ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಇಬ್ಬರ ಸಾವು - Vistara News

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಇಬ್ಬರ ಸಾವು

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಾಣಿಯೂರು ಎಂಬಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಕೊಚ್ಚಿ ಹೋಗಿತ್ತು. ಕಾರ್ಯಾಚರಣೆ ಬಳಿಕ ಕಾರು ಹಾಗೂ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ.

VISTARANEWS.COM


on

ಕಾರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಾಣಿಯೂರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ವಿಟ್ಲದಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು ಹಳ್ಳಕ್ಕೆ ಬಿದ್ದು ಕೊಚ್ಚಿ ಹೋಗಿತ್ತು.

ಬಂಟ್ವಾಳ ತಾಲೂಕಿನ ವಿಟ್ಲ ಗ್ರಾಮದ ಧನುಷ್, ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ನಿವಾಸಿ (ಹೆಸರು ತಿಳಿದುಬಂದಿಲ್ಲ) ಮೃತರು. ಕಾರು ಹಳ್ಳಕ್ಕೆ ಬಿದ್ದ ಮಾಹಿತಿ ತಿಳಿದು ಭಾನುವಾರ ಬೆಳಗ್ಗೆ ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ಶೋಧನಾ ಕಾರ್ಯ ನಡೆಸಲಾಯಿತು. ಕೆಲ ಗಂಟೆಗಳ ಬಳಿಕ ಹಳ್ಳದಲ್ಲಿ ಕೊಚ್ಚಿ ಹೋದ ಕಾರನ್ನು ಮೇಲಕ್ಕೆತ್ತಲಾಯಿತು. ಆದರೆ, ಕಾರಿನಲ್ಲಿದ್ದ ಇಬ್ಬರು ನಾಪತ್ತೆಯಾಗಿದ್ದರಿಂದ ಅವರಿಗಾಗಿ ಹುಡುಕಾಟ ನಡೆಸಲಾಯಿತು. ಆನಂತರ ಕಾರು ಸಿಕ್ಕ ಜಾಗದ ಸಮೀಪವೇ ಈ ಇಬ್ಬರ ಮೃತದೇಹಗಳು ಸಿಕ್ಕಿವೆ.

ಇದನ್ನೂ ಓದಿ | Rain News | ಕೊಡಗಿನಲ್ಲಿ ಮುಂದುವರಿದ ಭಾರಿ ಮಳೆ, ರಾಜ್ಯದಲ್ಲಿ 5-6 ದಿನ ವರುಣನ ಅಬ್ಬರ ನಿರೀಕ್ಷೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Rain News: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಮಳೆ ಸುರಿಯುತ್ತಿದ್ದಾಗ ಮರದಡಿ ನಿಂತಿದ್ದ ಇಬ್ಬರಿಗೆ ಸಿಡಿಲು ಬಡಿದಿದೆ.

VISTARANEWS.COM


on

Rain News
Koo

ಕಲಬುರಗಿ: ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು (Lightning strike) ಇಬ್ಬರು ಮೃತಪಟ್ಟಿದ್ದಾರೆ. ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ಏಕನಾಥ್ ವಾಘಮೂಡೆ (55), ಸತೀಶ್ ಶಳಕೆ (40) ಮೃತರು. ಜಮೀನಿನಿಂದ ಮನೆಗೆ ಹೋಗುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ (Rain News) ಆರಂಭವಾಗಿದೆ. ಈ ವೇಳೆ ರಕ್ಷಣೆಗಾಗಿ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರ್ಧ ಗಂಟೆಗೂ ಹೆಚ್ಚುಕಾಲ ಹೊತ್ತಿ ಉರಿದ ತೆಂಗಿನ ಮರ

ರಾಯಚೂರು: ಶಕ್ತಿನಗರದ ದತ್ತಾತ್ರೇಯ ದೇವಸ್ಥಾನದ ಆವರಣದದಲ್ಲಿ ಸಿಡಿಲು ಬಡಿದಿ ತೆಂಗಿನ ಮರ ಹೊತ್ತಿ ಉರಿದಿದೆ. ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದ ಕಾರಣ ಮಳೆಯ ನಡುವೆಯೂ ಅರ್ಧ ಗಂಟೆಗೂ ಹೆಚ್ಚುಕಾಲ ತೆಂಗಿನ ಮರ ಹೊತ್ತಿ ಉರಿಯಿತು.

