Navaratri: ವಿಜೃಂಭಣೆಯಿಂದ ನವರಾತ್ರಿ ಉತ್ಸವ ನಡೆಯುವ, ಭೇಟಿ ನೀಡಲೇಬೇಕಾದ ದೇಗುಲಗಳಿವು - Vistara News

ಧಾರ್ಮಿಕ

Navaratri: ವಿಜೃಂಭಣೆಯಿಂದ ನವರಾತ್ರಿ ಉತ್ಸವ ನಡೆಯುವ, ಭೇಟಿ ನೀಡಲೇಬೇಕಾದ ದೇಗುಲಗಳಿವು

Navaratri: ಅಕ್ಟೋಬರ್‌ 15ರಂದು ನವರಾತ್ರಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನವರಾತ್ರಿಯನ್ನು ವಿಶೇಷವಾಗಿ ಆಚರಿಸುವ ರಾಜ್ಯದ ಪ್ರಮುಖ ದೇವಾಲಯಗಳ ಪರಿಚಯ.

VISTARANEWS.COM


on

navarathri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಆರಂಭವಾಗಿದೆ. ಅಕ್ಟೋಬರ್‌ 15ರಂದು ನವರಾತ್ರಿ (Navaratri) ಶುರುವಾಗಲಿದೆ. ಮುಂದಿನ ಹತ್ತು ದಿನಗಳು ಆಚರಣೆ ಕಳೆಕಟ್ಟುತ್ತದೆ. ಕೆಟ್ಟದರ ವಿರುದ್ಧ ಒಳಿತಿನ ವಿಜಯದ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನವರಾತ್ರಿಯನ್ನು ವಿಶೇಷವಾಗಿ ಆಚರಿಸುವ ರಾಜ್ಯದ ವಿವಿಧ ದೇವಿ ದೇವಸ್ಥಾನಗಳ ಪರಿಚಯ ಇಲ್ಲಿದೆ.

ಚಾಮುಂಡೇಶ್ವರಿ ದೇವಸ್ಥಾನ, ಮೈಸೂರು

ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರು. ದಸರಾ ಹಬ್ಬ ಆಚರಣೆಗೆ ಮೈಸೂರು ವಿಶ್ವ ವಿಖ್ಯಾತ. ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನ ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಬಹಳ ಮಹತ್ವದ ಸ್ಥಾನ ಪಡೆದುಕೊಂಡಿದೆ. ಈ ದೇವಾಲಯವು ದೇಶದ 18 ಮಹಾ ಶಕ್ತಿ ಪೀಠಗಳಲ್ಲಿ ಒಂದಾಗಿದೆ. ಮಹಿಷ ಎಂಬ ರಾಕ್ಷಸನನ್ನು ಸಂಹರಿಸಿದ ಶಿವನ ಪತ್ನಿ ಪಾರ್ವತಿಯ ಅವತಾರವೆಂದು ನಂಬಲಾದ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ದೇವಿಗೆ ಈ ದೇಗುಲವು ಸಮರ್ಪಿತವಾಗಿದೆ. ಮೂಲತಃ ಚಿಕ್ಕ ದೇಗುಲವಾಗಿದ್ದ ಈ ಮಂದಿರ ಮೈಸೂರು ಮಹಾರಾಜರ ಆಶ್ರಯದಲ್ಲಿ ವಿಸ್ತಾರವಾಗಿ ಬೆಳೆಯಿತು ಎಂದು ಇತಿಹಾಸ ತಿಳಿಸುತ್ತದೆ. ಮೈಸೂರು ದಸರಾವನ್ನು ನಾಡಹಬ್ಬ ಎಂದೂ ಕರೆಯಲಾಗುತ್ತದೆ. ನವರಾತ್ರಿಯ ಸಮಯದಲ್ಲಿ, ದೇವಿಯ ಒಂಬತ್ತು ವಿಭಿನ್ನ ಅಂಶಗಳನ್ನು ಚಿತ್ರಿಸಲು ಇಲ್ಲಿ ದೇವಿಯನ್ನು 9 ವಿಧಗಳಲ್ಲಿ ಅಲಂಕರಿಸಲಾಗುತ್ತದೆ. ನವರಾತ್ರಿಯ 7ನೇ ದಿನದಂದು ಮೈಸೂರಿನ ಜಿಲ್ಲಾ ಖಜಾನೆಯಿಂದ ಮಹಾರಾಜರು ಕೊಡುಗೆಯಾಗಿ ನೀಡಿದ ಅಮೂಲ್ಯ ಆಭರಣಗಳನ್ನು ತಂದು ಚಾಮುಂಡಿ ದೇವಿಗೆ ಅರ್ಪಿಸಲಾಗುತ್ತದೆ. ವಿಜಯ ದಶಮಿಯಂದು ನಡೆಯುವ ಜಂಬೂ ಸವಾರಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ. ಮೆರವಣಿಗೆ ಜತೆ ಸಾಗುವ ಕಲಾತಂಡಗಳು, ಕವಾಯತು, ಅಶ್ವ ಪಡೆ, ಪೋಲಿಸ್‌ ವಾದ್ಯಗೋಷ್ಠಿ, ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಭ ಚಿತ್ರಗಳು ಸಂಭ್ರಮವನ್ನು ಹೆಚ್ಚಿಸುತ್ತವೆ. ಅಂಬಾರಿಯಲ್ಲಿ ಚಾಮುಂಡಿ ದೇವರ ವಿಗ್ರಹವನ್ನು ಇಟ್ಟು ಪೂಜಿಸಲಾಗುತ್ತದೆ.

ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇಗುಲ ದೇಶದ ನಾನಾ ಕಡೆಗಳ ಭಕ್ತರನ್ನು ಸೆಳೆಯುತ್ತದೆ. ಪರಶುರಾಮನು ಸೃಷ್ಟಿಸಿದ ಮೋಕ್ಷದ ಏಳು ವಾಸಸ್ಥಾನಗಳಲ್ಲಿ ಇದು ಒಂದು ಎನ್ನುವ ನಂಬಿಕೆ ಇದೆ. ಈ ದೇವಾಲಯವು ಕಲೆ ಮತ್ತು ಜ್ಞಾನಕ್ಕೆ ಸಮರ್ಪಿತವಾಗಿದೆ. ಮೂಕಾಂಬಿಕಾ ದೇವಿಯನ್ನು ಮಾತು ಮತ್ತು ಅಕ್ಷರಗಳ ದೇವತೆ ಎಂದು ಪರಿಗಣಿಸಲಾಗುತ್ತದೆ. ಕೊಲ್ಲೂರು ಮೂಕಾಂಬಿಕಾ ದೇವಾಲಯವನ್ನು ಸ್ಥಾಪಿಸುವ ಜವಾಬ್ದಾರಿಯನ್ನು ಮಹಾನ್ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರಾಚಾರ್ಯರು ವಹಿಸಿದ್ದರು ಎಂದು ಹಿರಿಯರು ಹೇಳುತ್ತಾರೆ. ದೇವಾಲಯದಲ್ಲಿ ವಾರ್ಷಿಕ ಹಬ್ಬವನ್ನು ನವರಾತ್ರಿ ಹಬ್ಬದ ಸಂದರ್ಭದಲ್ಲಿ ಆಚರಿಸಲಾಗುತ್ತದೆ.

