Cauvery Dispute : ನಾಳೆ ಇಲ್ಲಿ ಕರ್ನಾಟಕ ಬಂದ್‌, ಅಲ್ಲಿ ಕಾವೇರಿ ಪ್ರಾಧಿಕಾರ ಸಭೆ; ಸಿಗುತ್ತಾ ನ್ಯಾಯ? - Vistara News

ಕರ್ನಾಟಕ

Cauvery Dispute : ನಾಳೆ ಇಲ್ಲಿ ಕರ್ನಾಟಕ ಬಂದ್‌, ಅಲ್ಲಿ ಕಾವೇರಿ ಪ್ರಾಧಿಕಾರ ಸಭೆ; ಸಿಗುತ್ತಾ ನ್ಯಾಯ?

Cauvery Dispute : ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆಯಲಿರುವ ಕರ್ನಾಟಕ ಬಂದ್‌ ಒಂದು ಕಡೆಯಾದರೆ, ದಿಲ್ಲಿಯಲ್ಲಿ ನಡೆಯಲಿರುವ ಕಾವೇರಿ ಪ್ರಾಧಿಕಾರದ ಸಭೆ ಇನ್ನೊಂದೆಡೆ. ಬಂದ್‌ ಯಶಸ್ವಿಯಾಗುವುದು ಖಚಿತ. ಕಾವೇರಿ ಪ್ರಾಧಿಕಾರ ನ್ಯಾಯ ಕೊಡುತ್ತಾ?

VISTARANEWS.COM


on

Cauvery meeting and Bandh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ/ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery Dispute) ಪ್ರತಿಭಟಿಸಿ, ರಾಜ್ಯಕ್ಕೆ ನ್ಯಾಯ ಕೋರಿ ಕನ್ನಡಪರ ಸಂಘಟನೆಗಳ (Kannada Organizations) ಕರೆಯಂತೆ ಶುಕ್ರವಾರ (ಸೆ. 29) ಕರ್ನಾಟಕ ಬಂದ್‌ (Karnataka Bandh) ನಡೆಯಲಿದೆ. ರಾಜ್ಯದ ಜನರು ಇದನ್ನು ಭಾವನಾತ್ಮಕವಾಗಿ ಸ್ವೀಕರಿಸಿರುವುದರಿಂದ ಬಂದ್‌ ಯಶಸ್ವಿಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery water Management Authority-CWMA) ಅತ್ಯಂತ ಮಹತ್ವದ ಸಭೆಯೂ ನಾಳೆ ದಿಲ್ಲಿಯಲ್ಲಿ ನಡೆಯಲಿದೆ. ನಿಜವಾದ ಯಶಸ್ಸು ಸಿಗಬೇಕಾಗಿರುವುದು ಅಲ್ಲಿ.

ಕಾವೇರಿ ನೀರು ನಿಯಂತ್ರಣ ಸಮಿತಿ (Cauvery water regulation committe- CWRC) ಸೆ. 26ರಂದು ಪ್ರಕಟಿಸಿದ ಆದೇಶದಲ್ಲಿ ಸೆ. 28ರಿಂದ 18 ದಿನಗಳ ಕಾಲ ದಿನವೂ 3000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲು ಆದೇಶ ನೀಡಿದೆ. ಈ ಆದೇಶಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಇದರ ಬೆನ್ನಿಗೇ ಸೆ. 29ರಂದು ನಡೆಯುತ್ತಿರುವ ಪ್ರಾಧಿಕಾರದ ಸಭೆಯಲ್ಲಿ ಸಮಿತಿಯ ಈ ತೀರ್ಮಾನವನ್ನು ಪ್ರಶ್ನೆ ಮಾಡಬಹುದಾಗಿದೆ.

