Actor Nagabhushana : ಯಾವ್ಯಾವ ಕೇಸ್‌ನಲ್ಲಿ ನಟ ನಾಗಭೂಷಣ್‌ ಲಾಕ್‌; ಈ ಶಿಕ್ಷೆ ಗ್ಯಾರಂಟಿನಾ - Vistara News

ಕರ್ನಾಟಕ

Actor Nagabhushana : ಯಾವ್ಯಾವ ಕೇಸ್‌ನಲ್ಲಿ ನಟ ನಾಗಭೂಷಣ್‌ ಲಾಕ್‌; ಈ ಶಿಕ್ಷೆ ಗ್ಯಾರಂಟಿನಾ

Actor Nagabhushana : ಅಪಘಾತ ಪ್ರಕರಣದಲ್ಲಿ (Road Accident) ನಟ ನಾಗಭೂಷಣ್‌ಗೆ ಠಾಣಾ ಜಾಮೀನು ಸಿಕ್ಕಿದೆ. ಪೊಲೀಸರು ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.

VISTARANEWS.COM


on

Actor Nagabhushan road accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ನಾಗಭೂಷಣ ಚಲಾಯಿಸುತ್ತಿದ್ದ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿರುವ ವ್ಯಕ್ತಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಅಪಘಾತದ ಸಂಬಂಧ ಮೃತ ಕುಟುಂಬಸ್ಥರಿಂದ ದೂರು ದಾಖಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ನಾಗಭೂಷಣನನ್ನು ವಶಕ್ಕೆ ಪಡೆದು ಬಳಿಕ ಸ್ಟೇಶನ್‌ ಬೇಲ್‌ ನೀಡಿದ್ದಾರೆ.

ನಟ ನಾಗಭೂಷಣ್‌ ವಿರುದ್ಧ ಐಪಿಸಿ 279 , 337 ಹಾಗೂ 304A ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯದಿಂದ ಕಾರು ಚಾಲನೆ ಹಾಗೂ ಅತಿ ವೇಗವಾಗಿ ಫುಟ್‌ಪಾತ್‌ ಮೇಲೆ ಚಲಾಯಿಸದ್ದಕ್ಕೆ ಐಪಿಸಿ 279 ಹಾಕಲಾಗಿದೆ. 337 ಜೀವಕ್ಕೆ ಹಾನಿ ಹಾಗೂ 304 A ಅಡಿ ಅಪಘಾತ ಪ್ರಕರಣವನ್ನು ದಾಖಲು ಮಾಡಲಾಗಿದೆ.

ನಟ ನಾಗಭೂಷಣ್‌ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲ್ಲ. ಇದು ಹಿಟ್‌ ಆ್ಯಂಡ್‌ ರನ್ ಕೇಸ್‌ ಅಲ್ಲ, ಇದೊಂದು ಅಪಘಾತದ ಪ್ರಕರಣವಾಗಿದೆ. ಹೀಗಾಗಿ ಠಾಣಾ ಜಾಮೀನು ಕೊಡುತ್ತೇವೆ ಎಂದು ಸಂಚಾರಿ ದಕ್ಷಿಣ ವಿಭಾಗ ಡಿಸಿಪಿ ಶಿವಪ್ರಕಾಶ್ ದೇವರಾಜ್‌ ಪ್ರತಿಕ್ರಿಯಿಸಿದ್ದಾರೆ.

ಶನಿವಾರ ರಾತ್ರಿ 9.30ರ ಸುಮಾರಿ ಅಪಘಾತ ನಡೆದಿದೆ. ಪ್ರೇಮ ಹಾಗೂ ಕೃಷ್ಣ ದಂಪತಿ ವಾಕಿಂಗ್‌ ಮಾಡುವಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರೇಮ ಅವರು ಮೃತರಾಗಿದ್ದಾರೆ. ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಡಿಸಿಪಿ ಶಿವಪ್ರಕಾಶ್ ದೇವರಾಜ್‌ ಮಾಹಿತಿ ನೀಡಿದ್ದಾರೆ.

