ಗೋವಾದಲ್ಲಿ ಕಾಂಗ್ರೆಸ್‌ ಕಗ್ಗಂಟು; ಲೋಬೋ, ಕಾಮತ್‌ರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಅರ್ಜಿ - Vistara News

ದೇಶ

ಗೋವಾದಲ್ಲಿ ಕಾಂಗ್ರೆಸ್‌ ಕಗ್ಗಂಟು; ಲೋಬೋ, ಕಾಮತ್‌ರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಅರ್ಜಿ

ಗೋವಾ ಕಾಂಗ್ರೆಸ್‌ ಅಸ್ಥಿರಗೊಂಡಿದೆ. ಏಳು ಶಾಸಕರು ಪಕ್ಷದ ಸಭೆಗೆ ಹಾಜರಾಗಿರಲಿಲ್ಲ. ಇವರೆಲ್ಲ ಪಕ್ಷದಿಂದ ಬಂಡಾಯ ಎದ್ದಿದ್ದಾರೆ. ಬಿಜೆಪಿ ಸೇರ್ಪಡೆಯಾಗಲು ಅವರಿಗೆ ಹಣದ ಆಫರ್‌ ಬಂದಿದೆ ಎನ್ನಲಾಗಿದೆ.

VISTARANEWS.COM


on

Goa Congress
ಸ್ಪೀಕರ್‌ಗೆ ಅನರ್ಹತೆ ಅರ್ಜಿ ಸಲ್ಲಿಸಿದ ಕಾಂಗ್ರೆಸ್‌ ಗೋವಾ ಅಧ್ಯಕ್ಷ ಅಮಿತ್‌ ಪಾಟ್ಕರ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಣಜಿ: ಗೋವಾದಲ್ಲಿ ಕಾಂಗ್ರೆಸ್‌ನಲ್ಲಿ ಏಳು ಶಾಸಕರು ಬಂಡಾಯ ಎದ್ದ ಬೆನ್ನಲ್ಲೇ, ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆ. ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ ಭರ್ಜರಿ ಹಣದ ಆಫರ್‌ ಬರುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇನ್ನು ಪಕ್ಷದಲ್ಲಿ ಉಂಟಾದ ಈ ಗೊಂದಲಕ್ಕೆ ಪಕ್ಷದ ನಾಯಕರಾದ ಮೈಕಲ್‌ ಲೋಬೋ ಮತ್ತು ದಿಗಂಬರ್‌ ಕಾಮತ್‌ ಅವರೇ ಕಾರಣ ಎಂದೂ ಕಾಂಗ್ರೆಸ್‌ ಪ್ರಮುಖರು ಹೇಳಿದ್ದಾರೆ. ಈಗಾಗಲೇ ಮೈಕೆಲ್‌ ಲೋಬೋರನ್ನು ಗೋವಾ ವಿಧಾನಸಭೆ ವಿಪಕ್ಷ ನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ. ಇದೀಗ ಇನ್ನೂ ಮುಂದುವರಿದು ಮೈಕೆಲ್‌ ಲೋಬೋ ಮತ್ತು ದಿಗಂಬರ್‌ ಕಾಮತ್‌ರನ್ನು ಅನರ್ಹಗೊಳಿಸಬೇಕು ಎಂಬ ಅರ್ಜಿಯನ್ನು ವಿಧಾನಸಭೆ ಸ್ಪೀಕರ್‌ಗೆ ಸಲ್ಲಿಸಲಾಗಿದೆ.

