Veerappan Case: ವೀರಪ್ಪನ್‌ ಶೋಧ ಹೆಸರಲ್ಲಿ ಆದಿವಾಸಿಗಳ ಗ್ಯಾಂಗ್‌ ರೇಪ್; 215 ಸರ್ಕಾರಿ ನೌಕರರ ‌ ಶಿಕ್ಷೆ ಕಾಯಂ - Vistara News

ಕ್ರೈಂ

Veerappan Case: ವೀರಪ್ಪನ್‌ ಶೋಧ ಹೆಸರಲ್ಲಿ ಆದಿವಾಸಿಗಳ ಗ್ಯಾಂಗ್‌ ರೇಪ್; 215 ಸರ್ಕಾರಿ ನೌಕರರ ‌ ಶಿಕ್ಷೆ ಕಾಯಂ

Veerappan Case : 31 ವರ್ಷದ ಹಿಂದೆ ವೀರಪ್ಪನ್‌ ಶೋಧ ಕಾರ್ಯಾಚರಣೆ ಹೆಸರಿನಲ್ಲಿ ಆದಿವಾಸಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ 215 ಸರ್ಕಾರಿ ಸಿಬ್ಬಂದಿಗೆ ವಿಧಿಸಲಾದ ಶಿಕ್ಷೆಯನ್ನು ಮದ್ರಾಸ್‌ ಹೈಕೋರ್ಟ್‌ ಕಾಯಂಗೊಳಿಸಿದೆ.

VISTARANEWS.COM


on

Veerappan Madras High court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: 1992ರಲ್ಲಿ ಕಾಡುಗಳ್ಳ ವೀರಪ್ಪನ್‌ ಶೋಧದ (Veerappan Search operation) ನೆಪದಲ್ಲಿ ಆದಿವಾಸಿಗಳ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿತ್ತು ಎಂಬ ಸುದ್ದಿ ಆಗಾಗ ಸದ್ದು ಮಾಡುತ್ತಿತ್ತು. ಇದು ವೀರಪ್ಪನ್‌ ಎಂಬ ಕ್ರೂರಿ ಮಾಡಿದ ಕ್ರೌರ್ಯದಷ್ಟೇ ಆಘಾತಕಾರಿ ಎಂದು ವ್ಯಾಖ್ಯಾನಿಸಲಾಗುತ್ತಿತ್ತು. ಈ ಪ್ರಕರಣದಲ್ಲಿ ತಮಿಳುನಾಡಿನ ಅರಣ್ಯ ಮತ್ತು ಕಂದಾಯ ಇಲಾಖೆಯ (Forest and Revenue department employees) ಅಂದಿನ 215 ಮಂದಿಗೆ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯನ್ನು ಮದ್ರಾಸ್‌ ಹೈಕೋರ್ಟ್‌ (Madras High court) ಮತ್ತೆ ಎತ್ತಿ ಹಿಡಿದಿದೆ.

ಧರ್ಮಪುರಿ ಜಿಲ್ಲೆಯ ವಾಚಾತಿ ಗ್ರಾಮದಲ್ಲಿ (Vachati village in Dharmapuri) ಆದಿವಾಸಿಗಳ ಮೇಲೆ ಬರ್ಬರವಾಗಿ ಸಾಮೂಹಿಕ ಅತ್ಯಾಚಾರ (Sexual assault on Adivasis) ನಡೆದಿತ್ತು. 1992ರಲ್ಲಿ ನಡೆದ ಪ್ರಕರಣದಲ್ಲಿ 20 ವರ್ಷಗಳ ನಂತರ ಅಂದರೆ 2011ರಲ್ಲಿ 215 ಮಂದಿಗೆ ಶಿಕ್ಷೆ ವಿಧಿಸಲಾಗಿತ್ತು. ಅವರು ಅದನ್ನು ಮೇಲ್ಮನವಿ ಮೂಲಕ ಮದ್ರಾಸ್‌ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈಗ ಅದರ ವಿಚಾರಣೆ ನಡೆದು ಶಿಕ್ಷೆಯನ್ನು ಕಾಯಂಗೊಳಿಸಲಾಗಿದೆ. ಮೇಲ್ಮನವಿಯನ್ನು ಮದ್ರಾಸ್‌ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ.

1992ರ ಜೂನ್‌ 20ರಂದು ವಾಚಾತಿ ಗ್ರಾಮದಲ್ಲಿ ಏನಾಗಿತ್ತು?

