World Cup 2023 : ವಿಶ್ವ ಕಪ್​ಗೆ ಭಾರತ ತಂಡದ ಜೆರ್ಸಿ ಅನಾವರಣ; ಏನೇನು ಬದಲಾವಣೆಗಳಿವೆ​​? - Vistara News

ಕ್ರಿಕೆಟ್

World Cup 2023 : ವಿಶ್ವ ಕಪ್​ಗೆ ಭಾರತ ತಂಡದ ಜೆರ್ಸಿ ಅನಾವರಣ; ಏನೇನು ಬದಲಾವಣೆಗಳಿವೆ​​?

ಬುಧವಾರ ಅನಾವರಣಗೊಂಡಿರುವ ವಿಶ್ವಕಪ್ 2023 ರ (World Cup 2023) ಜೆರ್ಸಿಯಲ್ಲಿ ಅಡಿಡಾಸ್ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ.

VISTARANEWS.COM


on

Team india jersey
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಟೀಮ್ ಇಂಡಿಯಾದ ಕಿಟ್ ಪ್ರಾಯೋಜಕ ಅಡಿಡಾಸ್ ಬುಧವಾರ (ಸೆಪ್ಟೆಂಬರ್ 20) ಮುಂಬರುವ ವಿಶ್ವ ಕಪ್​ಗೆ (World Cup 2023) ಭಾರತದ ಕ್ರಿಕೆಟ್ ವಿಶ್ವಕಪ್ ಜೆರ್ಸಿಯನ್ನು ಅನಾವರಣಗೊಳಿಸಿದೆ. ಪ್ರಾಯೋಜಕರು ತಮ್ಮ ಸಾಮಾಜಿಕ ಮಾಧ್ಯಮಗಳ ಹ್ಯಾಂಡಲ್​ಗಳಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದೆ. ಇದು ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಭಾರತದಲ್ಲಿ ನಡೆಯಲಿರುವ ಈವೆಂಟ್ ಅನ್ನು ಸಂಭ್ರಮಿಸಲು ಜೆರ್ಸಿಯಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಭುಜಗಳ ಮೇಲಿನ ಮೂರು ಬಿಳಿ ಪಟ್ಟೆಗಳನ್ನು ರೋಮಾಂಚಕ ತ್ರಿವರ್ಣ ಧ್ವಜದ ಬಣ್ಣಕ್ಕೆ ಬದಲಾಯಿಸಿದ್ದಾರೆ. ಎದೆಯ ಎಡಭಾಗದಲ್ಲಿರುವ ಬಿಸಿಸಿಐ ಲೋಗೋ ಈಗ ಎರಡು ನಕ್ಷತ್ರಗಳನ್ನು ಮಾತ್ರ ಹೊಂದಿದೆ. ಇದು ಭಾರತ ತಂಡದ ಏಕದಿನ ವಿಶ್ವಕಪ್ ಟ್ರೋಫಿಯಗಳನ್ನು ಸೂಚಿಸುತ್ತದೆ.

2023ರಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸುವ ಸಲುವಾಗಿ ಅಡಿಡಾಸ್ ಏಕದಿನ ಜರ್ಸಿಯನ್ನು ಪರಿಷ್ಕರಿಸಿದೆ. ಭುಜದ ಮೇಲಿನ ಮೂರು ಬಿಳಿ ಪಟ್ಟೆಗಳನ್ನು ರೋಮಾಂಚಕ ತ್ರಿವರ್ಣ ಧ್ವಜದಿಂದ ಬದಲಾಯಿಸಿ ಹೊಸ ಲುಕ್​ ನೀಡುವ ಜತೆಗೆ ಅಭಿಮಾನಿಗಳಿಗೆ ಖುಷಿ ನೀಡಲಾಗಿದೆ. 1983 ಮತ್ತು 2011 ರಲ್ಲಿ ಭಾರತದ ಐತಿಹಾಸಿಕ ಏಕದಿನ ವಿಶ್ವಕಪ್ ವಿಜಯಗಳನ್ನು ಸಂಕೇತಿಸುವ ಎರಡು ನಕ್ಷತ್ರಗಳನ್ನು ಬಿಸಿಸಿಐ ಲಾಂಛನದ ಜತೆಗೆ ಅಚ್ಚೊತ್ತಲಾಗಿದೆ.