ಲೋಬೋ ಮತ್ತು ಕಾಮತ್‌ ಅನರ್ಹತೆಗೆ ಮನವಿ ಮಾಡಿ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ ಬಳಿಕ ಮಾತನಾಡಿದ ಕಾಂಗ್ರೆಸ್‌ ಗೋವಾ ಅಧ್ಯಕ್ಷ ಅಮಿತ್‌ ಪಾಟ್ಕರ್‌, ʼಹಿರಿಯ ನಾಯಕರಾದ ಮೈಕೆಲ್‌ ಲೋಬೋ ಮತ್ತು ದಿಗಂಬರ್‌ ಕಾಮತ್‌ ಇಬ್ಬರೂ ಪಕ್ಷ ವಿರೋಧಿ ಚಟುವಟಿಕೆ ನಡೆಸುವ ಮೂಲಕ ಸ್ವಯಂ ಇಷ್ಟದಿಂದಲೇ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಬಿಟ್ಟಿದ್ದಾರೆ. ಯಾರೇ ಆಗಲಿ ಪಕ್ಷ ದುರ್ಬಲಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡರೆ, ಅವರು ಸ್ವಯಂಪ್ರೇರಿತರಾಗಿಯೇ ಪ್ರಾಥಮಿಕ ಸದಸ್ಯತ್ವ ಬಿಟ್ಟಂತೆ ಎಂದು 2020ರಲ್ಲಿ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಅದೇ ತೀರ್ಪಿನ ಆಧಾರದ ಮೇಲೆ ನಾವು ಇಂದು ಕ್ರಮ ಕೈಗೊಂಡಿದ್ದೇವೆ. ಅನರ್ಹಗೊಳಿಸಲು ಮನವಿ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.

ದಿನೇಶ್‌ ಗುಂಡೂರಾವ್‌ ಆರೋಪದಿಂದ ಬೇಸರ
ಗೋವಾದ ಕಾಂಗ್ರೆಸ್‌ ನಾಯಕರು ಪಕ್ಷದ ಸಭೆಗೆ ಗೈರಾಗುತ್ತಿದ್ದಂತೆ ಬಂಡಾಯದ ವಾಸನೆ ಬಡಿದಿತ್ತು. ಒಟ್ಟು 11 ಶಾಸಕರಿದ್ದು, ಅದರಲ್ಲಿ ಏಳು ಮಂದಿ ಸಭೆಗೆ ಬಂದಿರಲಿಲ್ಲ. ಆ ಏಳು ಜನರಲ್ಲಿ ಆರು ಮಂದಿ ಬಿಜೆಪಿ ಸೇರುವುದು ಪಕ್ಕಾ ಎನ್ನಲಾಗಿತ್ತು. ಅದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಎಐಸಿಸಿ ಗೋವಾ ಉಸ್ತುವಾರಿ ದಿನೇಶ್‌ ಗುಂಡೂರಾವ್‌, ಲೋಬೋ ಮತ್ತು ಕಾಮತ್‌ ವಿರುದ್ಧ ಆರೋಪ ಮಾಡಿದ್ದರು.

ತಮ್ಮ ಮೇಲಿನ ಆಪಾದನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ದಿಗಂಬರ್‌ ಕಾಮತ್‌, ʼನಾನು ದಿನೇಶ್‌ ಗುಂಡೂರಾವ್‌ ಸುದ್ದಿಗೋಷ್ಠಿ ನೋಡಿದೆ. ಅವರು ಮಾಡಿದ ಆರೋಪ ಕೇಳಿ ನನಗೇ ದಿಗಿಲಾಯಿತು. ಶಾಕ್‌ ಆಯಿತುʼ ಎಂದು ಹೇಳಿಕೊಂಡಿದ್ದರು. ಲೋಬೋ ಕೂಡ ಇದನ್ನು ತೀವ್ರವಾಗಿ ಖಂಡಿಸಿದ್ದರು. ನಾವು ಕಾಂಗ್ರೆಸ್‌ ಒಡೆಯುವ ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿ ಸೇರ್ಪಡೆಯಾಗುವುದಿಲ್ಲ ಎಂದು ಇಬ್ಬರೂ ನಾಯಕರು ಪದೇಪದೆ ಹೇಳುತ್ತಿದ್ದಾರೆ. ಹಾಗಿದ್ದಾಗ್ಯೂ ಇಬ್ಬರ ವಿರುದ್ಧ ಕ್ರಮ ಮತ್ತಷ್ಟು ಜಟಿಲವಾಗುತ್ತಲೇ ಇದೆ.

