ICC World Cup 2023: ವಿಶ್ವಕಪ್​ ಸೆಮಿಫೈನಲ್​ ತಂಡ ಪ್ರಕಟಿಸಿದ ಇರ್ಫಾನ್​ ಪಠಾಣ್​ - Vistara News

ಕ್ರಿಕೆಟ್

ICC World Cup 2023: ವಿಶ್ವಕಪ್​ ಸೆಮಿಫೈನಲ್​ ತಂಡ ಪ್ರಕಟಿಸಿದ ಇರ್ಫಾನ್​ ಪಠಾಣ್​

ಇರ್ಫಾನ್ ಪಠಾಣ್ ಪ್ರಕಾರ ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

former Indian cricketer Irfan Pathan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಏಕದಿನ ವಿಶ್ವಕಪ್​ನಲ್ಲಿ(ICC World Cup 2023) ಯಾವ ತಂಡ ಗೆಲ್ಲಬಹುದೆಂದು ಮತ್ತು ಸೆಮಿಫೈನಲ್​ ಪ್ರವೇಶ ಪಡೆಯಬಹುದು ಎಂದು ಈಗಾಗಲೇ ಹಲವು ಕ್ರಿಕೆಟ್​ ಪಂಡಿತರು ಭವಿಷ್ಯ ನುಡಿದ್ದಾರೆ. ಹೆಚ್ಚಾಗಿ ಎಲ್ಲರು ಭಾರತವೇ ಈ ಬಾರಿ ವಿಶ್ವಕಪ್​ ಗೆಲ್ಲುವ ನೆಚ್ಚಿನ ತಂಡ ಎಂದು ಹೇಳಿದ್ದಾರೆ. ಭಾರತ ತಂಡ ಮಾಜಿ ಆಟಗಾರ ಇರ್ಫಾನ್​ ಪಠಾಣ್(irfan pathan)​ ಕೂಟ ತಮ್ಮ ಆಯ್ಕೆ ನಾಲ್ಕು ಸೆಮಿಫೈನಲ್ ತಂಡವನ್ನು ಪ್ರಕಟಿಸಿದ್ದಾರೆ.

ವಿಶ್ವಕಪ್​ ಕುರಿತು ನಡೆಸಿದ ಸಂದರ್ಶನದಲ್ಲಿ ಅಭಿಪ್ರಾಯ ಹಂಚಿಕೊಂಡ 2007ರ ವಿಶ್ವಕಪ್‌ ವಿಜೇತ ತಂಡದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್, ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಗಂಭೀರ್ ಪ್ರಕಾರ ಆಸೀಸ್​ ಚಾಂಪಿಯನ್​

2011ರ ವಿಶ್ವಕಪ್​ನಲ್ಲಿ ಆಡಿದ್ದ ಮಾಜಿ ಆಟಗಾರ ಗೌತಮ್​ ಗಂಭೀರ್(gautam gambhir) ಈ ಬಾರಿ​ ಆಸ್ಟ್ರೇಲಿಯಾ ಆರನೇ ಬಾರಿ ವಿಶ್ವಕಪ್​ ಗೆಲ್ಲಲಿದೆ. ಈ ತಂಡದಲ್ಲಿ ಉತ್ತಮ ಆಲ್​ರೌಂಡರ್​, ಅದ್ಭುತ ವೇಗಿಗಳು ಕಾಣಿಸಿಕೊಂಡಿದ್ದಾರೆ. ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಕೂಡ ಕಪ್​ ಗೆಲ್ಲುವುದು ಕಷ್ಟ ಆದರೆ ಫೈನಲ್​ ಪ್ರವೇಶಿಸಬಹುದು. ಭಾರತ ಮಾತ್ರ ಸೆಮಿಫೈನಲ್​ ಹಂತಕ್ಕೇರಿದರೆ ದೊಡ್ಡ ಸಾಧನೆ. ಒಂದೆರಡು ಆಟಗಾರರನ್ನು ಬಿಟ್ಟರೆ ಇನಿಂಗ್ಸ್​ ಕಟ್ಟಬಲ್ಲ ಆಟಗಾರರು ವಿಶ್ವಕಪ್​ ತಂಡದಲ್ಲಿಲ್ಲ. ಹೀಗಾಗಿ ಭಾರತ ಈ ಬಾರಿ ಕಪ್​ ಗೆಲ್ಲುವುದು ಅಸಾಧ್ಯ ಎಂದು ಹೇಳಿದ್ದಾರೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ವಿರುದ್ಧ ಆಡುವ ಮೂಲಕ ಆಸ್ಟ್ರೇಲಿಯಾ ತನ್ನ ವಿಶ್ವ ಕಪ್​ ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ ICC World Cup: ಏಕದಿನ ವಿಶ್ವಕಪ್​ ಇತಿಹಾಸದಲ್ಲಿ ಹ್ಯಾಟ್ರಿಕ್​ ವಿಕೆಟ್​ ಪಡೆದ ಟಾಪ್​ 5 ಬೌಲರ್​ಗಳು

ಯುವಿ ಹೇಳಿದ ಭವಿಷ್ಯವೇನು?

ವಿಶ್ವಕಪ್ ಹೀರೊ, ಸಿಕ್ಸರ್ ಸಿಂಗ್ ಯುವರಾಜ್ ಸಿಂಗ್(Yuvraj Singh) ಕೂಡ ಭಾರತ ಈ ಬಾರಿ ವಿಶ್ವಕಪ್​ ಗೆಲ್ಲುವುದು ಅನುಮಾನ ಎಂದು ಹೇಳಿದ್ದರು. ಯುಟ್ಯೂಬ್ ವಾಹಿನಿಯ ‘ಕ್ರಿಕೆಟ್ ಬಾಸು’ ಚಾನಲ್‌ನಲ್ಲಿ ಮಾತನಾಡಿದ ಯುವರಾಜ್​ ಸಿಂಗ್​, “ಒಬ್ಬ ಅಪ್ಪಟ ದೇಶಪ್ರೇಮಿಯಾಗಿ ನಾನು ಕೂಡ ಭಾರತ ತಂಡ ಕಪ್​ ಗೆಲ್ಲುವುದನ್ನು ನೋಡಲು ಬಯಸುತ್ತೇನೆ. ಆದರೆ ಭಾರತ ತಂಡ ಟ್ರೋಫಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಲು ಕಷ್ಟಕರ. ಏಕೆಂದರೆ ಭಾರತ ತಂಡದಲ್ಲಿ ಹಲವು ಸಮಸ್ಯೆಗಳು ಕಾಣುತ್ತಿದೆ, ಇದು ಪರಿಹಾರ ಕಾಣುವವರೆಗೆ ಕಪ್​ ಗೆಲ್ಲುವುದು ಕಷ್ಟ” ಎಂದು ಹೇಳಿದ್ದರು.

“ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ಸಮಸ್ಯೆ ಎದ್ದು ಕಾಣುತ್ತಿದೆ. 4 ಮತ್ತು 5 ಕ್ರಮಾಂಕದ ಬ್ಯಾಟರ್‌ಗಳ ಪ್ರದರ್ಶನ ತಂಡದ ಗೆಲುವನನ್ನು ನಿರ್ಧರಿಸಿತ್ತದೆ. ಆದರೆ ಸದ್ಯ ಭಾರತ ತಂಡದಲ್ಲಿ ಈ ಸ್ಥಾನಕ್ಕೆ ಸೂಕ್ತ ಆಟಗಾರ ಇಲ್ಲ. ಕಳೆದ ಕೆಲ ವರ್ಷಗಳಿಂದಲೂ ತಂಡಕ್ಕೆ ಇದುವೇ ಹಿನ್ನಡೆಯಾಗಿದೆ. 2011 ವಿಶ್ವ ಕಪ್​ನಲ್ಲಿ ತಂಡ ಮಧ್ಯಮ ಕ್ರಮಾಂಕದಲ್ಲಿ ಬಲಿಷ್ಠವಾಗಿತ್ತು. ಹೀಗಾಗಿ ತಂಡ ಕಪ್​ ಗೆಲ್ಲುವಲ್ಲಿ ಸಹಕಾರಿಯಾಯಿತು. ಇನ್ನು ಗಾಯದ ಸಮಸ್ಯೆಯೂ ಭಾರತಕ್ಕೆ ಹಿನ್ನಡೆಯಾಗಿದೆ” ಹೀಗಾಗಿ ಭಾರತ ಕಪ್​ ಗೆಲ್ಲುವುದು ಅನುಮಾನ ಎಂದು ಯುವರಾಜ್​ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Sourav Ganguly: ಆಟದ ಸಮಯದಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ್ದ ಅವರು ಬಳಿಕ ಕೊಲ್ಕೊತಾ ಕ್ರಿಕೆಟ್ ಸಂಸ್ಥೆ ಹಾಗೂ ಬಿಸಿಸಿಐ ಅಧ್ಯಕ್ಷರಾಗಿಯೂ ಅದ್ಭುತ ಕೆಲಸಗಳನ್ನು ಮಾಡಿದ್ದರು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಿರ್ದೇಶಕರಾಗಿದ್ದಾರೆ. ಹೀಗೆ ಸುಮಾರು ಎರಡು ದಶಕಗಳ ವೃತ್ತಿಜೀವನದಲ್ಲಿ ಅಪಾರ ಸಾಧನೆ ಮಾಡಿದ್ದಾರೆ.

VISTARANEWS.COM


on

Sourav Ganguly
Koo

ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಭಾರತ ಕ್ರಿಕೆಟ್ ತಂಡ ಅತ್ಯಂತ ಯಶಸ್ವಿ ನಾಯಕ ಸೌರವ್ ಗಂಗೂಲಿ (Sourav Ganguly) 52ನೇ ವರ್ಷದ ಜನುಮ ದಿನದ ಸಂಭ್ರಮದಲ್ಲಿದ್ದಾರೆ. ಅವರು ತಮ್ಮ ಸಹ ಆಟಗಾರ ರಾಹುಲ್ ದ್ರಾವಿಡ್ ಅವರಿಂದ ‘ಆಫ್ ಸೈಡ್ ದೇವರು’ ಎಂದು ಕರೆಸಿಕೊಂಡವರು. ಇಂಥ ಪ್ರಚಂಡ ಕ್ರಿಕೆಟಿಗ ಅನೇಕ ಅದ್ಭುತ ಕೊಡುಗೆಗಳನ್ನು ಕ್ರಿಕೆಟ್ ಕ್ಷೇತ್ರಕ್ಕೆ ನೀಡಿದ್ದಾರೆ ಆಟದ ಸಮಯದಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ್ದ ಅವರು ಬಳಿಕ ಕೊಲ್ಕೊತಾ ಕ್ರಿಕೆಟ್ ಸಂಸ್ಥೆ ಹಾಗೂ ಬಿಸಿಸಿಐ ಅಧ್ಯಕ್ಷರಾಗಿಯೂ ಅದ್ಭುತ ಕೆಲಸಗಳನ್ನು ಮಾಡಿದ್ದರು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಿರ್ದೇಶಕರಾಗಿದ್ದಾರೆ. ಹೀಗೆ ಸುಮಾರು ಎರಡು ದಶಕಗಳ ವೃತ್ತಿಜೀವನದಲ್ಲಿ ಅಪಾರ ಸಾಧನೆ ಮಾಡಿದ್ದಾರೆ.

ಗಂಗೂಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಾಗಿದ್ದರು. ಪ್ರತಿಭಾನ್ವಿತ ಆಟಗಾರರ ಗುಂಪಿನಿಂದ ವಿಜೇತ ತಂಡವನ್ನು ಮುನ್ನಡೆಸಿದ್ದರು ಅವರು ಇತಿಹಾಸದ ಅತ್ಯುತ್ತಮ ಏಕದಿನ ಬ್ಯಾಟರ್​ಗಳಲ್ಲಿ ಒಬ್ಬರಾಗಿದ್ದಾರೆ. ಅವರು 1996 ರಲ್ಲಿ ಲಾರ್ಡ್ಸ್​​ನಲ್ಲಿ ನಡೆದ ಚೊಚ್ಚಲ ಪಂದ್ಯದಲ್ಲಿ ಅದ್ಭುತ ಶತಕವನ್ನು ಗಳಿಸಿದ್ದರು. ಆ ವರ್ಷದ ಕೊನೆಯಲ್ಲಿ ಅವರನ್ನು ಏಕದಿನ ಕ್ರಮಾಂಕದ ಅಗ್ರಸ್ಥಾನಕ್ಕೆ ಏರಿದ್ದರು. ಸೌರವ್​ ಗಂಗೂಲಿ ಮತ್ತು ಸಚಿನ್ ತೆಂಡೂಲ್ಕರ್ ಒಟ್ಟಾಗಿ ಕ್ರಿಕೆಟ್​ ಇತಿಹಾಸದ ಅತ್ಯಂತ ಪ್ರಬಲ ಆರಂಭಿಕ ಬ್ಯಾಟರ್​ಗಳೆನಿಸಿಕೊಂಡಿದ್ದರು.