ಅದು ವೀರಪ್ಪನ್‌ ಅಟ್ಟಹಾಸದ ಮೇರು ಕಾಲ. ವೀರಪ್ಪನ್‌ ಧರ್ಮಪುರಿ ಭಾಗದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ. ಅಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ಶ್ರೀಗಂಧ ಕಡಿದು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಈ ಚಟುವಟಿಕೆಯಲ್ಲಿ ಗ್ರಾಮಸ್ಥರು ಶಾಮೀಲಾಗಿದ್ದಾರೆ ಎಂಬ ಶಂಕೆ ಇತ್ತು. ಈ ಕಾರಣಕ್ಕಾಗಿ 1992ರ ಜೂನ್‌ 20ರಂದು ವಾಚಾತಿ ಗ್ರಾಮದ ಮೇಲೆ ತಮಿಳುನಾಡಿನ ಅರಣ್ಯ ಮತ್ತು ಕಂದಾಯ ಇಲಾಖೆಗಳ ಸಿಬ್ಬಂದಿ ದಾಳಿ ಮಾಡಿದ್ದರು.

ದಾಳಿ ವೇಳೆ ಅಧಿಕಾರಿಗಳು ಹಲವು ಮನೆಗಳನ್ನು ಧ್ವಂಸಗೊಳಿಸಿ, ಮಹಿಳೆಯರ ಮೇಲೆ ಹಲ್ಲೆಗೈದು ಕ್ರೂರವಾಗಿ ನಡೆಸಿಕೊಂಡಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದರು. ಘಟನೆ ವೇಳೆ ಜನ ಜಾನುವಾರುಗಳ ಮೇಲೆ ಕೂಡಾ ಕ್ರೌರ್ಯ ಮೆರೆಯಲಾಗಿತ್ತು ಎನ್ನುವ ಅರೋಪವೂ ಇತ್ತು. ದಾಳಿ ವೇಳೆ ತಾವು ಅತ್ಯಾಚಾರಕ್ಕೊಳಗಾಗಿದ್ದಾಗಿ ಗ್ರಾಮದ 18 ಮಹಿಳೆಯರು ಕೆಲವು ದಿನದ ಬಳಿಕ ಸಂಕಷ್ಟ ತೋಡಿಕೊಂಡಿದ್ದರು.

ಘಟನೆ ನಡೆದ ಮೂರು ವರ್ಷಗಳ ಬಳಿಕ ಸಿಪಿಎಂ ಪಕ್ಷದ ವತಿಯಿಂದ 1995ರಲ್ಲಿ ಕೋರ್ಟ್‌ಗೆ ದಾವೆ ಸಲ್ಲಿಸಿದರು. ಪ್ರಾಥಮಿಕ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿತು. ಸುದೀರ್ಘಾವಧಿಯ ಸಿಬಿಐ ತನಿಖೆ ಮತ್ತು ವಿಚಾರಣೆಯ ಬಳಿಕ 2011ರ ಸೆಪ್ಟೆಂಬರ್ 29ರಂದು ವಿಚಾರಣಾ ನ್ಯಾಯಾಲಯ ತೀರ್ಪನ್ನು ನೀಡಿತು.

ಇದನ್ನೂ ಓದಿ: Sexual Assault: ಗಂಡಂದಿರು, ಮಕ್ಕಳ ಎದುರೇ 3 ಮಹಿಳೆಯರ ಮೇಲೆ ಗ್ಯಾಂಗ್ ರೇಪ್! ಜಾಗ ಬಿಟ್ಟು ಕೊಡಲ್ಲ ಎಂದಿದ್ದೇ ತಪ್ಪಾಯ್ತಾ?

ಅದರಲ್ಲಿ ನಾಲ್ವರು ಐಎಫ್ಎಸ್ ಅಧಿಕಾರಿಗಳು, 84 ಪೊಲೀಸ್ ಸಿಬ್ಬಂದಿ, ಐವರು ಕಂದಾಯ ಸಿಬ್ಬಂದಿ, 126 ಅರಣ್ಯ ಸಿಬ್ಬಂದಿ ಸೇರಿ ಒಟ್ಟು 215 ಮಂದಿ ದೋಷಿಗಳು ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅಧಿಕಾರಿಗಳು, ನೌಕರರು ಮೇಲ್ಮನವಿ ಸಲ್ಲಿಸಿದ್ದರು.

