Chandrayaan 3: ಚಂದ್ರಯಾನ 3 ಹೆಸರಲ್ಲಿ 20 ಕೋಟಿ ರೂ. ವಂಚಿಸಿದ ಖದೀಮರು; ಇದು ಒಂದು ಚೊಂಬಿನ ಕತೆ! - Vistara News

ಕ್ರೈಂ

Chandrayaan 3: ಚಂದ್ರಯಾನ 3 ಹೆಸರಲ್ಲಿ 20 ಕೋಟಿ ರೂ. ವಂಚಿಸಿದ ಖದೀಮರು; ಇದು ಒಂದು ಚೊಂಬಿನ ಕತೆ!

Chandrayaan 3: ಇಸ್ರೋ ವಿಜ್ಞಾನಿಗಳು ಬಳಸಿದ ತಾಮ್ರದ ಚೊಂಬು ಖರೀದಿಸಿದರೆ ಸಂಪತ್ತು ದ್ವಿಗುಣವಾಗುತ್ತದೆ ಎಂದು ನಂಬಿಸಿದ ಖದೀಮರು ಉದ್ಯಮಿಯೊಬ್ಬರಿಗೆ 20 ಕೋಟಿ ರೂ. ವಂಚಿಸಿದ್ದಾರೆ.

VISTARANEWS.COM


on

Rice Pulling
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್:‌ ಹಣ, ಆಸ್ತಿ ಹೆಸರಲ್ಲಿ ಜನರನ್ನು ವಂಚಿಸುವುದನ್ನು ಕೇಳಿದ್ದೇವೆ. ನಂಬಿಸಿ ಬೆನ್ನಿಗೆ ಚೂರಿ ಹಾಕುವವರ ಕುರಿತು ತಿಳಿದುಕೊಂಡಿದ್ದೇವೆ. ಮನೆಗೆ ನುಗ್ಗಿ ದರೋಡೆ, ಆಸ್ತಿಗಾಗಿ ಕೊಲೆ, ನಿಧಿಗಾಗಿ ಮಾಟ-ಮಂತ್ರ ಮಾಡಿಸಿದ ಪ್ರಕರಣಗಳೂ ನಮಗೆ ಗೊತ್ತಿವೆ. ಆದರೆ, ಸೂರ್ಯ, ಚಂದ್ರನ ಹೆಸರಿನಲ್ಲಿ ಯಾರಾದರೂ ವಂಚಿಸಿದ್ದನ್ನು ಕೇಳಿದ್ದೀರಾ? ಇಲ್ಲ ತಾನೆ? ಆದರೆ, ಹೈದರಾಬಾದ್‌ನಲ್ಲಿ ರೈಸ್‌ ಪುಲ್ಲಿಂಗ್‌ (Rice Pulling) ಗ್ಯಾಂಗೊಂದು (ಹಣ ದ್ವಿಗುಣಗೊಳಿಸುವ ಹೆಸರಿನಲ್ಲಿ ಚೊಂಬು ತೋರಿಸಿ ವಂಚಿಸುವುದು) ಚಂದ್ರಯಾನ 3 ಮಿಷನ್‌ (Chandrayaan 3) ಹೆಸರಿನಲ್ಲಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 20 ಕೋಟಿ ರೂ. ವಂಚಿಸಿದೆ.