ಅಡಿಡಾಸ್ ತನ್ನ ವಿಶ್ವಕಪ್ ಅಭಿಯಾನವನ್ನು ‘3 ಕಾ ಡ್ರೀಮ್’ ಎಂದು ಹೆಸರಿಸಿದೆ. ಅಧಿಕೃತ ಪ್ರಾಯೋಜಕರು ಈ ಅಭಿಯಾನವನ್ನು “ಟೀಮ್ ಇಂಡಿಯಾಕ್ಕೆ ದೇಶದ ಅಚಲ ಬೆಂಬಲಕ್ಕೆ ಸಾಕ್ಷಿ” ಎಂದು ಕರೆದಿದೆ. “3 ಕಾ ಡ್ರೀಮ್’ ತಮ್ಮ ತಂಡವು ಮೂರನೇ ಏಕದಿನ ವಿಶ್ವಕಪ್ ಗೆಲ್ಲುವುದರ ಸಂಕೇತವಾಗಿದೆ. ಕ್ರಿಕೆಟ್​ ವೀಕ್ಷಿಸುವ ಶತಕೋಟಿ ಭಾರತೀಯ ಅಭಿಮಾನಿಗಳ ಕನಸನ್ನು ಜೆರ್ಸಿಯಲ್ಲಿ ಪದಗಳ ಮೂಲಕ ಪೋಣಿಸಲಾಗಿದೆ ಎಂದು ಅಡಿಡಾಸ್ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಡಿಡಾಸ್ ನ ವಿಶೇಷ ವಿಶ್ವಕಪ್ ಹಾಡನ್ನು ಭಾರತೀಯ ರ್ಯಾಪರ್ ರಾಫ್ತಾರ್ ಹಾಡಿದ್ದಾರೆ. ಈ ವಿಡಿಯೊದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್ ಸೇರಿದಂತೆ ಭಾರತೀಯ ಕ್ರಿಕೆಟ್ ತಾರೆಗಳು ಕಾಣಿಸಿಕೊಳ್ಳಲಿದ್ದಾರೆ.

ಜರ್ಸಿ ಕುರಿತ ವಿವರಣೆ ಇಲ್ಲಿದೆ

ಟೀಂ ಇಂಡಿಯಾ ವಿಶ್ವಕಪ್ ಜರ್ಸಿ ಬಿಡುಗಡೆ ಯಾವಾಗ?

ಸೆಪ್ಟೆಂಬರ್ 20ರಂದು ವಿಶ್ವಕಪ್ ಜರ್ಸಿ ಬಿಡುಗಡೆ ನಡೆದಿದೆ..

ಅಡಿಡಾಸ್ ವಿಶ್ವಕಪ್ ಅಭಿಯಾನದ ಶೀರ್ಷಿಕೆ ಏನು?

ಅಡಿಡಾಸ್ ತನ್ನ ವಿಶ್ವಕಪ್ ಅಭಿಯಾನವನ್ನು ‘3 ಕಾ ಡ್ರೀಮ್’ ಎಂದು ಹೆಸರಿಸಿದೆ.

ಬಿಡುಗಡೆ ಯಾವ ಸಮಯದಲ್ಲಿ ಪ್ರಾರಂಭವಾಗುತ್ತದೆ?

ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಭಾರತೀಯ ಕ್ರಿಕೆಟ್ ವಿಶ್ವಕಪ್ ಜರ್ಸಿ ಬಿಡುಗಡೆ ಪ್ರಾರಂಭವಾಗಲಿದೆ.

ಲೈವ್ ಸ್ಟ್ರೀಮಿಂಗ್ ಎಲ್ಲಿ ನಡೆಯಲಿದೆ?

