IND vs AFG Live: ಭಾರತ ತಂಡಕ್ಕೆ ಅಫಘಾನಿಸ್ತಾನ ವಿರುದ್ಧ 8 ವಿಕೆಟ್ ಭರ್ಜರಿ ವಿಜಯ - Vistara News

ಕ್ರಿಕೆಟ್

IND vs AFG Live: ಭಾರತ ತಂಡಕ್ಕೆ ಅಫಘಾನಿಸ್ತಾನ ವಿರುದ್ಧ 8 ವಿಕೆಟ್ ಭರ್ಜರಿ ವಿಜಯ

ಭಾರತ ಮತ್ತು ಅಫಘಾನಿಸ್ತಾನ ತಂಡದ ನಡುವೆ ವಿಶ್ವಕಪ್​ನ 9ನೇ ಪಂದ್ಯ ನಡೆಯುತ್ತಿದ್ದು. ಈ ಪಂದ್ಯದ ಟಾಸ್​ ವಿವರ ಮತ್ತು ಪಂದ್ಯದ ಎಲ್ಲ ಲೈವ್​ ಅಪ್​ಡೇಟ್ಸ್​ ಇಲ್ಲಿದೆ.

VISTARANEWS.COM


on

INDvAFG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಮತ್ತು ಅಫಘಾನಿಸ್ತಾನ(India vs Afghanistan) ತಂಡದ ನಡುವೆ ವಿಶ್ವಕಪ್​ನ 9ನೇ ಪಂದ್ಯ ನಡೆಯುತ್ತಿದ್ದು. ಈ ಪಂದ್ಯದ ಟಾಸ್​ ವಿವರ ಮತ್ತು ಪಂದ್ಯದ ಎಲ್ಲ ಲೈವ್​ ಅಪ್​ಡೇಟ್ಸ್​ ಇಲ್ಲಿದೆ. ಹವಾಮಾನ ವರದಿಯ(Delhi Weather) ಪ್ರಕಾರ ಈ ಪಂದ್ಯಕ್ಕೆ ಯಾವುದೇ ಮಳೆಯ ಆತಂಕವಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

Jasprit Bumrah : ಫೈನಲ್​​ನಲ್ಲಿ ಹೆನ್ರಿಕ್ ಕ್ಲಾಸೆನ್ 27 ಎಸೆತಗಳಲ್ಲಿ 52 ರನ್ ಗಳಿಸಿದ್ದರಿಂದ ದಕ್ಷಿಣ ಆಫ್ರಿಕಾ ಗೆಲುವಿನತ್ತ ಸಾಗಿತ್ತು. ಬುಮ್ರಾ ತಮ್ಮ ಅತ್ಯುತ್ತಮ ಸ್ಪೆಲ್ ಅನ್ನು ಕಾರ್ಯಗತಗೊಳಿಸಿದರು. ಅವರು ತಮ್ಮ ನಾಲ್ಕು ಓವರ್ ಗಳಲ್ಲಿ ಕೇವಲ 18 ರನ್ ನೀಡಿ ಎರಡು ವಿಕೆಟ್ ಪಡೆದರು. ಕೊನೆಯ ಐದು ಓವರ್​ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ ಬಹುತೇಕ ಒಂದು ಎಸೆತಕ್ಕೆ ಒಂದು ರನ್​ ಅಗತ್ಯವಿತ್ತು. ವೇಗಿ ಎರಡು ಓವರ್​ಗಳನ್ನು ಎಸೆದು ಕ್ರಮವಾಗಿ ಒಂದು ಮತ್ತು ಆರು ರನ್​​ ನೀಡಿದರು

