Navaratri 2023: ಮಹಿಷಾಸುರನನ್ನು ಮಾತ್ರವಲ್ಲ, ಎಷ್ಟೊಂದು ರಕ್ಕಸರನ್ನು ಸಂಹರಿಸಿದ್ದಾಳೆ ದೇವಿ! - Vistara News

ಕರ್ನಾಟಕ

Navaratri 2023: ಮಹಿಷಾಸುರನನ್ನು ಮಾತ್ರವಲ್ಲ, ಎಷ್ಟೊಂದು ರಕ್ಕಸರನ್ನು ಸಂಹರಿಸಿದ್ದಾಳೆ ದೇವಿ!

ದೇವಿಯನ್ನು ಚಂಡಿ, ಚಾಮುಂಡಿ, ಕಾಳಿ, ಕಾತ್ಯಾಯನಿ, ಅಂಬಾ, ದುರ್ಗಾ, ಈಶ್ವರಿ ಮುಂತಾದ ಹಲವು ಹೆಸರುಗಳಿಂದ ಕರೆಯಲಾಗಿದೆ. ನವರಾತ್ರಿ ಸಂದರ್ಭದಲ್ಲಿ (Navaratri 2023) ದೇವಿ ಮಹಿಮೆಯ ಒಂದಿಷ್ಟು ಸಂಗತಿಗಳನ್ನು ತಿಳಿಯೋಣ.

VISTARANEWS.COM


on

Navaratri 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಲಕಾ ಕೆ, ಮೈಸೂರು

ಪೂಜೆ, ಉಪಾಸನೆ, ಆರಾಧನೆಗಳು ಮಾನವನ ಆದಿ ಸಂಸ್ಕೃತಿಯ ಭಾಗ. ಯಾವುದೋ ಕಾಮಿತಾರ್ಥವಾಗಿ, ಫಲಪ್ರಾಪ್ತಿಗಾಗಿ, ಭೀತಿ ನಿವಾರಣೆಗಾಗಿ, ಸಾಧನೆಯ ಮಾರ್ಗವಾಗಿ- ಹೀಗೆ ಹಲವು ಕಾರಣಗಳಿಗಾಗಿ ಉಪಾಸನೆಗಳನ್ನು ಕೈಗೊಳ್ಳುವುದು ಸಾಮಾನ್ಯ. ಅದರಲ್ಲೂ ಉಪಾಸನೆಗೊಳ್ಳುವ ಪೀಠದ ಶಕ್ತಿ ಹೆಚ್ಚು ಎಂದಷ್ಟಕ್ಕೂ ಆರಾಧನೆಯ ಪ್ರಮಾಣ ಮತ್ತು ಆರಾಧಕರ ಸಂಖ್ಯೆಯೂ ಹೆಚ್ಚು. ಹಾಗೆ ನೋಡಿದರೆ, ಶಕ್ತಿ ಪೀಠಗಳೆಂಬ ಉಲ್ಲೇಖಗಳು ಸಾಮಾನ್ಯವಾಗಿ ದೇವಿಯ ಪೀಠಗಳನ್ನೇ ಉದ್ದೇಶಿಸಿದ್ದಾಗಿರುತ್ತದೆ. ಈ ಪೀಠಗಳ ಶಕ್ತಿಯೋ, ಉಪಾಸಕರ ಭಕ್ತಿಯೋ ಅಂತೂ ಭವದ ಮಾಯೆಗಳನ್ನು ದಾಟಲು ಅಗೋಚರ ಸೇತುವೆಗಳು ಇಲ್ಲಿ ಹೆಣೆದುಕೊಳ್ಳುತ್ತವೆ. ಶಕ್ತಿ ಸ್ವರೂಪಿಣಿಯ ಆರಾಧನೆಯ ಈ ದಿನಗಳಲ್ಲಿ (Navaratri 2023), ಮಾಯೆಗಳೆಂಬ ಆಸುರೀ ಪಾಶಗಳನ್ನು ಕಳೆದುಕೊಳ್ಳುವ ಬಗ್ಗೆ, ಅದರ ಸುತ್ತ ಹರಡಿರುವ ಕುತೂಹಲಗಳ ಬಗೆಗೆ ಒಂದಿಷ್ಟು ಜಿಜ್ಞಾಸೆಯಿದು.