ಇದನ್ನೂ ಓದಿ: ಗೋವಾದಲ್ಲಿ ದಿನೇಶ್‌ ಗುಂಡೂರಾವ್‌; ವಿಧಾನಸಭೆ ವಿಪಕ್ಷ ನಾಯಕನ ಸ್ಥಾನದಿಂದ ಮೈಕೆಲ್‌ ಲೋಬೋ ವಜಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

LK Advani: ಮಾಜಿ ಉಪ ಪ್ರಧಾನಿ ಎಲ್‌ ಕೆ ಆಡ್ವಾಣಿ ಅಸ್ವಸ್ಥ, ಏಮ್ಸ್‌ಗೆ ದಾಖಲು

LK Advani: ಆಡ್ವಾಣಿ ಅವರಿಗೆ ಈಗ 96 ವರ್ಷ. ಬುಧವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸುವಾಗ ಅವರು ಪ್ರಜ್ಞಾವಸ್ಥೆಯಲ್ಲಿದ್ದರು ಹಾಗೂ ಮಾತನಾಡುತ್ತಿದ್ದರು. ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರ ವಿಭಾಗದ ತಜ್ಞರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದಾರೆ.

VISTARANEWS.COM


on

lk advani
Koo

ಹೊಸದಿಲ್ಲಿ: ಮಾಜಿ ಉಪ ಪ್ರಧಾನಿ (Ex Deputy Prime Minister), ಬಿಜೆಪಿಯ (BJP) ಹಿರಿಯ ನಾಯಕ ಎಲ್‌.ಕೆ ಆಡ್ವಾಣಿ (LK Advani) ಅವರು ಅಸ್ವಸ್ಥಗೊಂಡಿದ್ದು, ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್- AIIMS) ಗೆ ದಾಖಲಿಸಲಾಗಿದೆ.

ಇದನ್ನು ಆಸ್ಪತ್ರೆಯ ಹೇಳಿಕೆ ದೃಢಪಡಿಸಿದೆ. “ಎಲ್‌.ಕೆ ಅಡ್ವಾಣಿ ಅವರು ನವದೆಹಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ. ಅವರು ಸ್ಥಿರವಾಗಿದ್ದಾರೆ ಮತ್ತು ವೀಕ್ಷಣೆಯಲ್ಲಿದ್ದಾರೆ” ಎಂದು ಏಮ್ಸ್ ಹೇಳಿಕೆ ನೀಡಿದೆ. ಹಿರಿಯ ನಾಯಕನ ದೈಹಿಕ ಸ್ಥಿತಿಗತಿಯ ಬಗ್ಗೆ ಆಸ್ಪತ್ರೆಯು ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಆಡ್ವಾಣಿ ಅವರಿಗೆ ಈಗ 96 ವರ್ಷ. ಬುಧವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸುವಾಗ ಅವರು ಪ್ರಜ್ಞಾವಸ್ಥೆಯಲ್ಲಿದ್ದರು ಹಾಗೂ ಮಾತನಾಡುತ್ತಿದ್ದರು. ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರ ವಿಭಾಗದ ತಜ್ಞರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಡ್ವಾಣಿಯವರನ್ನು ಭೇಟಿ ಮಾಡಿದ್ದರು. ಗಾಂಧಿನಗರದ ಮಾಜಿ ಸಂಸದನಾದ ಆಡ್ವಾಣಿ, ಮೋದಿಯವರ ರಾಜಕೀಯ ಮಾರ್ಗದರ್ಶಕರಾಗಿದ್ದಾರೆ. ಆಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಎಲ್‌ಕೆ ಆಡ್ವಾಣಿ ಅವರು ಜೂನ್ 2002ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ, ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿ ಅಧ್ಯಕ್ಷರಾಗಿದ್ದರು.

