CCB operation : ಬೃಹತ್‌ ಆನ್‌ಲೈನ್‌ ಹೂಡಿಕೆ ವಂಚನೆ ಜಾಲ ಭೇದಿಸಿದ ಸಿಸಿಬಿ; 6 ಮಂದಿ ಅರೆಸ್ಟ್‌ - Vistara News

ಕರ್ನಾಟಕ

CCB operation : ಬೃಹತ್‌ ಆನ್‌ಲೈನ್‌ ಹೂಡಿಕೆ ವಂಚನೆ ಜಾಲ ಭೇದಿಸಿದ ಸಿಸಿಬಿ; 6 ಮಂದಿ ಅರೆಸ್ಟ್‌

CCB Operation : ದೇಶದ ಅತಿ ದೊಡ್ಡ ವಂಚನೆ ಜಾಲವೊಂದನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಆರು ಮಂದಿಯನ್ನು ಬಂಧಿಸಿದ್ದಾರೆ. ಇದು ಹೂಡಿಕೆ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ವಂಚಿಸುವ ಗ್ಯಾಂಗ್‌

VISTARANEWS.COM


on

Online Fraud
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ಹಣ ಪಡೆದು ವಂಚನೆ (Fraud Case in the name of investment) ಮಾಡುತ್ತಿದ್ದ ದೇಶದ ಅತಿ ದೊಡ್ಡ ಆನ್‌ಲೈನ್‌ ಗ್ಯಾಂಗ್‌ (Online fraud gang) ಒಂದನ್ನು ಬೆಂಗಳೂರಿನ ಸಿಸಿಬಿಯ ಸೈಬರ್‌ ಕ್ರೈಂ ಸೆಲ್‌ (Bangalore CCB Cyber crime cell) ಬೇಧಿಸಿದ್ದು, ಆರು ಮಂದಿಯನ್ನು ಬಂಧಿಸಿದೆ. ದೇಶಾದ್ಯಂತ ಆಪರೇಟ್‌ ಮಾಡುತ್ತಿದ್ದ ಈ ಗ್ಯಾಂಗ್‌ ಸಾವಿರ ಕೋಟಿಗೂ ಹೆಚ್ಚು ವಂಚನೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ (CCB Operation) ಬಯಲಾಗಿದೆ.

ಈ ಗ್ಯಾಂಗ್‌ನ ವಿರುದ್ಧ ದೇಶಾದ್ಯಂತ 5013 ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ ಬೆಂಗಳೂರು ನಗರದಲ್ಲಿ 17 ಪ್ರಕರಣಗಳು ಇವೆ. ಇಲ್ಲಿ ದಾಖಲಾದ ಪ್ರಕರಣಗಳ ಬೆನ್ನು ಹತ್ತಿದ ಸಿಸಿಬಿ ಪೊಲೀಸರು ಇಡೀ ದೇಶಕ್ಕೆ ಬೇಕಾದ ದುಷ್ಟರನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.

ಬಂಧಿತರು ಯಾರೆಲ್ಲ ನೋಡಿ.

ಸಿಸಿಬಿಯ ಸೈಬರ್ ಕ್ರೈಮ್ ಪೊಲೀಸರಿಂದ ಬಂಧಿತರಾಗಿರುವ ವಂಚಕರೆಂದರೆ, ಮನೋಜ್ ಅಲಿಯಾಸ್ ಜಾಕ್ , ಫಣೀಂದ್ರ, ವಸಂತ್, ಶ್ರೀನಿವಾಸ, ಚಕ್ರಾದರ್ ಅಲಿಯಾಸ್ ಚಕ್ರಿ. ಸೋಮಶೇಖರ್ ಅಲಿಯಾಸ್ ಅಂಕಲ್. ಇವರು ಬೆಂಗಳೂರಿನ ವಿದ್ಯಾರಣ್ಯಪುರ, ಯಲಹಂಕ, ಭಾಗದಲ್ಲಿ ವಾಸವಾಗಿದ್ದಾರೆ.

CCB Police Bangalore

ನಿಜವೆಂದರೆ, ಇವರು ಈ ಜಾಲದ ಪ್ರಧಾನ ಆರೋಪಿಗಳಲ್ಲ. ಪ್ರಧಾನ ಆರೋಪಿಗಳು ವಿದೇಶದಲ್ಲಿದ್ದಾರೆ. ದೇಶದಿಂದ ಬರುವ ಆದೇಶದಂತೆ ಈ ಆರೋಪಿಗಳು ಬ್ಯಾಂಕ್ ಅಕೌಂಟ್ ಗಳನ್ನು ಮ್ಯಾನೇಜ್ ಮಾಡುತ್ತಿದ್ದರು.

ಇದನ್ನೂ ಓದಿ:Online Fraud : ಯೂಟ್ಯೂಬ್ ವಿಡಿಯೊ ಲೈಕ್ ಮಾಡಿ ಹಣ ಗಳಿಸಲು ಹೋಗಿ 10 ಲಕ್ಷ ರೂ. ಕಳೆದುಕೊಂಡ ಮಹಿಳೆ! ಇರಲಿ ಎಚ್ಚರ

ಹಾಗಿದ್ದರೆ ಈ ವಂಚನೆಯ ಕೃತ್ಯ ಹೇಗೆ ನಡೆಯುತ್ತಿತ್ತು?

  1. ವಾಟ್ಸಪ್ ಮತ್ತು ಟೆಲಿಗ್ರಾಂ ಮೂಲಕ ಭಾರತದಾದ್ಯಂತ ಜಾಬ್ ಆಫರ್ ಮೆಸೇಜ್ ಗಳನ್ನು ಕಳಿಸಲಾಗ್ತಿತ್ತು.
  2. ಮೆಸೇಜ್ ಕಳಿಸಲು ಮತ್ತು ಸಾರ್ವಜನಿಕರ ಜೊತೆ ಸಂವಹನ ನಡೆಸಲು ಬೇರೆಯದ್ದೆ ಟೀಮ್ ಇರ್ತಿತ್ತು.
  3. ಪಾರ್ಟ್ ಟೈಮ್ ಜಾಬ್, ಗೂಗಲ್ ನಲ್ಲಿ ಹೋಟೆಲ್ ಸೇರಿ ವಿವಿಧ ಶಾಪ್ ಗಳಿಗೆ ಸ್ಟಾರ್ ರೇಟಿಂಗ್ ನೀಡಿ ಗೂಗಲ್ ರಿವೀವ್ ಹಾಕುವಂತೆ ಹೇಳಲಾಗುತ್ತಿತ್ತು. ಈ ರೀತಿ ಮಾಡಿದರೆ ಹಣ ಕೊಡುತ್ತೇವೆ ಎಂದು ನಂಬಿಸಲಾಗುತ್ತಿತ್ತು.
  4. ಈ ರೀತಿ ಕೆಲಸ ಮಾಡಿದವರಿಗೆ ಹಣವನ್ನೂ ಕೊಡಲಾಗುತ್ತಿತ್ತು. ಬಳಿಕ ಅವರನ್ನು ಟೆಲಿಗ್ರಾಂ ಗ್ರೂಪ್ ನಲ್ಲಿ ಸೇರಿಸುತಿದ್ದರು.
  5. ಟೆಲಿಗ್ರಾಂ ಗ್ರೂಪ್ ನಲ್ಲಿ ಕ್ರಿಪ್ಟೋ ಕರೆನ್ಸಿಗೆ ಸಂಬಂಧಪಟ್ಟಂತೆ ಇನ್ವೆಸ್ಟ್ ಮಾಡಲು ಪ್ರೇರಣೆ ನೀಡಲಾಗುತ್ತಿತ್ತು.
  6. ಒಂದು ಸಾವಿರದಿಂದ ಹತ್ತು ಸಾವಿರ ಹೂಡಿಕೆ ಮಾಡಲು ಸಲಹೆ ನೀಡಲಾಗುತ್ತಿತ್ತು.
  7. ಇಷ್ಟು ಹೂಡಿಕೆ ಮಾಡಿದ್ರೆ ದಿನಕ್ಕೆ ಸಾವಿರದಿಂದ ಐದು ಸಾವಿರ ಹಣ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಮತ್ತು ಪ್ರಾರಂಭದಲ್ಲಿ ಹಣ ಕೂಡಾ ಬರುತ್ತಿತ್ತು.
  8. ಗ್ರೂಪ್‌ನಲ್ಲಿ ಇದ್ದವರು ತಮಗೆ ಇಂತಿಷ್ಟು ಲಾಭ ಬಂದಿದೆ ಎಂದೆಲ್ಲಾ ಮಾಹಿತಿ ಹಂಚುತ್ತಿದ್ದರು.
  9. ಇದು ಗ್ರೂಪ್‌ನ ಇತರರಿಗೆ ಖುಷಿ ನೀಡುತ್ತಿತ್ತು. ಬಳಿಕ ಸಾರ್ವಜನಿಕ ನಂಬಿಕೆ ಗಳಿಸಿ ಹೂಡಿಕೆ ಮಾಡಿಸಲಾಗುತ್ತಿತ್ತು.
  10. ಕೊನೆಗೆ ಒಬ್ಬ ಒಬ್ಬರಿಂದ ಲಕ್ಷದಿಂದ ಕೋಟಿ ರೂವರೆಗೆ ಹೂಡಿಕೆ ಮಾಡಿಸುತ್ತಿದ್ದರು.
  11. ಹೂಡಿಕೆ ಮಾಡಿಸುತ್ತಿದ್ದ ಹಣ ಬೆಂಗಳೂರಿನ ವಿವಿಧ ಬ್ಯಾಂಕ್ ನಲ್ಲಿನ ಕರೆಂಟ್ ಅಕೌಂಟ್ ಗೆ ಸೇರುತ್ತಿತ್ತು. ನಂತ್ರ ಹಣ ವಿದೇಶದ ಬ್ಯಾಂಕ್ ಅಕೌಂಟ್ ಗೆ ಹೋಗುತ್ತಿತ್ತು.
  12. ಬಳಿಕ ಬ್ಯಾಂಕ್ ಅಕೌಂಟ್ ಮ್ಯಾನೇಜ್ ಮಾಡುವ ಗ್ಯಾಂಗ್‌ಗೆ ಕ್ರಿಪ್ಟೊ ಕರೆನ್ಸಿ ಮೂಲಕ ಹಣ ನೀಡಲಾಗುತ್ತಿತ್ತು.
  13. ಸಾರ್ವಜನಿಕರು ಹೂಡಿಕೆ ಮಾಡಿದ ಹಣವನ್ನು ಈ ಗ್ಯಾಂಗ್‌ ವಿದೇಶದ ವಿವಿಧ ಕಂಪನಿಯಲ್ಲಿ ಹೂಡಿಕೆ ಮಾಡುತ್ತಿತ್ತು.

