ICC World Cup 2023 : ವಿಶ್ವ ಕಪ್​ ನಡೆಯುವ 10 ಸ್ಟೇಡಿಯಮ್​ಗಳ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಎಲ್ಲ ವಿವರ - Vistara News

ಕ್ರಿಕೆಟ್

ICC World Cup 2023 : ವಿಶ್ವ ಕಪ್​ ನಡೆಯುವ 10 ಸ್ಟೇಡಿಯಮ್​ಗಳ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಎಲ್ಲ ವಿವರ

ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಮ್​ ವಿಶ್ವ ಕಪ್​ (ICC World Cup 2023) ನಡೆಯುವ ಎಲ್ಲ 10 ಸ್ಟೇಡಿಯಮ್​ಗಳ ಪೈಕಿ ಅತ್ಯಂತ ದೊಡ್ಡದು ಹಾಗೂ ಜಗತ್ತಿನ ಅತಿ ದೊಡ್ಡ ಕ್ರಿಕೆಟ್​ ಕ್ರೀಡಾಂಗಣ.

VISTARANEWS.COM


on

HPCA Stadium
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ನ 13 ನೇ (ICC World Cup 2023) ಆವೃತ್ತಿಗೆ ಭಾರತ ಆತಿಥ್ಯ ವಹಿಸುತ್ತಿದೆ. ಇದೇ ಮೊದಲ ಬಾರಿಗೆ ಬಿಸಿಸಿಐ ಏಕಾಂಗಿಯಾಗಿ ಟೂರ್ನಿಯನ್ನು ಆಯೋಜಿಸುತ್ತಿದೆ.. ಈ ಹಿಂದೆ ಎರಡೆರಡು ದೇಶಗಳಿಗೆ ಅತಿಥ್ಯದ ಹಕ್ಕು ನೀಡಲಾಗುತ್ತಿತ್ತು. ಆದರೆ ಈ ಸಲ ಭಾರತವೊಂದರಲ್ಲೇ ಪೂರ್ತಿ ಟೂರ್ನಿ ನಡೆಯಲಿದೆ. ಬಿಸಿಸಿಐ ಕೂಡ ಟೂರ್ನಿ ಆಯೋಜನೆಗೆ ಸಂಪೂರ್ಣವಾಗಿ ಸಿದ್ಧತೆ ಮಾಡಿಕೊಂಡಿದೆ. ಶ್ರೀಮಂತ ಕ್ರಿಕೆಟ್​ ಸಂಸ್ಥೆಯಾಗಿರುವ ಬಿಸಿಸಿಐ ಟೂರ್ನಿಯ ಯಶಸ್ಸಿಗೆ ಅನೇಕ ಯೋಜನೆಗಳನ್ನು ಕೈಗೊಂಡಿದೆ. ಉದ್ಘಾಟನಾ ಕಾರ್ಯಕ್ರಮದಿಂದ ಹಿಡಿದು ಸಮಾರೋಪದ ತನಕ ವಿಶೇಷವಾಗಿ ಅಯೋಜಿಸಲು ಯೋಜನೆ ರೂಪಿಸಿಕೊಂಡಿದೆ.

ಭಾರತ ಮೊದಲೇ ಅಪ್ಪಟ ಕ್ರಿಕೆಟ್​ ಪ್ರೇಮಿಗಳ ದೇಶ. ಹೀಗಾಗಿ ಟೂರ್ನಿ ಭರ್ಜರಿಯಾಗಿ ನಡೆಯುವುದರಲ್ಲಿ ಯಾವುದೇ ಸಂಶಯ ಇಲ್ಲ. ಹೀಗಾಗಿ ಒಟ್ಟು 10 ತಾಣಗಳಲ್ಲಿ ಪಂದ್ಯಗಳನ್ನು ಆಯೋಜಿಸುವ ಮೂಲಕ ದೇಶದ ಬಹುತೇಕ ಪ್ರದೇಶಗಳ ಅಭಿಮಾನಿಗಳಿಗೆ ಕ್ರಿಕೆಟ್​ ಹಬ್ಬದ ರಸದೌತಣ ಉಣಬಡಿಸಲು ಬಿಸಿಸಿಐ ಮುಂದಾಗಿದೆ. ಹಾಗಾದರೆ ವಿಶ್ವ ಕಪ್​ ನಡೆಯುವ ಸ್ಟೇಡಿಯಮ್​ಗಳು ಯಾವುವು, ಅವುಗಳ ವಿಶೇಷತೆಗಳೇನು ಎಂಬುದನ್ನು ನೋಡೋಣ.

ನರೇಂದ್ರ ಮೋದಿ ಸ್ಟೇಡಿಯಮ್​ ಅಹಮದಾಬಾದ್​

ಗುಜರಾತ್​ನ ಅಹಮದಾಬಾದ್​ನಲ್ಲಿ ಈ ಕ್ರೀಡಾಂಗಣದ ವಿಶ್ವದ ಅತಿದೊಡ್ಡ ಕ್ರೀಡಾ ವೇದಿಕೆ. ಏಕ ಕಾಲಕ್ಕೆ 1.32 ಲಕ್ಷ ಮಂದಿ ಪಂದ್ಯ ವೀಕ್ಷಣೆ ಮಾಡಲು ಸಾಧ್ಯವಿದೆ. ಕ್ರಿಕೆಟ್​ ವಿಚಾರಕ್ಕೆ ಬಂದರೂ ವಿಶ್ವದ ಬೃಹತ್​ ಹಾಗೂ ಸುಸಜ್ಜಿತ ಸ್ಟೇಡಿಯಮ್​. ಇದು ಹಿಂದಿನ ಮೊಟೆರಾ ಸ್ಟೇಡಿಯಮ್ ಆಗಿತ್ತು. ಅಭಿವೃದ್ಧಿ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಇಡಲಾಗಿದೆ. ಈ ಸ್ಟೇಡಿಯಮ್​ ಈ ಬಾರಿಯ ವಿಶ್ವ ಕಪ್​ನಲ್ಲಿ ಅತಿ ಹೆಚ್ಚು ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಆರಂಭಿಕ ಪಂದ್ಯ, ಪ್ಲೇಆಫ್​ ಪಂದ್ಯಗಳು ಹಾಗೂ ಫೈನಲ್ ಇಲ್ಲೇ ನಡೆಯಲಿವೆ.

2021ರಲ್ಲಿ ನವೀಕರಿಸಲಾದ 132,000 ಸಾಮರ್ಥ್ಯದ ಸ್ಥಳವು ಕ್ರಿಕೆಟ್​ ಇತಿಹಾಸಕ್ಕೆ ಹೊಸತೇನಲ್ಲ. ಮಾರ್ಚ್ 1987ರಲ್ಲಿ, ಸುನಿಲ್ ಗವಾಸ್ಕರ್ ಈ (ಹಿಂದಿನ ಸರ್ದಾರ್​ ವಲ್ಲಭಾಬಾಯ್​ ಪಟೇಲ್​) ಕ್ರೀಡಾಂಗಣದಲ್ಲಿ 10,000 ಟೆಸ್ಟ್ ರನ್​ಗಳ ಗಡಿದಾಟಿದ ವಿಶ್ವದ ಮೊದಲ ಬ್ಯಾಟರ್​ ಎಂಬ ಖ್ಯಾತಿ ಪಡೆದಿದ್ದು ಇಲ್ಲೇ. ಅಮೆರಿಕದ ಮಾಜಿ ರಾಷ್ಟ್ರಾಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾರತಕ್ಕೆ ಬಂದಿದ್ದ ವೇಳೆ ಅವರು ಇದೇ ಸ್ಟೇಡಿಯಮ್​ನಿಂದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು.

ಕ್ರೀಡಾಂಗಣವು ಕಳೆದ ಆವೃತ್ತಿಯ ಐಪಿಎಲ್ ಫೈನಲ್​ಗೆ ಆತಿಥ್ಯ ವಹಿಸಿದೆ. 2011 ರಲ್ಲಿ, ಭಾರತ ವಿಶ್ವ ಕಪ್ ಗೆದ್ದಿತ್ತು. ಆ ವರ್ಷ ಈ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಸೆಮಿಫೈನಲ್​ನಲ್ಲಿ ಸೋಲಿಸಿದ್ದು ಇಲ್ಲೇ.