ಈ ಬಾರಿ ಅಧಿಕಾರಿಗಳು ನೇರ ಹಾಜರಿ

ಸೆ. 29ರಂದು ನಡೆಯುವ ಪ್ರಾಧಿಕಾರದ ಸಭೆಯಲ್ಲಿ ಸರ್ಕಾರವು ಕಾವೇರಿ ಸಮಿತಿಯ ನಿರ್ಣಯವನ್ನು ಪ್ರಶ್ನೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. “ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಗೆ ಆನ್‌ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

“ತಮಿಳುನಾಡಿನವರು 11,000 ಸಾವಿರ ಕ್ಯೂಸೆಕ್ಸ್ ನೀರು ಬೇಡಿಕೆ ಇಟ್ಟಿದ್ದು, ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಈಗ ಸಹಜವಾಗಿ 2,000 ಕ್ಯೂಸೆಕ್ಸ್ ನೀರು ಹೋಗುತ್ತಿರಬಹುದು” ಎಂದು ತಿಳಿಸಿದರು.

“ಹಿರಿಯ ಕೃಷಿ ತಜ್ಞರು, ನೀರಾವರಿ ತಂತ್ರಜ್ಞರ ಸಭೆ ಕರೆದಿದ್ದು ಅಲ್ಲಿ ಚರ್ಚೆ ಮಾಡಲಾಗುವುದು. ಯಾರು ಭಾಗವಹಿಸುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಆಗುವುದಿಲ್ಲ” ಎಂದು ಹೇಳಿದರು.

ನಾಳಿನ ಬೆಳವಣಿಗೆ ನೋಡಿಕೊಂಡು ನ್ಯಾಯಾಲಯಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, “ಈಗಾಗಲೇ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ತಾಂತ್ರಿಕ ಸಮಿತಿಯವರು 3,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದ್ದಾರೆ. ನಾಳೆ ಪ್ರಾಧಿಕಾರದವರು ಏನು ಸೂಚನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು” ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಪ್ರಾಧಿಕಾರ ಕರ್ನಾಟಕದ ವಾದವನ್ನು ಒಪ್ಪುತ್ತದಾ?

ಈಗ ಇರುವ ಪ್ರಶ್ನೆ ಏನೆಂದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕದ ವಾದವನ್ನು ಒಪ್ಪುತ್ತದಾ? ಯಾಕೆಂದರೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರವು ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡುತ್ತಿರುವುದು ಇದು ಮೂರನೇ ಬಾರಿ. ಮೊದಲು ಆಗಸ್ಟ್‌ 26ರಂದು 5000 ಕ್ಯೂಸೆಕ್‌, ಬಳಿಕ ಸೆ. 12ರಂದು ಮತ್ತೆ ಐದು ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಆದೇಶ ಮಾಡಿದ್ದ ಸಮಿತಿ ಇದೀಗ ಮೂರನೇ ಸಲ ಆದೇಶ ನೀಡಿದೆ. ಹಿಂದಿನ ಎರಡೂ ಸಂದರ್ಭದಲ್ಲೂ ಅದು ಕರ್ನಾಟಕದ ವಾದಗಳಿಗೆ ಮನ್ನಣೆ ನೀಡಿಲ್ಲ. ಬದಲಾಗಿ CWRC ಹೇಳಿದ್ದೇ ಸರಿ ಎಂದಿತ್ತು. ಸುಪ್ರೀಂಕೋರ್ಟ್‌ ಪ್ರಾಧಿಕಾರ ಹೇಳಿದ್ದು ಸರಿ ಇರುತ್ತದೆ ಎಂದಿತ್ತು. ಹೀಗಾಗಿ ಪ್ರಾಧಿಕಾರದ ಸಭೆಯ ಬಗ್ಗೆ ಕುತೂಹಲವಿದೆ. ರಾಜ್ಯದಲ್ಲಿ ನಡೆಯುತ್ತಿರುವ ಬಂದ್‌, ನೀರಿಲ್ಲದ ಸ್ಥಿತಿಯನ್ನು ಪರಿಗಣಿಸಿ ತಡೆಯಾಜ್ಞೆ ನೀಡಿದರೆ ಕರ್ನಾಟಕಕ್ಕೆ ಯಶಸ್ಸು ಸಿಕ್ಕಂತೆ.