ಕೆರೆಯಂತಾದ ಬಡಾವಣೆ

ಯಾದಗಿರಿ: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿಯ ಬಡಾವಣೆಯೊಂದು ಕೆರೆಯಂತಾಗಿದೆ. ಮಳೆ‌ ನಿಂತ ಮೇಲೂ ಮನೆಯಿಂದ ಹೊರ ಬರಲಾಗದೆ ನಿವಾಸಿಗಳ ಪರದಾಡುತ್ತಿದ್ದಾರೆ. ಸತತ ಮೂರು ಗಂಟೆಗಳ ಕಾಲ ಸುರಿದ ಮಳೆಯಿಂದ ರಸ್ತೆ ಮೇಲೂ ನೀರು ಆವರಿಸಿಕೊಂಡಿದ್ದರಿಂದ ವಾಹನ ಸವಾರರ ಪರದಾಡುತ್ತಿದ್ದಾರೆ.

ರಸ್ತೆ ಮೇಲೆ ಉರುಳಿ ಬಿದ್ದ ಬೃಹತ್ ಮರ

ರಾಯಚೂರು: ಬಿರುಗಾಳಿ ಸಹಿತ ಮಳೆಗೆ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದ ಘಟನೆ ರಾಯಚೂರು ನಗರದ ಆರ್.ಬಿ. ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ಇದ್ದ ತಳ್ಳುವ ಗಾಡಿ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೃಹತ್ ಮರದ ಜತೆ ಕೆಲ ವಿದ್ಯುತ್ ಕಂಬಗಳು ನೆಲಕಚ್ಚಿವೆ. ರಸ್ತೆಗೆ ಮರ ಉರುಳಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ | Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಮೊಬೈಲ್ ಟವರ್ ರಾಡ್ ಕಳಚಿ ಬಿದ್ದು ವಿದ್ಯಾರ್ಥಿನಿಗೆ ಗಾಯ

ಕಲಬುರಗಿ: ಮೊಬೈಲ್ ಟವರ್ ರಾಡ್ ಕಳಚಿ ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಸುಮಾ ಗಾಯಗೊಂಡ ಯುವತಿ. ಈಕೆಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಡ್ಲಾಪುರ ಗ್ರಾಮದ ಮನೆಯ ಮುಂದೆ ನಿಂತಿದ್ದಾಗ, 180 ಅಡಿ ಎತ್ತರದ ಬಿಎಸ್‌ಎನ್‌ಎಲ್ ಟವರ್‌ನ ರಾಡ್‌ ಕಳಚಿ ಬಿದ್ದಿದ್ದರಿಂದ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ಕಾರ್ಯ ಸ್ಥಗಿತಗೊಂಡಿರುವ ಟವರ್‌ನ ರಾಡುಗಳು ಸಡಿಲಗೊಂಡಿದ್ದು ನೇತಾಡುತ್ತಿವೆ. ಸಣ್ಣ ಗಾಳಿಗೂ ಸಹ ಯಾವುದೇ ಕ್ಷಣದಲ್ಲಿ ರಾಡ್‌ಗಳು ಬಿದ್ದು ಜನರ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆ ಇದೆ.

ಇದನ್ನೂ ಓದಿ | Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ನ ಹಳೇ ಟವರ್ ತೆರವು ಮಾಡಿ ಎಂದು ಸ್ಥಳೀಯರು ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಗಾಳಿ ಮಳೆ ಸಮಯದಲ್ಲಿ ಜನರು ಟವರ್‌ ಬಳಿ ಆತಂಕದಿಂದ ಓಡಾಡುವಂತಾಗಿದೆ.