ನಗರದಲ್ಲಿರುವ ಉದ್ಯಮಿಯೊಬ್ಬರನ್ನು ಭೇಟಿಯಾದ ಮೂವರು ಖದೀಮರು, ಅವರ ಎಲ್ಲ ದೌರ್ಬಲ್ಯಗಳನ್ನು ತಿಳಿದುಕೊಂಡಿದ್ದಾರೆ. ಉದ್ಯಮಿಯು ಇನ್ನೂ ಹೆಚ್ಚು ಹಣ ಮಾಡಬೇಕು ಎಂಬ ಬಯಕೆ ಹೊಂದಿದ್ದಾರೆ ಎಂಬುದನ್ನು ಅರಿತ ಇವರು ಸಿನಿಮೀಯ ರೀತಿಯಲ್ಲಿ ಕತೆ ಹೆಣೆದಿದ್ದಾರೆ. ಅಲ್ಲದೆ, ಅದಕ್ಕಾಗಿ ಇಸ್ರೋದ ಚಂದ್ರಯಾನ 3 ಮಿಷನ್‌ ಹೆಸರು ಬಳಸಿದ್ದಾರೆ. ಚಂದ್ರಯಾನ 3 ಮಿಷನ್‌ ಯಶಸ್ಸಿನ ಕುರಿತೇ ಎಲ್ಲರೂ ಮಾತನಾಡುತ್ತಿರುವುದು, ಸುದ್ದಿಯಾಗುತ್ತಿರುವುದನ್ನು ಕಂಡಿದ್ದ ಉದ್ಯಮಿಯು ‘ಧನ ಲಾಭ’ ಮಾಡಿಕೊಡುವ ಚೊಂಬಿಗಾಗಿ 20 ಕೋಟಿ ರೂ. ಕಳೆದುಕೊಂಡಿದ್ದಾರೆ.

ಉದ್ಯಮಿಗೆ ನೀಡಿದ್ದಾರೆ ಎನ್ನಲಾದ ಚೊಂಬು.

ಹೀಗಿದೆ ಸಿನಿಮೀಯ ಕತೆ

ಮೂವರು ಖದೀಮರು ತಾಮ್ರದ ಚೊಂಬೊಂದನ್ನು ಉದ್ಯಮಿಗೆ ತೋರಿಸಿದ್ದು, ಇದು ಯಾವುದೇ ಸಂಪತ್ತನ್ನು ದ್ವಿಗುಣಗೊಳಿಸುವ, ಯಶಸ್ಸನ್ನು ತಂದುಕೊಂಡುವ ಮ್ಯಾಜಿಕ್‌ ಚೊಂಬಾಗಿದೆ. ಇದೇ ಚೊಂಬನ್ನು ಬಳಸಿಯೇ ಚಂದ್ರಯಾನ 3 ಮಿಷನ್‌ ಯಶಸ್ವಿಗೊಳಿಸಲಾಗಿದೆ. ಈ ಒಂದು ಚೊಂಬಿನಿಂದ ನೀವು ಹಣ, ಆಸ್ತಿ, ಸಂಪತ್ತನ್ನು ಗಳಿಸಬಹುದು ಎಂಬುದಾಗಿ ಉದ್ಯಮಿಯನ್ನು ನಂಬಿಸಿದ್ದಾರೆ. ಅಲ್ಲದೆ, ಉದ್ಯಮಿಯು ಚೌಕಾಸಿ ಮಾಡಿದ ಬಳಿಕ 20 ಕೋಟಿ ರೂ.ಗೆ ತಾಮ್ರದ ಚೊಂಬು ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

ಹಣದ ಆಸೆಗೆ ಬಿದ್ದ ಉದ್ಯಮಿಯು ಮೂವರು ವಂಚಕರಿಗೆ 20 ಕೋಟಿ ರೂ. ನೀಡಿ ಒಂದು ತಾಮ್ರದ ಚೊಂಬು ಪಡೆದಿದ್ದಾರೆ. ಆದರೆ, ಯಾವಾಗ ತಾಮ್ರದ ಚೊಂಬು ತಮ್ಮ ಸಂಪತ್ತನ್ನು ದ್ವಿಗುಣಗೊಳಿಸುವುದಿಲ್ಲ, ನನ್ನನ್ನು ವಂಚಿಸಲಾಗಿದೆ ಎಂಬುದು ತಿಳಿಯಿತೋ, ಕೂಡಲೇ ಉದ್ಯಮಿಯು ಮೇದಿಪಲ್ಲಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರು, ವಿಜಯ್‌ ಕುಮಾರ್‌ ಎಂಬಾತ ಸೇರಿ ಮೂವರನ್ನು ಬಂಧಿಸಿದ್ದಾರೆ.  

