OBC Reservation : ಈಗ ಒಪ್ಪಿರುವ ವರದಿಯಿಂದ ಲಿಂಗಾಯತ, ಒಕ್ಕಲಿಗರಿಗೆ ಹೆಚ್ಚು ಲಾಭ: ನ್ಯಾ. ಭಕ್ತವತ್ಸಲ - Vistara News

ಕರ್ನಾಟಕ

OBC Reservation : ಈಗ ಒಪ್ಪಿರುವ ವರದಿಯಿಂದ ಲಿಂಗಾಯತ, ಒಕ್ಕಲಿಗರಿಗೆ ಹೆಚ್ಚು ಲಾಭ: ನ್ಯಾ. ಭಕ್ತವತ್ಸಲ

OBC Reservation : ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಈಗ ಕೈಗೊಂಡಿರುವ ತೀರ್ಮಾನದಿಂದ ಒಬಿಸಿಯ ಸಣ್ಣ ಸಮುದಾಯಗಳಿಗೆ ಅನ್ಯಾಯ ಮಾಡಿದಂತೆ ಆಗಿದೆ. ಬಲಿಷ್ಠವಾಗಿರುವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಹೈಕೋರ್ಟ್‌‌ ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

DCM DK Shivakumar and cm siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನ್ಯಾ. ಭಕ್ತವತ್ಸಲ ವರದಿಯನ್ನು (Justice Bhaktavatsala Report) ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಗುರುವಾರ (ಅಕ್ಟೋಬರ್‌ 5) ಕೆಲವೊಂದು ಬದಲಾವಣೆಗಳೊಂದಿಗೆ ಅನುಮೋದನೆ ನೀಡಿದೆ. ಇದರಿಂದ ಹಿಂದುಳಿದ ವರ್ಗಗಳಿಗೆ ರಾಜಕೀಯ ಬಲ (Political strength) ಬರಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರ ಹಿಂದುಳಿದ ವರ್ಗಕ್ಕೆ ರಾಜಕೀಯವಾಗಿ ಈ ಒಪ್ಪಿಗೆ ಸೂಚಿಸಿರುವ ಮೀಸಲಾತಿ (OBC Reservation) ನಿರ್ಧಾರದ ಬಗ್ಗೆ ಸ್ವತಃ ಹೈಕೋರ್ಟ್‌‌ ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಅಸಮಾಧಾನವನ್ನು ಹೊರಹಾಕಿದ್ದಾರೆ. ಒಬಿಸಿಯ ಸಣ್ಣ ಸಮುದಾಯಗಳಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಹೇಳಿದ್ದಾರೆ. 749 ಜನರಿಗೆ ಒಂದು ಹಣ್ಣು ಕೊಟ್ಟು ತೆಗೆದುಕೊಳ್ಳಿ ಅಂದರೆ ಯಾರು ತೆಗೆದುಕೊಳ್ಳಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಇದರಿಂದ ಬಲಿಷ್ಠವಾಗಿರುವ ಲಿಂಗಾಯತ ಹಾಗೂ ಒಕ್ಕಲಿಗ (Lingayats and Vokkaligas) ಸಮುದಾಯದವರಿಗೆ ಹೆಚ್ಚಿನ ಅನುಕೂಲ ಆಗಲಿದೆ. ಇದಕ್ಕಾಗಿ ಇದನ್ನು ಪ್ರತ್ಯೇಕ ಉಪ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ನಾನು ನೀಡಿರುವ ಶಿಫಾರಸನ್ನು ಸರ್ಕಾರ ಒಪ್ಪಿಲ್ಲ ಎಂದು ಹೇಳಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಈ ಬಗ್ಗೆ ಮಾತನಾಡಿದ ಹೈಕೋರ್ಟ್‌‌ ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ, ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಮೇರೆಗೆ ಈ ಸಮಿತಿ ರಚನೆ ಆಗಿತ್ತು. ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಕೊಡುವ ಸಂಬಂಧ ಈ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ನಮ್ಮ ಸಮಿತಿಯು ಐದು ಶಿಫಾರಸುಗಳನ್ನು ನೀಡಿತ್ತು. ಹಿಂದಿನ ಸರ್ಕಾರ ನಾಲ್ಕು ಶಿಫಾರಸುಗಳನ್ನು ಅಂಗೀಕಾರ ಮಾಡಿತ್ತು. 30-30 ತಿಂಗಳ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಧಿಕಾರ ಕೊಡುವುದನ್ನು ಆ ಸರ್ಕಾರ ಒಪ್ಪಿರಲಿಲ್ಲ. ಬಳಿಕ ಸಪ್ಲಿಮೆಂಟರಿ ರಿಪೋರ್ಟ್‌ ಸಹ ಈಗಿನ ಸರ್ಕಾರಕ್ಕೆ ನೀಡಿದ್ದೆವು. ಹಾಲಿ ಸರ್ಕಾರ ಮೂರು ಶಿಫಾರಸುಗಳನ್ನು ಮಾತ್ರವೇ ಒಪ್ಪಿಕೊಂಡಿದೆ ಎಂದು ತಿಳಿಸಿದರು.

