Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ! - Vistara News

ಪ್ರಮುಖ ಸುದ್ದಿ

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಭಾನುವಾರವೂ ವೃಷಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ಅಪರೂಪದ ವ್ಯಕ್ತಿಗಳ ಪರಿಚಯದಿಂದಾಗಿ ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯಲಿದೆ. ಮಿಥುನ ರಾಶಿಯವರು ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕನ್ಯಾ ರಾಶಿಯವರಿಗೆ ಬಹಳ ದಿನಗಳಿಂದ ಬರದೆ ಇರುವ ನಿಮ್ಮ ಹಣ ಮರಳುವ ಸಾಧ್ಯತೆ ಇದೆ. ತುಲಾ ರಾಶಿಯವರು ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (1-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ:
ಬಿದಿಗೆ 09:41 ವಾರ: ಭಾನುವಾರ
ನಕ್ಷತ್ರ: ಅಶ್ವಿನಿ 19:26 ಯೋಗ: ವ್ಯಾಘಾತ 13:12
ಕರಣ: ಗರಜ 09:41 ಅಮೃತಕಾಲ : ಮಧ್ಯಾಹ್ನ 12:46ರಿಂದ 02:15ವರೆಗೆ
ದಿನದ ವಿಶೇಷ : ಅಂತರಾಷ್ಟ್ರೀಯ ಹಿರಿಯರ ದಿನ

ಸೂರ್ಯೋದಯ : 06:20  ಸೂರ್ಯಾಸ್ತ : 07:19

ರಾಹುಕಾಲ: ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಸಾಯಂಕಾಲ 03:10ರಿಂದ 04:40
ಯಮಗಂಡಕಾಲ: ಮಧ್ಯಾಹ್ನ 12:09 ರಿಂದ 01:39

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆತ್ಮವಿಶ್ವಾಸದ ಕೊರತೆಯಿಂದಾಗಿ ಕಾರ್ಯದಲ್ಲಿ ನಿಧಾನಗತಿ ಇರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲ ಸಿಗಲಿದೆ. ಅಪರೂಪದ ವ್ಯಕ್ತಿಗಳ ಪರಿಚಯದಿಂದಾಗಿ ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯಲಿದೆ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹೂಡಿಕೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದೆ. ಆರ್ಥಿಕವಾಗಿ ಸದೃಢತೆ ಇರಲಿದೆ. ಅನೇಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಉತ್ತಮ. ಕಾಲಹರಣ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಸಂತೃಪ್ತ ಜೀವನ ನಿಮದಾಗಲಿದೆ. ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಆಪ್ತ ಸ್ನೇಹಿತರೊಂದಿಗೆ ಮಾತುಕತೆ ಇರಲಿದೆ. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಮಕ್ಕಳು ಸಿಟ್ಟು ತರಿಸಬಹುದು. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಗುರುಗಳ ಅನುಗ್ರಹ ಪಡೆಯಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬೇರೆಯವರನ್ನು ಟೀಕೆ ಮಾಡುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ. ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಆತುರದ ಮಾತುಗಳಿಗೆ ನಿಯಂತ್ರಣ ಇರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬವಿದೆ. ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಒತ್ತಡದಿಂದ ಹೊರಬಂದು ಉತ್ಸಾಹದ ದಿನ ನಿಮದಾಗಲಿದೆ. ದೈಹಿಕವಾಗಿ ಮಾನಸಿಕವಾಗಿ ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ದಿಢೀರ್‌ ಧನಾಗಮನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಬಹಳ ದಿನಗಳಿಂದ ಬರದೆ ಇರುವ ನಿಮ್ಮ ಹಣ ಮರಳುವ ಸಾಧ್ಯತೆ ಇದೆ. ಆರೋಗ್ಯದ ಕಾಳಜಿ ವಹಿಸಿ. ದಿನದ ಮಟ್ಟಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕುಟುಂಬದಲ್ಲಿ ಸಾಮರಸ್ಯ ಮೂಡಲಿದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ನಿಯಂತ್ರಣ ಇರಲಿ. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಇಂದು ಮನೋರಂಜನೆಗೆ ಹೆಚ್ಚು ಮಹತ್ವ ಕೊಡುವ ಸಾಧ್ಯತೆ ಇದೆ. ಆಪ್ತರು ಹಾಗೂ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಬಹಳ ದಿನಗಳ ಕನಸು ನನಸಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಇಂದು ಸಬಲತೆ ಹೊಂದುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂತೋಷದ ಜತೆ ಜತೆಗೆ ನಿಮ್ಮನ್ನು ಯಾರಾದರೂ ಟೀಕಿಸುವ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಕೌಟುಂಬಿಕ ತಾಪತ್ರಯ ನಿಮ್ಮನ್ನು ನಿರಾಸೆಗೊಳಿಸಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಈ ರಾಶಿಯವರಿಗೆ ತುಂಬಾ ಒಳಿತಾಗುತ್ತೆ