VISTARANEWS.COM


on

Jasprit Bumrah
Koo

ಬೆಂಗಳೂರು: ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29 ರಂದು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಭಾರತವು ಎರಡನೇ ಟಿ 20 ವಿಶ್ವಕಪ್ ಪ್ರಶಸ್ತಿ ಗೆದ್ದಿತು. ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸ್​ಪ್ರಿತ್ ಬುಮ್ರಾ (Jasprit Bumrah ) ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಭಾರತ ಗೆಲುವಿನಲ್ಲಿ ಬುಮ್ರಾ ಮುಂಚೂಣಿ ಸ್ಥಾನ ಪಡೆದಿದ್ದರು. ಆಗಾಗ ನಿರ್ಣಾಯಕ ಪ್ರಗತಿಯನ್ನು ಒದಗಿಸಿದ್ದರು. ಭಾರತದ ಸ್ಟಾರ್ ವೇಗಿ ಟಿ 20 ವಿಶ್ವಕಪ್ ಆವೃತ್ತಿಯಲ್ಲಿ ಯಾವುದೇ ಬೌಲರ್​​ಗೆ ಕಡಿಮೆ ಇಲ್ಲದ ಎಕಾನಮಿ ರೇಟ್ ಪ್ರದರ್ಶಿಸಿದರು. ಅವರು 8.26 ಸರಾಸರಿ ಮತ್ತು 4.17 ಎಕಾನಮಿ ರೇಟ್​​​ನಲ್ಲಿ 15 ವಿಕೆಟ್​ ಉರುಳಿಸಿ ಭಾರತದ ಗೆಲುವಿನ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಫೈನಲ್​​ನಲ್ಲಿ ಹೆನ್ರಿಕ್ ಕ್ಲಾಸೆನ್ 27 ಎಸೆತಗಳಲ್ಲಿ 52 ರನ್ ಗಳಿಸಿದ್ದರಿಂದ ದಕ್ಷಿಣ ಆಫ್ರಿಕಾ ಗೆಲುವಿನತ್ತ ಸಾಗಿತ್ತು. ಬುಮ್ರಾ ತಮ್ಮ ಅತ್ಯುತ್ತಮ ಸ್ಪೆಲ್ ಅನ್ನು ಕಾರ್ಯಗತಗೊಳಿಸಿದರು. ಅವರು ತಮ್ಮ ನಾಲ್ಕು ಓವರ್ ಗಳಲ್ಲಿ ಕೇವಲ 18 ರನ್ ನೀಡಿ ಎರಡು ವಿಕೆಟ್ ಪಡೆದರು. ಕೊನೆಯ ಐದು ಓವರ್​ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ ಬಹುತೇಕ ಒಂದು ಎಸೆತಕ್ಕೆ ಒಂದು ರನ್​ ಅಗತ್ಯವಿತ್ತು. ವೇಗಿ ಎರಡು ಓವರ್​ಗಳನ್ನು ಎಸೆದು ಕ್ರಮವಾಗಿ ಒಂದು ಮತ್ತು ಆರು ರನ್​​ ನೀಡಿದರು. ಈ ಸಾಧನೆಗಾಗಿ ಇಂಗ್ಲೆಂಡ್​​ನ ಮಾಜಿ ನಾಯಕ ಮೈಕಲ್ ವಾನ್ ಬುಮ್ರಾ ಅವರನ್ನು ಪಾಕಿಸ್ತಾನದ ಮಾಜಿ ಬೌಲರ್​ ವಾಸಿಂ ಅಕ್ರಮ್​ಗೆ ಸರಿಸಮಾನರು ಎಂದು ಹೊಗಳಿದ್ದಾರೆ.

ಇದನ್ನೂ ಓದಿ: Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

“ಅವರು ಉತ್ತಮ ಬೌಲರ್, ಅವರು ಎಲ್ಲಾ ವಿಭಿನ್ನ ಬ್ಯಾಟರ್​ಗಳ ವಿರುದ್ಧ ಬೌಲಿಂಗ್ ಮಾಡಲು ಯೋಜನೆ ಹೊಂದಿದ್ದಾರೆ. ಅದಕ್ಕಾಗಿ ಅವರು ಕೌಶಲ ಹೊಂದಿದ್ದಾರೆ. ಯಾವ ಎಸೆತವನ್ನು ಯಾವಾಗ ಎಸೆಯಬೇಕು ಎಂಬುದನ್ನು ತಿಳಿದುಕೊಂಡಿದ್ದಾರೆ. ನನ್ನ ಪ್ರಕಾರ ಉತ್ತಮ ಸೀಮ್ ಬೌಲರ್ ಎಂದು ಹೇಳುವುದಾದರೆ ಮಾಜಿ ಆಟಗಾರ ವಾಸಿಮ್ ಅಕ್ರಮ್ ವಿಶೇಷ. ಆದರೆ, ಅದಕ್ಕೆ ಸಮಾನಾಗಿದ್ದಾರೆ ಬುಮ್ರಾ. ಬುಮ್ರಾ ಅದ್ಭುತ ಆ್ಯಕ್ಷನ್ ಸಾಮರ್ಥ್ಯವನ್ನು ಹೊಂದಿದ್ದಾರೆ ಹಾಗೂ ವೇಗವನ್ನೂ ಹೊಂದಿದ್ದಾರೆ/ ಅವರು ಎಲ್ಲಾ ವಿಭಿನ್ನ ತಾಂತ್ರಿಕತೆಯನ್ನೂ ಹೊಂದಿದ್ದು ಎದುರಾಳಿಯನ್ನು ಒತ್ತಡದಲ್ಲಿ ಇಡುತ್ತಾರೆ. ಇದು ವಿಶ್ವಕಪ್​ನಲ್ಲಿ ಕೇವಲ ಎರಡು ಅಥವಾ ಮೂರು ಬಾರಿ ಅಲ್ಲ. ಇದು ಪ್ರತಿಯೊಂದು ಪಂದ್ಯದಲ್ಲೂ ಆಗಿದೆ “ಎಂದು ವಾನ್ ತಿಳಿಸಿದ್ದಾರೆ.