Durga idol for Durga puja festival in kolkata, West Bengal

ಯಾವುದನ್ನೇ ಆರಾಧಿಸುವಾಗಲೂ ಅದರಲ್ಲೊಂದು ಪ್ರಸ್ತುತತೆಯನ್ನು ಹುಡುಕುವುದು ಸಹಜ. ನವರಾತ್ರಿಯ ನೆವದಲ್ಲಿ ಒಂಬತ್ತು ದೇವಿಯರ ಸ್ವರೂಪಗಳನ್ನು ಆರಾಧಿಸುವಾಗಲೂ ಇದು ಸತ್ಯ. ಈ ವಿಷಯದಲ್ಲಿ ದೇವ- ದೇವಿ ಎಂಬ ಲಿಂಗಭೇದವೆಂದು ಭಾವಿಸದೆ ಸಹಜ ಕುತೂಹಲದಲ್ಲಿ ನೋಡುವುದಾದರೆ- ದೇವಿಯರ ಆರಾಧಕರಲ್ಲಿ ಹೆಚ್ಚು ಭಿನ್ನತೆ ಕಾಣುವುದಿಲ್ಲ. ಇದನ್ನು ಸ್ಪಷ್ಟವಾಗಿ ಹೇಳಬೇಕೆಂದರೆ, ಹರಿ ಪಾರಮ್ಯವನ್ನು ಒಪ್ಪುವವರು ವೈಷ್ಣವರು, ಶಿವನ ಆರಾಧಕರು ಶೈವರು, ಗಣಪತಿಯ ಉಪಾಸಕರು ಗಾಣಪತ್ಯರು ಎಂದೆಲ್ಲಾ ವಿಭಾಗಗಳನ್ನು ಕಾಣಬಹುದು. ತ್ರಿಮೂತ್ರಿಗಳಲ್ಲೂ ಬ್ರಹ್ಮನ ಆರಾಧಕರು ವಿರಳ; ಉಳಿದಿಬ್ಬರು ದೇವರ ಆರಾಧಕರಲ್ಲಿ ಭಿನ್ನತೆ ಬಹಳ. ಆದರೆ ಶಕ್ತಿಯ ಆರಾಧಕರನ್ನೆಲ್ಲಾ ಶಾಕ್ತರು ಎಂದು ಕರೆಯಬಹುದಾದರೆ- ಅವರೆಲ್ಲಾ ಬಹುತೇಕ ಒಂದೇ. ಅಂದರೆ ಲಕ್ಷ್ಮಿ, ಸರಸ್ವತಿ, ಪಾರ್ವತಿ, ದುರ್ಗೆ ಎಂದು ಬೇರೆಯೇ ವ್ರತ-ಹಬ್ಬಗಳನ್ನು ಆಚರಿಸಿದರೂ, ಇವರದ್ದೆಲ್ಲಾ ಪ್ರತ್ಯೇಕ ಪಂಥವಲ್ಲ. ಅವರೆಲ್ಲಾ ದೇವಿಯ ಭಕ್ತರು ಮಾತ್ರ. ಹೀಗೆ ಸಂಪತ್ತು, ವಿದ್ಯೆ, ಶಕ್ತಿ ಎಂಬಿತ್ಯಾದಿ ಹಲವು ಸ್ವರೂಪಗಳಲ್ಲಿ ಆವಿರ್ಭವಿಸುವ ಶಕ್ತಿಯನ್ನು ಭಿನ್ನಗೊಳಿಸದೆ, ಭಕ್ತಿಯ ಮೂಲಕ ಏಕತ್ರಗೊಳಿಸುವ ಸಾಧ್ಯತೆಯು ಅನನ್ಯ ಎನಿಸುವುದು ಈ ಕಾರಣಕ್ಕೆ.

Bengali Durga Mata

ಹಲವು ಕೃತಿಗಳಲ್ಲಿ ಉಲ್ಲೇಖ

ದೇವಿಗೆ ಸಂಬಂಧಿಸಿದ ಸಂಗತಿಗಳನ್ನು ಮಾರ್ಕಂಡೇಯ ಪುರಾಣ, ಶ್ರೀದೇವಿ ಭಾಗವತ, ಸ್ಕಾಂದ ಪುರಾಣ, ಕಾಲಿಕಾ ಪುರಾಣ, ವರಾಹ ಪುರಾಣ ಮುಂತಾದ ಕೃತಿಗಳಲ್ಲಿ ಕೊಂಚ ವ್ಯತ್ಯಾಸಗಳೊಂದಿಗೆ ನಿರೂಪಿಸಲಾಗಿದೆ. ಚಂಡಿ, ಚಾಮುಂಡಿ, ಕಾಳಿ, ಕಾತ್ಯಾಯನಿ, ಅಂಬಾ, ದುರ್ಗಾ, ಈಶ್ವರಿ ಮುಂತಾದ ಹಲವು ಹೆಸರುಗಳಿಂದ ಆಕೆಯನ್ನು ಕರೆಯಲಾಗಿದೆ. ಆದರೆ ಈ ಎಲ್ಲಾ ಕೃತಿಗಳ ಪ್ರಕಾರ, ದೇವತೆಗಳ ರಕ್ಷಣೆಗಾಗಿ ಆವಿರ್ಭವಿಸುವ ದೇವಿ, ಶಿಷ್ಟರಿಗೆಲ್ಲ ಕಂಟಕನಾಗಿದ್ದ ಮಹಿಷಾಸುರನನ್ನು ಸಂಹರಿಸುತ್ತಾಳೆ. ಇದಕ್ಕಾಗಿ ಎಲ್ಲಾ ದೇವಾಧಿದೇವತೆಗಳ ತೇಜಸ್ಸು ಏಕತ್ರಗೊಂಡು, ಸರ್ವಶಕ್ತಳಾದ ದೇವಿಯ ಸ್ವರೂಪ ಪಡೆಯುತ್ತದೆ. ಮಹಿಷನನ್ನು ಮಾತ್ರವಲ್ಲದೆ, ಚಂಡ-ಮುಂಡರು, ರಕ್ತಬೀಜ, ಶುಂಭ-ನಿಶುಂಭರನ್ನೂ ವಧಿಸುತ್ತಾಳೆ ಈ ದೇವಿ. ನವರಾತ್ರಿ ಆಚರಣೆಯ ಪ್ರಮುಖ ಹಿನ್ನೆಲೆಯೇ ಈ ಸರ್ವಶಕ್ತಿಯ ಆರಾಧನೆ.