Horoscope Today

ಮಕರ: ಆರೋಗ್ಯ ದಿನದ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ ಆದಷ್ಟು ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ಬೆಂಬಲ ನಿಮಗೆ ಪುಷ್ಟಿ ನೀಡಲಿದೆ. ಆರ್ಥಿಕವಾಗಿ ಬಲಗೊಳ್ಳುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಒಂಟಿತನ ನಿಮ್ಮನ್ನು ಕಾಡಬಹುದು. ಕುಟುಂಬ ಸದಸ್ಯರ ಅನಾರೋಗ್ಯ ಕಾರಣಗಳಿಂದ ಖರ್ಚು ಸಾಧ್ಯತೆ ಇದೆ. ಬಾಕಿ ಇರುವ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಯಾದ ಆಲಸ್ಯದಿಂದ ಹೊರ ಬಂದು ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ಭರವಸೆಯ ಬದುಕು ರೂಪುಗೊಳ್ಳಲಿದೆ. ಆಪ್ತರು ನೀಡುವ ಶುಭ ಸಂದೇಶ ನಿಮ್ಮನ್ನು ಹರ್ಷಿತರನ್ನಾಗಿ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೊಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job Alert: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ; ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ

Job Alert: ಭಾರತೀಯ ಕೋಸ್ಟ್‌ ಗಾರ್ಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3. ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.

VISTARANEWS.COM


on

Job alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅಂತಹವರ ಕನಸು ನನಸಾಗಿಸುವ ಸುವರ್ಣಾವಕಾಶವೊಂದು ಒದಗಿ ಬಂದಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Coast Guard Recruitment 2024). ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಗಮನಿಸಿ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ವಯೋಮಿತಿ

Indian Coast Guard Recruitment 2024 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ, ಮಾಸಿಕ ವೇತನ ಮತ್ತು ಅರ್ಜಿ ಶುಲ್ಕ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಅಸ್ಸೆಸ್‌ಮೆಂಟ್‌ ಮತ್ತು ಅಡಾಟ್ಬೆಲಿಟಿ ಟೆಸ್ಟ್‌ (Assessment and Adaptability Test), ದೈಹಿಕ ಸಾಮರ್ಥ್ಯ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ನೇಮಕ ನಡೆಯಲಿದೆ. ಆಯ್ಕೆಯಾದವರಿಗೆ 21,700 ರೂ. – 29,200 ರೂ. ಮಾಸಿಕ ವೇತನ ದೊರೆಯಲಿದೆ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

Indian Coast Guard Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ. (https://cgept.cdac.in/icgreg/candidate/login)
  • ನಿಮ್ಮ ಇ-ಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಈಗ ಲಾಗಿನ್‌ ಆಗಿ ನಿಮ್ಮ ಹೆಸರು, ಸಂಪೂರ್ಣ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಅರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಕ್ರೀಡೆ

