CWC meet : ಸಿಡಬ್ಲ್ಯುಸಿ ಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ; ಏನಂದರು ಅವರು? - Vistara News

ದೇಶ

CWC meet : ಸಿಡಬ್ಲ್ಯುಸಿ ಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ; ಏನಂದರು ಅವರು?

ಆಗಸ್ಟ್ 20 ರಂದು ಕಾಂಗ್ರೆಸ್​ ಕಾರ್ಯಕಾರಿ ಸಮಿತಿ (CWC meet) ಪುನರ್​ರಚನೆ ಆದ ಬಳಿಕ ಮೊದಲ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಲವಾರು ಗಂಭೀರ ಸಮಸ್ಯೆಗಳನ್ನು ಪಟ್ಟಿ ಮಾಡಿದ್ದಾರೆ.

VISTARANEWS.COM


on

Mallikarjuna Kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಹಣದುಬ್ಬರ ಮತ್ತು ನಿರುದ್ಯೋಗದಂತಹ ಮೂಲಭೂತ ವಿಷಯಗಳ ಬಗ್ಗೆ ಮೋದಿ ನೇತೃತ್ವದ ಸರ್ಕಾರವನ್ನು ಪ್ರಶ್ನಿಸಿದ ಸಂದರ್ಭದಲ್ಲಿ ಸಮಸ್ಯೆ ಪರಿಹಾರ ಮಾಡುವ ಬದಲು ಹೊಸ ಘೋಷಣೆಗಳನ್ನು ಹೊರಡಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಶನಿವಾರ ಆರೋಪಿಸಿದ್ದಾರೆ. ಇಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ (CWC meet) ಸಭೆಯ ಮುಂಚೂಣಿ ಭಾಷಣದಲ್ಲಿ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ

ವಿರೋಧ ಪಕ್ಷಗಳು ದೇಶ ಎದುರಿಸುವ ಸಮಸ್ಯೆಗಳ ಕುರಿತು ಪ್ರಶ್ನೆ ಎತ್ತಿದಾಗಲೆಲ್ಲಾ, ಉತ್ತರಗಳನ್ನು ನೀಡುವ ಬದಲು, ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುತ್ತದೆ. ಹೊಸ ಘೋಷಣೆಗಳನ್ನು ಪ್ರಕಟಿಸುತ್ತದೆ. ಸ್ವಾವಲಂಬಿ ಭಾರತ’, ‘5 ಟ್ರಿಲಿಯನ್ ಆರ್ಥಿಕತೆ’, ‘ನವ ಭಾರತ 2022’ ಮತ್ತು ‘ಅಮೃತ್​ಕಾಲ್​ ಎಂಬ ಘೋಷಣೆಗಳನ್ನು ನೀಡುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಆರೋಪಿಸಿದ್ದಾರೆ. ಇದೇ ವೇಳೆ ಅವರು ಇಂತಹ ಘೋಷಣೆಗಳು ದೇಶಕ್ಕೆ ಪ್ರಗತಿಯನ್ನು ತರುವುದಿಲ್ಲ ಎಂದು ಜನರಿಗೆ ವಿವರಿಸುವಂತೆ ತಮ್ಮ ಪಕ್ಷದ ನಾಯಕರಿಗೆ ಸೂಚಿಸಿದರು.

ಇತ್ತೀಚಿನ ದಿನಗಳಲ್ಲಿ ಮೋದಿ ಸರ್ಕಾರವು ‘3 ನೇ ಅತಿದೊಡ್ಡ ಆರ್ಥಿಕತೆಯ ಕನಸನ್ನು ಬಿತ್ತಲು ಆರಂಭಿಸಿದೆ. ಘೋಷಣೆಗಳ ಮೂಲಕ ದೇಶ ಪ್ರಗತಿ ಹೊಂದುವುದಿಲ್ಲ. ಇವು ವೈಫಲ್ಯಗಳನ್ನು ಮರೆಮಾಚುವ ಪ್ರಯತ್ನಗಳು ಎಂದು ನಾವು ಸಾರ್ವಜನಿಕರಿಗೆ ವಿವರಿಸಬೇಕಾಗಿದೆ. ಕಾರ್ಯಕ್ರಮಗಳು ಮತ್ತು ಜಾಹೀರಾತುಗಳಿಗಾಗಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುವ ಮೂಲಕ ವೈಫಲ್ಯಗಳ ಶಿಖರವನ್ನು ಮರೆಮಾಚಲು ಸರ್ಕಾರ ಪ್ರಯತ್ನಿಸುತ್ತಿದೆ ” ಎಂದು ಖರ್ಗೆ ಹೇಳಿದರು.

