Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ - Vistara News

ಕ್ರೀಡೆ

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಅರ್ಷದ್ ನದೀಮ್ ಏಷ್ಯನ್ ಗೇಮ್ಸ್ ನಿಂದ (Asian Games) ಹೊರಗುಳಿಯಲು ನಿರ್ಧರಿಸಿದ್ದಾರೆ. ನೀರಜ್ ಚೋಪ್ರಾ ಈಗ ಚಿನ್ನದ ಪದಕದ ಫೇವರಿಟ್ ಆಗಿದ್ದಾರೆ.

VISTARANEWS.COM


on

Arshad Nadeem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹ್ಯಾಂಗ್ಜೌ: ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ ಏಷ್ಯನ್ ಗೇಮ್ಸ್ (Asian Games) 2023 ರಿಂದ ಹಿಂದೆ ಸರಿದಿದ್ದಾರೆ. 26 ವರ್ಷದ ಅಥ್ಲೀಟ್​ ಮೊಣಕಾಲು ಗಾಯದಿಂದ ಬಳಲುತ್ತಿದ್ದು, ಪ್ರಸ್ತುತ ನಡೆಯುತ್ತಿರುವ ಕಾಂಟಿನೆಂಟಲ್ ಈವೆಂಟ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಪಂದ್ಯಾವಳಿಯಲ್ಲಿ ಅವರು ಭಾರತದ ನೀರಜ್ ಚೋಪ್ರಾ ಅವರ ಅತಿದೊಡ್ಡ ಪ್ರತಿಸ್ಪರ್ಧಿಗಳಲ್ಲಿ ಒಬ್ಬರಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಅವರ ನಿರ್ಗಮನದಿಂದಾಗಿ ಏಷ್ಯನ್ ಕ್ರೀಡಾಕೂಟದ ಪುರುಷರ ಜಾವೆಲಿನ್ ಥ್ರೋನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಇರುವುದಿಲ್ಲ. ನೀರಜ್ ಚೋಪ್ರಾ ಮತ್ತು ಅರ್ಷದ್ ಕಳೆದ ಕೆಲವು ವರ್ಷಗಳಿಂದ ಜಾವೆಲಿನ್ ಥ್ರೋನಲ್ಲಿ ತೀವ್ರ ಪೈಪೋಟಿಯನ್ನು ಒಡ್ಡುತ್ತಿದ್ದಾರೆ. ಈ ಕಾರಣದಿಂದ ಭಾರತಕ್ಕೆ ಚಿನ್ನದ ಪದಕ ಬಹುತೇಕ ಖಚಿತಗೊಂಡಿದೆ.

ವರದಿಗಳ ಪ್ರಕಾರ, ಅರ್ಷದ್ ನದೀಮ್ ಏಷ್ಯಾಡ್​ಗಾಗಿ ತರಬೇತಿ ಪಡೆಯುತ್ತಿದ್ದರು ಹಾಗೂ ಈವೆಂಟ್​ನಲ್ಲಿ ಭಾಗವಹಿಸಲು ಸಜ್ಜಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಗಾಯಗೊಂಡ ಅವರನ್ನು ಎಂಆರ್​ಐ ಸ್ಕ್ಯಾನ್​ಗೆ ಒಳಪಡಿಸಿದಾಗ ಗಾಯವನ್ನು ಬಹಿರಂಗಪಡಿಸಿದೆ. ಹೀಗಾಗಿ ಅವರು ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಪಾಕಿಸ್ತಾನದ ಚೆಫ್ ಡಿ ಮಿಷನ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಹ್ಯಾಂಗ್ಝೌನಲ್ಲಿ ನಡೆದ ಮೊದಲ ತರಬೇತಿಯ ನಂತರ ಅರ್ಷದ್ ಅವರ ಬಲ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಕ್ರೀಡಾಪಟುವನ್ನು ಎಂಆರ್​ಐ ಸ್ಕ್ಯಾನ್​​ಗೆ ಕರೆದೊಯ್ಯಲಾಯಿತು, ನಂತರ ಏಷ್ಯಾಡ್​ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿಸಲಾಗಿದೆ.

ಇತ್ತೀಚೆಗೆ ಅರ್ಷದ್ ವಿಶ್ವ ಚಾಂಪಿಯನ್​ಷಿಪ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅವರು ಅಲ್ಲಿ 87.82 ಮೀಟರ್ ಎಸೆದಿದ್ದರು. ಈ ಕೂಟದಲ್ಲಿ 88.17 ಮೀಟರ್ ಎಸೆತದೊಂದಿಗೆ ತಮ್ಮ ಮೊದಲ ವಿಶ್ವ ಚಾಂಪಿಯನ್​ಷಿಪ್ ಚಿನ್ನದ ಪದಕವನ್ನು ನೀರಜ್ ಚೋಪ್ರಾ ಗೆದಿದ್ದರು.