ಗಂಗೂಲಿ ಮೈದಾನದಲ್ಲಿ ಇದ್ದ ತಮ್ಮ ಸಮಯದುದ್ದಕ್ಕೂ ತಮ್ಮ ವಿಶಿಷ್ಟ ನಾಯಕತ್ವದ ಮೂಲಕ ಹೆಸರುವಾಸಿಯಾಗಿದ್ದರು. 1996 ರ ಬೇಸಿಗೆಯಲ್ಲಿ, ಅವರು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ‘ದಾದಾ’ ಎಂಬ ಅಡ್ಡಹೆಸರನ್ನು ಗಳಿಸಿಕೊಂಡ ಅವರು ಲಾರ್ಡ್ಸ್​​ನಲ್ಲಿ ತಮ್ಮ ಮೊದಲ ಟೆಸ್ಟ್​​ನಲ್ಲಿ ಶತಕ ಗಳಿಸಿದ ನಂತರ ಸುದ್ದಿಯಾದರು. ನಂತರ ‘ಪ್ರಿನ್ಸ್ ಆಫ್ ಕೋಲ್ಕತ್ತಾ’ ಎಂಬ ಹೆಸರಿನಿಂದ ಕರೆಸಲ್ಪಟ್ಟರು. ಬಳಿಕ ಅವರು ಎರಡನೇ ಟೆಸ್ಟ್​​ ಪಂದ್ಯದಲ್ಲೂ ಶತಕ ಬಾರಿಸಿದ್ದರು. ಇತಿಹಾಸದಲ್ಲಿ ತಮ್ಮ ಮೊದಲ ಎರಡು ಟೆ್ಸ್ಟ್​ ಇನ್ನಿಂಗ್ಸ್​ಗಳಲ್ಲಿ ಶತಕ ಗಳಿಸಿದ ಮೂರನೇ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ: Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

2000ನೇ ಇಸವಿಯಲ್ಲಿ ಟೀಮ್ ಇಂಡಿಯಾ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿಕೊಂಡಿತ್ತು. ನಂತರ ಗಂಗೂಲಿ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಯಿತು. ಅಲ್ಲಿ ಅವರು ಹೊಸ ಪ್ರತಿಭೆಗಳನ್ನು ಬೆಳೆಸಲು ಪ್ರಾರಂಭಿಸಿದರು.

ಗಂಗೂಲಿ ನಾಯಕತ್ವದಲ್ಲಿ ಭಾರತ ತಂಡ 2000ರಲ್ಲಿ ನಡೆದ ಐಸಿಸಿ ನಾಕೌಟ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿತ್ತು. 2001ರಲ್ಲಿ ಗಂಗೂಲಿ ನೇತೃತ್ವದ ಭಾರತ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು 2-1 ಅಂತರದಿಂದ ಸೋಲಿಸಿತ್ತು. ಸ್ಟೀವ್ ವಾ ನೇತೃತ್ವದ ಆಸ್ಟ್ರೇಲಿಯಾ ತಂಡವು ಸರಣಿಯಲ್ಲಿ ಭಾರತಕ್ಕೆ ಸವಾಲು ಹಾಕಿತು. ಆದರೆ ವಿವಿಎಸ್ ಲಕ್ಷ್ಮಣ್ ಮತ್ತು ರಾಹುಲ್ ದ್ರಾವಿಡ್ ಭಾರತೀಯ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು.

ಅಂಗಿ ಬಿಚ್ಚಿ ಕುಣಿದಿದ್ದರು

2002 ರಲ್ಲಿ ನಾಟ್​ವೆಸ್ಟ್​​ ಟ್ರೋಫಿ ಫೈನಲ್​​ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ದ ಗೆದ್ದಿತ್ತು. ಭಾರತವನ್ನು ಸೋಲಿನ ದವಡೆಯಿಂದ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್​ ಕೈಫ್​ ಕಾಫಾಡಿದ್ದರು. ಈ ವೇಲೆ ಲಾರ್ಡ್ಸ್ ಬಾಲ್ಕನಿಯಲ್ಲಿ ತನ್ನ ಅಂಗಿ ಬಿಚ್ಚಿದ ಕುಣಿದಿದ್ದರು ಗಂಗೂಲಿ. ಅದು ಕ್ರಿಕೆಟ್ ಇತಿಹಾಸದ ಸ್ಮರಣೀಯ ವಿಷಯವಾಗಿ ದಾಖಲಾಗಿದೆ.

ಗಂಗೂಲಿ 2003 ರಲ್ಲಿ ಭಾರತವನ್ನು ವಿಶ್ವಕಪ್ ಫೈನಲ್​ ತನಕ ಮುನ್ನಡೆಸಿದ್ದರು. ಅಲ್ಲಿ ಅವರ ನೇತೃತ್ವದ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. 2004 ರಲ್ಲಿ, ಅವರು ಪಾಕಿಸ್ತಾನದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಯ ಮುಂದಾಳತ್ವ ವಹಿಸಿದ್ದರು. ಪಾಕಿಸ್ತಾನದ ನೆಲದಲ್ಲಿ ಭಾರತದ ಮೊದಲ ಟೆಸ್ಟ್ ಸರಣಿ ಗೆಲುವು ತಂದುಕೊಟ್ಟಿದ್ದರು.

2005-06ರಲ್ಲಿ ಆಗಿನ ಕೋಚ್ ಗ್ರೆಗ್ ಚಾಪೆಲ್ ಅವರೊಂದಿಗೆ ಗಲಾಟೆ ಸುದ್ದಿಯಾಗಿತ್ತು. ಮತ್ತೊಂದೆಡೆ, ಗಂಗೂಲಿ ತಂಡಕ್ಕೆ ಮರಳಿದ್ದರು ಮತ್ತು ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನಲ್ಲಿ 50ಪ್ಲಸ್ ಸ್ಕೋರ್ ದಾಖಲಿಸಿದ್ದರು.

