Cauvery Dispute : ಹೆಜ್ಜೆ ಹೆಜ್ಜೆಗೂ ತಪ್ಪು, ನಿರ್ಲಕ್ಷ್ಯ, ಸ್ವಾರ್ಥ ರಾಜಕಾರಣ; ಕಾವೇರಿ ಹಿನ್ನಡೆಗೆ ಕಾರಣ ಪಟ್ಟಿ ಮಾಡಿದ HDK - Vistara News

ಕರ್ನಾಟಕ

Cauvery Dispute : ಹೆಜ್ಜೆ ಹೆಜ್ಜೆಗೂ ತಪ್ಪು, ನಿರ್ಲಕ್ಷ್ಯ, ಸ್ವಾರ್ಥ ರಾಜಕಾರಣ; ಕಾವೇರಿ ಹಿನ್ನಡೆಗೆ ಕಾರಣ ಪಟ್ಟಿ ಮಾಡಿದ HDK

Cauvery Dispute : ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಆಗಿರುವ ಹಿನ್ನಡೆಗೆ ರಾಜ್ಯ ಸರ್ಕಾರದ ತಪ್ಪು ಹೆಜ್ಜೆ, ಸ್ವಾರ್ಥ ರಾಜಕಾರಣವೇ ಕಾರಣ ಎಂದು ಹೇಳಿದ್ದಾರೆ ಎಚ್‌.ಡಿ ಕುಮಾರಸ್ವಾಮಿ. ಅವರ ವಾಗ್ದಾಳಿ ವಿವರ ಇಲ್ಲಿದೆ.

VISTARANEWS.COM


on

HDKumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻʻನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು (Cauvery dispute) ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ (Supreme Court order) ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲʼʼ – ಇದು ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿಷಯದಲ್ಲಿ ಆದ ಹಿನ್ನಡೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರ ಮೊದಲ ರಿಯಾಕ್ಷನ್‌.

ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರ ಚರ್ಚೆಗಾಗಿ ದೆಹಲಿಗೆ ತೆರಳಿರುವ ಎಚ್.ಡಿ ಕುಮಾರಸ್ವಾಮಿ ಅವರು ಅದರ ಬ್ಯುಸಿಯ ನಡುವೆಯೂ ಕಾವೇರಿ ವ ಹಿನ್ನಡೆ ವಿಚಾರದಲ್ಲಿ ಸುದೀರ್ಘ ಟ್ವೀಟ್‌ ಮಾಡಿದ್ದಾರೆ. ಅವರ ಪ್ರಕಾರ, ಸರ್ಕಾರ ಪ್ರತಿಯೊಂದು ಹೆಜ್ಜೆಯಲ್ಲೂ ಎಡವಿತು, ವಕೀಲರ ಮಾತು ಕೇಳಿ ನೀರುಬಿಟ್ಟಿತು, ಸ್ವಾರ್ಥ ರಾಜಕಾರಣ ಮಾಡಿತು, ಜನ ಹಿತವನ್ನು ಬಲಿಕೊಟ್ಟಿತು. ಈಗ ಅಸಹಾಯಕವಾಗಿ ನಿಲ್ಲುವ ಪರಿಸ್ಥಿತಿಗೆ ಬಂದು ತಲುಪಿದೆ. ಕಾವೇರಿ ಕನ್ನಡಿಗರ ಹಕ್ಕು ಎಂಬ ಹ್ಯಾಷ್‌ ಟ್ಯಾಗ್‌ನಡಿ ಅವರು ಟ್ವೀಟ್‌ ಮಾಡಿದ್ದಾರೆ.

ಹಾಗಿದ್ದರೆ ಎಚ್.ಡಿ ಕುಮಾರಸ್ವಾಮಿ ಪಟ್ಟಿ ಮಾಡಿದ ಆ ಕಾರಣಗಳು ಯಾವುವು?