ಕಾರು ನಿಯಂತ್ರಣ ತಪ್ಪಿ ಫುಟ್‌ಪಾತ್ ಹತ್ತಿದೆ. ನಾಗಭೂಷಣ್ ಎಂಬುವವರನ್ನು ವಶಕ್ಕೆ ಪಡೆದಿದ್ದೇವೆ. ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರಾ ಎಂಬುದನ್ನು ತಿಳಿಯಲು ಆಲ್ಕೋಹಾಲ್ ಟೆಸ್ಟ್‌ಗೆ ಕಳುಹಿಸಿದ್ದೇವೆ. ಸದ್ಯ ಆರೋಪಿಗೆ ಠಾಣಾ ಜಾಮೀನು ನೀಡಿ ಕಳುಹಿಸಿದ್ದೇವೆ. ಪ್ರಕರಣ ಸಂಬಂಧ ಮತ್ತೆ ವಿಚಾರಣೆಗೆ ಕರೆಯುತ್ತೇವೆ. ಅಪಘಾತ ನಡೆದ ಸ್ಥಳದಲ್ಲಿ ಎರಡು ಕಡೆ ತಗ್ಗು ಇದೆ. ಹೀಗಾಗಿ ಘಟನೆ ಹೇಗೆ ಆಗಿದೆ ಎಂದು ವಿಚಾರಣೆಯನ್ನು ನಡೆಸಲಾಗುವುದು ಎಂದರು.

ಇದನ್ನೂ ಓದಿ: Actor Nagabhushana: ಡ್ರಿಂಕ್ ಆ್ಯಂಡ್‌ ಡ್ರೈವ್ ಅಲ್ಲ; ಬಂಧನದ ಬಳಿಕ ನಟ ನಾಗಭೂಷಣ ಹೇಳಿದ್ದೇನು?

ಏನಿದು ಘಟನೆ?

ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಟಿಸಿರುವ ನಟ ನಾಗಭೂಷಣ ಅವರ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್‌ 30) ದಂಪತಿಯು ನಡೆದುಕೊಂಡು ಹೋಗುವಾಗ ನಾಗಭೂಷಣ ಅವರ ಕಾರು ಡಿಕ್ಕಿಯಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್‌ ಮಾಡುವಾಗ ನಟ ನಾಗಭೂಷಣ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರು ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೃಷ್ಣ ಹಾಗೂ ಪ್ರೇಮಾ.

ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್‌ಮೆಂಟ್‌ ಬಳಿಯ ಫುಟ್‌ಪಾತ್‌ ಮೇಲೆ ವಾಕಿಂಗ್‌ ಮಾಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕೃಷ್ಣ ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕೃಷ್ಣ ಅವರ ಕೈ, ಕಾಲು ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತ ಪ್ರೇಮಾ ಅವರ ಶವವನ್ನು ಕಿಮ್ಸ್‌ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Kidnap Case: ಹಿಂದೂ ಹುಡುಗನ ಜೊತೆಗೆ ಮುಸ್ಲಿಂ ಹುಡುಗಿ ನಾಪತ್ತೆ, ಕಿಡ್ನಾಪ್‌ ದೂರು

Kidnap Case: ಹುಡುಗಿಯನ್ನು ಹುಡುಗ ಬೈಕ್‌ನಲ್ಲಿ ಕರೆದೊಯ್ದಿರುವ ಶಂಕೆ ಇದೆ. ಮೊಬೈಲ್ ಟ್ರೇಸ್ ಮಾಡಿ ಪರಿಶೀಲನೆ ನಡೆಸಿದಾಗ ಚಿಕ್ಕಬಳ್ಳಾಪುರದಲ್ಲಿ ಶಂಕರ್ ಬೈಕ್ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆಂಧ್ರದ ಕರ್ನೂಲ್ ಬಸ್ಸು ಹತ್ತಿ ತೆರಳಿರುವುದು ಪತ್ತೆಯಾಗಿದೆ.

VISTARANEWS.COM


on

kidanp case
Koo

ಬೆಂಗಳೂರು: ಪ್ರೀತಿಸುವ ನಾಟಕವಾಡಿ ಬಾಲಕಿಯನ್ನು (Minor girl) ಕಿಡ್ನಾಪ್ (Kidnap Case) ಮಾಡಲಾಗಿದೆ ಎಂದು ಆರೋಪಿಸಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪ್ರಾಪ್ತ ವಯಸ್ಸಿನ ಹುಡುಗಿಯ ಪೋಷಕರು ದೂರು ನೀಡಿದ್ದಾರೆ. ಹುಡುಗಿ ಮುಸ್ಲಿಮಳಾಗಿದ್ದು, ಆಕೆಯ ಜೊತೆಗೆ ತೆರಳಿರುವ ಹುಡುಗ ಹಿಂದೂ ಧರ್ಮದವನಾಗಿದ್ದಾನೆ.

