Life Tips: ಹೇಗೇ ಇದ್ದರೂ ಬದುಕು ಸುಂದರವಾಗಿ ಕಾಣಬೇಕೆಂದರೆ ಇಲ್ಲಿದೆ ಕೀಲಿಕೈ! - Vistara News

ಲೈಫ್‌ಸ್ಟೈಲ್

Life Tips: ಹೇಗೇ ಇದ್ದರೂ ಬದುಕು ಸುಂದರವಾಗಿ ಕಾಣಬೇಕೆಂದರೆ ಇಲ್ಲಿದೆ ಕೀಲಿಕೈ!

ಬದುಕಿನ ಅಗಾಧತೆಯನ್ನು, ಅನನ್ಯತೆಯನ್ನು, ಸಂಪೂರ್ಣತೆಯನ್ನು ಸವಿಯುವ ಮನ ಬಂದಾಗ, ಕೃತಜ್ಞತೆಯನ್ನು ಪ್ರಾಕ್ಟೀಸ್‌ ಮಾಡಿದಾಗ ಬದುಕು ಹೇಗೇ ಇದ್ದರೂ ಖುಷಿಯಾಗಿರುತ್ತದೆ. ಇದೇ ಸಂತೋಷದ ಬದುಕಿನ ಸೀಕ್ರೆಟ್‌ (Life tips).

VISTARANEWS.COM


on

life tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃತಜ್ಞತೆ (Gratitude) ಎಂಬುದು ಸಂತೋಷದ (happiness key) ಕೀಲಿಕೈಯಂತೆ! ಹೌದು. ಕೃತಜ್ಞರಾಗಿರುವುದನ್ನು ನಾವು ಕಲಿತುಕೊಂಡರೆ, ಆ ಅರಿವನ್ನು ನಾವು ಬೆಳೆಸಿಕೊಂಡರೆ, ಜೀವನ ಸುಗಮವಾಗಿ ಸಾಗುತ್ತದೆ ಎನ್ನುತ್ತಾರೆ ತಿಳಿದವರು. ಏಳುಬೀಳುಗಳಿದ್ದರೂ, ಬದುಕು ಎಷ್ಟು ಅದ್ಭುತ ಅನಿಸುತ್ತದೆ. ಬದುಕು ರಮ್ಯವಾಗಿ, ಸೊಗಸಾಗಿ ಕಾಣಬೇಕೆಂದರೆ ನಾವು ಬದುಕಿನ ಕೆಲವನ್ನು ಸರಳವಾಗಿ ತೆಗೆದುಕೊಳ್ಳುವುದನ್ನು ಕಲಿಯಬೇಕು. ಆಗ ನಾವು ಬದುಕಿನ ನಿಜವಾದ ಮರ್ಮವನ್ನು ಅರಿಯಲು ಸಾಧ್ಯವಾಗುತ್ತದೆ.

ಬದುಕಿನಲ್ಲಿ ಸಂತೋಷ ಹೊಂದಬೇಕಾದರೆ ಶ್ರೀಮಂತಿಕೆಯೇ ಬೇಕಾಗಿಲ್ಲ. ಅದಿಲ್ಲದೆಯೂ ಜೀವನ ಅದ್ಭುತವಾಗಿರಬಲ್ಲುದು. ಏಳುಬೀಳುಗಳ ಹೊರತಾಗಿಯೂ ಬದುಕೆಷ್ಟು ಚಂದ ಎಂದು ಅನಿಸಬೇಕಾದರೆ, ನೀವು ಬದುಕನ್ನು ದೂಷಿಸದೆ ಇರುವ ಗುಣವನ್ನು ಕಲಿಯಬೇಕಾದರೆ, ಈ ಕೆಲವು ವಿಚಾರಗಳನ್ನು ನೀವು ತಿಳಿಯಬೇಕು. ಆ ಅರಿವು ನಿಮ್ಮೊಳಗಿಂದ ಬಂದರೆ, ನೀವು ಬದುಕಿನ ಅಗಾಧತೆಯನ್ನು, ಅನನ್ಯತೆಯನ್ನು, ಸಂಪೂರ್ಣತೆಯನ್ನು ಸವಿಯುತ್ತೀರಿ. ಹಾಗಾಗಿ ತಮ್ಮ ಬದುಕು ಹೇಗೇ ಇದ್ದರೂ ಸಂತೋಷವಾಗಿರುವ ಮಂದಿಯ ಬದುಕಿನ ಸೀಕ್ರೆಟ್‌ (Life tips, life secret) ಇಲ್ಲಿದೆ.

1. ಮೊದಲು ಜೀವನಕ್ಕೇ ಕೃತಜ್ಞರಾಗಿರಿ. ಹೌದು ಕೇಳಲು ವಿಚಿತ್ರವಾಗಿ ಅನಿಸಬಹುದು. ಆದರೆ ಇದು ನಿಜ. ಯಾಕೆಂದರೆ ಈ ಜಗತ್ತಿನಲ್ಲಿ ನೀವು ಈ ಭೂಮಿಯಲ್ಲಿ ಜನ್ಮ ತಳೆಯಲು ೪೦೦ ಟ್ರಿಲಿಯನ್‌ನಲ್ಲಿ ಒಂದರಷ್ಟೇ ಅವಕಾಶವಿದ್ದುದು, ಹಾಗೂ ಆ ಅವಕಾಶ ನಿಮ್ಮದಾಗಿದೆ ಎಂದರೆ ಅದು ನಿಮ್ಮ ಭಾಗ್ಯವೇ ಸರಿ ಎಂಬುದನ್ನು ಮನಗಾಣಬೇಕು. ಆಗ ನಿಮ್ಮ ಜೀವನ ಎಷ್ಟು ಮುಖ್ಯವಾದುದೆಂದು ನಿಮಗೆ ಅರಿವಾದೀತು. ಹಾಗಾಗಿ ಜೀವನ ಎಂಬುದು ಅತ್ಯಂತ ಅಮೂಲ್ಯ.

