Vistara News Campaign‌: ಕಾಡು ಕಾಪಾಡಿದ ಜನರ ಕಾಡುವ ಸರ್ಕಾರ; ರಣಾಂಗಣವಾಯ್ತು 'ಮೀಸಲು ಅರಣ್ಯ' - Vistara News

ಕರ್ನಾಟಕ

Vistara News Campaign‌: ಕಾಡು ಕಾಪಾಡಿದ ಜನರ ಕಾಡುವ ಸರ್ಕಾರ; ರಣಾಂಗಣವಾಯ್ತು ‘ಮೀಸಲು ಅರಣ್ಯ’

Vistara News Campaign‌ : ಸರ್ಕಾರ ಅಧಿಕಾರಕ್ಕೆ ಬಂದ 120 ದಿನಗಳಲ್ಲೇ 5,729 ಎಕರೆ ಪ್ರದೇಶವನ್ನು ಮೀಸಲು ಅರಣ್ಯ ಎಂದು ಘೋಷಿಸಿದೆ. ಅಲ್ಲದೆ, ಅರಣ್ಯ ಪ್ರದೇಶವನ್ನು ಶೇ.22 ರಿಂದ ಶೇ.33ಕ್ಕೆ ಹೆಚ್ಚಿಸುವ ತೀರ್ಮಾನವನ್ನು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರಕಟಿಸಿದ್ದಾರೆ. ಇದರಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ಒತ್ತುವರಿ ತೆರವುಗೊಳಿಸುವ ಮತ್ತು ಅರಣ್ಯ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಹೇರುವುದನ್ನು ಚುರುಕುಗೊಳಿಸಿದ್ದಾರೆ. ಇದರಿಂದ ಅರಣ್ಯ ಪ್ರದೇಶದಲ್ಲಿ ಮತ್ತು ಅಂಚಿನಲ್ಲಿ ವಾಸಿಸುವ ರೈತರಿಗೆ, ಕೃಷಿ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಈ ಕುರಿತು ವಿಸ್ತಾರ ನ್ಯೂಸ್‌ ಸರಣಿ ವರದಿ ಪ್ರಕಟಿಸುತ್ತಿದೆ.

VISTARANEWS.COM


on

beltangadi harish ponja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
VISTARA-VISESHA

ಬೆಂಗಳೂರು: ಅರಣ್ಯೇತರ ಉದ್ದೇಶಗಳಿಗೆ ಪರಿವರ್ತಿಸಲಾಗಿದ್ದಂತಹ ಅರಣ್ಯ ಭೂಮಿಯ (Forest Land) ಪೈಕಿ ಶೇಕಡಾ 40ರಷ್ಟು ಭೂಮಿಯನ್ನು ಮರಳಿ ಮೀಸಲು ಅರಣ್ಯವಾಗಿ (Reserve Forest) ಪರಿವರ್ತನೆ ಮಾಡುವ ರಾಜ್ಯ ಸರ್ಕಾರದ (State Government) ನಿರ್ಧಾರ ಈಗ ರಾಜ್ಯದಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ. ಅರಣ್ಯ ಮತ್ತು ಕಂದಾಯ ಇಲಾಖೆಯಿಂದ (Forest and Revenue Department) ಜಂಟಿಯಾಗಿ ಸರ್ವೆ ನಡೆಸದೆ ಬೇಕಾಬಿಟ್ಟಿಯಾಗಿ ಸರ್ವೆ ನಡೆಸಿ ಮೀಸಲು ಅರಣ್ಯ ಎಂದು ಘೋಷಿಸಿದ ಪರಿಣಾಮವಾಗಿ ಕಾಡಿನಂಚಿನಲ್ಲಿ ನೂರಾರು ವರ್ಷಗಳಿಂದ ವಾಸ ಮಾಡುತ್ತಿರುವ ಹಾಗೂ ವ್ಯವಸಾಯ ಮಾಡುತ್ತಿರುವ ಮಂದಿ ಬೀದಿಪಾಲಾಗುವ ಆತಂಕದ ಸ್ಥಿತಿ ಈಗ ಎದುರಾಗಿದೆ. ಈಗ ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರಿಗೆ ಮನೆ ಕಟ್ಟಲು ಬಿಡದೇ ಇರುವುದು ಸಂಘರ್ಷಕ್ಕೆ ಎಡೆಮಾಡಿ ಕೊಟ್ಟಿದೆ. ನಾಗರಿಕರ ಪರವಾಗಿ ಈಗ ವಿಸ್ತಾರ ನ್ಯೂಸ್‌ ನಿಲ್ಲುತ್ತಿದ್ದು, ಜನರ ಪರವಾಗಿ ಅಭಿಯಾನ (Vistara News Campaign‌) ಮಾಡುತ್ತಿದೆ.

ಈ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅರಣ್ಯದಂಚಿನ ಗ್ರಾಮಸ್ಥರ ನಡುವಿನ ಸಂಘರ್ಷ ಮತ್ತೆ ಜೋರಾಗಿದೆ. ಅಮ್ಮಿನಡ್ಕದಲ್ಲಿ ಈಗ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಜನಪ್ರತಿನಿಧಿಗಳು ತಿರುಗಿಬಿದ್ದಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಏಳಪಟ್ಟಿ ಗ್ರಾಮದಲ್ಲಿ ಒತ್ತುವರಿ ಭೂಮಿ ಸರ್ವೇಗೆ ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ.

beltangadi harish ponja and formers protest

ಇದನ್ನೂ ಓದಿ: Power Point with HPK : ಶಿವಮೊಗ್ಗ ಗಲಭೆ; ಖಡ್ಗದ ಬಗ್ಗೆ ಚರ್ಚೆ ಮಾಡಲೇಬಾರದೆಂದ ಮಧು ಬಂಗಾರಪ್ಪ!