Navadurga

ನವದುರ್ಗೆಯರು

ಒಂಬತ್ತು ದಿನ ಉಪಾಸನೆಗೊಳ್ಳುವ ಒಂಬತ್ತು ದೇವಿಯರದ್ದು ಭಿನ್ನ ಪ್ರವೃತ್ತಿ ಮತ್ತು ಅನುಪಮ ಶಕ್ತಿ. ಮೊದಲ ದಿನ ಶೈಲಪುತ್ರಿ ಎನಿಸಿಕೊಳ್ಳುವ ಈಕೆಯ ಹಿಂದೆ ಅಗ್ನಿಯಲ್ಲಿ ದಹಿಸಿ ಹೋಗುವ ದಾಕ್ಷಾಯಿಣಿಯ ಕಥೆಯಿದೆ. ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದನ್ನ ಸಹಿಸದ ದಾಕ್ಷಾಯಿಣಿ, ತಂದೆಯ ವಿರುದ್ಧವೇ ಸಿಡಿದೇಳುವ ಕಥೆಯಿದು. ʻದಕ್ಷನ ಮಗಳು ದಾಕ್ಷಾಯಿಣಿʼ ಎನಿಸಿಕೊಳ್ಳುವುದನ್ನೇ ವಿರೋಧಿಸಿ, ಯೋಗಾಗ್ನಿಯಲ್ಲಿ ದಹಿಸಿಕೊಂಡು, ಶೈಲಪುತ್ರಿಯಾಗಿ ಮತ್ತೆ ಹುಟ್ಟಿಬಂದು ಶಿವನನ್ನು ಸೇರಿದಳೆನ್ನುತ್ತವೆ ಪುರಾಣಗಳು. ಎರಡನೇ ದಿನ ಆಕೆ ಬ್ರಹ್ಮಚಾರಿಣಿ. ಪಾರ್ವತಿಯಾಗಿ ಹುಟ್ಟಿದ ಮರುಜನ್ಮದಲ್ಲಿ ಶಿವನನ್ನೇ ಸೇರಬೇಕೆಂಬ ಏಕೋದ್ದೇಶದಿಂದ ಕಠಿಣ ತಪಸ್ಸನ್ನಾಚರಿಸಿ, ಗುರಿ ಸಾಧಿಸಿದ ಛಲದ ಸಂಕೇತವಾಗಿ ಆಕೆ ಅಂದು ಪೂಜಿಸಲ್ಪಡುತ್ತಾಳೆ. ಮೂರನೇ ದಿನ ಚಂದ್ರಘಂಟಾ ಎನಿಸಿಕೊಳ್ಳುವ ಆಕೆ, ಶಿವನಲ್ಲಿದ್ದ ಘೋರ ಸ್ವರೂಪವನ್ನು ಶಮನ ಮಾಡಿ, ಸಾತ್ವಿಕ ಸ್ವರೂಪವನ್ನು ಉದ್ದೀಪಿಸಿದ ಕಾರಣಕ್ಕೆ ಮಹತ್ವ ಪಡೆಯುತ್ತಾಳೆ. ನಾಲ್ಕನೇ ದಿನ ಕೂಷ್ಮಾಂಡವೆನಿಸಿಕೊಳ್ಳುವ ಆಕೆಯಿಂದ, ಉಮೆ, ರಮೆ, ವಾಣಿಯರ ಉದ್ಭವ ಎನ್ನಲಾಗುತ್ತದೆ.