Team India: ವಿಶ್ವಕಪ್​ ಗೆದ್ದು ಟೀಮ್​ ಇಂಡಿಯಾ ನಿರ್ಮಿಸಿದ ದಾಖಲೆಗಳ ಪಟ್ಟಿ ಹೀಗಿದೆ

Team India: ರೋಹಿತ್​ ಕಪ್​ ಗೆಲ್ಲುವ ಮೂಲಕ ಐಸಿಸಿ ಟ್ರೋಫಿ ಗೆದ್ದ 4ನೇ ಭಾರತೀಯ ನಾಯಕ ಎನಿಸಿಕೊಂಡರು. ಕಪಿಲ್ ದೇವ್​, ಸೌರವ್​ ಗಂಗೂಲಿ, ಧೋನಿ ಉಳಿದ ನಾಯಕರು.

VISTARANEWS.COM


on

Koo

ಬಾರ್ಬಡೋಸ್​: ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ರಾತ್ರಿ ನಡೆದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತು. ಈ ಪಂದ್ಯದಲ್ಲಿ ಭಾರತ ಮತ್ತು ತಂಡದ ಆಟಗಾರರು ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಟ್ಟಿ ಇಂತಿದೆ.

ದಾಖಲೆಗಳ ಪಟ್ಟಿ ಹೀಗಿದೆ

1. ನೀಗಿದ ಪ್ರಶಸ್ತಿ ಬರ: ಕಪ್​ ಗೆಲ್ಲುವ ಮೂಲಕ 11 ವರ್ಷಗಳ ಐಸಿಸಿ ಟ್ರೋಫಿ, 13 ವರ್ಷಗಳ ಐಸಿಸಿ ವಿಶ್ವಕಪ್​ ಬರ ನೀಗಿತು.


2. ದ್ವಿತೀಯ ಟಿ20 ವಿಶ್ವಕಪ್​: ಭಾರತ ತಂಡ 2ನೇ ಎರಡನೇ ಬಾರಿ ಮತ್ತು 17 ವರ್ಷಗಳ ಬಳಿಕ ಟಿ20 ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿತು.

3. ಮೂರನೇ ತಂಡ: ಭಾರತ 2 ಟಿ20 ವಿಶ್ವಕಪ್​ ಗೆದ್ದ ಮೂರನೇ ತಂಡ ಎನಿಸಿಕೊಂಡಿತು. ಇದಕ್ಕೂ ಮುನ್ನ ವೆಸ್ಟ್​ ಇಂಡೀಸ್​ ಮತ್ತು ಇಂಗ್ಲೆಂಡ್​ ಈ ಸಾಧನೆ ಮಾಡಿತ್ತು.


4. ರೋಹಿತ್​ ಸಾಧನೆ: ರೋಹಿತ್​ ಶರ್ಮ ಅವರು ಭಾರತ ಪರ 2 ಟಿ0 ವಿಶ್ವಕಪ್​ ಗೆದ್ದ ಮೊದಲ ಆಟಗಾರ. ನಾಯಕನಾಗಿ ಮತ್ತು ಆಟಗಾರನಾಗಿ. ಜತೆಗೆ ಧೋನಿ ನಂತರ ಟಿ20 ವಿಶ್ವಕಪ್​ ಗೆದ್ದ 2ನೇ ನಾಯಕ ಎನಿಸಿಕೊಂಡರು.

5. ದ್ರಾವಿಡ್​ಗೆ ಗೆಲುವಿನ ವಿದಾಯ: ರಾಹುಲ್​ ದ್ರಾವಿಡ್​ ಕೋಚ್​ ಆಗಿ ಜೂನಿಯರ್​ ಮತ್ತು ಸೀನಿಯರ್​ ವಿಭಾಗದಲ್ಲಿ ಐಸಿಸಿ ಟ್ರೋಫಿ ಗೆದ್ದ ಸಾಧನೆ ಮಾಡಿದರು.