ಈಗ ಅರಣ್ಯ ಇಲಾಖೆ ಹಾಗೂ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ವಿರುದ್ಧ ಮಲೆನಾಡು, ಕರಾವಳಿ ಜಿಲ್ಲೆಗಳ ಶಾಸಕರಿಂದ ಪಕ್ಷಾತೀತವಾದ ಹೋರಾಟ ಶುರುವಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಲೂ ಮುಂದಾಗಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

ಜನರ ಜತೆ ವಿಸ್ತಾರ ನ್ಯೂಸ್‌; ಸರಣಿ ವರದಿ ಆರಂಭ

ಜಾಗತಿಕ ತಾಪಮಾನ ಹೆಚ್ಚಳ, ಹವಾಮಾನ ವೈಪರೀತ್ಯದ ಈ ಹೊತ್ತಲ್ಲಿ ಅರಣ್ಯವನ್ನು ಉಳಿಸುವುದು-ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ. ಇದು ಸಂವಿಧಾನಬದ್ಧ ಕರ್ತವ್ಯ ಕೂಡ. ಆದರೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರವು ಅರಣ್ಯ ಮತ್ತು ಕಂದಾಯ ಭೂಮಿಯ ಸರ್ವೆಯನ್ನು ಸಮರ್ಪಕವಾಗಿ ನಡೆಸಿಲ್ಲ. ತಲೆಮಾರುಗಳಿಂದ ಕೃಷಿ ಮತ್ತು ಇನ್ನಿತರ ಚಟುವಟಿಕೆ ನಡೆಸಿಕೊಂಡು ಬಂದಿರುವ ಅರಣ್ಯವಾಸಿಗಳಿಗೆ, ಅರಣ್ಯದಂಚಿನ ಗ್ರಾಮಸ್ಥರನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡುತ್ತಲೂ ಇಲ್ಲ. ಅಲ್ಲದೆ, ಸೂಕ್ತ ದಾಖಲೆಗಳನ್ನು ನೀಡದೆ ಮತ್ತು ಗ್ರಾಮೀಣ ಭಾಗಕ್ಕೆ ಮೂಲ ಸೌಕರ್ಯಗಳನ್ನು ಒದಗಿಸದೆ ಈಗ ಏಕಾಏಕಿ ಇವರೆಲ್ಲರಿಗೂ ತೊಂದರೆಯಾಗುವಂತಹ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಅರಣ್ಯ ಉಳಿಸುವ ಹೆಸರಿನಲ್ಲಿ ಏಕಮುಖ ನಿರ್ಧಾರವನ್ನು ತೆಗೆದುಕೊಂಡು ಜಾರಿಗೆ ತರುತ್ತಿರುವುದು ಖಂಡನೀಯ. ಕಾಡು ಕಾಪಾಡಿದ ಜನರ ವಿರುದ್ಧವೇ ತೊಡೆ ತಟ್ಟಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಅವರಿಗೆ ಪರ್ಯಾಯವೇ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತದೆ. ಈ ಕುರಿತು ವಿಸ್ತಾರ ನ್ಯೂಸ್‌ ಸರಣಿ ವರದಿ ಪ್ರಕಟಿಸಿ, ಸರ್ಕಾರದ ಗಮನ ಸೆಳೆಯಲಿದೆ. ತನ್ಮೂಲಕ ಜನರ ದನಿಯಾಗಿ ಕಾರ್ಯನಿರ್ವಹಿಸಲಿದೆ.

beltangadi harish ponja and formers protest

ಪರಿಸ್ಥಿತಿ ಹದಗೆಡಲು ಏನು ಕಾರಣ?

ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 4ರ ಕಲಂ 4 (1) ಅಡಿ ಯಾವುದೇ ಭೂ ಪ್ರದೇಶವನ್ನು ʻಮೀಸಲು ಅರಣ್ಯ’ ಎಂದು ಸರ್ಕಾರ ಘೋಷಿಸಲು ಅವಕಾಶವಿದೆ. ಇದನ್ನು ಬಳಸಿಕೊಂಡು ಅರಣ್ಯ ಇಲಾಖೆ ಬೇಕಾಬಿಟ್ಟಿಯಾಗಿ ʻಮೀಸಲು ಅರಣ್ಯʼ ಅಧಿಸೂಚನೆ ಹೊರಡಿಸುತ್ತಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಸರ್ಕಾರ ಅಧಿಕಾರಕ್ಕೆ ಬಂದ 120 ದಿನಗಳಲ್ಲೇ 5,729 ಎಕರೆ ಪ್ರದೇಶವನ್ನು ಮೀಸಲು ಅರಣ್ಯ ಎಂದು ಘೋಷಿಸಲಾಗಿದೆ. ಇದನ್ನು ಸರ್ಕಾರ ಬಹುದೊಡ್ಡ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ.

ಇದನ್ನೂ ಓದಿ: Power Point with HPK : ಶಿವಮೊಗ್ಗದಲ್ಲಿ 10 ಮನೆಗಳಿಗೆ ಕಲ್ಲು ಬಿದ್ದಿದೆ; ಅದು ಕೋಮು ಗಲಭೆ ಅಲ್ಲ!

ಆದರೆ, ಅರಣ್ಯ-ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸದೆ, ಬೇಕಾಬಿಟ್ಟಿಯಾಗಿ ಮೀಸಲು ಅರಣ್ಯವನ್ನು ಘೋಷಣೆ ಮಾಡಿಡಲಾಗಿದೆ. ಇದರಿಂದಾಗಿ ಕಾಡಿನಂಚಿನಲ್ಲಿ ನೂರಾರು ವರ್ಷಗಳಿಂದ ವಾಸ ಮಾಡುತ್ತಿರುವ ಮತ್ತು ಬೇಸಾಯ ಮಾಡುತ್ತಿರುವ ಬಡ ಜನ ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ.