2. ನಿಮ್ಮ ಜೀವನದಿಂದ ಹೊರಹೋದವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಖುಷಿಯಾಗಿರುವ ಮಂದಿ ಬೇರೆಯವರ ನಿರ್ಧಾರಗಳನ್ನೂ ಖಂಡಿತ ಗೌರವಿಸುತ್ತಾರೆ. ಹಾಗಾಗಿಯೇ, ನೀವು ಖುಷಿಯಾಗಿರಬೇಕೆಂದರೆ, ನೀವು ಯಾರಿಗೋ ಬಾಗಿಲು ಮುಚ್ಚಿದ್ದಕ್ಕೋ, ಬೇರೆಯವರ್ಯಾರೋ ನಿಮ್ಮೆದುರು ಬಾಗಿಲು ಮುಚ್ಚಿದ್ದಕ್ಕೋ ಚಿಂತಿಸಬೇಡಿ. ಒಂದು ಬಾಗಿಲು ಮುಚ್ಚಿದರೆ, ಇನ್ನೊಂದು ಬಾಗಿಲು ತೆರೆಯುತ್ತದೆ, ನೆನಪಿಡಿ. ಬದುಕನ್ನು ಬಂದ ಹಾಗೆ ಸ್ವೀಕರಿಸಿ. ಅಗತ್ಯವಿಲ್ಲದ ಮೆಸೇಜುಗಳು, ಕಸಿಕ್ಕದ ಕೆಲಸಗಳು, ಕೈತಪ್ಪಿಹೋದ ಅವಕಾಶಗಳು ನಿಜವಾಗಿಯೂ ನಿಮ್ಮದಲ್ಲ, ನಿಮಗಾಗಿ ಬಂದಿದ್ದಲ್ಲ ಎಂದು ಸಕಾರಾತ್ಮಕವಾಗಿ ಯೋಚಿಸಿ. ಹೋದುದಕ್ಕೆ ಚಿಂತಿಸಿ ನೆಮ್ಮದಿ ಕಳೆಯಬೇಡಿ.

3. ಸಂತೋಷವಾಗಿರುವ ಮಂದಿ ತಮ್ಮ ಸುತ್ತಮುತ್ತಲ ಪರಿಸರವನ್ನು ನೋಡುತ್ತಾರೆ. ಪ್ರಕೃತಿಯ ಖುಷಿಯಲ್ಲಿ ತಮ್ಮ ಖುಷಿಯನ್ನು ಕಾಣುತ್ತಾರೆ. ಹಕ್ಕಿಗಳಿಂಚರ, ಹೂಗಳ ಘಮ, ಗಾಳಿಯ ಜೋಗುಳ, ಮಳೆಯ ತಂಪು ಹೀಗೆ ಪ್ರತಿಯೊಂದರಲ್ಲೂ ಸಣ್ಣ ಸಣ್ಣ ಖುಷಿಗಳನ್ನು ಹೆಕ್ಕಿ. ಪ್ರಕೃತಿಯೊಂದಿಗೆ ಕಳೆವ ಅವಕಾಶವನ್ನೆಂದೂ ಬಿಡಬೇಡಿ. ಇದರಲ್ಲಿರುವಷ್ಟು ಖುಷಿ ಇನ್ಯಾವುದರಲ್ಲೂ ಸಿಗಲಾರದು.

happiness

4. ಸ್ವಾರ್ಥರಹಿತರಾಗಿರುವುದಕ್ಕೆ ಪ್ರಯತ್ನಿಸಿ. ಸುತ್ತಮುತ್ತಲಿನವರ ಜೊತೆ ಪ್ರೀತಿಯಿಂದ, ವಿಶ್ವಾಸದಿಂದ ಮಾತನಾಡಿಸಿ. ಮುಖದಲ್ಲಿನ ಒಂದು ಪುಟ್ಟ ನಗು ಮ್ಯಾಜಿಕ್ಕೇ ಮಾಡಬಲ್ಲುದು. ಕೆಲವೊಂದು ಕೆಲಸಗಳನ್ನು ಬೇರೆವರಿಗೆ ಮಾಡಿಕೊಡಲು ನಿಮ್ಮ ಸ್ವಾರ್ಥ ಅಡ್ಡ ಬರದಿರಲಿ. ಇನ್ನೊಬ್ಬರಿಗೆ ಪ್ರೀತಿಯಿಂದ ಕೊಡುವುದರಲ್ಲಿ ಖುಷಿಯನ್ನು ಕಾಣಿ.

ಇದನ್ನೂ ಓದಿ: Happiness Tips: ಒಬ್ಬರೇ ಇದ್ದಾಗ ಖುಷಿಯಾಗಿರುವುದು ಹೇಗೆ ಗೊತ್ತಾ? ಇಲ್ಲಿವೆ ಟಿಪ್ಸ್!

5. ಗೆಳೆಯರು ಜೀವನದ ಅಮೂಲ್ಯ ಆಸ್ತಿ. ಈ ಮಂತ್ರ ಎಂದಿಗೂ ನೆನಪಿಡಿ. ಸಂಬಂಧಿಕರು, ನೆರೆಹೊರೆಯ ಮಂದಿ ರಕ್ತ ಸಂಬಂಧಿಗಳೂ ಕಷ್ಟದ ಸಂದರ್ಭದಲ್ಲಿ ಕೈಕೊಟ್ಟಾರು. ಆದರೆ, ಗೆಳೆಯರು ಖಂಡಿತಾ ಕೊಡಲಾರರು. ಹಾಗಾಗಿ ಉತ್ತಮ ಗೆಳೆಯರನ್ನು ಸಂಪಾದಿಸಿ. ಅವರನ್ನು ಗೌರವಿಸಿ, ಪ್ರೀತಿ, ಅವರ ಜೊತೆಗೂ ಸಮಯ ಕಳೆಯಿರಿ.

6. ಸಂತೋಷವನ್ನು ಬರಮಾಡಿಕೊಂಡಷ್ಟೇ ಸಹಜವಾಗಿ ಸೋಲನ್ನೂ, ಕಷ್ಟವನ್ನೂ ದುಃಖವನ್ನೂ ಬರಮಾಡಿ. ಖುಷಿ ಯಾವಾಗಲೂ ಇರುವುದಿಲ್ಲ ಎಂಬ ಸತ್ಯವನ್ನು ಮೊದಲು ಒಪ್ಪಿಕೊಳ್ಳುವುದು ಜೀವನದಲ್ಲಿ ಮುಖ್ಯ. ಹಾಗಾಗಿ, ಸಂತೋಷ, ಖುಷಿಯ ಭಾವನೆಗಳ ಹೊರತಾಗಿಯೂ ಬೇರೆ ಭಾವನೆಗಳಿವೆ ಎಂಬುದನ್ನು ಒಪ್ಪಿಕೊಂಡು ಅಪ್ಪಿಕೊಳ್ಳಿ.

