ICC World Cup: ಪಾಕಿಸ್ತಾನ ತಂಡಕ್ಕೆ ವೀಸಾ ಸಮಸ್ಯೆ; ಭಾರತ ಪ್ರಯಾಣ ವಿಳಂಬ - Vistara News

ಕ್ರಿಕೆಟ್

ICC World Cup: ಪಾಕಿಸ್ತಾನ ತಂಡಕ್ಕೆ ವೀಸಾ ಸಮಸ್ಯೆ; ಭಾರತ ಪ್ರಯಾಣ ವಿಳಂಬ

ಭಾರತಕ್ಕೆ ಪ್ರಯಾಣಿಸಲು ವೀಸಾಗಳನ್ನು(visa) ಪಡೆಯಲು ವಿಳಂಬವಾದ ಕಾರಣ ಪಾಕ್​ ತಂಡದ ದುಬೈ ಭೇಟಿ ರದ್ದುಗೊಂಡಿದೆ ಎಂದು ವರದಿಯಾಗಿದೆ.

VISTARANEWS.COM


on

pakistan cricket team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್​(ICC World Cup) ಆರಂಭಕ್ಕೂ ಮುನ್ನವೇ ಪಾಕಿಸ್ತಾನ(Pakistan’s World Cup 2023) ತಂಡಕ್ಕೆ ಹಿನ್ನಡೆಯಾಗಿದೆ. ಭಾರತಕ್ಕೆ ಪ್ರಯಾಣಿಸಲು ವೀಸಾಗಳನ್ನು(visa) ಪಡೆಯಲು ವಿಳಂಬವಾದ ಕಾರಣ ಪಾಕ್​ ತಂಡದ ದುಬೈ ಭೇಟಿ ರದ್ದುಗೊಂಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ತಂಡ ವಿಶ್ವಕಪ್​ ಪಂದ್ಯಗಳನ್ನು ಆಡುವ ಮುನ್ನ ದುಬೈನಲ್ಲಿ ಪೂರ್ವ ತಯಾರಿ ನಡೆಸುವ ಯೋಜನೆಯಲ್ಲಿತ್ತು. ಆದರೆ ವೀಸಾ ಸಮಸ್ಯೆಯಿಂದ ಈ ಯೋಜನೆಗೆ ಅಡ್ಡಿಯುಂಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಭಾರತ ಪ್ರಯಾಣ ವಿಳಂಬವಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಹೈದರಾಬಾದ್​ನಲ್ಲಿ ಸೆಪ್ಟೆಂಬರ್ 29 ರಂದು ಕಿವೀಸ್​ ವಿರುದ್ಧ ಆಡಲಿದೆ. ಕ್ರಿಕ್​ಇನ್ಫೋ ವರದಿಯ ಪ್ರಕಾರ, ಪಾಕಿಸ್ತಾನ ತಂಡವು ಈ ಪಂದ್ಯಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರದ ಆರಂಭದಲ್ಲಿ ದುಬೈಗೆ ಪ್ರಯಾಣಿಸಬೇಕಿತ್ತು. ಆದರೆ ವೀಸಾ ಪಡೆಯುವ ಪ್ರಕ್ರಿಯೆಯಲ್ಲಿ ವಿಫಲವಾದ ಕಾರಣ ಪಾಕ್​ ತಂಡದ ದುಬೈ ಪ್ರವಾಸ ಮೊಟಕುಗೊಂಡಿದೆ.

ಸದ್ಯದ ಮಾಹಿತಿ ಪ್ರಕಾರ ಪಾಕಿಸ್ತಾನ ತಂಡ ಬುಧವಾರ ಮುಂಜಾನೆ ಲಾಹೋರ್​ನಿಂದ ದೆಹಲಿಗೆ ಆಗಮಿಸಿ ಆ ಬಳಿಕ ಹೈದಾರಾಬಾದ್​ಗೆ ಪ್ರಯಾಣಿಸಲಿದೆ ಎಂದು ವರದಿಯಾಗಿದೆ. ಏಷ್ಯಾಕಪ್​ ನಡೆಯುತ್ತಿದ್ದ ವೇಳೆಯೇ ಪಾಕ್​ ಕ್ರಿಕೆಟ್​ ಮಂಡಳಿ ವೀಸಾ ಪಡೆಯಲು ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಕೆಲ ಸೂಕ್ತ ದಾಖಲೆ ಒದಗಿಸುವಲ್ಲಿ ವಿಫಲವಾದ ಕಾರಣ ವಿಳಂಬವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ ICC World Cup 2023: ಭಾರತ ಬಿಟ್ಟು ವಿಶ್ವಕಪ್​ ಗೆಲ್ಲುವ ತಂಡ ಹೆಸರಿಸಿದ ಗಂಭೀರ್​