ಶಾರದಾಂಬ ದೇವಸ್ಥಾನ, ಶೃಂಗೇರಿ

ಕರ್ನಾಟಕದ ಪ್ರಸಿದ್ದ ಧಾರ್ಮಿಕ ಸ್ಥಳವಾಗಿ ಗುರುತಿಸಿಕೊಂಡಿರುವ ಶೃಂಗೇರಿ ಶಾರದಾಂಬ ದೇವಸ್ಥಾನ ಪ್ರತಿನಿತ್ಯ ಸಾವಿರಾರು ಭಕ್ತರನ್ನು ತನ್ನತ್ತ ಸೆಳೆಯುತ್ತದೆ. ಅದರಲ್ಲೂ ನವರಾತ್ರಿ ಸಮಯದಲ್ಲಂತೂ ಭಕ್ತರ ಪ್ರವಾಹವೇ ಹರಿದು ಬರುತ್ತದೆ. ಇದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿದೆ. 8ನೇ ಶತಮಾನದಲ್ಲಿ ಆದಿ ಶಂಕರಾಚಾರ್ಯರು ಈ ದೇಗುಲವನ್ನು ಸ್ಥಾಪಿಸಿದರು ಎನ್ನುತ್ತದೆ ಐತಿಹ್ಯ. ಶೃಂಗೇರಿ ಎಂದರೆ ಋಷಿಶೃಂಗ ಗಿರಿ ಎನ್ನುವ ಅರ್ಥವಿದೆ. ತುಂಗಾ ನದಿ ತೀರದಲ್ಲಿ ನೆಲೆಸಿರುವ ಈ ತಾಯಿ ಎಲ್ಲರ ಕಷ್ಟ ಪರಿಹರಿಸುತ್ತಾಳೆ ಎನ್ನುವ ನಂಬಿಕೆ ಭಕ್ತರದ್ದು.

ಮಕ್ಕಳ ವಿದ್ಯಾಭ್ಯಾಸದ ಆರಂಭಕ್ಕೂ ಮುನ್ನ ಪೋಷಕರು ತಾಯಿಯ ಆಶೀರ್ವಾದ ಪಡೆದು ಹೋಗುತ್ತಾರೆ. ಮಗುವಿಗೆ ಸರಿಯಾಗಿ ಮಾತನಾಡಲು ಬರದಿದ್ದರೆ ಅಥವಾ ಮಾತು ಬರುವುದು ತಡವಾದರೆ ತಾಯಿಯ ದರ್ಶನ ಮಾಡಿಸುತ್ತಾರೆ. ಇಲ್ಲಿ ನವರಾತ್ರಿಗೆ ವಿಶೇಷ ಪೂಜೆ ಹಾಗೂ ಅಲಂಕಾರಗಳು ನೆರವೇರುತ್ತವೆ. ನವರಾತ್ರಿಯಂದು ಶಾರದೆಗೆ ಪ್ರತಿದಿನವೂ ಒಂದೊಂದು ಅಲಂಕಾರ ನಡೆಯುತ್ತದೆ. ಹಂಸವಾಹನ ಅಲಂಕಾರ, ವೃಷಭವಾಹನ ಅಲಂಕಾರ, ಮಯೂರವಾಹನ ಅಲಂಕಾರ, ಗರುಡವಾಹನ ಅಲಂಕಾರ, ಇಂದ್ರಾಣಿ ಅಲಂಕಾರ, ವೀಣಾಶಾರದಾ ಅಲಂಕಾರ, ಮೋಹಿನಿ ಅಲಂಕಾರ, ರಾಜರಾಜೇಶ್ವರಿ ಅಲಂಕಾರ, ಸಿಂಹವಾಹನ ಅಲಂಕಾರ, ಗಜಲಕ್ಷ್ಮೀ ಅಲಂಕಾರಗಳನ್ನು ಮಾಡಲಾಗುತ್ತದೆ. ಚಂಡಿಕಾ ಹೋಮ, ರಥೋತ್ಸವ, ವಿವಿಧ ಅಲಂಕಾರ, ಪೂಜೆ, ಮಹಾಭಿಷೇಕ, ಶತರುದ್ರಾಭಿಷೇಕ ನಡೆಯುತ್ತದೆ.

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಹೊರನಾಡು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡಿನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿಯೂ ನವರಾತ್ರಿ ವಿಶೇಷವಾಗಿ ಆಚರಿಸಲಾಗುತ್ತದೆ. ಭದ್ರಾ ನದಿಯ ದಡದಲ್ಲಿರುವ ಇದನ್ನು ಆದಿಶಕ್ತಿಯಾತ್ಮಿಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಎಂದೂ ಕರೆಯುತ್ತಾರೆ. ಇಲ್ಲಿರುವ ವಿಗ್ರಹವನ್ನು 8ನೇ ಶತಮಾನದಲ್ಲಿ ಅಗಸ್ತ್ಯ ಋಷಿ ಸ್ಥಾಪಿಸಿದರು ಎಂದು ಪುರಾಣ ಹೇಳುತ್ತದೆ. ಹೊರನಾಡು ದೇಗುಲ ಅನ್ನದಾನದಕ್ಕೆ ಹೆಸರುವಾಸಿ. ಚತುರ್ಭುಜೆಯಾದ ಅನ್ನಪೂರ್ಣೇಶ್ವರಿ ದೇವಿ ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ ಹಿಡಿದಿರುವುದು ವಿಶೇಷ. ಇಲ್ಲಿಂದ ಶೃಂಗೇರಿಗೆ ಕೇವಲ 40 ಕಿ.ಮೀ ದೂರ.