ಇದನ್ನೂ ಓದಿ: Ration Card : ಪಡಿತರ ಚೀಟಿ ಅಪ್ಡೇಟ್‌ ಶುರು; 6 ವರ್ಷದ ಒಳಗಿನ, ನಂತರದ ಮಕ್ಕಳ ಸೇರ್ಪಡೆಗೆ ಯಾವ ದಾಖಲೆ ಬೇಕು?

ಇನ್ನೊಂದು ವರ್ಗಕ್ಕೆ ಒಕ್ಕಲಿಗ ಮತ್ತು ಲಿಂಗಾಯತರ ಸೇರ್ಪಡೆಗೆ ಹೇಳಿದ್ದೆವು

ಕೆಟಗರಿ ಎ – ಬಿ – ಸಿ ಜತೆಗೆ ಇನ್ನೊಂದು ವರ್ಗ ಸೇರಿಸಿ ಎಂದು ನಾವು ಹೇಳಿದ್ದೆವು. ಮುಸ್ಲಿಂ, ಕೊಡವ, ಬಲಿಜ ಸೇರಿದಂತೆ 749ಕ್ಕೂ ಅಧಿಕ ಸಮುದಾಯಗಳು ಕೆಟಗರಿ ಬಿ ಅಡಿ ಬರುತ್ತವೆ. ಈ ಗುಂಪಿನಲ್ಲಿ ಒಕ್ಕಲಿಗ ಮತ್ತು ಲಿಂಗಾಯತರನ್ನು ಸೇರಿಸುವುದರಿಂದ ಸಣ್ಣ ಸಮುದಾಯಗಳಿಗೆ ಅವಕಾಶ ಸಿಗುತ್ತಿಲ್ಲ. ಹೀಗಾಗಿ ಇನ್ನೊಂದು ವರ್ಗ ಮಾಡುವಂತೆ ಶಿಫಾರಸು ಮಾಡಿದ್ದೆವು. ರಾಜಕೀಯ ಪ್ರಾತಿನಿಧ್ಯಕ್ಕೆ ಲಿಂಗಾಯತ ಮತ್ತು ಒಕ್ಕಲಿಗರನ್ನು ಒಂದು ಗುಂಪಿಗೆ ಸೇರಿಸಿ, ಒಬಿಸಿ ಸಣ್ಣ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗಲು ಇನ್ನೊಂದು ಗುಂಪು ಮಾಡಬೇಕು. ಈ ಮೂಲಕ ಎ, ಬಿ, ಸಿ ವರ್ಗಗಳ ಜತೆಗೆ ಡಿ ವರ್ಗವನ್ನು ರಚಿಸುವಂತೆ ನಾವು ವರದಿಯಲ್ಲಿ ಶಿಫಾರಸು ಮಾಡಿದ್ದೆವು. ಹೀಗೆ ಮಾಡುವುದರಿಂದ ಅತಿ ಹಿಂದುಳಿದ ಸಣ್ಣ ಸಮುದಾಯಗಳಿಗೆ ಅನುಕೂಲವಾಗಲಿದೆ. 749 ಜನರಿಗೆ ಒಂದು ಹಣ್ಣು ಕೊಟ್ಟು ತೆಗೆದುಕೊಳ್ಳಿ ಅಂದರೆ ಯಾರು ತೆಗೆದುಕೊಳ್ಳಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಪ್ರಶ್ನೆ ಮಾಡಿದರು.