ಕೇವಲ ಖುಷಿಯಷ್ಟೇ ಜೀವನದಲ್ಲಿ ತುಂಬಿರಬೇಕು ಎಂದು ಅಂದುಕೊಳ್ಳುವುದೇ ಮೂರ್ಖತನ. ಜೀವನ ಎಂದರೆ ಏಳುಬೀಳುಗಳ ಸಮಾಗಮ. ಅಲ್ಲಿ ಎಲ್ಲವೂ ಇದೆ. ಬದುಕಿನ ಬಗೆಗೆ ಹೀಗೊಂದು ಮನೋಭಾವವನ್ನು ಮೊದಲೇ ಬೆಳೆಸಿಕೊಂಡಾತ ಹಾಗೂ ತನ್ನ ಅಸ್ತಿತ್ವದ ಬಗೆಗೆ ಕೃತಜ್ಞನಾಗಿರುವ ವ್ಯಕ್ತಿ ಬದುಕಿನಲ್ಲಿ ಎಂದಿಗೂ ಖುಷಿಯಾಗಿರುತ್ತಾನೆ/ಳೆ!

ಇದನ್ನೂ ಓದಿ: Happiness Tips: ಸದಾ ಸಂತಸದಿಂದ ಇರಲು ಬೇಕು ಈ 4 ಹಾರ್ಮೋನ್‌, ಹೆಚ್ಚಿಸಿಕೊಳ್ಳೋಕೆ ಇಲ್ಲಿದೆ ಟಿಪ್ಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

Covaxin: ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

VISTARANEWS.COM


on

Covaxin
Koo

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದಲ್ಲದೆ, ‘ಹೊಸ-ಆರಂಭದ ಚರ್ಮ ಮತ್ತು ಸಬ್ಕ್ಯುಟೇನಿಯಸ್ ಅಸ್ವಸ್ಥತೆ’ 10.5 ಪ್ರತಿಶತ ಹದಿಹರೆಯದವರಲ್ಲಿ ಕಂಡುಬಂದಿದೆ, ಸಾಮಾನ್ಯ ಅಸ್ವಸ್ಥತೆ ಅಂದರೆ ಸಾಮಾನ್ಯ ಸಮಸ್ಯೆ 10.2 ಪ್ರತಿಶತ, ನರಮಂಡಲದ ಅಸ್ವಸ್ಥತೆ ಅಂದರೆ ನರ ಸಂಬಂಧಿತ ಸಮಸ್ಯೆ 4.7 ಪ್ರತಿಶತ. ಅದೇ ರೀತಿ ಶೇ.8.9ರಷ್ಟು ಯುವಜನರಲ್ಲಿ ಸಾಮಾನ್ಯ ಸಮಸ್ಯೆಗಳು, ಮಸ್ಕ್ಯುಲೋಸ್ಕೆಲಿಟಲ್ ಡಿಸಾರ್ಡರ್ಸ್ ಅಂದರೆ ಸ್ನಾಯುಗಳು, ನರಗಳು, ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಶೇ.5.8ರಷ್ಟು ಮತ್ತು ನರವ್ಯೂಹಕ್ಕೆ ಸಂಬಂಧಿಸಿದ ಸಮಸ್ಯೆಗಳು ಶೇ.5.5ರಲ್ಲಿ ಕಂಡುಬರುತ್ತವೆ.

ಇದಲ್ಲದೆ, ಹದಿಹರೆಯದವರಲ್ಲಿ 10.5 ಪ್ರತಿಶತದಷ್ಟು ಜನರು ‘ಹೊಸದಾಗಿ ಪ್ರಾರಂಭವಾಗುವ ಚರ್ಮ ಮತ್ತು ಚರ್ಮದ ಅಸ್ವಸ್ಥತೆ’, 10.2 ಸಾಮಾನ್ಯ ಅಸ್ವಸ್ಥತೆಗಳು ಅಂದರೆ ಸಾಮಾನ್ಯ ಅಸ್ವಸ್ಥತೆಗಳು, 4.7 ಪ್ರತಿಶತದಷ್ಟು ಜನರು ನರಮಂಡಲದ ಅಸ್ವಸ್ಥತೆಗಳನ್ನು ಹೊಂದಿರುವುದು ಕಂಡುಬಂದಿದೆ. ಅಂತೆಯೇ, 8.9 ಪ್ರತಿಶತದಷ್ಟು ಯುವಕರು ಸಾಮಾನ್ಯ ಸಮಸ್ಯೆಗಳನ್ನು ಹೊಂದಿದ್ದರು, 5.8 ಪ್ರತಿಶತದಷ್ಟು ಜನರು ಸ್ನಾಯು ಅಸ್ಥಿಪಂಜರದ ಅಸ್ವಸ್ಥತೆಗಳನ್ನು (ಸ್ನಾಯುಗಳು, ನರಗಳು, ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳು) ಮತ್ತು 5.5 ಪ್ರತಿಶತದಷ್ಟು ಜನರು ನರಮಂಡಲಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿದ್ದರು.

ವರದಿಯ ಪ್ರಕಾರ, ಕೋವಾಕ್ಸಿನ್ ಅಡ್ಡಪರಿಣಾಮಗಳು ಯುವತಿಯರಲ್ಲಿಯೂ ಕಂಡುಬಂದಿವೆ. 4.6 ರಷ್ಟು ಮಹಿಳೆಯರಲ್ಲಿ ಮುಟ್ಟಿನ ಸಮಸ್ಯೆಗಳು ವರದಿಯಾಗಿವೆ ಮತ್ತು 2.7 ಪ್ರತಿಶತದಷ್ಟು ಮಹಿಳೆಯರಲ್ಲಿ ಕಣ್ಣಿನ ಸಮಸ್ಯೆಗಳನ್ನು ತೋರಿಸಿದೆ. 0.6 ರಷ್ಟು ಜನರಲ್ಲಿ ಹೈಪೋಥೈರಾಯ್ಡಿಸಮ್ ಕಂಡುಬಂದಿದೆ.

ಇದನ್ನೂ ಓದಿ: GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

ಒಂದು ವರ್ಷದ ನಂತರ ಪರಿಣಾಮ

ಲಸಿಕೆ ಹಾಕಿದ ಒಂದು ವರ್ಷದ ನಂತರ ಇವರನ್ನು ಬಹುತೇಕರಲ್ಲಿ ಈ ಕಾಯಿಲೆಗಳು ಕಾಣಿಸಿಕೊಂಡಿದೆ. Covaxin ನ ಅಡ್ಡಪರಿಣಾಮಗಳ ಮಾದರಿಯು ಇತರ ಕರೋನಾ ಲಸಿಕೆಗಳ ಅಡ್ಡಪರಿಣಾಮಗಳ ಮಾದರಿಗಿಂತ ಭಿನ್ನವಾಗಿದೆ ಎಂದು ಅದು ಹೇಳುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಲಸಿಕೆಯ ಪರಿಣಾಮವನ್ನು ಆಳವಾಗಿ ತಿಳಿದಕೊಳ್ಳಲು ಅಧ್ಯಯನ ನಡೆಸಲಾಗುತ್ತಿದೆ ಎಂದು ಸಲಹೆ ನೀಡಲಾಗಿದೆ.

