Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ! - Vistara News

ಪ್ರಮುಖ ಸುದ್ದಿ

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ವೃಶ್ಚಿಕ ರಾಶಿಯಿಂದ ಶುಕ್ರವಾರ ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದ್ದು, ಮಾತಿನಲ್ಲಿ ಹಿಡಿತವಿರಲಿ. ಮಿಥುನ ರಾಶಿಯವರ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಕಟಕ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಧನಸ್ಸು ರಾಶಿಯವರು ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕುಂಭ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಮೀನ ರಾಶಿಯವರಿಗೆ ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-09-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ
ತಿಥಿ:
ಸಪ್ತಮಿ 13:34 ವಾರ: ಶುಕ್ರವಾರ
ನಕ್ಷತ್ರ: ಜೇಷ್ಠಾ 15:33 ಯೋಗ: ಆಯುಷ್ಮಾನ್ 23:51
ಕರಣ: ವಣಿಜ 13:34 ಅಮೃತಕಾಲ : ಬೆಳಗ್ಗೆ 06:47ಯಿಂದ 08:23ರವರೆಗೆ
ದಿನದ ವಿಶೇಷ : ಜ್ಯೇಷ್ಠಾಲಕ್ಷ್ಮೀ ವ್ರತ

ಸೂರ್ಯೋದಯ : 06:13  ಸೂರ್ಯಾಸ್ತ : 06:46

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ
:ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದ್ದು, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು , ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆದಕಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತವಾಗಿ ಖರ್ಚು ಹೆಚ್ಚಾಗಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನಿಮ್ಮ ಆಕರ್ಷಕ ಮಾತುಗಳು ಇತರರಿಂದ ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ಚಿಂತಿಸಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಜೀವನದಲ್ಲಿ ಕರ್ಮಫಲ ಹೇಗೆ ಬರುತ್ತದೆ?

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆತ್ಮೀರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ . ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೀನ ರಾಶಿಯಿಂದ ಶುಕ್ರವಾರ ಮೇಷ ರಾಶಿಯನ್ನು 04:52ಕ್ಕೆ ಪ್ರವೇಶಿಸುತ್ತಾನೆ. ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 16:26 ವಾರ: ಶುಕ್ರವಾರ
ನಕ್ಷತ್ರ: ಪೂರ್ವ ಭಾದ್ರಪದ 10:09 ಯೋಗ: ಸೌಭಾಗ್ಯ 21:37
ಕರಣ: ಭವ 16:26 ಅಮೃತಕಾಲ: ಬೆಳಗಿನ ಜಾವ 04:17 ರಿಂದ 05:48
ದಿನದ ವಿಶೇಷ: ಹರಿಪುರ ಉತ್ಸವ

ಸೂರ್ಯೋದಯ : 05:58   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 10:46 ರಿಂದ 12:23
ಗುಳಿಕಕಾಲ: ಬೆಳಗ್ಗೆ 07:33
ರಿಂದ 09:10
ಯಮಗಂಡಕಾಲ: ಮಧ್ಯಾಹ್ನ 03:36 ರಿಂದ 05:13

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡುವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಗಳಿಸುವಿರಿ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದ್ದು, ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ : ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದ್ದು, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯನ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕ್ರೀಡೆ

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

IND vs ENG Semi Final: ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು.

VISTARANEWS.COM


on

IND vs ENG Semi Final
Koo

ಪ್ರೊವಿಡೆನ್ಸ್‌: ಅಕ್ಷರ್​ ಪಟೇಲ್​(23ಕ್ಕೆ 3), ಕುಲ್​ದೀಪ್​ ಯಾದವ್​(19ಕ್ಕೆ 3) ಜೋಡಿಯ ಸ್ಪಿನ್​ ದಾಳಿ ಹಾಗೂ ರೋಹಿತ್​ ಶರ್ಮ(57) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್​ ಟೂರ್ನಿಯ(IND vs ENG Semi Final) ಇಂಗ್ಲೆಂಡ್​ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ 68 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಸಾಧನೆ ಮಾಡಿದೆ. ಜತೆಗೆ 2022ರ ಸೆಮಿಫೈನಲ್​ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿದೆ. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು. ಈ ಸೋಲಿನಿಂದಿಗೆ ಹಾಲಿ ಚಾಂಪಿಯನ್​ ಆಗಿದ್ದ ಇಂಗ್ಲೆಂಡ್​ ಈಗ ಮಾಜಿ ಆಯಿತು.