Continue Reading

ಕರ್ನಾಟಕ

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ದಂಪತಿ ಪರಾರಿ!

Fraud Case: ಕಲಬುರಗಿಯಲ್ಲಿ ಶಿಕ್ಷಕ ಸೇರಿ ಹಲವರಿಂದ ಸುಮಾರು 30 ಕೋಟಿ ಪಡೆದು ವಂಚಿಸಿರುವ ಕಿಲಾಡಿ ದಂಪತಿ, ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾರೆ.

VISTARANEWS.COM


on

fraud case
Koo

ಕಲಬುರಗಿ: ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವುದು ನಗರದಲ್ಲಿ ನಡೆದಿದೆ. ಕ್ಯಾಪಿಟಲ್‌ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ (Fraud Case) ಆರೋಪ ಕೇಳಿಬಂದಿದ್ದು, ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಿಲಾಡಿ ದಂಪತಿ ಪರಾರಿಯಾಗಿದ್ದಾರೆ.

ಕಲಬುರಗಿ ತಾಲೂಕಿನ ಕುರಿಕೋಟಾ ಗ್ರಾಮದ ಶಿಕ್ಷಕ ವೀರೇಶ ಭೀಮಾಶಂಕರ ಭಾಗೋಡಿ (24) ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಅವರು ನಗರದ ಗಾಂಧಿ ನಗರದ ಬಿ.ಎಲ್.ಕಾಂಪ್ಲೆಕ್ಸ್‌ನಲ್ಲಿ ಒಂದು ಆಫೀಸ್ ಮಾಡಿಕೊಂಡು 1 ಲಕ್ಷ ತುಂಬಿದರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ಹೇಳಿದ್ದರು. ಇದನ್ನು ನಂಬಿ ಹಂತ ಹಂತವಾಗಿ ವೀರೇಶ ಭೀಮಾಶಂಕರ ಭಾಗೋಡಿ ಅವರು 5.5 ಲಕ್ಷ ರೂ. ನೀಡಿದ್ದರು. ಇವರಂತೆ ಮಹ್ಮದ್ ಇಬ್ರಾಹಿಂ, ಗುಂಡಪ್ಪ ವಾರದ, ಚಂದ್ರಕಾಂತ ರಾಠೋಡ್, ಸುನಿತಾ, ಶರಣು ಎಂಬುವವರು ಸೇರಿ ಇತರರು ಸುಮಾರು 30 ಕೋಟಿಗೂ ಹೆಚ್ಚು ಹಣವನ್ನು ಉತ್ಕರ್ಷ ವರ್ಧಮಾನೆ ಅವರಿಗೆ ನೀಡಿದ್ದಾರೆ. ಈ ಹಣವನ್ನು ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Theft case : ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

ಈ ಪ್ರಕರಣದಲ್ಲಿ ವರ್ಧಮಾನೆ ದಂಪತಿಗೆ ಪರಾರಿಯಾಗಲು ಸಹಕರಿಸಿದ ಸಂಬಂಧಿಕರಾದ ಸುಧಾ ಠಾಕೂರ್ ಮತ್ತು ವಿಜಯಸಿಂಗ್ ಹಜಾರೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಬಗ್ಗೆ ರೋಜಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

theft Case

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ಇದನ್ನೂ ಓದಿ: Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Karnataka Rain : ಭಾನುವಾರ ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ವಿಜಯನಗರ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ತಲಾ 1 ಎಮ್ಮೆ ಮೃತಪಟ್ಟಿವೆ. ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಗುರುಮಠಕಲ್‌ (karnataka weather Forecast) ಕೆರೆಯಂತಾಗಿದೆ.