ಪಾಕ್​ ತಂಡಕ್ಕೆ ಮಾತ್ರ ಸಮಸ್ಯೆ

ರಾಜತಾಂತ್ರಿಕವಾಗಿಯೂ ಭಾರತ ಮತ್ತು ಪಾಕ್​ ಸಂಬಂಧ ಮೊದಲಿನಿಂದಲೇ ಸರಿಯಿಲ್ಲ. ಹೀಗಾಗಿ ಉಭಯ ದೇಶಗಳ ಪ್ರಯಾಣಕ್ಕೆ ವೀಸಾ ಪಡೆಯಲು ಕೂಡ ಹಲವು ನಿರ್ಭಂದ ಮತ್ತು ಅನೇಕ ಪ್ರಕ್ರಿಯೆಗಳು ಕೂಡ ಇವೆ. ಈಗಾಗಲೇ ಭಾರತದಲ್ಲಿ ವಿಶ್ವಕಪ್​ ಆಡಲಿರುವ 10 ತಂಡಗಳ ಪೈಕಿ 9 ದೇಶಗಳಿಗೆ ವೀಸಾ ಲಭಿಸಿದೆ. ಆದರೆ ಪಾಕ್​ ತಂಡಕ್ಕೆ ಮಾತ್ರ ವೀಸಾ ಸಿಗಬೇಕಿದೆ.

ಪ್ರೇಕ್ಷಕರಿಲ್ಲದೆ ಪಂದ್ಯ

ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್​ ನಡುವಣ ಅಭ್ಯಾಸ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ಇದಕ್ಕೆ ಕಾರಣ ಇಲ್ಲಿ ಧಾರ್ಮಿಕ ಹಬ್ಬಗಳ ಹಿನ್ನೆಲೆಯಲ್ಲಿ ಪ್ರವಾಸಿ ತಂಡಗಳಿಗೆ ಸಂಪೂರ್ಣ ಭದ್ರತೆಯನ್ನು ಒದಗಿಸಲು ಹೈದರಾಬಾದ್ ಪೊಲೀಸರು ಹಿಂದೇಟು ಹಾಕಿರುವುದು. ಈಗಾಗಲೇ ಈ ವಿಚಾರವನ್ನು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್​ಗೆ ಇಲ್ಲಿನ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಹೀಗಾಗಿ ಈ ಪಂದ್ಯ ಖಾಲಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಾಕಿಸ್ತಾನ ತಂಡ ಅಕ್ಟೋಬರ್ 6ರಂದು ನೆದರ್ಲೆಂಡ್ಸ್ ವಿರುದ್ಧ ಆಡುವ ಮೂಲಕ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈಗಾಗಲೇ ಪಾಕ್​ ಈ ಮಹತ್ವದ ಟೂರ್ನಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಬಾಬರ್ ಅಜಂ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಟಾರ್​ ಯುವ ವೇಗಿ ನಸೀಮ್​ ಶಾ ಅವರು ಏಷ್ಯಾಕಪ್​ನಲ್ಲಿ ಗಾಯಗೊಂಡ ಕಾರಣ ಈ ಟೂರ್ನಿಯಿಂದ ಹೊರಬಿದ್ದಾರೆ.

ಪಾಕಿಸ್ತಾನ ತಂಡ

ಬಾಬರ್‌ ಅಜಂ (ನಾಯಕ), ಶದಾಬ್‌ ಖಾನ್‌ (ಉಪ ನಾಯಕ), ಫಖರ್‌ ಜಮಾನ್‌, ಇಮಾಮ್‌ ಉಲ್‌ ಹಕ್‌, ಅಬ್ದುಲ್ಲಾ ಶಫೀಕ್‌, ಮೊಹಮ್ಮದ್‌ ರಿಜ್ವಾನ್‌, ಇಫ್ತಿಕಾರ್‌ ಅಹ್ಮದ್‌, ಅಘಾ ಸಲ್ಮಾನ್‌, ಸೌದ್‌ ಶಕೀಲ್‌, ಮೊಹಮ್ಮದ್‌ ನವಾಜ್‌, ಶಹೀನ್‌ ಅಫ್ರಿದಿ, ಹ್ಯಾರಿಸ್‌ ರೌಫ್‌, ಹಸನ್‌ ಅಲಿ, ಉಸಾಮ ಮಿರ್‌, ಮೊಹಮ್ಮದ್‌ ವಸೀಂ. ಮೀಸಲು ಆಟಗಾರು: ಅಬ್ರಾರ್‌ ಅಹ್ಮದ್‌, ಜಮಾನ್‌ ಖಾನ್‌ ಹಾಗೂ ಮೊಹಮ್ಮದ್‌ ಹ್ಯಾರಿಸ್‌.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi : ಚಾಂಪಿಯನ್ನರ ಜತೆ ಸ್ಮರಣೀಯ ಸಂಭಾಷಣೆ; ಭಾರತ ಕ್ರಿಕೆಟ್ ತಂಡದ ಜತೆಗಿನ ಮಾತುಕತೆಯ ವಿಡಿಯೊ ಬಿಡುಗಡೆ ಮಾಡಿದ ಮೋದಿ