ಮುಂದಿನ ಚುನಾವಣೆಗೆ ಕೆಟಗರಿಯನ್ನು ಹೆಚ್ಚಿಸಲಿ

ಈ ಸಣ್ಣ ಸಮುದಾಯಗಳಿಗೆ ಅನ್ಯಾಯ ಆಗಬಾರದು ಎಂಬ ಕಾರಣಕ್ಕಾಗಿಯೇ ಇನ್ನೊಂದು ಪ್ರವರ್ಗ ಮಾಡಿ ಎಂದು ಹೇಳಿದ್ದೆವು. ಸರ್ಕಾರ ಯಾಕೆ ಒಪ್ಪಿಲ್ಲ ಅನ್ನೋದು ಗೊತ್ತಿಲ್ಲ. ಅದು ನಮಗೆ ಸಂಬಂಧವೂ ಇಲ್ಲ. ನಮ್ಮ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡಿದ್ದೇವೆ. ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ಕೊಡಬೇಕು. ಕೂಡಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿ. ಕೆಟಗಿರಿ ಎ, ಬಿ ಅಡಿಯಲ್ಲಿ ಚುನಾವಣೆ ಮಾಡಲಿ. ಆದರೆ ಮುಂದಿನ ಚುನಾವಣೆಗೆ ಕೆಟಗರಿಯನ್ನು ಜಾಸ್ತಿ ಮಾಡಬೇಕು. ಸಣ್ಣ ಸಮುದಾಯಗಳಿಗೆ ಅವಕಾಶ ಕೊಡಬೇಕು. ಇಲ್ಲದಿದ್ದರೆ ಬರೀ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ ಮಾತ್ರ ಅನುಕೂಲ ಪಡೆಯುತ್ತದೆ. ಎಲ್ಲವನ್ನೂ ಕೆಲ ಸಮುದಾಯಗಳು ಪಡೆಯುವುದರಿಂದ ಇತರೆ ಸಣ್ಣ ಸಮುದಾಯಗಳಿಗೆ ಅನ್ಯಾಯ ಆಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ತಿಳಿಸಿದರು.

30-30 ತಿಂಗಳು ಅಧಿಕಾರ ಹಂಚಿಕೆಯೇ ಸರಿ

30-30 ತಿಂಗಳು ಅಧಿಕಾರ ಕೊಡುವುದರಿಂದ ಯಾರೇ ಆದರೂ ಅಧಿಕಾರ ಪಡೆದುಕೊಂಡವರು ಕೆಲಸ ಮಾಡಲು ಅನುಕೂಲವಾಗುತ್ತದೆ. ಜನರು ಯಾಕೆ ಸರ್ಕಾರಕ್ಕೆ ಐದು ವರ್ಷ ಸಮಯ ಕೊಡುತ್ತಾರೆ? ಅದೇ ರೀತಿ ಸ್ಥಳೀಯ ಸಂಸ್ಥೆಗಳು ಅಧ್ಯಕ್ಷ – ಉಪಾಧ್ಯಕ್ಷರಿಗೂ ಅವಕಾಶ ಕೊಡಬೇಕು. ನಮ್ಮ ಕಮಿಟಿ ರಾಜಕೀಯ ಪ್ರಾತಿನಿಧ್ಯಕ್ಕೆ ಕೊಟ್ಟಿರುವ ರಿಪೋರ್ಟ್‌ನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಚುನಾವಣೆ ಎದುರಿಸುವುದು ಅಷ್ಟು ಸುಲಭವಿಲ್ಲ. ಹಾಗಾಗಿ ಸಣ್ಣ ಸಮುದಾಯಗಳಿಗೆ ರಾಜಕೀಯ ಅನುಭವ ಪಡೆಯಲು ಇದು ಅಗತ್ಯ. ಪ್ರತಿ ಪಂಚಾಯಿತಿಯಿಂದ ಮಾಹಿತಿ ಪಡೆದಿದ್ದೇವೆ. ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿಯವರು ನಮಗೆ ಬಹಳ ಅನುಕೂಲಕರ ಮಾಹಿತಿಯನ್ನು ಕೊಟ್ಟಿದ್ದರು ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಹೇಳಿದರು.

ಇದನ್ನೂ ಓದಿ : Congress Government : ಸರ್ಕಾರಕ್ಕೆ 140 ದಿನ; 2,50,993 ಕೋಟಿ ರೂ. ಬಜೆಟ್‌ನಲ್ಲಿ ಬಿಡುಗಡೆಯಾಗಿದ್ದು ಬೊಗಸೆಯಷ್ಟು!

ಶೇಕಡಾ 33ರಷ್ಟು ಮೀಸಲಾತಿ ಸರಿಯಿದೆ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಮೀಸಲಾತಿ ನಿಗದಿ ಅಧಿಕಾರವನ್ನು ಸಿಎಂ ಅಡಿಯಲ್ಲಿ ಬರುವ ಡಿಪಿಆರ್‌ಗೆ ಕೊಡಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ತಿಳಿಸಿದರು.