ಶಕ್ತಿ ಸ್ವರೂಪಗಳ ಉಗಮ

ಶಕ್ತಿ ಸ್ವರೂಪಗಳ ಉಗಮ-ಸಂಗಮಗಳು ಹೀಗೆ ಒಂದೇ ಎನಿಸಿಕೊಂಡ ಕಾರಣದಿಂದಲೇ ಶಕ್ತಿಯ ಆರಾಧಕರಲ್ಲಿ ಭಿನ್ನತೆ ಇಲ್ಲದೆ ಇರಬಹುದು. ಐದನೇ ದಿನ ಸ್ಕಂದಮಾತಾ ಎಂಬ ಹೆಸರಿನಿಂದ ಮಾತೃಸ್ವರೂಪಿಣಿಯಾಗಿ ಪೂಜೆಗೊಳ್ಳುತ್ತಾಳೆ. ಆರನೇ ದಿನ ಆಕೆ ಕಾತ್ಯಾಯನಿ. ಋಷಿ ಕಾತ್ಯಾಯನನ ಸಂತಾನದ ರೂಪದಲ್ಲಿ ದೈವೀಶಕ್ತಿಯು ಭೂಮಿಗೆ ಅವತರಿಸುವ ಹಿನ್ನೆಲೆ ಈ ಕಥೆಗಿದೆ. ಆಸುರೀ ಮಾಯೆಗಳ ನಿರ್ಮೂಲನೆಗೆ ದೈವೀಶಕ್ತಿಗೆ ಇರಬಹುದಾದ ಮಾನುಷ ಪ್ರವೃತ್ತಿಯನ್ನು ಇದು ಪ್ರತಿನಿಧಿಸುತ್ತದೆನ್ನಬಹುದು. ಏಳನೇ ದಿನಕ್ಕೆ ಕಾಳರಾತ್ರಿಯ ಅವತಾರಿಣಿ. ಚಂಡ-ಮುಂಡರನ್ನು ವಧಿಸಿ ಈಗಾಗಲೇ ಚಾಮುಂಡಿ ಎನಿಸಿಕೊಂಡಿದ್ದಾಳೆ.

Close up view of Maa Durga's Face during Durga Puja festival.

ಘೋರ ಅವತಾರ

ದೇವಿಯ ಅವತಾರಗಳಲ್ಲೇ ಕಾಳರಾತ್ರಿಯನ್ನು ಘೋರ ಎನ್ನಬಹುದು. ಈಕೆ ರಕ್ತಬೀಜನ ಸಂಹಾರಿಣಿ. ಸಪ್ತಮಿಯ ದಿನವೇ ವಿದ್ಯಾಧಿದೇವತೆ ಸರಸ್ವತಿಯ ಪೂಜೆಯೂ ನಡೆಯುತ್ತದೆ. ಕಾಳರಾತ್ರಿಯ ಅವತಾರವನ್ನು ತೊರೆದು ತನ್ನ ಮೊದಲಿನ ಸ್ವರೂಪಕ್ಕೆ ಮರಳುವ ಆಕೆ ಕರೆಸಿಕೊಳ್ಳುವುದು ಮಹಾಗೌರಿ ಎಂದು- ಇದು ಎಂಟನೇ ದಿನದಂದು. ಇದೇ ದಿನ ನಿಶುಂಭನ ಸಂಹಾರವೂ ನಡೆಯುತ್ತದೆ. ಮಹಾನವಮಿಯಂದು ಶುಂಭನ ವಧೆ. ಸಿದ್ಧಿಧಾತ್ರಿಯೆಂದು ಕರೆಸಿಕೊಳ್ಳುವ ಆಕೆ ಸಿದ್ಧಿಪ್ರದಾಯಿನಿ ಎಂದೇ ಪೂಜಿತಳಾಗುತ್ತಾಳೆ. ವಿಜಯದಶಮಿಯಂದು ಮಹಿಷಾಸುರ ಮರ್ದಿನಿಯ ಉಪಾಸನೆ. ಹೀಗೆ ಸ್ವಾಭಿಮಾನ, ಛಲ, ಸಹನೆ, ಸಾತ್ವಿಕತೆ, ಶಕ್ತಿ, ಮಮತೆ, ಕ್ರೋಧ, ವಿದ್ಯೆ, ಸಿದ್ಧಿಯಂಥ ಹಲವು ಗುಣಗಳ ಅಪೂರ್ವ ಎರಕದಂತೆ ಕಾಣುತ್ತಾಳೆ ಚಾಮುಂಡೇಶ್ವರಿ.