ಇಲ್ಲಿನ ಪಿಚ್​ ಆರಂಭದಲ್ಲಿ ವೇಗಿಗಳಿಗೆ ನೆರವಾಗುತ್ತದೆ. ಹಾಗೆಂದು ಸಂಪೂರ್ಣವಾಗಿ ವೇಗಿಗಳಿಗೆ ಮೀಸಲಾಗಿಲ್ಲ. ಸ್ಪಿನ್ನರ್​ಗಳಿಗೂ ಪ್ರಭಾವ ಬೀರಲು ಅವಕಾಶ ನೀಡುವ ಮೂಲಕ ಸಮತೋಲಿತ ಪಿಚ್ ಎನಿಸಿಕೊಂಡಿದೆ. ಬ್ಯಾಟರ್​ಗಳಿಗೂ ಇಲ್ಲಿ ಹಬ್ಬ ಮಾಡುವ ಎಲ್ಲ ಅವಕಾಶ ಉಂಟು.

ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

ಇದು ಕರ್ನಾಟಕದಲ್ಲಿರುವ ಏಕೈಕ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​. ಮಹಾನಗರದ ಹೃದಯಭಾಗದಲ್ಲಿಯೇ ಇರುವುದು ಇದರ ಹೆಗ್ಗಳಿಕೆ. ಜತೆಗೆ ಬಸ್​, ಟ್ಯಾಕ್ಸಿ ಹಾಗೂ ಮೆಟ್ರೊ ಸೇರಿದಂತೆ ಎಲ್ಲ ಸೇರಿದಂತೆ ಎಲ್ಲ ರೀತಿಯ ಸಾರಿಗೆ ವ್ಯವಸ್ಥೆಯನ್ನು ಒಳಗೊಂಡಿದೆ. ಈ ಕ್ರೀಡಾಂಗಣವು 34,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣವು ದೇಶದ ಅತ್ಯುತ್ತಮ ಒಳಚರಂಡಿ ವ್ಯವಸ್ಥೆಯನ್ನು ಹೊಂದಿದೆ. ಮಳೆ ಎಷ್ಟೇ ಜೋರಾಗಿ ಬಂದರೂ ಕೇವಲ 15 ನಿಮಿಷಗಳ ನಂತರ ಸಬ್ ಏರ್ ವ್ಯವಸ್ಥೆಯು ಮೂಲಕ ಸ್ಟೇಡಿಯಮ್ ಅನ್ನು ಆಟಕ್ಕೆ ಸಜ್ಜುಗೊಳಿಸಲು ಸಾಧ್ಯವಿದೆ. ಈ ವರ್ಷದ ಆರಂಭದಲ್ಲಿ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಪಂದ್ಯ ಪ್ರಾರಂಭವಾಗುವ ಮೊದಲು ಭಾರಿ ಮಳೆ ಸುರಿದ ಹೊರತಾಗಿಯೂ ಪೂರ್ಣ ಪಂದ್ಯ ಆಡಿಸಲಾಗಿತ್ತು

ಇದನ್ನೂ ಓದಿ : ICC World Cup 2023: ವಿಶ್ವಕಪ್​ ಆಡುವ 10 ತಂಡಗಳ ಆಟಗಾರರ ಪಟ್ಟಿ

ಐದು ದಶಕಗಳಷ್ಟು ಹಳೆಯದಾದ ಈ ಕ್ರೀಡಾಂಗಣವು ವೆಸ್ಟ್ ಇಂಡೀಸ್ ಕ್ರಿಕೆಟ್ ದಂತಕಥೆ ವಿವಿಯನ್ ರಿಚರ್ಡ್ಸ್ ಅವರ ಚೊಚ್ಚಲ ಟೆಸ್ಟ್ ಪಂದ್ಯ ಮತ್ತು 1996 ರ ವಿಶ್ವ ಸುಂದರಿ ಸ್ಪರ್ಧೆಯಂತಹ ಪ್ರಮುಖ ಘಟನೆಗಳಿಗೆ ಆತಿಥ್ಯ ವಹಿಸಿದೆ. ಚಿನ್ನಸ್ವಾಮಿ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ತಂಡಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ನ ತವರು ಮೈದಾನವಾಗಿದೆ. ಸುಮಾರು 65 ಮೀಟರ್ ಬೌಂಡರಿ ಗಾತ್ರಗಳನ್ನು ಹೊಂದಿರುವ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಹಾಲಿ ಟೂರ್ನಿಯಲ್ಲಿ ಬಿಗ್ ಸ್ಕೋರ್​ ಪಂದ್ಯಗಳಿಗೆ ಸಾಕ್ಷಿಯಾಗುವುದರಲ್ಲಿ ಅನುಮಾನವೇ ಇಲ್ಲ. ಇಲ್ಲಿನ ಪಿಚ್​​ ಬ್ಯಾಟರ್​ಗಳ ಸ್ವರ್ಗ. ಬೌಲರ್​ಗಳಿಗೆ ದೊಡ್ಡ ನಿರೀಕ್ಷೆ ಹುಟ್ಟಿಸದು. ಆದರೂ ಸ್ಪಿನ್ನರ್​​ಗಳಿಗೆ ಸ್ವಲ್ಪ ಕೈ ಚಳಕ ತೋರಬಹುದು.

ಈ ಬಾರಿ ಐದು ಪಂದ್ಯಗಳಿಗೆ ಈ ಸ್ಟೇಡಿಯಮ್​ ಆತಿಥ್ಯ ವಹಿಸಲಿದೆ. ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ (20 ಅಕ್ಟೋಬರ್ 02:00 ಗಂಟೆಗೆ), ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ (26 ಅಕ್ಟೋಬರ್ 02: 00 ಗಂಟೆಗೆ), ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ (04 ನವೆಂಬರ್ 10:30 ಕ್ಕೆ), ನ್ಯೂಜಿಲೆಂಡ್ ವಿರುದ್ಧ ಶ್ರೀಲಂಕಾ (09 ನವೆಂಬರ್ ಮಧ್ಯಾಹ್ನ 02:00 ಕ್ಕೆ), ಭಾರತ-ನೆದರ್ಲ್ಯಾಂಡ್ಸ್ (12 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ),

2011ರಲ್ಲಿ ಐರ್ಲೆಂಡ್​​ನ ಕೆವಿನ್ ಒ’ಬ್ರಿಯಾನ್ ಏಕದಿನ ವಿಶ್ವಕಪ್​ನಲ್ಲಿ ಕೇವಲ 50 ಎಸೆತಗಳಲ್ಲಿ ಅತಿ ವೇಗದ ಶತಕ ಬಾರಿಸಿದ್ದರು. ಈ ಕ್ರೀಡಾಂಗಣವು 2000ರಿಂದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ನೆಲೆಯಾಗಿದೆ.

ಎಂ.ಎ. ಚಿದಂಬರಂ ಕ್ರೀಡಾಂಗಣ, ಚೆನ್ನೈ

ಹಿಂದೂ ಮಹಾಸಾಗರದ ಪಕ್ಕದಲ್ಲಿರುವ ಎಂ.ಎ.ಚಿದಂಬರಂ ಕ್ರೀಡಾಂಗಣವು ಎಲ್ಲಾ ಸ್ಥಳಗಳಲ್ಲಿ ಅತ್ಯಂತ ಆರ್ದ್ರ ವಾತಾವರಣ ಹೊಂದಿರುವ ಕ್ರಿಕೆಟ್​ ಸ್ಟೇಡಿಯಮ್ ಆಗಿದೆ. 1952 ರಲ್ಲಿ ಭಾರತದ ನಾಯಕ ವಿಜಯ್ ಹಜಾರೆ ಅವರ ತಂಡವು ಡೊನಾಲ್ಡ್ ಕಾರ್ ಅವರ ನೇತೃತ್ವದ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತವು ಟೆಸ್ಟ್ ಕ್ರಿಕೆಟ್​​ನಲ್ಲಿ ಮೊದಲ ಗೆಲುವನ್ನು ದಾಖಲಿಸಿದ ಕ್ರೀಡಾಂಗಣ ಇದು.

