Bengaluru Traffic: ಟ್ರಾಫಿಕ್‌ ಚಕ್ರವ್ಯೂಹಕ್ಕೆ ಸಿಲುಕಿ 12 ಕಿ.ಮೀ ನಡೆದು ಮನೆ ತಲುಪಿದ ವ್ಯಕ್ತಿ! - Vistara News

ಬೆಂಗಳೂರು

Bengaluru Traffic: ಟ್ರಾಫಿಕ್‌ ಚಕ್ರವ್ಯೂಹಕ್ಕೆ ಸಿಲುಕಿ 12 ಕಿ.ಮೀ ನಡೆದು ಮನೆ ತಲುಪಿದ ವ್ಯಕ್ತಿ!

Bengaluru Traffic: ಬೆಂಗಳೂರು ಟ್ರಾಫಿಕ್‌ಗೆ ಸಿಲುಕಿದ ವ್ಯಕ್ತಿಯೊಬ್ಬರು ಸುಮಾರು 12 ಕಿ.ಮೀ. ನಡೆದು ಮನೆಗೆ ತಲುಪಿದ ಘಟನೆ ನಡೆದಿದೆ. ಈ ವಿಚಾರವನ್ನು ಅವರ ಸ್ನೇಹಿತರೊಬ್ಬರು ಹಂಚಿಕೊಂಡಿದ್ದು, ವೈರಲ್‌ ಆಗಿದೆ.

VISTARANEWS.COM


on

traffic jam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟ್ರಾಫಿಕ್‌ ಸಮಸ್ಯೆ ಬೆಂಗಳೂರಿಗರನ್ನು ಹೆಚ್ಚಿನ ಸಂದರ್ಭಗಳಲ್ಲಿ ಹೈರಾಣಾಗಿಸುತ್ತದೆ. ಬೆಂಗಳೂರಿನ ಈ ಟ್ರಾಫಿಕ್‌ (Bengaluru Traffic) ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ. ಇದಕ್ಕೆ ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ ಸೆಪ್ಟಂಬರ್‌ 27ರಂದು ಸಂಭವಿಸಿದ ಘಟನೆ. ಅಂದು ಔಟರ್‌ ರಿಂಗ್‌ ರೋಡ್‌ (ORR)ನಲ್ಲಿ ವಾಹನಗಳು ಸಿಲುಕಿಕೊಂಡಿದ್ದು, ಸವಾರರು ಗಂಟೆಗಟ್ಟಲೆ ರಸ್ತೆ ಮಧ್ಯೆಯೇ ಸಿಲುಕಿಕೊಂಡಿದ್ದರು. ಇದೀಗ ವ್ಯಕ್ತಿಯೊಬ್ಬರು ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡ ಗೆಳೆಯನೊಬ್ಬ ಸುಮಾರು 12 ಕಿ.ಮೀ. ನಡೆದುಕೊಂಡೇ ಮನೆಗೆ ತಲುಪಿದ ಘಟನೆಯನ್ನು ತಿಳಿಸಿದ್ದಾರೆ. ಸದ್ಯ ಈ ಪೋಸ್ಟ್‌ ವೈರಲ್‌ ಆಗಿದೆ.

ತುಷಾರ್‌ ಎನ್ನುವವರು ಎಕ್ಸ್‌ನಲ್ಲಿ ಈ ಪೋಸ್ಟ್‌ ಹಂಚಿಕೊಂಡಿದ್ದಾರೆ. ʼʼಬೆಂಗಳೂರು ಟ್ರಾಫಿಕ್‌ಗೆ ಸಿಕ್ಕಿಹಾಕಿಕೊಂಡ ನನ್ನ ಸ್ನೇಹಿತ ಸುಮಾರು 12 ಕಿ.ಮೀ. ನಡೆದು ಮನೆ ಸೇರಿದ. ಅವನಿಗೆ ಯಾವುದೇ ಕ್ಯಾಬ್‌, ಆಟೋ, ರ‍್ಯಾಪಿಡೋ ಅಥವಾ ಇನ್ನಾವುದೇ ವಾಹನ ಲಭಿಸಲಿಲ್ಲʼʼ ಬೇಸರ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರು ಹೆಲ್ತ್‌ ಮೋನಿಟರಿಂಗ್‌ ಅಪ್ಲಿಕೇಶನ್‌ನ ಫೋಟೊವನ್ನು ಶೇರ್‌ ಮಾಡಿದ್ದಾರೆ. ಅದರಲ್ಲಿ ಅವರ ಸ್ನೇಹಿತ 3.25 ಗಂಟೆಗಳಲ್ಲಿ ಸುಮಾರು 11.85 ಕಿ.ಮೀ. ದೂರವನ್ನು ನಡೆದ ವಿವರ ದಾಖಲಾಗಿದೆ.