ಒಟ್ಟು 126 ಅರಣ್ಯ ಸಿಬ್ಬಂದಿ, 84 ಪೊಲೀಸ್ ಸಿಬ್ಬಂದಿ ಮತ್ತು 5 ಕಂದಾಯ ಅಧಿಕಾರಿಗಳು ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದ ತೀರ್ಪನ್ನು ನ್ಯಾಯಮೂರ್ತಿಗಳು ಕಳೆದ ಫೆಬ್ರವರಿಯಲ್ಲಿ ಕಾಯ್ದಿರಿಸಿದ್ದರು. ಬಳಿಕ ಅವರು ವಾಚಾತಿ ಗ್ರಾಮದ ಭೌಗೋಳಿಕ ಪರಿಸರ ಅಧ್ಯಯನಕ್ಕಾಗಿ ಅಲ್ಲಿಗೆ ಭೇಟಿ ನೀಡಿದ್ದರು. ಎಲ್ಲವನ್ನೂ ಪರಿಗಣಿಸಿದ ಬಳಿಕ ಈಗ ಶಿಕ್ಷೆಯನ್ನು ಕಾಯಂ ಮಾಡಲಾಗಿದೆ.

ಮೇಲ್ಮನವಿ ರದ್ದು, ಶಿಕ್ಷೆ ಕಾಯಂ, ಬಂಧನಕ್ಕೆ ಆದೇಶ, ಪರಿಹಾರಕ್ಕೆ ಆರ್ಡರ್‌

ಪ್ರಕರಣದ 215 ಅಪರಾಧಿಗಳಿಗೆ ವಿಧಿಸಲಾದ ಶಿಕ್ಷೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಾಗೂ 2011ರಿಂದ ಬಾಕಿ ಉಳಿದಿದ್ದ ಕಿಮಿನಲ್‌ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಪಿ ವೇಲ್‌ಮುರುಗನ್‌ ಮಹತ್ವದ ತೀರ್ಪು ನೀಡಿದರು.

ತೀರ್ಪಿನ ಪ್ರಮುಖ ಅಂಶಗಳು ಇಂತಿವೆ.

  1. ಎಲ್ಲಾ ಅಪರಾಧಿಗಳನ್ನು ಬಂಧಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿಗಳು ಸೆಷನ್ಸ್‌ ನ್ಯಾಯಾಲಯಕ್ಕೆ ಸೂಚಿಸಿದರು.
  2. ಸರ್ಕಾರಿ ಅಧಿಕಾರಿಗಳಿಂದ ಅತ್ಯಾಚಾರಕ್ಕೀಡಾದ 18 ಮಹಿಳೆಯರಿಗೆ ₹10 ಲಕ್ಷ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ.
  3. ಘಟನೆಯ ನಂತರ ಸಾವನ್ನಪ್ಪಿದ ಮೂವರು ಸಂತ್ರಸ್ತರ ಕುಟುಂಬಗಳಿಗೂ ಪರಿಹಾರ ನೀಡಬೇಕು.
  4. ಪರಿಹಾರ ಮೊತ್ತದ ಶೇಕಡಾ 50 ಹಣವನ್ನು ಶಿಕ್ಷೆಗೊಳಗಾದ ತಪ್ಪಿತಸ್ಥ ಸರ್ಕಾರಿ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು.
  5. ಸಂತ್ರಸ್ತರು ಅಥವಾ ಅವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ಒದಗಿಸಲು, ವಾಚಾತಿ ಗ್ರಾಮಸ್ಥರ ಬದುಕು ಸುಧಾರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

ರಾಜ್ಯ ನಾಗರಿಕ ಸೇವಾ ಪರೀಕ್ಷೆ ಬರೆದು ಎಲ್ಲರಿಗೂ ಮಾದರಿಯಾಗಿದ್ದ ಸ್ವೀಪರ್ ಆಶಾ ಕಂದರ ಈಗ ಭಾರೀ ಲಂಚ (Bribe Case) ಪಡೆದು ಉದ್ಯೋಗ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.
ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳವು ಅವರನ್ನು 1.75 ಲಕ್ಷ ರೂಪಾಯಿ ಲಂಚದೊಂದಿಗೆ ಬಂಧಿಸಿದೆ.