ರಾಜ್ಯ ಸರ್ಕಾರದಿಂದ ಅನುಮೋದನೆ ಆಗಿದ್ದು ಏನು?

ಒಟ್ಟಾರೆ 50ರಷ್ಟು ಮೀಸಲಾತಿ ಮೀರದಂತೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವುದು. ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ (BBMP Mayor and Deputy Mayor) ಸ್ಥಾನಕ್ಕೆ ಮೀಸಲಾತಿ ನೀಡುವುದು ಹಾಗೂ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಿರ್ವಹಣೆ ಅಧಿಕಾರವನ್ನು ಡಿಪಿಆರ್ ಅಡಿಯಲ್ಲಿ ತರುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಇದರಿಂದ ರಾಜಕೀಯವಾಗಿ ಏನು ಲಾಭ?

  • ಸ್ಥಳೀಯ ಸಂಸ್ಥೆಗಳ ನಗರ ಹಾಗೂ ಗ್ರಾಮೀಣ ಚುನಾವಣೆಗಳಲ್ಲಿ ಎಸ್‌ಸಿ-ಎಸ್‌ಟಿ ಮೀಸಲು ಜತೆಗೆ ಒಬಿಸಿ ವರ್ಗಕ್ಕೂ ಮೀಸಲಾತಿಯನ್ನು ಇನ್ನು ಮುಂದೆ ಕಲ್ಪಿಸಬೇಕಿದೆ
  • ಒಟ್ಟಾರೆ ಗರಿಷ್ಠ ಶೇ.33ರಷ್ಟು ಸ್ಥಾನಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಅವಕಾಶ ಸಿಗಲಿದೆ.
  • ಶೇ.50ರ ಮೀಸಲು ಮಿತಿಯಲ್ಲಿ ಎಸ್‌ಸಿ-ಎಸ್‌ಟಿ ಮೀಸಲನ್ನು ಹೆಚ್ಚು ಪಡೆಯುವ ಕಡೆ ಕನಿಷ್ಠ ಶೇ.23ರವರೆಗಾದರೂ ಒಬಿಸಿಗೆ ಅವಕಾಶ ಸಿಗುವ ಸಾಧ್ಯತೆ ಇದೆ

ಯಾವೆಲ್ಲ ಕ್ಷೇತ್ರಗಳಲ್ಲಿ ಒಬಿಸಿಗೆ ಮಾನ್ಯತೆ?

  • 6022 ಗ್ರಾಮ ಪಂಚಾಯಿತಿಗಳು
  • 31 ಜಿಲ್ಲಾ ಪಂಚಾಯಿತಿ, 240 ತಾಲೂಕು ಪಂಚಾಯಿತಿ
  • 10 ಮಹಾನಗರ ಪಾಲಿಕೆ, 61 ನಗರಸಭೆ
  • 124 ಪುರಸಭೆ, 115 ಪಟ್ಟಣ ಪಂಚಾಯಿತಿ
  • ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ

ಈ ಕ್ಷೇತ್ರಗಳಲ್ಲಿ ಒಬಿಸಿ ಸಮುದಾಯದವರಿಗೆ ಚುನಾವಣೆಯಲ್ಲಿ ಹೆಚ್ಚಿನ ಮೀಸಲಾತಿ ದೊರೆಯುತ್ತದೆ. ಇದರಿಂದ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಕೂಗು ನಿವಾರಣೆಯಾಗಲಿದೆ.

ಬಿಬಿಎಂಪಿ ಮೇಯರ್ ಅಥವಾ ಉಪ ಮೇಯರ್ ಆಗಬಹುದು

ಈಗ ಈ ಮೀಸಲಾತಿ ಕಲ್ಪಿಸಿರುವುದರಿಂದ ಬಿಬಿಎಂಪಿ ಮೇಯರ್‌ ಇಲ್ಲವೇ ಉಪ ಮೇಯರ್‌ ಆಗಿ ಹಿಂದುಳಿದ ವರ್ಗದವರಿಗೆ ಅವಕಾಶ ಕಲ್ಪಿಸಬೇಕಾಗುತ್ತದೆ. ಇದರಿಂದ ಮಹಾಪೌರರಾಗಿಯೂ ಪ್ರಾತಿನಿಧ್ಯ ಪಡೆಯುವ ಅವಕಾಶ ಒಬಿಸಿಯವರಿಗೆ ಲಭ್ಯವಾಗಲಿದೆ.