ಇದೀಗ ಪೊಲೀಸರು ಬೆಂಗಳೂರಿನ ಆರು ಜನರನ್ನು ಬಂಧಿಸಿದ್ದಾರೆ. ಮಾಸ್ಟರ್‌ ಮೈಂಡ್‌ಗಳಾಗಿರುವ ಇನ್ನೂ ಮೂವರು ತಲೆ ಮರೆಸಿಕೊಂಡಿದ್ದಾರೆ. ಬಂಧಿತರಿಂದ ಕಂಪ್ಯೂಟರ್, ಮೊಬೈಲ್, ಲ್ಯಾಪ್ ಟಾಪ್, ಬ್ಯಾಂಕ್ ಅಕೌಂಟ್ ದಾಖಲೆ, ಕ್ರೆಡಿಟ್ ಕಾರ್ಡ್. ಡೆಬಿಟ್ ಕಾರ್ಡ್‌ ಸ್ವೈಪಿಂಗ್‌ ಮಷಿನ್, ಸಿಮ್ ಕಾರ್ಡ್‌ಗಳು, ಪ್ರಿಂಟರ್, ಚೆಕ್ ಬುಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಅರೋಪಿಗಳು ಬ್ಯಾಂಕ್ ಅಕೌಂಟ್ ನಲ್ಲಿ ಇದ್ದ ಐದು ಕೋಟಿ ರೂಪಾಯಿ ಫ್ರೀಜ್ ಮಾಡಿರುವ ಸಿಸಿಬಿ ಪೊಲೀಸರು ಮುಂದಿನ ಹಂತದ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

CM Siddaramaiah: ಮುಂದಿನ ದಿನಗಳಲ್ಲಿ ಸಂಸತ್ತಿನ ಒಳಗೆ ಹಾಗೂ ಹೊರಗೆ ರಾಜ್ಯದ ಸಂಸದರು ಇನ್ನಷ್ಟು ಪರಿಣಾಮಕಾರಿಯಾಗಿ ದನಿ ಎತ್ತಿ ರಾಜ್ಯದ ಹಿತ ಕಾಪಾಡಬೇಕು ಎಂದು ನವ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

VISTARANEWS.COM


on

Koo

ನವ ದೆಹಲಿ: ನಗರದ ಕರ್ನಾಟಕ‌ ಭವನದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಸಭೆ ನಡೆಸಿದರು. ರಾಜಕೀಯ ಉದ್ದೇಶವಿಲ್ಲದ, ಅದಕ್ಕೂ ಮೀರಿ ನಮ್ಮ ರಾಜ್ಯದ ಹಿತಾಸಕ್ತಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರು ಸದನದ ಒಳಗೆ ಹಾಗೂ ಹೊರಗೆ ಒಕ್ಕೊರಲಿನಿಂದ ಸೌಹಾರ್ದಯುತವಾಗಿ ದನಿ ಎತ್ತಲು ಸಿಎಂ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದ್ದಾರೆ.

ನಾವು ಬೇರೆ ಬೇರೆ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುತ್ತಿರಬಹುದು. ಆದರೆ ಕರ್ನಾಟಕದ ಹಿತಾಸಕ್ತಿಯ ವಿಷಯ ಬಂದಾಗ ನಾವೆಲ್ಲರೂ ಒಂದೇ ವೇದಿಕೆಯವರು. ಈ ವಿಷಯದಲ್ಲಿ ನಮ್ಮ ಹಿಂದಿನವರೂ ಸಹ ಮಾದರಿಗಳಾಗಿದ್ದಾರೆ.
ನೆಲ, ಜಲ, ಸಂಪನ್ಮೂಲ, ಭಾಷೆ, ಸಂಸ್ಕೃತಿ, ಐಡೆಂಟಿಟಿ ಇತ್ಯಾದಿ ವಿಚಾರಗಳಿಗೆ ಬಂದಾಗ ನಮಗೆ ಪಕ್ಷಗಳಿಲ್ಲ. ಕರ್ನಾಟಕ ಹಿತಾಸಕ್ತಿಯ ರಕ್ಷಣೆ ನಮ್ಮ ಆದ್ಯತೆ ಎಂದು ಸಂಸದರು, ಸಚಿವರಿಗೆ ಸಿಎಂ ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಹದಾಯಿ ಕುಡಿಯುವ ನೀರಿನ ಯೋಜನೆ ಸಂಬಂಧ ಕೋರ್ಟ್‌ನಲ್ಲಿ ಕೇಸ್ ಇದೆ ಅಂತ ಬಿಜೆಪಿ ಹೇಳಿದೆ. ಆದರೆ, ನಾವು ಡಿಪಿಆರ್ ಕಳುಹಿಸಿದ್ದೇವೆ. ಟೆಂಡರ್ ಕೂಡ ಕರೆದಿದ್ದೇವೆ, ಗೆಜೆಟ್ ನೋಟಿಫಿಕೇಟಿನ್ ಕೂಡ ಆಗಿದೆ. ಅಲ್ಲಿ ಅಡ್ಡಿ ಇರುವುದು ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ಅಷ್ಟೇ ಬೇಕು. ಇದು ಕೇಂದ್ರ ಸರ್ಕಾರದ ಕೆಲಸ. ಕೋರ್ಟ್‌ನಲ್ಲಿ ಇದೆ ಅಂತ ಹೇಳೋದು ಸರಿ ಅಲ್ಲ. ಆ ಕೆಲಸ ಮಾಡಿಕೊಡಬೇಕು ಎಂದು ಹೇಳಿದರು.