ಮರೀನಾ ಬೀಚ್​ನಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಈ ಕ್ರೀಡಾಂಗಣ 38,200 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. 1986ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಸಮಬಲ ಟೆಸ್ಟ್ ಪಂದ್ಯ ನಡೆದಿದ್ದು ಇಲ್ಲೇ.

ಚೆಪಾಕ್ ಕ್ರೀಡಾಂಗಣ ಎಂದೂ ಕರೆಯಲ್ಪಡುವ ಮುತ್ತಯ್ಯ ಅಣ್ಣಾಮಲೈ (ಎಂಎ) ಚಿದಂಬರಂ ಕ್ರೀಡಾಂಗಣಕ್ಕೆ ಬಿಸಿಸಿಐನ ಮಾಜಿ ಅಧ್ಯಕ್ಷ ಎಂ.ಎ.ಚಿದಂಬರಂ ಚೆಟ್ಟಿಯಾರ್ ಅವರ ಹೆಸರನ್ನು ಇಡಲಾಗಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಂತರ ಇದು ಭಾರತದ ಎರಡನೇ ಅತ್ಯಂತ ಹಳೆಯ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಎಂಎ ಚಿದಂಬರಂ ಕ್ರೀಡಾಂಗಣವು ಎರಡನೇ ಅತ್ಯಂತ ಯಶಸ್ವಿ ಮತ್ತು ಅತ್ಯಂತ ಜನಪ್ರಿಉ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ನ ತವರು ಮೈದಾನವಾಗಿದೆ. ಇದು ಮುಂಬರುವ ವಿಶ್ವಕಪ್ ನಲ್ಲಿ 5 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.

ಭಾರತ-ಆಸ್ಟ್ರೇಲಿಯಾ (08 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್ (13 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ನ್ಯೂಜಿಲೆಂಡ್ ವಿರುದ್ಧ ಅಫ್ಘಾನಿಸ್ತಾನ (18 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಅಫ್ಘಾನಿಸ್ತಾನ ವಿರುದ್ಧ ಪಾಕಿಸ್ತಾನ (23 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಪಾಕಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ (27 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ).

ಇದು ಸ್ಪಿನ್ ಬೌಲರ್​ಗಳ ಸ್ವರ್ಗ. ಇಲ್ಲಿ ಸ್ಪಿನ್ನರ್​ಗಳನ್ನು ಎದುರಿಸಲು ಬ್ಯಾಟ್ಸಮನ್​ಗಳು ಹೆದರುತ್ತಾರೆ. ಇಲ್ಲಿಯೂ ಸ್ಪರ್ಧಾತ್ಮಕ ಪಂದ್ಯಗಳು ನಡೆಯುತ್ತವೆ . ದೊಡ್ಡ ಸ್ಕೋರ್​​ನ ಪಂದ್ಯಗಳಿಗೆ ಆಸ್ಪದವಿಲ್ಲ.

ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ

ಭಾರತದ ರಾಜಧಾನಿಯಲ್ಲಿರುವ ಈ ಸ್ಟೇಡಿಯಯಮ್​ ದೇಶದ ಅತ್ಯಂತ ಐತಿಹಾಸಿಕ ಕ್ರಿಕೆಟ್​ ತಾಣಗಳಲ್ಲಿ ಒಂದಾಗಿದೆ. 2005ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 35ನೇ ಶತಕ ಬಾರಿಸುವ ಮೂಲಕ ಸುನಿಲ್ ಗವಾಸ್ಕರ್ ಅವರ ದಾಖಲೆಯನ್ನು ಮುರಿದಿದ್ದು ಇಲ್ಲೆ. ಕ್ರೀಡಾಂಗಣವು ಈ ಹಿಂದೆ ನಿಧಾನಗತಿಯ ಪಿಚ್​ಗಳನ್ನು ಹೊಂದಿತ್ತು. ಆದರೆ ಸ್ಟೇಡಿಯಮ್​ ನವೀಕರಣದ ಬಳಿಕ ದೊಡ್ಡ ಸ್ಕೋರಿಂಗ್ ಪಂದ್ಯಗಳು ನಡೆಯುತ್ತಿವೆ.

ಮೂಲತಃ 1883 ರಲ್ಲಿ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣವಾಗಿ ಸ್ಥಾಪಿಸಲಾಯಿತು. ಹತ್ತಿರದ ಕೋಟ್ಲಾ ಕೋಟೆಯ ಹೆಸರನ್ನು ಇಡಲಾಗಿದೆ, ಇದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಂತರ ಭಾರತದ ಎರಡನೇ ಅತ್ಯಂತ ಹಳೆಯ ಸಕ್ರಿಯ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ. ಸೆಪ್ಟೆಂಬರ್ 12, 2019 ರಂದು, ಮಾಜಿ ಡಿಡಿಸಿಎ ಅಧ್ಯಕ್ಷ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನೆನಪಿಗಾಗಿ ಕ್ರೀಡಾಂಗಣಕ್ಕೆ ಮರುನಾಮಕರಣ ಮಾಡಲಾಯಿತು. 2017 ರ ಹೊತ್ತಿಗೆ, ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡವು 28 ವರ್ಷಗಳಿಂದ ಈ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನು ಮತ್ತು 10 ವರ್ಷಗಳಿಗಿಂತ ಹೆಚ್ಚು ಕಾಲ ಏಕದಿನ ಪಂದ್ಯವನ್ನು ಸೋತಿಲ್ಲ.

ಇಲ್ಲಿ ಈ ಬಾರಿ ಐದು ಪಂದ್ಯಗಳು ನಡೆಯಲಿವೆ. ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ (07 ಅಕ್ಟೋಬರ್ 02:00 ಗಂಟೆಗೆ), ಭಾರತ-ಅಫ್ಘಾನಿಸ್ತಾನ, (11 ಅಕ್ಟೋಬರ್ 02:00 ಗಂಟೆಗೆ), ಅಫ್ಘಾನಿಸ್ತಾನ ವಿರುದ್ಧ ಇಂಗ್ಲೆಂಡ್ (15 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಆಸ್ಟ್ರೇಲಿಯಾ ವಿರುದ್ಧ ನೆದರ್ಲ್ಯಾಂಡ್ಸ್ (25 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ (06 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ).

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ಧರ್ಮಶಾಲಾ

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ದೇಶದ ಹೊಸ ಸ್ಟೇಡಿಯಂಗಳಲ್ಲಿ ಒಂದಾಗಿದೆ. 2013 ರಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದ ಬಳಿಕ ಅಂತರಾಷ್ಟ್ರೀಯ ಸ್ಟೇಡಿಯಮ್​ ಆಗಿ ಹೊರಹೊಮ್ಮಿತು 64 ಮೀಟರ್ ಬೌಂಡರಿಯೊಂದಿಗೆ ಇಲ್ಲಿ ದೊಡ್ಡ ಮೊತ್ತ ಗ್ಯಾರಂಟಿ. ಇದು ಬ್ಯಾಟರ್​ಗಳಿಗೆ ಅನುಕೂಲಕರ. ಸ್ವಲ್ಪ ಮಟ್ಟಿಗೆ ಸ್ಪಿನ್ನರ್​ಗಳಿಗೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಸಮುದ್ರ ಮಟ್ಟದಿಂದ 1,457 ಮೀಟರ್ ಎತ್ತರದಲ್ಲಿದೆ. ಎಚ್ಪಿಸಿಎ ಕ್ರೀಡಾಂಗಣವು ವಿಶ್ವದ ಅತ್ಯಂತ ಸುಂದರವಾದ ಒಂದಾಗಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿಗೆ 5 ಪಂದ್ಯಗಳು ಆತಿಥ್ಯ ವಹಿಸಲಿವೆ. ಇಲ್ಲಿ ಐದು ಪಂದ್ಯಗಳು ನಡೆಯಲಿವೆ.

ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶ (07 ಅಕ್ಟೋಬರ್ 10:30 ಕ್ಕೆ), ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ (10 ಅಕ್ಟೋಬರ್ 10:30 ಕ್ಕೆ ಬೆಳಿಗ್ಗೆ 10:30), ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ (17 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಭಾರತ-ನ್ಯೂಜಿಲೆಂಡ್ (22 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲೆಂಡ್ (28 ಅಕ್ಟೋಬರ್ 10:30 ಕ್ಕೆ)

ಈಡನ್ ಗಾರ್ಡನ್ಸ್, ಕೋಲ್ಕತಾ

ನರೇಂದ್ರ ಮೋದಿ ಕ್ರೀಡಾಂಗಣದ ನವೀಕರಣಕ್ಕೆ ಮೊದಲು, ಈಡನ್ ಗಾರ್ಡನ್ಸ್ 68,000 ಪ್ರೇಕ್ಷಕರ ಸಾಮರ್ಥ್ಯದೊಂದಿಗೆ ಭಾರತದ ಅತಿದೊಡ್ಡ ಸ್ಟೇಡಿಯಮ್​ ಎಂಬ ಹೆಗ್ಗಳಿಕೆ ಮಾಡಿತ್ತು. ಇದು 1987 ರಲ್ಲಿ ವಿಶ್ವಕಪ್ ಫೈನಲ್​ಗೆ ಆತಿಥ್ಯ ವಹಿಸಿದ ಮೊದಲ ಕ್ರೀಡಾಂಗಣ ಇದಾಗಿದೆ. ಹೂಗ್ಲಿ ನದಿಯ ಪಕ್ಕದಲ್ಲಿರುವ ಉತ್ಸಾಹಭರಿತ ಪಿಚ್ ಮತ್ತು ಗಾಳಿಯ ಪರಿಸ್ಥಿತಿಗಳು ಕೆಲವು ಅದ್ಭುತ ಏಕದಿನ ಪಂದ್ಯಗಳಿಗೆ ಸಾಕ್ಷಿಯಾಗಲಿದೆ.

1864 ರಲ್ಲಿ ನಿರ್ಮಿಸಲಾದ ಇದು ಭಾರತದ ಅತ್ಯಂತ ಹಳೆಯ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಆಗಾಗ್ಗೆ “ಭಾರತೀಯ ಕ್ರಿಕೆಟ್​​ನ ಮೆಕ್ಕಾ” ಎಂದು ಕರೆಯಲ್ಪಡುವ ಈಡನ್ ಗಾರ್ಡನ್ಸ್ ದೇಶದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ವಿಶ್ವದ ಮೂರನೇ ಅತಿದೊಡ್ಡ ಕ್ರೀಡಾಂಗಣವೂ ಹೌದು. ಇದು 68,000 ಪ್ರೇಕ್ಷಕರನ್ನು ಹಿಡಿದಿಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಬೌಲಿಂಗ್​​ ಹಾಗೂ ಬ್ಯಾಟಿಂಗ್​ಗೆ ಸಮತೋಲಿತವಾಗಿದೆ. ಭಾರತದ ಪಾಲಿಗೂ ನೆಚ್ಚಿನ ಕ್ರೀಡಾಂಗಣ,

ಇದು ಐದು ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಬಾಂಗ್ಲಾದೇಶ ವಿರುದ್ಧ ನೆದರ್ಲ್ಯಾಂಡ್ಸ್ (28 ಅಕ್ಟೋಬರ್ 02:00 ಗಂಟೆಗೆ), ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ (31 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಭಾರತ-ದಕ್ಷಿಣ ಆಫ್ರಿಕಾ (05 ನವೆಂಬರ್ ಮಧ್ಯಾಹ್ನ 02:00 ಕ್ಕೆ), ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ (11 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ) ಸೆಮಿಫೈನಲ್ (16 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ).

ವಾಂಖೆಡೆ ಕ್ರೀಡಾಂಗಣ, ಮುಂಬೈ

ಭಾರತದ ವೈವಿಧ್ಯತೆಯ ನಗರವಾದ ಮುಂಬೈನಲ್ಲಿರುವ ವಾಂಖೆಡೆ ಕ್ರೀಡಾಂಗಣವು ಅಪ್ರತಿಮ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಥಳವಾಗಿದೆ. ಇದು ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಸೆಮಿಫೈನಲ್ ಪಂದ್ಯಕ್ಕೂ ಆತಿಥ್ಯ ವಹಿಸಲಿದೆ. ಇದು 2011 ರ ಕ್ರಿಕೆಟ್ ವಿಶ್ವಕಪ್​​ಗೆ ಮೊದಲು ಗಣನೀಯ ನವೀಕರಣಕ್ಕೆ ಒಳಗಾಗಿದೆ ಇದು 33,108 ಆಸನ ಸಾಮರ್ಥ್ಯ ಹೊಂದಿದೆ. ಹಿಂದೆ ಈ ಪಿಚ್​​ 45,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿತ್ತು. ಆದರೆ, ನವೀಕರಣದ ಬಳಿಕ ಆಸನ ಸಂಖ್ಯೆಗಳು ಕಡಿಮೆಯಾದವು.

ವಿಶಿಷ್ಟವಾದ ಕೆಂಪು-ಮಣ್ಣಿನ ಪಿಚ್ 1974 ರಲ್ಲಿ ನಿರ್ಮಾಣಗೊಂಡಿದ್ದು. ಕ್ರಿಕೆಟ್​​ನಲ್ಲಿ ಕೆಲವು ಸ್ಮರಣೀಯ ಸಾಧನೆಗಳನ್ನು ಕಂಡಿದೆ. ತನ್ನ ಇತಿಹಾಸದುದ್ದಕ್ಕೂ, ಈ ಕ್ರೀಡಾಂಗಣವು ಹಲವಾರು ಪ್ರತಿಷ್ಠಿತ ಕ್ರಿಕೆಟ್ ಮುಖಾಮುಖಿಗಳಿಗೆ ವೇದಿಕೆಯಾಗಿದೆ.. 2011ರ ಕ್ರಿಕೆಟ್ ವಿಶ್ವಕಪ್​ ಫೈನಲ್ ನಡೆದಿದ್ದು ಇಲ್ಲೇ ಹಾಗೂ ಧೋನಿ ವಿನ್ನಿಂಗ್ ಸಿಕ್ಸರ್ ಹೊಡೆದಿದ್ದು ಇದೇ ಮೈದಾನದಲ್ಲಿದೆ.

ಈ ಕ್ರೀಡಾಂಗಣವು ಕ್ರಿಕೆಟ್​ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ತಳಪಾಯ ಹಾಕಿದ ಜಾಗ. ಇದು ಸಮತೋಲಿತ ಪಿಚ್​. ಬೌಲಿಂಗ್​ ಹಾಗೂ ಬ್ಯಾಟಿಂಗ್ ಎರಡಕ್ಕೂ ನೆರವಾಗುತ್ತದೆ. ಆದರೆ, ಇಬ್ಬನಿ ಪರಿಣಾಮ ಇಲ್ಲಿ ಹೆಚ್ಚಿರುತ್ತದೆ.