ಅಕ್ಷರ್​-ಕುಲ್​ದೀಪ್​ ಸ್ಪಿನ್​ ಮೋಡಿ

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್​ಗೆ ನಾಯಕ ಜಾಸ್​ ಬಟ್ಲರ್​ ಬಿರುಸಿನ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸಿದರು. ಒಂದು ಹಂತದಲ್ಲಿ ಅವರ ಬ್ಯಾಟಿಂಗ್ ನೋಡುವಾಗ 2022ರ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯವೊಮ್ಮೆ ಕಣ್ಣ ಮುಂದೆ ಬಂದಿತು. ಅಬ್ಬರದ ಬ್ಯಾಟಿಂಗ್​ ಮೂಲಕ ಮುನ್ನುಗ್ಗುತ್ತಿದ್ದ ಇವರನ್ನು ಕೊನೆಗೂ ಎಡಗೈ ಸ್ಪಿನ್ನರ್​ ಅಕ್ಷರ್​ ಪಟೇಲ್​ ಕಟ್ಟಿಹಾಕಿದರು. ತಾನೆಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಎಗರಿಸಿ ಭಾರತಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು. ರಿವರ್ಸ್​ ಸ್ವೀಪ್​ ಮಾಡುವ ಯತ್ನದಲ್ಲಿ ಕೀಪರ್​ ರಿಷಭ್​ ಪಂತ್​ಗೆ ಕ್ಯಾಚ್​ ನೀಡಿ ವಿಕೆಟ್​ ಒಪ್ಪಿಸಿದರು. ಬಟ್ಲರ್​ 4 ಬೌಂಡರಿ ನೆರವಿನಿಂದ 23 ರನ್​ ಬಾರಿಸಿದರು.

2ನೇ ಓವರ್​ನಲ್ಲಿ ಅಕ್ಷರ್ ಮತ್ತೊಂದು ದೊಡ್ಡ ವಿಕೆಟ್​ ಬೇಟೆಯಾಡಿದರು.​ ಅಪಾಯಕಾರಿ ಬ್ಯಾಟರ್​ ಜಾನಿ ಬೇರ್​ಸ್ಟೋ ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್​ಗೆ ಅಟ್ಟಿದರು. ಈ ವಿಕೆಟ್​ ಪತನಕ್ಕೂ ಮುನ್ನ ಜಸ್​ಪ್ರೀತ್​ ಬುಮ್ರಾ ತಮ್ಮ ಯಾರ್ಕರ್​ ದಾಳಿಯಿಂದ ಫಿಲ್​ ಸಾಲ್ಟ್ ಅವರನ್ನು ಕ್ಲೀನ್​ ಬೌಲ್ಟ್​ ಮಾಡಿದ್ದರು.​

