Karnataka Weather Forecast : ವಾರಾಂತ್ಯದಲ್ಲಿ ಇಲ್ಲೆಲ್ಲ Hot ವೆದರ್‌; ಈ ಜಿಲ್ಲೆಗಳಲ್ಲಿ ಕೂಲ್‌ ಕೂಲ್‌ - Vistara News

ಕಲಬುರಗಿ

Karnataka Weather Forecast : ವಾರಾಂತ್ಯದಲ್ಲಿ ಇಲ್ಲೆಲ್ಲ Hot ವೆದರ್‌; ಈ ಜಿಲ್ಲೆಗಳಲ್ಲಿ ಕೂಲ್‌ ಕೂಲ್‌

Karnataka Weather Forecast : ವಾರಾಂತ್ಯದಲ್ಲಿ ರಾಜ್ಯದ ಹಲವೆಡೆ ಬಿಸಿಲು, ಮಳೆ, ಗಾಳಿಯ ವಾತಾವರಣ ಇರಲಿದೆ.

VISTARANEWS.COM


on

Hot weather and cool weather
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರಿತ್ಯವು (Karnataka Weather Forecast) ಜನರ ಮಂಡೆ ಬಿಸಿ ಮಾಡಿದೆ. ಒಮ್ಮೊಮ್ಮೆ ಬಿಸಿಲಿದ್ದರೆ, ಮತ್ತೊಮ್ಮೆ ಚಳಿಯ ವಾತಾವರಣ ಇರುತ್ತದೆ. ದಿಢೀರ್‌ ಅಲ್ಲಲ್ಲಿ ಮಳೆಯ ಸಿಂಚನವಾಗುತ್ತದೆ.

ಸದ್ಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ವಾರಾಂತ್ಯದಲ್ಲಿ ಕರಾವಳಿಯ ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಜತೆಗೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಹಾಗೂ ಇಳಿಕೆಯಾಗಲಿದೆ.

ನೈರುತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿದ್ದು, ಗುರುವಾರ ಗರಿಷ್ಠ ಉಷ್ಣಾಂಶ 34.8 ಡಿ.ಸೆ. ಕಲಬುರಗಿ ಹಾಗೂ ಚಿಕ್ಕನಹಳ್ಳಿನಲ್ಲಿ ದಾಖಲಾಗಿದೆ. ಕಡಿಮೆ ಉಷ್ಣಾಂಶ 15. 2 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Kidnapping Case : ಉಂಡ ಮನೆಗೆ ಕನ್ನ ಹಾಕಲು ಕಿಡ್ನ್ಯಾಪ್‌ ನಾಟಕ; ಪೊಲೀಸರಿಗೆ ಲಾಕ್‌ ಆಗಿದ್ದೆ ರೋಚಕ

ಈ ಜಿಲ್ಲೆಗಳಲ್ಲಿ ಮಳೆ ಸೂಚನೆ

ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿಯ ಅಲ್ಲಲ್ಲಿ ಮಳೆ ಸಾಧಾರಣವಾಗಿರಲಿದೆ. ಹಾವೇರಿ, ಧಾರವಾಡ ಮತ್ತು ಗದಗ, ವಿಜಯನಗರ ಜಿಲ್ಲೆಯಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಜಿಟಿಜಿಟಿ ಮಳೆ ಇರಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಲಘು ಮಳೆಯಾಗಬಹುದು.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Bangalore Traffic : ಡ್ರೋನ್‌ ಬಳಿಕ ಟ್ರಾಫಿಕ್‌ ಕಂಟ್ರೋಲ್‌ಗೆ ಜಿಪಿಎಸ್‌; ಬೆಂಗಳೂರಿಗೆ ಟನಲ್‌ ರೋಡ್‌!

ಈ ಜಿಲ್ಲೆಗಳಲ್ಲಿ ಸುಡುವ ಸೂರ್ಯ

ಹವಾಮಾನ ಇಲಾಖೆ ಅ.7-8 ರಂದು ಉಷ್ಣಾಂಶ ಏರಿಕೆ ಆಗುವ ಎಚ್ಚರಿಕೆಯನ್ನು ನೀಡಿದೆ. ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ರಾಯಚೂರಲ್ಲಿ ತಾಪಮಾನ ಏರಿಕೆ ಆಗಲಿದೆ. ಜತೆಗೆ ದಕ್ಷಿಣ ಒಳನಾಡಿನ ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಒಂದು ಕಡೆ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದ್ದರೆ ಮತ್ತೊಂದು ಕಡೆ ಕನಿಷ್ಠ ಉಷ್ಣಾಂಶವು ಕೆಲವು ಜಿಲ್ಲೆಗಳಲ್ಲಿ ಇಳಿಕೆ ಆಗಲಿದೆ. ಕೊಪ್ಪಳ, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

