Sikkim Flash Flood: ಸಿಕ್ಕಿಂನಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ ಹೇಗಾಯ್ತು? ಉಪಗ್ರಹ ಫೋಟೋದಲ್ಲಿದೆ ಮಾಹಿತಿ! - Vistara News

ದೇಶ

Sikkim Flash Flood: ಸಿಕ್ಕಿಂನಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ ಹೇಗಾಯ್ತು? ಉಪಗ್ರಹ ಫೋಟೋದಲ್ಲಿದೆ ಮಾಹಿತಿ!

Sikkim Flash Flood: ಸಿಕ್ಕಿಂನಲ್ಲಿ ಸಂಭವಿಸಿದ ದಿಢೀರ್ ಪ್ರವಾಹಕ್ಕೆ ರಾಜ್ಯ ನಲುಗಿ ಹೋಗಿದೆ. ಬೃಹತ್ ಸರೋವರವು ಕೊಚ್ಚಿ ಹೋಗಿದೆ.

VISTARANEWS.COM


on

Sikkim Flash Flood, Satellite Images Show How lhonak lake burst and caused floods
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮೇಘಸ್ಫೋಟದಿಂದಾಗಿ (Cloud Burst) ಸಿಕ್ಕಿಮ್‌ನಲ್ಲಿ (Sikkim Flash Flood) ಉಂಟಾದ ದಿಢೀರ್ ಪ್ರವಾಹದಲ್ಲಿ 23 ಯೋಧರು ಸೇರಿದಂತೆ 43 ಜನರು ನಾಪತ್ತೆಯಾಗಿದ್ದಾರೆ. 8 ಜನರು ಮೃತಪಟ್ಟಿದ್ದಾರೆ. ಎನ್‌ಡಿಆರ್‌ಎಫ್ (NDRF) ಸೇರಿದಂತೆ ಇತರ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಮಧ್ಯೆ, ಈ ದಿಢೀರ್ ಪ್ರವಾಹ ಉಂಟಾದ ಕ್ಷಣದ ಉಪಗ್ರಹ ಫೋಟೋಗಳನ್ನು (Satellite Images) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಹಂಚಿಕೊಂಡಿದೆ. ಮೇಘಸ್ಫೋಟದಿಂದಾಗಿ ಸಿಕ್ಕಿಂನ ಲ್ಹೋನಕ್ ಸರೋವರದ ಸುಮಾರು ಶೇ.65 ಅಂದರೆ, 105 ಹೆಕ್ಟೇರ್‌ ಪ್ರದೇಶದ ನೀರು ಹರಿದು ಹೋಗಿ, ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.

ಬಾಹ್ಯಾಕಾಶ ಸಂಸ್ಥೆ ಇಸ್ರೋ, ಬುಧವಾರ ಸಂಜೆ ಬಿಡುಗಡೆ ಮಾಡಿದ ಉಪಗ್ರಹ ಚಿತ್ರಗಳು (ದಿಢೀರ್ ಪ್ರವಾಹದ ಮೊದಲು ಮತ್ತು ನಂತರ) ಸರೋವರದಲ್ಲಿನ ನೀರಿನ ಪರಿಮಾಣದಲ್ಲಿ ನಾಟಕೀಯ ಬದಲಾವಣೆಗಳನ್ನು ತೋರಿಸಿದೆ. ಸೆಪ್ಟೆಂಬರ್ 17 ಮತ್ತು ಸೆಪ್ಟೆಂಬರ್ 28 ರಂದು ತೆಗೆದ ಫೋಟೋಗಳು ಅನುಕ್ರಮವಾಗಿ 162.7 ಮತ್ತು 167.4 ಹೆಕ್ಟೇರ್ ಹೊಂದಿರುವ ಬುಲೆಟ್ ಆಕಾರದ ಸರೋವರವನ್ನು ತೋರಿಸುತ್ತವೆ.

