Vistara News Impact : ಬುಡಕಟ್ಟು ಸಮುದಾಯ, ಸಾಗುವಳಿದಾರರಿಗಿಲ್ಲ ಮೀಸಲು ಅರಣ್ಯ ಕಂಟಕ; 3 ತಿಂಗಳಲ್ಲಿ ಹಕ್ಕು ಪತ್ರ - Vistara News

ಕರ್ನಾಟಕ

Vistara News Impact : ಬುಡಕಟ್ಟು ಸಮುದಾಯ, ಸಾಗುವಳಿದಾರರಿಗಿಲ್ಲ ಮೀಸಲು ಅರಣ್ಯ ಕಂಟಕ; 3 ತಿಂಗಳಲ್ಲಿ ಹಕ್ಕು ಪತ್ರ

Vistara News Impact : ಸರ್ಕಾರ ಅಧಿಕಾರಕ್ಕೆ ಬಂದ 120 ದಿನಗಳಲ್ಲೇ 5,729 ಎಕರೆ ಪ್ರದೇಶವನ್ನು ಮೀಸಲು ಅರಣ್ಯ ಎಂದು ಘೋಷಿಸಿತ್ತು. ಅಲ್ಲದೆ, ಅರಣ್ಯ ಪ್ರದೇಶವನ್ನು ಶೇ.22 ರಿಂದ ಶೇ.33ಕ್ಕೆ ಹೆಚ್ಚಿಸುವ ತೀರ್ಮಾನವನ್ನು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರಕಟಿಸಿದ್ದರು. ಇದರಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ಒತ್ತುವರಿ ತೆರವುಗೊಳಿಸುವ ಮತ್ತು ಅರಣ್ಯ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಹೇರುವುದನ್ನು ಚುರುಕುಗೊಳಿಸಿದ್ದರು. ಇದರಿಂದ ಅರಣ್ಯ ಪ್ರದೇಶದಲ್ಲಿ ಮತ್ತು ಅಂಚಿನಲ್ಲಿ ವಾಸಿಸುವ ರೈತರಿಗೆ, ಕೃಷಿ ಕಾರ್ಮಿಕರಿಗೆ ತೊಂದರೆಯಾಗುತ್ತಿತ್ತು. ಈ ಕುರಿತು ವಿಸ್ತಾರ ನ್ಯೂಸ್‌ ಕ್ಯಾಂಪೇನ್‌ ಆರಂಭಿಸಿತ್ತು. ಈಗ ಸ್ವತಃ ಈಶ್ವರ ಖಂಡ್ರೆ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದು, ಬುಡಕಟ್ಟು ನಿವಾಸಿಗಳಿಗೆ ಹಾಗೂ ಸಾಗುವಳಿದಾರರಿಗೆ ತೊಂದರೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Eshwar Khandre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara impact

ಬೆಂಗಳೂರು: ಅರಣ್ಯೇತರ ಉದ್ದೇಶಗಳಿಗೆ ಪರಿವರ್ತಿಸಲಾಗಿದ್ದಂತಹ ಅರಣ್ಯ ಭೂಮಿಯ (Forest Land) ಪೈಕಿ ಶೇಕಡಾ 40ರಷ್ಟು ಭೂಮಿಯನ್ನು ಮರಳಿ ಮೀಸಲು ಅರಣ್ಯವಾಗಿ (Reserve Forest) ಪರಿವರ್ತನೆ ಮಾಡುವ ರಾಜ್ಯ ಸರ್ಕಾರದ (State Government) ನಿರ್ಧಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ವಿಸ್ತಾರ ನ್ಯೂಸ್‌ ಮಂಗಳವಾರ ಅಭಿಯಾನ (Vistara News Campaign‌) ಆರಂಭಿಸಿತ್ತು. ಸರ್ಕಾರದ ಕ್ರಮವನ್ನು ಬಲವಾಗಿ ಖಂಡಿಸಿತ್ತು. ಈಗ ಈ ಬಗ್ಗೆ ಸ್ವತಃ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದು, ದೊಡ್ಡ ಪ್ರಮಾಣದಲ್ಲಿ ಒತ್ತುವರಿ ಆಗಿದ್ರೆ ಮಾತ್ರ ತೆರವುಗೊಳಿಸಲಾಗುವುದು. ಬುಡಕಟ್ಟು ಸಮುದಾಯ, ಸಾಗುವಳಿದಾರರಿಗೆ (Tribal community and cultivators) ಸಮಸ್ಯೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 3 ತಿಂಗಳಲ್ಲಿ ಹಕ್ಕು ಪತ್ರ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ವಿಸ್ತಾರ ನ್ಯೂಸ್‌ ಅಭಿಯಾನಕ್ಕೆ (Vistara News Impact) ಸರ್ಕಾರ ಸ್ಪಂದನೆ ನೀಡಿದೆ.

ಈ ಬಗ್ಗೆ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರ ಖಂಡ್ರೆ, ದೊಡ್ಡ ಪ್ರಮಾಣದಲ್ಲಿ ಒತ್ತುವರಿ ಆಗಿದ್ದರೆ ಮಾತ್ರ ತೆರವುಗೊಳಿಸುವಂತೆ ಸರ್ಕಾರ ಸ್ಪಷ್ಟವಾಗಿ ಹೇಳಿದೆ. ಸ್ವಹಿತಾಸಕ್ತಿ, ರಾಜಕೀಯ ಕಾರಣಕ್ಕಾಗಿ ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಆರೋಪ ಸುಳ್ಳು. ಬುಡಕಟ್ಟು ಸಮುದಾಯ, ಉಳುಮೆ ಮಾಡುವವರನ್ನು ಒಕ್ಕಲೆಬ್ಬಿಸದೆ ಹಕ್ಕು ಪತ್ರ ನೀಡುವಂತೆ ಸೂಚನೆ ನೀಡಲಾಗಿದೆ. 3 ತಿಂಗಳಲ್ಲಿ ಹಕ್ಕು ಪತ್ರ ಕೊಡುವ ಕೆಲಸ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಕೂಡಾ ಇದಕ್ಕೆ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.