ಜನಪದರಲ್ಲಿ ದೇವಿ

ಇವೆಲ್ಲಾ ಶಿಷ್ಟ ಪುರಾಣಗಳ ಮಾತಾಯಿತು. ಜನಪದರಲ್ಲಿ ದೇವರುಗಳ ಲೋಕ ಮನುಷ್ಯರಿಗಿಂತ ತೀರಾ ಭಿನ್ನವೇನಲ್ಲ. ಉಜ್ಜಯಿನಿಯ ಬಿಜ್ಜಳ ರಾಯನಿಗೆ ಏಳು ಹೆಣ್ಣು ಮಕ್ಕಳು. ಅವರಲ್ಲಿ ಹಿರಿಯವಳು ಪಿರಿಯಾಪಟ್ಟಣದ ಉರಿಮಸಣಿ; ಕಿರಿಯವಳು ಚಾಮುಂಡಿ. ಏನೇನೋ ಕಾರಣಗಳಿಗಾಗಿ ಎಲ್ಲರೂ ಜಗಳವಾಡಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ನೆಲೆಗೊಳ್ಳುತ್ತಾರೆ. ಕಿರಿಯವಳು ತನ್ನ ನೆಲೆಗಾಗಿ ಜಾಗ ಹುಡುಕುತ್ತಿದ್ದಾಗ ಮಹಿಷಮಂಡಲ ಆಕೆಗೆ ಗೋಚರಿಸುತ್ತದೆ. ಅಲ್ಲಿನ ದೊರೆ ಮಹಿಷನು ಬ್ರಹ್ಮನ ವರದಿಂದ ಬೀಗುತ್ತಿದ್ದವ. ಅವನನ್ನು ಎದುರಿಸುವುದಕ್ಕೆ, ತನ್ನ ಬೆವರಿನಿಂದ ಉತ್ತನಳ್ಳಿ ಮಾರಮ್ಮನನ್ನು ಸೃಷ್ಟಿಸಿಕೊಂಡು, ಆಕೆಯ ನೆರವಿನಿಂದ ಮಹಿಷಾಸುರನನ್ನು ಚಾಮುಂಡಿ ಸೋಲಿಸುತ್ತಾಳೆ. ಆ ಮಹಿಷಮಂಡಲವೇ ಮುಂದೆ ಮಹಿಷಪುರಿ, ಮಹಿಶೂರಾಗಿ ನಂತರ ಮೈಸೂರಾಗಿದೆ ಎಂಬುದು ಪ್ರತೀತಿ.

ಮಲೆಯ ಮಾದೇಶ್ವರ ಕಾವ್ಯ

ಮಲೆಯ ಮಾದೇಶ್ವರ ಕಾವ್ಯದಲ್ಲಿ, ಶ್ರವಣ ದೊರೆಯ ಸಂಹಾರಕ್ಕಾಗಿ ಭೂಮಿಗೆ ಬಂದ ಶಿವನೊಂದಿಗೆ ಪಾರ್ವತಿಯೂ ಬಂದಿರುತ್ತಾಳೆ. ಆಗ ಕಂಟಕಪ್ರಾಯನಾದ ಮಹಿಷನನ್ನು ಘೋರರೂಪ ತಾಳಿ ಆಕೆ ಮರ್ದಿಸುತ್ತಾಳೆ. ಆಕೆಯ ಕರಾಳರೂಪವನ್ನು ನೋಡಲಾರದ ಶಿವ, ಆಕೆಯನ್ನು ಬಿಟ್ಟು ಮುಂದೆ ಹೋಗುವಾಗ ಪಾರ್ವತಿಯೂ ಆತನೊಂದಿಗೆ ಬರುತ್ತಾಳೆ. ಆದರೆ ತನ್ನದೇ ಅಂಶವಾದ ನಂಜನಗೂಡಿನ ನಂಜುಂಡನನ್ನು ಸೇರಬೇಕೆಂದು ಹೇಳಿ ಶಿವ, ಚಾಮುಂಡಿಯನ್ನು ಕಳಿಸಿಬಿಡುತ್ತಾನೆ. ನಂಜುಂಡ-ಚಾಮುಂಡಿಯರ ವರ್ಣರಂಜಿತ ಪ್ರಸಂಗವನ್ನು ದೇವರಗುಡ್ಡರು, ನೀಲಗಾರರು, ತಂಬೂರಿಯವರೆಲ್ಲಾ ಇಂದಿಗೂ ಹಾಡುತ್ತಾರೆ. ಇನ್ನು ಐತಿಹಾಸಿಕವಾಗಿ ಮೈಸೂರಿನ ಅರಸರ ಪರವಾಗಿ, ಚಾಮುಂಡಿ ಎಂಬ ವೀರವನಿತೆ ಯುದ್ಧಗಳಲ್ಲಿ ಪಾಲ್ಗೊಂಡಿದ್ದ ಬಗ್ಗೆ ಕೆಲವು ಲಾವಣಿಗಳು ಹೇಳುತ್ತವೆ. ಪಿರಿಯಾಪಟ್ಟಣದ ಲಾವಣಿ, ಮಾಗಡಿ ಕೆಂಪೇಗೌಡನ ಲಾವಣಿಗಳಲ್ಲಿ, ಚಾಮುಂಡಿಯೆಂಬಾಕೆ ನಂಜುಂಡನೊಡನೆ ಯುದ್ಧದಲ್ಲಿ ಪಾಲ್ಗೊಂಡ ವರ್ಣನೆಗಳು ಬರುತ್ತವೆ.