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಆತನ ನೋವಿಗೆ ಈಕೆ ಮುಲಾಮು ಆಗುತ್ತಿದ್ದಳು. ಈಕೆಯ ಮುನಿಸನ್ನು ಆತ ಪಿಸುಮಾತಿನಿಂದಲೇ ಸಮಾಧಾನ ಮಾಡುತ್ತಿದ್ದ. ಆದರೆ, ಕೆಲ ದಿನಗಳ ಹಿಂದಷ್ಟೇ ಆರತಿ ಯಾದವ್‌, ಬ್ರೇಕಪ್‌ ಮಾಡಿಕೊಳ್ಳೋಣ ಎಂದಿದ್ದಳು. ಈಕೆಯು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದಾಳೆ ಎಂಬ ಶಂಕೆಯೂ ರೋಹಿತ್‌ ಯಾದವ್‌ ಮನಸ್ಸಲ್ಲಿ ಮೂಡಿತ್ತು. ಹಾಗಾಗಿಯೇ, ನಡು ರಸ್ತೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai News
Koo

ಮುಂಬೈ: ಬದಲಾದ ಕಾಲಘಟ್ಟದಲ್ಲಿ ಲವ್‌ ಬ್ರೇಕಪ್‌ (Love Breakup) ಎನ್ನುವುದು ತುಂಬ ಸಾಮಾನ್ಯ ಎನಿಸಿದೆ. ಆಕರ್ಷಣೆಗೆ ಒಳಗಾಗಿ ಪ್ರೀತಿಸುವುದು, ಒಂದು ವರ್ಷ ಜತೆಗೆ ತಿರುಗಾಡಿ, ಸಣ್ಣ ಭಿನ್ನಾಭಿಪ್ರಾಯ ಬಂದರೂ ಪ್ರೀತಿಗೆ ತಿಲಾಂಜಲಿ ಇಡುವುದು ಯುವಕ-ಯುವತಿಯರಿಗೆ ರೂಢಿಯಾಗಿದೆ. ಆದರೆ, ಕೆಲವೊಂದು ಪ್ರಕರಣಗಳಲ್ಲಿ ಬ್ರೇಕಪ್‌ಗಳು ಹಿಂಸೆ, ಕೊಲೆಗೂ ಕಾರಣವಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಮುಂಬೈನಲ್ಲಿ (Mumbai) ವ್ಯಕ್ತಿಯೊಬ್ಬ ಲವ್‌ ಬ್ರೇಕಪ್‌ ಎಂದಿದ್ದಕ್ಕೆ ಪ್ರೇಯಸಿಯನ್ನು ನಡು ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಕೃತ್ಯದ ಭೀಕರ ವಿಡಿಯೊ ಈಗ ವೈರಲ್‌ ಆಗಿದೆ.

ಮುಂಬೈ ಬಳಿಯ ವಸಾಯ್‌ ಪ್ರದೇಶದ ರಸ್ತೆಯೊಂದರಲ್ಲಿ 20 ವರ್ಷದ ಆರತಿ ಯಾದವ್ ನಡೆದುಕೊಂಡು ಹೋಗುತ್ತಿರುತ್ತಾರೆ. ಆಗ 29 ವರ್ಷದ ರೋಹಿತ್‌ ಯಾದವ್‌ ಎಂಬಾತ ಸ್ಪ್ಯಾನರ್‌ ಹಿಡಿದುಕೊಂಡೇ ಓಡಿ ಬಂದು ಯುವತಿ ಮೇಲೆ ದಾಳಿ ಮಾಡಿದ್ದಾನೆ. ಯುವತಿ ತಲೆಗೆ, ಎದೆಗೆ ಸ್ಪ್ಯಾನರ್‌ನಿಂದ ಹೊಡೆದು, ಆಕೆ ನೆಲಕ್ಕೆ ಬಿದ್ದ ಮೇಲೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ಒಂದಿಬ್ಬರು ವ್ಯಕ್ತಿಯನ್ನು ತಡೆಯಲು ಪ್ರಯತ್ನಿಸಿದರೂ ಅಷ್ಟೊತ್ತಿಗಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಆರತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಲವ್‌ ಬ್ರೇಕಪ್‌ ಆಗಿದ್ದೇ ಕಾರಣ?