theft Case : ಪ್ರತ್ಯೇಕ ಕಡೆಗಳಲ್ಲಿ ಕಳ್ಳರು ಕೈಚಳಕ ತೋರಿಸಿ ಪರಾರಿ ಆಗಿದ್ದಾರೆ. ಬೆಂಗಳೂರಲ್ಲಿ ಕಳ್ಳನೊಬ್ಬ ತುಪ್ಪ ಕದ್ದರೆ, ಕಲಬುರಗಿಯಲ್ಲಿ ಪೊಲೀಸರ ಬಸ್‌ನ್ನೇ ಎಗರಿಸಲು ಹೋಗಿ ಲಾಕ್‌ ಆಗಿದ್ದಾನೆ. ಹಾವೇರಿಯಲ್ಲಿ ಮನೆಗಳ್ಳತನ, ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನವಾಗಿದೆ. ವಿಜಯನಗರದಲ್ಲಿ ಮನೆ ಮಾಲೀಕರು ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳತನವಾಗಿದೆ.

VISTARANEWS.COM


on

By

theft Case
Koo

ಬೆಂಗಳೂರು/ಕಲಬುರಗಿ: ಚಾಲಾಕಿ ಕಳ್ಳರು (Theft Case) ಹೇಗೆಲ್ಲ ಯಮಾರಿಸುತ್ತಾರೆ ಎಂಬುದಕ್ಕೆ ಈ ಪ್ರಕರಣಗಳೇ ಸಾಕ್ಷಿ.. ಬೆಂಗಳೂರಿನ ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಚಾಲಾಕಿ ಕಳ್ಳನೊಬ್ಬ ಕೈಚಳಕ ತೋರಿದ್ದಾನೆ. ಪೇಡ ಖರೀದಿ ನೆಪದಲ್ಲಿ ಬಂದು 15 ಕೆ.ಜಿ ತುಪ್ಪವನ್ನು ಕದ್ದೊಯ್ದಿದ್ದಾನೆ.

ನಂದಿನಿ ಪಾರ್ಲರ್‌ಗೆ ಬಂದ ಕಳ್ಳನೊಬ್ಬ ಮನೆಯಲ್ಲಿ ಫಂಕ್ಷನ್ ಇದೆ. ಹದಿನೈದು ಕೆ.ಜಿ ತುಪ್ಪ ಕೊಡಿ ಎಂದಿದ್ದ. ಖರೀದಿಸಿದ 15 ಕೆಜಿ ತುಪ್ಪವನ್ನು ಬ್ಯಾಗ್‌ಗೆ ಹಾಕಿಕೊಂಡು. ನಂತರ ಅಂಗಡಿ ಮಾಲೀಕನಿಗೆ ಪೇಡ ಕೊಡಿ ಎಂದಿದ್ದ. ಅಷ್ಟೇ ಅಂಗಡಿ ಮಾಲೀಕ ಪೇಡ ಕೊಡಲು ತಿರುಗಿದಾಗ 15 ಕೆಜಿ ತುಪ್ಪದ ಬ್ಯಾಗ್‌ ಜತೆ ಎಸ್ಕೇಪ್ ಆಗಿದ್ದಾನೆ. ಪೇಡದೊಂದಿಗೆ ಬಂದ ಮಾಲೀಕ ಗ್ರಾಹಕ ಇಲ್ಲದೆ ಇರುವುದನ್ನು ಗಮನಿಸಿ ಓಡಿದ್ದಾನೆ. ಆದರೆ ಕಳ್ಳನ ಪತ್ತೆಯಾಗಿಲ್ಲ. ಚಾಲಾಕಿ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಅಂಗಡಿ ಮಾಲೀಕ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಲಬುರಗಿಯಲ್ಲಿ ಸಿಎಆರ್ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನ

ಪೊಲೀಸ್ ಕಮಿಷನರ್ ಕಛೇರಿಯಲ್ಲಿ ನಿಲ್ಲಿಸಿದ್ದ ಸಿಎಆರ್‌ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಛತ್ತಿಸ್‌ಘಡ ಮೂಲದ ಸೋನು ಭಗಿರಥ ಎಂಬಾತ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ. ಸೋಮವಾರ ಮಧ್ಯರಾತ್ರಿ ಕುಡಿದ ನಶೆಯಲ್ಲಿ ಕಮಿಷನರ್ ಕಚೇರಿಗೆ ಬಂದಿದ್ದಾನೆ. ಬಸ್‌ನ ಕಿಟಕಿಯಲ್ಲಿ ನೇತು ಹಾಕಿದ್ದ ಪೊಲೀಸ್ ಕಾನ್ಸಟೇಬಲ್ ಜೇಬಿಗೆ ಕೈ ಹಾಕಿ ಬಸ್‌ ಕೀ ತೆಗೆದುಕೊಂಡಿದ್ದ.

ಬಳಿಕ ಡ್ರೈವರ್‌ ಸೀಟ್‌ ಏರಿದ ಕುಡುಕ ಸೋನು ಬಸ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಮಧ್ಯರಾತ್ರಿ ಬಸ್‌ ಸೌಂಡ್‌ ಕೇಳಿ ಎಚ್ಚೆತ್ತುಕೊಂಡ ಪೊಲೀಸ್ ಕಾನ್ಸಟೇಬಲ್ ತಕ್ಷಣ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಹಾವೇರಿಯಲ್ಲಿ ಕಳ್ಳರ ಕೈಚಳಕ

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಹಾನಗಲ್ ಪಟ್ಟಣದ ಕೆಎಚ್‌ಬಿ ಕಾಲೋನಿಯ ವಿರೇಶ ಬಾಳಗೊಂಡರ ಹಾಗೂ ಕುಮಾರೇಶ್ವರ ನಗರದ ರವೀಂದ್ರ ಶಿರಗೋಡ ಎನ್ನುವರ ಮನೆಯಲ್ಲಿ ಕಳ್ಳತನವಾಗಿದೆ. ಸ್ಥಳಕ್ಕೆ ಹಾನಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರವೀಂದ್ರ ಮನೆಯಲ್ಲಿ 8 ತೊಲೆ ಬಂಗಾರ, ನಗದು ಹಾಗೂ ವಿರೇಶ ಮನೆಯಲ್ಲಿ 12 ತೊಲೆ ಬಂಗಾರ 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ.

ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನ

ಬೆಂಗಳೂರಿನ ವಿವಿಧೆಡೆ ಸರಣಿ ಮೊಬೈಲ್‌ ಕಳ್ಳತನ‌ ನಡೆಸುತ್ತಿದ್ದ ಕಳ್ಳನ‌ ಬಂಧನವಾಗಿದೆ. ಸೈಯದ್ ಪರ್ವೀಜ್@ಪರ್ವೀಜ್(25) ಬಂಧಿತ ಆರೋಪಿಯಾಗಿದ್ದಾನ. ರಸ್ತೆ ಬದಿಯಲ್ಲಿ ಮೊಬೈಲ್‌ನಲ್ಲಿ ಮಾತಾನಾಡಿಕೊಂಡು ಹೋಗುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಸೈಯದ್‌ ಬೈಕ್‌ನಲ್ಲಿ ಬಂದು ಮೊಬೈಲ್ ಎಗರಿಸುತ್ತಿದ್ದ.

theft Case

ಆರೋಪಿಯಿಂದ ಒಟ್ಟು 5ಲಕ್ಷ ರೂ. ಬೆಲೆಬಾಳುವ 9 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸುತ್ತಿದ್ದ ಸುಜುಕಿ ಆಕ್ಸೆಸ್ ಮತ್ತು ಟಿವಿಎಸ್ ಎನ್ಟಾರ್ಕ್ ವಾಹನವನ್ನು ವಶಕ್ಕೆ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ, ಜೆಪಿ ನಗರ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಕಳ್ಳತನ ನಡೆಸುತ್ತಿದ್ದ. ಈ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯನಗರದಲ್ಲಿ ಮನೆ ಮೇಲೆ ಮಲಗಿದ್ದಾಗ ಕಳ್ಳತನ

