ಸ್ಪೈಸ್‌ಜೆಟ್‌ ಅಧ್ಯಕ್ಷರ ವಿರುದ್ಧ 10 ಲಕ್ಷ ರೂ.ಗಳ ಷೇರು ವಂಚನೆ ಪ್ರಕರಣ ದಾಖಲು - Vistara News

ಪ್ರಮುಖ ಸುದ್ದಿ

ಸ್ಪೈಸ್‌ಜೆಟ್‌ ಅಧ್ಯಕ್ಷರ ವಿರುದ್ಧ 10 ಲಕ್ಷ ರೂ.ಗಳ ಷೇರು ವಂಚನೆ ಪ್ರಕರಣ ದಾಖಲು

ಸ್ಪೈಸ್‌ಜೆಟ್‌ ಏರ್‌ಲೈನ್‌ ಅಧ್ಯಕ್ಷ ಅಜಯ್‌ ಸಿಂಗ್‌ ವಿರುದ್ಧ 10 ಲಕ್ಷ ರೂ. ಷೇರು ಮಾರಾಟದಲ್ಲಿ ವಂಚಿಸಿರುವ ಕೇಸ್‌ ದಾಖಲಾಗಿದೆ. ಆದರೆ ಇದು ಬೋಗಸ್‌ ದೂರು ಎಂದು ಏರ್‌ಲೈನ್‌ ನಿರಾಕರಿಸಿದೆ.

VISTARANEWS.COM


on

spicejet chairman ajay sing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಉದ್ಯಮಿಯೊಬ್ಬರಿಗೆ ೧೦ ಲಕ್ಷ ರೂ. ಮೌಲ್ಯದ ಷೇರುಗಳ ಮಾರಾಟದಲ್ಲಿ ವಂಚಿಸಿದ ಆರೋಪವನ್ನು ಸ್ಪೈಸ್‌ಜೆಟ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸಿಂಗ್‌ ಎದುರಿಸುತ್ತಿದ್ದು, ಕೇಸ್‌ ದಾಖಲಾಗಿದೆ. ಆದರೆ ದೂರು ಬೋಗಸ್‌ ಎಂದು ಏರ್‌ಲೈನ್‌ ಹೇಳಿದೆ.

ಅಜಯ್‌ ಸಿಂಗ್‌ ವಿರುದ್ಧ ವೈಮಾನಿಕ ವಲಯದ ಕನ್ಸಲ್ಟೆಂಟ್‌ ಆಗಿರುವ ಅಮಿತ್‌ ಅರೋರಾ ಎಂಬುವರು ವಂಚನೆಯ ದೂರು ದಾಖಲಿಸಿದ್ದಾರೆ. ಅಜಯ್‌ ಸಿಂಗ್‌ ಅವರಿಗೆ ೨೦೧೬ರಲ್ಲಿ ಕೊಟ್ಟಿದ್ದ ಸೇವೆಯೊಂದಕ್ಕೆ ಪ್ರತಿಯಾಗಿ ೧೦ ಲಕ್ಷ ರೂ. ಮೌಲ್ಯದ ಷೇರುಗಳ ನಕಲಿ ಡಿಪಾಸಿಟರಿ ಇನ್‌ಸ್ಟ್ರಕ್ಷನ್‌ ಸ್ಲಿಪ್‌ ( Depository instruction slip-DIS ) ಅನ್ನು ಕೊಟ್ಟಿದ್ದರು. ಬಳಿಕ ಹೊಸತಾಗಿ ಡಿಐಎಸ್‌ ಮೂಲಕ ಸ್ಪೈಸ್‌ಜೆಟ್‌ನ ೧೦ ಲಕ್ಷ ಷೇರುಗಳನ್ನು ವರ್ಗಾಯಿಸುವುದಾಗಿಯೂ ಭರವಸೆ ಕೊಟ್ಟಿದ್ದರು. ಆದರೆ ಇದೀಗ ವಂಚಿಸಿದ್ದಾರೆ. ಇತರ ಹಲವರನ್ನೂ ಇದೇ ರೀತಿಯಲ್ಲಿ ವಂಚಿಸಿದ್ದಾರೆ ಎಂದು ಅಮಿತ್‌ ಅರೋರಾ ದೂರಿದ್ದಾರೆ.