35 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್​ಗೆ ಆ ಬಳಿಕ ಬಂದ ಬ್ಯಾಟರ್​ಗಳು ಕೂಡ ಆಸರೆಯಾಗುವಲ್ಲಿ ವಿಫಲರಾದರು. ಮೊಯಿನ್​ ಅಲಿ(8) ಕ್ರೀಸ್​ ಬಿಟ್ಟು ಸಿಕ್ಸರ್​ ಬಾರಿಸುವ ಯತ್ನದಲ್ಲಿ ರಿಷಭ್​ ಪಂತ್​ ಅವರ ಮಿಂಚಿನ ವೇಗದ ಸ್ಟಂಪ್​ ಬಲೆಗೆ ಬಿದ್ದರು. ಈ ವಿಕೆಟ್​ ಕೂಡ ಅಕ್ಷರ್​ ಪಾಲಾಯಿತು. ಆ ಬಳಿಕ ಆಡಲಿಳಿದ ಆಲ್​ರೌಂಡರ್​ ಸ್ಯಾಮ್​ ಕರನ್(2)​ ಅವರನ್ನು ಕುಲ್​ದೀಪ್​ ಯಾದವ್​ ತಮ್ಮ ಮೊದಲ ಓವರ್​ನಲ್ಲಿಯೇ ಎಲ್​ಬಿಡಬ್ಲ್ಯು ಬಲೆಗೆ ಬೀಳಿಸಿದರು. 5ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿದ ಹ್ಯಾರಿ ಬ್ರೂಕ್​ ಸಣ್ಣ ಮಟ್ಟದ ಬ್ಯಾಟಿಂಗ್​ ಹೋರಾಟವನ್ನು ಸಂಘಟಿಸಿದರೂ ಕೂಡ 25 ರನ್​ಗೆ ಇವರ ವಿಕೆಟ್​ ಕೂಡ ಪತನಗೊಂಡಿತು. ಇಲ್ಲಿಗೆ ಇಂಗ್ಲೆಂಡ್​ ಸೋಲು ಕೂಡ ಖಚಿತಗೊಂಡಿತು. ಅಂತಿಮ ಹಂತದಲ್ಲಿ ವೇಗಿ ಜೋಫ್ರಾ ಆರ್ಚರ್​ 1 ಬೌಂಡರಿ ಮತ್ತು 2 ಸಿಕ್ಸರ್​ ಸಿಡಿಸಿ 21 ರನ್​ ಗಳಿಸುವ ಮೂಲಕ ತಂಡದ ಮೊತ್ತವನ್ನು 100 ಗಡಿ ದಾಟಿಸಿದರು. ಭಾರತ ಪರ ಕುಲ್​ದೀಪ್​ ಯಾದವ್​ ಮತ್ತು ಅಕ್ಷರ್​ ಪಟೇಲ್ ತಲಾ ಮೂರು ವಿಕೆಟ್​ ಕಿತ್ತರೆ, ಜಸ್​ಪ್ರೀತ್​ ಬುಮ್ರಾ 2 ವಿಕೆಟ್​ ಉರುಳಿಸಿದರು.

ಸೇಡು ತೀರಿಸಿಕೊಂಡ ಭಾರತ


ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು.

ಇದನ್ನೂ ಓದಿ Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

ಮಳೆಯಿಂದ ಟಾಸ್​ ಪ್ರಕ್ರಿಯೆ ಕೂಡ ವಿಳಂಬಗೊಂಡಿತು. ಪಂದ್ಯ ಆರಂಭವಾಗಿ ಭಾರತ 8 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 65 ರನ್​ ಗಳಿಸಿದ್ದ ವೇಳೆ ಮತ್ತೆ ಮಳೆ ಸುರಿದು ಕೆಲ ಕಾಲ ಪಂದ್ಯ ಸ್ಥಗಿತಗೊಂಡಿತು. ಆದರೆ, ಈ ಪಂದ್ಯಕ್ಕೆ ಮೀಸಲು ದಿನ ಇರದ ಕಾರಣ ಹೆಚ್ಚುವರಿ 250 ನಿಮಿಷ ನೀಡಲಾಗಿತ್ತು. ಹೀಗಾಗಿ ಮಳೆ ನಿಂತ ಬಳಿಕ ಓವರ್​ ಕಡಿತವಿಲ್ಲದೇ ಪಂದ್ಯವನ್ನು ಮುಂದುವರಿಸಲಾಯಿತು.