6. ಕೊಹ್ಲಿಗೆ ಮೊದಲ ಕಪ್​: ವಿರಾಟ್​ ಕೊಹ್ಲಿ ಅವರು ಮೊದಲ ಟಿ20 ವಿಶ್ವಕಪ್​ ಗೆದ್ದರು. ಈ ಮೂಲಕ ಏಕದಿನ ಮತ್ತು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿದರು.

7. ನಾಲ್ಕನೇ ಐಸಿಸಿ ವಿಶ್ವಕಪ್: ಭಾರತ ಈ ಕಪ್​ ಗೆಲ್ಲುವ ಮೂಲಕ 4 ಐಸಿಸಿ ವಿಶ್ವಕಪ್​ ಗೆದ್ದ ಸಾಧನೆ ಮಾಡಿತು. (2 ಏಕದಿನ, 2 ಟಿ20).

8. 4ನೇ ನಾಯಕ: ರೋಹಿತ್​ ಕಪ್​ ಗೆಲ್ಲುವ ಮೂಲಕ ಐಸಿಸಿ ಟ್ರೋಫಿ ಗೆದ್ದ 4ನೇ ಭಾರತೀಯ ನಾಯಕ ಎನಿಸಿಕೊಂಡರು. ಕಪಿಲ್ ದೇವ್​, ಸೌರವ್​ ಗಂಗೂಲಿ, ಧೋನಿ ಉಳಿದ ನಾಯಕರು.

9. ಐದು ಫೈನಲ್​ ಸೋಲಿನ ಬಳಿಕದ ಗೆಲುವು: ಸತತ 5 ಐಸಿಸಿ ಟೂರ್ನಿಗಳ ಫೈನಲ್​ ಸೋಲಿನ ಬಳಿಕ ಸಾಧಿಸಿದ ಗೆಲುವು ಇದಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಪ್ರಮುಖ ಸುದ್ದಿ

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Suryakumar Yadav:

VISTARANEWS.COM


on

Suryakumar Yadav
Koo

ಬೆಂಗಳೂರು: ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ 2024ರ (T20 World Cup 2024) ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ಬಳಿಕ ಭಾರತ ತಂಡದ ಆಟಗಾರರ ಸಂತಸಕ್ಕೆ ಪಾರವೇ ಇಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಅಂತೆಯೇ ಪಂದ್ಯದ 19ನೇ ಓವರ್​ನಲ್ಲಿ ಅದ್ಬುತ ಕ್ಯಾಚ್​ ಹಿಡಿದು ಪಂದ್ಯಕ್ಕೆ ನಿರ್ಣಾಯ ತಿರುವು ಕೊಟ್ಟ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಅವರು ರಾತ್ರಿಯಲ್ಲಿ ಟಿ 0 ವಿಶ್ವಕಪ್ ಟ್ರೋಫಿ ಬೆಡ್​ ಮೇಲೆ ಇಟ್ಟು ಮಲಗಿದ್ದಾರೆ. ಅದರ ವಿಡಿಯೊ ವೈರಲ್​ ಆಗಿದೆ.

ಅಂತಿಮ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಬೌಂಡರಿ ಲೈನ್​ನಲ್ಲಿ ಕ್ಯಾಚ್​ ಹಿಡಿದು ಔಟ್ ಮಾಡಿದ ಸೂರ್ಯ ಕುಮಾರ್​ ಯಾದವ್​ ಅತ್ಯಂತ ಸಂಭ್ರಮದಲ್ಲಿದ್ದರು. ತಂಡದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಇದನ್ನು ಆಟದ ಗತಿ ಬದಲಾವಣೆ ಮಾಡಿದ ಕ್ಷಣ ಎಂದು ಕರೆದಿದ್ದಾರೆ. ಏಕೆಂದರೆ ವಿಜಯದ ನಂತರ ಸೂರ್ಯ ಭಾರತೀಯ ಡ್ರೆಸ್ಸಿಂಗ್ ಕೋಣೆಯಲ್ಲಿ ಅತ್ಯುತ್ತಮ ಫೀಲ್ಡರ್ ಪದಕ ಕೂಡ ಪಡೆದಿದ್ದಾರೆ.

