Godse photo: ಗಣಪತಿ ಶೋಭಾಯಾತ್ರೆಯಲ್ಲಿ ಗೋಡ್ಸೆ ಚಿತ್ರ ಪ್ರದರ್ಶನ, ದೂರು - Vistara News

ಚಿತ್ರದುರ್ಗ

Godse photo: ಗಣಪತಿ ಶೋಭಾಯಾತ್ರೆಯಲ್ಲಿ ಗೋಡ್ಸೆ ಚಿತ್ರ ಪ್ರದರ್ಶನ, ದೂರು

ಮೆರವಣಿಗೆಯಲ್ಲಿ ನಾಥೂರಾಂ ಗೋಡ್ಸೆ ಫೋಟೋದ (Godse photo) ಜತೆಗೆ ಸಾವರ್ಕರ್‌ ಫೋಟೋ, ಮೃತನಾದ ಹಿಂದೂ ಹರ್ಷನ ಫೋಟೊ ಕೂಡ ಕಂಡುಬಂದಿದೆ.

VISTARANEWS.COM


on

nathuram godse photo on chitradurga procession
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಗಣಪತಿ ಶೋಭಾಯಾತ್ರೆಯಲ್ಲಿ ನಾಥೂರಾಂ ಗೋಡ್ಸೆ (Godse photo) ಭಾವಚಿತ್ರ ಪ್ರದರ್ಶಿಸಿದ ಘಟನೆ ನಡೆದಿದೆ. ಈ ಕುರಿತು ಎಫ್‌ಐಆರ್‌ ದಾಖಲಾಗಿದೆ.

ಇಲ್ಲಿನ (chitradurga news) ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆ ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆ ಭಾವಚಿತ್ರಗಳನ್ನು ಕೆಲವರು ಹಿಡಿದು ಘೋಷಣೆ ಕೂಗಿದ್ದರು. ಗೋಡ್ಸೆ ಫೋಟೋ ಪ್ರದರ್ಶನ ಮಾಡಿದ ಅಪರಿಚಿತರ ವಿರುದ್ಧ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬವರು ದೂರು ದಾಖಲಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆಯಲ್ಲಿ FIR ದಾಖಲಾಗಿದೆ.

ಮೆರವಣಿಗೆಯಲ್ಲಿ ಗೋಡ್ಸೆ ಫೋಟೋದ ಜತೆಗೆ ಸಾವರ್ಕರ್‌ ಫೋಟೋ, ಮೃತನಾದ ಹಿಂದೂ ಹರ್ಷನ ಫೋಟೊ ಕೂಡ ಕಂಡುಬಂದಿದೆ. ಗೋಡ್ಸೆ ಫೋಟೋದ ಮೇಲ್ಗಡೆ ʼಅಖಂಡ ಭಾರತದ ಕನಸುಗಾರʼ ಎಂದು ಬರೆಯಲಾಗಿದೆ. ಸಮಾಜದಲ್ಲಿ ಪ್ರಚೋದನೆಯ ಮೂಲಕ ಅಶಾಂತಿ ಸೃಷ್ಟಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಲುವಾಗಿ ಈ ಫೋಟೋ ಪ್ರದರ್ಶನ ಮಾಡಲಾಗಿದೆ. ಶಾಂತಿ ಕದಡಲು ಹಾಗೂ ಕೋಮುಗಳ ಮಧ್ಯೆ ಸೌಹಾರ್ದತೆಗೆ ಧಕ್ಕೆ ತರಲು ಫೋಟೋ ಪ್ರದರ್ಶನ ಮಾಡಿದ್ದಾರೆ. ಗೋಡ್ಸೆ ಫೋಟೋ ಪ್ರದರ್ಶಿಸಿದವರ ಹಾಗೂ ಅದಕ್ಕೆ ಕುಮ್ಮಕ್ಕು ನೀಡಿದವರನ್ನು ಪತ್ತೆ ಮಾಡಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಕೊಡಲಾಗಿದೆ. IPC 505/1(C), 505/1(B) ಅಡಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಔರಂಗಜೇಬ್‌ ದಾಳಿಕೋರ, ಗೋಡ್ಸೆ ಭಾರತ ಮಾತೆಯ ಸುಪುತ್ರ; ಓವೈಸಿಗೆ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಟಾಂಗ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮುಂದಾದ ವೈಐಪಿಪಿ ಸಹ ಸಂಸ್ಥಾಪಕ ನಿಖಿಲ್ ಕಾಮತ್

