Karnataka Politics : ಅನುದಾನ ವಾಪಸ್‌ ಪಡೆದ ಸರ್ಕಾರದ ವಿರುದ್ಧ ಮುನಿರತ್ನ ಧರಣಿ; ಬಿಎಸ್‌ವೈ ಸಾಥ್ - Vistara News

ಕರ್ನಾಟಕ

Karnataka Politics : ಅನುದಾನ ವಾಪಸ್‌ ಪಡೆದ ಸರ್ಕಾರದ ವಿರುದ್ಧ ಮುನಿರತ್ನ ಧರಣಿ; ಬಿಎಸ್‌ವೈ ಸಾಥ್

Karnataka Politics : ಆರ್‌ ಆರ್‌ ನಗರ ಕ್ಷೇತ್ರದ ಅನುದಾನ ವಾಪಸ್‌ ಪಡೆದಿರುವ ಬಗ್ಗೆ ಡಿ.ಕೆ. ಸಹೋದರರ ವಿರುದ್ಧ ಶಾಸಕ ಮುನಿರತ್ನ ಧರಣಿ ನಡೆಸಿದ್ದಾರೆ. ಕೂಡಲೇ ಅಭಿವೃದ್ಧಿಗೆ ಹಣ ನೀಡಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

muniratna protest infront of vidhanasoudha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರಕ್ಕೆ (RR Nagar Assembly Constituency) ಬಿಜೆಪಿ ಸರ್ಕಾರ ನೀಡಿದ್ದ ಅನುದಾನವನ್ನು ವಾಪಸ್‌ ತೆಗೆದುಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಆ ಕ್ಷೇತ್ರದ ಶಾಸಕ ಮುನಿರತ್ನ (MLA Munirathna) ಅವರು ಬುಧವಾರ (ಅಕ್ಟೋಬರ್‌ 11) ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಯನ್ನು ಆರಂಭಿಸಿದ್ದಾರೆ. ಮೌನ ಪ್ರತಿಭಟನೆಯನ್ನು (Silent protest) ಮುಂದುವರಿಸಿದ್ದಾರೆ. ಇವರಿಗೆ ಈಗ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ (Former CM BS Yediyurappa) ಆಗಮಿಸಿ ಸಾಥ್‌ ನೀಡಿದ್ದು, ಮುನಿರತ್ನ ಬೆಂಬಲಕ್ಕೆ ನಿಂತಿದ್ದಾರೆ. ಇದೀಗ ರಾಜ್ಯ ರಾಜಕೀಯದಲ್ಲಿ (Karnataka Politics) ದ್ವೇಷದ ರಾಜಕಾರಣವನ್ನು (Hate politics) ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ ಎಂಬ ಆರೋಪವನ್ನೂ ಮಾಡಲಾಗುತ್ತಿದೆ.

ಈ ಹಿಂದೆ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ನೀಡಿದ್ದ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಬಿಜೆಪಿ ಶಾಸಕರ ಕ್ಷೇತ್ರದಿಂದ ಅನುದಾನವನ್ನು ವಾಪಸ್‌ ಪಡೆದಿರುವ ಸರ್ಕಾರ ತಮ್ಮದೇ ಪಕ್ಷದ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ (Constituency of Congress MLAs) ವರ್ಗಾಯಿಸಿದೆ. ಇದೇ ವೇಳೆ ಆರ್.ಆರ್. ನಗರಕ್ಕೆ ನೀಡಲಾಗಿದ್ದ 126 ಕೋಟಿ ರೂಪಾಯಿ ಅನುದಾನವನ್ನೂ ವಾಪಸ್ ಪಡೆದು ಆದೇಶವನ್ನು ಹೊರಡಿಸಲಾಗಿರುವುದನ್ನು ಶಾಸಕ ಮುನಿರತ್ನ ತೀವ್ರವಾಗಿ ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬುಧವಾರ ಸರ್ಕಾರದ ವಿರುದ್ಧ ಏಕಾಂಗಿ ಹೋರಾಟಕ್ಕೆ ಮುಂದಾಗಿದ್ದಾರೆ.‌

muniratna protest infront of vidhanasoudha

ಇದನ್ನೂ ಓದಿ: Karnataka Weather : ಬೆಂಗಳೂರಿನಲ್ಲಿ ಭರ್ಜರಿ ಮಳೆ; ದಕ್ಷಿಣ ಒಳನಾಡು, ಕರಾವಳಿಯಲ್ಲಿ ಸಾಧಾರಣ ಪ್ರದರ್ಶನ

ಮಾಜಿ ಪಾಲಿಕೆ ಸದಸ್ಯ ಜಿ.ಕೆ. ವೆಂಕಟೇಶ್ ಜತೆಗೆ ಮುನಿರತ್ನ ಆಗಮಿಸಿದ್ದರು. ಬಂದ ತಕ್ಷಣವೇ ಗಾಂಧಿ ಪ್ರತಿಮೆಗೆ ಕೈ ಮುಗಿದ ಮುನಿರತ್ನ ಅವರು ಅಲ್ಲಿಯೇ ಎದುರು ಕುಳಿತು ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಚಲುವಾದಿ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಟ್ಟರೆ ಮುನಿರತ್ನ ಅವರ ಜತೆ ಬಿಜೆಪಿಯ ಯಾವ ದೊಡ್ಡ ಮಟ್ಟದ ನಾಯಕರು, ಬೆಂಗಳೂರು ಶಾಸಕರು ಸಹ ಕೈಜೋಡಿಸಿರಲಿಲ್ಲ. ಆದರೆ, ಸ್ವಲ್ಪ ಹೊತ್ತಿನ ತರುವಾಯ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಪ್ರತಿಭಟನೆಗೆ ಆಗಮಿಸಿ ಮುನಿರತ್ನ ಅವರ ಬೆನ್ನಿಗೆ ನಿಂತಿದ್ದಾರೆ.