VISTARANEWS.COM


on

By

Bribe Case
Koo

ಜೋಧ್‌ಪುರ: ಕೆಲವು ವರ್ಷಗಳ ಹಿಂದೆ ಕಸ ಗುಡಿಸುವ (sweeper) ಕೆಲಸ ಮಾಡುತ್ತಿದ್ದು, ಬಳಿಕ ರಾಜಸ್ಥಾನ (Rajasthan) ಆಡಳಿತ ಸೇವೆ (RAS) ಪರೀಕ್ಷೆಯಲ್ಲಿ (Exam) ಉತ್ತೀರ್ಣರಾಗಿ ಸುದ್ದಿಯಾಗಿದ್ದ ಆಶಾ ಕಂದರ (ಭಾಟಿ) (Asha Kandara) ಈಗ ಮತ್ತೆ ಗಮನ ಸೆಳೆದಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಾಗಿರುವುದು ಲಂಚ (Bribe Case) ಪಡೆದಿರುವುದರಿಂದ. ಭಾರೀ ಲಂಚ ಪಡೆದು ಉದ್ಯೋಗ ದಂಧೆ ನಡೆಸುತ್ತಿದ್ದ ಆಶಾ ಅವರನ್ನು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ (state Anti-Corruption Bureau) ಬಂಧಿಸಿದೆ. ವಿಶೇಷವೆಂದರೆ ಅವರು ಕಸ ಗುಡಿಸುವ ಕೆಲಸ ಕೊಡಿಸುವಾಗಿ ಲಂಚ ಪಡೆದು ಸಿಕ್ಕಿ ಬಿದ್ದಿದ್ದಾರೆ.

ರಾಜ್ಯ ನಾಗರಿಕ ಸೇವಾ ಪರೀಕ್ಷೆ ಬರೆದು ಎಲ್ಲರಿಗೂ ಮಾದರಿಯಾಗಿದ್ದ ಅವರ ಈ ಕ್ರಮಕ್ಕೆ ಸಾಕಷ್ಟು ಟೀಕೆಯೂ ವ್ಯಕ್ತವಾಗಿದೆ. ಜೂನ್ 12ರಂದು ರಾತ್ರಿ ಭ್ರಷ್ಟಾಚಾರ ನಿಗ್ರಹ ದಳವು 1.75 ಲಕ್ಷ ರೂಪಾಯಿ ಲಂಚದೊಂದಿಗೆ ಆಶಾ ಅವರನ್ನು ಬಂಧಿಸಿದೆ ಎಂದು ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳದ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ. ಜೈಪುರದ ಹೆರಿಟೇಜ್ ನಗರ ನಿಗಮದಲ್ಲಿ ಕೆಲಸ ಮಾಡುತ್ತಿರುವ ಆಶಾ ಅವರು ಸ್ವೀಪರ್ ನೇಮಕಾತಿಗೆ ಬದಲಾಗಿ ಲಂಚ ಸ್ವೀಕರಿಸುತ್ತಿದ್ದಾರೆ ಎಂಬ ಮಾಹಿತಿ ಎಸಿಬಿಗೆ ಲಭಿಸಿದ್ದರಿಂದ ಅವರನ್ನು ಬಂಧಿಸಲಾಗಿದೆ.


ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಪ್ರಕಾರ, ಆಶಾ ಅವರು ಜೂನ್ 11ರಂದು ರಾತ್ರಿ ಜೈಪುರದಿಂದ ಪಾಲಿಗೆ ಹೊರಟರು. ಆದರೆ ಅವರ ಮಗ ಹಣದೊಂದಿಗೆ ಜೈತರನ್‌ಗೆ ಬಂದಿದ್ದು, ಈತನೊಂದಿಗೆ ಯೋಗೇಂದ್ರ ಚೌಧರಿ ಎಂಬ ಬ್ರೋಕರ್ ಕೂಡ ಇದ್ದರು. ಜೈತರನ್ ಬಾರ್‌ನ ಹೃದಯಭಾಗದಲ್ಲಿರುವ ಹೊಟೇಲ್ ವೊಂದರಲ್ಲಿ ಇಬ್ಬರೂ ತಂಗಿದ್ದರು.
ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಎಸಿಬಿ ಇನ್ಸ್‌ಪೆಕ್ಟರ್ ಕಾಂಚನ್ ಭಾಟಿ ಅವರು 1.75 ಲಕ್ಷ ರೂ. ನಗದು ಹಣದೊಂದಿಗೆ ಆಶಾ ಅವರನ್ನು ಬಂಧಿಸಲಾಗಿದೆ. ಅವರು ಮೂರೂವರೆ ಲಕ್ಷಕ್ಕೆ ಉದ್ಯೋಗ ಒಪ್ಪಂದ ಮಾಡಿಕೊಂಡಿರುವುದಾಗಿ ಎಸಿಪಿ ತಿಳಿಸಿದ್ದಾರೆ.