Eshwar Khandre react on vistara news

‘ಅರಣ್ಯ ರೋದನ’ ಎಂಬ ಅಭಿಯಾನವನ್ನು ವಿಸ್ತಾರ ನ್ಯೂಸ್‌ ಕೈಗೊಂಡಿತ್ತು. ಸರ್ಕಾರದ ಹಾಗೂ ಅರಣ್ಯ ಇಲಾಖೆಯ ತಪ್ಪುಗಳ ಬಗ್ಗೆ ಬೆಳಕು ಚೆಲ್ಲಿತ್ತು. ಕರಾವಳಿ, ಮಲೆನಾಡು ಸೇರಿದಂತೆ ಮೀಸಲು ಅರಣ್ಯ ಘೋಷಣೆಯಿಂದ ಬಾಧಿತವಾದ ಜನರ ಸಂಕಷ್ಟಗಳನ್ನು ತೋರಿಸಿತ್ತು. ಸರ್ಕಾರದ ಈ ದಿಢೀರ್‌ ನಿರ್ಧಾರವನ್ನು ಪ್ರಶ್ನೆ ಮಾಡಿತ್ತು. ಅಲ್ಲದೆ, ಸರಣಿ ಕ್ಯಾಂಪೇನ್‌ಗೂ ಮುಂದಾಗಿತ್ತು. ಆದರೆ, ಈಗ ಇದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದು, ಬುಡಕಟ್ಟು ಸಮುದಾಯ, ಉಳುಮೆ ಮಾಡುವವರನ್ನು ಒಕ್ಕಲೆಬ್ಬಿಸುವುದಿಲ್ಲ ಎಂಬ ಅಭಯವನ್ನು ನೀಡಿದ್ದಾರೆ.

ಇದನ್ನೂ ಓದಿ: Power Point with HPK : ಸಿಎಂ ಸಿದ್ದರಾಮಯ್ಯಗೆ ಮಾಮ ಎಂದು ಕರೆಯುವ ಶಿವರಾಜಕುಮಾರ್!

3 ತಿಂಗಳಲ್ಲಿ ಹಕ್ಕು ಪತ್ರ ವಿತರಣೆ

ಬೆಂಗಳೂರು ಸೇರಿದಂತೆ ಅನೇಕ ಕಡೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಇದರ ಬಗ್ಗೆ ನಾವು ಕಠಿಣವಾಗಿ ಕ್ರಮ ಕೈಗೊಳ್ಳುತ್ತೇವೆ. ಆದರೆ, ಬುಡಕಟ್ಟು ಸಮುದಾಯ, ಉಳುಮೆ ಮಾಡುವವರನ್ನು ಒಕ್ಕಲೆಬ್ಬಿಸದಂತೆ ಸೂಚನೆ ನೀಡಿದ್ದೇವೆ. ಇಂಥವರಿಗೆ ಇನ್ನು ಮೂರು ತಿಂಗಳಲ್ಲಿ ಹಕ್ಕು ಪತ್ರವನ್ನು ವಿತರಣೆ ಮಾಡುತ್ತೇವೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಪ್ಪಿಗೆ ನೀಡಿ ಸೂಚನೆಯನ್ನು ನೀಡಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.

ಅರಣ್ಯ ಇಲಾಖೆ ಜತೆ ನಡೆದಿತ್ತು ಜನರ ಸಂಘರ್ಷ!

ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅರಣ್ಯದಂಚಿನ ಗ್ರಾಮಸ್ಥರ ನಡುವಿನ ಸಂಘರ್ಷ ಮತ್ತೆ ಜೋರಾಗಿದೆ. ಬೆಳ್ತಂಗಡಿಯ ಅಮ್ಮಿನಡ್ಕದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಜನಪ್ರತಿನಿಧಿಗಳು ತಿರುಗಿಬಿದ್ದಿದ್ದರು. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಏಳಪಟ್ಟಿ ಗ್ರಾಮದಲ್ಲಿ ಒತ್ತುವರಿ ಭೂಮಿ ಸರ್ವೇಗೆ ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದರು. ನಮ್ಮ ಹಕ್ಕನ್ನು ಏಕೆ ಕಿತ್ತುಕೊಳ್ಳುತ್ತೀರಿ ಎಂದು ಪ್ರಶ್ನೆ ಮಾಡಿದ್ದರು. ಅಲ್ಲದೆ, ಚಿಕ್ಕಮಗಳೂರು, ಕೊಡಗಿನಲ್ಲಿಯೂ ಆಕ್ರೋಶ ವ್ಯಕ್ತವಾಗಿತ್ತು. ಅರಣ್ಯ ಇಲಾಖೆ ಹಾಗೂ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ವಿರುದ್ಧ ಮಲೆನಾಡು, ಕರಾವಳಿ ಜಿಲ್ಲೆಗಳ ಶಾಸಕರಿಂದ ಪಕ್ಷಾತೀತವಾದ ಹೋರಾಟಕ್ಕೆ ಮುಂದಾಗಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಲೂ ಮುಂದಾಗಿದ್ದರು. ಇದೇ ವೇಳೆ ವಿಸ್ತಾರ ನ್ಯೂಸ್‌ ಸಹ ಅಭಿಯಾನ ಕೈಗೊಂಡು ಜನರ ಪರವಾಗಿ ಧ್ವನಿ ಎತ್ತಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ, ಈಗ ಸಣ್ಣ ಬುಡಕಟ್ಟು ಜನಾಂಗ ಹಾಗೂ ಉಳುಮೆ ಮಾಡುವವರನ್ನು ಈಗಿನ ಕ್ರಮದಿಂದ ದೂರ ಇಡುತ್ತಿರುವುದಾಗಿ ತಿಳಿಸಿದೆ.