ರಾಮಮಂದಿರ ನಿರ್ಮಾಣದ ಕುರಿತು

ಅಯೋಧ್ಯೆಯಲ್ಲಿ ಭಗವಾನ್ ರಾಮನ ಭವ್ಯ ಮಂದಿರದ (Ayodhya Ram Mandir) ನಿರ್ಮಾಣವನ್ನು ವಿಧಿಯೇ(Fate) ನಿರ್ಧರಿಸಿತ್ತು ಮತ್ತು ಇದಕ್ಕಾಗಿ ಅದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಆಯ್ಕೆ ಮಾಡಿದೆ ಎಂದು ಆಡ್ವಾಣಿ (LK Advani) ಅವರು ರಾಮ ಮಂದಿರ ನಿರ್ಮಾಣದ ಸಂದರ್ಭದಲ್ಲಿ ಹೇಳಿದ್ದರು. ರಾಷ್ಟ್ರಧರ್ಮ ಪತ್ರಿಕೆಯೊಂದಿಗೆ ಮಾತನಾಡಿ, ಅವರು ತಮ್ಮ ರಥಯಾತ್ರೆ (Rath Yatra) ಹಾಗೂ ರಾಮ ಮಂದಿರ ನಿರ್ಮಾಣ ಕುರಿತು ಅನೇಕ ಸಂಗತಿಗಳನ್ನು ಹಂಚಿಕೊಂಡಿದ್ದರು. ತನ್ನ ಮಂದಿರ ನಿರ್ಮಾಣಕ್ಕಾಗಿ ರಾಮನೇ ಭಕ್ತ(ಮೋದಿ)ನನ್ನು ಆಯ್ಕೆ ಮಾಡಿಕೊಂಡಿದ್ದಾನೆ ಎಂದು ಆಡ್ವಾಣಿ ಅಭಿಪ್ರಾಯಪಟ್ಟಿದ್ದರು.

‘ರಾಮ ಮಂದಿರ ನಿರ್ಮಾಣ್, ಏಕ ದಿವ್ಯ ಸ್ವಪ್ನ ಕಿ ಪೂರ್ತಿ’ ಶಿರೋನಾಮೆಯ ಲೇಖನದಲ್ಲಿ ಆಡ್ವಾಣಿ ಅವರು ರಾಮಮಂದಿರ ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ನಡೆಸಿದ ‘ರಥಯಾತ್ರೆ’ಯನ್ನು ಸ್ಮರಿಸಿಕೊಂಡಿದ್ದರು. ಅಯೋಧ್ಯೆ ಚಳವಳಿಯು “ಅತ್ಯಂತ ನಿರ್ಣಾಯಕ ಮತ್ತು ಪರಿವರ್ತನೆಯ ಘಟನೆ”. ತಮ್ಮ ರಾಜಕೀಯ ಪ್ರಯಾಣವು ಭಾರತವನ್ನು ಮರು ಶೋಧಿಸಲು ಮತ್ತು ಈ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ಪುನಃ ಅರ್ಥಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿತು ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Continue Reading

ದೇಶ

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Serial Bride: ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು. ತಾನು ಸೇರಿ ಏಳು ಜನರ ಗ್ಯಾಂಗ್‌ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಬಳಿಕ ಅವರ ಹಣ, ಚಿನ್ನ ಕದ್ದು ಪರಾರಿಯಾಗುತ್ತಿದ್ದಳು. ಈಗ ಈಕೆ ಜೈಲಿನಲ್ಲಿದ್ದು, ಎಚ್‌ಐವಿ ದೃಢಪಟ್ಟಿದೆ. ಇದು ಈಗ ಪೊಲೀಸರು ಹಾಗೂ ವೈದ್ಯಾಧಿಕಾರಿಗಳಿಗೆ ಹೊಸ ಆತಂಕ ತಂದೊಡ್ಡಿದೆ.