ವಿಶ್ವ ಚಾಂಪಿಯನ್​​ಷಿಪ್​ನಲ್ಇ ಇಬ್ಬರೂ ಕ್ರೀಡಾಪಟುಗಳ ಪ್ರದರ್ಶನವು ಏಷ್ಯಾಡ್​ನಲ್ಲಿ ದೊಡ್ಡ ಪೈಪೋಟಿ ಎದುರಾಗುವ ನಿರೀಕ್ಷೆಗಳನ್ನು ಹುಟ್ಟಿಸಿತ್ತು. ನೀರಜ್​​ಗೆ ಹೋಲಿಸಿದರೆ ಅರ್ಷದ್ ಉತ್ತಮ ವೈಯಕ್ತಿಕ ಸಾಮರ್ಥ್ಯವನ್ನು ಹೊಂದಿದ್ದಾರೆ. ಕಳೆದ ವರ್ಷ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ 90.18 ಮೀಟರ್ ಎಸೆಯುವ ಮೂಲಕ ನೀರಜ್ ಚೋಪ್ರಾ ಅನುಪಸ್ಥಿತಿಯಲ್ಲಿ ತಮ್ಮ ದೇಶಕ್ಕೆ ಚಿನ್ನ ತಂದುಕೊಟ್ಟಿದ್ದರು.

ಏಷ್ಯನ್ ಗೇಮ್ಸ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ಋತುವಿನಲ್ಲಿ ನೀರಜ್ ಚೋಪ್ರಾ 88.77 ಮೀಟರ್ ಎಸೆದು ಋತುವಿನ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅರ್ಷದ್ 87.82 ಮೀ ದೂರ ಎಸೆದು ಅವರ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದಾರೆ. ಅರ್ಷದ್ ಅನುಪಸ್ಥಿತಿಯು ಈಗ ನೀರಜ್ ಅವರನ್ನು ಚಿನ್ನದ ಪದಕಕ್ಕೆ ಅತ್ಯಂತ ನೆಚ್ಚಿನ ಸ್ಪರ್ಧಿಯನ್ನಾಗಿ ಮಾಡಿದೆ. ನೀರಜ್​ ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಆಗಿದ್ದಾರೆ. ಅವರು ಜಕಾರ್ತಾದಲ್ಲಿ ಚಿನ್ನ ಗೆದಿದ್ದರು. ಅರ್ಷದ್ ಅಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Sachin Tendulkar: ಸಚಿನ್​ ಅವರು ‘ಸಚಿನ್​ ತೆಂಡೂಲ್ಕರ್ ಫೌಂಡೇಶನ್‌’ ಎನ್ನುವ ಹೆಸರಿನ ಪ್ರತಿಷ್ಠಾನದ ಮೂಲಕ ಬಡ ಮಕ್ಕಳಿಗೆ ಶಿಕ್ಷಣ, ಕ್ರಿಡೆ ಮತ್ತು ವೈದ್ಯಕೀಯ ನೆರವನ್ನು ನೀಡುತ್ತಿದ್ದಾರೆ. ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಅನೇಕ ಬಡ ಮಕ್ಕಳ ಕನಸನ್ನು ನನಸು ಮಾಡುವ ಕಾರ್ಯ ಮಾಡುತ್ತಿದ್ದಾರೆ.