ಏನಿದು ಡಿಪಾಸಿಟರಿ ಇನ್‌ಸ್ಟ್ರಕ್ಷನ್‌ ಸ್ಲಿಪ್?‌ ಇದು ಚೆಕ್‌ ಮಾದರಿಯಲ್ಲಿ ಬಳಕೆಯಾಗುವಂಥದ್ದು. ಆದರೆ ಡಿಮ್ಯಾಟ್‌ ಖಾತೆಗೆ ಸಂಬಂಧಿಸಿದ್ದು. ಒಂದು ಡಿಮ್ಯಾಟ್ ಖಾತೆಯಿಂದ ಮತ್ತೊಂದು ಖಾತೆಗೆ ಷೇರುಗಳನ್ನು ವರ್ಗಾವಣೆ ಮಾಡಲು ಬಳಸಲಾಗುತ್ತದೆ. ಅಜಯ್‌ ಸಿಂಗ್‌ ಕೊಟ್ಟಿದ್ದ ಸ್ಲಿಪ್‌ಗಳು ನಕಲಿಯಾಗಿತ್ತು. ಅಸಲಿ ಸ್ಲಿಪ್‌ ನೀಡುವಂತೆ ಹಲವು ಬಾರಿ ತಿಳಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಅಮಿತ್‌ ಅರೋರಾ ದೂರಿದ್ದಾರೆ.

ಆದರೆ ಅಮಿತ್‌ ಅರೋರಾ ದೂರನ್ನು ಬೋಗಸ್‌ ಎಂದು ಸ್ಪೈಸ್‌ಜೆಟ್‌ ವಕ್ತಾರರು ಬಣ್ಣಿಸಿದ್ದಾರೆ. ಲಿಕ್ಕರ್‌ ಡೀಲರ್‌ ಅಮಿತ್‌ ಅರೋರಾ ಕ್ಷುಲ್ಲಕ ಕಾರಣಕ್ಕಾಗಿ ಹಾಗೂ ಅಜಯ್‌ ಸಿಂಗ್‌ ಅವರ ತೇಜೋವಧೆಗೋಸ್ಕರ ಪೊಲೀಸರಿಗೆ ದೂರು ನೀಡಿದ್ದಾರೆ. ಅಮಿತ್‌ ಅರೋರಾ ಅವರಿಂದ ಕಂಪನಿಯು ಯಾವುದೇ ಸೇವೆ ಪಡೆದಿಲ್ಲ, ಕೋರಿಕೆಯನ್ನೂ ಸಲ್ಲಿಸಿರಲಿಲ್ಲ. ಪೊಲೀಸರು ಸೂಕ್ತ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಡಿಜಿಸಿಎ ಶೋಕಾಸ್‌ ನೋಟಿಸ್:‌ ಈ ನಡುವೆ ಕಳೆದ ೧೮ ದಿನಗಳಲ್ಲಿ ೮ ಸಲ ತಾಂತ್ರಿಕ ಅಡಚಣೆ ದಾಖಲಾಗಿರುವುದಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಸ್ಪೈಸ್‌ಜೆಟ್‌ಗೆ ನೋಟಿಸ್‌ ರವಾನಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: 3ನೇ ಬಾರಿಯ ‘ವಿಸ್ತೃತ’ ಸರ್ಕಾರವು ‘ವಿಕಸಿತ ಭಾರತ’ಕ್ಕೆ ಶ್ರಮಿಸಲಿ

ಲೋಕಸಭೆ ಚುನಾವಣೆ ಫಲಿತಾಂಶವು ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ಬಿಜೆಪಿಗೆ ಇದ್ದ ಬಹುಮತ ಈಗ ಇಲ್ಲದ ಕಾರಣ ಮೈತ್ರಿಪಕ್ಷಗಳ ಮರ್ಜಿಗೆ ಕಾಯಬೇಕಿದೆ. ಅತ್ತ, ಕಾಂಗ್ರೆಸ್‌ ಮುಂದಾಳತ್ವದ ಇಂಡಿಯಾ ಒಕ್ಕೂಟವೂ ಬಲಿಷ್ಠವಾಗಿದೆ. ಹಾಗಾಗಿ, 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ನರೇಂದ್ರ ಮೋದಿ ಅವರು ಮೈತ್ರಿಪಕ್ಷಗಳ ಜತೆ ಸಮನ್ವಯ ಸಾಧಿಸುವ ಜತೆಗೆ ಪ್ರತಿಪಕ್ಷಗಳನ್ನೂ ಎದುರಿಸಬೇಕಿದೆ. ಇದರ ಮಧ್ಯೆ, ವಿಕಸಿತ ಭಾರತದ ಕನಸು ಸಾಕಾರಗೊಳ್ಳಲು ಕೂಡ ನೂತನ ಸರ್ಕಾರ ಹೆಚ್ಚು ಶ್ರಮ ವಹಿಸಬೇಕಿದೆ.