ಬನಶಂಕರಿ ದೇವಸ್ಥಾನ, ಬಾದಾಮಿ

ಬನಶಂಕರಿ ಅಮ್ಮನವರ ದೇವಸ್ಥಾನವನ್ನು ಬನಶಂಕರಿ ದೇವಸ್ಥಾನ ಎಂದೂ ಕರೆಯುತ್ತಾರೆ. ಇದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಗುಹೆಯಿಂದ ಕೇವಲ 8 ಕಿ.ಮೀ. ದೂರದಲ್ಲಿದೆ. ಮಲಪ್ರಭಾ ನದಿಯ ದಡದಲ್ಲಿರುವ ಚೋಳಚಗುಡ್ಡ ಎಂಬ ಸಣ್ಣ ಹಳ್ಳಿಯಲ್ಲಿ ಈ ದೇಗುಲವಿದೆ. ಬನಶಂಕರಿ ದೇವಸ್ಥಾನವು ಮಾತಾ ಪಾರ್ವತಿಯ ಅವತಾರವಾದ ಬನಶಂಕರಿ ಅಮ್ಮನಿಗೆ ಸಮರ್ಪಿತವಾಗಿದೆ. ದೇವಾಲಯದ ದೇವತೆಯನ್ನು ಶಾಕಂಭರಿ ಅಥವಾ ವನಶಂಕರಿ ಅಥವಾ ಬನಶಕರಿ ಎಂದೂ ಕರೆಯಲಾಗುತ್ತದೆ. ಈ ದೇವಾಲಯವನ್ನು 17ನೇ ಶತಮಾನದಲ್ಲಿ ದ್ರಾವಿಡ ಶೈಲಿಯ ವಾಸ್ತುಶಿಲ್ಪದೊಂದಿಗೆ ನಿರ್ಮಿಸಲಾಗಿದೆ. ಸ್ಕಂದ ಪುರಾಣದಲ್ಲಿ ದೇವಿಯ ಉಲ್ಲೇಖವಿದೆ. ನವರಾತ್ರಿಯಂದು ಇಲ್ಲಿ ವಿಶೇಷ ಪೂಜೆ ನಡೆಯುತ್ತದೆ.

ದುರ್ಗಾ ಪರಮೇಶ್ವರಿ ದೇವಸ್ಥಾನ, ಕಟೀಲು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಸುಮಾರು 29 ಕಿ.ಮೀ ದೂರದಲ್ಲಿರುವ ಕಟೀಲಿನಲ್ಲಿ ಈ ದುರ್ಗಾ ಪರಮೇಶ್ವರಿ ದೇಗುಲವಿದೆ. ನಂದಿನಿ ನದಿ ದಡದಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಇಲ್ಲಿ ಭಕ್ತರಿಗೆ ದಿನಕ್ಕೆ ಎರಡು ಬಾರಿ ಅನ್ನ ಪ್ರಸಾದ ನೀಡಲಾಗುತ್ತದೆ. ಜತೆಗೆ ದೇವಾಲಯವು ಐದು ಶಿಕ್ಷಣ ಸಂಸ್ಥೆಗಳನ್ನು ನಡೆಸುವ ಮೂಲಕ ವಿದ್ಯಾ ದಾನವನ್ನೂ ಕೈಗೊಂಡಿದೆ. ಯಕ್ಷಗಾನ ಹರಕೆ ಸೇವೆ ದೇವಿಗೆ ಬಹಳ ಪ್ರಿಯ ಎನ್ನುವ ನಂಬಿಕೆ ಇದೆ. ಜತೆಗೆ ಭಕ್ತರು ದೇವಿಗೆ ಸೀರೆಯನ್ನೂ ಸಮರ್ಪಿಸುತ್ತಾರೆ. ಈ ದೇವಾಲಯದಲ್ಲಿ ನವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನವರಾತ್ರಿ ಉತ್ಸವದ ಭಾಗವಾಗಿ ‘ಲಲಿತ ಪಂಚಮಿ’, ‘ಮಹಾನವಮಿ’, ‘ವಿಜಯದಶಮಿ’ ಹಾಗೂ ‘ಮಧ್ವ ಜಯಂತಿ’ಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: Mahisha Dasara : ಮಹಿಷ ದಸರಾಕ್ಕೆ ಷರತ್ತುಬದ್ಧ ಅನುಮತಿ, ಸಭಾ ಕಾರ್ಯಕ್ರಮ ಓಕೆ, ಸೆಕ್ಷನ್‌ 144 ಜಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

Puri Jagannath Yatra: ಒಡಿಶಾದ ಪುರಿಯ ಜಗನ್ನಾಥ ರಥಯಾತ್ರೆಯು (Puri Rath Yatra) ಜುಲೈ 7ರಂದು ಬೆಳಗ್ಗೆ ಪ್ರಾರಂಭವಾಗಲಿದ್ದು, ಜುಲೈ 16ರಂದು ಬಹುದಾ ಯಾತ್ರೆಯೊಂದಿಗೆ ಸಂಪನ್ನಗೊಳ್ಳಲಿದೆ. ಈ ರಥಯಾತ್ರೆಯು ಜಗನ್ನಾಥ ದೇವಾಲಯದಿಂದ ದೇವರ ಜನ್ಮಸ್ಥಳವೆಂದು ನಂಬಲಾದ ಗುಂಡಿಚಾ ದೇವಾಲಯಕ್ಕೆ ಭಗವಾನ್ ಜಗನ್ನಾಥ, ಭಗವಾನ್ ಬಲಭದ್ರ ಮತ್ತು ಸುಭದ್ರಾ ದೇವಿಯನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಿ ಗೌರವಿಸಲಾಗುತ್ತದೆ. ಐತಿಹಾಸಿಕ ಮಹತ್ವವನ್ನು ಹೊಂದಿರುವ ಈ ರಥಯಾತ್ರೆಯ ಹಿನ್ನೆಲೆ, ಮಹತ್ವ ಏನು? ಈ ಕುರಿತ ವರದಿ ಇದು.

VISTARANEWS.COM


on

By

Puri Jagannath Yatra
Koo

ಒಡಿಶಾದ (odisha) ಪುರಿಯ ಜಗನ್ನಾಥ ರಥಯಾತ್ರೆಯು (Puri Jagannath Yatra) ಭಾರೀ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಒಂಬತ್ತು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಜಗತ್ತಿನಾದ್ಯಂತ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಬಾರಿ ಜುಲೈ 7ರಂದು ಜಗನ್ನಾಥ ಯಾತ್ರೆ ನಡೆಯಲಿದೆ.

ಈ ರಥಯಾತ್ರೆಯು ಜಗನ್ನಾಥ ದೇವಾಲಯದಿಂದ ದೇವರ ಜನ್ಮಸ್ಥಳವೆಂದು ನಂಬಲಾದ ಗುಂಡಿಚಾ ದೇವಾಲಯಕ್ಕೆ ಭಗವಾನ್ ಜಗನ್ನಾಥ, ಭಗವಾನ್ ಬಲಭದ್ರ ಮತ್ತು ಸುಭದ್ರಾ ದೇವಿಯನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಿ ಗೌರವಿಸಲಾಗುತ್ತದೆ. ಮೂರು ದೇವತೆಗಳನ್ನು ಪ್ರತಿ ವರ್ಷ ಹೊಸದಾಗಿ ನಿರ್ಮಿಸಲಾದ ಮೂರು ಬೃಹತ್ ಮತ್ತು ಅಲಂಕಾರಿಕ ರಥಗಳಲ್ಲಿ ಕೊಂಡೊಯ್ಯಲಾಗುತ್ತದೆ ಜಗನ್ನಾಥನ ರಥವನ್ನು ನಂದಿಘೋಷ, ಬಲಭದ್ರನ ರಥವನ್ನು ತಾಳಧ್ವಜ ಮತ್ತು ಸುಭದ್ರೆಯ ರಥವನ್ನು ದರ್ಪದಲನ ಎಂದು ಕರೆಯುತ್ತಾರೆ.