ಪರಿಸ್ಥಿತಿ ಹದಗೆಡಲು ಏನು ಕಾರಣ?

ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 4ರ ಕಲಂ 4 (1) ಅಡಿ ಯಾವುದೇ ಭೂ ಪ್ರದೇಶವನ್ನು ʻಮೀಸಲು ಅರಣ್ಯ’ ಎಂದು ಸರ್ಕಾರ ಘೋಷಿಸಲು ಅವಕಾಶವಿದೆ. ಇದನ್ನು ಬಳಸಿಕೊಂಡು ಅರಣ್ಯ ಇಲಾಖೆ ʻಮೀಸಲು ಅರಣ್ಯʼ ಅಧಿಸೂಚನೆಯನ್ನು ಹೊರಡಿಸಿತ್ತು. ಸರ್ಕಾರ ಅಧಿಕಾರಕ್ಕೆ ಬಂದ 120 ದಿನಗಳಲ್ಲೇ 5,729 ಎಕರೆ ಪ್ರದೇಶವನ್ನು ಮೀಸಲು ಅರಣ್ಯ ಎಂದು ಘೋಷಿಸಿತ್ತು. ಇದನ್ನು ಸರ್ಕಾರ ಬಹುದೊಡ್ಡ ಸಾಧನೆ ಎಂಬಂತೆ ಬಿಂಬಿಸಿಕೊಂಡಿತ್ತು. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಂಚಿನ ನಿವಾಸಿಗಳ ತೆರವಿಗೆ ಮುಂದಾಗಿದ್ದರು. ಇದು ಸಂಘರ್ಷಕ್ಕೆ ಕಾರಣವಾಗಿತ್ತು.

ಈ ಮೊದಲು ಈಶ್ವರ್‌ ಖಂಡ್ರೆ ಏನು ಹೇಳಿದ್ದರು?

ಅರಣ್ಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡಲಾಗಿದ್ದ ಅರಣ್ಯ ಭೂಮಿಯಲ್ಲಿ ಶೇ.40 ಭೂಮಿಯನ್ನು ಮರಳಿ ಮೀಸಲು ಅರಣ್ಯವನ್ನಾಗಿ ಪರಿವರ್ತಿಸುವ ಐತಿಹಾಸಿಕ ನಿರ್ಧಾರವನ್ನು ನಮ್ಮ ಸರ್ಕಾರ ಕೈಗೊಂಡಿದೆ ಎಂದು ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾ “ಎಕ್ಸ್‌” (ಟ್ವಿಟರ್‌) ನಲ್ಲಿ ಹೇಳಿಕೊಂಡಿತ್ತು. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಈಗಿರುವ ಶೇ.22ರಷ್ಟು ಅರಣ್ಯವನ್ನು ಶೇ.30ಕ್ಕಿಂತ ಹೆಚ್ಚಿಸುವ ನಿರ್ಧಾರವನ್ನು ಇಲಾಖೆ ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ಅರಣ್ಯ ಇಲಾಖೆಯ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಮಲೆನಾಡು ಶಾಸಕರ ಆಕ್ರೋಶ

ʻʻ120 ದಿನದಲ್ಲಿ 5,000 ಸಾವಿರ ಎಕರೆ ಕಾಡನ್ನು ಈ ಅರಣ್ಯ ಇಲಾಖೆಯೇನೂ ಬೆಳೆಸಿಲ್ಲ. ಇರುವ ಕಾಡನ್ನೇ ಮೀಸಲು ಎಂದು ಸಹಿ ಹಾಕಿದ್ದಾರೆ. ಈ ಸಹಿ ಹಾಕಲು 120 ದಿನ ಏಕೆ, ಬರೀ 120 ಸೆಕೆಂಡ್ ಸಾಕು. ಇದೊಂದು ವಿವೇಚನಾ ರಹಿತ ನಿರ್ಧಾರವಾಗಿದೆ. ಇದನ್ನು ಸರ್ಕಾರ ತನ್ನ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ಮಲೆನಾಡು ಭಾಗದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.
ಬಯಲು ನಾಡು ಬೀದರ್‌ನ ಈಶ್ವರ್ ಖಂಡ್ರೆ‌ ಅವರಿಗೆ ಮಲೆನಾಡಿನ ಜನ ಜೀವನ, ಸಮಸ್ಯೆಗಳ ಬಗ್ಗೆ ಏನು ಗೊತ್ತು? ಅವರು ಅಧಿಕಾರಿಗಳು ಕೊಟ್ಟ ಫೈಲ್‌ಗೆ ಸಹಿ ಹಾಕುತ್ತಿದ್ದಾರೆ. ಸಮಸ್ಯೆ ಹೇಳಲು ಹೋದರೆ ಕೇಳಿಸಿಕೊಳ್ಳದೆ ಉದ್ಧಟತನದಿಂದ ವರ್ತಿಸುತ್ತಿದ್ದಾರೆ ಎಂದು ಮಲೆನಾಡು ಭಾಗದ ಕಾಂಗ್ರೆಸ್‌ ಶಾಸಕರು ಕಿಡಿಕಾರಿದ್ದರು.