ಸಿಡಬ್ಲ್ಯುಸಿ ಪುನರ್​ರಚನೆ ಬಳಿಕ ಮೊದಲ ಸಭೆ

ಆಗಸ್ಟ್ 20 ರಂದು ಸಿಡಬ್ಲ್ಯುಸಿ ಪುನರ್ರಚನೆಯಾಗಿತ್ತು. ಆ ಬಳಿಕ ನಡೆದ ಮೊದಲ ಸಭೆ ಇದಾಗಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಖರ್ಗೆ ಹಲವಾರು ಸಮಸ್ಯೆಗಳನ್ನು ಪಟ್ಟಿ ಮಾಡಿದರು, ಜಾತಿ ಜನಗಣತಿಗೆ ಒತ್ತಾಯಿಸಿದರು ಮತ್ತು ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳನ್ನು ಪಕ್ಷಕ್ಕೆ ನೆನಪಿಸಿದರು.

ಇದೇ ವೇಳೆ ಜಿ 20 ಶೃಂಗಸಭೆಯ ಕುರಿತ ಬಿಜೆಪಿಯ ನಿರೂಪಣೆಯನ್ನೂ ಟೀಕಿಸಿದರು. ಜಿ 20 ಕಾರ್ಯಕ್ರಮದ ನಂತರ ಸರ್ಕಾರವು ತನ್ನದೇ ಆದ ಹೊಗಳಿಕೆಯಲ್ಲಿ ಮುಳುಗಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ರೊಟೇಶನ್ ಮೂಲಕ ನಡೆಯಲಿರುವ ಜಿ 20 ಸಭೆಗಾಗಿ ದೆಹಲಿಯಲ್ಲಿ 4,000 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಈಗ ಬ್ರೆಜಿಲ್ ಜಿ 20 ನಾಯಕತ್ವವನ್ನು ಪಡೆದುಕೊಂಡಿದೆ ಎಂದರು.

ಇಂಡಿಯಾ ಒಗ್ಗಟ್ಟಿಗೆ ಶ್ಲಾಘನೆ

ಈಗ 28 ಪಕ್ಷಗಳನ್ನು ಒಳಗೊಂಡಿರುವ ಪ್ರತಿಪಕ್ಷ ಪ್ರತಿಪಕ್ಷಗಳ ಒಕ್ಕೂಟ (ಇಂಡಿಯಾ) ನಡೆಸಿದ ಮೂರು ಸಭೆಗಳ ಯಶಸ್ಸನ್ನು ಖರ್ಗೆ ಇದೇ ವೇಳೆ ಶ್ಲಾಘಿಸಿದರು. ಇಂಡಿಯಾ ಬ್ಲಾಕ್​ನ ಯಶಸ್ಸನ್ನು “ಪ್ರಧಾನಿ ಮತ್ತು ಬಿಜೆಪಿ ನಾಯಕರ ದಾಳಿಯಿಂದ ಅಳೆಯಬಹುದು” ಎಂದು ಹೇಳಿದರು. ನಮ್ಮ ಯೋಜನೆಗಳು ಮುಂದುವರಿ ದಂತೆ, ಅವರ ದಾಳಿಗಳು ತೀವ್ರಗೊಳ್ಳುತ್ತವೆ ಎಂದರು.

ತೆಲಂಗಾಣ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ಸಿಡಬ್ಲ್ಯುಸಿ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಖರ್ಗೆ ಅವರು ಹೇಳಿದರು.

ಮಣಿಪುರ ಘರ್ಷಣೆ ಕುರಿತು ಚರ್ಚೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮತ್ತು ಹರಿಯಾಣದಲ್ಲಿ ಇತ್ತೀಚೆಗೆ ನಡೆದ ಕೋಮು ಘರ್ಷಣೆಗಳ ಬಗ್ಗೆಯೂ ಖರ್ಗೆ ಗಮನಸೆಳೆದರು ಮತ್ತು ದೇಶವು ಗಂಭೀರ ಆಂತರಿಕ ಸವಾಲುಗಳನ್ನು ಎದುರಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ : CWC meet : ಒಂದು ದೇಶ ಒಂದು ಚುನಾವಣೆಗೆ ವಿರೋಧ, ಇನ್ನೇನಿವೆ ಕಾಂಗ್ರೆಸ್​ನ ಕಾರ್ಯಸೂಚಿಗಳು?