ಅರಣ್ಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡಲಾಗಿದ್ದ ಅರಣ್ಯ ಭೂಮಿಯಲ್ಲಿ ಶೇ.40 ಭೂಮಿಯನ್ನು ಮರಳಿ ಮೀಸಲು ಅರಣ್ಯವನ್ನಾಗಿ ಪರಿವರ್ತಿಸುವ ಐತಿಹಾಸಿಕ ನಿರ್ಧಾರವನ್ನು ನಮ್ಮ ಸರ್ಕಾರ ಕೈಗೊಂಡಿದೆ ಎಂದು ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾ “ಎಕ್ಸ್‌” (ಟ್ವಿಟರ್‌) ನಲ್ಲಿ ಹೇಳಿಕೊಂಡಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಈಗಿರುವ ಶೇ.22ರಷ್ಟು ಅರಣ್ಯವನ್ನು ಶೇ.30ಕ್ಕಿಂತ ಹೆಚ್ಚಿಸುವ ನಿರ್ಧಾರವನ್ನು ಇಲಾಖೆ ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ಅರಣ್ಯ ಇಲಾಖೆಯ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Belagavi forest

ಸಂಘರ್ಷಕ್ಕೆ ನಾಂದಿ ಹಾಡಿರುವ ಸರ್ಕಾರದ ಕ್ರಮ

ಅರಣ್ಯ ಇಲಾಖೆ ಮತ್ತು ಸಚಿವರ ಈ ನಿರ್ಧಾರದ ವಿರುದ್ಧ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಶಾಸಕರು ತಿರುಗಿ ಬಿದ್ದಿದ್ದಾರೆ. ಹೀಗೆ ಏಕಾಏಕಿ ಮೀಸಲು ಅರಣ್ಯ ಘೋಷಣೆಯಿಂದ ಹಾಗೂ ನಿರ್ಬಂಧಗಳನ್ನು ವಿಧಿಸುವುದರಿಂದ ಕಾಡಂಚಿನ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಿಡಿಕಾರುತ್ತಿದ್ದಾರೆ. ಕಾಂಗ್ರೆಸ್‌ನ ಶಾಸಕರು ಕೂಡ ಸಚಿವರ ವಿರುದ್ಧ ತಿರುಗಿ ಬಿದ್ದಿದ್ದು, ಮುಖ್ಯಮಂತ್ರಿಗಳಿಗೆ ದೂರು ನೀಡಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಮಲೆನಾಡು ಶಾಸಕರ ಆಕ್ರೋಶ

ʻʻ120 ದಿನದಲ್ಲಿ 5,000 ಸಾವಿರ ಎಕರೆ ಕಾಡನ್ನು ಈ ಅರಣ್ಯ ಇಲಾಖೆಯೇನೂ ಬೆಳೆಸಿಲ್ಲ. ಇರುವ ಕಾಡನ್ನೇ ಮೀಸಲು ಎಂದು ಸಹಿ ಹಾಕಿದ್ದಾರೆ. ಈ ಸಹಿ ಹಾಕಲು 120 ದಿನ ಏಕೆ, ಬರೀ 120 ಸೆಕೆಂಡ್ ಸಾಕು. ಇದೊಂದು ವಿವೇಚನಾ ರಹಿತ ನಿರ್ಧಾರವಾಗಿದೆ. ಇದನ್ನು ಸರ್ಕಾರ ತನ್ನ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ಮಲೆನಾಡು ಭಾಗದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.
ಬಯಲು ನಾಡು ಬೀದರ್‌ನ ಈಶ್ವರ್ ಖಂಡ್ರೆ‌ ಅವರಿಗೆ ಮಲೆನಾಡಿನ ಜನ ಜೀವನ, ಸಮಸ್ಯೆಗಳ ಬಗ್ಗೆ ಏನು ಗೊತ್ತು? ಅವರು ಅಧಿಕಾರಿಗಳು ಕೊಟ್ಟ ಫೈಲ್‌ಗೆ ಸಹಿ ಹಾಕುತ್ತಿದ್ದಾರೆ. ಸಮಸ್ಯೆ ಹೇಳಲು ಹೋದರೆ ಕೇಳಿಸಿಕೊಳ್ಳದೆ ಉದ್ಧಟತನದಿಂದ ವರ್ತಿಸುತ್ತಿದ್ದಾರೆ ಎಂದು ಮಲೆನಾಡು ಭಾಗದ ಕಾಂಗ್ರೆಸ್‌ ಶಾಸಕರು ದೂರುತ್ತಲಿದ್ದಾರೆ.

ಇದನ್ನೂ ಓದಿ: Power Point with HPK : ಸಿಎಂ ಸಿದ್ದರಾಮಯ್ಯಗೆ ಮಾಮ ಎಂದು ಕರೆಯುವ ಶಿವರಾಜಕುಮಾರ್!

ವಿಸ್ತಾರ ನ್ಯೂಸ್‌ ಪ್ರಶ್ನೆ ಏನು?

1. ಸರ್ಕಾರ ಈಗ ಮೀಸಲು ಅರಣ್ಯವನ್ನು ಘೋಷಣೆ ಮಾಡಿದೆ. ಆದರೆ, ಇದರ ಮುಂದಿನ ಪರಿಣಾಮ ಏನು ಎಂಬುದನ್ನು ನೋಡಬೇಕಲ್ಲವೇ? ಮೀಸಲು ಅರಣ್ಯ ಎಂದು ಘೋಷಣೆ ಮಾಡಿದರೆ ಸಾಕೇ? ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಅಲ್ಲವೇ?

2. ಮೀಸಲು ಅರಣ್ಯ ಎಂದು ಘೋಷಿಸಲ್ಪಟ್ಟ ಸ್ಥಳಗಳಲ್ಲಿ ಈಗಾಗಲೇ ಮನೆ ಕಟ್ಟಿಕೊಂಡಿದ್ದರೆ ಅಥವಾ ತೋಟವನ್ನೋ ಇನ್ನೇನೋ ಕೃಷಿ ಚಟುವಟಿಕೆಯನ್ನು ಮಾಡಿಕೊಂಡಿದ್ದರೆ ಅಂತಹ ಜಾಗವನ್ನು ವಾಪಸ್‌ ಪಡೆಯುವುದು ಹೇಗೆ? ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು. ಅಂಥವರಿಗೆ ಪುನರ್ವಸತಿ ಯೋಜನೆ ಏನು? ಏಕಾಏಕಿ ಮನೆ ಕೆಡವಿ, ನೀವು ಜಾಗ ಖಾಲಿ ಮಾಡಿ ಎಂದರೆ ಅವರು ಹೇಗೆ ಹೋಗಲು ಸಾಧ್ಯ?