Narendra Modi: ಮೋದಿ ಹಾಗೂ ಕ್ರಿಕಟಿಗರ ನಡುವಿನ ಸಂಭ್ರಮದ ಕ್ಷಣಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಕ್ರಿಕೆಟಿಗರು ಚಾಂಪಿಯನ್ ಎಂದು ಬರೆದುಕೊಂಡಿದ್ದ ಜೆರ್ಸಿಯನ್ನ ಧರಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು, ಮೋದಿಯೊಂದಿಗೆ ಕೈ ಕುಲುಕಿ ಮಾತನಾಡಿರುವುದು, ಟ್ರೋಫಿಯೊಂದಿಗೆ ಫೋಟೊ ತೆಗೆಸಿಕೊಂಡಿರುವುದು ವಿಶೇವಾಗಿತ್ತು.

VISTARANEWS.COM


on

Narendra Modi
Koo

ಬೆಂಗಳೂರು: ವೆಸ್ಟ್​​ ಇಂಡೀಸ್ ಹಾಗೂ ಅಮೆರಿಕದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವ ಕಪ್​ನಲ್ಲಿ (T20 World Cup) ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕ್ರಿಕೆಟ್​ ಪ್ರೇಮಿಗಳ ಪಾಲಿಗೆ ಅತ್ಯಂತ ಸಂಭ್ರಮದ ವಿಷಯ. ಅಂತೆಯೇ ಭಾರತಕ್ಕೆ ವಾಪಸಾದ ಟೀಮ್ ಇಂಡಿಯಾ ಸದಸ್ಯರಿಗೆ ಮುಂಬೈನ ಬೀದಿ ಬೀದಿಗಳಲ್ಲಿ ಅದ್ಧೂರಿ ಸ್ವಾಗತ ದೊರಕಿದೆ. ತೆರೆದ ಬಸ್​​ನಲ್ಲಿ ಮೆರವಣಿ, ಐತಿಹಾಸಿಕ ವಾಂಖೆಡೆ ಸ್ಟೇಡಿಯಮ್​​ನಲ್ಲಿ ಅವಿಸ್ಮರಣೀಯ ಸಮಾರಂಭವನ್ನೂ ಆಯೋಜಿಸಲಾಗಿತ್ತು. ಈ ಎಲ್ಲ ಕ್ಷಣಗಳು ಭಾರತೀಯ ಕ್ರಿಕೆಟ್ ಇತಿಹಾಸದ ಪುಸ್ತಕದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಲಾಗಿದೆ. ಆದರೆ, ಇದಕ್ಕಿಂತ ಮೊದಲು ಭಾರತಕ್ಕೆ ಏರ್​ ಇಂಡಿಯಾದ ವಿಶೇಷ ವಿಮಾನದಲ್ಲಿ ಬಂದಿಳಿದ ಚಾಂಪಿಯನ್ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ವಿಶೇಷ ಆತಿಥ್ಯ ನೀಡಿದ್ದರು. ಗುರುವಾರ (ಜುಲೈ4ರಂದು) ಬೆಳಗ್ಗೆ 11 ಗಂಟೆಯಿಂದ 12 ಗಂಟೆಯ ತನಕ ಮೋದಿ ಕ್ರಿಕೆಟಿಗರೊಂದಿಗೆ ಮಾತುಕತೆ ನಡೆಸಿದ್ದರು.

ಮೋದಿ ಹಾಗೂ ಕ್ರಿಕಟಿಗರ ನಡುವಿನ ಸಂಭ್ರಮದ ಕ್ಷಣಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಕ್ರಿಕೆಟಿಗರು ಚಾಂಪಿಯನ್ ಎಂದು ಬರೆದುಕೊಂಡಿದ್ದ ಜೆರ್ಸಿಯನ್ನ ಧರಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು, ಮೋದಿಯೊಂದಿಗೆ ಕೈ ಕುಲುಕಿ ಮಾತನಾಡಿರುವುದು, ಟ್ರೋಫಿಯೊಂದಿಗೆ ಫೋಟೊ ತೆಗೆಸಿಕೊಂಡಿರುವುದು ವಿಶೇವಾಗಿತ್ತು. ಕೊನೆಯಲ್ಲಿ ಮೋದಿ ಅವರಿಗೆ ಚಾಂಪಿಯನ್​ ಎಂದು ಬರೆದಿದ್ದ 1 ಸಂಖ್ಯೆಯ ಜೆರ್ಸಿಯನ್ನೂ ನೀಡಿದ್ದರು. ಈ ಎಲ್ಲ ಕ್ಷಣಗಳು ಮೋದಿ ಅವರಿಗೆ ಖುಷಿ ಕೊಟ್ಟಿತ್ತು. ಈ ಬಗ್ಗೆ ಅವರು ಶುಕ್ರವಾರ ಸೋಶಿಯಲ್ ಮೀಡಿಯಾ ಪೋಸ್ಟ್ ಒಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ‘ವಿಶ್ವ ಟಿ 20 ಚಾಂಪಿಯನ್ ಭಾರತೀಯ ಕ್ರಿಕೆಟ್ ತಂಡದೊಂದಿಗೆ ಅವಿಸ್ಮರಣೀಯ ಸಂಭಾಷಣೆ,’ ಎಂದು ಬರೆದುಕೊಂಡಿದ್ದಾರೆ.