ಇಂದು ದೇಶವು ಅನೇಕ ಗಂಭೀರ ಆಂತರಿಕ ಸವಾಲುಗಳನ್ನು ಎದುರಿಸುತ್ತಿದೆ. ಮಣಿಪುರದಲ್ಲಿ ನಡೆದ ಹೃದಯ ವಿದ್ರಾವಕ ಘಟನೆಗಳಿಗೆ ಇಡೀ ಜಗತ್ತು ಸಾಕ್ಷಿಯಾಯಿತು. 3ಮೇ 2023 ರಿಂದ ಇಂದಿಗೂ ಅಲ್ಲಿ ಹಿಂಸಾಚಾರ ಮುಂದುವರೆದಿದೆ. ಮಣಿಪುರದ ಬೆಂಕಿಯನ್ನು ಹರಿಯಾಣದ ನುಹ್ ತಲುಪಲು ಮೋದಿ ಸರ್ಕಾರ ಅನುಮತಿ ನೀಡಿತು. ಹಿಂಸಾಚಾರದ ಘಟನೆಗಳು ಇಲ್ಲಿ ನಡೆದಿವೆ, ಇದರಿಂದಾಗಿ ರಾಜಸ್ಥಾನ, ಯುಪಿ ಮತ್ತು ದೆಹಲಿಯಲ್ಲಿ ಕೋಮು ಉದ್ವಿಗ್ನತೆ ಹರಡಿತು” ಎಂದು ಖರ್ಗೆ ಆರೋಪಿಸಿದರು.

ಆರ್ಥಿಕತೆ ಬಗ್ಗೆ ಕಳವಳ

ದೇಶದ ಆರ್ಥಿಕತೆಯು ದೊಡ್ಡ ಅಪಾಯದಲ್ಲಿದೆ ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ, ಹಣದುಬ್ಬರ, ದಾಖಲೆಯ ನಿರುದ್ಯೋಗ ಅಪಾಯಕಾರಿ. ಅದೇ ರೀತಿ ದೇಶದ 1% ಶ್ರೀಮಂತರು ದೇಶದ ಸಂಪತ್ತಿನ 40% ಅನ್ನು ಸಂಗ್ರಹಿಸುತ್ತಿದ್ದಾರೆ ಎಂದರು.

“ಹಣದುಬ್ಬರವು ಬಡವರು ಮತ್ತು ಸಾಮಾನ್ಯ ಜನರ ಜೀವನಕ್ಕೆ ಬೆದರಿಕೆಯಾಗಿದೆ. ಕಳೆದ 5 ವರ್ಷಗಳಲ್ಲಿ ಸಾಮಾನ್ಯ ಊಟದ ಬೆಲೆ 65% ಹೆಚ್ಚಾಗಿದೆ. 74% ಜನರು ಪೌಷ್ಟಿಕ ಆಹಾರದಿಂದ ವಂಚಿತರಾಗಿದ್ದಾರೆ. ಬೇಳೆಕಾಳುಗಳ ಬೆಲೆ ಒಂದು ವರ್ಷದಲ್ಲಿ 37% ಹೆಚ್ಚಾಗಿದೆ. ನಮ್ಮ ದೇಶದ ಜನಸಂಖ್ಯೆಯ 65% ರಷ್ಟು ಯುವಕರಿದ್ದಾರೆ. ದಾಖಲೆಯ ನಿರುದ್ಯೋಗ ದರವು ಅವರ ಕನಸುಗಳನ್ನು ನುಚ್ಚುನೂರು ಮಾಡುತ್ತಿವೆ ಎಂದರು.

ಜಾತಿ ಗಣತಿಗೆ ಒತ್ತಾಯ

ಖರ್ಗೆ ಅವರು 2011ರ ಸಾಮಾಜಿಕ-ಆರ್ಥಿಕ ಜಾತಿ ಜನಗಣತಿಯ ದತ್ತಾಂಶವನ್ನು ಸಾರ್ವಜನಿಕಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದರು. 2021 ರ ಜನಗಣತಿ ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಇದರಿಂದ ಸಮಾಜದ ಅಗತ್ಯವಿರುವ ವರ್ಗವು ಆರೋಗ್ಯ, ಶಿಕ್ಷಣ, ಉದ್ಯೋಗ, ಆಹಾರ ಭದ್ರತೆ ಸೇರಿದಂತೆ ಇತರ ಹಕ್ಕುಗಳನ್ನು ಪಡೆಯಬಹುದು” ಎಂದು ಖರ್ಗೆ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024 : ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎಗೆ ಸುಲಭ ನಿರಾಯಾಸ ಗೆಲುವು ನೀಡುತ್ತದೆ ಎಂದು ಭವಿಷ್ಯ ನುಡಿದಿವೆ. ಆಡಳಿತಾರೂಢ ಪಕ್ಷವು ಬಹುಮತದ ಕೊರತೆ ಅನುಭವಿಸಬಹುದು ಎಂಬ ಇಂಡಿಯಾ ಬಣದ ಭವಿಷ್ಯವಾಣಿಗೆ ವ್ಯತಿರಿಕ್ತವಾಗಿ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರ ವಾಲಿವೆ.

