Karnataka Film Chamber: ಕರ್ನಾಟಕ ಚಲನಚಿತ್ರ ಮಂಡಳಿ ಚುನಾವಣೆ; ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪಾ ಶ್ರೀನಿವಾಸ್! - Vistara News

South Cinema

Karnataka Film Chamber: ಕರ್ನಾಟಕ ಚಲನಚಿತ್ರ ಮಂಡಳಿ ಚುನಾವಣೆ; ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪಾ ಶ್ರೀನಿವಾಸ್!

Karnataka Film Chamber: ಈಗಾಗಲೇ ಭರದಿಂದ ಪ್ರಚಾರ ನಡೆಸಿರುವ ಶಿಲ್ಪಾ ಶ್ರೀನಿವಾಸ್ ಅವರಿಗೆ ಮಂಡಳಿಗೆ ಅಧ್ಯಕ್ಷರಾದ ಭಾ.ಮಾ.ಹರೀಶ್ ತಂಡ ಸೇರಿದಂತೆ ಹಲವರು ಸಾಥ್ ಕೊಟ್ಟಿದ್ದಾರೆ.

VISTARANEWS.COM


on

shilpa shrinivas
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗ ಮಾತೃ ಸಂಸ್ಥೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber) ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಇದೇ ಸೆ. 23ಕ್ಕೆ ಫಿಲ್ಮ್ ಚೇಂಬರ್ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಅಧ್ಯಕ್ಷ ಸ್ಥಾನದಲ್ಲಿ ನಿರ್ಮಾಪಕ ಹಾಗೂ ವಿತರಕ ಶಿಲ್ಪಾ ಶ್ರೀನಿವಾಸ್ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಈಗಾಗಲೇ ಭರದಿಂದ ಪ್ರಚಾರ ನಡೆಸಿರುವ ಶಿಲ್ಪಾ ಶ್ರೀನಿವಾಸ್ ಅವರಿಗೆ ಮಂಡಳಿಗೆ ಅಧ್ಯಕ್ಷರಾದ ಭಾ.ಮಾ.ಹರೀಶ್ ತಂಡ ಸೇರಿದಂತೆ ಹಲವರು ಸಾಥ್ ಕೊಟ್ಟಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸೇರಿದಂತೆ ವಿವಿಧ ಪದಾಧಿಕಾರಿಗಳ ಆಯ್ಕೆಗೆ ಇದೇ 23ರಂದು ಚುನಾವಣೆ ನಡೆಯಲಿದೆ. ಈ ಬಾರಿಯ ಅಧ್ಯಕ್ಷ ಸ್ಥಾನ ವಿತರಕ ವಲಯದ ಪಾಲಾಗಿದ್ದು. ಅಧ್ಯಕ್ಷ ಸ್ಥಾನದ ಮೇಲೆ ವಿ.ಎಚ್ ಸುರೇಶ್, ಎನ್ ಎಮ್ ಸುರೇಶ್ , ಶಿಲ್ಪಾ ಶ್ರೀನಿವಾಸ್ ಮತ್ತು ಎ.ಗಣೇಶ್ ಆಕಾಂಕ್ಷಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕಾಗಿ ನಾಲ್ಕು ಆಕಾಂಕ್ಷಿಗಳು ಸ್ಪರ್ಧೆಯಲ್ಲಿದ್ದಾರೆ. ಹೀಗಾಗಿ ಕುತೂಹಲ ಹೆಚ್ಚಿದೆ. ಈ ಬಾರಿಯ ಚುನಾವಣೆಯಲ್ಲಿ 1638 ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ. ಅದರಲ್ಲಿ ನಿರ್ಮಾಪಕರ ವಲಯದಿಂದ 1150 ಮತದಾರರು, ವಿತರಕರ ವಲಯದಿಂದ 358 ಮತ್ತು ಪ್ರದರ್ಶಕರು 138 ಮಂದಿ ಮತದಾನ ಮಾಡುವ ಅವಕಾಶ ಪಡೆದಿದ್ದಾರೆ.

ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪಾ ಶ್ರೀನಿವಾಸ್! 10 ಲಕ್ಷ ಮೀಸಲು

ವಾಣಿಜ್ಯ ಮಂಡಳಿ ಸದಸ್ಯರ ಕುಟುಂಬ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿರುವ ಶಿಲ್ಪಾ ಶ್ರೀ‌ನಿವಾಸ್, ಅದಕ್ಕಾಗಿ ಹತ್ತು ಲಕ್ಷ ರೂ. ಮೀಸಲಿಟ್ಟಿದ್ದಾರೆ. ʻʻಇಡೀ ಚಿತ್ರೋದ್ಯಮಕ್ಕೆ ಈ ಟ್ರಸ್ಟ್ ಬೆಳಕಾಗಲಿ. ಯಾರೇ ಅಧ್ಯಕ್ಷರು ಬಂದರು ಮುಂದುವರಿಸಿಕೊಂಡು ಹೋಗಲಿ. ತಾವು ಮಂಡಳಿ ಅಧ್ಯಕ್ಷ ಸ್ಥಾನಕ್ಕೇರಿದರೆ ಮೊದಲು ಇದನ್ನು ಜಾರಿಗೆ ತರುತ್ತೇವೆʼʼ ಎಂದರು.

ಇದನ್ನೂ ಓದಿ: Karnataka Film Chamber: ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಎನ್ ಎಮ್ ಸುರೇಶ್ ನಾಮಪತ್ರ

Karnataka Film Chamber

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಲ್ಪಾ ಶ್ರೀನಿವಾಸ್, ʻʻ1976ರಿಂದ ಚಿತ್ರರಂಗದಲ್ಲಿ ಸಕ್ರಿಯನಾಗಿದ್ದೇನೆ. ನಿರ್ಮಾಪಕನಾಗಿ, ವಿತರಕನಾಗಿ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಈ ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆʼʼ ಎಂದರು.