ಗಂಗೂಲಿ 2008ರಲ್ಲಿ ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು. 2012ರಲ್ಲಿ ದೇಶೀಯ ಕ್ರಿಕೆಟ್​​ನಿಂದ ನಿವೃತ್ತರಾಗುವವರೆಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ್ದರು. ದಾದಾ ಭಾರತ ಪರ 113 ಟೆಸ್ಟ್ ಮತ್ತು 311 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ, ಎಡಗೈ ಬ್ಯಾಟ್ಸ್ಮನ್ ಎಲ್ಲಾ ಸ್ವರೂಪಗಳಲ್ಲಿ ಸೇರಿ 18,575 ರನ್ ಗಳಿಸಿದ್ದಾರೆ.

ಗಂಗೂಲಿ ಎಲ್ಲಾ ಸ್ವರೂಪಗಳಲ್ಲಿ 195 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು/ ಅವುಗಳಲ್ಲಿ 97 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಮಾಜಿ ನಾಯಕ ನಂತರ ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳದ (ಸಿಎಬಿ) ಅಧ್ಯಕ್ಷರಾದರು ಮತ್ತು ಬಿಸಿಸಿಐನ ಮಾಜಿ ಅಧ್ಯಕ್ಷರಾಗಿದ್ದಾರೆ.

ಆಡಳಿತಾತ್ಮಕ ಬುದ್ಧಿವಂತಿಕೆ

ಭಾರತದಲ್ಲಿ ಹಗಲು-ರಾತ್ರಿ ಟೆಸ್ಟ್​ ಕ್ರಿಕೆಟ್​ ಕ ಲ್ಪನೆ ಹೊರಹೊಮ್ಮಲು ಗಂಗೂಲಿ ಪ್ರಮುಖ ಕಾರಣಗಳಲ್ಲಿ ಒಬ್ಬರು. ಅವರು ಈ ಅವಧಿಯಲ್ಲಿ ಬಿಸಿಸಿಐ ಅಧ್ಯಕ್ಷರಾಗಿದ್ದರು. 2019 ರಲ್ಲಿ ಈಡನ್ ಗಾರ್ಡನ್ಸ್​ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ತನ್ನ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿತ್ತು.

Continue Reading

ಪ್ರಮುಖ ಸುದ್ದಿ

Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

Team India : ಬಿಸಿಸಿಐ ಹೊರತುಪಡಿಸಿ, ರಾಜ್ಯ ಸರ್ಕಾರಗಳು ಸಹ ಆಯಾ ಆಟಗಾರರಿಗೆ ಬಹುಮಾನದ ಮೊತ್ತ ಘೋಷಿಸಿವೆ. ಮಹಾರಾಷ್ಟ್ರ ಸರ್ಕಾರವು ರೋಹಿತ್, ಶಿವಂ ದುಬೆ, ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ 11 ಕೋಟಿ ರೂ.ಗಳನ್ನು ನೀಡಿತ್ತು.

VISTARANEWS.COM


on

Team India
Koo

ಬೆಂಗಳೂರು: ಅಮೆರಿಕದ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ನಡೆದ 2024 ರ ಟಿ 20 ವಿಶ್ವಕಪ್ ನಲ್ಲಿ ಭಾರತ ತಂಡ (Team India ) ಟ್ರೋಫಿ ಗೆದ್ದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಜೂನ್ 4 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಬಹುಮಾನದ ಮೊತ್ತವನ್ನು ಹಸ್ತಾಂತರಿಸಲಾಗಿತ್ತು. ಅದರಲ್ಲಿ ಯಾರಿಗೆ ಎಷ್ಟು ಎಂಬ ಕುತೂಹಲ ಮೂಡಿತ್ತು. ಆ ಮಾಹಿತಿ ಇದೀಗ ಬಹಿರಂಗಗೊಂಡಿದೆ.

ವರದಿಗಳ ಪ್ರಕಾರ, ತಂಡದ ಎಲ್ಲಾ 15 ಸದಸ್ಯರು ತಲಾ 5 ಕೋಟಿ ರೂ ಪಡೆದಿದ್ದಾರೆ. ಮುಖ್ಯ ಕೋಚ್ ದ್ರಾವಿಡ್ ಕೂಡ ಇದೇ ಮೊತ್ತವನ್ನು ಪಡೆದಿದ್ದಾರೆ. ಉಳಿದ ಕೋಚಿಂಗ್ ಗ್ರೂಪ್ ತಲಾ 2.5 ರೂಪಾಯಿ ಪಡೆದುಕೊಂಡಿದ್ದಾರೆ. ವಿಡಿಯೋ ನಿರ್ಮಾಣ ತಂಡ ಸೇರಿದಂತೆ ಬ್ಯಾಕ್ರೂಮ್ ಸಿಬ್ಬಂದಿಗೆ ತಲಾ 2 ಕೋಟಿ ರೂ., ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಗೆ ತಲಾ 1 ಕೋಟಿ ರೂಪಾಯಿ, ಮೀಸಲು ಆಟಗಾರರಾದ ರಿಂಕು ಸಿಂಗ್, ಖಲೀಲ್ ಅಹ್ಮದ್, ಶುಭ್ಮನ್ ಗಿಲ್ ಮತ್ತು ಅವೇಶ್ ಖಾನ್ ಅವರಿಗೆ ತಲಾ 1 ಕೋಟಿ ರೂಪಾಯಿ ದೊರಕಿದೆ.

ಬಿಸಿಸಿಐ ಹೊರತುಪಡಿಸಿ, ರಾಜ್ಯ ಸರ್ಕಾರಗಳು ಸಹ ಆಯಾ ಆಟಗಾರರಿಗೆ ಬಹುಮಾನದ ಮೊತ್ತ ಘೋಷಿಸಿವೆ. ಮಹಾರಾಷ್ಟ್ರ ಸರ್ಕಾರವು ರೋಹಿತ್, ಶಿವಂ ದುಬೆ, ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ 11 ಕೋಟಿ ರೂ.ಗಳನ್ನು ನೀಡಿತ್ತು.

ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೀಮ್ ಇಂಡಿಯಾಕ್ಕೆ 2.45 ಮಿಲಿಯನ್ ಡಾಲರ್ ಅಂದರೆ ಸುಮಾರು 20.37 ಕೋಟಿ ರೂಪಾಯಿ ಬಹುಮಾನ ಕೊಟ್ಟಿತ್ತು. ಬಿಸಿಸಿಐನ ಆರ್ಥಿಕ ಸ್ಥಿರತೆಯು ಎಲ್ಲಾ ಆಟಗಾರರಿಗೆ ಟ್ರೋಫಿ ಜತೆ ಸಿಕ್ಕ ಬಹುಮಾನ ಮೊತ್ತಕ್ಕಿಂತ ಸುಮಾರು ಆರು ಪಟ್ಟು ಹೆಚ್ಚು ನಗದು ಸಿಗಲು ಸಹಾಯ ಮಾಡಿತು. ಇದು ಇವರೆಗಿನ ಗರಿಷ್ಠ ಗಳಿಕೆಯಾಗಿದೆ. 1983 ರಲ್ಲಿ ಏಕದಿನ ವಿಶ್ವಕಪ್ ಗೆಲುವಿನ ನಂತರ, ಆಡಳಿತ ಮಂಡಳಿಯು ಪ್ರತಿ ಆಟಗಾರನಿಗೆ 25,000 ರೂ.ಗಳ ಬಹುಮಾನವನ್ನು ಘೋಷಿಸಿತು. ಇದು ಆಧುನಿಕ ಕಾಲದಲ್ಲಿ ಆಟಗಾರರು ಪಡೆದ ಮೊತ್ತಕ್ಕೆ ಹೋಲಿಸಿದರೆ ಕನಿಷ್ಠ ಪ್ರಮಾಣದ ಮೊತ್ತವಾಗಿದೆ.

ಇದನ್ನೂ ಓದಿ: Gautam Gambhir : ಗಂಭೀರ್ ಕೆಕೆಆರ್ ತೊರೆಯುವುದು ನಿಶ್ಚಿತ​; ಈಡನ್​ ಗಾರ್ಡನ್ಸ್​​ನಲ್ಲಿ ವಿದಾಯದ ಶೂಟಿಂಗ್

ಐಪಿಎಲ್​ನ ಶಕ್ತಿ ಮತ್ತು ಹಣಕಾಸಿನ ವಿಷಯದಲ್ಲಿ ಭಾರತೀಯ ಕ್ರಿಕೆಟ್ ದೊಡ್ಡ ಗಳಿಕೆಯಲ್ಲಿದೆ. ಆದಾಗ್ಯೂ ಆಟಗಾರರು ಐಪಿಎಲ್ ಕಡೆಗೆ ಹೆಚ್ಚಿನ ಗಮನ ಸೆಳೆಯುತ್ತಿದ್ದಾರೆ ಎಂಬ ಆರೋಪವಿದೆ. ಇದನ್ನು ನಿವಾರಿಸಲೂ ಬಿಸಿಸಿಐ 125 ಕೋಟಿ ರೂಪಾಯಿ ಘೋಷಿಸಿದೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆದ್ಯತೆ ನೀಡಿದವರಿಗೂ ದೊಡ್ಡ ಮೊತ್ತ ಸಿಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ಬಿಸಿಸಿಐ ಎಲ್ಲಾ ಆಟಗಾರರಿಗೆ ಕಳುಹಿಸಿದೆ.

“ಐಪಿಎಲ್ ಯುಗದಲ್ಲಿ, ಆಟಗಾರರಿಗೆ ಅವರ ಫ್ರಾಂಚೈಸಿಗಳು ಸಾಕಷ್ಟು ಸಂಭಾವನೆ ನೀಡುತ್ತವೆ. ಟಿ 20 ವಿಶ್ವಕಪ್ ಗೆದ್ದ ತಂಡಕ್ಕೆ 125 ಕೋಟಿ ರೂ.ಗಳು ಆಟಗಾರರಿಗೆ ಸರಳ ಸಂದೇಶವಾಗಿದೆ. ಭಾರತಕ್ಕಾಗಿ ಟ್ರೋಫಿಗಳನ್ನು ಗೆಲ್ಲಿರಿ ಮತ್ತು ನೀವು ಶ್ರೀಮಂತರಾಗುತ್ತೀರಿ” ಎಂಬುದು ಬಿಸಿಸಿಐ ಸಂದೇಶ ಎಂಬುದಾಗಿ ಅಧಿಕಾರಿ ಹೇಳಿದ್ದಾರೆ.

ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಮತ್ತು ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ನಾಯಕನಾಗಿ ಮುಂದುವರಿಯುತ್ತಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Virat Kohli : ಇನ್​ಸ್ಟಾಗ್ರಾಮ್ ಪೋಸ್ಟ್​ ಮೂಲಕ ಬಿಟಿಎಸ್​ ಬ್ಯಾಂಡ್​ನ ದಾಖಲೆ ಮುರಿದ ವಿರಾಟ್​ ಕೊಹ್ಲಿ

Virat Kohli: “ಇದಕ್ಕಿಂತ ಉತ್ತಮ ದಿನವನ್ನು ಊಹಿಸಲು ಸಾಧ್ಯವಿಲ್ಲ. ದೇವರು ದೊಡ್ಡವನು ಮತ್ತು ನಾನು ಋಣಿಯಾಗಿ ತಲೆ ಬಾಗುತ್ತೇನೆ. ನಾವು ಅಂತಿಮವಾಗಿ ಮಾಡಿ ತೋರಿಸಿದ್ದೇವೆ. ಜೈ ಹಿಂದ್ ಎಂದು ಕೊಹ್ಲಿ ಬರೆದುಕೊಂಡಿದ್ದರು. ಭಾರತವು ಟಿ 20 ವಿಶ್ವಕಪ್ 2024 ಗೆದ್ದ ಮರುದಿನ ಜೂನ್ 30 ರಂದು ಪೋಸ್ಟ್ ಮಾಡಿದ ಕೊಹ್ಲಿಯ ಭಾವನಾತ್ಮಕ ಸಂದೇಶವು ವಿಶ್ವದಾದ್ಯಂತದ ಅಭಿಮಾನಿಗಳ ಮನ ಸೆಳೆದಿದೆ.