ಪ್ರಾಧಿಕಾರವೂ ಪ್ರತಿಕೂಲ ತೀರ್ಪನ್ನೇ ನೀಡಿದರೆ ಮತ್ತೆ ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಲೂ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಕಾನೂನು ಮತ್ತು ನೀರಾವರಿ ತಜ್ಞರ ಸಭೆ ಕರೆದ ಸಿಎಂ

ಈ ಎಲ್ಲ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಜಲ ವಿವಾದ ವಿಚಾರದಲ್ಲಿ ಮಹತ್ವದ ಸಭೆ ಕರೆದಿದ್ದಾರೆ. ಇದರಲ್ಲಿ ಕಾನೂನು ಪಂಡಿತರು ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಅಡ್ವೋಕೇಟ್ ಜನರಲ್ ಮಾಹಿತಿ ಪಡೆದು ಮುಂದುವರಿಯುವುದಾಗಿ ಸಿಎಂ ಹಾಗೂ ಡಿಸಿಎಂ ತಿಳಿಸಿದ್ದು, ಸಭೆ ಬಳಿಕ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನವಾಗಲಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಸಿಎಂ, ಡಿಸಿಎಂ ಚರ್ಚೆ ಇಲ್ಲ, ಬಾಯಿಗೆ ಬೀಗ ಹಾಕಿಕೊಂಡಿರಿ; ಡಿಕೆಶಿ ಖಡಕ್‌ ಎಚ್ಚರಿಕೆ

DK Shivakumar: ಕರ್ನಾಟಕದ ಸಿಎಂ ಹಾಗೂ ಡಿಸಿಎಂ ಕುರಿತು ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾವ ರೆಕಮಂಡೇಷನ್‌ ಕೂಡ ಅವಶ್ಯಕತೆ ಇಲ್ಲ. ನಾನು, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಅವರು ಸೇರಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕ ಕೂಡ ಇದರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂಬುದಾಗಿ ಸಿಎಂ ಹಾಗೂ ಡಿಸಿಎಂ ಗೊಂದಲದ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರು ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ (Karnataka) ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ. ಸಮುದಾಯವಾರು ಡಿಸಿಎಂ ಹುದ್ದೆ ನೀಡಬೇಕು ಎಂದು ಒಂದಷ್ಟು ಜನ ಆಗ್ರಹಿಸಿದರೆ, ಡಿ.ಕೆ.ಶಿವಕುಮಾರ್‌ ಅವರಿಗೇ ಸಿಎಂ ಹುದ್ದೆ ನೀಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ, ಸಿಎಂ, ಡಿಸಿಎಂ ಚರ್ಚೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಪ್ರತಿಕ್ರಿಯಿಸಿದ್ದು, “ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡಿರಿ” ಎಂಬುದಾಗಿ ಬಣ ರಾಜಕೀಯ ಮಾಡುವವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

“ಕರ್ನಾಟಕದ ಸಿಎಂ ಹಾಗೂ ಡಿಸಿಎಂ ಕುರಿತು ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾವ ರೆಕಮಂಡೇಷನ್‌ ಕೂಡ ಅವಶ್ಯಕತೆ ಇಲ್ಲ. ನಾನು, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಅವರು ಸೇರಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕ ಕೂಡ ಇದರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇಲ್ಲದಿದ್ದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೆ ನೋಟಿಸ್‌ ನೀಡಬೇಕಾಗುತ್ತದೆ. ಅನಿವಾರ್ಯವಾಗಿ ಪಕ್ಷದ ಶಿಸ್ತು ಕಾಪಾಡಲು ನೋಟಿಸ್ ನೀಡಬೇಕಾಗುತ್ತದೆ” ಎಂದು ಲಾಬಿ ಮಾಡುವ ಶಾಸಕರಿಗೆ ಎಚ್ಚರಿಕೆ ನೀಡಿದರು.