VISTARANEWS.COM


on

Sachin Tendulkar
Koo

ಮುಂಬಯಿ: ಪ್ರತಿವರ್ಷ ಜೂನ್‌ ತಿಂಗಳ ಮೂರನೇ ಭಾನುವಾರ ವಿಶ್ವ ಅಪ್ಪಂದಿರ(Father’s Day) ದಿನ ಎಂದು ಆಚರಿಸಲಾಗುತ್ತದೆ. ಇಂದು ವಿಶ್ವಾದ್ಯಂತ ಅಪ್ಪಂದಿರ ದಿನಾಚರಣೆಯನ್ನು(Happy Father’s Day) ಆಚರಿಸಲಾಗುತ್ತಿದೆ. ಈ ದಿನ ತಂದೆಯ ತ್ಯಾಗ, ಕುಟುಂಬದ ಸುಖಕ್ಕಾಗಿ ಆತ ಪಡುವ ಕಷ್ಟ ಎಲ್ಲವನ್ನೂ ಸ್ಮರಿಸುತ್ತಾ ಆತನಿಗೆ ಅಭಿನಂದನೆ ಮತ್ತು ಗೌರವ ಸಲ್ಲಿಸಲಾಗುತ್ತದೆ. ಟೀಮ್​ ಇಂಡಿಯಾದ ಮಾಜಿ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್(Sachin Tendulkar)​ ಕೂಡ ಅಪ್ಪಂದಿರ ದಿನಾಚರಣೆಯನ್ನು ಆಚರಿಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ತಂದೆ ಮತ್ತಉ ತಾಯಿಯ ಜತೆಗಿನ ಸುಂದರ ಕ್ಷಣದ ಫೋಟೊವನ್ನು ಹಂಚಿಕೊಂಡಿರುವ ಸಚಿನ್​, ನನ್ನ ತಂದೆಯ ಪ್ರೀತಿಯ ನೆನಪಿಗಾಗಿ, ಅವರ ನಗು ಪ್ರತಿಯೊಂದು ಕೋಣೆಯನ್ನು ಬೆಳಗಿಸುತ್ತದೆ ಮತ್ತು ಅವರ ಪ್ರೀತಿಯು ಪ್ರತಿ ಕ್ಷಣವೂ ವಿಶೇಷವಾಗಿಸಿತ್ತು. ನಮ್ಮಿಂದ ದೂರ ಆಗಿದ್ದರೂ ಕೂಡ ಆ ಪ್ರೀತಿ ಮಾತ್ರ ಶಾಶ್ವತವಾಗಿದೆ. ತಂದೆಯ ದಿನದ ಶುಭಾಶಯಗಳು, ಬಾಬಾ! ಎಂದು ಬರೆದುಕೊಂಡಿದ್ದಾರೆ.

ಸಚಿನ್ ತನ್ನ ತಂದೆ ರಮೇಶ್ ತೆಂಡೂಲ್ಕರ್ ಅವರ ನೆನಪಿಗಾಗಿ ಪ್ರತಿ ವರ್ಷವೂ ಕೂಡ ತಂದೆಯ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಕ್ರಿಕೆಟ್​ಗೆ ನಿವೃತ್ತಿ ಹೇಳುವ ಸಂದರ್ಭದಲ್ಲಿಯೂ ಸಚಿನ್​ ಅವರು ತಮ್ಮ ತಂದೆಯೇ ನನ್ನ ರೋಲ್​ ಮಾಡೆಲ್​ ಎಂದಿದ್ದರು. ಅವರು ನೀಡಿದ ಬೆಂಬಲದಿಂದ ನಾನು ಕ್ರಿಕೆಟ್​ನಲ್ಲಿ ಈ ಎಲ್ಲ ಸಾಧನೆ ಮಾಡಿದೆ ಎಂದಿದ್ದರು.

ಇದನ್ನೂ ಓದಿ Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

ತಂದೆಯ ಸಾವಿನ ನೋವಿನ ಮಧ್ಯೆಯೂ ವಿಶ್ವಕಪ್​ ಆಡಿದ್ದ ಸಚಿನ್​


1999ರ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಆಡುತ್ತಿದ್ದ ವೇಳೆ ಸಚಿನ್​ ಅವರ ತಂದೆ ನಿಧನರಾಗಿದ್ದರು. ತಂದೆ ತೀರಿಕೊಂಡ ನೋವಿನ ಮಧ್ಯೆಯೂ ಮೂರು ದಿನಗಳ ನಂತರ ಸಚಿನ್ ಕೀನ್ಯಾ ವಿರುದ್ಧ 140 ರನ್ ಬಾರಿಸಿದ್ದರು. ​ಹಿಂದೊಮ್ಮೆ ಸಂದರ್ಶನವೊಂದರಲ್ಲಿ ಈ ಘಟನೆಯನ್ನು ನೆನೆದು ಸಚಿನ್​ ಭಾವುಕರಾಗಿದ್ದರು. ತಂದೆಯ ಹಠಾತ್ ಸಾವಿನಿಂದ ಸಚಿನ್ ವಿಶ್ವಕಪ್‌ನಿಂದ ಹಿಂದೆ ಸರಿಯಲಿದ್ದಾರೆ ಎಂಬ ಊಹಪೋಹಗಳು ಎದ್ದಿದ್ದವು. ಆದರೆ ವಿಶ್ವಕಪ್‌ನಲ್ಲಿ ಆಡುವುದನ್ನು ಮುಂದುವರೆಸಲು ತಾಯಿ ಒತ್ತಾಯಿಸಿದ ನಂತರ ಸಚಿನ್ ಮೈದಾನಕ್ಕೆ ಇಳಿದಿದ್ದರು.