ಜಗನ್ನಾಥ ರಥ ಯಾತ್ರೆ ಯಾವಾಗ?

ಜೂನ್ ಅಥವಾ ಜುಲೈನಲ್ಲಿ ಬರುವ ಆಷಾಢ ಮಾಸದಲ್ಲಿ ಶುಕ್ಲ ಪಕ್ಷದ ಎರಡನೇ ದಿನದಂದು ಜಗನ್ನಾಥನ ರಥಯಾತ್ರೆ ನಡೆಯುತ್ತದೆ. ಈ ವರ್ಷ ಜುಲೈ 7ರಂದು ಭಗವಾನ್ ಜಗನ್ನಾಥನ ರಥಯಾತ್ರೆಯನ್ನು ಆಚರಿಸಲಾಗುತ್ತದೆ. ದ್ವಿತೀಯ ತಿಥಿಯು ಜುಲೈ 7 ರಂದು ಬೆಳಗ್ಗೆ 4.26ಕ್ಕೆ ಪ್ರಾರಂಭವಾಗಿ ಜುಲೈ 8ರಂದು ಬೆಳಗ್ಗೆ 4.59ಕ್ಕೆ ಕೊನೆಗೊಳ್ಳುತ್ತದೆ. ಜುಲೈ 16ರಂದು ನಡೆಯುವ ಬಹುದಾ ಯಾತ್ರೆಯೊಂದಿಗೆ ಉತ್ಸವವು ಮುಕ್ತಾಯಗೊಳ್ಳುತ್ತದೆ.

ಜಗನ್ನಾಥ ರಥ ಯಾತ್ರೆಯ ಇತಿಹಾಸ

ಜಗನ್ನಾಥ ರಥ ಯಾತ್ರೆಯ ಕುರಿತು ಹಲವಾರು ದಂತಕಥೆಗಳಿವೆ. ಒಂದು ಕಥೆಯ ಪ್ರಕಾರ ಭಗವಾನ್ ಜಗನ್ನಾಥ ಅವನ ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರೆ ವರ್ಷಕ್ಕೊಮ್ಮೆ ಗುಂಡಿಚಾ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ರಾಜ ಇಂದ್ರದ್ಯುಮ್ನ ಜಗನ್ನಾಥ ದೇವಾಲಯವನ್ನು ಸ್ಥಾಪಿಸಿದರು.

ಪುರಾಣಗಳ ಪ್ರಕಾರ ಭಗವಾನ್ ವಿಶ್ವಕರ್ಮನು ಗುಂಡಿಚಾ ದೇವಸ್ಥಾನದಲ್ಲಿ ಭಗವಾನ್ ಜಗನ್ನಾಥ, ಭಗವಾನ್ ಬಲಭದ್ರ ಮತ್ತು ಸುಭದ್ರಾ ದೇವಿಯ ಪ್ರಸ್ತುತ ಪ್ರತಿಮೆಗಳನ್ನು ಮರದ ದಿಮ್ಮಿಯಿಂದ ರಚಿಸಿದನು. ಅವನು ವಿಗ್ರಹಗಳನ್ನು ರಚಿಸುವಾಗ ರಾಣಿ ಗುಂಡಿಚಾ ದೇವಾಲಯದ ಬಾಗಿಲನ್ನು ತೆರೆದಳು ಮತ್ತು ಅನಂತರ ಭಗವಾನ್ ವಿಶ್ವಕರ್ಮನು ಕಣ್ಮರೆಯಾಯಿತು. ದೇವತೆಗಳ ಮೂರ್ತಿ ಅಪೂರ್ಣವಾಯಿತು ಎಂದು ಹೇಳಲಾಗುತ್ತದೆ.

ಅಂದಿನಿಂದ ರಾಣಿ ಗುಂಡಿಚಾಗೆ ನೀಡಿದ ಭರವಸೆಯನ್ನು ಪೂರೈಸಲು ದೇವರುಗಳು ವರ್ಷಕ್ಕೊಮ್ಮೆ ಮಾತ್ರ ತಮ್ಮ ದೇವಾಲಯದಿಂದ ಹೊರಬರುತ್ತಾರೆ ಎನ್ನಲಾಗುತ್ತದೆ. ರಾಣಿಯ ಹೆಸರಿನ ಗುಂಡಿಚಾ ದೇವಾಲಯವು ಮುಖ್ಯ ದೇವಾಲಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ಒಂಬತ್ತನೇ ದಿನದಂದು ಬಹುದಾ ಯಾತ್ರೆ ಎಂದು ಕರೆಯಲ್ಪಡುವ ಮುಖ್ಯ ದೇವಾಲಯಕ್ಕೆ ಹಿಂದಿರುಗುವ ಮೊದಲು ದೇವತೆಗಳು ಎಂಟು ದಿನಗಳವರೆಗೆ ಅಲ್ಲಿ ನೆಲೆಸುತ್ತಾರೆ. ದೇವತೆಗಳು ದೇವಾಲಯವನ್ನು ಪ್ರವೇಶಿಸುವ ದಿನವನ್ನು ನೀಲಾದ್ರಿ ಬಿಜೆ ಎಂದು ಕರೆಯಲಾಗುತ್ತದೆ. ಇದರೊಂದಿಗೆ ಹಬ್ಬ ಮುಕ್ತಾಯವಾಗುತ್ತದೆ.

ಇದನ್ನೂ ಓದಿ: Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು


ಜಗನ್ನಾಥ ರಥಯಾತ್ರೆಯ ಮಹತ್ವ

ಈ ಹಬ್ಬವು ಭಗವಾನ್ ಜಗನ್ನಾಥ ಅವನ ಸಹೋದರ ಬಲಭದ್ರ ಮತ್ತು ಅವರ ಸಹೋದರಿ ಸುಭದ್ರೆಯ ಗುಂಡಿಚಾ ದೇವಸ್ಥಾನಕ್ಕೆ ಹೋಗುವುದನ್ನು ಸೂಚಿಸುತ್ತದೆ. ಭವ್ಯವಾದ ರಥವನ್ನು ಎಳೆಯಲು ಸಾವಿರಾರು ಭಕ್ತರು ಸೇರುತ್ತಾರೆ. ಉತ್ಸವದಲ್ಲಿ ಭಾಗವಹಿಸಿ ರಥಗಳನ್ನು ಎಳೆಯುವುದರಿಂದ ಪುಣ್ಯ ಲಭಿಸುತ್ತದೆ ಮತ್ತು ಆತ್ಮ ಶುದ್ಧಿಯಾಗುತ್ತದೆ ಎಂದು ನಂಬಲಾಗಿದೆ. ಈ ಯಾತ್ರೆಯು ಕೆಡುಕಿನ ಮೇಲೆ ಒಳಿತಿನ ವಿಜಯವನ್ನು ಸೂಚಿಸುತ್ತದೆ. ಇದು ಕೇವಲ ಹಬ್ಬವಾಗದೆ ಸಂಸ್ಕೃತಿ, ಏಕತೆ, ಸಮಾನತೆ ಮತ್ತು ಆಧ್ಯಾತ್ಮಿಕತೆಯ ಆಚರಣೆಯಾಗಿದೆ.