ಸೆಪ್ಟಂಬರ್‌ 27ರಂದು ಮಾಡಲಾದ ಈ ಪೋಸ್ಟ್‌ ಅನ್ನು ಈಗಾಗಲೇ 2 ಲಕ್ಷಕ್ಕಿತಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ಅನೇಕರು ಕಮೆಂಟ್‌ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Traffic Jam: ಟ್ರಾಫಿಕ್‌ ಜಾಮ್‌ನಲ್ಲೇ ಫುಡ್‌ ಡೆಲಿವರಿ ಮಾಡಿದ ಡೊಮಿನೋಸ್‌ ಸಿಬ್ಬಂದಿಗೆ ಸಿಕ್ತು ಶಬ್ಬಾಶ್‌ಗಿರಿ

ನೆಟ್ಟಿಗರ ಪ್ರತಿಕ್ರಿಯೆ ಏನು?

ʼʼಈ ನಗರವನ್ನು ಪ್ರೀತಿಸುವವರು ಇದನ್ನು ಸಮರ್ಥಿಸಬಹುದು. ಪ್ರತಿಯೊಬ್ಬರು ತಮ್ಮ ನಗರ/ದೇಶವನ್ನು ಪ್ರೀತಿಸಿ. ಅದರ ಜತೆಗೆ ಸಮಸ್ಯೆ, ಕೊರತೆ ಬಗ್ಗೆಯೂ ತಿಳಿದಿರಬೇಕು. ಇಲ್ಲದಿದ್ದರೆ ಸಮಸ್ಯೆ ಪರಿಹಾರ ಸಾಧ್ಯವಿಲ್ಲʼʼ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ʼʼಬಹುತೇಕ ಹೆಚ್ಚಿನ ಕಂಪನಿಗಳು ನಗರದಿಂದ ಹೊರಭಾಗಕ್ಕೆ ತಮ್ಮ ಕಚೇರಿಗಳನ್ನು ವರ್ಗಾಯಿಸಿದರೆ ಇಂತಹ ಸಮಸ್ಯೆ ಉದ್ಬವಿಸುವುದಿಲ್ಲ. ಉದ್ಯೋಗಿಗಳು ತಿಂಗಳಿಗೊಮ್ಮೆ ಅಥವಾ ಮೂರು ತಿಂಗಳಿಗೊಮ್ಮೆ ಕಚೇರಿ ಭೇಟಿ ನೀಡುವಂತಾಗಬೇಕುʼʼ ಎಂದು ಇನ್ನೊಬ್ಬರು ಸಲಹೆ ನೀಡಿದ್ದಾರೆ. ಇನ್ನೊಬ್ಬರು ಕಮೆಂಟ್‌ ಮಾಡಿ ʼʼಬೆಂಗಳೂರು ವಾತಾವರಣ ಉತ್ತಮವಾಗಿದೆʼʼ ಎಂದಿದ್ದಾರೆ. ʼʼನಿಮ್ಮ ಸ್ನೇಹಿತ ನಡೆದುಕೊಂಡು ಹೋಗುವಾಗಲೂ ಟ್ರಾಫಿಕ್ ಸಮಸ್ಯೆ ಎದುರಿಸಿದಂತೆ ಕಾಣುತ್ತಿದೆ. ಸಾಮಾನ್ಯವಾಗಿ 12 ಕಿ.ಮೀ. ದೂರವನ್ನು 2 ಗಂಟೆಗಳಲ್ಲಿ ಕ್ರಮಿಸಬಹುದುʼʼ ಎಂದಿದ್ದಾರೆ ಮತ್ತೊಬ್ಬರು. ʼʼಜನರು ಸ್ಥಳದ ಆದ್ಯತೆಗಳ ಬಗ್ಗೆ ಯೋಚಿಸಬೇಕಾದ ಸಮಯ ಬಂದಿದೆ. ಬೆಂಗಳೂರನ್ನು ಇಷ್ಟು ದೊಡ್ಡ ಜನಸಂಖ್ಯೆಗಾಗಿ ವಿನ್ಯಾಸಗೊಳಿಸಲಾಗಿಲ್ಲ” ಎಂದು ಇನ್ನೊಬ್ಬರು ಹೇಳಿದ್ದಾರೆ.