ಟೀಮ್ ಇಂಡಿಯಾದ ವಿಶ್ವಕಪ್ ಜರ್ಸಿ ಬಿಡುಗಡೆ ಕಾರ್ಯಕ್ರಮ ಅಡಿಡಾಸ್​​​ನ ಅಧಿಕೃತ ಯೂಟ್ಯೂಬ್ ಚಾನೆಲ್​​ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

2023ರ ವಿಶ್ವಕಪ್​​ಗೆ ಭಾರತ ತಂಡ ಈ ರೀತಿ ಇದೆ

ಪ್ರಮುಖ ಬ್ಯಾಟರ್​ಗಳು: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್

ವಿಕೆಟ್ ಕೀಪರ್​​ಗಳು: ಇಶಾನ್ ಕಿಶನ್, ಕೆಎಲ್ ರಾಹುಲ್

ವೇಗದ ಆಲ್​ರೌಂಡರ್​ಗಳು: ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್

ಸ್ಪಿನ್ ಆಲ್​ರೌಂಡರ್​ಗಳು: ರವೀಂದ್ರ ಜಡೇಜಾ, ಅಕ್ಷರ್ ಪಟೇಲ್

ವೇಗದ ಬೌಲರ್​​ಗಳು: ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಸ್ಪಿನ್ನರ್: ಕುಲದೀಪ್ ಯಾದವ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ರೋಹಿತ್​, ಸೂರ್ಯಕುಮಾರ್​, ದುಬೆ, ಜೈಸ್ವಾಲ್​ಗೆ ಸನ್ಮಾನ ಮಾಡಿದ ಸಿಎಂ ಏಕನಾಥ್​ ಶಿಂಧೆ

Team India: ಶುಕ್ರವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಹಾರಾಷ್ಟ ಮುಖ್ಯಮಂತ್ರಿ ಏಕನಾಥ್ ಶಿಂಧೆ(Maharashtra CM Eknath Shinde) ಅವರು ಮುಂಬೈ ಆಟಗಾರಿಗೆ ಗಣೇಶನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಿದರು.

VISTARANEWS.COM


on

Team India
Koo

ಮುಂಬಯಿ: ಟಿ20 ವಿಶ್ವಕಪ್ ತಂಡದ​ ಸದ್ಯಸರಾಗಿದ್ದ ಮುಂಬೈಯ ರೋಹಿತ್​ ಶರ್ಮ(Rohit Sharma), ಸೂರ್ಯಕುಮಾರ್​ ಯಾದವ್(Suryakumar Yadav)​, ಶಿವಂ ದುಬೆ(Shivam Dube) ಮತ್ತು ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರಿಗೆ ಶುಕ್ರವಾರ ಮಹಾರಾಷ್ಟ ಮುಖ್ಯಮಂತ್ರಿ ಏಕನಾಥ್ ಶಿಂಧೆ(Maharashtra CM Eknath Shinde) ಅವರು ತಮ್ಮ ಕಚೇರಿಯಲ್ಲಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಶುಕ್ರವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಶಿಂಧೆ ಅವರು ಮುಂಬೈ ಆಟಗಾರಿಗೆ ಗಣೇಶನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಿದರು. ಬಳಿಕ ಕೆಲ ಕಾಲ ಆಟಗಾರರೊಂದಿಗೆ ಮಾತು ಕತೆ ನಡೆಸಿ ಟಿ20 ವಿಶ್ವಕಪ್​ನ ಅನುಭವಗಳನ್ನು ಆಲಿಸಿದರು.