ರೋಹಿತ್​-ಸೂರ್ಯ ಉತ್ತಮ ಜತೆಯಾಟ

ಮಳೆ ನಿಂತ ಬಳಿಕ ರೋಹಿತ್ ಶರ್ಮ ಜತೆ ಸೂರ್ಯಕುಮಾರ್​ ಕೂಡ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟರು. ಉಭಯ ಆಟಗಾರರು ಸೇರಿಕೊಂಡು ಮೂರನೇ ವಿಕೆಟ್ 73​ ಜತೆಯಾಟ ನಡೆಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. 5 ರನ್​ ಗಳಿಸಿದ್ದ ವೇಳೆ ಫಿಲ್ ಸಾಲ್ಟ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದ ರೋಹಿತ್, ಇದರ ಸಂಪೂರ್ಣ ಲಾಭವೆತ್ತಿದರು. 33 ಎಸೆತಗಳಿಂದ ಅರ್ಧಶತಕ ಬಾರಿಸಿ ಮಿಂಚಿದರು. ಇದು ರೋಹಿತ್​ ಅವರ 32ನೇ ಅಂತಾರಾಷ್ಟ್ರೀಯ ಟಿ20 ಅರ್ಧಶತಕ. ಅಂತಿಮವಾಗಿ 6 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 57 ರನ್​ ಗಳಿಸಿ ಆದೀಲ್​ ರಶೀದ್​ ಓವರ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ವಿಕೆಟ್​ ಪತನಗೊಂಡು 11 ರನ್​ ಅಂತರದಲ್ಲಿ ಸೂರ್ಯಕುಮಾರ್​ ವಿಕೆಟ್​ ಕೂಡ ಬಿತ್ತು. ಸೂರ್ಯಕುಮಾರ್​ 47(4 ಬೌಂಡರಿ, 2ಸಿಕ್ಸರ್​) ರನ್​ ಬಾರಿಸಿದರು.

ಉತ್ತಮ ಸ್ಥಿತಿಯಲ್ಲಿದ್ದ ಭಾರತ, ಸೂರ್ಯಕುಮಾರ್​ ಮತ್ತು ರೋಹಿತ್​ ವಿಕೆಟ್​ ಪತನದ ಬಳಿಕ ನಾಟಕೀಯ ಕುಸಿತ ಕಂಡಿತು. ಶಿವಂ ದುಬೆ(0) ಗೋಲ್ಡನ್​ ಡಕ್​ ಸಂಕಷ್ಟಕ್ಕೆ ಸಿಲುಕಿದರೆ, ಅಕ್ಷರ್​ ಪಟೇಲ್​ 10 ರನ್​ಗೆ ಆಟ ಮುಗಿಸಿದರು. ಅಂತಿಮವಾಗಿ ಜಡೇಜಾ ಅಜೇಯ 17(9 ಎಸೆತ, 2 ಬೌಂಡರಿ) ಮತ್ತು ಹಾರ್ದಿಕ್​ ಪಾಂಡ್ಯ 23(13 ಎಸೆತ, 2 ಸಿಕ್ಸರ್​, 1 ಬೌಂಡರಿ) ರನ್ ಬಾರಿಸಿದ ಪರಿಣಾಮ ತಂಡ 150ರ ಗಡಿ ದಾಟಿತು. ಇಂಗ್ಲೆಂಡ್​ ಪರ ಕ್ರಿಸ್​ ಜೋರ್ಡನ್​ 37 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಉರುಳಿಸಿದರು.

ದಾಖಲೆ ಬರೆದ ರೋಹಿತ್​


ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಈ ಪಂದ್ಯದಲ್ಲಿ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ದಾಖಲೆ ನಿರ್ಮಿಸಿಸಿದರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲ ಜಯವರ್ಧನೆ(111 ಬೌಂಡರಿ) ಹೆಸರಿನಲ್ಲಿತ್ತು. 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಕ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು. ವಿರಾಟ್​ ಕೊಹ್ಲಿ(12883) ಮೊದಲ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್​(11207) ದ್ವಿತೀಯ ಸ್ಥಾನಿಯಾಗಿದ್ದಾರೆ.  

