Khalistan Row: ಕೆನಡಾದಲ್ಲಿ ಭಾರತೀಯ ರಾಯಭಾರಿಗಳ ಕೊಲೆ ಬೆದರಿಕೆ ಪೋಸ್ಟರ್‌ಗಳು ಮತ್ತೆ ಪ್ರತ್ಯಕ್ಷ, ಟ್ರುಡೊ ಮೌನ - Vistara News

ದೇಶ

Khalistan Row: ಕೆನಡಾದಲ್ಲಿ ಭಾರತೀಯ ರಾಯಭಾರಿಗಳ ಕೊಲೆ ಬೆದರಿಕೆ ಪೋಸ್ಟರ್‌ಗಳು ಮತ್ತೆ ಪ್ರತ್ಯಕ್ಷ, ಟ್ರುಡೊ ಮೌನ

ಖಲಿಸ್ತಾನಿಗಳ ನೆಲೆಯಾಗಿರುವ ಸರ್ರೆಯಲ್ಲಿ ಇವರ ಚಟುವಟಿಕೆ ಅಡೆತಡೆಯಿಲ್ಲದೆ ಮುಂದುವರಿದಿದೆ. ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆನೀಡುವ ಪೋಸ್ಟರ್‌ಗಳನ್ನು ದೇಶದಲ್ಲಿ ಅಲ್ಲಲ್ಲಿ ಪ್ರದರ್ಶಿಸಲಾಗುತ್ತಿದೆ.

VISTARANEWS.COM


on

khalistan posters
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಟ್ಟಾವ: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಭಾರತದ ವಿರುದ್ಧ ದಂಗೆಗೆ, ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆ ನೀಡುವ ಖಲಿಸ್ತಾನಿ ಉಗ್ರರ ಪೋಸ್ಟರ್‌ಗಳು (Khalistan Row) ಮತ್ತೆ ಪ್ರತ್ಯಕ್ಷವಾಗಿವೆ. ಆದರೆ ಕೆನಡಾ ಸರ್ಕಾರ (India Canada Row) ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಖಲಿಸ್ತಾನಿಗಳ ನೆಲೆಯಾಗಿರುವ ಸರ್ರೆಯಲ್ಲಿ ಇವರ ಚಟುವಟಿಕೆ ಅಡೆತಡೆಯಿಲ್ಲದೆ ಮುಂದುವರಿದಿದೆ. ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆನೀಡುವ ಪೋಸ್ಟರ್‌ಗಳನ್ನು ದೇಶದಲ್ಲಿ ಅಲ್ಲಲ್ಲಿ ಪ್ರದರ್ಶಿಸಲಾಗುತ್ತಿದೆ. ಈ ಸರ್ರೆಯಲ್ಲಿರುವ ಗುರುದ್ವಾರದ ಬಳಿಯೇ ಜೂನ್ 18ರಂದು ಖಲಿಸ್ತಾನ್ ಟೈಗರ್ ಫೋರ್ಸ್ ಭಯೋತ್ಪಾದಕ (Khalistan Tiger Force terrorist) ಹರ್ದೀಪ್ ಸಿಂಗ್ ನಿಜ್ಜರ್‌ನನ್ನು (Hardeep Singh Nijjar) ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಗುರುದ್ವಾರ ಆತನ ನಿರ್ವಹಣೆಯಲ್ಲಿತ್ತು.

ನಿಷೇಧಿತ ಭಯೋತ್ಪಾದಕ ಜಿಎಸ್ ಪನ್ನು ಕೂಡ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (Canada PM Justin Trudeau) ಅವರಿಗೆ ಪತ್ರ ಬರೆದು, ಭಾರತೀಯ ರಾಯಭಾರಿ ಸಂಜಯ್ ಕುಮಾರ್ ವರ್ಮಾ ಅವರನ್ನು ಉಚ್ಚಾಟಿಸುವಂತೆ ಒತ್ತಾಯಿಸಿದ್ದಾನೆ. ತೀವ್ರಗಾಮಿಗಳು ಇಲ್ಲಿ ಭಾರತದ ವಿರುದ್ಧ ಪೂರ್ಣ ಪ್ರಮಾಣದ ಪ್ರಚಾರ ನಡೆಸುತ್ತಿದ್ದಾರೆ. ಭಾರತೀಯ ಏಜೆಂಟರು ಅವರನ್ನು ಹತ್ಯೆ ಮಾಡಲು ಮುಂದಾಗಿದ್ದು, ಸಿಖ್ಖರು ಸುರಕ್ಷಿತವಾಗಿರುವಂತೆ ಕೆನಡಾದ ಗುಪ್ತಚರರು ಸಿಖ್‌ ಸಮುದಾಯದೊಳಗೆ ಪ್ರಚಾರ ಮಾಡುತ್ತಿದ್ದಾರೆ.