ಕಳೆದ 40 ವರ್ಷಗಳಿಂದ ಕನ್ನಡ ಚಲನಚಿತ್ರರಂಗದಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವ ಶಿಲ್ಪಾ ಶ್ರೀನಿವಾಸ್, 600ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್ , ಶಂಕರ್ ನಾಗ್ , ಅಂಬರೀಶ್, ಶಿವಣ್ಣ ಜತೆ ಕೆಲಸ ಮಾಡಿರುವ ಅವರು, ಪ್ರಜಾಪ್ರಭುತ್ವ, ಪರ್ವ, ರೋಮಿಯೊ ಜೂಲಿಯೆಟ್, ಉಪೇಂದ್ರ ಹೀಗೆ ಇನ್ನು ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ.

ಅಂದಹಾಗೆ ಈ ಬಾರೆಯ ಚುನಾವಣೆ ವಿಳಂಬವಾಗಿದೆ. ಅಂದುಕೊಂಡಂತೆ ಆಗಿದ್ದರೆ ಮೇ ತಿಂಗಳಲ್ಲೆ ಚುನಾವಣೆ ನಡೆದು ಫಲಿತಾಂಶ ಕೂಡ ಹೊರಬೀಳಬೇಕಿತ್ತು. ಆದರೆ ಈ ಬಾರಿ ಸೆಪ್ಟಂಬರ್‌ನಲ್ಲಿ ನಡೆಯುತ್ತಿದೆ.

ಇನ್ನು ಕಳೆದ ಬಾರಿ 2022ರಲ್ಲಿ ನಡೆದ ಚುನಾವಣೆಯಲ್ಲಿ ಭಾ.ಮ. ಹರೀಶ್​ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಅವರ ಅಧಿಕಾರದ ಅವಧಿ 2023ರ ಮೇ 28ಕ್ಕೆ ಅಂತ್ಯವಾಗಿದೆ. ಹಾಗಿದ್ದರೂ ಕೂಡ ಚುನಾವಣೆ ನಡೆಸಿರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Darshan Arrested: ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

Darshan Arrested vinish write special message for darshan fathers day
Koo

ಬೆಂಗಳೂರು: ತಂದೆ – ತಾಯಿ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಅಮೂಲ್ಯವಾದವರು. ಅವರಲ್ಲಿ ನಾವು ಯಾರನ್ನೇ ಕಳೆದುಕೊಂಡರೂ (Darshan Arrested) ಆಘಾತದ ಸಿಡಿಲು ಬಡಿಯುವುದಂತೂ ಖಂಡಿತ. ಹಾಗಾಗಿ ತಂದೆ ತಾಯಿಯ ಋಣ, ಪ್ರೀತಿ, ಮಮತೆ ಯಾವತ್ತೂ ಮರೆಯಲಾಗದು.  ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭ ಕೋರಿದ್ದಾನೆ. ದರ್ಶನ್‌ಗೆ ಒಬ್ಬನೇ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.

ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದಿದ್ದ ದರ್ಶನ್‌ ಪುತ್ರ ವಿನೀಶ್

ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದ.

ಇದನ್ನೂ ಓದಿ: Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದ.

ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ

ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Kannada New Movie : ಆರ್ ಜೆ ಪ್ರದೀಪ್ ಪ್ರದೀಪ್ ಒಡೆತನದ ಸಕ್ಕತ್ ಸ್ಟುಡಿಯೋ ಬಹಳ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಸಿನಿಮಾವನ್ನು ಪ್ರಮೋಷನ್ ಮಾಡ್ತಿದೆ. RCB ಕಪ್ ಗೆಲ್ಬೇಕು ಎಂದು ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೊ, ಈಗ ʻಆಲ್ ಓಕೆʼ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದೆ. ಕನ್ನಡದ ಖ್ಯಾತ ರ್‍ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ.

VISTARANEWS.COM


on

Kannada New Movie Maryade Prashne out now
Koo

ಬೆಂಗಳೂರು: ಚಂದನವನದಲ್ಲಿ (Kannada New Movie ) ಇತ್ತೀಚೆಗೆ ಸಖತ್ ಸುದ್ದಿ ಆಗುತ್ತಿರುವ ಸಿನಿಮಾ ಎಂದರೆ ‘ಮರ್ಯಾದೆ ಪ್ರಶ್ನೆ’. ಹೌದು ‘ಸಕ್ಕತ್ ಸ್ಟುಡಿಯೊ’ ಮೂಲಕ ಆರ್ ಜೆ ಪ್ರದೀಪ್ ಅವರು ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾದ ಹೆಸರೇ ” ಮರ್ಯಾದೆ ಪ್ರಶ್ನೆ “. ಸಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ಗಮನಸೆಳೆಯುತ್ತಿರುವ ಸಕ್ಕತ್ ಸ್ಟುಡಿಯೋ ನಮ್ಮ ಚಿತ್ರರಂಗದ ಸೆಲಿಬ್ರಿಟಿಸ್ ಅವರವರ ಜೀವನದ “ಮರ್ಯಾದೆ ಪ್ರಶ್ನೆ ” ಬಗ್ಗೆ ಪೋಸ್ಟ್ ಮಾಡುವ ಮೂಲಕ ಶೀರ್ಷಿಕೆ ಬಿಡುಗಡೆ ಮಾಡಿದ್ದರು.