Durga Puja Festival

ಎಷ್ಟೊಂದು ಹೆಸರುಗಳು!

ಪಾರ್ವತಿ, ದುರ್ಗೆ, ಚಾಮುಂಡಿ, ಗೌರಿ, ಲಲಿತೆ ಮುಂತಾಗಿ ಹೆಸರು ಯಾವುದೇ ಇರಲಿ; ಸ್ವಾಭಿಮಾನಿ, ಶಕ್ತಿಸ್ವರೂಪಿಣಿ, ಮಾತೃಹೃದಯಿ, ಸಹನಾಮಯಿ, ಆದಿಮಾಯೆ- ಹೀಗೆ ವಿಶೇಷಣಗಳು ಎಂಥದ್ದೇ ಇರಲಿ; ಅರಿಷಡ್‌ವರ್ಗಗಳನ್ನು ಗೆಲ್ಲುವ ಆತ್ಮ, ದುಷ್ಟ ಶಿಕ್ಷಣ-ಶಿಷ್ಟ ರಕ್ಷಣ, ಕೆಡುಕಿನ ಮೇಲೆ ಒಳಿತಿನ ಜಯ ಇತ್ಯಾದಿ ಕಥಾಕಥಿತ ಉದ್ದೇಶಗಳು ಏನೇ ಇರಲಿ- ಬದುಕಿನ ಒಳಿತು, ಉನ್ನತಿಗಾಗಿ ಹಲವು ದೇವಿಗಳೆಂಬ ಖಂಡ ಶಕ್ತಿಗಳೆಲ್ಲ ಒಂದಾಗಿ, ಒಂದು ಅಖಂಡ ಶಕ್ತಿಯಾಗಿ ರೂಪುಗೊಳ್ಳುವ ಮಹತ್ವದ ಅರಿವು ನಮಗಾಗಲಿ. ಮನದೊಳಗೆ ಅವಿತಿರುವ ಅಸುರನನ್ನು ಮೆಟ್ಟಿ, ನಮ್ಮ ಕೆಡುಕಿನ ಮೇಲೆ ನಾವೇ ಒಳಿತು ಸಿದ್ಧಿಸಿಕೊಳ್ಳುವ ಮೂಲಕ, ವಿಜಯದಶಮಿ ಕೇವಲ ಸಾಂಕೇತಿಕವಾಗಿ ಉಳಿಯದಿರಲಿ. ದಸರೆಯ ಶುಭ ಹಾರೈಕೆಗಳು.

ಇದನ್ನೂ ಓದಿ: Navaratri Colour Trend | ನವರಾತ್ರಿಯ 7ನೇ ದಿನ ಕಿತ್ತಳೆ ವರ್ಣದ ಟ್ರೆಡಿಷನಲ್‌ ವೇರ್‌ನಲ್ಲಿ ಕಂಗೊಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024: ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ. 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ.

VISTARANEWS.COM


on

SSLC Result 2024 secret behind 20 percent grace marks
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading

ಚಿನ್ನದ ದರ

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಕಳೆದ ಎರಡು ದಿನಗಳಿಂದ ಇಳಿಯುತ್ತಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಬೆಲೆ ಇಂದು ತುಸು ಇಳಿಕೆಯಾಗಿದೆ. ಬೆಲೆಗಳೆಷ್ಟಿವೆ ಗಮನಿಸಿ.

VISTARANEWS.COM


on

gold rate today sreeleela
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹10 ಹಾಗೂ ₹11 ಇಳಿಕೆಯಾಗಿವೆ. ನಿನ್ನೆ ಕೂಡ ಇದೇ ಪ್ರಮಾಣದಲ್ಲಿ ದರ (Gold Price today) ಇಳಿಕೆಯಾಗಿತ್ತು. ವಾರಾಂತ್ಯದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,615ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,150 ಮತ್ತು ₹6,61,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,216 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,728 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,160 ಮತ್ತು ₹7,21,600 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.20, ಎಂಟು ಗ್ರಾಂ ₹681.60 ಮತ್ತು 10 ಗ್ರಾಂ ₹852ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,520 ಮತ್ತು 1 ಕಿಲೋಗ್ರಾಂಗೆ ₹85,200 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,30072,310
ಮುಂಬಯಿ66,15072,160
ಬೆಂಗಳೂರು66,15072,160
ಚೆನ್ನೈ66,15072,160

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading

ಬೆಂಗಳೂರು

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024: ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, ಅತ್ತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಿಕ್ಸರ್‌ ಬಾರಿಸಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿರುವ ಅನುದಾನರಹಿತ ಶಾಲೆಗಳು ಫಲಿತಾಂಶದಲ್ಲಿ ಮುನ್ನುಗಿವೆ.