ನನ್ನದು ಪ್ರಾಮಾಣಿಕ ಅಭಿಪ್ರಾಯ : ವಾನ್

ಫೈನಲ್ ಪಂದ್ಯದಲ್ಲಿ ರೀಜಾ ಹೆಂಡ್ರಿಕ್ಸ್ ಅವರನ್ನು ಬೌಲ್ಡ್ ಮಾಡುವ ಮೂಲಕ ಭಾರತ ಪರ ಬೌಲಿಂಗ್ ದಾಳಿ ಪ್ರಾರಂಭಿಸಿದ ಬುಮ್ರಾ, ಪವರ್ ಪ್ಲೇನಲ್ಲಿ ವಿಶೇಷವಾಗಿ ಅತ್ಯುತ್ತಮವಾಗಿ ಅಡಿದ್ದರು. ಈ ಎಸೆತವನ್ನು ಪ್ರಸಾರಕರು ಪ್ರಸಾರ ಮಾಡದೇ ಇರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಮಾರ್ಕೊ ಜಾನ್ಸೆನ್ ಅವರನ್ನು ಔಟ್​ ಮಾಡಿದ್ದಂತೂ ಅದ್ಭುತ. ಹೀಗಾಗಿ ನನ್ನ ಪ್ರಾಮಾಣಿಕ ಅಭಿಪ್ರಾಯದ ಪ್ರಕಾರ ಬುಮ್ರಾ ಆಧುನಿಕ ಯುಗ ಬೆಸ್ಟ್​ ಬೌಲರ್​.

Continue Reading

ಪ್ರಮುಖ ಸುದ್ದಿ

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

Rohit Sharma: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ರೋಹಿತ್ ಶರ್ಮಾ ಚುಟುಕು ಕ್ರಿಕೆಟ್​ನಲ್ಲಿ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸಿದ ಮೆನ್ ಇನ್ ಬ್ಲೂ, 2007 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ಪ್ರಶಸ್ತಿಯನ್ನು ಗೆದ್ದ ನಂತರ ತಮ್ಮ ಎರಡನೇ ಟಿ 20 ವಿಶ್ವಕಪ್ ಅನ್ನು ಎತ್ತಿ ಹಿಡಿಯಿತು.

VISTARANEWS.COM


on

Rohit Sharma
Koo

ಬೆಂಗಳೂರು: 2024 ರ ಟಿ 20 ವಿಶ್ವಕಪ್ (T20 World Cup 2024) ಗೆಲುವಿನ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟಿ 20 ಯಿಂದ (T20 Cricket) ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಬಿಸಿಸಿಐ ಹೊಸ ನಾಯಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ನಡುವೆ ಅವರು ಆಘಾತಕಾರಿ ಹೇಳಿಕೆ ನೀಡಿದ್ದು ತಮಗೆ ನಾಯಕತ್ವಕ್ಕೆ ವಿದಾಯ ಹೇಳಲು ಮನಸ್ಸಿರಲಿಲ್ಲ ಎಂದಿದ್ದಾರೆ. ಪರಿಸ್ಥಿತಿ ನನಗೆ ಪೂರಕವಾಗಿರಲಿಲ್ಲ. ಹೀಗಾಗಿ ಅವರು ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ.

2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ರೋಹಿತ್ ಶರ್ಮಾ ಚುಟುಕು ಕ್ರಿಕೆಟ್​ನಲ್ಲಿ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸಿದ ಮೆನ್ ಇನ್ ಬ್ಲೂ, 2007 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ಪ್ರಶಸ್ತಿಯನ್ನು ಗೆದ್ದ ನಂತರ ತಮ್ಮ ಎರಡನೇ ಟಿ 20 ವಿಶ್ವಕಪ್ ಅನ್ನು ಎತ್ತಿ ಹಿಡಿಯಿತು.

2007 ರಿಂದ ಭಾರತೀಯ ಟಿ 20 ಐ ತಂಡದ ಭಾಗವಾಗಿರುವ ರೋಹಿತ್ ಶರ್ಮಾ, 2024 ರ ಟಿ 20 ವಿಶ್ವಕಪ್​ನಲ್ಲಿ ತಮ್ಮ ಎಲ್ಲ ಶ್ರಮವನ್ನು ಮೀಸಲಿಟ್ಟರು. ಭಾರತಕ್ಕೆ ಪ್ರಶಸ್ತಿ ಬರವನ್ನು ಕೊನೆಗೊಳಿಸುವಲ್ಲಿ ಅವರ ಎಲ್ಲಾ ಕಠಿಣ ಪರಿಶ್ರಮವು ಫಲ ನೀಡಿತು. 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದ ಭಾರತ ಬಳಿಕ ಐಸಿಸಿಯ ಪ್ರತಿಯೊಂದು ಟೂರ್ನಿಯಲ್ಲೂ ಸೋಲು ಕಂಡಿತ್ತು.