ಗುರುವಾರ ಟೀಮ್​ ಇಂಡಿಯಾ(Team India) ನವದೆಹಲಿಗೆ ಬಂದಿಳಿಯುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದ್ದರು. ಈ ವೇಳೆ ನೆರದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರ, ಡೊಳ್ಳು, ತಮಟೆ ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿತ್ತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿ ಮಧ್ಯಾಹ್ನ 3.42ಕ್ಕೆ ತಂಡ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ಮುಂಬೈ ತಲುಪಿದ ತಂಡಕ್ಕೆ ಭರ್ಜರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಆಟಗಾರರು ತೆರೆದ ಬಸ್​ನಲ್ಲಿ ವಿಶ್ವಕಪ್​ ಟ್ರೋಫಿಯೊಂದಿಗೆ ರೋಡ್ ಶೋ ನಡೆಸಿದ್ದರು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ರೋಹಿತ್​ ಅವರು ತಮ್ಮ ಬಾಲ್ಯದ ಗೆಳೆಯರನ್ನು ಭೇಟಿ ಮಾಡಿದರು. ಈ ವೇಳೆ ಗೆಳೆಯರು ಸೆಲ್ಯೂಟ್​ ಹೊಡೆದು, ರೋಹಿತ್​ ಅವರನ್ನು ಭುಜದ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಈ ವೇಳೆ​ ಟೀಮ್​ ಇಂಡಿಯಾ ಆಟಗಾರ, ರೋಹಿತ್​ ಅವರ ಆಪ್ತರಾಗಿರುವ ತಿಲಕ್​ ವರ್ಮಾ ಕೂಡ ಜತೆಗಿದ್ದರು. ಇವರು ಕೂಡ ಸೆಲ್ಯೂಟ್​ ಹೊಡೆದು ರೋಹಿತ್​ಗೆ ಗೌರವಿಸಿದ್ದಾರೆ.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ‘ಆ ವಿಷಯಗಳನ್ನು ನನ್ನಿಂದ ವಿವರಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ, ಯಾವುದನ್ನೂ ನಾನು ಸ್ಕ್ರಿಪ್ಟ್ ಮಾಡಿಲ್ಲ. ನಾನು ಮೈದಾನಕ್ಕೆ ಇಳಿದಾಗ ಆ ಕ್ಷಣವನ್ನು ಅನುಭವಿಸುತ್ತಿದ್ದೆ. ಗೆಲುವು ತಂದು ಕೊಟ್ಟ ಈ ಪಿಚ್​ನ ಋಣವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಜೀವನದುದ್ದಕ್ಕೂ ಈ ಪಿಚ್​ನ ಮಣ್ಣಿನ ನೆನಪನ್ನು ಇಟ್ಟು ಕೊಳ್ಳುವ ಸಲುವಾಗಿ ನಾನು ಪಿಚ್​ನ ಮಣ್ಣು ತಿಂದೆ” ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

T20 World Cup : ಟಿ20 ವಿಶ್ವ ಕಪ್​ ಗೆದ್ದುಕೊಂಡು ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

VISTARANEWS.COM


on

T20 World Cup
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಮುಂಬೈನಲ್ಲಿ ಆಯೋಜಿಸದೆ ಗುಜರಾತ್​​ನ ಅಹಮದಾಬಾದ್​ನಲ್ಲಿರುವ ವಿಶ್ವ ವಿಖ್ಯಾತ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಿಸಿರುವ ಬಗ್ಗೆ ಕ್ರಿಕೆಟ್ ಮುಂಬೈ ಅಭಿಮಾನಿಗಳಿಗೆ ಬೇಸರವಿತ್ತು. ಕ್ರಿಕೆಟ್​​ ಕಾಶಿಯಾಗಿರುವ ವಾಂಖೆಡೆ ಸ್ಟೇಡಿಯಮ್​ನಲ್ಲೇ ಪಂದ್ಯ ನಡೆಸಬೇಕು ಎಂಬುದು ಬಹುತೇಕ ಭಾರತೀಯರ ಒತ್ತಾಸೆಯಾಗಿತ್ತು. ಆದರೆ, ದೊಡ್ಡ ಸ್ಟೇಡಿಯಮ್​ (1.30 ಲಕ್ಷ ಮಂದಿ ಪ್ರೇಕ್ಷಕರನ್ನು ತುಂಬಿಕೊಳ್ಳುವ ಸಾಮರ್ಥ್ಯ) ಎಂಬ ಕಾರಣಕ್ಕೆ ನರೇಂದ್ರ ಮೋದಿ ಸ್ಟೇಡಿಯಮ್​ಗೆ ಫೈನಲ್ ಪಂದ್ಯವನ್ನು ವರ್ಗಾಯಿಸಲಾಯಿತ್ತು. ಫೈನಲ್​ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತಿತ್ತು. ಇದೀಗ ಆ ನೋವನ್ನು ಶಿವಸೇನೆ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಹೊರ ಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆ. ಟಿ20 ವಿಶ್ವ ಕಪ್​ ಗೆದ್ದುಕೊಂಡು (T20 World Cup ) ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