ಮುನಿರತ್ನ ಅವರು ಬಿಜೆಪಿ ಬಾವುಟ ಹಿಡಿದು ಪ್ರತಿಭಟನೆ ನಡೆಸುತ್ತಿದ್ದರೆ, ಜೆಡಿಎಸ್‌ ಕಾರ್ಯಕರ್ತರು ಆ ಪಕ್ಷದ ಬಾವುಟ ಹಿಡಿದು ಆಕ್ರೋಶವನ್ನು ಹೊರಹಾಕಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ಅವರ ಫೋಟೊ ಇರುವ ಪ್ಲೆಕಾರ್ಡ್‌ಗಳನ್ನು ಹಿಡಿದುಕೊಂಡಿದ್ದು, “ಬೇಕೇ ಬೇಕು, ನ್ಯಾಯ ಬೇಕು”, “ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ನೀಡುವುದು ಬೇಡವೇ?”, “ಕೆರೆಕೋಡಿ ಅಂಡರ್‌ ಪಾಸ್‌ ನಿರ್ಮಾಣ ಬೇಡವೇ?”, 2024ರ ಚುನಾವಣೆಗೆ ರಾಜರಾಜೇಶ್ವರಿ ಕ್ಷೇತ್ರದ ಜನರ ಮತ ನಿಮಗೆ ಬೇಡವೇ?’ ಎಂದು ಪ್ರಶ್ನೆ ಮಾಡಿದ್ದಾರೆ.

ಏನಿದು ಗಲಾಟೆ?

ಆರ್. ಆರ್ ನಗರ ಸೇರಿದಂತೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಕಳೆದ ಅವಧಿಯಲ್ಲಿ ನೀಡಲಾಗಿದ್ದ ಅನುದಾನವನ್ನು ವಾಪಸ್ ಪಡೆದು 11 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 40 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ. ಇಲ್ಲಿ ಇನ್ನೊಂದು ಸ್ವಾರಸ್ಯಕರ ಸಂಗತಿಯೆಂದರೆ ಇವರಲ್ಲಿ ಬಿಜೆಪಿಯ ಶಾಸಕರೊಬ್ಬರ ಕ್ಷೇತ್ರವೂ ಸೇರಿದೆ. ಅಂದರೆ, ಯಶವಂತಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಸ್.ಟಿ. ಸೋಮಶೇಖರ್‌ ಅವರ ಕ್ಷೇತ್ರಕ್ಕೂ ಅನುದಾನವನ್ನು ನೀಡಲಾಗಿದೆ.

ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ 485 ಕೋಟಿ ರೂಪಾಯಿಗಳ ಅನುದಾನವನ್ನು ಕಾಂಗ್ರೆಸ್‌ ಸರ್ಕಾರ ಈಗ ವಾಪಸ್‌ ಪಡೆದಿದೆ. ವಾಪಸ್ ಪಡೆದು 11 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 40 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ. ಇದು ಈಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ಇದನ್ನೂ ಓದಿ: OPS News : ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಹಳೆ ಪಿಂಚಣಿ ಜಾರಿ ಬಗ್ಗೆ ಸಿಎಂ BIG Update

ಶಾಸಕರ ಹತ್ತಿಕ್ಕುವ ಕೆಲಸ ನಡೆಯುತ್ತಿದೆ

ಚಲುವಾದಿ ನಾರಾಯಣಸ್ವಾಮಿ ಮಾತನಾಡಿ, ಬಿಜೆಪಿ ಸರ್ಕಾರ ನೀಡಿದ್ದ ಅನುದಾನವನ್ನು ಕಾಂಗ್ರೆಸ್‌ನವರು ತಡೆದಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಸಹಿಸದೆ, ಬಿಡುಗಡೆ ಮಾಡಿದ್ದ ಅನುದಾನವನ್ನು ವಾಪಸ್‌ ಪಡೆದಿದ್ದಾರೆ. ನಮ್ಮ ಶಾಸಕರನ್ನು ಸೆಳೆಯುವ ಮತ್ತು ಒಪ್ಪಿದಿದ್ದಾಗ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಶಾಸಕ ಮುನಿರತ್ನ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಈ ರೀತಿ ನಡೆದುಕೊಂಡಿಲ್ಲ. ಡಿ.ಕೆ. ಸುರೇಶ್ ಸಂಸದರು ಸಹ ಆಗಿದ್ದಾರೆ. ಆದರೆ, ಕೈಜೋಡಿಸುವುದು ಬಿಟ್ಟು ಹಣ ದುರುಪಯೋಗ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

PSI Exam: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

VISTARANEWS.COM


on

Exam date announced for recruitment of 4000 posts including PSI exam
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ – Karnataka Examination Authority) ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೇಮಕಾತಿ ಪರೀಕ್ಷೆಗಳ (PSI Exam) ದಿನಾಂಕಗಳನ್ನು ಪ್ರಕಟಿಸಿದೆ. ಇಲ್ಲಿ ಆಯಾ ಇಲಾಖೆಗಳ ಪರೀಕ್ಷೆಯನ್ನು ಯಾವ ದಿನಾಂಕದಲ್ಲಿ ಮಾಡಲಾಗುವುದು ಎಂಬ ಮಾಹಿತಿಯನ್ನು ನೀಡಲಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

ಪಿಎಸ್ಐ) ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಹುದ್ದೆಗಳಿಗೆ ಸೇರಿದಂತೆ, ವಿವಿಧ ಇಲಾಖೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕವನ್ನು ‌ಪ್ರಕಟಿಸಲಾಗಿದೆ. ಪೋಲಿಸ್ ಇಲಾಖೆಯ 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಇಎ ತಿಳಿಸಿದೆ.

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಗುಡ್‌ನ್ಯೂಸ್‌. ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ (Job Alert).