ಎಂಸಿಎ ಇಂಟರ್​ನ್ಯಾಷನಲ್ ಸ್ಟೇಡಿಯಂ, ಪುಣೆ

37,000 ಕ್ಕೂ ಹೆಚ್ಚು ಆಸನ ಸಾಮರ್ಥ್ಯ ಹೊಂದಿರುವ ಎಂಸಿಎ ಕ್ರೀಡಾಂಗಣವು ಮುಂಬರುವ ವಿಶ್ವಕಪ್​​ನ 5 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. 2007 ರಲ್ಲಿ ಪುಣೆ-ಮುಂಬೈ ಎಕ್ಸ್​ಪ್ರೆಸ್​ ವೇ ಸಮೀಪವಿರು ಈ ಸ್ಟೇಡಿಯಮ್ ಉದ್ಘಾಟನೆಗೊಂಡಿತು. ಇಂಗ್ಲಿಷ್ ವಾಸ್ತುಶಿಲ್ಪಿ ಮೈಕೆಲ್ ಹಾಪ್ಕಿನ್ಸ್ ಇದನ್ನು ನಿರ್ಮಿಸಿದ “ಆಳವಾದ ಬಟ್ಟಲಿನಂತೆ” ನಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಟೇಡಿಯಮ್​ ಐದು ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಭಾರತ-ಬಾಂಗ್ಲಾದೇಶ (19 ಅಕ್ಟೋಬರ್ 02:00 ಗಂಟೆಗೆ), ಅಫ್ಘಾನಿಸ್ತಾನ ವಿರುದ್ಧ ಶ್ರೀಲಂಕಾ (30 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ (01 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ), ಇಂಗ್ಲೆಂಡ್ ವಿರುದ್ಧ ನೆದರ್ಲ್ಯಾಂಡ್ಸ್ (08 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ), ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ (11 ನವೆಂಬರ್ 10:30 ಕ್ಕೆ). ಇದು ಕೂಡ ಸಮತೋಲಿತ ಪಿಚ್. ಮುಂಬಯಿ ರೀತಿ ಇಬ್ಬನಿ ಪರಿಣಾಮ ಇಲ್ಲ. ಆದರೆ, ಸ್ಪಿನ್ನರ್​ಗಳಿಗೆ ಹೆಚ್ಚು ಅನುಕೂಲಕರ.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್

ಹೈದರಾಬಾದ್​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿರುವ ಈ ಕ್ರೀಡಾಂಗಣವು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. 55,000 ಆಸನ ಸಾಮರ್ಥ್ಯ ಇಲ್ಲಿದೆ. ಈ ಸ್ಟೇಡಿಯಮ್​ನಲ್ಲಿ ತಾಪಮಾನ ಹೆಚ್ಚಿರುತ್ತದೆ. ಬಿಗ್ ಸ್ಕೋರ್ ಮ್ಯಾಚ್​ಗಳನ್ನು ಆಯೋಜಿಸಲು ಸಾಧ್ಯವಿದೆ.

2005 ರಲ್ಲಿ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಿಸುವ ಮೊದಲು, ಹೈದರಾಬಾದ್​ನ ಎಲ್ಲಾ ಅಂತಾರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಆಡಲಾಗುತ್ತಿತ್ತು. 18 ವರ್ಷಗಳಲ್ಲಿ ಕ್ರೀಡಾಂಗಣದ ವ್ಯಾಪ್ತಿ ಗಗನಕ್ಕೇರಿದೆ. ನೆದರ್ಲ್ಯಾಂಡ್ಸ್ ವಿರುದ್ಧ ಪಾಕಿಸ್ತಾನ (06 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ) , ನೆದರ್ಲ್ಯಾಂಡ್ಸ್ ವಿರುದ್ಧ ನ್ಯೂಜಿಲೆಂಡ್ (09 ಅಕ್ಟೋಬರ್ 02:00 ಗಂಟೆಗೆ) ಪಾಕಿಸ್ತಾನ ವಿರುದ್ಧ ಶ್ರೀಲಂಕಾ ,(10 ಅಕ್ಟೋಬರ್ 02:00 ಗಂಟೆಗೆ) ಇಲ್ಲಿ ಭಾರತ ತಂಡಕ್ಕೆ ಯಾವುದೇ ಪಂದ್ಯಗಳು ಇಲ್ಲ.

ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣ, ಲಖನೌ

2017 ರಲ್ಲಿ ನಿರ್ಮಿಸಲಾದ ಲಕ್ನೋದ ಕ್ರಿಕೆಟ್ ಕ್ರೀಡಾಂಗಣವು ಈ ಹಿಂದೆ ಹೆಚ್ಚಿನ ಸಂಖ್ಯೆಯ ಅಂತರರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸಿಲ್ಲ. ಆದರೆ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಕ್ಕೆ ಪರಿಸ್ಥಿತಿಗಳು ಪೂರಕವಾಗಿವೆ. ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಕ್ರೀಡಾಂಗಣವನ್ನು ತಮ್ಮ ತವರು ಸ್ಥಳವೆಂದು ಹೇಳಿಕೊಂಡಿದೆ. ಅಕ್ಟೋಬರ್ 12 ರಂದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ವೇದಿಕೆ ಸಿದ್ಧವಾಗಲಿದೆ, ಅಲ್ಲಿ ಕ್ರೀಡಾಂಗಣವು ತನ್ನ ಮೊದಲ ವಿಶ್ವಕಪ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಐಪಿಎಲ್​ ಪಂದ್ಯಗಳನ್ನು ವೀಕ್ಷಿಸಿ ಹೇಳುವುದಾದರೆ ನಿಧಾನಗತಿಯ ಪಿಚ್​ ಇದು. ಸಾಧಾರಣ ಸ್ಕೋರ್ ಬಾರಿಸಲೂ ಇಲ್ಲಿ ಸಾಧ್ಯವಾಗುವುದಿಲ್ಲ. ಬೌಲರ್​ಗಳಿಗೆ ಪರಾಕ್ರಮ ಮೆರೆಯಲೂ ಸೂಕ್ತ ಜಾಗ. ಮೈದಾನದಲ್ಲಿ ಪ್ಯಾಚ್​ಗಳು ಹೆಚ್ಚಿವೆ. ಇದು ಭಾರತದ ಐದನೇ ಅತಿದೊಡ್ಡ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವಾಗಿದ್ದು, 50,000 ಪ್ರೇಕ್ಷಕರನ್ನು ಹಿಡಿದಿಡುವ ಸಾಮರ್ಥ್ಯವನ್ನು ಹೊಂದಿದೆ.

ಇಲ್ಲಿ ಐದು ವಿಶ್ವ ಕಪ್​ ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ (02 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ (16 ಅಕ್ಟೋಬರ್ 02:00 ಗಂಟೆಗೆ), ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ (21 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಭಾರತ-ಇಂಗ್ಲೆಂಡ್ (29 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಅಫ್ಘಾನಿಸ್ತಾನ ವಿರುದ್ಧ ನೆದರ್ಲ್ಯಾಂಡ್ಸ್ (03 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

Rohit Sharma: ವಿಶ್ವಕಪ್​ ಆಡಿದ ಟೀಮ್​ ಇಂಡಿಯಾದ ಹಲವು ಆಟಗಾರರು ಮುಂದಿನ ಸರಣಿಗೂ ಮುನ್ನ ಕೊಂಚ ರಿಲ್ಯಾಕ್ಸ್ ಆಗುವ ನಿಟ್ಟಿನಲ್ಲಿ ತಮ್ಮ ಕುಟುಂಬದ ಜತೆ ನೆಚ್ಚಿನ ತಾಣಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್​ ಗೆದ್ದು ತವರಿಗೆ ಮರಳಿ ಎಲ್ಲ ಅಭಿನಂದನಾ ಕಾರ್ಯಕ್ರಮ ಮತ್ತು ಸನ್ಮಾನಗಳನ್ನು ಸ್ವೀಕರಿಸಿರುವ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮ(Rohit Sharma) ಇದೀಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ರೋಹಿತ್ ತಮ್ಮ ಪತ್ನಿ, ಮಗಳ ಜತೆ ಮುಂಬೈ ವಿಮಾನ ನಿಲ್ದಾಣದಿಂದ ವಿದೇಶ ಪ್ರಯಾಣ ಬೆಳೆಸಿದ ವಿಡಿಯೊ ವೈರಲ್​ ಆಗಿದೆ. ರೋಹಿತ್​ ಮಾತ್ರವಲ್ಲದೆ ಸೂರ್ಯಕುಮಾರ್ ಯಾದವ್ ಕೂಡಾ ಪತ್ನಿ ಜತೆ ಪ್ರವಾಸಕ್ಕೆ ತೆರಳಿದ್ದಾರೆ. ಒಟ್ಟಾರೆ ವಿಶ್ವಕಪ್​ ಆಡಿದ ಟೀಮ್​ ಇಂಡಿಯಾದ ಹಲವು ಆಟಗಾರರು ಮುಂದಿನ ಸರಣಿಗೂ ಮುನ್ನ ಕೊಂಚ ರಿಲ್ಯಾಕ್ಸ್ ಆಗುವ ನಿಟ್ಟಿನಲ್ಲಿ ತಮ್ಮ ಕುಟುಂಬದ ಜತೆ ನೆಚ್ಚಿನ ತಾಣಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

ರೋಹಿತ್ ನಾಯಕತ್ವದಲ್ಲಿ, ಕಳೆದ ವಾರ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು. 2007 ರ ಉದ್ಘಾಟನಾ ಆವೃತ್ತಿಯ ನಂತರ ಇದು ಭಾರತಕ್ಕೆ ಒಲಿದ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿತ್ತು. ಮೆನ್ ಇನ್ ಬ್ಲೂ ಈ ಹಿಂದೆ ರೋಹಿತ್ ಅವರ ನಾಯಕತ್ವದಲ್ಲಿ ಎರಡು ಫೈನಲ್‌ಗಳನ್ನು ಆಡಿತ್ತು. ಏಕದಿನ ವಿಶ್ವಕಪ್ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್. ಇಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು.