ಆರ್ ಜೆ ಪ್ರದೀಪ್ ಪ್ರದೀಪ್ ಒಡೆತನದ ಸಕ್ಕತ್ ಸ್ಟುಡಿಯೋ ಬಹಳ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಸಿನಿಮಾವನ್ನು ಪ್ರಮೋಷನ್ ಮಾಡ್ತಿದೆ. RCB ಕಪ್ ಗೆಲ್ಬೇಕು ಎಂದು ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೊ, ಈಗ ʻಆಲ್ ಓಕೆʼ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದೆ. ಕನ್ನಡದ ಖ್ಯಾತ ರ್‍ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ.

ಈ ಹಾಡಿನ ಮೂಲಕ ಕನ್ನಡ ಚಿತ್ರರಂಗದ ಎಲ್ರಿಗೂ “ಒಗ್ಗಟ್ಟಾಗಿ ದುಡಿಯುವ ಬೆಳೆಯುವ ಹಾಗೂ ಸ್ಟಾರ್ ಸಿನಿಮಾಗಳ ಜೊತೆಗೆ ಹೊಸ ಪ್ರಯತ್ನಗಳಿಗೂ ಜನ ಜೈ ಎನ್ನಬೇಕು. ಇದು ಬರೀ ಮರ್ಯಾದೆ ಪ್ರಶ್ನೆ ಅಲ್ಲಾ ನಮ್ಮೆಲ್ಲರ ಉಳಿವಿನ ಪ್ರಶ್ನೆ ” ಎಂಬ ಗಟ್ಟಿ ಕೂಗೊಂದನ್ನು ನೀಡಿದ್ದಾರೆ.

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಮರ್ಯಾದೆ ಪ್ರಶ್ನೆ , ನಿರ್ಮಾಣದ ಜೊತೆಗೆ ಪ್ರದೀಪ್ ಕತೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಆಗಿದ್ದಾರೆ. ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.

ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಯಾರೆಲ್ಲ ಇದ್ದಾರೆ ಅನ್ನೋ ಕುತೂಹಲ ಇದೆ. ಕನ್ನಡದ ಅದ್ಭುತ ಕಲಾವಿದರ ದಂಡೇ ಇದರಲ್ಲಿದೆ ಎಂಬ ಮಾಹಿತಿಯಿದೆ . ಅತಿ ಶೀಘ್ರದಲ್ಲೇ ಆ ವಿವರಗಳನ್ನು ಜನರಿಗೆ ನೀಡುವ ತಯಾರಿಯಲ್ಲಿದ್ದಾರೆ .

Continue Reading

ಸ್ಯಾಂಡಲ್ ವುಡ್

Kotee Movie Review: ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾದಾಗ?!

Kotee Movie Review: ನಿತ್ಯ ಜೀವನ ಜಂಜಾಟವನ್ನು ತೋರಿಸುವ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟವಾಗುತ್ತವೆ. ಕೋಟಿ ಎಂಬ ಪಾತ್ರ ನಮ್ಮ ಸುತ್ತಮುತ್ತಲಿನಲ್ಲಿ ಕಾಣುವ ಒಬ್ಬ ಕಾಮನ್‌ ಮ್ಯಾನ್‌! ಕೆಳ- ಮಧ್ಯಮ ವರ್ಗದ ದೊಡ್ಡ ಕನಸುಗಳು ಹೊತ್ತಿರುವ ಈ ಕೋಟಿಯ ಕನಸಿನ ತಾಣ. ‘ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾಗಬೇಕು’ ಎನ್ನುವುದು ‘ಕೋಟಿ’ ಚಿತ್ರದಲ್ಲಿ ರಾಮಣ್ಣ ಪಾತ್ರಧಾರಿ ರಂಗಾಯಣ ರಘು ನಾಯಕ ‘ಕೋಟಿ’ ಡಾಲಿಗೆ ಹೇಳುವ ಡೈಲಾಗ್‌.. ಇಡೀ ಸಿನಿಮಾದ ಒನ್‌ಲೈನ್‌ ಸ್ಟೋರಿಯನ್ನು ಇದು ಉಲ್ಲೇಖಿಸುತ್ತದೆ.

VISTARANEWS.COM


on

Kotee Movie Review dolly dhanjay News In Kannada
Koo

ಅಜಯ್‌ ಗಾಯತೊಂಡೆ, ಬೆಂಗಳೂರು

ನಿರ್ಮಾಣ: ಜಿಯೋ ಸ್ಟುಡಿಯೋ​. ನಿರ್ದೇಶನ: ಪರಮೇಶ್ವರ್ ಗುಂಡ್ಕಲ್. ಪಾತ್ರವರ್ಗ: ಧನಂಜಯ್, ಮೋಕ್ಷಾ ಕುಶಾಲ್, ರಮೇಶ್ ಇಂದಿರಾ, ತಾರಾ, ರಂಗಾಯಣ ರಘು, ಪೃಥ್ವಿ ಶಾಮನೂರು, ದುನಿಯಾ ವಿಜಯ್ ಮೊದಲಾದವರು. 