Continue Reading

ದೇಶ

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಜತೆಗೆ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Ayodhya Ram Mandir
Koo

ಲಕ್ನೋ: ಅಯೋಧ್ಯೆ ರಾಮ ಮಂದಿರ (Ayodhya Ram Mandir)ದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಜತೆಗೆ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಗರ್ಭಗುಡಿಯ ಪುರೋಹಿತರು ಕೇಸರಿ ಬಟ್ಟೆಗಳನ್ನು ಅಂದರೆ ಕೇಸರಿ ಪೇಟ, ಕೇಸರಿ ಕುರ್ತಾ ಮತ್ತು ಧೋತಿ ಧರಿಸುತ್ತಿದ್ದರು. ಇದೀಗ ಪುರೋಹಿತರು ಹಳದಿ (ಪಿತಾಂಬರಿ) ಬಣ್ಣದ ಧೋತಿ, ಅದೇ ಬಣ್ಣದ ಕುರ್ತಾ ಮತ್ತು ಪೇಟ ಧರಿಸುತ್ತಿದ್ದಾರೆ.

ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಪುರೋಹಿತರಿಗೆ ಹಳದಿ ಪೇಟ ಕಟ್ಟಲು ತರಬೇತಿ ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ.

ಹೇಗಿದೆ ಹೊಸ ಸಮವಸ್ತ್ರ?

‘ಚೌಬಂದಿ’ ಎಂದು ಕರೆಯಲ್ಪಡುವ ಹೊಸ ಕುರ್ತಾದಲ್ಲಿ ಯಾವುದೇ ಬಟನ್‌ ಇರುವುದಿಲ್ಲ ಮತ್ತು ಅದನ್ನು ಕಟ್ಟಲು ದಾರವನ್ನು ಬಳಸಲಾಗುತ್ತದೆ. ಹಳದಿ ಬಣ್ಣದ ‘ಧೋತಿ’ಯನ್ನು ಹತ್ತಿ ಬಟ್ಟೆಯಿಂದ ತಯಾರಿಸಲಾಗುತ್ತದೆ. ಇದು ಪಾದವನ್ನೂ ಮುಚ್ಚಲಿದೆ. ದೇವಾಲಯದಲ್ಲಿ ಮುಖ್ಯ ಅರ್ಚಕರು ಮತ್ತು ನಾಲ್ವರು ಸಹಾಯಕ ಅರ್ಚಕರು ಇದ್ದಾರೆ. ಈಗ ಪ್ರತಿ ಸಹಾಯಕ ಪುರೋಹಿತರೊಂದಿಗೆ ಐವರು ಪುರೋಹಿತರು ತರಬೇತಿ ಪಡೆಯುತ್ತಿದ್ದಾರೆ.

ಪುರೋಹಿತರ ಪ್ರತಿ ತಂಡವು ಮುಂಜಾನೆ 3.30ರಿಂದ ರಾತ್ರಿ 11ರವರೆಗೆ ಪಾಳಿಯಲ್ಲಿ ಐದು ಗಂಟೆಗಳ ಕಾಲ ಸೇವೆ ಸಲ್ಲಿಸುತ್ತಿದೆ. ʼʼರಾಮ ಮಂದಿರದಲ್ಲಿ ಅರ್ಚಕರಿಗೆ ಹೊಸ ಡ್ರೆಸ್ ಕೋಡ್ ಜಾರಿಗೆ ತರಲಾಗಿದೆ. ಈಗ ಮುಖ್ಯ ಅರ್ಚಕರು, ನಾಲ್ವರು ಸಹಾಯಕ ಪುರೋಹಿತರು ಮತ್ತು 20 ತರಬೇತಿ ಪುರೋಹಿತರು ಸೇರಿದಂತೆ ಎಲ್ಲ ಪುರೋಹಿತರು ಹಳದಿ ಬಣ್ಣದ ತಲೆಯ ಸಫಾ, ಚೌಬಂದಿ ಮತ್ತು ಧೋತಿ ಧರಿಸಲಿದ್ದಾರೆ” ಎಂದು ರಾಮ ಮಂದಿರದ ಸಹಾಯಕ ಅರ್ಚಕ ಸಂತೋಷ್ ಕುಮಾರ್ ತಿವಾರಿ ತಿಳಿಸಿದ್ದಾರೆ.

ಕಾರಣವೇನು?

ಏಕರೂಪತೆಯನ್ನು ಕಾಪಾಡಿಕೊಳ್ಳಲು ಮತ್ತು ಭದ್ರತೆಯನ್ನು ಖಚಿತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅರ್ಚಕರು ತಮ್ಮ ಫೋನ್‌ಗಳನ್ನು ದೇವಾಲಯಗಳಿಗೆ ಕೊಂಡೊಯ್ಯುವುದನ್ನು ನಿಷೇಧಿಸಿದ್ದು ಕೂಡ ಭದ್ರತಾ ಕ್ರಮದ ಒಂದು ಭಾಗ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಇತ್ತೀಚೆಗೆ ದೇವಾಲಯದ ಚಿತ್ರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿಯಮ ಜಾರಿಗೊಳಿಸಿದ್ದಾರೆ.

ಕಡಿಮೆಯಾದ ಭಕ್ತರ ದಟ್ಟಣೆ

ಅಯೋಧ್ಯೆ ರಾಮಮಂದಿರ ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾಗಿ ಹೊರಹೊಮ್ಮಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದು ಕೋಟ್ಯಂತರ ಹಿಂದೂಗಳ ಕನಸಾಗಿತ್ತು. ಹಾಗಾಗಿ ರಾಮಮಂದಿರ ಉದ್ಘಾಟನೆಯಾದ ಬೆನ್ನಿಗೇ ಲಕ್ಷಾಂತರ ಸಂಖ್ಯೆಯ ಭಕ್ತರು ರಾಮನ ದರ್ಶನಕ್ಕೆ ಬರುತ್ತಿದ್ದರು. ಆದರೆ ಮಂದಿರ ಉದ್ಘಾಟನೆಯಾಗಿ ಈಗಾಗಲೇ ಆರು ತಿಂಗಳು ಕಳೆದಿರುವುದರಿಂದ ಭಕ್ತರ ಸಂಖ್ಯೆ ಸಹಜವಾಗಿಯೇ ಕಡಿಮೆಯಾಗುತ್ತಿದೆ.