ಖಾರವಾಗಿ ಪ್ರಶ್ನೆ ಮಾಡಿದ್ದ ವಿಸ್ತಾರ ನ್ಯೂಸ್‌

1. ಸರ್ಕಾರ ಈಗ ಮೀಸಲು ಅರಣ್ಯವನ್ನು ಘೋಷಣೆ ಮಾಡಿದೆ. ಆದರೆ, ಇದರ ಮುಂದಿನ ಪರಿಣಾಮ ಏನು ಎಂಬುದನ್ನು ನೋಡಬೇಕಲ್ಲವೇ? ಮೀಸಲು ಅರಣ್ಯ ಎಂದು ಘೋಷಣೆ ಮಾಡಿದರೆ ಸಾಕೇ? ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಅಲ್ಲವೇ?

2. ಮೀಸಲು ಅರಣ್ಯ ಎಂದು ಘೋಷಿಸಲ್ಪಟ್ಟ ಸ್ಥಳಗಳಲ್ಲಿ ಈಗಾಗಲೇ ಮನೆ ಕಟ್ಟಿಕೊಂಡಿದ್ದರೆ ಅಥವಾ ತೋಟವನ್ನೋ ಇನ್ನೇನೋ ಕೃಷಿ ಚಟುವಟಿಕೆಯನ್ನು ಮಾಡಿಕೊಂಡಿದ್ದರೆ ಅಂತಹ ಜಾಗವನ್ನು ವಾಪಸ್‌ ಪಡೆಯುವುದು ಹೇಗೆ? ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು. ಅಂಥವರಿಗೆ ಪುನರ್ವಸತಿ ಯೋಜನೆ ಏನು? ಏಕಾಏಕಿ ಮನೆ ಕೆಡವಿ, ನೀವು ಜಾಗ ಖಾಲಿ ಮಾಡಿ ಎಂದರೆ ಅವರು ಹೇಗೆ ಹೋಗಲು ಸಾಧ್ಯ?

3. ಈಗಾಗಲೇ ಶೇಕಡಾ 20ರಷ್ಟು ಇರುವ ಅರಣ್ಯವನ್ನು ಶೇಕಡಾ 30ಕ್ಕೆ ಹೆಚ್ಚಳ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಇದು ಒಳ್ಳೆಯ ಉದ್ದೇಶವೇ ಸರಿ. ಅದೇ ರೀತಿಯಾಗಿ ಇರುವ ಇನ್ನಿತರ ಪರ್ಯಾಯ ಮಾರ್ಗಗಳನ್ನೂ ನೋಡಬಹುದಲ್ಲವೇ? ಅಕೇಶಿಯಾ ನೆಡುತೋಪುಗಳನ್ನು ನೀವು ಬಳಸುವುದನ್ನು ನಿಲ್ಲಿಸಿ ಅಲ್ಲಿ ಅರಣ್ಯೀಕರಣವನ್ನು ಮಾಡಬಹುದಲ್ಲವೇ?

4. ರಸ್ತೆಯುದ್ದಕ್ಕೂ ಅಕ್ಕಪಕ್ಕದಲ್ಲಿ ಸಾಲು ಸಾಲು ಜಾಗಗಳಿವೆ. ಅಲ್ಲಿ ಸರಿಯಾಗಿ ಗಿಡಗಳನ್ನು ಬೆಳೆಸಿ ನಿರ್ವಹಣೆ ಮಾಡಿದ್ದೇ ಆದಲ್ಲಿ ಈಗ ಹಾಕಿಕೊಂಡಿರುವ ಗುರಿಗಿಂತಲೂ ಹೆಚ್ಚಳವಾಗುವುದಿಲ್ಲವೇ? ಇದು ಕ್ಲಿಷ್ಟಕರ ದಾರಿ ಎಂದು ಬಿಡಲಾಗಿದೆಯೇ?

5. ಸಮೀಕ್ಷೆಯನ್ನು ನಡೆಸದೆ, ಸರ್ವೆ ನಡೆಸದೇ ನಮ್ಮ ಬಳಿ ಸರ್ಕಾರದ ಆದೇಶ ಇದೆ ಎಂದು ಏಕಾಏಕಿ ನುಗ್ಗಿದರೆ ಜನರು ಸುಮ್ಮನಿರುತ್ತಾರೆಯೇ? ಜನರಿಂದಲೇ ಆಡಳಿತ ಎಂಬುದು ಮರೆತು ಹೋಯಿತೇ?

6. ಕೊನೆಯದಾಗಿ ಹೇಳಬೇಕೆಂದರೆ, ಅರಣ್ಯ ಜಾಗವನ್ನು ಹೆಚ್ಚಳ ಮಾಡುವ ನಿರ್ಧಾರಕ್ಕೆ ವಿಸ್ತಾರ ನ್ಯೂಸ್‌ ಸಹಮತ ಇದೆ. ಆದರೆ, ಈಗ ಕೈಗೊಂಡಿರುವ ಏಕಾಏಕಿ ನಿರ್ಧಾರ ಸರಿಯಲ್ಲ. ಪರ್ಯಾಯ ಮಾರ್ಗಗಳು ಏನು? ಈಗಿರುವವರಿಗೆ ಪರ್ಯಾಯ ನೆಲೆ ಏನು? ಎಂಬುದನ್ನು ಸ್ಪಷ್ಟಪಡಿಸದೇ ಕೈಗೊಂಡಿರುವ ನಿರ್ಧಾರವನ್ನು ಜನಸಾಮಾನ್ಯರ ಪರವಾಗಿ ಖಂಡಿಸಲಾಗುತ್ತಿದೆ ಎಂದು ವಿಸ್ತಾರ ನ್ಯೂಸ್‌ ಅಭಿಯಾನ ಮಾಡಿ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು.