ಯಾವುದಕ್ಕೆ ಸಿಕ್ಕಿಲ್ಲ ಸರ್ಕಾರದ ಒಪ್ಪಿಗೆ?

2027-28ರಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಹಿಂದುಳಿದ ವರ್ಗಗಳ ಕೆಟಗರಿ ಎ ಮತ್ತು ಬಿ ಜತೆಗೆ ಅಲ್ಪಸಂಖ್ಯಾತರು ಸೇರಿದಂತೆ ಇತರ ಹಿಂದುಳಿದ ವರ್ಗದವರಿಗಾಗಿ ಪರಿಣಾಮಕಾರಿಯಾದ ರಾಜಕೀಯ ಮೀಸಲು ವ್ಯವಸ್ಥೆ ಕಲ್ಪಿಸಲು ಎರಡು ಹೆಚ್ಚುವರಿ ಕೆಟಗರಿಗಳನ್ನು ಸೇರಿಸಿ ಹಿಂದುಳಿದ ವರ್ಗಗಳ ಮರು ವರ್ಗೀಕರಣ ಮಾಡಲು ಕ್ರಮ ಕೈಗೊಳ್ಳಬೇಕೆಂಬ ಶಿಫಾರಸನ್ನು ಸಚಿವ ಸಂಪುಟ ಒಪ್ಪಿಲ್ಲ.

ಬಿಬಿಎಂಪಿ ಕಾಯ್ದೆ 2020ರಂತೆ ಮೇಯರ್ ಮತ್ತು ಉಪಮೇಯ‌ರ್‌ ಸ್ಥಾನಗಳಿಗೆ 30 ತಿಂಗಳು ಕಾಲಾವಧಿ ನಿಗದಿ ಪಡಿಸುವ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸಲು ಕರ್ನಾಟಕ ಮುನ್ಸಿಪಲ್ ಕಾಯ್ದೆಯ ಕಲಂ 10ಕ್ಕೆ ತಿದ್ದುಪಡಿ ತರುವುದು ಸೂಕ್ತ ಎಂದು ನ್ಯಾ. ಭಕ್ತವತ್ಸಲ ಆಯೋಗವು ವರದಿಯಲ್ಲಿ ಶಿಫಾರಸು ಮಾಡಿತ್ತು. ಅದನ್ನೂ ಸಹ ತಿರಸ್ಕರಿಸಲಾಗಿದೆ.

ಇದನ್ನೂ ಓದಿ: Cauvery Dispute : ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಸರ್ವ ಸಿದ್ಧತೆ; ಡಿ.ಕೆ. ಶಿವಕುಮಾರ್‌

ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ಈ ಕ್ರಮ

ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಸಂಬಂಧ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಆಯೋಗ ಈ ವರದಿಯನ್ನು ನೀಡಿತ್ತು. ಆಯಾ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯವನ್ನು ಖಚಿತಪಡಿಸಿದ ಬಳಿಕವೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದರನ್ವಯ ಆಯೋಗವನ್ನು ರಚನೆ ಮಾಡಿ ಅಧ್ಯಯನ ನಡೆಸಿ ವರದಿಯನ್ನು ಪಡೆಯಲಾಗಿತ್ತು. ಈಗ ಕೆಲವೊಂದು ತಿದ್ದುಪಡಿಯೊಂದಿಗೆ ವರದಿ ಅಂಗೀಕಾರಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

Road Accident : ಚಲಿಸುತ್ತಿದ್ದಾಗಲೇ ಕ್ರೂಸರ್‌ ವಾಹನದ ಟೈರ್‌ ಸ್ಫೋಟಗೊಂಡು ಪಲ್ಟಿಯಾಗಿದೆ. ಪರಿಣಾಮ ಕ್ರೂಸರ್‌ ವಾಹನದಲ್ಲಿದ್ದ ಮಹಿಳೆ ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

VISTARANEWS.COM


on

By

Road Accident in chikodi maharashtra
Koo

ಚಿಕ್ಕೋಡಿ: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ (Road Accident ) ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಮೃತರಾಗಿದ್ದಾರೆ.

ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ದುರ್ದೈವಿಗಳು. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಸ್ಫೋಟಗೊಂಡಿದೆ.

ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್‌ ವಾಹನ ಪಲ್ಟಿಯಾಗಿದೆ. ಕ್ರೂಸರ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಗಂಭೀರ ಗಾಯಗೊಂಡು ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.