“ಪಕ್ಷವನ್ನು ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ನಿಮ್ಮ ಬಾಯಿಗೆ ಬೀಗ ಹಾಕಿಕೊಂಡು ಇದ್ದರೆ ಒಳ್ಳೆಯದಾಗುತ್ತದೆ. ಚಂದ್ರಶೇಖರ ಸ್ವಾಮೀಜಿ ಅವರು ನನ್ನ ಮೇಲಿನ ಅಭಿಮಾನಕ್ಕಾಗಿ ಹಾಗೆ ಮಾತನಾಡಿದ್ದಾರೆ. ಬೇರೆ ಯಾವ ಸ್ವಾಮೀಜಿಗಳೂ ಮಾತನಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ” ಎಂದು ಕೂಡ ಹೇಳಿದರು.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದೇನು?

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.

ಇದನ್ನೂ ಓದಿ: DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

Continue Reading

ಬೆಂಗಳೂರು ಗ್ರಾಮಾಂತರ

Attica Babu: ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ

Attica Babu: ಕಳ್ಳರಿಬ್ಬರು ಕದ್ದ ಚಿನ್ನವನ್ನು ಖರೀದಿ ಮಾಡಿದ್ದಕ್ಕೆ ಅಟ್ಟಿಕಾ ಗೋಲ್ಡ್‌ ಕಂಪೆನಿ ಮಾಲೀಕನ ಬಂಧನವಾಗಿದೆ. ಕಳ್ಳ ಮಾಲು ಕೇಸ್‌ನಲ್ಲಿ ಮೂವರನ್ನು ಬಂಧಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

attika babu
Koo

ದೊಡ್ಡಬಳ್ಳಾಪುರ: ಕಳ್ಳರು ಕದ್ದ ಚಿನ್ನವನ್ನು ಖರೀದಿ ಮಾಡಿದ ಆರೋಪದಡಿ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು (Attica Babu) ಮತ್ತೊಮ್ಮೆ ಬಂಧನವಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಶನಿವಾರ (ಜೂ.29) ಮುಂಜಾನೆ ಬಂಧಿಸಿ ಕರೆತಂದಿದ್ದಾರೆ.

ಮೊನ್ನೆಯಷ್ಟೇ ತುರುವೇಕೆರೆ ಪೊಲೀಸರು ಬೆಂಗಳೂರಿಗೆ ಬಂದು ಬಾಬುರನ್ನು ಬಂಧಿಸಿದ್ದರು. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಬಂದ ಅಟ್ಟಿಕಾ ಬಾಬುರನ್ನು ದೊಡ್ಡಬಳ್ಳಾಪುರ ಪೊಲೀಸರು ಕೂಡಲೆ ಬಂಧಿಸಿದ್ದಾರೆ.

ಇಬ್ಬರು ಕಳ್ಳರು ಕಳ್ಳತನ ಮಾಡಿದ ಚಿನ್ನದ ಮಾಲು ಖರೀದಿ ಆರೋಪದಲ್ಲಿ ಬಾಬು ಬಂಧನವಾಗಿದೆ. ಬೊಮ್ಮನಹಳ್ಳಿ ಬಾಬು ಸೇರಿದಂತೆ ಮೂವರ ಬಂಧನವಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ತುರುವೇಕೆರೆ ಪೊಲೀಸ್‌ ಠಾಣೆಯಲ್ಲೂ ಪ್ರಕರಣ ದಾಖಲು

ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ (Attica Gold Company) ಮಾಲೀಕ ಅಟ್ಟಿಕಾ ಬಾಬು (Attica Babu) ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು (Turuvekere Police) ಜೂನ್‌ 26 ಬಂಧಿಸಿದ್ದರು. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ (Bengaluru) ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದರು.