ಮುಂಬೈನಲ್ಲಿ ನಿನ್ನೆ ನಡೆದ ವಿಶ್ವ ಕಪ್​ ಟ್ರೋಫಿಯ ಸಂಭ್ರಮಾಚರಣೆ ಬಿಸಿಸಿಐಗೆ ನೇರ ಸಂದೇಶವಾಗಿದೆ. ವಿಶ್ವಕಪ್ ಫೈನಲ್ ಪಂದ್ಯವನ್ನು ಮುಂಬೈನಿಂದ ಎಂದಿಗೂ ಕಸಿದುಕೊಳ್ಳಬೇಡಿ” ಎಂದು ಆದಿತ್ಯ ಠಾಕ್ರೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2024 ರ ಚಾಂಪಿಯನ್ ಆಗಿರುವ ಭಾರತೀಯ ಕ್ರಿಕೆಟ್ ತಂಡವನ್ನು ಮುಂಬೈನಲ್ಲಿ ಗುರುವಾರ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾರಿ ಜನಸಮೂಹ ಸ್ವಾಗತಿಸಿದ್ದರು. ಅದಾದ ಒಂದು ದಿನದ ನಂತರ ಆದಿತ್ಯ ಬಿಸಿಸಿಐ ವಿರುದ್ಧ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

ಟಿ 20 ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಗಂಟೆಗಳ ಕಾಲ ಕಾದಿದ್ದರು. ಎಂಎಸ್ ಧೋನಿ ನಾಯಕತ್ವದಲ್ಲಿ 2007 ರಲ್ಲಿ ಭಾರತದ ಮೊದಲ ಟಿ 20 ವಿಶ್ವಕಪ್ ಗೆಲುವು, 2011 ರ ಕ್ರಿಕೆಟ್ ವಿಶ್ವಕಪ್ ಗೆಲುವು ಮತ್ತು 2013 ರಲ್ಲಿ ಸಚಿನ್ ತೆಂಡೂಲ್ಕರ್ ಅವರ ಭಾವನಾತ್ಮಕ ವಿದಾಯ ಸೇರಿದಂತೆ ಅನೇಕ ಐತಿಹಾಸಿಕ ಕ್ರಿಕೆಟ್ ಘಟನೆಗಳಿಗೆ ವಾಂಖೆಡೆ ಆತಿಥ್ಯ ವಹಿಸಿದೆ.

ಅವಕಾಶಗಳು ಮತ್ತು ಕಾರ್ಯಕ್ರಮಗಳನ್ನು ಮುಂಬೈನಿಂದ ಅಹಮದಾಬಾದ್​​ಗೆ ಸ್ಥಳಾಂತರಿಸಿದ್ದಕ್ಕಾಗಿ ಠಾಕ್ರೆ ಈ ಹಿಂದೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೇ ತಿಂಗಳ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ, ಕೈಗಾರಿಕೆಗಳು ಮತ್ತು ಯೋಜನೆಗಳನ್ನು ಗುಜರಾತ್​ಗೆ ಸ್ಥಳಾಂತರಿಸಿದ್ದರಿಂದ ಮಹಾರಾಷ್ಟ್ರವು ಗಮನಾರ್ಹ ನಷ್ಟ ಎದುರಿಸಿದೆ ಎಂದು ಆದಿತ್ಯ ಉಲ್ಲೇಖಿಸಿದ್ದರು.

ಇಂಟರ್​​ನ್ಯಾಷನಲ್​ ಫೈನಾನ್ಸ್ ಸೆಂಟರ್, ವೇದಾಂತ ಫಾಕ್ಸ್​ಕಾನ್​, ಬೃಹತ್ ಡ್ರಗ್​ (ಔಷಧ) ಪಾರ್ಕ್ ಮತ್ತು ವೈದ್ಯಕೀಯ ಸಾಧನಗಳ ಪಾರ್ಕ್ ಸೇರಿಕೊಂಡಿವೆ. ಮುಂಬೈನಲ್ಲಿ ನಡೆಯಬೇಕಿದ್ದ ವಿಶ್ವಕಪ್ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರಿಸಲಾಗಿದೆ ಎಂಬುದಾಗಿಯೂ ಅವರು ಗಮನ ಸೆಳೆದಿದ್ದರು.