ರಜಿಯಾ ಹಾಗು ಅಬ್ದುಲ್ ರಹಿಂ ಎಂಬುವವರ ಹದಿನಾರು ವರ್ಷದ ಪುತ್ರಿಯನ್ನು ಶಂಕರ್‌ ಎಂಬಾತ ಕಿಡ್ನಾಪ್ ಮಾಡಿದ್ದಾನೆ ಎಂದು ದೂರು ಸಲ್ಲಿಸಲಾಗಿದೆ. ಕಳೆದ ಹದಿನಾಲ್ಕು ದಿನಗಳಿಂದ ಬಾಲಕಿ ಸಿಗದೆ ಪೋಷಕರು ಕಂಗಾಲಾಗಿದ್ದಾರೆ. ಪೋಷಕರು ಈಕೆಯನ್ನು ಕಾಲೇಜಿಗೆ ಬಿಟ್ಟು ಬಂದಿದ್ದರು. ನಂತರ ಕಾಲೇಜಿನಿಂದ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಂದ ಹುಡುಕಾಟ ನಡೆದಿದೆ.

ಮೊಬೈಲ್ ಕೂಡ ಸ್ವಿಚ್ ಆಫ್ ಆದ ಹಿನ್ನೆಲೆಯಲ್ಲಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಹುಡುಗಿಯನ್ನು ಹುಡುಗ ಬೈಕ್‌ನಲ್ಲಿ ಕರೆದೊಯ್ದಿರುವ ಶಂಕೆ ಇದೆ. ಮೊಬೈಲ್ ಟ್ರೇಸ್ ಮಾಡಿ ಪರಿಶೀಲನೆ ನಡೆಸಿದಾಗ ಚಿಕ್ಕಬಳ್ಳಾಪುರದಲ್ಲಿ ಶಂಕರ್ ಬೈಕ್ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆಂಧ್ರದ ಕರ್ನೂಲ್ ಬಸ್ಸು ಹತ್ತಿ ತೆರಳಿರುವುದು ಪತ್ತೆಯಾಗಿದೆ. ಹೀಗಾಗಿ ಆಂದ್ರಪ್ರದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿರಬಹುದು ಎಂದು ತರ್ಕಿಸಲಾಗಿದೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದವನ ಬಂಧನ

ಚಿಕ್ಕಬಳ್ಳಾಪುರ: ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಕರೆದೊಯ್ದ 17 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ (Physical Abuse ) ಎಸಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಒಬ್ಬಳೇ ಆಟವಾಡುತ್ತಿದ್ದನ್ನು ಗಮನಿಸಿದ 17ರ ಪೋರ ತಿಂಡಿ ಕೊಡಿಸುವುದಾಗಿ ಪುಸಲಾಯಿಸಿದ್ದಾನೆ. ತಿಂಡಿ ಆಸೆಗೆ ಆತನೊಂದಿಗೆ ಬಾಲಕಿ ಹೋಗಿದ್ದಾಳೆ. ಆದರೆ ಅಂಗಡಿ ಕರೆದುಕೊಂಡು ಹೋಗದೇ ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಬಳಿಕ ಈ ವಿಚಾರವನ್ನು ಯಾರಿಗೂ ಹೇಳದಂತೆ ವಾಪಸ್‌ ಬಾಲಕಿಯನ್ನು ಕಳಿಸಿದ್ದಾನೆ.

