Living together : ಲಿವಿಂಗ್‌ ಟುಗೆದರ್‌ನಲ್ಲಿದ್ದ ಜೋಡಿಯ ನಡುವೆ ಜಗಳ; ಕತ್ತು ಹಿಸುಕಿ ಕೊಲೆ ಮಾಡಿದ ಪ್ರಿಯಕರ - Vistara News

ಕ್ರೈಂ

Living together : ಲಿವಿಂಗ್‌ ಟುಗೆದರ್‌ನಲ್ಲಿದ್ದ ಜೋಡಿಯ ನಡುವೆ ಜಗಳ; ಕತ್ತು ಹಿಸುಕಿ ಕೊಲೆ ಮಾಡಿದ ಪ್ರಿಯಕರ

Living together: ಅವರದು ಒಂದು ರೀತಿಯ ಲಿವಿಂಗ್‌ ಟುಗೆದರ್‌. ಅವಳ ಗಂಡ ಸತ್ತಿದ್ದಾನೆ, ಇವನ ಹೆಂಡತಿ ಸತ್ತಿದ್ದಾಳೆ. ಪರಸ್ಪರ ಆಧರಿಸಿಕೊಂಡು ಬದುಕುತ್ತಿದ್ದ ಅವರ ಬಾಳಿನಲ್ಲಿ ಬಿರುಗಾಳಿ ಎದ್ದಿದೆ.

VISTARANEWS.COM


on

Living together Murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿಯಲ್ಲಿ ವ್ಯಕ್ತಿಯೊಬ್ಬ ತನ್ನ ಜತೆಗಿದ್ದ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಅವರಿಬ್ಬರೂ ಗಂಡ-ಹೆಂಡಿರಂತೆ ಜತೆಯಾಗಿ ಬದುಕುತ್ತಿದ್ದರೂ (Living together) ಗಂಡ-ಹೆಂಡಿರಲ್ಲ. ದೊಡ್ಡ ಪಟ್ಟಣಗಳಲ್ಲಿ ಕಾಣಸಿಗುವ ಲಿವಿಂಗ್‌ ಟುಗೆದರ್‌ನಂಥ ಸಂಬಂಧವದು. ಅವರ ನಡುವೆ ಹುಟ್ಟಿದ ಜಗಳ ಈಗ ಆಕೆಯ ಕೊಲೆಗೆ (Woman murdered) ಕಾರಣವಾಗಿದೆ.

ಚಿತ್ರದುರ್ಗದ ಬ್ರಹ್ಮಸಾಗರ ಮೂಲದ ರೂಪಾ(30) ಕೊಲೆಯಾದ ಮಹಿಳೆ. ಆಕೆಯ ಜತೆಗಿದ್ದ ಪ್ರಿಯಕರನೇ ಕೊಲೆಗಾರ.

ವಿವಾಹಿತೆಯಾಗಿದ್ದ ರೂಪಾಳ ಪತಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಬದುಕಿನ ದಾರಿ ಹುಡುಕುತ್ತಾ ಆಕೆ ಭದ್ರಾವತಿಗೆ ಬಂದಿದ್ದಳು. ಕೂಲಿ ಕಾರ್ಮಿಕಳಾಗಿದ್ದ ರೂಪಾ ನೀಲಗಿರಿ ಮರಗಳ ಕಟಾವಿನ ಕೆಲಸಕ್ಕಾಗಿ ಇಲ್ಲಿಗೆ ಬಂದಿದ್ದಳು.

ಈ ನಡುವೆ, ಕೊಲೆ ಮಾಡಿದ ಆತನ ಸಂಗಾತಿ ಕೂಡ ವಿವಾಹಿತನಾಗಿದ್ದು, ಕೆಲ ವರ್ಷಗಳ ಹಿಂದೆ ಪತ್ನಿ ಮೃತಪಟ್ಟಿದ್ದಳು.

ಇತ್ತೀಚೆಗೆ ಅವರಿಬ್ಬರೂ ಕೂಡಿ ಬಾಳುತ್ತಿದ್ದರು. ಒಂದೇ ಮನೆಯಲ್ಲಿದ್ದರು. ಭಾನುವಾರ ರಾತ್ರಿ ಅವರಿಬ್ಬರೂ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ವೇಳೆ, ಸಂಗಾತಿ ಆಕೆಗೆ ಕಾಲಿನಿಂದ ಒದ್ದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆತ ಪರಾರಿಯಾಗಿದ್ದಾನೆ. ದಿಕ್ಕಿಲ್ಲದೆ ಬಂದವಳಿಗೆ ಒಂದು ದಿಕ್ಕು ತೋರಿಸಿದ ಆತ ಈಗ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ಮಾಡಿದ್ದಾನೆ. ಭದ್ರಾವತಿಯ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಹೆಂಡ್ತಿಗೆ ಗುಂಡು ಹೊಡೆದು ಕೊಂದಿದ್ದ ಪಾಪಿ ಆತ್ಮಹತ್ಯೆಗೆ ಶರಣು!