3. ಈಗಾಗಲೇ ಶೇಕಡಾ 20ರಷ್ಟು ಇರುವ ಅರಣ್ಯವನ್ನು ಶೇಕಡಾ 30ಕ್ಕೆ ಹೆಚ್ಚಳ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಇದು ಒಳ್ಳೆಯ ಉದ್ದೇಶವೇ ಸರಿ. ಅದೇ ರೀತಿಯಾಗಿ ಇರುವ ಇನ್ನಿತರ ಪರ್ಯಾಯ ಮಾರ್ಗಗಳನ್ನೂ ನೋಡಬಹುದಲ್ಲವೇ? ಅಕೇಶಿಯಾ ನೆಡುತೋಪುಗಳನ್ನು ನೀವು ಬಳಸುವುದನ್ನು ನಿಲ್ಲಿಸಿ ಅಲ್ಲಿ ಅರಣ್ಯೀಕರಣವನ್ನು ಮಾಡಬಹುದಲ್ಲವೇ?

4. ರಸ್ತೆಯುದ್ದಕ್ಕೂ ಅಕ್ಕಪಕ್ಕದಲ್ಲಿ ಸಾಲು ಸಾಲು ಜಾಗಗಳಿವೆ. ಅಲ್ಲಿ ಸರಿಯಾಗಿ ಗಿಡಗಳನ್ನು ಬೆಳೆಸಿ ನಿರ್ವಹಣೆ ಮಾಡಿದ್ದೇ ಆದಲ್ಲಿ ಈಗ ಹಾಕಿಕೊಂಡಿರುವ ಗುರಿಗಿಂತಲೂ ಹೆಚ್ಚಳವಾಗುವುದಿಲ್ಲವೇ? ಇದು ಕ್ಲಿಷ್ಟಕರ ದಾರಿ ಎಂದು ಬಿಡಲಾಗಿದೆಯೇ?

5. ಸಮೀಕ್ಷೆಯನ್ನು ನಡೆಸದೆ, ಸರ್ವೆ ನಡೆಸದೇ ನಮ್ಮ ಬಳಿ ಸರ್ಕಾರದ ಆದೇಶ ಇದೆ ಎಂದು ಏಕಾಏಕಿ ನುಗ್ಗಿದರೆ ಜನರು ಸುಮ್ಮನಿರುತ್ತಾರೆಯೇ? ಜನರಿಂದಲೇ ಆಡಳಿತ ಎಂಬುದು ಮರೆತು ಹೋಯಿತೇ?

6. ಕೊನೆಯದಾಗಿ ಹೇಳಬೇಕೆಂದರೆ, ಅರಣ್ಯ ಜಾಗವನ್ನು ಹೆಚ್ಚಳ ಮಾಡುವ ನಿರ್ಧಾರಕ್ಕೆ ವಿಸ್ತಾರ ನ್ಯೂಸ್‌ ಸಹಮತ ಇದೆ. ಆದರೆ, ಈಗ ಕೈಗೊಂಡಿರುವ ಏಕಾಏಕಿ ನಿರ್ಧಾರ ಸರಿಯಲ್ಲ. ಪರ್ಯಾಯ ಮಾರ್ಗಗಳು ಏನು? ಈಗಿರುವವರಿಗೆ ಪರ್ಯಾಯ ನೆಲೆ ಏನು? ಎಂಬುದನ್ನು ಸ್ಪಷ್ಟಪಡಿಸದೇ ಕೈಗೊಂಡಿರುವ ನಿರ್ಧಾರವನ್ನು ಜನಸಾಮಾನ್ಯರ ಪರವಾಗಿ ಖಂಡಿಸಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಎಕರೆ ಪ್ರದೇಶ ಮೀಸಲು ಅರಣ್ಯವಾಗಿ ಘೋಷಣೆ?

  • ಚಿಕ್ಕಮಗಳೂರು-4,589
  • ಚಿತ್ರದುರ್ಗ-391
  • ಬೀದರ್‌-261
  • ಬೆಳಗಾವಿ-153
  • ಬಳ್ಳಾರಿ-105
  • ಮಂಡ್ಯ-49
  • ಶಿವಮೊಗ್ಗ-25

ಇದನ್ನೂ ಓದಿ: Power Point with HPK : ಮುಂದಿನ ವರ್ಷಕ್ಕೆ 600 ಕೆಪಿಎಸ್‌ ಶಾಲೆ; ಮಕ್ಕಳಿಗೆ ತಗ್ಗಲಿದೆ ಬ್ಯಾಗ್‌ ಹೊರೆ!

ಮೀಸಲು ಅರಣ್ಯ ಘೋಷಣೆಯಿಂದ ಏನೇನು ತೊಂದರೆ?

  • ಪ್ರದೇಶದಲ್ಲಿ ಅರಣ್ಯೇತರ ಚಟುವಟಿಕೆ ನಡೆಸುವಂತಿಲ್ಲ. ಅಂದರೆ ಕೃಷಿ, ಕೃಷಿಗೆ ಸಂಬಂಧಿಸಿದ ಯಾವುದೇ ಚಟುವಟಿಕೆ ನಡೆಸುವಂತಿಲ್ಲ.
    – ಈ ಜಾಗವನ್ನು ಯಾವುದೇ ಮಂಜೂರಾತಿ, ಅಧಿಭೋಗದಾರಿಕೆಗೆ ಆದೇಶ ನೀಡುವಂತಿಲ್ಲ.
    – ಸರಿಯಾಗಿ ಸರ್ವೆ ನಡೆಯದೇ ಇರುವುದರಿಂದ ದಾಖಲೆ ಇದ್ದರೂ ಕೋರ್ಟ್‌ – ಕಚೇರಿ ಅಲೆಯುವ ಸಂಕಷ್ಟ
  • ಜಾನುವಾರು ಮೇಯಿಸಲು, ದರಕು ಗುಡಿಸಲು ನಿರ್ಬಂಧ
    – ಹೊಸ ರಸ್ತೆ ನಿರ್ಮಾಣ, ಹಳೇ ರಸ್ತೆ ದುರಸ್ತಿ, ವಿದ್ಯುತ್‌ ಸಂಪರ್ಕ ಕಲ್ಪಿಸಲು ಅಡ್ಡಿ. ಸರ್ಕಾರದ ಬಳಕೆಗೂ ಈ ಜಾಗ ದೊರೆಯದು.