ಉಗ್ರಗಾಮಿ ನಿಜ್ಜರ್ ಹತ್ಯೆಗಾಗಿ ಭಾರತೀಯ ಕಾನ್ಸುಲ್ ಜನರಲ್ ಮನೀಶ್ ಮತ್ತು ಇತರರನ್ನು ಗುರಿಯಾಗಿಸಿಕೊಂಡು ವ್ಯಾಂಕೋವರ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಹೊರಗೆ ಪ್ರತಿಭಟಿಸಲು ಮೂಲಭೂತವಾದಿ ಸಿಖ್ಖರು ಅಕ್ಟೋಬರ್ 21ರಂದು “ಕಿಲ್ ಇಂಡಿಯಾ” ಕಾರ್ ರ್ಯಾಲಿಯನ್ನು ಆಯೋಜಿಸುತ್ತಿದ್ದಾರೆ. ಇದು ಮತ್ತು ಅಕ್ಟೋಬರ್ 28ರ ನಿಜ್ಜರ್‌ ಹತ್ಯೆ ಕುರಿತ ʼಜನಾಭಿಪ್ರಾಯ ಸಂಗ್ರಹಣೆʼಗೆ ಕೆನಡಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಾಕಿಸ್ತಾನಿ ಏಜೆಂಟರ ಬೆಂಬಲವೂ ಇದೆ.

ಜಸ್ಟಿನ್‌ ಟ್ರುಡೊ ಸರ್ಕಾರ ಭಾರತದ ಮನವಿಗಳಿಗೆ ಕಿವುಡಾಗಿದ್ದು, ʼಸಿಕ್ಖರ ವಾಕ್ ಸ್ವಾತಂತ್ರ್ಯʼದ ಹೆಸರನ್ನು ಮುಂದಿಟ್ಟುಕೊಂಡು ಖಲಿಸ್ತಾನಿಗಳಿಗೆ ಮರೆಯಲ್ಲಿ ಬೆಂಬಲ ನೀಡುತ್ತಿದೆ. ಕೆನಡಾದಲ್ಲಿ ಭಾರತದ ವಿರುದ್ಧ ಪ್ರತ್ಯೇಕತಾವಾದಿ ಚಳವಳಿಯನ್ನು ಉತ್ತೇಜಿಸುತ್ತಿದೆ. ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆನ್ಸಿಗಳ ಕೈವಾಡವಿದೆ ಎನ್ನುತ್ತ ಭಾರತ-ಯುಎಸ್ ದ್ವಿಪಕ್ಷೀಯ ಸಂಬಂಧದಲ್ಲಿ ಬಿರುಕು ಮೂಡಿಸಲು ಶ್ರಮಿಸುತ್ತಿದೆ.

ಪಂಜಾಬ್‌ನ ಸಿಖ್ ಯುವಕರನ್ನು ಆಮಿಷಕ್ಕೆ ಒಳಪಡಿಸಿ ಮೂಲಭೂತವಾದಿಗಳನ್ನಾಗಿಸುತ್ತಿರುವ ಖಲಿಸ್ತಾನಿಗಳು, ಭಾರತದಲ್ಲಿ ಸಿಖ್ಖರ ವಿರುದ್ಧ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಅಪಪ್ರಚಾರ ಮಾಡಿ ಕೆನಡಾ, ಯುಕೆ, ಯುಎಸ್ ಮತ್ತು ಜರ್ಮನಿಯಲ್ಲಿ ಭಾರಿ ಹಣವನ್ನು ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: Khalistan Row: ಭಾರತದ ಬಿಗಿಪಟ್ಟಿಗೆ ಮಣಿದು ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

IPS Transfer: ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

IPS Transfer: ಕಾನೂನು ಸುವ್ಯವಸ್ಥೆ, ಪೊಲೀಸ್‌ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು, ವರ್ಗವಾದ ಅಧಿಕಾರಿಗಳು ಈ ವಾರದಲ್ಲಿಯೇ ನೂತನ ಸ್ಥಳದಲ್ಲಿ ಕೆಲಸದ ಆದೇಶ ವಹಿಸಿಕೊಳ್ಳಲಿದ್ದಾರೆ.

VISTARANEWS.COM


on

IPS transfer
Koo

ಬೆಂಗಳೂರು: ರಾಜ್ಯದ 25 ಐಪಿಎಸ್‌ ಅಧಿಕಾರಿಗಳನ್ನು (IPS Officers) ನಾನಾ ಕಡೆಗಳಿಗೆ ವರ್ಗಾವಣೆ (IPS Transfer) ಮಾಡಿ ಸರ್ಕಾರ (Karnataka Govt) ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆ, ಪೊಲೀಸ್‌ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು, ವರ್ಗವಾದ ಅಧಿಕಾರಿಗಳು ಈ ವಾರದಲ್ಲಿಯೇ ನೂತನ ಸ್ಥಳದಲ್ಲಿ ಕೆಲಸದ ಆದೇಶ ವಹಿಸಿಕೊಳ್ಳಲಿದ್ದಾರೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ:

