Uttara Kannada News: ಹೊನ್ನಾವರದ ಟೊಂಕಾ ಕಾಸರಕೋಡು ಬೀಚ್‌ನಲ್ಲಿ 2 ತಿಮಿಂಗಿಲಗಳ ಕಳೇಬರ ಪತ್ತೆ - Vistara News

ಉತ್ತರ ಕನ್ನಡ

Uttara Kannada News: ಹೊನ್ನಾವರದ ಟೊಂಕಾ ಕಾಸರಕೋಡು ಬೀಚ್‌ನಲ್ಲಿ 2 ತಿಮಿಂಗಿಲಗಳ ಕಳೇಬರ ಪತ್ತೆ

Uttara Kannada News: ಹೊನ್ನಾವರ ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

VISTARANEWS.COM


on

Uttara Kannada News Two Whale carcass found at Tonka Kasarakodu Beach at Honnavar
ಹೊನ್ನಾವರದ ಟೊಂಕಾ ಕಾಸರಕೋಡು ಬೀಚ್‌ನಲ್ಲಿ ಪತ್ತೆಯಾದ ತಿಮಿಂಗಿಲದ ಕಳೇಬರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavar) ತಾಲೂಕಿನ ಕಡಲತೀರದಲ್ಲಿ (Beach) ಶನಿವಾರ ಎರಡು ತಿಮಿಂಗಿಲಗಳ ಕಳೇಬರ (Three Whale carcass) ಪತ್ತೆಯಾಗಿವೆ. ಇದರಿಂದ ಹೊನ್ನಾವರದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಒಂದೇ ವಾರದ ಅಂತರದಲ್ಲಿ ಮೂರು ತಿಮಿಂಗಿಲ (ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ) ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ ಕಾರಣವಾಗಿದೆ.

ಕಳೆದ ಭಾನುವಾರ ಹೊನ್ನಾವರದ ಮುಗಳಿ ಬೀಚ್‌ನಲ್ಲಿ ಸುಮಾರು 35 ಮೀ. ಉದ್ದದ ತಿಮಿಂಗಿಲ ಮೃತಪಟ್ಟು ಹಲವು ದಿನಗಳಾಗಿ ಕೊಳೆತ ಬಳಿಕ ಸಮುದ್ರದ ಅಲೆಗಳ ಹೊಡೆತಕ್ಕೆ ದಡಕ್ಕೆ ತೇಲಿ ಬಂದಿತ್ತು. ಹೊನ್ನಾವರ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಳೆಬರವನ್ನ ಪರಿಶೀಲಿಸಿ ಮರಣೋತ್ತರ ಪರೀಕ್ಷೆಗೆ ನೀಡಿದ್ದರು.

ಇದೀಗ ಶನಿವಾರ ಬೆಳಗ್ಗೆ ಹೊನ್ನಾವರದ ಟೊಂಕಾ ಕಾಸರಕೋಡು ಬೀಚ್‌ನಲ್ಲಿ ಹೆಣ್ಣು ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಇದು ಕೂಡ ಭಾರೀ ಗಾತ್ರದ್ದಾಗಿದ್ದು, ಸುಮಾರು 25 ಮೀ. ಉದ್ದವಿದೆ. ಆದರೆ ಅರಣ್ಯಾಧಿಕಾರಿಗಳು ಹಾಗೂ ಕಡಲ ವಿಜ್ಞಾನಿಗಳು ಪರಿಶೀಲನೆಗೆ ತೆರಳಿದ್ದ ವೇಳೆ ಈ ಹೆಣ್ಣು ತಿಮಿಂಗಿಲ ಸಿಕ್ಕ ಅನತಿ ದೂರದಲ್ಲೇ ಇನ್ನೊಂದು ಮರಿ ತಿಮಿಂಗಿಲದ ಕಳೇಬರ ಸಿಕ್ಕಿದೆ ಎನ್ನಲಾಗಿದೆ. ಸದ್ಯ ಇವೆರಡೂ ತಿಮಿಂಗಿಲಗಳ ಕಳೇಬರವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತಿದ್ದು, ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

ಇದನ್ನೂ ಓದಿ: Weather report : ರಾಜ್ಯದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ!