Bengaluru News: ವೈಐಪಿಪಿ ಸಹ ಸಂಸ್ಥಾಪಕ ನಿಖಿಲ್‌ ಕಾಮತ್‌ ಅವರ ನಾಯಕತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮ (KMSPP) ದ ಅಡಿಯಲ್ಲಿ ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಸಜ್ಜಾಗಿದೆ. ಕರ್ನಾಟಕ ಸರ್ಕಾರ ಹಾಗೂ ಸತ್ವ ಸಂಸ್ಥೆಯ ಸಹಯೋಗದಲ್ಲಿ 2025-26 ಶೈಕ್ಷಣಿಕ ವರ್ಷದ ವೇಳೆಗೆ ತುಮಕೂರು, ದಾವಣಗೆರೆ, ಹಾವೇರಿ, ಯಾದಗಿರಿ ಮತ್ತು ಚಿತ್ರದುರ್ಗ ಜಿಲ್ಲೆಗಳ 210 ಕ್ಕೂ ಹೆಚ್ಚು ಶಾಲೆಗಳು ಮತ್ತು ಅಂಗನವಾಡಿಗಳು/ಪ್ರಿಸ್ಕೂಲ್‌ಗಳನ್ನು ಪರಿವರ್ತಿಸಲು ರೂಪುರೇಷೆಗಳು ಸಿದ್ಧವಾಗುತ್ತಿವೆ.

VISTARANEWS.COM


on

YIPP co founder Nikhil Kamath
ವೈಐಪಿಪಿ ಸಹ-ಸಂಸ್ಥಾಪಕ ನಿಖಿಲ್ ಕಾಮತ್
Koo

ಬೆಂಗಳೂರು: ವೈಐಪಿಪಿ (ಯಂಗ್ ಇಂಡಿಯಾ ಫಿಲಾಂತ್ರೊಪಿಕ್ ಪ್ಲೆಡ್ಜ್‌ ) ಸಹ-ಸಂಸ್ಥಾಪಕ ನಿಖಿಲ್‌ ಕಾಮತ್‌ ಅವರ ನಾಯಕತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮ (KMSPP) ಅಡಿಯಲ್ಲಿ ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರಲು ಸಜ್ಜಾಗಿದೆ. ಕರ್ನಾಟಕ ಸರ್ಕಾರ ಹಾಗೂ ಸತ್ವ ಸಂಸ್ಥೆಯ ಸಹಯೋಗದಲ್ಲಿ 2025-26 ಶೈಕ್ಷಣಿಕ ವರ್ಷದ ವೇಳೆಗೆ ತುಮಕೂರು, ದಾವಣಗೆರೆ, ಹಾವೇರಿ, ಯಾದಗಿರಿ ಮತ್ತು ಚಿತ್ರದುರ್ಗ ಜಿಲ್ಲೆಗಳ 210 ಕ್ಕೂ ಹೆಚ್ಚು ಶಾಲೆಗಳು ಮತ್ತು ಅಂಗನವಾಡಿಗಳು/ಪ್ರಿಸ್ಕೂಲ್‌ಗಳನ್ನು ಪರಿವರ್ತಿಸಲು ರೂಪುರೇಷೆಗಳು (Bengaluru News) ಸಿದ್ಧವಾಗುತ್ತಿವೆ.