ಸ್ವಾರ್ಥ ಹಿತಾಸಕ್ತಿಯ ರಾಜಕಾರಣದ ಮುಂದೆ ಯಾರೂ ಮಾತೂ ಕೇಳಿಸಲಿಲ್ಲ

ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದು ಕಾಂಗ್ರೆಸ್‌ ಸರಕಾರ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಕಾವೇರಿ ಜಲ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ. ರಾಜ್ಯ ಸರಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ತಮಿಳುನಾಡಿನ ಜತೆ ಆ ಪಕ್ಷದ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡ ಕಾರಣಕ್ಕೆ ಕಾವೇರಿ ಹಿತವನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗಿದೆ.

ನೀರು ಬಿಡಿ ಎಂಬ ಮೊದಲ ಆದೇಶ ಬಂದಾಗಲೇ ಕೋರ್ಟ್‌ಗೆ ಹೋಗಬೇಕಿತ್ತು

ಆ.10ರಂದು ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆ ನಡೆಯಿತು. ಮರುದಿನ ಕಾವೇರಿ ಜಲನಿರ್ವಹಣಾ ಪ್ರಾಧಿಕಾರ ಸಭೆ ಆಯಿತು. ಮುಂದಿನ 15 ದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಿ ಎಂದು ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿತು. ತಕ್ಷಣವೇ ಸುಪ್ರೀಂಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು.

ಸರಕಾರ ಹಾಗೆ ಮಾಡಲೇ ಇಲ್ಲ. ಸುಪ್ರೀಂಕೋರ್ಟ್ ಕಡೆ ಮುಖ ಮಾಡದೆ I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬಲು ಪ್ರಾಧಿಕಾರದ ಆದೇಶವನ್ನೇ ನೆಪ ಮಾಡಿಕೊಂಡು ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿತು. ತನ್ನ ತಲೆ ಮೇಲೆ ತಾನೇ ಚಪ್ಪಡಿ ಎಳೆದುಕೊಂಡು, ಅದೇ ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟಿತು.

Cauvery siddaramaiah HD Kumaraswamy

ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರದ ಸಭೆಗಳ ಕಡೆಗಣನೆ ಮಾಡಿದ ಸರ್ಕಾರ

ಸರಕಾರ ಎಸಗಿದ ತಪ್ಪು ಇಷ್ಟೇ ಅಲ್ಲ, ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದ ಸಭೆಗಳನ್ನು ಬಹಳ ಲಘುವಾಗಿ ಪರಿಗಣಿಸಿತು. ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಕೊಟ್ಟ ಸಲಹೆಗಳನ್ನೂ ಗಾಳಿಗೆ ತೂರಿತು. ನಮ್ಮ ಸಲಹೆಗೆ ಕವಡೆಕಾಸಿನ ಕಿಮ್ಮತ್ತೂ ಕೊಡದೆ ಕನ್ನಡಿಗರ ಹಿತವನ್ನು ತನ್ನ ರಾಜಕೀಯ ಸ್ವಾರ್ಥಕ್ಕೆ ಬಲಿ ಮಾಡಿತು.

ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯುವುದಿಲ್ಲ ಎಂದು ನಾನು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದೆ. ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ. ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ.

ರಾಜ್ಯಸಭೆಯಲ್ಲಿ ದೇವೇಗೌಡರೇ ಮಾತನಾಡಿದರು, ಖರ್ಗೆ ಮಾತ್ರ ಮೌನ ಯಾಕೆ?

ರಾಜ್ಯಸಭೆಯಲ್ಲಿ ಎಚ್‌.ಡಿ ದೇವೇಗೌಡರು ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ಕಾವೇರಿ ಬಗ್ಗೆ ದನಿ ಎತ್ತಿದರು. ಮಾನ್ಯ ಸಭಾಪತಿಗಳು ಕುಳಿತೇ ಮಾತನಾಡಿ ಎಂದರೂ ಅವರು ಎದ್ದುನಿಂತು ರಾಜ್ಯದ ಪರ ಹಕ್ಕು ಮಂಡಿಸಿದರು. ಆದರೆ, ರಾಜ್ಯದ ಇತರೆ ಸದಸ್ಯರು, ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆ ಅವರು ಮೌನವಾಗಿದ್ದರು! ಈ ಮೌನ ನನಗೆ ಅಚ್ಚರಿ ಉಂಟು ಮಾಡಿದೆ. ಅವರು ಎಐಸಿಸಿ ಅಧ್ಯಕ್ಷರೂ ಹೌದು. ಆದರೆ, ಕರ್ನಾಟಕದ ಹಿತದ ಬಗ್ಗೆ ಅವರ ನಿಲುವೇನು?