ಟ್ರಾಫಿಕ್‌ನಲ್ಲೇ ಫುಡ್‌ ಡೆಲಿವರಿ

ಇದೇ ಟ್ರಾಫಿಕ್‌ ಜಾಮ್‌ನಲ್ಲೇ ಫುಡ್‌ ಡೆಲಿವರಿ ಮಾಡಿದ ಘಟನೆಯೂ ನಡೆದಿತ್ತು. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಫುಡ್‌ ಆರ್ಡರ್‌ ಮಾಡಿದ್ದರು. ಅಲ್ಲೇ ಸಮೀಪದಲ್ಲಿದ್ದ ಡೆಲಿವರಿ ಏಜೆಂಟ್‌ಗಳು ಲೈವ್‌ ಲೊಕೇಶನ್‌ ಟ್ರ್ಯಾಕ್‌ ಮಾಡಿ ಟ್ರಾಫಿಕ್‌ ಜಾಮ್‌ನಲ್ಲೇ ಫುಡ್‌ ಡೆಲಿವರಿ ಮಾಡಿದ್ದರು. ಈ ದೃಶ್ಯವನ್ನು ಚಿತ್ರೀಕರಿಸಿ ಪೋಸ್ಟ್‌ ಮಾಡಲಾಗಿದ್ದು, ಅದು ಕೂಡ ವೈರಲ್‌ ಆಗಿದೆ. ಕನ್ನಡ ಪರ ಸಂಘಟನೆಗಳು ಮತ್ತು ರೈತ ಸಂಘಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ ಮರುದಿನವೇ ಸಂಚಾರ ದಟ್ಟಣೆ ಉಂಟಾಗಿತ್ತು.

ಇನ್ನಷ್ಟು ವೈರಲ್‌ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Waste Disposal: ನಗರದಲ್ಲಿ ಕಸದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಯಾಗುತ್ತಿದ್ದು, ಕಸ ವಿಲೇವಾರಿಗಾಗಿಯೇ (garbage disposal) ಒಂದು ಕಂಪನಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ” ಹೆಸರಿನ ಈ ಕಂಪನಿ ಘನತ್ಯಾಜ್ಯ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದೆ.

VISTARANEWS.COM


on

bbmp waste disposal
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಸ ವಿಲೇವಾರಿ (waste disposal) ಸಮಸ್ಯೆ ಬೃಹತ್‌ ಆಗಿ ಬೆಳೆದು ನಿಂತಿದೆ. ಬಿಬಿಎಂಪಿಯಲ್ಲಿ (BBMP) ಸಾಕಷ್ಟು ಎಂಜಿನಿಯರ್‌ಗಳು (Engineers) ಇದಕ್ಕಾಗಿಯೇ ಇದ್ದರೂ ಇದನ್ನು ನಿರ್ವಹಿಸುವುದು ಸವಾಲೇ ಆಗಿದೆ. ಹೀಗಾಗಿ, ರಾಜ್ಯ ಸರ್ಕಾರದಿಂದ ಕಸ ವಿಲೇವಾರಿಗೆ ಇದೇ ಜೂನ್‌ 1ರಿಂದ ಹೊಸ ಯೋಜನೆ ಜಾರಿಯಾಗುತ್ತಿದೆ.