VISTARANEWS.COM


on

By

SSLC Result 2024 78 schools get zero results in SSLC exams
Koo

ಬೆಂಗಳೂರು: ಮಾರ್ಚ್‌-ಏಪ್ರಿಲ್ 2024ರ ಎಸ್ಎಸ್‌ಎಲ್‌ಸಿ ಪರೀಕ್ಷೆಯನ್ನು (SSLC Result 2024) ಮಾ. 25 ರಿಂದ ಏ. 06 ರವರೆಗೆ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ನಡೆಸಲಾಗಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಏ.15ರಿಂದ 24ರವರೆಗೆ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 237 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಒಟ್ಟು 61,160 ಮೌಲ್ಯಮಾಪಕರು ಪಾಲ್ಗೊಂಡಿದ್ದರು. ಈ ಬಾರಿ ಪರೀಕ್ಷೆಗೆ ಒಟ್ಟು 8,59,967 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 6,31,204 ಮಂದಿ ಉತ್ತೀರ್ಣರಾಗಿದ್ದು, ಶೇ. 73.40ರಷ್ಟು ಫಲಿತಾಂಶ ಬಂದಿದೆ. ಇನ್ನೂ ಈ ಬಾರಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, ಅತ್ತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಿಕ್ಸರ್‌ ಬಾರಿಸಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿರುವ ಅನುದಾನರಹಿತ ಶಾಲೆಗಳು ಫಲಿತಾಂಶದಲ್ಲಿ ಮುನ್ನುಗಿವೆ.

ಬಾಲಕಿಯರೇ ಫಸ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 2,87,416‌ ಹುಡುಗರು, 3,43,788 ಹುಡುಗಿಯರು ಪಾಸ್‌ ಆಗಿದ್ದಾರೆ. ಈ ಮೂಲಕ ಬಾಲಕರು ಶೇ. 65.90 ಹಾಗೂ ಬಾಲಕಿಯರು ಶೇ. 81.11 ಫಲಿತಾಂಶದ ಮೂಲಕ ಮೇಲುಗೈ ಸಾಧಿಸಿದ್ದಾರೆ.

ಸಿಕ್ಸರ್‌ ಬಾರಿಸಿದ ಗ್ರಾಮೀಣ ವಿದ್ಯಾರ್ಥಿಗಳು

ಇನ್ನೂ ಪ್ರತಿ ಬಾರಿಯಂತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಫಲಿತಾಂಶದಲ್ಲಿ ಮುಂದಿದ್ದಾರೆ. ನಗರ ಪ್ರದೇಶದಲ್ಲಿ 4,93,900 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3,59,703 ವಿದ್ಯಾರ್ಥಿಗಳು ಪಾಸ್‌ ಆಗಿದ್ದು ಶೇ. 72ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ಭಾಗದಲ್ಲಿ 3,66,067 ವಿದ್ಯಾರ್ಥಿಗಳು ಹಾಜರಾಗಿದ್ದು, 2,71,501 ಉತ್ತೀರ್ಣರಾಗಿದ್ದು, ಶೇ. 74.17 ರಷ್ಟು ಫಲಿತಾಂಶ ಬಂದಿದೆ.

ಸರ್ಕಾರಿ ಶಾಲೆಗಳನ್ನು ಹಿಂದಿಕ್ಕಿದ ಅನುದಾನರಹಿತ ಶಾಲೆ

ಈ ಬಾರಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿ ಅನುದಾನರಹಿತ ಶಾಲೆಗಳು ಮುಂದಿದೆ. 5906 ಸರ್ಕಾರಿ ಶಾಲೆಗಳಿಂದ 3,36,533 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 2,43, 851 ವಿದ್ಯಾರ್ಥಿಗಳು ಪಾಸ್‌ ಆಗಿದ್ದು, 72.46% ಶೇಕಡಾವಾರು ಫಲಿತಾಂಶ ಬಂದಿದೆ. 3,606 ಅನುದಾನಿತ ಶಾಲೆಗಳಿಂದ 2,07,821 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,50,094 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 72.22ರಷ್ಟು ಫಲಿತಾಂಶ ಬಂದಿದೆ. 6144 ಅನುದಾನರಹಿತ ಶಾಲೆಗಳಿಂದ 2,58,753 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 2,23,720 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್‌ ಆಗಿದ್ದು, 86.46 ರಷ್ಟು ಫಲಿತಾಂಶ ಬಂದಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ರಾಜ್ಯದಲ್ಲಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. 3 ಸರ್ಕಾರಿ ಶಾಲೆಗಳು ಹಾಗೂ 13 ಅನುದಾನಿತ ಶಾಲೆಗಳು ಸೇರಿದಂತೆ 62 ಅನುದಾನಿತ ಶಾಲೆಗಳು ಶೂನ್ಯ ಫಲಿತಾಂಶ ಬಂದಿದೆ. ಕಳೆದ ಬಾರಿ 34 ಶಾಲೆಗಳು ಶೂನ್ಯ ಫಲಿತಾಂಶ ಬಂದಿತ್ತು. ಈ ಬಾರಿ ಶೂನ್ಯ ಫಲಿತಾಂಶವು ದುಪ್ಪಟ್ಟಾಗಿದೆ.