ಕಳೆದ ಆರು ವಾರಗಳಲ್ಲಿ ಅಯೋಧ್ಯೆ ನಗರಕ್ಕೆ ಬರುವ ವಿಮಾನಗಳು, ರೈಲುಗಳು ಮತ್ತು ಬಸ್ ಸೇವೆ ಗಮನಾರ್ಹವಾಗಿ ಕಡಿಮೆಯಾಗುತ್ತ ಬಂದಿದೆ. ಕೆಲವು ವಿಶೇಷ ರೈಲುಗಳ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಇತರ ರಾಜ್ಯಗಳಿಂದ ಅಯೋಧ್ಯೆಗೆ ಬರುವ ವಿಶೇಷ ಬಸ್ಸುಗಳ ಸಂಖ್ಯೆಯಲ್ಲೂ ಕಡಿತವಾಗಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದ ನಂತರ ಅಯೋಧ್ಯೆಗೆ ಬರುವ ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಜನವರಿಯಿಂದ ಮಾರ್ಚ್ 2024ರವರೆಗೆ ಪ್ರತಿದಿನ ಸುಮಾರು 1.5 ಲಕ್ಷ ಭಕ್ತರು ಭೇಟಿ ನೀಡುತ್ತಿದ್ದರು. ಆದರೆ ಏಪ್ರಿಲ್‌ನಿಂದ ಭಕ್ತರ ಸಂಖ್ಯೆ ಕಡಿಮೆಯಾಗುತ್ತ ಬಂತು. 

ಇದನ್ನೂ ಓದಿ: Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Continue Reading

ಧಾರ್ಮಿಕ

Vastu Tips: ಮನೆಯೊಳಗೆ ಎಲ್ಲೆಂದರಲ್ಲಿ ಕನ್ನಡಿ ಇಟ್ಟು ಕುಟುಂಬದ ನೆಮ್ಮದಿ ಹಾಳು ಮಾಡಬೇಡಿ!

ಕನ್ನಡಿಗಳು ಒಳ್ಳೆಯ ಮತ್ತು ಕೆಟ್ಟ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಕನ್ನಡಿಯನ್ನು ಸರಿಯಾಗಿ ಇರಿಸಿದರೆ (Vastu Tips) ಮಾತ್ರ ಧನಾತ್ಮಕ ಶಕ್ತಿಯ ಉತ್ತೇಜನವಾಗುತ್ತದೆ. ಮನೆಯಲ್ಲಿರುವ ಕನ್ನಡಿಗಳ ಸ್ಥಾನವು ನಿವಾಸಿಗಳ ಜೀವನವನ್ನು ಹೇಗೆ ಪ್ರಭಾವಿಸುತ್ತದೆ ಎಂಬ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಎಲ್ಲರ ಮನೆಯಲ್ಲೂ ಕನ್ನಡಿ ಇದ್ದೇ ಇರುತ್ತದೆ. ಆದರೆ ಈ ಕನ್ನಡಿಗಳನ್ನು ಎಲ್ಲಿ, ಹೇಗೆ ಇರಿಸಬೇಕು ಎಂಬುದನ್ನು ತಿಳಿದಿರಬೇಕು. ಇಲ್ಲವಾದರೆ ಮನೆ ಮಂದಿಗೆ ಆಪತ್ತು ಕಟ್ಟಿಟ್ಟ ಬುತ್ತಿಯಾಗುವುದು. ಕನ್ನಡಿಗಳನ್ನು (mirror) ವಾಸ್ತು ಪ್ರಕಾರ (Vastu Tips) ಇರಿಸಿದರೆ ಮನೆಯೊಳಗೇ ಧನಾತ್ಮಕ ಶಕ್ತಿ (positive energy) ವೃದ್ಧಿಯಾಗುತ್ತದೆ. ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ.

ಕನ್ನಡಿಗಳು ಒಳ್ಳೆಯ ಮತ್ತು ಕೆಟ್ಟ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಕನ್ನಡಿಯನ್ನು ಸರಿಯಾಗಿ ಇರಿಸಿದರೆ ಮಾತ್ರ ಧನಾತ್ಮಕ ಶಕ್ತಿಯ ಉತ್ತೇಜನವಾಗುತ್ತದೆ. ಮನೆಯಲ್ಲಿರುವ ಕನ್ನಡಿಗಳ ಸ್ಥಾನವು ನಿವಾಸಿಗಳ ಜೀವನವನ್ನು ಹೇಗೆ ಪ್ರಭಾವಿಸುತ್ತದೆ ಎಂಬ ಕುರಿತು ಮಾಹಿತಿ ಇಲ್ಲಿದೆ.

ಮಲಗುವ ಕೋಣೆ

ವಾಸ್ತು ಶಾಸ್ತ್ರದ ಪ್ರಕಾರ ಮಲಗುವ ಕೋಣೆಯಲ್ಲಿ ಅಥವಾ ಮಲಗುವ ಯಾವುದೇ ಜಾಗದಲ್ಲಿ ಕನ್ನಡಿಯನ್ನು ಇಡಬಾರದು. ದಂಪತಿ ತಮ್ಮ ಮಲಗುವ ಕೋಣೆಯಲ್ಲಿ ನೈಋತ್ಯ ದಿಕ್ಕಿನ ಕನ್ನಡಿಯನ್ನು ಇರಿಸಿದಾಗ ಮನೆ ಮಂದಿ ಹೆಚ್ಚಿನ ಒತ್ತಡವನ್ನು ಹೊಂದಿರುತ್ತಾರೆ.

ಮಗುವಿನ ನಿರೀಕ್ಷೆಯಲ್ಲಿರುವ ಮಹಿಳೆಯರು ಇನ್ನೂ ಹೆಚ್ಚಿನ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ನೀವು ನಿಮ್ಮ ಹಾಸಿಗೆಯ ಮುಂದೆ ಕನ್ನಡಿಯನ್ನು ಇಡುವುದನ್ನು ತಡೆಯುವುದು ಉತ್ತಮ.


ಡ್ರೆಸ್ಸಿಂಗ್ ಕೋಣೆ

ಮನೆಯಲ್ಲಿ ಸ್ಥಳಾವಕಾಶ ಇದ್ದರೆ ಪ್ರತ್ಯೇಕ ಡ್ರೆಸ್ಸಿಂಗ್ ಪ್ರದೇಶವನ್ನು ಮಾಡಿ. ಮಾಸ್ಟರ್ ಬೆಡ್‌ರೂಮ್‌ಗೆ ಜೋಡಿಸಲಾದ ಡ್ರೆಸ್ಸಿಂಗ್ ಕೋಣೆ ಪರಿಪೂರ್ಣವಾಗಿರುತ್ತದೆ. ಈ ಡ್ರೆಸ್ಸಿಂಗ್ ಕೋಣೆಯಲ್ಲಿ ಕನ್ನಡಿಯನ್ನು ಪೂರ್ವ ಅಥವಾ ಉತ್ತರ ಗೋಡೆಯ ವಿರುದ್ಧ ಇಡಬೇಕು.