VISTARANEWS.COM


on

Exit Poll
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡಿದ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ. ಮತದಾರರ ಬದ್ಧತೆ ಮತ್ತು ಸಮರ್ಪಣೆ ಭಾರತದ ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಪಿಎಂ ಮೋದಿ ಹೇಳಿದ್ದಾರೆ. ಮತಗಟ್ಟೆ ಸಮೀಕ್ಷೆಗಳು(Exit Poll 2024 ) ಪ್ರಕಟಗೊಂಡು ಮೋದಿ ನೇತೃತ್ವದ ಎನ್​ಡಿಎಗೆ ಭರ್ಜರಿ ಜಯ ಸಿಗುತ್ತದೆ ಎಂದು ಗೊತ್ತಾದ ತಕ್ಷಣವೇ ಅವರು ಈ ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಪ್ರಜಾಪ್ರಭುತ್ವಕ್ಕೆ ಚೈತನ್ಯ ತಂಡ ದೇಶದ ಮಹಿಳೆಯರು ಮತ್ತು ಯುವಕರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

ಭಾರತ ಮತ ಚಲಾಯಿಸಿದೆ! ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಭಾಗವಹಿಸುವಿಕೆ ನಮ್ಮ ಪ್ರಜಾಪ್ರಭುತ್ವದ ಬುನಾದಿ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮನೋಭಾವವು ಬೆಳೆಸಿದೆ ಎಂದು ಖಚಿತಪಡಿಸುತ್ತೇವೆ. ಭಾರತದ ನಾರಿ ಶಕ್ತಿ ಮತ್ತು ಯುವ ಶಕ್ತಿಯನ್ನು ನಾನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇವೆ. ಚುನಾವಣೆಯಲ್ಲಿ ಅವರ ಬಲವಾದ ಉಪಸ್ಥಿತಿಯು ಬಹಳ ಪ್ರೋತ್ಸಾಹದಾಯಕ” ಎಂದು ಅವರು ಎಕ್ಸ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

ಏಳು ಹಂತಗಳ ಚುನಾವಣೆ ಶನಿವಾರ ಮುಕ್ತಾಯ

ಏಳನೇ ಹಂತದ ಮತದಾನದ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ಮೋದಿ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಬಳಿ ತೆರಳಿ ಧ್ಯಾನ ಮಾಡಿದ್ದರು. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎಗೆ ಸುಲಭ ನಿರಾಯಾಸ ಗೆಲುವು ನೀಡುತ್ತದೆ ಎಂದು ಭವಿಷ್ಯ ನುಡಿದಿವೆ. ಆಡಳಿತಾರೂಢ ಪಕ್ಷವು ಬಹುಮತದ ಕೊರತೆ ಅನುಭವಿಸಬಹುದು ಎಂಬ ಇಂಡಿಯಾ ಬಣದ ಭವಿಷ್ಯವಾಣಿಗೆ ವ್ಯತಿರಿಕ್ತವಾಗಿ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರ ವಾಲಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ 353 ಸ್ಥಾನಗಳನ್ನು ಗೆದ್ದಿತ್ತು.

ಜೂನ್ 4ರಂದು ಚುನಾವಣೋತ್ತರ ಸಮೀಕ್ಷೆಗಳು ನಿಜವೆಂದು ಸಾಬೀತಾದರೆ, ಇದು ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅತಿದೊಡ್ಡ ವಿಜಯವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಜವಾಹರಲಾಲ್ ನೆಹರೂ ನಂತರ ನರೇಂದ್ರ ಮೋದಿ ಮೂರು ಬಾರಿ ದೇಶದ ಪ್ರಧಾನಿಯಾದ ಏಕೈಕ ವ್ಯಕ್ತಿಯಾಗಲಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಎರಡು ಬಾರಿ ಪ್ರಧಾನಿಯಾಗಿದ್ದರು.

Continue Reading

ದೇಶ

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Exit Poll 2024: ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Exit Poll 2024
Koo

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಬಹುತೇಕ ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.

ಇದನ್ನೂ ಓದಿ: Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿ ನಾವ್ಯಾರು ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂದು ಹೇಳಿದ್ದಾರೆ. ಇದು ಗ್ರೌಂಡ್ ರಿಯಾಲಿಟಿಯಿಂದ ದೂರ ಇದೆ ಎಂದೇ ನಂಬುತ್ತೇವೆ ಎಂದು ನುಡಿದಿದ್ದಾರೆ. ಸಮೀಕ್ಷೆಗಳಲ್ಲಿ ಕೇವಲ ಐದಾರು ಸೀಟುಗಳನ್ನು ಮಾತ್ರ ಕೊಟ್ಟಿದ್ದಾರೆ. ಆದರೆ, ಜೂ 4ರಂದು ವಾಸ್ತವ ಗೊತ್ತಾಗಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್​ ಡಬಲ್​ ಡಿಜಿಟ್ ದಾಟಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಸಮೀಕ್ಷೆ ಹೇಗಿದೆ?