ಅಪ್ಪರ್ ಭದ್ರಾ ಯೋಜನೆ 5300 ಕೋಟಿ ಘೋಷಣೆ ಮಾಡಿದ್ದಾರೆ. 23-24ನೇ ಆರ್ಥಿಕ ವರ್ಷ ಮುಗಿದಿದೆ. ಆದರೆ ಇವತ್ತಿನವರೆಗೆ ದುಡ್ಡು ಬಿಡುಗಡೆ ಮಾಡಿಲ್ಲ. ನಿರ್ಮಲಾ ಸೀತಾರಾಮನ್ ಅವರು ನಿಮ್ಮಲ್ಲೇ ಟೆಕ್ನಿಕಲ್ ಪ್ರಾಬ್ಲಮ್ ಇದೆ ಅಂತ ಹೇಳುತ್ತಾರೆ. ಇನ್ನು ಮೇಕೆದಾಟು ಯೋಜನೆ 2018ರಿಂದ ಪೆಂಡಿಂಗ್ ಇದೆ. ನಾವು ಅಂದಾಜು ಮೊತ್ತ 9000 ಕೋಟಿ ಮಾಡಿ ಡಿಪಿಆರ್ ಮಾಡಿದ್ದೇವೆ. ಕೇಂದ್ರ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೂ ನೀಡಿದ್ದೇವೆ.

ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರು ಇಲ್ಲ ಅಂತ ನಾವು ಭಾವಿಸುತ್ತೇವೆ. ತಮಿಳುನಾಡಿಗೆ ಕೊಡುವ ನೀರು ಕೊಟ್ಟು, ನಾವು ಸಹ ನೀರು ಇಟ್ಟುಕೊಳ್ಳಬಹುದು. ಇದರಿಂದ ತಮಿಳುನಾಡಿಗೂ ಅನುಕೂಲ ಆಗುತ್ತೆ. ಈ ವಿಚಾರವನ್ನು ಕೇಂದ್ರ ತೀರ್ಮಾನ ಮಾಡಬೇಕು ಅಂತ ಗಮನಕೆ ತಂದಿದ್ದೇವೆ. ಬೆಂಗಳೂರಿಗೆ ಕುಡಿಯುವ ನೀರು, ವಿದ್ಯುತ್ ತಯಾರಿಕೆ ಮಾಡೋಕೆ ಅನುಕೂಲ ಆಗುತ್ತದೆ. 2022ರಲ್ಲಿ 177 ಟಿಎಂಸಿ ನೀರು ಜೊತೆಗೆ ಹೆಚ್ಚುವರಿ ನೀರು ಅವರಿಗೆ ಹೋಗಿದೆ. 2010ರಲ್ಲಿ ಅಪ್ಪರ್ ಕೃಷ್ಣಾ ಪ್ರಾಜೆಕ್ಟ್ ಟ್ರಿಬ್ಯುನಲ್‌ನಲ್ಲಿ ತೀರ್ಮಾನ ಆಗಿದೆ. ಆದರೆ, ಗೆಜೆಟ್ ನೋಟಿಫಿಕೇಟಿನ್ ಆಗಿಲ್ಲ, ಅದಕ್ಕೆ ಗೆಜೆಟ್ ನೋಟಿಫಿಕೇಷನ್ ಮಾಡಲು ಕೇಂದ್ರ ಸರ್ಕಾರಕ್ಕೆ ಹೇಳಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುತ್ತೇವೆ ಎಂದರು.