ಭಾರತೀಯ ವ್ಯಾಪಾರ ಮತ್ತು ಲೋಕೋಪಕಾರಿ ಸಮುದಾಯದ ಪ್ರಮುಖ ವ್ಯಕ್ತಿ ನಿಖಿಲ್ ಕಾಮತ್ ಮತ್ತು ಯುವ ಅನ್‌ಸ್ಟಾಪಬಲ್ ನ ಸ್ಥಾಪಕ ಅಮಿತಾಬ್‌ ಶಾ ಜತೆಗೂಡಿ ಯಂಗ್ ಇಂಡಿಯಾ ಫಿಲಾಂತ್ರೊಪಿಕ್ ಪ್ಲೆಡ್ಜ್ (YIPP) ಮುನ್ನಡೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್, ಜೆಎಸ್‌ಡಬ್ಲ್ಯೂ ಫೌಂಡೇಶನ್, ಸ್ವಿಸ್ರೆ, ಪ್ರಶಾಂತ್ ಪ್ರಕಾಶ್ ಮತ್ತು ವೈ ಐಪಿಪಿ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಕರ್ನಾಟಕದಾದ್ಯಂತ ಹಮ್ಮಿಕೊಂಡಿದೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

ಕಳೆದ ಒಂದೂವರೆ ವರ್ಷದಲ್ಲಿ ಕೆಎಂಎಸ್‌ಪಿಪಿ ಶಾಲೆಯ ಪರಿವರ್ತನೆಗೆ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಗಣನೀಯ ಪಾತ್ರ ವಹಿಸಿದೆ. ಪ್ರಾರಂಭಿಕವಾಗಿ ಜಿಲ್ಲಾ ಮಟ್ಟದಲ್ಲಿ ಪ್ರಮುಖ ಉಪಕ್ರಮಗಳಲ್ಲಿ ಡಿಜಿಟಲ್ ಮತ್ತು ಭೌತಿಕ ಮೂಲಸೌಕರ್ಯವನ್ನು ಹೆಚ್ಚಿಸುವುದು, 21ನೇ ಶತಮಾನದ ಕೌಶಲ್ಯಗಳನ್ನು ಸಂಯೋಜಿಸುವುದು, ವಿಜ್ಞಾನ ಮತ್ತು ಎಸ್‌ಟಿಇಎಂ ಶಿಕ್ಷಣಕ್ಕೆ ಒತ್ತು ನೀಡುವುದು, ಫೌಂಡೇಶನಲ್ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರ (FLN) ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು, ವೃತ್ತಿ ಸಮಾಲೋಚನೆಯನ್ನು ಒದಗಿಸುವುದರ ಜತೆಯಲ್ಲಿ ಅನಿಯಮಿತ ವಿದ್ಯಾರ್ಥಿಗಳನ್ನು ಮರುಸಂಘಟಿಸುವುದು ಮತ್ತು ಶಿಕ್ಷಕರು ಮತ್ತು ಶಿಕ್ಷಣ ಅಧಿಕಾರಿಗಳಿಗೆ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಗಳನ್ನು ನೀಡಲಾಗಿದೆ.

ಈ ಕುರಿತು ವೈಐಪಿಪಿಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮಾತನಾಡಿ, “ಈ ಕಾರ್ಯಕ್ರಮವು ಮೂಲಸೌಕರ್ಯಗಳನ್ನು ಮಾತ್ರವಲ್ಲದೆ ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಅಧಿಕಾರಿಗಳಲ್ಲಿ ಶಿಕ್ಷಣದ ಗ್ರಹಿಕೆಯನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

ಪರಿಣಾಮಕಾರಿ ಅನುಷ್ಠಾನ ಮತ್ತು ಪ್ರಭಾವದ ಮೌಲ್ಯಮಾಪನವನ್ನು ಖಾತ್ರಿಪಡಿಸುವ, ತಳಮಟ್ಟದ ಮಧ್ಯಸ್ಥಿಕೆಗಳನ್ನು ಪರಿಷ್ಕರಿಸಲು ಈ ಯೋಜನೆ ದೃಢವಾದ ಮೇಲ್ವಿಚಾರಣಾ ವ್ಯವಸ್ಥೆಯನ್ನು ಸಹ ಸ್ಥಾಪಿಸಿದೆ. ಸಮಗ್ರ ಶಿಕ್ಷಣ ರಾಜ್ಯ ಯೋಜನಾ ನಿರ್ದೇಶಕರ (SPD) ನೇತೃತ್ವದ ರಾಜ್ಯ ಮಟ್ಟದ ಚಾಲನಾ ಸಮಿತಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮಿತಿಗಳೊಂದಿಗೆ ಕೆಎಂಎಸ್‌ಪಿಪಿ ರಾಜ್ಯಾದ್ಯಂತ ಉತ್ತಮ ಅಭ್ಯಾಸಗಳನ್ನು ಸಾಂಸ್ಥಿಕಗೊಳಿಸುತ್ತಿದೆ ಮತ್ತು ವ್ಯವಸ್ಥಿತ ಬದಲಾವಣೆಗೆ ಚಾಲನೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.