ತಿಮಿಂಗಿಲಗಳ ಸಾವು ಗಂಭೀರ ವಿಚಾರ

ಈ ಬಗ್ಗೆ ಕಡಲ ಜೀವಶಾಸ್ತ್ರಜ್ಞ ಡಾ. ಶಿವಕುಮಾರ್ ಹರಗಿ ಮಾಹಿತಿ ನೀಡಿ, ತಿಮಿಂಗಿಲಗಳ ಕಳೇಬರ ಪೂರ್ತಿ ಕೊಳೆತಿರುವ ಕಾರಣ ಸಾವಿಗೆ ಕಾರಣವೇನೆಂದು ತಿಳಿದುಬರುತ್ತಿಲ್ಲ. ಆದರೆ ಒಂದೇ ವಾರದಲ್ಲಿ ಮೂರು ಕಳೇಬರ ದೊರೆತಿರುವುದು ಗಂಭೀರವಾಗಿದ್ದು, ಅಧ್ಯಯನ ಮಾಡಬೇಕಿದೆ ಎಂದಿದ್ದಾರೆ. ಸಿಕ್ಕ ಮೂರೂ ತಿಮಿಂಗಿಲಗಳು ಬಲೀನ್ ವ್ಹೇಲ್ ಜಾತಿಯದ್ದಾಗಿವೆ. ಸತ್ತು ಮೂರ್ನಾಲ್ಕು ದಿನಗಳ ಬಳಿಕ ಕಡಲತೀರಕ್ಕೆ ಬಂದಿವೆ. ಇವು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಶೆಡ್ಯೂಲ್ 1ರಲ್ಲಿ ಬರುವ ಕಾರಣ ಇವುಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧ್ಯಯನ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?

ತಿಮಿಂಗಿಲಗಳದ್ದು ಈಗ ಮಿಲನದ ಸಮಯ. ಗಂಡು, ಹೆಣ್ಣು ಹಾಗೂ ಮರಿಗಳ ಕಳೇಬರ ದೊರೆತಿರುವುದರಿಂದ ಇವು ಮಿಲನಕ್ಕೆಂದು ಶಾಂತ ಸಮುದ್ರಕ್ಕೆ ಬಂದಾಗ ಯಾವುದೋ ಬೃಹತ್ ಹಡಗು ಡಿಕ್ಕಿಯಾಗಿ ಸಾವನ್ನಪ್ಪಿರಬಹುದು. ಆದರೆ ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಯಬೇಕಿದೆ ಎಂದು ಕಡಲ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತಾ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Heavy Rain News : ರಾಜ್ಯದ ಹಲವು ಭಾಗಗಳಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅನಾಹುತಗಳು ಸಂಭವಿಸಿದೆ. ಭಾನುವಾರ ಚಿಕ್ಕಮಗಳೂರಲ್ಲಿ ವಿಪರೀತ ಮಳೆಯಾಗುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯು ನೆಲಕಚ್ಚಿದೆ.

VISTARANEWS.COM


on

By

Karnataka Weather Forecast Heavy rain in chikkmagalur
Koo

ಚಿಕ್ಕಮಗಳೂರು/ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುರ್ಣಾಭಟ (Karnataka Weather Forecast) ಜೋರಾಗಿದೆ. ಚಿಕ್ಕಮಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Karnataka Weather Forecast

ಇನ್ನೂ ಮಳೆಯ (Rain News) ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರು ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಬೆಂಗಳೂರಲ್ಲೂ ಮಳೆ ಮೋಡಿ

ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಮಳೆಯು ಮೋಡಿ ಮಾಡಿದೆ. ಬೆಂಗಳೂರಿನ ಉಲ್ಲಾಳ, ನಾಗರಬಾವಿ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇತ್ತ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಪಾದಾಚಾರಿಗಳು ರಸ್ತೆ ದಾಟಲು ಆಗದೆ ಪರದಾಡುವಂತಾಗಿದೆ.