ಆದರೆ ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಗಮನಿಸಿದ ಪೋಷಕರು ವಿಚಾರಿಸಿದ್ದಾರೆ. ಆಗ ಈ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬಾಲಕಿ ಪೋಷಕರು ದೂರು ನೀಡಿದ್ದು, ಅತ್ಯಾಚಾರವೆಸಗಿದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

Continue Reading

ಕ್ರೈಂ

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Actor Darshan: ದರ್ಶನ್‌ ತನ್ನ ಕುಟುಂಬದವರ ಜೊತೆಗೆ ಕೂಡ ಸುಮಧುರ ಬಾಂಧವ್ಯ ಹೊಂದಿಲ್ಲ. ಸಹೋದರ ದಿನಕರ್‌ ಮೇಲೆ ಆತ ಈ ಹಿಂದೆ ಹಲ್ಲೆ ನಡೆಸಿದ್ದಿದೆ. ತಾಯಿ ಮೀನಾ ಅವರ ಮಾತು ಕೂಡ ಕೇಳಿಸಿಕೊಳ್ಳದೆ ಪುಂಡಾಟ ಮಾಡಿದ ಉದಾಹರಣೆ ಇದೆ. ಆದರೂ, ಮನೆಯವರು ಬಂದರೆ ಮಾತ್ರ ಒಳಗೆ ಬಿಡಿ ಎಂದು ದರ್ಶನ್‌ ಜೈಲು ಸಿಬ್ಬಂದಿಗೆ ತಿಳಿಸಿದ್ದಾನೆ.

VISTARANEWS.COM


on

Actor Darshan In Central Jail remembering mother and son
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇಂದಾದರೂ ಅವರು ಆಗಮಿಸಲಿದ್ದಾರಾ ಎಂಬ ಕುತೂಹಲ ಮೂಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಭೇಟಿಗೆ ಸಹೋದರ ದಿನಕರ್ ಹಾಗೆ ತಾಯಿ ಮೀನಾ ಇಂದು ತೆರಳುವ ಸಾಧ್ಯತೆ ಇದೆ. ಬೆಳಿಗ್ಗೆ 11 ಘಂಟೆ ನಂತರ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೈಲು ಸೇರಿರುವ ದರ್ಶನ್ ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರ ಭೇಟಿಗೂ ಮನಸ್ಸು ಮಾಡಿಲ್ಲ. ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್‌ ಇತ್ತೀಚೆಗೆ ಭೇಟಿಯಾಗಿದ್ದರು.

ಆದರೆ ದರ್ಶನ್‌ ತನ್ನ ಕುಟುಂಬದವರ ಜೊತೆಗೆ ಕೂಡ ಸುಮಧುರ ಬಾಂಧವ್ಯ ಹೊಂದಿಲ್ಲ. ಸಹೋದರ ದಿನಕರ್‌ ಮೇಲೆ ಆತ ಈ ಹಿಂದೆ ಹಲ್ಲೆ ನಡೆಸಿದ್ದಿದೆ. ತಾಯಿ ಮೀನಾ ಅವರ ಮಾತು ಕೂಡ ಕೇಳಿಸಿಕೊಳ್ಳದೆ ಪುಂಡಾಟ ಮಾಡಿದ ಉದಾಹರಣೆ ಇದೆ. ಆದರೂ, ಮನೆಯವರು ಬಂದರೆ ಮಾತ್ರ ಒಳಗೆ ಬಿಡಿ ಎಂದು ದರ್ಶನ್‌ ಜೈಲು ಸಿಬ್ಬಂದಿಗೆ ತಿಳಿಸಿದ್ದಾನೆ.

ಜೈಲೂಟ ಒಗ್ಗದೆ ಇದ್ದರೂ ವಿಧಿಯಿಲ್ಲದೆ ಜೈಲೂಟ ಸವಿಯುತ್ತಿರುವ ದರ್ಶನ್ ಇಂದು ಜೈಲಿನ ಮೆನುವಿನಂತೆ ಉಪ್ಪಿಟ್ಟು ಸೇವಿಸಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಲಿದ್ದು, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಮಡದಿ ಮಗ ಆಗಮಿಸಿದ್ದರು. ಅವರು ಬಂದು ಹೋದ ದಿನ ಖುಷಿಯಾಗಿದ್ದ ದರ್ಶನ್‌, ಬಳಿಕ ಮತ್ತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಸಹ ಬಂಧಿಗಳ ಜೊತೆ ಬೆರೆಯದೆ ಒಬ್ಬಂಟಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾನೆ.