ಕೊಹ್ಲಿ ಮತ್ತೆ ವಿಫಲ


ವಿರಾಟ್​ ಕೊಹ್ಲಿ(Virat Kohli) ಅವರ ಬ್ಯಾಟಿಂಗ್​ ವೈಫಲ್ಯ ಈ ಪಂದ್ಯದಲ್ಲಿಯೂ ಮುಂದುವರಿಯಿತು. 9 ಎಸೆತಕ್ಕೆ 9 ರನ್​ಗಳಿಸಿ ರೀಸ್‌ ಟೋಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಟ್​ ಆದರು. ಈ ಮೂಲಕ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಒಂದಂಕಿಗೆ ಸೀಮಿತರಾದರು. ಇದಕ್ಕೂ ಮುನ್ನ ಕೊಹ್ಲಿ ಆಡಿದ ಎಲ್ಲ ಸೆಮಿಫೈನಲ್​ ಪಂದ್ಯದಲ್ಲಿಯೂ ಅರ್ಧಶತಕ ಬಾರಿಸಿದ್ದರು. ರಿಷಭ್​ ಪಂತ್​ ಕೂಡ ಅವಸರದ ಆಟವಾಡಲು ಮುಂದಾಗಿ ಕೇವಲ 4 ರನ್​ಗೆ ವಿಕೆಟ್​ ಕೈಚೆಲ್ಲಿದರು.

Continue Reading

ದೇಶ

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Abhyas Trial: ಒಡಿಶಾದ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ (ITR) ಗುರುವಾರ (ಜೂನ್‌ 27) ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಯು ಸಂಸ್ಥೆಯು (DRDO) ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ಅಭ್ಯಾಸ್‌ ಹೆಸರಿನ ಗುರಿಗಳನ್ನು ಡಿಆರ್‌ಡಿಒ ಅಭಿವೃದ್ಧಿಪಡಿಸಿದ್ದು, ಆರು ಗುರಿಗಳನ್ನು ಪರೀಕ್ಷೆ ಮಾಡಲಾಗಿದೆ. ಎಲ್ಲ ಪರೀಕ್ಷೆಗಳು ಕೂಡ ಯಶಸ್ವಿಯಾಗಿವೆ ಎಂಬುದಾಗಿ ಡಿಆರ್‌ಡಿಒ ತಿಳಿಸಿದೆ.

VISTARANEWS.COM


on

Abhyas Trial
Koo

ಭುವನೇಶ್ವರ: ಭಾರತದ ಕ್ಷಿಪಣಿ ವ್ಯವಸ್ಥೆಗೆ ಹೆಚ್ಚಿನ ಬಲವನ್ನು ತುಂಬುವ, ದೇಶದ ಸೇನೆಗೂ ಭಾರಿ ಪ್ರಮಾಣದಲ್ಲಿ ಸಹಕಾರಿಯಾಗುವ, ಯಾವುದೇ ತುರ್ತು ಸಂದರ್ಭದಲ್ಲಿ ಪ್ರತ್ಯುತ್ತರ ನೀಡುವಾಗ ನಿರ್ಣಾಯಕ ಪಾತ್ರ ನಿರ್ವಹಿಸುವ ಹೈ-ಸ್ಪೀಡ್‌ ಎಕ್ಸ್‌ಪೆಂಡೇಬಲ್‌ ಏರಿಯಲ್‌ ಟಾರ್ಗೆಟ್‌ (HEAT) ಆದ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆಯು (Abhyas Trial) ಯಶಸ್ವಿಯಾಗಿದೆ. ಒಡಿಶಾದ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ (ITR) ಗುರುವಾರ (ಜೂನ್‌ 27) ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಯು ಸಂಸ್ಥೆಯು (DRDO) ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ.