VISTARANEWS.COM


on

Virat kohli
Koo

ನವದೆಹಲಿ: ಭಾರತದ ತಂಡದ ಟಿ20 ವಿಶ್ವಕಪ್ 2024 ರ ವಿಜಯವನ್ನು ಆಚರಿಸುವುದರ ಬಗ್ಗೆ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli ) ಹಾಕಿರುವ ಇನ್​​ಸ್ಟಾಗ್ರಾಮ್​ (instagram) ಪೋಸ್ಟ್​​ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತಗೊಂಡಿದೆ. ಅವರ ಆ ಪೋಸ್ಟ್​​ ಇನ್ಸ್ಟಾಗ್ರಾಮ್ ಪೋಸ್ಟ್ ದಾಖಲೆಗಳನ್ನು ಮುರಿದಿದೆ, ಏಷ್ಯಾದಲ್ಲಿ ಹೆಚ್ಚು ಲೈಕ್ ಪಡೆದ ಪೋಸ್ಟ್ ಎಂಬ ದಾಖಲೆ ಸೃಷ್ಟಿಸಿದೆ. ಜನಪ್ರಿಯ ಮ್ಯೂಸಿಕ್ ಬ್ಯಾಂಟ್​​ ಬಿಟಿಎಸ್​​ನ ಸದಸ್ಯ ವಿ (ಕಿಮ್ ಟೇಹ್ಯುಂಗ್) ಅವರ ಹಿಂದಿನ ದಾಖಲೆಯನ್ನೂ ಮೀರಿಸಿದೆ.

2.1 ಕೋಟಿಗೂ ಹೆಚ್ಚು ಲೈಕ್​ಗಳನ್ನು ಗಳಿಸಿದ ಕೊಹ್ಲಿಯ ಪೋಸ್ಟ್ ಈ ಹಿಂದಿನ ಎಲ್ಲ ದಾಖಲೆಗಳನ್ನು ಉಡಾಯಿಸಿದೆ. ಟೀಮ್ ಇಂಡಿಯಾ ತನ್ನ ವಿಜಯೋತ್ಸವವನ್ನು ಆಚರಿಸುವ ಕೊಲಾಜ್ ಮತ್ತು ಹೃತ್ಪೂರ್ವಕ ಶೀರ್ಷಿಕೆಯನ್ನು ಈ ಪೋಸ್ಟ್​ಗೆ ನೀಡಲಾಗಿದೆ. “ಇದಕ್ಕಿಂತ ಉತ್ತಮ ದಿನವನ್ನು ಊಹಿಸಲು ಸಾಧ್ಯವಿಲ್ಲ. ದೇವರು ದೊಡ್ಡವನು ಮತ್ತು ನಾನು ಋಣಿಯಾಗಿ ತಲೆ ಬಾಗುತ್ತೇನೆ. ನಾವು ಅಂತಿಮವಾಗಿ ಮಾಡಿ ತೋರಿಸಿದ್ದೇವೆ. ಜೈ ಹಿಂದ್ ಎಂದು ಕೊಹ್ಲಿ ಬರೆದುಕೊಂಡಿದ್ದರು. ಭಾರತವು ಟಿ 20 ವಿಶ್ವಕಪ್ 2024 ಗೆದ್ದ ಮರುದಿನ ಜೂನ್ 30 ರಂದು ಪೋಸ್ಟ್ ಮಾಡಿದ ಕೊಹ್ಲಿಯ ಭಾವನಾತ್ಮಕ ಸಂದೇಶವು ವಿಶ್ವದಾದ್ಯಂತದ ಅಭಿಮಾನಿಗಳ ಮನ ಸೆಳೆದಿದೆ.

ಈ ಗಮನಾರ್ಹ ಸಾಧನೆಯು ವಿರಾಟ್ ಕೊಹ್ಲಿಯನ್ನು ಎಲ್ಲಾ ವಿಭಾಗಗಳಲ್ಲಿ ಬಿಟಿಎಸ್​​ನ 2 ಕೋಟಿ ಲೈಕ್​ಗಳ ದಾಖಲೆಯನ್ನು ಮೀರಿಸಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ದಾಖಲೆಗೆ ಅರ್ಹರನ್ನಾಗಿದೆ. ಕೊಹ್ಲಿ ಅವರ ಪೋಸ್ಟ್ ಬಾಲಿವುಡ್ ದಂಪತಿಗಳಾದ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರ ವಿವಾಹ ಘೋಷಣೆಯ ಹಿಂದಿನ ದಾಖಲೆಯನ್ನು ಮುರಿದಿದೆ.

ಏಷ್ಯಾದ ದಾಖಲೆ ಮುರಿದ ಕೊಹ್ಲಿ

ಕೊಹ್ಲಿಯ ಪೋಸ್ಟ್ ಏಷ್ಯಾದಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸಿದೆ ಮಾತ್ರವಲ್ಲ, 2 ಕೋಟಿ ಲೈಕ್​ಗಳ ಮೈಲಿಗಲ್ಲನ್ನು ತಲುಪಿದ ಏಷ್ಯಾದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆಯು ಕೊಹ್ಲಿಯನ್ನು ವಿಶ್ವಾದ್ಯಂತ ಕ್ರೀಡಾಪಟುಗಳು ಹೆಚ್ಚು ಲೈಕ್ ಮಾಡಿದ ಮೊದಲ ಐದು ಪೋಸ್ಟ್​ಗಳಲ್ಲಿ ಒಂದಾಗಿದೆ. ಇದು ಅವರ ಅಪಾರ ಜಾಗತಿಕ ಅಭಿಮಾನಿ ಬಳಗವನ್ನು ಎತ್ತಿ ತೋರಿಸುತ್ತದೆ.