ಸಚಿನ್​ ಅವರು ‘ಸಚಿನ್​ ತೆಂಡೂಲ್ಕರ್ ಫೌಂಡೇಶನ್‌’ ಎನ್ನುವ ಹೆಸರಿನ ಪ್ರತಿಷ್ಠಾನದ ಮೂಲಕ ಬಡ ಮಕ್ಕಳಿಗೆ ಶಿಕ್ಷಣ, ಕ್ರಿಡೆ ಮತ್ತು ವೈದ್ಯಕೀಯ ನೆರವನ್ನು ನೀಡುತ್ತಿದ್ದಾರೆ. ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಅನೇಕ ಬಡ ಮಕ್ಕಳ ಕನಸನ್ನು ನನಸು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಈ ಪ್ರತಿಷ್ಠಾನವು ಮಕ್ಕಳಿಗೆ ಸಮಾನ ಅವಕಾಶವನ್ನು ನೀಡಲು ಮತ್ತು ಉತ್ತಮ ಜಗತ್ತನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

24 ವರ್ಷಗಳ ಕ್ರಿಕೆಟ್‌ ಬಾಳ್ವೆಯಲ್ಲಿ ಸಚಿನ್​ 664 ಪಂದ್ಯ, 34,357 ರನ್‌, 201 ವಿಕೆಟ್‌, 100 ಅಂತಾರಾಷ್ಟ್ರೀಯ ಶತಕ, 164 ಅರ್ಧ ಶತಕ, ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ, ದೇಶದ ಶ್ರೇಷ್ಠ ಗೌರವ ಭಾರತ ರತ್ನ, ಪದ್ಮ ಪ್ರಶಸ್ತಿಗಳ ಒಡೆಯ, ರಾಜೀವ್‌ ಗಾಂಧಿ ಖೇಲ್‌ರತ್ನ ಪ್ರಶಸ್ತಿಗಳಿಂದೆಲ್ಲ ಪುರಸ್ಕೃತರಾಗಿರುವ ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

Continue Reading

ಕ್ರೀಡೆ

Rishabh Pant: ಯೂಟ್ಯೂಬ್ ಸಿಲ್ವರ್ ಪ್ಲೇ ಬಟನ್ ಪಡೆದ ರಿಷಭ್​ ಪಂತ್​; ಗಳಿಕೆಯ ಹಣ ದಾನಕ್ಕೆ ಮೀಸಲು

Rishabh Pant: ಐಪಿಎಲ್​ ಸಂದರ್ಭದಲ್ಲಿ ಪಂತ್​ ಅವರು ಈ ಯುಟ್ಯೂಬ್(YouTube) ಚಾನೆಲ್​ ಅನ್ನು ಪ್ರಾರಂಭಿಸಿದ್ದರು. ಈ ವಿಚಾರವನ್ನು ಅವರು ವಿಡಿಯೊ ಮೂಲಕ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ತಮ್ಮ ಈ ಚಾನೆಲ್​ಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡಿದ್ದರು. ಇದೀಗ ಕೇವಲ ಒಂದೇ ತಿಂಗಳಿನಲ್ಲಿ ಇವರ ಚಾನೆಲ್​ 1 ಲಕ್ಷ ಸಬ್​ಸ್ಕ್ರೈಬ್ ಕಂಡಿದೆ.

VISTARANEWS.COM


on

Rishabh Pant
Koo

ಮುಂಬಯಿ: ಟೀಮ್​ ಇಂಡಿಯಾದ ಕ್ರಿಕೆಟಿಗ ರಿಷಭ್​ ಪಂತ್​(Rishabh Pant) ಅವರು ಕ್ರಿಕೆಟ್​ ಜತೆಗೆ ಯೂಟ್ಯೂಬ್​ ಚಾನೆಲ್(Rishabh Pant YouTube channel)​ ಒಂದನ್ನು ನಡೆಸುತ್ತಿದ್ದಾರೆ. 1 ಲಕ್ಷ ಸಬ್​ಸ್ಕ್ರೈಬ್ ಆದ ನಿಟ್ಟಿನಲ್ಲಿ ಯುಟ್ಯೂಬ್ ಕಡೆಯಿಂದ ಅವರಿಗೆ ಸಿಲ್ವರ್ ಪ್ಲೇ ಬಟನ್(Silver Play Button) ಸಿಕ್ಕಿದೆ. ಈ ಸಂತಸದ ವಿಚಾರವನ್ನು ಸ್ವತಃ ಪಂತ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ. ಈ ಚಾನೆಲ್​ನಿಂದ ಬರುವ ಹಣವನ್ನು ಅಸಹಾಯಕರಿಗೆ ದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಐಪಿಎಲ್​ ಸಂದರ್ಭದಲ್ಲಿ ಪಂತ್​ ಅವರು ಈ ಯುಟ್ಯೂಬ್(YouTube) ಚಾನೆಲ್​ ಅನ್ನು ಪ್ರಾರಂಭಿಸಿದ್ದರು. ಈ ವಿಚಾರವನ್ನು ಅವರು ವಿಡಿಯೊ ಮೂಲಕ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ತಮ್ಮ ಈ ಚಾನೆಲ್​ಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡಿದ್ದರು. ಇದೀಗ ಕೇವಲ ಒಂದೇ ತಿಂಗಳಿನಲ್ಲಿ ಇವರ ಚಾನೆಲ್​ 1 ಲಕ್ಷ ಸಬ್​ಸ್ಕ್ರೈಬ್ ಕಂಡಿದೆ.