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಅವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕೆಲ ದಿನಗಳ ಹಿಂದೆ ಆರತಿ ಯಾದವ್‌ ಈತನಿಗೆ ಬ್ರೇಕಪ್‌ ಎಂದಿದ್ದಳು. ಇನ್ಯಾವತ್ತೂ ನನ್ನನ್ನು ನೋಡಲು ಬರಬೇಡ, ಮಾತನಾಡಿಸಬೇಡ, ಕಾಲ್‌ ಮಾಡಿ ತೊಂದರೆ ಕೊಡಬೇಡ ಎಂದಿದ್ದಳು. ಇದರಿಂದ ರೋಹಿತ್‌ ಯಾದವ್‌ ನೊಂದಿದ್ದ. ಅಲ್ಲದೆ, ಆರತಿ ಯಾದವ್‌ ಬೇರೊಬ್ಬನ ಜತೆ ಪ್ರೀತಿಯ ಬಲೆಗೆ ಸಿಲುಕಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿತ್ತು.

ಬೇರೆಯವನನ್ನು ಪ್ರೀತಿಸುತ್ತಿದ್ದಾಳೆ ಎಂದು ಭಾವಿಸಿದ ರೋಹಿತ್‌ ಯಾದವ್‌, ನನಗೆ ಸಿಗದವಳು ಯಾರಿಗೂ ಸಿಗಬಾರದು ಎಂದು ಭಾವಿಸಿದ್ದಾನೆ. ಇದೇ ಕಾರಣಕ್ಕಾಗಿ ತುಂಬಿದ ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ಬಳಿಕ, “ನನಗೇಕೆ ಹೀಗೆ ಮಾಡಿದೆ” ಎಂದು ಹತಾಶಯ ಧ್ವನಿಯಲ್ಲಿ ಕಿರುಚಿದ್ದಾನೆ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Continue Reading

ಪ್ರಮುಖ ಸುದ್ದಿ

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Prajwal Revanna Case: ಪ್ರಜ್ವಲ್‌ ರೇವಣ್ಣ ಅವರ ಮೇಲೆ ಮೂರು ಪ್ರಕರಣಗಳಿದ್ದು, ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದು, ಪುರುಷತ್ವ ಪರೀಕ್ಷೆ ಮಾಡಲಾಗಿದೆ. ಮೂರನೆ ಬಾರಿಗೆ ಎಸ್‌ಐಟಿ ಪ್ರಜ್ವಲ್‌ ಅವರನ್ನು ಕಸ್ಟಡಿಗೆ ಪಡೆದುಕೊಂಡು ಪರೀಕ್ಷೆಗೆ ಮುಂದಾಗಿದೆ.

