷಕನಾಗಿದ್ದ ಈಶಪ್ಪ ಕಳೆದ ರಾತ್ರಿ ಹೆಂಡತಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆಗೆ ಆಕೆಯ ಸಹೋದರರಾದ ಅನಿಲ್‌ ಪವಾರ ಮತ್ತು ಮಂಜುನಾಥ ಪವಾರ ಎಂಬುವವರು ಮನಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಸಹೋದರಿಯೊಂದಿಗೆ ಭಾವ ಜಗಳ ಮಾಡುತ್ತಿರುವುದನ್ನು ನೋಡಿಕೊಂಡು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಇದರಿಂದ ಸಿಟ್ಟಿಗೆದ್ದ ಅವರು ನಮ್ಮ ತಂಗಿ ಜತೆಗೆ ಯಾಕೆ ಜಗಳ ಮಾಡುತ್ತೀಯಾ ಎಂದು ಈಶಪ್ಪನಿಗೆ ಎರಡು ಬಾರಿಸಿದ್ದಾರೆ. ಇದರಿಂದ ಮನನೊಂದು ಈಶಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

Self Harming Husband commits suicide for taking his wife home
Koo

ಗದಗ: ಭಾವಂದಿರು ಬಂದು ಥಳಿಸಿ ತನ್ನ ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋದರು ಎಂಬ ಕಾರಣಕ್ಕೆ ಪತಿ ಮಹಾಶಯನೊಬ್ಬ ನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಗದಗ ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ.

ಈಶಪ್ಪ ಕಟ್ಟಿಮನಿ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನನ್ನ ಸಾವಿಗೆ ಭಾವಂದಿರೇ (ಪತ್ನಿಯ ಸಹೋದರರು) ಕಾರಣ ಎಂದು‌ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗದಗನ ಬಸವೇಶ್ವರ ನಗರದಲ್ಲಿ‌ನ ಸರ್ಕಾರಿ ಶಾಲೆ ನಂ. 6 ರಲ್ಲಿ ಶಿಕ್ಷಕನಾಗಿದ್ದ ಈಶಪ್ಪ ಕಳೆದ ರಾತ್ರಿ ಹೆಂಡತಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆಗೆ ಆಕೆಯ ಸಹೋದರರಾದ ಅನಿಲ್‌ ಪವಾರ ಮತ್ತು ಮಂಜುನಾಥ ಪವಾರ ಎಂಬುವವರು ಮನಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಸಹೋದರಿಯೊಂದಿಗೆ ಭಾವ ಜಗಳ ಮಾಡುತ್ತಿರುವುದನ್ನು ನೋಡಿಕೊಂಡು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಇದರಿಂದ ಸಿಟ್ಟಿಗೆದ್ದ ಅವರು ನಮ್ಮ ತಂಗಿ ಜತೆಗೆ ಯಾಕೆ ಜಗಳ ಮಾಡುತ್ತೀಯಾ ಎಂದು ಈಶಪ್ಪನಿಗೆ ಎರಡು ಬಾರಿಸಿದ್ದಾರೆ. ಅಲ್ಲದೆ, ಈ ವೇಳೆ ಸಾಕಷ್ಟು ಗಲಾಟೆಗಳು ಸಹ ನಡೆದಿವೆ ಎನ್ನಲಾಗಿದೆ.

