Drowned in river : ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು - Vistara News

ಕ್ರೈಂ

Drowned in river : ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು

Drowned in River: ಅವರಿಬ್ಬರು ಕಾಲೇಜು ಹುಡುಗರು. ರಜೆಯ ದಿನ ಜತೆಯಾಗಿ ಮೀನು ಹಿಡಿಯಲು ತುಂಗಾ ತೀರಕ್ಕೆ ಹೋಗಿದ್ದರು. ಆದರೆ, ಅಲ್ಲಿ ಜವರಾಯ ನೀರಿನಲ್ಲಿ ಕಾದು ಕುಳಿತಿದ್ದ. ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

VISTARANEWS.COM


on

Shivamogga youths drowned
ತುಂಗಾ ನದಿಯಲ್ಲಿ ಕಾರ್ಯಾಚರಣೆ ಮತ್ತು ನೀರುಪಾಲಾದ ಇಬ್ಬರು ಯುವಕರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಮೀನು ಹಿಡಿಯಲೆಂದು ತುಂಗಾ ನದಿಗೆ (Tunga river) ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ (Two Youngsters drowned). ಕಾಲೇಜು ವಿದ್ಯಾರ್ಥಿಗಳಾಗಿರುವ (College Students) ಮೊಯಿನ್‌ ಖಾನ್‌ ಮತ್ತು ಅಂಜುಂ ಖಾನ್‌ ನೀರಿನಲ್ಲಿ ಕಣ್ಮರೆಯಾದವರು. ಇಬ್ಬರೂ 18 ವರ್ಷದವರು.

ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು (Youths went for fishing) ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು ಹಿಡಿಯುತ್ತಾ ಸುಳಿಗೆ ಸಿಲುಕಿಕೊಂಡಿದ್ದಾರೆ. ಹಾಗೆ ನೀರಿನಲ್ಲಿ ಮುಳುಗಿದ ಅವರು ಮೇಲೆ ಬಂದಿಲ್ಲ.

Shivamogga youths drowned in tunga river

ಬಿಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿರುವ ಮೊಯಿನ್ ಖಾನ್ ಶವ ಪತ್ತೆಯಾಗಿದ್ದರೆ, ಬಿಎ ಮೊದಲ ವರ್ಷದ ವಿದ್ಯಾರ್ಥಿ ಅಂಜುಂಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಣೇಶನ ಹಬ್ಬದ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಇವರು ಮೀನು ಹಿಡಿಯಲು ಹೋಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಉತ್ಸಾಹದಲ್ಲಿ ಅವರಿಗೆ ಸಾವು ಕಣ್ಣೆದುರು ಬಂದು ನಿಂತಿದ್ದು ಗೊತ್ತಾಗಲಿಲ್ಲ. ಅವರ ಮನೆಯವರು ಕುಟುಂಬಿಕರು ನದಿ ತೀರಕ್ಕೆ ಬಂದಿದ್ದು ಕುಟುಂಬದವರ ಕಣ್ಣೀರು ಹರಿಯುತ್ತಲೇ ಇದೆ. ವಯಸ್ಸಿಗೆ ಬಂದ ಮಕ್ಕಳು ಈ ರೀತಿಯಾಗಿ ಪ್ರಾಣ ಕಳೆದುಕೊಳ್ಳುವ ನೋವಿನ ಬಗ್ಗೆ ಅಲ್ಲಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನು ಓದಿ: Murder Case : ಎಗ್‌ರೈಸ್‌, ಕಬಾಬ್‌ ಇಲ್ಲ ಎಂದಿದ್ದೇ ತಪ್ಪಾಯ್ತಾ? ಅಂಗಡಿ ಮಾಲೀಕನನ್ನು ಇರಿದು ಕೊಂದ ಪಾತಕಿ

ವ್ಯಕ್ತಿಯನ್ನು ಕೊಂದು ಇಂಗುಗುಂಡಿಯಲ್ಲಿ ಮುಚ್ಚಿಟ್ಟಿದ್ದವರು 48 ಗಂಟೆಯಲ್ಲಿ ಸೆರೆ

ಶಿರಸಿ: ವ್ಯಕ್ತಿಯೊಬ್ಬನನ್ನು ಕೊಂದು ಇಂಗು ಗುಂಡಿಯಲ್ಲಿ ಮುಚ್ಚಿಟ್ಟಿದ್ದ ಮೂವರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೇವಲ 48 ಗಂಟೆಯಲ್ಲಿ ಪ್ರಕರಣವನ್ನು ಭೇದಿಸಲಾಗಿದೆ.