ಅದಕ್ಕಿಂತ ಮೊದಲು ಕುಲದೀಪ್ ಯಾದವ್ ಕ್ವಿಂಟನ್ ಡಿ ಕಾಕ್ ಅವರ ಪ್ರಮುಖ ಕ್ಯಾಚ್ ಪಡೆದಿದ್ದರು. ಆದರೆ ಸೂರ್ಯಕಮಾರ್​ ಯಾದವ್ ಅವರ ಕ್ಯಾಚ್ ಇನ್ನೂ ಅತ್ಯುತ್ತಮವಾಗಿತ್ತು ಎಂದು ಟಿ ದಿಲೀಪ್ ಹೇಳಿದ್ದಾರೆ. ಆದ್ದರಿಂದ, ಅವರು ಟ್ರೋಫಿಯನ್ನು ಪಕ್ಕದಲ್ಲೇ ಇಟ್ಟುಕೊಂಡಿರುವುದು ಸರಿಯಾಗಿಯೇ ಇದೆ.

ಸೂರ್ಯ ಹಾಸಿಗೆ ಒಂದು ಬದಿಯಲ್ಲಿ ಮಲಗಿದ್ದರೆ ಪತ್ನಿ ಇನ್ನೊಂದು ಕಡೆಯಲ್ಲಿ ಮಲಗಿದ್ದರು. ಮಧ್ಯದಲ್ಲಿ ಅವರು ಟ್ರೋಫಿಯನ್ನು ಇಟ್ಟುಕೊಂಡಿದ್ದರು. ಈ ಫೋಟೊ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ 7 ರನ್ ಗಳ ಜಯ ಸಾಧಿಸಿತು. 2007ರಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ಎಂ.ಎಸ್.ಧೋನಿ ಪಡೆ ಟ್ರೋಫಿ ಪಡೆದ ಬಳಿಕ ಇದು ಎರಡನೇ ಟಿ20 ವಿಶ್ವ ಕಪ್ ಟ್ರೋಫಿಯಾಗಿದೆ.

ಇದನ್ನೂ ಓದಿ: Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​​ಗೆ ವಿದಾಯ ಘೋಷಿಸಿದ್ದಾರೆ. ರೋಹಿತ್ ನಾಯಕನಾಗಿ 50 ಗೆಲುವುಗಳನ್ನು ದಾಖಲಿಸಿದ್ದಾರೆ. ಇದು ಟಿ 20 ಪಂದ್ಯಗಳಲ್ಲಿ ಯಾವುದೇ ನಾಯಕನಿಗೆ ಅತಿ ಹೆಚ್ಚು. ಗೆಲುವಾಗಿದೆ.

Continue Reading

ಪ್ರಮುಖ ಸುದ್ದಿ

Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

VISTARANEWS.COM


on

Hardik Pandya
Koo

ಬೆಂಗಳೂರು: ಭಾರತ ತಂಡದ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ (Hardik Pandya) 2024ರ ಟಿ 20 ವಿಶ್ವಕಪ್ ಗೆಲುವಿನಲ್ಲಿ (T20 World Cup 2024) ಪ್ರಮುಖ ಪಾತ್ರ ವಹಿಸಿದ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಅವರ ಬಗ್ಗೆ ಜೋರು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅವರು ತಮ್ಮ ಬಾಲ್ಯದ ದಿನಗಳ ಕ್ರಿಕೆಟ್ ಕನಸನ್ನು ವ್ಯಕ್ತಪಡಿಸುವ​ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಎಕ್ಸ್​ ಪೋಸ್ಟ್​​ನಲ್ಲಿ ಬೌಲಿಂಗ್ ಆಲ್ರೌಂಡರ್ ತಮ್ಮ ದೇಶಕ್ಕಾಗಿ ಆಡುವುದು ತನ್ನ ದೊಡ್ಡ ಗೌರವವಾಗಿ ಉಳಿಯುತ್ತದೆ ಎಂದು ಹೇಳಿಕೊಂಡಿದ್ದಾರೆ.