HD Devegowda in New Delhi

ತುರ್ತಾಗಿ ಮರುಪರಿಶೀಲನಾ ಅರ್ಜಿ ಸಲ್ಲಿಸಿ ತಡ ಮಾಡಬೇಡಿ

ಸೆ. 13ರಿಂದ ನಿತ್ಯವೂ 5,000 ಕ್ಯೂಸೆಕ್ ನೀರು ಬಿಡಬೇಕು ಎಂದು ಪ್ರಾಧಿಕಾರ ಆದೇಶ ನೀಡಿದೆ. ಅದನ್ನೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಕೋರ್ಟ್ ಆದೇಶಕ್ಕೂ ಮೊದಲು ಪ್ರಾಧಿಕಾರ ಹೇಳಿತು ಎಂದು ವಿದ್ಯುತ್ ವೇಗದಲ್ಲಿ ನೀರು ಬಿಟ್ಟ ಸರಕಾರವು; ಈಗ ಸುಪ್ರೀಂಕೋರ್ಟ್ ಹೇಳಿದೆ, ಇನ್ನೇನು ಮಾಡುವುದು ಎಂದು ಕೈ ಚೆಲ್ಲಿದೆ. ಮರು ಪರಿಶೀಲನಾ ಅರ್ಜಿಯನ್ನು ಕೋರ್ಟಿಗೆ ತುರ್ತಾಗಿ ಸಲ್ಲಿಸಬೇಕು.

ಪ್ರಾಧಿಕಾರ ಆದೇಶ ಕೊಟ್ಟಷ್ಟು ನೀರನ್ನು ಬಿಡುವಂತೆ ಕಾನೂನು ತಜ್ಞರು ಸಲಹೆ ಮಾಡಿದ್ದರು. ಅಲ್ಲಿಗೆ ಸುಪ್ರೀಂನಲ್ಲಿ ನ್ಯಾಯ ಸಿಗಲಾರದು ಎಂದು ಅವರು ಮೊದಲೇ ಕೈ ಚಲ್ಲಿದಂತೆ ಕಾಣುತ್ತದೆ. ಕೋರ್ಟ್ ಆದೇಶ ಬರುವ ತನಕ ನೀರು ಬಿಡಲು ಸಾಧ್ಯ ಇಲ್ಲ ಎಂದು ಸರಕಾರವು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರಕ್ಕೆ ನೇರವಾಗಿ ಹೇಳಬೇಕಿತ್ತು. ಹಾಗೆ ಹೇಳಲಿಲ್ಲ. ಪರಿಣಾಮ; ಈವರೆಗೆ ನಾವು ಸಾಕಷ್ಟು ನೀರು ಹರಿಸಬೇಕಾಯಿತು. ಮುಂದೆಯೂ ಹರಿಸಬೇಕಾದ ಅನಿವಾರ್ಯತೆ ಸೃಷ್ಟಿ ಆಗಿದೆ.