ವಿಶ್ವ ಕಪ್​ ಗೆದ್ದುಕೊಂಡು ಭಾರತಕ್ಕೆ ಬಂದಿದ್ದ ಆಟಗಾರರಿಗೆ ಪ್ರೇರಣಾದಾಯಕ ಮಾತುಗಳಿಂದ ಮೋದಿ ಹುರಿದುಂಬಿಸಿದ್ದರು. ಅಲ್ಲದೆ ಆಟಗಾರರು ಕಠಿಣ ಹಾಗೂ ಒತ್ತಡದ ಸಂದರ್ಭದಲ್ಲಿ ತೋರಿದ ಮನಸ್ಥಿತಿಯನ್ನು ಹೊಗಳಿದ್ದರು. ಈ ಎಲ್ಲ ಮಾತುಕತೆಯ ತುಣುಕುಗಳನ್ನು ಒಟ್ಟಾಗಿಸಿ ಸಣ್ಣ ವಿಡಿಯೊವೊಂದನ್ನು ಮಾಡಿ ನರೇಂದ್ರ ಮೋದಿ ಅವರು ಅಧಿಕೃತ ಹ್ಯಾಂಡಲ್​ ಮೂಲಕ ಶೇರ್ ಮಾಡಲಾಗಿದೆ.

ಯೂಟ್ಯೂಬ್ ಮೂಲಕ ಬಿಡುಗಡೆ ಮಾಡಿರುವ ವಿಡಿಯೊ ಸುಮಾರು 41 ನಿಮಿಷವಿದೆ. ಅದರಲ್ಲಿ ಆಟಗಾರರು ಹಾಗೂ ಮೋದಿ ನಡುವಿನ ನೇರ ಸಂಭಾಷಣೆಯಿದೆ. ಕೋಚ್​ ದ್ರಾವಿಡ್​, ನಾಯಕ ರೋಹಿತ್​, ಸ್ಟಾರ್ ಬ್ಯಾಟರ್​ ವಿರಾಟ್​ ಸೇರಿದಂತೆ ಎಲ್ಲರ ನಡುವಿನ ಸಂಭಾಷಣೆಯನ್ನು ವಿಡಿಯೊ ಮೂಲಕ ವೀಕ್ಷಿಸಬಹುದು.

ಇದನ್ನೂ ಓದಿ: T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

ಮೋದಿ ಅವರ ಜತೆ ಆಟಗಾರರು ಉಪಾಹಾರ ಸೇವಿಸಿದರು. ನಂತರ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಮೋದಿ ವಿಶ್ವಕಪ್‌ ಹೀರೋಗಳನ್ನು ಸನ್ಮಾನಿಸಿ, ಅಭಿನಂದಿಸಿದರು. ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಗೆದ್ದುಕೊಂಡ ರೋಹಿತ್‌ ಶರ್ಮ ಮತ್ತು ತಂಡದ ಗೆಲುವನ್ನು ಪ್ರಧಾನಿ ಕೊಂಡಾಡಿದರು.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

Continue Reading

ಕ್ರೀಡೆ

Team India: ರೋಹಿತ್​, ಸೂರ್ಯಕುಮಾರ್​, ದುಬೆ, ಜೈಸ್ವಾಲ್​ಗೆ ಸನ್ಮಾನ ಮಾಡಿದ ಸಿಎಂ ಏಕನಾಥ್​ ಶಿಂಧೆ

Team India: ಶುಕ್ರವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಹಾರಾಷ್ಟ ಮುಖ್ಯಮಂತ್ರಿ ಏಕನಾಥ್ ಶಿಂಧೆ(Maharashtra CM Eknath Shinde) ಅವರು ಮುಂಬೈ ಆಟಗಾರಿಗೆ ಗಣೇಶನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಿದರು.