ಎಸ್‌ಎಂಎಸ್‌ ಮೂಲಕವೂ ಬರುತ್ತೆ ರಿಸಲ್ಟ್‌

ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು https://karresults.nic.in ವೀಕ್ಷಿಸಬಹುದು. ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಮೇ 9ರ ಬೆಳಗ್ಗೆ 10.30 ರ ನಂತರ ಎಸ್.ಎಂ.ಎಸ್ ಮೂಲಕ ರವಾನಿಸಲಾಗುತ್ತದೆ. ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in ಗುರುವಾರ 1 ಗಂಟೆಯ ನಂತರ ನೀಡಲಾಗುವುದು. ಶಾಲಾ ಹಂತದಲ್ಲಿ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುವುದು.

ವೆಬ್‌ ಕಾಸ್ಟಿಂಗ್‌ ಪದ್ಧತಿ

ಪ್ರಪ್ರಥಮ ಬಾರಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಈ ಕ್ರಮವು ವಿನೂತನವಾಗಿದ್ದು, ಪರೀಕ್ಷೆಯ ಸಮಗ್ರತೆಯನ್ನು ಪುನರ್‌ಸ್ಥಾಪಿಸಲು ಸಹಾಯಕವಾಗಿದೆ. ಈ ಮೂಲಕ ಪರೀಕ್ಷಾ ಅಕ್ರಮಗಳನ್ನು ಆಶ್ರಯಿಸದೆ ಪರೀಕ್ಷೆಗಳನ್ನು ಬರೆಯುವ ಅಭ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಸಫಲವಾಗಿದ್ದು, ಈ ಕ್ರಮವನ್ನು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನೊಳಗೊಂಡಂತೆ ಎಲ್ಲರೂ ಸ್ವಾಗತಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Result 2024: ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ. ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

VISTARANEWS.COM


on

SSLC Result 2024 SSLC students get 20 percent grace marks but result is very poor
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading
Advertisement
SSLC Result 2024 secret behind 20 percent grace marks
ಕರ್ನಾಟಕ5 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

gold rate today sreeleela
ಚಿನ್ನದ ದರ18 mins ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

SSLC Result 2024 78 schools get zero results in SSLC exams
ಬೆಂಗಳೂರು23 mins ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

Viral video
ವೈರಲ್ ನ್ಯೂಸ್23 mins ago

Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

SSLC Result 2024 SSLC students get 20 percent grace marks but result is very poor
ಶಿಕ್ಷಣ40 mins ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

Andre Russell
ಕ್ರೀಡೆ47 mins ago

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Deepika Padukone pushes away fan camera at airport
ಬಾಲಿವುಡ್47 mins ago

Deepika Padukone: ಕ್ಯಾಮೆರಾ ತಳ್ಳಿ ಮುಂದೆ ನಡೆದ ದೀಪಿಕಾ! ನಾಚಿಕೆಗೇಡಿನ ವರ್ತನೆ ಅಂದ್ರು ನೆಟ್ಟಿಗರು!

Kendasampige Serial Madhumitha Entry
ಕಿರುತೆರೆ50 mins ago

Kendasampige Serial: `ಕೆಂಡಸಂಪಿಗೆ’ ಧಾರಾವಾಹಿಗೆ ಕಾವ್ಯ ಶೈವ ಗುಡ್‌ ಬೈ; ಬದಲಾದ ಸುಮನಾ ಪಾತ್ರಧಾರಿ ಯಾರು?

What After SSLC ?
ಶಿಕ್ಷಣ1 hour ago

What After SSLC?: ವಿಜ್ಞಾನ, ವಾಣಿಜ್ಯ, ಕಲೆ; ಎಸ್‌ಎಸ್‌ಎಲ್‌ಸಿ ನಂತರ ಮುಂದೇನು ಓದಬಹುದು?

sslc result 2024 ankita basappa first rank toppers list
ಪ್ರಮುಖ ಸುದ್ದಿ1 hour ago

SSLC Result 2024: ಶೇ.100 ಅಂಕಗಳೊಂದಿಗೆ ಬಾಗಲಕೋಟೆಯ ಅಂಕಿತಾ ಪ್ರಥಮ; ಎಸ್ಸೆಸ್ಸೆಲ್ಸಿ ಟಾಪರ್ಸ್ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 secret behind 20 percent grace marks
ಕರ್ನಾಟಕ5 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 SSLC students get 20 percent grace marks but result is very poor
ಶಿಕ್ಷಣ40 mins ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಟ್ರೆಂಡಿಂಗ್‌