ಲಾಭೂರಾಮ್ : ಐಜಿಪಿ ಕೇಂದ್ರ ವಲಯ
ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ)
ಡಾ.ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
ಬಿ ರಮೇಶ್ : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ)
ಸಿಕೆ ಬಾಬಾ: ಎಸ್‌ಪಿ ಬೆಂಗಳೂರು ಗ್ರಾಮಾಂತರ.
ಎನ್ ವಿಷ್ಣುವರ್ಧನ್ : ಎಸ್‌ಪಿ ಮೈಸೂರು ಜಿಲ್ಲೆ.
ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್.
ಸಿ.ಬಿ ರಿಷ್ಯಂತ್: ಎಸ್ ಪಿ ವೇರ್ ಲೆಸ್ .
ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
ಅರುಣಾಂಗ್ಷು ಗಿರಿ : ( Arunngshu giri ) SP ,CID
ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ.
ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

ಇದನ್ನೂ ಓದಿ: BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Continue Reading

ಪ್ರವಾಸ

Dharamshala Tour: ಪರಿಪೂರ್ಣ ಪ್ರವಾಸದ ಅನುಭವ ಕೊಡುವ ಧರ್ಮಶಾಲಾ

ಧರ್ಮಶಾಲಾ (Dharamshala Tour) ಸುತ್ತಮುತ್ತ ಇರುವ ವಿವಿಧ ಆಕರ್ಷಣೆಗಳು ಪ್ರತಿಯೊಬ್ಬ ಪ್ರವಾಸಿಗನ ವಿಭಿನ್ನ ಆಸಕ್ತಿಗಳನ್ನು ಪೂರೈಸುತ್ತದೆ. ಆಧ್ಯಾತ್ಮಿಕ ಜ್ಞಾನೋದಯ, ಹೊರಾಂಗಣ ಸಾಹಸ ಅಥವಾ ನೈಸರ್ಗಿಕ ಸೌಂದರ್ಯದಿಂದ ಸುತ್ತುವರಿದ ಶಾಂತಿಯುತ ಧಾಮ ಇದಾಗಿದೆ. ಇಲ್ಲಿರುವ ಹತ್ತು ಪ್ರಮುಖ ಸ್ಥಳಗಳು ಸೌಂದರ್ಯ, ಸಂಸ್ಕೃತಿ ಮತ್ತು ನೆಮ್ಮದಿಯ ಪೂರ್ಣ ಅನುಭವವನ್ನು ನೀಡುತ್ತದೆ. ಇದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಲ್ಲಿಯ ಅಪೂರ್ವ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

By

Dharamshala Tour
Koo

ಭಾರತದ (india) ಉತ್ತರ (north) ಭಾಗದ ಹಿಮಾಚಲ ಪ್ರದೇಶದಲ್ಲಿರುವ (himachal pradesh) ಅತ್ಯಂತ ಸುಂದರ ಸ್ಥಳ ಧರ್ಮಶಾಲಾ (Dharamshala Tour). ಶ್ರೀಮಂತ ಸಂಸ್ಕೃತಿ, ಶಾಂತಿಯುತ ಮತ್ತು ಆಧ್ಯಾತ್ಮಿಕ ಪಟ್ಟಣವಾಗಿರುವ ಧರ್ಮಶಾಲಾಕ್ಕೆ ಹೆಚ್ಚಿನ ಪ್ರವಾಸಿಗರು ಮನಸ್ಸಿನ ಶಾಂತಿ ಮತ್ತು ರೋಮಾಂಚಕ ಅನುಭವವನ್ನು ಪಡೆಯಲು ಬರುತ್ತಾರೆ.

ಧರ್ಮಶಾಲಾ ಎಷ್ಟು ರೋಮಾಂಚನಕಾರಿಯಾಗಿದೆಯಾಗಿದೆ ಎಂದರೆ ಈ ಪ್ರದೇಶದ ಸುತ್ತಮುತ್ತಲಿನ ಆಕರ್ಷಣೆಗಳನ್ನು ಅನ್ವೇಷಿಸುವ ಮೂಲಕ ನಾವು ಅದನ್ನು ಇನ್ನಷ್ಟು ಸ್ಮರಣೀಯಗೊಳಿಸಬಹುದು. ಧರ್ಮಶಾಲಾ ಸಮೀಪ ಹಲವು ಅತ್ಯಾಕರ್ಷಕ ಸ್ಥಳಗಳಿವೆ. ಚಿಕ್ಕ ಗಿರಿಧಾಮಗಳಿಂದ ಹಿಡಿದು ಹಳೆಯ ಮಠಗಳು, ರಮಣೀಯ ಸೌಂದರ್ಯ ಗಣಿಗಳು ಇಲ್ಲಿವೆ.