Continue Reading

ದೇಶ

Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

Hepatitis-A:ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಬುಧವಾರ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಹೆಪಟಿಟಿಸ್‌-ಎ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ವಿಶೇಷವಾಗಿ ಮಣಪ್ಪುರಂ, ಎರ್ನಾಕುಲಂ, ಕೋಯಿಕ್ಕೋಡ್‌ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಹೆಪಟಿಟಿಸ್‌-ಎ ಕೇಸ್‌ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಈ ವೈರಾಣು ವೇಗವಾಗಿ ಹರಡುವುದನ್ನು ತಪ್ಪಿಸಲು ತಲಮಟ್ಟದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Hepatitis-A
Koo

ಕೇರಳ: ಕೊರೋನಾ ವೈರಸ್‌ನಿಂದ ವರ್ಷಾನುಗಟ್ಟಲೇ ಬಳಲಿ ಇನ್ನೇನು ಚೇತರಿಸಿಕೊಳ್ಳುತ್ತಿರುವಾಗಲೇ ಕೇರಳ(Kerala)ದಲ್ಲಿ ಮತ್ತೊಂದು ವೈರಸ್‌(Virus) ಜನರ ನಿದ್ದೆಗೆಡಿಸಿದೆ. ಹೆಪಟಿಟಿಸ್‌-ಎ(Hepatitis-A) ಖಾಯಿಲೆ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಕೇರಳ ಗಡಿ ರಾಜ್ಯವಾಗಿರುವುದರಿಂದ ಕರ್ನಾಟಕದಲ್ಲೂ ಇದರ ಭೀತಿ ಹೆಚ್ಚಾಗಿದೆ.

ಇನ್ನು ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಬುಧವಾರ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಹೆಪಟಿಟಿಸ್‌-ಎ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ವಿಶೇಷವಾಗಿ ಮಣಪ್ಪುರಂ, ಎರ್ನಾಕುಲಂ, ಕೋಯಿಕ್ಕೋಡ್‌ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಹೆಪಟಿಟಿಸ್‌-ಎ ಕೇಸ್‌ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಈ ವೈರಾಣು ವೇಗವಾಗಿ ಹರಡುವುದನ್ನು ತಪ್ಪಿಸಲು ತಲಮಟ್ಟದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಎಲ್ಲಾ ಜಿಲ್ಲ ಮತ್ತು ತಾಲೂಕು ಮಟ್ಟದಲ್ಲಿ ಈ ಸಂಬಂಧ ಸಭೆ ನಡೆಸಿದ್ದು, ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಣಪ್ಪುರಣನ ಚಲಿಯಾರ್‌ ಮತ್ತು ಪೋತುಕಲ್ಲು ಪ್ರದೇಶದಲ್ಲಿ ಹೆಪಟಿಟಿಸ್‌-ಎ ಗೆ ಜನ ಬಲಿಯಾಗಿರುವ ಬಗ್ಗೆಯೂ ವರದಿಯಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ರೋಗಾಣುಗಳನ್ನು ತಡೆಯಲು ಮತ್ತು ಜನರಲ್ಲಿ ಅರಿವು ಮೂಡಿಸಲು ಶೀಘ್ರದಲ್ಲಿಯೇ ಸೂಕ್ತ ಕ್ರಮ ಜರುಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.

ಪೋತುಕಲ್ಲು ಪ್ರದೇಶದಲ್ಲಿ ಈ ಖಾಯಿಲೆ ನಿಯಂತ್ರಣಕ್ಕೆ ಬಂದಿತ್ತು. ಆದರೆ ಹೊಸ ಕೇಸ್‌ಗಳು ಮತ್ತೆ ಪತ್ತೆಯಾಗುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆ ಆರೋಗ್ಯ ಇಲಾಖೆ ಮತ್ತು ಜನಪ್ರತಿನಿಧಿಗಳು ಚಲಿಯಾರ್‌ ಮತ್ತು ಪೋಲುಕಲ್ಲು ಪ್ರದೇಶದಲ್ಲಿ ತುರ್ತು ಸಭೆ ನಡೆಸಿದ್ದಾರೆ. ಈ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳಾದ ಕೆರೆ, ಬಾವಿಗಳನ್ನು ಸ್ವಚ್ಛಗೊಳಿಸುವಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೇ ಕೇವಲ ಬಿಸಿ ನೀರನ್ನಷ್ಟೇ ಗ್ರಾಹಕರಿಗೆ ನೀಡುವಂತೆ ಎಲ್ಲಾ ಹೊಟೇಲ್‌, ರೆಸ್ಟೋರೆಂಟ್‌ಗಳಿಗೆ ಖಡಕ್‌ ಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ:Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

ಹೆಪಟಿಟಿಸ್‌-ಎ ಅಂದರೆ ಏನು?

ಹೆಪಟೈಟಿಸ್ ಎ ವೈರಸ್ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಅಥವಾ ಸಾಂಕ್ರಾಮಿಕ ವ್ಯಕ್ತಿಯೊಂದಿಗೆ ನೇರ ಸಂಪರ್ಕದ ಮೂಲಕ ಹರಡುತ್ತದೆ. ಈ ರೋಗವು ಮುಖ್ಯವಾಗಿ ರೋಗನಿರೋಧಕ ಶಕ್ತಿ ಇರದ ವ್ಯಕ್ತಿಗಳಲ್ಲಿ ಮತ್ತು ಎಚ್ಐವಿ ಮತ್ತು ಯಕೃತ್ತಿನ ಕಾಯಿಲೆಯಂತಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಬಹಳ ಬೇಗ ತಗುಲುತ್ತದೆ. ಆಯಾಸ, ಜ್ವರ, ಹೊಟ್ಟೆ ನೋವು, ವಾಕರಿಕೆ, ವಾಂತಿ, ಅತಿಸಾರ, ಹಸಿವಿನ ಕೊರತೆ, ತುರಿಕೆ ಮತ್ತು ಕಾಮಾಲೆ ಸೇರಿವೆ. ಕಣ್ಣುಗಳು, ಮೂತ್ರ, ಚರ್ಮ ಮತ್ತು ಉಗುರುಗಳ ಬಿಳಿಯ ಹಳದಿ ಬಣ್ಣಕ್ಕೆ ತಿರುಗುವುದು ಇವೆಲ್ಲಾ ಈ ಖಾಯಿಲೆಯ ಲಕ್ಷಣಗಳು. ಕೇವಲ ಬಿಸಿ ನೀರು ಕುಡಿಯುವುದು, ಆಹಾರ ಸೇವೆನೆಗೂ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯುವುದರಿಂದ ಈ ಖಾಯಿಲೆಯನ್ನು ತಡೆಯಬಹುದಾಗಿದೆ.