ಇದನ್ನೂ ಓದಿ: Smriti Mandhana : ಬಾಯ್​ಫ್ರೆಂಡ್​ ಜತೆಗಿನ ಐದು ವರ್ಷಗಳ ಬಾಂಧವ್ಯವನ್ನು ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮಿಸಿದ ಸ್ಮೃತಿ ಮಂದಾನಾ

ಈ ಐತಿಹಾಸಿಕ ಗೆಲುವಿನ ನಂತರ, ವಿರಾಟ್ ಕೊಹ್ಲಿ ಟಿ 20 ಅಂತರರಾಷ್ಟ್ರೀಯ ಸ್ವರೂಪದಿಂದ ನಿವೃತ್ತಿ ಘೋಷಿಸಿದ್ದಾರೆ. ಇದು ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ವಿರಾಟ್ ಕೊಹ್ಲಿ ಪ್ರಸ್ತುತ ಪತ್ನಿ ಅನುಷ್ಕಾ ಶರ್ಮಾ ಮತ್ತು ಅವರ ಮಕ್ಕಳೊಂದಿಗೆ ಲಂಡನ್​​ನಲ್ಲಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ನಿವೃತ್ತಿಯ ಬಳಿಕ ಲಂಡನ್​ನಲ್ಲಿ ವಾಸ ಮಾಡುತ್ತಾರೆ ಎಂಬುದಾಗಿಯೂ ಸುದ್ದಿಯಾಗಿದೆ. ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಯುಕೆ ಮೂಲದ ಸಂಸ್ಥೆಯೊಂದರ ನಿರ್ದೇಶಕರಾಗಿದ್ದಾರೆ. ಎರಡನೇ ಮಗು ಅಕಾಯ್​ಗೆ ಅನುಷ್ಕಾ ಲಂಡನ್​ನಲ್ಲಿಯೇ ಜನ್ಮ ನೀಡಿದ್ದರು. ಅಲ್ಲಿಂದ ಬಳಿಕ ಅವರು ಅಲ್ಲಿಯೇ ವಾಸವಾಗಿದ್ದಾರೆ. ಮೊದಲ ಮಗು ವಾಮಿಕಾ ಕೂಡ ತಾಯಿಯೊಂದಿಗೆ ಇದ್ದಾಳೆ.

ವಿರಾಟ್​ ಕೊಹ್ಲಿ ವಿಶ್ವ ಕಪ್​ ತಂಡ ಸೇರುವ ಮೊದಲು ಕೂಡ ಲಂಡನ್​ನಿಂದಲೇ ಪ್ರಯಾಣ ಆರಂಭಿಸಿದ್ದರು. ಅವರು ಐಪಿಎಲ್​ನ ಮುಗಿಸಿದ ತಕ್ಷಣ ಭಾರತವನ್ನು ಬಿಟ್ಟು ಲಂಡನ್ ಸೇರಿಕೊಂಡಿದ್ದರು. ಅವರು ಮೊದಲ ಹಂತದಲ್ಲಿ ಭಾರತ ತಂಡದ ಜತೆ ಅಮೆರಿಕಕ್ಕೆ ಪ್ರಯಾಣ ಮಾಡಿರಲಿಲ್ಲ. ತಂಡವಾಗಿ ತಂಡ ಸೇರಿಕೊಂಡಿದ್ದರು.

Continue Reading

ಕ್ರಿಕೆಟ್

Smriti Mandhana : ಬಾಯ್​ಫ್ರೆಂಡ್​ ಜತೆಗಿನ ಐದು ವರ್ಷಗಳ ಬಾಂಧವ್ಯವನ್ನು ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮಿಸಿದ ಸ್ಮೃತಿ ಮಂದಾನಾ

Smriti Mandhana : ನಟರಾದ ರುಬಿನಾ ದಿಲೈಕ್, ಅವಿಕಾ ಗೋರ್ ಮತ್ತಿರರರು ಈ ಪೋಸ್ಟ್​​ಗೆ ಹೃದಯದ ಎಮೋಜಿಳನ್ನು ಹಾಕಿ ಪ್ರತಿಕ್ರಿಯಿಸಿದ್ದಾರೆ. ರುಬಿನಾ ದಿಲೈಕ್ “ನೀವಿಬ್ಬರೂ” ಎಂದು ಬರೆದಿದ್ದರೆ, ನಟ ಪಾರ್ಥ್ ಸಮಥಾನ್ ಮತ್ತು ಅವಿಕಾ ಗೋರ್ ಕೂಡ ಹೃದಯದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Smriti Mandhana
Koo

ಬೆಂಗಳೂರು ಖ್ಯಾತ ಕ್ರಿಕೆಟ್ ಆಟಗಾರ್ತಿ ಹಾಗೂ ಭಾರತ ತಂಡದ ಆರಂಭಿಕ ಬ್ಯಾಟರ್​ ಸ್ಮೃತಿ ಮಂದಾನ (Smriti Mandhana ) ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚಲ್ ಇತ್ತೀಚೆಗೆ ಐದು ವರ್ಷಗಳ ಬಾಂಧವ್ಯವನ್ನು ಒಟ್ಟಾಗಿ ಸಂಭ್ರಮಿಸಿದ್ದಾರೆ. ಈ ಜೋಡಿ ಕೇಕ್ ಕತ್ತರಿಸಿ ಫೋಟೋಗಳಿಗೆ ಪೋಸ್ ನೀಡುವ ಮೂಲಕ ಖುಷಿ ಪಟ್ಟಿದ್ದಾರೆ. ಪಲಾಶ್ ತನ್ನ ಇನ್​ಸ್ಟಾಗ್ರಅಮ್​ ಹ್ಯಾಂಡಲ್​ನಲ್ಲಿ ಸಂಭ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪಲಾಶ್ ಅವರು ಅದಕ್ಕೆ ಸರಳ ಶೀರ್ಷಿಕೆ ಕೊಟ್ಟಿದ್ದು, ಕೇವಲ ‘ಐದು’ ಎಂದು ಬರೆದಿದ್ದಾರೆ. ಅವರು ಕ್ರೀಡಾಪಟುವಿನೊಂದಿಗೆ ಅವರು ಎಷ್ಟು ವರ್ಷಗಳ ಸಂಬಂಧ ಹೊಂದಿದ್ದಾರೆ ಎಂಬುದನ್ನು ಸೂಚಿಸುತ್ತದೆ.