ಸ್ಯಾಂಡಲ್​​ವುಡ್​​ ನಟ ಡಾಲಿ ಧನಂಜಯ್ (Kotee Movie Review) ಅಭಿನಯದ ಬಹುನೀರಿಕ್ಷಿತ ಸಿನಿಮಾ ಕೋಟಿ ಸಿನಿಮಾ ಈಗಾಗಲೇ ಟ್ರೇಲರ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಸದ್ದು ಮಾಡಿತ್ತು. ಇದೀಗ ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕನ್ನಡ ಕಿರುತೆರೆ ಲೋಕದ ಪರಿಣತ ಪರಮೇಶ್ವರ್‌ ಗುಂಡ್ಕಲ್‌ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ಇಲ್ಲಿ ಡಾಲಿ ಧನಂಜಯ್‌ ಎಂಬ ʼನಟ ರಾಕ್ಷಸʼ ಈ ಸಿನಿಮಾದ ಹೀರೋ. ಹೀಗಾಗಿ ಈ ʼಕೋಟಿʼ ಸಿನಿಮಾದ ಕುರಿತು ಸಾಕಷ್ಟು ನಿರೀಕ್ಷೆಯಿತ್ತು. ಈ ಚಿತ್ರದ ಕುರಿತು ಸಾಕಷ್ಟು ಹಿಂದೆಯೇ ಕೆಲಸ ಆರಂಭಿಸಲಾಗಿತ್ತು. ಆದರೆ, ಟೀಸರ್‌ ಮತ್ತು ಸಿನಿಮಾ ಬಿಡುಗಡೆ ದಿನಾಂಕ ಪ್ರಕಟಿಸುವ ತನಕ ಈ ಚಲನಚಿತ್ರದ ವಿಚಾರವನ್ನು ಗುಟ್ಟಾಗಿ ಇಡಲಾಗಿತ್ತು. ಇದೀಗ ಈ ಸಿನಿಮಾ ರೀಲಿಸ್ ಆಗಿದ್ದು ಈ ಚಿತ್ರದಲ್ಲಿ ಏನೇನಿದೆ? ಹಾಗೂ ಏನಿರಬೇಕಿತ್ತು ಎಂಬುದನ್ನು ನೋಡೋಣ.

ಏನಿದು ಕೋಟಿ?

ಕೋಟಿ ಅಂದ್ರೆ ಹೆಸರು, ಹಣ, ಸಂಖ್ಯೆ ಅವರವರ ಭಾವಕ್ಕೆ..! ಪ್ರತಿನಿತ್ಯದ ಜೀವನ ಜಂಜಾಟವನ್ನು ತೋರಿಸುವ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟವಾಗುತ್ತವೆ. ಕೋಟಿ ಎಂಬ ಪಾತ್ರ ನಮ್ಮ ಸುತ್ತಮುತ್ತಲಿನಲ್ಲಿ ಕಾಣುವ ಒಬ್ಬ ಕಾಮನ್‌ ಮ್ಯಾನ್‌! ಕೆಳ- ಮಧ್ಯಮ ವರ್ಗದ ದೊಡ್ಡ ಕನಸುಗಳು ಹೊತ್ತಿರುವ ಈ ಕೋಟಿಯ ಕನಸಿನ ತಾಣ.
ಪ್ರಾಮಾಣಿಕತೆಯೇ ಜೀವನ. ಜೀವನದಲ್ಲಿ ಒಂದು ಪೆನ್ನನ್ನೂ ಕದ್ದಿಲ್ಲ ಎನ್ನುವ ಈ ಹರೀಶ್ಚಂದ್ರನಿಗೆ ‘ಕೋಟಿ’ ಆಮಿಷವೊಡ್ಡುವ ನಕ್ಷತ್ರಿಕನೊಬ್ಬ ಗಂಟು ಬಿದ್ದಿದ್ದಾನೆ! ‘ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾಗಬೇಕು’ ಎನ್ನುವುದು ‘ಕೋಟಿ’ ಚಿತ್ರದಲ್ಲಿ ರಾಮಣ್ಣ ಪಾತ್ರಧಾರಿ ರಂಗಾಯಣ ರಘು ನಾಯಕ ‘ಕೋಟಿ’ ಡಾಲಿಗೆ ಹೇಳುವ ಡೈಲಾಗ್‌.. ಇಡೀ ಸಿನಿಮಾದ ಒನ್‌ಲೈನ್‌ ಸ್ಟೋರಿಯನ್ನು ಇದು ಉಲ್ಲೇಖಿಸುತ್ತದೆ. ಬಡ ಕುಟುಂಬದಿಂದ ಬಂದು ನಿಯತ್ತಿನಲ್ಲೇ ಬದುಕುತ್ತಿರುವ ನಾಯಕ ‘ಕೋಟಿ’ ಈ ಹಾದಿಯಲ್ಲೇ ಹೆಜ್ಜೆ ಹಾಕುತ್ತಾನೋ ಅಥವಾ ಬೆತ್ತಲಾಗಿರುವ ಸಮಾಜದಲ್ಲಿ ತಾನೂ ಬೆತ್ತಲಾಗುತ್ತಾನೋ ಎನ್ನುವುದೇ ಚಿತ್ರದ ಸ್ವಾರಸ್ಯ..!

ಇದನ್ನೂ ಓದಿ: Raveena Tandon: ರವೀನಾ ಟಂಡನ್ ವಿಡಿಯೊ ವೈರಲ್​ ಮಾಡಿದ ವ್ಯಕ್ತಿ ಮೇಲೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಛಲಗಾರನೊಬ್ಬನ ಕನಸು ನನಸಾಗುವ ಕೋಟಿ!