ಮೆಕ್ಲಿಯೋಡ್ ಗಂಜ್

ದಲೈ ಲಾಮಾ ಅವರ ನಿವಾಸ ಮೆಕ್ಲಿಯೋಡ್ ಗಂಜ್ ಧರ್ಮಶಾಲಾದಿಂದ ಕೆಲವು ಕೆಲವು ಕಿಲೋ ಮೀಟರ್ ದೂರದಲ್ಲಿದೆ. ಟಿಬೆಟಿಯನ್ ಕಲೆ, ಪಾಕಪದ್ಧತಿ ಮತ್ತು ಟಿಬೆಟಿಯನ್ ಸಂಸ್ಕೃತಿಯನ್ನು ಒಂದೇ ಸ್ಥಳದಲ್ಲಿ ನಾವಿಲ್ಲಿ ಕಾಣಬಹುದು. ಅತ್ಯಂತ ರೋಮಾಂಚಕ ಸಾಂಸ್ಕೃತಿಕ ಜೀವನವನ್ನು ಹೊಂದಿರುವ ಇಲ್ಲಿಗೆ ಭೇಟಿ ನೀಡಿದಾಗ ನಮ್ ಗ್ಯಾಲ್ ಮಠ, ಸುಗ್ಲಾಗ್‌ಖಾಂಗ್ ಕಾಂಪ್ಲೆಕ್ಸ್ ಮತ್ತು ಟಿಬೆಟಿಯನ್ ಮ್ಯೂಸಿಯಂ ಗೆ ಭೇಟಿ ನೀಡಲು ಮರೆಯದಿರಿ.


ಟ್ರಯಂಡ್

ಸಾಹಸ ಪ್ರಿಯರಿಗೆ ಟ್ರಿಯುಂಡ್ ಭೂಮಿಯ ಮೇಲಿನ ಸ್ವರ್ಗದಂತಿದೆ. ಯಾಕೆಂದರೆ ಇದು ಅತ್ಯುತ್ತಮ ಟ್ರೆಕ್ಕಿಂಗ್ ಅವಕಾಶವನ್ನು ನೀಡುತ್ತದೆ. ಮೆಕ್ಲಿಯೋಡ್‌ಗಂಜ್ ಪಟ್ಟಣದಿಂದ ಸುಮಾರು 9 ಕಿ.ಮೀ. ದೂರದಲ್ಲಿರುವ ಈ ಚಾರಣ ಪ್ರದೇಶವು ಧೌಲಾಧರ್ ಶ್ರೇಣಿ ಮತ್ತು ಕಾಂಗ್ರಾ ಕಣಿವೆಯ ಸೌಂದರ್ಯವನ್ನು ಬಣ್ಣಿಸುತ್ತದೆ. ಇಲ್ಲಿ ಚಾರಣವನ್ನು ಒಂದೇ ದಿನದಲ್ಲಿ ಪೂರ್ಣಗೊಳಿಸಬಹುದು. ಆರಂಭಿಕ ಮತ್ತು ಅನುಭವಿ ಚಾರಣಿಗರಿಗೆ ಇದು ಅನುಕೂಲಕರವಾಗಿರುತ್ತದೆ.


ಭಗ್ಸು ಜಲಪಾತ

ಮೆಕ್ಲಿಯೋಡ್ ಗಂಜ್‌ನ ಆಚೆ ಸ್ವಲ್ಪ ದೂರದಲ್ಲಿ ಭಗ್ಸು ಜಲಪಾತವಿದೆ. ಇದು ಪ್ರವಾಸಿಗರಿಗೆ ಪಿಕ್ನಿಕ್ ಮತ್ತು ನಡಿಗೆಗಳಿಗೆ ಆಹ್ವಾನಿಸುವ ಮೋಡಿಮಾಡುವ ಸ್ಥಳವಾಗಿದೆ. ಹಚ್ಚ ಹಸಿರಿನ ಸುತ್ತಮುತ್ತಲಿನ ಮತ್ತು ಪ್ರಶಾಂತ ವಾತಾವರಣದ ನಡುವೆ ಹತ್ತಿರದ ಭಾಗ್ಸುನಾಥ ದೇವಾಲಯವು ಪ್ರದೇಶದಲ್ಲಿ ಧಾರ್ಮಿಕತೆ ಮತ್ತು ಶಾಂತಿಯನ್ನು ಹೆಚ್ಚಿಸಿದೆ.


ದಾಲ್ ಸರೋವರ

ಧರ್ಮಶಾಲಾದಿಂದ ಸುಮಾರು 11 ಕಿಲೋ ಮೀಟರ್ ದೂರದಲ್ಲಿರುವ ದಾಲ್ ಸರೋವರವು ದಟ್ಟವಾದ ದೇವದಾರು ಮರಗಳಿಂದ ಸುತ್ತುವರೆದಿರುವ ಪ್ರಶಾಂತ ಜಲರಾಶಿಯಾಗಿದೆ ಮತ್ತು ಅದರ ಸುತ್ತಲೂ ಹಸಿರಿನಿಂದ ಕೂಡಿದೆ. ಸರೋವರದಲ್ಲಿ ಬೋಟಿಂಗ್ ಸೌಲಭ್ಯವಿದೆ. ಇಲ್ಲಿ ಜನರು ನೀರಿನ ಶಾಂತತೆಯನ್ನು ಆನಂದಿಸಬಹುದು ಮತ್ತು ಅದರ ಸುತ್ತಲೂ ಪ್ರಕೃತಿಯ ಪ್ರಶಾಂತತೆಯನ್ನು ಅನುಭವಿಸಬಹುದು.


