Dengue Fever foods: ಡೆಂಗ್ಯು ಜ್ವರ ಬಂದಾಗ ಯಾವೆಲ್ಲ ಆಹಾರ ಸೇವನೆ ಬಹಳ ಮುಖ್ಯ ಗೊತ್ತೇ? - Vistara News

ಆರೋಗ್ಯ

Dengue Fever foods: ಡೆಂಗ್ಯು ಜ್ವರ ಬಂದಾಗ ಯಾವೆಲ್ಲ ಆಹಾರ ಸೇವನೆ ಬಹಳ ಮುಖ್ಯ ಗೊತ್ತೇ?

ಡೆಂಗ್ಯು ಜ್ವರ ಬಂದಾಗ ಯಾವ ಆಹಾರವನ್ನು ತೆಗೆದುಕೊಂಡರೆ ಒಳ್ಳೆಯದು, ಹಾಗೂ ಯಾವುದರ ಸೇವನೆ ಒಳ್ಳೆಯದಲ್ಲ ಎಂಬ ವಿಚಾರಗಳನ್ನು ತಿಳಿದಿರುವುದೂ ಬಹಳ ಮುಖ್ಯ. ಯಾವೆಲ್ಲ ಆಹಾರ ಡೆಂಗ್ಯುವಿನ ಸಮಯದಲ್ಲಿ ನಾವು ಸೇವಿಸಬೇಕು (Dengue Fever foods) ಎಂಬುದನ್ನು ನೋಡೋಣ.

VISTARANEWS.COM


on

Dengue Fever foods
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡೆಂಗ್ಯು ಎಂಬ ಜ್ವರ (Dengue Fever) ಆಗಾಗ ಎಲ್ಲೆಡೆ ಸದ್ದು ಮಾಡುತ್ತಲೇ ಇರುತ್ತದೆ. ಸೊಳ್ಳೆಯಿಂದ (Mosquito bite) ಬರುವ ಈ ಜ್ವರವೆಂದರೆ, ಹೆಚ್ಚಿದ ಉಷ್ಣಾಂಶ, ಮೈಮೇಲೆ, ಕೆಂಪನೆಯ ಸಣ್ಣ ಗುಳ್ಳೆಗಳೇಳುವುದು, ತಲೆನೋವು, ಮೈಕೈ ನೋವು ಇತ್ಯಾದಿ ಇತ್ಯಾದಿ ಲಕ್ಷಣಗಳೊಂದಿಗೆ ಬರುತ್ತದೆ. ಈ ಜ್ವರ ಎಲ್ಲ ಜ್ವರದಂತಲ್ಲ. ಅಪಾಯವಿಲ್ಲ ಎಂದುಕೊಂಡರೂ ಕೆಲವೊಮ್ಮೆ ಹಠಾತ್ತನೆ ಅಪಾಯಕ್ಕೆ ದೂಡುತ್ತದೆ. ಇಂತಹ ಸಂದರ್ಭ ನಾವು ಸೇವಿಸುವ ಆಹಾರದ ಬಗೆಗಿನ ಕಾಳಜಿ ಅತ್ಯಂತ ಅವಶ್ಯಕ. ಇದು ಬಂದಾಗ ಯಾವ ಆಹಾರವನ್ನು ತೆಗೆದುಕೊಂಡರೆ ಒಳ್ಳೆಯದು, ಹಾಗೂ ಯಾವುದರ ಸೇವನೆ ಒಳ್ಳೆಯದಲ್ಲ ಎಂಬ ವಿಚಾರಗಳನ್ನು ತಿಳಿದಿರುವುದೂ ಬಹಳ ಮುಖ್ಯ. ಹಾಗಾಗಿ, ಬನ್ನಿ, ಯಾವೆಲ್ಲ ಆಹಾರ ಡೆಂಗ್ಯುವಿನ ಸಮಯದಲ್ಲಿ ನಾವು ಸೇವಿಸಬೇಕು (Dengue Fever foods) ಎಂಬುದನ್ನು ನೋಡೋಣ.

1. ನೀರು: ನೀರು ಕುಡಿಯುವುದು ಅತ್ಯಂತ ಒಳ್ಳೆಯದು. ಡೆಂಗ್ಯು ಬಂದಾಗ ಸಾಧ್ಯವಾದಷ್ಟು ನೀರು ಕುಡಿಯುತ್ತಿದ್ದರೆ, ನಿರ್ಜಲೀಕರಣ ಇತ್ಯಾದಿ ಸಮಸ್ಯೆಗಳು ಬಾರದು. ಇದರಿಂದ ಜ್ವರದ ಉಷ್ಣಾಂಶವೂ ಕೂಡಾ ಗರಿಷ್ಠ ಮಟ್ಟಕ್ಕೇರುಬುದು ತಪ್ಪುತ್ತದೆ. ದೇಹದಲ್ಲಿ ನೀರಿನಂಶದ ಸಮತೋಲನವೂ ಕಾಯ್ದುಕೊಳ್ಳುತ್ತದೆ.

2. ಎಳನೀರು: ಎಳನೀರಿನಲ್ಲಿ ಸಾಕಷ್ಟು ಪ್ರಮಾಣದ ಎಲೆಕ್ಟ್ರೋಲೈಟ್‌ಗಳು ನೈಸರ್ಗಿಕವಾಗಿ ಸಮೃದ್ಧವಾಗಿರುವುದರಿಂದ ಜ್ವರದ ಸಂದರ್ಭ ದೇಹದಲ್ಲಿ ನಿರ್ಜಲೀಕರಣವಾಗದಂತೆ ಇದು ತಡೆಯುತ್ತದೆ. ಅಷ್ಟೇ ಅಲ್ಲ ಈ ಸಂದರ್ಭದಲ್ಲಿ, ದೇಹಕ್ಕೆ ಬೇಕಾದ ಎಲ್ಲ ಪೋಷಕಾಂಶಗಳನ್ನೂ ಅಂದರೆ, ಖನಿಜಾಂಶಗಳಾದ ಪೊಟಾಶಿಯಂ, ಸೋಡಿಯಂ, ಕ್ಯಾಲ್ಶಿಯಂಗಳನ್ನು ಒದಗಿಸಿ ಸಹಾಯ ಮಾಡುತ್ತದೆ.

3. ಹಣ್ಣುಗಳು: ಹಣ್ಣುಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಿಟಮಿನ್‌ ಹಾಗೂ ಖನಿಜ ಲವಣಗಳೂ ಇರುವುದರಿಂದ ಡೆಂಗ್ಯು ಸಂದರ್ಭ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇವುಗಳನ್ನು ತಿನ್ನುವುದು ಬಹಳ ಮುಖ್ಯ. ಹಣ್ಣುಗಳಲ್ಲಿರುವ ಆಂಟಿ ಇನ್‌ಫ್ಲಮೇಟರಿ ಗುಣಗಳು ರೋಗಗಳ ವಿರುದ್ಧ ಕೆಲಸ ಮಾಡುತ್ತವೆ. ಅಷ್ಟೇ ಅಲ್ಲ, ಬಾಳೆಹಣ್ಣು, ಪಪ್ಪಾಯಿ, ಕಲ್ಲಂಗಡಿಯಂತಹ ಹಣ್ಣುಗಳನ್ನು ಸುಲಭವಾಗಿ ಜೀರ್ಣ ಮಾಡಬಹುದಾದ್ದರಿಂದ ಹಾಗೂ ಇವುಗಳಲ್ಲಿ ಹೇರಳವಾಗಿ ಪೋಷಕಾಂಶಗಳು ಬಹುಬೇಗನೆ ದೇಹ ಸೇರುವುದರಿಂದ ಹಣ್ಣುಗಳನ್ನು ತಿನ್ನುವುದು ಬಹಳ ಮುಖ್ಯ.

4. ಹರ್ಬಲ್‌ ಚಹಾಗಳು: ಶುಂಠಿ, ಕ್ಯಾಮೋಮೈಲ್‌ ಮತ್ತಿತರ ಹರ್ಬಲ್‌ ಚಹಾಗಳು ಜ್ವರದ ಸಂದರ್ಭ ಕುಡಿದಾಗ ಹಾಯೆನಿಸುವಂತೆ ಮಾಡಬಲ್ಲ ಶಕ್ತಿ ಇದೆ. ಸಾಮಾನ್ಯ ಚಹಾ, ಕಾಫಿಗಳು ರುಚಿಯೆನಿಸಿದರೂ, ಜ್ವರದ ಸಂದರ್ಭ ಇಂತಹ ಹರ್ಬಲ್‌ ಚಹಾಗಳು ಒಳ್ಳೆಯದು. ಶುಂಠಿ ಚಹಾದಲ್ಲಿ, ಆಂಟಿ ಇನ್‌ಫ್ಲಮೇಟರಿ ಗುಣಗಳು ಹೇರಳವಾಗಿ ಇರುವುದರಿಂದ ಜ್ವರದ ಹಲವು ಲಕ್ಷಣಗಳನ್ನು ಗುಣಪಡಿಸುವಲ್ಲಿಯೂ ಇದು ಸಹಾಯ ಮಾಡುತ್ತದೆ.