ಕೊನೆಗೆ ಮಾತಿಗೆ ಮಾತು ಬೆಳೆದಿದ್ದರಿಂದ ಅನಿಲ್‌ ಮತ್ತು ಮಂಜುನಾಥ ಅವರು ಇನ್ನು ತಮ್ಮ ತಂಗಿ ಇಲ್ಲಿ ಇರುವುದು ಸರಿಯಲ್ಲ. ಆಕೆಯನ್ನು ತವರು ಮನೆಗೆ ಕರೆದೊಯ್ಯುವುದೇ ಸರಿ ಎಂದು ನಿರ್ಧರಿಸಿ ಅಲ್ಲಿಂದ ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ಇದರಿಂದ ಮನನೊಂದ ಈಶಪ್ಪ ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಈ ವೇಳೆ ಡೆತ್‌ ನೋಟ್‌ ಬರೆದಿಟ್ಟಿದ್ದು, ತನ್ನ ಸಾವಿಗೆ ಭಾವಂದಿರಾದ ಅನಿಲ್‌ ಮತ್ತು ಮಂಜುನಾಥ್‌ ಅವರೇ ಕಾರಣ ಎಂದು ದೂರಿದ್ದಾರೆ. ನನ್ನ ಸಾವಿಗೆ ಇವರಿಬ್ಬರೂ ಕಾರಣರಾಗಿದ್ದಾರೆ. ಇವರಿಗೆ ಶಿಕ್ಷೆ ಆಗಲೇಬೇಕು ಎಂದು ಉಲ್ಲೇಖಿಸಿದ್ದಾರೆ. ಗದಗ ನಗರ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Naxal activities: ವೆಂಕಟಮ್ಮನಹಳ್ಳಿ ನಕ್ಸಲ್ ದಾಳಿ ಕೇಸ್‌; 19 ವರ್ಷಗಳಿಂದ ತಲೆಮರೆಸಿಕೊಂಡಿದ್ದವ ಅರೆಸ್ಟ್‌

ತುಮಕೂರು: ವೆಂಕಟಮ್ಮನಹಳ್ಳಿ ನಕ್ಸಲ್ ದಾಳಿ (Naxal activities) ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನವಾಗಿದೆ. ಶಂಕರ ಅಲಿಯಾಸ್‌ ಕೊತ್ತಗೆರೆ ಶಂಕರ (38) ಬಂಧಿತ ಆರೋಪಿಯಾಗಿದ್ದಾನೆ.

2005ರಲ್ಲಿ ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿಯಲ್ಲಿ ಪೊಲೀಸ್ ಕ್ಯಾಂಪ್ ಮೇಲೆ ನಕ್ಸಲಿಯರ ದಾಳಿ ನಡೆದಿತ್ತು. ಪೊಲೀಸ್ ಕ್ಯಾಂಪ್ ಮೇಲೆ ಸುಮಾರು 300ಕ್ಕೂ ಹೆಚ್ಚು ಮಾವೊಯಿಸ್ಟ್ ನಕ್ಸಲಿಯರು ದಾಳಿ ಮಾಡಿದ್ದರು. ದಾಳಿ ವೇಳೆ ಕರ್ತವ್ಯದಲ್ಲಿದ್ದ 7 ಮಂದಿ ಪೊಲೀಸರನ್ನು ಬಂದೂಕು ಹಾಗೂ ಬಾಂಬ್‌ಗಳಿಂದ ಕೊಲೆಗೈದಿದ್ದರು. ಘಟನೆಯಲ್ಲಿ 5 ಮಂದಿ ಪೊಲೀಸರಿಗೆ ಗಂಭೀರ ಗಾಯವಾಗಿತ್ತು.