ದರ್ಶನ್‌ ಭೇಟಿ ಮಾಡಿದ ರಕ್ಷಿತಾ- ಪ್ರೇಮ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಇದನ್ನೂ ಓದಿ: Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

Continue Reading

ಪ್ರಮುಖ ಸುದ್ದಿ

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

Milk Price Hike: ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ದರ ಹೆಚ್ಚಳದ ಹಾಲು ಮಾರಾಟವಾಗುತ್ತಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಗೃಹಿಣಿಯರು, ಏಕಾಏಕಿ ದರ ಹೆಚ್ಚಳ ಮಾಡಿ ನಮ್ಮ ಜೇಬಿಗೆ ಸರಕಾರ ಕತ್ತರಿ ಹಾಕ್ತಿದೆ ಎಂದು ಆಕ್ರೋಶಿಸಿದ್ದಾರೆ.

VISTARANEWS.COM


on

shubham milk price hike
Koo

ಬಳ್ಳಾರಿ: ಶುಭಂ ಗೋಲ್ಡ್‌ ಹಾಲಿನ ದರವನ್ನು (Shubham Gold Milk) ಅರ್ಧ ಲೀಟರ್‌ಗೆ ಏಕಾಏಕಿ 4 ರೂ. ಹೆಚ್ಚಳ ಮಾಡಲಾಗಿದೆ. ಘೋಷಿತ ದರ ಏರಿಕೆಗಿಂತ (Milk Price Hike) ಹೆಚ್ಚು ದರ ಏರಿಸಲಾಗಿದೆ ಎಂದು ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಕೆಎಂಎಫ್‌ ನಂದಿನ ಹಾಲಿನ (KMF Nandini Milk) ದರ ಹೆಚ್ಚಿಸಿ ಪರಿಷ್ಕೃತ ದರದ ಪಟ್ಟಿ ಬಿಡುಗಡೆ ಮಾಡಿತ್ತು. ಪ್ರತಿ ಲೀಟರ್‌ ಹಾಗೂ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲಿ 50 ಎಂಎಲ್‌ ಹಾಲಿನ ಪ್ರಮಾಣ ಹೆಚ್ಚಿಸಿ 2 ರೂ. ಹೆಚ್ಚಳ ಮಾಡಿರುವುದಾಗಿ ಘೋಷಣೆ ಮಾಡಿತ್ತು. ಆದ್ರೆ ಶುಭಂ ಗೋಲ್ಡ್ ಹಾಲಿನ ದರವನ್ನು ತಾನೇ ಘೋಷಿಸಿದಂತೆ 2 ರೂ. ಹೆಚ್ಚಳ ಮಾಡುವ ಬದಲು ಅರ್ಧ ಲೀಟರ್‌ಗೆ 3 ರೂ. ಹಾಗೂ 1 ಲೀಟರ್‌ಗೆ 4 ರೂ. ಹೆಚ್ಚಳ ಮಾಡಿದೆ. ಈಗ ಬಂದಿರುವ ಹೊಸ ಪ್ಯಾಕೆಟ್‌ನಲ್ಲಿ ದುಬಾರಿ ಬೆಲೆ ಮುದ್ರಿತವಾಗಿದೆ. ಈ ಮೊದಲು ಅರ್ಧ ಲೀಟರ್‌ಗೆ 26 ರೂ. ಇದ್ದ ಶುಭಂ ಗೋಲ್ಡ್ ಹಾಲು 28 ರೂ. ಬದಲು 29 ರೂ. ಆಗಿದೆ. 1 ಲೀಟರ್‌ಗೆ 49 ರೂ. ಇದ್ದ ಹಾಲು 51 ರೂ. ಬದಲು 53 ರೂಪಾಯಿ ಆಗಿದೆ.

ಹೀಗಾಗಿ, ಹಾಲಿನ ದರ ಏರಿಕೆ ವಿಚಾರದಲ್ಲಿ ಕೆಎಂಏಫ್‌ ಹಾಗೂ ಸರ್ಕಾರ ಸುಳ್ಳು ಹೇಳಿದೆ ಎಂದು ಬಳಕೆದಾರರು ಆಕ್ರೋಶಿಸಿದ್ದಾರೆ. ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ದರ ಹೆಚ್ಚಳದ ಹಾಲು ಮಾರಾಟವಾಗುತ್ತಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಗೃಹಿಣಿಯರು, ಏಕಾಏಕಿ ದರ ಹೆಚ್ಚಳ ಮಾಡಿ ನಮ್ಮ ಜೇಬಿಗೆ ಸರಕಾರ ಕತ್ತರಿ ಹಾಕ್ತಿದೆ ಎಂದು ಆಕ್ರೋಶಿಸಿದ್ದಾರೆ.