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4

Continue Reading

ಪ್ರಮುಖ ಸುದ್ದಿ

Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Exit Poll 2024: ಶನಿವಾರ ಸಂಜೆ ಏಳನೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳ (Exit Poll 2024) ಪ್ರಕಾರ ಕೇರಳದಲ್ಲಿ 2ರಿಂದ 3 ಮತ್ತು ತಮಿಳುನಾಡಿನಲ್ಲಿ 2-4 ಸ್ಥಾನಗಳು ಎನ್​ಡಿಎಗೆ ದೊರಕಲಿವೆ. ಒಂದು ವೇಳೆ ಇದು ಸತ್ಯವಾದರೆ ದಕ್ಷಿಣದ ಎರಡು ರಾಜ್ಯಗಳಲ್ಲಿ ಕಮಲ ಅರಳಿಸಲು ತಾವು ಪಟ್ಟ ಶ್ರಮ ಸಾರ್ಥಕವಾದಂತೆ.

VISTARANEWS.COM


on

Exit Poll 2024
Koo

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಮೂರನೇ ಅವಧಿಯಲ್ಲಿ ಮತ್ತೊಂದು ಮಹತ್ಸಾಧನೆ ಮಾಡಲಿದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಅವರ ನೇತೃತ್ವದ ಬಿಜೆಪಿ/ ಎನ್​ಡಿಎ ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಲ್ಲಿ ತನ್ನ ಖಾತೆ ತೆರೆಯಲಿವೆ. ಅವುಗಳೆಂದರೆ ತಮಿಳುನಾಡು ಮತ್ತು ಕೇರಳ. ಶನಿವಾರ ಸಂಜೆ ಏಳನೇ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳ (Exit Poll 2024) ಪ್ರಕಾರ ಕೇರಳದಲ್ಲಿ 2ರಿಂದ 3 ಮತ್ತು ತಮಿಳುನಾಡಿನಲ್ಲಿ 2-4 ಸ್ಥಾನಗಳು ಎನ್​ಡಿಎಗೆ ದೊರಕಲಿವೆ. ಒಂದು ವೇಳೆ ಇದು ಸತ್ಯವಾದರೆ ದಕ್ಷಿಣದ ಎರಡು ರಾಜ್ಯಗಳಲ್ಲಿ ಕಮಲ ಅರಳಿಸಲು ತಾವು ಪಟ್ಟ ಶ್ರಮ ಸಾರ್ಥಕವಾದಂತೆ. ಜತೆಗೆ ಆಂಧ್ರ ಪ್ರದೇಶದಲ್ಲೂ 22 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದೆ.

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಏಪ್ರಿಲ್ 19, 2024ರಂದು ನಡೆದಿತ್ತು. ಇದು ಹಾಲಿ ಚುನಾವಣೆಯ ಮೊದಲ ಹಂತದಲ್ಲಿ ಮತದಾನ. 2019 ರ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ 39 ಲೋಕಸಭಾ ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಅವು ಆಯ್ದ ಪ್ರದೇಶಗಳಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್​ಡಿಎಯಿಂದ ಪ್ರತಿರೋಧ ಎದುರಿಸಿದ್ದಾರೆ. ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ ವ್ಯಾಪಕ ಪ್ರಚಾರ ನಡೆಸಿದೆ. ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳು ಭಾಷಿಕರ ರಾಜ್ಯಕ್ಕೆ 9 ಬಾರಿ ಭೇಟಿ ನೀಡಿದ್ದರು. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿದೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ. ಇದರಲ್ಲಿ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಅವರ ಪಾತ್ರ ದೊಡ್ಡದಿದೆ.

ಕೇರಳದಲ್ಲೂ ಖಾತೆ ಓಪನ್​

ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, 2019ರಲ್ಲಿ ಶೇ.77.84ರಷ್ಟಿದ್ದ ಮತದಾನ ಪ್ರಮಾಣ ಈ ಬಾರಿ ಶೇ.70.35ಕ್ಕೆ ಕುಸಿದಿತ್ತು.