ಹುದ್ದೆಗಳ ವಿವರ

ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ, ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್, ಇಪಿ ಡ್ರೈವ್
ಆಪರೇಷನ್‌ ಸ್ಪೆಷಲಿಸ್ಟ್‌, ಎಂಎಫ್‌ಜಿ ಇಯು ಡ್ರೈವ್, ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌, ಕಸ್ಟಮರ್ ಸರ್ವೀಸ್, ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ, ಎಸ್‌ಸಿಸಿಎಂ, ವಿಂಡೋಸ್ ಅಡ್ಮಿನ್, ಜಾವ ಡೆವಲಪರ್, ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್, ಬ್ಯಾಕಪ್ ಅಡ್ಮಿನ್, ಸ್ಟೋರೇಜ್ ಅಡ್ಮಿನ್, DevOps Admin, ಮಿಡಲ್‌ವೇರ್ ಅಡ್ಮಿನ್, ಓಪೆನ್‌ಶಿಫ್ಟ್‌ ಅಡ್ಮಿನ್, ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್, ಇಎಲ್‌ಕೆ ಅಡ್ಮಿನ್, ಸೆಕ್ಯೂರಿಟಿ ಎಸ್‌ಎಂಇ, ಟೀಮ್‌ ಸೆಂಟರ್, ಲಿನಕ್ಸ್‌ ಅಡ್ಮಿನ್,
ಮೆಕ್ಯಾನಿಕಲ್ ಡಿಸೈನ್, ಸರ್ವೀಸ್‌ನೌ ಡೆವಲಪರ್, ಓಪೆನ್‌ಸ್ಟಾಕ್‌ ಅಡ್ಮಿನ್, ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್, ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್, ಜಾವ ಫುಲ್‌ಸ್ಟಾಕ್ ಡೆವಲಪರ್ ಮುಂತಾಹ ಹುದ್ದೆಗಳು ಖಾಲಿ ಇವೆ.

ಗಮನಿಸಿ, ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
  • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.
Continue Reading

ಪ್ರಮುಖ ಸುದ್ದಿ

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

Udupi Gang War: ಉಡುಪಿಯಲ್ಲಿ ಗ್ಯಾಂಗ್ ವಾರ್ ದೃಶ್ಯಗಳು ವೈರಲ್ ಆದ ಬಳಿಕ ಸಾರ್ವಜನಿಕರು ಭಯಭೀತರಾಗಿದ್ದು, ಜನರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.

VISTARANEWS.COM


on

Udupi Gang War
Koo

ಉಡುಪಿ: ತಡರಾತ್ರಿ ವೇಳೆ ನಡೆದಿರುವ ಗ್ಯಾಂಗ್ ವಾರ್ (Udupi Gang War) ನಗರವನ್ನು ಬೆಚ್ಚಿಬೀಳಿಸಿದೆ. ಎರಡು ಕಾರುಗಳಲ್ಲಿ ಬಂದ ಯುವಕರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಎರಡು ತಂಡಗಳ 6 ಯುವಕರು ಪರಸ್ಪರ ಕಾರುಗಳಿಂದ ಡಿಕ್ಕಿ ಹೊಡೆದುಕೊಂಡು, ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 18 ರಂದು ತಡರಾತ್ರಿ ನಡೆದ ಘರ್ಷಣೆಯ ವಿಡಿಯೊ ಸದ್ಯ ವೈರಲ್ ಆಗಿದೆ. ಉಡುಪಿಯ ಶಾರದಾ ಕಲ್ಯಾಣ ಮಂಟಪಕ್ಕೆ ತೆರಳುವ ರಸ್ತೆಯ ಬಳಿ ಎರಡು ಕಾರುಗಳಲ್ಲಿ ಬಂದ ಯುವಕರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಒಂದು ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದ್ದು, ಈ ವೇಳೆ ಅಡ್ಡ ಬಂದ ತಂಡದ ಒಬ್ಬ ಸದಸ್ಯನಿಗೂ ಕಾರು ಗುದ್ದಿದೆ. ಕಾಪು ಮೂಲದ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಯುವಕರ ಮಾರಾಮಾರಿಯನ್ನು ಹತ್ತಿರದ ಕಟ್ಟಡ ಮೇಲಿಂದ ಸ್ಥಳೀಯರು ವಿಡಿಯೊ ಚಿತ್ರೀಕರಣ ಮಾಡಿದ್ದಾರೆ.

ಉಡುಪಿಯಲ್ಲಿ ಗ್ಯಾಂಗ್ ವಾರ್ ದೃಶ್ಯಗಳು ವೈರಲ್ ಆದ ಬಳಿಕ ಸಾರ್ವಜನಿಕರು ಭಯಭೀತರಾಗಿದ್ದು, ಜನರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.

ಇಬ್ಬರನ್ನು ಬಂಧಿಸಿದ ಉಡುಪಿ ಪೊಲೀಸರು

ಉಡುಪಿ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಕಾಪು ಮೂಲದ ಗರುಡ ಗ್ಯಾಂಗ್‌ನ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕಾಪು ಮೂಲದ ಆಶಿಕ್ ಮತ್ತು ಗುಜ್ಜರಬೆಟ್ಟು ಮೂಲದ ರಾಕೀಬ್ ಬಂಧಿತರು. ಕೃತ್ಯದಲ್ಲಿ ಭಾಗಿಯಾದ ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಪ್ರಕರಣದಲ್ಲಿ ಬಳಸಲಾದ ಎರಡು ಕಾರು, ಬೈಕ್, ತಲವಾರ್ ಮತ್ತು ಡ್ಯಾಗರ್ ವಶಕ್ಕೆ ಪಡೆಯಲಾಗಿದೆ. ವಿಡಿಯೊ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಉಡುಪಿ ಪೊಲೀಸರು, ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ | Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

ಒಂದೇ ಗ್ಯಾಂಗಿನ ಎರಡು ಗುಂಪುಗಳ ನಡುವೆ ಗಲಾಟೆ: ಪೊಲೀಸ್ ವರಿಷ್ಠಾಧಿಕಾರಿ

ಎರಡು ತಂಡಗಳ ನಡುವೆ ಮಾರಾಮಾರಿ ವಿಚಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಪ್ರತಿಕ್ರಿಯಿಸಿ, ಉಡುಪಿ ನಗರದಲ್ಲಿ ಪ್ರಕರಣ ನಡೆದಿದೆ. ಒಂದೇ ಗ್ಯಾಂಗಿನ ಎರಡು ಗುಂಪುಗಳು ಗಲಾಟೆ ಮಾಡಿಕೊಂಡಿವೆ. ಈ ದೃಶ್ಯಾವಳಿ ಈಗ ವೈರಲ್ ಆಗಿದೆ. ಮೇ 20ಕ್ಕೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಇಬ್ಬರು ಆರೋಪಿಗಳ ಬಂಧನವಾಗಿದೆ. ಸ್ವಿಫ್ಟ್ ಕಾರು, ದ್ವಿಚಕ್ರ ವಾಹನಗಳು, ಚಾಕು ತಲವಾರ್ ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ. ಪರಾರಿ ಆದವರನ್ನು ಶೀಘ್ರ ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್: ಬಿಜೆಪಿ ಟೀಕೆ

ಉಡುಪಿ ಗ್ಯಾಂಗ್‌ ವಾರ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಇದು ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ.

ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿದ್ದರಾಮಯ್ಯ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್ ಎಂದು ಟೀಕಿಸಿದೆ.

ಕ್ರಿಮಿನಲ್‌ಗಳಿಗೆ ಸರ್ಕಾರದ ಭಯವಿಲ್ಲದಂತಾಗಿದೆ: ಸುನೀಲ್‌ ಕುಮಾರ್

ಉಡುಪಿ ಗ್ಯಾಂಗ್‌ ವಾರ್‌ ಬಗ್ಗೆ ರಾಜ್ಯ ಸರ್ಕಾರವನ್ನು ಮಾಜಿ ಸಚಿವ ಸುನೀಲ್‌ ಕುಮಾರ್‌ ತರಾಟೆಗೆ ತೆಗೆದುಕೊಂಡಿದ್ದಾರೆ. ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್‌ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್‌ಗಳು ವಿಜೃಂಭಿಸುವಂತಾಗಿದೆ. ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ.

ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ.

  • ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ ?
  • ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ ?
  • ಕ್ರಿಮಿನಲ್ ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ ?
  • ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ ?
  • ಜನರ ಶಾಂತಿ- ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ ?
  • ಕ್ರಿಮಿನಲ್ ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ ?
  • ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟಾರ್ ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ ? ಸಣ್ಣ ಕಾರಣಕ್ಕೆ ಶಾಸಕರನ್ನು ಬಂಧಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಪ್ರಶ್ನಿಸಿದ್ದಾರೆ.
Continue Reading

ಬಾಗಲಕೋಟೆ

Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

Fake Intelligence Officer : ಊರಿನಲ್ಲಿ ಎಲ್ಲರೂ ತನಗೆ ಗೌರವ, ಮಾರ್ಯಾದೆ ಕೊಡಬೇಕೆಂದು ಯುವಕನೊರ್ವ ಇಂಟಲಿಜೆನ್ಸ್‌ ಬ್ಯೂರೋ ಅಧಿಕಾರಿಯ ವೇಷ ಧರಿಸಿ ಓಡಾಡುತ್ತಿದ್ದ. ಇದೀಗ ಬನಹಟ್ಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Fake Intelligence Bureau officer arrested
Koo

ಬಾಗಲಕೋಟೆ: ಊರಲ್ಲಿ ಗೌರವ ಸಿಗಬೇಕು, ನನ್ನ ನೋಡಿದರೆ ಒಂದು ಹವಾ ಇರಬೇಕೆಂದು ಯುವಕನೊರ್ವ ನಕಲಿ ಅಧಿಕಾರಿ ವೇಷ ಹಾಕಿ ಸಿಕ್ಕಿಬಿದ್ದಿದ್ದಾನೆ. ಸಂಗಮೇಶ್ ಲಕ್ಕಪ್ಪಗೋಳ (19) ಎಂಬಾತ ಇಂಟಲಿಜೆನ್ಸ್‌ ಬ್ಯೂರೋ (Fake Intelligence Officer) ಅಧಿಕಾರಿ ವೇಷ ಧರಿಸಿದವನು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿಯಲ್ಲಿ ಘಟನೆ ನಡೆದಿದೆ.

ಇಂಟಲಿಜೆನ್ಸ್ ಬ್ಯೂರೋದ ನಕಲಿ ಐಡಿ ಕಾರ್ಡ್, ಕ್ಯಾಪ್ ಹೊಂದಿದ್ದ ಸಂಗಮೇಶ್‌ ಬೈಕ್ ಮೇಲೂ ಐಬಿ ಲೋಗೋ ಹಾಕಿಕೊಂಡಿದ್ದ.‌ ಟಾಯ್ ಗನ್, ವಾಕಿಟಾಕಿ ಕೂಡಾ ಇಟ್ಟಕೊಂಡು ಪೋಸ್ ಕೊಡುತ್ತಿದ್ದ. ಸದ್ಯ ಆರೋಪಿ ಸಂಗಮೇಶನನ್ನು ಬನಹಟ್ಟಿ ಪೊಲೀಸರು ಬಂಧಿಸಿದ್ದಾರೆ.

ಹಿಪ್ಪರಗಿ ಗ್ರಾಮದ ಸಂಗಮೇಶ್ ಲಕ್ಕಪ್ಪಗೋಳ ಜತೆಗೆ ಇನ್ನೂ ಎಂಟು ಮಂದಿ ಯುವಕರು ಇದ್ದಾರೆ ಎನ್ನಲಾಗಿದೆ. ಸದ್ಯ ಸಂಗಮೇಶನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗೊಳಪಡಿಸಿದ್ದಾರೆ. ಇಂಟಲಿಜೆನ್ಸ್‌ ಬ್ಯೂರೋ ಹೆಸರಲಿನಲ್ಲಿ ಯಾರಿಗಾದರೂ ಮೋಸ ಮಾಡಿ, ಹಣ ಪಡೆದಿದ್ದನಾ ಎಂಬ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

Rave Party: ರೇವ್‌ ಪಾರ್ಟಿ ಆರೋಪಿಗೆ ಆಂಧ್ರ ಸಿಎಂ ಜಗನ್‌ ಜೊತೆ ಸ್ನೇಹ!