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿತ್ತು. ಹಗಲು ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌ ಎಂಬಾತ ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ. ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.

ಶಾರದಾ ಮೂಲಕ ಜಿಗಣಿಯಲ್ಲಿರುವ ಅಟ್ಟಿಕಾ ಗೋಲ್ಡ್‌ ಕಂಪನಿಯಲ್ಲಿ ಉದಯ್‌ ಅಲಿಯಾಸ್‌ ಅಶೋಕ್‌ ಮಾರಾಟ ಮಾಡಿಸಿದ್ದ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ಮಾಡಿದ್ದರು. ಕಳ್ಳತನ ಮಾಡಿದ ಚಿನ್ನಾಭರಣವನ್ನು ಖರೀದಿಸಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಬೆಂಗಳೂರಿಗೆ ಆಗಮಿಸಿ, ಅಟ್ಟಿಕಾ ಬಾಬು ಅವರನ್ನು ಬಂಧಿಸಿತ್ತು. ಬಳಿಕ ಜಾಮೀನು ಪಡೆದು ಹೊರಬಂದಿದ್ದ ಬಾಬುರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಳ್ಳ ಮಾಲು ಕೇಸ್‌ನಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Attica Babu : ಅಟ್ಟಿಕಾ ಬಾಬು ತಂದಿಟ್ಟಿದ್ದ ಲೋಡ್‌ಗಟ್ಟಲೆ ರಂಜಾನ್‌-ಯುಗಾದಿ ಕಿಟ್‌ ಸೀಜ್‌ ಮಾಡಿದ ಪೊಲೀಸರು!

2022ರಲ್ಲೂ ಬಂಧಿಸಲಾಗಿತ್ತು

ಎರಡನೇ ಮದುವೆಯಾಗಿ, ಮೋಸ ಮಾಡಿದ್ದಾರೆ ಎಂಬುದಾಗಿ ಮಹಿಳೆಯೊಬ್ಬರು ದೂರು ನೀಡಿದ ಕಾರಣ 2022ರಲ್ಲೂ ಅಟ್ಟಿಕಾ ಬಾಬು ಅವರನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದರು. ಶೇಖ್‌ ಮಿನಾಜ್‌ ಎಂಬ ಮಹಿಳೆಯು ಹಲ್ಲೆ ಹಾಗೂ ಮೋಸ ಮಾಡಿದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಿದ್ದರು. ಮಹಿಳೆ ದೂರಿನ ಹಿನ್ನೆಲೆಯಲ್ಲಿ ಅಟ್ಟಿಕಾ ಬಾಬು ವಿರುದ್ಧ ಹಲ್ಲೆ, ವರದಕ್ಷಿಣೆ ಕಿರುಕುಳದ ಪ್ರಕರಣ ಕೂಡ ದಾಖಲಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಅಟ್ಟಿಕಾ ಬಾಬು ಬಿಡುಗಡೆಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Love Failure : ಅತ್ತಿಗೆ ತಂಗಿಯನ್ನು ಹುಚ್ಚನಂತೆ ಪ್ರೀತಿಸುತ್ತಿದ್ದ ಯುವಕನೊರ್ವ ಮದುವೆಗೆ ಒಪ್ಪದ್ದಕ್ಕೆ ಮನನೊಂದು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

VISTARANEWS.COM


on

By

Love Failure
Koo

ರಾಯಚೂರು: ರಾಯಚೂರಲ್ಲಿ ಪ್ರೇಮ ವೈಫಲ್ಯಕ್ಕೆ (Love Failure) ಯುವಕನೊರ್ವ ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದ್ಗಲ್ ಪಟ್ಟಣ ಸಮೀಪದ ಕನಸಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಂತೋಷ್ (22) ಮೃತ ದುರ್ದೈವಿ.

ಮನೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೂ ಮುನ್ನ ತನ್ನ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್‌ನಲ್ಲಿ ʻನಾನು ಸತ್ತರು ಪ್ರೀತಿಗೋಸ್ಕರ ಸೋಲ್ತಿನಿ ಯಾಕೆಂದರೆ ನಾನು ಒಬ್ಬ ಹುಚ್ಚು ಪ್ರೇಮಿʼ ಎಂದು ಫೋಟೊ ಜತೆಗೆ ಬರಹವೊಂದನ್ನು ಹಾಕಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂತೋಷ್‌ ತನ್ನ ಅಣ್ಣನ ಹೆಂಡತಿ ತಂಗಿಯನ್ನೇ ಪ್ರೀತಿ ಮಾಡುತ್ತಿದ್ದ. ಆದರೆ ಮದುವೆಗೆ ಒಪ್ಪದಿದ್ದಾಗ ಮನನೊಂದು ಆತ್ಮಹತ್ಯೆ ಶರಣಾಗಿದ್ದಾನೆ. ಮುದ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Love Failure

ಇದನ್ನೂ ಓದಿ: Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

ದೊಡ್ಡಬಳ್ಳಾಪುರ: ಸಾಲ ಮಾಡಿ ಬಡ್ಡಿ ಕಟ್ಟಲಾಗದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪರ್ವೀಜ್ ಪಾಷ (38) ಆತ್ಮಹತ್ಯೆಗೆ ಶರಣಾದವರು.

ದೊಡ್ಡಬಳ್ಳಾಪುರ ನಗರದ ರೋಜಿಪುರ ಬಡಾವಣೆಯ ನಿವಾಸಿಯಾದ ಪರ್ವೀಜ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪರ್ವೀಜ್‌ ಈ ಹಿಂದೆ ಹಲವು ವ್ಯಕ್ತಿಗಳ ಬಳಿ ಬಡ್ಡಿಗೆ ಸಾಲ ಪಡೆದಿದ್ದ. ಸಾಲಗಾರರ ಕಾಟ ತಡೆಯಲಾರದೇ ಮನನೊಂದಿದ್ದ.

ಸಾಲ ತೀರಿಸಲು ದಿಕ್ಕು ದೋಚದೆ ಮೂರು ದಿನ ಊಟ ಬಿಟ್ಟಿದ್ದ. ನಂತರ ಅಂಗಡಿ ಮುಂದೆ ಸಾಲಗಾರರ ಕಾಟ ಹೆಚ್ಚಾದಾಗ ಕಳೆದ ಭಾನುವಾರ ಮನೆಗೆ ಬಂದವರೇ ಇಲಿ ಪಾಷಣ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಪರ್ವೀಜ್‌ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಪರ್ವೀಜ್‌ ಸಾವನ್ನಪ್ಪಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self harming

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೋಜಿಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

Gold Rate Today: ಬೆಂಗಳೂರಿನಲ್ಲಿ ಶನಿವಾರ (ಜೂನ್‌ 29) 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 6,616 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,217 ರೂ. ಆಗಿದೆ. ಒಂದು ರೂಪಾಯಿ ಏರಿಕೆಯಾಗಿರುವುದು ಗ್ರಾಹಕರಿಗೆ ಅಷ್ಟೇನೂ ಹೊರೆಯಾಗಿಲ್ಲ. ಇನ್ನು ಒಂದು ಗ್ರಾಂ ಬೆಳ್ಳಿಯ ಬೆಲೆಯು 89.40 ರೂಪಾಯಿ ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಚಿನ್ನದ ಬೆಲೆಯು (Gold Rate Today) ಶನಿವಾರ (ಜೂನ್‌ 29) ತುಸು ಏರಿಕೆ ಕಂಡಿದೆ. ಸಿಲಿಕಾನ್‌ ಸಿಟಿಯಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲೂ ಇಷ್ಟೇ ಏರಿಕೆಯಾಗಿದೆ. ಇದರಿಂದಾಗಿ ವೀಕೆಂಡ್‌ನಲ್ಲಿ ಚಿನ್ನದ ಖರೀದಿಸಲು ಮುಂದಾದವರಿಗೆ ಅಷ್ಟೇನೂ ಹೊರೆಯಾಗುವುದಿಲ್ಲ.