ಚಿಕ್ಕಮಗಳೂರಲ್ಲಿ ನಡೆದಿರುವ ಪ್ರತಿಭಟನೆ

ರಾಜ್ಯ ಸರ್ಕಾರದ ಮೀಸಲು ಅರಣ್ಯ ವ್ಯಾಪ್ತಿ ಹೆಚ್ಚಿಸುವ ಆದೇಶಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈಗ ಘೋಷಣೆಯಾಗಿರುವ ಬಹುಪಾಲು ಪ್ರದೇಶವು ಚಿಕ್ಕಮಗಳೂರು ಜಿಲ್ಲೆಗೆ ಸೇರುವುದರಿಂದ ಇಲ್ಲಿನ ಜನರ ಸಿಡಿದೆದ್ದಿದ್ದಾರೆ. ಪ್ರತಿಭಟನೆ ತೀವ್ರಗೊಂಡಿದ್ದು, ಸರ್ಕಾರದ ವಿರುದ್ಧ ಆದಿವಾಸಿಗಳು, ಗಿರಿಜನರು ಮತ್ತು ಸಣ್ಣ ರೈತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕೂಡಲೇ ಒತ್ತುವರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಸರ್ಕಾರ ನೀಡಿದ ಸಾಗುವಳಿ ಚೀಟಿ ಹಿಡಿದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ.

ಕೆ.ಜಿ. ಬೋಪಯ್ಯ ಕಿಡಿ

ಕೊಡಗು ಜಿಲ್ಲೆಯ ಬಹುತೇಕ ಪ್ರದೇಶ ಅರಣ್ಯಕ್ಕೆ ಹೊಂದಿಕೊಂಡೇ ಇದೆ. ಕೊಡಗಿನ ಅರಣ್ಯವನ್ನು ಅರಣ್ಯದಂಚಿನ ನಿವಾಸಿಗಳೇ ರಕ್ಷಣೆ ಮಾಡುತ್ತಿದ್ದಾರೆ. ಕೊಡಗಿನ ಅರಣ್ಯವನ್ನು ಅರಣ್ಯ ಇಲಾಖೆ ರಕ್ಷಣೆ ಮಾಡಿದ್ದಲ್ಲ. ದೇವರ ಕಾಡುಗಳ ಹೆಸರಿನಲ್ಲಿ ಅರಣ್ಯವನ್ನು ಕೊಡಗಿನ ಜನತೆ ರಕ್ಷಿಸಿದ್ದಾರೆ. ಅರಣ್ಯ ಇಲಾಖೆಯು ಕೊಡಗಿನಲ್ಲಿ ಒಂದಿಲ್ಲೋಂದು ಸಮಸ್ಯೆಯನ್ನು ನೀಡುತ್ತಲೇ ಇರುತ್ತದೆ. ಅರಣ್ಯದಂಚಿನ ಗ್ರಾಮದ ಜನತೆಗೆ 10 ಎಕರೆಯವರೆಗೆ ಹಕ್ಕು ಪತ್ರ ನೀಡಬೇಕು. ಆದರೆ, ಅರಣ್ಯ ಇಲಾಖೆ ಮಾತ್ರ ಆ ಕೆಲಸವನ್ನು ಮಾಡುತ್ತಿಲ್ಲ. ಅಭಿವೃದ್ಧಿ ಕೆಲಸಗಳನ್ನು ಮಾಡಲು ಅಡ್ಡಗಾಲು ಹಾಕುತ್ತಿದೆ ಎಂದು ಮಾಜಿ ಸಚಿವ ಕೆ.ಜಿ. ಬೋಪಯ್ಯ ಅರಣ್ಯ ಇಲಾಖೆಯ ಹೊಸ ಕಾನೂನು ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಗಿರಿಜನರ ಅಧ್ಯಕ್ಷತೆಯನ್ನು ಒಳಗೊಂಡ‌ ಒಂದು ಸಮಿತಿ ಇದೆ. ಅಲ್ಲಿ ನಡೆಯುವ ಸಭೆಗಳಿಗೂ ಕೂಡ ಅರಣ್ಯ ಇಲಾಖೆ ಅಧಿಕಾರಿಗಳು ಗೈರಾಗುತ್ತಾರೆ. ಹೆದ್ದಾರಿ, ವಿದ್ಯುತ್ ಸಂಪರ್ಕ, ಕಿರು ಸೇತುವೆಗಳ ನಿರ್ಮಾಣಕ್ಕೆ ಹೊಸ ಹೊಸ ಕಾನೂನುಗಳನ್ನು ಮಾಡಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಕೆ.ಜಿ. ಬೋಪಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: Power Point with HPK : ಗೀತಕ್ಕ ಸ್ಪರ್ಧೆ ತೀರ್ಮಾನ ನನ್ನದೆಂದ ಮಧು ಬಂಗಾರಪ್ಪ!