ಅಭ್ಯಾಸ್‌ ಹೆಸರಿನ ಗುರಿಗಳನ್ನು ಡಿಆರ್‌ಡಿಒ ಅಭಿವೃದ್ಧಿಪಡಿಸಿದ್ದು, ಆರು ಗುರಿಗಳನ್ನು ಪರೀಕ್ಷೆ ಮಾಡಲಾಗಿದೆ. ಎಲ್ಲ ಪರೀಕ್ಷೆಗಳು ಕೂಡ ಯಶಸ್ವಿಯಾಗಿವೆ ಎಂಬುದಾಗಿ ಡಿಆರ್‌ಡಿಒ ತಿಳಿಸಿದೆ. ಅದರಲ್ಲೂ, ಕೇವಲ 30 ನಿಮಿಷಗಳಲ್ಲಿ ಸತತವಾಗಿ ಎರಡು ಗುರಿಗಳನ್ನು ಪರೀಕ್ಷೆ ಮಾಡಲಾಗಿದೆ. ಪ್ರಯೋಗದ ಸಮಯದಲ್ಲಿ ಬೂಸ್ಟರ್‌ನ ಸುರಕ್ಷಿತ ಬಿಡುಗಡೆ, ಲಾಂಚರ್‌ ಕ್ಲಿಯರೆನ್ಸ್‌ ಹಾಗೂ ಒತ್ತಡವನ್ನು ಸಹಿಸಿಕೊಳ್ಳುವ ಸಾಮರ್ಥ್ಯ ಇದೇ ಎಂಬುದನ್ನು ಡಿಆರ್‌ಡಿಒ ವಿಜ್ಞಾನಿಗಳು ಪರೀಕ್ಷೆ ವೇಳೆ ದೃಢಪಡಿಸಿಕೊಂಡರು.

ಕ್ಷಿಪಣಿಗಳಿಗೆ ಹೇಗೆ ಇವು ಸಹಕಾರಿ?

ಅಭ್ಯಾಸ್‌ ಗುರಿಗಳು ದೇಶದ ಕ್ಷಿಪಣಿ ವ್ಯವಸ್ಥೆಯನ್ನು ಬಲಪಡಿಸಲು, ಕ್ಷಿಪಣಿಗಳ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕಾರಿಯಾಗಲಿವೆ. ಕ್ಷಿಪಣಿಗಳ ಪರೀಕ್ಷೆ ಹಾಗೂ ಅಭ್ಯಾಸಗಳ ವೇಳೆ ಗುರಿಗಳನ್ನು ಬಳಸಿ, ಅವುಗಳ ಸಮರ್ಥ ಕಾರ್ಯನಿರ್ವಹಣೆಯನ್ನು ಒರೆಗೆ ಹಚ್ಚುತ್ತವೆ. ಆಟೋ ಪೈಲಟ್‌ ಮೂಲಕ ಹಾರಾಡುವ, ಲ್ಯಾಪ್‌ ಆಧಾರಿತವಾಗಿ ಭೂಮಿಯಿಂದಲೇ ನಿಯಂತ್ರಣ ಮಾಡಬಹುದಾದ, ರೇಡಾರ್‌ ಗ್ರಹಿಕೆಗೆ ಸಿಗದಿರುವುದು ಸೇರಿ ಹಲವು ಅತ್ಯಾಧುನಿಕ ಸಾಮರ್ಥ್ಯವನ್ನು ಇವು ಹೊಂದಿವೆ.