ಬೆಂಗಳೂರು: ಬೆಂಗಳೂರು ಗ್ರಾಮಾಂತರದ (Bangalore rural) ಎಲೆಕ್ಟ್ರಾನಿಕ್‌ ಸಿಟಿ (Electronic city) ಬಳಿಯ ಹೆಬ್ಬಗೋಡಿಯಲ್ಲಿ ರೇವ್ ಪಾರ್ಟಿ (Rave Party) ನಡೆಸಿದ ಪ್ರಮುಖ ಆರೋಪಿಗಳಲ್ಲಿ ಒಬ್ಬನಿಗೆ ಆಂಧ್ರ ಪ್ರದೇಶದ (Andhra Pradesh) ಗಣ್ಯ ರಾಜಕಾರಣಿಗಳ ಜೊತೆಗೆ ಒಡನಾಟ ಇರುವುದು ಗೊತ್ತಾಗಿದೆ. ಈ ನಡುವೆ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸರನ್ನು ಸಸ್ಪೆಂಡ್‌ (police suspend) ಮಾಡಲಾಗಿದೆ.

ಹೆಬ್ಬಗೋಡಿಯ ಜಿಆರ್ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣದ ಎ2 ಆರೋಪಿ ಅರುಣ್ ಕುಮಾರ್ ಎಂಬಾತನಿಗೆ ಆಂಧ್ರ ಪ್ರದೇಶದ ಪ್ರಭಾವಿ ರಾಜಕಾರಣಿಗಳ ಜೊತೆ ಆತ್ಮೀಯ ನಂಟಿರುವುದು ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ (YS Jagan Mohan Reddy) ರೆಡ್ಡಿ ಜೊತೆಗೆ ಆತ್ಮೀಯ ಒಡನಾಟ ಹೊಂದಿರುವ ಫೋಟೋಗಳನ್ನು ಆರೋಪಿ ಅರುಣ್‌ ಕುಮಾರ್‌ ಇಟ್ಟುಕೊಂಡು ಓಡಾಡುತ್ತಿರುವುದು ಬೆಳಕಿಗೆ ಬಂದಿದೆ.

ವೈಎಸ್‌ಆರ್‌ಪಿ ಪಾರ್ಟಿಯ ಮುಖಂಡರ ಜೊತೆ ಅರುಣ್‌ ಗುರುತಿಸಿಕೊಂಡಿದ್ದಾನೆ. ಈತ ಬೆಂಗಳೂರಿನಲ್ಲಿ ಕೋರಮಂಗಲದಲ್ಲಿ ಐಷಾರಾಮಿ ಫ್ಲಾಟ್‌ನಲ್ಲಿ ಉಳಿದುಕೊಂಡು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಾನೆ. ರೇವ್‌ ಪಾರ್ಟಿಯ ಪ್ರಮುಖ ಆರೋಪಿ ವಾಸು ಜೊತೆ ಈತನ ಗೆಳೆತನವಿದ್ದು, ಪಾರ್ಟಿಯಲ್ಲಿ ಭಾಗಿಯಾಗಿದ್ದ. ವಾಸು ಜೊತೆ ಅರುಣ್ ಕೂಡಾ ಸೇರಿ ಪಾರ್ಟಿ ಆಯೋಜನೆ ಮಾಡಿರುವ ಬಗ್ಗೆ ತನಿಖೆ ನಡೆಯುತ್ತಿದೆ.

ಮೂವರು ಪೊಲೀಸರ ತಲೆದಂಡ

ಈ ನಡುವೆ, ರೇವ್ ಪಾರ್ಟಿ ನಡೆಯುತ್ತಿರುವುದರ ಬಗ್ಗೆ ಕ್ರಮ ಕೈಗೊಳ್ಳದ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸರ ತಲೆದಂಡವಾಗಿದೆ. ಹೆಬ್ಬಗೋಡಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ರೇವ್ ಪಾರ್ಟಿ ನಡೆದಿತ್ತು. ಈ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಠಾಣೆಯ ಬಿ. ಗಿರೀಶ್, ಎಎಸ್ಐ ನಾರಾಯಣ ಸ್ವಾಮಿ ಮತ್ತು ಬೀಟ್ ಕಾನ್ಸ್‌ಟೇಬಲ್ ದೇವರಾಜು ಅಮಾನತಾದವರು. ಕರ್ತವ್ಯ ಲೋಪ ಹಿನ್ನೆಲೆ ಮೂವರನ್ನು ಅಮಾನತುಗೊಳಿಸಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ನೀಡಿದ್ದಾರೆ.

ಡಿವೈಎಸ್ಪಿ ಮೋಹನ್ ಹಾಗೂ ಇನ್ಸ್‌ಪೆಕ್ಟರ್ ಐ.ಎನ್ ರೆಡ್ಡಿಗೆ ಚಾರ್ಜ್ ಮೆಮೋ ನೀಡಲಾಗಿದೆ. ಇಷ್ಟೆಲ್ಲ ಆದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ, ಇದಕ್ಕೆ ಕಾರಣ ನೀಡಿ ಎಂದು ಚಾರ್ಜ್ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮೆಮೋ ನೀಡಿದ್ದಾರೆ. ಇಡೀ ದಿನ ರೇವ್ ಪಾರ್ಟಿ ನಡೆದರೂ ಸಂಬಂಧ ಪಟ್ಟ ಪೋಲೀಸರ ಗಮಕ್ಕಿರಲಿಲ್ಲವೇ, ಸಿಸಿಬಿ ಪೋಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೋಲೀಸರಿಗೆ ಯಾಕೆ ಇರಲಿಲ್ಲ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.

ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

ರೇವ್‌ ಪಾರ್ಟಿಯಲ್ಲಿ ತೆಲುಗು ನಟಿಯರಾದ ಹೇಮಾ (Telugu actress Hema) ಹಾಗೂ ಆಶಿ ರಾಯ್ (Aashi Roy) ಒಳಗೊಂಡಂತೆ 103 ಮಂದಿ ಭಾಗಿಯಾಗಿದ್ದರು. ಇಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಷ್ಟೂ ಮಂದಿಯನ್ನು ತಪಾಸಣೆಗೊಳಪಡಿಸಲಾಗಿತ್ತು. ಈಗ ವೈದ್ಯಕೀಯ ವರದಿ ಬಂದಿದ್ದು, ಅವರಲ್ಲಿ 86 ಮಂದಿಯ ರಿಪೋರ್ಟ್ ಪಾಸಿಟಿವ್ ಬಂದಿದೆ. ನಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ.