ಮೂವರು ಒಡಹುಟ್ಟಿದವರಲ್ಲಿ ಕೋಟಿ (ಧನಂಜಯ್‌) ಹಿರಿಯವನು. ಆತ ಅತ್ಯಂತ ಕಷ್ಟಪಟ್ಟು ದುಡಿಯುವ ವ್ಯಕ್ತಿ. ನಾಳೆಯ ಕುರಿತು ಸುಂದರ ಕನಸು ಹೊಂದಿದ್ದಾನೆ. ಆ ಕನಸು ಈಡೇರಿಸಲು ಕಷ್ಟಪಟ್ಟು ದುಡಿಯುತ್ತಿದ್ದಾನೆ. ಇವರಿಲ್ಲಿ ಜನತಾ ನಗರದ ನಿವಾಸಿಗಳು. ಆ ನಗರ ಕೊಲೆಗಡುಕರ ಅಡ್ಡ. ದಿನೂ ಸಾವ್ಕಾರ್‌ (ರಮೇಶ್‌ ಇಂದಿರಾ) ನಿಯಂತ್ರಣದಲ್ಲಿದೆ. ಕೋಟಿ ಈ ಸಾಹುಕಾರನಿಂದ ಟ್ರಕ್‌ ಬಾಡಿಗೆಗೆ ಪಡೆದು ಸಣ್ಣ ಮೂವರ್ಸ್‌ ಮತ್ತು ಪ್ಯಾಕರ್ಸ್‌ ಬಿಸ್ನೆಸ್‌ ನಡೆಸುತ್ತಾನೆ. ಈ ಬಿಸ್ನೆಸ್‌ ಇಲ್ಲದಿರುವಾಗ ಕ್ಯಾಬ್‌ ಡ್ರೈವರ್‌ ಆಗಿಯೂ ದುಡಿಯುತ್ತಾನೆ. ಆದರೆ, ಈತನ ಕಷ್ಟಕ್ಕೆ ಈ ಹಣ ಸಾಕಾಗುವುದಿಲ್ಲ. ಮನಸ್ಸಿಲ್ಲದಿದ್ದರೂ ಸಾಹುಕಾರನಿಂದ ಸಾಲ ಪಡೆಯುತ್ತಾನೆ. ಈ ಸಾಲ ಕೆಲವೇ ಸಮಯದಲ್ಲಿ ಈತನನನು ಮುಳುಗಿಸಲು ರೆಡಿಯಾಗುತ್ತದೆ. ಕೋಟಿ ಬದುಕನ್ನು ತೋರಿಸುತ್ತ ತುಸು ಮಂದ ವೇಗದಲ್ಲಿ ಸಾಗುತ್ತಿದ್ದ ಸಿನಿಮಾ ವೇಗ ಪಡೆದುಕೊಳ್ಳುತ್ತದೆ.

ಮಾಸ್ ಸಿನಿಮಾ ಜೊತೆಗೆ ಫ್ಯಾಮಿಲಿ ಆಡಿಯನ್ಸ್​ಗೂ ಹೆಚ್ಚು ಕನೆಕ್ಟ್ ಆಗಿದ್ದಾರೆ ಡಾಲಿ. ಅವರ ನಟನೆಯ ‘ರತ್ನನ್ ಪ್ರಪಂಚ’ ಚಿತ್ರದಲ್ಲಿ ತಾಯಿ ಸೆಂಟಿಮೆಂಟ್ ಹೈಲೈಟ್ ಆಗಿತ್ತು. ಈಗ ಮತ್ತೊಮ್ಮೆ ಅವರು ಫ್ಯಾಮಿಲಿ ಆಡಿಯನ್ಸ್​ಗೆ ಇಷ್ಟ ಆಗುವ ಸಿನಿಮಾ ಮಾಡಿದ್ದಾರೆ. ಇಲ್ಲಿ ಅನಗತ್ಯ ಬಿಲ್ಡಪ್ಪು, ಡೈಲಾಗುಗಳೇ ಇಲ್ಲದ ಪಾತ್ರ ಒಪ್ಪಿಕೊಂಡು ಲೀಲಾಜಾಲವಾಗಿ ಅಭಿನಯಿಸಿದ್ದು ಪ್ರೇಕ್ಷಕರಿಗೆ ಅವರ ಮೇಲಿನ ಪ್ರೀತಿ ಇಮ್ಮಡಿಯಾಗುವುದಂತೂ ಸುಳ್ಳಲ್ಲ.
ಅವರಷ್ಟೇ ಅಲ್ಲದೇ ಈ ಸಿನಿಮಾದ ಯಶಸ್ಸು ಅದರ ಇಡೀ ತಾರಾಗಣದ ಆಯ್ಕೆಯಲ್ಲಿದೆ. ತಾರಾ ಅನುರಾಧ, ರಮೇಶ್ ಇಂದಿರಾ ಎಲ್ಲರೂ ಅಮೋಘವಾಗಿ ಅಭಿನಯಿಸಿದ್ದಾರೆ. ಇಲ್ಲಿ ರಂಗಾಯಣ ರಘು, ದುನಿಯಾ ವಿಜಯ್ ಹೆಚ್ಚು ಕಾಣಿಸಿಕೊಂಡಿಲ್ಲ ಇವರ ಪಾತ್ರಕ್ಕೆ ಇನ್ನಷ್ಟು ಪೂರಕ ಅಂಶ ಬೇಕಿದ್ದವು ಎನಿಸುತ್ತದೆ.
ತನುಜಾ ವೆಂಕಟೇಶ್ ಕೋಟಿಯ ಸಹೋದರಿ ಮಹತಿ ಪಾತ್ರದಲ್ಲಿ, ಪೃಥ್ವಿ ಶಾಮನೂರು, ಕೋಟಿಯ ಸಹೋದರ ನಚ್ಚಿಯಾಗಿ, ತಲೆ ಮೇಲೆ ಹೆಡ್‌ಫೋನ್‌ ಹಾಕಿಕೊಂಡು ಸದಾ ಸಂಗೀತ ಕೇಳುತ್ತಾ ಇರುತ್ತಾರೆ. ಚಿತ್ರದ ನಾಯಕಿ ಮೋಕ್ಷಾ ಕುಶಾಲ್‌ ಸುಂದರಿ ಮಾತ್ರವಲ್ಲ, ತನಗೆ ಸಿಕ್ಕ ಪಾತ್ರದಲ್ಲಿ ಶ್ರದ್ಧೆಯಿಂದ ನಟಿಸಿದ್ದಾರೆ. ಇಲ್ಲಿ ಅವರಿಗೊಂದು ಅಪರೂಪದ ಕಾಯಿಲೆಯಿದೆ ಇದು ಸಿನಿಮಾದಲ್ಲಿ ಹೆಚ್ಚು ಹೈಲೈಟ್ ಆಗಿದೆ. ಅದೇನು ಎಂಬುದನ್ನು ಸಿನಿಮಾದಲ್ಲೇ ನೋಡಬೇಕು. ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಈ ಚಿತ್ರದಲ್ಲಿದ್ದಾರೆ.