ನಡ್ಡಿ ಗ್ರಾಮ

ಕ್ಲಿಯೋಡ್ ಗಂಜ್ ನಿಂದ ಸ್ವಲ್ಪ ದೂರದಲ್ಲಿರುವ ನಡ್ಡಿ ಗ್ರಾಮದಿಂದ ಮೋಡಗಳ ಬಿಳಿ ಹೊದಿಕೆ ಹೊದ್ದ ಶಿಖರಗಳು ಮತ್ತು ಕಾಂಗ್ರಾ ಕಣಿವೆಯ ನೋಟವನ್ನು ಪಡೆಯಬಹುದು. ಈ ಗ್ರಾಮವು ನಗರ ಜೀವನದಿಂದ ದೂರ ಕೊಂಡೊಯ್ದು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ. ಪ್ರಕೃತಿ ಪ್ರಿಯರಿಗೆ ಮತ್ತು ಛಾಯಾಗ್ರಾಹಣ ಇಷ್ಟ ಪಡುವವರಿಗೆ ಇದು ಸೂಕ್ತ ಸ್ಥಳವಾಗಿದೆ.


ಕಾಂಗ್ರಾ ಕೋಟೆ

ಕಾಂಗ್ರಾ ಕೋಟೆಯು ಭಾರತದ ಅತ್ಯಂತ ಹಳೆಯ ಮತ್ತು ದೊಡ್ಡ ಕೋಟೆಗಳಲ್ಲಿ ಒಂದಾಗಿದೆ. ಇತಿಹಾಸದ ಮೇಲೆ ಆಸಕ್ತಿ ಇರುವವರು ಇಲ್ಲಿಗೆ ಭೇಟಿ ನೀಡುವುದನ್ನು ತಪ್ಪಿಸಿಕೊಳ್ಳಬಾರದು. ಈ ಪುರಾತನ ಕೋಟೆಯು ಧರ್ಮಶಾಲಾ ಸಮೀಪದಲ್ಲಿ ಸುಮಾರು 20 ಕಿಲೋಮೀಟರ್ ದೂರದಲ್ಲಿದೆ. ಇದು ಇತಿಹಾಸ ಮತ್ತು ಪರಂಪರೆಯ ಬಗ್ಗೆ ಮಾಹಿತಿಯ ಉತ್ತಮ ಮೂಲವಾಗಿದೆ. ಈ ಕೋಟೆಯ ಸಂಕೀರ್ಣದಲ್ಲಿ ಹಲವಾರು ದೇವಾಲಯ, ಅರಮನೆ ಮತ್ತು ವಸ್ತುಸಂಗ್ರಹಾಲಯಗಳು ಪ್ರಾಚೀನ ಕಾಲದಲ್ಲಿ ವಾಸ್ತುಶಿಲ್ಪದ ಶ್ರೇಷ್ಠತೆಯನ್ನು ಪ್ರದರ್ಶಿಸುತ್ತವೆ.


ಪಾಲಂಪುರ್

ಉತ್ತರ ಭಾರತದ ಚಹಾ ರಾಜಧಾನಿ ಎಂದೂ ಕರೆಯಲ್ಪಡುವ ಪಾಲಂಪುರ್ ಧರ್ಮಶಾಲಾದಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಒಂದು ಆಕರ್ಷಕ ಪಟ್ಟಣವಾಗಿದೆ. ಟೀ ತೋಟಗಳು ಅದರ ಸುತ್ತಲೂ ಹಿಮದಿಂದ ಆವೃತವಾದ ಪರ್ವತಗಳಿವೆ. ಸುಂದರ ಪ್ರಕೃತಿಯ ನಡುವೆ ಶಾಂತಿಯುತ ನಡಿಗೆಗೆ ಇದು ಸೂಕ್ತ ಸ್ಥಳವಾಗಿದೆ. ಆಂಡ್ರೆಟ್ಟಾ ಪಾಟರಿ ಸ್ಟುಡಿಯೋ, ತಾಶಿ ಜೊಂಗ್ ಮೊನಾಸ್ಟರಿ, ನ್ಯೂಗಲ್ ಖಾಡ್ ಇಲ್ಲಿನ ಕೆಲವು ಜನಪ್ರಿಯ ಆಕರ್ಷಣೆಗಳಾಗಿವೆ.