Continue Reading

ಕ್ರೀಡೆ

Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

Virat Kohli’s Phone Wallpaper: ಕೊಹ್ಲಿ ಮಾತ್ರವದಲ್ಲದೆ, ಆ್ಯಪಲ್‌ ಸಿಇಒ ಸ್ಟೀವ್ ಜಾಬ್ಸ್, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಸೇರಿ ಜಗತ್ತಿನಾದ್ಯಂತ ಹಲವು ಪ್ರಸಿದ್ಧ ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳೆಲ್ಲ ಬಾಬಾ ಭಕ್ತರಾಗಿದ್ದಾರೆ

VISTARANEWS.COM


on

Virat Kohli's Phone Wallpaper
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(Virat Kohli) ಅವರು ಮೊಬೈಲ್​ನ ಹೋಮ್​ ಸ್ಕ್ರೀನ್​ನಲ್ಲಿರುವ(Virat Kohli’s phone wallpaper) ಫೋಟೊ ಒಂದು ವೈರಲ್​ ಆಗಿದ್ದು, ಈ ಫೋಟೊದಲ್ಲಿರುವ ವ್ಯಕ್ತಿ ಯಾರೆಂದು ತಿಳಿದುಕೊಳ್ಳುವ ಆಸಕ್ತಿ ಮತ್ತು ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.​

ಹೌದು ವಿರಾಟ್​ ಮೊಬೈಲ್​ ವಾಲ್​ ಪೇಪರ್​ನಲ್ಲಿರುವ ಫೋಟೊ ನೀಮ್ ಕರೋಲಿ ಬಾಬಾ ಅವರದ್ದಾಗಿದೆ. ವಿರಾಟ್​ ಕೊಹ್ಲಿ ಅವರು 2 ವರ್ಷಗಳ ಕಾಲ ತಮ್ಮ ಬ್ಯಾಟಿಂಗ್​ ಫಾರ್ಮ್​ ಕಳೆದುಕೊಂಡು ಇನ್ನೇನು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಕೊನೆಗೊಳ್ಳುತ್ತದೆ ಎನ್ನುವಷ್ಟರಲ್ಲಿ ಕೊಹ್ಲಿ ಅವರನ್ನು ಪತ್ನಿ ಅನುಷ್ಕಾ ಶರ್ಮ ಕರೋಲಿ ಬಾಬಾ ಆಶ್ರಮಕ್ಕೆ ಕರೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದಾಗಿ ಕೊಹ್ಲಿ ಆಡಿದ ಮರು ಪಂದ್ಯದಲ್ಲೇ ಶತಕ ಬಾರಿಸಿ ಸಂಭ್ರಮಿಸಿದ್ದರು. ಈ ಪವಾಡ ನಡೆದಾಗಿನಿಂದಲೂ ಕೊಹ್ಲಿ ಅವರು ಕರೋಲಿ ಬಾಬಾ ಅವರ ಭಕ್ತರಾಗಿದ್ದಾರೆ.

ಕೊಹ್ಲಿ ಮಾತ್ರವದಲ್ಲದೆ, ಆ್ಯಪಲ್‌ ಸಿಇಒ ಸ್ಟೀವ್ ಜಾಬ್ಸ್, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಸೇರಿ ಜಗತ್ತಿನಾದ್ಯಂತ ಹಲವು ಪ್ರಸಿದ್ಧ ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳೆಲ್ಲ ಬಾಬಾ ಭಕ್ತರಾಗಿದ್ದಾರೆ. ಕೊಹ್ಲಿ ಬಿಡುವು ಸಿಕ್ಕ ವೇಳೆ ಕುಟುಂಬ ಸಮೇತರಾಗಿ ಕರೋಲಿ ಬಾಬಾ ಆಶ್ರಮಕ್ಕೆ ಭೇಟಿ ನೀಡುತ್ತಿರುತ್ತಾರೆ.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಯಾರು ಈ ಕರೋಲಿ ಬಾಬಾ?