ನಟರಾದ ರುಬಿನಾ ದಿಲೈಕ್, ಅವಿಕಾ ಗೋರ್ ಮತ್ತಿರರರು ಈ ಪೋಸ್ಟ್​​ಗೆ ಹೃದಯದ ಎಮೋಜಿಳನ್ನು ಹಾಕಿ ಪ್ರತಿಕ್ರಿಯಿಸಿದ್ದಾರೆ. ರುಬಿನಾ ದಿಲೈಕ್ “ನೀವಿಬ್ಬರೂ” ಎಂದು ಬರೆದಿದ್ದರೆ, ನಟ ಪಾರ್ಥ್ ಸಮಥಾನ್ ಮತ್ತು ಅವಿಕಾ ಗೋರ್ ಕೂಡ ಹೃದಯದ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ.

ಅಭಿಮಾನಿಗಳು ಸಹ ಯುವ ಜೋಡಿಗೆ ಅಭಿನಂದನಾ ಸಂದೇಶಗಳನ್ನು ಕಳುಹಿಸಿದ್ದಾರೆ. . “5 ವರ್ಷಗಳು ಪೂರ್ಣಗೊಂಡಿವೆ” ಎಂದು ಅಭಿಮಾನಿಯೊಬ್ಬರು ಬರೆದಿದ್ದಾರೆ. ಇನ್ನೊಬ್ಬರು “ಸ್ಮೃತಿ ಮಂದಾನಗೆ ಗೌರವ ತೋರಿದ್ದಾರೆ. “ಅಭಿನಂದನೆಗಳು, ಸುಂದರ ಜೋಡಿ , ಮತ್ತೊಂದು ಪಾಲುದಾರಿಕೆಗಾಗಿ” ಎಂದೆಲ್ಲ ಕಾಮೆಂಟ್​ಗಳು ಬಂದಿವೆ.

ಇದನ್ನೂ ಓದಿ: Yuzvendra Chahal : ಪತ್ನಿ ಧನಶ್ರೀ ವರ್ಮಾಗೆ ವಿಶ್ವ ಕಪ್​ ಪದಕ ಅರ್ಪಿಸಿದ ಯಜ್ವೇಂದ್ರ ಚಹಲ್​

ಸಂಗೀತ ಸಂಯೋಜಕ ಪಲಾಶ್ ಮುಚಲ್ ಇತ್ತೀಚೆಗೆ ರಾಜ್ಪಾಲ್ ಯಾದವ್ ಅಭಿನಯದ ಅರ್ಧ್ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ. ಅವರು ‘ಡಿಶ್ಕಿಯೂನ್’ ಮತ್ತು ‘ಸ್ವೀಟಿ ವೆಡ್ಸ್ ಎನ್ಆರ್​ಐ ‘ ನಂತಹ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಸ್ಮೃತಿ ಮಂದಾನ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಎಡಗೈ ಆರಂಭಿಕ ಬ್ಯಾಟ್ಸ್ಮನ್. ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕ ದಿನ ಸರಣಿಯ ವೇಳೆ ಸತತ ಎರಡು ಶತಕ ಹಾಗೂ ಒಂದು ಅರ್ಧ ಶತಕ ಬಾರಿಸಿ ಮಿಂಚಿದ್ದಾರೆ.

ಸ್ಮೃತಿ ಮಂದಾನ ಅವರು ಭಾರತ ಕ್ರಿಕೆಟ್ ತಂಡದ ಅತ್ಯಂತ ನೆಚ್ಚಿನ ಆಟಗಾರ್ತಿಯಾಗಿದ್ದಾರೆ. ಮಹಿಳೆಯ ಕ್ರಿಕೆಟ್ ತಂಡದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಬ್ಯಾಟಿಂಗ್ ಪ್ರದರ್ಶನವೂ ಅದಕ್ಕೆ ಪೂರಕವಾಗಿದೆ. 2024ರ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್​ನಲ್ಲಿ ಅವರು ಆರ್​ಸಿಬಿ ತಂಡವನ್ನು ಪ್ರಶಸ್ತಿಯ ಕಡೆಗೆ ಮುನ್ನಡೆಸಿದ್ದು ಅವರು ದೊಡ್ಡ ಸಾಧನೆಯಾಗಿದೆ.

ಮಂಧಾನ ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲೂ ಶತಕ ಬಾರಿಸಿದ್ದಾರೆ. ಇದೀಗ ನಡೆಯುತ್ತಿರುವ ಟಿ20 ಸರಣಿಯ ಪಂದ್ಯದಲ್ಲೂ ಆಡುತ್ತಿದ್ದಾರೆ.

Continue Reading
Advertisement
Deepika Padukone
Latest3 mins ago

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

CM Siddaramaiah
ಕರ್ನಾಟಕ4 mins ago

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Sourav Ganguly
ಪ್ರಮುಖ ಸುದ್ದಿ23 mins ago

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Riteish Deshmukh Genelia Deshmukh Pledge To Donate Their Organ
ಬಾಲಿವುಡ್24 mins ago

Riteish Deshmukh: ಅಂಗಾಗ ದಾನ ಮಾಡುವ ಘೋಷಣೆ ಮಾಡಿದ  ರಿತೇಶ್- ಜೆನಿಲಿಯಾ ದಂಪತಿ!

Mumbai hit and run
ದೇಶ52 mins ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Actor Darshan Will Attend The Court Hearing From Online
ಕ್ರೈಂ59 mins ago

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Vicky Pedia I love you sanjana song trend
ವೈರಲ್ ನ್ಯೂಸ್1 hour ago

Vicky Pedia: ಸಂಜನಾ..ಸಂಜನಾ …`I Love You’ ಸಂಜನಾ; ಬಾಲಕನ ಹಾಡಿಗೆ ಹೊಸ ಟಚ್ ಕೊಟ್ಟ ವಿಕಾಸ್ ವಿಕ್ಕಿಪಿಡಿಯ! 

Murder case
ಬೆಂಗಳೂರು1 hour ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Poonam Pandey bold photo with shadow and light
ಬಾಲಿವುಡ್2 hours ago

Poonam Pandey: ಕತ್ತಲೆಯಲ್ಲಿ ಬೆತ್ತಲೆಯಾಗಿ ಮೈಮಾಟ ಪ್ರದರ್ಶಿಸಿ, ಫ್ಯಾನ್ಸ್‌ಗೆ ಕಚಗುಳಿ ಇಟ್ಟ ಪೂನಂ ಪಾಂಡೆ!

Bus Accident
ಪ್ರಮುಖ ಸುದ್ದಿ2 hours ago

Bus Accident : ಶಾಲಾ ಬಸ್​ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ19 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ20 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