ನಗರದಲ್ಲಿ ಕಸದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಯಾಗುತ್ತಿದ್ದು, ಕಸ ವಿಲೇವಾರಿಗಾಗಿಯೇ (garbage disposal) ಒಂದು ಕಂಪನಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ” ಹೆಸರಿನ ಈ ಕಂಪನಿ ಘನತ್ಯಾಜ್ಯ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದ್ದು, ಇನ್ನು ಮುಂದೆ ನಗರದಲ್ಲಿ ಕಸದ ಸಮಸ್ಯೆ ಕಂಡುಬಂದರೆ ಅದನ್ನು ಈ ಕಂಪನಿಯ ಮುಂದೆ ಪ್ರಶ್ನಿಸಬೇಕಾಗಲಿದೆ.

ರಾಜ್ಯ ಸರ್ಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ಜಂಟಿಯಾಗಿ ಈ ಸಂಸ್ಥೆಯನ್ನು ನಿರ್ಮಾಣ ಮಾಡಿವೆ. ಇನ್ನು ಮುಂದೆ ಈ ಕಂಪನಿಯಿಂದಲೇ ಕಸ ಸಂಗ್ರಹಣೆ, ಸಾಗಾಣಿಕೆ ಹಾಗೂ ಹಾಗೂ ವಿಲೇವಾರಿ ಕಾರ್ಯ ನಡೆಯಲಿದೆ. ಜೂನ್ 1ರಿಂದ ಮನೆಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ, ಸಂಗ್ರಹಿಸಿದ ಕಸವನ್ನು ಟಿಪ್ಪರ್ ಲಾರಿಗಳ ಮೂಲಕ ಕಸದ ಸಂಸ್ಕರಣಾ ಘಟಕ ಅಥವಾ ಕ್ಯಾರಿಗಳಿಗೆ ಸಾಗಿಸುವುದು ಈ ಸಂಸ್ಥೆಯ ಹೊಣೆ.

ಬಿಬಿಎಂಪಿ ಅಡಿಯಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುತ್ತಿರುವ ಅಟೋ, ಟಿಪ್ಪರ್, ಕಾಂಪ್ಯಾಕ್ಟರ್ ಚಾಲಕರು, ಸಹಾಯಕರು ಕಂಪನಿ ವ್ಯಾಪ್ತಿಗೆ ಬರಲಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವಾರ್ಡ್‌ ಮಟ್ಟದ ಎಂಜಿನಿಯರ್‌ಗಳು, ಸಿಬ್ಬಂದಿಗಳು ಹಾಗೂ ಮಾರ್ಷಲ್‌ಗಳು ಕಂಪನಿ ಅಧೀನಕ್ಕೆ ಬರಲಿದ್ದಾರೆ. ಈ ಅಧಿಕಾರಿಗಳ, ಸಿಬ್ಬಂದಿಗಳ ವೇತನವನ್ನು ಕಂಪನಿಯೇ ಪಾವತಿ ಮಾಡಲಿದೆ.

ನಗರದಲ್ಲಿ ಇರುವ 7 ಕಸ ಸಂಸ್ಕರಣಾ ಘಟಕಗಳು ಕಂಪನಿ ವ್ಯಾಪ್ತಿಗೆ ಬರಲಿವೆ. ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಪ್ರತಿ ವರ್ಷ ಕಂಪನಿಗೆ ಅಂತ ಅನುದಾನ ನೀಡಲಿವೆ. ಪೌರ ಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇವರಿಗೆ ಬಿಬಿಎಂಪಿಯಿಂದ ವೇತನ ದೊರೆಯಲಿದೆ. ಪೌರಕಾರ್ಮಿಕರು ಕೇವಲ ಕಸ ಗುಡಿಸುವುದು, ಸಾರ್ವಜನಿಕ ಸ್ಥಳಗಳನ್ನು ಕ್ಲೀನ್ ಮಾಡುವುದು ಮಾಡಲಿದ್ದಾರೆ.