ಅಲ್ಲದೇ ಕ್ಯಾಂಪ್ ಮುಂಭಾಗ ನಿಂತಿದ್ದ ಖಾಸಗಿ ಬಸ್ ಡ್ರೈವರ್‌ನ ಕೊಲೆಯಾಗಿತ್ತು. ಪೊಲೀಸ್ ಕ್ಯಾಂಪ್‌ನಲ್ಲಿದ್ದ ಬಂದೂಕುಗಳು ಹಾಗೂ ಗುಂಡುಗಳನ್ನು ದೋಚಿಕೊಂಡು ನಕ್ಸಲ್ ಟೀಂ ನಾಪತ್ತೆಯಾಗಿತ್ತು. ಈ ಸಂಬಂಧ ಪಾವಗಡ ತಾಲೂಕಿನ ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಸದರಿ ಪ್ರಕರಣದಲ್ಲಿ 32 ಆರೋಪಿಗಳ ಮೇಲೆ ಪಾವಗಡ ಜೆಎಂಎಫ್‌ಸಿ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಪ್ರಕರಣ ಸಂಬಂಧ ಆರೋಪಿಗಳ ಹುಡುಕಾಟದಲ್ಲಿದ್ದ ಪೊಲೀಸರಿಗೆ ಆರೋಪಿ ಶಂಕರ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರಿನ ಗೌರಿಪಾಳ್ಯದಲ್ಲಿ ವಾಸವಿದ್ದ ಆರೋಪಿ ಶಂಕರ ಬಿಬಿಎಂಪಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ತುಮಕೂರು ಎಸ್‌ಪಿ ಅಶೋಕ್ ಕೆ.ವಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic city) ಪ್ರತಿಷ್ಠಿತ ಹೋಟೆಲ್‌ಗೆ ಇಂದು ಬಾಂಬ್ ಬೆದರಿಕೆ ಮೇಲ್ (Bomb Hoax) ಬಂದಿದೆ. ಈ ಹಿನ್ನೆಲೆಯಲ್ಲಿ ಹೋಟೆಲ್‌ (Hotel) ಆವರಣವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ. ಶಾಲೆ, ದೇವಸ್ಥಾನ ಬಳಿಕ ಇದೀಗ ಹೋಟೆಲ್‌ ಬಾಂಬ್‌ ಬೆದರಿಕೆಗೆ ತುತ್ತಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಬಳಿಯ ಒಟೇರಾ (Hotel Oterra) ಎಂಬ ಹೋಟೆಲ್‌ಗೆ ಬಾಂಬ್‌ ಬೆದರಿಕೆ ಮೇಲ್ ರವಾನೆಯಾಗಿದೆ. ತಡರಾತ್ರಿ 2 ಘಂಟೆಗೆ ಮೇಲ್ ಬಂದಿದ್ದು, ಇಂದು ಬೆಳಿಗ್ಗೆ ಹೋಟೆಲ್ ಸಿಬ್ಬಂದಿಗಳು ಮೇಲ್ ಚೆಕ್ ಮಾಡುವಾಗ ಕಂಡಿದೆ. ಆಗ ಗಾಬರಿಯಾಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಒಟೇರಾ ಹೋಟೆಲ್‌ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಬಾಂಬ್ ಸ್ಕ್ವಾಡ್ ಕರೆಸಿ ತಪಾಸಣೆ ನಡೆಸಿದ್ದಾರೆ. ಸದ್ಯ ಯಾವುದೇ ಬಾಂಬ್‌ ಕಂಡುಬಂದಿಲ್ಲ. ಮುನ್ನೆಚ್ಚರಿಕೆಯಾಗಿ ತಪಾಸಣೆ ಮುಗಿಯುವವರೆಗೂ ಹೋಟೆಲ್‌ ಆವರಣವನ್ನು ಗ್ರಾಹಕರಿಗೆ ಬಂದ್‌ ಮಾಡಲಾಗಿದೆ.

ಶಾಲೆ, ದೇವಸ್ಥಾನಗಳಿಗೆ ಬೆದರಿಕೆ

ಇತ್ತೀಚೆಗೆ ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆ‌ಯಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಿಟಿ ಎಸ್.ಬಿ.ಗೆ ಇ-ಮೇಲ್ ಬಂದಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಹಲವು ಪ್ರತಿಷ್ಠಿತ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಇದು ಕೂಡ ಹುಸಿಯಾಗಿತ್ತು. ಇತ್ತೀಚೆಗೆ ಹೊಸದಿಲ್ಲಿಯ ಹತ್ತಾರು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದು, ಆ ಎಲ್ಲ ಶಾಲೆಗಳ ಮಕ್ಕಳಿಗೂ ರಜೆ ನೀಡಿ ಆವರಣ ತಲಾಶ್‌ ಮಾಡಲಾಗಿತ್ತು. ಇದು ಕೂಡ ಹುಸಿ ಎಂದು ಕಂಡುಬಂದಿತ್ತು. ಹೀಗೆ ಬೆದರಿಕೆ ಇಮೇಲ್‌ ಮಾಡಿದ ವ್ಯಕ್ತಿ ಅಪ್ರಾಪ್ತ ವಯಸ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದರು. ನಂತರ ದೆಹಲಿಯ ವಿಮಾನ ನಿಲ್ದಾಣ (delhi airport) ಮತ್ತು ಹಲವಾರು ಆಸ್ಪತ್ರೆಗಳಿಗೆ (hospital) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬಂದಿದ್ದವು.