Continue Reading

ಆರೋಗ್ಯ

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

Health Tips in Kannada:  ಬೆಂಡೆಕಾಯಿಯನ್ನು ಕತ್ತರಿಸಿ ನೀರಿನಲ್ಲಿ ರಾತ್ರಿ ಹಾಕಿಟ್ಟು ಬೆಳಗ್ಗೆ ಅದ್ದ ಮೇಲೆ ಆ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ. ಬೆಂಡೆಕಾಯಿಯಲ್ಲಿ ಸಾಕಷ್ಟು ಪೋಷಕಾಂಶಗಳಿರುವುದರಿಂದ ಹೀಗೆ ಮಾಡುವ ಮೂಲಕ ನಿತ್ಯವೂ ಬೆಂಡೆಕಾಯಿಯ ಪೋಷಕಾಂಶಗಳನ್ನು ದೇಹಕ್ಕೆ ಲಭಿಸುವಂತೆ ಮಾಡಬಹುದು. ಬನ್ನಿ, ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ.

VISTARANEWS.COM


on

Health Tips in Kannada lady finger okra benefits
Koo

ನಿಮಗೆ ಬೆಂಡೆಕಾಯಿ ನೀರು ಕುಡಿದು ಗೊತ್ತೇ? ಅರೆ, ಇದೇನಿದು (Health Tips in Kannada) ಬೆಂಡೆಕಾಯಿ ನೀರು ಎಂದು ಆಶ್ಚರ್ಯಪಡಬೇಡಿ. ಬೆಂಡೆಕಾಯಿಯನ್ನು (Lady finger okra) ಕತ್ತರಿಸಿ ನೀರಿನಲ್ಲಿ ರಾತ್ರಿ ಹಾಕಿಟ್ಟು ಬೆಳಗ್ಗೆ ಅದ್ದ ಮೇಲೆ ಆ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ. ಬೆಂಡೆಕಾಯಿಯಲ್ಲಿ ಸಾಕಷ್ಟು ಪೋಷಕಾಂಶಗಳಿರುವುದರಿಂದ ಹೀಗೆ ಮಾಡುವ ಮೂಲಕ ನಿತ್ಯವೂ ಬೆಂಡೆಕಾಯಿಯ ಪೋಷಕಾಂಶಗಳನ್ನು ದೇಹಕ್ಕೆ ಲಭಿಸುವಂತೆ ಮಾಡಬಹುದು. ಬನ್ನಿ, ಇದರಿಂದ ಆಗುವ ಪ್ರಯೋಜನಗಳೇನು ಎಂಬುದನ್ನು ನೋಡೋಣ ಬನ್ನಿ.

ಆ್ಯಂಟಿ ಆಕ್ಸಿಡೆಂಟ್‌ಗಳು ಹೇರಳ

ಬೆಂಡೆಕಾಯಿಯಲ್ಲಿ ಆ್ಯಂಟಿ ಆಕ್ಸಿಡೆಂಟ್‌ಗಳು ಹೇರಳವಾಗಿವೆ. ಇವು ಫ್ರೀ ರ್ಯಾಡಿಕಲ್ಸ್‌ಗಳನ್ನು ಕಡಿಮೆ ಮಾಡಿ, ಆಕ್ಸಿಡೇಟಿವ್‌ ಒತ್ತಡವನ್ನೂ ಇಳಿಸುವ ಜೊತೆಗೆ ಅಂಗಾಂಶ ಮಟ್ಟದಲ್ಲಿ ಹಾನಿಯಾಗುವುದನ್ನು ತಪ್ಪಿಸುತ್ತದೆ. ಇದರಿಂದ ಕ್ಯಾನ್ಸರ್‌, ಹೃದಯದ ಕಾಯಿಲೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳ ರಿಸ್ಕ್‌ ಕಡಿಮೆಯಾಗುತ್ತದೆ.

ಮಧುಮೇಹ ಕಾಯಿಲೆ ಹತೋಟಿ

ಬೆಂಡೆಕಾಯಿಯಲ್ಲಿ ನಾರಿನಂಶ ಹೇರಳವಾಗಿ ಇರುವುದರಿಂದ ಸಕ್ಕರೆಯ ಹೀರಿಕೆಯನ್ನು ಇದು ತಡೆಯುತ್ತದೆ. ಪರಿಣಾಮವಾಗಿ ಮಧುಮೇಹದಂತಹ ಕಾಯಿಲೆ ಹತೋಟಿಗೆ ಬರುತ್ತದೆ.

ಇದನ್ನೂ ಓದಿ: Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

ಜೀರ್ಣಕ್ರಿಯೆ ಆಗುವಲ್ಲಿ ಸಹಾಯ

ಜೀರ್ಣಾಂಗವ್ಯೂಹ ವ್ಯವಸ್ಥೆಗೆ ಬೆಂಡೆಕಾಯಿ ಒಳ್ಳೆಯದು. ಜೀರ್ಣಾಂಗನಾಳಗಳನ್ನು ಇದು ಸರಿಯಾಗಿಡುವ ಜೊತೆಗೆ, ಸಹಜವಾಗಿ ಜೀರ್ಣಕ್ರಿಯೆ ಆಗುವಲ್ಲಿ ಸಹಾಯ ಮಾಡುತ್ತದೆ.

ಕೊಲೆಸ್ಟೆರಾಲ್‌ ಕಡಿಮೆ ಮಾಡುತ್ತದೆ

ಬೆಂಡೆಕಾಯಿಯಲ್ಲಿರುವ ನಾರಿನಂಶ ಕೊಲೆಸ್ಟೆರಾಲ್‌ ಅನ್ನು ಕಡಿಮೆಗೊಳಿಸುವಲ್ಲಿ ಸಹಾಯ ಮಾಡುತ್ತದೆ. ಕೊಲೆಸ್ಟೆರಾಲ್‌ ಕಡಿಮೆಯಾಗುವ ಮೂಲಕ ಸಹಜವಾಗಿಯೇ ಹೃದಯಕ್ಕೆ ಬೆಂಡೆಕಾಯಿ ಒಳ್ಳೆಯದನ್ನೇ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ ಒಳ್ಳೆಯದು

ಚರ್ಮದ ಆರೋಗ್ಯಕ್ಕೆ ಬೆಂಡೆಕಾಯಿ ಬಹಳ ಒಳ್ಳೆಯದು. ಚರ್ಮಕ್ಕೆ ಬೇಕಾದ ನೀರಿನಂಶವನ್ನು ಇದು ನೀಡುವ ಮೂಲಕ ಸದಾ ಚರ್ಮವನ್ನು ನಯವಾಗಿ ಆರೋಗ್ಯವಾಗಿ ಇರಿಸುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ಬೆಂಡೆಕಾಯಿಯಲ್ಲಿ ವಿಟಮಿನ್‌ ಸಿ ಹಾಗೂ ಎ ಧಾರಾಳವಾಗಿ ಇರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹೊರಗಿನಿಂದ ದಾಳಿ ಮಾಡುವುದರ ವಿರುದ್ಧ ಪ್ರತಿದಾಳಿ ನಡೆಸಿ ದೇಹವನ್ನು ರೋಗ ಬರದಂತೆ ಕಾಪಾಡುತ್ತದೆ.