ಶಿರಸಿ ತಾಲೂಕಿನ ವಡ್ಡಿನಕೊಪ್ಪದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಹಾನಗಲ್ ತಾಲೂಕಿನ ಹೊಸಗೆಜ್ಜೆಹಳ್ಳಿ ನಿವಾಸಿ ಅಶೋಕ ಗಿರಿಯಪ್ಪ ಉಪ್ಪಾರ (48) ಕೊಲೆಯಾದ ವ್ಯಕ್ತಿ. ಇದನ್ನು ಬೆನ್ನು ಹತ್ತಿದ ಪೊಲೀಸರು ಪ್ರಕರಣ ದಾಖಲಾದ 48ಗಂಟೆಯಲ್ಲೆ ಆರೋಪಿಗಳನ್ನು ಬಂಧಿಸಿದ್ದಾರೆ.

ಹಾನಗಲ್ ತಾಲೂಕಿನ ಪರಶುರಾಮ ಸುರಳೇಶ್ವರ (23), ನಿರಂಜನ ತಳವಾರ (19), ಗುಡ್ಡಪ್ಪ (19) ಬಂಧಿತರು. ಇವರು ಗಿರಿಯಪ್ಪ ಉಪ್ಪಾರ ಅವರನ್ನು ಕೊಲೆಗೈದು ವಡ್ಡಿಕೊಪ್ಪ ಅರಣ್ಯ ಪ್ರದೇಶದ ಇಂಗುಗುಂಡಿಯಲ್ಲಿ ಶವ ಮುಚ್ಚಿಟ್ಟಿದ್ದರು. ಹಣಕ್ಕಾಗಿ ಕೊಲೆ ನಡೆಸಿ ಗೋಣಿ ಚೀಲ ಮುಚ್ಚಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ ಆರೋಪಿತರು ಏನೂ ಆಗಿಲ್ಲ ಎಂಬಂತೆ ತಮ್ಮ ಪಾಡಿಗೆ ತಾವಿದ್ದರು. ಆದರೆ, ಪೊಲೀಸರು ಮಾತ್ರ ಪ್ರಕರಣದ ಬೆನ್ನು ಹತ್ತಿ ಬಂಧಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Cyber Crime: ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Cyber Crime
Koo

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಫೋಟೊಗಳನ್ನು ಮಾರ್ಫ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್​ ಮಾಡಿದ್ದ (Cyber Crime) ಆರೋಪಿಯನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂದಿಸಿದ್ದಾರೆ. ಈತ ಅಪ್ರಾಪ್ತ ಬಾಲಕಿಯರ ಫೋಟೋಗಳನ್ನು ಬಿಟ್ಟ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಪ್ರಕಾರ ಜೈಲು ಸೇರಿದ್ದಾನೆ.

ಆರೋಪಿ ಫೋಟೋಗಳನ್ನು ಮಾರ್ಫ್ ಮಾಡಿ ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

ಬೆಳ್ಳೂರು ಹಿಂದು ಯುವಕನ ಮೇಲೆ ಹಲ್ಲೆ; 11ಕ್ಕೂ ಹೆಚ್ಚು ಮಂದಿ ಮೇಲೆ ಕೇಸ್‌

ಮಂಡ್ಯ: ಜಿಲ್ಲೆಯ ಬೆಳ್ಳೂರು ಪಟ್ಟಣದಲ್ಲಿ (Mandya News) ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಬೆಳ್ಳೂರಿನ ಅಭಿಲಾಷ್ ಎಂಬಾತನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಚೇರ್, ಮಾರಕಾಸ್ತ್ರಗಳಿಂದ ಹಲ್ಲೆ (Assault case) ಮಾಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ: Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11 ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Acid attack: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ಘಟನೆ ನಡೆದಿದೆ. ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ವಿವಾಹಿತ ಪ್ರಿಯತಮೆಗೆ ಪ್ರಿಯಕರ ಆ್ಯಸಿಡ್ ಎರಚಿದ್ದಾನೆ.

VISTARANEWS.COM


on

Acid attack
Koo

ಬಾಗಲಕೋಟೆ: ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ವಿವಾಹಿತ ಪ್ರಿಯತಮೆಗೆ ಪ್ರಿಯಕರ ಆ್ಯಸಿಡ್ ಎರಚಿದ ಘಟನೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ನಡೆದಿದೆ. ಆ್ಯಸಿಡ್ ದಾಳಿಯಿಂದ (Acid attack) ಮಹಿಳೆಗೆ ಎಡಗಣ್ಣು, ಮುಖದ ಭಾಗ ಹಾಗೂ ದೇಹದ ವಿವಿಧ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ.