ಮಾಯಾ ಲೋಕದಲ್ಲಿ ಬಣ್ಣದ ಕ್ಲೈಮ್ಯಾಕ್ಸ್!

ಹೌದು. ಬಣ್ಣ ಬಣ್ಣದ ಪಟ್ಟೆ ತೊಟ್ಟ ಅಷ್ಟೊಂದು ಹುಲಿಗಳು ಪಾಳುಬಿದ್ದ ಹಳೆಯ ಥಿಯೇಟರ್ರೊಂದರ ಕತ್ತಲಲ್ಲಿ ಹೊಡೆದಾಡುವ ದೃಶ್ಯಗಳಲ್ಲಿ ಕ್ಲೈಮ್ಯಾಕ್ಸಿಗೆ ಅಗತ್ಯವಾಗಿ ಬೇಕಾದ ‘ಕಲರ್’ಫುಲ್ ಬಣ್ಣದಲೋಕ ಸೃಷ್ಟಿಯಾಗಿದೆ.
ಈ ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಾಮನ್ ಆಗಿದ್ದಾರೆ. ನಿರ್ದೇಶಕರು ಮೊದಲ ಪ್ರಯತ್ನದಲ್ಲೇ ಯಶ ಸಾಧಿಸಿದ್ದಾರೆ. ನಿರೂಪಣೆಗೆ ಮತ್ತಷ್ಟು ವೇಗ ಸಿಕ್ಕಿದ್ದರೆ ಈ ಚಿತ್ರ ಮತ್ತಷ್ಟು ಖುಷಿ ಕೊಡುತ್ತಿತ್ತು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಬಲೆಗೆ ಪವಿತ್ರಾ ಗೌಡ ಬಿದ್ದಿದ್ದು ಹೇಗೆ? ಇವರು ಹೀರೋಯಿನ್‌ ಆಗಿದ್ದು ಯಾವಾಗ?

Actor Darshan: ಕಾಲೇಜು ದಿನಗಳಲ್ಲೇ ಬಣ್ಣದ ಜಗತ್ತಿನ ಕ್ರೇಜ್‌ ಹತ್ತಿಸಿಕೊಂಡು ನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಿಂಚಿದ್ದರು ಪವಿತ್ರಾ. ಬಿಷಪ್ ಕಾಟನ್ ಕಾಲೇಜಿನಲ್ಲಿ ಬಿಸಿಎ ಪದವಿ ಮುಗಿಸಿ ಮಾಡ್‌ಲಿಂಗ್‌ ಕ್ಷೇತ್ರಕ್ಕೆ ಬಂದರು. ಬೆಂಗಳೂರಿನಲ್ಲಿ ನಡೆದ ಮೂರು ಫ್ಯಾಷನ್ ಶೋಗಳಲ್ಲಿ ಮೂರು ಬಾರಿ ಶೋ ಟಾಪರ್ ಪಟ್ಟ ಗಿಟ್ಟಿಸಿಕೊಂಡವರು ಪವಿತ್ರಾ. ದರ್ಶನ್‌ ಬಲೆಗೆ ಬೀಳುವ ಮುಂಚೆ ಪವಿತ್ರಾ ಅವರು ಸಂಜಯ್ ಸಿಂಗ್ ಎಂಬುವರನ್ನು ಮದುವೆಯಾಗಿದ್ದರು. ಆದರೆ ಈಗ ಸಂಜಯ್‌ ಜತೆ ಪವಿತ್ರಾ ಜತೆಗಿಲ್ಲ.

VISTARANEWS.COM


on

Actor Darshan pavithra gowda relationship secrete
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renuka Swamy murder case) ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ (Actor Darshan) ಕಂಬಿ ಎಣಿಸುತ್ತಿದ್ದಾರೆ ನಟ ದರ್ಶನ್‌. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಎ7 ಆರೋಪಿ ಅನುಕುಮಾರ್​ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಪವಿತ್ರಾ ಗೌಡಗೆ ಅಶ್ಲೀಲ ಮೆಸೆಜ್‌ ಕಳುಹಿಸಿದ ಎನ್ನುವ ಕಾರಣಕ್ಕೆ ದರ್ಶನ್‌ ಹಾಗೂ ಗ್ಯಾಂಗ್‌ ಇದೀಗ ಅರೆಸ್ಟ್‌ ಆಗಿದೆ. ಹಾಗಾದ್ರೆ ಈ ಪವಿತ್ರಾ ಗೌಡ ಯಾರು? ದರ್ಶನ್‌ಗೆ ಪವಿತ್ರಾ ಲಿಂಕ್‌ ಆಗಿದ್ದು ಹೇಗೆ? ಪವಿತ್ರಾ ಮಾಜಿ ಪತಿ ಈಗೇನು ಮಾಡುತ್ತಿದ್ದಾರೆ ಎಂಬುದು ತಿಳಿಯಲು ಮುಂದೆ ಓದಿ.