ಭಾರತವು ಪಂದ್ಯಾವಳಿಯನ್ನು ಗೆದ್ದಾಗ, ರೋಹಿತ್ ಶರ್ಮಾ ಅವರು ಟಿ 20 ಯಿಂದ ನಿವೃತ್ತರಾಗುವುದಾಗಿ ಘೋಷಿಸಿದರು. ಅವರ ಪ್ರಕಾರ ಟಿ20 ವೃತ್ತಿಜೀವನವನ್ನು ತೊರೆಯಲು ಮತ್ತು ಕೊನೆಗೊಳಿಸಲು ಇದು ಸರಿಯಾದ ಸಮಯ ಎಂದು ವಿವರಿಸಿದ್ದರು.

ನಾನು ಈ ಸ್ವರೂಪದಲ್ಲಿ ಆಡಲು ಪ್ರಾರಂಭಿಸಿದಾಗಿನಿಂದ ನಾನು ಸಾಕಷ್ಟು ಆನಂದಿಸಿದ್ದೇನೆ. ಈ ಸ್ವರೂಪಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ನಾನು ಇದರ ಪ್ರತಿ ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಬಯಸಿದ್ದು ಇದನ್ನೇ. ನಾನು ಕಪ್ ಗೆಲ್ಲಲು ಬಯಸಿದ್ದೆ ಎಂದು ಹೇಳಿದ್ದಾರೆ. ಅದರ ನಂತರ, ಅವರು ವರದಿಗಾರರೊಂದಿಗಿನ ಸಂವಾದದ ಸಮಯದಲ್ಲಿ, ರೋಹಿತ್ ಶರ್ಮಾ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಅವರು ನಿವೃತ್ತರಾಗಲು ಬಯಸಿರಲಿಲ್ಲ. ಆದರೆ ಪರಿಸ್ಥಿತಿಯು ಅವರನ್ನು ಒತ್ತಾಯ ಮಾಡಿತು ಎಂದು ಹೇಳಿದ್ದಾರೆ. ಆದಾಗ್ಯೂ, ವಿದಾಯ ಹೇಳಲು ಇದು ಸರಿಯಾದ ಸಮಯ ಎಂದು ಅವರು ಮತ್ತೊಮ್ಮೆ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

ನಾನು ಟಿ 20 ಪಂದ್ಯಗಳಿಂದ ನಿವೃತ್ತಿಯಾಗುತ್ತೇನೆ ಎಂದು ನಾನು ಭಾವಿಸಿರಲಿಲ್ಲ, ಆದರೆ ಪರಿಸ್ಥಿತಿ ಹೀಗಿತ್ತು. ಇದು ನನಗೆ ಪರಿಪೂರ್ಣ ಪರಿಸ್ಥಿತಿ ಎಂದು ನಾನು ಭಾವಿಸಿದೆ. ಕಪ್ ಗೆದ್ದು ವಿದಾಯ ಹೇಳುವುದಕ್ಕಿಂತ ಉತ್ತಮವಾದುದು ಯಾವುದೂ ಇಲ್ಲ, ಎಂದು ಹೇಳಿದರು.

ಟಿ20 ವಿಶ್ವಕಪ್ 2024: ರೋಹಿತ್ ಶರ್ಮಾ ಮುನ್ನಡೆ

2024ರ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ತಮ್ಮ ತಂಡದ ಅತ್ಯುತ್ತಮ ಬ್ಯಾಟರ್​ ಆಗಿದ್ದರು. ಅವರು ಮುಂಚೂಣಿಯಿಂದ ತಂಡವನ್ನು ಮುನ್ನಡೆಸಿದರು. ಪಂದ್ಯಾವಳಿಯಲ್ಲಿ ತಮ್ಮ ತಂಡವನ್ನು ಗೆಲುವಿನ ಮೊತ್ತಕ್ಕೆ ಕೊಂಡಯ್ದಿದ್ದಾರೆ. ಅವರು ಅಗ್ರಸ್ಥಾನದಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದರು.

ರೋಹಿತ್ ಶರ್ಮಾ 8 ಪಂದ್ಯಗಳಲ್ಲಿ 156.70 ಸ್ಟ್ರೈಕ್ ರೇಟ್ನೊಂದಿಗೆ 257 ರನ್ ಗಳಿಸಿದ್ದಾರೆ. ಅವರು ಪಂದ್ಯಾವಳಿಯಲ್ಲಿ ಮೂರು ಅರ್ಧಶತಕಗಳನ್ನು ಬಾರಿಸಿದರು. ಒಂದು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್​​ನಲ್ಲಿ ಬಂದಿದೆ. ನಾಯಕನಾಗಿಯೂ, ಅವರು ಬಹುತೇಕ ಪ್ರತಿಯೊಂದು ಅಂಶದಲ್ಲೂ ಯಶಸ್ವಿಯಾಗಿದ್ದಾರೆ.