VISTARANEWS.COM


on

Serial Bride
Koo

ಲಖನೌ: ದೇಶದ ಹಲವೆಡೆ ಹತ್ತಾರು ಜನರನ್ನು ನಂಬಿಸಿ, ಅವರನ್ನು ಮದುವೆಯಾಗಿ, ಬಳಿಕ ಅವರ ಚಿನ್ನ ಹಾಗೂ ನಗದನ್ನು ದೋಚಿ ಪರಾರಿಯಾಗುತ್ತಿದ್ದ, ಸೀರಿಯಲ್‌ ಬ್ರೈಡ್‌ (ಸರಣಿ ಮದುಮಗಳು ಅಥವಾ Serial Bride) ಎಂದೇ ಖ್ಯಾತಿಯಾಗಿದ್ದ ಮಹಿಳೆಗೆ ಈಗ ಎಚ್‌ಐವಿ ದೃಢಪಟ್ಟಿರುವುದು ವೈದ್ಯಕೀಯ ವರದಿಗಳಿಂದ ಸಾಬೀತಾಗಿದೆ. ಇದು ಈಗ ಪೊಲೀಸರಿಗೆ ಮತ್ತೊಂದು ಸವಾಲಾಗಿದ್ದು, ಈಕೆಯನ್ನು ಮದುವೆಯಾಗಿದ್ದ ಮಾಜಿ ಪತಿಯರನ್ನು ಹುಡುಕಲು ಉತ್ತರ ಪ್ರದೇಶ (Uttar Pradesh) ಹಾಗೂ ಉತ್ತರಾಖಂಡದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು. ತಾನು ಸೇರಿ ಏಳು ಜನರ ಗ್ಯಾಂಗ್‌ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಮದುವೆಯಾದ ಬಳಿಕ ಗ್ಯಾಂಗ್‌ನ ಸದಸ್ಯರನ್ನು ತನ್ನ ಸಂಬಂಧಿಕರು ಎಂದು ನೂತನ ವರಗಳಿಗೆ ಪರಿಚಯ ಮಾಡಿಸುತ್ತಿದ್ದಳು. ಇದಾದ ಬಳಿಕ, ಆ ವ್ಯಕ್ತಿಯ ಬಳಿಯ ನಗದು, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದಳು.

World Aids Vaccine Day

ಹೀಗೆ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಹಲವರಿಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆ ಹಾಗೂ ಆರು ಆರೋಪಿಗಳನ್ನು ಬಂಧಿಸಿದ್ದರು. ಮಹಿಳೆಯ ಸೇರಿ ಏಳು ಜನರನ್ನು ಮುಜಫ್ಫರ್‌ನಗರ ಜೈಲಿನಲ್ಲಿ ಇರಿಸಲಾಗಿದೆ. ಇತ್ತೀಚೆಗೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಜಿಲ್ಲಾಸ್ಪತ್ರೆಯ ವೈದ್ಯರು ನೀಡಿದ ವರದಿಯಲ್ಲಿ, ಮಹಿಳೆಗೆ ಏಡ್ಸ್‌ ಇರುವುದು ಪತ್ತೆಯಾಗಿದೆ. ಇದು ಈಗ ಭೀಕರ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಯನ್ನು ತಂದೊಡ್ಡಿದೆ.

“ಮಹಿಳೆಯು ಹಲವು ಜನರಿಗೆ ವಂಚಿಸಿದ್ದು, ಹತ್ತಾರು ಜನರು ಈಕೆಯ ಜತೆ ದೈಹಿಕ ಸಂಪರ್ಕಕ್ಕೆ ಬಂದಿದ್ದಾರೆ. ಈಗ ಮಹಿಳೆಗೆ ಎಚ್‌ಐವಿ ಇದೆ ಎಂಬುದು ಇತ್ತೀಚಿನ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ. ಈಕೆಯ ಜತೆ ಲೈಂಗಿಕ ಸಂಪರ್ಕ ಹೊಂದಿದವರು, ಮದುವೆಯಾದವರನ್ನು ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಹುಡುಕಲಾಗುತ್ತಿದೆ” ಎಂದು ಮುಜಫ್ಫರ್‌ನಗರ ಜೈಲು ಎಸ್‌ಪಿ ಸೀತಾರಾಮ್‌ ಶರ್ಮಾ ಅವರು ಸುದ್ದಿಗಾರರರಿಗೆ ಮಾಹಿತಿ ನೀಡಿದ್ದಾರೆ. ಇನ್ನು, ಈಕೆಯನ್ನು ಮದುವೆಯಾದವರು ಕೂಡಲೇ ಎಚ್‌ಐವಿ ತಪಾಸಣೆ ಮಾಡಿಸಿಕೊಳ್ಳಿ ಎಂಬುದಾಗಿ ವೈದ್ಯಾಧಿಕಾರಿಗಳು ಕರೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ

Continue Reading

ಪ್ರಮುಖ ಸುದ್ದಿ

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

Terrorists Killed: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಅಡಗಿ ಕುಳಿತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಸಿಬ್ಬಂದಿಯು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಕಣಿವೆಯಲ್ಲಿ ನಾಗರಿಕರು, ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದರು. ಅಲ್ಲದೆ, ಉಗ್ರರನ್ನು ನಿರ್ಮೂಲನೆ ಮಾಡಲು ಸೂಚನೆ ನೀಡಿದ್ದರು. ಅದರಂತೆ, ಯೋಧರು ಸತತ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Terrorists Killed
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಅಡಗಿ ಕುಳಿತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಸಿಬ್ಬಂದಿ ಕೈಗೊಂಡ ಕಾರ್ಯಾಚರಣೆಯು ಯಶಸ್ವಿಯಾಗಿದೆ. ಮೂವರೂ ಉಗ್ರರನ್ನು ಹತ್ಯೆಗೈಯುವಲ್ಲಿ (Terrorists Killed) ಯೋಧರು ಯಶಸ್ವಿಯಾಗಿದ್ದಾರೆ. ಅಮೆರಿಕದಲ್ಲಿ ತಯಾರಿಸಿದ ಎಂ4 ರೈಫಲ್‌ ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನೂ ಭದ್ರತಾ ಸಿಬ್ಬಂದಿಯು ವಶಪಡಿಸಿಕೊಂಡಿದ್ದಾರೆ. ಮೂವರು ಉಗ್ರರ ಶವಗಳು ಕೂಡ ಸಿಕ್ಕಿವೆ. ಆದರೆ, ಅವರು ಯಾವ ಸಂಘಟನೆಗೆ ಸೇರಿದವರು ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ. ಮೂವರೂ ಪಾಕಿಸ್ತಾನದವರು ಎಂಬ ಮಾಹಿತಿ ಲಭ್ಯವಾಗಿದೆ.

ದೋಡಾ ಜಿಲ್ಲೆ ಗಂಡೋಹ್‌ ಪ್ರದೇಶದ ಬಜಾದ್‌ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಕುರಿತು ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡರು. ಬುಧವಾರ (ಜೂನ್‌ 26) ಬೆಳಗ್ಗೆ 9.50ರ ಸುಮಾರಿಗೆ ಕಾರ್ಯಾಚರಣೆ ಕೈಗೊಂಡಿದ್ದು, ಇದೇ ವೇಳೆ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಕಾರ್ಯಾಚರಣೆಯು ಎನ್‌ಕೌಂಟರ್‌ ಆಗಿ ಬದಲಾಗಿದ್ದು, ಮೊದಲಿಗೆ ಭದ್ರತಾ ಸಿಬ್ಬಂದಿಯು ಒಬ್ಬ ಉಗ್ರನನ್ನು ಹತ್ಯೆಗೈದಿದ್ದಾರೆ. ನಂತರೂ ಕಾರ್ಯಾಚರಣೆ ನಡೆಸಿ, ಇನ್ನಿಬ್ಬರನ್ನು ಕೂಡ ಹೊಡೆದುರುಳಿಸಿದ್ದಾರೆ.

ಜೂನ್ 11, 12ರಂದು ಚಟ್ಟರ್ಗಲ್ಲಾ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಇದಕ್ಕೆ ಸೇನೆ ಪ್ರತಿಕಕಾರ ತೀರಿಸಿಕೊಳ್ಳುತ್ತಿದ್ದು, ಈಗಾಗಲೆ 7-8 ಭಯೋತ್ಪಾದಕರು ಸತ್ತಿದ್ದಾರೆ. ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ ಆರೋಪದ ಮೇಲೆ ಮೂವರು ಸ್ಥಳೀಯರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ಸುಳಿವು ನೀಡಿದವರಿಗೆ ತಲಾ 5 ಲಕ್ಷ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಇದರ ಜತೆಗೆ ಮಂಗಳವಾರ ಸಂಜೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ರಜೌರಿ ಜಿಲ್ಲೆಯ ಪಿಂಡ್ ಗ್ರಾಮದಿಂದ ಚೀನಾದ ಹ್ಯಾಂಡ್ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಭದ್ರತಾ ಪಡೆಯ ಸಿಬ್ಬಂದಿ ತಿಳಿಸಿದ್ದಾರೆ. ಮೂರು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಕನಿಷ್ಠ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು. ಈ ಮೂಲಕ ಗಡಿ ನಿಯಂತ್ರಣ ರೇಖೆ (LoC) ಉದ್ದಕ್ಕೂ ಒಳನುಸುಳುವ ಭಯೋತ್ಪಾದಕರ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಹತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಐವರು ಲಷ್ಕರ್ ಉಗ್ರರ ಹತ್ಯೆ