ಚಾಮುಂಡಾ ದೇವಿ ದೇವಸ್ಥಾನ

ಧರ್ಮಶಾಲಾದಿಂದ ಸುಮಾರು 15 ಕಿಲೋ ಮೀಟರ್ ದೂರದಲ್ಲಿರುವ ಚಾಮುಂಡಾ ದೇವಿ ದೇವಸ್ಥಾನವು ಹಿಂದೂಗಳಿಗೆ ಪವಿತ್ರ ಕ್ಷೇತ್ರವಾಗಿದೆ. ಯಾಕೆಂದರೆ ಇದು ದುರ್ಗಾ ದೇವಿಯ ಅವತಾರವೆಂದು ಪರಿಗಣಿಸಲ್ಪಟ್ಟ ಚಾಮುಂಡಾ ದೇವಿಗೆ ಸಮರ್ಪಿಸಲಾಗಿದೆ. ಬೆಟ್ಟದ ಮೇಲೆ ನೆಲೆಸಿರುವ ಸುತ್ತಮುತ್ತಲಿನ ಬೆಟ್ಟಗಳು ಮತ್ತು ಕಣಿವೆಗಳ ವಿಹಂಗಮ ನೋಟಗಳನ್ನು ನೀಡುವುದರಿಂದ ಇದು ಭೇಟಿ ನೀಡಲು ಯೋಗ್ಯವಾದ ಆಧ್ಯಾತ್ಮಿಕ ಮತ್ತು ರಮಣೀಯ ತಾಣವಾಗಿದೆ.

ಇದನ್ನೂ ಓದಿ: Karnataka Tour: ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು


ಕರೇರಿ ಸರೋವರ

ಧರ್ಮಶಾಲಾದಿಂದ ಸುಮಾರು 22 ಕಿಲೋ ಮೀಟರ್ ದೂರದಲ್ಲಿರುವ ಕರೇರಿ ಸರೋವರಕ್ಕೆ ಪ್ರವಾಸ ಮಾಡುವುದನ್ನು ತಪ್ಪಿಸಿಕೊಳ್ಳಬೇಡಿ. ಎತ್ತರದ ಆಲ್ಪೈನ್ ಕಾಡುಗಳು ಮತ್ತು ಹಿಮದಿಂದ ಆವೃತವಾದ ಶಿಖರಗಳಿಂದ ಸುತ್ತುವರೆದಿರುವ ದೊಡ್ಡ ಸರೋವರ ಇದಾಗಿದೆ. ಇದು ಕ್ಯಾಂಪಿಂಗ್ ಮತ್ತು ಪಕ್ಷಿ ವೀಕ್ಷಣೆ ಅಥವಾ ಛಾಯಾಗ್ರಹಣಕ್ಕೆ ಸೂಕ್ತವಾದ ಸ್ಥಳವಾಗಿದೆ.


ಮಸ್ರೂರ್ ರಾಕ್ ಕಟ್ ದೇವಸ್ಥಾನ

ಮಸ್ರೂರ್ ರಾಕ್ ಕಟ್ ಟೆಂಪಲ್ ಎಂಟನೇ ಶತಮಾನಕ್ಕೂ ಹಿಂದಿನ ಪ್ರಾಚೀನ ರಾಕ್-ಕಟ್ ವಾಸ್ತುಶಿಲ್ಪಕ್ಕೆ ಉತ್ತಮ ಉದಾಹರಣೆಯಾಗಿದೆ. ಧರ್ಮಶಾಲಾದಿಂದ ಸರಿಸುಮಾರು 40 ಕಿಮೀ ದೂರದಲ್ಲಿರುವ ಈ ಪುರಾತತ್ತ್ವ ಶಾಸ್ತ್ರದ ತಾಣವು ಸಂಕೀರ್ಣವಾದ ಕೆತ್ತಿದ ಮರಳುಗಲ್ಲಿನ ದೇವಾಲಯವಾಗಿದೆ. ಇದು ಹಿಂದೂ ದೇವರಿಗೆ ಅರ್ಪಿತವಾಗಿದೆ. ಐತಿಹಾಸಿಕ ಹಿನ್ನೆಲೆಯ ಇಣುಕು ನೋಟವನ್ನು ಇಲ್ಲಿ ಕಾಣಬಹುದು. ಪುರಾತನ ಪರಂಪರೆಯನ್ನು ಹುಡುಕುವವರಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ.

Continue Reading

ದೇಶ

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Aditya L1: ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ.

VISTARANEWS.COM


on

Aditya L1
Koo

ನವದೆಹಲಿ: ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್ ಆಗಿರುವ ಆದಿತ್ಯ ಎಲ್‌1 (Aditya L1) ಬಾಹ್ಯಾಕಾಶ ನೌಕೆಯು ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸೂರ್ಯ ಮತ್ತು ಭೂಮಿ ನಡುವಿನ ಗುರುತ್ವಾಕರ್ಷಣೆ ನಿಷ್ಕ್ರಿಯವಾಗುವ ‘ಲ್ಯಾಗ್ರೇಂಜ್‌ ಪಾಯಿಂಟ್‌’ನ (L1) ಪ್ರಭಾವಲಯದ (Halo) ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಕಕ್ಷೆ ಸೇರಿದ (ಇದೇ ವರ್ಷದ ಜನವರಿ 6ರಂದು ಕಕ್ಷೆ ಸೇರಿದೆ) 178 ದಿನಗಳ ಬಳಿಕ ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದಂತಾಗಿದೆ.

ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಎರಡನೇ ಸುತ್ತಿನತ್ತ ಆದಿತ್ಯ ಎಲ್‌ 1 ಮಿಷನ್‌ ದಾಪುಗಾಲು ಇಟ್ಟಿದೆ” ಎಂಬುದಾಗಿ ಇಸ್ರೋ ತಿಳಿಸಿದೆ. ಇದು ಸೂರ್ಯನ ಕುರಿತು ಅಧ್ಯಯನ ಮಾಡುವಲ್ಲಿ ಇಸ್ರೋಗೆ ಸಿಕ್ಕ ಮಹತ್ವದ ಮುನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್‌ 2ರಂದು ಆದಿತ್ಯ ಎಲ್‌ 1 ಮಿಷನ್‌ ಉಡಾವಣೆಯಾಗಿದ್ದು, ಸೆಪ್ಟೆಂಬರ್‌ 3ರಂದು ಮೊದಲ ಕಕ್ಷೆ ಬದಲಾವಣೆಯನ್ನು ಯಶಸ್ವಿಯಾಗಿ ಪೂರೈಸಿತು. ಸೆಪ್ಟೆಂಬರ್‌ 5ರಂದು ಎರಡನೇ ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡಿತು. ಒಟ್ಟು ಐದು ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡ ನಂತರ ಅಧ್ಯಯನ ನಡೆಸಲು ಉದ್ದೇಶಿಸಿರುವ ಲ್ಯಾಂಗ್ರೇಜ್‌ ಪಾಯಿಂಟ್‌ನತ್ತ (L1 Point) ಆದಿತ್ಯ ಎಲ್‌ 1 ಮಿಷನ್‌ ಸಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಮಿಷನ್‌ ಹೊತ್ತುಕೊಂಡು ಪಿಎಸ್‌ಎಲ್‌ವಿ-ಸಿ 57 (PSLV-C57 ) ರಾಕೆಟ್‌ 2023ರ ಸೆಪ್ಟೆಂಬರ್‌ 2ರಂದು ನಭಕ್ಕೆ ಹಾರಿದೆ. ನಭಕ್ಕೆ ನೆಗೆದ ಕೆಲವೇ ನಿಮಿಷಗಳಲ್ಲಿ ರಾಕೆಟ್‌ನಿಂದ ಆದಿತ್ಯ ಎಲ್‌ 1 ಮಿಷನ್‌ ಬೇರ್ಪಟ್ಟಿದೆ. ಸೂರ್ಯನ ಮೇಲ್ಮೈನಲ್ಲಿ ಮಾತ್ರ ಆದಿತ್ಯ ಎಲ್‌ 1 ಮಿಷನ್‌ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ ಸೂರ್ಯನ ದಿಕ್ಕಿನಲ್ಲಿ 15 ಲಕ್ಷ ಕಿಲೋಮೀಟರ್‌ ಸಂಚರಿಸಿ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ 15 ಲಕ್ಷ ಕಿಲೊಮೀಟರ್‌ ಅಂದರೆ, ಭೂಮಿಯಿಂದ ಸೂರ್ಯನಿಗಿರುವ ದೂರದಲ್ಲಿ ಶೇ.1ರಷ್ಟು ಮಾತ್ರ ಕ್ರಮಿಸಿದಂತೆ.

ಇದನ್ನೂ ಓದಿ: Pushpak Launch: ‘ಪುಷ್ಪಕ್‌’ ರಾಕೆಟ್ ಹ್ಯಾಟ್ರಿಕ್‌ ಉಡಾವಣೆ ಯಶಸ್ವಿ-ಇಸ್ರೋದಿಂದ ಮಹತ್ವದ ಮೈಲಿಗಲ್ಲು

Continue Reading

ದೇಶ

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Sudha Murty: ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದರು.

VISTARANEWS.COM


on

Sudha Murty
Koo

ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ (Sudha Murty) ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. “ನಾನು ರಾಜಕಾರಣಿ ಅಲ್ಲ. ನನಗೆ ಹೆಚ್ಚು ಮಾತನಾಡಲು ಬರುವುದಿಲ್ಲ” ಎನ್ನುತ್ತಲೇ ಭಾಷಣ ಆರಂಭಿಸಿದ ಅವರು ಗರ್ಭಕಂಠ ಕ್ಯಾನ್ಸರ್‌ಗೆ (Cervical Cancer) ಲಸಿಕೆ ಹಾಗೂ ಕರ್ನಾಟಕ (Karnataka) ಸೇರಿ ದೇಶದ ಪ್ರವಾಸೋದ್ಯಮದ ಏಳಿಗೆಯ ಕುರಿತು ಸದನದ ಗಮನಕ್ಕೆ ತಂದರು. ಕರ್ನಾಟಕ ಪ್ರವಾಸೋದ್ಯಮದ ಕುರಿತೂ ಅವರು ಹೆಚ್ಚು ಗಮನ ಸೆಳೆದರು.