ಇದನ್ನೂ ಓದಿ: Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ಆಶಾ 2018ರಲ್ಲಿ ಪ್ರಮುಖ ಆರ್‌ಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅನಂತರ ಸುದ್ದಿಯಾಗಿದ್ದರು. 2021ರಲ್ಲಿ ಪರೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಒಂಟಿ ತಾಯಿಯಾದ ಆಶಾ ಅವರು ಐಎಎಸ್ ಪರೀಕ್ಷೆಗಳಿಗೆ ತಯಾರಾಗುವುದಾಗಿ ಹೇಳಿದ್ದರು.

ವಿದ್ಯುತ್ ಶಾಕ್ ನಿಂದ ಬಾಲಕ ಸಾವು

ವಿದ್ಯುತ್ ಶಾಕ್‌ನಿಂದ 7ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಆಕಾಶ್ (13) ಮೃತ ದುರ್ದೈವಿ.

ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಆಕಾಶ್ ಮರ ಹತ್ತಿದ್ದ. ಈತನ ಜತೆಗೆ ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು. ಹಣ್ಣು ಕೀಳುವಾಗ ಆಕಾಶ್‌ ಮರದಿಂದ ಜಾರಿ ಬೀಳುತ್ತಿದ್ದ. ಈ ವೇಳೆ ಅಚಾನಕ್‌ ಆಗಿ ವಿದ್ಯುತ್ ತಂತಿ ಹಿಡಿದಿದ್ದಾನೆ. ಇದರಿಂದ ಕರೆಂಟ್‌ ಶಾಕ್‌ ಆಗಿ ಆತ ಕೆಳಗೆ ಬಿದ್ದಿದ್ದಾನೆ.

ಕೂಡಲೇ ಅಲ್ಲಿದ್ದವರು ಆಕಾಶ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕಾಶ್ ಮೃತಪಟ್ಟಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Sapthami Gowda: ವಕೀಲ ಶಂಕರಪ್ಪ ಅವರ ಮೂಲಕ ನಟಿ ಸಪ್ತಮಿಗೌಡ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Sapthami Gowda
Koo

ಬೆಂಗಳೂರು: ನಟ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ವಕೀಲ ಶಂಕರಪ್ಪ ಅವರ ಮೂಲಕ ನಟಿ (Sapthami Gowda) ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಯುವ ಮತ್ತು ಶ್ರೀದೇವಿ ಬೈರಪ್ಪ ನಡುವಿನ ಆರೋಪ-ಪ್ರತ್ಯಾರೋಪಗಳಲ್ಲಿ ಸಪ್ತಮಿಗೌಡ ಹೆಸರು ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ತನ್ನ ವೃತ್ತಿ ಜೀವನದ ಪರಿಣಾಮ ಬೀರಲಿದೆ ಎಂದು ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಇನ್ಮುಂದೆ ನಟಿಯ ಬಗ್ಗೆ ಎಲ್ಲಿಯೂ ಮಾತನಾಡದಂತೆ ಲೀಗಲ್ ನೋಟಿಸ್ ನೀಡಲಾಗಿದೆ ಹಾಗೂ ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ರೂ. ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ನಟಿ ಸಪ್ತಮಿಗೌಡ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸಿಟಿ ಸಿವಿಲ್ ಕೋರ್ಟ್, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ | Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದರು. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ್ದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದರು. ಆ ಮೂಲಕ ಡಿವೋರ್ಸ್‌ ಪ್ರಕರಣವು ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿತ್ತು

ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಮರುತ್ತರ ನೀಡಿದ್ದ ಶ್ರೀದೇವಿ ಭೈರಪ್ಪ, ಹಲವು ಆರೋಪಗಳನ್ನು ಮಾಡಿದ್ದರು. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು.