VISTARANEWS.COM


on

prajwal revanna case test
Koo

ಬೆಂಗಳೂರು: “ನಾನು ಈಗಾಗಲೇ ಎರಡು ಕೇಸ್‌ಗಳಲ್ಲಿ ಪುರುಷತ್ವ ಪರೀಕ್ಷೆ (Medical Test) ಒಪ್ಪಿ ಮಾಡಿಸಿಕೊಂಡಿದ್ದೇನೆ. ಮತ್ತೆ ಮತ್ತೆ ಅದೇ ಪರೀಕ್ಷೆ ಮಾಡಿಸಿಕೊಳ್ಳಲು ಮುಜುಗರವಾಗುತ್ತದೆ. ನನಗೆ ಮುಜುಗರ ಹುಟ್ಟಿಸಲೆಂದೇ ಇದನ್ನು ಮಾಡುತ್ತಿರುವಂತೆ ಕಾಣುತ್ತಿದೆ” ಎಂದು ಲೈಂಗಿಕ ದೌರ್ಜನ್ಯ (Physical abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ನ್ಯಾಯಾಧೀಶರ ಮುಂದೆ ಅಲವತ್ತುಕೊಂಡ ಘಟನೆ ನಡೆದಿದೆ.

“ನಾನು ಎರಡು ಕೇಸ್‌ನಲ್ಲಿ ಮೆಡಿಕಲ್ ಟೆಸ್ಟ್ ಒಪ್ಪಿ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಕೇಳ್ತಾರೆ. ಪದೇ ಪದೆ ಖಾಸಗಿ ಅಂಗ ತೋರಿಸಲು ತುಂಬಾ ಮುಜುಗರ ಆಗುತ್ತಿದೆ. ಈಗಾಗಲೇ ಎರಡು ಕೇಸ್‌ಗಳಲ್ಲಿ ಸೇಮ್ ಪರೀಕ್ಷೆ ಆಗಿದೆ. ಈ ಮುಜುಗರದಿಂದ ಪಾರು ಮಾಡಿ” ಎಂದು ಪ್ರಜ್ವಲ್‌ ನ್ಯಾಯಾಧೀಶರ ಮುಂದೆ ವಿನಂತಿಸಿಕೊಂಡರು. ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾತ್ರ ಮಾಡಿಸುವಂತೆ ನ್ಯಾಯಾಧೀಶರು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜ್ವಲ್‌ ರೇವಣ್ಣ ಅವರ ಮೇಲೆ ಮೂರು ಪ್ರಕರಣಗಳಿದ್ದು, ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದು, ಪುರುಷತ್ವ ಪರೀಕ್ಷೆ ಮಾಡಲಾಗಿದೆ. ಮೂರನೆ ಬಾರಿಗೆ ಎಸ್‌ಐಟಿ ಪ್ರಜ್ವಲ್‌ ಅವರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಮತ್ತೆ ಮೆಡಿಕಲ್‌ ಪರೀಕ್ಷೆಗೆ ಮುಂದಾಗಿದ್ದು, ಈ ಸಂದರ್ಭದಲ್ಲಿ ಪ್ರಜ್ವಲ್‌ ಆಕ್ಷೇಪಿಸಿದರು.

ಹಿಂದಿನ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್ ಶಿವಕುಮಾರ್ ಆದೇಶ ನೀಡಿದ್ದಾರೆ. ಈ ನಡುವೆ, ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಇದೇ ಸಂದರ್ಭದಲ್ಲಿ, ಎಸ್‌ಐಟಿ (SIT) ಅಧಿಕಾರಿಗಳು ತನ್ನ ಆರೋಗ್ಯ ಸಮಸ್ಯೆಯನ್ನು ಕಡೆಗಣಿಸಿದ್ದಾರೆ ಎಂದು ಪ್ರಜ್ವಲ್‌ ದೂರಿದ್ದು ಕೂಡ ವರದಿಯಾಗಿದೆ. ಪ್ರಜ್ವಲ್ ರೇವಣ್ಣ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಎಸ್‌ಐಟಿ ಕೋರ್ಟ್‌ಗೆ ಹಾಜರು ಪಡಿಸಿದಾಗ, “ಏನಾದ್ರೂ ಆರೋಗ್ಯ ಸಮಸ್ಯೆ ಇದೆಯಾ?ʼʼ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. “ಹೌದು ಸರ್” ಎಂದು ಪ್ರಜ್ವಲ್ ನುಡಿದರು.