ಕಲಬುರಗಿ: ತವರು ಮನೆ ಸೇರಿದ್ದಾಳೆ ಎಂಬ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದು ತಲೆ ಮರೆಸಿಕೊಂಡಿದ್ದ ಪಾಪಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರ್ ಕೆ ಗ್ರಾಮದಲ್ಲಿ ಬಸವರಾಜ್‌ ಎಂಬಾತ ಪತ್ನಿಗೆ ಗುಂಡು ಹಾರಿಸಿ (Shoot out) ಕೊಂದು ಹಾಕಿದ್ದ ಪ್ರಕರಣ (Murder case) ಎರಡು ದಿನಗಳ ಹಿಂದೆ ನಡೆದಿತ್ತು. ಇದಾದ ಬಳಿಕ ತಲೆ ಮರೆಸಿಕೊಂಡಿದ್ದ ಪತಿ ಬಸವರಾಜ್‌ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಹನಮವ್ವ (36) ಕೊಲೆಯಾದ ದುರ್ದೈವಿಯಾಗಿದ್ದರು. ಪತ್ನಿಯನ್ನು ಬಸವರಾಜ್ ಎಂಬಾತ ಗುಂಡು ಹಾರಿಸಿದ ಪತಿಯಾಗಿದ್ದಾನೆ. ಹೆಂಡತಿಯನ್ಮು ಹತ್ಯೆಗೈದ ಬಳಿಕ ತಲೆ ಮರೆಸಿಕೊಂಡಿದ್ದ ಬಸವರಾಜ್, ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಆದರೆ, ಆರೋಪಿ‌ ಬಂಧನಕ್ಕೆ ಚಿತ್ತಾಪುರ ಪೊಲೀಸರು ಬಲೆ ಬೀಸಿದ್ದರು. ಇನ್ನು ತಾನು ಇಲ್ಲಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಅರಿತ ಬಸವರಾಜ್‌, ಪೊಲೀಸರಿಗೆ ಸಿಕ್ಕಿ ಬೀಳುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾನೆ.

ಅದರಂತೆ ಪುನಃ ತನ್ನ ಮನೆಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ತಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.

ಏನಿದು ಘಟನೆ?

ಹನಮವ್ವ ಹಾಗೂ ಬಸವರಾಜ್‌ ಮದುವೆ ಆದಾಗಿಂದಲೂ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಗಂಡನ ಕಿರುಕುಳಕ್ಕೆ ಬೇಸತ್ತ ಹನಮವ್ವ ಕೊನೆಗೆ ತವರು ಮನೆ ಸೇರಿದ್ದಳು. ಆದರೆ, ಆಕೆಗೆ ಮನೆಗೆ ಬರುವಂತೆ ಬಸವರಾಜ್‌ ಎಷ್ಟೇ ಹೇಳಿದರೂ ಹನಮವ್ವ ಮಾತ್ರ ಒಪ್ಪಲಿಲ್ಲ. ಕಾರಣ, ಆತನ ಕಿರುಕುಳಕ್ಕೆ ರೋಸಿ ಹೋಗಿದ್ದಳು. ತಾನು ಕರೆದರೂ ಬಾರದೇ ಇರುವುದರಿಂದ ಸಿಟ್ಟಿಗೆದ್ದ ಬಸವರಾಜ್‌ ಬಂದೂಕು ತೆಗೆದುಕೊಂಡು ಹೋಗಿ ಆಕೆ ಮೇಲೆ ಗುಂಡಿನ ದಾಳಿ ನಡೆಸಿ ಸಾಯಿಸಿದ್ದಾನೆ. ಬಳಿಕ ಅಲ್ಲಿಂದ ಕಣ್ಮರೆಯಾಗಿದ್ದ. ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು, ಆತನ ಪತ್ತೆಗೆ ಬಲೆ ಬೀಸಿದ್ದರು. ಈಗ ನೇಣು ಬಿಗಿದ ಸ್ಥಿತಿಯಲ್ಲಿ ಬಸವರಾಜ್‌ ಮೃತದೇಹ ಪತ್ತೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಾವಣಗೆರೆ

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Farmer Death : ಸಾಲದ ಹೊರೆಗೆ ಮನನೊಂದ ರೈತನೊಬ್ಬ ತನ್ನ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Farmer Death
Koo

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಇದನ್ನೂ ಓದಿ: Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

ಸಿಬಿಐ ಅಧಿಕಾರಿಗಳು (Fake CBI Gang) ಎಂದು ಹೇಳಿ ನಿವೃತ್ತ ಅಧಿಕಾರಿಗೆ 85 ಲಕ್ಷ ರೂ. ವಂಚಿಸಿರುವ ಗ್ಯಾಂಗ್ ವಿರುದ್ಧ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ದೆಹಲಿಯಲ್ಲಿ ಪ್ರಕರಣ ದಾಖಲಾಗಿದೆ. ‘ರಾಣಾ ಗಾರ್ಮೆಂಟ್ಸ್’ ಹೆಸರಿನ ಕಂಪೆನಿಗೆ ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ ಹಣ ವರ್ಗಾವಣೆ ಆಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