ಇದನ್ನೂ ಓದಿ | ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

ಚರ್ಚಿಸಿದ ಪ್ರಮುಖ ವಿಷಯಗಳು

  1. ಬೆಂಗಳೂರು ಮತ್ತು ಸುತ್ತಮುತ್ತಲ ಜನ ವಸತಿ ಪ್ರದೇಶಗಳಿಗೆ ನಿರಾತಂಕವಾಗಿ ಕುಡಿಯುವ ನೀರನ್ನು ಪೂರೈಸಲು ಹಾಗೂ ಆಣೆಕಟ್ಟೆಯಿಂದ ಹರಿಯುವ ನೀರಿನಿಂದ ವಿದ್ಯುತ್ ಉತ್ಪಾದಿಸಲು ರಾಜ್ಯ ಸರ್ಕಾರವು 67 ಟಿಎಂಸಿ ಸಾಮರ್ಥ್ಯದ ಮೇಕೆದಾಟು ಯೋಜನೆಯನ್ನು ರೂಪಿಸಿದೆ. ಈ ಪ್ರಸ್ತಾವನೆಯು 2018 ರಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇದೆ. ಈ ಯೋಜನೆಗೆ ಹಲವು ಹಂತಗಳ ಅನುಮತಿ ಅಗತ್ಯವಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಮಂತ್ರಾಲಯವು environmental clearance ಅನ್ನು ಶೀಘ್ರವಾಗಿ ಮಾಡಿಕೊಡುವಂತೆ ಒತ್ತಾಯಿಸುವುದು.
  2. ಭದ್ರಾ ಯೋಜನೆ ಮೂಲಕ 2.25 ಲಕ್ಷ ಹೆಕ್ಟೇರ್ ಎತ್ತುವರಿ ನೀರಾವರಿ ಮೂಲಕ ವ್ಯವಸಾಯಕ್ಕಾಗಿ / ಕುಡಿಯುವ ನೀರಿಗಾಗಿ ನೀರನ್ನು ಒದಗಿಸುವ ಪ್ರಸ್ತಾವನೆಯು 2020 ರಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇದೆ. ಇದಕ್ಕಾಗಿ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ 5,300 ರೂ. ಕೋಟಿ ಅನುದಾನವನ್ನು ಘೋಷಿಸಲಾಗಿದೆ. ಆದರೆ ಇದುವರೆಗೆ ಯಾವುದೇ ಅನುದಾನವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವುದಿಲ್ಲ. ಈ ಅನುದಾನವನ್ನು ಬಿಡುಗಡೆ ಮಾಡಿಸಲು ನೆರವಾಗಬೇಕು. ಜೊತೆಗೆ, ಈ ಯೋಜನೆಯನ್ನು ಕೂಡಲೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕೆಂದು ಕೇಂದ್ರದ ಮೇಲೆ ಒತ್ತಡ ಹೇರುವುದು.
  3. ಕಳಸಾ ಬಂಡೂರಿ ನಾಲಾ ಯೋಜನೆಗೆ ಮಹಾದಾಯಿ ಜಲ ವಿವಾದ ನ್ಯಾಯಮಂಡಳಿ ಅವಾರ್ಡ್ 2018 ರಲ್ಲಿ ಘೋಷಿಸಲಾಗಿತ್ತು. ರಾಜ್ಯ ಸರ್ಕಾರದ ವತಿಯಿಂದ ವಿಸ್ತೃತ ಯೋಜನಾ ವರದಿಯನ್ನು (DPR) ಈಗಾಗಲೆ ಒದಗಿಸಲಾಗಿದೆ. ಅದನ್ನು ಅನುಮೋದಿಸಲು ದಿನಾಂಕ: 30.01.2024 ರಂದು ನ್ಯಾಷನಲ್ ಬೋರ್ಡ್ ಆಫ್ ವೈಲ್ಡ್ ಲೈಫ್ ಸಮಿತಿ ಸಭೆ ಸೇರಿ ದಿನಾಂಕ: 08.01.2024 ರಂದು ವರದಿಯನ್ನು ಸಲ್ಲಿಸಿದೆ. ಈ ವಿಷಯವನ್ನು 77 ನೆ ಸಭೆಯ ಮುಂದೆ ಮಂಡಿಸಲಾಗಿತ್ತು. ಆದರೆ ಸಮಿತಿಯು ಈ ಕುರಿತು ತೀರ್ಮಾನ ಮಾಡಲು ಸಹ ಈ ವಿಷಯವನ್ನು ವಿನಾ ಕಾರಣ ಮುಂದೂಡಲಾಗಿದೆ [ಡೆಫರ್]. ಕಿತ್ತೂರು ಕರ್ನಾಟಕದ ಒಣ ಪ್ರದೇಶಗಳ ಜನರಿಗೆ ನೀರನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಆದ್ದರಿಂದ ಅತಿ ಶೀಘ್ರವಾಗಿ ತೊಡಕುಗಳು ನಿವಾರಣೆಯಾಗುವಂತೆ ನೋಡಿಕೊಳ್ಳುವುದು.
  4. ನಮ್ಮ ಮೆಟ್ರೋ ರೈಲು ಯೋಜನೆಯಡಿಯಲ್ಲಿ ಹಂತ-3 ರ ಕಾಮಗಾರಿಗೆ ರೂ.15611 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರದ ವಸತಿ ಮತ್ತು ನಗರಾಭಿವೃಧ್ಧಿ ಮಂತ್ರಾಲಯಕ್ಕೆ ದಿನಾಂಕ:03.08.2023 ರಂದು ಸಲ್ಲಿಸಲಾಗಿದೆ. ಹಾಗೂ ಡಿಪಿಆರ್ ಅನ್ನೂ ಸಹ ಸಲ್ಲಿಸಲಾಗಿದೆ. ಈ ಯೋಜನೆಯ ಕುರಿತು ಸಾರ್ವಜನಿಕ ಹೂಡಿಕೆಗಳ ಮಂಡಳಿಯು ದಿನಾಂಕ 6-5.2024 ರಂದು ಸಭೆ ನಡೆಸಿದೆ. 17-5-2024 ರಂದು ಶಿಫಾರಸನ್ನೂ ಮಾಡಲಾಗಿದೆ. ಪಿಐಬಿಯು ಕೇಳಿದ್ದ ಎಲ್ಲ ಮಾಹಿತಿಯನ್ನು ಒದಗಿಸಲಾಗಿದೆ. ಈ ಪ್ರಸ್ತಾವನೆಯು ಸದ್ಯ ಕೇಂದ್ರ ಸರ್ಕಾರದ ಮುಂದೆ ಇದೆ. ಈ ಪ್ರಸ್ತಾವನೆಯನ್ನು ಶೀಘ್ರವಾಗಿ ಅನುಮೋದನೆ ಮಾಡಿಸುವುದು.
  5. 15ನೆ ಹಣಕಾಸು ಆಯೋಗವು ಎರಡು ವರದಿಗಳನ್ನು ನೀಡಿದೆ. ಎರಡೂ ವರದಿಗಳೂ ಅಂತಿಮ ವರದಿಗಳೆ ಮೊದಲನೆಯದು 2020-21 ವರ್ಷಕ್ಕೆ ಸಂಬಂಧಿಸಿದ್ದು, ಎರಡನೆಯದು 2021 ರಿಂದ 2026 ವರ್ಷಗಳಿಗೆ ಸಂಬಂಧಿಸಿದ್ದು. ಮೊದಲ ವರದಿಯಲ್ಲಿ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಕರ್ನಾಟಕಕ್ಕೆ ಕೊಡಬೇಕೆಂದು ಶಿಫಾರಸು ಮಾಡಲಾಗಿದೆ. ಎರಡನೆಯ ವರದಿಯಲ್ಲಿ ಫೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ ರೂ ಮತ್ತು ಕೆರೆ ಹಾಗೂ ಜಲಮೂಲಗಳ ಅಭಿವೃದ್ಧಿಗೆ 3,000 ಕೋಟಿ ಸೇರಿ ಒಟ್ಟಿಗೆ 11,495 ಕೋಟಿ ರೂಪಾಯಿಗಳನ್ನು ನೀಡಲು ಶಿಫಾರಸು ಮಾಡಲಾಗಿದೆ. ಈ ಅನುದಾನ / ವಿಶೇಷ ಅನುದಾನ ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕಾಗಿದೆ.
  6. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರದೇಶಗಳಲ್ಲೊಂದಾದ ಮಹಾತ್ವಾಕಾಂಕ್ಷೆ ಜಿಲ್ಲೆಯಾದ ರಾಯಚೂರಿನಲ್ಲಿ All India Institute of Medical Sciences (AIIMS) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ವಿವಿಧ ದಿನಾಂಕಗಳಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದಿಂದ ತ್ವರಿತ ಅನುಮೋದನೆ ನೀಡಲು ಕೋರಲಾಗಿದೆ.
  7. ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.
  8. ಉಡಾನ್ ಯೋಜನೆಯಡಿ ‘SEA PLANE’ ಕಾರ್ಯಕ್ರಮವನ್ನು ಮಲ್ಪೆ, ಬೈಂದೂರು, ಮಂಗಳೂರು, ಕಾಳಿ ನದಿ ಮುಂತಾದ ಕಡೆ ಪ್ರಾರಂಭಿಸಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಇಲಾಖೆಗೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳು ಸದರಿ ಇಲಾಖೆಯಲ್ಲಿ ಬಾಕಿ ಇದ್ದು ಅವುಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸಿ ಅನುಮೋದನೆ ಕೊಡಿಸುವುದು.
  9. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air Cargo ಕಾಂಪ್ಲೆಕ್ಸ್ ಆಗಿ ಪರಿಗಣಿಸಲು ಸಿವಿಲ್ ಏವಿಯೇಷನ್ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ದಿನಾಂಕ:05.06.2024 ರಂದು ಕಳುಹಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಹೆಚ್ಚು ರಫ್ತು ಮತ್ತು ಆರ್ಥಿಕ ಬೆಳವಣಿಗೆ ಸುಧಾರಿಸುವುದು. ಆದ್ದರಿಂದ ಈ ಪ್ರಸ್ತಾವನೆಗೆ ಅನುಮೋದನೆ ದೊರೆಯುವಂತೆ ನೋಡಿಕೊಳ್ಳುವುದು.
  10. ಪಶ್ಚಿಮ ಘಟ್ಟಗಳ ಜನರ ರಕ್ಷಣೆಗಾಗಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ನಿರ್ಧರಿಸಿ ಪ್ರಸ್ತಾವನೆಯನ್ನು ಕಳಿಸಲಾಗಿದೆ. ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಅಂಗೀಕರಿಸಿ ಸೂಕ್ತ ತೀರ್ಮಾನಗಳನ್ನು ಹೊರಡಿಸಬೇಕಾಗಿರುತ್ತದೆ.
  11. ರಾಜ್ಯವು ರೈಲ್ವೆ ನೆಟ್‌ವರ್ಕಿನಲ್ಲಿ ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ಬಹಳ ಹಿಂದುಳಿದಿದೆ. ಹಾಗಾಗಿ ರೈಲ್ವೆ ಯೋಜನೆಗಳಿಗೆ ಆದ್ಯತೆ ನೀಡಬೇಕಾಗಿದೆ.
  12. ಗ್ರಾಮ ಸಡಕ್ ಯೋಜನೆಯಲ್ಲಿ ದೇಶದ ಅನೇಕ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯಕ್ಕೆ ಕಡಿಮೆ ಪ್ರಮಾಣದ ರಸ್ತೆಗಳನ್ನು ಮಂಜೂರು ಮಾಡಲಾಗಿದೆ. ಹಾಗಾಗಿ ತಾವುಗಳು ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚು ಅನುದಾನಗಳನ್ನು ಒದಗಿಸಿಕೊಡಬೇಕು.
  13. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಬೆಳಗಾವಿಯಲ್ಲಿ 70 ಕಾಮಗಾರಿಗಳು, ಯಾದಗಿರಿಯಲ್ಲಿ 70 ಕಾಮಗಾರಿಗಳು, ಕಲಬುರ್ಗಿಯಲ್ಲಿ 106 ಕಾಮಗಾರಿಗಳು, ಧಾರವಾಡದಲ್ಲಿ 50 ಕಾಮಗಾರಿಗಳು, ಒಟ್ಟು 296 ಕಾಮಗಾರಿಗಳ ಅಂದಾಜು ಮೊತ್ತ ರೂ.770 ಕೋಟಿಗಳು ಬಿಡುಗಡೆಯಾಗಬೇಕಾಗಿರುತ್ತದೆ. ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದಿಂದ ತ್ವರಿತ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುವುದು.