“ಎಸ್ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲ” ಎಂದು ಪ್ರಜ್ವಲ್ ಹೇಳಿದ್ದಲ್ಲದೆ, “ಎಂಆರ್‌ಐ ಸ್ಕ್ಯಾನ್ ಮಾಡಿಸಿದ್ದೇನೆ. ಟ್ಯಾಬ್ಲೆಟ್ ತೆಗೆದುಕೊಳ್ತಿದ್ದೇನೆ” ಎಂದು ಹೇಳಿದಾಗ, ʼಆರೋಗ್ಯ ತಪಾಸಣೆ ಯಾಕೆ ಮಾಡಿಸಿಲ್ಲ?ʼ ಎಂದು ಅಧಿಕಾರಿಗಳನ್ನು ಜಡ್ಜ್ ಪ್ರಶ್ನಿಸಿದರು. “ಅವರು ಈಗ ಹೇಳ್ತಾ ಇದ್ದಾರೆ, ನಮಗೆ ಹೇಳಿಲ್ಲ” ಎಂದು ಎಸ್ಐಟಿ ಅಧಿಕಾರಿಗಳು ಉತ್ತರಿಸಿದರು.

ನಂತರ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದತ್ತ ಅವರನ್ನು ಕರೆದೊಯ್ಯಲಾಗಿದೆ. ನ್ಯಾಯಾಂಗ ಬಂಧನಕ್ಕೆ ಹೋದರೂ ನಾಳೆ ಮತ್ತೆ ಬಾಡಿ ವಾರಂಟ್ ಮೇಲೆ ಅವರನ್ನು ಕಸ್ಟಡಿಗೆ ಪಡೆಯಲು ಎಸ್ಐಟಿ ಮುಂದಾಗಿದೆ. ಸಿಐಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ಗೆ ಸಂಬಂಧಿಸಿ ವಶಕ್ಕೆ ಪಡೆಯಲಿದೆ.

ಭವಾನಿ ರೇವಣ್ಣಗೆ ಸಿಗ್ತು ನಿರೀಕ್ಷಣಾ ಜಾಮೀನು

ಕೆಆರ್ ನಗರದಲ್ಲಿ ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯನ್ನು ಕಿಡ್ನಾಪ್ (kidnap case) ಮಾಡಿದ ಪ್ರಕರಣದಲ್ಲಿ ಎಸ್‌ಐಟಿ (SIT) ವಿಚಾರಣೆ ಎದುರಿಸುತ್ತಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು (Anticipatory Bail) ದೊರೆತಿದೆ. ಕಳೆದ ವಾರ ಕಿಡ್ನಾಪ್‌ ಕೇಸ್‌ನಲ್ಲಿ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠದಿಂದ ಆದೇಶ ಪ್ರಕಟವಾಗಿದ್ದು, ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲಾಗಿತ್ತು. ಇಂದು ನಿರೀಕ್ಷಣಾ ಜಾಮೀನು ಅರ್ಜಿಯ ಅಂತಿಮ ಆದೇಶವನ್ನು ಪೀಠ ಪ್ರಕಟಿಸಿದೆ.

ಇದನ್ನೂ ಓದಿ: Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Continue Reading

ಕೋಲಾರ

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Kolar news : ಬ್ಲಾಸ್ಟ್ ವೇಳೆ ಬೃಹತ್ ಗಾತ್ರದ ಬಂಡೆಗಳು ಉರುಳಿ ಬಿದ್ದು ಟ್ರಾಕ್ಟರ್, ಹಿಟಾಚಿ ಜಖಂಗೊಂಡಿದೆ. ಕೆಲಸ ಮಾಡುತ್ತಿದ್ದ 10ಕ್ಕೂ ಹೆಚ್ಚು ಕಾರ್ಮಿಕರ ಮೂವರು ಕಣ್ಮರೆಯಾಗಿದ್ದಾರೆ.