VISTARANEWS.COM


on

Modi Cabinet
Koo

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರ ಜತೆಗೆ ಅನುಭವಿಗಳು, ಮೈತ್ರಿ ಪಕ್ಷಗಳ ಸಂಸದರು, ಯುವ ಸಂಸದರು ಸೇರಿ ಹಲವು ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ 72 ಸಂಸದರು ಸಚಿವರಾಗಿ (Modi 3.0 Cabinet) ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಸುಮಾರು 80 ದಿನಗಳಿಗೂ ಅಧಿಕ ಅವಧಿವರೆಗೆ 7 ಹಂತಗಳಲ್ಲಿ ಮತದಾನ ನಡೆದು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ, ಈಗ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ಸತತ ಮೂರನೇ ಬಾರಿಗೆ ಎನ್‌ಡಿಎ ಸರ್ಕಾರವೇ ಅಧಿಕಾರಕ್ಕೆ ಬಂದಿದೆ. ಹಾಗಾಗಿ, ಚುನಾವಣೆ ಸಮಯದ ರಾಜಕೀಯ ಮೇಲಾಟ, ಆರೋಪ, ಪ್ರತ್ಯಾರೋಪ, ಟೀಕೆ, ವ್ಯಂಗ್ಯ, ತಿರುಗೇಟುಗಳನ್ನು ಬಿಟ್ಟು, ಆಡಳಿತ ಪಕ್ಷದವರು ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ನಿರ್ಮಾಣದ ಕನಸನ್ನು ನನಸಾಗಿಸಲು ಶ್ರಮಿಸಬೇಕಿದೆ. ಚುನಾವಣೆ ನೀತಿ ಸಂಹಿತೆ, ಫಲಿತಾಂಶದ ಹಿನ್ನೆಲೆಯಲ್ಲಿ ನಿಂತ ನೀರಾಗಿದ್ದ ಆಡಳಿತ ಯಂತ್ರಕ್ಕೆ ಈಗ ವೇಗ ನೀಡಬೇಕಿದೆ.

ಹಾಗೆ ನೋಡಿದರೆ, ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲು ದೇಶದಲ್ಲಿ ಸಕಾರಾತ್ಮಕ ವಾತಾವರಣವೇ ಇದೆ. ದೇಶದ ಜಿಡಿಪಿ ಬೆಳವಣಿಗೆಯ ಕುರಿತು ಅಂದಾಜಿಸಲಾಗಿದೆ. ಹಣದುಬ್ಬರವೂ ನಿಯಂತ್ರಣಕ್ಕೆ ಬರುತ್ತಿದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಮೂಲ ಸೌಕರ್ಯ ಯೋಜನೆಗಳಿಗೆ ಒತ್ತು ನೀಡಿರುವುದು, ರೈಲು, ರೈಲು ನಿಲ್ದಾಣಗಳ ಆಧುನೀಕರಣ, ದಾಖಲೆ ವೇಗದಲ್ಲಿ ರಸ್ತೆ ನಿರ್ಮಾಣ, ಅತ್ಯಾಧುನಿಕ ವಿಮಾನ ನಿಲ್ದಾಣಗಳು ತಲೆ ಎತ್ತಿರುವುದು, ಇಸ್ರೋ ಬಾಹ್ಯಾಕಾಶ ಯೋಜನೆಗಳಿಗೆ ಉತ್ತೇಜನ ನೀಡಿರುವುದು ಸೇರಿ ಹಲವು ಕಾರ್ಯಕ್ರಮಗಳು ದೇಶದ ಅಭಿವೃದ್ದಿ ಮಾನದಂಡವನ್ನು ದುಪ್ಪಟ್ಟುಗೊಳಿಸಿವೆ. ಇದರಿಂದಾಗಿ ಸರ್ಕಾರದ ಸಚಿವರು, ಸಂಸದರು ವಿಕಸಿತ ಭಾರತದ ಕಲ್ಪನೆಯ ಸಾಕಾರಗೊಳಿಸಲು ಹೆಚ್ಚಿನ ಶ್ರಮ ವಹಿಸಬೇಕು. ಹೊಸ ಹೊಸ ಯೋಜನೆಗಳು, ಯೋಜನೆಗಳ ಸಮರ್ಪಕ ಜಾರಿ ಮೂಲಕ ದೇಶದ ಏಳಿಗೆಗೆ ಇನ್ನಷ್ಟು ಕೊಡುಗೆ ನೀಡಬೇಕು.