ಇದನ್ನೂ ಓದಿ Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

ಚಾಂಪಿಯನ್ಸ್​ ಟ್ರೋಫಿಗೂ ರೋಹಿತ್​ ನಾಯಕ


ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮ(Rohit Sharma) ಭಾರತ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(BCCI secretary Jay Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿ(Champions Trophy) ಟೂರ್ನಿಯಲ್ಲಿಯೂ ರೋಹಿತ್​ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂಬರುವ ಚಾಂಪಿಯನ್ಸ್ ಟ್ರೋಫಿ 2025 ಮತ್ತು ಮುಂದಿನ ವರ್ಷ ನಡೆಯಲಿರುವ ಮೂರನೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ರೋಹಿತ್​ ಶರ್ಮ ನಾಯಕತ್ವದಲ್ಲಿ ಚಾಂಪಿಯನ್​ ಆಗಲಿದೆ” ಎಂದು ಜಯ್​ ಶಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

2025ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ತಿಳಿದುಬಂದಿದೆ. ಕೆಲದಿನಗಳ ಹಿಂದಷ್ಟೇ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌, ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಿಗದಿ ಮಾಡಿತ್ತು. ಆದರೆ, ಭದ್ರತೆಯ ಕಾರಣವನ್ನು ನೀಡಿರುವ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

Continue Reading

ಕ್ರೀಡೆ

Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

Hasin Jahan: ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

VISTARANEWS.COM


on

Hasin Jahan: Divorced wife who scolded Shami unnecessarily as 'pack of dogs'; The video is viral
Koo

ಕೋಲ್ಕತ್ತಾ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ನಾಯಿಗೆ ಹೋಲಿಕೆ ಮಾಡಿ ಪರೋಕ್ಷವಾಗಿ ಹೀಯಾಳಿಸಿದ್ದಾರೆ.

ಹೌದು, ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಣ್ಣು ಮಿಟುಕಿಸುವ ಒಂದು ನಿಮಿಷದ ವಿಡಿಯೊ ಹಂಚಿಕೊಂಡಿರುವ ಹಸೀನ್ ಜಹಾನ್, ನಾಯಿಗಳ ದಂಡು ಹೆಣ್ಣು ಮಕ್ಕಳ ಹಿಂದಿನಿಂದ ಮಾತ್ರ ಬೊಗಳುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ಎಂದ ಅನುಮಾನ ಮೂಡಿದೆ.

ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

ಕೆಲವು ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರೋಹಿತ್​ ಶರ್ಮ ಅವರು ತಮ್ಮ ಪುಟ್ಟ ಮಗಳು ಸಮೈರಾ ತೊಡೆ ಮೇಲೆ ಹಾಯಾಗಿ ಮಲಗಿರುವ ಫೋಟೊ ಹಂಚಿಕೊಂಡಿದ್ದ ಹಸೀನ್ ಜಹಾನ್, ಹೆಚ್ಚಿನ ತಂದೆಯಂದಿರು ತಮ್ಮ ಪುಟ್ಟ ಮಗಳನ್ನು ದೇವರಂತೆ ಕಂಡು ಅವರಿಂದ ಶಾಂತಿ ಕಂಡುಕೊಳ್ಳುತ್ತಾರೆ. ಮತ್ತು ಕೆಲವು ತಂದೆಯರು ವೇಶ್ಯೆಯರ ಮಡಿಲಲ್ಲಿ!. ಅಲ್ಲಾಹು ಯಾವುದೇ ಮಗಳಿಗೆ ಇಂತಹ ಗುಣವಿಲ್ಲದ ತಂದೆಯನ್ನು ಎಂದಿಗೂ ನೀಡದಿರಲಿ. ಆಮೀನ್. ನನ್ನ ಪುಟ್ಟ ಮಗಳಿಗೆ ತಾಳ್ಮೆಯನ್ನು ನೀಡುವಂತೆ ನಾನು ಅಲ್ಲಾಹುವಿನನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್​ ಮಾಡಿ ಶಮಿಯನ್ನು ಅನಗತ್ಯವಾಗಿ ಕೆಣಕ್ಕಿದ್ದರು.

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

ಜೀವನಾಂಶ ನೀಡುತ್ತಿರುವ ಶಮಿ

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

Abhishek Sharma : ಅಭಿಷೇಕ್​ ಶತಕಕ್ಕೆ ಸಹೋದರಿಯ ಚಪ್ಪಾಳೆ, ವಿಡಿಯೊ ಶೇರ್ ಮಾಡಿದ ಕೋಮಲ್​ ಶರ್ಮಾ

Abhishek Sharma : ಅಭಿಷೇಕ್ ಶರ್ಮಾ ತಮ್ಮ ಚೊಚ್ಚಲ ಟಿ 20 ಐ ನಲ್ಲಿ ಡಕ್ ಔಟ್ ಆಗಿದ್ದರು. ತಮ್ಮ ಎರಡನೇ ಟಿ 20 ಪಂದ್ಯದಲ್ಲಿ ಅವರು ಗರಿಷ್ಠ ಲಾಭ ಪಡೆದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಿದ್ದರು. ಜಿಂಬಾಬ್ವೆ ಬೌಲರ್ ಗಳನ್ನು ಮೈದಾನದ ಎಲ್ಲಾ ಭಾಗಗಳಿಗೆ ಅಟ್ಟಿದರು. ಅವರು ತಮ್ಮ ಇನ್ನಿಂಗ್ಸ್ ಉದ್ದಕ್ಕೂ 200 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಆಡಿದ್ದಾರೆ.

VISTARANEWS.COM


on

Abhishek Sharma
Koo

ಬೆಂಗಳೂರು: ಅಭಿಷೇಕ್ ಶರ್ಮಾ (Abhishek Sharma) ತಮ್ಮ ವೃತ್ತಿ ಜೀವನದ ಎರಡನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ತಮ್ಮ ಚೊಚ್ಚಲ ಟಿ 20 ಶತಕ ಗಳಿಸಿದ್ದರು. ಇದರೊಂದಿಗೆ ಭಾರತಕ್ಕೆ ಜಿಂಬಾಬ್ವೆ ವಿರುದ್ಧ 100 ರನ್ ಗಳ ಗೆಲುವು ಸಿಕ್ಕಿದ್ದು, ಐದು ಪಂದ್ಯಗಳ ಸರಣಿಯಲ್ಲಿ ಸಮಬಲದ ಸಾಧನೆ ಮಾಡಿದೆ.

ಅಭಿಷೇಕ್ ಶರ್ಮಾ ತಮ್ಮ ಚೊಚ್ಚಲ ಟಿ 20 ಐ ನಲ್ಲಿ ಡಕ್ ಔಟ್ ಆಗಿದ್ದರು. ತಮ್ಮ ಎರಡನೇ ಟಿ 20 ಪಂದ್ಯದಲ್ಲಿ ಅವರು ಗರಿಷ್ಠ ಲಾಭ ಪಡೆದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಿದ್ದರು. ಜಿಂಬಾಬ್ವೆ ಬೌಲರ್ ಗಳನ್ನು ಮೈದಾನದ ಎಲ್ಲಾ ಭಾಗಗಳಿಗೆ ಅಟ್ಟಿದರು. ಅವರು ತಮ್ಮ ಇನ್ನಿಂಗ್ಸ್ ಉದ್ದಕ್ಕೂ 200 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಆಡಿದ್ದಾರೆ. ಅವರು 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಗಳಿಸಿದ್ದರು ಹಾಗೂ ಮುಂದಿನ 13 ಎಸೆತಗಳಲ್ಲಿ ತಮ್ಮ ಮುಂದಿನ 50 ರನ್ ಗಳಿಸಿದರು.