ಲಕ್ಷ್ಮಿ ಬಡಿಗೇರ (33) ಆ್ಯಸಿಡ್ ದಾಳಿಗೊಳಗಾದ ಮಹಿಳೆ. ಮೌನೇಶ್ ಪತ್ತಾರ ಆ್ಯಸಿಡ್ ಎರಚಿದ ಆರೋಪಿ. ಮೂರ್ತಿ ತಯಾರಿಕೆ ಕೆಲಸ‌ ಮಾಡುವ ಮೌನೇಶ್ ಹಾಗೂ ಲಕ್ಷ್ಮಿ ವಿಜಯಪುರ ನಗರದ ಮೂರನಕೇರಿ ಮೂಲದವರು. ಇಬ್ಬರೂ ಬೇರೆ ಬೇರೆಯವರನ್ನು ಮದುವೆಯಾಗಿದ್ದರು. ಆದರೆ, ಯಾವುದೇ ಡಿವೋರ್ಸ್ ಪಡೆಯದೇ ಸಹಜೀವನ ನಡೆಸುತ್ತಿದ್ದರು. ಹೀಗಿದ್ದರೂ ಲಕ್ಷ್ಮಿ ಬಡಿಗೇರ‌‌ ಮೇಲೆ ಪದೇಪದೆ ಮೌನೇಶ್ ಸಂಶಯಪಡುತ್ತಿದ್ದ. ಇದರಿಂದ‌‌ ಮೇಲಿಂದ ಮೇಲೆ‌ ಜಗಳವಾಗುತ್ತಿತ್ತು.

ಒಂದು ವಾರದ ಹಿಂದೆ ಮನೆ ಬಿಟ್ಟು ಹೋಗಿದ್ದ ಮೌನೇಶ್ ಸೋಮವಾರ ರಾತ್ರಿ‌ ಮನೆಗೆ ವಾಪಸ್ ಬಂದಿದ್ದ. ಈ ವೇಳೆ ಲಕ್ಷ್ಮಿ ಬಾಗಿಲು ತೆರೆದಿರಲಿಲ್ಲ. ಇದರಿಂದ‌ ಸಿಟ್ಟಿಗೆದ್ದ ಮೌನೇಶ್ ಕಿಟಕಿ ತೆಗೆದು ಆ್ಯಸಿಡ್ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ ಬಡಿಗೇರ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯ ಎಂಟು ವರ್ಷದ ಮಗಳ ಮುಖಕ್ಕೂ ಅಲ್ಪ ಪ್ರಮಾಣದಲ್ಲಿ ಆ್ಯಸಿಡ್ ಸಿಡಿದಿದೆ. ಈ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಅಪಾಯದಿಂದ ಮಹಿಳೆ ಪಾರಾಗಿದ್ದಾರೆ.

ಯುವತಿಯರ ಫೋಟೊ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನ ಬಂಧನ

ಬೆಂಗಳೂರು: ಯುವತಿಯರ ಫೋಟೋ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನನ್ನು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯರ ಫೋಟೊಗಳನ್ನು ಆರೋಪಿ ಮಾರ್ಫ್‌ ಮಾಡುತ್ತಿದ್ದ. ಎಡಿಟ್‌ ಮಾಡಿದ ಫೋಟೊಗಳನ್ನು ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡುತ್ತಿದ್ದ.

ಇದನ್ನೂ ಓದಿ | Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೊವನ್ನು ಆರೋಪಿ ಮಾರ್ಫ್ ಮಾಡಿದ್ದ. ಈ ಬಗ್ಗೆ ಪೋಷಕರಿಂದ ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿರುವ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ. ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಯಿಂದ ಮೂರು ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.

Continue Reading

ಕರ್ನಾಟಕ

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Robbery Case: ಯಲ್ಲಾಪುರ ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