VISTARANEWS.COM


on

By

Kolar News
Koo

ಕೋಲಾರ: ಬಂಡೆಕಲ್ಲು ಬ್ಲಾಸ್ಟ್ ಮಾಡುವಾಗ ಬೃಹತ್ ಗಾತ್ರದ ಬಂಡೆ ಉರುಳಿ ಬಿದ್ದು ಮೂವರು ಕಾರ್ಮಿಕರು ಕಣ್ಮರೆಯಾಗಿರುವ (Kolar news ) ಶಂಕೆ ವ್ಯಕ್ತವಾಗಿದೆ. ಕೋಲಾರದ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಹಳೇಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದೆ.

ಬ್ಲಾಸ್ಟ್ ವೇಳೆ ಬೃಹತ್ ಗಾತ್ರದ ಬಂಡೆಗಳು ಉರುಳಿ ಬಿದ್ದ ಪರಿಣಾಮ ಟ್ರಾಕ್ಟರ್, ಹಿಟಾಚಿ ಜಖಂಗೊಂಡಿದೆ. ಅವಘಡ ವೇಳೆ ಮೂವರು ಕಾರ್ಮಿಕರು ಕಣ್ಮರೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬಂಡೆ ಕಲ್ಲಿನಡಿ ಏನಾದರೂ ಸಿಲುಕಿದ್ದರಾ ಎಂಬ ಆತಂಕ ಹೆಚ್ಚಾಗಿದೆ. ಸುಮಾರು 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

kolar news

ಮಂಜುನಾಥ್ ಎಂಬುವರಿಗೆ ಸೇರಿದ ಸ್ಥಳದಲ್ಲಿ ಗಣಿಗಾರಿಕೆ ನಡೆಯುತ್ತಿತ್ತು. ಸ್ಥಳಕ್ಕೆ ಟೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದೀಚೆಗೆ ಇದು ಎರಡನೇ ಅವಘಡ ಆಗಿದೆ. ಘಟನೆ ನಡೆದು ಗಂಟೆಗಳೇ ಕಳೆದರೂ ಗಣಿ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಹೀಗಾಗಿ ಗಣಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಕಣ್ಮರೆಯಾಗಿರುವ ಕಾರ್ಮಿಕರಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

ಕಾರವಾರ: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಎನ್‌ಐ‌ಎ ತಂಡ ಬಂಧಿಸಿದೆ. ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್‌ಐಎ ತಂಡ ದಾಳಿ (NIA Raid) ನಡೆಸಿ ಯುವಕನನ್ನು ಬಂಧಿಸಿದೆ.

ಅಬ್ದುಲ್ ಶಕೂರ್(32) ಬಂಧಿತ ಯುವಕ. ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಕೆಲ ದಿನಗಳ ಹಿಂದಷ್ಟೇ ಬಕ್ರೀದ್ ಆಚರಣೆಗಾಗಿ ದಾಸನಕೊಪ್ಪಕ್ಕೆ ಬಂದಿದ್ದ. ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸರ ಸಹಕಾರದಿಂದ ಯುವಕನನ್ನು ಎನ್‌ಎಐ ಬಂಧಿಸಿದೆ.

ಬಂಧಿತ ಯುವಕ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಆಗಿದ್ದು, ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದ. ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ, ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರೆ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ‌ ಈತನ ಮೇಲಿದೆ.

ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಪಾಸ್‌ಪೋರ್ಟ್‌ ನಕಲಿ ದಾಖಲೆ ನೀಡಿದ ಆರೋಪದಡಿ ಆರೋಪಿಯನ್ನು ಬಂಧಿಸಿದ್ದು, ಸದ್ಯ ಆರೋಪಿಗೆ ನೋಟೀಸ್ ನೀಡಿ ಗುಪ್ತ ಸ್ಥಳದಲ್ಲಿ NIA ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Actor Darshan: ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಈ ಹಿಂದೆ ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಮನೆ ತೆರವಿಗೆ ಸರ್ಕಾರದಿಂದ ಮೈಖಿಕ ಸೂಚನೆ ಸಿಕ್ಕಿದೆ ಎನ್ನಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ (Actor Darshan) ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೂಡ ಒತ್ತುವರಿ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್‌.ಆರ್‌. ನಗರದ ದರ್ಶನ್‌ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್‌ ಜೋನ್‌ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.