  14. ದೇಶದಲ್ಲಿ 12 ಅತಿ ಹೆಚ್ಚು ಬರಪೀಡಿತ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಇದ್ದು, ಬರವನ್ನು ತಡೆಗಟ್ಟುವ ಸಲುವಾಗಿ National Disaster Risk Management Fund (NDRMF) ಅಡಿಯಲ್ಲಿ ರೂ.100 ಕೋಟಿಗಳ ಅನುದಾನವನ್ನು ಒದಗಿಸುವಂತೆ ಕೋರಿ ದಿನಾಂಕ: 30.10.2023 ರಂದು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೆ, ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ನೆರೆ ಸಂಭವಿಸಿದ್ದು, ಅವುಗಳನ್ನು ತಡೆಗಟ್ಟಲು 15ನೇ ಹಣಕಾಸು ಆಯೋಗವು ರೂ.250 ಕೋಟಿಗಳ ಅನುದಾನವನ್ನು ಮೀಸಲಿಟ್ಟಿದ್ದು, ಈ ಅನುದಾನವು ಇನ್ನೂ ಬಿಡಗಡೆಯಾಗಿರುವುದಿಲ್ಲ. ಆದ್ದರಿಂದ ತುರ್ತಾಗಿ ಈ ಅನುದಾನ ಬಿಡುಗಡೆಯಾಗುವಂತೆ ನೋಡಿಕೊಳ್ಳುವುದು.
  15. ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮನವಿಯಂತೆ ದಿನಾಂಕ:20.07.2023 ರಂದು ರಾಜ್ಯ ಸರ್ಕಾರದ ಶಿರಾಡಿ ಘಾಟ್‌ನಲ್ಲಿ 30 ಕಿ.ಮೀ.ನ ಎರಡು ಲೇನ್ ರಸ್ತೆಯನ್ನಾಗಿ ಪರಿವರ್ತಿಸಲು ರೂ.2,580 ಕೋಟಿ ಪ್ರಸ್ತಾವನೆಯನ್ನು NHAIಗೆ ದಿನಾಂಕ: 03.08.2023 ರಂದು ಸಲ್ಲಿಸಲಾಗಿದ್ದು, ಇದನ್ನು ತ್ವರಿತಗೊಳಿಸಲು ಅನುಮೋದನೆ ನೀಡಿದಲ್ಲಿ ರಾಜ್ಯದ ವಾಣಿಜ್ಯ ಚಟುವಟಿಕೆಗಳನ್ನು ಮಂಗಳೂರು ಬಂದರಿಗೆ ರಫ್ತು ಮಾಡಲು ಉಪಯೋಗವಾಗುತ್ತದೆ. ಇದರ ಜೊತೆಗೆ ರಾಜ್ಯದಿಂದ ದಿನಾಂಕ 28.07.2017 ಮತ್ತು 7.3.2018] ಒಟ್ಟು 38 ಹೆದ್ದಾರಿ ಕಾಮಗಾರಿಗಳನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳಿಸಲಾಗಿದೆ. ಈ ಪ್ರಸ್ತಾವನೆಗಳಲ್ಲಿ ಒಟ್ಟಾರೆ 4,807 ಕಿ.ಮೀ. ರಸ್ತೆ ಒಳಗೊಂಡಿದೆ. ಈ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದೆ ಇವೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸಿಕೊಡುವುದು.
  16. MGNREGA ಅಡಿಯಲ್ಲಿ ಕೆಲವು ಅಗತ್ಯವಿರುವ ಶಾಲಾ ಕಟ್ಟಡ, ತರಗತಿ ಕೊಠಡಿ, ಗ್ರಂಥಾಲಯ, ಇತರೆ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಉಪಯೋಗಿಸಲು ಸುಮಾರು ಪ್ರಸ್ತಾವನೆಗಳನ್ನು ನೀಡಲಾಗಿದೆ. ಇದರಿಂದ ಗ್ರಾಮ ಮಟ್ಟದಲ್ಲಿ ಹೆಚ್ಚು ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಮಾಡಲು ಕೇಂದ್ರದ ಭೂ ಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಾಲಯವನ್ನು ಕೋರಲಾಗಿದೆ.
  17. ಇದೇ ರೀತಿ 207 ಸಬ್-ರಿಜಿಸ್ಟ್ರಾರ್ ಕಛೇರಿಗಳನ್ನು ಗಣಕೀಕರಣಗೊಳಿಸಲು, ಡಿಜಿಟಲ್ ಇಂಡಿಯಾ ಮಾಡ್ರನೈಸೇಷನ್ ಕಾರ್ಯಕ್ರಮದಡಿಯಲ್ಲಿ ರೂ.365 ಕೋಟಿಗಳ ಅನುದಾನದ ಪ್ರಸ್ತಾವನೆಯನ್ನು ದಿನಾಂಕ:07.06.2024 ರಂದು ಕಳುಹಿಸಲಾಗಿದೆ. ಇದರಿಂದ ಕಂದಾಯ ಇಲಾಖೆಯ ಮೂಲಕ ಉತ್ತಮ ಹಾಗೂ ನುರಿತ ಆಡಳಿತವನ್ನು ನೀಡಲು ಸಾಧ್ಯವಾಗುವುದು. ಈ ಪ್ರಸ್ತಾವನೆಯು ಸಹ ಭೂಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿದೆ. ಇವುಗಳು ತುರ್ತಾಗಿ ಅನುಮೋದನೆಯಾಗುವಂತೆ ನೋಡಿಕೊಳ್ಳುವುದು.
  18. ಯುವಜನ ಸಬಲೀಕರಣ ಇಲಾಖೆಯಡಿಯಲ್ಲಿನ ಖೇಲೊ ಇಂಡಿಯಾ ಕಾರ್ಯಕ್ರಮಗಳಡಿಯಲ್ಲಿ ಒಟ್ಟು 16 ವಿವಿಧ ಕಾರ್ಯಕ್ರಮಗಳ ಪ್ರಸ್ತಾವನೆಗಳು ಅನುಮೋದನೆಗಾಗಿ ಕಳೆದ ವರ್ಷದ ನವೆಂಬರ್ ತಿಂಗಳಿನಿಂದ ಕೇಂದ್ರ ಸರ್ಕಾರದಲ್ಲಿ ಬಾಕಿ ಇವೆ. ಖೇಲೊ ಇಂಡಿಯಾ ಯೋಜನೆ [ ಅಕ್ಟೋಬರ್-2017 ] ಪ್ರಾರಂಭವಾದಾಗಿದ ಅತ್ಯಂತ ಕಡಿಮೆ ಅನುದಾನ ಪಡೆದ ರಾಜ್ಯ ಕರ್ನಾಟಕವಾಗಿದೆ. ಕರ್ನಾಟಕವು ಅನೇಕ ಹೆಸರಾಂತ ಕ್ರೀಡಾಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ಕೊಟ್ಟಿದೆ. ಆದ್ದರಿಂದ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ಈ 16 ಕಾರ್ಯಕ್ರಮಗಳು ಅನುಮೋದನೆಯಾಗುವಂತೆ ನೋಡಿಕೊಳ್ಳಬೇಕು.
  19. ಕೇಂದ್ರದ ಆಹಾರ ಮತ್ತು ನಾಗರೀಕ ಸರಬರಾಜು ಮಂತ್ರಾಲಯ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅಡಿಯಲ್ಲಿ ಒಟ್ಟು ರೂ.584 ಕೋಟಿ ಅನುದಾನ ಬಿಡುಗಡೆಯಾಗಬೇಕಾಗಿದೆ ಹಾಗೂ ರಾಜ್ಯ ಸರ್ಕಾರಕ್ಕೆ 2.17 ಲಕ್ಷ ಮೆಟ್ರಿಕ್ ಟನ್ ಲಭ್ಯವಿದ್ದು, ಪ್ರಸ್ತುತ 30,000 ಮೆಟ್ರಿಕ್ ಟನ್‌ಗಳನ್ನು ಹೆಚ್ಚುವರಿಯಾಗಿ ನೀಡಲು ಕೋರಲಾಗಿದೆ.
  20. ಬುಡಕಟ್ಟು ವ್ಯವಹಾರಗಳ ಸಚಿವಾಲಯದಲ್ಲಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ ಕೊಡುವ ಪ್ರಸ್ತಾವನೆಯು ದಿನಾಂಕ:23.3.2023 ರಿಂದ ಬಾಕಿಯಾಗಿರುತ್ತದೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸಿಕೊಡುವುದು. ಇದೇ ಸಚಿವಾಲಯದಲ್ಲಿ ಹೊಸ ಪೋಸ್ಟ್ ಮೆಟ್ರಿಕ್ ಬಾಲಕಿಯರ ಮತ್ತು ಬಾಲಕರ ವಸತಿ ನಿಲಯಗಳಿಗೆ ಅನುಮೋದನೆ ನೀಡುವಂತೆ ಕೋರಿ ಪ್ರಸ್ತಾವನೆಯನ್ನು ದಿನಾಂಕ:06-06-2023 ರಂದು ಕಳುಹಿಸಲಾಗಿದೆ.
  21. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವ್ಯಾಪ್ತಿಯಲ್ಲಿ ವಸತಿ, ವಸತಿ ನಿಲಯ ಮುಂತಾದ 5 ಪ್ರಸ್ತಾವನೆಗಳು 2023 ರ ಜೂನ್ ತಿಂಗಳಿಂದ ಬಾಕಿಯಾಗಿವೆ.
  22. ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ 52 ಯೋಜನೆಗಳನ್ನು ಸಲ್ಲಿಸಲಾಗಿತ್ತು. ಇವುಗಳ ಒಟ್ಟು ಮೊತ್ತ 659 ಕೋಟಿ ರೂ.ಗಳಷ್ಟಾಗಿರುತ್ತದೆ. 32 ವಸತಿ ಶಾಲೆಗಳು, 11 ವಸತಿ ನಿಲಯಗಳು, 4 ಡೇ ಸ್ಕೂಲ್‌ಗಳು, 4 ಕೌಶಲ್ಯ ಕೇಂದ್ರಗಳು ಸೇರಿವೆ. ಇವುಗಳಲ್ಲಿ 12 ಯೋಜನೆಗಳು ಅನುಮೋದನೆಯಾಗಿವೆ. ಆದರೆ ಹಣ ಬಿಡುಗಡೆಯಾಗಿಲ್ಲ. ಉಳಿದ 40 ಯೋಜನೆಗಳು ಬಾಕಿ ಉಳಿದಿವೆ.
  23. MSP ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಮರುಪಾವತಿಗೆ ಕಳುಹಿಸಿರುವ ದಾಖಲೆಗಳ ಮೊತ್ತವು ರೂ.1,027.82 ಕೋಟಿಗಳಾಗಿರುತ್ತದೆ. ಅದನ್ನು ಬಿಡುಗಡೆ ಮಾಡಲು ಕೋರಲಾಗಿದೆ.
  24. ಮೀನುಗಾರಿಕೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಳಿಯಲ್ಲಿ ಹೊಸದಾಗಿ ಮೀನುಗಾರಿಕಾ ಬಂದರನ್ನು ನಿರ್ಮಿಸುವುದು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಿರ್ಮಿಸಿರುವ ಮೀನುಗಾರಿಕಾ ಬಂದರನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. 2023 ರಿಂದ ಈ ವಿಷಯ ಬಾಕಿಯಾಗಿದೆ.
  25. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಭರಿಸಲಾಗದ ನಷ್ಟವುಂಟಾಗಿದೆ. ಮೊದಲಿನ ಹಣಕಾಸು ಆಯೋಗಗಳು 1971 ರ ಜನಗಣತಿ ವರದಿಯನ್ನು ಆಧರಿಸಿ ಸಂಪನ್ಮೂಲಗಳನ್ನು ಹಂಚಿಕೆ ಮಾಡುತ್ತಿದ್ದವು. ಆದರೆ 15 ನೆ ಹಣಕಾಸು ಆಯೋಗವು 2011 ರ ಜನಗಣತಿಯನ್ನು ಆಧರಿಸಿ ಸಂಪನ್ಮೂಲಗಳನ್ನು ಹಂಚಿಕೆ ಮಾಡಿದೆ. ಜನಸಂಖ್ಯಾ ನಿಯಂತ್ರಣವನ್ನು ಸಾಧಿಸಿ ದೇಶದ ಅಭಿವೃದ್ಧಿಗೆ ಶ್ರಮಿಸಿದ ಕಾರಣದಿಂದಾಗಿಯೆ ನಮ್ಮ ರಾಜ್ಯಕ್ಕೆ ಸಮಸ್ಯೆಯಾಗಿದೆ. ಈ ಕಾರಣದಿಂದ ನಮಗೆ 2017-18 ನೆ ಸಾಲಿನ ಬಜೆಟ್‌ಗೆ ಹೋಲಿಸಿದರೆ ಬೃಹತ್ ಪ್ರಮಾಣದಲ್ಲಿ [ಅರ್ಧಕ್ಕರ್ಧ] ತೆರಿಗೆ ಹಂಚಿಕೆ ಹಾಗೂ ಇನ್ನಿತರೆ ಸಂಪನ್ಮೂಲಗಳ ಹಂಚಿಕೆಯು ಕಡಿಮೆಯಾಗಿದೆ. ಈಗ 16 ಹಣಕಾಸು ಆಯೋಗವು ರಚನೆಯಾಗಿದೆ. 16 ನೆ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಯಾವುದೇ ಅನ್ಯಾಯವಾಗದಂತೆ ತಾವುಗಳು ನೋಡಿಕೊಳ್ಳಬೇಕೆಂದು ಮನವಿ ಮಾಡುತ್ತೇವೆ.
  26. ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎಂದು ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ | ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Continue Reading