ಇದನ್ನೂ ಓದಿ | Sapthami Gowda: ಲವ್‌ ಬ್ರೇಕಪ್‌ ಆಗಿದೆ, ಬಾಯ್‌ಫ್ರೆಂಡ್‌ ನನ್ನ ಜತೆ ಇಲ್ಲ ಎಂದ ಸಪ್ತಮಿ ಗೌಡ!

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದರು. ಹೀಗಾಗಿ ಇದೀಗ ದಂಪತಿ ನಡುವಿನ ವಿವಾದದಲ್ಲಿ ತಮ್ಮ ಹೆಸರನ್ನು ತರದಂತೆ ಸಪ್ತಮಿ ಗೌಡ ನೋಟಿಸ್‌ ನೀಡಿದ್ದಾರೆ.

Continue Reading

ವಿದೇಶ

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Gold Heist: ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಚಿನ್ನಾಭರಣಗಳ ಮಳಿಗೆಗೆ ನುಗ್ಗಿದ 20 ಮುಸುಕುಧಾರಿ ಧರೋಡೆಕೋರರು, ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಜೂನ್‌ 12ರಂದು ಮಧ್ಯರಾತ್ರಿ ಇವರು ಮಳಿಗೆಗೆ ನುಗ್ಗಿದ್ದಾರೆ. ಮುಖದ ತುಂಬ ಮುಸುಕು ಧರಿಸಿದ್ದ, ಕೈಯಲ್ಲಿ ಸುತ್ತಿಗೆಗಳನ್ನು ಹಿಡಿದುಕೊಂಡೇ ಬಂದಿದ್ದ ದರೋಡೆಕೋರರು, ಅಂಗಡಿಯಲ್ಲಿ ಗ್ಲಾಸ್‌ಗಳನ್ನು ಒಡೆದು, ಅವಸರದಲ್ಲಿಯೇ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

Gold Heist
Koo

ವಾಷಿಂಗ್ಟನ್:‌ ಬ್ಯಾಂಕ್‌ಗೆ ನುಗ್ಗಿ ಕೋಟ್ಯಂತರ ರೂಪಾಯಿಯನ್ನು ದರೋಡೆ ಮಾಡುವ ಮನಿ ಹೈಸ್ಟ್‌ (Money Heist) ಎಂಬ ರೋಚಕ ವೆಬ್‌ ಸಿರೀಸ್‌ಅನ್ನು ನೀವು ನೋಡಿರಬಹುದು. ಮಾಸ್ಟರ್‌ ಪ್ಲಾನ್‌ ಮೂಲಕ ದರೋಡೆ ಮಾಡುವ ಸಿರೀಸ್‌ ಜಗತ್ತಿನಾದ್ಯಂತ ಖ್ಯಾತಿ ಗಳಿಸಿದೆ. ಆದರೆ, ಅಮೆರಿಕದಲ್ಲಿ ಮನಿ ಹೈಸ್ಟ್‌ ಮಾದರಿಯಲ್ಲಿಯೇ ಸುಮಾರು 20 ದರೋಡೆಕೋರರು ಚಿನ್ನಾಭರಣಗಳ ಮಳಿಗೆಗೆ ನುಗ್ಗಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ (Gold Heist) ಮಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಚಿನ್ನಾಭರಣಗಳ ಮಳಿಗೆಗೆ ನುಗ್ಗಿದ 20 ಮುಸುಕುಧಾರಿ ಧರೋಡೆಕೋರರು, ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಜೂನ್‌ 12ರಂದು ಮಧ್ಯರಾತ್ರಿ ಇವರು ಮಳಿಗೆಗೆ ನುಗ್ಗಿದ್ದಾರೆ. ಮುಖದ ತುಂಬ ಮುಸುಕು ಧರಿಸಿದ್ದ, ಕೈಯಲ್ಲಿ ಸುತ್ತಿಗೆಗಳನ್ನು ಹಿಡಿದುಕೊಂಡೇ ಬಂದಿದ್ದ ದರೋಡೆಕೋರರು, ಅಂಗಡಿಯಲ್ಲಿ ಗ್ಲಾಸ್‌ಗಳನ್ನು ಒಡೆದು, ಅವಸರದಲ್ಲಿಯೇ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಇಡೀ ಕಳ್ಳತನದ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇಲ್ಲಿದೆ ದರೋಡೆಯ ವಿಡಿಯೊ