ವಾಸು ಎಂಬಾತನ ಬರ್ತ್‌ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.

Sunset To Sun Rise victory ಶೀರ್ಷಿಕೆಯಲ್ಲಿ ಈ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಸುಮಾರು ನೂರೈವತ್ತು ಮಂದಿ ಸೇರಿದ್ದರು. ಪೊಲೀಸ್‌ ದಾಳಿ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದರು. ಆದರೆ, ಬಹುತೇಕ ಮಂದಿ ಸಿಕ್ಕಿಬಿದ್ದಿದ್ದರು. ಈಗ ಸಿಕ್ಕಿಬಿದ್ದವರಲ್ಲಿ ಬಹುತೇಕರ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಪಾಸಿಟಿವ್ ಅಂಶ ಪತ್ತೆಯಾಗಿದೆ. ಹೀಗಾಗಿ ಪಾಸಿಟಿವ್‌ ರಿಪೋರ್ಟ್‌ ಬಂದವರಿಗೆ ಸಿಸಿಬಿ ನೋಟಿಸ್ ನೀಡಲಿದ್ದು, ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ

CM Siddaramaiah: ರೇಪ್‌ಗಿಂತ ವಿಡಿಯೊ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನುನಿಲ್ಲಿದೆ ಹೇಳಿ? ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದಾರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ? ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಲಿ. ಹಾಗಂತ ನಾನು ವಿಡಿಯೊ ವಿತರಣೆಯನ್ನು ಸಮರ್ಥನೆ ಮಾಡುತ್ತಿಲ್ಲ . ಆದರೆ, ರೇಪ್‌ಗಿಂತ ವಿಡಿಯೊ ಹಂಚಿದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

VISTARANEWS.COM


on

foolish to link Rakesh death to Prajwal case says CM Siddaramaiah
Koo

ಮೈಸೂರು: ನನ್ನ ಮಗ ರಾಕೇಶ್‌ (Rakesh Siddaramaiah) ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಬೇರೆ ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್‌ ವಿಚಾರಕ್ಕೂ ಏನು ಸಂಬಂಧ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದಿಂದ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವ ಜೈಶಂಕರ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು‌ 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ರಿಪ್ಲೈ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ, ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ? ಸುಮ್ಮನೆ ಕಾಲ ಕಳೆಯುವುದನ್ನು ಬಿಡಬೇಕು ಎಂದು ಹೇಳಿದರು.

ರೇಪ್‌ಗಿಂತ ಅದರ ವಿಡಿಯೊನ ಹಂಚಿದ್ದು ದೊಡ್ಡ ಅಪರಾಧ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ರೇಪ್‌ಗಿಂತ ವಿಡಿಯೊ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನುನಿಲ್ಲಿದೆ ಹೇಳಿ? ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದಾರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ? ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಲಿ. ಹಾಗಂತ ನಾನು ವಿಡಿಯೊ ವಿತರಣೆಯನ್ನು ಸಮರ್ಥನೆ ಮಾಡುತ್ತಿಲ್ಲ . ಆದರೆ, ರೇಪ್‌ಗಿಂತ ವಿಡಿಯೊ ಹಂಚಿದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಚನ್ನಗಿರಿ ಕೇಸ್‌ ಲಾಕಪ್‌ ಡೆತ್‌ ಅಲ್ಲ

ದಾವಣಗೆರೆಯ ಚನ್ನಗಿರಿ ಯುವಕನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಮೃತಪಟ್ಟಿದ್ದಾನೆ. ಆದರೆ, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆದೇಶ ಮಾಡಿದ್ದೇನೆ. ಆದರೆ, ಈ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನು ಸ್ಪಷ್ಟ ಪಡಿಸುತ್ತೇನೆ ಎಂದು ತಿಳಿಸಿದರು.

ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದವರಿಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣವನ್ನು (Prajwal Revanna Case) ಜೀವಂತವಾಗಿ ಇಡಬೇಕು ಎಂಬುದನ್ನು ಹೊರತುಪಡಿಸಿದರೆ, ಇದರಲ್ಲಿನ ಸತ್ಯಾಂಶ ಮತ್ತು ವಾಸ್ತವಾಂಶವನ್ನು ಹೊರತರಬೇಕು ಎಂಬುದು ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಯಾರಿಗೂ ಆಸಕ್ತಿ ಇಲ್ಲ. ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡರನ್ನೇ (Devarajegowda) ಮುಖ್ಯಮಂತ್ರಿಗಳು ಪ್ರಶ್ನೆ ಮಾಡುತ್ತಾರೆ. ಹಾಗಾಗಿ ನಾನು ಸಹ ಸಿಎಂಗೆ ಒಂದು ಪ್ರಶ್ನೆ ಕೇಳುತ್ತೇನೆ. ಸಿದ್ದರಾಮಯ್ಯ ಅವರೇ ನಿಮ್ಮ ಮಗ ರಾಕೇಶ್‌ ವಿದೇಶಕ್ಕೆ ಹೋದಾಗ ದುರ್ಘಟನೆ ನಡೆಯಿತಲ್ಲವೇ? ಅಲ್ಲಿ ಯಾವ ಕಾರ್ಯಕ್ರಮಕ್ಕೆ ಹೋಗಿದ್ದರು? ಹಾಗೆ ಹೋಗಲು ನಿಮ್ಮ ಅನುಮತಿಯನ್ನು ಪಡೆದುಕೊಂಡಿದ್ದರಾ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಮೊಮ್ಮಗ ಪ್ರಜ್ವಲ್‌ ರೇವಣ್ಣ ವಾಪಸ್‌ ಬರುವಂತೆ ಏಕೆ ಪತ್ರ ಬರೆದರು? ಎಂಬ ಬಗ್ಗೆಯೂ ಎಚ್‌ಡಿಕೆ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ರಾಕೇಶ್‌ ವಿದೇಶಕ್ಕೆ ಹೋಗಿದ್ದಾಗ ನಿಮ್ಮ ಮಗನ ಜತೆಗೆ ಯಾರು? ಎಷ್ಟು ಜನ ಇದ್ದರು? ಅಲ್ಲಿ ನಡೆದಿದ್ದಂತಹ ಘಟನೆ ಬಗ್ಗೆ ತನಿಖೆಯನ್ನು ಏಕೆ ಮಾಡಲಿಲ್ಲ. ಆ ವಿಷಯವನ್ನು ಏಕೆ ಮುಚ್ಚಿಟ್ಟಿರಿ? ಹಾಗಿದ್ದರೆ ನೀವೇ ಅನುಮತಿಯನ್ನು ಕೊಟ್ಟಿದ್ದೀರಾ? ಬೆಳೆದಂತಹ ಮಕ್ಕಳು ಪ್ರತಿಯೊಂದು ವಿಚಾರವನ್ನು ತಂದೆ – ತಾಯಿಯನ್ನು ಕೇಳಿ ಮಾಡುತ್ತಾರಾ? ಎಂದು ಪ್ರಶ್ನೆ ಮಾಡಿದರು.