ಇದನ್ನೂ ಓದಿ: Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ನಿನ್ನೆ ಶನಿವಾರ ಸುರಿದ ಮಳೆಯಿಂದ ಅವಾಂತರ‌ವೇ ಸೃಷ್ಟಿಯಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ಮುಕ್ಕಾಲು ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮಳೆಯು ಅಬ್ಬರಿಸಲಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Drowned in water : ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

Drowned in water : ಸ್ನೇಹಿತರು ಹಾಕಿದ ಸವಾಲಿಗೆ ಜೋಶ್‌ನಲ್ಲಿ ಕೆರೆಗೆ ಹಾರಿದ ಟೆಕ್ಕಿ ನೀರುಪಾಲಾದ ದಾರುಣ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

VISTARANEWS.COM


on

By

Drowned in water
Koo

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಾಟದಹೊಸಳ್ಳಿ ಕೆರೆಯಲ್ಲಿ ಈಜಲು ಹೋದ ಟೆಕ್ಕಿ ನೀರಲ್ಲಿ (Drowned in water) ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ಶನಿವಾರ ಮಧ್ಯಾಹ್ನ ನೀರಿನಲ್ಲಿ ಮುಳುಗಿ ವಿನಯ್ ರಮೇಶ್ (42) ಎಂಬುವವರು ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಭಾನುವಾರ ಟೆಕ್ಕಿ ಮೃತದೇಹವು ಪತ್ತೆಯಾಗಿದೆ.

ಬೆಂಗಳೂರಿನ ಇಂದಿರಾನಗರ ನಿವಾಸಿಯಾದ ವಿನಯ್ ರಮೇಶ್, ಐದು ಜನ ಸ್ನೇಹಿತರೊಟ್ಟಿಗೆ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಕೆಲವರು ಈ ದಡದಿಂದ ಆ ದಡಕ್ಕೆ ಯಾರು ಮೊದಲು ಈಜಿಕೊಂಡು ಬರುತ್ತಾರೆ ನೋಡೋಣಾ ಎಂದು ಸವಾಲು ಹಾಕಿಕೊಂಡಿದ್ದಾರೆ. ಈ ಚಾಲೆಂಜ್‌ ಅನ್ನು ಸ್ವೀಕರಿಸಿದ ರಮೇಶ್‌ ಜೋಶ್‌ನಲ್ಲಿ ನೀರಿಗೆ ಇಳಿದಿದ್ದಾರೆ. ಆದರೆ ವಿನಯ್ ರಮೇಶ್ ವಾಪಸ್ ಬಂದಿರಲಿಲ್ಲ.

Drowned in water

ಹೀಗಾಗಿ ಜತೆಗೆ ಇದ್ದ ಸ್ನೇಹಿತರು ಗಾಬರಿಯಾಗಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಯ್‌ ರಮೇಶ್‌ ವಿಮಾನದಲ್ಲಿ ಚೆನ್ನೈ ನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಸ್ನೇಹಿತರೊಟ್ಟಿಗೆ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ನಿರಂತರ ಪ್ರಯಾಣದಿಂದ ಬಳಲಿದ್ದ ವಿನಯ್ ಈಜಲು ಕೆರೆಗೆ ಇಳಿದಾಗ ಸುಸ್ತಾಗಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈಜುವ ಚಾಲೆಂಜ್ ವಿನಯ್ ರಮೇಶ್‌ಗೆ ಮುಳುವಾಯ್ತಾ ಎಂಬ ಪ್ರಶ್ನೆ ಕಾಡುತ್ತಿದೆ. 24 ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಕೆರೆಯಿಂದ ಹೊರಗೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

Drowned in water

ಸಮುದ್ರದಲ್ಲಿ ಮುಳುಗುತ್ತಿದ್ದ ಕಾರ್ಮಿಕನ ರಕ್ಷಣೆ

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಬಬ್ಲು ಶೇನ್ (34) ರಕ್ಷಣೆಗೊಳಗಾದ ಕಾರ್ಮಿಕ.