VISTARANEWS.COM


on

By

Fake CBI Gang
Koo

ನವದೆಹಲಿ: ಸಿಬಿಐ, ಕಸ್ಟಮ್ಸ್, ಮಾದಕ ದ್ರವ್ಯ ಮತ್ತು ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸುತ್ತಿದ್ದ ಗ್ಯಾಂಗ್ ವೊಂದು (Fake CBI Gang) ಬಹುರಾಷ್ಟ್ರೀಯ ಕಂಪನಿಯ ನಿವೃತ್ತ ಹಿರಿಯ ಅಧಿಕಾರಿಯೊಬ್ಬರಿಗೆ (retired officer) 85 ಲಕ್ಷ ರೂ. ವಂಚಿಸಿರುವ ಕುರಿತು ಆಂಧ್ರಪ್ರದೇಶದ (andrapradesh) ವಿಶಾಖಪಟ್ಟಣಂ (Visakhapatnam) ಮತ್ತು ದೆಹಲಿಯಲ್ಲಿ (delhi) ಪ್ರಕರಣ ದಾಖಲಿಸಲಾಗಿದೆ.

ಹಣವನ್ನು ಚೆಕ್ ಮೂಲಕ ಪಡೆದ ಗ್ಯಾಂಗ್ ದೆಹಲಿಯ ಉತ್ತಮ್ ನಗರದಲ್ಲಿ ಹೆಚ್‌ಡಿಎಫ್‌ಸಿ ಖಾತೆಯನ್ನು ನಿರ್ವಹಿಸುತ್ತಿದ್ದ ‘ರಾಣಾ ಗಾರ್ಮೆಂಟ್ಸ್’ ಎಂಬ ಕಂಪನಿಗೆ ವರ್ಗಾಯಿಸಿದೆ. ವಿಶಾಖಪಟ್ಟಣಂನಲ್ಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಗ್ಯಾಂಗ್ ‘ರಾಣಾ ಗಾರ್ಮೆಂಟ್ಸ್’ ನಡೆಸುತ್ತಿದ್ದ ಎಚ್‌ಡಿಎಫ್‌ಸಿ ಖಾತೆಯಿಂದ ಭಾರತದಾದ್ಯಂತ 105 ಖಾತೆಗಳಿಗೆ ಈ ಹಣವನ್ನು ವರ್ಗಾಯಿಸಿದೆ. ಈ ಕುರಿತು ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಉತ್ತಮ್ ನಗರ ಶಾಖೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಭಾರತದಾದ್ಯಂತ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿರುವ ಜರ್ಮನಿಯ ಪ್ರಧಾನ ಕಚೇರಿಯ ಫಾರ್ಮಾ ಸಂಸ್ಥೆಯೊಂದರ 57 ವರ್ಷದ ನಿವೃತ್ತ ಅಸೋಸಿಯೇಟ್ ಜನರಲ್ ಮ್ಯಾನೇಜರ್ ವಂಚನೆಯ ಕುರಿತು ಪ್ರತಿಕ್ರಿಯಿಸಿದ್ದು, ನನಗೆ ಮೂರು ವರ್ಷಗಳ ಸೇವೆ ಉಳಿದಿತ್ತು. ಆದರೆ ಮಗನನ್ನು ಕಾಲೇಜಿಗೆ ಕಳುಹಿಸಲು ಸಮಯ ಬೇಕಾಗಿದ್ದರಿಂದ ಸ್ವಯಂ ನಿವೃತ್ತಿ ತೆಗೆದುಕೊಂಡೆ. ಮೇ 2ರಂದು ನಿವೃತ್ತಿ ಪರಿಹಾರ ಸಿಕ್ಕಿದೆ. ಮಗನ ವೀಸಾ ನೇಮಕಾತಿ ಮೇ 17ರಂದು ಆಗಿತ್ತು. ಆದರೆ ಮೇ 14ರಂದು, ನನ್ನ ದಾಖಲೆಗಳನ್ನು ಪರಿಶೀಲಿಸಿದ ಅನಂತರ ಹಿಂದಿರುಗಿಸುವುದಾಗಿ ಹೇಳಿ 85 ಲಕ್ಷ ರೂ.ವನ್ನು ಕಳುಹಿಸುವಂತೆ ಗ್ಯಾಂಗ್ ನನ್ನನ್ನು ವಂಚಿಸಿರುವುದಾಗಿ ಹೇಳಿದ್ದಾರೆ.