ವಿಪರೀತ ಸೆಕೆ ಎಂದು ಮನೆ ಮಾಲೀಕರು ರಾತ್ರಿ ಮನೆಯ ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳನೊಬ್ಬ ಮನೆಗೆ ಕಳ್ಳತನ ಮಾಡಿದ್ದಾನೆ. ವಿಜಯನಗರದ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರದೀಪ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಒಂದೂವರೇ ತೊಲೆ ಬಂಗಾರ, 1 ಲಕ್ಷ ರೂ. ಹಣ, 750 ಗ್ರಾಂ ಬೆಳ್ಳಿ ಕಳ್ಳತನವಾಗಿದೆ. ಹೊಸಪೇಟೆಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳದಿಂದಲೂ ಪರಿಶೀಲನೆ ನಡೆಸಿ ಪೊಲೀಸರು ಸಿಸಿಟಿವಿ ಫುಟೇಜ್ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Karnataka Weather Forecast : ರಾಜ್ಯದ ವಿವಿಧೆಡೆ ಮಳೆಯು ಅಬ್ಬರಿಸುತ್ತಿದೆ. ಭಾರಿ ಮಳೆಗೆ ಕೊಟ್ಟೂರು ಬಸ್ ನಿಲ್ದಾಣವು ಕೆರೆಯಾಗಿ ಪರಿವರ್ತನೆ ಆಗಿತ್ತು. ಬಲಿಗಾಗಿ ಕಾಯುತ್ತಿದ್ದ ದೊಡ್ಡ ಚರಂಡಿಯೊಂದು ಬಾಯ್ತೆರೆದಿತ್ತು. ಸ್ವಲ್ಪ ಯಾಮಾರಿದ್ರೂ ತಾಯಿ-ಮಗ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು.

VISTARANEWS.COM


on

By

Karnataka Weather Forecast
Koo

ವಿಜಯನಗರ/ಚಿಕ್ಕಮಗಳೂರು: ರಾಜ್ಯಾದ್ಯಂತ ಮಳೆಯಾಟ (Karnataka Weather Forecast) ಜೋರಾಗಿದೆ. ನಿನ್ನೆ ಬುಧವಾರ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ ತಿರುಗಿ ನೋಡದ ಅಧಿಕಾರಿಗಳು, ಶಾಸಕರ ವಿರುದ್ಧ ಪ್ರಯಾಣಿಕರು ಕಿಡಿಕಾರಿದರು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಇದನ್ನೂ ಓದಿ: Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

ಹಾವೇರಿಯಲ್ಲಿ ಸಿಡಿಲಿಗೆ ಯುವಕ ಬಲಿ

ಹಾವೇರಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲಿನ ಆರ್ಭಟಕ್ಕೆ ಯುವಕ ಬಲಿಯಾಗಿದ್ದಾನೆ. ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ದಯಾನಂದ (22) ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಭಾರಿ ಮಳೆಯೊಂದಿಗೆ ಗುಡುಗು ಸಿಡಿಲಿನ ಆರ್ಭಟಕ್ಕೆ ದಯಾನಂದ ಮರದ ಕೆಳಗೆ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ದಯಾನಂದ ಮೃತಪಟ್ಟಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲಿ ಮಲ್ಲಿಗೆ ಹೂವಿನಂತೆ ಸುರಿದ ಆಲಿಕಲ್ಲು

ಚಿಕ್ಕಮಗಳೂರಿನಲ್ಲಿ ಗುರುವಾರ ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮುತ್ತೋಡಿ ಅಭಯಾರಣ್ಯದ ಬಳಿ ಭಾರಿ ಆಲಿಕಲ್ಲು ಮಳೆಯು ಮಲ್ಲಿಗೆ ಹೂವಿನಂತೆ ಕಂಡು ಬಂತು. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಾಗುತ್ತಿದ್ದು, ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮಳೆ ನೀರಿಗಿಂತ ಆಲಿಕಲ್ಲು ಆರ್ಭಟ ಜೋರಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಗೆ ಮನೆ ಮೇಲೆ ಮರ ಬಿದ್ದು ಜಖಂ

ಚಿಕ್ಕಮಗಳೂರಿನಲ್ಲಿ ಗುರುವಾರವೂ ಮಳೆಯು ಆರ್ಭಟಿಸಿದೆ. ಭಾರಿ ಮಳೆಗೆ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು ಅವಾಂತರವೇ ಸೃಷ್ಟಿಯಾಗಿತ್ತು. ಮನೆಯಲ್ಲಿದ್ದ ವಸ್ತುಗಳು, ದವಸ ಧಾನ್ಯಗಳು ನಾಶವಾಗಿದ್ದವು. ಗಾಳಿ- ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದವು. ಕಳಸ ಪಟ್ಟಣದಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳಸ-ಕುದುರೆಮುಖ, ಬಾಳೆಹೊನ್ನೂರು-ಕಳಸ ಹೆದ್ದಾರಿಯಲ್ಲಿ ಸುಮಾರು 15 ಹೆಚ್ಚು ಕಡೆ ಮರ ಬಿದ್ದು, ಪ್ರಯಾಣಿಕರು ಪರದಾಟ ಅನುಭವಿಸಿದರು.