VISTARANEWS.COM


on

Team India
Koo

ಮುಂಬಯಿ: ಟಿ20 ವಿಶ್ವಕಪ್ ತಂಡದ​ ಸದ್ಯಸರಾಗಿದ್ದ ಮುಂಬೈಯ ರೋಹಿತ್​ ಶರ್ಮ(Rohit Sharma), ಸೂರ್ಯಕುಮಾರ್​ ಯಾದವ್(Suryakumar Yadav)​, ಶಿವಂ ದುಬೆ(Shivam Dube) ಮತ್ತು ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರಿಗೆ ಶುಕ್ರವಾರ ಮಹಾರಾಷ್ಟ ಮುಖ್ಯಮಂತ್ರಿ ಏಕನಾಥ್ ಶಿಂಧೆ(Maharashtra CM Eknath Shinde) ಅವರು ತಮ್ಮ ಕಚೇರಿಯಲ್ಲಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಶುಕ್ರವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಶಿಂಧೆ ಅವರು ಮುಂಬೈ ಆಟಗಾರಿಗೆ ಗಣೇಶನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಿದರು. ಬಳಿಕ ಕೆಲ ಕಾಲ ಆಟಗಾರರೊಂದಿಗೆ ಮಾತು ಕತೆ ನಡೆಸಿ ಟಿ20 ವಿಶ್ವಕಪ್​ನ ಅನುಭವಗಳನ್ನು ಆಲಿಸಿದರು.

ಗುರುವಾರ ಟೀಮ್​ ಇಂಡಿಯಾ(Team India) ನವದೆಹಲಿಗೆ ಬಂದಿಳಿಯುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದ್ದರು. ಈ ವೇಳೆ ನೆರದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರ, ಡೊಳ್ಳು, ತಮಟೆ ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿತ್ತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿ ಮಧ್ಯಾಹ್ನ 3.42ಕ್ಕೆ ತಂಡ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ಮುಂಬೈ ತಲುಪಿದ ತಂಡಕ್ಕೆ ಭರ್ಜರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಆಟಗಾರರು ತೆರೆದ ಬಸ್​ನಲ್ಲಿ ವಿಶ್ವಕಪ್​ ಟ್ರೋಫಿಯೊಂದಿಗೆ ರೋಡ್ ಶೋ ನಡೆಸಿದ್ದರು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ರೋಹಿತ್​ ಅವರು ತಮ್ಮ ಬಾಲ್ಯದ ಗೆಳೆಯರನ್ನು ಭೇಟಿ ಮಾಡಿದರು. ಈ ವೇಳೆ ಗೆಳೆಯರು ಸೆಲ್ಯೂಟ್​ ಹೊಡೆದು, ರೋಹಿತ್​ ಅವರನ್ನು ಭುಜದ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಈ ವೇಳೆ​ ಟೀಮ್​ ಇಂಡಿಯಾ ಆಟಗಾರ, ರೋಹಿತ್​ ಅವರ ಆಪ್ತರಾಗಿರುವ ತಿಲಕ್​ ವರ್ಮಾ ಕೂಡ ಜತೆಗಿದ್ದರು. ಇವರು ಕೂಡ ಸೆಲ್ಯೂಟ್​ ಹೊಡೆದು ರೋಹಿತ್​ಗೆ ಗೌರವಿಸಿದ್ದಾರೆ.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ‘ಆ ವಿಷಯಗಳನ್ನು ನನ್ನಿಂದ ವಿವರಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ, ಯಾವುದನ್ನೂ ನಾನು ಸ್ಕ್ರಿಪ್ಟ್ ಮಾಡಿಲ್ಲ. ನಾನು ಮೈದಾನಕ್ಕೆ ಇಳಿದಾಗ ಆ ಕ್ಷಣವನ್ನು ಅನುಭವಿಸುತ್ತಿದ್ದೆ. ಗೆಲುವು ತಂದು ಕೊಟ್ಟ ಈ ಪಿಚ್​ನ ಋಣವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಜೀವನದುದ್ದಕ್ಕೂ ಈ ಪಿಚ್​ನ ಮಣ್ಣಿನ ನೆನಪನ್ನು ಇಟ್ಟು ಕೊಳ್ಳುವ ಸಲುವಾಗಿ ನಾನು ಪಿಚ್​ನ ಮಣ್ಣು ತಿಂದೆ” ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

T20 World Cup : ಟಿ20 ವಿಶ್ವ ಕಪ್​ ಗೆದ್ದುಕೊಂಡು ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