ಯಾವ ಜಿಲ್ಲೆಯಲ್ಲಿ ಎಷ್ಟು ಎಕರೆ ಪ್ರದೇಶ ಮೀಸಲು ಅರಣ್ಯವಾಗಿ ಘೋಷಣೆ?

  • ಚಿಕ್ಕಮಗಳೂರು-4,589
  • ಚಿತ್ರದುರ್ಗ-391
  • ಬೀದರ್‌-261
  • ಬೆಳಗಾವಿ-153
  • ಬಳ್ಳಾರಿ-105
  • ಮಂಡ್ಯ-49
  • ಶಿವಮೊಗ್ಗ-25

ಮೀಸಲು ಅರಣ್ಯ ಘೋಷಣೆಯಿಂದ ಏನೇನು ತೊಂದರೆ?

  • ಪ್ರದೇಶದಲ್ಲಿ ಅರಣ್ಯೇತರ ಚಟುವಟಿಕೆ ನಡೆಸುವಂತಿಲ್ಲ. ಅಂದರೆ ಕೃಷಿ, ಕೃಷಿಗೆ ಸಂಬಂಧಿಸಿದ ಯಾವುದೇ ಚಟುವಟಿಕೆ ನಡೆಸುವಂತಿಲ್ಲ.
    – ಈ ಜಾಗವನ್ನು ಯಾವುದೇ ಮಂಜೂರಾತಿ, ಅಧಿಭೋಗದಾರಿಕೆಗೆ ಆದೇಶ ನೀಡುವಂತಿಲ್ಲ.
    – ಸರಿಯಾಗಿ ಸರ್ವೆ ನಡೆಯದೇ ಇರುವುದರಿಂದ ದಾಖಲೆ ಇದ್ದರೂ ಕೋರ್ಟ್‌ – ಕಚೇರಿ ಅಲೆಯುವ ಸಂಕಷ್ಟ
  • ಜಾನುವಾರು ಮೇಯಿಸಲು, ದರಕು ಗುಡಿಸಲು ನಿರ್ಬಂಧ
    – ಹೊಸ ರಸ್ತೆ ನಿರ್ಮಾಣ, ಹಳೇ ರಸ್ತೆ ದುರಸ್ತಿ, ವಿದ್ಯುತ್‌ ಸಂಪರ್ಕ ಕಲ್ಪಿಸಲು ಅಡ್ಡಿ. ಸರ್ಕಾರದ ಬಳಕೆಗೂ ಈ ಜಾಗ ದೊರೆಯದು.

ಇದನ್ನೂ ಓದಿ: Vistara News Campaign‌: ಕಾಡು ಕಾಪಾಡಿದ ಜನರ ಕಾಡುವ ಸರ್ಕಾರ; ರಣಾಂಗಣವಾಯ್ತು ‘ಮೀಸಲು ಅರಣ್ಯ’

ಈಗ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದಲ್ಲಿ ಕೆಲವು ಮಾರ್ಪಾಡು ಮಾಡಿಕೊಳ್ಳುವುದಾಗಿ ಹೇಳಿಕೊಂಡಿದೆ. ಹೀಗಾಗಿ ಬುಡಕಟ್ಟು ನಿವಾಸಿಗಳು ಹಾಗೂ ಸಾಗುವಳಿ ಮಾಡುತ್ತಿರುವವರಿಗೆ ಯಾವುದೇ ತೊಂದರೆ ಮಾಡದೆ, ಅವರಿಗೆ ಹಕ್ಕು ಪತ್ರ ನೀಡುವುದಾಗಿ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ವಿಸ್ತಾರ ನ್ಯೂಸ್‌ ಮಾಡಿದ ಅಭಿಯಾನವು ಸಾರ್ಥಕವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

Shootout Case: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರಿಂದ ರೌಡಿಶೀಟರ್‌ ಮೃತಪಟ್ಟಿದ್ದಾನೆ.

VISTARANEWS.COM


on

Shootout Case
Koo

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ.

ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

murder case in Bengaluru rural

ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ (Murder Case) ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಶಿವಕುಮಾರ್, ರಾಜೇಶ್ವರಿ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮದುವೆಯಾಗಿದ್ದ ರಾಜೇಶ್ವರಿ ಪತಿಯಿಂದ ದೂರಾಗಿದ್ದಳು. ಬಳಿಕ ಕೆಲ ವರ್ಷಗಳ ಹಿಂದೆ ಕೃಷ್ಣೋಜಿರಾವ್ ಜತೆ ರಾಜೇಶ್ವರಿ ಸಂಬಂಧ ಹೊಂದಿದ್ದಳು. ಇವರಿಬ್ಬರು ಗಂಡ-ಹೆಂಡತಿ ಎಂದು ಹೇಳಿಕೊಂಡು ಗಾರೆ ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಕೃಷ್ಣೋಜಿರಾವ್, ರಾಜೇಶ್ವರಿ ಮತ್ತು ಆಕೆಯ ಮಗ ಶಿವಕುಮಾರ್ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದರು. ಇತ್ತೀಚೆಗೆ ಕೃಷ್ಣೋಜಿರಾವ್ ದಿನನಿತ್ಯ ಕುಡಿದು ಬಂದು ರಾಜೇಶ್ವರಿಗೆ ಹಲ್ಲೆ ಮಾಡುತ್ತಿದ್ದ. ಇದರಿಂದಾಗಿ ರಾಜೇಶ್ವರಿ ಹಾಗೂ ಆಕೆಯ ಮಗ ಶಿವಕುಮಾರ್‌ ಬೇಸತ್ತು ಹೋಗಿದ್ದರು.