ಘನತ್ಯಾಜ್ಯ ಇಲಾಖೆಯನ್ನು ಆರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಅದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆ ಎಂದು ಕರೆಯಲಾಗುತ್ತದೆ. ಈ ಬದಲಾವಣೆಗಳಿಂದ ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಕಸದ ಸಮಸ್ಯೆ ಇರವುದಿಲ್ಲವೇ, ಗಾರ್ಬೆಜ್ ಸಿಟಿ ಗಾರ್ಡನ್ ಸಿಟಿ ಆಗಲಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಕಾದು ನೋಡಬೇಕಿದೆ.

ಜನರಹಿತ ಪ್ರದೇಶಗಳಿಗೆ ಕಸ ವಿಲೇವಾರಿ ಘಟಕಗಳ ಸ್ಥಳಾಂತರ: ಡಿಕೆಶಿ

ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರದ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು (Waste Disposal Unit) ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಈ ಹಿಂದೆ ತಿಳಿಸಿದ್ದರು.

ಬೆಂಗಳೂರು ಅಪಾರವಾಗಿ ಬೆಳೆದ ಪರಿಣಾಮ ಕಸ ವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯಣಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಕೂಡ ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದೆ. ಮುಂದಿನ ದಿನಗಳಲ್ಲಿ ಜನರಿಗೆ ಕಸದ ವಾಸನೆ ಬರಬಾರದು ಎಂಬ ಉದ್ದೇಶದಿಂದ ನಗರದ ಹೊರವಲಯಕ್ಕೆ ಈ ಘಟಕಗಳ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Continue Reading

ಕ್ರೈಂ

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

ಮೇ 11ರಂದು ಸಂಜಯನಗರ ಅಣ್ಣಯ್ಯಪ್ಪ ಲೇ ಔಟ್‌ನಲ್ಲಿ ಚೈತ್ರಾ ಶವ ಪತ್ತೆಯಾಗಿತ್ತು. ಚೈತ್ರಾ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಚೈತ್ರಾ ಪತಿ,‌ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದರು.

VISTARANEWS.COM


on

suspicious death Self Harming By Hight court lawyer
Koo

ಬೆಂಗಳೂರು: ವಕೀಲೆ (Advocate) ಚೈತ್ರಾ ಗೌಡ ಅನುಮಾನಾಸ್ಪದ ಸಾವು (Suspicious Death) ಪ್ರಕರಣದಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ಪೋಸ್ಟ್‌ ಮಾರ್ಟಮ್‌ (post mortem) ರಿಪೋರ್ಟ್‌ ಅನ್ನು ಪಡೆದಿದ್ದು, ತನಿಖೆ ಮುಗಿಸಿರುವ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿದೆ.

ಮೇ 11ರಂದು ಸಂಜಯನಗರ ಅಣ್ಣಯ್ಯಪ್ಪ ಲೇ ಔಟ್‌ನಲ್ಲಿ ಚೈತ್ರಾ ಶವ ಪತ್ತೆಯಾಗಿತ್ತು. ಚೈತ್ರಾ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಚೈತ್ರಾ ಪತಿ,‌ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದರು.

ವಿಚಾರಣೆ ವೇಳೆ, ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಜೊತೆಗೆ ಯಾವುದೇ ಹಣಕಾಸಿನ ಸಮಸ್ಯೆ ಕೂಡ ಇರಲಿಲ್ಲ ಎಂದು ಶಿವಕುಮಾರ್‌ ತಿಳಿಸಿದ್ದರು. ಆದರೆ ಪ್ರಾಪರ್ಟಿ ವಿಚಾರವಾಗಿ ಆಗಾಗ್ಗೆ ಸ್ವಲ್ಪ ಜಗಳ ನಡೀತಾ ಇತ್ತು. ಇದರಿಂದ ಖಿನ್ನತೆಗೊಳಗಾಗಿದ್ದಳು ಎಂದು ಮಾಹಿತಿ ನೀಡಿದ್ದರು.