ವಿಶಾಖಪಟ್ಟಣಂ ಕ್ರೈಂ ಬ್ರಾಂಚ್ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಶಾಖಪಟ್ಟಣಂನಲ್ಲಿರುವ ಬ್ಯಾಂಕ್‌ನಲ್ಲಿ ಕೆಲವರು ಇದರಲ್ಲಿ ಭಾಗಿಯಾಗಿರಬಹುದು. ಯಾಕೆಂದರೆ ಗ್ಯಾಂಗ್‌ಗೆ ನಿವೃತ್ತಿಯ ಅನಂತರ ಅವರು ಪಡೆದ ನಿಖರವಾದ ಮೊತ್ತ ಸೇರಿದಂತೆ ಅವರ ಖಾತೆಯ ಬಗ್ಗೆ ಎಲ್ಲವೂ ತಿಳಿದಿತ್ತು. ಹತ್ತಿರದ ಹೆಚ್‌ಡಿಎಫ್‌ಸಿ ಬ್ಯಾಂಕ್‌ಗೆ ಹೋಗಿ ಚೆಕ್ ಡ್ರಾಪ್ ಮಾಡಲು ಗ್ಯಾಂಗ್ ಹೇಳಿತು ಎಂದು ನಿವೃತ್ತ ಅಧಿಕಾರಿ ದೂರಿದ್ದಾರೆ.

ಕ್ರೈಂ ಬ್ರಾಂಚ್ ವಿಶಾಖಪಟ್ಟಣಂನಲ್ಲಿರುವ ಹೆಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಿಂದ ಹಲವಾರು ದಾಖಲೆಗಳನ್ನು ತೆಗೆದುಕೊಂಡಿದೆ. ಅವರು ಬ್ಯಾಂಕ್ ಅಧಿಕಾರಿಗಳನ್ನು ಭೇಟಿಯಾದಾಗ ಪ್ರಕರಣ ಕುರಿತು ಪ್ರತಿಕ್ರಿಯಿಸಲು ಬ್ಯಾಂಕ್ ನಿರಾಕರಿಸಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಉತ್ತಮ್ ನಗರ ಶಾಖೆಯ ಪೊಲೀಸರು ರಾಣಾ ಗಾರ್ಮೆಂಟ್ಸ್‌ ಗೆ ಭೇಟಿ ನೀಡಿದ್ದಾರೆ. ರಾಣಾ ಗಾರ್ಮೆಂಟ್ಸ್ ಮಾಲೀಕರು ಈ ಸ್ಥಳವನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ನಿವೃತ್ತ ಅಧಿಕಾರಿ ಹೇಳಿದರು.

ನಿವೃತ್ತಿ ಅಧಿಕಾರಿಯ ಬ್ಯಾಂಕ್ ಖಾತೆಗೆ ಹಣ ಜಮೆಯಾದ ಬಳಿಕ ಡಿಸಿಪಿ ಸೈಬರ್ ಕ್ರೈಮ್ ಬಾಲ್ಸಿಂಗ್ ರಜಪೂತ್ ಎಂದು ಹೇಳಿ ಒಬ್ಬ ವ್ಯಕ್ತಿ ಕರೆ ಮಾಡಿದ್ದೂ, ಹಲವಾರು ಮಾದಕ ದ್ರವ್ಯ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ತಮ್ಮ ಹೆಸರು ಬಂದಿದೆ ಮತ್ತು ಈ ಎಲ್ಲಾ ಪ್ರಕರಣಗಳಿಗೆ ಅವರ ಆಧಾರ್ ಲಿಂಕ್ ಮಾಡಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

ಎಫ್ ಐ ಆರ್ ನಲ್ಲಿ ಏನಿದೆ?

ಇನ್ನೊಬ್ಬ ಕರೆ ಮಾಡಿ ನಿಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಬೇಕಿದೆ. ಕೂಡಲೇ ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನಕಲಿ ಡಿಸಿಪಿ ಸ್ವಲ್ಪ ಹೊತ್ತು ಮಾತನಾಡಿ, ನೀವು ನಿರಪರಾಧಿಯಂತೆ ಕಾಣುತ್ತೀರಿ. ಹೀಗಾಗಿ 85 ಲಕ್ಷ ರೂ. ವನ್ನು ತನಿಖೆಗಾಗಿ ತೆಗೆದುಕೊಂಡು ಏನೂ ತಪ್ಪಿಲ್ಲ ಎಂದು ಕಂಡುಬಂದರೆ ಮರಳಿ ಕೊಡುವುದಾಗಿ ಹೇಳಿದ್ದರು. ಸ್ಕೈಪ್‌ನಲ್ಲಿ ಎರಡು ದಿನಗಳ ವಿಚಾರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಮನೆಯಿಂದ ಹೊರಹೋಗಲು ಅಥವಾ ಯಾರಿಗೂ ಕರೆ ಮಾಡಲು ಅವರು ಬಿಡಲಿಲ್ಲ ಎಂದು ನಿವೃತ್ತ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