ನಿನ್ನೆ ಭಾನುವಾರ ಸಂಜೆ ಕಂಠ ಪೂರ್ತಿ ಕುಡಿದು ಬಂದಿದ್ದ ಕೃಷ್ಣೋಜಿರಾವ್, ರಾಜೇಶ್ವರಿ ಜತೆಗೆ ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ರಾಜೇಶ್ವರಿ ಮಗ ಶಿವಕುಮಾರ್‌ ದೊಣ್ಣೆಯಿಂದ ಕೃಷ್ಣೋಜಿರಾವ್ ತಲೆಗೆ ಹೊಡೆದಿದ್ದ.

ಆಗ ಶಿವಕುಮಾರನ ತಾಯಿ ರಾಜೇಶ್ವರಿ ಅವನನ್ನು ಬಿಡಬೇಡ ಮುಗಿಸಿಬಿಡು ಎಂದು ಹೇಳಿದ್ದಾಳೆ. ಆಗ ಮತ್ತೆ ದೊಣ್ಣೆಯಿಂದ ಮುಖ ಹಾಗೂ ತಲೆಗೆ ಹೊಡೆದು ಕೊಂದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ರಾಮನಗರ

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Kusina Mane : ಗ್ರಾಮೀಣ ಮಹಿಳೆಯರ ಪಾಲಿಗೆ ಕೂಸಿನ ಮನೆಯು ವರದಾನವಾಗಿದೆ. ಅದರಲ್ಲೂ ನರೇಗಾ ಮಹಿಳಾ ಕೂಲಿಕರಾರು ತಮ್ಮ ಮಕ್ಕಳನ್ನು ಕೂಸಿನ ಮನಯಲ್ಲಿ ಬಿಟ್ಟು, ನೆಮ್ಮದಿಯಿಂದ ಕೆಲಸಕ್ಕೆ ತೆರಳುವಂತಾಗಿದೆ.

VISTARANEWS.COM


on

By

kusina mane
Koo

ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಮಕ್ಕಳಿಗೆ ಅನೂಕೂಲ ಕಲ್ಪಿಸುವ ಉದ್ದೇಶದೊಂದಿಗೆ ಪ್ರಾರಂಭಿಸಲಾಗಿರುವ ಕೂಸಿನ ಮನೆಗಳು (Kusina Mane) ಇದೀಗ ಮಕ್ಕಳ ಹಾಗೂ ಪೋಷಕರ ಪಾಲಿಗೆ ಆಶಾಕಿರಣವಾಗಿವೆ.

ಗ್ರಾಮ ಪಂಚಾಯಿತಿಗೆ ಒಂದರಂತೆ ರಾಮನಗರ ತಾಲೂಕಿನಲ್ಲಿ ಆರಂಭಿಸಿರುವ 20 ಕೂಸಿನ ಮನೆಗಳು ಗ್ರಾಮೀಣ ಮಕ್ಕಳಿಗೆ ಅನುಕೂಲ ವಾಗುತ್ತಿದೆ. ಕೂಸಿನ ಮನೆಗಳು ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 4ರ ವರೆಗೆ ಕಾರ್ಯ ನಿರ್ವಹಿಸುತ್ತಿವೆ. ಕೂಸಿನ ಮನೆಯಲ್ಲಿ 6 ತಿಂಗಳಿಂದ 3 ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲಾಗುತ್ತದೆ. ಇದರಿಂದಾಗಿ ನರೇಗಾ ಮಹಿಳಾ ಕೂಲಿಕರಾರು ನೆಮ್ಮದಿಯಿಂದ ಕೆಲಸಕ್ಕೆ ತೆರಳುವಂತಾಗಿದೆ.

kusina Mane

ಆರಂಭದಲ್ಲಿ ಕೂಸಿನ ಮನೆಗೆ ಮಕ್ಕಳು ನಿರೀಕ್ಷಿತ ಪ್ರಮಾಣದಲ್ಲಿ ಬಂದಿರಲಿಲ್ಲ. ನಂತರ ಪಂಚಾಯಿತಿ ಹಾಗೂ ಶಿಶು ಆರೈಕೆದಾರರ ಜಾಗೃತಿ, ಐಇಸಿ (IEC) ಚಟುವಟಿಕೆ, ಜಾಗೃತಿ ಕಾರ್ಯಕ್ರಮದ ಮೂಲಕ ಮನವರಿಕೆ ಮಾಡಿದ್ದಾರೆ. ಇದರ ಫಲವಾಗಿ ಮಹಿಳಾ ಕಾರ್ಮಿಕರು ಕೂಸಿನ ಮನೆಯಲ್ಲಿ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋಗಲಾರಂಭಿಸಿದ್ದಾರೆ.