ಗುಡುಗಿದ ಹರೀಶ್‌ ಪೂಂಜ

ಅರಣ್ಯ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಾಣ ಹಿನ್ನೆಲೆಯಲ್ಲಿ ಪಂಚಾಂಗ ಸಮೇತ ಅರಣ್ಯ ಇಲಾಖೆಯವರು ಮನೆಯನ್ನು ಧ್ವಂಸಗೊಳಿಸಿರುವ ಪ್ರಕರಣ ಈಗಾಗಲೇ ವರದಿಯಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮನೆ ಧ್ವಂಸಗೊಳಿಸಿದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಸ್ಥಳದಿಂದಲೇ ಅರಣ್ಯ ಸಚಿವರಿಗೆ ಕರೆ ಮಾಡಿ ಆಕ್ರೋಶವನ್ನು ಹೊರಹಾಕಿದ್ದರು. ಅಲ್ಲದೆ, ಸ್ಥಳೀಯರೊಂದಿಗೆ ಮತ್ತೆ ಮನೆ ನಿರ್ಮಿಸಲು ಮುಂದಾಗಿದ್ದರು. ಈ ಕಾರಣಕ್ಕಾಗಿ ಅರಣ್ಯ ಅಧಿಕಾರಿಗಳು ಮತ್ತು ಶಾಸಕರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಯಥಾಸ್ಥಿತಿಯನ್ನು ಕಾಪಾಡುವಂತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

Pralhad Joshi: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi latest statement about channagiri case
Koo

ಹುಬ್ಬಳ್ಳಿ: ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ ಎಂದು ಖಂಡಿಸಿದರು.

ಇದನ್ನೂ ಓದಿ: Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

ಮುಸ್ಲಿಂರಷ್ಟೇ ಅಲ್ಲ, ಯಾರೇ ಆದರೂ ಸರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿ, ವಾಹನ ಜಖಂಗೊಳಿಸಿ ಗಲಭೆ ಎಬ್ಬಿಸುವುದು ಖಂಡನೀಯ. ಆದರೆ, ಈ ಪ್ರಕರಣದಲ್ಲಿ ಸಿಎಂ ಪೊಲೀಸರ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಜೋಶಿ ಆಕ್ಷೇಪಿಸಿದರು.

ಅಪರಾಧ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಆ ವೇಳೆ ಆತನಿಗೆ ಆರೋಗ್ಯ ಸಮಸ್ಯೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಿಎಂ ಆದೇಶದಂತೆ ಡಿವೈಎಸ್‌ಪಿ ಮತ್ತು ಸಿಪಿಐ ಅಮಾನತ್ತು ಪಡಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಇಲ್ಲದ ತ್ವರಿತ ಕ್ರಮ ಚನ್ನಗಿರಿಯಲ್ಲೇಕೆ?

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಪ್ರಶ್ನಿಸಿದ ಸಚಿವರು, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

Continue Reading

ಉತ್ತರ ಕನ್ನಡ

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Uttara Kannada News: ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ ರಂಗಸಹ್ಯಾದ್ರಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಶನಿವಾರ ಸಂಜೆ ಜರುಗಿತು.

VISTARANEWS.COM


on

childrens summer camp closing ceremony at yallapur
Koo

ಯಲ್ಲಾಪುರ: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ. ಪಟ್ಟಣದ ಸವಲತ್ತುಗಳನ್ನು ನಾವು ಇಲ್ಲಿನ ಮಕ್ಕಳಿಗೆ ನೀಡಿದಾಗ ಮಾತ್ರ ಉತ್ತಮ ಭವಿಷ್ಯ ನಿರ್ಮಿಸಲು ಸಾಧ್ಯ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ (Uttara Kannada News) ಅಭಿಪ್ರಾಯಪಟ್ಟರು.

ಪಟ್ಟಣದ ಗಾಂಧಿ ಕುಟೀರದಲ್ಲಿ ಶನಿವಾರ ಸಂಜೆ ರಂಗಸಹ್ಯಾದ್ರಿ ಬಳಗದ ವತಿಯಿಂದ ಹಮ್ಮಿಕೊಂಡ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಸಕ್ತಿ, ಸಮರ್ಪಣೆ ಹಾಗೂ ಬದ್ಧತೆ ಇಲ್ಲವೆಂದರೆ 17 ವರ್ಷಗಳಿಂದ ಸತತವಾಗಿ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲು ಸಾಧ್ಯವಾಗುತ್ತಿರಲಿಲ್ಲ. ಶಿಬಿರವನ್ನು ನಡೆಸುವುದು ಸವಾಲಿನ ಕೆಲಸ. ಮಕ್ಕಳು ಜೀವನದಲ್ಲಿ ಯಾವ ಉದ್ಯೋಗವನ್ನು ಆರಿಸುತ್ತಾರೆ ಎಂಬುದು ಮುಖ್ಯವಲ್ಲ. ಬದಲಾಗಿ ಕುಟುಂಬದ ಸಂಸ್ಕೃತಿ-ಸಂಸ್ಕಾರವನ್ನು ಉಳಿಸುವ, ಮನೆತನದ ಹಾಗೂ ಊರಿನ ಹೆಸರನ್ನು ಉಳಿಸುವ ಉತ್ತಮ ಪ್ರಜೆಯಾಗಬೇಕು. ಅಂತಹ ಅಭಿವ್ಯಕ್ತಿ ಕಲೆಗಳನ್ನು ಬೆಳೆಸುವ ಚಟುವಟಿಕೆಗಳು ನಮ್ಮ ವ್ಯಕ್ತಿತ್ವವನ್ನು ಅರಳಿಸುತ್ತವೆ. ಆ ಕೆಲಸವನ್ನು ಇಂತಹ ಶಿಬಿರಗಳು ಮಾಡುತ್ತಿವೆ ಎಂದರು.