ಸರಕಾರ ಕೇವಲ ವಕೀಲರ ಮಾತು ಕೇಳಿ ಮೋಸ ಹೋಗಿದೆ

ಸರಕಾರ ವಕೀಲರು ಹೇಳಿದರಂತೆ ಕೇಳಿ ಜನರ ಹಿತ ಕಡೆಗಣಿಸಿದೆ. ಯಾವ ಕಾರಣಕ್ಕೂ ನೀರು ಬಿಡಬಾರದಿತ್ತು. ಕೋರ್ಟ್ ಆದೇಶಕ್ಕೆ ಕಾದು ಕ್ರಮ ಜರುಗಿಸಬೇಕಿತ್ತು. ಊರು ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ವರ್ತಿಸಿದೆ ಸರಕಾರ. ವಕೀಲರ ಮಾತುಗಳನ್ನು ಕೇಳಿಕೊಂಡು ನೀರು ಬಿಡುತ್ತಾ ಹೋದರೆ ಅದಕ್ಕೆ ಕೊನೆ ಮೊದಲು ಇರುವುದಿಲ್ಲ. ಹಾಗಾದರೆ ಸರಕಾರ ಅನ್ನೊದು ಯಾಕೆ? ವಿಷಯ ಎಲ್ಲಿ ಶುರುವಾಯಿತೋ ಮತ್ತೆ ಅಲ್ಲಿಗೆ ಬಂದು ನಿಂತಿರುವುದಕ್ಕೆ ಯಾರು ಹೊಣೆ?

ಸರಕಾರ ಅನುಸರಿಸಿದ ವಿಳಂಬ ರಾಜಕಾರಣ ರಾಜ್ಯದ ಹಿತಕ್ಕೆ ಪೆಟ್ಟು ನೀಡಿದೆ. ತಮಿಳುನಾಡು ಸುಪ್ರೀಂ ಕೋರ್ಟ್ ಗೆ ಹೋದ ಕೂಡಲೇ ರಾಜ್ಯವೂ ಮೊರೆ ಹೋಗಬೇಕಿತ್ತು. ಮೀನಾಮೇಷ ಎಣಿಸುತ್ತಾ ತಡ ಮಾಡಿತು. ತಡ ಮಾಡಿದ್ದಕ್ಕೆ ತಕ್ಕ ಶಾಸ್ತಿ ಆಗಿದೆ. ವಿನಾಕಾರಣ ಕನ್ನಡಿಗರಿಗೆ ಶಿಕ್ಷೆ ಆಗಿದೆ.

Cauvery Dispute

ಸರ್ಕಾರಕ್ಕೆ ಕಾನೂನಿನ ಸಾಮಾನ್ಯ ಜ್ಞಾನವೂ ಇಲ್ಲದೇ ಹೋಯಿತು

ಪ್ರಾಧಿಕಾರದ ಆದೇಶ ಬಂದೊಡನೆ ಮಧ್ಯರಾತ್ರಿಯೇ ಸುಪ್ರೀಂ ಕೋರ್ಟ್ ಗೆ ಹೋಗಿ, ನಮ್ಮ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ರಾತ್ರೋರಾತ್ರಿ ಪಿಟಿಷನ್ ಹಾಕಬೇಕಿತ್ತು. ಅದನ್ನು ಮಾಡದೇ ನೀರು ಬಿಡುತ್ತಾ ಕೂತಿತು ಸರಕಾರ. ನೀರು ಇಲ್ಲ ಎನ್ನುತ್ತಿದ್ದವರೂ ಈವರೆಗೆ ಹೇಗೆ ಬಿಟ್ಟಿರಿ ಎಂದು ಕೋರ್ಟ್ ಪ್ರಶ್ನೆ ಮಾಡುತ್ತದೆ ಎನ್ನುವ ಸಾಮಾನ್ಯ ಜ್ಞಾನವೂ ಸರಕಾರಕ್ಕೆ ಇರಲಿಲ್ಲ.

ಕೆಆರ್ ಎಸ್ ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು. 3 ದಿನಕ್ಕೆ ಒಂದು ಟಿಎಂಸಿ ಹರಿದು ಹೋಗುತ್ತದೆ. ದಿನಕ್ಕೆ 5,000 ಕ್ಯೂಸೆಕ್ ಹರಿದರೆ 15 ದಿನಕ್ಕೆ 7 ಟಿಎಂಸಿ ಖಾಲಿ! ಆಗ ಉಳಿಯುವುದು 13 ಟಿಎಂಸಿ!! ಇದರಲ್ಲಿ ಡೆಡ್ ಸ್ಟೋರೇಜ್ 7 ಟಿಎಂಸಿ ಇರಬೇಕು. ಇನ್ನು ಉಳಿಯೋದು ಎಷ್ಟು?