ಟಿ 20 ಪಂದ್ಯಗಳಲ್ಲಿ ಸಿಕ್ಸರ್​ನೊಂದಿಗೆ ಇನಿಂಗ್ಸ್ ಆರಂಭಿಸಿದ್ದರು ಮತ್ತು ಸತತ ಮೂರು ಸಿಕ್ಸರ್​ಗಳೊಂದಿಗೆ 100 ರನ್ ಗಳಿಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸಿಕ್ಸರ್​ ಮೂಲಕ ಶತಕ ಗಳಿಸಿದ ಆರನೇ ಭಾರತೀಯ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ತಮ್ಮ ಚೊಚ್ಚಲ ಟಿ 20 ಐ ಶತಕವನ್ನು ಗಳಿಸಲು ಕಡಿಮೆ ಇನ್ನಿಂಗ್ಸ್ (2) ತೆಗೆದುಕೊಂಡ ದಾಖಲೆಯೂ ಅವರ ಹೆಸರಿನಲ್ಲಿದೆ.

ಋತುರಾಜ್ ಗಾಯಕ್ವಾಡ್ ಅವರೊಂದಿಗೆ 37 ರನ್ ಸೇರಿಸಿದರು ಮತ್ತು 14 ನೇ ಓವರ್ ನ ಕೊನೆಯ ಎಸೆತದಲ್ಲಿ 100 ರನ್ ಗಳಿಸಿ ಔಟಾದರು. ಗಾಯಕ್ವಾಡ್ ಮತ್ತು ರಿಂಕು ಸಿಂಗ್ (22 ಎಸೆತಗಳಲ್ಲಿ 48* ರನ್) ಕೊನೆಯ ಐದು ಓವರ್​ಗಳಲ್ಲಿ 87 ರನ್​ ಸೇರಿಸಿ ಬೃಹತ್ ಮೊತ್ತವನ್ನು ಗಳಿಸಲು ಸಹಾಯ ಮಾಡಿದರು. ನಂತರ ಭಾರತೀಯ ಬೌಲರ್​ಗಳು ಜಿಂಬಾಬ್ವೆಯನ್ನು ಕೇವಲ 134 ರನ್​ಗಳಿಗೆ ಆಲೌಟ್ ಮಾಡಿದರು.

ಕುಟುಂಬದ ಸಂಭ್ರಮ

ಅಭಿಷೇಕ್​ ಶರ್ಮಾ ಸಿಕ್ಸರ್​ ಬಾರಿಸಿ ಶತಕ ದಾಖಲಿಸುತ್ತಿದ್ದಂತ ಅವರ ಕುಟುಂಬದ ಸದಸ್ಯರು ಸಂಭ್ರಸಿದ್ದಾರೆ. ಇದರ ವಿಡಿಯೊವನ್ನು ಸಹೋದರಿ ಕೋಮಲ್​ ಶರ್ಮಾ ಇಂಟರ್ನೆಟ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತಮ್ಮ ಮಗ ವಿಶೇಷ ಹೆಗ್ಗುರುತನ್ನು ತಲುಪಿದ ನಂತರ ಅವರೆಲ್ಲರೂ ನಗುವುದು ಕಂಡು ಬಂತು. ಐಪಿಎಲ್​​ನ ಅವರ ಅದ್ಭುತ ಪ್ರದರ್ಶನದ ಬಳಿಕ ಶರ್ಮಾ ಅವರನ್ನು ಸರಣಿಗಾಗಿ ಈ ಭಾರತೀಯ ತಂಡಕ್ಕೆ ಸೇರಿಸಲಾಯಿತು. ಅವರು ಎಸ್​​ಆರ್​ಎಚ್​ ಪರ 16 ಇನಿಂಗ್ಸ್​ಗಳಲ್ಲಿ 204.02 ಸ್ಟ್ರೈಕ್ ರೇಟ್​​ನಲ್ಲಿ 484 ರನ್ ಗಳಿಸಿದ್ದರು.

ಇದನ್ನೂ ಓದಿ: Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

ಹರಾರೆಯಲ್ಲಿ ನಡೆದ 2 ನೇ ಟಿ 20 ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ನಂತರ ಅಭಿಷೇಕ್ ಶರ್ಮಾ ಹರಾರೆ ಸ್ಪೋರ್ಟ್ಸ್ ಕ್ಲಬ್​ನಿಂದ ತಮ್ಮ ಕುಟುಂಬದೊಂದಿಗೆ ವಿಡಿಯೊ ಕಾಲ್ ಮೂಲಕ ಮಾತನಾಡಿದರು. ದಾಖಲೆಯ ಶತಕದ ನಂತರ ಅಭಿಷೇಕ್ ತನ್ನ ಹೆತ್ತವರೊಂದಿಗೆ ಮಾತನಾಡುವ ವೀಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ.

ಅಭಿಷೇಕ್ ಶರ್ಮಾ ಅವರ ಸಹೋದರಿ ಪಂಜಾಬ್​​ ಯುವ ಕ್ರಿಕೆಟಿಗನಿಗೆ ಬೆಂಬಲವಾಗಿದ್ದಾರೆ. ವೈದ್ಯರಾಗಿರುವ ಕೋಮಲ್, ಐಪಿಎಲ್ 2024 ರ ಋತುವಿನಾದ್ಯಂತ ಅಭಿಷೇಕ್ ಅವರೊಂದಿಗೆ ಸಮಯ ಕಳೆಯುತ್ತಿದ್ದರು. ಹರಾರೆಯಲ್ಲಿ ಶತಕದ ನಂತರ ಅಭಿಷೇಕ್ ಶರ್ಮಾ ತಮ್ಮ ಮಾರ್ಗದರ್ಶಕ ಮತ್ತು ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರೊಂದಿಗೆ ಮಾತನಾಡಿದರು. ಭಾರತೀಯ ಕ್ರಿಕೆಟ್ ಮಂಡಳಿ ಹಂಚಿಕೊಂಡ ವೀಡಿಯೊದಲ್ಲಿ, ಯುವರಾಜ್ ಅಭಿಷೇಕ್ ಅವರನ್ನು ಅಭಿನಂದಿಸುವುದನ್ನು ಕಾಣಬಹುದು.

Continue Reading

ಪ್ರಮುಖ ಸುದ್ದಿ

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Mumbai Cricket Association : ಟಿ20 ವಿಜಯೋತ್ಸವ ಬಳಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರು ಮಹಾರಾಷ್ಟ್ರ ವಿಧಾನ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಅವರನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರರು ಸ್ವಾಗತಿಸಿದ್ದರು.

VISTARANEWS.COM


on

Mumbai Cricket Association
Koo

ಬೆಂಗಳೂರು: ಟಿ 20 ವಿಶ್ವಕಪ್ 2024 ವಿಜೇತ ಭಾರತೀಯ ತಂಡದ ಸದಸ್ಯರು ಇತ್ತೀಚೆಗೆ ಮುಂಬೈನ ಐತಿಹಾಸಿಕ ವಾಂಖೆಡೆ ಸ್ಟೇಡಿಯಮ್​ನಲ್ಲಿ (wankhede stadium) ಸಂಭ್ರಮಾಚರಣೆ ಮಾಡಿದ್ದರು. ಆದರೆ, ಈ ಐತಿಹಾಸಿಕ ಸ್ಟೇಡಿಯಮ್​ ಇನ್ನು ಮುಂದೆ ಇತಿಹಾಸದ ಪುಸ್ತಕ ಸೇರುವ ಎಲ್ಲ ಸಾಧ್ಯತೆಗಳಿವೆ. ಯಾಕೆಂದರೆ ಮಹಾರಾಷ್ಟ್ರ ಕ್ರಿಕೆಟ್​ ಸಂಸ್ಥೆಯು (Mumbai Cricket Association) ಒಂದು ಲಕ್ಷ ಮಂದಿ ಪ್ರೇಕ್ಷಕರ ದೊಡ್ಡ ಸ್ಟೇಡಿಯಮ್ ಒಂದನ್ನು ನಿರ್ಮಿಸಲು ಮುಂದಾಗಿದೆ. ಹೀಗಾದರೆ ವಾಂಖೆಡೆ ಮೂಲೆಗುಂಪಾಗುವುದು ಖಚಿತ.