ಪಂತ್​ ಅವರು ಸದ್ಯ ಸಾಗುತ್ತಿರುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಪಾಕ್​ ವಿರುದ್ಧದ ಪಂದ್ಯದಲ್ಲಿ ಏಕಾಂಗಿ ಬ್ಯಾಟಿಂಗ್​ ಹೋರಾಟ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರು ಆ ಪಂದ್ಯದಲ್ಲಿ ನಿಂತು ಆಡದೇ ಇದ್ದಿದ್ದರೆ ಭಾರತ 100 ಗಡಿ ಕೂಡ ದಾಟುವುದು ಕೂಡ ಕಷ್ಟವಾಗಿರುತ್ತಿತ್ತು.

2022ರ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್​ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.

ರಿಷಭ್​ ಪಂತ್​ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್​ ಕ್ರಿಕೆಟ್​ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್​ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್​ ತಮ್ಮ ನಂಬಿಕೆ ಮತ್ತು ಕ್ರಿಕೆಟ್​ಗೆ ಮರಳುವ ದೃಢ ಸಂಕಲ್ಪದಿಂದ ಕಠಿಣ ವ್ಯಾಯಾಮ ನಡೆಸಿ ಕೇವಲ 14 ತಿಂಗಳಲ್ಲಿ ಸಂಪೂರ್ಣ ಫಿಟ್​ ಆಗಿ ಈ ಬಾರಿಯ ಐಪಿಎಲ್​ ಟೂರ್ನಿ ಆಡುವ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು.

ಇದನ್ನೂ ಓದಿ Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

ಸುಟ್ಟ ಗಾಯಗಳು ಹಾಗೂ ಮಂಡಿಗೆ ಗಾಯಗೊಂಡಿಗೆ ರಿಷಭ್​ ಪಂತ್​ಗೆ ಆರಂಭದಲ್ಲಿ ಡೆಹ್ರಾಡೂನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಪಂತ್​ ದುಬೈಯಲ್ಲಿ ಕ್ರಿಸ್​ಮಸ್​ ಪಾರ್ಟಿಯಲ್ಲಿ ಮುಗಿಸಿ ಮರಳಿ ಭಾರತಕ್ಕೆ ಬಂದು ತಾಯಿಗೆ ಹೊಸ ವರ್ಷದ ಸರ್​ಪ್ರೈಸ್​ ನೀಡಲೆಂದು ದೆಹಲಿಯಿಂದ ಡೆಹ್ರಾಡೂನ್​ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. 

ಹರಿಯಾಣ ರಾಜ್ಯ ಸಾರಿಗೆ ನಿಗಮದ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್‌ಜೀತ್ ಅಪಘಾತಕ್ಕೀಡಾಗಿ ನೋವಿನಿಂದ ನರಳುತ್ತಿದ್ದ ಕ್ರಿಕೆಟಿಗ ರಿಷಭ್​ ಪಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪಾಣ ಉಳಿಸುವಂತೆ ಮಾಡಿದ್ದರು. ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿ ಹೊಡೆದದ್ದನ್ನು ನೋಡಿದ ಸುಶೀಲ್ ಕುಮಾರ್ ಕುಮಾರ್​ ಮತ್ತು ಪರಮ್‌ಜೀತ್ ತಕ್ಷಣ ಬಸ್​ ನಿಲ್ಲಿಸಿ ಪಂತ್​ ಅವರಿಗೆ ಆರೈಕೆ ಮಾಡಿದ್ದರು.

Continue Reading

ಕ್ರೀಡೆ

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Euro 2024: ಡೆನ್ಮಾರ್ಕ್ ಮತ್ತು ಸರ್ಬಿಯಾ ಇದುವರೆಗೆ ಒಟ್ಟು 6 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಡೆನ್ಮಾರ್ಕ್​ ದಾಖಲೆಯ 5 ಪಂದ್ಯಗಳನ್ನು ಗೆದ್ದರೆ, ಸರ್ಬಿಯಾ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಇಂದಿನ ಪಂದ್ಯದಲ್ಲಿಯೂ ಡೆನ್ಮಾರ್ಕ್ ಗೆಲ್ಲುವ ಫೇವರಿಟ್​ ಎನಿಸಿಕೊಂಡಿದೆ