ಉತ್ತರ ಕನ್ನಡ

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Uttara Kannada News: ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಎನ್.ಕೆ.ಬೈಲು (ನೆಲ್ಲೂರು ಕಂಚಿನಬೈಲು) ನಲ್ಲಿ ಭೂ ಸ್ವಾಧೀನ ಪಡಿಸಿಕೊಂಡಿರುವ 58.11 ಎಕರೆಗೆ ಸಂಬಂಧಿಸಿದಂತೆ, ಸಂತ್ರಸ್ತರಿಗೆ ಇದುವರೆಗೆ ಪರಿಹಾರ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಈ ಎಲ್ಲಾ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ದೊರಕಿಸಲು ತಾವೇ ದೆಹಲಿಯ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

VISTARANEWS.COM


on

NK Bailu victims to get relief soon says Incharge secretary Ritesh Kumar Singh
Koo

ಕಾರವಾರ: ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಎನ್.ಕೆ. ಬೈಲು(ನೆಲ್ಲೂರು ಕಂಚಿನಬೈಲು)ನಲ್ಲಿ ಭೂ ಸ್ವಾಧೀನ ಪಡಿಸಿಕೊಂಡಿರುವ 58.11 ಎಕರೆಗೆ ಸಂಬಂಧಿಸಿದಂತೆ, ಸಂತ್ರಸ್ತರಿಗೆ ಇದುವರೆಗೆ ಪರಿಹಾರ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಈ ಎಲ್ಲಾ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ದೊರಕಿಸಲು ತಾವೇ ದೆಹಲಿಯ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ (Uttara Kannada News) ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ, ಸೀಬರ್ಡ್ ಯೋಜನೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎನ್.ಕೆ. ಬೈಲುನಲ್ಲಿ ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ 58.11 ಎಕರೆಗೆ ಸಂಬಂಧಿಸಿದಂತೆ, ಈ ಭೂಮಿಯ ಸಂತ್ರಸ್ತರಿಗೆ ಇದುವರೆಗೂ ಪರಿಹಾರ ದೊರೆತಿಲ್ಲ. ಅಲ್ಲದೇ ಈ ಭೂಮಿಯಲ್ಲಿ ಯಾವುದೇ ಕೃಷಿ ಚಟುವಟಿಕೆ ಮಾಡಲು ಸಹ ಅನುಮತಿ ನೀಡುತ್ತಿಲ್ಲ. ಈ ಭೂಮಿಗೆ ಈಗಾಗಲೇ 18 ಕೋಟಿ 91 ಲಕ್ಷ ರೂ.ಗಳ ಪರಿಹಾರದ ಮೊತ್ತವನ್ನು ಬಿಡುಗಡೆಗೊಳಿಸುವಂತೆ ಬೆಂಗಳೂರಿನ ಡಿಫೆನ್ಸ್ ಎಸ್ಟೇಟ್ ಅಧಿಕಾರಿಗಳೊಂದಿಗೆ ಹಲವು ಪತ್ರ ಬರೆದರೂ ಸಹ ಯಾವುದೇ ಪ್ರಗತಿಯಾಗಿಲ್ಲ ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಈ ವಿಷಯದ ಕುರಿತಂತೆ ಬೆಂಗಳೂರಿನಲ್ಲಿರುವ ಡಿಫೆನ್ಸ್ ಎಸ್ಟೇಟ್ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಈ ಕುರಿತಂತೆ ಪ್ರಸ್ತಾವನೆಯು ದೆಹಲಿಯ ರಕ್ಷಣಾ ಸಚಿವಾಲದಯಲ್ಲಿ ಬಾಕಿ ಇರುವ ಬಗ್ಗೆ ತಿಳಿದು, ರಕ್ಷಣಾ ಇಲಾಖೆಯೊಂದಿಗೆ ನಡೆಸಿರುವ ಪತ್ರ ವ್ಯವಹಾರಗಳನ್ನು ಪ್ರತಿಯನ್ನು ತಮಗೆ ನೀಡುವಂತೆ ಹಾಗೂ ಈ ಪ್ರಕರಣದ ಬಗ್ಗೆ ತಾವೇ ಖುದ್ದು ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿ ಪರಿಹಾರ ದೊರಕಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ನೌಕಾನೆಲೆಯ ಕಾರಣದಿಂದ ಭೂಮಿ ಕಳೆದುಕೊಂಡಿರುವ 158 ಕುಟುಂಬಗಳಲ್ಲಿ ವಿವಿಧ ಕಾರಣಗಳಿಂದ ಇದುವರೆಗೆ ಪರಿಹಾರ ದೊರೆಯದ ಕುಟುಂಬಗಳಿಗೆ ಸಂಬಂದಿಸಿದಂತೆ 1 ತಿಂಗಳ ಒಳಗೆ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ಪರಿಹರ ದೊರೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಮುದಗಾದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಿರುವ ಅಣೆಕಟ್ಟುನಿಂದಾಗಿ ಮಳೆಗಾಲದಲ್ಲಿ ನೌಕಾನೆಲೆಯೊಳಗೆ ನೀರು ನುಗ್ಗುತ್ತಿರುವ ಬಗ್ಗೆ ರಕ್ಷಣಾ ಇಲಾಖೆಯಿಂದ ಬರುತ್ತಿರುವ ದೂರುಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕೋಸ್ಟಲ್‌ ಗಾರ್ಡ್ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಿಗೆ ವಾಹನಗಳ ಸಂಚಾರಕ್ಕೆ ರಸ್ತೆ ಸಂಪರ್ಕದ ಸಮಸ್ಯೆಯಿರುವ ಬಗ್ಗೆ ನಡೆದ ಚರ್ಚೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಬ್ಲಾಕ್ ಸ್ಟಾಟ್‌ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅಪಘಾತಗಳನ್ನು ನಿಯಂತ್ರಿಸುವಂತೆ ಮತ್ತು ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸುವಂತೆ ಐ.ಆರ್.ಬಿ. ಎಂಜಿನಿಯರ್‌ಗಳಿಗೆ ಸೂಚಿಸಿದರು.