ಇದನ್ನೂ ಓದಿ: Exit Poll 2024: ಮುaಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. 2019 ರ ಚುನಾವಣೆಯಲ್ಲಿ, ಐಎನ್​ಸಿಎ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ, ಎನ್​​ಡಿಎ ಒಂದೂ ಸ್ಥಾನ ಗೆದ್ದಿರಲಿಲ್ಲ. ಇಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಸಿಪಿಐ (ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ಡಿಎಫ್) ನಡುವೆ ನೇರ ಸ್ಪರ್ಧೆ ಇದೆ. ಸಮೀಕ್ಷೆಗಳ ಪ್ರಕಾ ಯುಡಿಎಫ್​​ಗೆ 17-19 ಸ್ಥಾನಗಳು ಮತ್ತು ಎನ್​ಡಿಎಗೆ 1-3 ಸ್ಥಾನಗಳು ಸಿಗಲಿವೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ದಕ್ಷಿಣದ ರಾಜ್ಯಗಳಲ್ಲಿ ಮತದಾರರನ್ನು ಸೆಳೆಯಲು ಬಲವಾದ ಪ್ರಯತ್ನ ನಡೆಸಿದ್ದರು. ಇಲ್ಲಿ ಮಾಜಿ ಸಚಿವ ರಾಜೀವ್​ ಚಂದ್ರಶೇಖರ್​ ಅವರು ಶಶಿ ತರೂರು ವಿರುದ್ಧ ತಿರುವನಂತಪುರ ಹಾಗೂ ಸುರೇಂದ್ರನ್ ಅವರು ರಾಹುಲ್ ಗಾಂಧಿ ವಿರುದ್ಧ ವಯನಾಡ್​ನಲ್ಲಿ ಸ್ಪರ್ಧಿಸಿದ್ದಾರೆ. ಅದೇ ರೀತಿ ಸಿನಿಮಾ ನಟ ಸುರೇಶ್ ಗೋಪಿ ಕೂಡ ತ್ರಿಶೂರ್​ ಲೋಕ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮತ್ತು ಪುದುಚೇರಿ ಒಂದು ಸ್ಥಾನವು 130 ಸಂಸದರನ್ನು ಕೆಳಮನೆಗೆ ಕಳುಹಿಸುತ್ತದೆ. 2019 ರಲ್ಲಿ ಬಿಜೆಪಿ ಈ ಸ್ಥಾನಗಳಲ್ಲಿ ಕೇವಲ 29 ಸ್ಥಾನಗಳನ್ನು ಗಳಿಸಿದೆ. ಅದರಲ್ಲಿ 25 ಕರ್ನಾಟಕದಿಂದ ಬಂದಿತ್ತು. ತೆಲಂಗಾಣದಿಂದ. ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಪಕ್ಷವು ತನ್ನ ಖಾತೆ ತೆರೆಯಲು ವಿಫಲವಾಗಿತ್ತು. ಈ ಬಾರಿ ಆಂಧ್ರದಲ್ಲಿಯೂ ಖಾತೆ ತೆರೆಯುವ ಸಾಧ್ಯತೆಗಳಿವೆ.

Continue Reading

ದೇಶ

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

Exit Poll 2024: ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗುತ್ತಿವೆ. ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರ? ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದಕ್ಕೆ ಮತಗಟ್ಟೆ ಸಮೀಕ್ಷೆ ದಿಕ್ಸೂಚಿಯಾಗಿದೆ. ಆ ಮತಗಟ್ಟೆ ಸಮೀಕ್ಷೆಯ ಮಾಹಿತಿ ಇಲ್ಲಿದೆ.

VISTARANEWS.COM


on

Exit Poll 2024
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಕ್ತಾಯಗೊಂಡಿದ್ದು, ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿವೆ. ಬಹುತೇಕ ಮತಗಟ್ಟೆ ಸಮೀಕ್ಷೆಗಳ (Exit Poll 2024) ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಇನ್ನು, ಎಲ್ಲ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟಕ್ಕೆ (India Bloc) ಹಿನ್ನಡೆಯಾಗಲಿದೆ ಎಂದೇ ಹೆಚ್ಚಿನ ಸಮೀಕ್ಷಾ ವರದಿಗಳು ತಿಳಿಸಿವೆ. ಇನ್ನು, ನರೇಂದ್ರ ಮೋದಿ (Narendra Modi) ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡಲಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಹಾಗಾದರೆ, ರಾಜ್ಯವಾರು ಫಲಿತಾಂಶ ಏನಾಗಲಿದೆ? ಸಮೀಕ್ಷೆಗಳು ಹೇಳಿದ್ದೇನು? ಇಲ್ಲಿದೆ ಸಂಕ್ಷಿಪ್ತ ವರದಿ.