ಎಲುಬಿನ ಆರೋಗ್ಯಕ್ಕೆ ಒಳ್ಳೆಯದು

ಬೆಂಡೆಕಾಯಿಯಲ್ಲಿ ವಿಟಮಿನ್‌ ಕೆ ಹಾಗೂ ಕ್ಯಾಲ್ಸಿಯಂ ಇರುವುದರಿಂದ ಎಲುಬಿನ ಆರೋಗ್ಯಕ್ಕೆ ಇದು ಒಳ್ಳೆಯದನ್ನೇ ಮಾಡುತ್ತದೆ. ಎಲುಬಿನ ಸವೆತವಾಗದಂತೆ ತಡೆಯುತ್ತದೆ. ಹಾಗೂ ಎಲುಬಿನ ಸಾಂದ್ರತೆ ಕಡಿಮೆಯಾಗದಂತೆ ನೋಡಿಕೊಳ್ಳುತ್ತದೆ.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ತಿನ್ನುವ ಚಟ ಕಡಿಮೆ

ಬೆಂಡೆಕಾಯಿ ನೀರು ಕುಡಿಯುವುದರಿಂದ ಹೊಟ್ಟೆ ತುಂಬಿರುವ ಅನುಭವವಾಗಿ, ಅನಗತ್ಯ ತಿನ್ನುವ ಚಟ ಕಡಿಮೆಯಾಗುತ್ತದೆ. ಆ ಮೂಲಕ ತೂಕ ಇಳಿಯುತ್ತದೆ.

ಬೆಂಡೆಕಾಯಿಯಲ್ಲಿ ವಿಟಮಿನ್‌ ಎ ಗೂ ಬೀಟಾ ಕೆರಟಿನ್‌ ಇರುವುದರಿಂದ ಇದು ಕಣ್ಣಿನ ಆರೋಗ್ಯವನ್ನು ಚೆನ್ನಾಗಿಡುವಲ್ಲಿ ಸಹಾಯ ಮಾಡುತ್ತದೆ. ಕಣ್ಣಿನ ಸಮಸ್ಯೆಗಳು ಬರದಂತೆ ತಡೆಯುತ್ತದೆ.

ಹಾಗಾದರೆ, ಈ ಬೆಂಡೆಕಾಯಿ ನೀರನ್ನು ಮಾಡುವುದು ಹೇಗೆ ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ, ಇಲ್ಲಿ ಉತ್ತರವಿದೆ:
ಬೆಂಡೆಕಾಯಿಯನ್ನು ಅದರ ಮೈಮೇಲಿರುವ ಕೊಳೆ ಹಾಗೂ ರಾಸಾಯನಿಕಗಳು ಹೋಗುವಂತೆ ಚೆನ್ನಾಗಿ ತೊಳೆಯಿರಿ. ನಂತರ ಅದರ ತುದಿಗಳನ್ನು ಕತ್ತರಿಸಿ ತೆಗೆದು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ. ಕತ್ತರಿಸಿದ ಬೆಂಡೆಕಾಯಿಯನ್ನು ಒಂದು ಬಾಟಲಿಯಲ್ಲಿ ಅಥವಾ ಲೋಟದಲ್ಲಿ ಹಾಕಿಟ್ಟು ನೀರು ಹಾಕಿ ಮುಚ್ಚಿಡಿ. ರಾತ್ರಿ ಹೀಗೆ ಮಾಡಿಟ್ಟು ಮಲಗಿದರೆ, ಬೆಳಗ್ಗೆ ಎದ್ದ ಮೇಲೆ ಬೆಂಡೆಕಾಯಿಗಳನ್ನು ಅದರಿಂದ ತೆಗೆದು ಅದರ ನೀರನ್ನು ಕುಡಿಯಿರಿ. ಬೆಳಗ್ಗೆ ಸಾಧ್ಯವಾಗದಿದ್ದರೆ ದಿನದ ಬೇರೆ ಹೊತ್ತಿನಲ್ಲೂ ಇದನ್ನು ನೀರಿಗೆ ಬದಲಾಗಿ ಕುಡಿಯಬಹುದು. ಇದರ ಮೂಲಕ ಸಾಕಷ್ಟು ಆರೋಗ್ಯ ಲಾಭಗಳನ್ನು ನೀವು ಪಡೆಯಬಹುದು.

Continue Reading

ಆರೋಗ್ಯ

Health Tips in Kannada: ತಡರಾತ್ರಿಯವರೆಗೆ ಎಚ್ಚರದಿಂದ ಇದ್ದರೆ ಆಗುವ ಸಮಸ್ಯೆಗಳೇನು ಗೊತ್ತೇ?

Health Tips in Kannada: ತಡವಾಗಿ ಮಲಗುವ ಅಭ್ಯಾಸ ಮಾಡಿಕೊಂಡ ಅನೇಕರಿಗೆ, ಇದು ಆರೋಗ್ಯದ ಮೇಲೆ ಎಂಥಾ ಪರಿಣಾಮ ಬೀರೀತು ಎಂಬ ಬಗ್ಗೆ ಸಣ್ಣ ವಯಸ್ಸಿನಲ್ಲಿ ತಿಳಿದೇ ಇರುವುದಿಲ್ಲ. ಆದರೆ, ಈ ಕೆಟ್ಟ ಅಭ್ಯಾಸವು ದಿನ ಕಳೆದ ಹಾಗೆ ನಿಧಾನವಾಗಿ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಅರ್ಥವಾಗುವಾಗ ಬಹಳ ತಡವಾಗಿರುತ್ತದೆ. ಬನ್ನಿ, ರಾತ್ರಿ ತಡವಾಗಿ ಮಲಗುವ ಅಭ್ಯಾಸವಿದ್ದರೆ ಏನೆಲ್ಲ ಆರೋಗ್ಯದ ರಿಸ್ಕ್‌ಗಳಿವೆ ಎಂಬುದನ್ನು ನೋಡೋಣ.