ಇದನ್ನೂ ಓದಿ: Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಉಪ ವಿಭಾಗಾಧಿಕಾರಿಗಳಾದ ಕನಿಷ್ಠ. ಕಲ್ಯಾಣಿ ಕಾಂಬ್ಳೆ, ನೌಕಾದಳ ಮತ್ತು ಕೋಸ್ಟ್ ಗಾರ್ಡ್‌ನ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 220/66/11 ಕೆ.ವಿ ಐ.ಟಿ.ಐ ಸ್ಟೇಷನ್‌ನಲ್ಲಿ 31.5 ಎಂ.ವಿ.ಎ ಶಕ್ತಿ ಪರಿವರ್ತಕ-1 ರ ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂ.29 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

VISTARANEWS.COM


on

power outage in many parts of Bengaluru on June 29
Koo

ಬೆಂಗಳೂರು: ನಗರದ 220/66/11 ಕೆ.ವಿ ಐ.ಟಿ.ಐ ಸ್ಟೇಷನ್‌ನಲ್ಲಿ 31.5 ಎಂ.ವಿ.ಎ ಶಕ್ತಿ ಪರಿವರ್ತಕ-1 ರ ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಜೂ.29ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

220/66/11 ಕೆ.ವಿ ಐ.ಟಿ.ಐ ಸ್ಟೇಷನ್‌ನಲ್ಲಿ 31.5 ಎಂ.ವಿ.ಎ. ಶಕ್ತಿ ಪರಿವರ್ತಕ-1ರ ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಜೈ ಭುವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಿಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್.ಆರ್. ಟೆಂಪಲ್ ರೋಡ್‌, ಟೆಂಟ್ ರೋಡ್‌, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, ಕೆ.ಆರ್. ಪುರಂ.ದೇವಸಂದ್ರ, ಅಯ್ಯಪ್ಪನಗರ.

ಇದನ್ನೂ ಓದಿ: Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

ಶಾಂತಿ ನಗರ, ಜಿಂಕೇತಿಮ್ಮನಹಳ್ಳಿ, ವಾರಣಾಸಿ, ಆನೆಪ್ಪ ವೃತ್ತ, ಅಕ್ಷಯನಗರ, ಕೌಡೇನಹಳ್ಳಿ, ಹ್ಯಾಪಿ ಗರ‍್ಡನ್, ಬಿಟಿಐ ಲೇಔಟ್ ನಾರಾಯಣಪುರ, ಕಾವೇರಿ ವಾಟರ್‌ಟ್ಯಾಂಕ್, ನಾಗಪ್ಪ ರೆಡ್ಡಿ ಲೇಔಟ್, ಕೊಂಡಪ್ಪ ರೆಡ್ಡಿ ಲೇಔಟ್, ಉದಯನಗರ, ಎಂಇಜಿ ಲೇಔಟ್, ಪಿಡಬ್ಲ್ಯೂಡಿ ಮುಖ್ಯರಸ್ತೆ, ಸಾಯಿಬಾಬಾ ಲೇಔಟ್, ವೈಟ್ ಹೌಸ್, ಮಡೋನಾ ಶಾಲೆ, ಕೆ.ಆರ್. ಪುರಂ ಸರ್ಕಾರಿ ಕಾಲೇಜು, ಯು.ಬಿ. ಲೇಔಟ್, ಆರ್‌ಎಂಎಸ್ ಕಾಲೋನಿ, ವಿನಾಯಕ ಲೇಔಟ್, ಸಿಲಿಕಾನ್ ಸಿಟಿ ಕಾಲೇಜು, ದೀಪಾ ಆಸ್ಪತ್ರೆ ಪ್ರದೇಶ, ಹಳೆಯ ಆರ್‌ಟಿಒ ಕಚೇರಿ, ಟಿ.ಸಿ. ಪಾಳ್ಯ, ಗಾರ್ಡನ್ ಸಿಟಿ ಕಾಲೇಜು.

ಭಟ್ಟರಹಳ್ಳಿ, ಮೇಡಹಳ್ಳಿ, ಹೊಸ ಆರ್‌ಟಿಒ ಕಚೇರಿ, ಕರುಣಶ್ರೀ ಲೇಔಟ್, ಮಾಸ್ಟರ್ ನಾಗರಾಜು ಲೇಔಟ್, ಸೀ ಕಾಲೇಜು, ಆಲ್ಫಾ ಗಾರ್ಡನ್, ಸ್ವತಂತ್ರ ನಗರ, ರಾಜೇಶ್ವರಿ ಲೇಔಟ್, ಮುನೇಶ್ವರ ಲೇಔಟ್, ಆಲ್ಫಾ ಗಾರ್ಡನ್ ಲೇಔಟ್, ತೆಂಗಿನ ತೋಟ, ಬೆತೆಲ್ ನಗರ, ಬೃಂದಾವನ ಲೇಔಟ್, ಕೆಆರ್‌ಆರ್. ಲೇಔಟ್, ಕೇಂಬ್ರಿಡ್ಜ್ ಲೇಔಟ್, ಕೇಂಬ್ರಿಡ್ಜ್ ಗಾರ್ಡನ್ ಲೇಔಟ್. ಬಿಎಂಟಿಸಿ ಡಿಪೋ, ಡೀಸೆಲ್ ಲೋಕೋ ಶೆಡ್, ಆರ್.ಆರ್. ದೇವಸ್ಥಾನದ ರಸ್ತೆ, ಐಟಿಐ ಭವನ, ನೇತ್ರಾವತಿ ವಿಸ್ತರಣೆ, ದೇವಸಂದ್ರ ಮಸೀದಿ ರಸ್ತೆ, ಕ್ರಿಷ್ಣ ಥಿಯೇಟರ್, ಗಾಯತ್ರಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ಸೃಷ್ಟಿ ಲೇಔಟ್, ಮೇಡಹಳ್ಳಿ, ಕುರುಡು ಸೊನ್ನೆನಹಳ್ಳಿ ರೋಡ್‌, ಹ್ಯಾಪಿ ಗಾರ್ಡನ್, ಮಾನ್ಯತಾ ಲೇಔಟ್, ವಿಂಡ್ ಫ್ಲವರ್ ಲೇಔಟ್, ಸಾಯಿ ಸೆರೆನಿಟಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