Continue Reading

ರಾಜಕೀಯ

MLC Election: ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ಗೆ ಬೆಂಬಲಿಸಲು ಮಾಜಿ ಸಚಿವ ಎಚ್. ಆಂಜನೇಯ ಮನವಿ

MLC Election: ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ವೈ.ಎ. ನಾರಾಯಣಸ್ವಾಮಿ ಅವರನ್ನು ಈ ಬಾರಿ ಸೋಲಿಸಲು ಶಿಕ್ಷಕರು ಈಗಾಗಲೇ ಎಲ್ಲಾ ಕಡೆಯಲ್ಲಿ ಶಪಥ ಮಾಡಿದ್ದಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.

VISTARANEWS.COM


on

Election campaign meeting for Congress party candidate d t Srinivas in Holalkere
Koo

ಹೊಳಲ್ಕೆರೆ: ಶಿಕ್ಷಕರ ಯಾವುದೇ ಸಮಸ್ಯೆ ಪರಿಹರಿಸುವ ಶಕ್ತಿ ನಮ್ಮ ಸರ್ಕಾರಕ್ಕೆ ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ (MLC Election) ತಿಳಿಸಿದರು.

ಪಟ್ಟಣದ ಸ್ನೇಹ ಕಂಪರ್ಟ್‌ನಲ್ಲಿ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪರ ಕೈಗೊಂಡ ಪ್ರಚಾರ ಸಭೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಶಿಕ್ಷಕರ ಯಾವುದೇ ಸಮಸ್ಯೆ ಪರಿಹರಿಸುವ ಶಕ್ತಿ ನಮ್ಮ ಸರ್ಕಾರಕ್ಕೆ ಇದೆ. ಶಿಕ್ಷಕರು ಚುನಾವಣೆಯಲ್ಲಿ ಸರ್ಕಾರಕ್ಕೆ ಬೆಂಬಲಿಸಬೇಕು. ಅದಕ್ಕೆ ಪ್ರತಿಫಲವಾಗಿ ಸೌಲಭ್ಯಗಳನ್ನು ಕೇಳಿ ಪಡೆದುಕೊಳ್ಳಬೇಕು. ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ ಗೆ ಬೆಂಬಲಿಸಿ, ಗೆಲ್ಲಿಸಿಕೊಂಡು ಬರಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ವೈ.ಎ.ನಾರಾಯಣಸ್ವಾಮಿ ಅವರನ್ನು ಈ ಬಾರಿ ಸೋಲಿಸಲು ಶಿಕ್ಷಕರು ಈಗಾಗಲೇ ಎಲ್ಲಾ ಕಡೆಯಲ್ಲಿ ಶಪಥ ಮಾಡಿದ್ದಾರೆ ಎಂದರು. ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿದರು.