ಒಟ್ಟಾರೆಯಾಗಿ ಟಿ 20 ಐನಲ್ಲಿ, ರೋಹಿತ್ ಶರ್ಮಾ ತಮ್ಮ ತಂಡಕ್ಕೆ ನಂಬಲಾಗದ ಸಾಧನೆ ಮಾಡಿದ್ದಾರೆ. ಅವರು 4231 ರನ್​ಗಳೊಂದಿಗೆ ಸಾರ್ವಕಾಲಿಕ ಪ್ರಮುಖ ರನ್ ಸ್ಕೋರರ್ ಆಗಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದರೆ. ನಾಯಕ ಐದು ಶತಕಗಳನ್ನು ಗಳಿಸಿದ್ದಾರೆ. ಇದು ಟಿ20 ಐ ಕ್ರಿಕೆಟ್​​ನಲ್ಲಿ ಮುಂಚೂಣಿ ಸಾಧನೆ.

Continue Reading

ಕ್ರೀಡೆ

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Team India Captain: ರೋಹಿತ್ ನಿವೃತ್ತಿಯ ಬಳಿಕ ಅವರ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಚುಟುಕು ಮಾದರಿಯಲ್ಲಿ ಅಬ್ಬರದ ಪ್ರದರ್ಶನ ನೀಡುವ ಜತೆಗೆ ತಂಡದ ಮುಂದಾಳತ್ವ ವಹಿಸಲು ಯಾರು ಸಮರ್ಥರು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ತಂಡದಲ್ಲಿ ಹಿರಿಯ ಆಟಗಾರರ ಸಂಖ್ಯೆ ಕಡಿಮೆ ಇರುವ ಕಾರಣ ಇರುವವರಲ್ಲೇ ಇವರಾಗಬಹುದು ಎಂಬ ಊಹಾಪೋಗಳು ಹೆಚ್ಚಾಗಿದೆ. ಹೀಗಾಗಿ ಯಾರಿಗೆ ಹೆಚ್ಚಿನ ಅವಕಾಶ ಇದೆ ಎಂಬುದನ್ನು ನೋಡೋಣ.

VISTARANEWS.COM


on

Team India Captain
Koo

ಬೆಂಗಳೂರು : 2024 ರ ಟಿ 20 ವಿಶ್ವಕಪ್ ಚಾಂಪಿಯನ್​ ಪಟ್ಟ ಲಭಿಸಿದ ತಕ್ಷಣ ನಾಯಕ ರೋಹಿತ್ ಶರ್ಮಾ (Rohit Sharma) ಶನಿವಾರ ಟಿ20 ಐ ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಆಟದ ಕಿರು ಸ್ವರೂಪದಲ್ಲಿ ರಾಷ್ಟ್ರೀಯ ತಂಡದ ನಾಯಕತ್ವವು (Team India Captain) ಸ್ಥಾನ ಖಾಲಿ ಬಿದ್ದಿದೆ. 20 ಓವರ್​ಗಳ ಸ್ವರೂಪದಲ್ಲಿ 62 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ರೋಹಿತ್​ ಮೊದಲ ಪ್ರಶಸ್ತಿ ಗೆದ್ದ ತಕ್ಷಣ ಟಿ20 ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಬಾರ್ಬಡೋಸ್​​ನಲ್ಲಿ ನಡೆದ ಫೈನಲ್​ನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಕ್ಷಣದಲ್ಲಿಯೇ ಅವರು ನಿರ್ಧಾರ ತೆಗೆದುಕೊಂಡರು. ಇವರ ಜತೆಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಟಿ 20 ಪಂದ್ಯಗಳಲ್ಲಿ ನಿವೃತ್ತಿ ಘೋಷಿಸಿದ್ದರು. ಈ ಎರಡು ಬ್ಯಾಟಿಂಗ್ ದಿಗ್ಗಜರು ಇನ್ನು ಮುಂದೆ ಲಭ್ಯರಿಲ್ಲದ ಕಾರಣ ಭಾರತೀಯ ಕ್ರಿಕೆಟ್​​ ಹೊಸ ಯುಗ ಆರಂಭಿಸಬೇಕಾಗಿದೆ.

ರೋಹಿತ್ ನಿವೃತ್ತಿಯ ಬಳಿಕ ಅವರ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಚುಟುಕು ಮಾದರಿಯಲ್ಲಿ ಅಬ್ಬರದ ಪ್ರದರ್ಶನ ನೀಡುವ ಜತೆಗೆ ತಂಡದ ಮುಂದಾಳತ್ವ ವಹಿಸಲು ಯಾರು ಸಮರ್ಥರು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ತಂಡದಲ್ಲಿ ಹಿರಿಯ ಆಟಗಾರರ ಸಂಖ್ಯೆ ಕಡಿಮೆ ಇರುವ ಕಾರಣ ಇರುವವರಲ್ಲೇ ಇವರಾಗಬಹುದು ಎಂಬ ಊಹಾಪೋಗಳು ಹೆಚ್ಚಾಗಿದೆ. ಹೀಗಾಗಿ ಯಾರಿಗೆ ಹೆಚ್ಚಿನ ಅವಕಾಶ ಇದೆ ಎಂಬುದನ್ನು ನೋಡೋಣ.