ವಂಚನೆ ಬಗ್ಗೆ ಎಚ್ಚರವಿರಲಿ

ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಪತ್ತೆಯಾದ ಮಾಹಿತಿಗಳ ಬಗ್ಗೆ ವಿವರಣೆ ನೀಡಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಪರಿಚಿತ ಸಂಖ್ಯೆಗಳಿಂದ ವಾಟ್ಸಾಪ್ ವಿಡಿಯೋ ಕರೆಗಳಿಗೆ ಉತ್ತರಿಸದಂತೆ ನಿವೃತ್ತ ಅಧಿಕಾರಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ವಿಶಾಖಪಟ್ಟಣ ಸೈಬರ್ ಪೊಲೀಸರಿಗೆ 300 ಕೋಟಿ ರೂ. ವಂಚನೆ ಮೊತ್ತದ ಕುರಿತು ದೂರುಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.

Continue Reading

ಕ್ರೈಂ

Killer Python: ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು! ಹೊಟ್ಟೆ ಸೀಳಿ ಹೊರ ತೆಗೆದರು!

45 ವರ್ಷದ ಮಹಿಳೆಯೊಬ್ಬರನ್ನು ಸುಮಾರು 16 ಅಡಿ ಉದ್ದದ ಹೆಬ್ಬಾವು (Killer Python) ಜೀವಂತವಾಗಿ ನುಂಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಮಹಿಳೆ ಮನೆಗೆ ಹಿಂದಿರುಗದೇ ಇದ್ದಾಗ ಅನುಮಾನಗೊಂಡ ಪತಿ ಗ್ರಾಮಸ್ಥರ ನೆರವಿನಿಂದ ಮಹಿಳೆಯ ಹುಡುಕಾಟದಲ್ಲಿ ತೊಡಗಿದ್ದರು.

VISTARANEWS.COM


on

By

Killer Python
Koo

ಇಂಡೋನೇಷ್ಯಾ: ನಾಪತ್ತೆಯಾದ 45 ವರ್ಷದ ಮಹಿಳೆಯೊಬ್ಬರು (women) ಶವವಾಗಿ ಮೂರು ದಿನಗಳ ಬಳಿಕ ಹೆಬ್ಬಾವಿನ (Killer Python) ಹೊಟ್ಟೆಯೊಳಗೆ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ (Indonesian) ನಡೆದಿದೆ. ಮಹಿಳೆಯ ಪತಿ ಸೇರಿದಂತೆ ದಕ್ಷಿಣ ಸುಲವೆಸಿ ಪ್ರಾಂತ್ಯದ ಕಲೆಂಪಂಗ್ ಗ್ರಾಮದ ನಿವಾಸಿಗಳು ಸುಮಾರು 16 ಅಡಿ ಉದ್ದದ ಹೆಬ್ಬಾವಿನೊಳಗೆ (python) ಮಹಿಳೆ ಇರುವುದನ್ನು ಪತ್ತೆ ಹಚ್ಚಿದ್ದಾರೆ.

ಮಧ್ಯ ಇಂಡೋನೇಷ್ಯಾದಲ್ಲಿ ಹೆಬ್ಬಾವು 45 ವರ್ಷದ ಫರೀದಾ ಅವರನ್ನು ಸಂಪೂರ್ಣವಾಗಿ ನುಂಗಿತ್ತು. ಅದರ ಹೊಟ್ಟೆಯಲ್ಲಿ ಫರೀದಾ ಅವರ ಶವ ಪತ್ತೆಯಾಗಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ನಾಲ್ಕು ಮಕ್ಕಳ ತಾಯಿಯಾಗಿರುವ ಫರೀದಾ ಗುರುವಾರ ರಾತ್ರಿ ನಾಪತ್ತೆಯಾಗಿದ್ದರು. ಹೀಗಾಗಿ ಅವರ ಪತಿ ಮತ್ತು ಮಕ್ಕಳು ಸಾಕಷ್ಟು ಹುಡುಕಾಡಿದ್ದಾರೆ. ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಗ್ರಾಮದ ಮುಖ್ಯಸ್ಥ ಸುರ್ದಿ ರೋಸಿ ಎಎಫ್‌ಪಿಗೆ ಮಾಹಿತಿ ನೀಡಿದ್ದಾರೆ. ಮಹಿಳೆ ನಾಪತ್ತೆಯಾದ ಸ್ಥಳದಲ್ಲಿ ಮಹಿಳೆಯ ವಸ್ತುಗಳು ಕಂಡು ಬಂದಿದೆ. ಇದರಿಂದ ಅನುಮಾನಗೊಂಡ ಆಕೆಯ ಪತಿ ಮತ್ತು ಗ್ರಾಮಸ್ಥರು ಆ ಪ್ರದೇಶವನ್ನು ಹುಡುಕಿದರು. ಆಗ ಅವರಿಗೆ ದೊಡ್ಡ ಹೊಟ್ಟೆಯ ಹೆಬ್ಬಾವೊಂದು ಕಂಡು ಬಂದಿದೆ.