ಕೆಎಂಎಫ್‌ ದರ ಹೆಚ್ಚಳ ಹೀಗಿತ್ತು:

ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 44 ರೂ.

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 45 ರೂ.

ಹೋಮೋಜಿನೈಸ್ಡ್‌ ಹಸುವಿನ ಹಾಲು
550 ಎಂಎಲ್‌ – 26 ರೂ.
1050 ಎಂಎಲ್‌ – 48 ರೂ.

ಸ್ಪೆಷಲ್‌ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಸಮೃದ್ಧಿ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 53 ರೂ.

ಹೋಮೋಜಿನೈಸ್ಡ್‌ ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 51 ರೂ.

ಸಂತೃಪ್ತಿ ಹಾಲು
550 ಎಂಎಲ್‌ – 30 ರೂ.
1050 ಎಂಎಲ್‌ – 57 ರೂ.

ಶುಭಂ ಗೋಲ್ಡ್‌ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 51 ರೂ.

ಡಬಲ್‌ ಟೋನ್ಡ್‌ ಹಾಲು
550 ಎಂಎಲ್‌ – 23 ರೂ.
1050 ಎಂಎಲ್‌ – 43 ರೂ.

ಇದನ್ನೂ ಓದಿ: Nandini Milk Price Hike : ಕೈಗೆ ಸಿಗದ ನಂದಿನಿ ಹಾಲು; ಪರಿಷ್ಕೃತ ದರ ಎಷ್ಟು?

Continue Reading

ಪ್ರಮುಖ ಸುದ್ದಿ

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Hosur Airport: ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು.

VISTARANEWS.COM


on

hosur airport
Koo

ಬೆಂಗಳೂರು: ಹೊಸೂರಿನಲ್ಲಿ (Hosur) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ನಿರ್ಮಿಸುವುದಾಗಿ (Hosur Airport) ಘೋಷಿಸಿದ ತಮಿಳುನಾಡು ಸರ್ಕಾರ (Tamil Nadu Govt) ಇದೀಗ ಅದರ ಹೊಣೆಯನ್ನು ಬಿಐಎಎಲ್‌ಗೆ (BIAL) ವಹಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್‌ ಮಾಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Kempegowda Internationa Airport) ನಿರ್ವಹಿಸುತ್ತಿರುವ ಬಿಐಎಎಲ್‌ಗೆ ಜವಾಬ್ದಾರಿ ನೀಡಲು ಮಾತುಕತೆ ನಡೆದಿದೆ. ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು. ಬಿಐಎಎಲ್‌ ಜುಲೈ 5, 2004ರಂದು ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ದೃಷ್ಟಿಯಿಂದ 2033ರವರೆಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ತಲೆ ಎತ್ತುವಂತಿಲ್ಲ.

ಈ ತಡೆಯನ್ನು ಮೀರಲು ಸ್ಟಾಲಿನ್‌ ಸರ್ಕಾರ ಪ್ಲ್ಯಾನ್‌ ಹಾಕಿಕೊಂಡಿದೆ. ಈ ಬಗ್ಗೆ ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮ ಟಿಡ್ಕೊದ ಉನ್ನತ ಅಧಿಕಾರಿಗಳ ಸಭೆ ನಡೆದಿದ್ದು, ಬಿಐಎಎಲ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದಕ್ಕೆ ಬಿಐಎಎಲ್‌ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಬಿಐಎಎಲ್‌ಗೆ ಹೊಸೂರು ವಿಮಾನ ನಿಲ್ದಾಣ ಟೆಂಡರ್ ಕೊಟ್ಟರೆ ಈ ಒಪ್ಪಂದ ಅನ್ವಯ ಆಗುವುದಿಲ್ಲ ಎನ್ನಲಾಗುತ್ತಿದೆ.