ಸ್ಥಳೀಯರು ಸಹಾಯಕ್ಕೆ ಧಾವಿಸಿ ಚೆಲ್ಲಾಪಿಲ್ಲಿಯಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳ್ಳಿಗೇರಿ ಗ್ರಾಮದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

ಕಾರು ಪಲ್ಟಿ ಮೂವರು ಗಂಭೀರ

ರಸ್ತೆ ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿ ಆಗಿದೆ. ಪರಿಣಾಮ ಕಾರಲ್ಲದ್ದ ಮೂವರಿಗೆ ಗಂಭೀರ ಗಾಯವಾಗಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮ ಬಳಿ ರಾ. ಹೆ 50ರಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಕೊಪ್ಪಳ ‌ಕಡೆ ಚಲಿಸುತ್ತಿದ್ದ ಕಾರು ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ‌ವಾಗಿದ್ದು, ಮತ್ತೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಕಾನಾ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾನಾ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು, ಬೈಕ್ ನಡುವೆ ಭೀಕರ ಅಪಘಾತ; ಸವಾರ ಸಾವು

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಯನಗುಂಟೆ ಬಳಿ ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಯನಗುಂಟೆ ಗ್ರಾಮದ ಕೃಷ್ಣಪ್ಪ‌ ( 70 ) ಮೃತರು.

ಕೃಷ್ಣಪ್ಪ ಹೊಸಕೋಟೆಯಿಂದ ಗ್ರಾಮದ ಕಡೆಗೆ ಬರುತ್ತಿದ್ದಾಗ, ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳಗೆ ಬಿದ್ದ ವೃದ್ಧ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆಳಿದ ಮಠಾಧೀಶರು, ಅವರಿಗೆ ಸಾಂತ್ವನ ಹೇಳುವ ಜತೆಗೆ ಆಶೀರ್ವಾದ ಮಾಡಿದರು. ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರು ಭೇಟಿಯಾಗಿ ದೇವೇಗೌಡರಿಗೆ ಸಾಂತ್ವನ ಹೇಳಿದರು.

VISTARANEWS.COM


on

HD Deve Gowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು (HD Deve Gowda) ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮಗ ಎಚ್‌.ಡಿ.ರೇವಣ್ಣ (HD Revanna) ಜೈಲು ಸೇರಿದ್ದಾನೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮೊಮ್ಮಗ ಪ್ರಜ್ವಲ್‌ ರೇವಣ್ಣ (Prajwal Revanna) ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 90ನೇ ವಯಸ್ಸಿನಲ್ಲಿ ಇದನ್ನೆಲ್ಲ ನೋಡಬೇಕಾಯಿತಲ್ಲ ಎಂದು ದೇವೇಗೌಡರು ಕುಗ್ಗಿಹೋಗಿದ್ದಾರೆ. ಹಾಗಾಗಿ, ಹಲವು ಮಠಾಧೀಶರು ದೇವೇಗೌಡರ ನಿವಾಸಕ್ಕೆ ತೆರಳಿ ಅವರಿಗೆ ಸಾಂತ್ವನ ಹೇಳಿದ್ದಾರೆ.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆಳಿದ ಮಠಾಧೀಶರು, ಅವರಿಗೆ ಸಾಂತ್ವನ ಹೇಳುವ ಜತೆಗೆ ಆಶೀರ್ವಾದ ಮಾಡಿದರು. ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರು ಭೇಟಿಯಾಗಿ ದೇವೇಗೌಡರಿಗೆ ಸಾಂತ್ವನ ಹೇಳಿದರು. ಇನ್ನು ಕಲಬುರಗಿಯ ಪುಣ್ಯಕೋಟಿ ಆಶ್ರಮದ ವರಲಿಂಗ ಸ್ವಾಮೀಜಿ ಅವರು ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಆದರೆ, ಭೇಟಿಗೆ ಸಿಗದೆ ಅವರು ವಾಪಸಾದರು.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲ್ಯೂ ಕಾರ್ನರ್‌ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ವಿದೇಶದಿಂದ ಪ್ರಜ್ವಲ್ ಅವರನ್ನು ಕರೆತರಲು ವಿಶೇಷ ತಂಡವನ್ನು ರಚಿಸಿದೆ.

ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಜನ ಸಬ್ ಇನ್ಸ್‌ಪೆಕ್ಟರ್ ಒಳಗೊಂಡ ತಂಡವನ್ನು ರಚಿಸಲಾಗಿದೆ. ಯೂರೋಪ್ ಬಳಿ ಇರುವ ಹಂಗೇರಿ ತಲುಪಲಿರುವ ಕರ್ನಾಟಕ ಪೊಲೀಸರು ಅಲ್ಲಿ ಹುಡುಕಾಟ ನಡೆಸಲಿದ್ದಾರೆ. ಈಗಾಗಲೇ ಭಾರತ ಹಾಗೂ ಜರ್ಮನಿ ಬಳಿ ಮ್ಯೂಚುಯಲ್ ಲೀಗಲ್ ಅಸಿಸ್ಟೆಂಟ್ ಟ್ರೀಟಿ (MLAT) ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಸಿಬಿಐ ಸಹಾಯದಿಂದ ಇಂಟರ್ ಪೋಲ್ ಅಧಿಕಾರಿಗಳ ಜತೆ ಸಹ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading

ಬೆಂಗಳೂರು

Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

Book Release: ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಮೇ 12ರಂದು ಬೆಳಗ್ಗೆ 10ಗಂಟೆಗೆ ಕನ್ನಡದಲ್ಲಿ ಶ್ರೀ ಶಂಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Book Release
Koo

ಬೆಂಗಳೂರು: ಅಯೋಧ್ಯಾ ಪ್ರಕಾಶನ ಪ್ರಕಟನೆಯ ಲೇಖಕ ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರ; ಶಾಂಕರ ಸ್ತೋತ್ರಗಳ ಭಾವಾನುಭವ (Book Release) ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಮೇ 12ರಂದು ಬೆಳಗ್ಗೆ 10ಗಂಟೆಗೆ ನಗರದ ಬನಶಂಕರಿಯ ಬಿ.ವಿ.ಕಾರಂತ್‌ ರಸ್ತೆಯ ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದ ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಸ್ವಾಮಿ ನಿತ್ಯಸ್ಥಾನಂದಜಿ ಮಹಾರಾಜ್‌ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಹಾಗೂ ಸಂಸ್ಕೃತಿ ಚಿಂತಕರಾದ ಡಾ.ಜಿ.ಬಿ. ಹರೀಶ, ವಾಗ್ಮಿ ಹಾಗೂ ಬಹುಭಾಷಾವಿದರು ಶತಾವಧಾನಿ ಆರ್‌. ಗಣೇಶ್‌ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Continue Reading

ಬೆಂಗಳೂರು

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Suspicious Death: ಬೆಂಗಳೂರಲ್ಲಿ (Bengaluru News) ಕೆಎಎಸ್ ಅಧಿಕಾರಿಯೊಬ್ಬರ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಂಜಯ್‌ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

VISTARANEWS.COM


on

By

Bengaluru News
Koo

ಬೆಂಗಳೂರು: ಬೆಂಗಳೂರಲ್ಲಿ (Bengaluru News ) ಹೈಕೋರ್ಟ್‌ ವಕೀಲೆಯೊಬ್ಬರು (High court lawyer) ಅನುಮಾನಾಸ್ಪದ ರೀತಿಯಲ್ಲಿ (Suspicious Death) ಮೃತಪಟ್ಟಿದ್ದಾರೆ. ವಕೀಲೆಯ ಪತಿ ಕೆಎಎಸ್‌ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ (Self harming) ಪತ್ತೆಯಾಗಿದೆ. ಚೈತ್ರಾ ಮೃತ ದುರ್ದೈವಿ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಶಿವಕುಮಾರ್‌ ಮನೆಗೆ ವಾಪಸ್‌ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

2016ರಲ್ಲಿ ಮದುವೆ ಆಗಿದ್ದ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಅಪಾರ್ಟ್‌ಮೆಂಟ್‌ನ ಮೂರು ಫ್ಲಾಟ್‌ನಲ್ಲಿ ಒಂದರಲ್ಲಿ ಚೈತ್ರಾ ಕುಟುಂಬ ಹಾಗೂ ಇನ್ನೊಂದು ಫ್ಲಾಟ್‌ನಲ್ಲಿ ಮೃತಳ ತಮ್ಮ ವಾಸವಾಗಿದ್ದರು. ಶನಿವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜತೆ ನಂತರ ತಮ್ಮನನೊಟ್ಟಿಗೂ ಚೈತ್ರಾ ಮಾತನಾಡಿದ್ದಾರೆ. 11 ಗಂಟೆ ಸುಮಾರಿಗೆ ಚೈತ್ರಾಳ ತಮ್ಮ ಕರೆದಾಗ ಸ್ಪಂದಿಸಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಫ್ಯಾನ್‌ಗೆ ವೇಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಕೂಡಲೇ ಚೈತ್ರಾಳ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೈಕೋರ್ಟ್‌ ವಕೀಲರಾಗಿರುವುದರಿಂದ ಯಾವುದಾದರೂ ಪ್ರಕರಣದಲ್ಲಿ ಯಾರಾದರೂ ಬೆದರಿಕೆ ಹಾಕಿದ್ದರಾ ಅಥವಾ ಕುಟುಂಬದಲ್ಲೇ ಏನಾದರೂ ಕಲಹ ಇತ್ತಾ ಎಂಬ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Bengaluru News Self harming by high court lawyer

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು,‌ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.