ಗುಜರಾತ್‌ನಲ್ಲಿ ಕ್ಲೀನ್‌ ಸ್ವೀಪ್‌

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿಯು ಎಲ್ಲ 26ಕ್ಕೆ 26 ಕ್ಷೇತ್ರಗಳನ್ನೂ ತನ್ನ ಮಡಿಲಿಗೆ ಸೆಳೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿವೆ. ಟಿವಿ-ಸಿಎನ್‌ಎಕ್ಸ್‌ ಎಕ್ಸಿಟ್‌ ಪೋಲ್‌ ಪ್ರಕಾರ ಬಿಜೆಪಿಯು ಎಲ್ಲ ಕ್ಷೇತ್ರಗಳಲ್ಲಿ ಜಯಿಸಲಿದೆ. ಈಗಾಗಲೇ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಕಮಲ ಅರಳಲಿದೆ. ಕಾಂಗ್ರೆಸ್‌, ಆಪ್‌ ಖಾತೆ ಕೂಡ ತೆರೆಯುವುದಿಲ್ಲ ಎಂದು ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಮೇಲುಗೈ

ರಾಮಮಂದಿರ ನಿರ್ಮಾಣ, ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರ ಅಲೆಯಿಂದಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿಯು ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದಾಗಿ ಸಮೀಕ್ಷೆಗಳು ತಿಳಿಸಿವೆ. ರಿಪಬ್ಲಿಕ್‌ ಭಾರತ್‌ ವರದಿ ಪ್ರಕಾರ ಎನ್‌ಡಿಎ 69-74, ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ ಪ್ರಕಾರ 69 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.

ರಿಪಬ್ಲಿಕ್‌ ಭಾರತ್ಎನ್‌ಡಿಎ 69-74ಇಂಡಿಯಾ ಒಕ್ಕೂಟ 6-11ಇತರೆ 0
ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ಎನ್‌ಡಿಎ 69ಇಂಡಿಯಾ ಒಕ್ಕೂಟ 11ಇತರೆ 0

ಕರ್ನಾಟಕ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಬಿಜೆಪಿ 20-22ಕಾಂಗ್ರೆಸ್‌ 3-5ಇತರೆ 3
ವಿಸ್ತಾರ ನ್ಯೂಸ್ಬಿಜೆಪಿ 18-20ಕಾಂಗ್ರೆಸ್‌ 8-10ಇತರೆ 2-3
ನ್ಯೂಸ್‌ 18ಬಿಜೆಪಿ 23-26ಕಾಂಗ್ರೆಸ್‌ 3-7ಇತರೆ 0
ಟೈಮ್ಸ್‌ ನೌ- ಇಟಿಜಿ ರಿಸರ್ಚ್ಬಿಜೆಪಿ 23-26ಕಾಂಗ್ರೆಸ್‌ 3-7ಇತರೆ 0

ರಾಜಸ್ಥಾನ

ಎಬಿಪಿ- ಸಿ ವೋಟರ್ಎನ್‌ಡಿಎ 21-23ಇಂಡಿಯಾ ಒಕ್ಕೂಟ 2-4ಇತರೆ 0
ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 16-19ಇಂಡಿಯಾ ಒಕ್ಕೂಟ 5-7ಇಂಡಿಯಾ ಒಕ್ಕೂಟ 1-2

ಬಿಹಾರ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 29-33ಇಂಡಿಯಾ ಒಕ್ಕೂಟ 7-10
ನ್ಯೂಸ್‌ 18ಎನ್‌ಡಿಎ 10-13ಇಂಡಿಯಾ ಒಕ್ಕೂಟ 3-6

ಛತ್ತೀಸ್‌ಗಢ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 10-11ಇಂಡಿಯಾ ಒಕ್ಕೂಟ 0-1ಇತರೆ 0

ಜಾರ್ಖಂಡ್‌

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 8-10ಇಂಡಿಯಾ ಒಕ್ಕೂಟ 4-6ಇತರೆ 0

ಕೇರಳ

ನ್ಯೂಸ್‌ 18ಯುಡಿಎಫ್‌ 15-18ಎಲ್‌ಡಿಎಫ್‌ 2-5ಎನ್‌ಡಿಎ 1-3
ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಯುಡಿಎಫ್‌ 17-18ಎಲ್‌ಡಿಎಫ್‌ 1ಎನ್‌ಡಿಎ 2-3

ಪಶ್ಚಿಮ ಬಂಗಾಳ

ರಿಪಬ್ಲಿಕ್‌ ಟಿವಿ ಮ್ಯಾಟ್ರಿಜ್ಎನ್‌ಡಿಎ 21-25ಟಿಎಂಸಿ 16-20ಇಂಡಿಯಾ ಒಕ್ಕೂಟ 0-1
ನ್ಯೂಸ್‌ 18ಎನ್‌ಡಿಎ 6-9ಟಿಎಂಸಿ 3-6ಇಂಡಿಯಾ ಒಕ್ಕೂಟ 0
ಇಂಡಿಯಾ ನ್ಯೂಸ್‌ ಡಿ ಡೈನಾಮಿಕ್ಸ್ಎನ್‌ಡಿಎ 21ಟಿಎಂಸಿ 19ಇಂಡಿಯಾ ಒಕ್ಕೂಟ 2
ರಿಪಬ್ಲಿಕ್‌ ಟಿವಿ- ಪಿ ಮಾರ್ಕ್ಎನ್‌ಡಿಎ 22ಟಿಎಂಸಿ 20ಇಂಡಿಯಾ ಒಕ್ಕೂಟ 0
ಜನ್‌ ಕಿ ಬಾತ್ಎನ್‌ಡಿಎ 21-26ಟಿಎಂಸಿ 18-16ಇಂಡಿಯಾ ಒಕ್ಕೂಟ 2-0