5. ಧಾನ್ಯಗಳು: ಧಾನ್ಯಗಳಿಂದ ಮಾಡಿದ ಆಹಾರಗಳಾದ ಅನ್ನ, ಓಟ್ಸ್‌, ಇಡ್ಲಿ, ದೋಸೆ, ಉಪ್ಪಿಟ್ಟು, ದಲಿಯಾ ಮತ್ತಿತರ ಆಹಾರಗಳ ಸೇವನೆ ಒಳ್ಳೆಯದು. ಇದರಿಂದ ದೇಹಕ್ಕೆ ಬೇಕಾದ ಶಕ್ತಿ ಸರಿಯಾದ ಪ್ರಮಾಣದಲ್ಲಿ ಸಿಗುತ್ತದೆ. ಸರಿಯಾಗಿ ಬೇಯಿಸಿದ, ಹೆಚ್ಚು ಅನಗತ್ಯ ಮಸಾಲೆಗಳಿಲ್ಲದ, ಹದವಾದ ತಿನಿಸುಗಳು, ಹಬೆಯಲ್ಲಿ ಬೇಯಿಸಿದ ತಿಂಡಿಗಳು ಇಂತಹ ಸಂದರ್ಭ ಅತ್ಯಂತ ಒಳ್ಳೆಯದು.

6. ಹಸಿರು ತರಕಾರಿಗಳು: ಹಸಿರು ತರಕಾರಿಗಳಲ್ಲಿ ಸಾಕಷ್ಟು ರೋಗ ನಿರೋಧಕ ಶಕ್ತಿಯೂ, ವಿಟಮಿನ್‌, ಖನಿಜಾಂಶಗಳು ಹಾಗೂ ಲವಣಗಳೂ ಇರುವುದರಿಂದ ಇವುಗಳ ಸೇವನೆ ಅತ್ಯಂತ ಮುಖ್ಯ. ಸಹಜವಾಗಿ ಸುಲಭವಾಗಿ ಕರಗಬಲ್ಲ ಹಸಿರು ತರಕಾರಿಗಳು, ಬೇಯಿಸಿ ತಿನ್ನಬಹುದಾದ, ಸೂಪ್‌ ಮಾಡಿ ಕುಡಿಯಬಹುದಾದ ಹೀಗೆ, ಹಲವು ಬಗೆಯಲ್ಲಿ ಹಸಿರು ತರಕಾರಿಗಳನ್ನು ಆದಷ್ಟು ಹೊಟ್ಟೆ ಸೇರುವಂತೆ ಮಾಡಬಹುದು.

7. ಪ್ರೊಟೀನ್‌: ಪ್ರೊಟೀನ್‌ನಿಂದ ಸಮೃದ್ಧ ಆಹಾರ ಈ ಸಂದರ್ಭ ಅತ್ಯಂತ ಅಗತ್ಯ. ಚಿಕನ್‌, ಟೋಫು, ಮೀನು ಇತ್ಯಾದಿಗಳನ್ನೂ ಹಿತಮಿತವಾಗಿ ಸೇವಿಸಿ ಪ್ರೊಟೀನ್‌ನ ಪೂರೈಕೆ ಮಾಡಬಹುದು. ಚೆನ್ನಾಗಿ ಬೇಯಿಸಿದ, ಸಮೃದ್ಧ ಆಹಾರಗಳನ್ನೂ ಸೇವಿಸುವ ಮೂಲಕ ದೇಹದಲ್ಲಿ ಮತ್ತೆ ಮಾಂಸಖಂಡಗಳು ಬಲಗೊಂಡು ಆರೋಗ್ಯ ಹೊಂದುವತ್ತ ಹೆಜ್ಜೆ ಹಾಕಬಹುದು.

ಇದನ್ನೂ ಓದಿ: Dengue problem : ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗೆ ಪ್ರಕರಣ; ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದ ಸಿಎಂ ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಬೆಳ್ಳುಳ್ಳಿ ಎಸಳು ಪದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ ಎಂಬುದರ ಕುರಿತು ಅವರು ಹೇಳಿರುವುದು ವೈರಲ್ ಆಗಿದೆ.

VISTARANEWS.COM


on

By

Priyanka Chopra
Koo

ಬಾಲಿವುಡ್ ನಟಿ (Bollywood actress) ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ತಮ್ಮ ಪಾದಗಳಿಗೆ ಬೆಳ್ಳುಳ್ಳಿಯ (Garlic) ಎಸಳುಗಳನ್ನು ಉಜ್ಜಿಕೊಳ್ಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿದ್ದು, ಹಲವಾರು ಬಳಕೆದಾರರು ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ. ಸಾಕಷ್ಟು ಮಂದಿ ಬೆಳ್ಳುಳ್ಳಿಯನ್ನು ಉಜ್ಜಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾ ಪ್ರಸ್ತುತ ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರ ಪೋಸ್ಟ್ ನೊಂದಿಗೆ ಇದ್ದ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಚಿತ್ರದ ಸೆಟ್‌ಗಳಲ್ಲಿ ಪ್ರಿಯಾಂಕಾಗೆ ಉಂಟಾದ ಗಮನಾರ್ಹ ಗಾಯಗಳನ್ನು ಇದು ಬಹಿರಂಗಪಡಿಸಿದೆ. ನಟಿ ಕೆಲವು ಎಸಳು ಬೆಳ್ಳುಳ್ಳಿ ಮತ್ತು ಲವಂಗವನ್ನು ಬಲವಾಗಿ ಅವಳ ಪಾದಗಳಿಗೆ ಉಜ್ಜುತ್ತಿರುವ ವಿಡಿಯೋ ಇದರಲ್ಲಿದೆ. ಇದು ವಾಸ್ತವವಾಗಿ ಕೆಲವು ಖಾಯಿಲೆಗಳನ್ನು ಎದುರಿಸಲು ಅನೇಕರು ಬಳಸುವ ಸಾಂಪ್ರದಾಯಿಕ ಔಷಧವಾಗಿದೆ.

ಬೆಳ್ಳುಳ್ಳಿಯನ್ನು ಪಾದಗಳಿಗೆ ಉಜ್ಜುವುದು ಏಕೆ?

ನಟಿ ಪ್ರಿಯಾಂಕಾ ಹಂಚಿಕೊಂಡ್ಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಇದು ವೈಜ್ಞಾನಿಕ ಅಂಶಗಳ ಬಗ್ಗೆಯೂ ಚರ್ಚೆಯನ್ನು ಹುಟ್ಟು ಹಾಕಿತ್ತು.

ಟಿಸರ್ ಮತ್ತು ಇನ್‌ಸ್ಟಿಟ್ಯೂಟ್ ವರದಿಯ ಪ್ರಕಾರ ಈ ಪ್ರಕ್ರಿಯೆಯ ಸಾಕಷ್ಟು ಪರಿಣಾಮಕಾರಿಯಾಗಿದೆ. ಬೆಳ್ಳುಳ್ಳಿ ಮತ್ತು ಲವಂಗವನ್ನು ಕತ್ತರಿಸಿ ಪುಡಿ ಮಾಡಿದಾಗ ಇದು ಅಲಿನ್ ಅನ್ನು ಅಲಿನೇಸ್ ಕಿಣ್ವದೊಂದಿಗೆ ಸೇರುವಂತೆ ಮಾಡುತ್ತದೆ. ಇದು ಅಲಿಸಿನ್ ಎಂಬ ಹೊಸ ಸಂಯುಕ್ತವನ್ನು ಸೃಷ್ಟಿಸುತ್ತದೆ. ಬೆಳ್ಳುಳ್ಳಿ ಮತ್ತು ಪುಡಿ ಮಾಡಿದ ಲವಂಗವನ್ನು ಪಾದಗಳ ಮೇಲೆ ಉಜ್ಜಿದಾಗ ಅದು ದೇಹದಲ್ಲಿ ರಕ್ತಪ್ರವಾಹ ಚೆನ್ನಾಗಿ ನಡೆಯಲು ಸಹಾಯ ಮಾಡುತ್ತದೆ.