ಕೊಪ್ಪಳ

Wild Animals Attack : ಕೊಪ್ಪಳದಲ್ಲಿ ಕಂಡ ಕಂಡಲ್ಲಿ ಕರಡಿಗಳ ಹಾವಳಿ

Wild Animals Attack : ಕೊಪ್ಪಳದಲ್ಲಿ ಕರಡಿಗಳ (bear Attack) ಹಾವಳಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಕಾಣಿಸಿಕೊಳ್ಳುತ್ತಿದೆ. ಮೊನ್ನೆಯಷ್ಟೇ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿತ್ತು. ಈ ಘಟನೆ ಮಾಸುವ ಮುನ್ನವೇ ಹಿಂಡು ಹಿಂಡಾಗಿ ಕರಡಿಗಳು ಪ್ರತ್ಯಕ್ಷಗೊಳ್ಳುತ್ತಿವೆ.

VISTARANEWS.COM


on

By

bear attack
Koo

ಕೊಪ್ಪಳ: ಕೊಪ್ಪಳ ಜಿಲ್ಲೆ ಕನಕಗಿರಿ ಪಟ್ಟಣದಲ್ಲಿ ಕರಡಿಗಳು ( bear Attack) ಹಿಂಡು ಹಿಂಡಾಗಿ ಪ್ರತ್ಯಕ್ಷಗೊಂಡಿವೆ. ಕರಡಿಗಳನ್ನು ಕಂಡು ಜನರು ಭಯಭೀತರಾಗಿದ್ದಾರೆ. ಕನಕಗಿರಿ ಪಟ್ಟಣದ ತಾವರಗೇರಾ ರಸ್ತೆಯಲ್ಲಿರುವ ಚನ್ನಮ್ಮ ಸರ್ಕಲ್ ಬಳಿ ಕಳೆದ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಕರಡಿಗಳು ಕಾಣಿಸಿಕೊಂಡಿವೆ. ಈಗಾಗಲೇ ತಾಲೂಕಿನ ಅನೇಕ ಕಡೆ ಕರಡಿ ದಾಳಿಗೆ ತುತ್ತಾಗಿ ಅನೇಕರು ಆಸ್ಪತ್ರೆಗೆ ಸೇರಿದ್ದಾರೆ. ಕರಡಿಗಳನ್ನು ಸುರಕ್ಷಿತ ಜಾಗದಲ್ಲಿ ಬಿಡುವಂತೆ ಜನರು ಆಗ್ರಹಿಸಿದ್ದಾರೆ.

ರೈತನ ಮೇಲೆ ಎರಗಿದ್ದ ಕರಡಿ

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಪರಾಪುರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ರೈತನ ಮೇಲೆ ಕರಡಿ ದಾಳಿ ಮಾಡಿತ್ತು. ಕರಡಿ ದಾಳಿಯಿಂದ ತೀವ್ರ ಗಾಯಗೊಂಡಿರುವ ರೈತ ಶಿವಶಂಕರಪ್ಪರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕರಡಿಯನ್ನು ಬೆನ್ನಟ್ಟಿದ ಶ್ವಾನಗಳು

ಕೊಪ್ಪಳ ತಾಲೂಕಿನ ಚಿಲಕಮುಖಿ ಗ್ರಾಮದ ಸಮೀಪ ಇರುವ ಜಮೀನಿಗೆ ಕರಡಿಯೊಂದು ನುಗ್ಗಿತ್ತು. ಕರಡಿ ಕಂಡೊಡನೆ ನಾಯಿಗಳು ಬೆನ್ನತ್ತಿವೆ. ನಾಯಿಗಳ ದಾಳಿ ಕಂಡು ಜಮೀನಿನಿಂದ ಕರಡಿ ಕಾಲ್ಕಿತ್ತಿದೆ. ಆಹಾರಕ್ಕಾಗಿ ಕರಡಿಗಳು ಗ್ರಾಮಕ್ಕೆ ಲಗ್ಗೆಯಿಡುತ್ತಿವೆ.

ಇದನ್ನೂ ಓದಿ: Ballari News: ಕಂಪ್ಲಿಯ ದೇವಸಮುದ್ರ ಗ್ರಾಮದಲ್ಲಿ ಎರಡು ಕರಡಿ ಪ್ರತ್ಯಕ್ಷ!

ಚಾಮರಾಜನಗರದಲ್ಲಿ ಆನೆ ಆರ್ಭಟಕ್ಕೆ ಕಾಲ್ಕಿತ್ತ ಹುಲಿ

ಕೆರೆಯಲ್ಲಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ಹುಲಿಯನ್ನು ಆನೆಯೊಂದು ಓಡಿಸಿದೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದಲ್ಲಿ ಘಟನೆ ನಡೆದಿದೆ. ಆನೆಯು ಹುಲಿಯನ್ನು ಅಟ್ಟಾಡಿಸಿದ ದೃಶ್ಯ ಬಂಡೀಪುರ ಸಫಾರಿಗೆ ತೆರಳಿದವರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆನೆ ಆರ್ಭಟಕ್ಕೆ ಭಯದಿಂದ ಹುಲಿ ಕಾಲ್ಕಿತ್ತಿತ್ತು. ಆನೆ ಹೋದ ಬಳಿಕ ಮತ್ತೆ ಕೆರೆಗೆ ಬಂದು ಹುಲಿ ಮಲಗಿತ್ತು.

ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿಗೆ ಭರ್ಜರಿ ರೆಸ್ಪಾನ್ಸ್‌

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಚಿರತೆ ಸಫಾರಿ ಆರಂಭಗೊಂಡಿದೆ. ದೇಶದಲ್ಲೆ ಅತಿ ದೊಡ್ಡ ಹಾಗೂ ದಕ್ಷಿಣ ಭಾರತದ ಮೊದಲ ಚಿರತೆ ಸಫಾರಿ ಇದಾಗಿದ್ದು, ಪ್ರವಾಸಿಗರು ದಂಡು ಆಗಮಿಸಿದೆ. ಎರಡು ದಿನಗಳ ಹಿಂದೆ ಆರಂಭಗೊಂಡ ಚಿರತೆ ಸಫಾರಿಗೆ ರೆಸ್ಪಾನ್ಸ್‌ ಸಿಕ್ಕಿದೆ. ಮಕ್ಕಳೊಂದಿಗೆ ಕುಟುಂಬ ಸಮೇತ ಬಂದು ಚಿರತೆ ಸಫಾರಿಯನ್ನು ಎಂಜಾಯ್‌ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
T20 World Cup Final
ಕ್ರೀಡೆ14 mins ago

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

Kannada Serials TRP Lakshmi Baramma in Top 5 new serials not in demand
ಕಿರುತೆರೆ22 mins ago

Kannada Serials TRP: ಟಾಪ್‌ 5ನಲ್ಲಿ ʻಲಕ್ಷ್ಮೀ ಬಾರಮ್ಮʼ; ಹೊಸ ಧಾರಾವಾಹಿಗಿಲ್ಲ ಬೇಡಿಕೆ!

ಕರ್ನಾಟಕ25 mins ago

CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ವಿದೇಶ46 mins ago

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

NK Bailu victims to get relief soon says Incharge secretary Ritesh Kumar Singh
ಉತ್ತರ ಕನ್ನಡ53 mins ago

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Viral Video
Latest55 mins ago

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

power outage in many parts of Bengaluru on June 29
ಬೆಂಗಳೂರು1 hour ago

Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Actor Darshan In Central Jail remembering mother and son
ಸ್ಯಾಂಡಲ್ ವುಡ್1 hour ago

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

bear attack
ಕೊಪ್ಪಳ1 hour ago

Wild Animals Attack : ಕೊಪ್ಪಳದಲ್ಲಿ ಕಂಡ ಕಂಡಲ್ಲಿ ಕರಡಿಗಳ ಹಾವಳಿ

Haveri Accident
ಕರ್ನಾಟಕ1 hour ago

Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು23 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