ಇದನ್ನೂ ಓದಿ: Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

ಮಕ್ಕಳಿಗೆ ತಿಳಿವಳಿಕೆ ಬರುವ ಮುನ್ನ ಕೇಳಿದ್ದನ್ನೆಲ್ಲ ಕೊಡಿಸುವ ಮೊದಲು ಹಲವು ಬಾರಿ ಪಾಲಕರು ಯೋಚಿಸಬೇಕು. ಮೊಬೈಲ್ ಬಳಕೆಯಿಂದ ಮನುಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಅಬಲನಾಗುತ್ತಾನೆ. ತಂತ್ರಜ್ಞಾನ ನಮ್ಮೆಲ್ಲ ಪ್ರತಿಭೆಗಳನ್ನು ಹೊಸಕಿ ಹಾಕುತ್ತಿದೆ. ಭಾರತದ ಭವಿಷ್ಯ ಇಂತಹ ಸಣ್ಣ ಸಣ್ಣ ಊರುಗಳಲ್ಲಿವೆ. ಪಟ್ಟಣದ ಸವಲತ್ತುಗಳನ್ನು ನಾವು ಇಲ್ಲಿನ ಮಕ್ಕಳಿಗೆ ನೀಡಿದಾಗ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಧ್ಯ. ಯಾವುದೇ ಕೆಲಸ ಮಾಡಲು ಧೈರ್ಯ ಹೊಂದಿದವರು ಜೀವನದಲ್ಲಿ ಬೆಳೆಯುತ್ತಾರೆ. ಜೀವನ ಕೌಶಲ್ಯಗಳನ್ನು ಮಕ್ಕಳಿಗೆ ಕಲಿಸುವ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲಿ ಪತ್ರಕರ್ತರಾದ ಟಿ. ಶಂಕರ್ ಭಟ್, ನಾಗರಾಜ ಮದ್ಗುಣಿ, ಪ್ರಮುಖರಾದ ವೆಂಕಟ್ರಮಣ ಭಟ್ ಸಹಸ್ರಳ್ಳಿ ಉಪಸ್ಥಿತರಿದ್ದರು. ರಂಗ ಸಹ್ಯಾದ್ರಿಯ ಅಧ್ಯಕ್ಷ ಡಿ.ಎನ್. ಗಾಂವ್ಕರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಬ್ರಾಯ ಭಟ್ ಆನೆಜಡ್ಡಿ ಕಾರ್ಯಕ್ರಮ ನಿರ್ವಹಿಸಿದರು. ಸುಮಂಗಲಾ ಜೋಶಿ ವಂದಿಸಿದರು.

ಇದನ್ನೂ ಓದಿ: Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

Continue Reading

ಕರ್ನಾಟಕ

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Siddaramaiah: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು. ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದ್ದು ಕೂಡ ಕಂಡುಬಂತು.

VISTARANEWS.COM


on

Siddaramaiah
Koo

ಮಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ಭರಾಟೆ ಮುಗಿದು, ತುಸು ನಿರಾಳರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಶನಿವಾರ (ಮೇ 25) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ತೆರಳಿ, ದೇವರ ಆಶೀರ್ವಾದ ಪಡೆದರು. ಅಲ್ಲದೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿಯಾದರು. ಇದೇ ವೇಳೆ, ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ನೀಡುವ ತೀರ್ಮಾನದ ಕುರಿತು ಸಿದ್ದರಾಮಯ್ಯ ಅವರಿಗೆ ಹಲವು ಹೆಣ್ಣುಮಕ್ಕಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕುರಿತು ಸಿದ್ದರಾಮಯ್ಯ ಅವರೇ ಪೋಸ್ಟ್‌ ಮಾಡಿದ್ದಾರೆ.

ಧರ್ಮಸ್ಥಳ ಭೇಟಿ, ಮಹಿಳೆಯರ ಮೆಚ್ಚುಗೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಫೋಟೊಗಳ ಸಮೇತ ಪೋಸ್ಟ್‌ ಮಾಡಿದ್ದಾರೆ. “ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ, ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು. ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ನನ್ನದು” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಸಿಎಂಗೆ ಪೂರ್ಣಕುಂಭ ಸ್ವಾಗತ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಧರ್ಮಸ್ಥಳದ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸ್ವಾಗತವನ್ನು ಮಾಡಲಾಯಿತು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭವ್ಯ ಸ್ವಾಗತ ಸಿಕ್ಕಿತು. ವಾದ್ಯ ಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಪರವಾಗಿ ಧರ್ಮಸ್ಥಳ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತಿಸಿದರು.

ವಿಶೇಷ ಪೂಜೆ, ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಕೆಲ ಹೊತ್ತು ಚರ್ಚೆ ನಡೆಸಿದರು.

ಧರ್ಮಸ್ಥಳ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, “ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. “ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

Continue Reading

ಕರ್ನಾಟಕ

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ. ಈಗ ದುರುದ್ದೇಶದಿಂದ ಕೇಂದ್ರದತ್ತ ಬೆರಳು ತೋರಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಏಪ್ರಿಲ್ 21 ರಂದೇ ಬೆಳಕಿಗೆ ಬಂದಿದೆ. ಪ್ರಜ್ವಲ್ ಏಪ್ರಿಲ್ 28ಕ್ಕೆ ವಿದೇಶಕ್ಕೆ ಹಾರಿದ್ದಾರೆ. ಅಷ್ಟು ದಿನ ರಾಜ್ಯ ಸರ್ಕಾರ ಏಕೆ ಸುಮ್ಮನಿತ್ತು ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Union Minister Pralhad Joshi statement about Prajwal revanna case
Koo

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡಿದರೆ ಪಾಸ್‌ಪೋರ್ಟ್ ರದ್ದು ಆಗಲ್ಲ. ರದ್ದು ಮಾಡಲು ಪೊಲೀಸ್‌ ಇಲಾಖೆಯಿಂದ ಸೂಕ್ತ ಮನವಿ ಮಾಡಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆದರೆ ಸಾಲದು. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು. ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.