ಇದೀಗ ಮಕ್ಕಳ ದಾಖಲಾತಿ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡುತ್ತಿದ್ದು, ಮಕ್ಕಳನ್ನು ಆರೈಕೆ ಮಾಡಲಾಗುತ್ತಿದೆ. ಇದರಿಂದ ಮಹಿಳಾ ಕೂಲಿಕಾರರು ತಮ್ಮ ಜೀವನವನ್ನು ಇನ್ನಷ್ಟು ಸುಧಾರಿಸಿಕೊಳ್ಳಲು ಕೂಸಿನ ಮನೆ ಕಾರಣವಾಗಿದೆ ಎಂದು ರಾಮನಗರ ತಾಲೂಕಿನ ಐಇಸಿ ಸಂಯೋಜಕರು ಸುಚಿತ್ರ ತಿಳಿಸಿದ್ದಾರೆ.

kusina mane

ಈಗಾಗಲೇ ರಾಮನಗರದ 20 ಗ್ರಾಮ ಪಂಚಾಯ್ತಿಗಳಲ್ಲಿ ಕೂಸಿನ ಮನೆ (ಶಿಶುಪಾಲನ ಕೇಂದ್ರ) ಆರಂಭವಾಗಿದ್ದು, ಬನ್ನಿಕುಪ್ಪೆ, ಕೆ, ಸುಗ್ಗನಹಳ್ಳಿ, ಬನ್ನಿಕುಪ್ಪೆ.ಬಿ, ಕೈಲoಚ ಗ್ರಾಮ ಪಂಚಾಯ್ತಿಗಳಲ್ಲಿ ಕೂಸಿನ ಮನೆ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುತ್ತಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

Murder case : ತಾಯಿಗೆ ಜತೆಗೆ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಕುಡಿದು ಬಂದು ಹೊಡೆದು ಬಡಿದು ಮಾಡುತ್ತಿದ್ದ. ಇದರಿಂದ ಸಿಟ್ಟಾದ ಮಗನೊಬ್ಬ ದೊಣ್ಣೆಯಿಂದ ಹೊಡೆದು ಕೊಂದಿದ್ದಾನೆ.

VISTARANEWS.COM


on

By

murder case in Bengaluru rural
ಸಾಂದರ್ಭಿಕ ಚಿತ್ರ
Koo

ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ (Murder Case) ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಶಿವಕುಮಾರ್, ರಾಜೇಶ್ವರಿ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮದುವೆಯಾಗಿದ್ದ ರಾಜೇಶ್ವರಿ ಪತಿಯಿಂದ ದೂರಾಗಿದ್ದಳು. ಬಳಿಕ ಕೆಲ ವರ್ಷಗಳ ಹಿಂದೆ ಕೃಷ್ಣೋಜಿರಾವ್ ಜತೆ ರಾಜೇಶ್ವರಿ ಸಂಬಂಧ ಹೊಂದಿದ್ದಳು. ಇವರಿಬ್ಬರು ಗಂಡ-ಹೆಂಡತಿ ಎಂದು ಹೇಳಿಕೊಂಡು ಗಾರೆ ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಕೃಷ್ಣೋಜಿರಾವ್, ರಾಜೇಶ್ವರಿ ಮತ್ತು ಆಕೆಯ ಮಗ ಶಿವಕುಮಾರ್ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದರು. ಇತ್ತೀಚೆಗೆ ಕೃಷ್ಣೋಜಿರಾವ್ ದಿನನಿತ್ಯ ಕುಡಿದು ಬಂದು ರಾಜೇಶ್ವರಿಗೆ ಹಲ್ಲೆ ಮಾಡುತ್ತಿದ್ದ. ಇದರಿಂದಾಗಿ ರಾಜೇಶ್ವರಿ ಹಾಗೂ ಆಕೆಯ ಮಗ ಶಿವಕುಮಾರ್‌ ಬೇಸತ್ತು ಹೋಗಿದ್ದರು.

ನಿನ್ನೆ ಭಾನುವಾರ ಸಂಜೆ ಕಂಠ ಪೂರ್ತಿ ಕುಡಿದು ಬಂದಿದ್ದ ಕೃಷ್ಣೋಜಿರಾವ್, ರಾಜೇಶ್ವರಿ ಜತೆಗೆ ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ರಾಜೇಶ್ವರಿ ಮಗ ಶಿವಕುಮಾರ್‌ ದೊಣ್ಣೆಯಿಂದ ಕೃಷ್ಣೋಜಿರಾವ್ ತಲೆಗೆ ಹೊಡೆದಿದ್ದ.

ಆಗ ಶಿವಕುಮಾರನ ತಾಯಿ ರಾಜೇಶ್ವರಿ ಅವನನ್ನು ಬಿಡಬೇಡ ಮುಗಿಸಿಬಿಡು ಎಂದು ಹೇಳಿದ್ದಾಳೆ. ಆಗ ಮತ್ತೆ ದೊಣ್ಣೆಯಿಂದ ಮುಖ ಹಾಗೂ ತಲೆಗೆ ಹೊಡೆದು ಕೊಂದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು

ಹೊಸಕೋಟೆ: ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದನ್ನು ಪ್ರಶ್ನೆ (Murder Case) ಮಾಡಿದ್ದಕ್ಕೆ ವ್ಯಕ್ತಿಯೊಬ್ಬ ಕೊಲೆಯಾಗಿ ಹೋಗಿದ್ದಾನೆ. ನವೀನ್‌ ನಾಯಕ್‌ ಮೃತ (27) ದುರ್ದೈವಿ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್ 75 ಡಾಬ ಬಳಿ ಘಟನೆ ನಡೆದಿದೆ.