ಅವರು ಹೆಬ್ಬಾವಿನ ಹೊಟ್ಟೆಯನ್ನು ಸೀಳಿದಾಗ ತಕ್ಷಣ ಫರೀದಾ ಅವರ ತಲೆ ಗೋಚರಿಸಿದೆ ಮತ್ತು ಹಾವಿನೊಳಗೆ ಫರೀದಾ ಸಂಪೂರ್ಣ ಬಟ್ಟೆ ಧರಿಸಿದ ಸ್ಥಿತಿಯಲ್ಲೇ ಇರುವುದು ಕಂಡುಬಂದಿದೆ. ಇಂತಹ ಘಟನೆಗಳನ್ನು ಅತ್ಯಂತ ಅಪರೂಪವೆಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇಂಡೋನೇಷ್ಯಾದಲ್ಲಿ ಹೆಬ್ಬಾವುಗಳು ಹಲವಾರು ಜನರನ್ನು ಸಂಪೂರ್ಣ ನುಂಗಿರುವ ಪ್ರಕರಣಗಳು ನಡೆದಿವೆ.

ಕಳೆದ ವರ್ಷ ಆಗ್ನೇಯ ಸುಲವೆಸಿಯ ಟಿನಾಂಗ್ಜಿಯಾ ಜಿಲ್ಲೆಯ ನಿವಾಸಿಗಳು ಎಂಟು ಮೀಟರ್ ಹೆಬ್ಬಾವನ್ನು ಕೊಂದಾಗ ಅದು ಹಳ್ಳಿಯೊಂದರಲ್ಲಿ ರೈತರೊಬ್ಬರನ್ನು ಕತ್ತು ಹಿಸುಕಿ ತಿಂದಿರುವುದು ಕಂಡುಬಂದಿದೆ.

ಇದನ್ನೂ ಓದಿ: Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

2018 ರಲ್ಲಿ ಆಗ್ನೇಯ ಸುಲವೆಸಿಯ ಮುನಾ ಪಟ್ಟಣದಲ್ಲಿ 54 ವರ್ಷದ ಮಹಿಳೆ ಏಳು ಮೀಟರ್ ಹೆಬ್ಬಾವಿನೊಳಗೆ ಶವವಾಗಿ ಪತ್ತೆಯಾಗಿದ್ದರು. ಅದಕ್ಕೂ ಮೊದಲು ಪಶ್ಚಿಮ ಸುಲವೆಸಿಯ ರೈತರೊಬ್ಬರು ತಾಳೆ ಎಣ್ಣೆ ತೋಟದಲ್ಲಿ ಕಾಣೆಯಾಗಿದ್ದು, ನಾಲ್ಕು ಮೀಟರ್ ಉದ್ದದ ಹೆಬ್ಬಾವು ಅವರನ್ನು ಜೀವಂತವಾಗಿ ನುಂಗಿತ್ತು.

ದೇವರ ದರ್ಶನ ಮಾಡಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ; ಒಬ್ಬನ ಸಾವು

ಕೌಟುಂಬಿಕ ಸಮಸ್ಯೆಯಿಂದಾಗಿ ಒಂದೇ ಕುಟುಂಬದ ನಾಲ್ವರು ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರು ತೀವ್ರ ಅಸ್ವಸ್ಥಗೊಂಡಿದ್ದರು. ಈ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿದೆ.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತರು. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬವರನ್ನು ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಕೂಡಲೇ ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಮೂವರು ಮಹಿಳೆಯರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Continue Reading

ಕ್ರೈಂ

Viral Video: ಹೋಟೆಲ್‌ನೊಳಗೆ ಪಿಜ್ಜಾ ತಿನ್ನುತ್ತಿರುವಾಗಲೇ ಮಹಿಳೆಯ ಸರ ಅಪಹರಣ!

ಸ್ನೇಹಿತರೊಂದಿಗೆ ಪಿಜ್ಜಾ ಸೇವಿಸುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 20 ಗ್ರಾಂ ನ ಚಿನ್ನವನ್ನು ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ಕಸಿದುಕೊಂಡು ಓಡಿ ಹೋಗಿರುವ ಸಂಪೂರ್ಣ ದೃಶ್ಯ ಪಿಜ್ಜಾ ಗ್ಯಾಲರಿಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಇದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಪಾಣಿಪತ್: ಸರಗಳ್ಳರು (Chain Snatcher ) ನಿರ್ಭೀತರಾಗಿರುವುದರಿಂದ ಅಂಗಡಿಗಳಿಗೆ ನುಗ್ಗಿ ಜನರ ಚಿನ್ನಾಭರಣ ದೋಚುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪಿಜ್ಜಾ ತಿನ್ನುತ್ತಾ ಮೂವರು ಮಹಿಳೆಯರು ಕುಳಿತು ಮಾತನಾಡುತ್ತಿರುವಾಗಲೇ ವ್ಯಕ್ತಿಯೊಬ್ಬ ಮಹಿಳೆಯ ಚಿನ್ನದ ಸರವನ್ನು ಕಸಿದುಕೊಂಡು ಓಡಿ ಹೋದ ಘಟನೆ ಹರಿಯಾಣದ (Haryana) ಪಾಣಿಪತ್ ನಲ್ಲಿ (Panipat) ನಡೆದಿದೆ. ಇದರ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