ಕೇಂದ್ರದಲ್ಲಿ 10 ವರ್ಷಗಳಿಂದ ಇದ್ದ ಬಹುಮತದ ಸರ್ಕಾರ ಈಗಿಲ್ಲ. ಬಿಜೆಪಿಯು 240 ಸೀಟುಗಳಿಗೆ ಸೀಮಿತವಾಗಿದ್ದು, ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಗಾಗಿ, ಮೋದಿ ಸರ್ಕಾರವು ಸುಸ್ಥಿರ ಆಡಳಿತ ನೀಡಬೇಕು ಎಂದರೆ ಮೈತ್ರಿಕೂಟದಲ್ಲಿ ಸ್ಥಿರತೆ ಕಾಪಾಡಬೇಕು, ಸಮನ್ವಯತೆ ಸಾಧಿಸಬೇಕು. ಪ್ರಾದೇಶಿಕ ಪಕ್ಷಗಳಿಗೆ, ಪ್ರಾದೇಶಿಕ ಪಕ್ಷಗಳ ರಾಜ್ಯಗಳಿಗೆ ಹೆಚ್ಚಿನ ಮನ್ನಣೆ ನೀಡಬೇಕು. ಧರ್ಮ, ಜಾತಿಯ ವಿಷಯಗಳಿಗೆ ಪ್ರಾಮುಖ್ಯತೆ ಕೊಡದೆ, ಎಲ್ಲ ಮೈತ್ರಿ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರವನ್ನು ಮುನ್ನಡೆಸಬೇಕು. ಮೋದಿ ಸರ್ಕಾರವು ಉದ್ಯಮಿಗಳ ಪರವಾದ ಸರ್ಕಾರ ಎಂಬ ಕುಖ್ಯಾತಿ ಇತ್ತೀಚಿನ ವರ್ಷಗಳಲ್ಲಿ ಜಾಸ್ತಿಯಾಗಿದೆ. ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್‌ ಸೇರಿ ಅಗತ್ಯ ವಸ್ತುಗಳ ಬೆಲೆಯೇರಿಕೆಯು ಬಡ ಹಾಗೂ ಮಧ್ಯಮ ವರ್ಗದವರನ್ನು ಹೈರಾಣಾಗಿಸಿದೆ. ಇಂತಹ ವಿಷಯಗಳ ಕುರಿತು ಮೋದಿ ಹಾಗೂ ಟೀಮ್‌ ಗಮನ ಹರಿಸಬೇಕು. ಬಜೆಟ್‌ನಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರಿಗೆ ನೇರವಾಗಿ ಅನುಕೂಲವಾಗುವ (ಕಿಸಾನ್‌ ಸಮ್ಮಾನ್‌, ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಸಬ್ಸಿಡಿ ಹೆಚ್ಚಳ ಇತ್ಯಾದಿ) ಯೋಜನೆಗಳನ್ನು ಘೋಷಿಸಬೇಕು.