ಕಾಲೇಜು ದಿನಗಳಲ್ಲೇ ಬಣ್ಣದ ಜಗತ್ತಿನ ಕ್ರೇಜ್‌ ಹತ್ತಿಸಿಕೊಂಡು ನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಿಂಚಿದ್ದರು ಪವಿತ್ರಾ. ಬಿಷಪ್ ಕಾಟನ್ ಕಾಲೇಜಿನಲ್ಲಿ ಬಿಸಿಎ ಪದವಿ ಮುಗಿಸಿ ಮಾಡ್‌ಲಿಂಗ್‌ ಕ್ಷೇತ್ರಕ್ಕೆ ಬಂದರು. ಬೆಂಗಳೂರಿನಲ್ಲಿ ನಡೆದ ಮೂರು ಫ್ಯಾಷನ್ ಶೋಗಳಲ್ಲಿ ಮೂರು ಬಾರಿ ಶೋ ಟಾಪರ್ ಪಟ್ಟ ಗಿಟ್ಟಿಸಿಕೊಂಡವರು ಪವಿತ್ರಾ. ಇವರು ಮೂಲತಃ ಬೆಂಗಳೂರಿನ ಜೆ ಪಿ ನಗರದವರು. ಭೂಗತ ದೊರೆ ಎಂದು ಗುರುತಿಸಿಕೊಂಡಿದ್ದ ಎಂ.ಪಿ ಜಯರಾಜ್ ಮಗ ನಾಯಕನಾಗಿದ್ದ ಸಿನಿಮಾದಲ್ಲಿ ಪವಿತ್ರಾ ನಾಯಕಿಯಾಗಿ ಕಂಗೊಳಿಸಿದ್ದರು. ಇದಾದ ಬಳಿಕ ಕೆಲವು ಸಿನಿಮಾಗಳಲ್ಲಿ ನಾಯಕಿಯಾದರು.

ಇದನ್ನೂ ಓದಿ: Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ʻಜಗ್ಗು ದಾದಾʼಗೆ ಲಿಂಕ್‌ ಆದ ಬೆಡಗಿ!

ʼಜಗ್ಗುದಾದಾʼ ಸಿನಿಮಾ ಮೂಲಕ ದರ್ಶನ್‌ಗೆ ಪರಿಚಯವಾದವರು ಈ ಪವಿತ್ರಾ. ಹೀಗೆ ಶುರುವಾದ ಸ್ನೇಹ ಆ ನಂತರ ಪ್ರೇಮಕ್ಕೆ ತಿರುಗಲು ಹೆಚ್ಚೇನು ಸಮಯ ಬೇಕಾಗಲಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ 2016ರಲ್ಲಿ ʼಜಗ್ಗುದಾದಾʼ ತೆರೆಗೆ ಬಂದ ಬೆನ್ನಲ್ಲಿಯೇ, 2017ರಲ್ಲಿ ʻತಾರಕ್ʼ ಚಿತ್ರದ ಬಿಡುಗಡೆಯ ಸಮಯದಲ್ಲಿ ಪವಿತ್ರಾ ಗೌಡ ತನ್ನ ಪ್ರಿಯಕರ ದರ್ಶನ್ ಜೊತೆ ಅತ್ಯಾಪ್ತವಾದ ಫೋಟೊವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಸಂಜಯ್ ಸಿಂಗ್‌ಗೆ ಡಿವೋರ್ಸ್‌ ಕೊಟ್ಟ ಪವಿತ್ರಾ

ದರ್ಶನ್‌ ಬಲೆಗೆ ಬೀಳುವ ಮುಂಚೆ ಪವಿತ್ರಾ ಅವರು ಸಂಜಯ್ ಸಿಂಗ್ ಎಂಬುವರನ್ನು ಮದುವೆಯಾಗಿದ್ದರು. ಆದರೆ ಈಗ ಸಂಜಯ್‌ ಜತೆ ಪವಿತ್ರಾ ಜತೆಗಿಲ್ಲ. ಡಿವೋರ್ಸ್‌ ಆಗಿದೆ. 12 ವರ್ಷಗಳ ಹಿಂದೆ ಬೆಂಗಳೂರು ತೊರೆದು ಹುಟ್ಟೂರು ಉತ್ತರ ಪ್ರದೇಶದಲ್ಲಿ ಸ್ವಂತ ಶಾಲೆ ನಡೆಸುತ್ತಿದ್ದಾರೆ ಸಂಜಯ್ ಸಿಂಗ್.

ಅರೆಸ್ಟ್‌ ಆದ ಬಳಿಕ ಸಂಜಯ್‌ ಸಿಂಗ್‌ ಹೇಳಿದ್ದೇನು?

ʻಪವಿತ್ರಾ ಕೊಲೆ ಕೇಸಿನಲ್ಲಿ ಮಿಂಗಲ್‌ ಆಗಿದ್ದಾಳೆ ಎಂದರೆ ನಂಲಾಗುತ್ತಿಲ್ಲ. ಪವಿತ್ರಾ ಇಲಿ ಕಂಡರೂ ಹೆದರುತ್ತಿದ್ದಳು. ಹೀಗಾಗಿ ಆಕೆ ಕೊಲೆ ಮಾಡಿದ್ದಾಳೆ ಅಂದರೆ ನಾನು ನಂಬಲ್ಲ. ಕೊಲೆ ನಡೆದ ಜಾಗದಲ್ಲಿ ದರ್ಶನ್ ಜೊತೆ ಪವಿತ್ರಾ ಇದ್ದಿರಬಹುದು ಅಷ್ಟೆ. ಆಕೆ ತುಂಬ ಸಾಫ್ಟ್‌ʼʼ ಎಂದಿದ್ದಾರೆ.