ವೆರಿವೆಲ್ ಹೆಲ್ತ್ ವರದಿಯ ಪ್ರಕಾರ, ಇದು ಕೆಲವು ರೀತಿಯ ಕ್ಯಾನ್ಸರ್‌ಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಮಧುಮೇಹ, ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ವ್ಯಾಯಾಮದ ಅನಂತರ ಸ್ನಾಯುವಿನ ಚೇತರಿಕೆಗೆ ಸಹಾಯ ಮಾಡುತ್ತದೆ ಮತ್ತು ಸೋಂಕುಗಳಿಂದ ರಕ್ಷಿಸುತ್ತದೆ.


ಪ್ರಯೋಜನಗಳೇನು?

ಕ್ಲೀವ್ ಲ್ಯಾಂಡ್ ಕ್ಲಿನಿಕ್ ವರದಿಯ ಪ್ರಕಾರ, ಬೆಳ್ಳುಳ್ಳಿಯು ಉರಿಯೂತದ ಗುಣಲಕ್ಷಣಗಳ ಜೊತೆಗೆ ಅಪಾರವಾದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಕೀಲು ಮತ್ತು ಸ್ನಾಯುಗಳಲ್ಲಿನ ನೋವನ್ನು ನಿವಾರಿಸಲು ಇದು ಸೂಕ್ತವಾಗಿದೆ. ಬೆಳ್ಳುಳ್ಳಿ ಲವಂಗವನ್ನು ಮೊಡವೆಗಳ ಮೇಲೆ ಉಜ್ಜುವುದರಿಂದ ಮೊಡವೆಗಳನ್ನು ದೂರಮಾಡಬಹುದು. ಆದರೂ ಅದು ನಿಮ್ಮ ಚರ್ಮಕ್ಕೆ ಸೂಕ್ತವೇ ಎಂಬುದನ್ನು ತಿಳಿದುಕೊಳ್ಳಲು ಚರ್ಮಶಾಸ್ತ್ರಜ್ಞರನ್ನು ಸಂಪರ್ಕಿಸಬೇಕು.

ಕೆಂಪು ರಕ್ತ ಕಣಗಳು ಬೆಳ್ಳುಳ್ಳಿಯಲ್ಲಿರುವ ಸಲ್ಫರ್ ಅನ್ನು ಹೈಡ್ರೋಜನ್ ಸಲ್ಫೈಡ್ ಅನಿಲವಾಗಿ ಪರಿವರ್ತಿಸುತ್ತವೆ. ಇದು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಅಂತಿಮವಾಗಿ ಬೆಳ್ಳುಳ್ಳಿ ಕ್ರೀಡಾಪಟುವಿನ ಪಾದಕ್ಕೆ ಚಿಕಿತ್ಸೆ ನೀಡಲು ಉತ್ತಮ ಪ್ರತಿವಿಷವಾಗಿದೆ. ಇದು ಶಿಲೀಂಧ್ರದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿಯನ್ನು ಸತತವಾಗಿ ಆಹಾರದಲ್ಲಿ ಸೇರಿಸುವುದು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನವನ್ನು ಕೊಡುತ್ತದೆ. ಬೆಳ್ಳುಳ್ಳಿಯ ಎಣ್ಣೆ ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ಹೆಲ್ತ್‌ಲೈನ್ ವರದಿಯ ಪ್ರಕಾರ ಪ್ರತಿ ಊಟದಲ್ಲಿ 1 ಎಸಳಿಗಿಂತ ಹೆಚ್ಚು ಬೆಳ್ಳುಳ್ಳಿಯನ್ನು ಸೇವಿಸಲು ಪ್ರಯತ್ನಿಸುವುದು ಆರೋಗ್ಯಕ್ಕೆ ಒಳ್ಳೆಯದು.

ಪ್ರಿಯಾಂಕಾ ಬಳಸುತ್ತಿರುವುದು ಏಕೆ?

ಬಳಕೆದಾರರ ಕಾಮೆಂಟ್ ಗಳಿಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಚೋಪ್ರಾ ಅವರು, ಇದು ಉರಿಯೂತ ಮತ್ತು ದೇಹದ ತಾಪವನ್ನು ಇಳಿಸಲು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

Continue Reading

ಆರೋಗ್ಯ

Seeds For Weight Loss: ತೂಕ ಇಳಿಸಿಕೊಳ್ಳಬೇಕೆ? ಈ 7 ಬೀಜಗಳನ್ನು ನಿಯಮಿತವಾಗಿ ಸೇವಿಸಿ

seeds for weight loss: ಬೀಜಗಳ ಸೇವನೆಯಿಂದಲೂ ತೂಕ ಇಳಿಸಬಹುದು. ಆದರೆ, ಯಾವ ಬೀಜಗಳನ್ನು ತಿನ್ನುವುದರಿಂದ ತೂಕವನ್ನು ನಿಮ್ಮ ಹತೋಟಿಗೆ ತರಲು ಪ್ರಯತ್ನಿಸಬಹುದು ಎಂಬುದು ಮಾತ್ರ ತಿಳಿದಿರಬೇಕು. ಅಷ್ಟೇ ಅಲ್ಲ, ಈ ಬೀಜಗಳಲ್ಲಿರುವ ಎಲ್ಲ ಬಗೆಯ ಪೋಷಕಾಂಶಗಳಿಂದ ಆರೋಗ್ಯಕರ ವಿಧಾನದಲ್ಲಿಯೇ ತೂಕ ಇಳಿಸುವುದು ಬಹಳ ಮುಖ್ಯವಾದದ್ದು. ಯಾವ ಬೀಜಗಳ ಸೇವನೆಯಿಂದ ನಿಮ್ಮ ತೂಕ ಆರೋಗ್ಯಕರವಾಗಿಯೇ ಇಳಿಯುತ್ತದೆ ಎಂಬುದನ್ನು ನೋಡೋಣ.

VISTARANEWS.COM


on

Seeds For Weight Loss
Koo

ತೂಕ ಇಳಿಸುವುದು ಎಂಬುದು ಅತ್ಯಂತ ಶಿಸ್ತು ಬೇಡುವ ಪಯಣ. ಎಷ್ಟೇ ಶಿಸ್ತಿನಿಂದ ಇದ್ದರೂ ನಾಲಿಗೆ ರುಚಿಯನ್ನು ಬೇಡುತ್ತದೆ. ರುಚಿಯ ಜೊತೆಗೂ ದೇಹವನ್ನು ಆರೋಗ್ಯವಾಗಿಡಬಹುದು ಹಾಗೂ ದೇಹದ ತೂಕವನ್ನು ಹತೋಟಿಗೆ ತರಬಹುದು ಎಂದರೆ ಆಗ ನೆನಪಾಗುವುದು ಈ ಬೀಜಗಳು. ಹೌದು ಬೀಜಗಳ ಸೇವನೆಯಿಂದಲೂ ತೂಕ ಇಳಿಸಬಹುದು (seeds for weight loss). ಆದರೆ, ಯಾವ ಬೀಜಗಳನ್ನು ತಿನ್ನುವುದರಿಂದ ತೂಕವನ್ನು ನಿಮ್ಮ ಹತೋಟಿಗೆ ತರಲು ಪ್ರಯತ್ನಿಸಬಹುದು ಎಂಬುದು ಮಾತ್ರ ತಿಳಿದಿರಬೇಕು. ಅಷ್ಟೇ ಅಲ್ಲ, ಈ ಬೀಜಗಳಲ್ಲಿರುವ ಎಲ್ಲ ಬಗೆಯ ಪೋಷಕಾಂಶಗಳಿಂದ ಆರೋಗ್ಯಕರ ವಿಧಾನದಲ್ಲಿಯೇ ತೂಕ ಇಳಿಸುವುದು ಬಹಳ ಮುಖ್ಯವಾದದ್ದು. ಬನ್ನಿ, ಯಾವ ಬೀಜಗಳ ಸೇವನೆಯಿಂದ ನಿಮ್ಮ ತೂಕ ಆರೋಗ್ಯಕರವಾಗಿಯೇ ಇಳಿಯುತ್ತದೆ ಎಂಬುದನ್ನು ನೋಡೋಣ.