ಕರೋಲಿ ಬಾಬಾರನ್ನು ಅವರ ಭಕ್ತರು ಭಗವಾನ್ ಹನುಮಂತನ ಅವತಾರವೆಂದೇ ನಂಬುತ್ತಾರೆ. ತಾನೊಬ್ಬ ಸಾಮಾನ್ಯ ವ್ಯಕ್ತಿ ಎಂದು ಸ್ವತಃ ಬಾಬಾ ಹೇಳಿದ್ದರೂ ಕೂಡ ಭಕ್ತರು ಮಾತ್ರ ಅವರನ್ನು ಪೂಜಿಸುವುದು ನಿಲ್ಲಿಸಿಲ್ಲ. ನೀಮ್ ಕರೋಲಿ ಬಾಬಾ ಅವರ ಮೂಲ ಹೆಸರು ಲಕ್ಷ್ಮೀನಾರಾಯಣ ಶರ್ಮಾ. ಬಾಬಾರ ಜೀವನದಲ್ಲಿ ನಡೆದ ಅನೇಕ ಘಟನೆಗಳು ಅವರ ಸಾಮರ್ಥ್ಯ, ಶಕ್ತಿ ಮತ್ತು ದಯೆಯಿಂದ ಅವರನ್ನು ಆಂಜನೇಯನ ಅವತಾರವೆಂದು ಪರಿಗಣಿಸಲಾಗಿದೆ.

ಲಂಡನ್​ಗೆ ತೆರಳಿದ ಕೊಹ್ಲಿ


ಟೀಮ್​ ಇಂಡಿಯಾ ವಿಜಯೋತ್ಸವ ಆಚರಣೆ ಮುಗಿದ ತಕ್ಷಣ ವಿರಾಟ್​ ಕೊಹ್ಲಿ ಅವರು ಲಂಡನ್​ಗೆ ಪ್ರಯಾಣಿಸಿದ್ದಾರೆ. ಪತ್ನಿ ಅನುಷ್ಕಾ ಮತ್ತು ಇಬ್ಬರು ಮಕ್ಕಳು ಲಂಡನ್​ನಲ್ಲಿರುವ ಕಾರಣ ಕುಟುಂಬದ ಜತೆ ಕಾಲ ಕಳೆಯಲು ಕೊಹ್ಲಿ ನೇರವಾಗಿ ಮುಂಬೈನಿಂದ ಲಂಡನ್​ ವಿಮಾನ ಏರಿದ್ದಾರೆ.

ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು.

Continue Reading

ಕ್ರೀಡೆ

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Rohit Sharma: ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್(T20 World Cup 2024)​ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮಗೆ(Rohit Sharma) ತಮ್ಮ ಬಾಲ್ಯದ ಗೆಳೆಯರು(Rohit Sharma’s childhood friends) ವಿಶೇಷವಾಗಿ ವೆಲ್​ಕಮ್​ ಮಾಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಗುರುವಾರ  ಮುಂಬೈಯಲ್ಲಿ ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ತಂಡದ ಆಟಗಾರರಿಗೆ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ರೋಹಿತ್​ ಅವರು ಬಾಲ್ಯದ ಗೆಳೆಯರನ್ನು ಭೇಟಿ ಮಾಡಿದರು. ಈ ವೇಳೆ ಗೆಳೆಯರು ಸೆಲ್ಯೂಟ್​ ಹೊಡೆದು, ರೋಹಿತ್​ ಅವರನ್ನು ಭುಜದ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಈ ವೇಳೆ​ ಟೀಮ್​ ಇಂಡಿಯಾ ಆಟಗಾರ, ರೋಹಿತ್​ ಅವರ ಆಪ್ತರಾಗಿರುವ ತಿಲಕ್​ ವರ್ಮಾ ಕೂಡ ಜತೆಗಿದ್ದರು. ಇವರು ಕೂಡ ಸೆಲ್ಯೂಟ್​ ಹೊಡೆದು ರೋಹಿತ್​ಗೆ ಗೌರವಿಸಿದ್ದಾರೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಆಟಗಾರರು ತೆರೆದ ಬಸ್​ನಲ್ಲಿ ವಿಶ್ವಕಪ್​ ಟ್ರೋಫಿಯೊಂದಿಗೆ ರೋಡ್ ಶೋ ನಡೆಸಿದ್ದರು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ‘ಆ ವಿಷಯಗಳನ್ನು ನನ್ನಿಂದ ವಿವರಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ, ಯಾವುದನ್ನೂ ನಾನು ಸ್ಕ್ರಿಪ್ಟ್ ಮಾಡಿಲ್ಲ. ನಾನು ಮೈದಾನಕ್ಕೆ ಇಳಿದಾಗ ಆ ಕ್ಷಣವನ್ನು ಅನುಭವಿಸುತ್ತಿದ್ದೆ. ಗೆಲುವು ತಂದು ಕೊಟ್ಟ ಈ ಪಿಚ್​ನ ಋಣವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಜೀವನದುದ್ದಕ್ಕೂ ಈ ಪಿಚ್​ನ ಮಣ್ಣಿನ ನೆನಪನ್ನು ಇಟ್ಟು ಕೊಳ್ಳುವ ಸಲುವಾಗಿ ನಾನು ಪಿಚ್​ನ ಮಣ್ಣು ತಿಂದೆ” ಎಂದು ಹೇಳಿದ್ದರು.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading
Advertisement
Team India
ಕ್ರೀಡೆ7 mins ago