ಚೈತ್ರಾ ಬರೆದ ಡೆತ್ ನೋಟ್ ಪತ್ತೆ

ಇನ್ನೂ ಚೈತ್ರಾರ ಬೆಡ್‌ ರೂಮಿನಲ್ಲಿ ಒಂದು ಪುಟದ ಡೆತ್ ನೋಟ್ ಪತ್ತೆಯಾಗಿದೆ. ಆದರೆ ಮೂರು ತಿಂಗಳ ಹಿಂದೆ ಅಂದರೆ ಮಾರ್ಚ್ 11ರಂದು ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಮೇಲ್ನೋಟಕ್ಕೆ ಹಿಂದೊಮ್ಮೆಯೂ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದರಾ ಎಂಬ ಅನುಮಾನ ಮೂಡಿದೆ.

ಇನ್ನೂ ಡೆತ್‌ನೋಟ್‌ನಲ್ಲಿ ನನ್ನ ಪತಿ ತುಂಬಾ ಒಳ್ಳೆಯವರು, ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್‌ನಿಂದ ಬಳಲುತ್ತಿದ್ದೇನೆ, ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ.. ಆದರೆ ಆಗುತ್ತಿಲ್ಲ, ನಾನು ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೆನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ನಾನು ಸೂಸೈಡ್ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಸಹ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನಕ್ಕೆ ಅಂತ್ಯವಾಡಿದ್ದೇನೆ ಎಂದು ಬರೆದಿದ್ದಾರೆ. ಇನ್ನೂ ಯಾವ ವಿಚಾರಕ್ಕೆ ಚೈತ್ರಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬುದು ತಿಳಿದು ಬಂದಿಲ್ಲ.

ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಎಂಬುವವರು ಸೀರೆಯಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಮನೆಯಲ್ಲಿ ಡೆತ್ ನೋಟ್‌ವೊಂದು ಪತ್ತೆಯಾಗಿದೆ. ಅದರಲ್ಲಿ ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿರುವುದು ಗೊತ್ತಾಗಿದೆ. ಆದರೆ ನೋಟ್‌ ಅನ್ನು ಅವರೆ ಬರೆದಿದ್ದ ಎಂಬುದರ ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಾಗಿದೆ. ವರದಿ ಬಂದ ನಂತರ ಸಾವಿನ ಸತ್ಯಾಸತ್ಯತೆ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

ಕಲಬುರಗಿ: ಹಣಕ್ಕಾಗಿ‌ ಸೆಕೆಂಡ್‌ ಹ್ಯಾಂಡ್‌ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿರುವ (Kidnap Case) ಘಟನೆ ನಡೆದಿದೆ. ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣವನ್ನು ಲಪಟಾಯಿಸಿರುವ ಘಟನೆ (Assault Case) ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್‌ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್‌ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಅರ್ಜುನ್‌ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜತೆಗೆ ಹೋಗಿದ್ದರು.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಈ ವೇಳೆ ಆರೋಪಿ ರಮೇಶ್‌ ಕಾರಿನ ಟೆಸ್ಟ್‌ ಡ್ರೈವ್‌ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣಾ ಎಂದು ಮೂವರನ್ನು ಕರೆದುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್‌ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್‌ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.

ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್‌ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident in chikodi maharashtra
ಬೆಳಗಾವಿ33 seconds ago

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

HD Deve Gowda
ಕರ್ನಾಟಕ12 mins ago

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

Artificial Intelligence
ದೇಶ19 mins ago

Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

Book Release
ಬೆಂಗಳೂರು19 mins ago

Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

Actor Upendra
ಸಿನಿಮಾ44 mins ago

Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ

Bengaluru News
ಬೆಂಗಳೂರು1 hour ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Madhu Bangarappa
ಕರ್ನಾಟಕ1 hour ago

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

Navneet Rana
ದೇಶ1 hour ago

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Murder Case in kodagu
ಕೊಡಗು2 hours ago

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Arvind Kejriwal
ದೇಶ2 hours ago

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