ಮಕ್ಕಳ ಕೋಣೆ

ಮಕ್ಕಳ ಮಲಗುವ ಕೋಣೆಗಳಲ್ಲಿ ಕನ್ನಡಿಗಳನ್ನು ನೇತುಹಾಕುವಾಗ ಎಚ್ಚರಿಕೆ ಇರಲಿ. ವಾಸ್ತು ಪ್ರಕಾರ ಕನ್ನಡಿಯನ್ನು ಸರಿಯಾದ ದಿಕ್ಕಿನಲ್ಲಿ ಇಡದೇ ಇದ್ದರೆ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತದೆ.

ಇದನ್ನೂ ಓದಿ: Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

ಹಾಸಿಗೆಯ ಮೇಲ್ಭಾಗದಲ್ಲಿ ಕನ್ನಡಿಗಳ ಉಪಸ್ಥಿತಿಯು ಮಲಗುವವರಲ್ಲಿ ಚಡಪಡಿಕೆಯನ್ನು ಉಂಟು ಮಾಡುತ್ತದೆ. ಇದು ಉತ್ತಮ ನಿದ್ರೆ ಪಡೆಯಲು ಕಷ್ಟವಾಗಬಹುದು.

ಒಳಾಂಗಣ ವಿನ್ಯಾಸದಲ್ಲಿ ಇತ್ತೀಚೆಗೆ ಛಾವಣಿಗೆ ಕನ್ನಡಿಯನ್ನು ಹಾಕಲಾಗುತ್ತದೆ. ನೆಲ ಮತ್ತು ಹಾಸಿಗೆ ಅಡ್ಡಲಾಗಿ ಸೀಲಿಂಗ್ ಗೆ ಹೊಂದಿಸಲಾಗುವ ಕನ್ನಡಿಗಳಿಂದ ಉಂಟಾಗುವ ನೆರಳುಗಳು ಮನೆಯ ನಿವಾಸಿಗಳಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಬಹುದು ಮತ್ತು ಅತೃಪ್ತಿಕರ ವಾತಾವರಣಕ್ಕೆ ಕಾರಣವಾಗಬಹುದು.

Continue Reading

ಧಾರ್ಮಿಕ

Vastu Tips: ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕೆ? ಹೀಗೆ ಮಾಡಿ

ಮಾಡುವ ಕೆಲಸದಲ್ಲಿ ತೊಂದರೆ, ಸರಿಯಾದ ಉದ್ಯೋಗ ಸಿಗುತ್ತಿಲ್ಲ ಎಂದು ದುಃಖ ಪಡುವವರು ಅನೇಕರಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ವಾಸ್ತು ದೋಷ ಕೂಡ ಕಾರಣವಾಗಿರುತ್ತದೆ. ಕೆಲವು ಪರಿಹಾರಗಳನ್ನು (Vastu Tips) ಮಾಡುವುದರಿಂದ ಶೀಘ್ರದಲ್ಲೇ ಉದ್ಯೋಗ ಪಡೆಯಬಹುದು ಮತ್ತು ಮಾಡುವ ಕೆಲಸದಲ್ಲಿ ಪ್ರಗತಿ ಸಾಧಿಸಬಹುದು. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಮಾಡುವ ಕೆಲಸಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸ ಕೆಲವೊಮ್ಮೆ ದೊಡ್ಡ ಅನಾಹುತಕ್ಕೂ ಕಾರಣವಾಗಬಹುದು. ಕೆಲಸದಲ್ಲಿ (job) ಯಶಸ್ಸು ಸದಾ ದೊರೆಯಬೇಕು ಎನ್ನುವುದು ಎಲ್ಲರ ಆಸೆ. ಎಲ್ಲರ ಜೀವನದಲ್ಲೂ ವೃತ್ತಿ ಪ್ರಗತಿಗೆ (career progress) ಹಲವು ರೀತಿಯ ಸವಾಲುಗಳು ಎದುರಾಗುತ್ತವೆ. ಕೆಲವು ವಾಸ್ತು ಪರಿಹಾರಗಳನ್ನು (Vastu Tips) ಮಾಡುವುದರಿಂದ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಿಕೊಳ್ಳಬಹುದು.

ವಾಸ್ತು ಶಾಸ್ತ್ರದಲ್ಲಿ ಶಕ್ತಿಗೆ ವಿಶೇಷ ಪ್ರಾಮುಖ್ಯತೆ ಇದೆ. ಅದೃಷ್ಟವನ್ನು ಪಡೆಯಲು ವಾಸ್ತುವಿನಲ್ಲಿ ಅನೇಕ ಪರಿಹಾರಗಳನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರವು ಮನೆಗಳಿಗೆ ಮಾತ್ರವಲ್ಲದೆ ವೃತ್ತಿಜೀವನಕ್ಕೂ ಮುಖ್ಯವಾಗಿದೆ. ವೃತ್ತಿಯಲ್ಲಿ ಯಶಸ್ಸನ್ನು ತಂದುಕೊಳ್ಳಲು ಹಲವು ವಾಸ್ತು ಪರಿಹಾರಗಳನ್ನು ಸೂಚಿಸಲಾಗಿದೆ.

ದಿಕ್ಕು ಮುಖ್ಯ

ಉತ್ತರ ದಿಕ್ಕನ್ನು ಕುಬೇರನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಕೆಲಸ ಮಾಡಲು ತೊಂದರೆ ಎದುರಾಗುತ್ತಿದ್ದರೆ ಮನೆಯ ಉತ್ತರ ಗೋಡೆಯ ಮೇಲೆ ಮುಖ್ಯ ಕನ್ನಡಿಯನ್ನು ಇರಿಸಿ. ಈ ಕನ್ನಡಿ ಎಷ್ಟು ದೊಡ್ಡದಾಗಿರಬೇಕು ಎಂದರೆ ನಿಮ್ಮ ಇಡೀ ದೇಹವು ಅದರಲ್ಲಿ ಗೋಚರಿಸಬೇಕು. ಈ ವಾಸ್ತು ಪರಿಹಾರವನ್ನು ಮಾಡುವುದರಿಂದ ನಿಮಗೆ ಶೀಘ್ರದಲ್ಲೇ ಕೆಲಸ ಸಿಗುತ್ತದೆ.

ಮನೆಯ ಮಧ್ಯಭಾಗ

ಮನೆಯ ಮಧ್ಯಭಾಗವು ಬ್ರಹ್ಮಸ್ಥಾನವಾಗಿದೆ. ಇದನ್ನು ಗುರು ಗ್ರಹದ ಸ್ಥಳವೆಂದೂ ಪರಿಗಣಿಸಲಾಗಿದೆ. ಗುರುವು ಬಲವಾಗಿದ್ದರೆ, ನಿಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಪ್ರಗತಿ ಹೊಂದುತ್ತೀರಿ. ಇದಕ್ಕಾಗಿ, ಮನೆಯ ಮಧ್ಯದಲ್ಲಿ ಕೆಲವು ಭಾರವಾದ ವಸ್ತುಗಳನ್ನು ಇರಿಸಿ. ಇದು ವೃತ್ತಿಜೀವನದಲ್ಲಿ ನಿಮಗೆ ಪ್ರಯೋಜನವನ್ನು ನೀಡುತ್ತದೆ.