Chia Seeds Black Foods

ಚಿಯಾ ಬೀಜಗಳು

ಚಿಯಾ ಬೀಜಗಳು ಪೋಷಕಾಂಶಗಳ ಪವರ್‌ ಹೌಸ್‌ ಇದ್ದ ಹಾಗೆ. ಇವುಗಳಲ್ಲಿ ಬಹುತೇಕ ಎಲ್ಲ ಪೋಷಕಾಂಶಗಳೂ ಇದ್ದು, ನಾರಿನಂಶವೂ ಇರುವುದರಿಂದ ತೂಕ ಇಳಿಕೆಗೆ ನೆರವಾಗುತ್ತದೆ, ನೀರಿನಲ್ಲಿ ನೆನೆ ಹಾಕಿದಾಗ ಚಿಯಾ ಬೀಜಗಳು ಉಬ್ಬಿಕೊಂಡು ಜೆಲ್‌ನಂತ ಕವಚವನ್ನು ಪಡೆದುಕೊಳ್ಳುತ್ತದೆ. ಹಾಗೆಯೇ ತಿಂದರೂ ದೇಹದಲ್ಲಿರುವ ನೀರಿನಂಶವನ್ನು ಪಡೆದುಕೊಂಡು ಉಬ್ಬುತ್ತದೆ. ಹಾಗಾಗಿ ಇದು ಹೊಟ್ಟೆ ತುಂಬಿದ ಭಾವವನ್ನು ನೀಡುತ್ತದೆ. ಇದರಲ್ಲಿರುವ ಕರಗಬಲ್ಲ ನಾರಿನಂಶವು ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ.

Flaxseed Different Types of Seeds with Health Benefits

ಅಗಸೆ ಬೀಜಗಳು

ಅಗಸೆ ಬೀಜ ಅಥವಾ ಫ್ಲ್ಯಾಕ್‌ಸೀಡ್‌ಗಳಲ್ಲಿ ಒಮೆಗಾ ೩ ಫ್ಯಾಟಿ ಆಸಿಡ್‌ಗಳಿದ್ದು, ಜೊತೆಗೆ ಕರಗಬಲ್ಲ ನಾರಿನಂಶವೂ ಇದೆ. ಇದು ತೂಕ ಇಳಿಕೆಗೆ ಪೂರಕ. ಒಮೆಗಾ ೩ ಫ್ಯಾಟಿ ಆಸಿಡ್‌ಗಳು ದೇಹದ ಉರಿಯೂತವನ್ನೂ ಕಡಿಮೆಕೊಳಿಸಿದರೆ, ಕರಗಬಲ್ಲ ನಾರಿನಂಶವು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹೀಗಾಗಿ ಹಸಿವು ನಿಯಂತ್ರಣದಲ್ಲಿದ್ದು ಅತಿಯಾಗಿ ತಿನ್ನುವುದು ಹತೋಟಿಗೆ ಬರುತ್ತದೆ.

Hemp seed Different Types of Seeds with Health Benefits

ಹೆಂಪ್‌ ಬೀಜಗಳು

ಹೆಂಪ್‌ ಬೀಜಗಳಲ್ಲಿ ಸಾಕಷ್ಟು ಪ್ರೊಟೀನ್‌ ಇರುವುದರಿಂದ ತೂಕ ಇಳಿಸುವ ಮಂದಿಗೆ ಇದು ಪೂರಕ. ಪ್ರೊಟೀನ್‌ ಕರಗಲು ಹೆಚ್ಚು ಶಕ್ತಿ ಬೇಕು. ಹೀಗಾಗಿ ನಿಮ್ಮ ಕ್ಯಾಲರಿ ಇಲ್ಲಿ ಹೆಚ್ಚು ಬಳಸಲ್ಪಡುತ್ತದೆ. ಪ್ರೊಟೀನ್‌ನಿಂದ ಮಾಂಸಖಂಡಗಳು ಬಲವರ್ಧನೆಗೊಳ್ಳುವ ಜೊತೆಗೆ, ಈ ಬೀಜಗಳಲ್ಲಿರುವ ಫ್ಯಾಟಿ ಆಸಿಡ್‌ನ ಪರಿಣಾಮ ಹಸಿವೂ ಕೂಡಾ ನಿಯಂತ್ರಣದಲ್ಲಿರುತ್ತದೆ.

Pumpkin seeds in white bowl Pumpkin Seeds Benefits

ಕುಂಬಳಕಾಯಿ ಬೀಜ

ಕುಂಬಳಕಾಯಿ ಬೀಜದಲ್ಲಿ ಪ್ರೊಟೀನ್‌, ನಾರಿನಂಶ ಹಾಗೂ ಆರೋಗ್ಯಕರ ಕೊಬ್ಬು ಶ್ರೀಮಂತವಾಗಿದೆ. ಇದರಿಂದ ಹೊಟ್ಟೆ ತುಂಬಿದ ಅನುಭವವಾಗಿ ಹಸಿವು ನಿಯಂತ್ರಣದಲ್ಲಿರುತ್ತದೆ. ಪರಿಣಾಮ ಅತಿಯಾಗಿ ತಿನ್ನುವುದಕ್ಕೆ ಬ್ರೇಕ್‌ ಬಿದ್ದು ತೂಕ ಇಳಿಯುತ್ತದೆ. ಇದರಲ್ಲಿ ಮೆಗ್ನೀಶಿಯಂ ಕೂಡಾ ಇದ್ದು, ಇದರಿಂದ ಇನ್ಸುಲಿನ್‌ ಮಟ್ಟವು ಸಮತೋಲನದಲ್ಲಿರುತ್ತದೆ.

Sunflower seed Zinc Foods It also provides protein, minerals and antioxidants along with zinc

ಸೂರ್ಯಕಾಂತಿ ಬೀಜ

ಸೂರ್ಯಕಾಂತಿ ಬೀಜಗಳಲ್ಲಿ ಪ್ರೊಟೀನ್‌, ನಾರಿನಂಶ, ಖನಿಜಾಂಶಗಳ ಜೊತೆಗೆ ಎಲ್ಲ ಬಗೆಯ ಪೋಷಕಾಂಶಗಳೂ ಇವೆ. ಇದರಲ್ಲಿರುವ ಪ್ರೊಟೀನ್‌ ಹಾಗೂ ನಾರಿನಂಶ ಹೆಚ್ಚು ಹಸಿವಾಗದಂತೆ ತಡೆಯುವುದರಿಂದ ತೂಕ ಇಳಿಯುತ್ತದೆ. ಇದರಲ್ಲಿರುವ ವಿಟಮಿನ್‌ ಇ ಹಾಗೂ ಸೆಲೆನಿಯಂ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಚಯಾಪಚಯ ಕ್ರಿಯೆ ಸರಾಗವಾಗಿ ಆಗುತ್ತದೆ.

Imager Of Sesame Benefits

ಎಳ್ಳು

ಎಳ್ಳಿನಲ್ಲಿ ಲಿಗ್ನೆನ್‌ ಎಂಬ ಸಸ್ಯಾಧಾರಿತ ಕಾಂಪೌಂಡ್‌ ಇದ್ದು ಇದು ದೇಹದಲ್ಲಿರುವ ಕೊಬ್ಬಿನ ಅಂಶವನ್ನು ಕಡಿಮೆ ಮಾಡುತ್ತದೆ. ಎಳ್ಳಿನಲ್ಲಿ ಕ್ಯಾಲ್ಶಿಯಂ ಹಾಗೂ ಪ್ರೊಟೀನ್‌ ಹೇರಳವಾಗಿದೆ. ಒಳ್ಳೆಯ ಕೊಬ್ಬು ಕೂಡಾ ಇದ್ದು, ಇದರಿಂದ ಹೊಟ್ಟೆ ತುಂಬಿದ ಭಾವ ನೀಡುತ್ತದೆ.

Parasite Removal Papaya Seeds Benefits

ಪಪ್ಪಾಯಿ ಬೀಜ

ಪಪ್ಪಾಯಿ ಬೀಗಳಲ್ಲಿ ಜೀರ್ಣಕಾರಿ ಕಿಣ್ವಗಳು ಹೇರಳವಾಗಿದ್ದು, ಇದು ತೂಕ ಇಳಿಕೆಗೆ ಸಾಕಷ್ಟು ಸಹಾಯ ಮಾಡುತ್ತದೆ. ಈ ಕಿಣ್ವಗಳು ದೇಹದಲ್ಲಿರುವ ಪ್ರೊಟೀನ್‌ ಅನ್ನು ಕರಗಿಸಲು ಸಹಾಯ ಮಾಡುವ ಮೂಲಕ ಆರೋಗ್ಯಕಾರಿ ಜೀರ್ಣಕ್ರಿಯೆಗೆ ಸಹಕಾರ ನೀಡುತ್ತದೆ. ಹೊಟ್ಟೆಯುಬ್ಬರವನ್ನೂ ಇದು ಕಡಿಮೆ ಮಾಡುತ್ತದೆ. ಕಡಿಮೆ ಕ್ಯಾಲರಿಯ ಪಪ್ಪಾಯ ಬೀಜಗಳು ತೂಕ ಇಳಿಕೆಗೆ ತಮ್ಮದೇ ಆದ ಕಾಣಿಕೆ ನೀಡುತ್ತವೆ.