ದೇವೇಗೌಡರು ಪತ್ರ ಬರೆದಿದ್ದು ಯಾಕೆ?

ರಾಜತಾಂತ್ರಿಕ ಪಾಸ್‌ ಪೋರ್ಟ್ ಬಗ್ಗೆ ಹೇಳುತ್ತೀರಲ್ಲವಾ? ಅದರ ಕಾನೂನು ಗೊತ್ತಾ ನಿಮಗೆ? ಈಗ ಪ್ರಜ್ವಲ್‌ನನ್ನು ಕರೆದುಕೊಂಡು ಬರುವುದಕ್ಕೆ ಪತ್ರ ಬರೆದಿದ್ದೀರಲ್ಲವೇ? ಅದು ಸದ್ಯಕ್ಕೆ ಏನೂ ಆಗಲ್ಲ. ಆದರೆ, ಈ ಪ್ರೊಸೆಸ್‌ ಸಾಕಷ್ಟು ದಿನ ಹಿಡಿಯುತ್ತದೆ ಎಂದೇ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ಮೂಲಕ ಪತ್ರ ಬರೆದು ಕರೆಸುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೆಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಎಷ್ಟು ವರ್ಷ ಅವರ ಜತೆ ಕೆಲಸ ಮಾಡಿದ್ದಾರಾ? ಅವರ ಯಾವ ಮಟ್ಟದಲ್ಲಿ ರಾಜಕಾರಣ ಮಾಡಿದ್ದಾರೆ ಅಂತ ಅನುಭವ ಇಲ್ವಾ? ನಿಮ್ಮ ಕುಟುಂಬದಲ್ಲಿ ನಡೆದಿರುವುದು ಏನು? ವಿದೇಶಕ್ಕೆ ನಿಮ್ಮ ಮಗನನ್ನು ನೀವೆ ಕಳಿಸಿದ್ದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸುವ ವಿಚಾರಕ್ಕೆ ನಾನೂ ಮನವಿ ಮಾಡಿದ್ದೇನೆ. ಜತೆಗೆ ಎಚ್.ಡಿ. ದೇವೇಗೌಡರು ಸಹ ಮನವಿ ಮಾಡಿದ್ದಾರೆ. ಅದನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತಾರೆ ಎಂಬುದರ ಬಗ್ಗೆ ನಿಮ್ಮಷ್ಟೇ ನಾನು ಸಹ ಕುತೂಹಲ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪೆನ್‌ಡ್ರೈವ್‌ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ?

ಹಾಸನದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವುಳ್ಳ ಪೆನ್ ಡ್ರೈವ್ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನು ಹೊರತುಪಡಿಸಿ ಬೇರೆ ಏನು ಮಾಡಲಾಗುತ್ತಿದೆ? ಪೆನ್‌ಡ್ರೈವ್‌ ಅನ್ನು ಮಾರುಕಟ್ಟೆ ಬಿಟ್ಟ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ? ವಿಚಾರಣೆ ನಡೆಯುವಾಗ ಯಾರದ್ದೇ ತಪ್ಪು ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂಬುದಾಗಿ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗ ಪೆನ್‌ಡ್ರೈವ್‌ ವಿತರಣೆ ಮಾಡಿರುವುದು ಅಪರಾಧ ಅಲ್ಲ ಎಂದು ಅವರೇ ಹೇಳುತ್ತಿದ್ದಾರೆ. ಆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್‌ ಮಾಡದೇ ಹೊರಗಡೆ ಬಿಟ್ಟಿದ್ದೀರಲ್ಲವೇ ಅವರಿಗೆ ಏನು ನ್ಯಾಯ ಕೊಡಿಸುತ್ತೀರಿ? ಸರ್ಕಾರದಿಂದ ಏನು ನ್ಯಾಯ ಕೊಡಲು ಸಾಧ್ಯ? ಇದನ್ನೆಲ್ಲ ಸರಿ ಮಾಡುತ್ತೀರಾ ನೀವು? ನಾಲ್ಕು ಗೋಡೆಗಳ ಮಧ್ಯೆ ನಡೆದದ್ದು ಬೇರೆ, ಆದರೆ ಇದನ್ನು ಬೀದಿಗೆ ತಂದಿದ್ದು ನೀವೆ ತಾನೇ? ಇದರಲ್ಲಿ ಏನು ಮಾಹಿತಿ ಸಿಕ್ಕಿತ್ತೋ ಅದನ್ನು ಇಟ್ಟುಕೊಂಡು ಸಂತ್ರಸ್ತೆಯ ಕುಟುಂಬಕ್ಕೆ ಸಮಸ್ಯೆ ಆಗದಂತೆ ವಿಚಾರಣೆ ನಡೆಸಬೇಕಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕಾರ್ತಿಕ್‌ಗೆ ಎಸ್‌ಐಟಿಯಲ್ಲಿ ರಾಜಾತಿತ್ಯ