ದರೋಡೆಕೋರರು ಮೊದಲು ಜ್ಯುವೆಲರಿ ಸ್ಟೋರ್‌ನ ಬಾಗಿಲನ್ನು ಒದ್ದು, ಸುತ್ತಿಗೆಯಿಂದ ಹೊಡೆದು ಮುರಿದುಹಾಕಿದ್ದಾರೆ. ಏಕಕಾಲಕ್ಕೆ ಅವರು ಮಳಿಗೆಗೆ ನುಗ್ಗಿದ್ದು, ಪ್ರತಿಯೊಂದು ಗಾಜುಗಳನ್ನು ಒಡೆದು, ಚಿನ್ನ, ವಜ್ರದ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕೆಲವೇ ಕೆಲವು ನಿಮಿಷಗಳಲ್ಲಿ ಇಡೀ ಮಳಿಗೆಯ ಆಭರಣಗಳನ್ನು ಗುಡಿಸಿ ಗುಂಡಾಂತರ ಮಾಡಿದ್ದಾರೆ.

ಬಂಧಿತ ಆರೋಪಿಗಳು

ದರೋಡೆಕೋರರು ಹಲವು ಕಾರುಗಳಲ್ಲಿ ಬಂದು ದರೋಡೆ ಮಾಡಿದ್ದಾರೆ. ಕೂಡಲೇ ಪೊಲೀಸರು ಇವರ ಕಾರುಗಳನ್ನು ಬೆನತ್ತಿದರೂ ಕೇವಲ ಐವರು ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ. ಬಂಧಿತರಿಂದ ಕೆಲ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಐವರನ್ನೂ ಜೈಲಿಗೆ ಹಾಕಿದ್ದಾರೆ. ದರೋಡೆಕೋರರು ಕದ್ದಿರುವ ಚಿನ್ನಾಭರಣಗಳ ಒಟ್ಟು ಮೌಲ್ಯ ಎಷ್ಟು ಎಂಬುದು ಇದುವರೆಗೆ ಗೊತ್ತಿಲ್ಲ. ಮಳಿಗೆಯಲ್ಲಿ ಕಳ್ಳತನ ಮಾಡಲು ದರೋಡೆಕೋರರು ಹಲವು ದಿನಗಳಿಂದ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಉಳಿದ ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

Continue Reading

ಕರ್ನಾಟಕ

Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಈ ಮೊದಲು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಇದೀಗ ಜೂನ್‌ 20ರವರೆಗೆ ಪೊಲೀಸ್‌ ಕಸ್ಟಡಿ ವಿಸ್ತರಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸ್‌ ಕಸ್ಟಡಿಯಲ್ಲಿದ್ದ ನಟ ದರ್ಶನ್‌ (Actor Darshan) ಸೇರಿ ಇತರ ಆರೋಪಿಗಳನ್ನು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ಆದೇಶ ನೀಡಿದರು.

ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು ಕೇಸ್‌ನ ಬಗ್ಗೆ ನ್ಯಾಯಾಧೀಶರಿಗೆ ಮಾಹಿತಿ ನೀಡಿ, ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಕೋರಿದರು. ಮತ್ತೊಂದೆಡೆ ಪೊಲೀಸರು ಸ್ಥಳ ಮಹಜರು, ಸಾಕ್ಷ್ಯಗಳ ಕುರಿತ ವರದಿಯನ್ನು ಮುಚ್ಚಿನ ಲಕೋಟೆಯಲ್ಲಿ ನ್ಯಾಯಾಧೀಶರಿಗೆ ಸಲ್ಲಿಸಿದರು. ಬೆಂಗಳೂರು, ಚಿತ್ರದುರ್ಗದಲ್ಲಿ ಮಹಜರು ನಡೆದಿದೆ, ಆದರೆ, ಮೈಸೂರಿನಲ್ಲಿ ಮಹಜರು ಬಾಕಿ ಇದೆ. ಹೀಗಾಗಿ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ದರ್ಶನ್‌ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿ, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆ. ಮಹಿಳಾ ಆರೋಪಿ ಪವಿತ್ರಾ ಗೌಡಳನ್ನೂ 6 ದಿನ ವಿಚಾರಣೆ ನಡೆಸಲಾಗಿದೆ. ಎಲ್ಲದಕ್ಕೂ ದರ್ಶನ್‌ ಕಾರಣ ಎಂದರೆ ಹೇಗೆ? ವಿಚಾರಣೆ ಹಂತದಲ್ಲಿದ್ದಾಗಲೇ ದರ್ಶನ್‌ ಮೇಲೆ ಎಲ್ಲಾ ಅರೋಪಗಳನ್ನು ಮಾಡುವುದು ಎಷ್ಟು ಸರಿ? ಪವಿತ್ರಾ ಗೌಡ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಆರೋಪಿಗಳ ಹೇಳಿಕೆಗಳೂ ಸೋರಿಕೆಯಾಗುತ್ತಿವೆ. ಹೀಗಾಗಿ ಮತ್ತೆ ಕಸ್ಟಡಿಗೆ ನೀಡುವುದು ಬೇಡ ಹೇಳಿದರು.