ಇದನ್ನೂ ಓದಿ: Oats For Weight Loss: ಓಟ್ಸ್‌ ತಿನ್ನುವುದರಿಂದ ತೂಕ ಇಳಿಯುತ್ತದೆಯೇ? ಉತ್ತರ ಇಲ್ಲಿದೆ

Continue Reading

ಆರೋಗ್ಯ

Weight Loss Tips: ದಕ್ಷಿಣ ಭಾರತೀಯ ಶೈಲಿಯ ಬೆಳಗಿನ ತಿಂಡಿಯಲ್ಲೂ ನೀವು ತೂಕ ಇಳಿಸಬಹುದು!

Weight Loss Tips: ತೂಕ ಇಳಿಸುವುದೆಂದರೆ, ನಾಲಿಗೆಯ ಚಪಲಕ್ಕೆ ಗುಡ್‌ಬೈ ಹೇಳಿ, ರುಚಿಯಿಲ್ಲದ ಆಹಾರಗಳನ್ನು ಹಿತಮಿತವಾಗಿ ತಿನ್ನುವುದು ಎಂಬ ನಂಬಿಕೆ ಬಹುತೇಕ ಎಲ್ಲರದ್ದು. ಆದರೆ, ಇತ್ತೀಚೆಗಿನ ದಿನಗಳಲ್ಲಿ ತೂಕ ಇಳಿಕೆಯ ಬಗೆಗಿನ ಈ ಎಲ್ಲ ನಂಬಿಕೆಗಳನ್ನೂ ಡಯಟೀಶಿಯನ್‌ಗಳು ಸುಳ್ಳಾಗಿಸಿದ್ದಾರೆ. ಈ ನಿಟ್ಟಿನಲ್ಲಿ, ಹಲವು ಪ್ರಯೋಗಗಳೂ ಕೂಡಾ ಆಗುತ್ತಲೇ ಇವೆ. ನೀವು ಮೆಚ್ಚುವ, ನಿತ್ಯವೂ ತಿನ್ನುವ ಆಹಾರದಲ್ಲಿಯೇ ಕೊಂಚ ಮಾರ್ಪಾಡುಗಳನ್ನು ಮಾಡಿಕೊಂಡು ಸರಿಯಾದ ಆರೋಗ್ಯಕರ ಜೀವನಶೈಲಿ ಹಾಗೂ ವ್ಯಾಯಾಮಗಳನ್ನು ಮಾಡಿಕೊಂಡಿದ್ದರೆ ತೂಕ ಖಂಡಿತವಾಗಿಯೂ ಇಳಿಯುತ್ತದೆ ಎನ್ನುತ್ತಾರೆ ಇವರು.

VISTARANEWS.COM


on

Weight Loss Tips
Koo

ತೂಕ ಇಳಿಯಬೇಕು (Weight Loss Tips), ಆದರೆ, ಆಹಾರ ರುಚಿಯಾಗಿರಬೇಕು ಎಂದು ಯಾರಿಗೆ ತಾನೇ ಅನಿಸುವುದಿಲ್ಲ ಹೇಳಿ! ಯಾಕೆಂದರೆ, ತೂಕ ಇಳಿಸುವುದೆಂದರೆ, ನಾಲಿಗೆಯ ಚಪಲಕ್ಕೆ ಗುಡ್‌ಬೈ ಹೇಳಿ, ರುಚಿಯಿಲ್ಲದ ಆಹಾರಗಳನ್ನು ಹಿತಮಿತವಾಗಿ ತಿನ್ನುವುದು ಎಂಬ ನಂಬಿಕೆ ಬಹುತೇಕ ಎಲ್ಲರದ್ದು. ಆದರೆ, ಇತ್ತೀಚೆಗಿನ ದಿನಗಳಲ್ಲಿ ತೂಕ ಇಳಿಕೆಯ ಬಗೆಗಿನ ಈ ಎಲ್ಲ ನಂಬಿಕೆಗಳನ್ನೂ ಡಯಟೀಶಿಯನ್‌ಗಳು ಸುಳ್ಳಾಗಿಸಿದ್ದಾರೆ. ಈ ನಿಟ್ಟಿನಲ್ಲಿ, ಹಲವು ಪ್ರಯೋಗಗಳೂ ಕೂಡಾ ಆಗುತ್ತಲೇ ಇವೆ. ನೀವು ಮೆಚ್ಚುವ, ನಿತ್ಯವೂ ತಿನ್ನುವ ಆಹಾರದಲ್ಲಿಯೇ ಕೊಂಚ ಮಾರ್ಪಾಡುಗಳನ್ನು ಮಾಡಿಕೊಂಡು ಸರಿಯಾದ ಆರೋಗ್ಯಕರ ಜೀವನಶೈಲಿ ಹಾಗೂ ವ್ಯಾಯಾಮಗಳನ್ನು ಮಾಡಿಕೊಂಡಿದ್ದರೆ ತೂಕ ಖಂಡಿತವಾಗಿಯೂ ಇಳಿಯುತ್ತದೆ ಎನ್ನುತ್ತಾರೆ ಇವರು. ಇದನ್ನು ಹಲವರು ಮಾಡಿ ತೋರಿಸಿದ್ದಾರೆ ಕೂಡ.

Weight Loss Slim Body Healthy Lifestyle Concept Benefits Of Saffron

ಇತ್ತೀಚೆಗೆ ದಕ್ಷಿಣ ಭಾರತೀಯ ಶೈಲಿಯ ಅಡುಗೆಗಳು, ಬೆಳಗಿನ ಉಪಹಾರಗಳು ಸಾಕಷ್ಟು ಪ್ರಸಿದ್ಧಿಗೆ ಬರುತ್ತಿದೆ. ದಕ್ಷಿಣ ಭಾರತೀಯ ಶೈಲಿಯ ಬೆಳಗ್ಗಿನ ಉಪಾಹಾರ ತೂಕ ಇಳಿಕೆಗೆ ಪೂರಕವಾಗಿದ್ದು, ಹಲವರು ಈಚೆಗೆ ಈ ಶೈಲಿಯ ಆಹಾರಕ್ರಮಕ್ಕೆ ವಾಲುತ್ತಿದ್ದಾರೆ ಕೂಡ. ಇದರಿಂದ ನಮ್ಮ ದೇಹಕ್ಕೆ ಅತ್ಯುತ್ತಮ ಪೋಷಣೆ ಲಭ್ಯವಾಗುತ್ತದೆ. ಹೀಗಾಗಿ ದಕ್ಷಿಣ ಭಾರತೀಯರಾದ ನಾವು ತೂಕ ಇಳಿಸಬೇಕಿದ್ದರೆ, ನಮ್ಮ ನಾಲಿಗೆಯ ಮಾತನ್ನು ಧಾರಾಳವಾಗಿ ಕೇಳಬಹುದು.
ದಕ್ಷಿಣ ಭಾರತೀಯ ತಿನಿಸುಗಳು ಯಾಕೆ ಆರೋಗ್ಯಕರ ಗೊತ್ತೇ? ಉಪ್ಪಿಟ್ಟು, ಇಡ್ಲಿ, ಪೊಂಗಲ್‌, ಉತ್ತಪ್ಪ, ಪಡ್ಡು, ಬಗೆಬಗೆಯ ದೋಸೆಗಳು ನಮ್ಮ ದಕ್ಷಿಣ ಭಾರತೀಯರ ಮನೆಗಳ ಬೆಳಗ್ಗಿನ ಆರಾಧ್ಯ ದೈವಗಳು. ಈ ಎಲ್ಲ ಬಗೆಯ ಆಹಾರಗಳಲ್ಲೂ ಬಗೆಬಗೆಯ ಧಾನ್ಯಗಳು, ಬೇಳೆ ಕಾಳುಗಳ ಬಳಕೆಯಿದೆ. ತೆಂಗಿನಕಾಯಿ, ಕರಿಬೇವು, ಕೊಂತ್ತಂಬರಿ ಸೊಪ್ಪು, ಬಗೆಬಗೆಯ ತರಕಾರಿಗಳು ಇತ್ಯಾದಿಗಳ ಬಳಕೆಯಿದೆ. ಇವೆಲ್ಲವೂ ಇಡೀ ಉಪಹಾರದ ಪೋಷಕಾಂಶಗಳ ಮಟ್ಟವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇನ್ನೂ ಮುಖ್ಯವಾದ ಇನ್ನೊಂದು ಅಂಶವೆಂದರೆ, ದಕ್ಷಿಣ ಭಾರತೀಯರಾದ ನಮ್ಮ ಶೈಲಿಯ ತಿಂಡಿಗಳ ಹಿಟ್ಟು ತಯಾರಿಕೆಯಲ್ಲಿ ಹುಳಿಬರಿಸುವ ಪ್ರಕ್ರಿಯೆಯೂ ಇದೆ. ಎಣ್ಣೆಯಲ್ಲಿ ಹುರಿಯುವುದಕ್ಕಿಂತಲೂ ಹಬೆಯಲ್ಲಿ ಬೇಯಿಸುವ ಪ್ರಕ್ರಿಯೆಯಿದೆ. ಇವೆಲ್ಲ ಪ್ರಕ್ರಿಯೆಗಳೂ ಆರೋಗ್ಯಕ್ಕೆ ಪೂರಕವಾದವುಗಳು.
ಆದರೆ, ದಕ್ಷಿಣ ಭಾರತೀಯ ಈ ತಿನಿಸುಗಳಲ್ಲಿ ಕಾರ್ಬೋಹೈಡ್ರೇಟ್‌ ಅಧಿಕ ಎಂಬ ವಾದವೂ ಇದೆ. ಇದು ನಿಜ ಕೂಡಾ. ಆದರೂ, ತೂಕ ಇಳಿಕೆಯ ವಿಚಾರಕ್ಕೆ ಬಂದರೆ, ಖಂಡಿತವಾಗಿಯೂ ಈ ತಿಂಡಿಗಳನ್ನೇ ಹಿತಮಿತವಾಗಿ ತಿಂದರೆ, ತೂಕ ಇಳಿಸಲು ಸಾಧ್ಯವಾಗುತ್ತದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹಾಗಾಗಿ ರುಚಿಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ನಮ್ಮದೇ ಆಹಾರ ಶೈಲಿಯಲ್ಲೂ, ತೂಕ ಇಳಿಕೆ ಸಾಧ್ಯವಿದೆ ಎಂಬುದನ್ನು ಇತ್ತೀಚೆಗೆ ಹಲವರು ಸಾಧ್ಯವಾಗಿಸಿ ತೋರಿಸುತ್ತಿದ್ದಾರೆ ಕೂಡ.