VISTARANEWS.COM


on

T20 World Cup
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಮುಂಬೈನಲ್ಲಿ ಆಯೋಜಿಸದೆ ಗುಜರಾತ್​​ನ ಅಹಮದಾಬಾದ್​ನಲ್ಲಿರುವ ವಿಶ್ವ ವಿಖ್ಯಾತ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಿಸಿರುವ ಬಗ್ಗೆ ಕ್ರಿಕೆಟ್ ಮುಂಬೈ ಅಭಿಮಾನಿಗಳಿಗೆ ಬೇಸರವಿತ್ತು. ಕ್ರಿಕೆಟ್​​ ಕಾಶಿಯಾಗಿರುವ ವಾಂಖೆಡೆ ಸ್ಟೇಡಿಯಮ್​ನಲ್ಲೇ ಪಂದ್ಯ ನಡೆಸಬೇಕು ಎಂಬುದು ಬಹುತೇಕ ಭಾರತೀಯರ ಒತ್ತಾಸೆಯಾಗಿತ್ತು. ಆದರೆ, ದೊಡ್ಡ ಸ್ಟೇಡಿಯಮ್​ (1.30 ಲಕ್ಷ ಮಂದಿ ಪ್ರೇಕ್ಷಕರನ್ನು ತುಂಬಿಕೊಳ್ಳುವ ಸಾಮರ್ಥ್ಯ) ಎಂಬ ಕಾರಣಕ್ಕೆ ನರೇಂದ್ರ ಮೋದಿ ಸ್ಟೇಡಿಯಮ್​ಗೆ ಫೈನಲ್ ಪಂದ್ಯವನ್ನು ವರ್ಗಾಯಿಸಲಾಯಿತ್ತು. ಫೈನಲ್​ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತಿತ್ತು. ಇದೀಗ ಆ ನೋವನ್ನು ಶಿವಸೇನೆ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಹೊರ ಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆ. ಟಿ20 ವಿಶ್ವ ಕಪ್​ ಗೆದ್ದುಕೊಂಡು (T20 World Cup ) ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

ಮುಂಬೈನಲ್ಲಿ ನಿನ್ನೆ ನಡೆದ ವಿಶ್ವ ಕಪ್​ ಟ್ರೋಫಿಯ ಸಂಭ್ರಮಾಚರಣೆ ಬಿಸಿಸಿಐಗೆ ನೇರ ಸಂದೇಶವಾಗಿದೆ. ವಿಶ್ವಕಪ್ ಫೈನಲ್ ಪಂದ್ಯವನ್ನು ಮುಂಬೈನಿಂದ ಎಂದಿಗೂ ಕಸಿದುಕೊಳ್ಳಬೇಡಿ” ಎಂದು ಆದಿತ್ಯ ಠಾಕ್ರೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2024 ರ ಚಾಂಪಿಯನ್ ಆಗಿರುವ ಭಾರತೀಯ ಕ್ರಿಕೆಟ್ ತಂಡವನ್ನು ಮುಂಬೈನಲ್ಲಿ ಗುರುವಾರ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾರಿ ಜನಸಮೂಹ ಸ್ವಾಗತಿಸಿದ್ದರು. ಅದಾದ ಒಂದು ದಿನದ ನಂತರ ಆದಿತ್ಯ ಬಿಸಿಸಿಐ ವಿರುದ್ಧ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

ಟಿ 20 ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಗಂಟೆಗಳ ಕಾಲ ಕಾದಿದ್ದರು. ಎಂಎಸ್ ಧೋನಿ ನಾಯಕತ್ವದಲ್ಲಿ 2007 ರಲ್ಲಿ ಭಾರತದ ಮೊದಲ ಟಿ 20 ವಿಶ್ವಕಪ್ ಗೆಲುವು, 2011 ರ ಕ್ರಿಕೆಟ್ ವಿಶ್ವಕಪ್ ಗೆಲುವು ಮತ್ತು 2013 ರಲ್ಲಿ ಸಚಿನ್ ತೆಂಡೂಲ್ಕರ್ ಅವರ ಭಾವನಾತ್ಮಕ ವಿದಾಯ ಸೇರಿದಂತೆ ಅನೇಕ ಐತಿಹಾಸಿಕ ಕ್ರಿಕೆಟ್ ಘಟನೆಗಳಿಗೆ ವಾಂಖೆಡೆ ಆತಿಥ್ಯ ವಹಿಸಿದೆ.

ಅವಕಾಶಗಳು ಮತ್ತು ಕಾರ್ಯಕ್ರಮಗಳನ್ನು ಮುಂಬೈನಿಂದ ಅಹಮದಾಬಾದ್​​ಗೆ ಸ್ಥಳಾಂತರಿಸಿದ್ದಕ್ಕಾಗಿ ಠಾಕ್ರೆ ಈ ಹಿಂದೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೇ ತಿಂಗಳ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ, ಕೈಗಾರಿಕೆಗಳು ಮತ್ತು ಯೋಜನೆಗಳನ್ನು ಗುಜರಾತ್​ಗೆ ಸ್ಥಳಾಂತರಿಸಿದ್ದರಿಂದ ಮಹಾರಾಷ್ಟ್ರವು ಗಮನಾರ್ಹ ನಷ್ಟ ಎದುರಿಸಿದೆ ಎಂದು ಆದಿತ್ಯ ಉಲ್ಲೇಖಿಸಿದ್ದರು.