ಸಾಕಷ್ಟು ಹೊತ್ತು ತನ್ನ ಸ್ನೇಹಿತರೊಂದಿಗೆ ಪಿಜ್ಜಾ ಸೇವಿಸುತ್ತಿದ್ದ ಮಹಿಳೆಯ ಮೇಲೆ ನಿಗಾ ವಹಿಸುತ್ತಿದ್ದ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ಚೈನ್ ಕಸಿದುಕೊಂಡು ಓಡಿ ಹೋಗಿದ್ದಾನೆ. ಇದರ ಸಂಪೂರ್ಣ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. ಇದು ಈಗ ಸಾಮಾಜಿಕ ಜಾಲತಾಣದ ಎಕ್ಸ್ ನಲ್ಲಿ ವೈರಲ್ ಆಗಿದೆ.

ವರದಿಗಳ ಪ್ರಕಾರ, ವ್ಯಕ್ತಿಯೊಬ್ಬ ಆರ್ಡರ್ ಸಂಗ್ರಹಿಸುವ ನೆಪದಲ್ಲಿ ಪಾಣಿಪತ್ ನಗರದ ತಹಸೀಲ್ ಕ್ಯಾಂಪ್ ರಸ್ತೆಯಲ್ಲಿರುವ ಪಿಜ್ಜಾ ಗ್ಯಾಲರಿಗೆ ಬಂದಿದ್ದಾನೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಚೈನ್ ಸ್ನ್ಯಾಚರ್ ಬಹಳಷ್ಟು ಹೊತ್ತು ಅಲ್ಲೇ ಕುಳಿತು ಪಿಜ್ಜಾ ತಿನ್ನುತ್ತಿದ್ದ ಮಹಿಳೆಯರ ಮೇಲೆ ಗಮನವಿಟ್ಟಿದ್ದ. ಆತ ಮಹಿಳೆಯ ಸರ ​​ಕಿತ್ತುಕೊಂಡು ಪರಾರಿಯಾದಾಗ ಪಿಜ್ಜಾ ಗ್ಯಾಲರಿ ಸ್ಟಾಫ್ ಯಾರೂ ಅಲ್ಲಿ ಇರಲಿಲ್ಲ.


ಮಹಿಳೆಯ ಚಿನ್ನದ ಸರವನ್ನು ಕಿತ್ತುಕೊಂಡು ಪಿಜ್ಜಾ ಅಂಗಡಿಯಿಂದ ಹೊರಗೋಡಿದ ಆತನನ್ನು ಇನ್ನೊಬ್ಬ ಮಹಿಳೆ ಹಿಂಬಾಲಿಸಲು ಯತ್ನಿಸಿದ್ದಾನೆ. ಆದರೆ ದರೋಡೆಕೋರರು ತಪ್ಪಿಸಿಕೊಂಡ. ಪಿಜ್ಜಾ ಅಂಗಡಿಯ ಸಿಬ್ಬಂದಿಯೊಬ್ಬರು ಆತನನ್ನು ಹಿಂಬಾಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: Viral Video: ಹೋಟೆಲ್ ಕಾರಿಡಾರ್​ನಲ್ಲಿ ಗಾಲ್ಫ್ ಆಡಿದ ಪಂತ್​-ಸೂರ್ಯಕುಮಾರ್​

ಈ ಘಟನೆಯು ಜೂನ್ 8ರಂದು ಶನಿವಾರ ಮಧ್ಯಾಹ್ನ 3.40 ರ ಸುಮಾರಿಗೆ ಸಂಭವಿಸಿದೆ ಎಂದು ವೈರಲ್ ವಿಡಿಯೋದ ಸಮಯ ತೋರಿಸುತ್ತದೆ. ಮಹಿಳೆಯ ಸರ ಸುಮಾರು 20 ಗ್ರಾಂನದ್ದು ಎಂದು ಹೇಳಲಾಗಿದೆ. ಈ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರೆಸ್ಟೋರೆಂಟ್ ಮಾಲೀಕನಿಗೆ ಟಿಎಂಸಿ ಶಾಸಕನಿಂದ ಕಪಾಳಮೋಕ್ಷ