ನವೀನ್ ನಾಯಕ್ ಗಂಗಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಭಾನುವಾರ ಬೆಳಗಿನ ಜಾವ ತರಕಾರಿ ವ್ಯಾಪಾರಕ್ಕೆ ಕಾರೊಂದರಲ್ಲಿ ಹೋಗುತ್ತಿದ್ದಾಗ, ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದವರನ್ನು ನವೀನ್‌ ನಾಯಕ್‌ ಪ್ರಶ್ನೆ ಮಾಡಿದ್ದ. ಈ ವೇಳೆ ಕಾರಿನಲ್ಲಿದ್ದವರಿಗೂ ನವೀನ್‌ ನಡುವೆ ಗಲಾಟೆ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

murder case
ಮೃತ ನವೀನ್‌ ನಾಯಕ್‌

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಡಿವೈಎಸ್‌ಪಿ ಶಂಕರ್ ಗೌಡ ಅಣ್ಣ ಸಾಹೇಬ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓವರ್‌ ಟೇಕ್‌ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಾರಣಾಂತಿಕವಾಗಿ ನಾಲ್ವರು ಹಲ್ಲೆ ನಡೆಸಿದ್ದಾರೆ. ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ನವೀನ್‌ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.

murder Case
ಕುಟುಂಬಸ್ಥರ ಆಕ್ರಂದನ

ರಸ್ತೆ ಬದಿಯಲ್ಲಿ ಬಿದ್ದಿದ್ದ ನವೀನ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆಗಿರುವ ಹಂತಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Petrol Diesel Price: ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.

VISTARANEWS.COM


on

Petrol Diesel Price
Koo

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ (Petrol Diesel Price) ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ (Petrol, Diesel Price Hike) ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

ಇದನ್ನೂ ಓದಿ | Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ‌ ಭಾಗ್ಯ ನೀಡಿದೆ: ಅಶೋಕ್

ಬೆಲೆ ಏರಿಕೆ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಭಾನುವಾರ ಸುದ್ದಿಗೋಷ್ಠಿ ನಡೆಸಿದರು. ಪೆಟ್ರೋಲ್ ದರ ಹೆಚ್ಚಳವಾದಾಗ ಕಾಂಗ್ರೆಸ್‌ನಿಂದ ಪ್ರತಿಭಟನೆ ಮಾಡಲಾಗಿತ್ತು ಎಂದು ಹೇಳಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಬೈಕ್ ಶವಯಾತ್ರೆ ಮಾಡಿದ್ದ ಫೋಟೊ ರಿಲೀಸ್ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಟ್ವೀಟ್ ಅನ್ನು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಬಿಡುಗಡೆ ಮಾಡಿದರು.

ನಾವು ಅಧಿಕಾರಕ್ಕೆ ಬಂದರೆ ಗೊಬ್ಬರ ಬೆಲೆ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅವರ ವೀಡಿಯೊವನ್ನು ಬಿಡುಗಡೆ ಮಾಡಿ ಕಿಡಿ ಕಾರಿದ ಅಶೋಕ್‌ ಅವರು, ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ‌ ಭಾಗ್ಯ ನೀಡಿದೆ. ಹಾಲು, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ, ಗೈಡೆನ್ಸ್ ವ್ಯಾಲ್ಯೂ, ಆಸ್ತಿ ತೆರಿಗೆ, ಎಲೆಕ್ಟ್ರಿಕ್‌ ಬಿಲ್ ಜಾಸ್ತಿ ಮಾಡಿದ್ದಾರೆ. ವರ್ಷಕ್ಕೆ ಮೂರು ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ರಾಜ್ಯಾ ಸರ್ಕಾರ ದರೋಡೆಗೆ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿ ಒಂದು ರೂಪಾಯಿ ದರ ಹೆಚ್ಚಳ ಆಗಿದ್ದಕ್ಕೆ ಬೈಕ್ ಶವಯಾತ್ರೆ ಮಾಡಿದ್ದರು. ಈಗ ದರ ಹೆಚ್ಚಳ ಮಾಡಿರುವ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮತದಾರ ಪ್ರಭುಗಳು ಮತದಾನ ಮಾಡಿಲ್ಲ ಅಂತ ದ್ವೇಷ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ‌ ಸರ್ಕಾರ ದರ ಹೆಚ್ಚಳ‌ ಆದಾಗ ತೆರಿಗೆ ಕಡಿಮೆ ಮಾಡಿತ್ತು. ನೀವೂ ಕೂಡ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಹೋಗಿದೆ. ಬಿಡಿಎ ಕಮರ್ಷಿಯಲ್ ಕಾಂಪ್ಲೆಕ್ಸ್ ಮೂಲಕ ಆದಾಯ ಬರಲು‌ ಕಾಂಪ್ಲೆಕ್ಸ್ ಕಟ್ಟಿದರು. ಅದನ್ನೂ ಮಾರಾಟ ಮಾಡಲು ಹೊರಟಿದ್ದಾರೆ. ಕಮುಷನ್ ಹೊಡೆಯಲು ದುಡ್ಡಿಲ್ಲ. ಬಿಬಿಎಂಪಿಗೆ ನಾಲ್ಕು ಸಾವಿರ ಕೋಟಿ ಸಾಲ ಮಾಡುತ್ತಿದ್ದಾರೆ. ಕಾರ್ಪೊರೇಷನ್ ಬಿಲ್ಡಿಂಗ್, ಯುಟಿಲಿಟಿ ಬಿಲ್ಡಿಂಗ್, ವಾರ್ಡ್ ಆಫಿಸ್ ಅಡ ಇಡಲು ನೀಲಿ ನಕ್ಷೆ ತಯಾರು ಮಾಡುತ್ತಿದ್ದಾರೆ. ವರ್ಲ್ಡ್ ಬ್ಯಾಂಕ್ ಅಥವಾ ನ್ಯಾಷನಲ್ ಬ್ಯಾಂಕಿಗೆ ಅಡ ಇಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

Continue Reading
Advertisement
Elon Musk
ಪ್ರಮುಖ ಸುದ್ದಿ34 mins ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ37 mins ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ38 mins ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ1 hour ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ1 hour ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್1 hour ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ1 hour ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ2 hours ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

murder Case
ಬೆಂಗಳೂರು ಗ್ರಾಮಾಂತರ2 hours ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ2 hours ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ2 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