ಮರಣೋತ್ತರ ಪರೀಕ್ಷೆಯಲ್ಲೂ ಇದು ಆತ್ಮಹತ್ಯೆ ಎಂದು ಕಂಡುಬಂದಿದೆ. ಜೊತೆಗೆ ಮನೆಯಲ್ಲಿ ಸಿಕ್ಕ ಡೆತ್ ನೋಟ್ ಕೂಡ ಚೈತ್ರಾ ಬರೆದಿರುವುದು ಖಚಿತವಾಗಿದೆ. ಚೈತ್ರಾ, ತಮ್ಮ ಕುಟುಂಬಸ್ಥರ ಬಳಿ ಮೂರು ತಿಂಗಳ ಹಿಂದೆಯೇ ತಾವು ಸಾಯುವುದಾಗಿ ಮಾತಾಡಿದ್ದರು. ಈ ಮಾತಾಡಿದ ಬಳಿಕವೇ ಡೆತ್‌ ನೋಟ್‌ ಬರೆದಿಟ್ಟಿರುವುದು ಗೊತ್ತಾಗಿದೆ. 10 ದಿನಗಳ‌ ತನಿಖೆ ಬಳಿಕ ಹಿರಿಯ ಅಧಿಕಾರಿಗಳಿಗೆ ಸಂಜಯನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಏನಿದು ಪ್ರಕರಣ?

2016ರಲ್ಲಿ ಮದುವೆ ಆಗಿದ್ದ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಅಪಾರ್ಟ್‌ಮೆಂಟ್‌ನ ಮೂರು ಫ್ಲಾಟ್‌ನಲ್ಲಿ ಒಂದರಲ್ಲಿ ಚೈತ್ರಾ ಕುಟುಂಬ ಹಾಗೂ ಇನ್ನೊಂದು ಫ್ಲಾಟ್‌ನಲ್ಲಿ ಮೃತಳ ತಮ್ಮ ವಾಸವಾಗಿದ್ದರು. ಶನಿವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜತೆ ನಂತರ ತಮ್ಮನನೊಟ್ಟಿಗೂ ಚೈತ್ರಾ ಮಾತನಾಡಿದ್ದಾರೆ. 11 ಗಂಟೆ ಸುಮಾರಿಗೆ ಚೈತ್ರಾಳ ತಮ್ಮ ಕರೆದಾಗ ಸ್ಪಂದಿಸಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಫ್ಯಾನ್‌ಗೆ ವೇಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಕೂಡಲೇ ಚೈತ್ರಾಳ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಚೈತ್ರಾರ ಬೆಡ್‌ ರೂಮಿನಲ್ಲಿ ಒಂದು ಪುಟದ ಡೆತ್ ನೋಟ್ ಪತ್ತೆಯಾಗಿದೆ. ಮೂರು ತಿಂಗಳ ಹಿಂದೆ ಅಂದರೆ ಮಾರ್ಚ್ 11ರಂದು ಇದನ್ನು ಬರೆಯಲಾಗಿತ್ತು. ಡೆತ್‌ನೋಟ್‌ನಲ್ಲಿ, ನನ್ನ ಪತಿ ತುಂಬಾ ಒಳ್ಳೆಯವರು. ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್‌ನಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ ಆಗುತ್ತಿಲ್ಲ, ನಾನು ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೆನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ನಾನು ಸೂಸೈಡ್ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಸಹ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನಕ್ಕೆ ಅಂತ್ಯವಾಡಿದ್ದೇನೆ ಎಂದು ಬರೆದಿದ್ದಾರೆ.

ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

ಕಲಬುರಗಿ: ಹಣಕ್ಕಾಗಿ‌ ಸೆಕೆಂಡ್‌ ಹ್ಯಾಂಡ್‌ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿರುವ (Kidnap Case) ಘಟನೆ ನಡೆದಿದೆ. ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣವನ್ನು ಲಪಟಾಯಿಸಿರುವ ಘಟನೆ (Assault Case) ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್‌ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್‌ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಅರ್ಜುನ್‌ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜತೆಗೆ ಹೋಗಿದ್ದರು.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಈ ವೇಳೆ ಆರೋಪಿ ರಮೇಶ್‌ ಕಾರಿನ ಟೆಸ್ಟ್‌ ಡ್ರೈವ್‌ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣಾ ಎಂದು ಮೂವರನ್ನು ಕರೆದುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್‌ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್‌ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.

ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್‌ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Continue Reading

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Bengaluru News: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar instructed to test drinking water everywhere including Bengaluru
Koo

ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು (Bengaluru News) ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವೈಯಾಲಿಕಾವಲ್‌ನ ಐಪಿಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್‌ ಅವರ ಸಹಾಯ ಪಡೆಯುತ್ತೀರಾ ಎಂದು ಕೇಳಿದಾಗ, “ಬಿಎಂಟಿಎಫ್‌ ಜತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ”ಎಂದರು.

ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಕೇಳಿದಾಗ, “ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು. ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ 5 ಅಂಶಗಳ ಕಾರ್ಯಕ್ರಮ

ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಆಸ್ತಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಆಸ್ತಿ ತೆರಿಗೆ, ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಈ ಐದು ಅಂಶಗಳ ಕಾರ್ಯಕ್ರಮದಲ್ಲಿ ಸೇರಿವೆ ಎಂದರು.

ಇದನ್ನೂ ಓದಿ: Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ಮುಖ್ಯಮಂತ್ರಿಗಳ ಜತೆಗೂಡಿ ಬುಧವಾರ ಬೆಂಗಳೂರು ನಗರದ ಒಂದಷ್ಟು ಭಾಗಗಳಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅನೇಕ ಸಮಸ್ಯೆಗಳು ಕಂಡು ಬಂದ ಕಾರಣ ಬಿಬಿಎಂಪಿ ವಲಯ ಅಧಿಕಾರಿಗಳು ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಲಾಯಿತು ಎಂದರು.

ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ನಗರದ ಎಲ್ಲಾ ಭಾಗಗಳಲ್ಲಿ ಸರಬರಾಜಾಗುವ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಬಿಬಿಎಂಪಿ ನಡೆಸಬೇಕು ಹಾಗೂ ಗುಣಮಟ್ಟದ ಫಲಿತಾಂಶವನ್ನು ಬಿಡ್ಬ್ಲೂಎಸ್‌ಎಸ್‌ಬಿಗೆ ನೀಡಬೇಕು ಎಂದು ಸೂಚಿಸಲಾಗಿದೆ ಎಂದರು.

ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿತ್ತು. ಅದರಂತೆ 2016-17 ರಲ್ಲಿ 2,626 ಒತ್ತುವರಿಗಳನ್ನು ಗುರುತಿಸಲಾಗಿತ್ತು. 2022- 23 ಹೊತ್ತಿಗೆ 556 ಒತ್ತುವರಿ ತೆರವು ಮಾಡಲಾಗಿತ್ತು. ಈಗ 1136 ಹೊಸದಾಗಿ ಒತ್ತುವರಿಗಳನ್ನು ಗುರುತಿಸಲಾಗಿದ್ದು, ಒಟ್ಟು 4,316 ಒತ್ತುವರಿಗಳನ್ನು ಗುರುತಿಸಲಾಗಿದೆ. ಸ್ಯಾಟ್‌ಲೈಟ್, ಗೂಗಲ್ ಇಮೇಜ್ ಮತ್ತು ಸರ್ವೇ ಇಲಾಖೆ ಈ ಒತ್ತುವರಿ ಮಾಹಿತಿ ಸಂಗ್ರಹಿಸಿದೆ. ಒತ್ತುವರಿ ತೆರವುಗೊಳಿಸಲು ಬಿಎಂಟಿಎಫ್‌ಗೆ ಕಾನೂನಾತ್ಮಕವಾಗಿ ಮತ್ತು ಎಲ್ಲಾ ರೀತಿಯ ಬೆಂಬಲ ನೀಡಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒತ್ತುವರಿ ವಿಚಾರವಾಗಿ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದ ಅವರು, 182 ಕೆರೆಗಳಲ್ಲಿ 116 ಕೆರೆಗಳ ಒತ್ತುವರಿ ಬಗ್ಗೆ ಸರ್ವೇ ನಡೆಸಬೇಕಾಗಿದೆ. ಬಾಕಿ ಉಳಿದ ಕೆರೆಗಳನ್ನು ಸರ್ವೇ ನಡೆಸಬೇಕು. ಹಾಗೂ ಬಿಬಿಎಂಪಿ ಆಸ್ತಿಗಳನ್ನು ಗುರುತು ಮಾಡಬೇಕು. ಪಾಲಿಕೆ ಆಸ್ತಿ ಸಂರಕ್ಷಣೆ ಸೇರಿದಂತೆ ಒತ್ತುವರಿ ತೆರವಿಗೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ. ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಜವಾಬ್ದಾರಿಯನ್ನು ಬಿಡ್ಬ್ಲೂಎಸ್‌ಎಸ್‌ಬಿ ಗೆ ವಹಿಸಲಾಗಿದೆ. ಕೆರೆಗಳಲ್ಲಿ ನೀರಿದ್ದರೆ ಒತ್ತುವರಿ ತಪ್ಪುತ್ತದೆ, ಅಂತರ್ಜಲ ಹೆಚ್ಚುತ್ತದೆ. ಆದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಇವೆ ಎಂದು ಸಿಎಂ ಮಾಹಿತಿ ನೀಡಿದ್ದರು. ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಸಾರ್ವಜನಿಕರೇ ರಸ್ತೆಗುಂಡಿಗಳ ಫೋಟೋ ತೆಗೆದು ಮಾಹಿತಿ ನೀಡುವ ಆ್ಯಪ್ ಬಿಡುಗಡೆ ಮಾಡಲಾಗುವುದು. ಮುಂದಿನ 15 ದಿನಗಳಲ್ಲಿ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಬೇಕು ಎಂದು ತಿಳಿಸಲಾಗಿದೆ ಎಂದರು.

Continue Reading
Advertisement
Maarige Daari
ಪ್ರಮುಖ ಸುದ್ದಿ9 mins ago

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Mansoon
ಪ್ರಮುಖ ಸುದ್ದಿ21 mins ago

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

bbmp waste disposal
ಬೆಂಗಳೂರು37 mins ago

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Aishwarya Rai
Latest42 mins ago

Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್​​ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು

Drowned in water
ಕಲಬುರಗಿ44 mins ago

Drowned in water : ಕುಡಿದ ಮತ್ತಿನಲ್ಲಿ ಈಜಲು ಹೋದ ಯುವಕ ನೀರುಪಾಲು; ಸಾವಿನ ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Viral Video
ಪ್ರಮುಖ ಸುದ್ದಿ1 hour ago

Viral Video: ಚಲಿಸುವ ಬೈಕ್​ನಲ್ಲಿ ಆಲಿಂಗನ, ಬಿಸಿ ಚುಂಬನ; ಲಜ್ಜೆಯಿಲ್ಲದ ಜೋಡಿಯ ಸ್ಟಂಟ್​ ವಿಡಿಯೊ ವೈರಲ್​

suspicious death Self Harming By Hight court lawyer
ಕ್ರೈಂ2 hours ago

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

bulldozer justice
ಪ್ರಮುಖ ಸುದ್ದಿ2 hours ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ2 hours ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ3 hours ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