ಈ ಸುದ್ದಿಯನ್ನೂ ಓದಿ: Sikkim Flash Flood: ಸಿಕ್ಕಿಂ ದಿಢೀರ್ ಪ್ರವಾಹ, ಇನ್ನೂ ಪತ್ತೆಯಾಗಿಲ್ಲ 23 ಯೋಧರು, 8 ಮಂದಿ ಸಾವು

ಬುಧವಾರ ಬೆಳಿಗ್ಗೆ 6 ಗಂಟೆಗೆ ತೆಗೆದ ಚಿತ್ರ ಎಲ್ಲ ಕತೆ ಹೇಳುತ್ತದೆ. ಮೇಘಸ್ಫೋಟ ಮತ್ತು ಹಠಾತ್ ಪ್ರವಾಹವು ರಾಜ್ಯದಲ್ಲಿ ವಿನಾಶವನ್ನೇ ಸೃಷ್ಟಿಸಿದೆ. ಪ್ರವಾಹಕ್ಕೆ ಜಲವಿದ್ಯುತ್ ಯೋಜನೆಯ ದೊಡ್ಡ ಭಾಗಗಳನ್ನು ಕೊಚ್ಚಿಕೊಂಡು ಹೋಗಿದೆ ಮತ್ತು 49 ಜನರನ್ನು ಕಾಣೆಯಾಗಿದೆದ್ದಾರೆ. ಸರೋವರವು ಅರ್ಧಕ್ಕಿಂತ ಹೆಚ್ಚು ಕಡಿಮೆಯಾಗಿದೆ ಮತ್ತು ಅಂದಾಜು 60.3 ಹೆಕ್ಟೇರ್‌ ಪ್ರದೇಶದಲ್ಲಷ್ಟೇ ನೀರು ಉಳಿದಿದೆ.

ಸರೋವರದ ಪ್ರದೇಶದಲ್ಲಿ ಬದಲಾವಣೆಗಳನ್ನು ಫೋಟೋಗಳ ಮೂಲಕ ಗುರುತಿಸಬಹುದು. ಸೆಪ್ಟೆಂಬರ್ 17, ಸೆಪ್ಟೆಂಬರ್ 28, ಮತ್ತು ಅಕ್ಟೋಬರ್ 4 ರ ಫೋಟೋಗಳ ಪ್ರಕಾರ, ಸರೋವರವು ಒಡೆದಿರುವುದನ್ನು ಗಮನಿಸಬಹುದು. ಮೇಘ ಸ್ಫೋಟದ ಬಳಿಕ ಸರೋರವದ ಸುಮಾರು 105 ಹೆಕ್ಟೇರ್ ಬರಿದಾಗಿದೆ. ಇದರಿಂದಾಗಿ ಕೆಳಭಾಗದಲ್ಲಿ ಹಠಾತ್ ಪ್ರವಾಹ ಉಂಟಾಗಿರಬಹುದು. ಇನ್ನಷ್ಟು ಪರಿಶೀಲನೆ ಮುಂದುವರಿಸುತ್ತೇವೆ ಎಂದು ಇಸ್ರೋ ಹೇಳಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು (Teenage Boy Arrested) ಬಂಧಿಸಲಾಗಿದೆ.

VISTARANEWS.COM


on

By

Teenage boy arrested
Koo

ಉತ್ತರಪ್ರದೇಶ: ಅತ್ಯಾಚಾರಿಯನ್ನು (rapist) ಕೊಂದ ಹದಿಹರೆಯದ ಬಾಲಕನನ್ನು (Teenage Boy Arrested) ಉತ್ತರಪ್ರದೇಶದ (Uttar Pradesh) ಮುಜಾಫರ್‌ನಗರದಲ್ಲಿ (Muzaffarnagar) ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 302 (Murder) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಮೇ 20ರಂದು ಬಾಲಕನ ಮನೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸ್ ತನಿಖೆಯ ಅನಂತರ ಹದಿಹರೆಯದವರನ್ನು ಶನಿವಾರ ಬಂಧಿಸಲಾಯಿತು.