Team India: ರೋಹಿತ್​, ಸೂರ್ಯಕುಮಾರ್​, ದುಬೆ, ಜೈಸ್ವಾಲ್​ಗೆ ಸನ್ಮಾನ ಮಾಡಿದ ಸಿಎಂ ಏಕನಾಥ್​ ಶಿಂಧೆ

Guarantee Schemes
ಕರ್ನಾಟಕ8 mins ago

Guarantee Schemes: ಗ್ಯಾರಂಟಿ ಯೋಜನೆಗಳಿಗೆ ದಲಿತರ 14 ಸಾವಿರ ಕೋಟಿ ರೂ. ಕಸಿದು ಕೊಟ್ಟ ಸಿದ್ದರಾಮಯ್ಯ!

T20 World Cup
ಪ್ರಮುಖ ಸುದ್ದಿ8 mins ago

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

Sexual Harassment
Latest19 mins ago

Sexual Harassment: 80 ವರ್ಷದ ಅಜ್ಜಿಯ ಮೇಲೆ ನಿರಂತರ ಅತ್ಯಾಚಾರ; ಮೊಮ್ಮಗನಿಗೆ ಜೀವಾವಧಿ ಶಿಕ್ಷೆ

ಕರ್ನಾಟಕ26 mins ago

Satish Jarkiholi: ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗುವುದು ತಪ್ಪು; ಎಚ್‌ಡಿಕೆ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್!

Kangana Ranaut Madhavan's Hilarious Reaction To Double-Meaning
ಬಾಲಿವುಡ್27 mins ago

Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್!

Lovers Fighting
ಚಿಕ್ಕಬಳ್ಳಾಪುರ28 mins ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Defence Production
ದೇಶ33 mins ago

Defence Production: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರ; ರಕ್ಷಣಾ ಉತ್ಪಾದನೆ ದಾಖಲೆಯ ಶೇ.16ರಷ್ಟು ಏರಿಕೆ

Georgina Rodriguez
ಕ್ರೀಡೆ53 mins ago

Georgina Rodriguez : ಬಿಕಿನಿ ದಿನದಂದು ಬಗೆಬಗೆಯ ಬಿಕಿನಿಗಳಲ್ಲಿ ಮೈಮಾಟ ತೋರಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಪ್ರೇಯಸಿ ಜಾರ್ಜಿಯಾ ರೋಡ್ರಿಗಸ್​

Stock Market
ವಾಣಿಜ್ಯ58 mins ago

Stock Market: 1 ಲಕ್ಷ ಪಾಯಿಂಟ್‌ ಮೈಲಿಗಲ್ಲಿನತ್ತ ಸೆನ್ಸೆಕ್ಸ್‌; ಅಂಕಿ-ಅಂಶ ಹೇಳೋದೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lovers Fighting
ಚಿಕ್ಕಬಳ್ಳಾಪುರ28 mins ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

karnataka rain
ಮಳೆ3 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ4 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು6 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು6 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ10 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

ಟ್ರೆಂಡಿಂಗ್‌