ಡಿಆರ್‌ಡಿಒ ಯಶಸ್ವಿಯಾಗಿ ಪರೀಕ್ಷೆ ಮಾಡುತ್ತಲೇ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅಭಿನಂದನೆ ಸಲ್ಲಿಸಿದರು. ಡಿಆರ್‌ಡಿಒ ವಿಜ್ಞಾನಿಗಳು, ಸಶಸ್ತ್ರ ಪಡೆಗಳ ಪ್ರಯತ್ನಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಭ್ಯಾಸ್‌ ಗುರಿಗಳನ್ನು ದೇಶೀಯವಾಗಿಯೇ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರಿನಲ್ಲಿರುವ ಡಿಆರ್‌ಡಿಒದ ಏರೋನಾಟಿಕಲ್‌ ಡೆವಲಪ್‌ಎಸ್ಟಾಬ್ಲಿಶ್‌ಮೆಂಟ್‌ ಇವುಗಳ ವಿನ್ಯಾಸ ಮಾಡಿದೆ. ಪ್ರೊಡಕ್ಷನ್‌ ಏಜೆನ್ಸೀಸ್‌-ಹಿಂದುಸ್ಥಾನ ಏರೋನಾಟಿಕ್ಸ್‌ ಲಿಮಿಟೆಡ್‌, ಲಾರ್ಸೆನ್‌ & ಟರ್ಬೊ ಇವುಗಳನ್ನು ಅಭಿವೃದ್ಧಿಪಡಿಸಿವೆ.

ಇದನ್ನೂ ಓದಿ: SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Continue Reading

ಕರ್ನಾಟಕ

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

ಕರ್ನಾಟಕದಲ್ಲಿ ನಂದಿನಿ ಹಾಲಿನ ಬೆಲೆಯನ್ನು 2 ರೂ., ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿರುವ ಯುವ ಕಾಂಗ್ರೆಸ್‌ ನಾಯಕರು ದೆಹಲಿಗೆ ವಿಮಾನದಲ್ಲಿ ತೆರಳಿ ಪ್ರತಿಭಟನೆ ನಡೆಸಲು ಹಣವನ್ನು ಎಲ್ಲಿಂದ ತಂದಿದೆ ಎಂಬುದಾಗಿ ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್‌ ನಾಯಕರು ದೆಹಲಿಗೆ ಹೊರಟ ವಿಡಿಯೊವನ್ನು ಕೂಡ ಹಂಚಿಕೊಂಡಿದೆ.

VISTARANEWS.COM


on

Congress Protest
Koo

ಬೆಂಗಳೂರು/ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG) ಅಕ್ರಮ ನಡೆದಿರುವುದು ಹಾಗೂ ಸೇನೆಗೆ ಕಿರು ಅವಧಿಗೆ ನೇಮಕ ಮಾಡಿಕೊಳ್ಳುವ ಅಗ್ನಿಪಥ ಯೋಜನೆ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಭಾರತೀಯ ಯುವ ಕಾಂಗ್ರೆಸ್‌ (IYC) ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನು, ಕರ್ನಾಟಕದಿಂದ (Karnataka) ಐಷಾರಾಮಿ ವಿಮಾನದಲ್ಲಿ ಯುವ ಕಾಂಗ್ರೆಸ್‌ (Congress) ನಾಯಕರು ದೆಹಲಿಗೆ ಹೋಗಿರುವುದನ್ನು ಬಿಜೆಪಿ (BJP) ಖಂಡಿಸಿದೆ. ಅಲ್ಲದೆ, ಹಣದ ಮೂಲಕ ಯಾವುದು ಎಂಬುದಾಗಿ ಪ್ರಶ್ನಿಸಿದೆ.

“ಐಷಾರಾಮಿ ಎಸಿ ಬಸ್‌ ಹಾಗೂ ಪ್ಲೈಟ್‌ ಮುಖಾಂತರ ಪ್ರಯಾಣ ಮಾಡಿ ಪ್ರತಿಭಟನೆ ಮಾಡುವ ಕರ್ನಾಟಕ ಕಾಂಗ್ರೆಸ್‌ನ ಯುವ ನಾಯಕರಿಗೆ ಹಣ ಎಲ್ಲಿಂದ ಬಂದಿದೆ? ಇದರ ಹಣದ ಮೂಲ ಎಲ್ಲಿ? ನಂದಿನಿ ಹಾಲಿನ ಹೆಚ್ಚುವರಿ 2 ರೂಪಾಯಿ, ಪೆಟ್ರೋಲ್‌ ಬೆಲೆಯ ಹೆಚ್ಚುವರಿ 4 ರೂಪಾಯಿಯನ್ನು ಸಿದ್ದರಾಮಯ್ಯ ಸರ್ಕಾರ ಸಂಗ್ರಹಿಸಿ ಕೊಟ್ಟಿದೆ ಎಂದು ದೆಹಲಿಗೆ ಹೋದ ನಲಪಾಡ್‌ ಗ್ಯಾಂಗ್‌ ಹೇಳುತ್ತಿದೆ. ಹೌದಾ ಸಿದ್ದರಾಮಯ್ಯನವರೇ?” ಎಂಬುದಾಗಿ ಬಿಜೆಪಿ ಪೋಸ್ಟ್‌ ಮಾಡಿದೆ. ಹಾಗೆಯೇ, ಯುವ ಕಾಂಗ್ರೆಸ್‌ ನಾಯಕರು ವಿಮಾನದಲ್ಲಿ ಹೊರಟ ವಿಡಿಯೊವನ್ನು ಕೂಡ ಹಂಚಿಕೊಂಡಿದೆ.