“ಗರ್ಭಕಂಠದ ಕ್ಯಾನ್ಸರ್‌ ಈಗ ಮಾರಣಾಂತಿಕವಾಗಿದೆ. ಒಬ್ಬ ತಾಯಿ ಮೃತಪಟ್ಟರೆ ಮಕ್ಕಳು ಅನಾಥರಾಗುತ್ತಾರೆ. ಒಬ್ಬ ವ್ಯಕ್ತಿಗೆ ಹೆಂಡತಿ ತೀರಿಕೊಂಡರೆ ಮತ್ತೊಬ್ಬ ಪತ್ನಿ ಸಿಗುತ್ತಾಳೆ. ಆದರೆ, ಮಕ್ಕಳಿಗೆ ತಾಯಿ ತೀರಿಕೊಂಡರೆ, ಜೀವನಪೂರ್ತಿ ಅವರು ಅನಾಥರಾಗುತ್ತಾರೆ. ಹಾಗಾಗಿ, ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯಪ್ರವೇಶಿಸಿದರೆ ಅದನ್ನು 800 ರೂಪಾಯಿಗೆ ಹೆಣ್ಣುಮಕ್ಕಳಿಗೆ ಲಸಿಕೆ ಕೊಡಿಸಬಹುದು” ಎಂದರು. ಆಗ ಸಭಾಧ್ಯಕ್ಷರು, “ಈ ಕುರಿತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ ನಡ್ಡಾ ಅವರ ಗಮನಕ್ಕೆ ತನ್ನಿ” ಎಂದರು.

ಪ್ರವಾಸೋದ್ಯಮದ ಕುರಿತು ಹೇಳಿದ್ದಿಷ್ಟು…

“ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕದ ಶ್ರವಣಬೆಳಗೋಳದಲ್ಲಿರುವ ಬಾಹುಬಲಿಯ ಮೂರ್ತಿ, ಮಧ್ಯಪ್ರದೇಶದ ಮಾಂಡು, ದೇಶದ ಗುಹೆಗಳು, ಬಾದಾಮಿ, ಐಹೊಳೆ, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು” ಎಂದರು.

“ತ್ರಿಪುರದಲ್ಲಿರುವ ಉನಾಕೋಟಿ, ಮಿಜೋರಾಂನಲ್ಲಿ ನೈಸರ್ಗಿಕ ಸೇತುವೆಗಳಿವೆ. ಇವುಗಳನ್ನು ನೋಡಲು ವಿದೇಶಕ್ಕೆ ಹೋಗುವವರಿದ್ದಾರೆ. ತಂಜಾವೂರಿನ ಬೃಹದೇಶ್ವರ ದೇವಾಲಯ, ಶ್ರೀರಂಗಂ, ಕಾಶ್ಮೀರದಲ್ಲಿರುವ ಮೊಘಲ್‌ ಗಾರ್ಡನ್‌ಗಳು ಜಗತ್ತಿನ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಇಲ್ಲ. ಇವುಗಳನ್ನು ಪಟ್ಟಿಗೆ ಸೇರಿಸುವುದರಿಂದ ಆ ಸ್ಥಳಗಳಿಗೆ ಜನರನ್ನು ಸೆಳೆಯಲು ಪ್ಯಾಕೇಜ್‌ಗಳನ್ನು ಘೋಷಿಸಲಾಗುತ್ತದೆ. ಇದರಿಂದ ಪ್ರವಾಸೋದ್ಯಮದ ಆದಾಯ ಹೆಚ್ಚಾಗುತ್ತದೆ. ಹತ್ತಾರು ಅವಕಾಶಗಳು ಸೃಷ್ಟಿಯಾಗುತವೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Continue Reading
Advertisement
krishna river drowned death
ಕ್ರೈಂ8 mins ago

Drowned: ಪೊಲೀಸರಿಂದ ತಪ್ಪಿಸಿಕೊಳ್ಳಹೋಗಿ ನೀರುಪಾಲು; ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 1 ಸಾವು, ಇಬ್ಬರ ರಕ್ಷಣೆ, ಇನ್ನೂ ಐವರು ನಾಪತ್ತೆ

IPS transfer
ಪ್ರಮುಖ ಸುದ್ದಿ45 mins ago

IPS Transfer: ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

karnataka weather Forecast
ಮಳೆ1 hour ago

Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Dharamshala Tour
ಪ್ರವಾಸ2 hours ago

Dharamshala Tour: ಪರಿಪೂರ್ಣ ಪ್ರವಾಸದ ಅನುಭವ ಕೊಡುವ ಧರ್ಮಶಾಲಾ

Vastu Tips
ಧಾರ್ಮಿಕ2 hours ago

Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

Sour Curd
ಆರೋಗ್ಯ3 hours ago

Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ?

Dina Bhavishya
ಭವಿಷ್ಯ3 hours ago

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

ಆಟೋಮೊಬೈಲ್6 hours ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ7 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ8 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ12 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