ಇದನ್ನೂ ಓದಿ: Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹನುಮಂತಪ್ಪ, ಮಾಜಿ ಸಂಸದ ಬಿ.ಎಸ್. ಚಂದ್ರಪ್ಪ, ಹನುಮಲಿ ಷಣ್ಮುಖಪ್ಪ, ಜಿಲ್ಲಾಧ್ಯಕ್ಷ ತಾಜಾಪೀರ್, ಜಿ.ಎಸ್. ಮಂಜುನಾಥ, ಎ. ಚಿತ್ತಪ್ಪ, ತಿರುಮಲಾಪುರದ ವಿಜಿಕುಮಾರ್, ಹಳೇಹಳ್ಳಿ ವೀರಭದ್ರಪ್ಪ, ಉಗಣೆ ಕಟ್ಟೆ ವೆಂಕಟೇಶ್, ಜಿ.ಪಂ. ಸದಸ್ಯರಾದ ಬಿ. ಗಂಗಾಧರ, ಡಿ.ಕೆ. ಶಿವಮೂರ್ತಿ, ಎಂ.ಜಿ. ಲೋಹಿತ್ ಕುಮಾರ್, ಎಸ್.ಜಿ. ರಂಗಸ್ವಾಮಿ, ನರಸಿಂಹಮೂರ್ತಿ, ಕೃಷ್ಣಮೂರ್ತಿ, ಪುರಸಭಾ ಸದಸ್ಯರಾದ ಸೈಯದ್ ಸಜೀಲ್, ಕೆ.ಸಿ. ರಮೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Karnataka Rain : ರಾಜ್ಯದಲ್ಲಿ ಮಳೆ ಅವಾಂತರವು (Rain news) ಮುಂದುವರಿದಿದೆ. ಭಾರಿ ಮಳೆಗೆ ಹಲವೆಡೆ ಮರಗಳು ಉರುಳಿದ್ದರೆ, ಬೆಳೆಗೆಳು ನೆಲಸಮವಾಗಿತ್ತು. ಇತ್ತ ವಿದ್ಯುತ್‌ ಸಂಪರ್ಕ ಇಲ್ಲದೆ ರೋಗಿಗಳಿಗೆ ವೈದ್ಯರು ಕತ್ತಲಲ್ಲೇ ಚಿಕಿತ್ಸೆ ಕೊಡುವಂತೆ ಆಯಿತು. ಮನೆಗಳಿಗೆ ಮಳೆ ನೀರಿನ ಜತಗೆ ಚರಂಡಿ ನೀರು ನುಗ್ಗಿತ್ತು.ರಸ್ತೆ ಎಲ್ಲವೂ ಕೆರೆಯಂತಾಗಿತ್ತು.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ವಿಜಯನಗರದಲ್ಲಿ ಕೊಚ್ಚಿ ಹೋದ ರೋಡ್‌

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿತ್ತು. ಇದರಿಂದಾಗಿ ಕೂಡ್ಲಿಗಿ ತಾಲೂಕಿನ ಯಂಬ್ಳಿ- ಆಲೂರು ಗ್ರಾಮಗಳ ಮಾರ್ಗ ರಸ್ತೆ ಸಂಪರ್ಕ ಕಟ್ ಆಗಿತ್ತು. ರಸ್ತೆ ಸಂಪರ್ಕ ಇಲ್ಲದೆ ವಾಹನ ಸವಾರರು ಪರದಾಡಬೇಕಾಯಿತು.

ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಲಾರಿ ಹಾಗೂ ಬಸ್

ಮಳೆಯಿಂದ ಜಲಾವೃತವಾದ ರಸ್ತೆಯಲ್ಲಿ ಸಂಚಾರಿಸಿದ ಪರಿಣಾಮ ಲಾರಿ- ಬಸ್ಸು ಕೆಸರಿನಲ್ಲಿ ಸಿಲುಕಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ನಡೆದಿದೆ. ಶಿರಾ- ಅಮರಾಪುರ ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದರಿಂದ ಬಿಡ್ಜ್ ಕಾಮಗಾರಿ ಬಳಿ‌ ರಸ್ತೆಯು ಜಲಾವೃತಗೊಂಡು ಸವಾರರು ಪರದಾಡುವಂತಾಗಿದೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ಗಾಳಿ- ಮಳೆ ರಭಸಕ್ಕೆ ಅಡಿಕೆ ಮರಗಳು ನೆಲಕ್ಕುರುಳಿದ್ದವು. ರೈತ ಪ್ರಕಾಶ್ ಎಂಬುವರಿಗೆ ಸೇರಿದ 12 ವರ್ಷದ ಹಳೇ ಅಡಿಕೆ ಮರಗಳು ಫಸಲಿಗೆ ಬಂದಿತ್ತು. ಇದೀಗ ಮಳೆಯಿಂದಾಗಿ ಅಂದಾಜು 2 ಲಕ್ಷ ರೂಪಾಯಿ ನಷ್ಟವಾಗಿದೆ.