VISTARANEWS.COM


on

stay awake till late night what is the problem For health
Koo

ಬೆಂಗಳೂರು: ತಡರಾತ್ರಿಯವರೆಗೆ ಎದ್ದಿರುವುದು ಈಗಿನ (Health Tips in Kannada) ಮಂದಿಗೆ ಬಹಳ ಸಾಮಾನ್ಯವಾದ ಅಭ್ಯಾಸ. ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ ಜಾಲತಾಣಗಳ ವೀಕ್ಷಣೆ, ಸಿನಿಮಾ ನೋಡುವುದು, ಪಾರ್ಟಿ ಮಾಡುವುದು ಇತ್ಯಾದಿ ಇತ್ಯಾದಿ ಜೀವನಕ್ರಮ ಬದಲಾವಣೆಗಳಿಂದ ತಡರಾತ್ರಿ ಹನ್ನೆರಡು ಕಳೆದರೂ ಅನೇಕರಿಗೆ ನಿದ್ದೆ ಹತ್ತಿರ ಸುಳಿಯುವುದಿಲ್ಲ. ಹೀಗೆ ತಡವಾಗಿ ಮಲಗುವ ಅಭ್ಯಾಸ ಮಾಡಿಕೊಂಡ ಅನೇಕರಿಗೆ, ಇದು ಆರೋಗ್ಯದ ಮೇಲೆ ಎಂಥಾ ಪರಿಣಾಮ ಬೀರೀತು ಎಂಬ ಬಗ್ಗೆ ಸಣ್ಣ ವಯಸ್ಸಿನಲ್ಲಿ ತಿಳಿದೇ ಇರುವುದಿಲ್ಲ. ಆದರೆ, ಈ ಕೆಟ್ಟ ಅಭ್ಯಾಸವು ದಿನ ಕಳೆದ ಹಾಗೆ ನಿಧಾನವಾಗಿ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಅರ್ಥವಾಗುವಾಗ ಬಹಳ ತಡವಾಗಿರುತ್ತದೆ. ಬನ್ನಿ, ರಾತ್ರಿ ತಡವಾಗಿ ಮಲಗುವ ಅಭ್ಯಾಸವಿದ್ದರೆ ಏನೆಲ್ಲ ಆರೋಗ್ಯದ ರಿಸ್ಕ್‌ಗಳಿವೆ ಎಂಬುದನ್ನು ನೋಡೋಣ

ನೈಸರ್ಗಿಕ ನಿದ್ದೆಯ ಅಭ್ಯಾಸಕ್ಕೆ ಪೆಟ್ಟು

ತಡರಾತ್ರಿಯವರೆಗೆ ಎದ್ದಿರುವುದರಿಂದ ನಮ್ಮ ದೇಹದ ನೈಸರ್ಗಿಕ ನಿದ್ದೆಯ ಅಭ್ಯಾಸಕ್ಕೆ ಪೆಟ್ಟು ಬೀಳುತ್ತದೆ. ಮಾನವನ ದೇಹ ರಾತ್ರಿಯ ನಿದ್ದೆಗೆ ಸೂಕ್ತವಾದುದು. ರಾತ್ರಿಯ ವೇಳೆ ಸೊಂಪಾದ ನಿದ್ದೆ ಸಿಕ್ಕರಷ್ಟೇ ಆತ ಮರುದಿನ ಸೂರ್ಯ ಏಳುವ ಹೊತ್ತಿನಲ್ಲಿ ಮತ್ತೆ ಎಡೆಬಿಡದೆ ಕೆಲಸ ಮಾಡುವಷ್ಟು ಶಕ್ತಿ, ಚೈತನ್ಯ ಪಡೆಯುತ್ತಾನೆ. ನಿದ್ದೆ ಸಿಗದೇ ಇದ್ದರೆ, ಈ ನೈಸರ್ಗಿಕ ವ್ಯವಸ್ಥೆಯ ಮೇಲೆ ಪೆಟ್ಟು ಬೀಳುತ್ತದೆ.

ನಿದ್ದೆಯ ನಷ್ಟ

ತಡರಾತ್ರಿಯವರೆಗೆ ಎದ್ದಿರುವುದರಿಂದ ನಮಗೆ ದಕ್ಕಬೇಕಾದಷ್ಟು ಪ್ರಮಾಣದ ನಿದ್ದೆ ದಕ್ಕುವುದಿಲ್ಲ. ನಮ್ಮ ದೇಹಕ್ಕೆ ಅಗತ್ಯವಿರುವ ನಿದ್ದೆಯನ್ನು ನಾವು ನೀಡದೆ ಇದ್ದರೆ ಅದು ಖಂಡಿತವಾಗಿಯೂ ಅರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಬೊಜ್ಜು, ಮಧುಮೇಹ ಇತ್ಯಾದಿ ಸಮಸ್ಯೆಗಳು ಬರುವ ಸಂಭವ ಹೆಚ್ಚು. ದೇಹದ ರೋಗನಿರೋಧಕ ವ್ಯವಸ್ಥೇಯೇ ಹದಗೆಡುತ್ತದೆ.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಹಾರ್ಮೋನಿನಲ್ಲಿ ವ್ಯತ್ಯಾಸ

ತಡವಾಗಿ ನಿದ್ದೆ ಮಾಡುವುದರಿಂದ ಹಾರ್ಮೋನು ಸಮಸ್ಯೆಗಳೂ ಹೆಚ್ಚಾಗುತ್ತವೆ. ಹಾರ್ಮೋನಿನ ಅಸಮತೋಲನದಿಂದ ಅನೇಕ ಆರೋಗ್ಯ ಸಮಸ್ಯೆಗಳು ಬರಲಾರಂಭಿಸುತ್ತವೆ. ಹೆಚ್ಚು ಕ್ಯಾಲರಿ ಆಹಾರ ತಿನ್ನಬೇಕೆನ್ನುವ ಚಪಲ ಹೆಚ್ಚುತ್ತದೆ. ಇದರಿಂದ ಅತಿಯಾಗಿ ತಿನ್ನುವುದು ಹಾಗೂ ತೂಕ ಹೆಚ್ಚಾಗುವ ಸಂಭವ ಹೆಚ್ಚಾಗುತ್ತದೆ.

ಏಕಾಗ್ರತೆ ಕಡಿಮೆ

ನಿದ್ದೆ ಕಡಿಮೆಯಾದ ತಕ್ಷಣ ಬೆಳಗಿನ ಹೊತ್ತು ಮಾಡಬೇಕಾದ ಕೆಲಸಗಳಲ್ಲಿ ಏಕಾಗ್ರತೆ ಕಡಿಮೆಯಾಗುತ್ತದೆ. ಸ್ಮರಣಶಕ್ತಿ ಕುಗ್ಗುತ್ತದೆ.