ಇದನ್ನೂ ಓದಿ: Ration Card : ಸಾವಿನ ಎಡವಟ್ಟು ಸರಿಪಡಿಸಿದ ಆಹಾರ ಇಲಾಖೆ! ಮನೆ ಬಾಗಿಲಿಗೆ ಬಂತು ರೇಷನ್‌ ಕಾರ್ಡ್‌; ಇದು ವಿಸ್ತಾರ ನ್ಯೂಸ್‌ ಇಂಪ್ಯಾಕ್ಟ್‌

ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಹೀಗೆ ಬೆದರಿಕೆ ಮೇಲ್‌ ಮಾಡುತ್ತಿರುವವರ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ದೇಶದ ಸರ್ವರ್‌ ಕನೆಕ್ಷನ್‌ ತಪ್ಪಿಸಿ ವಿಪಿಎನ್‌ ಮೂಲಕ ಕಾರ್ಯಾಚರಿಸಿ ವಿದೇಶಗಳ ಸರ್ವರ್‌ನಿಂದ ಬಂದಂತೆ ತೋರಿಸುವ ಕಲೆಯಲ್ಲಿ ನಿಷ್ಣಾತರಾಗಿದ್ದಾರೆ. ಹೀಗಾಗಿ ಇದನ್ನು ಭೇದಿಸುವುದು ಪೊಲೀಸರಿಗೆ ಕಷ್ಟವಾಗುತ್ತಿದೆ.

ದೂರು ದಾಖಲು

ಇ-ಮೇಲ್‌ಗಳ ನಿಖರವಾದ ಮೂಲವನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ಇಂಟರ್‌ಪೋಲ್ ಮೂಲಕ ರಷ್ಯಾದ ಮೇಲಿಂಗ್ ಸೇವಾ ಕಂಪೆನಿ Mail.ru ಅನ್ನು ಸಂಪರ್ಕಿಸಿದರು. ಬಾಂಬ್ ಹುಸಿ ಇ-ಮೇಲ್‌ಗಳ ಉದ್ದೇಶವು ಸಾಮೂಹಿಕ ಭೀತಿಯನ್ನು ಸೃಷ್ಟಿಸುವುದು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದಾಗಿದೆ ಎಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸುಳ್ಳು ಬಾಂಬ್ ಬೆದರಿಕೆಗಳ ಸಂದರ್ಭಗಳನ್ನು ಎದುರಿಸಲು ವಿವರವಾದ ಪ್ರೋಟೋಕಾಲ್ ಮತ್ತು ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ಸ್ (SOP) ಗಾಗಿ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ವಾರದ ಆರಂಭದಲ್ಲಿ, ಗೃಹ ಕಾರ್ಯದರ್ಶಿ ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ತಪ್ಪು ಮಾಹಿತಿಯಿಂದಾಗಿ ಯಾವುದೇ ಅನಗತ್ಯ ಭಯವನ್ನು ಉಂಟಾಗದಂತೆ ತಡೆಯಲು ವ್ಯವಸ್ಥೆಗೊಳಿಸುವಂತೆ ಕೇಳಿಕೊಂಡಿದ್ದರು.
ಭದ್ರತೆ ಹೆಚ್ಚಳಕ್ಕೆ ಸೂಚನೆ

ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭದ್ರತೆ, ಸಿಸಿಟಿವಿ ಕೆಮರಾ ಮತ್ತು ಇಮೇಲ್‌ಗಳ ನಿಯಮಿತ ಮೇಲ್ವಿಚಾರಣೆಯನ್ನು ಹೆಚ್ಚಿಸುವ ಅಗತ್ಯವನ್ನು ಸಚಿವಾಲಯ ಒತ್ತಿಹೇಳಿದೆ. ತಪ್ಪು ಮಾಹಿತಿಯು ಯಾವುದೇ ಅನಗತ್ಯ ಭೀತಿಯನ್ನು ಸೃಷ್ಟಿಸದಂತೆ ಪರಿಣಾಮಕಾರಿ ಪ್ರತಿಕ್ರಿಯೆ ಕಾರ್ಯವಿಧಾನಕ್ಕಾಗಿ ನಿಕಟ ಸಮನ್ವಯವನ್ನು ಹೊಂದಲು ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ.

Continue Reading

ಪ್ರವಾಸ

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

ಆಧ್ಯಾತ್ಮಿಕತೆ, ನೈಸರ್ಗಿಕ ಸೌಂದರ್ಯ ಮತ್ತು ಸಾಂಸ್ಕೃತಿಕ ಅನುಭವಗಳ ಪರಿಪೂರ್ಣ ಮಿಶ್ರಣವನ್ನು ನೀಡುವ ಉಡುಪಿ ಸ್ಮರಣೀಯ ಪ್ರವಾಸಕ್ಕೆ (Udupi Tour) ಸೂಕ್ತವಾದ ತಾಣವಾಗಿದೆ. ಸಾಹಸ, ವಿಶ್ರಾಂತಿ ಅಥವಾ ಆಧ್ಯಾತ್ಮಿಕತೆಯ ಅನುಭವದಲ್ಲಿ ಮಿಂದೇಳಲು ಬಯಸಿದರೆ ಇಲ್ಲಿಗೊಮ್ಮೆ ಭೇಟಿ ನೀಡಲು ಮರೆಯದಿರಿ.

VISTARANEWS.COM


on

By

Udupi Tour
Koo

ಕೃಷ್ಣನ ನಾಡು ಉಡುಪಿಯಲ್ಲಿ ಪ್ರವಾಸಿಗರನ್ನು (Udupi Tour) ಸೆಳೆಯುವ ಹಲವಾರು ತಾಣಗಳಿವೆ. ಸ್ನೇಹಿತರು, ಬಂಧುಗಳೊಂದಿಗೆ ಉಡುಪಿಗೆ ಭೇಟಿ ನೀಡಿದಾಗ ಇಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆ, ಪಾಕಶಾಲೆಯ ಸವಿರುಚಿ, ನಯನ ಮನೋಹರ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಮರೆಯದಿರಿ.

ಕರ್ನಾಟಕದ (karnataka) ಕರಾವಳಿ ಪ್ರದೇಶದಲ್ಲಿ ( coastal region) ನೆಲೆಸಿರುವ ಉಡುಪಿಯು ಹಲವಾರು ಸುಂದರ ಅನುಭವಗಳನ್ನು ನೀಡುತ್ತದೆ. ಸ್ಮರಣೀಯ ಪ್ರವಾಸಕ್ಕೆ ಇದೊಂದು ಸೂಕ್ತ ತಾಣವಾಗಿದೆ. ಪ್ರಾಚೀನ ದೇವಾಲಯಗಳಿಂದ (temples) ಹಿಡಿದು ಸುಂದರ ಕಡಲತೀರಗಳವರೆಗೆ (beach).. ಉಡುಪಿಯಲ್ಲಿ ಭೇಟಿ ನೀಡಬಹುದಾದ ಕೆಲವು ಅತ್ಯುತ್ತಮ ತಾಣಗಳಿವೆ.