ಐಪಿಎಲ್ 2024 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿದ್ದ 30 ವರ್ಷದ ಪಾಂಡ್ಯ ಭಾರತದ ವಿಶ್ವಕಪ್ ಗೆಲುವಿನ ರೂವಾರಿಗಳಲ್ಲೊಬ್ಬರು. ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​ನಲ್ಲಿ ಅವರು ತಮ್ಮ ಕೊನೇ ಓವರ್​​ನಲ್ಲಿ 16 ರನ್​ಗಳನ್ನು ಕಾಪಾಡಿಕೊಂಡಿದ್ದರು. ಅಲ್ಲಿ ಅವರು ಕೇವಲ 9 ರನ್​ ನೀಡಿದ್ದರು. ಅಂತೆಯೇ ಬರೋಡಾ ಮೂಲದ ಕ್ರಿಕೆಟಿಗ ದಕ್ಷಿಣ ಆಫ್ರಿಕಾ ತಂಡವು ಮುನ್ನಡೆ ಸಾಧಿಸುತ್ತಿದ್ದಾಗ ಹೆನ್ರಿಚ್​​ ಕ್ಲಾಸೆನ್ ಅವರ ವಿಕೆಟ್ ಪಡೆದಿದ್ದರು. ಒಟ್ಟು 3 ವಿಕೆಟ್ ಪಡೆದ ಅವರು ಸಂಭ್ರಮಿಸಿದ್ದರು.

“ಬರೋಡಾದ ಒಬ್ಬ ಹುಡುಗ ತನ್ನ ಕನಸನ್ನು ಸಾಕಾರಗೊಳಿಸಿದ್ದಾನೆ. ಮತ್ತು ತನ್ನ ದಾರಿಯಲ್ಲಿ ಎದುರಾಗಿರುವ ಎಲ್ಲ ರಿಗೂ ಕೃತಜ್ಞನಾಗಿದ್ದಾನೆ. ಇದಕ್ಕಿಂತ ಹೆಚ್ಚಿನದನ್ನು ಕೇಳಲು ಸಾಧ್ಯವಿಲ್ಲ. ನನ್ನ ದೇಶಕ್ಕಾಗಿ ಆಡುವುದು ಯಾವಾಗಲೂ ದೊಡ್ಡ ಗೌರವ. ಎಂದಿಗೂ ಪದಗಳಿಂದ ಪ್ರತಿಕ್ರಿಯಿಸುವುದಿಲ್ಲ ಎಂದು ನಾನು ಯಾವಾಗಲೂ ಜೀವನದಲ್ಲಿ ನಂಬಿಕೆ ಇಟ್ಟಿದ್ದೇನೆ ಎಂದು ಪಾಂಡ್ಯ ಬರೆದುಕೊಂಡಿದ್ದಾರೆ. ಅದಕ್ಕೆ ತಾವು ಬಾಲ್ಯದಲ್ಲಿ ಬರೋಡಾ ಹಾಗೂ ಭಾರತಕ್ಕೆ ಆಡುವ ಕನಸು ಹೊಂದಿದ್ದೇನೆ ಎಂದು ಹೇಳುವ ವಿಡಿಯೊವನ್ನು ಅಪ್​ಲೋಡ್​ ಮಾಡಿದ್ದಾರೆ.