ಕಳೆದ 10 ವರ್ಷಗಳಲ್ಲಿ ಲೋಕಸಭೆಯಲ್ಲಿ ಬಲಿಷ್ಠ ಪ್ರತಿಪಕ್ಷವೇ ಇರಲಿಲ್ಲ. ಕಾಂಗ್ರೆಸ್‌ ಸೇರಿ ಯಾವೊಂದು ಪಕ್ಷವೂ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುವಷ್ಟು ಸಮರ್ಥವಾಗಿರಲಿಲ್ಲ. ಇದು ಕೂಡ ಮೋದಿ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿತ್ತು. ಆದರೆ, ಫಲಿತಾಂಶದ ಬಳಿಕ ಚಿತ್ರಣ ಬದಲಾಗಿದೆ. ಕಾಂಗ್ರೆಸ್‌ 52 ಕ್ಷೇತ್ರಗಳಿಂದ 99 ಕ್ಷೇತ್ರಗಳಿಗೆ ತನ್ನ ಸದಸ್ಯ ಬಲವನ್ನು ಹೆಚ್ಚಿಸಿಕೊಂಡಿದೆ. ಇಂಡಿಯಾ ಒಕ್ಕೂಟವು ಒಗ್ಗಟ್ಟಾಗಿ 232 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹಾಗಾಗಿ, ಸಮ್ಮಿಶ್ರ ಸರ್ಕಾರಕ್ಕೆ ಆಡಳಿತ ನಡೆಸುವುದು ಹಗ್ಗದ ಮೇಲಿನ ನಡಿಗೆಯೇ ಆಗಿದೆ. ಇನ್ನು, ಕಳೆದ 10 ವರ್ಷಗಳಿಂದ ಬಲಿಷ್ಠವಾಗಿ, ಸಮರ್ಥವಾಗಿ ಕಾರ್ಯನಿರ್ವಹಿಸದ ಪ್ರತಿಪಕ್ಷಗಳು ಇನ್ನಾದರೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು. ಸರ್ಕಾರ ಲಯ ತಪ್ಪಿದಾಗ ಸರಿದಾರಿಗೆ ತರಬೇಕು. ಸರ್ಕಾರಕ್ಕೆ ಆಗಾಗ ಎಚ್ಚರಿಕೆ ನೀಡುವ ಜತೆಗೆ ಚಾಟಿ ಬೀಸಬೇಕು. ಒಟ್ಟಿನಲ್ಲಿ, ಸಬಲ ಸಮ್ಮಿಶ್ರ ಸರ್ಕಾರ ಹಾಗೂ ಪ್ರಬಲ ಪ್ರತಿಪಕ್ಷಗಳು ಕೂಡಿ ದೇಶದ ಏಳಿಗೆಗೆ, ವಿಕಸಿತ ಭಾರತ ಕಲ್ಪನೆಯ ಸಾಕಾರಕ್ಕೆ ಶ್ರಮಿಸಬೇಕು ಎಂಬುದೇ ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Continue Reading

ಭವಿಷ್ಯ

Dina Bhavishya : ಈ ರಾಶಿಯವರು ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವೂ ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ವೃಷಭ ರಾಶಿಯವರು ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಆಪ್ತರ ಆರೋಗ್ಯ ವಿಚಾರಣೆ ಮಾಡುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಚೌತಿ 16:14 ವಾರ: ಸೋಮವಾರ
ನಕ್ಷತ್ರ: ಪುಷ್ಯ 21:38 ಯೋಗ: ಧ್ರುವ 16:46
ಕರಣ: ವಿಷ್ಟಿ (ಭದ್ರ) 16:14 ಅಮೃತ ಕಾಲ: ಮಧ್ಯಾಹ್ನ 02:54ರಿಂದ 04:36ರವರೆಗೆ
ದಿನದ ವಿಶೇಷ: ಉಮಾವತಾರ ವ್ರತ, ವಿನಾಯಕ ಚತುರ್ಥಿ

ಸೂರ್ಯೋದಯ : 05:53   ಸೂರ್ಯಾಸ್ತ : 06:46

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕವಿದೆ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಆಪ್ತರ ಆರೋಗ್ಯ ವಿಚಾರಣೆ ಮಾಡುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ:ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ:ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯದ ಕುರಿತು ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಇರಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದ್ದು, ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ : ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ . ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸ-ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯವನ್ನು ಕೋರುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ ಸಿಗಲಿದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

IND vs PAK : ಭಾರತದ ಎದುರು ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ; ಕಡಿಮೆ ಸ್ಕೋರ್ ಇದ್ದಾಗಲೂ 6 ರನ್ ಸೋಲು