ಶ್ರೀ ಕೃಷ್ಣ ದೇವಾಲಯ

ಉಡುಪಿಯ ಅತ್ಯಂತ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕೃಷ್ಣ ದೇವಸ್ಥಾನದಿಂದ ಪ್ರವಾಸವನ್ನು ಆರಂಭಿಸಬಹುದು. ಭಗವಾನ್ ಕೃಷ್ಣನಿಗೆ ಸಮರ್ಪಿತವಾಗಿರುವ ಈ ದೇವಾಲಯವು ವಿಶಿಷ್ಟವಾದ ವಾಸ್ತುಶಿಲ್ಪ ಮತ್ತು ಧಾರ್ಮಿಕ ಮಹತ್ವಕ್ಕಾಗಿ ಹೆಸರುವಾಸಿಯಾಗಿದೆ. ಇಲ್ಲಿನ ಹಲವು ಆಚರಣೆಗಳು ಯಾತ್ರಿಕರನ್ನು ಸಮ್ಮೋಹನಗೊಳಿಸುವುದು.


ಮಲ್ಪೆ ಬೀಚ್

ವಿಶ್ರಾಂತಿ ಬಯಸಿದರೆ ಮಲ್ಪೆ ಬೀಚ್‌ ಗಿಂತ ಉತ್ತಮ ತಾಣ ಬೇರೆ ಇಲ್ಲ. ಚಿನ್ನದ ಮರಳು ಮತ್ತು ಆಕಾಶ ನೀಲಿ ನೀರಿನ ಸುಂದರವಾದ ದೃಶ್ಯವನ್ನು ಇಲ್ಲಿ ಕಣ್ತುಂಬಿಕೊಳ್ಳಬಹುದು. ಬಿಸಿಲಿನಲ್ಲಿ ಬೇಯುತ್ತಿರಲಿ, ದಡದಲ್ಲಿ ಆರಾಮವಾಗಿ ಅಡ್ಡಾಡುತ್ತಿರಲಿ ಅಥವಾ ಪ್ಯಾರಾಸೈಲಿಂಗ್ ಮತ್ತು ಜೆಟ್-ಸ್ಕೀಯಿಂಗ್‌ನಂತಹ ರೋಮಾಂಚಕ ಜಲ ಕ್ರೀಡೆಗಳಲ್ಲಿ ಪಾಲ್ಗೊಳ್ಳಬಹುದು.


ಸೇಂಟ್ ಮೇರಿಸ್ ದ್ವೀಪ

ಮಲ್ಪೆ ಬೀಚ್‌ನಿಂದ ಸೇಂಟ್ ಮೇರಿಸ್ ದ್ವೀಪಕ್ಕೆ ಚಿಕ್ಕದಾದ ದೋಣಿ ವಿಹಾರವನ್ನು ನಡೆಸಬಹುದು. ಇದು ವಿಶಿಷ್ಟವಾದ ಕಲ್ಲಿನ ರಚನೆಗಳು ಮತ್ತು ಪ್ರಾಚೀನ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ.


ಮಣಿಪಾಲ

ಶೈಕ್ಷಣಿಕ ಸಂಸ್ಥೆಗಳು, ಉತ್ಸಾಹಭರಿತ ಕೆಫೆಗಳು ಮತ್ತು ಸಾಂಸ್ಕೃತಿಕ ಆಕರ್ಷಣೆಗಳಿಗೆ ನೆಲೆಯಾಗಿರುವ ಮಣಿಪಾಲದ ರೋಮಾಂಚಕ ಪಟ್ಟಣವನ್ನು ಸುತ್ತಾಡಬಹುದು. ಇಲ್ಲಿನ ಮಣಿಪಾಲ್ ವಿಶ್ವವಿದ್ಯಾನಿಲಯದ ಕ್ಯಾಂಪಸ್, ಹೆರಿಟೇಜ್ ವಿಲೇಜ್, ತಾರಾಲಯ ಸೇರಿದಂತೆ ಪ್ರವಾಸಿಗರು ಇಷ್ಟಪಡುವ ಇನ್ನೂ ಅನೇಕ ತಾಣಗಳು ಇಲ್ಲಿವೆ. ಸ್ಥಳೀಯ ತಿನಿಸುಗಳಲ್ಲಿ ರುಚಿಕರವಾದ ಬೀದಿ ಆಹಾರವನ್ನು ಇಲ್ಲಿ ಸವಿಯಬಹುದು.