ಮಾತು ಎತ್ತಿದ್ದರೆ ಅದೇನೋ ಹೊಸ ಹೆಸರಿಟ್ಟುಕೊಂಡಿದ್ದಾರೆ, ಬ್ರದರ್‌ ಸ್ವಾಮಿ ಅಂತೆ. ನಿಮ್ಮ ಯೋಗ್ಯತೆಗೆ ಇಷ್ಟು. ನಿಮಗೆ ಮಾನ, ಮರ್ಯಾದೆ ಇದ್ದರೆ? ನೀವು ಯಾವ ರೀತಿ ನಡೆದುಕೊಂಡು ಬಂದಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ನಿಮ್ಮ ಪಾರ್ಟಿ ಅಧ್ಯಕ್ಷ ಯಾವ ರೀತಿ ನಡೆದುಕೊಂಡು ಬಂದಿದ್ದಾರೆ ಅಂತ ಕಾಂಗ್ರೆಸ್ ಕಾರ್ಯಕರ್ತರನ್ನು ಕೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ಎಸ್‌ಐಟಿಯಲ್ಲಿ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ರಾಜಾತಿತ್ಯ ಸಿಗುತ್ತಿದೆ. ಎಲ್ಲಿದ್ದಾನೆ ಅವನು? ಮಾವನ ಮನೆಗೆ ಹೋದಂತೆ ಹೋಗಿ ಬರುತ್ತಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ವಿಧಾನಸೌಧದ ಒಳಗಡೆ ಕ್ಯಾಸೆಟ್ ಸರ್ಕ್ಯುಲೇಷನ್ ಮಾಡಿದವರು ಓಡಾಡಿಕೊಂಡು ಇದ್ದಾರೆ. ಏನು ತನಿಖೆ ನಡೆಸುತ್ತೀರಿ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

ಇದೊಂದು ಕಾಂಗ್ರೆಸ್ ಪಕ್ಷವಾ?

ತನಿಖೆಯ ದಾರಿ ತಪ್ಪಿಸುವ ಕೆಲಸವನ್ನು ನಾನು ಮಾಡಿದ್ದೇನಾ? ಇದೊಂದು ಕಾಂಗ್ರೆಸ್ ಪಕ್ಷವಾ? ಗೌರವ ಇದೆಯಾ? ಮಾನ, ಮರ್ಯಾದೆ ಇದೆಯಾ? ನಿಮ್ಮ ಡಿಸಿಎಂ ಡಿ.ಕೆ. ಶಿವಕುಮಾರ್, ಅದೇ ಸಿಡಿ ಶಿವು ಅವರು ಯಾಕಪ್ಪಾ ಶಿವರಾಮೇಗೌಡರ ಜತೆ ಮಾತನಾಡಿದರು? ಇವರದ್ದು ಹಸ್ತಕ್ಷೇಪ ಇಲ್ಲವೆಂದಾದರೆ ಏಕೆ ಮಾತನಾಡಬೇಕಿತ್ತು? ಇನ್ನೂ ಏನಾದರೂ ಸಾಕ್ಷಿ ಇದ್ದರೆ ಕೊಡು ಅಂತ ಕೇಳಿದ್ದು ಯಾಕೆ? ಬ್ರೋಕರ್‌, ತಲೆ ಹಿಡಿಯುವ ಕೆಲಸವನ್ನು ಮಾಡುತ್ತಿರುವವರು ಇವರು. ನನ್ನ ಬಗ್ಗೆ ಪಕ್ಷದಿಂದ ಟ್ವೀಟ್‌ ಮಾಡಿಸುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಿ? ಗೃಹ ಸಚಿವರೇ ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಿ. ನಿಮಗೆ ತಂದೆ – ತಾಯಿ ಜನ್ಮ ಕೊಟ್ಟು ಭೂಮಿಗೆ ಬಂದಿದ್ದೀರಿ. ಒಡಹುಟ್ಟಿದ ಅಕ್ಕ – ತಂಗಿಯರು ಇದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ

ಚನ್ನಗಿರಿಯ ಪ್ರಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತಾವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ. ಏಕೆಂದರೆ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಈ ಸರ್ಕಾರದವರು ಹಾಗೆ ಬಳಕೆ ಮಾಡಿಕೊಂಡಿದ್ದಾರೆ. ಅದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿತ ಕಂಡಿದೆ. ಇದು ಸರ್ಕಾರದ ಸ್ವಯಂ ಜವಾಬ್ದಾರಿಯಾಗಿದೆ. ಅವರೇ ಮಾಡಿಕೊಂಡ ಕೆಲಸ ಇದು. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

Continue Reading
Advertisement
lok sabha election 2024 voting dhoni
ಪ್ರಮುಖ ಸುದ್ದಿ14 mins ago

Lok Sabha Election 2024: ಮಧ್ಯಾಹ್ನ 1 ಗಂಟೆವರೆಗೆ 39.13% ಮತದಾನ, ಪ.ಬಂಗಾಳ ದಾಖಲೆ, ರಾಂಚಿಯಲ್ಲಿ ಧೋನಿ ವೋಟ್‌

SRH vs RR
ಕ್ರೀಡೆ26 mins ago

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

Exam date announced for recruitment of 4000 posts including PSI exam
ಉದ್ಯೋಗ41 mins ago

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

Udupi Gang War
ಪ್ರಮುಖ ಸುದ್ದಿ42 mins ago

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

google maps kerala river
ವೈರಲ್ ನ್ಯೂಸ್49 mins ago

Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು

Samarjit Lankesh Love you Samantha Song Teaser
ಸ್ಯಾಂಡಲ್ ವುಡ್50 mins ago

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Fake Intelligence Bureau officer arrested
ಬಾಗಲಕೋಟೆ55 mins ago

Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

Janhvi Kapoor views on Gandhi Ambedkar casteism
ಬಾಲಿವುಡ್59 mins ago

Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

Karan Johar announces new film on birthday
ಬಾಲಿವುಡ್1 hour ago

Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

foolish to link Rakesh death to Prajwal case says CM Siddaramaiah
ರಾಜಕೀಯ1 hour ago

CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