ಐಡಿಯಲ್‌ ಹೋಮ್ಸ್‌, ದರ್ಶನ್‌, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್‌ ನೀಡಲಾಗಿತ್ತು. ನೋಟಿಸ್‌ ನೀಡಿದ್ದರಿಂದ ದರ್ಶನ್‌ ಮತ್ತಿತರರು ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್‌ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ | Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

actor darshan yashas surya

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ (comedian Chikkanna) ಅವರ ವಿಚಾರಣೆ ನಡೆಸಲಾಗಿದ್ದು, ಅದೇ ಪಾರ್ಟಿಯಲ್ಲಿದ್ದ ಇನ್ನೊಬ್ಬ ನಟನಿಗೂ ಪೊಲೀಸ್‌ ವಿಚಾರಣೆ ನೋಟೀಸ್‌ (police notice) ಹೋಗಿದೆ.

ನಟ ಯಶಸ್‌ ಸೂರ್ಯ (Yashas Surya) ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು. ಇದೀಗ ವಿಚಾರಣೆಗೆ ಹಾಜರಾಗಲು ಯಶಸ್‌ಗೂ ನೋಟೀಸ್‌ ನೀಡಲಾಗಿದೆ.

ಚಿಕ್ಕಣ್ಣ, ಯಶಸ್ ಸೂರ್ಯ ಸೇರಿದಂತೆ ಇನ್ನೂ ಕೆಲ ನಟರಿಗೂ ಪೊಲೀಸರು ನೋಟೀಸ್ ನೀಡುವ ಸಾಧ್ಯತೆ ಇದೆ. ಮುಖ್ಯವಾಗಿ, ಅಂದು ದರ್ಶನ್‌ ಯಾರುಯಾರನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಪೊಲೀಸ್‌ ತನಿಖೆಯನ್ನು ಎದುರಿಸಬೇಕಿದೆ. ಅಂದು ನಡೆಸಿದ ಮಾತುಕತೆಯನ್ನು ದರ್ಶನ್‌, ರೇಣುಕಾಸ್ವಾಮಿ ವಿಚಾರ ಎತ್ತಿದ್ದರೇ ಎಂಬುದು ತನಿಖೆಯ ಮುಖ್ಯ ವಿಚಾರವಾಗಿರಲಿದೆ.

actor darshan yashas surya

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ | Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

Continue Reading
Advertisement
Viral Video
ಕ್ರಿಕೆಟ್4 mins ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ11 mins ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ11 mins ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ41 mins ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ44 mins ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Gemini Mobile App
ತಂತ್ರಜ್ಞಾನ49 mins ago

Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

SA vs USA
ಕ್ರೀಡೆ58 mins ago

SA vs USA: ನಾಳೆ ಮೊದಲ ಸೂಪರ್​-8 ಪಂದ್ಯ; ಅಮೆರಿಕ ಸವಾಲಿಗೆ ಹರಿಣ ಪಡೆ ಸಿದ್ಧ

Kolar News
ಕೋಲಾರ1 hour ago

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Actor Darshan
ಕರ್ನಾಟಕ1 hour ago

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Reliance Jio Down
ದೇಶ1 hour ago

Reliance Jio Down: ದೇಶಾದ್ಯಂತ ಜಿಯೋ ನೆಟ್‌ವರ್ಕ್‌ ಡೌನ್;‌ ಇಂಟರ್‌ನೆಟ್‌ ಇಲ್ಲದೆ ಅಲ್ಲೋಲಕಲ್ಲೋಲ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