ಟಿ20 ವಿಜಯೋತ್ಸವ ಬಳಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರು ಮಹಾರಾಷ್ಟ್ರ ವಿಧಾನ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಅವರನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರರು ಸ್ವಾಗತಿಸಿದ್ದರು.

ಮಹಾರಾಷ್ಟ್ರ ಮೂಲದ ಎಲ್ಲಾ ಕ್ರಿಕೆಟಿಗರನ್ನು ರಾಜ್ಯ ಸರ್ಕಾರವು ಸನ್ಮಾನಿಸಿತ್ತು. ಆಗ ಫಡ್ನವೀಸ್ ಸಿಎಂ ಏಕನಾಥ್​ ಶಿಂಧೆ ಬಳಿ ರಾಜ್ಯದಲ್ಲಿ ಮತ್ತೊಂದು ವಿಶ್ವ ದರ್ಜೆಯ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸುವ ಆಲೋಚನೆಯನ್ನು ಪರಿಶೀಲಿಸುವಂತೆ ವಿನಂತಿಸಿದ್ದರು. ಇದು ಒಂದು ಲಕ್ಷಕ್ಕೂ ಹೆಚ್ಚು ಆಸನ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ದೇಶದ ಅತಿದೊಡ್ಡ ಕ್ರೀಡಾಂಗಣಗಳಲ್ಲಿ ಒಂದಾಗಲಿದೆ.

ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ 50 ಎಕರೆ ಭೂಮಿಗಾಗಿ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಎಂಎಸ್ಆರ್​ಡಿಸಿಗೆ) ನೀಡುವ ಮುಕ್ತ ಟೆಂಡರ್​ಗೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಈಗಾಗಲೇ ಅರ್ಜಿ ಸಲ್ಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ. ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದ ನಂತರ ಔಪಚಾರಿಕ ಯೋಜನೆ ಸಿದ್ಧಗೊಳ್ಳಲಿದೆ.

ವಾಂಖೆಡೆಯಿಂದ 68 ಕಿ.ಮೀ ದೂರದ ಸ್ಟೇಡಿಯಮ್​

ಥಾಣೆಯಿಂದ 26 ಕಿ.ಮೀ ಮತ್ತು ವಾಂಖೆಡೆ ಕ್ರೀಡಾಂಗಣದಿಂದ 68 ಕಿ.ಮೀ ದೂರದಲ್ಲಿರುವ ಅಮಾನೆಯಲ್ಲಿ ಸುಮಾರು 50 ಎಕರೆ ತೆರೆದ ಭೂಮಿಯಲ್ಲಿ ಹರಡಿರುವ 1 ಲಕ್ಷ ಸಾಮರ್ಥ್ಯದ ಬೃಹತ್ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ಎಂಸಿಎ ನೋಡುತ್ತಿದೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಎಂಎಸ್ಆರ್ಡಿಸಿ) ಕರೆದ ಮುಕ್ತ ಟೆಂಡರ್ ಅನ್ನು ಎಂಸಿಎ ಭರ್ತಿ ಮಾಡಿದೆ. ಸಂಘವು ಮಹಾರಾಷ್ಟ್ರ ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ” ಎಂದು ವರದಿ ತಿಳಿಸಿದೆ.

ಅಮೋಲ್ ಕಾಳೆ ಕನಸಿನ ಯೋಜನೆ

ದಿವಂಗತ ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ಅವರು ಫಡ್ನವೀಸ್ ಅವರ ಆಪ್ತ ಸ್ನೇಹಿತರಾಗಿದ್ದರು. ಹೊಸ ಕ್ರಿಕೆಟ್ ಅಖಾಡವನ್ನು ನಿರ್ಮಿಸುವುದು ಅವರ ಕನಸಿನ ಯೋಜನೆಯಾಗಿತ್ತು ಎಂದು ವರದಿಯಾಗಿದೆ. ವಿಶೇಷವೆಂದರೆ, ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಲ್ಲಿ ಭಾಗವಹಿಸಿದ ಸ್ವಲ್ಪ ಸಮಯದ ನಂತರ ಹೃದಾಯಘಾತದಿಂದ ನಿಧನ ಹೊಂದಿದ್ದರು.

ಇದನ್ನೂ ಓದಿ: Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

ಈ ಕ್ರೀಡಾಂಗಣವು ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಇದು ಪ್ರಥಮ ದರ್ಜೆ ಪಂದ್ಯಗಳನ್ನು ಆಡಬಹುದಾದ ಎರಡು ಮೈದಾನಗಳು ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಹೊಂದಿರುತ್ತದೆ” ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ, ಮುಂಬೈನ ವಾಂಖೆಡೆ ಕ್ರೀಡಾಂಗಣ ಮತ್ತು ನವೀ ಮುಂಬೈನ ಡಾ.ಡಿ.ವೈ.ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಎಂಸಿಎ ಅಡಿಯಲ್ಲಿ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿದ ಎರಡು ಸ್ಥಳಗಳಾಗಿವೆ. ಬಿಕೆಸಿ ಮೈದಾನ ಮತ್ತು ಡೆಕ್ಕನ್ ಜಿಮ್ಖಾನಾ ಮೈದಾನಗಳು ಸಹ ಅಂತರರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸಿವೆ. ಆದರೆ ಆಧುನಿಕ ಕ್ರಿಕೆಟ್​ಗೆ ಪೂರಕವಾಗಿ ಸೌಲಭ್ಯಗಳು ಇಲ್ಲ.

Continue Reading
Advertisement
Chennai Police commissioner
ಪ್ರಮುಖ ಸುದ್ದಿ1 min ago

Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

Rohit Sharma
ಕ್ರೀಡೆ2 mins ago

Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

Karnataka Rain Effect
ಮಳೆ3 mins ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Kalki 2898 AD box office thrashes 'PK' record
ಟಾಲಿವುಡ್10 mins ago

Kalki 2898 AD: ‘ಪಿಕೆ’, ʻಗದರ್‌ʼ ಸಿನಿಮಾಗಳ ದಾಖಲೆ ಮುರಿದ ʻಕಲ್ಕಿ 2898 ಎಡಿʼ!

Cm Siddaramaiah in Janatha Darshan
ಪ್ರಮುಖ ಸುದ್ದಿ19 mins ago

CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

Indecent behaviour
ಕರ್ನಾಟಕ23 mins ago

Indecent Behaviour: ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದವ ಪೊಲೀಸ್‌ ವಶಕ್ಕೆ

Hasin Jahan: Divorced wife who scolded Shami unnecessarily as 'pack of dogs'; The video is viral
ಕ್ರೀಡೆ29 mins ago

Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

Kamala Harris
ವಿದೇಶ31 mins ago

Kamala Harris: ಅಮೆರಿಕ ಚುನಾವಣೆ; ಟ್ರಂಪ್‌ಗೆ ಪೈಪೋಟಿ ನೀಡಲು ಬೈಡನ್‌ಗಿಂತ ಕಮಲಾ ಹ್ಯಾರಿಸ್‌ ಸಮರ್ಥ ಎನ್ನುತ್ತವೆ ಸಮೀಕ್ಷೆ!

ತುಮಕೂರು59 mins ago

Koratagere News: ವೀರಶೈವ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Home remedies for Dengue
ಆರೋಗ್ಯ1 hour ago

Home remedies for Dengue: ಸರಳ ಮನೆ ಮದ್ದು ಬಳಸಿ; ಡೆಂಗ್ಯೂ ಅಪಾಯದಿಂದ ಪಾರಾಗಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ3 mins ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ3 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ19 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ22 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ23 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

ಟ್ರೆಂಡಿಂಗ್‌