ಪಡುಕೆರೆ ಬೀಚ್

ಪಡುಕೆರೆ ಬೀಚ್‌ನಲ್ಲಿ ನಗರದ ಜೀವನದ ಜಂಜಾಟದಿಂದ ದೂರವಾಗಿ ಪ್ರಶಾಂತ ಸಮುದ್ರ ತೀರದಲ್ಲಿ ಸುತ್ತಾಡಬಹುದು. ಕಡಲ ತೀರವಾಸಿಗಳ ಜನ ಜೀವನವನ್ನು ಕಾಣಬಹುದು. ಶಾಂತವಾದ ವಾತಾವರಣ ಮತ್ತು ವಿಹಂಗಮ ನೋಟಗಳಿಗೆ ಹೆಸರುವಾಸಿಯಾದ ಪ್ರಶಾಂತ ಕರಾವಳಿ ಇದನ್ನು ಸ್ವರ್ಗ ಮಾಡಿದೆ.


ಆನೆಗುಡ್ಡೆ ವಿನಾಯಕ ದೇವಸ್ಥಾನ

ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಗಣಪತಿಗೆ ಪೂಜೆ ಸಲ್ಲಿಸಿ. ಹಚ್ಚ ಹಸಿರಿನ ಬೆಟ್ಟಗಳ ನಡುವೆ ನೆಲೆಸಿರುವ ಈ ಪವಿತ್ರ ಕ್ಷೇತ್ರದಲ್ಲಿ ದೇವಾಲಯದ ಸಂಕೀರ್ಣ ವಾಸ್ತುಶೈಲಿಯನ್ನು ಗಮನಿಸಿ. ಹತ್ತಿರದಲ್ಲೇ ಇರುವ ನೀರಿನ ನಡುವೆ ನೆಲೆಯಾಗಿರುವ ಈಶ್ವರ ದೇವಾಲಯಕ್ಕೆ ಭೇಟಿ ನೀಡುವುದನ್ನು ತಪ್ಪಿಸಿಕೊಳ್ಳಬೇಡಿ.


ಕೂಡ್ಲು ಜಲಪಾತ

ಪಶ್ಚಿಮ ಘಟ್ಟಗಳಲ್ಲಿ ಅಡಗಿರುವ ಗುಪ್ತ ರತ್ನವಾದ ಕೂಡ್ಲು ಜಲಪಾತವನ್ನು ತಲುಪಲು ಹಸಿರು ಕಾಡುಗಳ ಮೂಲಕ ರಮಣೀಯವಾದ ಚಾರಣವನ್ನು ಪ್ರಾರಂಭಿಸಿ. ಹಸಿರು ಎಲೆಗಳು ಮತ್ತು ಚಿಲಿಪಿಲಿ ಹಕ್ಕಿಗಳಿಂದ ಸುತ್ತುವರೆದಿರುವ ನೀರಿನ ಸೌಂದರ್ಯ ನಿಮ್ಮ ತನುಮನವನ್ನು ತಣಿಸುವ ಅನುಭವ ಕೊಡುವುದು.


ಕಾಪು ಬೀಚ್

ಕಾಪು ಬೀಚ್‌ನ ಪ್ರಶಾಂತ ತೀರದಲ್ಲಿ ಪ್ರಾಚೀನ ಮರಳುಗಳು ಅರೇಬಿಯನ್ ಸಮುದ್ರದ ಶಾಂತ ಅಲೆಗಳನ್ನು ಸಂಧಿಸುತ್ತವೆ. ಸ್ನೇಹಿತರೊಂದಿಗೆ ವಿರಾಮದ ಪಿಕ್ನಿಕ್ ಅನ್ನು ಇಲ್ಲಿ ಆನಂದಿಸಬಹುದು. ಕಡಲತೀರದ ಮೇಲೆ ಮರಳು ಕೋಟೆಗಳನ್ನು ನಿರ್ಮಿಸಿ ಮತ್ತು ಕರಾವಳಿಯ ಉದ್ದಕ್ಕೂ ಇರುವ ಸ್ಥಳೀಯ ತಿನಿಸುಗಳಲ್ಲಿ ತಾಜಾ ಸಮುದ್ರಾಹಾರ ಭಕ್ಷ್ಯಗಳನ್ನು ಸವಿಯಬಹುದು.