idli sambar

ಇಡ್ಲಿ ಸಾಂಬಾರ್‌

ಇಡ್ಲಿ ಅತ್ಯಂತ ಪೋಷಕಾಂಶಯುಕ್ತ ಹಬೆಯಲ್ಲಿ ಬೇಯಿಸಿ ಮಾಡು ಆರೋಗ್ಯಕರ ತಿನಿಸು. ಬೆಳಗ್ಗಿನ ಹೊತ್ತಿಗೆ ಇದು ಪ್ರಶಸ್ತ. ಅಕ್ಕಿ ಹಾಗೂ ಉದ್ದಿನ ಬೇಳೆಯಿಂದ ಮಾಡಿದ ಇಡ್ಲಿಗೆ ತರಕಾರಿ ಹಾಕಿದ ಸಾಂಬಾರು, ತೆಂಗಿನಕಾಯಿಯ ಚಟ್ನಿ ಇದ್ದರೆ ಸ್ವರ್ಗ. ಪೋಷಕಾಂಶಗಳ ವಿಚಾರದಲ್ಲೂ ಇದು ಯಾವುದೇ ಮೋಸ ಮಾಡದು.

Masala Dosa Dish

ದೋಸೆ

ಇಡ್ಲಿಯ ಹಿಟ್ಟಿನಿಂದಲೇ ಮಾಡಬಹುದಾದ ದೋಸೆಯೂ ಕೂಡಾ ಅಷ್ಟೇ ಆರೋಗ್ಯಕರ. ಪ್ರೊಟೀನ್‌ ಹಾಗೂ ಸಾಕಷ್ಟು ಕಾರ್ಬೋಹೈಡ್ರೇಟ್‌ ಇರುವ ಇದು ಬೆಳಗ್ಗೆಗೆ ಒಳ್ಳೆಯ ಆಹಾರ. ಕೇವಲ ಈ ಹಿಟ್ಟಲ್ಲದೆ, ನೂರಾರು ಬಗೆಯ ದೋಸೆಗಳನ್ನೂ ತರಕಾರಿ ಹಾಗೂ ಬೇರೆ ಬೇರೆ ಧಾನ್ಯಗಳನ್ನು ಬಳಸಿ ಮಾಡಬಹುದು ಎಂಬುದೇ ದೋಸೆಯ ವಿಶೇಷತೆ.

uppittu

ಉಪ್ಪಿಟ್ಟು

ಗೋಧಿ/ರವೆಯಿಂದ ಮಾಡಬಹುದಾದ ಉಪ್ಪಿಟ್ಟು ಕೂಡಾ ಬೆಳಗ್ಗೆಗೆ ಹೇಳಿ ಮಾಡಿಸಿದ ತಿಂಡಿ. ಬಗೆಬಗೆಯ ತರಕಾರಿಗಳನ್ನು ಹಾಕಿ ಮಾಡಬಹುದು. ಇದೂ ಕೂಡಾ ಪೋಷಕಾಂಶಯುಕ್ತ ಆಹಾರ. ತೂಕ ಇಳಿಕೆಗೂ ಪೂರಕ.

ಇದನ್ನೂ ಓದಿ: Health Tips Kannada: ಕುಂಬಳಕಾಯಿ ಬೀಜದಲ್ಲಿದೆ ನಮ್ಮ ಆರೋಗ್ಯದ ಗುಟ್ಟು!

ಉತ್ತಪ್ಪ, ಪಡ್ಡು, ಪೊಂಗಲ್

ಈ ಎಲ್ಲ ತಿನಿಸುಗಳೂ ಕೂಡಾ ಇಡ್ಲಿ ದೋಸೆಗಳಂತೆಯೇ ನಿರುಪದ್ರವಿ. ಪೋಷಕಾಂಶಭರಿತವಾದವು. ಇವುಗಳನ್ನು ಹಿತಮಿತವಾಗಿ ತಿಂದರೆ, ಹೊಟ್ಟೆಗೂ ಹಿತ, ನಾಲಿಗೆಗೂ ರುಚಿ. ತೂಕವನ್ನೂ ಸಮತೋಲನದಲ್ಲಿಟ್ಟುಕೊಳ್ಳಬಹುದು.

Continue Reading

ಆರೋಗ್ಯ

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Internet addiction: ಆನ್‌ಲೈನ್‌ ಗೀಳಿನಿಂದಾಗಿ ಹಲವು ವಿಚಾರಗಳಲ್ಲಿ ನಾವು ಹಿಂದೆ ಬೀಳುತ್ತೇವೆ. ಏಕಾಗ್ರತೆ, ಓದುವ ಅಭ್ಯಾಸ, ದೈಹಿಕ ಚಟುವಟಿಕೆ ಇತ್ಯಾದಿಗಳೂ ಕೂಡಾ ಇದರಿಂದಾಗಿ ಕುಂಠಿತವಾಗುತ್ತಿದೆ. ದೈಹಿಕ ಹಾಗೂ ಮಾನಸಿಕವಾಗಿ ಇದು ಸಾಕಷ್ಟು ಕೆಟ್ಟ ಪರಿಣಾಮ ಬೀರುವುದರಿಂದ ಆದಷ್ಟು ಆರಂಭಿಕ ಹಂತದಲ್ಲಿರುವಾಗಲೇ ಈ ಚಟಕ್ಕೆ ಕಡಿವಾಣ ಹಾಕಬೇಕು.