ಮತ್ತೊಂದೆಡೆ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮುಂದುವರಿಸಿ‌, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿ ಹಿಂಸೆ ನೀಡಲಾಗಿದೆ. ಆರೋಪಿಗಳು ಯಾವೆಲ್ಲಾ ಡಿವೈಸ್‌ ಬಳಿಸಿದ್ದಾರೋ, ಅವುಗಳನ್ನು ವಶಕ್ಕೆ ಪಡೆಯಬೇಕು. ಇದಕ್ಕೆ ಸಮಯಾವಕಾಶ ಬೇಕು. ಹೀಗಾಗಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಈ ವೇಳೆ ಪವಿತ್ರಾ ಗೌಡ ಪರ ವಕೀಲ ನಾರಾಯಾಣಸ್ವಾಮಿ ಎಂಟ್ರಿಯಾಗಿ, ನನ್ನ ಕಕ್ಷಿದಾರರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದರು. ವಾದ-ಪ್ರತಿವಾದ ಅಲಿಸಿದ ಬಳಿಕ ನ್ಯಾಯಾಧೀಶರು, 10 ಆರೋಪಿಗಳನ್ನು ಜೂನ್‌ 20ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ಹೀಗಾಗಿ ಅನ್ನಪೂರ್ಣೆಶ್ವರಿ ಠಾಣೆಗೆ ಆರೋಪಿಗಳಿಗೆ ಕರೆದುಕೊಂಡು ಹೋಗಲಾಯಿತು.

ಇದಕ್ಕೂ ಮುನ್ನ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಂತರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಹಿಂದೆ ಕಸ್ಟಡಿಗೆ ನೀಡುವಾಗ ದರ್ಶನ್‌ ಕಣ್ಣೀರು ಹಾಕಿದ್ದರು. ಇದೀಗ ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಎ 1 ಪವಿತ್ರಾ ಗೌಡ ಗಳಗಳನೆ ಅತ್ತಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ ಎರಡು ಜೀಪ್‌ ಹಾಗೂ ಎರಡು ಕೆಎಸ್‌ಆರ್‌ಪಿ ಮಿನಿ ವ್ಯಾನ್‌ನಲ್ಲಿ ಆರೋಪಿಗಳನ್ನು ಕರೆದುಕೊಂಡು ಬರಲಾಗಿತ್ತು. ಆರೋಪಿಗಳನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಠಾಣೆ ಮುಂಭಾಗ ಹಾಗೂ ಕೋರ್ಟ್‌ ಬಳಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು.

ಏನಿದು ಪ್ರಕರಣ?

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಇದನ್ನೂ ಓದಿ | Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟ ದರ್ಶನ್‌ ಸೇರಿ 16 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್‌ ಎ2 ಆಗಿದ್ದಾರೆ.

Continue Reading
Advertisement
Siddaramaiah
ಸಂಪಾದಕೀಯ13 mins ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

International Yoga Day 2024
ಆರೋಗ್ಯ14 mins ago

International Yoga Day 2024: ಗರ್ಭಿಣಿಯರೂ ಯೋಗ ಮಾಡಬಹುದೇ? ಯಾವ ಆಸನಗಳು ಸೂಕ್ತ?

Dina Bhavishya
ಭವಿಷ್ಯ1 hour ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಕುಟುಂಬ ಸದಸ್ಯರಿಂದ ಸಿಗಲಿದೆ ಬೆಂಬಲ

Teachers Transfer
ಪ್ರಮುಖ ಸುದ್ದಿ7 hours ago

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

T20 World Cup 2024
T20 ವಿಶ್ವಕಪ್8 hours ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ9 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ9 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ9 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ9 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Minister dr G Parameshwar inaugurated the hasiru grama programme in Koratagere
ತುಮಕೂರು10 hours ago

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ16 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