ಹಾರ್ದಿಕ್ ಪಾಂಡ್ಯ

ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟಿ 20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲು ಇರುವ ಮುಂಚೂಣಿ ಹೆಸರು. ಅವರು ಭಾರತದ ಟಿ 20 ವಿಶ್ವಕಪ್ 2024 ಅಭಿಯಾನಕ್ಕೆ ಉಪನಾಯಕರಾಗಿದ್ದರು. ಪ್ರಶಸ್ತಿ ಗೆಲುವಿನಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ.

ಐಪಿಎಲ್ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಪ್ರಶಸ್ತಿ ತಂದುಕೊಟ್ಟಿದ್ದ ಅವರು ಮುಂದಿನ ಋತುವಿನಲ್ಲಿ ಫ್ರಾಂಚೈಸಿಯನ್ನು ಫೈನಲ್​ಗೆ ಕೊಂಡೊಯ್ದಿದ್ದರು. ಹೀಗಾಗಿ ಹಾರ್ದಿಕ್ ಈ ಸ್ವರೂಪದಲ್ಲಿ ನಾಯಕತ್ವದ ಅನುಭವ ಹೊಂದಿದ್ದಾರೆ. ಪ್ರಸ್ತುತ ಅವರು ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದಾರೆ. ಅದರ ಜತೆಗೆ 2022-23ರ ಅವಧಿಯಲ್ಲಿ 16 ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು.

2022 ರ ಟಿ 20 ವಿಶ್ವಕಪ್​​ನ ಸೆಮಿಫೈನಲ್​ನಲ್ಲಿ ಭಾರತ ನಿರ್ಗಮಿಸಿದ ನಂತರ ನ್ಯೂಜಿಲೆಂಡ್​​ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಗೆ ಪಾಂಡ್ಯ ನಾಯಕರಾಗಿದ್ದರು. ಶ್ರೀಲಂಕಾ ವಿರುದ್ಧ 3-0 ವೈಟ್ವಾಶ್ ಮತ್ತು ತವರಿನಲ್ಲಿ ಕಿವೀಸ್ ವಿರುದ್ಧ 2-1 ಅಂತರದ ಗೆಲುವು ಸಾಧಿಸಿದ ತಂಡದ ಮುಂದಾಳತ್ವ ವಹಿಸಿದ್ದರು. ನಾಯಕನಾಗಿ ಅವರ ಕೊನೆಯ ಟಿ 20 ಐ ಸರಣಿ ಕಳೆದ ವರ್ಷ ಆಗಸ್ಟ್​​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 2-3 ಅಂತರದಲ್ಲಿ ಸರಣಿ ಸೋಲಿನೊಂದಿಗೆ ಕೊನೆಗೊಂಡಿತ್ತು. ಹಾರ್ದಿಕ್ ಪಾಂಡ್ಯ ಏಕದಿನ ತಂಡದ ಪ್ರಮುಖ ಆಟಗಾರನಾಗಿರುವುದರಿಂದ ಎರಡು ಸ್ವರೂಪಗಳನ್ನು ಹೇಗೆ ಸಮತೋಲನಗೊಳಿಸುತ್ತಾರೆ ಎಂಬುದನ್ನು ನೋಡಬೇಕಾಗಿದೆ.

ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ವಿಶ್ವದ ಪ್ರಮುಖ ಟಿ 20 ಬ್ಯಾಟರ್​ಗಳಲ್ಲಿ ಒಬ್ಬರು. ಈ ಮಾದರಿಯಲ್ಲಿ ಬ್ಯಾಟ್​ನೊಂದಿಗೆ ಭಾರತದ ಪರ ಆಕ್ರಮಣಕಾರಿಯಾಗಿದ್ದಾರೆ. ಕಳೆದ ವರ್ಷ ಏಕದಿನ ವಿಶ್ವಕಪ್ ನಂತರ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಅವರು ಭಾರತವನ್ನು ಮುನ್ನಡೆಸಿದ್ದರು. ನಂತರ ಡಿಸೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಟಿ 20 ಐಗಳಲ್ಲಿ ತಂಡದ ನಾಯಕರಾಗಿದ್ದರು. ನಾಯಕನಾಗಿದ್ದ ತಮ್ಮ ಕೊನೆಯ ಪಂದ್ಯದಲ್ಲಿ, ಸೂರ್ಯಕುಮಾರ್ 56 ಎಸೆತಗಳಲ್ಲಿ ಶತಕ ಬಾರಿಸಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ 106 ರನ್​ಗಳ ಬೃಹತ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು

ಟೆಸ್ಟ್ ಮತ್ತು ಏಕದಿನ ತಂಡಗಳಲ್ಲಿ ಇನ್ನೂ ಕಾಯಂ ಸ್ಥಾನ ಪಡೆಯದ ಕಾರಣ, ಸೂರ್ಯಕುಮಾರ್ ತಮ್ಮ ಗಮನವನ್ನು ಆಟದ ಕಿರು ಸ್ವರೂಪಕ್ಕೆ ಮೀಸಲಿಡುವ ಸರ್ವ ಅವಕಾಶ ಹೊಂದಿದ್ದಾರೆ.