Robbery Case Two accused arrested by yallapur police
Koo

ಯಲ್ಲಾಪುರ: ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ (Robbery Case) ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಮೇ 23ರಂದು ರಾಜಸ್ಥಾನದ ಪಾಲಿ ಜಿಲ್ಲೆಯ ಸುರೇಶ ರಾವ್ ಹಿಮ್ಮತ್‌ ರಾಮಜೀರಾವ್ ಎಂಬುವವರು ತಮ್ಮ ಸ್ನೇಹಿತ ಸ್ನೇಹಿತ ಸಂಪತ್ ಸೊಲಂಕಿರವರೊಂದಿಗೆ ಮುಂಬೈದಿಂದ ಮಂಗಳೂರಿಗೆ ತೆರಳುತ್ತಿರುವಾಗ ಅಂಕೋಲಾ ಮಾರ್ಗದ ಅರಬೈಲ್ ಘಟ್ಟದಲ್ಲಿ ಬೇರೊಂದು ಕಾರಿನಲ್ಲಿ ಬಂದ 4 ಜನ ಅಪರಿಚಿತರು ಕಾರನ್ನು ಅಡ್ಡಗಟ್ಟಿ, ಕಾರಿನ ಎರಡು ಗ್ಲಾಸ್ ಒಡೆದು, 3 ಮೊಬೈಲ್‌ ಫೋನ್‌, ಕಾರಿನ ಕೀ ಕಸಿದುಕೊಂಡು, ನೀವು ಶಿಂಧೆ ಸಾಹೇಬರ ಕಾರಿಗೆ ಓವರಟೇಕ್ ಮಾಡಿಕೊಂಡು ಬಂದಿದ್ದೀರಿ ಎಂದು ಹೇಳಿ ಅವರಿಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಹೋಗಿ, ಮರಳಿ ಹುಬ್ಬಳ್ಳಿ ರಸ್ತೆಗೆ ಕರೆತಂದು ರಸ್ತೆ ಬದಿಯಲ್ಲಿ ಇಳಿಸಿ, ಶಿಂಧೆ ಸಾಹೇಬರು ಹಿಂದೆ ಇದ್ದಾರೆ ನೀವು ಬಸ್ಸಿನಲ್ಲಿ ಹೋಗಿ ಎಂದು ಹೇಳಿ ಸುಲಿಗೆ ಮಾಡಿಕೊಂಡು ಹೋಗಿರುವ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರು, ದೊರೆತ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಸುರಜ ಸುಧಾಕರ ಚೌಹಾಣ (30) ಹಾಗೂ ರವೀಂದ್ರ ಭಜರಂಗ ಮದನಿ (31) ಎಂಬುವ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಜಯಕುಮಾರ, ಡಿವೈಎಸ್ಪಿ ಎಂ.ಎಸ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ರಮೇಶ ಎಚ್. ಹನಾಪುರ ನೇತೃತ್ವದಲ್ಲಿ ಪಿಎಸ್‌ಐಗಳಾದ ಸಿದ್ದಪ್ಪ ಗುಡಿ, ವಿಜಯರಾಜ, ಎಎಸ್‌ಐ ಆನಂದ ಡಿ ಪಾವಸ್ಕರ ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ರಾಮಾ ಪಾವಸ್ಕರ, ರಾಘವೇಂದ್ರ ಮೂಳೆ, ಸಂತೋಷ ಬಾಳೇರ, ಶೋಭಾ ನಾಯ್ಕ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Continue Reading

ಕರ್ನಾಟಕ

Mandya News: ಬೆಳ್ಳೂರು ಹಿಂದು ಯುವಕನ ಮೇಲೆ ಹಲ್ಲೆ; 11ಕ್ಕೂ ಹೆಚ್ಚು ಮಂದಿ ಮೇಲೆ ಕೇಸ್‌

Mandya News: ಮಂಡ್ಯ ಜಿಲ್ಲೆಯ ಬೆಳ್ಳೂರು ಪಟ್ಟಣದಲ್ಲಿ ಅಭಿಲಾಷ್ ಎಂಬಾತನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಚೇರ್, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಈ ಸಂಬಂಧ 11ಕ್ಕೂ ಹೆಚ್ಚು ಯುವಕರ ಮೇಲೆ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Mandya News
Koo

ಮಂಡ್ಯ: ಜಿಲ್ಲೆಯ ಬೆಳ್ಳೂರು ಪಟ್ಟಣದಲ್ಲಿ (Mandya News) ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಬೆಳ್ಳೂರಿನ ಅಭಿಲಾಷ್ ಎಂಬಾತನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಚೇರ್, ಮಾರಕಾಸ್ತ್ರಗಳಿಂದ ಹಲ್ಲೆ (Assault case) ಮಾಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ.

ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11 ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏನಿದು ಪ್ರಕರಣ?

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ (ಮೇ 27) ಸಂಜೆ ಅಭಿಲಾಷ್​ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್​ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿತ್ತು.

ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದರು.

ಇದನ್ನೂ ಓದಿ | Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

ದೊಡ್ಡ ಗುಂಪು ಹಲ್ಲೆ ಮಾಡಿದ್ದ ಅಭಿಲಾಷ್​ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿತ್ತು. ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದಾರೆ.

Continue Reading
Advertisement
namaz on road
ಪ್ರಮುಖ ಸುದ್ದಿ12 mins ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ12 mins ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ6 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ6 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ7 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ7 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ8 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ8 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ8 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ8 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು18 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