VISTARANEWS.COM


on

By

Karnataka Rain
Koo

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: Basavanagudi News : ಪೂಜಾ ಸಾಮಾಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Karnataka Council Election: ಯಾರಿಗೆ ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಗೊಂದಲ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಫಾರ್ಮುಲಾ ಕಂಡು ಹಿಡಿಯಲಾಗಿದೆ. ಎರಡು ಸ್ಥಾನ ಸಿದ್ದರಾಮಯ್ಯ ಬಣಕ್ಕೆ, ಎರಡು ಸ್ಥಾನ ಡಿಕೆಶಿ ಬಣಕ್ಕೆ, ಇನ್ನೆರಡು ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹಾಗೂ ಒಂದು ಸ್ಥಾನವನ್ನು ಕಾಂಗ್ರೆಸ್‌ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ತಿಳಿದುಬಂದಿದೆ. ಇನ್ನು ಶಾರ್ಟ್‌ ಲಿಸ್ಟ್‌ ಹಿಡಿದುಕೊಂಡು ದೆಹಲಿಗೆ ತೆರಳಲು ಸಿದ್ದರಾಮಯ್ಯ ಹಾಗೂ ಡಿಕೆಶಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Karnataka Council Election
Koo

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ 11 ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯು (Karnataka Legislative Council Election) ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣಗಳ ಸೃಷ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D K Shivakumar) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿ ಹಲವು ನಾಯಕರ ಆಪ್ತರು ಲಾಬಿ ನಡೆಸುತ್ತಿದ್ದು, ಇದಕ್ಕಾಗಿ ಕಾಂಗ್ರೆಸ್‌ ನಾಯಕರು ಭಿನ್ನಮತವೇ ಬೇಡ ಎಂದು 2+2+2+1=7 ಫಾರ್ಮುಲಾ ಕಂಡು ಹಿಡಿದಿದ್ದಾರೆ ಎಂದು ತಿಳಿದಬಂದಿದೆ.

ಯಾರಿಗೆ ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಗೊಂದಲ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಫಾರ್ಮುಲಾ ಕಂಡು ಹಿಡಿಯಲಾಗಿದೆ. ಎರಡು ಸ್ಥಾನ ಸಿದ್ದರಾಮಯ್ಯ ಬಣಕ್ಕೆ, ಎರಡು ಸ್ಥಾನ ಡಿಕೆಶಿ ಬಣಕ್ಕೆ, ಇನ್ನೆರಡು ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹಾಗೂ ಒಂದು ಸ್ಥಾನವನ್ನು ಕಾಂಗ್ರೆಸ್‌ ಹೈಕಮಾಂಡ್ ತೀರ್ಮಾನಿಸುತ್ತದೆ. ಇನ್ನು ಏಳು ಸ್ಥಾನಗಳಿಗಾಗಿ 50 ಆಕಾಂಕ್ಷಿಗಳು ಸಾಲುಗಟ್ಟಿ ನಿಂತಿದ್ದು, ಯಾರು ಯಾವ ಬಣದಲ್ಲಿದ್ದಾರೆ ಎಂಬುದರ ಮೇಲೆ ಮಣೆ ಹಾಕಲಾಗುತ್ತದೆ ಎಂದು ತಿಳಿದುಬಂದಿದೆ.

ಯಾವ ಸಮುದಾಯಕ್ಕೆ ಯಾವ ನಾಯಕ ಮಣೆ ಹಾಕುತ್ತಿದ್ದಾರೆ? ಯಾರ ಯಾರ ಪರ, ಯಾರು ಲಾಬಿ ಮಾಡುತ್ತಿದ್ದಾರೆ ಎಂಬುದರ ಮಾಹಿತಿ ಹೀಗಿದೆ.

ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ( ಕುರುಬ), ಕೆ.ಗೋವಿಂದ ರಾಜು ( ಒಕ್ಕಲಿಗ), ಎಚ್.ಎಂ. ರೇವಣ್ಣ ( ಕುರುಬ), ವಿ.ಆರ್. ಸುದರ್ಶನ್ (ಗಾಣಿಗ).

foolish to link Rakesh death to Prajwal case says CM Siddaramaiah

ಡಿ.ಕೆ ಶಿವಕುಮಾರ್
ಸಿಗುವ ಎರಡು ಸ್ಥಾನಕ್ಕೆ ವಿಜಯ್ ಮುಳಗುಂದ್ ( ಬ್ರಾಹ್ಮಣ), ವಿನಯ್ ಕಾರ್ತಿಕ್ (ಒಕ್ಕಲಿಗ), ಬಿ.ಎಲ್. ಶಂಕರ್ (ಒಕ್ಕಲಿಗ) ರಮೇಶ್ ಬಾಬು (ಬಲಿಜ), ಐಶ್ವರ್ಯ ಮಹದೇವ ( ಕುರುಬ), ನಟರಾಜ ಗೌಡ ( ಒಕ್ಕಲಿಗ), ನಲಪಾಡ್ ( ಮುಸ್ಲಿಂ) ಅವರು ಲಾಬಿ ನಡೆಸುತ್ತಿದ್ದಾರೆ.

Drinking Water in Bangalore DK Shivakumar warns of disciplinary action against officials if Water causes health problem

ಮಲ್ಲಿಕಾರ್ಜುನ ಖರ್ಗೆ
ಮುದ್ದುಗಂಗಾಧರ್ (ಖರ್ಗೆ ಆಪ್ತ), ಸೂರಜ್ ಹೆಗ್ಡೆ , ಪುಷ್ಪ ಅಮರನಾಥ (ದಲಿತ), ಮುಂಡರಗಿ ನಾಗರಾಜ್ (ದಲಿತ), ವಿ.ಆರ್. ಸುದರ್ಶನ್ (ಗಾಣಿಗ), ಕರಡಿ ಸಂಗಣ್ಣ (ಲಿಂಗಾಯತ), ಹುಸೇನ್ (ಮುಸ್ಲಿಂ)

ಹೈಕಮಾಂಡ್
ಬೋಸರಾಜು (ಹಾಲಿ ಸಚಿವ)

ದೆಹಲಿಗೆ ತೆರಳಲು ಸಿದ್ದು, ಡಿಕೆಶಿ ತೀರ್ಮಾನ

ಕಾಂಗ್ರೆಸ್‌ಗೆ ಲಭಿಸುವ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಶಾರ್ಟ್‌ ಲಿಸ್ಟ್‌ ಹಿಡಿದುಕೊಂಡು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಲು ತೀರ್ಮಾನಿಸಿದ್ದಾರೆ. ಮೇ 28, 29ರಂದು ದೆಹಲಿಯಲ್ಲಿರಲಿರುವ ಇಬ್ಬರೂ ನಾಯಕರು, ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಿದ್ದಾರೆ. ಇದಾದ ಬಳಿಕವೇ ಅಭ್ಯರ್ಥಿಗಳ ಆಯ್ಕೆಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading
Advertisement
Rain News
ಕರ್ನಾಟಕ16 mins ago

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Jos Butler
ಪ್ರಮುಖ ಸುದ್ದಿ16 mins ago

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

Wagah Border
ದೇಶ35 mins ago

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Virat kohli
ಪ್ರಮುಖ ಸುದ್ದಿ44 mins ago

Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

FSSAI Warning
ಆರೋಗ್ಯ1 hour ago

FSSAI Warning: ಎದೆಹಾಲು ಮಾರಾಟ ಮಾಡುವಂತಿಲ್ಲ: ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ

fraud case
ಕರ್ನಾಟಕ1 hour ago

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ದಂಪತಿ ಪರಾರಿ!

Constables
ದೇಶ2 hours ago

Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Rohit Sharma
ಕ್ರೀಡೆ2 hours ago

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Karnataka Rain
ಮಳೆ2 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ2 hours ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