ತಮಿಳುನಾಡು

ನ್ಯೂಸ್‌ 18ಎನ್‌ಡಿಎ 1-3ಇಂಡಿಯಾ 36-39ಎಡಿಎಂಕೆ 0-2

ದೆಹಲಿ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 6-7ಇಂಡಿಯಾ ಒಕ್ಕೂಟ 0-1ಇತರೆ 0

ಛತ್ತೀಸ್‌ಗಢ

ಇಂಡಿಯಾ ಟುಡೇ-ಆಕ್ಸಿಸ್‌ ಮೈ ಇಂಡಿಯಾಎನ್‌ಡಿಎ 10-11ಇಂಡಿಯಾ ಒಕ್ಕೂಟ 0-1ಇತರೆ 0
ನ್ಯೂಸ್‌ 18ಎನ್‌ಡಿಎ BJP – 9-11ಇಂಡಿಯಾ ಒಕ್ಕೂಟ – 0-2ಇತರೆ 0
ಟಿವಿ9 ಭರತವರ್ಷ-ಪೋಲ್‌ ಸ್ಟ್ರ್ಯಾಟ್ಎನ್‌ಡಿಎ 99ಇಂಡಿಯಾ ಒಕ್ಕೂಟ 75ಇತರೆ 16

ತೆಲಂಗಾಣ

ನ್ಯೂಸ್‌ ನೇಷನ್ಬಿಜೆಪಿ – 9ಕಾಂಗ್ರೆಸ್ – 7ಇತರೆ- 1

ಆಂಧ್ರಪ್ರದೇಶ

ನ್ಯೂಸ್‌ 18‌ಎನ್‌ಡಿಎ 19-22ವೈಎಸ್‌ಆರ್‌ಸಿಪಿ 5-8ಇಂಡಿಯಾ 0ಇತರೆ 0
ಜನ್‌ ಕಿ ಬಾತ್ಎನ್‌ಡಿಎ 10-14ವೈಎಸ್‌ಆರ್‌ಸಿಪಿ 13-8ಇಂಡಿಯಾ 0ಇತರೆ 0
ಎಬಿಪಿ- ಸಿ ವೋಟರ್ಎನ್‌ಡಿಎ 21-25ವೈಎಸ್‌ಆರ್‌ಸಿಪಿ 0-4ಇಂಡಿಯಾ 0ಇತರೆ 0
ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ಎನ್‌ಡಿಎ 18ವೈಎಸ್‌ಆರ್‌ಸಿಪಿ 7ಇಂಡಿಯಾ 0ಇತರೆ 0
ಇಂಡಿಯಾ ಟಿವಿ- ಸಿಎನ್‌ಎಕ್ಸ್ಎನ್‌ಡಿಎ 19-23ವೈಎಸ್‌ಆರ್‌ಸಿಪಿ 3-5ಇಂಡಿಯಾ 0ಇತರೆ 0

ಇದನ್ನೂ ಓದಿ: Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Continue Reading
Advertisement
Dinesh Karthik
ಪ್ರಮುಖ ಸುದ್ದಿ1 min ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ4 mins ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ42 mins ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Prajwal Revanna Case
ಕರ್ನಾಟಕ58 mins ago

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Exit Poll 2024
ಪ್ರಮುಖ ಸುದ್ದಿ1 hour ago

Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Exit Poll 2024
ದೇಶ1 hour ago

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

exit poll 2024
ಪ್ರಮುಖ ಸುದ್ದಿ2 hours ago

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Union Minister Pralhad Joshi showed humanity by taking the injured to the hospital in his convoy vehicle
ಕರ್ನಾಟಕ2 hours ago

Pralhad Joshi: ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಪ್ರಲ್ಹಾದ್‌ ಜೋಶಿ

Air Conditioner Safety
ತಂತ್ರಜ್ಞಾನ2 hours ago

Air Conditioner Safety: ಎಸಿ ಏಕೆ ಬ್ಲಾಸ್ಟ್ ಆಗುತ್ತದೆ? ಅಪಾಯ ತಡೆಯುವುದು ಹೇಗೆ?

Valmiki Corporation Scam
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳಿಗೆ 6 ದಿನ ಎಸ್‌ಐಟಿ ಕಸ್ಟಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು5 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