ಪಂದ್ಯದ ನಂತರ ಮಾತನಾಡಿದ ಪಾಂಡ್ಯ, ತಮ್ಮನ್ನು ಅವಮಾನ ಮಾಡಿದ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಉತ್ತಮ ಪ್ರದರ್ಶನಗಳೊಂದಿಗೆ ಅವರೆಲ್ಲರನ್ನೂ ಮೌನಗೊಳಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2024 : ಗೆಲುವಿನ ಸಂಭ್ರಮದಲ್ಲಿ ಪಾಂಡ್ಯ ಕೆನ್ನೆಗೆ ಮುತ್ತಿಟ್ಟ ನಾಯಕ ರೋಹಿತ್; ಇಲ್ಲಿದೆ ವಿಡಿಯೊ

ನಾನು ಒಳ್ಳೆಯದನ್ನು ನಂಬುತ್ತೇನೆ. ಒಬ್ಬ ವ್ಯಕ್ತಿಯಾಗಿ ನನ್ನ ಬಗ್ಗೆ ಸ್ವಲ್ಪವೂ ತಿಳಿಯದ ಜನರು ಬಹಳಷ್ಟು ಮಾತನಾಡಿದ್ದಾರೆ. ಅದರಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಆದರೆ ನಾನು ಎಂದಿಗೂ ಪದಗಳಿಂದ ಪ್ರತಿಕ್ರಿಯಿಸುವುದಿಲ್ಲ. ಸಂದರ್ಭಗಳಿಂದ ಪ್ರತಿಕ್ರಿಯಿಸುತ್ತೇನೆ. ನಾನು ಯಾವಾಗಲೂ ಜೀವನದಲ್ಲಿ ನಂಬಿಕೆ ಇಟ್ಟಿದ್ದೇನೆ. ಕಷ್ಟದ ಸಮಯಗಳು ಸಹ ಶಾಶ್ವತವಾಗಿ ಉಳಿಯುವುದಿಲ್ಲ. ಗೆದ್ದರೂ. ಸೋತರೂ ಉತ್ತಮವಾಗಿರುವುದು ಮುಖ್ಯ. ಅಭಿಮಾನಿಗಳು ಮತ್ತು ಪ್ರತಿಯೊಬ್ಬರೂ ಕಲಿಯಬೇಕು ಎಂದು ಪಾಂಡ್ಯ ಹೇಳಿದ್ದಾರೆ.

Continue Reading
Advertisement
Actor Darshan case Jaggesh reaction about this
ಕ್ರೈಂ8 mins ago

Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

Religion Conversion
ದೇಶ16 mins ago

Religion Conversion: 30 ಮುಸಲ್ಮಾನರು ಹಿಂದೂ ಧರ್ಮಕ್ಕೆ ಮತಾಂತರ

Job alert
ಉದ್ಯೋಗ18 mins ago

Job Alert: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ; ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ

Hamsa Moily Veerappa Moily's daughter passed away
ರಾಜಕೀಯ23 mins ago

Hamsa Moily: ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ

ಕ್ರೀಡೆ25 mins ago

Team India: ವಿಶ್ವಕಪ್​ ಗೆದ್ದು ಟೀಮ್​ ಇಂಡಿಯಾ ನಿರ್ಮಿಸಿದ ದಾಖಲೆಗಳ ಪಟ್ಟಿ ಹೀಗಿದೆ

Leopard attack bike rider and cab driver
ಬೆಂಗಳೂರು33 mins ago

Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

Suryakumar Yadav
ಪ್ರಮುಖ ಸುದ್ದಿ37 mins ago

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Money Guide
ಮನಿ-ಗೈಡ್39 mins ago

Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Road Accident
ಬೆಳಗಾವಿ43 mins ago

Road Accident : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Pradeep Eshwar
ಕರ್ನಾಟಕ51 mins ago

Pradeep Eshwar: ವಿಪಕ್ಷ ನಾಯಕರು ಸಿದ್ದರಾಮಯ್ಯ ಬಳಿ ಕೋಚಿಂಗ್‌ ಪಡೆಯಲಿ: ಅಶೋಕ್‌ಗೆ ಪ್ರದೀಪ್‌ ಈಶ್ವರ್‌ ಸಲಹೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು4 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ24 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