ಇದೆಲ್ಲ ಸಮಸ್ಯೆಗಳಿಗೆ ಕಾಂಗ್ರೆಸ್‌ ಸರ್ಕಾರವೇ ನೇರ ಹೊಣೆ

ಬೆಂಗಳೂರಿಗೆ ಇನ್ನೂ 9 ತಿಂಗಳಿಗೆ ಕುಡಿಯಲಿಕ್ಕೆ ಕನಿಷ್ಠ 13 ಟಿಎಂಸಿ ಬೇಕು. ಎಲ್ಲಿಂದ ಬರುತ್ತೆ ಆ ನೀರು?
ಆದೇಶ ಪಾಲಿಸಲು ಕರ್ನಾಟಕ, ಅನುಭವಿಸಲು ತಮಿಳುನಾಡು ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆಲ್ಲ ಕಾಂಗ್ರೆಸ್‌ ಸರಕಾರವೇ ನೇರ ಕಾರಣ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂನ್‌ 28) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಹಾಗೆಯೇ, ಹಲವು ಮನವಿಗಳನ್ನು ಕೂಡ ಸಿದ್ದರಾಮಯ್ಯ ಮಾಡಿದರು.

VISTARANEWS.COM


on

CM SIddaramaiah
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು, ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಅವರು ಕೋರಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು. ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೋರಲಾಯಿತು. ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಇದನ್ನೂ ಓದಿ: CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

Continue Reading

ಕರ್ನಾಟಕ

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Air Wing NCC: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ. ವತಿಯಿಂದ ಏರ್ ವಿಂಗ್ ಎನ್‌ಸಿಸಿ 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು ಜುಲೈ 09 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

VISTARANEWS.COM


on

Application Invitation to Join Air Wing NCC July 09 is the last day for submission of application
Koo

ಬೆಂಗಳೂರು: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ ವತಿಯಿಂದ ಏರ್ ವಿಂಗ್ ಎನ್‌ಸಿಸಿ (Air Wing NCC) 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಅಭ್ಯರ್ಥಿಗಳು ಪಿಯುಸಿ ಪ್ರಥಮ ಅಥವಾ ಪ್ರಥಮ ವರ್ಷದ ಪದವಿಯಲ್ಲಿ ಬೆಂಗಳೂರಿನ ಯಾವುದಾದರೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಎನ್.ಸಿ.ಸಿ ಸೇರಬಯಸುವ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಚಿತ್ರದಲ್ಲಿ ನೀಡಿರುವ ಕ್ಯೂ.ಆರ್. ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

ವಿಳಾಸ: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ., ಯುವಿಸಿಇ ಕ್ಯಾಂಪಸ್, ಕೆ.ಆರ್. ಸರ್ಕಲ್ ಹತ್ತಿರ, ಬೆಂಗಳೂರು, ದೂರವಾಣಿ ಸಂಖ್ಯೆ 8788506566/9108939392 ಗೆ ಸಂಪರ್ಕಿಸಬಹುದಾಗಿದೆ.

Continue Reading

ಕರ್ನಾಟಕ

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

Pralhad Joshi: ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ನಾನೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

India is a secular nation because Hindus are the majority says Union Minister Pralhad Joshi
Koo

ನವದೆಹಲಿ: ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

“ಭಾರತ ಹಿಂದೂ ರಾಷ್ಟ್ರವಲ್ಲ” ಎಂಬ ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಅವರ ನಡೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ಷೇಪಿಸಿದ್ದು, ನವದೆಹಲಿಯಲ್ಲಿ ಶುಕ್ರವಾರ ಈ ಕುರಿತು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯಾತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ತಾವೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಚಿವ ಪ್ರಲ್ಹಾದ್‌ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ.

Continue Reading
Advertisement
Assam Tour
ಪ್ರವಾಸ9 mins ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ24 mins ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ24 mins ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Rahul Gandhi
ದೇಶ27 mins ago

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

karnataka weather Forecast
ಮಳೆ54 mins ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ57 mins ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ2 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ2 hours ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ7 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ7 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