VISTARANEWS.COM


on

Euro 2024
Koo

ಮ್ಯೂನಿಚ್: ಇಂದು ನಡೆಯುವ ಯುರೋ ಕಪ್​(Euro 2024) ಫುಟ್ಬಾಲ್​ ಟೂರ್ನಿಯ ‘ಸಿ’ ಗ್ರೂಪ್​ನ ತಂಡಗಳಾದ ಡೆನ್ಮಾರ್ಕ್ ಮತ್ತು ಸ್ಲೊವೇನಿಯಾ(Denmark vs Slovenia) ಮುಖಾಮುಖಿಯಾಗಲಿವೆ. ತಡ ರಾತ್ರಿಯ ಮತ್ತೊಂದು ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್​ ಮತ್ತು ಸರ್ಬಿಯಾ ಕಾದಾಟ ನಡೆಸಲಿವೆ. ಎಲ್ಲ ನಾಲ್ಕು ತಂಡಗಳಿಗೂ ಇದು ಈ ಬಾರಿಯ ಕೂಡದ ಮೊದಲ ಪಂದ್ಯವಾಗಿದ್ದು ಗೆಲುವಿನ(euro cup) ಶುಭಾರಂಭಕ್ಕೆ ತೀವ್ರ ಪೈಪೋಟಿ ನಡೆಸುವ ನಿರೀಕ್ಷೆ ಇದೆ. ಪಂದ್ಯ ರಾತ್ರಿ 9.30ಕ್ಕೆ ಪ್ರಸಾರಗೊಳ್ಳಲಿದೆ.

ಮ್ಯಾಂಚೆಸ್ಟರ್ ಕ್ಲಬ್​ ಪರ ಆಡುವ ಮಿಡ್​ಫೀಲ್ಡರ್​ ಕ್ರಿಶ್ಚಿಯನ್ ಎರಿಕ್ಸೆನ್(Christian Eriksen) ಅವರು ತಂಡಕ್ಕೆ ಮರಳಿರುವುದು ಡೆನ್ಮಾರ್ಕ್ ತಂಡದ ಆತ್ಮವಿಶ್ವಾಸ ಹೆಚ್ಚಿಸುವಂತೆ ಮಾಡಿದೆ. 2021ರಲ್ಲಿ ಅವರು ಯರೋ ಕಪ್​ ಆಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಮೈದಾನದಲ್ಲೇ ಕುಸಿದ್ದು ಬಿದ್ದು ಆಸ್ಪತ್ರೆ ಸೇರಿದ್ದರು. ಅದೃಷ್ಟವಶಾತ್ ಅವರು ಬದುಕುಳಿದು ಇದೀಗ ಮತ್ತೆ ಯೊರೋ ಕಪ್​ನಲ್ಲಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಬಲಾಬಲ


ಡೆನ್ಮಾರ್ಕ್ ಮತ್ತು ಸರ್ಬಿಯಾ ಇದುವರೆಗೆ ಒಟ್ಟು 6 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಡೆನ್ಮಾರ್ಕ್​ ದಾಖಲೆಯ 5 ಪಂದ್ಯಗಳನ್ನು ಗೆದ್ದರೆ, ಸರ್ಬಿಯಾ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಇಂದಿನ ಪಂದ್ಯದಲ್ಲಿಯೂ ಡೆನ್ಮಾರ್ಕ್ ಗೆಲ್ಲುವ ಫೇವರಿಟ್​ ಎನಿಸಿಕೊಂಡಿದೆ. ಕಳೆದ ವರ್ಷ ನಡೆದಿದ್ದ ಟೂರ್ನಿಯಲ್ಲಿ ಡೆನ್ಮಾರ್ಕ್ ತಂಡ ಸರ್ಬಿಯಾ ವಿರುದ್ಧ 2-1 ಗೋಲುಗಳ ಅಂತರದಿಂದ ಗೆದ್ದು ಬೀಗಿತ್ತು. ಆದರೂ ಕೂಡ ಸವಾಲನ್ನು ಹಗುರುವಾಗಿ ಪರಿಗಣಿಸುವಂತಿಲ್ಲ. ಏಕೆಂದರೆ ಈ ಬಾರಿ ಸರ್ಬಿಯಾ ಹೆಚ್ಚಾಗಿ ಯುವ ಆಟಗಾರರನ್ನು ನೆಚ್ಚಿಕೊಂಡಿದೆ.