ಕಳಸ ತಾಲೂಕಿನ ನೆಲ್ಲಿಕೆರೆ, ಕಲ್ಮಕ್ಕಿ, ಕೈಮರ ಗ್ರಾಮಗಳಲ್ಲಿ ಹಲವು ಮನೆಗಳ ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದಿತ್ತು. ಮನೆಗಳ ಹೆಂಚುಗಳು, ಕೊಟ್ಟಿಗೆಯ ಚಾವಣಿ ಹಾನಿಯಾಗಿತ್ತು. ಇನ್ನೂ ಮರಗಳ ಕೊಂಬೆ ತಂತಿಯ ಮೇಲೆ ಬಿದ್ದು ವಿದ್ಯುತ್ ಸ್ಥಗಿತವಾಗಿತ್ತು. ಧಾರವಾಡದಲ್ಲೂ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಗುರುವಾರ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಇತ್ತು. ನೋಡ ನೋಡುತ್ತಿದ್ದಂತೆ ಮಳೆ ಸುರಿದಿದೆ.

ವಿಜಯನಗರದಲ್ಲಿ ಗಾಳಿ ಮಳೆಯ ಅವಾಂತರ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಗಾಳಿ ಮಳೆಯ ಅವಾಂತರಕ್ಕೆ ಗುರುವಾರ ಸಂಜೆ ಸಾರ್ವಜನಿಕ ಗ್ರಂಥಾಲಯ ಮುಂಭಾಗ ವಿದ್ಯುತ್ ಕಂಬ ಧರೆಗೆ ಉರುಳಿದೆ. ಅದೇ ರೀತಿ ಪಟ್ಟಣದ ಕುಡಿಯುವ ನೀರಿನ ಘಟಕದ ಬಳಿ ಬೃಹತ್ ಮರ ಬಿದ್ದಿದೆ. ಇತ್ತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಳೆ ನೀರು ನುಗ್ಗಿ ಚಿಕಿತ್ಸೆಗೆ ಬಂದಿದ್ದವರು ತೊಂದರೆ ಅನುಭವಿಸಿದರು. ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿತ್ತು.

ಕೆರೆಯಲ್ಲಿ ಮರಿಯಾನೆಯೊಂದಿಗೆ ಮಳೆಯಾಟ

ಮೈಸೂರಿನಲ್ಲೂ ಮಳೆಯಾಗುತ್ತಿದ್ದು, ಹನಿಗಳ ನಡುವೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ನೋಡುಗರ ಸೆಳೆದವು. ನಾಗರಹೊಳೆಯ ಕುಟ್ಟ ಬಳಿ ಕೆರೆಯಲ್ಲಿ ಆನೆಯು ಮರಿಯೊಂದಿಗೆ ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಖ್ಯಾತ ವನ್ಯಜೀವಿ ಫೋಟೋಗ್ರಾಫರ್ ರವಿಶಂಕರ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗರನ್ನು ಕೈಬೀಸಿ ಕರೆಯುತ್ತಿದೆ.

ಮೇ 21ರವರೆಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿರುಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಮಂಡ್ಯ, ಹಾಸನದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ರಭಸವಾಗಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ ಇಳಿಕೆ

ಮುಂದಿನ 5 ದಿನ ಗರಿಷ್ಠ ಉಷ್ಣಾಂಶ 2-3 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ವಾತಾವರಣವು ತಂಪಾಗಿ ಇರಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಂಜೆ ಅಥವಾ ರಾತ್ರಿ ನಂತರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30 ಹಾಗೂ 22 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Holenarasipura sexual assault case lot of confusion in the victim statement against HD Revanna Case
ಕ್ರೈಂ12 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

Bhatkal News
ಕರ್ನಾಟಕ15 mins ago

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Dubbing Premier League
ಕ್ರಿಕೆಟ್22 mins ago

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Uttar Pradesh
ದೇಶ25 mins ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Prajwal Revanna Case
ಕರ್ನಾಟಕ41 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

theft Case
ಕ್ರೈಂ1 hour ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು1 hour ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ1 hour ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ1 hour ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ1 hour ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