ಜಸ್ಪ್ರೀತ್ ಬುಮ್ರಾ

ಭಾರತದ ಆಲ್-ಫಾರ್ಮ್ಯಾಟ್ ವೇಗದ ಬೌಲರ್ ಆಧುನಿಕ ಯುಗದ ​​ ಅತ್ಯುತ್ತಮ ಕ್ರಿಕೆಟಿಗ. ಭಾರತ ತಂಡದ ಯಶಸ್ಸಿನ ರೂವಾರಿ ಕೂಡ. ಸೀಮಿತ ನಾಯಕತ್ವ ಅನುಭವವನ್ನು ಹೊಂದಿದ್ದರೂ, ಬುಮ್ರಾ ತಮ್ಮ ತೀಕ್ಷ್ಣ ಚಾತುರ್ಯ ಮತ್ತು ಆಟದ ಅರಿವಿಗೆ ಪ್ರಖ್ಯಾತರು. ಅವರು ಹಲವು ಬಾರಿ ತಂಡದ ಉಪನಾಯಕರೂ ಆಗಿದ್ದಾರೆ. ಕಳೆದ ವರ್ಷ ಐರ್ಲೆಂಡ್ ವಿರುದ್ಧ ಎರಡು ಟಿ 20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು. ಆದಾಗ್ಯೂ, ಎಲ್ಲಾ ಮೂರು ಸ್ವರೂಪಗಳಲ್ಲಿ ಅವರ ಬೌಲಿಂಗ್ ಭಾರತಕ್ಕೆ ಮುಖ್ಯ. ಅವರ ಇತ್ತೀಚಿನ ಗಾಯಗಳನ್ನು ಗಮನಿಸಿದರೆ, ತಂಡದ ಆಡಳಿತವು ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡದು.

ಇದನ್ನೂ ಓದಿ: T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

ರಿಷಭ್ ಪಂತ್

ಭೀಕರ ಕಾರು ಅಪಘಾತದಿಂದ ಆದ ಗಾಯಗಳಿಂದ ಚೇತರಿಸಿದ ರಿಷಭ್​ ಪಂತ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಗಮನಾರ್ಹ ಪುನರಾಗಮನ ಮಾಡಿದ್ದರು. ಐಪಿಎಲ್ 2024 ರಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಆ ತಂಡ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. 2022 ರಲ್ಲಿ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದರು. ಅದು 2-2 ಡ್ರಾದಲ್ಲಿ ಕೊನೆಗೊಂಡಿತ್ತು. ಆದಾಗ್ಯೂ, ಪಂತ್ ಭಾರತದ ಟಿ 20 ಐ ಪ್ಲೇಯಿಂಗ್ ಹನ್ನೊಂದರಲ್ಲಿ ತಮ್ಮ ಸ್ಥಾನವನ್ನು ಇನ್ನೂ ಭದ್ರಪಡಿಸಿಕೊಂಡಿಲ್ಲ. ಅವರನ್ನು ಯಾವ ರೀತಿ ಮ್ಯಾನೇಜ್ಮೆಂಟ್​ ಬಳಸಿಕೊಳ್ಳಲಿದೆ ಎಂದು ನೋಡಬೇಕು. ಅವರ ಬ್ಯಾಟಿಂಗ್​ನಲ್ಲಿ ಅಸ್ಥಿತರೆ ಇರುವ ಕಾರಣ ನಾಯಕತ್ವ ಜವಾಬ್ದಾರಿ ನೀಡುವ ಮೊದಲು ಬಿಸಿಸಿಐ ಇನ್ನೊಮ್ಮೆ ಯೋಚನೆ ಮಾಡಲಿದೆ.