ರಾಜ್ಯದಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 3 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ ಎಂದು ತಿಳಿದುಬಂದಿದೆ. ಇದಾದ ಕೆಲವೇ ದಿನಗಳಲ್ಲಿ ನಂದಿನಿ ಹಾಲಿನ ಬೆಲೆಯನ್ನೂ 2 ರೂಪಾಯಿ ಏರಿಕೆ ಮಾಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಕೂಡ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿದ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯ ಯುವ ಕಾಂಗ್ರೆಸ್‌ ನಾಯಕರು ವಿಮಾನದಲ್ಲಿ ತೆರಳಿ, ದೆಹಲಿಯಲ್ಲಿ ಎ.ಸಿ ಬಸ್‌ನಲ್ಲಿ ಜಂತರ್‌ ಮಂತರ್‌ಗೆ ಹೋಗಿ ಪ್ರತಿಭಟನೆ ನಡೆಸಿದ್ದನ್ನು ಬಿಜೆಪಿ ಪ್ರಶ್ನಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಿದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡುತ್ತಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಶೇ.18.44ರಷ್ಟು ತೆರಿಗೆ ವಸೂಲಿ ಮಾಡುತ್ತಿದೆ.

ಇದನ್ನೂ ಓದಿ: Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Continue Reading
Advertisement
haveri Accident
ಕರ್ನಾಟಕ11 mins ago

Haveri Accident: ಹಾವೇರಿಯಲ್ಲಿ ಭಯಾನಕ ಅಪಘಾತ: ಲಾರಿಗೆ ಟಿಟಿ ಡಿಕ್ಕಿ, 13 ಜನರ ಸಾವು

Weight Loss Tips
ಆರೋಗ್ಯ20 mins ago

Weight Loss Tips: ದಕ್ಷಿಣ ಭಾರತೀಯ ಶೈಲಿಯ ಬೆಳಗಿನ ತಿಂಡಿಯಲ್ಲೂ ನೀವು ತೂಕ ಇಳಿಸಬಹುದು!

Indian Origin Crow
ವಿದೇಶ48 mins ago

Indian Origin Crow: ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ನಿರ್ಧರಿಸಿದ್ದೇಕೆ?

karnataka weather Forecast
ಮಳೆ50 mins ago

Karnataka Weather : ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌; ತಿಂಗಳಾಂತ್ಯದವರೆಗೆ ಮೀನುಗಾರರಿಗೆ ನಿರ್ಬಂಧ

World's Newest Countries
ವಿದೇಶ1 hour ago

World’s Newest Countries: ಇವು ವಿಶ್ವದ 10 ಹೊಸ ರಾಷ್ಟ್ರಗಳು! ಏನು ಈ ರಾಷ್ಟ್ರಗಳ ವಿಶೇಷ?

Dina Bhavishya
ಭವಿಷ್ಯ2 hours ago

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

IND vs ENG Semi Final
ಕ್ರೀಡೆ6 hours ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ7 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ8 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ8 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು15 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ19 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