ಹೊಸೂರು ಕೈಗಾರಿಕಾ ವಲಯಕ್ಕೆ ಹೆಚ್ಚಿದ ಬೇಡಿಕೆ

ತಮಿಳುನಾಡು ಏರ್‌ಪೋರ್ಟ್ ಘೋಷಣೆ‌ ಬೆನ್ನಲ್ಲೇ ಹೊಸೂರು ಕೈಗಾರಿಕಾ ವಲಯಕ್ಕೆ ಬೇಡಿಕೆ ಹೆಚ್ಚಿದೆ. ಕಳೆದ ಐದು ವರ್ಷದಲ್ಲಿ ಹೊಸೂರು ಸುತ್ತ 200 ಹೊಸ ಕಂಪನಿಗಳು- ಕಾರ್ಖಾನೆಗಳು ಆರಂಭವಾಗಿವೆ. ಬೆಂಗಳೂರು ಸುತ್ತ ಅನುಷ್ಠಾನ ಆಗಬೇಕಿದ್ದ ಕಂಪನಿಗಳು ಹೊಸೂರಿಗೆ ಶಿಫ್ಟ್ ಆಗಿವೆ.

ಇದಕ್ಕೆ ಕಾರಣ, ತಮಿಳುನಾಡು ಸರ್ಕಾರ ಕೈಗಾರಿಕಾ ಕಂಪನಿಗಳಿಗೆ ಕಡಿಮೆ ಬೆಲೆಗೆ ಭೂಮಿ ನೀಡಿತ್ತು. ಮೆಟ್ರೋ ನಗರ ಬೆಂಗಳೂರಿಗೆ ಹತ್ತಿರದಲ್ಲೇ ಇರಿವುದರಿಂದ ಮೂಲಸೌಕರ್ಯಗಳಿಗೆ ಮೋಸವಿಲ್ಲ. ಇನ್ನು ಅತ್ತಿಬೆಲೆವರೆಗೂ ಮೆಟ್ರೋ ವಿಸ್ತೀರ್ಣದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅದೂ ಅನುಷ್ಠಾನಗೊಳ್ಳಲಿದೆ. ಹೊಸೂರು ಹೊಸ ಇಂಡಸ್ಟ್ರಿಗಳಿಗೆ ವರದಾನವಾಗುತ್ತಿದೆ. ಬೆಂಗಳೂರಿನ ಕಂಪನಿಗಳು ಹೊಸೂರಿಗೆ ಸ್ಥಳಾಂತರಕ್ಕೆ ಇದೂ ಕೂಡಾ ಕಾರಣ.

ಹೊಸೂರಿನಲ್ಲಿ ಕಾಸ್ಟ್ ಆಫ್ ಲಿವಿಂಗ್ ಕಡಿಮೆ, ಟ್ರಾನ್ಸ್ ಪೋರ್ಟ್ ಕನೆಕ್ಟಿವಿಟಿ ಹೆಚ್ಚು ಇದೆ. ಟ್ರಾಫಿಕ್ ಸಮಸ್ಯೆ ಕಡಿಮೆ ಹಾಗೂ ಮೂಲಭೂತ ಸೌಕರ್ಯ ಹೆಚ್ಚಾಗಿ ಲಭ್ಯವಿದೆ. ಹೀಗಾಗಿ ದೊಡ್ಡ ಕಂಪನಿಗಳು ಅತ್ತ ಶಿಫ್ಟ್‌ ಆಗಲು ಯೋಚಿಸುತ್ತಿವೆ. ನಗರದೊಳಗೆ ಹೆಚ್ಚುತ್ತಿರುವ ಟ್ರಾಫಿಕ್‌, ಜೀವನವೆಚ್ಚ ಜಾಗದ ಕೊರತೆಗಳು ಇದನ್ನು ಇನ್ನಷ್ಟು ಪ್ರಚೋದಿಸುತ್ತಿವೆ.

ಇದನ್ನೂ ಓದಿ: Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Continue Reading
Advertisement
Rohit Sharma
ಪ್ರಮುಖ ಸುದ್ದಿ1 min ago

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

LPG Price Cut
ವಾಣಿಜ್ಯ2 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

kidanp case
ಕ್ರೈಂ8 mins ago

Kidnap Case: ಹಿಂದೂ ಹುಡುಗನ ಜೊತೆಗೆ ಮುಸ್ಲಿಂ ಹುಡುಗಿ ನಾಪತ್ತೆ, ಕಿಡ್ನಾಪ್‌ ದೂರು

Rakshak Bullet Washed His Father grave
ಸ್ಯಾಂಡಲ್ ವುಡ್13 mins ago

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Team India Captain
ಕ್ರೀಡೆ24 mins ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ26 mins ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ37 mins ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ38 mins ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ59 mins ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ1 hour ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು21 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