ಇಂಟರ್​​ನ್ಯಾಷನಲ್​ ಫೈನಾನ್ಸ್ ಸೆಂಟರ್, ವೇದಾಂತ ಫಾಕ್ಸ್​ಕಾನ್​, ಬೃಹತ್ ಡ್ರಗ್​ (ಔಷಧ) ಪಾರ್ಕ್ ಮತ್ತು ವೈದ್ಯಕೀಯ ಸಾಧನಗಳ ಪಾರ್ಕ್ ಸೇರಿಕೊಂಡಿವೆ. ಮುಂಬೈನಲ್ಲಿ ನಡೆಯಬೇಕಿದ್ದ ವಿಶ್ವಕಪ್ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರಿಸಲಾಗಿದೆ ಎಂಬುದಾಗಿಯೂ ಅವರು ಗಮನ ಸೆಳೆದಿದ್ದರು.

Continue Reading

ಕ್ರೀಡೆ

Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

Virat Kohli’s Phone Wallpaper: ಕೊಹ್ಲಿ ಮಾತ್ರವದಲ್ಲದೆ, ಆ್ಯಪಲ್‌ ಸಿಇಒ ಸ್ಟೀವ್ ಜಾಬ್ಸ್, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಸೇರಿ ಜಗತ್ತಿನಾದ್ಯಂತ ಹಲವು ಪ್ರಸಿದ್ಧ ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳೆಲ್ಲ ಬಾಬಾ ಭಕ್ತರಾಗಿದ್ದಾರೆ

VISTARANEWS.COM


on

Virat Kohli's Phone Wallpaper
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(Virat Kohli) ಅವರು ಮೊಬೈಲ್​ನ ಹೋಮ್​ ಸ್ಕ್ರೀನ್​ನಲ್ಲಿರುವ(Virat Kohli’s phone wallpaper) ಫೋಟೊ ಒಂದು ವೈರಲ್​ ಆಗಿದ್ದು, ಈ ಫೋಟೊದಲ್ಲಿರುವ ವ್ಯಕ್ತಿ ಯಾರೆಂದು ತಿಳಿದುಕೊಳ್ಳುವ ಆಸಕ್ತಿ ಮತ್ತು ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.​

ಹೌದು ವಿರಾಟ್​ ಮೊಬೈಲ್​ ವಾಲ್​ ಪೇಪರ್​ನಲ್ಲಿರುವ ಫೋಟೊ ನೀಮ್ ಕರೋಲಿ ಬಾಬಾ ಅವರದ್ದಾಗಿದೆ. ವಿರಾಟ್​ ಕೊಹ್ಲಿ ಅವರು 2 ವರ್ಷಗಳ ಕಾಲ ತಮ್ಮ ಬ್ಯಾಟಿಂಗ್​ ಫಾರ್ಮ್​ ಕಳೆದುಕೊಂಡು ಇನ್ನೇನು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಕೊನೆಗೊಳ್ಳುತ್ತದೆ ಎನ್ನುವಷ್ಟರಲ್ಲಿ ಕೊಹ್ಲಿ ಅವರನ್ನು ಪತ್ನಿ ಅನುಷ್ಕಾ ಶರ್ಮ ಕರೋಲಿ ಬಾಬಾ ಆಶ್ರಮಕ್ಕೆ ಕರೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದಾಗಿ ಕೊಹ್ಲಿ ಆಡಿದ ಮರು ಪಂದ್ಯದಲ್ಲೇ ಶತಕ ಬಾರಿಸಿ ಸಂಭ್ರಮಿಸಿದ್ದರು. ಈ ಪವಾಡ ನಡೆದಾಗಿನಿಂದಲೂ ಕೊಹ್ಲಿ ಅವರು ಕರೋಲಿ ಬಾಬಾ ಅವರ ಭಕ್ತರಾಗಿದ್ದಾರೆ.

ಕೊಹ್ಲಿ ಮಾತ್ರವದಲ್ಲದೆ, ಆ್ಯಪಲ್‌ ಸಿಇಒ ಸ್ಟೀವ್ ಜಾಬ್ಸ್, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಸೇರಿ ಜಗತ್ತಿನಾದ್ಯಂತ ಹಲವು ಪ್ರಸಿದ್ಧ ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳೆಲ್ಲ ಬಾಬಾ ಭಕ್ತರಾಗಿದ್ದಾರೆ. ಕೊಹ್ಲಿ ಬಿಡುವು ಸಿಕ್ಕ ವೇಳೆ ಕುಟುಂಬ ಸಮೇತರಾಗಿ ಕರೋಲಿ ಬಾಬಾ ಆಶ್ರಮಕ್ಕೆ ಭೇಟಿ ನೀಡುತ್ತಿರುತ್ತಾರೆ.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಯಾರು ಈ ಕರೋಲಿ ಬಾಬಾ?