ವ್ಯಕ್ತಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ ಅನಂತರ ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಎಸ್ಪಿ (ಗ್ರಾಮೀಣ) ಆದಿತ್ಯ ಬನ್ಸಾಲ್ ಅವರು, ವಾರಗಳ ಹಿಂದೆ ಮೃತರು ಅಪ್ರಾಪ್ತ ವಯಸ್ಕನನ್ನು ಅಶ್ಲೀಲ ವಿಡಿಯೋ ಕ್ಲಿಪ್ ಅನ್ನು ರೆಕಾರ್ಡ್ ಮಾಡಿದ್ದರು. ಬಾಲಕನಿಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಮತ್ತು ಪದೇ ಪದೇ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು.

ಸೋಮವಾರ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ ಅನಂತರ, ವ್ಯಕ್ತಿ ತನ್ನ ಮನೆಗೆ ಬರುವಂತೆ ಬಾಲಕನಿಗೆ ಒತ್ತಾಯಿಸಿದ್ದನು. ಆತ ಕಿರುಕುಳ ನೀಡುತ್ತಿದ್ದುದರಿಂದ ಹುಡುಗ ತನ್ನ ಪಕ್ಕದಲ್ಲಿದ್ದ ಹರಿತವಾದ ವಸ್ತುವನ್ನು ಎತ್ತಿಕೊಂಡು ಹೋಗಿ ವ್ಯಕ್ತಿಯ ತಲೆ ಮತ್ತು ಗಂಟಲಿನ ಮೇಲೆ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಆತನ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರೀತಿಗೆ ವಿರೋಧ; ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಅಜಯ್ ಮನೋಹರ ಸೂರ್ಯವಂಶಿ (22) ಮೃತ ವ್ಯಕ್ತಿ. ಕೆಲವು ವರ್ಷಗಳಿಂದ ಈತ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ. ಹೀಗಾಗಿ ಆತನ ಭಯಕ್ಕೆ ಹೆದರಿ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಹೊಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಹಿಟ್‌ ಆ್ಯಂಡ್‌ ರನ್‌: ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದೇಶ

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Cyclone Remal:ಹವಾಮಾನ ಇಲಾಖೆಯು ಕೆಪುಪಾರಾ (ಬಾಂಗ್ಲಾದೇಶ) ದಿಂದ ಸುಮಾರು 800 ಕಿಮೀ ದಕ್ಷಿಣ-ನೈಋತ್ಯ ಮತ್ತು ಕ್ಯಾನಿಂಗ್ (ಪಶ್ಚಿಮ ಬಂಗಾಳ) ನಿಂದ 810 ಕಿಮೀ ದೂರದಲ್ಲಿ ಅಂದರೆ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮೇ 24 ರಂದು ಪಶ್ಚಿಮ ಮಧ್ಯ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತವನ್ನು ಗುರುತಿಸಿದೆ.
ರೆಮಲ್ ಚಂಡಮಾರುತವು ಪ್ರಸ್ತುತ ಉತ್ತರಕ್ಕೆ ಚಲಿಸುತ್ತಿದೆ. ಈ ಚಂಡಮಾರುತವು ಮೇ 26 ರ ಮಧ್ಯರಾತ್ರಿಯ ಹೊತ್ತಿಗೆ ಸಾಗರ್ ದ್ವೀಪ ಮತ್ತು ಖೇಪುಪಾರ ನಡುವೆ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ

VISTARANEWS.COM


on

Cyclone Remal
Koo

ಕೋಲ್ಕತ್ತಾ: ಇಂದು ಸಂಜೆ 5:30ರ ವೇಳೆಗೆ ರೆಮಲ್‌ ಚಂಡಮಾರುತ ಪಶ್ಚಿಮ ಬಂಗಾಳ(West Bengal) ಮತ್ತು ಬಾಂಗ್ಲಾದೇಶ(Bangladesh)ದ ಕರಾವಳಿಗೆ ಅಪ್ಪಳಿಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದ್ದು, ಬಾಂಗ್ಲಾದೇಶದ ಖೇಪುಪಾರಾದಲ್ಲಿ 290 ಕಿ.ಮೀ ಮತ್ತು ಸಾಗರ್‌ ದ್ವೀಪದ 270 ಕಿ.ಮೀ ವ್ಯಾಪ್ತಿಯಲ್ಲಿ ರೆಮಲ್‌ ಚಂಡಮಾರುತ(Cyclone Remal) ಬೀಸಲಿದೆ. ಈ ಚಂಡಮಾರುತದಿಂದಾಗಿ ಗಂಟೆಗೆ 102 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಬಹುದು. ಪರಿಣಾಮವಾಗಿ ಭಾನುವಾರ(ಮೇ 26) ಮತ್ತು ಸೋಮವಾರ (ಮೇ 27)ರಂದು ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ, ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗು ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹವಾಮಾನ ಇಲಾಖೆಯು ಕೆಪುಪಾರಾ (ಬಾಂಗ್ಲಾದೇಶ) ದಿಂದ ಸುಮಾರು 800 ಕಿಮೀ ದಕ್ಷಿಣ-ನೈಋತ್ಯ ಮತ್ತು ಕ್ಯಾನಿಂಗ್ (ಪಶ್ಚಿಮ ಬಂಗಾಳ) ನಿಂದ 810 ಕಿಮೀ ದೂರದಲ್ಲಿ ಅಂದರೆ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮೇ 24 ರಂದು ಪಶ್ಚಿಮ ಮಧ್ಯ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತವನ್ನು ಗುರುತಿಸಿದೆ.
ರೆಮಲ್ ಚಂಡಮಾರುತವು ಪ್ರಸ್ತುತ ಉತ್ತರಕ್ಕೆ ಚಲಿಸುತ್ತಿದೆ. ಈ ಚಂಡಮಾರುತವು ಮೇ 26 ರ ಮಧ್ಯರಾತ್ರಿಯ ಹೊತ್ತಿಗೆ ಸಾಗರ್ ದ್ವೀಪ ಮತ್ತು ಖೇಪುಪಾರ ನಡುವೆ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ.

ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ಎಚ್ಚರಿಕೆ ನೀಡಿದೆ. ಇದಲ್ಲದೇ ಈಗಾಗಲೇ ಸಮುದ್ರದಲ್ಲಿ ಬೀಡುಬಿಟ್ಟಿರುವ ಮೀನುಗಾರರು ಮೇ 26ರೊಳಗೆ ಕರಾವಳಿಗೆ ಮರಳುವಂತೆ ಸೂಚಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ (ICG) ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದು, ಒಂಬತ್ತು ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದೆ. ಪೂರ್ವ ಕರಾವಳಿಯಲ್ಲಿ 10 ಹಡಗುಗಳು ಮತ್ತು 2 ವಿಮಾನಗಳನ್ನು ನಿಯೋಜಿಸಲಾಗಿದೆ, ಇದರಿಂದಾಗಿ ಅವರು ಸಮುದ್ರದಲ್ಲಿ ಇರುವ ಅಥವಾ ಹೋಗುವ ಮೀನುಗಾರರ ಮೇಲೆ ನಿಗಾ ಇಡಬಹುದು.

ರೆಮಲ್‌ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಇಂದು ಮಧ್ಯಾಹ್ನದ ನಂತರ ಭಾರೀ ಮಳೆಯಾಗಲಿದ್ದು, ಭೂಕುಸಿತ ಸಂಭವಿಸುವ ಸಾಧ್ಯತೆ ದಟ್ಟವಾಗಿದೆ. ರಾಜ್ಯಾದ್ಯಂತ 20 ಸೆಂ.ಮೀ ಮಳೆಯಾಗು ಸಂಭವ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Continue Reading