ರುದ್ರಾಕ್ಷಿ

ಉದ್ಯೋಗ ಪಡೆಯಲು ರುದ್ರಾಕ್ಷಿಯನ್ನು ಧರಿಸುವುದು ಉತ್ತಮ ಆಯ್ಕೆಯಾಗಿದೆ. ಉದ್ಯೋಗ ಪಡೆಯಲು ಏಕಮುಖ, ಹತ್ತು ಮುಖ ಅಥವಾ ಹನ್ನೊಂದು ಮುಖದ ರುದ್ರಾಕ್ಷವನ್ನು ಧರಿಸಿ. ಮಾಂಸ ಮತ್ತು ಮದ್ಯ ಸೇವಿಸುವವರು ರುದ್ರಾಕ್ಷವನ್ನು ಧರಿಸಬಾರದು ಎಂಬುದು ನೆನಪಿರಲಿ.

ಮಲಗುವ ಕೋಣೆ

ಮಲಗುವ ಕೋಣೆಯಲ್ಲಿ ಸಾಧ್ಯವಾದಷ್ಟು ಹಳದಿ ಬಣ್ಣವನ್ನು ಬಳಸಿ. ಹಳದಿ ಬಣ್ಣವು ಗುರು ಮತ್ತು ವಿಷ್ಣುವಿಗೆ ತುಂಬಾ ಪ್ರಿಯವಾಗಿದೆ. ಈ ಎರಡೂ ದೇವತೆಗಳ ಆಶೀರ್ವಾದವನ್ನು ಪಡೆಯುವುದು ಉದ್ಯೋಗದ ಹಾದಿಯನ್ನು ಸುಗಮಗೊಳಿಸುತ್ತದೆ.

ಇದನ್ನೂ ಓದಿ: Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

ಕೆಂಪು ಬಣ್ಣ

ವಾಸ್ತು ಪ್ರಕಾರ ಕೆಂಪು ಬಣ್ಣವು ಯಾವಾಗಲೂ ಶುಭ ಫಲಿತಾಂಶಗಳನ್ನು ನೀಡುತ್ತದೆ. ಸಂದರ್ಶನಕ್ಕೆ ಹೋದಾಗ ಅಥವಾ ಉದ್ಯೋಗಕ್ಕಾಗಿ ಪರೀಕ್ಷೆಗೆ ಹೋದಾಗ ನಿಮ್ಮೊಂದಿಗೆ ಕೆಂಪು ಕರವಸ್ತ್ರವನ್ನು ಇಟ್ಟುಕೊಳ್ಳಿ. ಆ ದಿನ ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಲು ಪ್ರಯತ್ನಿಸಿ. ಇದು ಆ ಪರೀಕ್ಷೆ ಅಥವಾ ಸಂದರ್ಶನದಲ್ಲಿ ಯಶಸ್ಸಿನ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.


ಗಣೇಶನನ್ನು ಪೂಜಿಸಿ

ಉದ್ಯೋಗಕ್ಕಾಗಿ ಪರೀಕ್ಷೆ ಅಥವಾ ಸಂದರ್ಶನಕ್ಕಾಗಿ ಹೊರಗೆ ಹೋದಾಗ ಮನೆಯಿಂದ ಹೊರಡುವ ಮೊದಲು ಯಾವಾಗಲೂ ಗಣೇಶನನ್ನು ಪೂಜಿಸಿ. ಅಂದು ಗಣಪತಿಗೆ ವೀಳ್ಯದೆಲೆಯನ್ನು ಅರ್ಪಿಸಿ ಪ್ರಸಾದವಾಗಿ ಸ್ವೀಕರಿಸಿ. ವಾಸ್ತು ಶಾಸ್ತ್ರದಲ್ಲಿ ಇದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.

Continue Reading
Advertisement
Hathras Stampede
ದೇಶ23 mins ago

Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

karnataka weather Forecast
ಮಳೆ41 mins ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Ambani Family Fashion
ಫ್ಯಾಷನ್1 hour ago

Ambani Family Fashion: ಅಂಬಾನಿ ಮಹಿಳೆಯರ ದುಬಾರಿ ಉಡುಗೆಗಳು; ಇವರ ಮದುವೆ ಡ್ರೆಸ್‌‌ಗಳು ಹೇಗಿವೆ?

Team India :
ಪ್ರಮುಖ ಸುದ್ದಿ1 hour ago

Team India : ಎರಡನೇ ಟಿ20 ವಿಶ್ವ ಕಪ್​ ಗೆದ್ದ ಬಳಿಕವೂ ಭಾರತ ತಂಡದ ಜೆರ್ಸಿಯಲ್ಲಿ ಒಂದೇ ಸ್ಟಾರ್​ ಯಾಕೆ? ಇಲ್ಲಿದೆ ವಿವರಣೆ

BJP Karnataka
ಕರ್ನಾಟಕ1 hour ago

BJP Karnataka: ವಿಧಾನಸಭೆ, ವಿಧಾನ ಪರಿಷತ್ ಉಪಚುನಾವಣೆ; 4 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

Narendra Modi
ಪ್ರಮುಖ ಸುದ್ದಿ1 hour ago

Narendra Modi: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ಗೆ ಮೋದಿ ಕರೆ; ಭಾರತಕ್ಕೆ ಆಗಮಿಸುವಂತೆ ಮನವಿ!

Nafees Iqbal
ಪ್ರಮುಖ ಸುದ್ದಿ2 hours ago

Nafees Iqbal : ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗನಿಗೆ ಮೆದುಳಿನ ರಕ್ತಸ್ರಾವ; ಪರಿಸ್ಥಿತಿ ಗಂಭೀರ

World Chocolate Day
ಲೈಫ್‌ಸ್ಟೈಲ್2 hours ago

World Chocolate Day: ಬಾಯಿ ಸಿಹಿ ಮಾಡಿಕೊಳ್ಳುವುದಕ್ಕೆ ಮತ್ತೊಂದು ದಿನ! ಇಂದು ಚಾಕಲೇಟ್ ಮರೆಯದೇ ತಿನ್ನಿ!

Password Leak
ದೇಶ2 hours ago

Password Leak: 995 ಕೋಟಿ ಪಾಸ್‌ವರ್ಡ್‌ಗಳು ಲೀಕ್;‌ ನಿಮ್ಮ ಪಾಸ್‌ವರ್ಡ್‌ ಕೂಡ ಕಳ್ಳತನ ಆಗಿದೆಯೇ?

CM Siddaramaiah
ಕರ್ನಾಟಕ2 hours ago

CM Siddaramaiah: ಪ್ರತಿ ಠಾಣೆಗೂ ತೆರಳಿ ಪರಿಶೀಲಿಸಬೇಕು: ಪೊಲೀಸ್‌ ಮೇಲಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ41 mins ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ3 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ4 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು7 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ8 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ13 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