VISTARANEWS.COM


on

Internet Addiction
Koo

ಲಂಗು ಲಗಾಮಿಲ್ಲದೆ ಇಂಟರ್ನೆಟ್‌ ಬಳಸುವ ಅಭ್ಯಾಸ ಇಂದು ಮಕ್ಕಳಾದಿಯಾಗಿ ಹಿರಿಯರನ್ನೂ ಕಾಡುತ್ತಿದೆ. ಇದರಿಂದ ದಿನನಿತ್ಯದ ಚಟುವಟಿಕೆಗಳಿಗೂ ಸಾಕಷ್ಟು ಸಮಸ್ಯೆಯೂ ಆಗುತ್ತಿದೆ. ಹಲವು ವಿಚಾರಗಳಲ್ಲಿ ನಾವು ಹಿಂದೆ ಬೀಳುತ್ತೇವೆ. ಏಕಾಗ್ರತೆ, ಓದುವ ಅಭ್ಯಾಸ, ದೈಹಿಕ ಚಟುವಟಿಕೆ ಇತ್ಯಾದಿಗಳೂ ಕೂಡಾ ಇದರಿಂದಾಗಿ ಕುಂಠಿತವಾಗುತ್ತಿದೆ. ದೈಹಿಕ ಹಾಗೂ ಮಾನಸಿಕವಾಗಿ ಇದು ಸಾಕಷ್ಟು ಕೆಟ್ಟ ಪರಿಣಾಮ ಬೀರುವುದರಿಂದ ಆದಷ್ಟು ಆರಂಭಿಕ ಹಂತದಲ್ಲಿರುವಾಗಲೇ ಈ ಚಟಕ್ಕೆ ಕಡಿವಾಣ ಹಾಕಬೇಕು. ಇಂಟರ್ನೆಟ್‌ ಅಡಿಕ್ಷನ್‌ ಅಥವಾ ಅಂತರ್ಜಾಲ ಚಟ (Internet addiction) ಎಂಬುದು ಇತ್ತೀಚಿನ ದಶಕದಲ್ಲಿ ಅತ್ಯಂತ ಹೆಚ್ಚಾಗಿ ಎಲ್ಲರನ್ನೂ ಬಿಡದೆ ಕಾಡುವ ದೌರ್ಬಲ್ಯ. ಅತ್ಯಂತ ಹೆಚ್ಚು, ಲಂಗು ಲಗಾಮಿಲ್ಲದೆ ಇಂಟರ್ನೆಟ್‌ ಬಳಸುವ ಅಭ್ಯಾಸ ಇಂದು ಮಕ್ಕಳಾದಿಯಾಗಿ ಹಿರಿಯರನ್ನೂ ಕಾಡುತ್ತಿದೆ. ಇದರಿಂದ ದಿನನಿತ್ಯದ ಚಟುವಟಿಕೆಗಳಿಗೂ ಸಾಕಷ್ಟು ಸಮಸ್ಯೆಯೂ ಆಗುತ್ತಿದೆ. ಹಲವು ವಿಚಾರಗಳಲ್ಲಿ ನಾವು ಹಿಂದೆ ಬೀಳುತ್ತೇವೆ. ಏಕಾಗ್ರತೆ, ಓದುವ ಅಭ್ಯಾಸ, ದೈಹಿಕ ಚಟುವಟಿಕೆ ಇತ್ಯಾದಿಗಳೂ ಕೂಡಾ ಇದರಿಂದಾಗಿ ಕುಂಠಿತವಾಗುತ್ತಿದೆ. ದೈಹಿಕ ಹಾಗೂ ಮಾನಸಿಕವಾಗಿ ಇದು ಸಾಕಷ್ಟು ಕೆಟ್ಟ ಪರಿಣಾಮ ಬೀರುವುದರಿಂದ ಆದಷ್ಟು ಆರಂಭಿಕ ಹಂತದಲ್ಲಿರುವಾಗಲೇ ಈ ಚಟಕ್ಕೆ ಕಡಿವಾಣ ಹಾಕಬೇಕು. ನಿಮಗೇ ತಿಳಿಯದಾ ಹಾಗೆ ನೀವು ಇಂಟರ್ನೆಟ್‌ ದಾಸರಾಗಿದ್ದೀರಾ? ಇಂಟರ್ನೆಟ್‌ನ ಚಟಕ್ಕೆ ಬಿದ್ದಿದ್ದೀರಾ? ಬನ್ನಿ, ಈ ಕೆಳಗಿನ ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವೂ ಇದರ ದಾಸರಾಗಿದ್ದೀರಿ ಎಂಬಲ್ಲಿ ಯಾವ ಸಂಶಯವೂ ಇಲ್ಲ.

woman holding mobile phone in social network and internet addiction

ಸದಾ ಇಂಟರ್ನೆಟ್‌ನದ್ದೇ ಧ್ಯಾನ

ಆಗಾಗ ನಿಮಗೆ ಆನ್‌ಲೈನ್‌ನ ಕೆಲಸಗಳೇ ಮನಸ್ಸಿನಲ್ಲಿ ಜ್ಞಾಪಕಕ್ಕೆ ಬರುತ್ತಿದೆಯಾ? ನೀವು ಯಾವುದಾದರೂ ಬೇರೆ ಕೆಲಸಕ್ಕೆ ಗಮನ ಕೊಡುವಾಗಲೂ ನೀವು ಕೆಲ ಹೊತ್ತಿನ ನಂತರ ಇಂಟರ್ನೆಟ್‌ನ ಬಳಕೆಯ ಬಗ್ಗೆ ಯೋಚನೆ ಮಾಡುತ್ತೀರುತ್ತೀರಿ ಎಂದಾದಲ್ಲಿ ನೀವು ಚಟಕ್ಕೆ ಬಿದ್ದಿದ್ದೀರಿ ಎಂದರ್ಥ.

ಕಡಿಮೆ ಬಳಸಲು ಸಾಧ್ಯವಾಗುತ್ತಿಲ್ಲ

ಇಂಟರ್ನೆಟ್‌ ಬಳಕೆಯನ್ನು ಕಡಿಮೆ ಮಾಡಲು ನಿಮ್ಮ ಕೈಯಲ್ಲಿ ಸಾಧ್ಯವಾಗುತ್ತಿಲ್ಲವೇ? ಹೆಚ್ಚು ಸಮಯವನ್ನು ಆನ್‌ಲೈನ್‌ನಲ್ಲಿ, ಅಥವಾ ಇಂಟರ್ನೆಟ್‌ ಆಧರಿಸಿದ ಕೆಲಸದಲ್ಲಿ ಕಳೆಯಲು ಇಷ್ಟಪಡುತ್ತೀರಿ ಅಥವಾ ಅದರಿಂದ ಹೊರಗೆ ಬರಲು ನೀವು ಯೋಚಿಸಿದರೂ ಸಾಧ್ಯವಾಗುತ್ತಿಲ್ಲ ಎಂದಾದಲ್ಲಿ ಅದು ಚಟವೇ.

ನಿತ್ಯ ಕೆಲಸಗಳನ್ನು ಬಿಟ್ಟು…

ನಿಮ್ಮ ಖಾಸಗಿ ಕೆಲಸಗಳನ್ನು ನಿರ್ಲಕ್ಷ್ಯ ಮಾಡಿ ನೀವು ಆನ್‌ಲೈನ್‌, ಅಥವಾ ಇಂಟರ್ನೆಟ್‌ನಲ್ಲಿರಲು ಬಯಸುತ್ತೀರಿ ಎಂದಾದಲ್ಲಿ ನೀವು ಚಟಕ್ಕೆ ಬಿದ್ದಿದ್ದೀರಿ ಎಂದರ್ಥ. ಮನೆಕೆಲಸಗಳು, ನಿಮ್ಮ ನಿತ್ಯಕೆಲಸಗಳು, ಡೆಡ್‌ಲೈನ್‌ಗಳು ಮರೆತು ನೀವು ಇದಕ್ಕೆ ದಾಸರಾಗಿದ್ದೀರಿ ಎಂದರೆ ಅದು ನಿಮಗೆ ಒಳ್ಳೆಯದಲ್ಲ.

Boy Plays Computer Game at Home, Gaming Addiction

ಇಂಟರ್‌ನೆಟ್‌ ಸಿಗದಿದ್ದಾಗ ಚಡಪಡಿಕೆ

ಇಂಟರ್‌ನೆಟ್‌ ಸಿಗದಿದ್ದಾಗ, ಇಂಟರ್ನೆಟ್‌ ಬಳಸಲು ಸಾಧ್ಯವಾಗುತ್ತಿಲ್ಲ ಎಂದಾದಾಗ ಕಿರಿಕಿರಿಯಾಗುತ್ತಿದೆಯೋ, ಬೇರೆ ಕೆಲಸಕ್ಕೆ ಗಮನ ಕೊಡಲು ಸಾಧ್ಯವಾಗುತ್ತಿಲ್ಲವೋ ಹಾಗಾದರೆ ಅದು ಇಂಟರ್ನೆಟ್‌ ಚಟದ ಕಾರಣದಿಂದಾಗಿಯೇ.