ಇದನ್ನೂ ಓದಿ Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

ಸಂಭಾವ್ಯ ತಂಡಗಳು


ಡೆನ್ಮಾರ್ಕ್​: ಕ್ಯಾಸ್ಪರ್ ಷ್ಮೆಚೆಲ್, ಜೋಕಿಮ್ ಆಂಡರ್ಸನ್, ಆಂಡ್ರಿಯಾಸ್ ಕ್ರಿಸ್ಟೆನ್ಸೆನ್, ಜಾನಿಕ್ ವೆಸ್ಟರ್ಗಾರ್ಡ್, ಜೋಕಿಮ್ ಮೆಹ್ಲೆ, ಪಿಯರೆ- ಎಮಿಲಿ ಹೊಜ್ಬ್ಜೆರ್ಗ್, ಮಾರ್ಟೆನ್ ಹ್ಜುಲ್ಮಂಡ್, ವಿಕ್ಟರ್ ಕ್ರಿಸ್ಟಿಯಾನ್ಸೆನ್, ಕ್ರಿಶ್ಚಿಯನ್ ಎರಿಕ್ಸೆನ್, ರಾಸ್ಮಸ್ ಹೊಜ್ಲುಂಡ್, ಮಿಕ್ಕೆಲ್ ಡ್ಯಾಮ್ಸಾರ್ಡ್

ಸ್ಲೊವೇನಿಯಾ: ಜಾನ್ ಒಬ್ಲಾಕ್, ಝಾನ್ ಕಾರ್ನಿಕ್ನಿಕ್, ಡೇವಿಡ್ ಬ್ರೆಕಾಲೊ, ಜಾಕಾ ಬಿಜೋಲ್, ಎರಿಕ್ ಜಾಂಜಾ, ಟೊಮಿ ಹೊರ್ವಟ್, ಟಿಮಿ ಮ್ಯಾಕ್ಸ್ ಎಲ್ಸ್ನಿಕ್, ಆಡಮ್ ಗ್ನೆಜ್ಡಾ ಸೆರಿನ್, ಜಾನ್ ಮ್ಲಾಕರ್, ಆಂಡ್ರಾಜ್ ಸ್ಪೋರಾರ್, ಬೆಂಜಮಿನ್ ಸೆಸ್ಕೋ.

ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಇಂಗ್ಲೆಂಡ್​ ನಾಯಕ


ಇಂಗ್ಲೆಂಡ್ ನಾಯಕ ಹ್ಯಾರಿ ಕೇನ್ ಅವರು ಸರ್ಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನವೇ ತಮ್ಮ ತಂಡ ಗೆಲುವು ಸಾಧಿಸಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತಂಡ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿದೆ. ಪಂದ್ಯಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಯನ್ನು ಮಾಡಿದ್ದೇವೆ, ಗೆಲ್ಲುವು ವಿಶ್ವಾಸ ನಮ್ಮ ತಂಡದಲ್ಲಿದೆ ಎಂದು ಹೇಳಿದರು.

ಹ್ಯಾರಿ ಕೇನ್ ಅವರು 2018ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ಗೋಲ್ಡನ್​ ಶೂ ಪ್ರಶಸ್ತಿ ಗೆದ್ದಿದ್ದರು. ಆದರೆ ತಂಡ ಮಾತ್ರ ಸೆಮಿಫೈನಲ್​ನಲ್ಲಿ ಕ್ರೊಯೇಷಿಯಾ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಇದುವರೆಗೂ ಇಂಗ್ಲೆಂಡ್​ ತಂಡ ಯುರೋ ಕಪ್ ಗೆದ್ದಿಲ್ಲ.

Continue Reading

ಕ್ರೀಡೆ

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

Team India Coach: ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು.

VISTARANEWS.COM


on

Team India Coach
Koo

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನೂತನ ಕೋಚ್‌(Team India Coach) ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌(Gautam Gambhir) ಅವರನ್ನೇ ನೇಮಕ ಮಾಡಲು ಬಿಸಿಸಿಐ(BCCI) ತೀರ್ಮಾನ ಕೈಗೊಂಡಿದ್ದು ಇದೇ ತಿಂಗಳ ಅಂತ್ಯದಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ. ರಾಹುಲ್​ ದ್ರಾವಿಡ್(Rahul Dravid)​ ಅವರು ಟಿ20 ವಿಶ್ವಕಪ್​ ಬಳಿಕ ಕೋಚ್(India Head Coach)​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