ದೇಶ

Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಬಳಸಿಕೊಂಡು ತನ್ನನ್ನು ತಾನು ಉಪನ್ಯಾಸಕಳೆಂದು ಹೇಳಿಕೊಂಡು ವಿದ್ಯಾರ್ಥಿನಿಯರಿಗೆ ಕರೆ ಮಾಡುತ್ತಿದ್ದ. ಮಹಿಳೆಯರ ಧ್ವನಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ, ಸ್ಕಾಲರ್‌ಶಿಪ್‌ ಪಡೆಯಲು ಅಹಾಯ ಮಾಡುವುದಾಗಿ ವಿದ್ಯಾರ್ಥಿನಿಯರನ್ನು ನಂಬಿಸುತ್ತಾನೆ. ಯಾರೂ ಇಲ್ಲದ ಸ್ಥಳಕ್ಕೆ ಬರುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸುವ ಈತ ಅಲ್ಲಿ ಯುವಕನೋರ್ವ ನಿಮ್ಮನ್ನು ತನ್ನ ಬಳಿಕ ಕರೆದೊಯ್ಯಲು ಬರುತ್ತಾನೆ ಎಂದು ಹೇಳುತ್ತಾನೆ. ಆತನ ಮಾತನ್ನು ನಂಬಿದ ಬಾಲಕಿಯರು ಹಾಗೆಯೇ ಮಾಡುತ್ತಾರೆ. ಅವರನ್ನು ಕಾಡಿಗೆ ಎಳೆದೊಯ್ದು ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ದೂರಿನಲ್ಲಿ ಸಂತ್ರಸ್ತ ಯುವತಿ ಹೇಳಿದ್ದಾಳೆ.

VISTARANEWS.COM


on

physical abuse
Koo

ಭೋಪಾಲ್‌: ಆತ ಅಕ್ಷರಶಃ ಒಂದು ಅಕ್ಷರ ಓದಲೂ ಬರೆಲು ಬಾರದ ಅನಕ್ಷರಸ್ಥ. ಆದರೆ ತಾನು ನಡೆಸುತ್ತಿದ್ದ ಹೀನಕೃತ್ಯಕ್ಕೆ ಆಧುನಿಕ ತಂತ್ರಜ್ಞಾನವನ್ನು ಹೇಗೆ ಬಳಸಿಕೊಂಡಿದ್ದ ಎಂದರೆ ಒಂದು ಕ್ಷಣಕ್ಕೆ ಎಂಥವರಾದರೂ ಆತನ ಮಾತಿಗೆ ತಲೆದೂಗಲೇ ಬೇಕು. ಆಧುನಿಕ ತಂತ್ರಜ್ಞಾನ ಇಂತಹ ಕ್ರಿಮಿನಲ್‌ಗಳಿಗೆ ಹೇಗೆ ಸಹಾಯ ಆಗ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ವಾಯಿಸ್‌ ಚೇಜಿಂಗ್‌ ಆಪ್‌(Voice Changing App) ಬಳಸಿಕೊಂಡು ವಿದ್ಯಾರ್ಥಿನಿಯರಿಗೆ ಬಲೆ ಬೀಸಿ ಅವರ ಮೇಲೆ ಅತ್ಯಾಚಾರ(Physical Abuse) ಎಸಗುತ್ತಿದ್ದ ಕಿಡಿಗೇಡಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮಧ್ಯಪ್ರದೇಶದ ಸಿಧಿಯಲ್ಲಿ ಈ ಘಟನೆ ನಡೆದಿದ್ದು, ಬೃಜೇಶ್‌ ಕುಶ್ವಾಹ್‌ ಎಂಬಾತ ಬಂಧಿತ ಆರೋಪಿ. ಈತ ವಾಯಿಸ್‌ ಚೇಂಜಿಂಗ್‌ ಆಪ್‌ ಬಳಸಿಕೊಂಡು ತನ್ನನ್ನು ತಾನು ಉಪನ್ಯಾಸಕಳೆಂದು ಹೇಳಿಕೊಂಡು ವಿದ್ಯಾರ್ಥಿನಿಯರಿಗೆ ಕರೆ ಮಾಡುತ್ತಿದ್ದ. ಮಹಿಳೆಯರ ಧ್ವನಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ, ಸ್ಕಾಲರ್‌ಶಿಪ್‌ ಪಡೆಯಲು ಅಹಾಯ ಮಾಡುವುದಾಗಿ ವಿದ್ಯಾರ್ಥಿನಿಯರನ್ನು ನಂಬಿಸುತ್ತಾನೆ. ಯಾರೂ ಇಲ್ಲದ ಸ್ಥಳಕ್ಕೆ ಬರುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸುವ ಈತ ಅಲ್ಲಿ ಯುವಕನೋರ್ವ ನಿಮ್ಮನ್ನು ತನ್ನ ಬಳಿಕ ಕರೆದೊಯ್ಯಲು ಬರುತ್ತಾನೆ ಎಂದು ಹೇಳುತ್ತಾನೆ. ಆತನ ಮಾತನ್ನು ನಂಬಿದ ಬಾಲಕಿಯರು ಹಾಗೆಯೇ ಮಾಡುತ್ತಾರೆ. ಅವರನ್ನು ಕಾಡಿಗೆ ಎಳೆದೊಯ್ದು ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ದೂರಿನಲ್ಲಿ ಸಂತ್ರಸ್ತ ಯುವತಿ ಹೇಳಿದ್ದಾಳೆ.