ಶುಬ್ಮನ್ ಗಿಲ್​

ಹಾರ್ದಿಕ್ ಪಾಂಡ್ಯ ಐಪಿಎಲ್​ನಲ್ಲಿ ಮಂಬಯಿ ತಂಡದ ಪಾಲಾದ ಬಳಿಕ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿಕೊಂಡ ಶುಭ್​​ಮನ್​ ಗಿಲ್ ಜಿಂಬಾಬ್ವೆಯಲ್ಲಿ ಮುಂಬರುವ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ. ಟಿ 20 ವಿಶ್ವಕಪ್ 2024 ತಂಡದಲ್ಲಿ ಅವರು ಸ್ಥಾನ ಪಡೆಯದಿದ್ದರೂ ರೋಹಿತ್ ಮತ್ತು ಕೊಹ್ಲಿ ಅವರ ನಿವೃತ್ತಿಯ ನಂತರ ಗಿಲ್ ಟಿ 20 ಐಗಳಲ್ಲಿ ಅಗ್ರ ಕ್ರಮಾಂಕದಲ್ಲಿ ನಿಯಮಿತವಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅವರು ಇನ್ನೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಾಯಕತ್ವದ ಅನುಭವವನ್ನು ಹೊಂದಿಲ್ಲವಾದರೂ, 24 ವರ್ಷದ ಆಟಗಾರ ಏಕದಿನ ಮತ್ತು ಟೆಸ್ಟ್ ತಂಡಗಳ ಪ್ರಮುಖ ಸದಸ್ಯರಾಗಿದ್ದಾರೆ. ಭವಿಷ್ಯಕ್ಕಾಗಿ ನಾಯಕನನ್ನು ರೂಪಿಸುವಲ್ಲಿ ಮ್ಯಾನೇಜ್ಮೆಂಟ್ ಕಣ್ಣಿಟ್ಟಿರುವ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ.

Continue Reading

ಕ್ರಿಕೆಟ್

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Virat Kohli: 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಗೆ ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

irat Kohli's Heartfelt Tribute to Anushka Sharma
Koo

ಬೆಂಗಳೂರು: ವಿರಾಟ್‌ ಕೊಹ್ಲಿ (Virat Kohli) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿರುವಂತಹ ವ್ಯಕ್ತಿ. ಆ ವ್ಯಕ್ತಿಗೂ ಸ್ಫೂರ್ತಿಯಾಗಿರುವವರಿದ್ದಾರೆ. ಅವರು ಮತ್ತಿನ್ಯಾರೂ ಅಲ್ಲ, ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ. 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಗೆ ಹಲವಾರು ಸೆಲೆಬ್ರಿಟಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ಸಲ್ಲಿಸಿದರು. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಕೃತಜ್ಞತೆ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಅವರು ಅನುಷ್ಕಾ ಜತೆ ಇರುವ ಫೋಟೊ ಹಂಚಿಕೊಂಡು ಹೀಗೆ ಬರೆದುಕೊಂಡಿದ್ದಾರೆ. ʻʻನೀನಿಲ್ಲದೆ ಇದೆಲ್ಲವೂ ಸಾಧ್ಯವಾಗುತ್ತಿರಲಿಲ್ಲ. ನನ್ನನ್ನು ವಿನಮ್ರವಾಗಿ ಇರಲು ಪ್ರಯತ್ನಿಸಿರುವೆ. ನಾನು ನಿಮಗಾಗಿ ಹೆಚ್ಚು ಕೃತಜ್ಞರಾಗಿರಲು ಸಾಧ್ಯವಿಲ್ಲ. ಈ ಗೆಲುವು ನನ್ನದಷ್ಟೇ ನಿನ್ನದು ಕೂಡ. ಧನ್ಯವಾದಗಳು ಮತ್ತು ನಾನು ನಿನ್ನನ್ನು ತುಂಬ ಪ್ರೀತಿಸುತ್ತೇನೆ ʼʼಎಂದು ಬರೆದುಕೊಂಡಿದ್ದಾರೆ.

ನಿನ್ನೆಯಷ್ಟೇ ಅನುಷ್ಕಾ ಶರ್ಮಾ ಅವರು ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದರು.

ರೋಚಕ ಪಂದ್ಯ ಗೆದ್ದ ಭಾರತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading
Advertisement
Jasprit Bumrah
ಕ್ರೀಡೆ39 seconds ago

Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

assault case
ಚಿತ್ರದುರ್ಗ2 mins ago

Assault Case : ಕಚೇರಿಗೆ ನುಗ್ಗಿ ದರದರನೆ ಎಳೆದು ಪಿಡಿಓ ಥಳಿಸಿದ ಪುಂಡರ ಗ್ಯಾಂಗ್‌!

Actor Darshan is like my son says hamsalekha
ಸ್ಯಾಂಡಲ್ ವುಡ್23 mins ago

Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

Rohit Sharma
ಪ್ರಮುಖ ಸುದ್ದಿ52 mins ago

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

LPG Price Cut
ವಾಣಿಜ್ಯ52 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

kidanp case
ಕ್ರೈಂ59 mins ago

Kidnap Case: ಹಿಂದೂ ಹುಡುಗನ ಜೊತೆಗೆ ಮುಸ್ಲಿಂ ಹುಡುಗಿ ನಾಪತ್ತೆ, ಕಿಡ್ನಾಪ್‌ ದೂರು

Rakshak Bullet Washed His Father grave
ಸ್ಯಾಂಡಲ್ ವುಡ್1 hour ago

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Team India Captain
ಕ್ರೀಡೆ1 hour ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ1 hour ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ1 hour ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು22 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