ಇಂಟರ್ನೆಟ್‌ ಅವಲಂಬನೆ

ನಿಮ್ಮ ತೊಂದರೆಗಳನ್ನು, ಬೇಸರಗಳನ್ನು ಮರೆಯಲು, ಒತ್ತಡವನ್ನು, ಋಣಾತ್ಮಕ ಚಿಂತನೆಗಳನ್ನು ಕಡಿಮೆ ಮಾಡಲು ಇಂಟರ್ನೆಟ್‌ನಲ್ಲಿರುವುದರ ಮೂಲಕ ಪಾರಾಗಲು ಪ್ರಯತ್ನಿಸುತ್ತೀರಿ ಎಂದರೆ ಅದು ಖಂಡಿತ ಚಟವೇ. ನಿಮ್ಮ ಈ ಭಾವನೆಗಳಿಗೆ ಬೇರೆ ಕಾರಣ ಹುಡುಕಿ ಅದನ್ನು ಸರಿ ಮಾಡಬೇಕೇ ಹೊರತು, ಇಂಟರ್ನೆಟ್‌ ನಿಮ್ಮ ಪಲಾಯನದ ಹಾದಿ ಆಗಬಾರದು.

ಕುಟುಂಬದವರ ಜೊತೆ ಮುಚ್ಚಿಡುತ್ತೀರಿ

ಆನ್‌ಲೈನ್‌/ ಇಂಟರ್ನೆಟ್‌ನಲ್ಲಿ ನೀವು ಕಳೆದ ಸಮಯವನ್ನು ನಿಮ್ಮ ಕುಟುಂಬದವರ ಜೊತೆ ಮುಚ್ಚಿಡುತ್ತೀರಿ ಎಂದಾದಲ್ಲಿ ಖಂಡಿತವಾಗಿಯೂ ನೀವು ಅದರ ದಾಸರಾಗಿದ್ದೀರಿ ಎಂದರ್ಥ.

Addicted to internet

ವಾಗ್ವಾದಗಳನ್ನು ಸೃಷ್ಟಿಸುತ್ತಿದೆಯೆ?

ಇಂಟರ್ನೆಟ್‌ ಬಳಕೆಯೇ ನಿಮ್ಮ ಹಾಗೂ ನಿಮ್ಮ ಸಂಗಾತಿಯ/ಪ್ರೀತಿಪಾತ್ರರ/ಹೆತ್ತವರ ಜೊತೆಗೆ ವಾಗ್ವಾದಗಳನ್ನು ಸೃಷ್ಟಿಸುತ್ತಿದೆ ಎಂದಾದಲ್ಲಿ ನೀವು ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ. ಸಂಬಂಧಗಳ ಮಹತ್ವವನ್ನು ಅರಿಯದೆ, ಅದಕ್ಕೆ ಸರಿಯಾದ ಸಮಯವನ್ನು ನೀಡದೆ, ನೀವು ಇಂಟರ್ನೆಟ್‌ ಮೂಲಕ ನಿಮ್ಮ ಶಾಂತಿ ಕಂಡುಕೊಳ್ಳುತ್ತೀರಿ ಎಂದರೆ ಅದು ಒಳ್ಳೆಯ ಬೆಳವಣಿಗೆಯಲ್ಲ.

ಕಣ್ಣು ಸುಸ್ತಾದಂತೆ ಅನಿಸುವುದು

ಕಣ್ಣು ಸುಸ್ತಾದಂತೆ ಅನಿಸುವುದು, ಬೆನ್ನು ನೋವು, ಸೊಂಟ ನೋವು, ನಿದ್ದೆಯಲ್ಲಿ ಸಮಸ್ಯೆ ಇತ್ಯಾದಿಗಳು ನಿಮ್ಮನ್ನು ಕಾಡುತ್ತಿದೆ ಎಂದರೆ ನೀವು ಅತಿಯಾಗಿ ಇಂಟರ್ನೆಟ್‌ ಬಳಸುತ್ತಿದ್ದೀರಿ ಎಂದರ್ಥ,

Addicted From Social Media Woman

ಹೊರಗಿನ ಆಸಕ್ತಿ ಕಡಿಮೆ

ಹೊರಗಿನ ಕೆಲಸ, ವ್ಯಾಯಾಮ, ಇತರ ಚಟುವಟಿಕೆಗಳಲ್ಲಿ ಆಸಕ್ತಿ ಕಡಿಮೆಯಾಗಿದೆ ಎಂದಾದಲ್ಲಿ ಹಾಗೂ ನೀವು ಆನ್‌ಲೈನ್‌ ಇರುವುದನ್ನೇ ಇಷ್ಟಪಡುತ್ತೀರಿ, ಅದಕ್ಕಾಗಿ ಕಾರಣ ಹುಡುಕುತ್ತೀರಿ ಎಂದಾದಲ್ಲಿ ನಿಮಗೆ ಇಂಟರ್ನೆಟ್‌ ಚಟವೇ.

ಇದನ್ನೂ ಓದಿ: Back Acne Problem: ಬೆನ್ನಿನ ಮೇಲಿನ ಮೊಡವೆಗಳ ಸಮಸ್ಯೆಯೇ? ಇಲ್ಲಿವೆ ಸರಳ ಪರಿಹಾರಕ್ಕೆ ಅಷ್ಟಸೂತ್ರಗಳು!

ಆನ್‌ಲೈನ್‌ನಲ್ಲೇ ಹೆಚ್ಚು ಸಮಯ

ದಿನಗಳೆದಂತೆ ಹೆಚ್ಚು ಹೆಚ್ಚು ಸಮಯ ಆನ್‌ಲೈನ್‌ಗಾಗಿ ಮೀಸಲಿಡುತ್ತಿದ್ದೀರಿ ಹಾಗೂ ಅದರಿಂದ ಸಂತೋಷ ಪಡೆಯುತ್ತಿದ್ದೀರಿ ಎಂದರೂ ಕೂಡಾ ನೀವು ಇಂಟರ್ನೆಟ್‌ ದಾಸರಾಗಿದ್ದೀರಿ ಎಂದರ್ಥ. ಇಂತಹ ಲಕ್ಷಣಗಳು ಕಂಡು ಬಂದಲ್ಲಿ ಅದನ್ನು ಮೊದಲೇ ಅರಿತುಕೊಂಡು ಈ ಅಭ್ಯಾಸವನ್ನು ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ, ಆಪ್ತ ಸಮಾಲೋಚನೆ ಹಾಗೂ ತಜ್ಞರ ನೆರವು ಪಡೆಯುವುದು ಅತ್ಯಂತ ಅಗತ್ಯ.

Continue Reading
Advertisement
SHAFALI VERMA
ಕ್ರಿಕೆಟ್8 mins ago

SHAFALI VERMA: 40 ವರ್ಷದ ಟೆಸ್ಟ್​ ದಾಖಲೆ ಮುರಿದ ಭಾರತದ ಶಫಾಲಿ ವರ್ಮ

Rich Wedding
ಪ್ರಮುಖ ಸುದ್ದಿ14 mins ago

ಮದುವೆಗೆ ಹೋದವರಿಗೆ 66 ಸಾವಿರ ರೂ. ನಗದು, ಭರ್ಜರಿ ಗಿಫ್ಟ್‌ ಕೊಟ್ಟ ದಂಪತಿ; ಎಲ್ಲಿ ಅಂತೀರಾ…?‌

Actor Darshan A young woman came to Parappa Agrahara to see Darshan
ಕ್ರೈಂ17 mins ago

Actor Darshan: ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಆಗಮಿಸಿದ ಯುವತಿ; ಯಾರಾಕೆ?

Valmiki Corporation Scam Zameer Ahmed appointed as Ballari district in-charge minister
ಬಳ್ಳಾರಿ21 mins ago

Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

T20 World Cup Final
ಕ್ರೀಡೆ44 mins ago

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

Kannada Serials TRP Lakshmi Baramma in Top 5 new serials not in demand
ಕಿರುತೆರೆ52 mins ago

Kannada Serials TRP: ಟಾಪ್‌ 5ನಲ್ಲಿ ʻಲಕ್ಷ್ಮೀ ಬಾರಮ್ಮʼ; ಹೊಸ ಧಾರಾವಾಹಿಗಿಲ್ಲ ಬೇಡಿಕೆ!

ಕರ್ನಾಟಕ56 mins ago

CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ವಿದೇಶ1 hour ago

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

NK Bailu victims to get relief soon says Incharge secretary Ritesh Kumar Singh
ಉತ್ತರ ಕನ್ನಡ1 hour ago

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Viral Video
Latest1 hour ago

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು24 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