ಸಂಜಯ್‌ ಸಿಂಗ್‌-ಪವಿತ್ರಾ ದಾಂಪತ್ಯ ಜೀವನ ಹೇಗಿತ್ತು?

ʻಮೊದಲಿಗೆ ನಾನು ಐಟಿ ವೃತ್ತಿಯಲ್ಲಿ ಇದ್ದೆ. ಹಾಗೇ ಪವಿತ್ರಾಗೂ ಸಿನಿಮಾ ಮೇಲೆ ಹುಚ್ಚಿತ್ತು. ನಟಿಯಾಗುವ ಕನಸನ್ನು ಹೊತ್ತಿದ್ದಳು. ಆಗ ಮಗು ಕೂಡ ನಮಗೆ ಆಯ್ತು. ಬಳಿಕ ನಮ್ಮಿಬ್ಬರ ಮಧ್ಯೆ ಹೊಂದಾಣಿಕೆ ಹದಗೆಡುತ್ತಾ ಹೋಯ್ತು. ನಾನು ಮೂಲತಃ ಉತ್ತರ ಪ್ರದೇಶದವನು. 2013ರಲ್ಲಿ ಪರಸ್ಪರ ಒಪ್ಪಿಗೆ ಮೇರೆಗೆ ಡಿವೋರ್ಸ್‌ ಆಯ್ತು. ಅವಳು ಹೇಳುವ ಹಾಗೇ ದರ್ಶನ್‌ ಮದುವೆ ಕೂಡ ಆಗಿದ್ದಾಳಂತೆ. ಮಗು ಹುಟ್ಟಿದ ಬಳಿಕ ಮನಸ್ತಾಪವಾಗಿ ಒಂದು ವರ್ಷದ ಬಳಿಕ ಬೇರೆಯಾದೆವು. ಈಗಲೂ ನಾನು ಪವಿತ್ರಾ ಜತೆ ಸಂಪರ್ಕದಲ್ಲಿ ಇಲ್ಲ. ಅತ್ತೆ ಮಾವಗೆ ಪೋನ್ ಮಾಡಿದಾಗ ಮಗಳು ಇದ್ದಾಗ ಆಗ ಅವಳ ಬಳಿ ಮಾತನಾಡುತ್ತೇನೆ. ದರ್ಶನ್‌ ಮದುವೆ ಆಗಬೇಕು ಎಂದು ನನ್ನ ಬಳಿ ವಿಚ್ಛೇದನ ಪಡೆದುಕೊಂಡಳು. ಕಳೆದ 12 ವರ್ಷಗಳಲ್ಲಿ ನಾನು ಮಗಳ ಜೊತೆ ಎರಡು ಬಾರಿ ಮಾತನಾಡಿದ್ದು, 2017ರಲ್ಲಿ ಬೆಂಗಳೂರಿಗೆ ಬಂದು ಮಗಳನ್ನು ಭೇಟಿ ಮಾಡಿದ್ದೆʼʼ ಎಂದಿದ್ದಾರೆ.

ಇದೀಗ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಜೂನ್‌ 11ರಿಂದ ಜೂನ್‌ 17ರ ವರೆಗೆ ಪೊಲೀಸರು ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆದರೆ ಜೂನ್‌ 17ರಂದು ಸರ್ಕಾರಿ ರಜೆ ಇರುವುದರಿಂದ ಪೊಲೀಸರು ಎರಡು ದಿನಗಳ ಮೊದಲೇ ಕೋರಮಂಗಲದ ಜಡ್ಜ್​​​​ ನಿವಾಸಕ್ಕೆ ಇಬ್ಬರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಪೊಲೀಸರು ದರ್ಶನ್‌ ಅವರ ಪ್ರಾಥಮಿಕ ವಿಚಾರಣೆಯನ್ನು ಮುಗಿಸಿದ್ದಾರೆ. 

Continue Reading
Advertisement
Darshan Arrested vinish write special message for darshan fathers day
ಸ್ಯಾಂಡಲ್ ವುಡ್10 mins ago

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

INDW vs SAW
ಕ್ರೀಡೆ28 mins ago

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

Kannada New Movie Maryade Prashne out now
ಸ್ಯಾಂಡಲ್ ವುಡ್30 mins ago

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Darshan Arrested
ಕರ್ನಾಟಕ37 mins ago

Darshan Arrested: ಕೊಲೆ ಬಳಿಕ ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ; ಇಂದು ಸ್ಥಳ ಮಹಜರು!

Kotee Movie Review dolly dhanjay News In Kannada
ಸ್ಯಾಂಡಲ್ ವುಡ್40 mins ago

Kotee Movie Review: ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾದಾಗ?!

Illegal beef trade
ದೇಶ42 mins ago

ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Actor Darshan ACP Chandan Kumar work salute by people
ಕ್ರೈಂ54 mins ago

Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

Euro 2024
ಕ್ರೀಡೆ1 hour ago

Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

Bihar Women
ದೇಶ1 hour ago

ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

Kalaburagi News
ಕರ್ನಾಟಕ1 hour ago

Kalaburagi News: ಕಲಬುರಗಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು; ಮತ್ತೊಬ್ಬನ ಸ್ಥಿತಿ ಗಂಭೀರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ20 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