Continue Reading

ಪ್ರಮುಖ ಸುದ್ದಿ

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

Sam Pitroda: ಲೋಕಸಭೆ ಚುನಾವಣೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ, ಭಾರಿ ವಿವಾದಕ್ಕೆ ಗುರಿಯಾಗಿ, ಕೊನೆಗೆ ಸ್ಯಾಮ್‌ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಈಗ ಅವರನ್ನು ಮತ್ತೆ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. “ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಸ್ಯಾಮ್‌ ಪಿತ್ರೋಡಾ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

VISTARANEWS.COM


on

Sam Pitroda
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಭಾರತೀಯರ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ರಾಜೀನಾಮೆ ನೀಡಿದ್ದ ಸ್ಯಾಮ್‌ ಪಿತ್ರೋಡಾ (Sam Pitroda) ಅವರನ್ನು ಮತ್ತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ (Indian Overseas Congress) ನೇಮಕ ಮಾಡಲಾಗಿದೆ. “ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ಮರು ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ತತ್‌ಕ್ಷಣದಿಂದಲೇ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ಪ್ರಕಟಣೆ ತಿಳಿಸಿದೆ.

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಸ್ಯಾಮ್‌ ಪಿತ್ರೋಡಾ ಹೇಳಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ಹಲವು ನಾಯಕರು ಸ್ಯಾಮ್‌ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿದ್ದರು. ಇದರ ಹಿನ್ನೆಲೆಯಲ್ಲಿ ಸ್ಯಾಮ್‌ ಪಿತ್ರೋಡಾ ಅವರು ಮೇ 8ರಂದು ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. “ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸ್ಯಾಮ್‌ ಪಿತ್ರೋಡಾ ನಿರ್ಧರಿಸಿದ್ದಾರೆ. ಇದು ಅವರು ಸ್ವ ಇಚ್ಛೆಯಿಂದ ತೆಗೆದುಕೊಂಡಿರುವ ತೀರ್ಮಾನವಾಗಿದೆ. ಅವರ ನಿರ್ಧಾರವನ್ನು ಕಾಂಗ್ರೆಸ್‌ ಅಧ್ಯಕ್ಷರು ಸ್ವಾಗತಿಸಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಹೇಳಿದ್ದರು.

ಪಿತ್ರೋಡಾ ಹೇಳಿದ್ದೇನು?

ವೈವಿಧ್ಯತೆಯ ಬಗ್ಗೆ ಮಾತನಾಡುವಾಗ ಭಾರತದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿದ ಸ್ಯಾಮ್‌ ಪಿತ್ರೋಡಾ, ವಿವಾದ ಹುಟ್ಟುಹಾಕಿದರು. “ನಾವು ಜಗತ್ತಿನಲ್ಲಿ ಪ್ರಜಾಪ್ರಭುತ್ವದ ಉಜ್ವಲ ಉದಾಹರಣೆಯಾಗಿದ್ದೇವೆ. ನಾವು ವೈವಿಧ್ಯತೆಯನ್ನು ಒಟ್ಟಿಗೆ ಹಿಡಿದಿಟ್ಟುಕೊಂಡಿರುವ ದೇಶವಾಗಿದ್ದೇವೆ. ಇಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಹಾಗೆ ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು” ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಪಿತ್ರೋಡಾ ಹೇಳಿದ್ದರು.