ಇದರೊಂದಿಗೆ ನಗರದಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 6,616 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,217 ರೂ. ಆಗಿದೆ. ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ (ಜೂನ್‌ 28) ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 43 ರೂ. ಏರಿಕೆ ಏರಿಕೆಯಾಗಿತ್ತು. ಇನ್ನು ಬೆಳ್ಳಿಯ ಬೆಲೆಯಲ್ಲಿ ತುಸು ಅಂದರೆ 0.10 ರೂ. ಇಳಿಕೆಯಾಗಿದ್ದು, ಒಂದು ಗ್ರಾಂ ಬೆಳ್ಳಿಗೆ 89.40 ರೂ. ಇದೆ.

Gold Rate Today

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Continue Reading
Advertisement
Aiden Markram
ಕ್ರೀಡೆ6 mins ago

Aiden Markram: ಧೋನಿಯಂತೆ ಮಾರ್ಕ್ರಮ್​ ಕೂಡ ಲಕ್ಕಿ ಕ್ಯಾಪ್ಟನ್​; ಸಾಧನೆ ಹೀಗಿದೆ

Fahadh Faasil in trouble faces Human Rights Commission action
ಮಾಲಿವುಡ್11 mins ago

Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

Viral Video
ವೈರಲ್ ನ್ಯೂಸ್13 mins ago

Viral Video: ಖೈದಿ ಜೊತೆಗೆ ಮಹಿಳಾ ಪೊಲೀಸ್‌ ಅಧಿಕಾರಿ ಲೈಂಗಿಕ ಕ್ರಿಯೆ; ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

5 Soldiers Killed
ದೇಶ16 mins ago

5 Soldiers Killed: ಲಡಾಕ್‌ನ ನದಿಯಲ್ಲಿ ಸೇನಾ ವಾಹನ ಮಗುಚಿ ಭೀಕರ ದುರಂತ; ಐವರು ಯೋಧರು ಹುತಾತ್ಮ

DK Shivakumar
ಕರ್ನಾಟಕ27 mins ago

DK Shivakumar: ಸಿಎಂ, ಡಿಸಿಎಂ ಚರ್ಚೆ ಇಲ್ಲ, ಬಾಯಿಗೆ ಬೀಗ ಹಾಕಿಕೊಂಡಿರಿ; ಡಿಕೆಶಿ ಖಡಕ್‌ ಎಚ್ಚರಿಕೆ

Actor Darshan Suffering From Sade Sati
ಸ್ಯಾಂಡಲ್ ವುಡ್37 mins ago

Actor Darshan: 2024 ಡೇಂಜರಸ್ ಇಯರ್ ಫಾರ್ ಮಿ ಅನ್ನೋದು `ಡೆವಿಲ್‌’ಗೆ ಮೊದಲೇ ಗೊತ್ತಿತ್ತಾ?

deepika padukone
Latest37 mins ago

Deepika Padukone: ‘ಕಲ್ಕಿ 2898 ಎಡಿ’ ಚಿತ್ರದ ದೀಪಿಕಾ ಪಡುಕೋಣೆ ನಗ್ನ ಚಿತ್ರ ಸೋರಿಕೆ; ನೆಟ್ಟಿಗರು ಹೇಳಿದ್ದೇನು?

attika babu
ಬೆಂಗಳೂರು ಗ್ರಾಮಾಂತರ38 mins ago

Attica Babu: ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ

Shah Rukh Khan
ಪ್ರಮುಖ ಸುದ್ದಿ39 mins ago

Shah Rukh Khan: ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

Ram Path
ದೇಶ56 mins ago

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ18 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