ಇನ್ನು ಕುಶ್ವರಾನ ಜಾಲಕ್ಕೆ ಇದುವರೆಗೆ 7 ಜನ ಆದಿವಾಸು ಕಾಲೇಜು ವಿದ್ಯಾರ್ಥಿನಿಯರು ಬಲಿಯಾಗಿದ್ದಾರೆ ಎನ್ನಲಾಗಿದೆ.

ಆರೋಪಿ ಕುಶ್ವಾಹ ಹೆಲ್ಮೆಟ್ ಧರಿಸುತ್ತಿದ್ದ. ಅಲ್ಲದೇ ಕೈಗಳಿಗೆ ಗ್ಲೌಸ್ ಧರಿಸುತ್ತಿದ್ದ. ಇದರಿಂದಾಗಿ ಸಂತ್ರಸ್ತೆಯರಿಗೆ ಆತನ ಗುರುತು ಪತ್ತೆಹಚ್ಚಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದಾಖಲಾದ ದೂರುಗಳಲ್ಲಿ ಆತ ಗ್ಲೌಸ್ ಧರಿಸುತ್ತಿದ್ದ ಎಂಬ ವಿಷಯದಿಂದ, ಆತ ಸಿಕ್ಕಿಬಿದ್ದಿದ್ದಾನೆ. ಆರೋಪಿ ಈ ಹಿಂದೆ ಮಹಾರಾಷ್ಟ್ರದ ಗಿರಣಿಯೊಂದರಲ್ಲಿ ಕೆಲಸ ಮಾಡುವಾಗ ಕೈ ಸುಟ್ಟುಕೊಂಡಿದ್ದ. ಇದೇ ಕಾರಣಕ್ಕೆ ಗ್ಲೌಸ್ ಧರಿಸುತ್ತಿದ್ದ ಎಂದು ತಿಳಿದು ಬಂದಿದೆ.ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಆರೋಪಿಗಳಿಂದ ಇನ್ನೂ ಹೆಚ್ಚಿನ ದೌರ್ಜನ್ಯಗಳಾಗಿವೆಯೇ ಎಂದು ತನಿಖೆ ನಡೆಸಲು 9 ಪೊಲೀಸ್ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಕುಶ್ವಾಹಾ ಸೇರಿ ಆತನ ಮೂವರು ಸಹಚರರನ್ನು ಬಂಧಿಸಲಾಗಿದೆ. ಸಿಧಿ ಜಿಲ್ಲಾಡಳಿತ ಬುಲ್ಡೋಜರ್ ಬಳಸಿ ಆರೋಪಿಗಳ ಮನೆಯನ್ನು ಧ್ವಂಸಗೊಳಿಸಿದೆ. ಇನ್ನು ಮೊಬೈಲ್‌ ಆಪ್‌ಗಳ ಬಗ್ಗೆ ಎಚ್ಚರವಹಿಸುವಂತೆ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ.