ಎಸ್‌ಐಟಿ ಈಗ ಮಾಹಿತಿ ನೀಡಿದೆ

ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ಈಗ ಕೇಂದ್ರಕ್ಕೆ ಮಾಹಿತಿ ನೀಡಿದೆ. ಪ್ರಕರಣ ಬೆಳಕಿಗೆ ಬಂದು ಒಂದು ತಿಂಗಳ ಬಳಿಕ ಮೇ 21ರಂದು ಕೇಂದ್ರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

ಕೇಂದ್ರದಿಂದ ಅತ್ಯಂತ ತ್ವರಿತ ಕ್ರಮ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಅತ್ಯಂತ ತ್ವರಿತ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿದ ಮೇಲೆ 10 ದಿನಗಳ ಸಮಯ ಇರುತ್ತದೆ. ಅದರಂತೆ ಮೇ 21ಕ್ಕೆ ಎಸ್‌ಐಟಿ ಮಾಹಿತಿ ನೀಡುತ್ತಲೇ ಮುಂದಿನ ಕ್ರಮ ಕೈಗೊಂಡಿದೆ. ಮೇ 25ಕ್ಕೆ ಅಂದರೆ ಎರಡೇ ದಿನದಲ್ಲಿ ಆಗಲೇ ಕೇಂದ್ರ ಸರ್ಕಾರ ನೋಟಿಸ್ ಕೊಟ್ಟಿದೆ. ಕಾನೂನು ಪ್ರಕಾರ ಇನ್ನು 8 ದಿನದಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜಕಾರಣ ಮಾಡುವುದಕ್ಕಿಂತ ಹೆಚ್ಚಾಗಿ ಗಂಭೀರವಾಗಿ ಪರಿಗಣಿಸಬೇಕು. ವಿದೇಶಕ್ಕೆ ಹಾರಿರುವ ಪ್ರಜ್ವಲ್‌ರನ್ನು ಹಿಡಿದು ಕರೆ ತಂದು ಶಿಕ್ಷೆಗೆ ಗುರಿಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಸಿಎಂ ಪತ್ರ ಬರೆದು ರಾಜಕಾರಣ ಮಾಡೋದಲ್ಲ

ಪಾಸ್‌ಪೋರ್ಟ್ ರದ್ದುಪಡಿಸುವ ವಿಚಾರದಲ್ಲಿ ಮುಖ್ಯಮಂತ್ರಿಯೇ ಅಲ್ಲ ಯಾರೂ ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡೋದು ಅಲ್ಲ. ಕಾನೂನು ಪ್ರಕಾರ ಸಂಬಂಧಪಟ್ಟ ಪೊಲೀಸ್ ಇಲಾಖೆ ನೋಟಿಸ್ ನೀಡಬೇಕು. ಪ್ರಜ್ವಲ್ ತನಿಖೆಗೆ ಲಭ್ಯವಾಗುತ್ತಿಲ್ಲ ಎಂದು ಎಫ್‌ಐಆರ್‌ ಸಮೇತ ಕೇಂದ್ರಕ್ಕೆ ಅಧಿಕೃತ, ನಿರ್ಧಿಷ್ಟ ಮಾಹಿತಿ ನೀಡಬೇಕು ಅಥವಾ ಕೋರ್ಟ್ ಆದೇಶ ಹೊರಡಿಸಬೇಕು. ಇದು ವಕೀಲಿಕಿ ಮಾಡಿದ ಸಿಎಂಗೆ ಗೊತ್ತಿಲ್ಲವೆ ಎಂದು ಜೋಶಿ ಪ್ರಶ್ನಿಸಿದರು.

ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ

ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ. ಈಗ ದುರುದ್ದೇಶದಿಂದ ಕೇಂದ್ರದತ್ತ ಬೆರಳು ತೋರಿಸುತ್ತಿದೆ ಎಂದು ಜೋಶಿ ಆರೋಪಿಸಿದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಏಪ್ರಿಲ್ 21ರಂದೇ ಬೆಳಕಿಗೆ ಬಂದಿದೆ. ಪ್ರಜ್ವಲ್ ಏಪ್ರಿಲ್ 28ಕ್ಕೆ ವಿದೇಶಕ್ಕೆ ಹಾರಿದ್ದಾರೆ. ಅಷ್ಟು ದಿನ ರಾಜ್ಯ ಸರ್ಕಾರ ಏಕೆ ಸುಮ್ಮನಿತ್ತು? ಆಗಲೇ ಏಕೆ ಬಂಧಿಸಲಿಲ್ಲ? ಈ ಪ್ರಶ್ನೆಗಳಿಗೆ ಇನ್ನುವರೆಗೂ ಸಿಎಂ ಬಳಿ ಉತ್ತರವಿಲ್ಲ ಎಂದು ಜೋಶಿ ಹೇಳಿದರು.

ಕೇಂದ್ರ ರೆಡ್ ಅಲರ್ಟ್ ಘೋಷಿಸುತ್ತಿತ್ತು

ಏಪ್ರಿಲ್ 21, 22ರಂದೇ ರಾಜ್ಯ ಸರ್ಕಾರ ಭಾರತ ಸರ್ಕಾರಕ್ಕೆ ಅಧಿಕೃತ ಮಾಹಿತಿ ಕೊಟ್ಟಿದ್ದರೆ, ಕೇಂದ್ರ ಅಂದೇ ಎಲ್ಲಾ ವಿಮಾನ ನಿಲ್ದಾಣಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡುತ್ತಿತ್ತು. ಪ್ರಜ್ವಲ್ ವಿದೇಶಕ್ಕೆ ಹಾರಲು ಅವಕಾಶ ಕೊಡುತ್ತಿರಲಿಲ್ಲ. ಆದರೆ, ಪ್ರಕರಣ ಬೆಳಕಿಗೆ ಬಂದು ಒಂದು ತಿಂಗಳ ಬಳಿಕ ಕೇಂದ್ರಕ್ಕೆ ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.

ಇದನ್ನೂ ಓದಿ: Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 24 ಮಂದಿ ದಾರುಣ ಸಾವು

ಪ್ರಜ್ವಲ್ ರೇವಣ್ಣ ಪ್ರಕರಣ ಗಂಭೀರವಾಗಿದ್ದರೂ ರಾಜ್ಯ ಸರ್ಕಾರ ಅದರಲ್ಲಿ ರಾಜಕಾರಣ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಕಾನೂನು ಕ್ರಮವನ್ನು ಅನುಸರಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

Continue Reading
Advertisement
Fire Accident
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ2 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ2 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ3 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ3 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ4 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ4 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Siddaramaiah
ಕರ್ನಾಟಕ4 hours ago

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Shikhar Dhawan
ಪ್ರಮುಖ ಸುದ್ದಿ4 hours ago

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Union Minister Pralhad Joshi statement about Prajwal revanna case
ಕರ್ನಾಟಕ4 hours ago

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