ಮಾನಸಿಕವಾಗಿ ಕಿರಿಕಿರಿ

ನಿದ್ದೆ ತಡವಾಗಿ ಮಾಡಿದರೆ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ದೇಹಕ್ಕೆ ಒತ್ತಡದ ಹಾರ್ಮೋನನ್ನು ಸಮತೋಲನಕ್ಕೆ ತರಲು ಸಾಧ್ಯವಾಗುವುದಿಲ್ಲ. ಇದರಿಂದ ಉದ್ವೇಗ, ಮಾನಸಿಕವಾಗಿ ಕಿರಿಕಿರಿಯ ಅನುಭವವಾಗುತ್ತದೆ. ದೀರ್ಘವಾಗಿ ಉಸಿರಾಡುವುದು, ಧ್ಯಾನ, ವ್ಯಾಯಾಮದಂತಹ ಚಟುವಟಿಕೆಗಳಿಂದ ಇದನ್ನು ಹಿಡಿತಕ್ಕೆ ತರಬಹುದು.

ರೋಗ ನಿರೋಧಕ ಶಕ್ತಿ ಕ್ಷೀಣ

ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ಅಷ್ಟೇ ಅಲ್ಲ, ಇದರಿಂದಾಗಿ ಬಹುಬೇಗನೆ ಆರೋಗ್ಯ ಹದಗೆಡುವುದು, ರೋಗ ವಾಸಿಯಾಗದಿರುವುದು, ರೋಗದ ವಿರುದ್ಧ ಹೋರಾಡುವ ಶಕ್ತಿ ಕುಗ್ಗುವುದು ಇತ್ಯಾದಿ ಸಮಸ್ಯೆಗಳು ಎದುರಾಗುತ್ತವೆ.

ಮುಂದೆ ನಿದ್ರಾಹೀನತೆ ಸಮಸ್ಯೆ

ತಡರಾತ್ರಿಯವರೆಗೆ ಎದ್ದಿರುವುದರಿಂದ ಮುಂದೆ ನಿಧಾನವಾಗಿ ನಿದ್ರಾಹೀನತೆಯಂತಹ ಸಮಸ್ಯೆಯು ಎದುರಾಗುತ್ತದೆ. ಇದರಿಂದಾಗಿ ಮಾನಸಿಕವಾಗಿ ಏರುಪೇರು, ಖಿನ್ನತೆ, ಉದ್ವೇಗವೂ ಸೇರಿದಂತೆ ಹಲವು ಮಾನಸಿಕ ಸಮಸ್ಯೆಗಳೂ ಕಾಣಿಸಿಕೊಳ್ಳಬಹುದು.

ಅವಘಡಕ್ಕೆ ಕಾರಣ

ತಡವಾಗಿ ನಿದ್ದೆ ಮಾಡುವುದರಿಂದ ದೇಹಕ್ಕೆ ಬೇಕಾದಷ್ಟು ನಿದ್ದೆ ಸರಿಯಾಗಿ ಸಿಗದೇ ಹೋಗುವ ಸಂಭವವೇ ಹೆಚ್ಚು. ತಡವಾಗಿ ಎದ್ದರೆ ನೈಸರ್ಗಿಕವಾಗಿ ದೇಹಕ್ಕೆ ಸಿಗಬೇಕಾದ ನಿದ್ದೆ ಪರಿಪೂರ್ಣವಾಗಿ ಸಿಗದೇ ಹೋಗುವುದರಿಂದ, ನಿದ್ದೆಗೆಟ್ಟಂತಾಗಿ, ಇದು ಅಫಘಾತ, ಅವಘಡಗಳಿಗೂ ಕೆಲವೊಮ್ಮೆ ಕಾರಣವಾಗುತ್ತದೆ. ವಾಹನ ಚಾಲನೆಯೂ ಸೇರಿದಂತೆ ನಮ್ಮ ಚಲನಾ ಕೌಶಲ್ಯಗಳಿಗೆ ಸಂಬಂಧಿಸಿದ ಶಕ್ತಿಯು ನಿದ್ದೆಯಿಲ್ಲದ ಕಾರಣ ಕುಗ್ಗುವುದರಿಂದ ಅವಘಡ, ಅಫಘಾತಗಳಂತಹ ಅಪಾಯ ಹೆಚ್ಚು.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಹಾಗಾಗಿ ಒಟ್ಟಾರೆಯಾಗಿ ಮಾನಸಿಕ, ದೈಹಿಕ ಆರೋಗ್ಯಕ್ಕೆ ನೈಸರ್ಗಿಕವಾಗಿ ಅಗತ್ಯವಿರುವಷ್ಟು ನಿದ್ದೆಯ ಅಗತ್ಯವಿದ್ದೇ ಇದೆ. ಅಷ್ಟೇ ಅಲ್ಲ, ಅದಕ್ಕೆ ಶಿಸ್ತಿನಿಂದ ಸಮಯಪಾಲನೆಯೂ ಅಗತ್ಯ. ನಿದ್ದೆಯ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲ. ದೇಹದ ಆರೋಗ್ಯ ನಿದ್ದೆಯ ಮೇಲೆಯೂ ಅವಲಂಬಿಸಿರುವುದರಿಂದ ನಿದ್ದೆಗೆ ಪ್ರಾಮುಖ್ಯ ಕೊಡುವುದು ಬಹಳ ಮುಖ್ಯ.

Continue Reading
Advertisement
Hoarding Collapse
ದೇಶ5 mins ago

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Covaxin
ದೇಶ11 mins ago

Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

T20 World Cup 2024
ಕ್ರೀಡೆ37 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

pm narendra modi yogi adityanath
ಪ್ರಮುಖ ಸುದ್ದಿ1 hour ago

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ಉ.ಪ್ರದಲ್ಲಿ ʼಯೋಗಿ ಸ್ವಚ್ಛತಾ ಅಭಿಯಾನʼಕ್ಕೆ ಮೆಚ್ಚುಗೆ

Viral video
ವೈರಲ್ ನ್ಯೂಸ್1 hour ago

Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

Head Coach
ಕ್ರೀಡೆ1 hour ago

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Drowned in water
ಹಾಸನ2 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

HD DeveGowda Wont celebrate 92nd birthday
ರಾಜಕೀಯ2 hours ago

HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

hd revanna case
ಕ್ರೈಂ2 hours ago

HD Revanna Case: ಎಚ್‌ಡಿ ರೇವಣ್ಣ ಮತ್ತೆ ಕೋರ್ಟ್‌ನಲ್ಲಿ; ಎಸ್‌ಐಟಿ ಅಧಿಕಾರಿಗಳು ರೇವಣ್ಣ ನಿವಾಸದಲ್ಲಿ!

Murder case
ದಾವಣಗೆರೆ2 hours ago

Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