ತಿರುಗೇಟು ಕೊಟ್ಟಿದ್ದ ಮೋದಿ

ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ಯಾಮ್‌ ಪಿತ್ರೋಡಾ ಅವರಿಗೆ ತಿರುಗೇಟು ನೀಡಿದ್ದರು. “ಆದಿವಾಸಿ ಕುಟುಂಬದ ಮಗಳಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆ ವೇಳೆ ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸಿತು ಎಂದು ನಾನು ತುಂಬಾ ಯೋಚಿಸುತ್ತಿದ್ದೆ. ಇಂದು ನನಗೆ ಅದರ ಕಾರಣ ತಿಳಿಯಿತು. ‘ಶೆಹಜಾದಾ’ನ (ರಾಹುಲ್‌ ಗಾಂಧಿ) ಅಂಕಲ್‌ ಹಾಗೂ ಫಿಲಾಸಫಿ ಮಾರ್ಗದರ್ಶಕನೊಬ್ಬ ಅಮೆರಿಕದಲ್ಲಿದ್ದಾನೆ. ಆತ ಕ್ರಿಕೆಟ್‌ನ ಮೂರನೇ ಅಂಪೈರ್‌ನಂತೆ. ಈ ‘ಶೆಹಜಾದಾ’ ಮೂರನೇ ಅಂಪೈರ್‌ನಿಂದ ಸಲಹೆ ಪಡೆಯುತ್ತಾನೆ. ಕಪ್ಪು ಚರ್ಮ ಇರುವ ಭಾರತೀಯರು ಆಫ್ರಿಕಾದವರು ಎಂದು ಈ ʼತತ್ವಜ್ಞಾನಿ ಅಂಕಲ್‌ʼ ಹೇಳಿದ್ದಾರೆ. ಇದರರ್ಥ, ನೀವು ದೇಶದ ಹಲವಾರು ಜನರನ್ನು ಅವರ ಚರ್ಮದ ಬಣ್ಣದ ಆಧಾರದ ಮೇಲೆ ನಿಂದಿಸುತ್ತಿದ್ದೀರಿ” ಎಂದು ಕುಟುಕಿದ್ದರು.

ಇದನ್ನೂ ಓದಿ: ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

Continue Reading
Advertisement
murder case anekal
ಕ್ರೈಂ18 mins ago

Murder Case: ಬಾರ್‌ನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

lk advani
ಪ್ರಮುಖ ಸುದ್ದಿ40 mins ago

LK Advani: ಮಾಜಿ ಉಪ ಪ್ರಧಾನಿ ಎಲ್‌ ಕೆ ಆಡ್ವಾಣಿ ಅಸ್ವಸ್ಥ, ಏಮ್ಸ್‌ಗೆ ದಾಖಲು

Smoking Effects
ಆರೋಗ್ಯ50 mins ago

Smoking Effects: ಮಹಿಳೆಯರೇ, ಧೂಮಪಾನದಿಂದ ನಿಮ್ಮ ಆರೋಗ್ಯದ ಮೇಲಾಗುವ ಪರಿಣಾಮದ ಅರಿವಿದೆಯೇ?

Vastu Tips
ಧಾರ್ಮಿಕ1 hour ago

Vastu Tips: ಬಾತ್ ರೂಮ್‌ನಲ್ಲಿ ಈ ವಸ್ತುಗಳಿದ್ದರೆ ಕುಟುಂಬಕ್ಕೆ ಭಾರಿ ಸಂಕಷ್ಟ!

Karnataka Weather
ಕರ್ನಾಟಕ2 hours ago

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ!

ollie robinson
ಪ್ರಮುಖ ಸುದ್ದಿ8 hours ago

Ollie Robinson: 6, 6nb, 4, 6, 4, 6nb, 4, 6nb, 1; ಒಂದೇ ಓವರ್‌ನಲ್ಲಿ 43 ರನ್‌ ಕೊಟ್ಟ ಇಂಗ್ಲೆಂಡ್‌ ಬೌಲರ್; Video ಇದೆ

Serial Bride
ದೇಶ9 hours ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ9 hours ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ10 hours ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