IND vs PAK : ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.3 ಓವರ್​ಗಳಲ್ಲಿ 119 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ ತಂಡ ಭಾರತದ ಭರ್ಜರಿ ಬೌಲಿಂಗ್​ಗೆ ಹೆದರಿ.. ತನ್ನ ಪಾಲಿನ 20 ಓವರ್​ಗಳಲ್ಲಿ 7 ವಿಕೆಟ್​ಗೆ 113 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

ind vs pak
Koo

ಬೆಂಗಳೂರು: ಸಾಂಪ್ರದಾಯಿಕ ಪ್ರತಿಸ್ಪರ್ಧಿ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವ ಕಪ್​ ಲೀಗ್​ ಪಂದ್ಯದಲ್ಲಿ ಭಾರತ ತಂಡ (IND vs PAK) ಜಯ ಸಾಧಿಸಿದೆ. ಈ ಮೂಲಕ ಭಾರತ ತಂಡ ಹಾಲಿ ವಿಶ್ವ ಕಪ್​ನಲ್ಲಿ ಎರಡನೇ ವಿಜಯ ದಾಖಲಿದೆ. ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಐರ್ಲೆಂಡ್​ ವಿರುದ್ಧ ಗೆಲುವು ದಾಖಲಿಸಿತ್ತು. ಇದೀಗ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಪಾಕ್​ ತಂಡವನ್ನು ಮಣಿಸಿದೆ. ಪ್ರಶಸ್ತಿ ಕಡೆಗೆ ಮುನ್ನುಗ್ಗುವ ಯೋಚನೆಯಲ್ಲಿರುವ ಭಾರತ ತಂಡಕ್ಕೆ ಈ ವಿಜಯದಿಂದ ಭಾರೀ ವಿಶ್ವಾಸ ದೊರಕಿದೆ. ಇದು ಭಾರತ ತಂಡಕ್ಕೆ ಟಿ20 ವಿಶ್ವ ಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ದೊರೆಯುತ್ತಿರುವ 8ನೇ ವಿಜಯ. ಒಂದೇ ಬಾರಿ ಪಾಕಿಸ್ತಾನ ಗೆಲುವು ದಾಖಲಿಸಿದೆ. ಅಲ್ಲದೆ 2023ರಲ್ಲಿ ಭಾರತದಲ್ಲಿ ನಡೆದಿದ್ದ ಏಕ ದಿನ ವಿಶ್ವ ಕಪ್​ನಲ್ಲಿಯೂ ಭಾರತ ತಂಡ ಪಾಕಿಸ್ತಾನ ತಂಡವನ್ನು ಸೋಲಿಸಿತ್ತು.

ಇಲ್ಲಿನ ನಸ್ಸೌ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.3 ಓವರ್​ಗಳಲ್ಲಿ 119 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ ತಂಡ ಭಾರತದ ಭರ್ಜರಿ ಬೌಲಿಂಗ್​ಗೆ ಹೆದರಿ.. ತನ್ನ ಪಾಲಿನ 20 ಓವರ್​ಗಳಲ್ಲಿ 7 ವಿಕೆಟ್​ಗೆ 113 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಬೌಲಿಂಗ್​ಗೆ ನೆರವಾಗುತ್ತಿದ್ದ ಪಿಚ್​ನಲ್ಲಿ ಭಾರತೀಯ ಬೌಲರ್​ಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದರು. ಬ್ಯಾಟರ್​ಗಳು ಪೇರಿಸಿದ್ದ 113 ರನ್​ಗಳ ಮೊತ್ತವನ್ನು ಕಾಪಾಡಿದರು.

2007ರ ಟಿ20 ವಿಶ್ವಕಪ್​ನ ನಂತರದಿಂದದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು
2007ರ ಟಿ20 ವಿಶ್ವಕಪ್​ನ ನಂತರದಿಮದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು.

ಹಿಂದಿನ ಬಾರಿ ಕೊಹ್ಲಿ ಗೆಲ್ಲಿಸಿದ್ದರು

ಕಳೆದ ವರ್ಷ ನಡೆದ ಟಿ20 ವಿಶ್ವಕಪ್​​ನಲ್ಲಿ ಟೀಮ್ ಇಂಡಿಯಾ, ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಪವರ್​​​ಪ್ಲೇನಲ್ಲಿ 32ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿ ರೋಚಕ ಗೆಲುವು ತಂದಿದ್ದರು. ಕೊಹ್ಲಿ 52 ಎಸೆತಗಳಲ್ಲಿ ಅಜೇಯ 82 ರನ್ ಚಚ್ಚಿ ಅವಿಸ್ಮರಣೀಯ ಇನಿಂಗ್ಸ್ ಆಡಿದ್ದರು.