ಮೈಸೂರಿನಲ್ಲಿ ಕೆರೆಯಂತಾದ ಜಮೀನುಗಳು

ಮೈಸೂರು ಜಿಲ್ಲೆಯಲ್ಲಿ ಮಳೆಯು ಮುಂದುವರಿದ್ದು, ಹುಣಸೂರು ತಾಲೂಕಿನ ಜಮೀನುಗಳಲ್ಲಿ ಜಲಾವೃತಗೊಂಡಿತ್ತು. ನೂರಾರು ಎಕರೆ ಬೆಳೆದ ಶುಂಠಿ, ತಂಬಾಕು ಬೆಳೆ ನಾಶವಾಗಿತ್ತು. ಗ್ರಾಮದ ಜಮೀನುಗಳು ಕೆರೆಗಳಂತಾಗಿತ್ತು. ಇತ್ತ ಬಿರುಗಾಳಿ ಮಳೆಗೆ ಮನೆ ಚಾವಣಿ, ಬ್ಯಾರನ್‌ ಹಾರಿಹೋಗಿತ್ತು. ಮೈಸೂರಿನ ಅತ್ತಿಕುಪ್ಪೆಯಲ್ಲಿ ಕೆರೆ ಕೋಡಿ ಒಡೆದು ಬೆಳೆ ನಾಶವಾಗಿತ್ತು. ಇದರಿಂದಾಗಿ ತೆಂಗಿನ ಸಸಿಗಳು ಕೊಚ್ಚಿಹೋಗಿದ್ದವು. ಹನಗೋಡು ಹೋಬಳಿ ಕಚುವಿನಹಳ್ಳಿ ಗ್ರಾಮದ ಜಯಮ್ಮ ಮತ್ತು ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಗೋಡೆ ಕುಸಿದಿತ್ತು. ಚಿಲ್ಕುಂದ ಗ್ರಾಮದಲ್ಲಿ ಬಿರುಗಾಳಿಗೆ ರಾಮಶೆಟ್ಟರ ಮನೆ ಚಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದೆ. ಇತ್ತ ಸುಜ್ಜಲೂರು ಗ್ರಾಮದಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿತ್ತು.

ಕೆರೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರು

ಮೈಸೂರು ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಕೆರೆ‌ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರುವೊಂದನ್ನು ಯುವಕರು ರಕ್ಷಿಸಿದ ಘಟನೆ ಪಿರಿಯಾಪಟ್ಟಣ ತಾಲೂಕು ತರಿಕಲ್ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ಗ್ರಾಮದ ಶಿವಣ್ಣ ಅವರ ಹಸುವಿನ ಕರುವನ್ನು ರಕ್ಷಣೆ ಮಾಡಲಾಗಿತ್ತು. ಬಾಲಗೆರೆ ತುಂಬಿ ಕೋಡಿ ಒಡೆದ ಪರಿಣಾಮ ಬೆಟ್ಟದಪುರ- ಕುಶಾಲನಗರ ರಸ್ತೆ ಮೇಲೆ ಮಂಡಿಯುದ್ದ‌ ನೀರು ನಿಂತಿತ್ತು. ಮಳೆ‌ ನೀರಿನಲ್ಲಿ ತಂಬಾಕು ಸಸಿಗಳು, ಗಿಡಕ್ಕೆ ಸಿಂಪಡಿಸಲು ತಂದಿದ್ದ ರಸಾಯನಿಕ ವಸ್ತುಗಳು ಹಾಳಾಗಿದ್ದವು.

ವಿಜಯನಗರದಲ್ಲಿ ನೆಲಸಮವಾದ ವೀಳ್ಯದೆಲೆ ಬಳ್ಳಿ

ಭಾರಿ ಮಳೆಗೆ ವೀಳ್ಯದೆಲೆ ಬಳ್ಳಿ ತೋಟ ನೆಲಸಮವಾಗಿತ್ತು. ವಿಜಯನಗರದ ಕೂಡ್ಲಿಗಿ ತಾಲೂಕಿನ ಎಚ್. ಮ್ಯಾಸರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಡಿಯುವ ಮಗನಂತೆ ಬೆಳೆದು ನಿಂತಿದ್ದ ಎಲೆಬಳ್ಳಿ ತೋಟ ನೆಲಕಚ್ಚಿತ್ತು. ಮಲ್ಲಮ್ಮ ಗಂಡ ಪೂಜಾರಿ ಮಾರಣ್ಣಗೆ ಸೇರಿದ ಒಂದು ಎಕರೆ ಎಲೆಬಳ್ಳಿ ತೋಟ ನೆಲಕ್ಕುರುಳಿದ್ದನ್ನು ಕಂಡು ಕಣ್ಣೀರುಇಟ್ಟರು.