ಕೋಲ್ಕತ್ತಾದ ರೆಸ್ಟೋರೆಂಟ್ ಮಾಲೀಕರಿಗೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಶಾಸಕ ಕಪಾಳಮೋಕ್ಷ ಮಾಡುವ ಮೂಲಕ ದಾಂಧಲೆ ಎಬ್ಬಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕೋಲ್ಕತ್ತಾದಲ್ಲಿ ಈ ಘಟನೆ ನಡೆದಿದ್ದು, ನಟ, ಟಿಎಂಸಿ ಶಾಸಕ ಸೋಹಮ್‌ ಚಕ್ರವರ್ತಿ ರೆಸ್ಟೋರೆಂಟ್‌ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಕೋಲ್ಕತ್ತಾ ಡಿಲೈಟ್‌ ಎಂಬ ರೆಸ್ಟೋರೆಂಟ್‌ ಮಾಲೀಕ ಅನಿಸುರ್‌ ಆಲಂ ಮತ್ತು ಶಾಸಕ ಸೋಹಮ್‌ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಈ ವೇಳೆ ಆಲಂ ಟಿಎಂಸಿ ಪಕ್ಷ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂಬ ಕಾರಣಕ್ಕೆ ಸೋಹಮ್‌ ಆತನಿಗೆ ಕಪಾಳ ಮೋಕ್ಷ ಮಾಡಿ ಥಳಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸೋಹಮ್‌, ರೆಸ್ಟೋರೆಂಟ್‌ ಮಾಲೀಕನ ಮೇಲೆ ಹಲ್ಲೆ ನಡೆಸಿರುವುದು ನಿಜ. ಕೆಳಗೆ ಮಾರಾಮಾರಿ ಸದ್ದು ಕೇಳಿ ಧಾವಿಸಿ ಬಂದೆ. ಮಾಲೀಕರು ನನ್ನ ಸಿಬ್ಬಂದಿಯನ್ನು ನಿಂದಿಸುತ್ತಿರುವುದನ್ನು ನಾನು ನೋಡಿದೆ. ಅವರು ನನ್ನನ್ನು ಮತ್ತು ಅಭಿಷೇಕ್ ಬ್ಯಾನರ್ಜಿಯನ್ನು ನಿಂದಿಸಿದ್ದಾರೆ. ನಾನು ನನ್ನ ತಾಳ್ಮೆ ಕಳೆದುಕೊಂಡೆ ಮತ್ತು ಅವನಿಗೆ ಕಪಾಳಮೋಕ್ಷ ಮಾಡಿದ್ದೇನೆ ಎಂದು ಹೇಳಿದರು.

ಇನ್ನು ಸೋಹಮ್‌ ಒಬ್ಬ ಸೋಶಿಯಲ್‌ ಮೀಡಿಯಾ ಇನ್‌ಫ್ಲೂವೆನ್ಶಿಯಲ್‌. ಅವರು ಶೂಟಿಂಗ್‌ಗಾಗಿ ಹೊಟೇಲ್‌ಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಸೋಹಮ್ ಸೆಕ್ಯುರಿಟಿಯವರು ಕೂಡ ನಮ್ಮನ್ನು ಥಳಿಸಿದ್ದಾರೆ. ನಾವು ಇನ್ನೂ ಪೊಲೀಸರಿಗೆ ದೂರು ನೀಡಿಲ್ಲ ಎಂದು ಹೊಟೇಲ್‌ ಮ್ಯಾನೇಜರ್ ಹೇಳಿದ್ದಾರೆ.

Continue Reading
Advertisement
Narendra Modi
ದೇಶ24 mins ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi 3.0
ಪ್ರಮುಖ ಸುದ್ದಿ28 mins ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Farmer Death
ದಾವಣಗೆರೆ54 mins ago

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Modi 3.0 Cabinet BS Yediyurappa congratulates Pralhad Joshi
Lok Sabha Election 20241 hour ago

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Rishabh Pant
ಪ್ರಮುಖ ಸುದ್ದಿ1 hour ago

Rishbha Pant : ನನ್ನ ಕಾಲನ್ನು ತುಂಡರಿಬೇಕಿತ್ತು; ಅಪಘಾತದ ಭಯಾನಕ ಸಂಗತಿಗಳನ್ನು ಹೇಳಿದ ರಿಷಭ್ ಪಂತ್​

Health Tips
ಆರೋಗ್ಯ2 hours ago

Health Tips: ಆರೋಗ್ಯಕರ ಆಗಿರಬೇಕಿದ್ದರೆ ನಾವು ಪ್ರತಿದಿನ ಎಷ್ಟು ಪ್ರಮಾಣದಲ್ಲಿ ಆಹಾರ ಸೇವಿಸಬೇಕು?

Narendra Modi Live
ದೇಶ2 hours ago

Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Champions Trophy 2025
ಪ್ರಮುಖ ಸುದ್ದಿ2 hours ago

IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

Fake CBI Gang
ಕ್ರೈಂ2 hours ago

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

Kannada New Movie Chilli Chicken Official Trailer
ಸ್ಯಾಂಡಲ್ ವುಡ್3 hours ago

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