ಇದನ್ನೋ ಓದಿ: Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

Continue Reading

ದೇಶ

Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

Fire Accident:ಗುಜರಾತ್‌ನ ರಾಜ್‌ಕೋಟ್‌ ನಗರದಲ್ಲಿರುವ ಗೇಮಿಂಗ್‌ ಜೋನ್‌ ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ

VISTARANEWS.COM


on

Fire Accident
Koo

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ (Fire Accident) ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 32 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಹಲವು ಜನ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿಯನ್ನು ನಂದಿಸಲು ಸಿಬ್ಬಂದಿಯು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದಾಗ್ಯೂ, ಬೆಂಕಿಯಲ್ಲಿ ಎಷ್ಟು ಜನ ಸಿಲುಕಿದ್ದಾರೆ? ಇನ್ನೂ ಎಷ್ಟು ಜನ ಕಾಣೆಯಾಗಿದ್ದಾರೆ ಎಂಬುದರ ಕುರಿತು ನಿಖರ ಮಾಹಿತಿ ದೊರೆತಿಲ್ಲ.

ಇನ್ನು ಎರಡು ಅಂತಸ್ತಿನ ಶೆಡ್‌ನಲ್ಲಿ ನಿರ್ಮಿಸಲಾಗಿದ್ದ ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವೇ ಸಿಕ್ಕಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ರಾಜ್‌ಕೋಟ್‌ ಮೇಯರ್‌ ನಯನಾ ಪೆಢಾದಿಯಾ ಅವರೇ ಮಾಹಿತಿ ನೀಡಿದ್ದಾರೆ. “ನೋ ಅಬ್ಜೆಕ್ಷನ್‌ ಸರ್ಟಿಫಿಕೇಟ್‌ ಇಲ್ಲದೆಯೇ ಗೇಮಿಂಗ್‌ ಜೋನ್‌ ಕಾರ್ಯನಿರ್ವಹಿಸುತ್ತಿದ್ದ ಕುರಿತು ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ನುಸುಳದಂತೆ ತನಿಖೆ ನಡೆಸಲಾಗುತ್ತದೆ. ಇದು ಸಣ್ಣ ಸಂಗತಿ ಅಲ್ಲ” ಎಂಬುದಾಗಿ ಮಾಹಿತಿ ನೀಡಿದ್ದಾರೆ.

4 ಲಕ್ಷ ರೂ. ಪರಿಹಾರ

ರಾಜ್‌ಕೋಟ್‌ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ. ಇನ್ನು ಕಾರ್ಯಾಚರಣೆ ಕ್ಷಿಪ್ರವಾಗಿ ನಡೆಸಿ, ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

ಇನ್ನು ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಎಲ್ಲಾ ಅಗತ್ಯಕ್ರಮಗಳನ್ನು ರಾಜ್ಯ ಸರ್ಕಾರ ನಿರ್ವಹಿಸುತ್ತಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

Continue Reading
Advertisement
Road Accident in Bengaluru
ಕ್ರೈಂ14 seconds ago

Road Accident : ಕಾರು ಡ್ರೈವಿಂಗ್‌ ಕಲಿಯುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಳು; ಡೆಡ್ಲಿ ಆಕ್ಸಿಡೆಂಟ್‌ಗೆ ಬಾಲಕಿ ಬಲಿ

Teenage boy arrested
ಕ್ರೈಂ14 mins ago

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

Janhvi Kapoor on paparazzi culture
ಬಾಲಿವುಡ್21 mins ago

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Gold Rate Today
ಕರ್ನಾಟಕ26 mins ago

Gold Rate Today: ಇಂದೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Tiger attack
ಮೈಸೂರು46 mins ago

Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

IPL 2024 Final
ಕ್ರೀಡೆ51 mins ago

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

Cyclone Remal
ದೇಶ51 mins ago

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Dhruva Sarja KD Movie Release date announce
South Cinema1 hour ago

Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Road Accident
ಉತ್ತರ ಕನ್ನಡ1 hour ago

Road Accident : ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

Monsoon 2024
ಮಳೆ2 hours ago

Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