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೊಡಗು ಜಿಲ್ಲೆಯ ಗುಮ್ಮನ ಕೊಲ್ಲಿ ಚೌಡೇಶ್ವರಿ ಬಡಾವಣೆಯ ತಗ್ಗು ಪ್ರದೇಶಕ್ಕೆ ಚರಂಡಿ ನೀರು ನುಗ್ಗಿತ್ತು. ಚರಂಡಿ ನೀರು ಉಕ್ಕಿ ರಸ್ತೆ ಮೇಲೆ ಹರಿದ ಪರಿಣಾಮ ಮನೆಯಂಗಳಕ್ಕೆ ನೀರು ನುಗ್ಗಿತ್ತು. ಪ್ರವಾಹದಂತೆ ರಸ್ತೆ ತುಂಬೆಲ್ಲ ನೀರು ನಿಂತಿತ್ತು. ಇತ್ತ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳು ಜಲದಿಗ್ಬಂಧನದಿಂದ ಓಡಾಡಲು ಪರದಾಡಬೇಕಾಯಿತು. ಇತ್ತ ಶಾಲಾ ಮಕ್ಕಳು ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿದ್ದರು.ಕಾಲೋನಿಯಲ್ಲಿ ಎಮರ್ಜೆನ್ಸಿ ಅಂದರೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
vegetable rates increase
ಪ್ರಮುಖ ಸುದ್ದಿ5 mins ago

Vegetable Rates: ತರಕಾರಿ ಮುಟ್ಟಿದರೆ ಶಾಕ್‌, ಕಿಲೋಗೆ 320 ದಾಟಿದ ಬೀನ್ಸ್!‌

Phalodi satta market
ದೇಶ6 mins ago

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Virat Kohli
ಕ್ರೀಡೆ7 mins ago

Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

vistara news impact medical negligence
ವಿಜಯನಗರ33 mins ago

Medical Negligence: ಅಮಾಯಕ ಬಾಲಕನ ಜೀವ ತೆಗೆದ ಆಸ್ಪತ್ರೆಗೆ ಬೀಗ!

Dinesh Karthik
ಕ್ರೀಡೆ46 mins ago

Dinesh Karthik: ಕೊಹ್ಲಿಯೊಂದಿಗೆ ಭಾವುಕ ಆಲಿಂಗನ; ಕ್ರಿಕೆಟ್​ ಜರ್ನಿ ಮುಗಿಸಿದ ದಿನೇಶ್​ ಕಾರ್ತಿಕ್​

Bangladesh MP Missing Case
ದೇಶ55 mins ago

Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Actor Dhananjay
ಸಿನಿಮಾ1 hour ago

Actor Dhananjay: ʻಕೋಟಿʼ ಸಿನಿಮಾದ ‘ಜನತಾ ಸಿಟಿ’ ಹಾಡು ಔಟ್‌

Hampi Tour
ಪ್ರವಾಸ1 hour ago

Hampi Tour: ಹಂಪಿ ಪ್ರವಾಸದ ವೇಳೆ ಈ 10 ಸ್ಥಳಗಳಲ್ಲಿ ರಾಮಾಯಣದ ಕುರುಹುಗಳನ್ನು ಹುಡುಕಿ!

road rage bangalore
ಕ್ರೈಂ1 hour ago

Road Rage: ರಾಜಧಾನಿಯಲ್ಲಿ ಹೆಚ್ಚುತ್ತಿದೆ ರೋಡ್‌ ರೇಜ್‌, ಮತ್ತೊಂದು ಹಲ್ಲೆ

Viral Video
ವೈರಲ್ ನ್ಯೂಸ್1 hour ago

Viral Video: ಛೇ…ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಥಳಿಸಿ ದಲಿತ ಯುವಕನ ಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ4 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