ಅಂಬಲಪಾಡಿ ಮಹಾಕಾಳಿ ದೇವಸ್ಥಾನ

ದೈವಿಕ ಸೆಳವು ಕೊಡುವ ಅಂಬಲಪಾಡಿ ಮಹಾಕಾಳಿ ದೇವಾಲಯ ಸಾಕಷ್ಟು ಪ್ರವಾಸಿಗರನ್ನು ತನ್ನತ್ತ ಸೆಳೆಯುವುದು. ದೇವಾಲಯದ ವಾಸ್ತುಶಿಲ್ಪದ ಭವ್ಯತೆಗೆ ಸಾಕ್ಷಿಯಾಗಿದೆ. ಇಲ್ಲಿನ ಉತ್ಸವಗಳು ರೋಮಾಂಚನ ಉಂಟು ಮಾಡುತ್ತದೆ.


ಇದನ್ನೂ ಓದಿ: Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

ಉಡುಪಿ ಪಾರಂಪರಿಕ ಗ್ರಾಮ

ಶ್ರೀಮಂತ ಪರಂಪರೆ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುವ ಸಾಂಸ್ಕೃತಿಕ ಎನ್‌ಕ್ಲೇವ್ ಉಡುಪಿ ಹೆರಿಟೇಜ್ ವಿಲೇಜ್‌ ಗೆ ಭೇಟಿ ನೀಡಲು ಸಮಯ ಮೀಸಲಿಡಿ. ಪಾರಂಪರಿಕ ಮನೆಗಳಿಂದ ಕೂಡಿದ ವಿಲಕ್ಷಣ ಬೀದಿಗಳಲ್ಲಿ ಸ್ಥಳೀಯ ಕುಶಲಕರ್ಮಿಗಳ ಕಾರ್ಯಾಗಾರಗಳನ್ನು ಕಾಣಬಹುದು.

Continue Reading

ಶಿವಮೊಗ್ಗ

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು.

VISTARANEWS.COM


on

Agee hunnime Thousands of devotees have darshan of Shri Renukamba Devi of Chandragutti
Koo

ಸೊರಬ: ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti Shri Renukamba Devi temple) ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ (Shivamogga News) ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಹುಣ್ಣಿಮೆ ಹಿನ್ನೆಲೆ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಿಯ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು. ಧಾರ್ಮಿಕ ಸೇವೆ, ಹರಕೆ ಸಲ್ಲಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯವೂ ಕಂಡುಬಂದಿತು.

ಇದನ್ನೂ ಓದಿ: Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

ಪ್ರತಿ ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಶೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಆದರೆ ರಸ್ತೆ ಕಿರಿದಾದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸುಮಾರು 1 ಗಂಟೆ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸ್ಥಳೀಯ ಜನಪ್ರತಿನಿಧಿಗಳು ಚಂದ್ರಗುತ್ತಿ ಮುಖ್ಯ ರಸ್ತೆಯನ್ನು ಅಗಲಿಕರಿಸಿ ವ್ಯವಸ್ಥಿತವಾದ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Continue Reading
Advertisement
arecanut price
ಕರ್ನಾಟಕ10 mins ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ29 mins ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ34 mins ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ42 mins ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ43 mins ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Agee hunnime Thousands of devotees have darshan of Shri Renukamba Devi of Chandragutti
ಶಿವಮೊಗ್ಗ48 mins ago

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

an inscription of Hulagi Katte built during the Vijayanagara kings was discovered
ಕೊಪ್ಪಳ49 mins ago

Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

CM Siddaramaiah inaugurated the website of the inter caste marriage registration website in Mysore
ಕರ್ನಾಟಕ51 mins ago

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

COMEDK UGET 2024 Result Declared Tomorrow Afternoon How to view and download
ಶಿಕ್ಷಣ54 mins ago

COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

IPL 2024
ಪ್ರಮುಖ ಸುದ್ದಿ1 hour ago

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ17 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