ವಿಶ್ವ ಕಪ್​ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಐರ್ಲೆಂಡ್ ಎದುರಿನ ತನ್ನ ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ. ಇದೀಗ ಪಾಕಿಸ್ತಾನ ವಿರುದ್ಧಗೂ ಗೆಲುವು ಸಾಧಿಸಿ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದಾಗಿ ಅರ್ಧ ಗಂಟೆ ತಡವಾಗಿ ಆರಂಭವಾಗಿದೆ. ಸ್ಥಳೀಯ ಸಮಯ ಬೆಳಗ್ಗೆ 10 ಗಂಟೆಗೆ ಹಾಗೂ ಭಾರತದ ಸಮಯ ಸಂಜೆ 7.30ಕ್ಕೆ ನಡೆಯಬೇಕಾಗಿದ್ದ ಟಾಸ್​ ಮಳೆಯಿಂದಾಗಿ ತಡವಾಯಿತು. ಪಂದ್ಯ ಆರಂಭಗೊಂಡು ಒಂದು ಓವರ್​ ಆದ ಬಳಿಕ ಮತ್ತೆ ಮಳೆ ಸುರಿಯಿತು. ಕೊನೆಗೂ ಪಂದ್ಯ ನಡೆದು ಭಾರತಕ್ಕೆ ಜಯ ಸಿಕ್ಕಿತು.

Continue Reading

ಪ್ರಮುಖ ಸುದ್ದಿ

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Stabbing in Mangalore : ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ.

VISTARANEWS.COM


on

Stabbing in Mangalore:
Koo

ಮಂಗಳೂರು: ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ದುರ್ಷರ್ಮಿಗಳು ಚಾಕುವಿನಿಂದ ಇರಿದ (Stabbing in Mangalore) ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ಸಂಭವಿಸಿದೆ.

ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಇಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

Continue Reading
Advertisement
Karnataka Weather Forecast
ಮಳೆ14 mins ago

Karnataka Weather : ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

Modi Cabinet
ಸಂಪಾದಕೀಯ43 mins ago

ವಿಸ್ತಾರ ಸಂಪಾದಕೀಯ: 3ನೇ ಬಾರಿಯ ‘ವಿಸ್ತೃತ’ ಸರ್ಕಾರವು ‘ವಿಕಸಿತ ಭಾರತ’ಕ್ಕೆ ಶ್ರಮಿಸಲಿ

Health Tips Kannada
ಆರೋಗ್ಯ44 mins ago

Health Tips Kannada: ಉಪ್ಪು ತಿನ್ನುವುದು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಮುಖ್ಯ!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ!

ind vs pak
ಪ್ರಮುಖ ಸುದ್ದಿ6 hours ago

IND vs PAK : ಭಾರತದ ಎದುರು ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ; ಕಡಿಮೆ ಸ್ಕೋರ್ ಇದ್ದಾಗಲೂ 6 ರನ್ ಸೋಲು

Stabbing in Mangalore:
ಪ್ರಮುಖ ಸುದ್ದಿ7 hours ago

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Modi 3.0 Cabinet
ದೇಶ7 hours ago

Modi 3.0 Cabinet: ಮೋದಿ ನೂತನ ಸಂಪುಟದಿಂದ ಸ್ಮೃತಿ ಇರಾನಿ ಸೇರಿ ಯಾರಿಗೆಲ್ಲ ಕೊಕ್?‌ ಇಲ್ಲಿದೆ ಮಾಹಿತಿ

IND vs PAK:
ಪ್ರಮುಖ ಸುದ್ದಿ7 hours ago

IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

Veeraloka
Latest8 hours ago

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

IND vs PAK
ಪ್ರಮುಖ ಸುದ್ದಿ8 hours ago

IND vs PAK : ಮರೆಗುಳಿ ರೋಹಿತ್​; ಜೇಬಿನಲ್ಲಿ​ ಕಾಯಿನ್​ ಇಟ್ಟು ಹುಡುಕಾಡಿದ ಭಾರತ ತಂಡದ ನಾಯಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