ಪಶ್ಚಿಮ ಬಂಗಾಳ ಮೂಲದ ಬಬ್ಲು ಶೇನ್ ಕಾರವಾರದ ಇಂಡಸ್ಟ್ರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ರಜಾ ದಿನವಾದ ಹಿನ್ನೆಲೆಯಲ್ಲಿ ಈಜಲು ಕಡಲತೀರಕ್ಕೆ ಬಂದಿದ್ದ. ಈಜುತ್ತಿದ್ದ ವೇಳೆ ನಿತ್ರಾಣಗೊಂಡು ಮುಳುಗುತ್ತಿದ್ದಾಗ, ಲೈಫ್‌ಗಾರ್ಡ್ ಹಾಗೂ ವಾಟರ್‌ಸ್ಪೋರ್ಟ್ಸ್ ಸಿಬ್ಬಂದಿ ಕಾರ್ಮಿಕ ಬಬ್ಲುನನ್ನು ರಕ್ಷಣೆ ಮಾಡಿದ್ದಾರೆ. ಜೆಟ್‌ಸ್ಕೀ ಮೂಲಕ ತೆರಳಿ ಕಾರ್ಮಿಕನನ್ನ ರಕ್ಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಂಗಳೂರಿನ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಗಾಳಿ,ಗುಡುಗು ಸಹಿತ ಮಳೆಯಾಗುತ್ತಿದೆ. ಸುಮಾರು ಅರ್ಧಗಂಟೆಗಳ ಕಾಲ ಮಳೆಯು ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಸುಬ್ರಹ್ಮಣ್ಯದಲ್ಲಿ ಹಠಾತ್‌ ಮಳೆಯು ಕ್ಷೇತ್ರಕ್ಕೆ ಆಗಮಿಸಿದ ಭಕ್ತರಲ್ಲಿ ಸಂತಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
ಪ್ರಮುಖ ಸುದ್ದಿ3 mins ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

IPL 2024
Latest21 mins ago

IPL 2024 : ಸಿಎಸ್​ಕೆ ವರ್ಸಸ್​ ಅರ್​ಆರ್​ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯಿತಾ? ಅಭಿಮಾನಿಗಳ ಅನುಮಾನ

Self Harming
ಕ್ರೈಂ30 mins ago

Self Harming: ಎರಡು ಸಬ್ಜೆಕ್ಟ್‌ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Narendra modi
ದೇಶ41 mins ago

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Viral Video
ದೇಶ1 hour ago

Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

Sean Williams
ಪ್ರಮುಖ ಸುದ್ದಿ1 hour ago

Sean Williams : ಜಿಂಬಾಬ್ವೆ ತಂಡದ ಹಿರಿಯ ಆಲ್​ರೌಂಡರ್​ ಟಿ20 ಕ್ರಿಕೆಟ್​ನಿಂದ ನಿವೃತ್ತಿ

Hoax bomb threat
ಕರ್ನಾಟಕ1 hour ago

Hoax Bomb Threat: ದೆಹಲಿ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌; ಆತಂಕ ಸೃಷ್ಟಿ

IPL 2024
ಕ್ರೀಡೆ1 hour ago

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

Prajwal Revanna Case Basavaraj Bommai says DK Shivakumar should be questioned
ಕರ್ನಾಟಕ1 hour ago

Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Bomb Threat
ದೇಶ2 hours ago

Bomb Threat:  ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ3 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ4 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ4 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ17 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