ಕರೋಲಿ ಬಾಬಾರನ್ನು ಅವರ ಭಕ್ತರು ಭಗವಾನ್ ಹನುಮಂತನ ಅವತಾರವೆಂದೇ ನಂಬುತ್ತಾರೆ. ತಾನೊಬ್ಬ ಸಾಮಾನ್ಯ ವ್ಯಕ್ತಿ ಎಂದು ಸ್ವತಃ ಬಾಬಾ ಹೇಳಿದ್ದರೂ ಕೂಡ ಭಕ್ತರು ಮಾತ್ರ ಅವರನ್ನು ಪೂಜಿಸುವುದು ನಿಲ್ಲಿಸಿಲ್ಲ. ನೀಮ್ ಕರೋಲಿ ಬಾಬಾ ಅವರ ಮೂಲ ಹೆಸರು ಲಕ್ಷ್ಮೀನಾರಾಯಣ ಶರ್ಮಾ. ಬಾಬಾರ ಜೀವನದಲ್ಲಿ ನಡೆದ ಅನೇಕ ಘಟನೆಗಳು ಅವರ ಸಾಮರ್ಥ್ಯ, ಶಕ್ತಿ ಮತ್ತು ದಯೆಯಿಂದ ಅವರನ್ನು ಆಂಜನೇಯನ ಅವತಾರವೆಂದು ಪರಿಗಣಿಸಲಾಗಿದೆ.

ಲಂಡನ್​ಗೆ ತೆರಳಿದ ಕೊಹ್ಲಿ


ಟೀಮ್​ ಇಂಡಿಯಾ ವಿಜಯೋತ್ಸವ ಆಚರಣೆ ಮುಗಿದ ತಕ್ಷಣ ವಿರಾಟ್​ ಕೊಹ್ಲಿ ಅವರು ಲಂಡನ್​ಗೆ ಪ್ರಯಾಣಿಸಿದ್ದಾರೆ. ಪತ್ನಿ ಅನುಷ್ಕಾ ಮತ್ತು ಇಬ್ಬರು ಮಕ್ಕಳು ಲಂಡನ್​ನಲ್ಲಿರುವ ಕಾರಣ ಕುಟುಂಬದ ಜತೆ ಕಾಲ ಕಳೆಯಲು ಕೊಹ್ಲಿ ನೇರವಾಗಿ ಮುಂಬೈನಿಂದ ಲಂಡನ್​ ವಿಮಾನ ಏರಿದ್ದಾರೆ.

ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು.

Continue Reading
Advertisement
CM Siddaramaiah
ಕರ್ನಾಟಕ8 mins ago

CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

karnataka Weather Forecast
ಮಳೆ52 mins ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

district administration has made an innovative attempt for the first time in the state for the marriage of farmer youth and disabled people
ಕರ್ನಾಟಕ54 mins ago

Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

Bajaj Freedom 125
ಪ್ರಮುಖ ಸುದ್ದಿ56 mins ago

Bajaj Freedom 125 CNG : ಬಜಾಜ್​ ಕಂಪನಿಯ ಸಿಎನ್​ಜಿ ಬೈಕ್​ ಬಿಡುಗಡೆ; ಕೆ.ಜಿಗೆ 102 ಕಿಲೋ ಮೀಟರ್​​ ಮೈಲೇಜ್​

Keir Starmer
ಪ್ರಮುಖ ಸುದ್ದಿ1 hour ago

Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

Bikini Dress
Latest1 hour ago

Bikini Day: ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆ ಉಡಾಯಿಸಿದ ಸುಂದರಿಯರಿವರು!

Narendra Modi
ಪ್ರಮುಖ ಸುದ್ದಿ1 hour ago

Narendra Modi : ಚಾಂಪಿಯನ್ನರ ಜತೆ ಸ್ಮರಣೀಯ ಸಂಭಾಷಣೆ; ಭಾರತ ಕ್ರಿಕೆಟ್ ತಂಡದ ಜತೆಗಿನ ಮಾತುಕತೆಯ ವಿಡಿಯೊ ಬಿಡುಗಡೆ ಮಾಡಿದ ಮೋದಿ

Monsoon Fashion
ಫ್ಯಾಷನ್1 hour ago

Monsoon Fashion: ಮಾನ್ಸೂನ್‌ಗೆ ರೀ ಎಂಟ್ರಿ ನೀಡಿದ ಪ್ರಿಂಟೆಡ್‌ ಕಲರ್‌ ನೆಕ್‌ ಕುರ್ತಾ ಫ್ಯಾಷನ್‌

BJP Karnataka
ಕರ್ನಾಟಕ1 hour ago

BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sudha Murty
ಬೆಂಗಳೂರು2 hours ago

Sudha Murty: ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ; ಇದಕ್ಕೆ ಕಾರಣ ಕಾಶಿಯಂತೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ52 mins ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ3 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ3 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ5 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ6 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು8 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು8 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ13 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