ದ್ರಾವಿಡ್​ ಅವರು ಕೋಚ್​ ಹುದ್ದೆಯಿಂದ ಕೆಳಗಿಳಿಯುವುದಾಗಿ ಹೇಳಿದ ಬೆನ್ನಲ್ಲೇ ಗಂಭೀರ್​ ಮುಂದಿನ ಕೋಚ್ ಎನ್ನುವ ಮಾತುಗಳು ಕೇಳಿಬಂದಿತ್ತು. ಐಪಿಎಲ್​ ವೇಳೆ ಇದಕ್ಕಾಗಿ ಜಯ್​ ಶಾ ಮತ್ತು ಬಿಸಿಸಿಐ ಅಧಿಕಾರಿಗಳು ಕೂಡ ಗಂಭೀರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮೂಲಗಳ ಪ್ರಕಾರ ಗಂಭೀರ್​ ಕೂಡ ಕೋಚ್​ ಆಗಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್‌ ತಂಡಕ್ಕೆ ಯಶಸ್ವಿ ಮಾರ್ಗದರ್ಶನ ನೀಡಿ ತಂಡವನ್ನು ಚಾಂಪಿಯನ್​ ಮಾಡಿದ ಗಂಭೀರ್‌, ರಾಹುಲ್‌ ದ್ರಾವಿಡ್‌ ಅವರ ಸ್ಥಾನ ತುಂಬಲು ಅರ್ಹರು ಎಂದು ಬಿಸಿಸಿಐ ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.  ಮೂಲಗಳ ಪ್ರಕಾರ ಗಂಭೀರ್​ ಕೋಚ್​ ಆಗುವ ದೃಷ್ಟಿಯಿಂದಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎನ್ನಲಾಗಿದೆ.

ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಅವರೇ ಕೋಚ್​ ಆಗುವುದು ಖಚಿತ ಎನ್ನುತ್ತಿದೆ ಮೂಲಗಳು. ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ India Coach: ಕೋಚ್​ ಆಗುವ ಮುನ್ನವೇ ಗಂಭೀರ್​ಗೆ ಕಿವಿಮಾತು ಹೇಳಿದ ಅನಿಲ್ ಕುಂಬ್ಳೆ

ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಭರ್ತಿ ಮಾಡುವ ಮುನ್ನ ಗಂಭೀರ್​ ಅವರು ​ಒಂದು ಷರತ್ತು ಹಾಕಿದ್ದರು. ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಿದ್ಧರಿರುವುದಾಗಿ ಹೇಳಿದ್ದರು. ಕೋಚ್​ ಹುದ್ದೆಗಾಗಿ ಎಷ್ಟು ಅರ್ಜಿಗಳು ಬಂದಿದೆ ಎಂಬುದರ ಬಗ್ಗೆ ಸದ್ಯ ಯಾವುದೇ ಮಾಹಿತಿ ಹೊರಬಿದ್ದಿಲ್ಲ ಆದರೆ ಗಂಭೀರ್​ ಕೋಚ್​ ಆಗುವುದು ಖಚಿತ ಎನ್ನಲಾಗಿದೆ.

ದ್ರಾವಿಡ್ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕವೇ ಕೋಚ್​ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಆದರೆ, ಬಿಸಿಸಿಐ ಟಿ20 ವಿಶ್ವಕಪ್​ ತನಕ ಅವರನ್ನು ಮುಂದುವರಿಯುವಂತೆ ಒತ್ತಾಯ ಮಾಡಿತ್ತು. ಹೀಗಾಗಿ ದ್ರಾವಿಡ್​ ಟಿ20 ವಿಶ್ವಕಪ್ ತನಕ ಈ ಹುದ್ದೆಯಲ್ಲಿ ಮುಂದುವರಿದರು.

Continue Reading
Advertisement
Rakshit Shetty Richard Anthony Produce By Hombale
ಕಿರುತೆರೆ13 seconds ago

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Auto Launches
ಆಟೋಮೊಬೈಲ್4 mins ago

Auto Launches: ಸ್ಕೋಡಾ ಕುಶಾಕ್‌, ಬಿಎಂಡಬ್ಲ್ಯು ಆರ್ 1300 ಸೇರಿ ಇನ್ನೂ ಹಲವು ಹೊಸ ವಾಹನ ಮಾರುಕಟ್ಟೆಗೆ!

Irregular Periods problem Here are some simple home remedies
ಆರೋಗ್ಯ20 mins ago

Irregular Periods: ಏರುಪೇರಾದ ಋತುಚಕ್ರದ ಸಮಸ್ಯೆಯೇ? ಇಲ್ಲಿವೆ ಸರಳ ಮನೆಮದ್ದುಗಳು!

Drowned in river
ಕ್ರೈಂ38 mins ago

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Himanta Biswa Sarma
ದೇಶ52 mins ago

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Actor Darshan Renukaswamy Send His Photos To Pavitra Gowda
ಕ್ರೈಂ1 hour ago

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

bakrid 2024
ಧಾರ್ಮಿಕ2 hours ago

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Karnataka weather Forecast
ಮಳೆ2 hours ago

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Dina Bhavishya
ಭವಿಷ್ಯ4 hours ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ10 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ14 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ15 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ21 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